navavidha bhakti about Archanam bhakti you should know in kannadaNavavidha Bhakti : ಭಕ್ತಿಗೊಂದು ಸಾಧನ - ಅರ್ಚನೆ - Vistara News

ಧಾರ್ಮಿಕ

Navavidha Bhakti : ಭಕ್ತಿಗೊಂದು ಸಾಧನ – ಅರ್ಚನೆ

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯ ಏಳನೇ ಲೆಖನ ಇಲ್ಲಿದೆ. ಇಂದು ಭಕ್ತಿಯ ಮತ್ತೊಂದು ರೂಪವಾದ ಅರ್ಚನೆಯ ಕುರಿತು ವಿವರಿಸಲಾಗಿದೆ.

VISTARANEWS.COM


on

navavidha bhakti about Archanam bhakti you should know in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಾ. ಸಿ. ಆರ್. ರಾಮಸ್ವಾಮಿ
ಭಗವಂತನನ್ನು ಪೂಜೆ ಮಾಡುವುದು, ಆರಾಧನೆ ಮಾಡುವುದು ಭಕ್ತಿಯ ಒಂದು ಪ್ರಕಾರವೇ. ಅರ್ಚನೆಯೆನ್ನುವುದು ಪೂಜೆಯ ಒಂದು ಅಂಗ. ಪೂಜೆಯಲ್ಲಿ ಭಗವಂತನ ಸ್ತೋತ್ರಗಳನ್ನು, ನಾಮಾವಳಿಯನ್ನು ಹೇಳುತ್ತಾ ಭಗವಂತನ ಮೂರ್ತಿಗೆ ಪರಿಮಳಭರಿತವಾದ ಪುಷ್ಪಗಳನ್ನು ಸಮರ್ಪಿಸುವುದೇ ಅರ್ಚನೆ.

ಅರ್ಚನೆಗೆ ಕೆಲವು ಪುಷ್ಪಗಳು ವಿಶೇಷವೆಂಬುದಾಗಿ ಸೂಚಿಸಿರುವುದುಂಟು. ಅದರಲ್ಲಿ ಮೊಟ್ಟಮೊದಲ ಸ್ಥಾನ ತಾವರೆಯ ಹೂವಿಗಿದೆ. ಭಗವಂತನ ಎಲ್ಲಾ ರೂಪಗಳನ್ನೂ ಅರ್ಚಿಸುವುದಕ್ಕೆ ಯೋಗ್ಯವಾದ ಪುಷ್ಪಶ್ರೇಷ್ಠವಿದು. ದೇವತೆಗಳ ಅಂಗಾಂಗಗಳಿಗೆ ಕಮಲದ ಹೋಲಿಕೆಯನ್ನು ಕೊಡುವುದುಂಟು. ಪಾದಪದ್ಮ, ಕರಕಮಲ, ಮುಖಾರವಿಂದ, ನಯನಾಂಬುಜ ಮುಂತಾಗಿ ಅನೇಕ ರೀತಿಯಲ್ಲಿ ದೇವತೆಗಳ ಸ್ವರೂಪ ವರ್ಣನೆಯುಂಟು. ಅವರ ಆಸನವೂ ಕಮಲವೇ. ಅವರ ಕೈಯಲ್ಲಿಯೂ ಕಮಲವೇ.

ಮಹಾಲಕ್ಷ್ಮೀಯನ್ನು ಪದ್ಮಪ್ರಿಯೆ, ಪದ್ಮಹಸ್ತೆ, ಪದ್ಮದಳಾಯತಾಕ್ಷಿ ಎಂಬುದಾಗಿ ಸ್ತೋತ್ರಮಾಡುತ್ತೇವೆ. ಹಯಗ್ರೀವದೇವರು ಕುಳಿತಿರುವುದು ಬಿಳಿಯ ತಾವರೆಯ ಮೇಲೆ. ಯೋಗಮಾರ್ಗದಲ್ಲಿ ಆರೋಹಣ ಮಾಡುವಾಗ ಮೂಲಾಧಾರದಿಂದ ಸಹಸ್ರಾರದವರೆಗೂ ಇರುವ ಪದ್ಮಗಳನ್ನು ಸೂಚಿಸುವುದಾಗಿದೆ ಈ ಹೊರಗಿನ ಪದ್ಮಗಳು.

ಕಮಲದ ಮತ್ತೊಂದು ವೈಶಿಷ್ಟ್ಯವೆಂದರೆ ಇದು ನೀರಿನಲ್ಲೇ ವಾಸಮಾಡುತ್ತಿದ್ದರೂ ತಾವರೆಯ ಎಲೆಗೆ ನೀರು ಅಂಟುವುದಿಲ್ಲ – ಜ್ಞಾನಿಗೆ ಪುಣ್ಯ-ಪಾಪಗಳು ಹೇಗೆ ಅಂಟುವುದಿಲ್ಲವೋ ಹಾಗೆ (“ಲಿಪ್ಯತೇ ನ ಸ ಪಾಪೇನ ಪದ್ಮಪತ್ರಮಿವಾಂಭಸಾ”). ಈ ಎಲ್ಲ ಕಾರಣಗಳಿಂದಲೂ ಕಮಲವು ಅರ್ಚನೆಗೆ ಸರ್ವಶ್ರೇಷ್ಠವಾದುದು.

ಇದಲ್ಲದೇ, ಮಲ್ಲಿಗೆ, ಸುಗಂಧರಾಜ, ಜಾಜಿ, ಸೇವಂತಿಗೆ, ಪಾರಿಜಾತ ಮುಂತಾದ ಪರಿಮಳ ಪುಷ್ಪಗಳೂ ಸಹ ಪೂಜೆಗೆ ಶ್ರೇಷ್ಠವೆಂಬುದಾಗಿ ಪರಿಗಣಿಸಲ್ಪಟ್ಟಿವೆ. ಸೌಗಂಧ್ಯ-ಸೌಕುಮಾರ್ಯಗಳಿಂದ ಕೂಡಿದ ಪುಷ್ಪಗಳನ್ನೇ ಶ್ಲಾಘಿಸಿರುವರು. ಹಾಗೆಯೇ, ನಿರ್ಗಂಧ-ದುರ್ಗಂಧ-ಕಂಟಕ(ಮುಳ್ಳುಗಿಡದ) ಪುಷ್ಪಗಳನ್ನು ಅರ್ಚನೆಯಲ್ಲಿ ನಿಷೇಧಿಸಿರುವರು. ಅದರಲ್ಲೂ ಈಗಿನ ಕಾಲದ ಕಾಗದಪುಷ್ಪವನ್ನು ಹೊರಗಡೆಯ ಅಲಂಕಾರಕ್ಕೆ ಮಾತ್ರ ಬಳಸಬಹುದು, ಅರ್ಚನೆಗೆ ಅಲ್ಲ. ಭೌತಿಕಕ್ಷೇತ್ರದಲ್ಲಿ ಅನೇಕ ಕಡೆ ಅನಿವಾರ್ಯವಾಗಿಬಿಟ್ಟಿರುವುದು ಪ್ಲಾಸ್ಟಿಕ್ ಪದಾರ್ಥಗಳು. ಆದರೆ ಪೂಜೆಗೆ ಬೇಕಾಗಿರುವ ಧರ್ಮವನ್ನು ಅದರ ಸ್ಪರ್ಶವೇ ಕುಂಠಿತ ಮಾಡುವುದರಿಂದ ಅವುಗಳನ್ನು ಪೂಜೆಯಲ್ಲಿ ಬಳಸಲೇ ಕೂಡದು ಎಂಬುದು ಹಿರಿಯರ ಅಭಿಪ್ರಾಯವಾಗಿದೆ.

navavidha bhakti about Archanam bhakti you should know in kannada

ಪುಷ್ಪ ಮತ್ತು ದೇವತೆಗಳು

ಯಾವ ದೇವರಿಗೆ ಯಾವ ಪುಷ್ಪ ಪ್ರಿಯ, ಯಾವುದು ನಿಷಿದ್ಧ ಎನ್ನುವ ಪಟ್ಟಿಯೇ ಇದೆ. ಈ ನಿರ್ಣಯದಲ್ಲಿ ಹೂವಿನ ವರ್ಣವು ಮುಖ್ಯ ಪಾತ್ರ ವಹಿಸುತ್ತದೆ. ಉದಾಹರಣೆಗೆ ನಾರಾಯಣನಿಗೆ ಬಿಳಿ ಅಥವಾ ಹಳದಿ ಬಣ್ಣದ ಪುಷ್ಪಗಳು ಪ್ರಿಯವೆಂದೂ, ಶಿವನಿಗೆ ಕೆಂಪು ಬಣ್ಣದ ಕುಸುಮಗಳು ಪ್ರಿಯವೆಂದೂ ಸೂಚಿಸಿದ್ದಾರೆ. ಸುದರ್ಶನಮೂರ್ತಿಯನ್ನು ಹೊರತುಪಡಿಸಿ ಉಳಿದ ವಿಷ್ಣುವಿಗೆ ಸಂಬಂಧಿಸಿದ ದೇವತೆಗಳ ಪೂಜೆಗೆ ಕೆಂಪುಬಣ್ಣದ ಹೂವುಗಳನ್ನು ಸಾಮಾನ್ಯವಾಗಿ ಬಳಸುವುದಿಲ್ಲ. ಸುದರ್ಶನನನ್ನೇ ಪೂಜೆ ಮಾಡುವಾಗ ಅದು ಶ್ರೇಷ್ಠ. ಇಲ್ಲಿ ದೇವತೆಗಳಿಗೆ ಪ್ರಿಯ ಎಂದರೆ ಏನು ಎಂಬ ಪ್ರಶ್ನೆ ಏಳುತ್ತದೆ: ಯಾವ ಬಣ್ಣವು ಯಾವ ದೇವತಾಭಾವಕ್ಕೆ ಸಹಾಯವಾಗುವುದೋ ಆ ಬಣ್ಣವನ್ನು ಆ ದೇವತೆಗಳಿಗೆ ಪ್ರಿಯ ಎಂಬುದಾಗಿ ತಿಳಿಸಿರುವರು.

ಇದಲ್ಲದೇ, ಪುಷ್ಪಗಳನ್ನು ಬೆಳೆಸುವ ಸ್ಥಳ, ವಿಧಾನ, ಅವುಗಳನ್ನು ಸಂಗ್ರಹ ಮಾಡುವ ಕ್ರಮವೂ ಪೂಜೆಗೆ ಸಹಾಯಕವಾಗಿರಬೇಕು. ಮಲಗಳಿಂದ ಕೂಡಿದ ಜಾಗಗಳು ಅಶುಚಿಯ ಸ್ಥಳಗಳು. ಅಲ್ಲಿ ಬೆಳೆಯುವ ಕುಸುಮಗಳು ಪೂಜೆಗೆ ಯೋಗ್ಯವಲ್ಲ. ತನ್ನ ಮನೆಯಲ್ಲಿಯೇ ನೀರಿನ ಧಾರೆಯ ಜೊತೆಯಲ್ಲಿ ಮನೋಧಾರೆಯನ್ನೂ ಸೇರಿಸಿ ಬೆಳೆಸಿದ ಪುಷ್ಪಗಳು ಸರ್ವಶ್ರೇಷ್ಠ. (ಆದರೆ ಇತರರ ಮನೆಯ ಹೂಗಳನ್ನು ಅವರ ಅನುಮತಿ ಪಡೆಯದೇ ಕಿತ್ತು ಪೂಜೆಗೆ ಉಪಯೋಗಿಸುವುದು ಸರ್ವಥಾ ನಿಷಿದ್ಧ)!

ಪತ್ರಗಳ ಅರ್ಪಣೆ

ಅರ್ಚನೆಗೆ ಉಪಯೋಗಿಸಬಹುದಾದ ಕೆಲವು ಪತ್ರ(ಎಲೆ)ಗಳೂ ಉಂಟು. ತುಳಸಿಯನ್ನು ವಿಷ್ಣು ಮೂರ್ತಿಗಳಿಗೂ, ಬಿಲ್ವಪತ್ರೆಯನ್ನು ಶಿವನ ಪೂಜೆಗೂ, ಗರಿಕೆಯನ್ನು ಹಯಗ್ರೀವ ಮತ್ತು ಗಣೇಶನ ಪೂಜೆಯಲ್ಲೂ ಬಳಸುವುದನ್ನು ಕಾಣುತ್ತೇವೆ. ತುಳಸಿಯ ದರ್ಶನ-ಸ್ಪರ್ಶನ-ಆಘ್ರಾಣಗಳೇ ಬ್ರಾಹ್ಮೀಸ್ಥಿತಿಗೆ ಕರೆದೊಯ್ಯುವ ಗುಣವನ್ನು ಹೊಂದಿರುವುದನ್ನು ಜ್ಞಾನಿಗಳು ಗುರುತಿಸಿರುವರು. ತುಳಸಿಯ ಅಭಾವದಲ್ಲಿ ಒಣಗಿರುವ ತುಳಸೀದಳವನ್ನೋ ಅಥವಾ ತುಳಸಿಯ ಕಾಷ್ಠವನ್ನಾದರೂ ಬಳಸಬಹುದೆಂಬ ವಿಧಿಯು ಇಲ್ಲಿ ಸ್ಮರಣೀಯ.

navavidha bhakti about Archanam bhakti you should know in kannada

ಬಿಲ್ವಪತ್ರವು ಸ್ಪರ್ಶದಿಂದ ವಿಶೇಷವಾದ ಪರಿಣಾಮವನ್ನು ಉಂಟುಮಾಡುವಂತಹುದು. ಮೂರು ದಳದಿಂದ ಕೂಡಿರುವ ಬಿಲ್ವ(ಏಕಬಿಲ್ವಂ)ವನ್ನೇ ಶಿವನಿಗೆ ಅರ್ಪಿಸಬೇಕೆನ್ನುವ ನಿಯಮವನ್ನು ಗಮನಿಸಬಹುದು. ಈ ಮೂರರ ಸಮುದಾಯವು ತ್ರಿಮೂರ್ತ್ಯಾತ್ಮಕವಾದುದು ಎಂಬ ಶ್ರೀರಂಗ ಮಹಾಗುರುವಿನ ವಾಣಿಯು ಇಲ್ಲಿ ಸ್ಮರಣೀಯ. ಈ ಓಷಧಿಗಳೆಲ್ಲವೂ ಅನೇಕ ರೋಗನಿವಾರಣ ಶಕ್ತಿಯನ್ನು ಹೊಂದಿರುವುವು ಎಂಬುದನ್ನು ಆಯುರ್ವೇದ ಶಾಸ್ತ್ರವು ಘೋಷಿಸುತ್ತದೆ.

ಅರಿಶಿನ-ಕುಂಕುಮ-ಅಕ್ಷತೆ

ಅರ್ಚನೆಗೆ ಪುಷ್ಪ-ಪತ್ರಗಳಲ್ಲದೆ, ಅರಿಶಿನ ಕುಂಕುಮಗಳನ್ನೂ ಬಳಸುವ ರೂಢಿಯಿದೆ. ಇವು ಮಂಗಳದ್ರವ್ಯಗಳು; ಅರ್ಚನೆಗೆ ಬಳಸಲು ಶ್ರೇಷ್ಠವಾದವುಗಳೇ ಆಗಿವೆ. ಆದರೆ ಯಾವ ದೇವತೆಯ ಪೂಜೆಗೆ ಉಪಯೋಗಿ ಸಬಹುದೆನ್ನುವುದೂ ಉಂಟು. ದೇವೀ ಪೂಜೆಯಲ್ಲಿ ಇದನ್ನು ಬಳಸಬಹುದು.

navavidha bhakti about Archanam bhakti you should know in kannada

ಅಕ್ಷತೆಯನ್ನೂ ಅರ್ಚನೆಗೆ ಬಳಸುವುದುಂಟು. ಅಕ್ಷತೆಯನ್ನು ಮಾಡಲು ಪೂರ್ಣವಾದ ಅಕ್ಕಿಕಾಳುಗಳನ್ನೇ ಉಪಯೋಗಿಸಬೇಕು. ಅಕ್ಷತೆಯ ವೈಶಿಷ್ಟ್ಯವೆಂದರೆ, ಅದರಲ್ಲಿ ಬಳಸುವ ಅಕ್ಕಿಯು ಸಕಲದೇವತೆಗಳೂ ವಾಸಮಾಡುವ ಒಂದು ಧಾನ್ಯ. ಅದರ ಜೊತೆಯಲ್ಲಿ ಸೇರಿಸುವ ಮಂಗಳದ್ರವ್ಯವಾದ ಅರಿಶಿನ ಹಾಗೂ ತುಪ್ಪಗಳೂ ಸಹ ವಿಶೇಷ ಪರಿಣಾಮವನ್ನು ಉಂಟುಮಾಡುವ ದ್ರವ್ಯಗಳೇ ಆಗಿವೆ. ಆದ್ದರಿಂದಲೇ ಅಕ್ಷತೆಯನ್ನು ಎಲ್ಲ ಮಂಗಳ ಕಾರ್ಯಗಳಲ್ಲಿಯೂ ಉಪಯೋಗಿಸುತ್ತಾರೆ. ವಿಷ್ಣುವಿನ ಪೂಜೆಯಲ್ಲಿ ಹಳದಿ ಅಕ್ಷತೆಯನ್ನೂ ಶಿವನ ಪೂಜೆಯಲ್ಲಿ ಕೆಂಪು ಅಕ್ಷತೆಯನ್ನೂ ಉಪಯೋಗಿಸುವುದು ವೈಜ್ಞಾನಿಕವಾಗಿದೆ.

ಶ್ಲೋಕ / ಮಂತ್ರ

ಪುಷ್ಪವನ್ನು ಶುದ್ಧಿಮಾಡಿಯೇ ಅರ್ಚನೆಗೆ ತರಬೇಕು. (ಪುಷ್ಪಗಳಿಗೂ ಮದ್ದುಗಳನ್ನು ಹೊಡೆಯುವ ಇಂದಿನ ಪರಿಸ್ಥಿತಿಯಲ್ಲಿ ಇನ್ನೂ ವಿಶೇಷವಾಗಿಯೇ ತೊಳೆಯಬೇಕಾಗುವುದು!) ಪೂಜೆಮಾಡುವವರೂ, ಅದನ್ನು ಶುದ್ಧವಾದ ಮನಸ್ಸಿನಿಂದ ವೀಕ್ಷಿಸಿ ಪ್ರಣವದಿಂದ ಪ್ರೋಕ್ಷಿಸಿ ಪೂಜೆಗೆ ತೆಗೆದುಕೊಳ್ಳಬೇಕು.

ಪುಷ್ಪಗಳನ್ನು, ಶ್ಲೋಕ, ಮಂತ್ರ ಇತ್ಯಾದಿಗಳನ್ನು ಪಠಿಸುತ್ತ ಆಯಾ ದೇವರ ಪಾದಕ್ಕೆ ಸಮರ್ಪಣೆ ಮಾಡುವುದು ರೂಢಿಯಲ್ಲಿದೆ. ಪೂಜೆ ಮಾಡುವಾಗ ಮನಸ್ಸು ಸೋತ್ರ ಅಥವಾ ಮಂತ್ರದಲ್ಲಿ ಲಗ್ನವಾಗಿರಬೇಕು. ಅದು ಭಕ್ತಿಗೆ ಪೋಷಕವಾಗುತ್ತದೆ. ಶತನಾಮಾವಳಿ ಅಥವಾ ಸಹಸ್ರನಾಮಾವಳಿಗಳಲ್ಲಿ ಸಾಮಾನ್ಯವಾಗಿ ಭಗವಂತನ ಗುಣಗಳು, ಅವನ ರೂಪ, ಶೌರ್ಯ, ಪರಾಕ್ರಮ ಮುಂತಾದವು ಇರುವುದರಿಂದ ಅವುಗಳನ್ನು ಪಠಿಸುವಾಗ ಮನಸ್ಸು ಅವುಗಳ ಅರ್ಥವನ್ನು ಭಾವಿಸಿ ಆಸ್ವಾದಿಸಿದರೆ ಅದು ಭಕ್ತಿಯ ವೃದ್ಧಿಗೆ ಪೋಷಕವಾಗುವುದು.

ಹಾಗಲ್ಲದೆ, ಯಾಂತ್ರಿಕ ಅರ್ಚನೆಯಾದರೆ ಹೂವನ್ನು ಒಂದೆಡೆಯಿಂದ ಮತ್ತೊಂದೆಡೆಗೆ ವರ್ಗಾವಣೆ (transfer) ಮಾಡುವ ಕೆಲಸ ಆಗುತ್ತದೆಯೇ ವಿನಾ ಇನ್ಯಾವ ಪ್ರಯೋಜನವೂ ಇರುವುದಿಲ್ಲ.
(ಮುಂದುವರಿಯುವುದು)

– ಲೇಖಕರು ಕಾರ್ಯದರ್ಶಿ,
ಅಷ್ಟಾಂಗಯೋಗ ವಿಜ್ಞಾನಮಂದಿರಂ
, ಬೆಂಗಳೂರು

ಇದನ್ನೂ ಓದಿ: Navavidha Bhakti : ಪಾದಸೇವೆಯಿಂದಲೂ ಭಕ್ತಿಯ ವೃದ್ಧಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
king dasharatha kaikeyi dhavala dharini column
ಅಂಕಣ4 mins ago

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Weight Loss Tips
ಆರೋಗ್ಯ25 mins ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ26 mins ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ55 mins ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ1 hour ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ8 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ8 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ8 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ15 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌