navavidha bhakti-about Keertan bhakti you should know in kannadaNavavidha Bhakti : ಭಕ್ತಿಯ ಪರಾಕಾಷ್ಠೆಗೆ ಕೀರ್ತನವೆಂಬ ಸಾಧನ - Vistara News

ಧಾರ್ಮಿಕ

Navavidha Bhakti : ಭಕ್ತಿಯ ಪರಾಕಾಷ್ಠೆಗೆ ಕೀರ್ತನವೆಂಬ ಸಾಧನ

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯ ನಾಲ್ಕನೇ ಲೆಖನ ಇಲ್ಲಿದೆ. ಇಂದು ಕೀರ್ತನೆಗಳ ಕುರಿತು ವಿವರಿಸಲಾಗಿದೆ.

VISTARANEWS.COM


on

navavidha bhakti-about Keertan bhakti you should know in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಾ. ಸಿ. ಆರ್. ರಾಮಸ್ವಾಮಿ
ಗುಣಗಾನವನ್ನು, ರೂಪದ ವರ್ಣನೆಯನ್ನು ಮೈಗೂಡಿಸಿ ಕಥನ ಮಾಡುವವರೆಲ್ಲರೂ ಭಕ್ತರೇ. ಭಗವಂತನ ಗುಣಕೀರ್ತನೆಯನ್ನು ಆಸ್ವಾದಿಸಿ ಅದನ್ನು ಮತ್ತೊಬ್ಬರಿಗೆ ಹೇಳುವುದೂ ಕೀರ್ತನೆಯೇ. ಹೀಗೆ ಕೀರ್ತನೆ ಮಾಡುತ್ತಾ ಕ್ರಮೇಣ ಭಕ್ತಿಯು ವೃದ್ಧಿಯಾಗುತ್ತದೆ. ಕೀರ್ತನ ಭಕ್ತಿಗೆ (Navavidha Bhakti) ಶುಕಬ್ರಹ್ಮರ್ಷಿಯನ್ನೇ ಉದಾಹರಣೆಯಾಗಿ ಕೊಡುತ್ತಾರೆ. ಭಾಗವತೋತ್ತಮರಾದ ಶುಕರು ಭಗವಂತನನ್ನು ನೇರವಾಗಿ ಒಳಗಣ್ಣಿನಿಂದ ನೋಡಿದವರಾಗಿ ಹಾಗೆಯೇ ಭಾಗವತವನ್ನು ಹಾಡಿಹೊಗಳಿದವರು.

ಕೀರ್ತನೆ ಎಂದರೆ ಭಗವಂತನ ವಿಷಯಗಳನ್ನು ಮಾತ್ರವೇ ಹೇಳಬೇಕೆಂದಿಲ್ಲ, ಭಗವಂತನಲ್ಲಿ ತಾದಾತ್ಮ್ಯವನ್ನು ಹೊಂದಿರುವ ಸಿದ್ಧಭಕ್ತರ ಕಥೆಯನ್ನು ಕೇಳುವುದೂ ಕೂಡ ಭಕ್ತಿಗೆ ಪೋಷಕವಾಗಿರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಭಕ್ತಿಶಾಸ್ತ್ರಗಳು ಸಾರುತ್ತವೆ. ನಾವು ಭಗವಂತನನ್ನು ನೇರವಾಗಿ ನೋಡದಿರಬಹುದು, ಆದರೆ ಭಕ್ತರನ್ನು ನೋಡುತ್ತೇವೆ. ಅವರ ಬಗೆಗಿನ ಅತ್ಯಂತ ರೋಚಕವಾದ ವೃತ್ತಾಂತಗಳನ್ನು ಕೇಳಿದರೂ ಕೂಡ ಭಕ್ತಿ ರಸವು ವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ. ಅಂತಹ ಭಕ್ತರ ವಿಸ್ತಾರವಾದ ಪಟ್ಟಿಯನ್ನೇ ಕೊಡಬಹುದು.

ದೇವರ್ಷಿ ನಾರದರು ಸದಾಕಾಲ ನಾರಾಯಣನ ನಾಮ ಸಂಕೀರ್ತನೆಯನ್ನು ಮಾಡುತ್ತಲೇ ತ್ರಿಲೋಕಸಂಚಾರಿ ಯಾಗಿ ಲೋಕಕಲ್ಯಾಣ ಮಾಡುವವರು. ಹಾಗೆಯೇ ತಮಿಳುನಾಡಿನ ಆಳ್ವಾರರುಗಳು. ಭಗವದ್ಭಾವದಲ್ಲಿ, ಭಗವದ್ಭಕ್ತಿಯಲ್ಲಿ ಆಳವಾಗಿ ಮುಳುಗಿದ್ದರಿಂದ ಅವರಿಗೆ ‘ಆಳ್ವಾರ್’ ಎಂಬ ಹೆಸರು ಎಂದು ವಿವರಿಸುತ್ತಾರೆ. ಆಳ್ವಾರರು ತಮ್ಮ ಒಳಗಣ್ಣಿನಿಂದ ಭಗವಂತನನ್ನು ನೋಡುತ್ತಲೇ ಕೊಂಡಾಡುತ್ತಾರೆ. ಅವರು ದೇವಸ್ಥಾನಗಳಲ್ಲಿನ ದೇವರ ವಿಗ್ರಹವನ್ನು ವೀಕ್ಷಿಸುತ್ತಾ ಭಕ್ತಿಭಾವಕ್ಕೆ ಆರೋಹಣ ಮಾಡಿದಾಗ ಪಾಶುರಗಳು(ಪದ್ಯಗಳು) ಸಹಜವಾಗಿ ಅವರಿಂದ ಹೊರಬರುತಿದ್ದವು. ಅವುಗಳನ್ನು ಹಾಗೆಯೇ ಗಾನಮಾಡುತ್ತಿದ್ದರು. ಅಂದರೆ ಅವರ ಅನುಭವಗಳೇ ಪದ್ಯರೂಪದಲ್ಲಿ ಹೊರಹೊಮ್ಮುತ್ತಿದ್ದವು.

navavidha bhakti-about Keertan bhakti you should know in kannada

“ಎಷ್ಟು ಪ್ರಕಾಶಮಯನಾಗಿದ್ದೀಯಪ್ಪಾ ನೀನು!” ಎಂಬುದಾಗಿ ವರ್ಣಿಸಿದರೆ, ಆ ವಿಗ್ರಹದಲ್ಲಿ ಪ್ರಕಾಶ ಕಾಣದಿರಬಹುದು. ಅವರು ಅಂತರಂಗದಲ್ಲಿ ದರ್ಶಿಸುವ ಭಗವಂತನು ಪ್ರಕಾಶಮಯನಾಗಿ ಗೊಚರಿಸಿದಾಗ ತಕ್ಷಣವೇ ಚಿಮ್ಮಿ ಬರುತ್ತದೆ ಆ ವರ್ಣನೆ. ಹೊರಗಿನ ವಿಗ್ರಹ ಸಹಾಯ ಮಾಡುತ್ತಿದೆ ಅಷ್ಟೇ. ವಾಸ್ತವವಾಗಿ ಅವರು ವಿವರಿಸುವುದು ಒಳಗಿನ ಮೂರ್ತಿಯನ್ನೇ. “ಒಳಗಿರುವುದು ನಿಧಿ; ಹೊರಗೆ ವಿಗ್ರಹ ರೂಪದಲ್ಲಿರುವುದು ಪ್ರತಿನಿಧಿ. ಪ್ರತಿನಿಧಿಯು ನಿಧಿಯಕಡೆ ಒಯ್ಯುವಂತಿರಬೇಕು” ಎಂಬ ಶ್ರೀರಂಗ ಮಹಾಗುರುವಿನ ವಾಣಿಯು ಸ್ಮರಣೆಗೆ ಬರುತ್ತದೆ. ಭಗವಂತನ ಗುಣಗಳನ್ನು, ವೀರ್ಯವನ್ನು, ಶೌರ್ಯವನ್ನು ವಿವರಿಸುವಾಗ ಶಿಲಾವಿಗ್ರಹದಲ್ಲಿ ಅವು ಯಾವುದೂ ಕಾಣದಿರಬಹುದು.

ಆದರೆ ವಿಗ್ರಹದಲ್ಲಿ ರಾಮನನ್ನು ನೋಡುವಾಗ, ಅವನು ಧನಸ್ಸನ್ನು ಹಿಡಿದಿರುವ ಭಂಗಿಯನ್ನು ನೋಡಿದಕೂಡಲೇ ಅವರ ಮನಸ್ಸು ಒಳಗೆಳೆದು, ಅಂತರಂಗದ ರಾಮನ ದರ್ಶನವಾಗಿ ಅವನ ವೀರ್ಯ-ಶೌರ್ಯ-ಪರಾಕ್ರಮಗಳ ಬಳಿ ನಯನ ಮಾಡುತ್ತದೆ. ಕವಿಗಳೂ ಆಗಿದ್ದರಿಂದ ತಾನಾಗಿಯೇ ಕಾವ್ಯಮಯವಾದ ಪದ್ಯಗಳು ಅವರಿಂದ ಹೊರಹೊಮ್ಮುವುದು.

ಹಾಗೆಯೇ ಬಂಗಾಳದ ಶ್ರೀಕೃಷ್ಣಚೈತನ್ಯರು. ಅವರು ಕಥೆಗಳನ್ನು ಹೇಳುತ್ತಿರಲಿಲ್ಲ, ಕೃಷ್ಣನನಾಮ ಸಂಕೀರ್ತನೆ ಮಾಡುತ್ತಲ್ಲೇ ಬೀದಿಬೀದಿಗಳಲ್ಲಿ ನಡೆದಾಡುತ್ತಿದ್ದವರು. ಅವರ ನಾಮ ಸಂಕೀರ್ತನೆಯ ಮಧುರ ಧ್ವನಿಯನ್ನು ಆಲಿಸುತ್ತ ಅವರನ್ನು ಹಿಂಬಾಲಿಸುತ್ತಿದ್ದವರು ನೂರಾರು ಮಂದಿ! ಅಷ್ಟು ಆಕರ್ಷಣೆ! ಅವರ ಸಂಕೀರ್ತನೆ ಕೇವಲ ಮನುಷ್ಯರನ್ನು ಆಕರ್ಷಿಸಿದ್ದಷ್ಟೆ ಅಲ್ಲ, ಪ್ರಾಣಿಗಳ ಮೇಲೂ ಅನಿರ್ವಚನೀಯವಾದ ಪರಿಣಾಮವನ್ನು ಉಂಟುಮಾಡುತ್ತಿತ್ತು ಎಂಬುದಾಗಿ ಅವರ ಜೀವನ ಚರಿತ್ರೆಯಲ್ಲಿ ನೋಡುತ್ತೇವೆ. ಒಮ್ಮೆ ಯಾತ್ರೆಯಲ್ಲಿ ದಟ್ಟವಾದ ಕಾಡಿನ ಮಧ್ಯೆ ಹುಲಿ, ಸಿಂಹ, ಆನೆ ಮುಂತಾದ ಅನೇಕ ಪ್ರಾಣಿಗಳು ಗುಂಪುಗುಂಪಾಗಿ ಬಂದಾಗ, ಅವರು ಯಾವುದಕ್ಕೂ ಹೆದರಲಿಲ್ಲ. ತನ್ಮಯರಾಗಿ ಭಗವದ್ಭಾವದಲ್ಲಿ ಮುಳುಗಿ ಸಂಕೀರ್ತನೆ ಮಾಡುವವರಿಗೆ ಭಯವೇ ಇರುವುದಿಲ್ಲ ಎಂಬ ಮಾತಿಗೆ ಉದಾಹರಣೆ ಶ್ರೀಕೃಷ್ಣಚೈತನ್ಯರೇ.

ಅವರ ಮಧುರವಾದ ಸಂಕೀರ್ತನೆಯನ್ನು ಆಲಿಸುತ್ತ ಅವುಗಳೂ ಕೂಡ ಕುಣಿಯಲಿಕ್ಕೆ ಆರಂಭಿಸಿದುವಂತೆ! ಯಾವ ಪ್ರಾಣಿಯೂ ಇವರಿಗೆ ಹಿಂಸೆಯನ್ನು ಮಾಡಲಿಲ್ಲ. ಅವುಗಳಿಗೆ ಏನರ್ಥವಾಯಿತೋ ಬಿಟ್ಟಿತೋ ತಿಳಿಯದು, ಆದರೆ ಈ ಪರಿಣಾಮವು ನಾಮಸಂಕೀರ್ತನೆಯ ಪ್ರಭಾವವನ್ನು ಎತ್ತಿತೋರಿಸುತ್ತದೆ.

ಹಾಗೆಯೇ ಮರಾಠಿಯ ತುಕಾರಾಮರು, ನಾಮದೇವರು, ಕರ್ನಾಟಕದ ಪುರಂದರದಾಸರು, ಕನಕದಾಸರು, ವಾಗ್ಗೇಯಕಾರರಾದ ತ್ಯಾಗರಾಜರು ಮುಂತಾದ ಅನೇಕಾನೇಕ ಭಕ್ತಶಿರೋಮಣಿಗಳ ಕೀರ್ತನೆಯ ಪ್ರಭಾವ ಸುಪ್ರಸಿದ್ಧ. ಇವರುಗಳ ಸಾಹಿತ್ಯ ರಾಶಿಯೂ ವಿಪುಲವಾಗಿವೆ. ಶತಮಾನಗಳಿಂದ ರಾಜ್ಯದಾದ್ಯಂತ ಭಕ್ತ ಗೋಷ್ಠಿಗಳು ಈ ಸಾಹಿತ್ಯದಿಂದ ಸ್ಫೂರ್ತಿಯನ್ನು ಪಡೆದು ಭಜನೆ, ಗಾನ, ನೃತ್ಯಗಳಲ್ಲೂ ನಿತ್ಯ ಜೀವನದಲ್ಲೂ ಅಳವಡಿಸಿಕೊಂಡು ತಮ್ಮ ಜೀವನವನ್ನು ಪಾವನ ಮಾಡಿಕೊಂಡಿರುವುದು ಸರ್ವ ವಿದಿತ.

navavidha bhakti-about Keertan bhakti you should know in kannada

ಕೀರ್ತನ ಭಕ್ತಿಯಲ್ಲಿ, ಭಜನೆಯಲ್ಲಿ ಉತ್ತರಭಾರತದ ಮೀರಾಭಾಯಿಯನ್ನು ಮೀರಿಸುವವರಿಲ್ಲ ಎನ್ನಬೇಕು. ಆಕೆಯ ಭಜನೆಯ ಪರವಶತೆಯಲ್ಲಿ ಅನೇಕ ಭಕ್ತರೂ ಸೇರಿ ರಾತ್ರಿಯೆಲ್ಲ ಭಜನೆಯಲ್ಲೇ ಕಳೆದುಬಿಡುತ್ತಿದ್ದರಂತೆ. ಭಜನೆಯು ಕ್ರಮೇಣ ನೃತ್ಯಕ್ಕೆ ತಿರುಗಿದುದೂ ಅಪರೂಪವೇನಲ್ಲ. ಎದುರುಗಿದ್ದ ಆ ರ್ಕೃಷ್ಣನ ವಿಗ್ರಹವು ಅವಳ ಪಾಲಿಗೆ ವಿಗ್ರಹವಲ್ಲ; ಸಾಕ್ಷಾತ್ ಕೃಷ್ಣನೇ ಆಗಿದ್ದು ಅವನ ಜೊತೆ ಸಂಭಾಷಣೆ ಮಾಡುತ್ತಿದ್ದುದೂ ಜನಜನಿತ ವಿಷಯವೇ ಅಗಿತ್ತು. ಆದರೆ ಕೃಷ್ಣನ ಮಾತುಗಳು ಮಾತ್ರ ಅವಳ ಕಿವಿಗಷ್ಟೇ, ಇತರರಿಗಲ್ಲ!

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇವರೆಲ್ಲರೂ ಸಿದ್ಧ ಭಕ್ತರುಗಳು. ಕೀರ್ತನ ಭಕ್ತಿಗೆ ಉದಾಹರಣೆಯಾಗಿ ಜ್ಞಾಪಿಸಿಕೊಳ್ಳ ಬಹುದು. ಆ ಭಕ್ತ ಶಿರೋಮಣಿಗಳ ಧ್ವನಿಗಳು ಎಷ್ಟು ಪ್ರಭಾವಶಾಲಿಯಾಗಿ ಇದ್ದಿರಬೇಕು. ದುರದೃಷ್ಟವಶಾತ್ ಆ ಧ್ವನಿ-ಮುದ್ರಣಗಳು ನಮಗೆ ಇಂದು ಲಭ್ಯವಿಲ್ಲ; ಸಾಹಿತ್ಯ ಮಾತ್ರವೇ ಉಪಲಬ್ದವಿರುವುದು.

ಕೀರ್ತನೆಯ ಕುರಿತ ಈ ಲೇಖನವನ್ನು ಇಲ್ಲಿ ನೋಡಿ!

ಆದರೆ, ನಮ್ಮ ಅಭಿಪ್ರಾಯದಲ್ಲಿ, ಆಧುನಿಕ ಯುಗದಲ್ಲಿನ ಅನೇಕಾನೇಕ ಯಂತ್ರೋಪಕರಣಗಳ ಸಹಾಯದಿಂದ ಉತ್ತಮವಾದ ಸಾಕ್ಷ್ಯ-ಚಿತ್ರಗಳ ತಯಾರಿಕೆ ಸಾಧ್ಯವಾಗಿವೆ. ಅವುಗಳ ಮೂಲಕ ರಾಮಾಯಣ, ಮಹಾಭಾರತ, ಭಾಗವತ ಮುಂತಾದವುಗಳನ್ನು ವೀಕ್ಷಣೆ ಮಾಡಬಹುದಾಗಿದೆ. ಕೇವಲ ಶ್ರವಣ ಅಷ್ಟೇ ಅಲ್ಲ, ದೃಶ್ಯಮಾಧ್ಯಮವೂ ದೊರಕುವುದು ಇನ್ನೆಷ್ಟು ಪರಿಣಾಮಕಾರಿ. ಕೃಷ್ಣನ ಕಥೆಗಳನ್ನೆಲ್ಲಾ ಟಿವಿಯಲ್ಲಿ ನೋಡುತ್ತೇವೆ. ಎಷ್ಟು ಪರಿಣಾಮಕಾರಿಯಾಗಿರುತ್ತವೆ! ಎನ್ನುವುದು ಎಲ್ಲರ ಅನುಭವಕ್ಕೂ ಬಂದಿರುವ ವಿಷಯವೇ ಆಗಿದೆ. ಭಕ್ತಿಭಾವ ತುಂಬಿದ ಪಟುವಾದ ನಟನಾದರೆ ಭಗವದ್ರಸವನ್ನು ಉತ್ಕೃಷ್ಟ ರೀತಿಯಲ್ಲಿ ಬಿಂಬಿಸಲು ಸಾಧ್ಯವಾದೀತು. ಆಯಾ ಸನ್ನಿವೇಶಗಳನ್ನು ಕಣ್ಣಿಗೆ ಕಟ್ಟಿದಂತೆ ಚಿತ್ರಿಸುವುದು ಅದೆಷ್ಟು ಪರಿಣಾಮಕಾರೀ ! ಭಕ್ತಿರಸ ಪ್ರವೃದ್ಧಿಗೆ ಅದೆಷ್ಟು ಪ್ರಯೋಜನಕಾರೀ !

ಇವೆಲ್ಲವೂ ಕೂಡ ಕೀರ್ತನ ಭಕ್ತಿಯ ವಿವಿಧ ರೂಪಗಳು. ಭಕ್ತಿಯನ್ನು ವೃದ್ಧಿ ಮಾಡುವಂತಹ ಉತ್ತಮೋತ್ತಮವಾದ ಮಾಧ್ಯಮಗಳು.
(ಮುಂದುವರಿಯುವುದು)

– ಲೇಖಕರು ಕಾರ್ಯದರ್ಶಿ,
ಅಷ್ಟಾಂಗಯೋಗ ವಿಜ್ಞಾನಮಂದಿರಂ
, ಬೆಂಗಳೂರು

ಇದನ್ನೂ ಓದಿ: Navavidha Bhakti : ಭಕ್ತಿಯನ್ನು ವರ್ಧಿಸುವ ಕಥಾಶ್ರವಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

Agee hunnime Thousands of devotees have darshan of Shri Renukamba Devi of Chandragutti
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading

ಯಾದಗಿರಿ

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Yadgiri News: ಯಾದಗಿರಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

VISTARANEWS.COM


on

Shivasharane Hemaraddi Mallamma Jayanti celebration in Srisailam
Koo

ಯಾದಗಿರಿ: ಇಲ್ಲಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ (Yadgiri News) ಆಚರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮಂಡಳಿಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಪೆದ್ದುರಾಜು ಮಾತನಾಡಿ, 14ನೇ ಶತಮಾನದಲ್ಲಿ ಮಲ್ಲಮ್ಮ ತನ್ನ ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಸಾಧನೆ ಮೂಲಕ ಪರಶಿವ ಮಲ್ಲಿಕಾರ್ಜುನನ ಕೃಪೆಗೆ ಪಾತ್ರಳಾಗಿ ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾಳೆ ಎಂದು ತಿಳಿಸಿದರು.

ಇದನ್ನೂ ಓದಿ: Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಕರ್ಮಭೂಮಿಯಾದ ಶ್ರೀಶೈಲಂನಲ್ಲಿ ಕರ್ನಾಟಕದ ವೀರಶೈವ ಲಿಂಗಾಯತ ರಡ್ಡಿ ಸಮಾಜದವರು ಭವ್ಯ ಮಲ್ಲಮ್ಮ ದೇವಸ್ಥಾನ ನಿರ್ಮಾಣ ಮಾಡಿದ್ದಲ್ಲದೇ ಕ್ಷೇತ್ರದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿಕೊಂಡು ಬಂದಿದ್ದಾರೆ, ಅವರ ಶ್ರಮದಿಂದ ಆಂದ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಭಕ್ತರ ಮದ್ಯೆ ಸಾಮರಸ್ಯ ವಾತಾವರಣ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹೇಮರಡ್ಡಿ ಮಲ್ಲಮ್ಮ ಭಕ್ತರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಅವರ ಸಾಧನೆಯನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವಸ್ಥಾನದಲ್ಲಿ ಮಲ್ಲಮ್ಮನ ಮೂರ್ತಿಗೆ ಪಂಚಾಮೃತ ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವ, ತೊಟ್ಟಿಲ ಉತ್ಸವ ಕಾರ್ಯಕ್ರಮ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾರಂಭದಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದಾಸರು, ಶಂಕ್ರಯ್ಯಸ್ವಾಮಿ, ಅರ್ಚಕರಾದ ಓಂಕಾರಯ್ಯಸ್ವಾಮಿ, ಮಲ್ಲಮ್ಮ ತಾಳಿಕೋಟಿ, ವೆಂಕಟರಡ್ಡಿ ಮಾಲಿ ಪಾಟೀಲ್ ಹತ್ತಿಕುಣಿ, ಗದಗ ಜಿಲ್ಲೆಯ ನ್ಯಾಯವಾದಿ ವಿರೇಂದ್ರ ಶಿರೋಳ, ಶಿವಪ್ಪಗೌಡ, ಸಿದ್ದಣ್ಣ ಸೇರಿದಂತೆ ಕನ್ನಡಿಗ ಭಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಧಾರ್ಮಿಕ

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

ಶನಿಯ ವಕ್ರದೃಷ್ಟಿಯ ಪರಿಣಾಮಗಳ ಬಗ್ಗೆ ಹೆಚ್ಚಿನವರು ಕೇಳಿರುತ್ತಾರೆ, ಇನ್ನು ಕೆಲವರು ಅನುಭವಿಸಿರುತ್ತಾರೆ. ಇದರಿಂದ ಪಾರಾಗಲು ಹಲವಾರು ಪರಿಹಾರ ಮಾರ್ಗಗಳನ್ನು ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ. ಈ ದಿನ ಕೆಲವು ಅನುಷ್ಠಾನಗಳನ್ನು ಮಾಡುವುದರಿಂದ ಶನಿಯ ವಕ್ರ ದೃಷ್ಟಿಯಿಂದ ಪಾರಾಗಲು (Remedies For SadeSati) ಸಾಧ್ಯವಿದೆ .

VISTARANEWS.COM


on

By

Remedies For SadeSati
Koo

ಜೀವನದಲ್ಲಿ ಏನಾದರೂ ಕೆಟ್ಟದಾದರೆ ಶನಿಯ (shani) ವಕ್ರ ದೃಷ್ಟಿ ಅಥವಾ ಸಾಡೇ ಸಾಥ್ ಪರಿಣಾಮ (Remedies For SadeSati) ಎನ್ನುವ ಅನುಮಾನ ಕೆಲವರನ್ನು ಕಾಡುತ್ತದೆ. ನಾವು ತಿಳಿದೋ ತಿಳಿಯದೆಯೋ ಮಾಡುವ ಕರ್ಮಕ್ಕೆ ತಕ್ಕ ಪ್ರತಿಫಲ ಕೊಡುವ ಶನಿ ದೇವನ ಬಗ್ಗೆ ಭಕ್ತಿಗಿಂತ ಭಯ ಪಡುವವರೇ ಅಧಿಕ. ಆದರೆ ಶನಿ ದೇವನೂ ಶ್ರದ್ಧಾ ಭಕ್ತಿಗೆ ಮೆಚ್ಚುತ್ತಾನೆ ಹಾಗೂ ಭಕ್ತರ ಅಭೀಷ್ಟೆಗಳನ್ನು ಈಡೇರಿಸುತ್ತಾನೆ.

ಶನಿಯ ವಕ್ರ ದೃಷ್ಟಿ ನಮ್ಮ ಮೇಲೆ ಬಿದ್ದರೆ ಅದರಿಂದ ಪಾರಾಗಲು ಕೆಲವೊಂದು ಪರಿಹಾರ ಕ್ರಮಗಳನ್ನು ಪುರಾಣಗಳಲ್ಲಿ ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ (Shani Jayanti). ಈ ದಿನ ಇವುಗಳನ್ನು ಅನುಷ್ಠಾನಗೊಳಿಸಿದರೆ ಕಷ್ಟಗಳಿಂದ ಪಾರಾಗಬಹುದು.

1. ಬೆನ್ನು ನೋವು ಅಥವಾ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಶನಿ ಜಯಂತಿಯ ದಿನದಂದು ಕಪ್ಪು ಉಂಡೆಯನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ದೇವಸ್ಥಾನದ ಮೂಲೆಯಲ್ಲಿ ಇರಿಸಿ. ಶನಿದೇವನ ಮಂತ್ರವಾದ “ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ” ಎಂಬುದಾಗಿ 21 ಬಾರಿ ಜಪಿಸಿ.

2. ಮಕ್ಕಲಾಗದೇ ಇದ್ದರೆ ದಂಪತಿ ಶನಿ ಜಯಂತಿಯ ದಿನದಂದು ಮನೆಯ ಚಾವಣಿ, ಬಾಲ್ಕನಿ ಅಥವಾ ಮನೆಯ ಹೊರಗೆ ಪಕ್ಷಿಗಳಿಗೆ ಆಹಾರ ಮತ್ತು ನೀರನ್ನು ಇರಿಸಿ. ಇಲ್ಲಿ ನೆನಪಿಡಬೇಕಾದ ಅಂಶವೆಂದರೆ ಆಹಾರ ಮತ್ತು ನೀರು ಪಕ್ಷಿಗಳಿಗೆ ಇಡಬೇಕೇ ಹೊರತು ಪಾರಿವಾಳಗಳಿಗೆ ಅಲ್ಲ. ಇದರೊಂದಿಗೆ 51 ಬಾರಿ ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ ಎಂದು ಜಪಿಸಿ.

3. ಮನೆಯ ಸಂತೋಷ ಮತ್ತು ಅದೃಷ್ಟವನ್ನು ಹೆಚ್ಚಿಸಲು ಬಯಸಿದರೆ ಶನಿ ಜಯಂತಿಯ ದಿನದಂದು ದೇವಸ್ಥಾನದಲ್ಲಿ ಕಪ್ಪು ಬಟ್ಟೆಯನ್ನು ಅರ್ಪಿಸಿ. 11 ಬಾರಿ ಶಂ ಹ್ರೀಂ ಶಾಂ ಶನೈಶ್ಚರಾಯ ನಮಃ.ಮಂತ್ರವನ್ನು ಜಪಿಸಿ.

4. ಕುಟುಂಬದ ಸದಸ್ಯರೊಂದಿಗೆ ಸಮಸ್ಯೆಗಳಿದ್ದರೆ ಶನಿ ಜಯಂತಿಯ ದಿನದಂದು ಶನಿ ದೇವರನ್ನು ಧ್ಯಾನಿಸುವಾಗ ದೇವಸ್ಥಾನದಲ್ಲಿ ಒಂದು ಹಿಡಿ ಇಡೀ ಉಂಡೆಯನ್ನು ಅರ್ಪಿಸಿ ಮತ್ತು 21 ಬಾರಿ ಜಪಿಸಿ. ಓಂ ಶ್ರೀ ಶಾಂ ಶ್ರೀ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

5. ಜೀವನದಲ್ಲಿ ಸತತವಾಗಿ ಅಸಂಖ್ಯಾತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಶನಿ ಜಯಂತಿಯ ದಿನದಂದು ಕೈಯ ಉದ್ದದ 19 ಪಟ್ಟು ಕಪ್ಪು ದಾರವನ್ನು ತೆಗೆದುಕೊಂಡು ಅದನ್ನು ಮಾಲೆಯ ರೂಪದಲ್ಲಿ ಮಾಡಿ ಕುತ್ತಿಗೆಗೆ ಧರಿಸಿ. 108 ಬಾರಿ ಓಂ ಶ್ರೀಂ ಶ್ರೀಂ ಶ್ರೀಂ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

6. ಯಾವುದೇ ಕೆಲಸ ಮಾಡಲು ಮನಸ್ಸಿಲ್ಲದಿದ್ದರೆ ಅಥವಾ ಕೆಲಸದ ಸಮಯದಲ್ಲಿ ಸೋಮಾರಿತನವನ್ನು ಅನುಭವಿಸಿದರೆ ಶನಿ ಜಯಂತಿಯ ದಿನ ಶನಿದೇವನ ಈ ಹತ್ತು ನಾಮಗಳಾದ ಕೋನಸ್ತ ಪಿಂಗಲೋ ಬಭ್ರುಃ ಕೃಷ್ಣ ರೌದ್ರೋಂತಕೋ ಯಮ: ಸೌರಿಃ ಶನೈಶ್ಚರೋ ಮಂದಃ ಪಿಪ್ಪಲಾದೇನ್ ಎಂಬುದಾಗಿ 108 ಬಾರಿ ಜಪಿಸಬೇಕು.

7. ಜೀವನದಿಂದ ಶತ್ರುಗಳನ್ನು ದೂರ ಮಾಡಲು ಶನಿ ಜಯಂತಿಯ ದಿನದಂದು ಸ್ನಾನದ ಅನಂತರ ಶನಿದೇವನ ಮಂತ್ರವಾದ ಓಂ ಐಂ ಶ್ರೀಂ ಹ್ರೀಂ ಶನೈಶ್ಚರಾಯ ನಮಃ ಎಂಬುದಾಗಿ 11 ಬಾರಿ ಜಪಿಸಬೇಕು.

8. ಮನದಲ್ಲಿ ಸದಾ ಸಕಾರಾತ್ಮಕತೆ ಇರಬೇಕು ಮತ್ತು ಮನಸ್ಸಿನಲ್ಲಿ ಹೊಸ ಆಲೋಚನೆಗಳು ಬರುತ್ತಿರಬೇಕೆಂದು ಬಯಸಿದರೆ ಶನಿ ಜಯಂತಿಯ ದಿನದಂದು ಮನೆಯ ಮುಖ್ಯದ್ವಾರದಲ್ಲಿ ಸಾಸಿವೆ ಎಣ್ಣೆಯನ್ನು ಹಚ್ಚಿ. 21 ಬಾರಿ ಓಂ ಶಂ ಶನ್ಯೈ ನಮಃ ಮಂತ್ರವನ್ನು ಜಪಿಸಿ.

9. ಶನಿ ಜಯಂತಿಯ ದಿನ ಸಂಜೆ ಶನಿದೇವನ ಮಂತ್ರವಾದ ಶಂ ಓಂ ಶಂ ನಮಃ ಅನ್ನು ಜಪಿಸಬೇಕು. ಇದರಿಂದ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ಪಡೆಯುತ್ತೀರಿ ಮತ್ತು ಜೀವನದಲ್ಲಿ ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ.

10. ಕಬ್ಬಿಣದಿಂದ ಮಾಡಿದ ವಸ್ತುವನ್ನು ಯಾವಾಗಲೂ ನಿಮ್ಮ ಬಳಿ ಇಟ್ಟುಕೊಳ್ಳಿ. ಜೊತೆಗೆ 11 ಬಾರಿ ಓಂ ಐಂ ಹ್ರೀಂ ಶ್ರೀಂ ಶನೈಶ್ಚರಾಯ ನಮಃ ಎಂದು ಜಪಿಸಿದರೆ ಖಿನ್ನತೆಯಿಂದ ಶೀಘ್ರದಲ್ಲೇ ಪರಿಹಾರವನ್ನು ಪಡೆಯುತ್ತೀರಿ ಮತ್ತು ಯಾವುದೇ ವಿಷಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತೀರಿ.

ಇದನ್ನೂ ಓದಿ: Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

21. ಸಣ್ಣಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಸದಾ ಜಗಳ ನಡೆಯುತ್ತಿದ್ದರೆ ಶನಿ ಜಯಂತಿಯ ದಿನ ಶುಚಿಯಾಗಿ ಶುಭ್ರವಾದ ಬಟ್ಟೆಗಳನ್ನು ಧರಿಸಿ ಶನಿದೇವನನ್ನು ಸ್ಮರಿಸಿ ನಮಸ್ಕರಿಸಿ. ಅಲ್ಲದೆ ಸಾಸಿವೆ ಎಣ್ಣೆ, ಎಳ್ಳುವನ್ನು ಶನಿ ದೇವರಿಗೆ ಅರ್ಪಿಸಿ ಮತ್ತು ಶನಿದೇವನ ಶಂ ಶನೈಶ್ಚರಾಯ ನಮಃ ಮಂತ್ರವನ್ನು 21 ಬಾರಿ ಜಪಿಸಿ.

22. ಶನಿ ಜಯಂತಿಯ ದಿನದಂದು ಮನೆಯಲ್ಲಿ ಶಿವನ ಚಿತ್ರದ ಮುಂದೆ ಆಸನವನ್ನು ಇಟ್ಟು ಶಿವನ ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಅಖಂಡವಾಗಿ ಉಳಿಯುತ್ತದೆ.

Continue Reading

ಪ್ರವಾಸ

Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಒಡಿಶಾದ ಪುರಿಯಲ್ಲಿರುವ ಜಗನ್ನಾಥ ಮಂದಿರವೂ ವಿಶ್ವ ಪ್ರಸಿದ್ಧ ಹಿಂದೂ ದೇವಾಲಯಗಳಲ್ಲಿ (Jagannath Puri Temple) ಒಂದಾಗಿದೆ. ಇಲ್ಲಿನ ಏಳು ವಿಚಾರಗಳು ಇವತ್ತಿಗೂ ವಿಜ್ಞಾನಕ್ಕೆ ಸವಾಲಾಗಿ ಪರಿಣಮಿಸಿದೆ. ಆ ಏಳು ಅಚ್ಚರಿಗಳೇನು ಎಂಬ ವಿವರಣೆ ಇಲ್ಲಿದೆ.

VISTARANEWS.COM


on

By

Jagannath Puri Temple
Koo

ವಿಶ್ವ ಪ್ರಸಿದ್ಧ ದೇವಾಲಯಗಳಲ್ಲಿ ಭಾರತದ (india) ಒಡಿಶಾದ (Odisha) ಪುರಿಯಲ್ಲಿರುವ ಜಗನ್ನಾಥ ಮಂದಿರವೂ (Jagannath Pur Temple) ಒಂದಾಗಿದೆ. ಭಗವಾನ್ ವಿಷ್ಣುವಿನ ರೂಪವಾದ ಜಗನ್ನಾಥನಿಗೆ ಸಮರ್ಪಿತವಾಗಿರುವ ಈ ಜಗನ್ನಾಥ ದೇವಾಲಯವು ಲಕ್ಷಾಂತರ ಹಿಂದೂಗಳಿಗೆ ಪ್ರಮುಖ ಯಾತ್ರಾ (tourist place) ಸ್ಥಳವಾಗಿದೆ. ಪ್ರತಿ ವರ್ಷ ಇಲ್ಲಿ ನಡೆಯುವ ರಥಯಾತ್ರೆಯ ಉತ್ಸವವನ್ನು ಕಣ್ತುಂಬಿಕೊಳ್ಳಲು ದೇಶವಿದೇಶಗಳಿಂದ ಲಕ್ಷಾಂತರ ಭಕ್ತರು ಪುರಿಗೆ ಆಗಮಿಸುತ್ತಾರೆ.

ಅದ್ಭುತವಾದ ವಾಸ್ತು ಶಿಲ್ಪವನ್ನು ಹೊಂದಿರುವ ಈ ದೇವಾಲಯವು ಅನೇಕ ರಹಸ್ಯಗಳನ್ನು ಹೊಂದಿದೆ. ಜಗನ್ನಾಥ ಪುರಿ ದೇವಸ್ಥಾನದ ಬಗ್ಗೆ ಹೆಚ್ಚಿನವರು ತಿಳಿಯದೇ ಇರುವಂತ ಏಳು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.


1. ನೆರಳು ಬೀಳುವುದಿಲ್ಲ!

ಜಗನ್ನಾಥ ಪುರಿ ದೇವಾಲಯದ ಮೇಲೆ ಯಾವುದೇ ನೆರಳು ಬೀಳುವುದಿಲ್ಲ. ಇದು ನಿಖರವಾದ ವಾಸ್ತುಶಿಲ್ಪದ ಯೋಜನೆಯ ಪರಿಣಾಮವೇ ಅಥವಾ ಜಗನ್ನಾಥನ ಪವಾಡವೇ ಎಂಬುದನ್ನು ಈವರೆಗೆ ಪತ್ತೆ ಹಚ್ಚಲು ಯಾರಿಗೂ ಸಾಧ್ಯವಾಗಿಲ್ಲ. ಈ ದೇವಾಲಯವು ‘ನೆರಳು ರಹಿತ’ ಎಂದು ಹೇಳಲಾಗುತ್ತದೆ.


2. ಗಾಳಿಗೆ ವಿರುದ್ಧವಾಗಿ ಧ್ವಜ ಹಾರುತ್ತದೆ!

ದೇವಾಲಯದ ಮೇಲ್ಭಾಗದಲ್ಲಿರುವ ಧ್ವಜವು ಗಾಳಿಗೆ ವಿರುದ್ಧವಾಗಿ ಯಾಕೆ ಹಾರುತ್ತದೆ ಎಂಬುದರ ಹಿಂದೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ದೇವಾಲಯದಲ್ಲಿ ಧಾರ್ಮಿಕ ಶಕ್ತಿಯ ಭವ್ಯವಾದ ಅದ್ಭುತವನ್ನು ಪ್ರದರ್ಶಿಸುವ ಮೂಲಕ ಪ್ರವಾಸಿಗರು ಅಚ್ಚರಿ ಪಡುವಂತೆ ಮಾಡುತ್ತದೆ.


3. ಮೇಲ್ಭಾಗದಲ್ಲಿ ಸುದರ್ಶನ ಚಕ್ರ!

ಮೇಲ್ಭಾಗದಲ್ಲಿ ಇರಿಸಲಾಗಿರುವ ಸುದರ್ಶನ ಚಕ್ರವು ಎರಡು ರಹಸ್ಯಗಳನ್ನು ಹೊಂದಿದೆ. ಮೊದಲನೆಯದಾಗಿ ನಿರ್ಮಾಣದ ಸಮಯದ ತಂತ್ರಜ್ಞಾನದ ಸ್ಥಿತಿಯನ್ನು ಗಮನಿಸಿದರೆ ವಾಸ್ತುಶಿಲ್ಪಿಗಳು ಮತ್ತು ನಿರ್ಮಾಣ ಕಾರ್ಮಿಕರು ಅಂತಹ ತೂಕದ ಚಕ್ರವನ್ನು ಹೇಗೆ ಮೇಲಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂಬುದು. ಇನ್ನೊಂದು ಇದು ಎಲ್ಲಾ ಕೋನಗಳಿಂದಲೂ ಒಂದೇ ರೀತಿ ಹೇಗೆ ಕಾಣುತ್ತದೆ ಎಂಬುದು. ಈ ಸುದರ್ಶನ ಚಕ್ರದ ಪರಿಪೂರ್ಣ ಗಣಿತ ಲೆಕ್ಕಾಚಾರ ಅನೇಕ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.


4. ಅಡುಗೆಮನೆ ಕುತೂಹಲ

ದೇವಾಲಯದೊಳಗಿರುವ ಆಹಾರವನ್ನು ಒಂದರ ಮೇಲೊಂದರಂತೆ ಜೋಡಿಸಲಾದ ಮಡಕೆಗಳಲ್ಲಿ ಬೇಯಿಸಲಾಗುತ್ತದೆ. ಕುತೂಹಲದ ವಿಷಯವೆಂದರೆ ಮೇಲ್ಭಾಗದಲ್ಲಿರುವ ಮಡಕೆಗಳ ಆಹಾರ ಮೊದಲು ಬೇಯುತ್ತದೆ! ಇದು ಪ್ರವಾಸಿಗರು ಮತ್ತು ಸಂಶೋಧಕರಿಗೆ ಇನ್ನೂ ಸವಾಲಾಗಿದೆ.


5. ಮರದ ದೇವತೆಗಳ ಆಚರಣೆ

ನಬಕಾಲೇಬಾರ ಎಂಬ ಆಚರಣೆಯು ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ಹಿಂದೂ ದೇವತೆಗಳ ಮರದ ಪ್ರತಿಮೆಗಳ ಪುನರ್ ನಿರ್ಮಾಣವನ್ನು ಸಾರುವ ಅತ್ಯಂತ ಮಂಗಳಕರವಾದ ಆಚರಣೆಯಾಗಿದೆ. ಇದು ಆಕರ್ಷಣೆಯ ವಿಷಯವಾಗಿದ್ದು, ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಸೆಳೆಯುತ್ತದೆ.


6. ಶಾಂತವಾಗುವ ನೀರು!

ಸಂಜೆ ಸಮಯದಲ್ಲಿ ಸಾಗರದ ನೀರು ದೇವಾಲಯ ತಲುಪಿದಾಗ ಶಾಂತವಾಗುತ್ತದೆ. ಇದು ಯಾಕೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ದೇವಾಲಯದೊಳಗಿನ ಶಬ್ದವು ಮಾಂತ್ರಿಕವಾಗಿ ನೀರನ್ನು ಹಿಂದಿರುಗುವಂತೆ ಮಾಡುತ್ತದೆ! ದೇವತೆಗಳು ದೇವಾಲಯದೊಳಗೆ ಶಾಂತಿಯನ್ನು ಬಯಸುತ್ತಾರೆ ಮತ್ತು ಆದ್ದರಿಂದ ಪ್ರಕೃತಿ ಶಾಂತವಾಗುತ್ತದೆ ಎಂದು ಸ್ಥಳೀಯ ಪುರಾಣಗಳು ಹೇಳುತ್ತವೆ.


7. ಹಿಮ್ಮುಖ ಗಾಳಿ

ದೇವಾಲಯದ ಗಾಳಿಯು ಹಗಲಿನಲ್ಲಿ ಭೂಮಿಯಿಂದ ಸಮುದ್ರದತ್ತ ಹೋಗುತ್ತದೆ ಮತ್ತು ರಾತ್ರಿಯಲ್ಲಿ ಹರಿವನ್ನು ಹಿಮ್ಮುಖಗೊಳಿಸುತ್ತದೆ. ಇದು ಇನ್ನೂ ಉತ್ತರಕ್ಕೆ ಸಿಗದ ಪ್ರಶ್ನೆಯಾಗಿದೆ. ಇಲ್ಲಿನ ಪ್ರಕೃತಿ ವಿಸ್ಮಯ ಅನೇಕರನ್ನು ಆಶ್ಚರ್ಯ ಚಕಿತರನ್ನಾಗಿ ಮಾಡುತ್ತದೆ.

Continue Reading
Advertisement
Naxals
ದೇಶ18 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ31 mins ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ1 hour ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ1 hour ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ1 hour ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ2 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ2 hours ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ2 hours ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ2 hours ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ18 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌