navavidha bhakti about Atma Nivedanam you should know in kannada - Vistara News

ಧಾರ್ಮಿಕ

Navavidha Bhakti : ಪರಿಪೂರ್ಣ ಸಮರ್ಪಣೆಯಲ್ಲಿ ಭಗವಂತನೇ ರಕ್ಷಕ!

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯ ಹದಿನೈದನೇ ಲೇಖನ ಇಲ್ಲಿದೆ. ಆತ್ಮಸಮರ್ಪಣೆಗೆ ಹೆಸರಾದವರನ್ನು ಈ ವಾರ ಪರಿಚಯಿಸಲಾಗಿದೆ.

VISTARANEWS.COM


on

atma nivedanam radhe shyam
ಚಿತ್ರಕೃಪೆ: ಇಸ್ಕಾನ್‌, ಬೆಂಗಳೂರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Dr c r ramaswamy

Navavidha Bhakti
atma nivedanam meera and shyam

ಡಾ. ಸಿ. ಆರ್. ರಾಮಸ್ವಾಮಿ
ಭಕ್ತಿಯಲ್ಲಿ ಕೊನೆಯ ಘಟ್ಟ ಆತ್ಮನಿವೇದನ. ಅದು ಪರಮಭಕ್ತಿ. ಎಲ್ಲ ಹಂತಗಳನ್ನೂ ದಾಟಿ ತನ್ನ ಸರ್ವಸ್ವವನ್ನೂ-ಮನಸ್ಸು-ಬುದ್ಧಿ-ಹೃದಯ-ಆತ್ಮವನ್ನೇ ಭಗವಂತನಿಗೆ ಸಮರ್ಪಣೆ ಮಾಡಿಕೊಳ್ಳುವಂತಹ ಸ್ಥಿತಿ. ಆ ಸ್ಥಿತಿಯನ್ನು ಸಾಧಿಸಿದ ಕೆಲವು ಭಕ್ತಶ್ರೇಷ್ಠರ ಕಥೆಗಳನ್ನು ಕೇಳಿದಾಗ ಹೀಗೂ ಉಂಟೇ ಎಂದೆನಿಸಿದರೆ ಆಶ್ಚರ್ಯವೇನಿಲ್ಲ. ಇದಕ್ಕೆ ಉದಾಹರಣೆಯಾದವರ ಕೆಲವರ ಪರಿಚಯವನ್ನು ಕಳೆದ ವಾರ ಮಾಡಿಕೊಂಡಿದ್ದೆವು. ಇನ್ನೂ ಕೆಲವರ ಪರಿಚಯ ಇಲ್ಲಿದೆ.

ಆತ್ಮನಿವೇದನಕ್ಕೆ ಪ್ರಸಿದ್ಧ ಉದಾಹರಣೆ ರಾಧೆ

ಆತ್ಮನಿವೇದನಕ್ಕೆ ಮತ್ತೊಂದು ಪ್ರಸಿದ್ಧ ಉದಾಹರಣೆಯೆಂದರೆ ಗೋಪಿಕೆಯರಲ್ಲಿ ಅಗ್ರಗಣ್ಯಳಾದ ರಾಧೆ. ಗರ್ಗಸಂಹಿತೆಯು ಅವಳ ಚರಿತ್ರೆ-ವಿಲಾಸಗಳನ್ನು ವಿಸ್ತಾರವಾಗಿ ಹೇಳುತ್ತದೆ. ಭಗವತ್ಕಾಮವೆಂಬ ಭಕ್ತಿಭಾವದಲ್ಲಿ ತನ್ಮಯಳಾಗಿ ಮುಳುಗಿದವಳು ರಾಧೆ. ತನ್ನನ್ನು ಸಂಪೂರ್ಣವಾಗಿ ಕೃಷ್ಣನಿಗರ್ಪಿಸಿಕೊಂಡು ಅವನ ಬಾಲ್ಯ-ಪೌಗಂಡ-ಕೌಮಾರಾವಸ್ಥೆಗಳಲ್ಲಿ ಜೊತೆಯಾಗಿದ್ದು ರಮಿಸಿದವಳು. ಮುಂದೆ ದೀರ್ಘಕಾಲ ಕೃಷ್ಣನು ರಾಜಕಾರಣದಿಂದಾಗಿ ಅವಳನ್ನು ಭೇಟಿಯಾಗಲಿಲ್ಲ. ರಾಧೆಗೆ ಬಾಹ್ಯವಾಗಿ ಅಗಲಿಕೆಯಿದ್ದರೂ ಮಾನಸಿಕಮಿಲನವಿದ್ದೇ ಇದ್ದಿತೆಂಬುದಕ್ಕೆ ನಿದರ್ಶನಗಳು ದೊರೆಯುತ್ತವೆ.

ಅಷ್ಟಮಹಿಷಿಯರಾದ ರುಕ್ಮಿಣೀ-ಸತ್ಯಭಾಮಾ ಮುಂತಾದವರೂ ಆತ್ಮನಿವೇದನಕ್ಕೆ ಉದಾಹರಣೆಯಾಗುತ್ತಾರೆ. ಕೃಷ್ಣನು ರಾಧೆಯಬಗ್ಗೆ ಹೇಳುತ್ತಿದ್ದುದನ್ನು ಕೇಳಿ ಅವರೆಲ್ಲರೂ ಸಂತೋಷ-ಆಶ್ಚರ್ಯಚಕಿತರಾಗಿ ರಾಧೆಯನ್ನು ನೋಡಲು ಹಂಬಲಿಸುತ್ತಿದ್ದರು. ಜೊತೆಗೆ ‘ನಾವೇನು ಕಡಿಮೆಯೇ?’ ಎನ್ನುವ ಭಾವವೂ ಅವರ ಮನಸ್ಸಿನಲ್ಲಿ ಸುಳಿಯದಿರಲಿಲ್ಲ!

ವರ್ಷಗಳುರುಳಿದಮೇಲೆ ಒಮ್ಮೆ ಕೃಷ್ಣನು ಸೂರ್ಯಗ್ರಹಣಕಾಲದಲ್ಲಿ ಗೋಪಿಕೆಯರನ್ನು ಸಂದರ್ಶಿಸುವ ಸನ್ನಿವೇಶವೊದಗಿತು. ಕೃಷ್ಣನು ಎಲ್ಲರಿಗೂ ರಾಧೆಯ ಪರಿಚಯ ಮಾಡಿಕೊಡುತ್ತಾನೆ. ಮಹಿಷಿಯರು ರಾಧೆಯಮೂಲಕ ಅವಳ ಪೂರ್ವವೃತ್ತಾಂತಗಳನ್ನು ಕೇಳಿದಾಗ ಕೃಷ್ಣ ಹೇಳಿರುವುದೆಲ್ಲವೂ ಅಕ್ಷರಶಃ ಸತ್ಯವೆಂಬುದನ್ನು ಅವರ ಮನಸ್ಸು ಒಪ್ಪಿಕೊಳ್ಳುತ್ತದೆ. ಮಾತುಮುಗಿದು ಬಿಡಾರಕ್ಕೆ ಹಿಂದಿರುಗಿ ಕೃಷ್ಣನು ನಿದ್ದೆಯಿಲ್ಲದಿರುವುದಕ್ಕೆ ಕಾರಣವೇನೆಂದಾಗ ಬೃಂದಾವನದ ರಾಧೆಗೆ ರಾತ್ರಿ ಹಾಲು ಕುಡಿಯದಿದ್ದರೆ ನಿದ್ರೆಬರುವುದಿಲ್ಲ. ರಾಧೆ ಇನ್ನೂ ನಿದ್ರೆಮಾಡಲಿಲ್ಲವಾದ್ದರಿಂದ ತನಗೂ ನಿದ್ರೆಯಿಲ್ಲವೆಂದು ನುಡಿಯುತ್ತಾನೆ. ಇವರೆಲ್ಲರೂ ಹೋಗಿ ಆಕೆಗೆ ಹಾಲು ಕೊಟ್ಟುಬಂದರು.

ನಂತರ ರುಕ್ಮಿಣಿಯು ಕೃಷ್ಣನ ಪಾದಸೇವೆಗೈದಾಗ ಅವನ ಪಾದಗಳಲ್ಲಿ ಬೊಬ್ಬೆಗಳಿರುವುದನ್ನುಕಂಡು ಗಾಬರಿಯಾಗುತ್ತಾಳೆ. ಕೃಷ್ಣ ಹೇಳುತ್ತಾನೆ- “ಹೃದಯದಲ್ಲಿ ಸದಾ ನನ್ನ ಪಾದಗಳನ್ನೇ ಧ್ಯಾನಿಸುತ್ತಲಿರುವ ರಾಧೆ ಬಿಸಿಬಿಸಿಹಾಲನ್ನು ಕುಡಿದಳು. ಅವಳ ಹೃದಯದಲ್ಲಿ ನೆಲೆಸಿರುವ ನನಗೆ ಬಿಸಿತಗುಲಿ ಬೊಬ್ಬೆಗಳೆದ್ದಿವೆ”! ಇದು ನಿಜಘಟನೆಯೋ ಕಾಲ್ಪನಿಕವೋ ತಿಳಿಯದು. ಹೇಗೇ ಇದ್ದರೂ ಹಿಂಬದಿಯ ಭಕ್ತಿರಸ ಅಗಾಧವಾಗಿದೆ. ಸೇವಿಸುವುದೆಲ್ಲವನ್ನೂ ಭಗವದರ್ಪಣೆ ಮಾಡುವುದೊಂದೇ ರಾಧೆಗೆ ತಿಳಿದಿರುವುದು. ಎಂತಹ ಆತ್ಮನಿವೇದನೆ!

ಕೃಷ್ಣನ ಭಕ್ತೆ ಮೀರಾಬಾಯಿ

ಮೀರಾಬಾಯಿ ಬಾಲ್ಯದಿಂದಲೂ ತನ್ನ ಹತ್ತಿರವಿದ್ದ ಕೃಷ್ಣವಿಗ್ರಹವನ್ನು ಸಾಕ್ಷಾತ್ ಕೃಷ್ಣನೆಂದೇ ಭಾವಿಸಿ ಪೂಜಿಸುತ್ತಿದ್ದವಳು. ಮಲಗುವಾಗಲೂ ಅವನ ಜೊತೆಯಲ್ಲಿಯೇ ಮಲಗುವ ಅಭ್ಯಾಸ. ಆಕೆಯು ಚಿತ್ತೂರಿನ ಭೋಜರಾಜನ ರಾಣಿಯಾಗಿದ್ದಳು. ಗೃಹಕೃತ್ಯಗಳನ್ನೂ ಹಿರಿಯರ ಶುಶ್ರೂಷೆಯನ್ನೂ ಮಾಡಿ ರಾತ್ರಿಯಲ್ಲಿ ತನ್ನ ಕೃಷ್ಣನನ್ನು ಪ್ರತ್ಯೇಕ ಸ್ಥಳದಲ್ಲಿರಿಸಿ ಭಜಿಸಿ-ಹಾಡಿ-ನರ್ತಿಸುವುದರಲ್ಲಿಯೇ ದಿನಗಳು ಕಳೆದವು. ಇಂತಹ ವಿಶೇಷ ಭಜನೆಯಲ್ಲಿ ಪಾಲ್ಗೊಳ್ಳಲು ಅನೇಕರು ಬರುತ್ತಿದ್ದರು.

atma nivedanam meera and shyam
atma nivedanam meera and shyam

ರಾಣಿಯಾದವಳಿಗಿದ್ದ ಲೋಕವಿಲಕ್ಷಣವಾದ ಇಂತಹ ನಡೆಯನ್ನು ಅರಮನೆಯವರು ಸಹಿಸಲಿಲ್ಲ. ಇವಳು ಕೃಷ್ಣಸಹವಾಸವನ್ನು ಬಿಡಲೊಲ್ಲಳು. ಆಕೆಯದು ‘ಅವ್ಯವಹಾರ’ವೆಂಬ ದೂರನ್ನುಕೇಳಿ ಕುಪಿತನಾದ ರಾಜನು ಪ್ರತ್ಯಕ್ಷವಾಗಿ ನೋಡಿಬರಲು ನಿಶ್ಚಯಿಸುತ್ತಾನೆ. ರಾತ್ರಿ ಖಡ್ಗಪಾಣಿಯಾಗಿ ಹೊರಗೆನಿಂತು ಕೃಷ್ಣನ ಜೊತೆಯಲ್ಲಿ ಅವಳ ಸಂಭಾಷಣೆ-ಪ್ರೇಮಸಲ್ಲಾಪಗಳನ್ನು ಕೇಳಿ ಉಕ್ಕೇರಿದ ಕೋಪದಿಂದ ಬಾಗಿಲೊಡೆದು ಒಳನುಗ್ಗಿ ನೋಡಿದಾಗ ಅವಳ ಪಾಡಿಗೆ ಮೈಮರೆತು ಮಾತನಾಡುತ್ತಿದ್ದಾಳೆ, ಹುಡುಕಿದರೂ ಅಲ್ಲಿ ಇನ್ನಾರೂ ಕಾಣಲಿಲ್ಲ! ಮಾತುಕತೆಯೆಲ್ಲವೂ ಕೃಷ್ಣವಿಗ್ರಹದ ಜೊತೆಯಷ್ಟೇಯೆಂಬುದು ತಿಳಿಯುತ್ತದೆ. ಇತರರಿಗೆ ವಿಗ್ರಹವಾದರೆ ಅವಳಿಗದು ಸಾಕ್ಷಾತ್ ಕೃಷ್ಣನೇ. ಅವರೀರ್ವರ ಸಂಭಾಷಣೆಯಲ್ಲಿ ಕೃಷ್ಣನ ಮಾತುಗಳು ಇವಳ ಕಿವಿಗೆ ಮಾತ್ರ!! ಇವಳಿಗೆ ಹುಚ್ಚೆಂದು ತೀರ್ಮಾನಿಸುತ್ತಾನೆ ರಾಜ. ಸಂಪೂರ್ಣ ಆತ್ಮನಿವೇದನ ಮಾಡಿಕೊಂಡ ಮಹಾಯೋಗಿನಿ- ಪರಮಭಾಗವತೆ ಮೀರಾ.

ಆಕೆಯು ಬೃಂದಾವನದದಲ್ಲಿ ಬ್ರಹ್ಮಚಾರಿಯೊಬ್ಬರ ದರ್ಶನಕ್ಕೆ ಅನುಮತಿಯನ್ನು ಕೇಳಿದಾಗ ಅವರು ತಾವು ಸ್ತ್ರೀಯರ ಮುಖ ನೋಡುವುದಿಲ್ಲವೆಂಬ ಸಂದೇಶ ಕಳುಹಿಸುತ್ತಾರೆ. ಅದಕ್ಕೆ ಪ್ರತ್ಯುತ್ತರವಾಗಿ “ಬೃಂದಾವನದಲ್ಲಿ ಎಲ್ಲರೂ ಸ್ತ್ರೀಯರೇ, ಶ್ರೀಕೃಷ್ಣನೊಬ್ಬನೇ ಪುರುಷನಲ್ಲವೇ?” ಎಂದು ಶ್ರೀಕೃಷ್ಣನಲ್ಲಿ ತಾದಾತ್ಮ್ಯವನ್ನು ಹೊಂದಿದ್ದ ಮೀರಾಬಾಯಿಯ ಸಂದೇಶವು ಆ ಭಕ್ತರ ಕಣ್ಣನ್ನು ತೆರೆಯಿಸಿತು.

ಭಗವಂತನೇ ರಕ್ಷಕ!

ಭಕ್ತಶಿರೋಮಣಿಗಳಿಗೆ ಕಷ್ಟ ಒದಗಿದಾಗ ಕೆಲವೊಮ್ಮೆ ಅವರ ಮೊರೆಯಿಲ್ಲದೆಯೇ ಭಗವಂತನು ಅವರುಗಳನ್ನು ಕಾಯುತ್ತಾನೆಂಬುದಕ್ಕೆ ಉದಾಹರಣೆಯಾಗಿ ಕೆಲವು ಘಟನೆಗಳು:

ಮೀರಾಬಾಯಿಯ ಭಜನೆ-ಪೂಜೆಗಳು ಎಲ್ಲೆಲ್ಲೂ ಹರಡಿ ಪ್ರಸಿದ್ಧಿಗೆ ಬರುತ್ತಿರಲು ಹೊರಪ್ರಾಂತ್ಯದವರೂ ಭಕ್ತಿಯಿಂದಲೂ, ಕುತೂಹಲದಿಂದಲೂ ಆಗಮಿಸುತ್ತಿದ್ದರು. ಅವರಲ್ಲಿ ರಜಪೂತರಿಗೆ ಜನ್ಮವಿರೋಧಿಗಳಾದ ಮೊಘಲರೂ ಬಂದದ್ದು ರಾಜನಿಗೆ ಉತ್ಕಟಕೋಪವನ್ನು ಮೂಡಿಸಿತು. “ನನಗೆ ನಿನ್ನ ಮುಖ ತೋರಿಸಬೇಡ, ಎಲ್ಲಾದರೂ ನದಿಯಲ್ಲಿ ಬಿದ್ದು ತೊಲಗು” ಎಂದು ಅನನ್ಯಭಕ್ತೆಯಾದವಳಿಗೆ ರಾಜಾಜ್ಞೆ ಮೂಲಕ ತಿಳಿಸಿ ಅತೀವ ಪಾಪವನ್ನೆಸಗುತ್ತಾನೆ. ನದಿಯಬಳಿ ನಿಂತು ಭಗವಂತನ ಮಡಿಲಿಗೆ ಧುಮುಕಲು ಸಿದ್ಧಳಾದಳು. ತಕ್ಷಣವೇ ಹಿಂದುಗಡೆಯಿಂದ ಯಾರೋ ಕೈಹಿಡಿದಂತಾಗಿ ನೋಡಿದಾಗ ಸಾಕ್ಷಾತ್ ಶ್ರೀಕೃಷ್ಣನೇ ನಿಂತಿದ್ದಾನೆ. “ನಿನಗೂ ನಿನ್ನ ಗಂಡನಿಗೂ ಇರುವ ಸಂಬಂಧಬಿಟ್ಟು ನಿತ್ಯ ಶಾಶ್ವತವಾಗಿ ನನ್ನ ಜೊತೆಯಿರು” ಎಂದು ಹೇಳಿ ಬಾಚಿತಬ್ಬಿಕೊಂಡು ಬೃಂದಾವನಕ್ಕೆ ತೆರಳಲು ಆದೇಶ ನೀಡುತ್ತಾನೆ.

ವಿಧಿ ಇವಳನ್ನು ಪುನಃ ಬೃಂದಾವನದಿಂದ ರಾಜ್ಯಕ್ಕೆ ಹಿಂತಿರುಗಿಸುತ್ತದೆ. ಪತಿ ಗತಿಸಿದನಂತರ ಅವನ ಅಣ್ಣನಿಂದ ತಡೆಯಲಾಗದ ಹಿಂಸೆಯನ್ನು ಅನುಭವಿಸುತ್ತಾಳೆ. ಆದರೆ ಆತ್ಮಸಮರ್ಪಣಾಭಾವ ಕಿಂಚಿತ್ತೂ ಸಡಿಲವಾಗುವುದಿಲ್ಲ. ಒಮ್ಮೆ ಬುಟ್ಟಿಯಲ್ಲಿ ಹಾವಿನಮೇಲೆ ಹಾರವನ್ನಿಟ್ಟು ದುಷ್ಟ ಆಲೋಚನೆಯಿಂದ “ನಿನ್ನ ಕೃಷ್ಣನಿಗೆ ಸಮರ್ಪಿಸು” ಎಂದಾಗ, ಕುಹಕವನ್ನರಿಯದೆ ಹಾರವನ್ನು ಭಗವಂತನಿಗೆ ಸಮರ್ಪಿಸುತ್ತಾ ಪೂಜೆಯಲ್ಲಿ ಮಗ್ನಳಾಗುತ್ತಾಳೆ. ವಿಪತ್ತಿಲ್ಲದೆ ಭಗವಂತ ರಕ್ಷಿಸುತ್ತಾನೆ. ರಾಜನಿಗೆ ಆಶ್ಚರ್ಯವೋ ಆಶ್ಚರ್ಯ! ಹೇಗಾದರೂ ಸಾಯಿಸಬೇಕೆಂಬ ಉದ್ದೇಶ್ಯದಿಂದ ಹಾಲಿಗೆ ವಿಷಸೇರಿಸಿ, “ಇದು ಅಮೃತ, ಪೂಜೆಯನಂತರ ಸ್ವೀಕರಿಸು” ಎನ್ನುತ್ತಾನೆ. ಇವಳು ಕೃಷ್ಣನಿಗೆ ಸಮರ್ಪಿಸುತ್ತಲೇ ಪೂರ್ಣಪಾನಮಾಡಿದಾಗ, ಕೃಷ್ಣ ಇವಳೊಳಗೆ ಕುಳಿತು ಸ್ವೀಕರಿಸುತ್ತಾನೆ. ಪವಾಡದಂತೆಯೇ ನಡೆದುಹೋಗುತ್ತದೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇವಳ ಪ್ರಾಣತ್ಯಾಗವನ್ನು ನೋಡುವ ಕುತೂಹಲದಿಂದ ಹೊರಗೆ ಕಾಯುತ್ತಿದ್ದವರಿಗೆ ಆಶಾಭಂಗ ಮತ್ತು ಆಶ್ಚರ್ಯ. ಅವಳು ಎಂದಿನಂತೆ ತನ್ನಪಾಡಿಗೆ ಭಜನೆ-ಪೂಜೆಯಲ್ಲಿ ತಲ್ಲೀನಳಾಗುತ್ತಾಳೆ. ವಿಷ ಏನಾಯಿತೆಂಬ ಪ್ರಶ್ನೆ ಇಲ್ಲಿ. ಮೀರಾ ಹಾಲಿನಪಾತ್ರೆಯನ್ನು ಕೈಯಲ್ಲಿಟ್ಟು ಕಣ್ಣುಮುಚ್ಚಿ ಸ್ವೀಕರಿಸುತ್ತಿರುವಂತೆಯೇ ಕೃಷ್ಣನೋಡುತ್ತಿರುವಂತಹ ಚಿತ್ರಗಳನ್ನು ಕಾಣುತ್ತೇವೆ. ಶ್ರೀರಂಗಮಹಾಗುರುವು ಇದಕ್ಕೆ ನೀಡಿದ ವಿವರಣೆ: ಅವಳಿದ್ದ ಸ್ಥಿತಿಯಲ್ಲಿ ವಿಷದ ಪರಿಣಾಮವು ಅಂಗಾಂಗಗಳಮೇಲೆ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅಂತಹದೊಂದು ಅತ್ಯಂತ ಉನ್ನತಸ್ಥಿತಿಯದು. ಊಹಿಸಲೂ ಅಸಾಧ್ಯವಾದ ಸನ್ನಿವೇಶಗಳಲ್ಲಿಯೂ ಭಗವಂತ ರಕ್ಷಿಸುತ್ತಾನೆ ಎನ್ನುವುದಕ್ಕೆ ಉದಾಹರಣೆಗಳಿವು.
(ಮುಂದುವರಿಯುವುದು)

– ಲೇಖಕರು ಕಾರ್ಯದರ್ಶಿ,
ಅಷ್ಟಾಂಗಯೋಗ ವಿಜ್ಞಾನಮಂದಿರಂ
, ಬೆಂಗಳೂರು

ಇದನ್ನೂ ಓದಿ : Navavidha Bhakti : ಶ್ರೀರಾಮ- ಶ್ರೀಕೃಷ್ಣರಿಗೆ ಇವರೆಲ್ಲರೂ ನೆಚ್ಚಿನ ಸಖರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Nandini ghee: ತಿರುಪತಿ ಲಡ್ಡು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ದೇವಸ್ಥಾನಗಳು ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.

VISTARANEWS.COM


on

By

Use nandini ghee compulsorily in temple prasadam Order of the Department of Religious Endowments
Koo

ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ (Nandini ghee) ಬಳಸುವಂತೆ ಆದೇಶ ಹೊರಡಿಸಲಾಗಿದೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ‌ ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Continue Reading

ಬೆಂಗಳೂರು

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Dasara 2024: ನೈರುತ್ಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ.

VISTARANEWS.COM


on

By

Temporary additional coaches to be attached to 34 trains for Dasara 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಸರಾ ಹಬ್ಬದ (Dasara 2024) ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ.

1)ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌
2) ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302)
3) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234)
4) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307)
5) ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308)
6) ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591)
7) ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592)
8) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535)
9) ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536)

ಈ ಎಲ್ಲ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ. ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌ ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಪ್ಯಾಸೆಂಜರ್‌ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಜೋಡಣೆ

ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌, ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213), ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225), ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365), ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269), ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270), ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Tirupati laddu Row : ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ

VISTARANEWS.COM


on

By

Also test the prasadam of the holy places of the state Pralhad Joshi urges state government
Koo

ನವದೆಹಲಿ: ತಿರುಪತಿ ಪ್ರಕರಣದ (Tirupati laddu Row) ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು.

ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಸಚಿವರು ಅಭಿಪ್ರಾಯಿಸಿದರು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು!? ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಜೋಶಿ ಆರೋಪಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲೂ ಎಚ್ಚರ ವಹಿಸಿ: ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಧಾರ್ಮಿಕ ಟ್ರಸ್ಟ್ ಗೆ ಬೇಡ ಹಿಂದೂಯೇತರರ ನೇಮಕ: ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದೂ ಸಚಿವ ಪ್ರಲ್ಹಾದ ಜೋಶಿ ಸರ್ಕಾರಕ್ಕೆ ಆಗ್ರಹಿದ್ದಾರೆ.

ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ- ತನಿಖೆಗೆ ಸಿಟಿ ರವಿ ಆಗ್ರಹ

ತಿರುಪತಿ ತಿಮ್ಮಪ್ಪನ ಪ್ರಸಾದಕ್ಕೆ ಪ್ರಾಣಿ ಕೊಬ್ಬು ಬಳಕೆ ಆರೋಪದ ಕುರಿತು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ತಿರುಪತಿ ಕೋಟ್ಯಾಂತರ ಭಕ್ತರ ಶ್ರದ್ಧೆಯ ಧಾರ್ಮಿಕ ಸ್ಥಳವಾಗಿದೆ. ಸಾವಿರಾರು ವರ್ಷಗಳಿಂದ ಬಾಲಾಜಿ ಜತೆ ಅವಿನಾಭಾವ ಸಂಬಂಧವಿದೆ. ವಾರಕ್ಕೊಮ್ಮೆ ಬಾಲಾಜಿ ದರ್ಶನಕ್ಕೆ ಹೋಗುವವರು ಇದ್ದಾರೆ. ತಿರುಪತಿ ಲಡ್ಡು ಪ್ರಸಾದಕ್ಕೆ ಇರುವ ಭಾವನೆಯೇ ಬೇರೆ.

ಅದು ಕೋಟ್ಯಾಂತರ ಭಕ್ತರಿಗೆ ಕೇವಲ ಸಿಹಿ ಅಲ್ಲ ಭಕ್ತಿಯ ಪ್ರಸಾದವಾಗಿದೆ. ಇಂತಹ ಪ್ರಸಾದ ತಯಾರಿಸುವಾಗ ಧಾರ್ಮಿಕ ಸ್ಯಾಂಟಿಟಿ ಕಾಪಾಡಿಕೊಳ್ಳಬೇಕು. ಕರ್ನಾಟಕದಿಂದಲೇ ನಂದಿನಿ ತುಪ್ಪ ಅಲ್ಲಿಗೆ ಸರಬರಾಜಾಗುವುದನ್ನ ಕೇಳಿದ್ದೇನೆ. ಪ್ರಸಾದಕ್ಕೆ ಪ್ರಾಣಿಯ ಕೊಬ್ಬು ಬಳಕೆ ಎಂಬ ಮಾತು ಆಶ್ಚರ್ಯ-ಆಘಾತ ಎರಡೂ ಆಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರದಲ್ಲಿ ಈ ರೀತಿ ಮಾಡುವ ಯೋಚನೆಯಾದರೂ ಯಾರಿಗೆ ಬರುತ್ತೆ. ಯಾರಿಗೆ ಗುತ್ತಿಗೆ ನೀಡಿದ್ದರು ಎಲ್ಲವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ, ಅದಕ್ಕೆ ಧಕ್ಕೆಯಾಗುತ್ತೆ. ಸಮಗ್ರ ತನಿಖೆಯಾದರೆ ಭಕ್ತರ ಮನಸ್ಸಿಗೆ ಸ್ಪಷ್ಟತೆ ಬರಲಿದೆ ಎಂದರು.

ತಿರುಪತಿಗೆ 350 ಮೆಟ್ರಿಕ್ ಟನ್ ತುಪ್ಪ ರವಾನೆ

ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ವಿಚಾರವಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಪ್ರತಿಕ್ರಿಯಿಸಿದ್ದಾರೆ. ಮೊದಲಿಗೆ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪಕ್ಕೂ, ‌ನಮ್ಮ ನಂದಿನಿಗೂ ಯಾವುದೇ ಸಂಬಂಧವಿಲ್ಲ. ಕಳೆದ ಕೆಲ ದಿನಗಳ ಹಿಂದೆ ಟಿಟಿಡಿ ಪ್ರೆಸ್ ಮೀಟ್ ಮಾಡಿದೆ. ನಂದಿನಿ ಹಾಲು ಹೊರಗಿಟ್ಟು ಬೇರೆ ಬೇರೆ ತುಪ್ಪ ತೆಗೆದುಕೊಂಡಿದ್ದಾರೆ. ಇದರ ಉದ್ದೇಶ ಏನು ಅಂತ ಟಿಟಿಡಿ ಅವರು ಕೇಳಿದ್ದಾರೆ. ಹಿಂದೆ ನಂದಿನಿ ತುಪ್ಪ ಏಕೆ ಬೇಡ ಅಂತ ಹೇಳಿದ್ದರು ಅನ್ನೋದು ನಮ್ಮಗೆ ಗೊತ್ತಿಲ್ಲ.

ಈಗ ಮತ್ತೆ ನಂದಿನಿ ಹಾಲು ಬೇಕು ಅಂತ ಶಿಫಾರಸ್ಸು ಮಾಡಿದ್ದಾರೆ.ಈಗ ಮತ್ತೆ ಕಳೆದ ಒಂದು ತಿಂಗಳಿನಿಂದ 350 ಮೆಟ್ರಿಕ್ ಟನ್ ತುಪ್ಪ ಹೋಗುತ್ತಿದೆ. ಈಗ ಆರೋಪ ಅಷ್ಟೇ ಪ್ರಾಣಿ ಕೊಬ್ಬಿನ ಅಂಶ ಬಳಕೆ ಆಗ್ತಾಯಿತ್ತಾ ಅನ್ನೋ ವರದಿ ಬರಬೇಕು. ಒಂದೂ ವೇಳೆ ಬಳಕೆ ಆಗ್ತಾಯಿತ್ತು ಅಂದರೆ ದುರದೃಷ್ಟಕರ ವಿಚಾರ ಇದು. ಒಟ್ಟಾರೆ ಈಗ ನಾವು ನಂದಿನಿಯಿಂದ ತುಪ್ಪ ಕೊಡಲು ತಯಾರಿ ಇದ್ದೀವಿ ಅಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೀದರ್‌

Ganesh Chaturthi: ಗಣೇಶನಿಗೆ ಆರತಿ ಬೆಳಗಿ ಸೌರ್ಹಾದತೆ ಮೆರೆದ ಮುಸ್ಲಿಂರು; ಭಾವೈಕತ್ಯೆಯ ಸಮಾಗಮಕ್ಕೆ ಸಾಕ್ಷಿಯಾದ ಬಸವಕಲ್ಯಾಣ

Ganesh Chaturthi: ಗಣೇಶ ಮೂರ್ತಿಗೆ ಮುಸ್ಲಿಮರು ಆರತಿ ಬೆಳಗಿ ಸೌರ್ಹಾದತೆ ಮೆರೆದಿದ್ದಾರೆ.ಈ ಮೂಲಕ ಭಾವೈಕತ್ಯೆಯ ಸಮಾಗಮಕ್ಕೆ ಬಸವಕಲ್ಯಾಣ ಸಾಕ್ಷಿಯಾಗಿದ್ದಾರೆ.

VISTARANEWS.COM


on

By

Muslims light aarti to Lord Ganesha Basavakalyana witnessed the confluence of unity
Koo

ಬಸವಕಲ್ಯಾಣ: ಗಣೇಶ ಉತ್ಸವ, ಈದ್ ಮಿಲಾದ್ ಸೇರಿದಂತೆ ಧಾರ್ಮಿಕ ಹಬ್ಬಗಳು ಬಂದರೆ ಸಾಕು ಜಾತಿ-ಧರ್ಮಗಳ ಹೆಸರಿನಲ್ಲಿ ಗಲಭೆಗಳು ನಡೆದು ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾಗಿ ಕೋಮು ಗಲಭೆಗಳು ನಡೆಯುವುದೇ ಹೆಚ್ಚು. ಅಂತಹದರಲ್ಲಿ ಹಿಂದು- ಮುಸ್ಲಿಂ ಪರಸ್ಪರ ಕೂಡಿಕೊಂಡು ಹಬ್ಬ ಆಚರಿಸಿ ಸಮಾಜಕ್ಕೆ ಮಾದರಿ ಸಂದೇಶ ಸಾರಿದ ಪ್ರಸಂಗಗಳೂ (Ganesh Chaturthi) ಆಗಾಗ ನಡೆಯುತ್ತಿರುತ್ತವೆ. ಈಗ ಇಂಥದ್ದೇ ಪ್ರಸಂಗಕ್ಕೆ ಶರಣರ ಕರ್ಮಭೂಮಿ ಬಸವ ಕಲ್ಯಾಣ ಸಾಕ್ಷಿಯಾಯಿತು.

ಗಣೇಶ ಹಾಗೂ ಈದ್ ಮಿಲಾದ ಸಂದರ್ಭದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿ ಬಿಗಿ ಬಂದೋಬಸ್ತ್‌ ಕೆಲಸ ಮಾಡುವ ಪೊಲೀಸ್ ಇಲಾಖೆ ಅಧಿಕಾರಿಗಳ ಚಾಣಾಕ್ಷತನದ ನಡೆಯಿಂದಾಗಿ ಹೈ ಟೆನ್ಶನ್‌ನಲ್ಲಿ ನಡೆಯಬೇಕಿದ್ದ ಈ ಎರಡು ಹಬ್ಬಗಳು ಪರಸ್ಪರ ಸಹಕಾರದೊಂದಿಗೆ ಸಂಭ್ರಮದ ಆಚರಣೆಗೆ ಸಾಕ್ಷಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಾರಿ ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳು ಕೇವಲ ಒಂದು ದಿನದ ಅಂತರದಲ್ಲಿ ಒಂದೇ ಬಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಚಾಣಾಕ್ಷತನದ ಉಪಾಯ ಅನುಸರಿಸಿದ ಹುಮ್ನಾಬಾದ್ ಡಿವೈಎಸ್ಪಿ ಜೆ.ಎಸ್ ನ್ಯಾಮಗೌಡರ್ ಹಾಗೂ ಸಿಪಿಐ ಅಲಿಸಾಬ್ ನೇತೃತ್ವದ ಪೊಲೀಸರ ತಂಡ, ಒಂದು ವಾರಗಳ ಹಿಂದಿನಿಂದಲೇ ಮೇಲಿಂದ ಮೇಲೆ ಹಿಂದೂ ಹಾಗೂ ಮುಸ್ಲಿಂ ಸಮಾಜದ ಗಣ್ಯರ ಸಭೆಗಳನ್ನು ನಡೆಸಿದರು. ಪರಸ್ಪರ ಸಹಕಾರ ಹಾಗೂ ಸಹಭಾಗಿತ್ವದೊಂದಿಗೆ ಹಬ್ಬಗಳನ್ನು ಆಚರಿಸುವಂತೆ ಪ್ರೇರೇಪಿಸಿದ್ದೇ ಈ ಎರಡು ಹಬ್ಬಗಳು ಶಾಂತಿ ಹಾಗೂ ಸೌಹಾರ್ತೆಯಿಂದ ಆಚರಣೆಗೆ ಸಾಧ್ಯವಾಯಿತು.

ಸೆಪ್ಟಂಬರ್ 16ರಂದು ನಡೆದ ಈದ್ ಮಿಲಾದ್ ಹಬ್ಬದಂದು ಮೆರವಣಿಗೆಯಲ್ಲಿ ಆಗಮಿಸಿದ ಮುಸ್ಲಿಂ ಧಾರ್ಮಿಕ ಮುಖಂಡರಿಗೆ ನಗರದ ಭವಾನಿ ಮಂದಿರದ ಬಳಿ ಹಿಂದೂಪರ ಸಂಘಟನೆಗಳ ಮುಖಂಡರು ಶಾಲು ಹೊಂದಿಸಿ ಸನ್ಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಜಾಗೃತಗೊಂಡ ಬಸವಕಲ್ಯಾಣದ ಸಮಸ್ತ ಮುಸ್ಲಿಂ ಮುಖಂಡರು ಸೆಪ್ಟೆಂಬರ್ 17ರಂದು ರಾತ್ರಿ ಆಯೋಜಿಸಿದ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಗರದ ಕೋಟೆ ಬಳಿ ವಸುದೈವ ಕುಟುಂಬಕ ಟೈಟಲ್‌ನ ಅಡಿಯಲ್ಲಿ ಬೃಹತ್ ಪೆಂಡಾಲ ಹಾಕಿ ಗಣೇಶ್ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ 12 ಗಣೇಶ ಮಂಡಲಗಳ ಮುಖಂಡರುಗಳಿಗೆ ವಿಶೇಷವಾಗಿ ಸಿದ್ಧಪಡಿಸಿದ ಸಿಹಿ ತಿನಿಸು ತಿನಿಸಿ ಸನ್ಮಾನಿಸುವ ಮೂಲಕ ಭಾವೈಕ್ಯತೆಯ ಸಂದೇಶ ರವಾನಿಸಿದರು. ಇಷ್ಟಕ್ಕೆ ಸುಮ್ಮನಾಗದ ಮುಸ್ಲಿಂ ಮುಖಂಡರು ತಾವೇ ಸ್ವತಃ ಮುಂದೆ ಬಂದು, ಗಣೇಶನಿಗೆ ಕರ್ಪೂರ, ಆರತಿ ಬೆಳಗಿ ಪೂಜೆ ಸಲ್ಲಿಸಿ ಗಣೇಶ ಮೆರವಣಿಗೆಗೆ ಚಾಲನೆ ನೀಡಿ ಗಮನ ಸೆಳೆದಿರುವುದು ಭಾವೈಕತ್ಯೆಯ ನಾಡಲ್ಲಿ ಬಹುಪರಾಕ್ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಡಿವೈಎಸ್ಪಿ ಜೆ.ಎಸ್ ನ್ಯಾಮಗೌಡರ ಮಾತನಾಡಿ, ಮುಸ್ಲಿಂ ಬಾಂಧವರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಗಣೇಶ ಮಂಡಲದವರಿಗೆ ಸನ್ಮಾನಿಸುವ ಜತೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ. ಇಂದಿನ ಈ ಕಾರ್ಯಕ್ರಮ ಇತಿಹಾಸದ ಪುಟಗಳಲ್ಲಿ ದಾಖಲೆಯಾಗುವ ಜೊತೆಗೆ ಜಗತ್ತಿಗೆ ಮಾದರಿಯಾಗಿದೆ ಎಂದು ಬಣ್ಣಿಸಿದರು. ತಹಶೀಲ್ದಾರ್ ದತ್ತಾತ್ರೇಯ ಗಾದಾ ಮಾತನಾಡಿ, ಶರಣರ ನೆಲದಲ್ಲಿ ಹಿಂದೂ ಹಾಗೂ ಮುಸ್ಲಿಮ ಬಾಂಧವರು ಕೂಡಿಕೊಂಡು ಒಗ್ಗಟ್ಟಿನಿಂದ ಹಬ್ಬ ಆಚರಣೆ ಮಾಡಿರುವುದು ಶ್ಲಾಘನಾರ್ಹವಾಗಿದೆ ಎಂದು ತಿಳಿಸಿದರು. ಸಿಪಿಐ ಅಲಿಸಾಬ್ ಮಾತನಾಡಿ, ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಎರಡು ಸಮುದಾಯದವರು ಕೂಡಿಕೊಂಡು ಆಚರಣೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.

ಪೊಲೀಸ್‌ ಇಲಾಖೆಯ ಸಮಯೋಚಿತ ಕ್ರಮದಿಂದಾಗಿ ಚಿಕ್ಕ ಪುಟ್ಟ ಗೊಂದಲಗಳು ನಡೆಯದೆ ಬೆಳಗಿನ ಜಾವದವರೆಗೆ ಗಣೇಶ ವಿಸರ್ಜನೆ ಮೆರವಣಿಗೆ ಸಂಭ್ರಮದಿಂದ ಜರಗಿತು. ಈ ಸಂದರ್ಭದಲ್ಲಿ ಈದ್ಗಾ ಕಮಿಟಿ ಅಧ್ಯಕ್ಷ ಅಮೀರ್ ಸೇಟ್, ಮುಸ್ಲಿಂ ಬೈತಲ್ ಮಾಲ್ ಸಂಸ್ಥೆಯ ಅಧ್ಯಕ್ಷ ಮಕ್ದುಮ್ ಮೋಹಿಯೋದ್ದಿನ್, ಕೆಪಿಸಿಸಿ ಸದಸ್ಯ ಎಂ.ಡಿ ರೈಸುದ್ದೀನ್, ನಗರಸಭೆ ಸದಸ್ಯ ಎಜಾಜ್ ಲಾತುರೆ, ಗಫರ್ ಫೇಸ್ಮಾಂ, ಸಗಿರೋದ್ದೀನ್, ಪ್ರಮುಖರಾದ ಮೀರ್ ಅಜರಲಿ ನವರಂಗ, ಖಲೀಲ್ ಅಹ್ಮದ್, ಮಿನಾಜ್ ನವಾಬ್, ಸೈಯದ್ ಯಾಸರಬ ಅಲಿ ಖಾದ್ರಿ, ರಬ್ಬಾನಿ ಬಾಗ್, ಅನ್ವರ್ ಬೋಸ್ಗೆ, ಎಂ.ಡಿ ಕುತ್ಬುದ್ದೀನ್, ಖಲೀಲ್ ಗೊಬ್ರೆ, ಡಾ: ಖದಿರೋದ್ದೀನ್, ನವಾಜ್ ಕಾಜ್ಮಿ, ಅಹಮದ್, ಸಾಧಕ ಮಿಯಾ ಸೇರಿದಂತೆ ಮುಸ್ಲಿಂ ಸಮಾಜದ ಪ್ರಮುಖರು, ಗಣ್ಯರು ಹಾಗೂ ನೂರಾರು ಸಂಖ್ಯೆಯಲ್ಲಿ ಸೇರಿದ ಯುವಕರು ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather Forecast
ಮಳೆ58 ನಿಮಿಷಗಳು ago

Karnataka Weather : ವಾರಾಂತ್ಯದಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ1 ಗಂಟೆ ago

Dina Bhavishya : ದಿನದ ಮಟ್ಟಿಗೆ ಖರ್ಚು ಹೆಚ್ಚು; ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Use nandini ghee compulsorily in temple prasadam Order of the Department of Religious Endowments
ಕರ್ನಾಟಕ13 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು14 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು14 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು17 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು18 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ18 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್19 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ19 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌