Prerane | ಸಂಸಾರದಲ್ಲಿ ಸಮಸ್ಯೆಯನ್ನು ಪರಿಹಾರಮಾಡಿಕೊಳ್ಳುವುದು ಹೇಗೆ? - Vistara News

ಧಾರ್ಮಿಕ

Prerane | ಸಂಸಾರದಲ್ಲಿ ಸಮಸ್ಯೆಯನ್ನು ಪರಿಹಾರಮಾಡಿಕೊಳ್ಳುವುದು ಹೇಗೆ?

“ಪ್ರೇರಣೆʼʼ ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮ ಚಿಂತಕರು ಇಲ್ಲಿ ಬರೆಯುತ್ತಿದ್ದಾರೆ.

VISTARANEWS.COM


on

spiritual thoughts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀ ಕೈವಲ್ಯಾನಂದ ಸರಸ್ವತೀ
ಒಂದು ಹಳ್ಳಿಯಲ್ಲಿ ಒಬ್ಬ ನಾಸ್ತಿಕ, ಇನ್ನೊಬ್ಬ ಆಸ್ತಿಕ ಇಬ್ಬರೂ ಇರುತ್ತಿದ್ದರಂತೆ. ಇವರಿಬ್ಬರಿಂದ ಹಳ್ಳಿಯಲ್ಲಿದ್ದ ಜನರೆಲ್ಲ ಬೇಸರಪಟ್ಟಿದ್ದರಂತೆ. ಇವರಿಬ್ಬರಿಂದ ಹಳ್ಳಿಯ ಜನಕ್ಕೆ ಬಹಳ ಕಷ್ಟವಾಗುತ್ತಿತ್ತಂತೆ. ದಿನವೆಲ್ಲ ಆಸ್ತಿಕನು ದೇವರಿದ್ದಾನೆ ಎಂದು ಹೇಳುತ್ತಿದ್ದನು. ನಾಸ್ತಿಕನು ಇಡೀ ದಿವಸ ಆಸ್ತಿಕವಿಚಾರವನ್ನು ತಿರಸ್ಕಾರ ಮಾಡುತ್ತಿದ್ದನಂತೆ. ಹಳ್ಳಿಯ ಜನರು ಬಹಳ ಕಷ್ಟ ಪರಿಸ್ಥಿತಿಯಲ್ಲಿ ಸಿಕ್ಕಿಕೊಂಡಿದ್ದರು. ಯಾರನ್ನೂ ಅನುಸರಿಸುವುದು. ಒಬ್ಬನನ್ನು ಅನುಸರಿಸಿದರೆ; ಇನ್ನೊಬ್ಬನಿಗೆ ಕೋಪ.

ಆಗ ಹಳ್ಳಿಯವರೆಲ್ಲ ಸೇರಿ ಒಂದು ತೀರ್ಮಾನಕ್ಕೆ ಬಂದರು. ನಿಮ್ಮಿಬ್ಬರಲ್ಲಿ ನಾವು ಯಾರನ್ನಾದರೂ ಒಬ್ಬರನ್ನು ಅನುಸರಿಸಬಹುದು. ಆದ್ದರಿಂದ ನೀವಿಬ್ಬರೂ ಗ್ರಾಮಸ್ಥರ ಎದುರಿನಲ್ಲಿ ವಾಗ್ವಾದ ಮಾಡಿ. ಇದರಲ್ಲಿ ಯಾರು ಗೆಲ್ಲುತ್ತೀರೋ ಅವರನ್ನು ಅನುಸರಿಸುತ್ತೇವೆ. ನೀವಿಬ್ಬರೂ ಸುಮ್ಮಸುಮ್ಮನೆ ನಮ್ಮಗಳ ತಲೆ ತಿನ್ನಬೇಡಿ, ಹಾಳು
ಮಾಡಬೇಡಿ’ ಎಂದರು. ಪೂರ್ಣಿಮೆಯ ದಿವಸ ರಾತ್ರಿ ಈ ಸಭೆಯನ್ನು ವ್ಯವಸ್ಥೆ ಮಾಡಿದರು.

Prerane

ಹಳ್ಳಿಯಲ್ಲಿದ್ದವರೆಲ್ಲ ಒಂದು ಕಡೆ ಸೇರಿದ್ದಾರೆ. ಆಸ್ತಿಕನು ತನ್ನ ಆಸ್ತಿಕ ಸಿದ್ಧಾಂತಗಳನ್ನು ಹೇಳಿ, ಅವುಗಳ ಆಧಾರದ ಮೇಲೆ ನಾಸ್ತಿಕ ಸಿದ್ಧಾಂತವನ್ನು ತಿರಸ್ಕರಿಸಿದನು. ನಾಸ್ತಿಕನು ತನ್ನ ಸಿದ್ಧಾಂತಗಳನ್ನು ಹೇಳಿ, ಯಾವ ರೀತಿ ಆಸ್ತಿಕತೆ ಸರಿಯಲ್ಲ ಎಂಬುದನ್ನು ವಿವರಿಸುತ್ತಾ ತೆಗೆದುಹಾಕಿದನು. ಪರಿಣಾಮ ಏನು ಫಲಿಸಿತೆಂದರೆ, ಸೂರ್ಯೋದಯದ
ಹೊತ್ತಿಗೆ ಆಸ್ತಿಕನು ನಾಸ್ತಿಕನಾದನು, ನಾಸ್ತಿಕನು ಆಸ್ತಿಕನಾದನು. ಈ ರೀತಿ ಪುನಃ ಹಳ್ಳಿಯಲ್ಲಿ ಒಬ್ಬ ನಾಸ್ತಿಕ, ಆಸ್ತಿಕ ಉಳಿದರು. ಹಳ್ಳಿಯ ಜನರ ಸಮಸ್ಯೆ ಪುನಃ ಅದೇ ರೀತಿ ಉಳಿಯಿತು.

ಸಂಸಾರದಲ್ಲಿ ಸಮಸ್ಯೆಯ ಪರಿಹಾರಕ್ಕಾಗಿ ನಾವು ಮಾಡುವ ಪ್ರಯತ್ನವೂ ಇಂತಹ ಫಲವನ್ನೇ ತಂದುಕೊಡುತ್ತದೆ. ಪುನಃ ಸಮಸ್ಯೆ, ದುಃಖ ಮುಂದುವರಿಯುತ್ತದೆ. ಏಕೆಂದರೆ ಅಹಂಕಾರ, ಮಮಕಾರವೇ ಸಮಸ್ಯೆ.

ಸಾಂಸಾರಿಕ ಸುಖ

ಹಿಂದಿನ ಕಾಲದಲ್ಲಿ ಶವವನ್ನು ಭುಜಗಳ ಮೇಲೆ ಹೊತ್ತು ಸ್ಮಶಾನಕ್ಕೆ ಹೋಗುತ್ತಿದ್ದರು. ಅದೊಂದು ಪುಣ್ಯ ಕಾರ್ಯವೆಂಬ ಅಭಿಪ್ರಾಯವೂ ಇತ್ತು. ಏಕೆಂದರೆ ಹೆಣ ಹೊರುವಾಗ, ಹೊರುವವರಿಗೆ ತಮ್ಮ ಸಾವಿನ ಸ್ಮರಣೆ ಬಂದು, ಎಚ್ಚೆತ್ತುಕೊಂಡು
ಸಾವಿಲ್ಲದೆ ತಮ್ಮ ಸ್ವರೂಪವನ್ನು ತಿಳಿಯುವ ಆಕಾಂಕ್ಷೆ ಬರುವ ಅವಕಾಶವದು. ಆದರೆ ಈಗ ವಾಹನದಲ್ಲಿ ಸಾಗಿಸುತ್ತಾರೆ. ಇರಲಿ!

ಶವವನ್ನು ಹೊರುವಾಗ, ಸ್ವಲ್ಪ ಸ್ವಲ್ಪ ದೂರದಲ್ಲಿ ಭುಜಕ್ಕೆ ನೋವಾದಾಗ ಮತ್ತೊಂದು ಭುಜಕ್ಕೆ ಬದಲಾಯಿಸಿಕೊಳ್ಳುತ್ತಿದ್ದರು. ಆಗ ಸ್ವಲ್ಪ ಸುಖವೆನಿಸುತ್ತಿತ್ತು. ಆದರೆ ತಾನು ಹೊತ್ತಿರುವ ಭಾರ ಕಮ್ಮಿಯಾಗಿದೆಯಾ? ಅಂದರೆ ಇಲ್ಲ. ಭಾರ ಹಾಗೆಯೇ ಇದೆ. “ಭಾರ ಇನ್ನೊಂದು ಭುಜಕ್ಕೆ ಹೋಗಿದೆ. ನನಗೆ ಸುಖವಾಗಿದೆ’ ಎಂದು ತಾನೇ ಭಾರವನ್ನು ಹೊರುತ್ತಿದ್ದಾನೆ. ಯಾವ ಭಾರವೂ ಕಮ್ಮಿಯಾಗಲಿಲ್ಲ. ಭಾರ ತನ್ನನ್ನು ಬಿಟ್ಟು ಹೋಗಲಿಲ್ಲ. ಆದರೂ ಈಗೇನೋ ಸುಖವಾಗಿದೆ ಎಂದು ಭ್ರಮಿಸುತ್ತಾನೆ.

ಸಂಸಾರದಲ್ಲಿ ನಾವು ಸುಖಕ್ಕಾಗಿ ಮಾಡುವ ಪ್ರಯತ್ನ ಪಡೆಯುವ ಸುಖವೆಲ್ಲವೂ ಇದೇ ರೀತಿಯೇ ಆಗಿದೆ.
ಸಾಂಸಾರಿಕ ಸುಖ ಕೇವಲ ಭ್ರಮೆ. ಕೇವಲ ಹೊರೆಯನ್ನೇ ಸುಖವೆಂದುಕೊಳ್ಳುವಿಕೆ.

ಲೇಖಕರು ವೇದಾಂತೋಪದೇಶ ಮಾಡುವ ಪರಿವ್ರಾಜಕರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದ್ದು ಕೂಡ ಕಂಡುಬಂತು.

VISTARANEWS.COM


on

Siddaramaiah
Koo

ಮಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಭರಾಟೆ ಮುಗಿದು, ತುಸು ನಿರಾಳರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಮೇ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ತೆರಳಿ, ದೇವರ ಆಶೀರ್ವಾದ ಪಡೆದರು. ಅಲ್ಲದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾದರು. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ನೀಡುವ ತೀರ್ಮಾನದ ಕುರಿತು ಸಿದ್ದರಾಮಯ್ಯ ಅವರಿಗೆ ಹಲವು ಹೆಣ್ಣುಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕುರಿತು ಸಿದ್ದರಾಮಯ್ಯ ಅವರೇ ಪೋಸ್ಟ್‌ ಮಾಡಿದ್ದಾರೆ.

ಧರ್ಮಸ್ಥಳ ಭೇಟಿ, ಮಹಿಳೆಯರ ಮೆಚ್ಚುಗೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದಾರೆ. “ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

Continue Reading

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

Agee hunnime Thousands of devotees have darshan of Shri Renukamba Devi of Chandragutti
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading

ಯಾದಗಿರಿ

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

Yadgiri News: ಯಾದಗಿರಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

VISTARANEWS.COM


on

Shivasharane Hemaraddi Mallamma Jayanti celebration in Srisailam
Koo

ಯಾದಗಿರಿ: ಇಲ್ಲಿಗೆ ಸಮೀಪದ ಆಂಧ್ರಪ್ರದೇಶದ ಶ್ರೀಶೈಲಂನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಅವರ 602ನೇ ಜಯಂತಿಯನ್ನು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ (Yadgiri News) ಆಚರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಶ್ರೀಶೈಲಂ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮಂಡಳಿಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಪೆದ್ದುರಾಜು ಮಾತನಾಡಿ, 14ನೇ ಶತಮಾನದಲ್ಲಿ ಮಲ್ಲಮ್ಮ ತನ್ನ ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಸಾಧನೆ ಮೂಲಕ ಪರಶಿವ ಮಲ್ಲಿಕಾರ್ಜುನನ ಕೃಪೆಗೆ ಪಾತ್ರಳಾಗಿ ಮನುಕುಲಕ್ಕೆ ಮಾನವೀಯ ಸಂದೇಶಗಳನ್ನು ನೀಡಿದ್ದಾಳೆ ಎಂದು ತಿಳಿಸಿದರು.

ಇದನ್ನೂ ಓದಿ: Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಕರ್ಮಭೂಮಿಯಾದ ಶ್ರೀಶೈಲಂನಲ್ಲಿ ಕರ್ನಾಟಕದ ವೀರಶೈವ ಲಿಂಗಾಯತ ರಡ್ಡಿ ಸಮಾಜದವರು ಭವ್ಯ ಮಲ್ಲಮ್ಮ ದೇವಸ್ಥಾನ ನಿರ್ಮಾಣ ಮಾಡಿದ್ದಲ್ಲದೇ ಕ್ಷೇತ್ರದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿಕೊಂಡು ಬಂದಿದ್ದಾರೆ, ಅವರ ಶ್ರಮದಿಂದ ಆಂದ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಭಕ್ತರ ಮದ್ಯೆ ಸಾಮರಸ್ಯ ವಾತಾವರಣ ಮೂಡಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನಕ್ಕೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಟ್ರಸ್ಟ್ ವತಿಯಿಂದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಮುಖ್ಯ ಅರ್ಚಕ ಗುರುಪಾದಯ್ಯಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ಹೇಮರಡ್ಡಿ ಮಲ್ಲಮ್ಮ ಭಕ್ತರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಅವರ ಸಾಧನೆಯನ್ನು ಎಲ್ಲರಿಗೂ ತಿಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವಸ್ಥಾನದಲ್ಲಿ ಮಲ್ಲಮ್ಮನ ಮೂರ್ತಿಗೆ ಪಂಚಾಮೃತ ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವ, ತೊಟ್ಟಿಲ ಉತ್ಸವ ಕಾರ್ಯಕ್ರಮ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಸಮಾರಂಭದಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದಾಸರು, ಶಂಕ್ರಯ್ಯಸ್ವಾಮಿ, ಅರ್ಚಕರಾದ ಓಂಕಾರಯ್ಯಸ್ವಾಮಿ, ಮಲ್ಲಮ್ಮ ತಾಳಿಕೋಟಿ, ವೆಂಕಟರಡ್ಡಿ ಮಾಲಿ ಪಾಟೀಲ್ ಹತ್ತಿಕುಣಿ, ಗದಗ ಜಿಲ್ಲೆಯ ನ್ಯಾಯವಾದಿ ವಿರೇಂದ್ರ ಶಿರೋಳ, ಶಿವಪ್ಪಗೌಡ, ಸಿದ್ದಣ್ಣ ಸೇರಿದಂತೆ ಕನ್ನಡಿಗ ಭಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಧಾರ್ಮಿಕ

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

ಶನಿಯ ವಕ್ರದೃಷ್ಟಿಯ ಪರಿಣಾಮಗಳ ಬಗ್ಗೆ ಹೆಚ್ಚಿನವರು ಕೇಳಿರುತ್ತಾರೆ, ಇನ್ನು ಕೆಲವರು ಅನುಭವಿಸಿರುತ್ತಾರೆ. ಇದರಿಂದ ಪಾರಾಗಲು ಹಲವಾರು ಪರಿಹಾರ ಮಾರ್ಗಗಳನ್ನು ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ. ಈ ದಿನ ಕೆಲವು ಅನುಷ್ಠಾನಗಳನ್ನು ಮಾಡುವುದರಿಂದ ಶನಿಯ ವಕ್ರ ದೃಷ್ಟಿಯಿಂದ ಪಾರಾಗಲು (Remedies For SadeSati) ಸಾಧ್ಯವಿದೆ .

VISTARANEWS.COM


on

By

Remedies For SadeSati
Koo

ಜೀವನದಲ್ಲಿ ಏನಾದರೂ ಕೆಟ್ಟದಾದರೆ ಶನಿಯ (shani) ವಕ್ರ ದೃಷ್ಟಿ ಅಥವಾ ಸಾಡೇ ಸಾಥ್ ಪರಿಣಾಮ (Remedies For SadeSati) ಎನ್ನುವ ಅನುಮಾನ ಕೆಲವರನ್ನು ಕಾಡುತ್ತದೆ. ನಾವು ತಿಳಿದೋ ತಿಳಿಯದೆಯೋ ಮಾಡುವ ಕರ್ಮಕ್ಕೆ ತಕ್ಕ ಪ್ರತಿಫಲ ಕೊಡುವ ಶನಿ ದೇವನ ಬಗ್ಗೆ ಭಕ್ತಿಗಿಂತ ಭಯ ಪಡುವವರೇ ಅಧಿಕ. ಆದರೆ ಶನಿ ದೇವನೂ ಶ್ರದ್ಧಾ ಭಕ್ತಿಗೆ ಮೆಚ್ಚುತ್ತಾನೆ ಹಾಗೂ ಭಕ್ತರ ಅಭೀಷ್ಟೆಗಳನ್ನು ಈಡೇರಿಸುತ್ತಾನೆ.

ಶನಿಯ ವಕ್ರ ದೃಷ್ಟಿ ನಮ್ಮ ಮೇಲೆ ಬಿದ್ದರೆ ಅದರಿಂದ ಪಾರಾಗಲು ಕೆಲವೊಂದು ಪರಿಹಾರ ಕ್ರಮಗಳನ್ನು ಪುರಾಣಗಳಲ್ಲಿ ಹೇಳಲಾಗಿದೆ. ಜೂನ್ 6ರಂದು ಶನಿ ಜಯಂತಿ (Shani Jayanti). ಈ ದಿನ ಇವುಗಳನ್ನು ಅನುಷ್ಠಾನಗೊಳಿಸಿದರೆ ಕಷ್ಟಗಳಿಂದ ಪಾರಾಗಬಹುದು.

1. ಬೆನ್ನು ನೋವು ಅಥವಾ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಶನಿ ಜಯಂತಿಯ ದಿನದಂದು ಕಪ್ಪು ಉಂಡೆಯನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ದೇವಸ್ಥಾನದ ಮೂಲೆಯಲ್ಲಿ ಇರಿಸಿ. ಶನಿದೇವನ ಮಂತ್ರವಾದ “ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ” ಎಂಬುದಾಗಿ 21 ಬಾರಿ ಜಪಿಸಿ.

2. ಮಕ್ಕಲಾಗದೇ ಇದ್ದರೆ ದಂಪತಿ ಶನಿ ಜಯಂತಿಯ ದಿನದಂದು ಮನೆಯ ಚಾವಣಿ, ಬಾಲ್ಕನಿ ಅಥವಾ ಮನೆಯ ಹೊರಗೆ ಪಕ್ಷಿಗಳಿಗೆ ಆಹಾರ ಮತ್ತು ನೀರನ್ನು ಇರಿಸಿ. ಇಲ್ಲಿ ನೆನಪಿಡಬೇಕಾದ ಅಂಶವೆಂದರೆ ಆಹಾರ ಮತ್ತು ನೀರು ಪಕ್ಷಿಗಳಿಗೆ ಇಡಬೇಕೇ ಹೊರತು ಪಾರಿವಾಳಗಳಿಗೆ ಅಲ್ಲ. ಇದರೊಂದಿಗೆ 51 ಬಾರಿ ಓಂ ಶ್ರೀಂ ಹ್ರೀಂ ಶಾಂ ಶನೈಶ್ಚರಾಯ ನಮಃ ಎಂದು ಜಪಿಸಿ.

3. ಮನೆಯ ಸಂತೋಷ ಮತ್ತು ಅದೃಷ್ಟವನ್ನು ಹೆಚ್ಚಿಸಲು ಬಯಸಿದರೆ ಶನಿ ಜಯಂತಿಯ ದಿನದಂದು ದೇವಸ್ಥಾನದಲ್ಲಿ ಕಪ್ಪು ಬಟ್ಟೆಯನ್ನು ಅರ್ಪಿಸಿ. 11 ಬಾರಿ ಶಂ ಹ್ರೀಂ ಶಾಂ ಶನೈಶ್ಚರಾಯ ನಮಃ.ಮಂತ್ರವನ್ನು ಜಪಿಸಿ.

4. ಕುಟುಂಬದ ಸದಸ್ಯರೊಂದಿಗೆ ಸಮಸ್ಯೆಗಳಿದ್ದರೆ ಶನಿ ಜಯಂತಿಯ ದಿನದಂದು ಶನಿ ದೇವರನ್ನು ಧ್ಯಾನಿಸುವಾಗ ದೇವಸ್ಥಾನದಲ್ಲಿ ಒಂದು ಹಿಡಿ ಇಡೀ ಉಂಡೆಯನ್ನು ಅರ್ಪಿಸಿ ಮತ್ತು 21 ಬಾರಿ ಜಪಿಸಿ. ಓಂ ಶ್ರೀ ಶಾಂ ಶ್ರೀ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

5. ಜೀವನದಲ್ಲಿ ಸತತವಾಗಿ ಅಸಂಖ್ಯಾತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಶನಿ ಜಯಂತಿಯ ದಿನದಂದು ಕೈಯ ಉದ್ದದ 19 ಪಟ್ಟು ಕಪ್ಪು ದಾರವನ್ನು ತೆಗೆದುಕೊಂಡು ಅದನ್ನು ಮಾಲೆಯ ರೂಪದಲ್ಲಿ ಮಾಡಿ ಕುತ್ತಿಗೆಗೆ ಧರಿಸಿ. 108 ಬಾರಿ ಓಂ ಶ್ರೀಂ ಶ್ರೀಂ ಶ್ರೀಂ ಶನೈಶ್ಚರಾಯ ನಮಃ ಮಂತ್ರವನ್ನು ಜಪಿಸಿ.

6. ಯಾವುದೇ ಕೆಲಸ ಮಾಡಲು ಮನಸ್ಸಿಲ್ಲದಿದ್ದರೆ ಅಥವಾ ಕೆಲಸದ ಸಮಯದಲ್ಲಿ ಸೋಮಾರಿತನವನ್ನು ಅನುಭವಿಸಿದರೆ ಶನಿ ಜಯಂತಿಯ ದಿನ ಶನಿದೇವನ ಈ ಹತ್ತು ನಾಮಗಳಾದ ಕೋನಸ್ತ ಪಿಂಗಲೋ ಬಭ್ರುಃ ಕೃಷ್ಣ ರೌದ್ರೋಂತಕೋ ಯಮ: ಸೌರಿಃ ಶನೈಶ್ಚರೋ ಮಂದಃ ಪಿಪ್ಪಲಾದೇನ್ ಎಂಬುದಾಗಿ 108 ಬಾರಿ ಜಪಿಸಬೇಕು.

7. ಜೀವನದಿಂದ ಶತ್ರುಗಳನ್ನು ದೂರ ಮಾಡಲು ಶನಿ ಜಯಂತಿಯ ದಿನದಂದು ಸ್ನಾನದ ಅನಂತರ ಶನಿದೇವನ ಮಂತ್ರವಾದ ಓಂ ಐಂ ಶ್ರೀಂ ಹ್ರೀಂ ಶನೈಶ್ಚರಾಯ ನಮಃ ಎಂಬುದಾಗಿ 11 ಬಾರಿ ಜಪಿಸಬೇಕು.

8. ಮನದಲ್ಲಿ ಸದಾ ಸಕಾರಾತ್ಮಕತೆ ಇರಬೇಕು ಮತ್ತು ಮನಸ್ಸಿನಲ್ಲಿ ಹೊಸ ಆಲೋಚನೆಗಳು ಬರುತ್ತಿರಬೇಕೆಂದು ಬಯಸಿದರೆ ಶನಿ ಜಯಂತಿಯ ದಿನದಂದು ಮನೆಯ ಮುಖ್ಯದ್ವಾರದಲ್ಲಿ ಸಾಸಿವೆ ಎಣ್ಣೆಯನ್ನು ಹಚ್ಚಿ. 21 ಬಾರಿ ಓಂ ಶಂ ಶನ್ಯೈ ನಮಃ ಮಂತ್ರವನ್ನು ಜಪಿಸಿ.

9. ಶನಿ ಜಯಂತಿಯ ದಿನ ಸಂಜೆ ಶನಿದೇವನ ಮಂತ್ರವಾದ ಶಂ ಓಂ ಶಂ ನಮಃ ಅನ್ನು ಜಪಿಸಬೇಕು. ಇದರಿಂದ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ಪಡೆಯುತ್ತೀರಿ ಮತ್ತು ಜೀವನದಲ್ಲಿ ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ.

10. ಕಬ್ಬಿಣದಿಂದ ಮಾಡಿದ ವಸ್ತುವನ್ನು ಯಾವಾಗಲೂ ನಿಮ್ಮ ಬಳಿ ಇಟ್ಟುಕೊಳ್ಳಿ. ಜೊತೆಗೆ 11 ಬಾರಿ ಓಂ ಐಂ ಹ್ರೀಂ ಶ್ರೀಂ ಶನೈಶ್ಚರಾಯ ನಮಃ ಎಂದು ಜಪಿಸಿದರೆ ಖಿನ್ನತೆಯಿಂದ ಶೀಘ್ರದಲ್ಲೇ ಪರಿಹಾರವನ್ನು ಪಡೆಯುತ್ತೀರಿ ಮತ್ತು ಯಾವುದೇ ವಿಷಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತೀರಿ.

ಇದನ್ನೂ ಓದಿ: Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

21. ಸಣ್ಣಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಸದಾ ಜಗಳ ನಡೆಯುತ್ತಿದ್ದರೆ ಶನಿ ಜಯಂತಿಯ ದಿನ ಶುಚಿಯಾಗಿ ಶುಭ್ರವಾದ ಬಟ್ಟೆಗಳನ್ನು ಧರಿಸಿ ಶನಿದೇವನನ್ನು ಸ್ಮರಿಸಿ ನಮಸ್ಕರಿಸಿ. ಅಲ್ಲದೆ ಸಾಸಿವೆ ಎಣ್ಣೆ, ಎಳ್ಳುವನ್ನು ಶನಿ ದೇವರಿಗೆ ಅರ್ಪಿಸಿ ಮತ್ತು ಶನಿದೇವನ ಶಂ ಶನೈಶ್ಚರಾಯ ನಮಃ ಮಂತ್ರವನ್ನು 21 ಬಾರಿ ಜಪಿಸಿ.

22. ಶನಿ ಜಯಂತಿಯ ದಿನದಂದು ಮನೆಯಲ್ಲಿ ಶಿವನ ಚಿತ್ರದ ಮುಂದೆ ಆಸನವನ್ನು ಇಟ್ಟು ಶಿವನ ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ. ಇದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಅಖಂಡವಾಗಿ ಉಳಿಯುತ್ತದೆ.

Continue Reading
Advertisement
Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್2 mins ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ6 mins ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ30 mins ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ34 mins ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ39 mins ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Mother Sentiment
ಅಂಕಣ1 hour ago

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

subramanian swamy
ದೇಶ1 hour ago

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Mint Leaf Water
ಆರೋಗ್ಯ2 hours ago

Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

Karnataka weather Forecast
ಮಳೆ3 hours ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ3 hours ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌