prerane-morning spiritual thoughts in kannada about god and life.Prerane : ಕಿವುಡ, ಕುರುಡ ಮತ್ತು ಮೂಕ; ಎಲ್ಲರೂ ದೃತರಾಷ್ಟ್ರರೇ! - Vistara News

ಧಾರ್ಮಿಕ

Prerane : ಕಿವುಡ, ಕುರುಡ ಮತ್ತು ಮೂಕ; ಎಲ್ಲರೂ ದೃತರಾಷ್ಟ್ರರೇ!

ಜೀವನವೆಂಬುದು ಚಲನೆ; ಇದು ನಿಜ. ಆದರೆ ಬಾಹ್ಯ ಪ್ರಯಾಣವಲ್ಲ, ಬಾಹ್ಯದಲ್ಲಿನ ಬದಲಾವಣೆಯಲ್ಲ. ಜೀವನವು ಚಲನೆ-ಒಂದು ಸ್ಥಿತಿಯಿಂದ-ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಆಳವಾದ ಅಂತರಂಗ ಚಲನೆ ಎನ್ನುತ್ತಾರೆ ಸ್ವಾಮಿ ಶ್ರೀ ಕೈವಲ್ಯಾನಂದ ಸರಸ್ವತೀ. ಅವರ ಲೇಖನ ಇಂದಿನ ಪ್ರೇರಣೆ (Prerane) ಅಂಕಣದಲ್ಲಿ.

VISTARANEWS.COM


on

prerane-morning spiritual thoughts in kannada about god and life.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀ ಕೈವಲ್ಯಾನಂದ ಸರಸ್ವತೀ
ಜೀಸಸ್ ತನ್ನ ಶಿಷ್ಯರಿಗೆ ಹೇಳುತ್ತಿದ್ದರಂತೆ. ಒಂದು ಸಲವಲ್ಲ ಹಲವಾರು ಭಾರಿ ಹೇಳುತ್ತಿದ್ದರಂತೆ. “ನಿಮಗೆ ಕಣ್ಣುಗಳಿದ್ದರೆ ನೋಡಿ! ಕಿವಿಗಳಿದ್ದರೆ-ಕೇಳಿ!” – ಎಂದು. ಎಲ್ಲರಿಗೂ ಇರುವಂತೆ ಶಿಷ್ಯರಿಗೂ ಕಣ್ಣು ಕಿವಿಗಳಿದ್ದವು. ಅಂದರೆ ಜೀಸಸ್ ಅವರ
ಉದ್ದೇಶ್ಯ, ಅಭಿಪ್ರಾಯ ಮತ್ತೇನೋ ಇರಬೇಕು- ಈ ಕಿವಿಗಳಲ್ಲ, ಈ ಕಣ್ಣುಗಳಲ್ಲ.
ಪ್ರಪಂಚವನ್ನು ನೋಡುವ ಭಿನ್ನ ರೀತಿಯೊಂದಿಗೆ, ಹಾಗೂ ಭಿನ್ನ ರೀತಿಯ
ಕೇಳಿಸಿಕೊಳ್ಳುವಿಕೆ, ಭಿನ್ನ ರೀತಿಯಾದ ಇರುವಿಕೆ (ಬದುಕು) ಒಂದಿದೆ.

ಯಾವಾಗ ಆ ಭಿನ್ನ ರೀತಿಯಿಂದ ನೋಡುವ ಒಂದು ಗುಣ ನಿಮ್ಮಲಿದೆಯೋ ಆಗ ದೇವರ ದರ್ಶನವಾಯಿತು; ಯಾವಾಗ ಆ ಭಿನ್ನ ರೀತಿಯಿಂದ ಕೇಳುವ ಒಂದು ಕಲೆ ಇದೆಯೋ ಆಗ (ಪರಮಾತ್ಮ ಹೇಳುವುದನ್ನೇ) ಪರಮಾತ್ಮನನ್ನು ಶ್ರವಣ ಮಾಡಿದಂತೆ; ಹಾಗೂ ಯಾವಾಗ ಭಿನ್ನ ರೀತಿಯಿಂದ (ಬದುಕನ್ನು ಸಾಗಿಸುವುದಿದೆಯೋ) ಇರುವುದಿದೆಯೋ,
ಆಗ ನೀವೆ ದೇವರಾಗಿರುತ್ತೀರ. ಈಗಿರುವ ರೀತಿಯಲ್ಲಿ ನೀವು ಕಿವುಡರು, ಮೂಕರು, ಕುರುಡರು-ಹೆಚ್ಚುಕಮ್ಮಿ ಸತ್ತಂತೆ. ದೇವರಿಗೆ ಕಿವುಡ, ದೇವರಿಗೆ ಮೂಕ, ದೇವರಿಗೆ ಕುರುಡ, ದೇವರಿಗೆ ಸತ್ತಂತೆ. ನೀವು ಸತ್ತಂತಿರುವುದರಿಂದ ದೇವರು ಸತ್ತಂತೆ.

ನೀವು ಹೇರಳವಾಗಿ, ಪೂರ್ಣರಾಗಿ ಜೀವಿಸುವುದಾದರೆ; ಯಾವಾಗ ನಿಮ್ಮ ಜೀವನ ತುಂಬಿ ಹರಿಯುತ್ತದೋ, ಯಾವಾಗ ಪ್ರವಾಹವಾಗುತ್ತದೋ-ಆಗ ನೀವು ದೇವರನ್ನು ತಿಳಿಯಲು ಸಾಧ್ಯ. ಅತ್ಯಾನಂದದಿಂದ, ಜೀವನ ಶಕ್ತಿಯಿಂದ ತುಂಬಿ ಹರಿಯುವ ಬದುಕಿನ ಕ್ಷಣದಲ್ಲೇ ದೇವರು ಏನೆಂಬುದನ್ನು ತಿಳಿಯುವಿರಿ, ಏಕೆಂದರೆ ದೇವರು ಅತ್ಯಂತ ಸುಖ ಭೋಗದಿಂದ (LUXURIOUS) ತುಂಬಿ ಹರಿಯುವ ಅಸಾಧಾರಣ ವಸ್ತು.

ಈ ಪ್ರಪಂಚದಲ್ಲಿ (ನಮ್ಮ ಜೀವನದಲ್ಲಿ) ದೇವರು ಅನಿವರ‍್ಯತೆಯಲ್ಲ, ಅವಶ್ಯಕತೆಯಲ್ಲ. ದೇವ ಭಾವನೆ ಇಲ್ಲದೆ, ನಮ್ಮ ಜೀವನ ನಡೆಯಬಹುದು-ಆದರೆ ಅದು ಶುದ್ಧ ನಿಷ್ಪ್ರಯೋಜಕ. ಅವನಿಲ್ಲವೆಂದು ನೀವಿರಬಹುದು, ಆದರೆ ಅದು ಕೇವಲ ತರಕಾರಿ ಇದ್ದಂತೆ. ಅವನಿಲ್ಲವೆಂದರೆ ನಿಮ್ಮ ಜೀವನ ಆಹಾರಕ್ಕಾಗಿ ಬೆಳೆದ ಸಸ್ಯದಂತೆ. ಅವನಿಲ್ಲ ಎಂದು ನೀವು ಜೀವಿಸಬಹುದು. ಆದರೆ ಅದು ನಿಜವಾಗಿ ಬದುಕಿರುವಂತೆ ಆಗಲಿಲ್ಲ.

prerane morning spiritual thoughts in kannada

ದೇವರು ಅನಿವರ‍್ಯವಲ್ಲ-ನೀವು ಇರಬಹುದು. ಆದರೆ ನೀವು ಇರುವುದಕ್ಕೆ ಯಾವ ಅರ್ಥವೂ ಇರುವುದಿಲ್ಲ. ಅಂತಹ ಬದುಕಿನಲ್ಲಿ ಯಾವ ಕಾವ್ಯವಾಗಲಿ, ಸಂಗೀತವಾಗಲಿ, ನೃತ್ಯವಾಗಲೀ ಇರುವುದಿಲ್ಲ. ದೇವರಿಲ್ಲದ ಬಾಳು ಒಂದು ಧಾರ್ಮಿಕ ಸತ್ಯವಾಗುವುದಿಲ್ಲ. ಅದು ಒಂದು ಲೆಕ್ಕದಂತೆ, ವ್ಯಾಪಾರದಂತೆ, ಆದರೆ ಅದು ಒಂದು ಪ್ರೇಮಪೂರಿತ ವಿಷಯ, ಪ್ರೇಮ ಪೂರಿತ ಜೀವನವಾಗಲಾರದು. ದೇವರಿಲ್ಲದಿರೆ ಸೌಂದರ್ಯವಾದದ್ದೆಲ್ಲವೂ ಮಾಯವಾಗುವುದು.

ಏಕೆಂದರೆ ಸೌಂದರ್ಯವೆಂಬುದು ತುಂಬಿ ಹರಿಯುವಂತೆ ಬರುತ್ತದೆ-ಅದು ಒಂದು ಸುಖಭೋಗ. ದೇವರಿಲ್ಲದೆ ಒಬ್ಬನು ಜೀವಿಸಬಹುದು. ಆದರೆ ವ್ಯರ್ಥ. ಇಲ್ಲದಿದ್ದರೆ ಒಂದು ರೀತಿ ಚೆನ್ನಾಗಿರುತ್ತಿತ್ತೇನೋ, ಏಕೆಂದರೆ ದೇವರಿಲ್ಲದ ಜೀವನ ಸತತವಾದ ಆಶಾಭಂಗ. ದೇವರಿಲ್ಲದ ಜೀವನದಲ್ಲಿ ಏನೋ ಒಂದು ಕಳೆದುಕೊಂಡಂತೆ ಇರುತ್ತದೆ. ಹೃದಯದಲ್ಲಿ ಒಂದು ರೀತಿಯ ಶೂನ್ಯತೆ. ಜೀವಂತ ಶಕ್ತಿಯಾಗಿರುವುದಕ್ಕಿಂತ ಭಿನ್ನವಾಗಿ ಹುಣ್ಣಿನಂತಿರುತ್ತೀರ. ದೇವರಿಲ್ಲದ ಜೀವನದಲ್ಲಿ ನೋವು ಕಷ್ಟಗಳೇ ಇರುತ್ತವೆ. ಆನಂದೋನ್ಮಾದ ಇರುವುದಿಲ್ಲ.

ಆದರೆ ಒಂದು ಅರ್ಥವನ್ನು-ಆನಂದೋನ್ಮಾದತೆಯನ್ನು ಹೇಗೆ ಪಡೆಯಬಹುದು. ಒಂದು ವಿಭಿನ್ನ ತೆರನಾದ ನೋಟ-ದೃಷ್ಠಿ ಬೇಕು. ಈಗ ನೀವು ಕುರುಡರು. ನೀವು ಭೌತಿಕ ವಿಷಯಗಳನ್ನು ನೋಡಬಹುದು. ಆದರೆ ಅದು ಅನಿವರ‍್ಯತೆ. ನಿಮ್ಮ ಕಣ್ಣುಗಳು ಮೇಲ್ಭಾಗವನ್ನು ಮಾತ್ರ ನೋಡಬಹುದು. ಆದರೆ ಕೇಂದ್ರ-ತಿರುಳು ತಪ್ಪಿಹೋಗುತ್ತದೆ. ಆದಕಾರಣ ಪ್ರಸ್ತುತ ನಾವುಗಳು ಕುರುಡರು. ಯಾವಾಗ ಕೇಂದ್ರವನ್ನು ನೋಡಿಲ್ಲವೋ, ಇನ್ನು ಆತನ ಬಗ್ಗೆ-ದೇವರ ಬಗ್ಗೆ ಹೇಳುವುದೇನಿದೆ. ಆತನನ್ನು ಕುರಿತು ಆಲಿಸಿ ಶ್ರವಣಮಾಡಲಿಲ್ಲವೆಂದ ಮೇಲೆ ತಿಳಿಸಿಕೊಡುವುದಾದರೂ ಏನಿದೆ ಹೇಳಲು ಏನಿದೆ!

ಆದಕಾರಣ ಕುರಡರು ಮಾತ್ರವಲ್ಲ ಮೂರ್ಖರೂ ಅಹುದು. ಜ್ಞಾನಿಯಾದವನು ಮಾತನಾಡುತ್ತಾನೆಂದರೆ ಅವನನ್ನು ಯಾವುದೋ ಒಂದು ಸ್ವಾಧೀನ ಪಡಿಸಿಕೊಂಡಿದೆ. ಅವನಿಗಿಂತಲೂ ಉನ್ನತವಾದದ್ದು ಯಾವುದೋ ಒಂದು ಅವನ ಮುಖಾಂತರ ಮಾತನಾಡುತ್ತಿದೆ. ಭಗವಾನ್ ಬುದ್ಧ ಮಾತನಾಡುತ್ತಿದ್ದಾರೆಂದರೇ, ರಾಜವಂಶದಲ್ಲಿ ಜನ್ಮ ಪಡೆದ ಗೌತಮ ಸಿದ್ಧಾರ್ಥನಲ್ಲ. ನಾವು ನೋಡಬಹುದಾದ ಶರೀರ, ಸ್ಪರ್ಶ ಮಾಡಬಹುದಾದ ಶರೀರ-ಅಲ್ಲ. ನಾವು ಗ್ರಹಿಸಬಹುದಾದ ಮನಸ್ಸು ಅಲ್ಲ. ಇವೆಲ್ಲಕ್ಕೂ ಹೊರಚ್ಚಾಗಿರುವುದು ಯಾವುದೋ ಒಂದು ಪ್ರವೇಶ ಮಾಡಿದೆ.

ದೇಶ ಕಾಲಕ್ಕೆ ಸಂಬಂಧ ಪಡದಿರುವುದಾವುದೋ ಒಂದು, ದೇಶಕಾಲದೊಳಗೆ ಬಂದಿರುವಂತಿದೆ. ಒಂದು ರೀತಿಯ ಚಮತ್ಕಾರ ನಡೆದಂತಿದೆ. ಆತನು ಮಾತನಾಡುತ್ತಿಲ್ಲ. ಆತನು ಒಂದು ವಾಹನದಂತೆ. ಯಾವುದೋ ಮತ್ತೊಂದು ಅವರ ಮೂಲಕ ಹರಡುತ್ತಿದೆ. ಅವರು ಕೇವಲ ಮಾಧ್ಯಮ. ಅವರು ನಮಗೆ ತಿಳಿಯದ ದಡದಿಂದ ಏನನ್ನೋ ಹೊತ್ತು ತರುತ್ತಾರೆ. ಅಂತಹ ಒಂದು ಸ್ಥಿತಿ ನಮ್ಮದಾದಾಗ ನಾವು ಮೂಕರಲ್ಲ. ಅಲ್ಲಿನವರೆಗೂ ನಾವು ಮಾತನಾಡುವುದೆಲ್ಲ ವ್ಯರ್ಥ.

ಜನರು ಬಹಳಷ್ಟು ಪ್ರಯಾಣ ಮಾಡುತ್ತಾರೆ. ಒಂದು ನಗರದಿಂದ ಮತ್ತೊಂದು ನಗರಕ್ಕೆ, ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ. ಇಡೀ ಪೃಥ್ವಿಯನ್ನು ಸುತ್ತಬಹುದು. ಆದರೆ ಆ ಚಲನೆ ಜೀವನವಲ್ಲ. ಜನ ಒಂದು ಕಡೆ ಇದ್ದು ಬೇಸರವಾದಾಗ ಬಾಹ್ಯದಲ್ಲಿ ಚಲಿಸುತ್ತಾರೆ. ಎಲ್ಲವನ್ನು ಬದಲಾಯಿಸುತ್ತಾರೆ. ಆಗಲೇ ಅವರು ಜೀವಂತ ಎಂದುಕೊಳ್ಳುತ್ತಾರೆ. ಜೀವನಕ್ಕಾಗಿ ಕ್ಷಯರೋಗಯುಕ್ತ, ಅಸ್ತಿ ಜ್ವರದ ಅನ್ವೇಷಣೆ. ಜೀವನವೆಂಬುದು ಚಲನೆ-ಇದು ನಿಜ. ಆದರೆ ಬಾಹ್ಯ ಪ್ರಯಾಣವಲ್ಲ, ಬಾಹ್ಯದಲ್ಲಿನ ಬದಲಾವಣೆಯಲ್ಲ. ಜೀವನವು ಚಲನೆ-ಒಂದು ಸ್ಥಿತಿಯಿಂದ-ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಆಳವಾದ ಅಂತರಂಗ ಚಲನೆ. ಒಂದು ಪ್ರಜ್ಞೆಯಿಂದ ಮತ್ತೊಂದು ಪ್ರಜ್ಞೆಗೆ. ಉನ್ನತ ಸಾಮ್ರಾಜ್ಯಕ್ಕೆ-ಅಸ್ತಿತ್ವದ ಉನ್ನತ ಸಾಮ್ರಾಜ್ಯಕ್ಕೆ. ಅಲ್ಲಿಗೆ ಸರಿಯಲಿಲ್ಲವೆಂದರೆ ನೀವುಗಳು ಸತ್ತಂತೆ. ಈಗಿರುವಂತೆ, ಸತ್ತಂತೆ ಇರುತ್ತೀರ.

ಸಹಸ್ರಾರು ಜನ ಕುರುಡರಾಗಿ, ಮೂಗರಾಗಿ ಜೀವಿಸುತ್ತಾರೆಂದರೆ, ಅವರಿಗೆ ಅದು ಏನನ್ನೋ ಕೊಡುತ್ತಿರಬೇಕು. ಮಹತ್ಮಾರ ಉಪದೇಶವು ಕೆಲಸ ಮಾಡುತ್ತಿಲ್ಲವೆಂದರೆ ಆ ಜೀವನದಲ್ಲಿ ಜನರು ಕೂಡಿರುವ ಆಳವಾದ ಬಂಡವಾಳವಾದರೂ ಏನು?

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಎರಡು ರೀತಿಯ ಜೀವನವನ್ನು ಮಾಡಬಹುದು, ಸೂಕ್ಷ್ಮ ಮನಸ್ಸಿನಿಂದ ಅಥವಾ ಸ್ಥೂಲ ಮನಸ್ಸಿನಿಂದ. ಸ್ಥೂಲ ಮನಸ್ಸಿನವರಿಗೆ ಹೆಚ್ಚು ತಾಪತ್ರಯ ಇರುವುದಿಲ್ಲ. ಸೂಕ್ಷ್ಮ ಮನಸ್ಸಿನವರಿಗೆ ತಾಪತ್ರಯ ಜಾಸ್ತಿ. ಸ್ಥೂಲ ಮನಸ್ಸುಳ್ಳವನು ಅರ್ಥಮಾಡಿಕೊಳ್ಳಲಾರನಾದ ಕಾರಣ ಆತನಿಗೆ ನೋವು ಕಮ್ಮಿ. ಏಕೆಂದರೆ ಅದನ್ನು ಗ್ರಹಿಸಲಾರ. ಆದಕಾರಣ ಸ್ಥೂಲ
ಜೀವನವನ್ನೇ ಹೆಚ್ಚು ಜನರು ಆರಿಸಿಕೊಂಡಿರಬೇಕು. ಈ ಸ್ಥೂಲ ಬುದ್ದಿಯವರಿಗೆ ಆತ್ಮಾನಂದವೂ ಕಮ್ಮಿ. ಏಕೆಂದರೆ ಆತ್ಮಾನಂದವನ್ನು ಗ್ರಹಿಸಲಾರರು.

ಆತ್ಮಾನಂದವು ಬೇಕೆನ್ನುವವರು ಸೂಕ್ಷ್ಮ ಚಿಂತನೆಯ ನೋವನ್ನು ಪ್ರಾರಂಭದಲ್ಲಿ ಒಪ್ಪಿಕೊಳ್ಳಬೇಕು. ನಂತರ ಸ್ಥೂಲ, ಸೂಕ್ಷ್ಮ ಎರಡು ಚಿಂತನೆಯನ್ನು ಮೀರಿ ಆತ್ಮಾನಂದವನ್ನು ಪಡೆಯಲಾಗುವುದು. ಆತ್ಮಾನಂದವನ್ನು ಪಡೆದವರು ಒಳಗೆ ಆನಂದವನ್ನು ಅನುಭವಿಸಿದರೂ ಭಾಹ್ಯದಲ್ಲಿ ಇತರರ ಪರಿಸ್ಥಿತಿಗೆ ಸ್ಪಂದಿಸುತ್ತಾರೆ.

ಲೇಖಕರು ವೇದಾಂತೋಪದೇಶ ಮಾಡುವ ಪರಿವ್ರಾಜಕರು.

ಇದನ್ನೂ ಓದಿ : Navavidha Bhakti : ಪಾದಸೇವೆಯಿಂದಲೂ ಭಕ್ತಿಯ ವೃದ್ಧಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Vastu Tips: ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ. ಮನೆಗೆ ಕಿಟಕಿ ಬಾಗಿಲು ಅಳವಡಿಸುವುದಕ್ಕೂ ವಾಸ್ತು ಪಾಲನೆ ಮಾಡುವುದು ಮುಖ್ಯ. ಇದರಿಂದ ಮನೆಯೊಳಗೆ ಧನಾತ್ಮಕ ಶಕ್ತಿ ವೃದ್ಧಿಯಾಗಿಸಬಹುದು.

VISTARANEWS.COM


on

By

Vastu Tips
Koo

ಮನೆಯೊಳಗೆ (home) ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಧನಾತ್ಮಕ ಶಕ್ತಿ (Positive energy) ವೃದ್ಧಿಸಿಕೊಳ್ಳುವುದು ಬಹು ಮುಖ್ಯ. ಇದಕ್ಕಾಗಿ ವಾಸ್ತು ಅಂಶಗಳನ್ನು ನಾವು ಪರಿಗಣಿಸಿಬೇಕು. ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ.

ಮನೆಯಾದ್ಯಂತ ಧನಾತ್ಮಕ ಶಕ್ತಿಯನ್ನು ವೃದಿಸುವುದು ಸುಲಭವಲ್ಲ. ವಾಸ್ತು ಪ್ರಕಾರ ಮನೆಗೆ ಬಾಗಿಲು (door) ಮತ್ತು ಕಿಟಕಿಗಳನ್ನು (window) ಅಳವಡಿಸಿದರೆ ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು.

ವಾಸ್ತು ಪ್ರಕಾರ ಬಾಗಿಲು ಮತ್ತು ಕಿಟಕಿಗಳನ್ನು ಅಳವಡಿಸಿದರೆ ಮುಚ್ಚಿರುವ ಜಾಗದಲ್ಲೂ ಧನಾತ್ಮಕ ಶಕ್ತಿ ಪುನರುತ್ಪಾದನೆಯಾಗುತ್ತದೆ. ಈ ಬಾಗಿಲು ಮತ್ತು ಕಿಟಕಿಗಳ ಮೂಲಕ ಶಕ್ತಿಗಳು ಮನೆಯ ಒಳ ಮತ್ತು ಹೊರಗೆ ಹರಿಯುತ್ತವೆ. ಆರೋಗ್ಯಕರ ಮತ್ತು ಶ್ರೀಮಂತ ಜೀವನಶೈಲಿಯ ವೃದ್ಧಿಗಾಗಿ ಇವುಗಳನ್ನು ಇಡಲು ನಿರ್ದಿಷ್ಟ ಜಾಗಗಳಿವೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Vastu Tips: ನಿಮ್ಮ ಮನೆಯಲ್ಲಿ ಸಂತೋಷ ವೃದ್ಧಿಸಬೇಕೆ? ಈ ಸಲಹೆಗಳನ್ನು ಪಾಲಿಸಿ

ಬಾಗಿಲು, ಕಿಟಕಿಗಳಿಗೆ ವಾಸ್ತು ಪಾಲನೆ ಯಾಕೆ?

ಮನೆ ನಿರ್ಮಿಸಲು ಉತ್ಸುಕರಾಗಿರುವ ಮನೆ ಮಾಲೀಕರು ಹಲವಾರು ಕಾರಣಗಳಿಗಾಗಿ ಬಾಗಿಲು ಮತ್ತು ಕಿಟಕಿಗಳನ್ನು ಇಡುವ ಸ್ಥಾನ, ದಿಕ್ಕು ಮತ್ತು ಬಳಸುವ ವಸ್ತುಗಳ ಬಗ್ಗೆ ವಿಶೇಷ ಗಮನವನ್ನು ನೀಡಬೇಕು. ಅವು ಗಾಳಿ ಮತ್ತು ಸೂರ್ಯನ ಬೆಳಕಿಗೆ ಪೂರಕವಾಗಿದೆಯೇ ಎಂಬುದನ್ನು ನೋಡಿಕೊಳ್ಳಬೇಕು. ಇದರಿಂದಲೇ ಮನೆಯೊಳಗೇ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸುವುದನ್ನು ತಡೆಯುತ್ತದೆ.
ಹೊಸ ಮನೆಯನ್ನು ನಿರ್ಮಿಸುತ್ತಿದ್ದರೆ ಅಥವಾ ಹಳೆ ಮನೆಯನ್ನು ನವೀಕರಿಸುತ್ತಿದ್ದರೆ ಬಾಗಿಲು ಮತ್ತು ಕಿಟಕಿಗಳ ವಾಸ್ತು ಬಗ್ಗೆ ತಿಳಿದುಕೊಳ್ಳಿ.


ಸರಿಯಾದ ಮುಖ್ಯ ಬಾಗಿಲು

ಮನೆಯ ಮುಖ್ಯ ಬಾಗಿಲು ದೊಡ್ಡ ಬಾಗಿಲಾಗಿರಬೇಕು. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಒಳಗೆ ತೆರೆದುಕೊಳ್ಳುವ ಎರಡು ಕವಾಟದ ಬಾಗಿಲು ಮಂಗಳಕರ. ಪ್ರಕಾಶಮಾನವಾದ ದೀಪಗಳು ಮತ್ತು ಉತ್ತಮ ಬಣ್ಣಗಳೊಂದಿಗೆ ಮುಖ್ಯ ಬಾಗಿಲಿನ ಮೇಲೆ ಸುಂದರವಾದ ವಿನ್ಯಾಸಗಳನ್ನು ಅಳವಡಿಸಿಕೊಳ್ಳಿ. ನೀರಸವಾದ ಮುಖ್ಯ ಬಾಗಿಲು ಮನೆಗೆ ಶೋಭೆಯಲ್ಲ.

ಬಾಗಿಲುಗಳ ಸರಿಯಾದ ಸಂಖ್ಯೆ

ಸಕಾರಾತ್ಮಕತೆಯು ಸಹ ಸಮ ಸಂಖ್ಯೆಗಳಲ್ಲಿ ಬರುತ್ತದೆ. ಮನೆಯಲ್ಲಿ ಬಾಗಿಲು ಮತ್ತು ಕಿಟಕಿಗಳ ಸಂಖ್ಯೆ ಯಾವಾಗಲೂ ಸಮವಾಗಿರಬೇಕು. ಎರಡು, ನಾಲ್ಕು, ಆರು ಹೀಗೆ ಎರಡರ ಗುಣಕಗಳಲ್ಲಿರಬೇಕು ಎನ್ನುತ್ತಾರೆ ವಾಸ್ತು ತಜ್ಞರು.


ಬಾಗಿಲಿನ ಗಾತ್ರದಲ್ಲಿ ಸ್ಥಿರತೆ

ಮುಂಭಾಗದ ಬಾಗಿಲನ್ನು ಹೊರತುಪಡಿಸಿ ಮನೆಯಲ್ಲಿ ಎಲ್ಲಾ ಆಂತರಿಕ ಬಾಗಿಲುಗಳ ಗಾತ್ರದಲ್ಲಿ ಒಂದೇ ಆಗಿರಬೇಕು. ವಿಭಿನ್ನ ಬಾಗಿಲು ಗಾತ್ರಗಳು ಮನೆಗೆ ಒಳ್ಳೆಯದಲ್ಲ. ಎದ್ದು ಕಾಣಬೇಕಾದ ಏಕೈಕ ಬಾಗಿಲು ಮುಖ್ಯ ಬಾಗಿಲು. ಮನೆಯೊಳಗೆ ಕೆಲವು ಬಾಗಿಲುಗಳನ್ನು ದೊಡ್ಡದಾಗಿ ಮಾಡಲು ಬಯಸಿದರೆ ಅವುಗಳನ್ನು ಉತ್ತರ ಅಥವಾ ಪೂರ್ವಕ್ಕೆ ಬದಲಾಗಿ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇರಿಸಬೇಕು.

ದೋಷರಹಿತವಾಗಿರಲಿ ಮನೆ ಬಾಗಿಲು

ಮನೆಯಲ್ಲಿ ಬಾಗಿಲುಗಳ ಕಾರ್ಯವಿಧಾನದ ವಿಷಯಕ್ಕೆ ಬಂದರೆ ಬಾಗಿಲು ತೆರೆಯುವಾಗ ಅಥವಾ ಮುಚ್ಚುವಾಗ ಕೀಲು ಬಾಗಿಲುಗಳನ್ನು ಹಾಕುವುದು ಉತ್ತಮ. ಮನೆಯಲ್ಲಿ ಬಾಗಿಲುಗಳು ಮತ್ತು ಕಿಟಕಿಗಳೊಂದಿಗೆ ಹೆಚ್ಚು ಜಗಳಗಳು ಇರುತ್ತದೆ. ಸ್ಮೂತ್ ಕೀಲುಗಳು ಮನೆಯಲ್ಲಿ ಉತ್ತಮ ಸಂಬಂಧಗಳನ್ನು ಪ್ರತಿಬಿಂಬಿಸುತ್ತವೆ. ಸ್ವಯಂ-ಮುಚ್ಚುವ ಬಾಗಿಲುಗಳನ್ನು ತಪ್ಪಿಸುವುದು ಒಳ್ಳೆಯದು.

ಕಿಟಕಿಗಳು

ಎಲ್ಲಾ ಕಿಟಕಿಗಳು ಸರಿಯಾದ ಆಕಾರ ಮತ್ತು ಸಮವಾದ ಎತ್ತರವನ್ನು ಹೊಂದಿರಬೇಕು. ಕಿಟಕಿಗಳು ತಾಜಾ ಗಾಳಿ ಮತ್ತು ಸೂರ್ಯನ ಬೆಳಕಿನ ಮೂಲವಾಗಿರುತ್ತದೆ. ಅವುಗಳಿಗೆ ಯಾವಾಗಲೂ ಎದುರು ಬಾಗಿಲುಗಳನ್ನು ಇಡಬೇಕು. ಮನೆಯಲ್ಲಿ ಗರಿಷ್ಠ ವಾತಾಯನವಿದೆ ಎಂದು ಇದು ಖಚಿತಪಡಿಸುತ್ತದೆ. ಮನೆಯಲ್ಲಿರುವ ಕಿಟಕಿಗಳ ಸಂಖ್ಯೆಯೂ ಸಮ ಸಂಖ್ಯೆಯಲ್ಲಿರಬೇಕು. ಕಿಟಕಿಗಳಿಗೆ ಸಾಮಾನ್ಯವಾಗಿ ನೈಋತ್ಯ ದಿಕ್ಕನ್ನು ತಪ್ಪಿಸಿ. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಕಿಟಕಿಗಳು ದೊಡ್ಡದಾಗಿದ್ದರೆ ಉತ್ತಮ. ಉತ್ತರವು ಸಮೃದ್ಧಿಯನ್ನು ತರುತ್ತದೆ ಆದರೆ ಪೂರ್ವವು ಪ್ರಗತಿ ಮತ್ತು ಆರೋಗ್ಯವನ್ನು ತರುತ್ತದೆ.

ಬಾಗಿಲಿಗೆ ಬಳಸುವ ವಸ್ತುಗಳು

ಬಾಗಿಲುಗಳಿಗೆ ವಸ್ತುಗಳನ್ನು ಎಚ್ಚರಿಕೆಯಿಂದ ಆರಿಸುವುದು ಮುಖ್ಯ. ಏಕೆಂದರೆ ಇದು ಎಷ್ಟು ಮಂಗಳಕರ ಎಂಬುದನ್ನು ನಿರ್ಧರಿಸುತ್ತದೆ. ಬಾಗಿಲುಗಳಿಗೆ ವಸ್ತುಗಳನ್ನು ಆಯ್ಕೆಮಾಡುವಾಗ ಮರದ ಬಾಗಿಲು ಯಾವಾಗಲೂ ಅತ್ಯುತ್ತಮ ಆಯ್ಕೆಯಾಗಿದೆ. ಇದಲ್ಲದೆ ಉತ್ತರ ದಿಕ್ಕಿನ ಬಾಗಿಲುಗಳಿಗೆ ಲೋಹ ಅಥವಾ ಕಬ್ಬಿಣದಂತಹ ಬೆಳ್ಳಿಯನ್ನು ಹೊಂದಿರುವ ಬಾಗಿಲುಗಳನ್ನು ಆಯ್ಕೆ ಮಾಡಿಕೊಳ್ಳಿ. ದಕ್ಷಿಣಕ್ಕೆ ಮರದ ಮತ್ತು ಲೋಹದ ಅಂಶಗಳನ್ನು ಹೊಂದಿರುವ ಬಾಗಿಲುಗಳು ಸೂಕ್ತವಾಗಿದೆ. ಪೂರ್ವ ದಿಕ್ಕಿಗೆ ಮರದಿಂದ ಮಾಡಿದ ಬಾಗಿಲು ಉತ್ತಮ. ಪಶ್ಚಿಮಕ್ಕೆ ಕಬ್ಬಿಣದಂತಹ ಲೋಹದಿಂದ ಪ್ರಧಾನವಾಗಿ ಮಾಡಿದ ಬಾಗಿಲನ್ನು ಆಯ್ಕೆ ಮಾಡಿಕೊಳ್ಳಿ.

ಬಾಗಿಲುಗಳು ಮತ್ತು ಕಿಟಕಿಗಳ ಬಣ್ಣ

ಗಾಢವಾದ ಬಣ್ಣಗಳು ಮನೆಯೊಳಗೆ ಹರ್ಷಚಿತ್ತ ಮತ್ತು ಶಕ್ತಿಯುತ ಮನಸ್ಥಿತಿಗೆ ಕಾರಣವಾಗುತ್ತವೆ. ಆದ್ದರಿಂದ ಮುಂಭಾಗದ ಬಾಗಿಲುಗಳಿಗೆ ಹಳದಿ ಮತ್ತು ನೀಲಿ ಬಣ್ಣಗಳನ್ನು ಆರಿಸಿ.

ಅಲಂಕಾರಿಕ ವಸ್ತುಗಳು

ಬಾಗಿಲಿನ ಮುಂದೆ ಹನುಮಾನ್ ಅಥವಾ ಗಣೇಶನ ವಿಗ್ರಹವನ್ನು ಇರಿಸುವುದರಿಂದ ದುಷ್ಟ ಶಕ್ತಿಗಳನ್ನು ದೂರವಿರಿಸಬಹುದು ಎಂದು ನಂಬಲಾಗಿದೆ. ಹಿತ್ತಾಳೆಯ ಬಟ್ಟಲಿನಲ್ಲಿ ನೀರನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅದೃಷ್ಟ ಮತ್ತು ಸಂಪತ್ತನ್ನು ಆಕರ್ಷಿಸಲು ಬುದ್ಧನ ಪ್ರತಿಮೆ ಅಥವಾ ಗಾಳಿಯ ಚೈಮ್ ಅನ್ನು ಪ್ರವೇಶದ್ವಾರದ ಬಳಿ ಇರಿಸಬಹುದು.


ವಾಸ್ತು ಪರಿಣಾಮ

ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಬಾಗಿಲು, ಕಿಟಕಿಗಳು ತಾಜಾ ಗಾಳಿ ಮತ್ತು ಬೆಳಿಗ್ಗೆ ಒಳ್ಳೆಯದು. ದಿನದ ಆರಂಭದಲ್ಲಿ ಇದು ಮನೆಯ ಶುದ್ಧೀಕರಣ ಪ್ರಕ್ರಿಯೆಯನ್ನು ನಡೆಸುತ್ತದೆ.

ದಕ್ಷಿಣ ದಿಕ್ಕು ಎಲ್ಲಾ ಉತ್ತಮ ಶಕ್ತಿಗಳ ಕೇಂದ್ರ ಎಂದು ಪರಿಗಣಿಸಲಾಗಿದೆ. ದಕ್ಷಿಣಕ್ಕೆ ಎದುರಾಗಿ ನಿಖರವಾಗಿ ಮತ್ತು ಮಧ್ಯದಲ್ಲಿ ಬಾಗಿಲು, ಕಿಟಕಿಗಳನ್ನು ಇರಿಸಿದರೆ ಮನೆಯೊಳಗೆ ಉತ್ತಮ ಶಕ್ತಿ ಸಂಚಾರವಾಗುತ್ತದೆ.

ಪೂರ್ವ ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಇಲ್ಲಿ ಪ್ರವೇಶದ್ವಾರಗಳು ಸಮೃದ್ಧಿ, ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುತ್ತದೆ.

ಪಶ್ಚಿಮ ದಿಕ್ಕು ಸೂರ್ಯಾಸ್ತಮಾನವನ್ನು ಆನಂದಿಸುವ ಮನೆಮಾಲೀಕರಿಗೆ ಸೂಕ್ತವಾಗಿದೆ. ಈ ದಿಕ್ಕು ಸಂಪತ್ತು ಮತ್ತು ಸಮೃದ್ಧಿಯನ್ನು ಉತ್ತೇಜಿಸುತ್ತದೆ.

ಏನು ಮಾಡಬೇಕು?

ಮನೆಯ ಮುಖ್ಯ ಬಾಗಿಲು ಹೊಸ್ತಿಲನ್ನು ಹೊಂದಿರಬೇಕು. ಮನೆಗೆ ಸಂಪತ್ತನ್ನು ಆಕರ್ಷಿಸಲು ನಿರ್ದಿಷ್ಟ ಸಂಖ್ಯೆಯಲ್ಲಿ ಹೊಸ್ತಿಲಿನ ಎದುರು ಮೆಟ್ಟಿಲುಗಳನ್ನು ಇರಿಸಬೇಕು.

ಮುಖ್ಯ ಬಾಗಿಲು ಯಾವಾಗಲೂ ನೆಲದ ಮಟ್ಟಕ್ಕಿಂತ ಮೇಲಿರಬೇಕು. ಮಲಗುವ ಕೋಣೆಯ ಬಾಗಿಲುಗಳು ಮುಖ್ಯ ಬಾಗಿಲಿಗಿಂತ ಚಿಕ್ಕದಾಗಿರಬೇಕು. ಮುಖ್ಯ ಬಾಗಿಲನ್ನು ಮನೆಯಲ್ಲಿ ದೊಡ್ಡದಾಗಿಸಬೇಕು. ಎಲ್ಲಾ ಬಾಗಿಲುಗಳು ಪ್ರದಕ್ಷಿಣಾಕಾರವಾಗಿ ತೆರೆದಿರುವುದನ್ನು ಖಚಿತಪಡಿಸಿಕೊಳ್ಳಿ.


ಏನು ಮಾಡಬಾರದು?

ಮುಖ್ಯ ಬಾಗಿಲು ಮತ್ತು ನಿರ್ಗಮನ ಬಾಗಿಲು ಎದುರಾಗಿ ಇರಬಾರದು. ಮುಖ್ಯ ಬಾಗಿಲುಗಳು ಮನೆಯ ಆಯಾವನ್ನು ಬಿಟ್ಟು ಹೊರಗೆ ಇರಬಾರದು. ಮುಖ್ಯ ಬಾಗಿಲನ್ನು ಭೂಗತ ಟ್ಯಾಂಕ್ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳ ಕೆಳಗೆ ಇಡುವುದನ್ನು ತಪ್ಪಿಸಿ.

ಮುಖ್ಯ ಬಾಗಿಲಿನ ಮುಂದೆ ಶೂ ಅಥವಾ ಕಸವನ್ನು ಇಡಬೇಡಿ. ಮುಖ್ಯ ಬಾಗಿಲಿನ ಮುಂಭಾಗದಲ್ಲಿ ಕಂಬ, ಮರ, ತಂತಿ ಸೇರಿದಂತೆ ಅಡೆತಡೆಗಳನ್ನು ತಪ್ಪಿಸಿ.

ಬಾಗಿಲು ಅಥವಾ ನಿರ್ಗಮನ ಬಾಗಿಲಿನ ಹೊರ ಭಾಗದಲ್ಲಿ ದೇವರ ಚಿತ್ರಗಳನ್ನು ಪ್ರದರ್ಶಿಸಬೇಡಿ. ಬಾಗಿಲಿನ ವಾಸ್ತು ಪ್ರಕಾರ ಇದು ದುಃಖಕ್ಕೆ ಕಾರಣವಾಗಬಹುದು.

ಮನೆಯಲ್ಲಿ ಹೆಚ್ಚಿನ ಮಹಡಿಗಳಿದ್ದರೆ ಪ್ರತಿ ಮಹಡಿಯಲ್ಲಿ ಒಂದರ ಮೇಲೊಂದು ಬಾಗಿಲು ಹಾಕದಂತೆ ನೋಡಿಕೊಳ್ಳಿ.

Continue Reading

ಬೆಂಗಳೂರು

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ (Bengaluru Karaga) ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ

VISTARANEWS.COM


on

Bengaluru Karaga
Koo

ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Continue Reading
Advertisement
dina bhavishya read your daily horoscope predictions for April 25 2024
ಭವಿಷ್ಯ22 mins ago

Dina Bhavishya : ಇಂದು ಈ ನಾಲ್ಕು ರಾಶಿಯವರಿಗೆ 4 ಲಕ್ಕಿ ನಂಬರ್!

PM
ದೇಶ1 hour ago

ಪ್ರಧಾನಿ ವಿರುದ್ಧ ಪಿತೂರಿ ನಡೆಸುವುದು ದೇಶದ್ರೋಹ; ದೆಹಲಿ ಹೈಕೋರ್ಟ್ ಮಹತ್ವದ ಆದೇಶ

Union Minister Pralhad Joshi Statement in Unakal
ಹುಬ್ಬಳ್ಳಿ2 hours ago

Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

DC vs GT
ಕ್ರೀಡೆ2 hours ago

DC vS GT: ಗುಜರಾತ್​ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು ; ಪ್ಲೇ ಆಫ್​ ರೇಸ್ ಜೀವಂತ

PUBG Love
ದೇಶ2 hours ago

PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Nada Gheethe
ಪ್ರಮುಖ ಸುದ್ದಿ2 hours ago

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

Sachin Tendulkar Birthday
ಕ್ರೀಡೆ3 hours ago

Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

PM Narendra Modi
ಕರ್ನಾಟಕ3 hours ago

PM Narendra Modi: ಪ್ರಧಾನಿ ಮೋದಿಗೆ ‘ಪ್ರಾಮಿಸ್ಡ್ ನೇಷನ್’ ಪುಸ್ತಕ ಅರ್ಪಣೆ

Chikkaballapur Lok Sabha Constituency Congress candidate Raksha Ramaiah election campaign in Nelamangala
ಚಿಕ್ಕಬಳ್ಳಾಪುರ3 hours ago

Lok Sabha Election 2024: ನೆಲಮಂಗಲದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

Sunetra Pawar
ದೇಶ4 hours ago

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ20 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌