Navaratri: ವಿಜೃಂಭಣೆಯಿಂದ ನವರಾತ್ರಿ ಉತ್ಸವ ನಡೆಯುವ, ಭೇಟಿ ನೀಡಲೇಬೇಕಾದ ದೇಗುಲಗಳಿವು - Vistara News

ಧಾರ್ಮಿಕ

Navaratri: ವಿಜೃಂಭಣೆಯಿಂದ ನವರಾತ್ರಿ ಉತ್ಸವ ನಡೆಯುವ, ಭೇಟಿ ನೀಡಲೇಬೇಕಾದ ದೇಗುಲಗಳಿವು

Navaratri: ಅಕ್ಟೋಬರ್‌ 15ರಂದು ನವರಾತ್ರಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸುವ ರಾಜ್ಯದ ಪ್ರಮುಖ ದೇವಾಲಯಗಳ ಪರಿಚಯ.

VISTARANEWS.COM


on

navarathri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಆರಂಭವಾಗಿದೆ. ಅಕ್ಟೋಬರ್‌ 15ರಂದು ನವರಾತ್ರಿ (Navaratri) ಶುರುವಾಗಲಿದೆ. ಮುಂದಿನ ಹತ್ತು ದಿನಗಳು ಆಚರಣೆ ಕಳೆಕಟ್ಟುತ್ತದೆ. ಕೆಟ್ಟದರ ವಿರುದ್ಧ ಒಳಿತಿನ ವಿಜಯದ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸುವ ರಾಜ್ಯದ ವಿವಿಧ ದೇವಿ ದೇವಸ್ಥಾನಗಳ ಪರಿಚಯ ಇಲ್ಲಿದೆ.

ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು

ರಾಜ್ಯದ ಸಾಂಸ್ಕೃತಿಕ ರಾಜಧಾನಿ ಮೈಸೂರು. ದಸರಾ ಹಬ್ಬ ಆಚರಣೆಗೆ ಮೈಸೂರು ವಿಶ್ವ ವಿಖ್ಯಾತ. ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಬಹಳ ಮಹತ್ವದ ಸ್ಥಾನ ಪಡೆದುಕೊಂಡಿದೆ. ಈ ದೇವಾಲಯವು ದೇಶದ 18 ಮಹಾ ಶಕ್ತಿ ಪೀಠಗಳಲ್ಲಿ ಒಂದಾಗಿದೆ. ಮಹಿಷ ಎಂಬ ರಾಕ್ಷಸನನ್ನು ಸಂಹರಿಸಿದ ಶಿವನ ಪತ್ನಿ ಪಾರ್ವತಿಯ ಅವತಾರವೆಂದು ನಂಬಲಾದ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ದೇವಿಗೆ ಈ ದೇಗುಲವು ಸಮರ್ಪಿತವಾಗಿದೆ. ಮೂಲತಃ ಚಿಕ್ಕ ದೇಗುಲವಾಗಿದ್ದ ಈ ಮಂದಿರ ಮೈಸೂರು ಮಹಾರಾಜರ ಆಶ್ರಯದಲ್ಲಿ ವಿಸ್ತಾರವಾಗಿ ಬೆಳೆಯಿತು ಎಂದು ಇತಿಹಾಸ ತಿಳಿಸುತ್ತದೆ. ಮೈಸೂರು ದಸರಾವನ್ನು ನಾಡಹಬ್ಬ ಎಂದೂ ಕರೆಯಲಾಗುತ್ತದೆ. ನವರಾತ್ರಿಯ ಸಮಯದಲ್ಲಿ, ದೇವಿಯ ಒಂಬತ್ತು ವಿಭಿನ್ನ ಅಂಶಗಳನ್ನು ಚಿತ್ರಿಸಲು ಇಲ್ಲಿ ದೇವಿಯನ್ನು 9 ವಿಧಗಳಲ್ಲಿ ಅಲಂಕರಿಸಲಾಗುತ್ತದೆ. ನವರಾತ್ರಿಯ 7ನೇ ದಿನದಂದು ಮೈಸೂರಿನ ಜಿಲ್ಲಾ ಖಜಾನೆಯಿಂದ ಮಹಾರಾಜರು ಕೊಡುಗೆಯಾಗಿ ನೀಡಿದ ಅಮೂಲ್ಯ ಆಭರಣಗಳನ್ನು ತಂದು ಚಾಮುಂಡಿ ದೇವಿಗೆ ಅರ್ಪಿಸಲಾಗುತ್ತದೆ. ವಿಜಯ ದಶಮಿಯಂದು ನಡೆಯುವ ಜಂಬೂ ಸವಾರಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ. ಮೆರವಣಿಗೆ ಜತೆ ಸಾಗುವ ಕಲಾತಂಡಗಳು, ಕವಾಯತು, ಅಶ್ವ ಪಡೆ, ಪೋಲಿಸ್‌ ವಾದ್ಯಗೋಷ್ಠಿ, ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಭ ಚಿತ್ರಗಳು ಸಂಭ್ರಮವನ್ನು ಹೆಚ್ಚಿಸುತ್ತವೆ. ಅಂಬಾರಿಯಲ್ಲಿ ಚಾಮುಂಡಿ ದೇವರ ವಿಗ್ರಹವನ್ನು ಇಟ್ಟು ಪೂಜಿಸಲಾಗುತ್ತದೆ.

ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇಗುಲ ದೇಶದ ನಾನಾ ಕಡೆಗಳ ಭಕ್ತರನ್ನು ಸೆಳೆಯುತ್ತದೆ. ಪರಶುರಾಮನು ಸೃಷ್ಟಿಸಿದ ಮೋಕ್ಷದ ಏಳು ವಾಸಸ್ಥಾನಗಳಲ್ಲಿ ಇದು ಒಂದು ಎನ್ನುವ ನಂಬಿಕೆ ಇದೆ. ಈ ದೇವಾಲಯವು ಕಲೆ ಮತ್ತು ಜ್ಞಾನಕ್ಕೆ ಸಮರ್ಪಿತವಾಗಿದೆ. ಮೂಕಾಂಬಿಕಾ ದೇವಿಯನ್ನು ಮಾತು ಮತ್ತು ಅಕ್ಷರಗಳ ದೇವತೆ ಎಂದು ಪರಿಗಣಿಸಲಾಗುತ್ತದೆ. ಕೊಲ್ಲೂರು ಮೂಕಾಂಬಿಕಾ ದೇವಾಲಯವನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಮಹಾನ್ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರಾಚಾರ್ಯರು ವಹಿಸಿದ್ದರು ಎಂದು ಹಿರಿಯರು ಹೇಳುತ್ತಾರೆ. ದೇವಾಲಯದಲ್ಲಿ ವಾರ್ಷಿಕ ಹಬ್ಬವನ್ನು ನವರಾತ್ರಿ ಹಬ್ಬದ ಸಂದರ್ಭದಲ್ಲಿ ಆಚರಿಸಲಾಗುತ್ತದೆ.

ಶಾರದಾಂಬ ದೇವಸ್ಥಾನ, ಶೃಂಗೇರಿ

ಕರ್ನಾಟಕದ ಪ್ರಸಿದ್ದ ಧಾರ್ಮಿಕ ಸ್ಥಳವಾಗಿ ಗುರುತಿಸಿಕೊಂಡಿರುವ ಶೃಂಗೇರಿ ಶಾರದಾಂಬ ದೇವಸ್ಥಾನ ಪ್ರತಿನಿತ್ಯ ಸಾವಿರಾರು ಭಕ್ತರನ್ನು ತನ್ನತ್ತ ಸೆಳೆಯುತ್ತದೆ. ಅದರಲ್ಲೂ ನವರಾತ್ರಿ ಸಮಯದಲ್ಲಂತೂ ಭಕ್ತರ ಪ್ರವಾಹವೇ ಹರಿದು ಬರುತ್ತದೆ. ಇದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿದೆ. 8ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರು ಈ ದೇಗುಲವನ್ನು ಸ್ಥಾಪಿಸಿದರು ಎನ್ನುತ್ತದೆ ಐತಿಹ್ಯ. ಶೃಂಗೇರಿ ಎಂದರೆ ಋಷಿಶೃಂಗ ಗಿರಿ ಎನ್ನುವ ಅರ್ಥವಿದೆ. ತುಂಗಾ ನದಿ ತೀರದಲ್ಲಿ ನೆಲೆಸಿರುವ ಈ ತಾಯಿ ಎಲ್ಲರ ಕಷ್ಟ ಪರಿಹರಿಸುತ್ತಾಳೆ ಎನ್ನುವ ನಂಬಿಕೆ ಭಕ್ತರದ್ದು.

ಮಕ್ಕಳ ವಿದ್ಯಾಭ್ಯಾಸದ ಆರಂಭಕ್ಕೂ ಮುನ್ನ ಪೋಷಕರು ತಾಯಿಯ ಆಶೀರ್ವಾದ ಪಡೆದು ಹೋಗುತ್ತಾರೆ. ಮಗುವಿಗೆ ಸರಿಯಾಗಿ ಮಾತನಾಡಲು ಬರದಿದ್ದರೆ ಅಥವಾ ಮಾತು ಬರುವುದು ತಡವಾದರೆ ತಾಯಿಯ ದರ್ಶನ ಮಾಡಿಸುತ್ತಾರೆ. ಇಲ್ಲಿ ನವರಾತ್ರಿಗೆ ವಿಶೇಷ ಪೂಜೆ ಹಾಗೂ ಅಲಂಕಾರಗಳು ನೆರವೇರುತ್ತವೆ. ನವರಾತ್ರಿಯಂದು ಶಾರದೆಗೆ ಪ್ರತಿದಿನವೂ ಒಂದೊಂದು ಅಲಂಕಾರ ನಡೆಯುತ್ತದೆ. ಹಂಸವಾಹನ ಅಲಂಕಾರ, ವೃಷಭವಾಹನ ಅಲಂಕಾರ, ಮಯೂರವಾಹನ ಅಲಂಕಾರ, ಗರುಡವಾಹನ ಅಲಂಕಾರ, ಇಂದ್ರಾಣಿ ಅಲಂಕಾರ, ವೀಣಾಶಾರದಾ ಅಲಂಕಾರ, ಮೋಹಿನಿ ಅಲಂಕಾರ, ರಾಜರಾಜೇಶ್ವರಿ ಅಲಂಕಾರ, ಸಿಂಹವಾಹನ ಅಲಂಕಾರ, ಗಜಲಕ್ಷ್ಮೀ ಅಲಂಕಾರಗಳನ್ನು ಮಾಡಲಾಗುತ್ತದೆ. ಚಂಡಿಕಾ ಹೋಮ, ರಥೋತ್ಸವ, ವಿವಿಧ ಅಲಂಕಾರ, ಪೂಜೆ, ಮಹಾಭಿಷೇಕ, ಶತರುದ್ರಾಭಿಷೇಕ ನಡೆಯುತ್ತದೆ.

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಹೊರನಾಡು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡಿನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿಯೂ ನವರಾತ್ರಿ ವಿಶೇಷವಾಗಿ ಆಚರಿಸಲಾಗುತ್ತದೆ. ಭದ್ರಾ ನದಿಯ ದಡದಲ್ಲಿರುವ ಇದನ್ನು ಆದಿಶಕ್ತಿಯಾತ್ಮಿಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಎಂದೂ ಕರೆಯುತ್ತಾರೆ. ಇಲ್ಲಿರುವ ವಿಗ್ರಹವನ್ನು 8ನೇ ಶತಮಾನದಲ್ಲಿ ಅಗಸ್ತ್ಯ ಋಷಿ ಸ್ಥಾಪಿಸಿದರು ಎಂದು ಪುರಾಣ ಹೇಳುತ್ತದೆ. ಹೊರನಾಡು ದೇಗುಲ ಅನ್ನದಾನದಕ್ಕೆ ಹೆಸರುವಾಸಿ. ಚತುರ್ಭುಜೆಯಾದ ಅನ್ನಪೂರ್ಣೇಶ್ವರಿ ದೇವಿ ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ ಹಿಡಿದಿರುವುದು ವಿಶೇಷ. ಇಲ್ಲಿಂದ ಶೃಂಗೇರಿಗೆ ಕೇವಲ 40 ಕಿ.ಮೀ ದೂರ.

ಬನಶಂಕರಿ ದೇವಸ್ಥಾನ, ಬಾದಾಮಿ

ಬನಶಂಕರಿ ಅಮ್ಮನವರ ದೇವಸ್ಥಾನವನ್ನು ಬನಶಂಕರಿ ದೇವಸ್ಥಾನ ಎಂದೂ ಕರೆಯುತ್ತಾರೆ. ಇದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹೆಯಿಂದ ಕೇವಲ 8 ಕಿ.ಮೀ. ದೂರದಲ್ಲಿದೆ. ಮಲಪ್ರಭಾ ನದಿಯ ದಡದಲ್ಲಿರುವ ಚೋಳಚಗುಡ್ಡ ಎಂಬ ಸಣ್ಣ ಹಳ್ಳಿಯಲ್ಲಿ ಈ ದೇಗುಲವಿದೆ. ಬನಶಂಕರಿ ದೇವಸ್ಥಾನವು ಮಾತಾ ಪಾರ್ವತಿಯ ಅವತಾರವಾದ ಬನಶಂಕರಿ ಅಮ್ಮನಿಗೆ ಸಮರ್ಪಿತವಾಗಿದೆ. ದೇವಾಲಯದ ದೇವತೆಯನ್ನು ಶಾಕಂಭರಿ ಅಥವಾ ವನಶಂಕರಿ ಅಥವಾ ಬನಶಕರಿ ಎಂದೂ ಕರೆಯಲಾಗುತ್ತದೆ. ಈ ದೇವಾಲಯವನ್ನು 17ನೇ ಶತಮಾನದಲ್ಲಿ ದ್ರಾವಿಡ ಶೈಲಿಯ ವಾಸ್ತುಶಿಲ್ಪದೊಂದಿಗೆ ನಿರ್ಮಿಸಲಾಗಿದೆ. ಸ್ಕಂದ ಪುರಾಣದಲ್ಲಿ ದೇವಿಯ ಉಲ್ಲೇಖವಿದೆ. ನವರಾತ್ರಿಯಂದು ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ.

ದುರ್ಗಾ ಪರಮೇಶ್ವರಿ ದೇವಸ್ಥಾನ, ಕಟೀಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಸುಮಾರು 29 ಕಿ.ಮೀ ದೂರದಲ್ಲಿರುವ ಕಟೀಲಿನಲ್ಲಿ ಈ ದುರ್ಗಾ ಪರಮೇಶ್ವರಿ ದೇಗುಲವಿದೆ. ನಂದಿನಿ ನದಿ ದಡದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಇಲ್ಲಿ ಭಕ್ತರಿಗೆ ದಿನಕ್ಕೆ ಎರಡು ಬಾರಿ ಅನ್ನ ಪ್ರಸಾದ ನೀಡಲಾಗುತ್ತದೆ. ಜತೆಗೆ ದೇವಾಲಯವು ಐದು ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಮೂಲಕ ವಿದ್ಯಾ ದಾನವನ್ನೂ ಕೈಗೊಂಡಿದೆ. ಯಕ್ಷಗಾನ ಹರಕೆ ಸೇವೆ ದೇವಿಗೆ ಬಹಳ ಪ್ರಿಯ ಎನ್ನುವ ನಂಬಿಕೆ ಇದೆ. ಜತೆಗೆ ಭಕ್ತರು ದೇವಿಗೆ ಸೀರೆಯನ್ನೂ ಸಮರ್ಪಿಸುತ್ತಾರೆ. ಈ ದೇವಾಲಯದಲ್ಲಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನವರಾತ್ರಿ ಉತ್ಸವದ ಭಾಗವಾಗಿ ‘ಲಲಿತ ಪಂಚಮಿ’, ‘ಮಹಾನವಮಿ’, ‘ವಿಜಯದಶಮಿ’ ಹಾಗೂ ‘ಮಧ್ವ ಜಯಂತಿ’ಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Mahisha Dasara : ಮಹಿಷ ದಸರಾಕ್ಕೆ ಷರತ್ತುಬದ್ಧ ಅನುಮತಿ, ಸಭಾ ಕಾರ್ಯಕ್ರಮ ಓಕೆ, ಸೆಕ್ಷನ್‌ 144 ಜಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

ಮನೆ ಮತ್ತು ಅಂಗಡಿಯಲ್ಲಿ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುವ ಮೂಲಕ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು. ಹೊಸ ಮನೆ ಅಥವಾ ಅಂಗಡಿಯನ್ನು ಖರೀದಿಸಲು ಹೋದಾಗ ವಿಶೇಷವಾಗಿ ವಾಸ್ತು ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮನೆ (home) ಮತ್ತು ಅಂಗಡಿಯಲ್ಲಿ (store) ಧನಾತ್ಮಕ ಶಕ್ತಿ (Positive energy) ನೆಲೆಯಾಗಿದ್ದರೆ ಮಾತ್ರ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ ಕಾಣಲು ಸಾಧ್ಯ. ಇದಕ್ಕಾಗಿ ವಾಸ್ತು ನಿಯಮಗಳನ್ನು ಪಾಲಿಸುವುದು ಮುಖ್ಯ. ಮನೆ ಮತ್ತು ಅಂಗಡಿಯಲ್ಲಿ ವಾಸ್ತು ನಿಯಮಗಳನ್ನು (Vastu Tips) ಅನುಸರಿಸುವ ಮೂಲಕ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು. ಸಂತೋಷ ಮತ್ತು ಸಮೃದ್ಧಿಯ ಜೊತೆಗೆ ಲಕ್ಷ್ಮಿ ದೇವಿಯ ಆಶೀರ್ವಾದವನ್ನೂ ಪಡೆಯಬಹುದು.

ಹೊಸ ಮನೆ ಅಥವಾ ಅಂಗಡಿಯನ್ನು ಖರೀದಿಸಲು ಹೋದಾಗ ವಿಶೇಷವಾಗಿ ವಾಸ್ತು ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಎಂಬುದು ತಿಳಿದುಕೊಳ್ಳೋಣ.

ದಿಕ್ಕುಗಳ ಬಗ್ಗೆ ತಿಳಿದಿರಲಿ

ವಾಸ್ತು ಶಾಸ್ತ್ರದಲ್ಲಿ ಕೆಲವು ನಿಯಮಗಳಿಗೆ ವಿಶೇಷ ಗಮನ ನೀಡಲಾಗಿದೆ. ಮನೆ ಅಥವಾ ಅಂಗಡಿಯ ಮುಖ್ಯ ದ್ವಾರವು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿರಬೇಕು. ಮನೆಯಲ್ಲಿ ಪೂಜಾ ಸ್ಥಳವು ಈಶಾನ್ಯ ಮೂಲೆಯಲ್ಲಿದ್ದರೆ ಮಲಗುವ ಕೋಣೆ ನೈಋತ್ಯ ದಿಕ್ಕಿನಲ್ಲಿರಬೇಕು. ಅದೇ ಸಮಯದಲ್ಲಿ, ಅಡುಗೆಮನೆಯು ಅಗ್ನಿ ಮೂಲೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿರಬೇಕು.

ಆಕಾರ ಗಮನಿಸಿ

ಮನೆ ಅಥವಾ ಅಂಗಡಿಯ ಆಕಾರವು ಚೌಕ ಅಥವಾ ಆಯತಾಕಾರವಾಗಿರಬೇಕು. ಅನಿಯಮಿತ ಆಕಾರಗಳನ್ನು ಹೊಂದಿರುವ ಕಟ್ಟಡಗಳನ್ನು ವಾಸ್ತು ಪ್ರಕಾರ ಅಶುಭವೆಂದು ಪರಿಗಣಿಸಲಾಗುತ್ತದೆ.


ಗಾಳಿ, ಬೆಳಕು

ಮನೆ ಅಥವಾ ಅಂಗಡಿಯಲ್ಲಿ ಸಾಕಷ್ಟು ಕಿಟಕಿಗಳು ಇರಬೇಕು. ಇದರಿಂದ ನೈಸರ್ಗಿಕ ಬೆಳಕು ಮತ್ತು ಗಾಳಿ ಪ್ರವೇಶಿಸಬೇಕು. ಇದಕ್ಕಾಗಿ ಕಿಟಕಿಗಳು ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿರಬೇಕು.

ಮುಖ್ಯ ಬಾಗಿಲು

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ಬಾಗಿಲು ದೊಡ್ಡದಾಗಿರಬೇಕು ಮತ್ತು ಭವ್ಯವಾಗಿರಬೇಕು. ಮುಖ್ಯ ಬಾಗಿಲಿನ ಮುಂದೆ ಯಾವುದೇ ಅಡೆತಡೆಗಳು ಇರಬಾರದು. ಮನೆ ಅಥವಾ ಅಂಗಡಿಯ ಚಾವಣಿ ಸಮತಟ್ಟಾಗಿರಬೇಕು.

ಚಾವಣಿಯ ಮೇಲಿನ ಇಳಿಜಾರು

ಮನೆ, ಅಂಗಡಿಯ ಚಾವಣಿಯ ಮೇಲಿನ ಇಳಿಜಾರು ನೈಋತ್ಯ, ಈಶಾನ್ಯ ದಿಕ್ಕಿನಲ್ಲಿರಬೇಕು.

ಬಣ್ಣಗಳು

ವಾಸ್ತು ಪ್ರಕಾರ ಮನೆ ಅಥವಾ ಅಂಗಡಿಗೆ ತಿಳಿ ಮತ್ತು ಬಿಳಿ ಬಣ್ಣಗಳನ್ನು ಬಳಸಬೇಕು. ಈ ಬಣ್ಣಗಳು ಧನಾತ್ಮಕತೆಯನ್ನು ತರುತ್ತವೆ. ಇದು ವ್ಯವಹಾರದಲ್ಲಿ ಪ್ರಗತಿಯನ್ನು ಒದಗಿಸುವಲ್ಲಿ ಸಹಾಯಕವೆಂದು ಪರಿಗಣಿಸಲಾಗಿದೆ. ಕಡಿಮೆ ಪ್ರಮಾಣದಲ್ಲಿ ಗಾಢ ಬಣ್ಣಗಳನ್ನು ಬಳಸಿ.

ನೀರಿನ ಸಂಗ್ರಹ

ಮನೆ ಅಥವಾ ಅಂಗಡಿಯಲ್ಲಿ ನೀರಿನ ಸಂಗ್ರಹವು ಈಶಾನ್ಯ ದಿಕ್ಕಿನಲ್ಲಿರಬೇಕು. ಮನೆ ಅಥವಾ ಅಂಗಡಿಯಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇರಬೇಕು.

ಗಿಡಗಳು

ಮನೆ ಅಥವಾ ಅಂಗಡಿಯ ಸುತ್ತ ತುಳಸಿ, ಮನಿ ಪ್ಲಾಂಟ್, ಅಲೋವೆರಾ ಮುಂತಾದ ಮಂಗಳಕರ ಗಿಡಗಳನ್ನು ನೆಡಿ. ಮನೆ ಅಥವಾ ಅಂಗಡಿ ಸುತ್ತಮುತ್ತ ಮುಳ್ಳಿನ ಗಿಡಗಳನ್ನು ನೆಡಬಾರದು.

ಇದನ್ನೂ ಓದಿ: Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?


ಸಮೃದ್ಧಿ ತರುವ ವಸ್ತುಗಳು

ವ್ಯಾಪಾರದಲ್ಲಿ ಯಶಸ್ವಿಯಾಗಲು ಅಂಗಡಿಯಲ್ಲಿ ಶ್ರೀಯಂತ್ರ, ವ್ಯಾಪಾರ ವೃದ್ಧಿ ಯಂತ್ರ, ಸ್ಫಟಿಕ ಆಮೆ ಅಥವಾ ಸ್ಫಟಿಕ ಚೆಂಡನ್ನು ಇರಿಸಬಹುದು. ಇದು ಧನಾತ್ಮಕ ಶಕ್ತಿಯನ್ನು ತರುತ್ತದೆ. ಹೊಸ ಅಂಗಡಿಯನ್ನು ತೆಗೆದುಕೊಂಡಿದ್ದರೆ ಅದರಲ್ಲಿ ಪಾಂಚಜನ್ಯ ಶಂಖವನ್ನು ಸ್ಥಾಪಿಸಬಹುದು. ಶಂಖ್ ಅನ್ನು ಮಾತಾ ಲಕ್ಷ್ಮಿಯ ಸಹೋದರ ಎಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಇಬ್ಬರೂ ಸಮುದ್ರ ಮಂಥನದಿಂದ ಹುಟ್ಟಿಕೊಂಡಿದ್ದಾರೆ. ಶಂಖದ ಆರಾಧನೆಯಿಂದ ಲಕ್ಷ್ಮೀದೇವಿಯೂ ಪ್ರಸನ್ನಳಾಗುತ್ತಾಳೆ. ಇದು ವ್ಯವಹಾರದಲ್ಲಿ ಯಶಸ್ಸನ್ನು ತರುತ್ತದೆ.

ಅಲಂಕಾರ

ಮನೆ ಅಥವಾ ಅಂಗಡಿಯ ಪ್ರವೇಶದ್ವಾರಕ್ಕೆ ಹೆಚ್ಚು ಅಲಂಕಾರಿಕ ವಸ್ತುಗಳಿಂದ ಅಲಂಕರಿಸಬೇಡಿ. ವಾಸ್ತು ತಜ್ಞರ ಪ್ರಕಾರ ಇದನ್ನು ಮಾಡಬಾರದು. ಏಕೆಂದರೆ ದಾರಿಯಲ್ಲಿ ಬರುವ ಉತ್ತಮ ಅವಕಾಶಗಳನ್ನು ಇದು ತಡೆಯಬಹುದು. ಪ್ರವೇಶದ್ವಾರ ಯಾವಾಗಲೂ ಸ್ವಚ್ಛವಾಗಿರಬೇಕು.

Continue Reading

ಕರ್ನಾಟಕ

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲದ ಹುಂಡಿ ಎಣಿಕೆ ಕಾರ್ಯವು ಮಂಗಳವಾರ ನಡೆಯಿತು. ಕಾಣಿಕೆ ಹುಂಡಿಯಲ್ಲಿ 32.95 ಲಕ್ಷ ರೂಪಾಯಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ನಾನಾ ದೇಶಗಳ ನೋಟುಗಳು ಮತ್ತು ನಾಣ್ಯಗಳು ಪತ್ತೆಯಾಗಿರುವುದು ವಿಶೇಷವಾಗಿದೆ.

VISTARANEWS.COM


on

Anjanadri Temple Hundi Count
Koo

ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇಗುಲದ ಹುಂಡಿ ಎಣಿಕೆ ಕಾರ್ಯವು ಮಂಗಳವಾರ (Koppala News) ನಡೆಯಿತು. ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ ಸೂಚನೆ ಮೇರೆಗೆ ತಹಸೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ಹುಂಡಿ ಕಾಣಿಕೆ ಹಣದ ಎಣಿಕೆ ಕಾರ್ಯವು ನಡೆಯಿತು. ಕಾಣಿಕೆ ಹುಂಡಿಯಲ್ಲಿ 32.95 ಲಕ್ಷ ರೂಪಾಯಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ವಿವಿಧ ದೇಶಗಳ ಮೂರು ನೋಟು ಮತ್ತು ಏಳು ನಾಣ್ಯಗಳು ಪತ್ತೆ

ಅಂಜನಾದ್ರಿ ಆಂಜನೇಯ ದೇಗುಲದ ಹುಂಡಿಯಲ್ಲಿ ಸಂಗ್ರವಾಗಿದ್ದ ಕಾಣಿಕೆ ಹಣದ ಎಣಿಕೆಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳ ಮೂರು ನೋಟು ಮತ್ತು ಏಳು ನಾಣ್ಯಗಳು ಪತ್ತೆಯಾಗಿವೆ.

ಈ ಪೈಕಿ ಸೌತ್ ಆಫ್ರಿಕಾದ ಒಂದು ನೂರು ರಾಂಡ್ ಮೊತ್ತದ ಒಂದು ನೋಟು, ಮತ್ತು ಯುನೈಟೆಡ್ ಸ್ಟೇಟ್ಸ್‌ ಆಫ್ ಅಮೆರಿಕಾದ ತಲಾ ಹತ್ತು ಡಾಲರ್ ಮೊತ್ತದ ಎರಡು ನೋಟು ಪತ್ತೆಯಾಗಿವೆ ಹಾಗೂ ಸೌದಿ ಅರೇಬಿಯಾ, ಥೈಲ್ಯಾಂಡ್, ಇಟಲಿ, ಓಮನ್, ಯುಕೆ ಮತ್ತು ನೇಪಾಳದ ನಾನಾ ಮುಖಬೆಲೆಯ ನಾಣ್ಯಗಳು ಪತ್ತೆಯಾಗಿವೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಕಳೆದ ಮೇ 21ರಂದು ಹಣ ಎಣಿಕೆ ಮಾಡಿದ ಸಂದರ್ಭದಲ್ಲಿ 30.21 ಲಕ್ಷ ರೂ. ಮೊತ್ತದ ಹಣ ಸಂಗ್ರವಾಗಿತ್ತು.

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading

ಧಾರ್ಮಿಕ

Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?

ಎಲ್ಲ ವಿಘ್ನಗಳನ್ನು ದೂರ ಮಾಡುವ ಗಣಪತಿಯನ್ನು ಪೂಜಿಸಿದರೆ ಜೀವನದಲ್ಲಿ ಎಂದಿಗೂ ಸಮಸ್ಯೆಗಳಿರುವುದಿಲ್ಲ ಎಂದೇ ನಂಬಲಾಗುತ್ತದೆ. ಕೆಲವರು ತಮ್ಮ ಮನೆಯ ಮುಂಭಾಗದ ಬಾಗಿಲುಗಳಲ್ಲಿ ಗಣಪತಿಯ ಚಿತ್ರ ಅಥವಾ ವಿಗ್ರಹವನ್ನು ನೇತುಹಾಕುತ್ತಾರೆ. ವಾಸ್ತು ಶಾಸ್ತ್ರದಲ್ಲಿ (Vastu Tips) ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಗಣೇಶ ವಿಗ್ರಹವನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಪ್ರಥಮ ಪೂಜಿತ ಗಣಪತಿಯನ್ನು (ganapati) ನಮ್ಮ ನಿತ್ಯದ ಎಲ್ಲ ಕಾರ್ಯದಲ್ಲೂ ಮೊದಲ ಆದ್ಯತೆ (First priority) ನೀಡಲಾಗುತ್ತದೆ. ಎಲ್ಲಾ ದೇವರುಗಳಲ್ಲಿ (god) ಗಣಪತಿಯನ್ನು ಅತ್ಯಂತ ಪೂಜನೀಯ ಎಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪ್ರತಿಯೊಂದು ಕೆಲಸದಲ್ಲೂ ಆತನಿಗೆ ಮೊದಲ ಪೂಜೆಯನ್ನು ಸಲ್ಲಿಸಲಾಗುತ್ತದೆ. ಆದರೆ ಇದಕ್ಕೆ ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಇದರ ಕುರಿತು ಕೆಲವೊಂದು ನಿಯಮಗಳಿವೆ.

ಎಲ್ಲ ವಿಘ್ನಗಳನ್ನು ದೂರ ಮಾಡುವ ಗಣಪತಿಯನ್ನು ಪೂಜಿಸಿದರೆ ಜೀವನದಲ್ಲಿ ಎಂದಿಗೂ ಸಮಸ್ಯೆಗಳಿರುವುದಿಲ್ಲ ಎಂದೇ ನಂಬಲಾಗುತ್ತದೆ. ಕೆಲವರು ತಮ್ಮ ಮನೆಯ ಮುಂಭಾಗದ ಬಾಗಿಲುಗಳಲ್ಲಿ ಗಣಪತಿಯ ಚಿತ್ರ ಅಥವಾ ವಿಗ್ರಹವನ್ನು ನೇತುಹಾಕುತ್ತಾರೆ. ವಾಸ್ತು ಶಾಸ್ತ್ರದಲ್ಲಿ ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಪ್ರವೇಶದ್ವಾರದಲ್ಲಿ ಗಣೇಶನ ಚಿತ್ರವನ್ನು ಪ್ರತಿಷ್ಠಾಪಿಸುವಾಗ ಪ್ರತಿಯೊಬ್ಬರೂ ಕೆಲವೊಂದು ನಿಯಮಗಳನ್ನು ಪಾಲಿಸಬೇಕು.


ಯಾವ ದಿಕ್ಕು ಸೂಕ್ತ?

ವಾಸ್ತು ಶಾಸ್ತ್ರದಲ್ಲಿ ಮನೆಯ ಮುಂಭಾಗದ ದ್ವಾರದ ಮೇಲೆ ಗಣಪತಿ ವಿಗ್ರಹವನ್ನು ಇರಿಸಲು ಕೆಲವೊಂದು ಸೂಚನೆಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಇದಕ್ಕಾಗಿ ಮನೆಯ ಮುಂಭಾಗದ ಬಾಗಿಲು ಉತ್ತರ ಅಥವಾ ದಕ್ಷಿಣಕ್ಕೆ ಎದುರಾಗಿರಬೇಕು. ಆದರೆ ಮುಖ್ಯ ಪ್ರವೇಶ ದ್ವಾರ ಇರುವಲ್ಲಿ ಪೂರ್ವ ಅಥವಾ ಪಶ್ಚಿಮಕ್ಕೆ ಎದುರಾಗಿರುವ ಗಣೇಶನ ಪ್ರತಿಮೆಯನ್ನು ಇರಿಸಬಾರದು.

ಸ್ಥಾಪನೆ ಸರಿಯಾಗಿರಲಿ

ಮನೆಯ ಮುಂಭಾಗದ ದ್ವಾರದ ಮೇಲೆ ಗಣೇಶನ ವಿಗ್ರಹವನ್ನು ಇರಿಸುವಾಗ ಅದನ್ನು ವಿಧಿವತ್ತಾಗಿ ಸ್ಥಾಪಿಸಬೇಕು. ವಿಗ್ರಹವು ಎಲ್ಲಾ ಸಮಯದಲ್ಲೂ ಒಳಮುಖವಾಗಿರಬೇಕು. ಪಶ್ಚಿಮ, ಉತ್ತರ ಮತ್ತು ಈಶಾನ್ಯ ದೃಷ್ಟಿಕೋನಗಳು ಇದಕ್ಕೆ ಅತ್ಯುತ್ತಮವೆಂದು ಹೇಳಲಾಗುತ್ತದೆ.

ಇದನ್ನೂ ಓದಿ Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಬಣ್ಣ ಯಾವುದು?

ವಾಸ್ತು ಶಾಸ್ತ್ರದ ಪ್ರಕಾರ ಕುಟುಂಬದಲ್ಲಿ ಸಮೃದ್ಧಿಯಾಗಬೇಕೆಂದು ಬಯಸಿದರೆ ಬಿಳಿ ಅಥವಾ ಸಿಂಧೂರ ವರ್ಣದ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಇದನ್ನು ಮಾಡುವುದರಿಂದ ಕುಟುಂಬದಲ್ಲಿ ಸಂಪತ್ತು ಮತ್ತು ಸಂತೋಷವನ್ನುನಿರಂತರವಾಗಿ ಇರುವುದು.

ಪ್ರತಿಮೆಯ ಭಂಗಿ

ಗಣೇಶನ ಪ್ರತಿಮೆಯನ್ನು ಮನೆಯ ಮುಂಭಾಗದ ಬಾಗಿಲಿನಲ್ಲಿ ಕುಳಿತುಕೊಳ್ಳುವ ಭಂಗಿಯಲ್ಲಿ ಇಡಬೇಕು. ಮನೆಯ ದ್ವಾರದ ಹೊರಗೆ ನಿಂತಿರುವ ಗಣೇಶನ ಪ್ರತಿಷ್ಠಾಪನೆಯು ಅದೃಷ್ಟವನ್ನು ತರುವುದಿಲ್ಲ. ಕಾರ್ಯಸ್ಥಳ ಅಥವಾ ಕಚೇರಿಯಲ್ಲಿ ನಿಂತಿರುವ ಗಣೇಶನ ವಿಗ್ರಹವನ್ನು ಇಡಬಹುದು. ಆದರೆ ಮನೆಯಲ್ಲಿ ಇಡಬಾರದು ಎನ್ನುತ್ತದೆ ವಾಸ್ತು ನಿಯಮ.

Continue Reading
Advertisement
Team India
ಕ್ರಿಕೆಟ್5 hours ago

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

LK Advani
ದೇಶ5 hours ago

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Ashika Ranganath
ಸ್ಯಾಂಡಲ್ ವುಡ್5 hours ago

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ6 hours ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್6 hours ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ6 hours ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು6 hours ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ7 hours ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ7 hours ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ7 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌