prerane morning spiritual thoughts in kannada about vidye and its meaningPrerane : ವಿದ್ಯೆ ಇಲ್ಲದವರು ಪಶುಗಳಿಗೆ ಸಮಾನರು! ಅದು ಹೇಗೆ? Vistara News

ಧಾರ್ಮಿಕ

Prerane : ವಿದ್ಯೆ ಇಲ್ಲದವರು ಪಶುಗಳಿಗೆ ಸಮಾನರು! ಅದು ಹೇಗೆ?

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮ ಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ವಿದ್ಯೆ ಮತ್ತು ಅದರ ನಿಜವಾದ ಅರ್ಥವನ್ನು ತಿಳಿಸುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

vidye and its meaning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
prerane suresh tharodi

ತಾರೋಡಿ ಸುರೇಶ
ʻʻವಿದ್ಯಾವಿಹೀನಃ ಪಶುಭಿಃ ಸಮಾನಃʼʼ ವಿದ್ಯೆಯ ಮಹತ್ವವನ್ನು ವಿವರಿಸುವ ಋಷಿಗಳ ಮಾತಿದು. ವಿದ್ಯೆ ಇಲ್ಲದವನು ಪ್ರಾಣಿಗಳಿಗೆ ಸಮಾನ, ವಿದ್ಯೆಯೇ ಮಾನವನಲ್ಲಿರುವ ವಿಶೇಷ. ಅದೇ ಮಾನವ ಮತ್ತು ಪ್ರಾಣಿಗಳಲ್ಲಿರುವ ಬಹುಮುಖ್ಯ ವ್ಯತ್ಯಾಸ. ಸುಖಮಯವೂ, ಶ್ರೇಷ್ಠವೂ ಆದ ಜೀವನಕ್ಕೆ ವಿದ್ಯೆ ಅತ್ಯಗತ್ಯ. ಆದ್ದರಿಂದಲೇ ವಿದ್ಯಾವಂತನಿಗೆ, ವಿದ್ಯೆಯಿಲ್ಲದ ಪ್ರಾಣಿಗಳು ಸಮನಾಗಲಾರವು. ಮತ್ತು ಪ್ರಾಣಿಗಳಿಗಿಂತ ಉತ್ತಮಬಾಳ್ವೆ ಬೇಕಿದ್ದಲ್ಲಿ ವಿದ್ಯಾವಂತನಾಗಲೇಬೇಕು ಎಂಬ ಸಂದೇಶ ಇಲ್ಲಿದೆ.

ಪ್ರಾಣಿಗಳು ಪ್ರಕೃತಿಯ ಸೆಳೆತಕ್ಕನುಗುಣವಾಗಿ ಬಾಳುತ್ತವೆ. ಅವುಗಳಲ್ಲಿ ಹಸಿವು, ನಿದ್ರೆ, ಭಯ, ವಂಶಬೆಳೆಸುವಿಕೆ ಇವೆಲ್ಲವೂ ಸಹಜವಾಗಿ ನಡೆಯುತ್ತವೆ. ಅದಕ್ಕೆ ಬೇಕಾದ ಕೌಶಲ್ಯಗಳು ಜನ್ಮಜಾತವಾಗಿರುತ್ತವೆ. ಗಾನಕ್ಕೆ ಕೋಗಿಲೆ, ನಾಟ್ಯಕ್ಕೆ ನವಿಲು, ಓಟಕ್ಕೆ ಚಿರತೆ, ದೇಹಬಲಗಳಿಗೆಲ್ಲ ಪ್ರಾಣಿಗಳೇ ಮಾದರಿಗಳು. ಇಲ್ಲೆಲ್ಲಾ ಪ್ರಾಣಿಗಳದ್ದೇ ಮೇಲುಗೈ.
ಕೆಲವು ಪ್ರಾಣಿಗಳಲ್ಲಿ ಗಣಿತಪ್ರಜ್ಞೆಯನ್ನೂ ನೋಡಬಹುದು. ದುಂಬಿಯು ತನ್ನ ಗೃಹರಚನೆಗೆ ನಿರ್ದಿಷ್ಟ ಸಂಖ್ಯೆಯ ಎಲೆಗಳನ್ನು ಬಳಸುತ್ತದೆ. ಇರುವೆಗಳಲ್ಲಿ ಸೈನಿಕರದ್ದೇ ಒಂದು ಗುಂಪು. ತಾಯಿಪಕ್ಷಿಯು ಮರಿಗೆ ಹಾರುವುದನ್ನು ಕಲಿಸುವ ಶಿಕ್ಷಕಿ. ಮುಂಗುಸಿಯು ಮೂಲಿಕೆಗಳನ್ನು ತಿಂದು ವಿಷದಿಂದ ರಕ್ಷಿಸಿಕೊಳ್ಳುತ್ತದೆ. ಗಂಧಗ್ರಹಣ, ನಕ್ಷತ್ರಗಳ ನಕ್ಷೆಗಳಿಂದ ತಮ್ಮ ಮನೆಯನ್ನು ಪತ್ತೆಹಚ್ಚುತ್ತವೆ. ಮನೆಕಟ್ಟಲು ಮೇಸ್ತ್ರಿಗಾಗಿ ಕಾಯುವುದಿಲ್ಲ. ಕ್ರೃತಜ್ಞತೆ, ಸ್ವಾಮಿಭಕ್ತಿ ಇತ್ಯಾದಿ ಸದ್ಗುಣಗಳಲ್ಲಿಯೂ ಅವೇ ಮಾದರಿಗಳು.

ಸಾಕುಪ್ರಾಣಿಗಳಿಗೆ ಮಸಾಲೆ ದೋಸೆ ತಿನ್ನಿಸಿ, ಕಾಫಿ ಕುಡಿಸಿ, ಚಡ್ಡಿ ಹಾಕಿಸಿ ಅಭ್ಯಾಸ ಮಾಡಿಸದಿದ್ದಲ್ಲಿ ಅವು ಸಾಮಾನ್ಯವಾಗಿ ಆರೋಗ್ಯದಿಂದ ಇರುತ್ತವೆ! ಈ ಹಿನ್ನೆಲೆಯಲ್ಲಿ ಪ್ರಾಣಿಗಳಲ್ಲಿ ವಿದ್ಯೆ ಇಲ್ಲವೆಂದು ಹೇಗೆ ಹೇಳಲಾದೀತು?
ಮಾನವನಾದರೋ ಓದಬಲ್ಲ. ಬರೆಯಬಲ್ಲ. ಇನ್ನೊಂದು ಭಾಷೆಯನ್ನು ಕಲಿಯಬಲ್ಲ. ಇಂದ್ರಿಯಗೋಚರವಾದ ಎಲ್ಲ ಕ್ಷೇತ್ರಗಳಲ್ಲಿಯೂ ಮನುಷ್ಯನ ಸಾಧನೆ ಅದ್ಭುತ. ನಿಸರ್ಗದ ರಹಸ್ಯಗಳನ್ನು ಅನ್ವೇಷಿಸಿ ಬಳಸಿಕೊಳ್ಳವಲ್ಲಿ ಮಾನವ ಸಿದ್ಧಹಸ್ತ. ವಿದ್ಯೆಯು ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎನ್ನುವುದು ನಿರ್ವಿವಾದ.

ಇಲ್ಲಿ ಗಮನಿಸಬೇಕಾದದ್ದು ಮಾನವ ಮತ್ತು ಪಶುಗಳೆರಡೂ ನಡೆಸುತ್ತಿರುವ ಜೀವನದ ವ್ಯಾಪ್ತಿಯನ್ನು. ಎಚ್ಚರ, ಸ್ವಪ್ನ, ನಿದ್ರೆ-ಈ ಮೂರು ಅವಸ್ಥೆಗಳನ್ನೂ ಅನುಭವಿಸುವುದು ಎರಡೂ ವರ್ಗಗಳಲ್ಲಿಯೂ ಸಾಮಾನ್ಯವಾದುದ್ದು. ಪ್ರಾಣಿಗಳು ಪ್ರಕೃತಿಯ ಪ್ರೇರಣೆಯಂತೆ ನಡೆದರೆ, ಮಾನವ ತನ್ನ ಬುದ್ಧಿಸಾಮರ್ಥ್ಯವನ್ನೂ ಬಳಸುತ್ತಾನೆ. ಆದರೆ ಎರಡು ಕಡೆಯೂ ಸುಖವು ಮೂರು ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದೆ. ವಾಸ್ತವಿಕವಾಗಿ, ಪ್ರಾಣಿಗಳು ನಿಸರ್ಗವನ್ನೂ,ತಮ್ಮ ದೇಹವನ್ನೂ ಮನುಷ್ಯನಂತೆ ದುರ್ಬಳಕೆ ಮಾಡಿಕೊಳ್ಳದೆ, ಮನುಷ್ಯನಿಗಿಂತ ಹೆಚ್ಚು ಸುಖವನ್ನು ಅನುಭವಿಸುತ್ತವೆ. ಒಟ್ಟಿನಲ್ಲಿ ಲೌಕಿಕಜೀವನಕ್ಕೆ ಬೇಕಾದ ವಿದ್ಯೆಗಳನ್ನು ಮಾನವ-ಪ್ರಾಣಿಗಳೆರಡರಲ್ಲೂ ನೋಡುತ್ತೇವೆ.

ಹಾಗಿದ್ದಲ್ಲಿ ʻʻವಿದ್ಯಾವಿಹೀನಃ ಪಶುಭಿಃ ಸಮಾನʼʼ ಎನ್ನುವುದು ಹೇಗೆ ಸಮಂಜಸ? ಇಂತಹ ಅಭಿಪ್ರಾಯಗಳ ಹಿಂದಿರುವ ಋಷಿಹೃದಯವೇನು? ಇದಕ್ಕೆ ಉತ್ತರವನ್ನು ನಾವು ಮಾನವ ಹಾಗೂ ಪ್ರಾಣಿಗಳ ದೇಹರಚನೆಯಲ್ಲಿನ ವ್ಯತ್ಯಾಸ ಮತ್ತು ವಿದ್ಯೆಯ ಸರಿಯಾದ ಪರಿಕಲ್ಪನೆಯಲ್ಲಿ ಹುಡುಕಬೇಕಾಗುತ್ತದೆ.

ಸಾಮಾನ್ಯಮನುಷ್ಯರು ತಮ್ಮ ದೇಹವನ್ನಾಗಲೀ, ಜಗತ್ತನ್ನಾಗಲೀ ಇಂದ್ರಿಯಗಳ ಮೂಲಕ ಅರ್ಥಮಾಡಿಕೊಳ್ಳುತ್ತಾರಷ್ಟೆ. ಹಾಗಲ್ಲದೆ, ಅತೀಂದ್ರಿಯವಾದ ದೃಷ್ಟಿ(ಯೋಗದೃಷ್ಟಿ)ಯನ್ನು ತಪಸ್ಸಿನಿಂದ ಸಂಪಾದಿಸಿ ಜೀವನವನ್ನು ಸಮಗ್ರವಾಗಿ ಅರ್ಥಮಾಡಿಕೊಂಡವರೇ ಋಷಿಗಳು. ಇಂತಹ ದೃಷ್ಟಿಸಂಪಾದನೆ ಮಾನವನಿಗೆ ಮಾತ್ರ ಸಾಧ್ಯ. ಯೋಗದೃಷ್ಟಿಯಿಂದ ನೋಡಿದಾಗ ಅವರಿಗೆ ಮಾನವದೇಹರಚನೆಯ ವಿಶೇಷತೆಯೂ, ಜೀವನದ ಸಹಜ ಧ್ಯೇಯವೂ ಮತ್ತು ಅದನ್ನು ಸಾಧಿಸಿದಾಗ ಆಗುವ ಲಾಭವೂ ಸಮಗ್ರವಾಗಿ ಅರ್ಥವಾಯಿತು. ಅವರ ಅನ್ವೇಷಣೆಯ ವಿವರಗಳನ್ನು ಈ ಕೆಳಗಿನಂತೆ ಸಂಗ್ರಹಿಸ ಬಹುದು.

ಅಷ್ಟಾಂಗಯೋಗ ವಿಜ್ಞಾನಮಂದಿರದ ಆಧ್ಯಾತ್ಮ ಚಿಂತಕರಾದ ಸುಬ್ರಹ್ಮಣ್ಯ ಸೋಮಯಾಜಿ ಅವರ ಈ ವಿಡಿಯೋವನ್ನೂ ನೋಡಿ.

ಜೀವಿಗಳೆಲ್ಲರ ಹೃದಯದಲ್ಲಿ ಜ್ಯೋತೀರೂಪದಲ್ಲಿ ಬೆಳಗುತ್ತಿರುವ ಒಂದು ತತ್ವವಿದೆ. ದೇವರು, ಭಗವಂತ ಎಂದೆಲ್ಲ ಕರೆಯಲ್ಪಟ್ಟ, ಆ ವಿಶ್ವಬೀಜದಿಂದಲೇ ಸಂಪೂರ್ಣವಿಶ್ವವೂ, ಸಮಸ್ತಜೀವಿಗಳೂ-ಸೂಕ್ಷ್ಮವಾದ ಆಲದ ಬೀಜದಿಂದ ವಿಶಾಲ ವಟವೃಕ್ಷವು ವಿಕಾಸಗೊಳ್ಳುವಂತೆ-ಅರಳಿಬಂದಿವೆ. ಬೀಜದಿಂದ ಬೆಳೆದ ವೃಕ್ಷವು ಪುನಃ ಬೀಜದಲ್ಲಿಯೇ ತನ್ನ ವಿಕಾಸವನ್ನು ಮುಗಿಸಿಕೊಳ್ಳುವಂತೆ ತಮ್ಮ ಸಹಜನೆಲೆಯಾದ ಪರಮಾತ್ಮ ತತ್ವದಲ್ಲಿ ಜೀವಿಗಳು ಲಯಗೊಂಡಾಗಲೇ ಪೂರ್ಣವಿಶ್ರಾಂತಿ. ಅಲ್ಲಿ ದೊರೆಯುವ ಆನಂದವನ್ನು ಊಹಿಸುವುದೂ ಅಸಾಧ್ಯ.

ಅಷ್ಟಲ್ಲದೆ, ಮನುಷ್ಯನು ಯೋಗ ಮುಂತಾದ ವಿದ್ಯೆಗಳನ್ನು ಅವಲಂಬಿಸಿ ತನ್ನ ಮೂಲಸ್ವರೂಪದಲ್ಲಿ ಸೇರಬಲ್ಲ. ಅಂತಹ ರಚನಾವಿನ್ಯಾಸ ಮಾನವ ದೇಹದಲ್ಲಿದೆ. ಅದೇ ಮಾನವ ಮಾತ್ರರು ಅನುಭವಿಸಬಹುದಾದ ತುರೀಯವೆಂಬ ನಾಲ್ಕನೆಯ ಅವಸ್ಥೆ. ನಾಲ್ಕೂ ಅವಸ್ಥೆಗಳ ಪೂರ್ಣಜೀವನ ಮಾನವನ ಜನ್ಮಸಿದ್ಧ ಹಕ್ಕು. ತುರೀಯವನ್ನು ಸಾಧಿಸದಿದ್ದರೆ ಜೀವನ ವ್ಯರ್ಥ. ಏಕೆಂದರೆ ಮಾನವದೇಹದ ವೈಶಿಷ್ಟ್ಯವೇ ತುರೀಯವನ್ನು ಸಾಧಿಸಬಲ್ಲ ಸಹಜ ಸಾಮರ್ಥ್ಯ. ಈ ತುರೀಯವನ್ನು ಪಡೆಯುವ ದೇಹರಚನೆ, ಮನೋರಚನೆಗಳು ಪ್ರಾಣಿಗಳಿಗಿಲ್ಲ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಋಷಿಗಳ ದೃಷ್ಟಿಯಲ್ಲಿ ವಿದ್ಯೆಯು ಕೇವಲ ಲೌಕಿಕ ಜೀವನಕ್ಕೆ ಸಾಧಕವಾದ ಕೌಶಲ್ಯವಲ್ಲ. ಮಾಹಿತಿಸಂಗ್ರಹವಲ್ಲ. ‘ವಿದ್’ ಎಂದರೆ ಜ್ಞಾನವೆಂದೂ. ‘ಯಾ’ ಎಂದರೆ ಅದನ್ನು ಒದಗಿಸಿಕೊಡುವ ಸಾಧನವೆಂದೂ ಅರ್ಥ. ಗೀತೆ ಇತ್ಯಾದಿ ಆರ್ಷಗ್ರಂಥಗಳಲ್ಲಿ ಜ್ಞಾನ ಎಂಬ ಪದದ ಮೌಲಿಕವಾದ ಅರ್ಥವು ಪರಮಾತ್ಮ ಎಂದು ಸ್ಪಷ್ಟಪಡಿಸಿದೆ. ಹೀಗೆ ವಿದ್ಯೆಯೆಂದರೆ ಜ್ಞಾನವನ್ನು,ಸುಖದ ನಿಧಿಯಾದ ಪರಮಾತ್ಮನನ್ನು ಸಾಕ್ಷಾತ್ಕರಿಸಿಕೊಳ್ಳುವ ಸಾಧನ-ವಿದ್ಯಯಾ ಅಮೃತಮಶ್ನುತೇ ಮಾನವನ ದೇಹರಚನೆಯೇ ಒಂದು ವಿದ್ಯಾರೂಪವಾಗಿದೆ ವಿದ್ಯಾಮಯೋ~ಯಮ್ ಪುರುಷಃ
ಈ ಅರ್ಥದಲ್ಲಿ ಮಾನವ ವಿದ್ಯಾವಂತನಾದರೆ ಕೇವಲ ಪ್ರಾಣಿಸದೃಶನಾಗಿ ಉಳಿಯುವುದಿಲ್ಲ. ಇಲ್ಲದಿದ್ದರೆ ಮಹತ್ತಾದ ಸುಖದಿಂದ ವಂಚಿತನಾಗಿ ಬದುಕು ವ್ಯರ್ಥವಾಗುವುದು ಎಂಬ ವಿಷಯವನ್ನು ಮನವರಿಕೆ ಮಾಡಿಕೊಟ್ಟವರು ಶ್ರೀರಂಗಮಹಾಗುರುಗಳು.

ಹೀಗೆ ಈ ಆರ್ಷವಾಕ್ಯವು ಅರ್ಥಪೂರ್ಣವಾಗಿದೆ. ಭಾರತದ ಜನಮಾನಸವು ತಮ್ಮ ಪೂರ್ವಜರಾದ ಋಷಿಗಳ ಆಶಯದಂತೆ ನಿಜವಾದ ಅರ್ಥದಲ್ಲಿ ವಿದ್ಯಾವಂತರಾಗಿ ಬಾಳಿ ಶ್ರೇಷ್ಠಜೀವನದ ಹರಿಕಾರರಾಗುವ ಸಂದೇಶವನ್ನು ನೀಡುತ್ತದೆ.

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು,
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ : Prerane : ಕನ್ಯೆ ಎಂದರೆ ಯಾರು? ಈ ಪದಕ್ಕಿರುವ ಮಹತ್ವವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

VISTARANEWS.COM


on

Shri Ram Janmabhoomi Mandir carvings are wonderful
Koo

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಜನವರಿ 22ರಂದು ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ನಡುವೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಿಲೀಸ್ ಮಾಡಿದೆ.

ಅದ್ಭುತ ಕೆತ್ತನೆಗಳನ್ನು ಹೊಂದಿರುವ ಮಂದಿರ ಒಳಾಂಗಣ ಫೋಟೋಗಳು ಭಾರೀ ವೈರಲ್ ಆಗಿವೆ. ಸುಂದರ ಕಲಾಕೃತಿಗಳನ್ನು ಮಂದಿರದೊಳಗೆ ಕಾಣಬಹುದಾಗಿದೆ. ನಿನ್ನೆಯಷ್ಟೇ ರಾಮ ಮಂದಿರದ ಗರ್ಭಗಡಿಯು ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಮಂತ್ರಣ ನೀಡಲಾಗಿದೆ. ಸುಮಾರು 10 ಸಾವಿರದಿಂದ 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮನಮೋಹಕ ರಾಮ ಮಂದಿರ ಗರ್ಭ ಗುಡಿ

ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Continue Reading

ದೇಶ

Kashi Vishwanath Temple : ಭಕ್ತರ ಭೇಟಿಯಲ್ಲಿ ದಾಖಲೆ ನಿರ್ಮಿಸಿದ ಕಾಶಿ ವಿಶ್ವನಾಥ ಮಂದಿರ

Kashi Vishwanath Temple :2021ರ ಡಿಸೆಂಬರ್​ 13ರಂದು ಕಾಶಿ ವಿಶ್ವನಾಥ ಕಾರಿಡಾರ್ ಅನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ್ದರು.

VISTARANEWS.COM


on

Kashi Temple
Koo

ವಾರಾಣಸಿ: ಹಿಂದೂಗಳ ಅತ್ಯಂತ ಪವಿತ್ರ ಯಾತ್ರಾ ಸ್ಥಳವಾಗಿರುವ ಶ್ರೀ ಕಾಶಿ ವಿಶ್ವನಾಥ ದೇವಾಲಯಕ್ಕೆ (Kashi Vishwanath Temple) ಎರಡು ವರ್ಷಗಳಲ್ಲಿ ದಾಖಲೆಯ 12.92 ಕೋಟಿ ಭಕ್ತರು ಭೇಟಿ ನೀಡಿದ್ದಾರೆ. ಈ ಮೂಲಕ ಮಂದಿರವು ಭಕ್ತರ ಭೇಟಿಯಲ್ಲಿ ಹೊಸ ದಾಖಲೆ ಬರೆದಿದೆ. ಅಲ್ಲದೆ, ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗುವ ಮೂಲಕ ಭಾರತದ ಪ್ರಮುಖ ಯಾತ್ರಾ ಸ್ಥಳ ಎಂಬ ಖ್ಯಾತಿಯನ್ನು ಗಳಿಸಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್​ನಲ್ಲಿ ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಅನ್ನು ಉದ್ಘಾಟಿಸಿದ್ದರು. ಅಂದಿನಿಂದ ವಿಶ್ವನಾಥನ ಭೇಟಿಗೆ ಬರುತ್ತಿರುವ ಭಕ್ತರ ಸಂಖ್ಯೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ದೇವಾಲಯಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೇಗುಲದ ಆವರಣ ದೊಡ್ಡದಾಗಿರುವುದು ಹಾಗೂ ಭಕ್ತರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ಯಾತ್ರೆಯನ್ನು ಹೆಚ್ಚು ಸರಳ ಹಾಗೂ ಪಾವನಗೊಳಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೋದಿ ಕಾರಿಡಾರ್​ ಉದ್ಘಾಟಿಸಿದ ಬಳಿಕ ಹೆಚ್ಚಿನ ಭಕ್ತರು

ಶ್ರೀ ಕಾಶಿ ವಿಶ್ವನಾಥ ಧಾಮವನ್ನು 2021 ರ ಡಿಸೆಂಬರ್ 13 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಅಂದಿನಿಂದ 2023 ರ ಡಿಸೆಂಬರ್ 6 ರವರೆಗೆ, 12 ಕೋಟಿ 92 ಲಕ್ಷ 24 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ಅವರ ದರ್ಶನ ಪಡೆದಿದ್ದಾರೆ. ಡಿಸೆಂಬರ್ ಅಂತ್ಯದ ವೇಳೆಗೆ ಈ ಸಂಖ್ಯೆ 13 ಕೋಟಿ ದಾಟುವ ನಿರೀಕ್ಷೆಯಿದೆ ಎಂದು ದೇವಾಲಯದ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಕುಮಾರ್ ವರ್ಮಾ ಹೇಳಿದ್ದಾರೆ.

ಶ್ರಾವಣ ತಿಂಗಳೊಂದರಲ್ಲೇ 1.6 ಕೋಟಿಗೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಜುಲೈನಲ್ಲಿ 72 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರೆ, ಆಗಸ್ಟ್​​ನಲ್ಲಿ ಈ ಸಂಖ್ಯೆ 95.6 ಲಕ್ಷದಷ್ಟಿತ್ತು. ಜನವರಿ 2023ರಿಂದ ಡಿಸೆಂಬರ್ ವರೆಗೆ ದೇವಾಲಯದಲ್ಲಿ 5.3 ಕೋಟಿ ಜನರು ಭೇಟಿ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ, ಕಾಶಿ ವಿಶ್ವನಾಥ ಟ್ರಸ್ಟ್ ಪ್ರವಾಸಿಗರು ಮತ್ತು ಭಕ್ತರಿಗೆ ನೀಡುವ ಸೌಲಭ್ಯಗಳನ್ನು ಹೆಚ್ಚಿಸಿದೆ. ಅಂತಹ ಬದಲಾವಣೆಗಳು ಭಕ್ತರ ಭೇಟಿಯನ್ನು ಸರಳಗೊಳಿಸುತ್ತಿದೆ ಎಂದು ಸಿಇಒ ಮಾಹಿತಿ ನೀಡಿದ್ದಾರೆ.

ವ್ಯಾಪ್ತಿ ವಿಸ್ತರಣೆಯಿಂದ ಅನುಕೂಲ

ಈ ಮೊದಲು ದೇವಾಲಯದ ವಿಸ್ತೀರ್ಣ ಕೇವಲ 3000 ಚದರ ಅಡಿಗಳಷ್ಟಿತ್ತು. 2021 ರಲ್ಲಿ, ಇದನ್ನು ಸುಮಾರು 5 ಲಕ್ಷ ಚದರ ಅಡಿಗೆ ವಿಸ್ತರಿಸಲಾಯಿತು. ಇದು ದೇವಾಲಯದ ಆವರಣದಲ್ಲಿ ಏಕಕಾಲಕ್ಕೆ 50,000 ರಿಂದ 75,000 ಭಕ್ತರಿಗೆ ಪ್ರವೇಶ ಪಡೆಯಲು ಅವಕಾಶ ನೀಡಿದೆ. ಬೇಸಿಗೆಯಲ್ಲಿ ಸುಡುವ ಬಿಸಿಲು, ಚಳಿ ಮತ್ತು ಮಳೆಯಿಂದ ರಕ್ಷಿಸಲು ಜರ್ಮನ್ ಹ್ಯಾಂಗರ್ ಗಳು, ಚಾಪೆಗಳು, ಕೂಲರ್ ಗಳು, ಕುಡಿಯುವ ನೀರು, ಗಾಲಿಕುರ್ಚಿಗಳು, ವೈದ್ಯಕೀಯ ಸೌಲಭ್ಯಗಳು ಸೇರಿದಂತೆ ಇತರ ವ್ಯವಸ್ಥೆಗಳಲ್ಲಿ ಭಕ್ತರಿಗೆ ವ್ಯವಸ್ಥೆ ಮಾಡಲಾದ ಇತರ ಸೌಲಭ್ಯಗಳಲ್ಲಿ ಸೇರಿವೆ.

Continue Reading

ಅಂಕಣ

ತಾತಯ್ಯ ತತ್ವಾಮೃತಂ: ಭಕ್ತಿತತ್ವದಿಂದ ಮೋಕ್ಷ ಸಾಧನೆ

ಮಾನವ ಜನ್ಮವು ಪರಮಾತ್ಮನ ಕೃಪೆ. ಪರಮಾತ್ಮನ ಕೃಪೆಯಿಂದ ದೊರಕಿರುವ ಈ ಮಾನವ ಜನ್ಮವನ್ನು ವ್ಯರ್ಥವಾಗಿ ಕಳೆದುಕೊಳ್ಳಬಾರದೆಂಬ ಕಳಕಳಿಯಿಂದ ಗುರುವರ್ಯರಾದ ತಾತಯ್ಯನವರು ಈ ಭಕ್ತಿತತ್ವದ ಪ್ರತಿಪಾದನೆಯನ್ನು ಮಾಡಿದ್ದಾರೆ.

VISTARANEWS.COM


on

kaivara tatayya
Koo
jayaram-column

ಕೈವಾರದ ತಾತಯ್ಯನವರು ಮಾನವ ಜನ್ಮದ ಶ್ರೇಷ್ಠತೆಯನ್ನು ಹಲವಾರು ಬೋಧನೆಗಳಲ್ಲಿ ಎತ್ತಿಹಿಡಿದಿದ್ದಾರೆ. ನರಜನ್ಮದಲ್ಲಿ ಮಾತ್ರ ಮೋಕ್ಷವನ್ನು ಕಂಡುಕೊಳ್ಳಲು ಸಾಧ್ಯವಿದೆ. ನಿನ್ನನ್ನು ನೀನು ತಿಳಿದು ಆತ್ಮಜ್ಞಾನಿಯಾಗು. ಮತಿಹೀನನಾಗಿ ವರ್ತಿಸುತ್ತಾ, ಇಂದ್ರಿಯಗಳನ್ನು ನಿಗ್ರಹಿಸದಿದ್ದರೆ ಅಧ್ಯಾತ್ಮವಿದ್ಯೆ ಅಂಟುವುದಿಲ್ಲ. ಹೀಗೆ ಹಲವಾರು ಮಹತ್ವದ ವಿಷಯಗಳನ್ನು ತಾತಯ್ಯನವರು ಸರಳವಾದ ಮಾತುಗಳಲ್ಲಿ ಪ್ರತಿಯೊಬ್ಬರಿಗೂ ಅರ್ಥವಾಗುವಂತೆ ಬೋಧಿಸಿದ್ದಾರೆ.

ಮಾನವ ಜನ್ಮವು ಪರಮಾತ್ಮನ ಕೃಪೆ. ಪರಮಾತ್ಮನ ಕೃಪೆಯಿಂದ ದೊರಕಿರುವ ಈ ಮಾನವ ಜನ್ಮವನ್ನು ವ್ಯರ್ಥವಾಗಿ ಕಳೆದುಕೊಳ್ಳಬಾರದೆಂಬ ಕಳಕಳಿಯಿಂದ ಗುರುವರ್ಯರಾದ ತಾತಯ್ಯನವರು ಈ ಭಕ್ತಿತತ್ವದ ಪ್ರತಿಪಾದನೆಯನ್ನು ಮಾಡಿದ್ದಾರೆ. ಪ್ರತಿಯೊಂದು ಜೀವಿಗೂ ಮರಣವಿದೆ. ಇದು ಸತ್ಯ. ಮರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಮರಣದ ನಂತರ ಹುಟ್ಟುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿದೆ. ಈ ಚಿಂತನೆಯನ್ನು ತಾತಯ್ಯನವರು ಮುಂದಿಡುತ್ತಿದ್ದಾರೆ.

ಯೆಂತ ಕಾಲಮೈನ ಯೆರುಕ ಲೇಕನು ಜೀವಿ
ಚಚ್ಚಿ ಪುಟ್ಟುಚುನುಂಡು ಸಹಜಮಿದಿಯು

ತಾತಯ್ಯನವರು ಈ ಪದ್ಯದಲ್ಲಿ ಮಾನವರಿಗೆ ನೇರವಾಗಿ ತತ್ವಬೋಧೆಯನ್ನು ಮಾಡಿದ್ದಾರೆ. ಎಷ್ಟೇ ಕಾಲ ಕಳೆದರೂ ಅಜ್ಞಾನದಿಂದ ಕೂಡಿರುವ ಜೀವಿಯು ಮತ್ತೆ ಮತ್ತೆ ಸತ್ತು ಹುಟ್ಟುತ್ತಿರುತ್ತಾನೆ. ಇದು ಸಹಜವಾದ ಪ್ರಕ್ರಿಯೆ. ಕಾರಣವೆಂದರೇ ಅಜ್ಞಾನ. ಯಾರಿಗಾದರೇ ಕೇವಲ ಪ್ರಾಪಂಚಿಕವಾದ ವ್ಯವಹಾರದಲ್ಲಿ ಮಾತ್ರ ಆಸಕ್ತಿ ಇರುತ್ತದೋ ಅವರು ಅಜ್ಞಾನಿಗಳು. ಮಾನವಜನ್ಮದಲ್ಲಿ ಹುಟ್ಟಿದ ಮೇಲೆ ಪರಲೋಕದ ಚಿಂತನೆಯನ್ನು ಮಾಡುತ್ತಿರಬೇಕು. ಅಜ್ಞಾನಿಯಾಗದೇ ಆತ್ಮಜ್ಞಾನಿಯಾಗಿ ಈ ಸಹಜಸ್ಥಿತಿಯಿಂದ ತಪ್ಪಿಸಿಕೊಂಡು ಪಾರಾಗು ಎನ್ನುತ್ತಿದ್ದಾರೆ ತಾತಯ್ಯನವರು.

ಜನನ ಮರಣಮುಲೆನ್ನೋ..

ಮಾನವನಾಗಿ ಹುಟ್ಟುವುದಕ್ಕೆ ಮೊದಲು ಏನಾಗಿದ್ದೇವೋ? ಯಾರಿಗೂ ಗೊತ್ತಿಲ್ಲ. ಮಾನವ ಜನ್ಮದಲ್ಲಿರುವ ಆತ್ಮ ಹಿಂದೆ ಯಾವ ಯಾವ ಜೀವರಾಶಿಗಳಲ್ಲಿ ಸೇರಿಕೊಂಡು ಜೀವಿಸಿತ್ತೋ? ಯಾರಿಗೂ ಗೊತ್ತಿಲ್ಲ. ಇದರ ಮನವರಿಕೆಯನ್ನು ತಾತಯ್ಯನವರು ಮಾಡಿಕೊಡುತ್ತಿದ್ದಾರೆ.

ಜನನಮರಣಮುಲೆನ್ನೊ ಜಾತುಲೆನ್ನಾಯೆನೋ
ತಲಿದಂಡ್ರುಲೆಂದರೋ ತನುವುಲೆನ್ನೋ
ಇಪ್ಪುಡು ಧರಲೋನ ಯಿಟುವಂಟಿ ಮಾನವ
ದೇಹಂಬು ನಿರ್ಮಿಂಚೆ ಮಾಧವುಂಡು||

ಈವರೆಗೆ ಅದೆಷ್ಟು ಸಲ ಜನನ ಮರಣಗಳಾದವೋ, ಅದೆಷ್ಟು ಜಾತಿಗಳಾದವೋ, ಅದೆಷ್ಟು ಮಂದಿ ತಾಯಿತಂದೆಗಳನ್ನು ಪಡೆದದ್ದಾಯಿತೋ, ಅದಕ್ಕೆ ಲೆಕ್ಕವೇ ಇಲ್ಲ. ಎಷ್ಟೆಷ್ಟು ಶರೀರಗಳನ್ನು ಪಡೆದು ಮಣ್ಣುಗೂಡಿಸಿದ್ದಾಯಿತೋ, ಲೆಕ್ಕವಿಲ್ಲ. ಹಿಂದಿನ ಜನ್ಮಗಳು ಏನೇ ಇರಲಿ, ಕಳೆದು ಹೋಯಿತು. ಚಿಂತೆ ಮಾಡಬೇಡ. ಈಗಲಾದರೂ, ಜ್ಞಾನ ಸಂಪಾದನೆಗೆ ಅವಕಾಶವಿರುವ ವಿವೇಕದಿಂದ ಕೂಡಿರುವ ಮಾನವಜನ್ಮ ಬಂದಿದೆ. ಲೋಕೇಶ್ವರನಾದ ಮಾಧವನು ಇಂತಹ ಶ್ರೇಷ್ಠವಾದ ಮಾನವದೇಹವನ್ನು ಕೊಟ್ಟಿದ್ದಾನೆ, ಹಾಳುಮಾಡಿಕೊಳ್ಳಬೇಡ ಎಂದು ಎಚ್ಚರಿಸುತ್ತಿದ್ದಾರೆ ತಾತಯ್ಯನವರು.

ಭೂಮಿಯಲ್ಲಿ ಇಂತಹ ಮಾನವದೇಹವನ್ನು ಪಡೆದ ಮೇಲೆ ಮಾಡಬೇಕಾದ ಕರ್ತವ್ಯವೇನು? ಅದರ ಫಲಶ್ರುತಿಯೇನು? ಪದ್ಯದ ಕೊನೆಯಲ್ಲಿ ಈ ರೀತಿಯಾಗಿ ಬೋಧಿಸುತ್ತಿದ್ದಾರೆ ತಾತಯ್ಯನವರು.
ಹಿಂದೆ ಮಾಡಿದ ತಪ್ಪನ್ನು ಮಾಡದಿರು..

ನಮ್ಮ ಕಣ್ಣ ಮುಂದೆಯೇ ಮಾನವ ದೇಹವಿಲ್ಲದ ಅದೆಷ್ಟೋ ಜಂತುಗಳಿವೆ. ಆದರೆ ಈ ಜಂತುಗಳಿಗೆ ಮಾನವನಿಗಿರುವಷ್ಟು ಜ್ಞಾನವಿಲ್ಲ, ಅನುಕೂಲಗಳಿಲ್ಲ. ಆ ಜಂತುಗಳು ಪರಮಾತ್ಮನಾದ ಜಗದೀಶ್ವರನ ಸ್ಮರಣೆ ಮಾಡುವುದಿಲ್ಲ. ಮಾನವನಾಗಿ ಹುಟ್ಟಿದ ಮೇಲೆ ನೀನು ಪರಮಾತ್ಮನ ಸ್ಮರಣೆಯನ್ನು ಮಾಡದಿದ್ದರೆ ಏನು ಪ್ರಯೋಜನ? ಮಾನವಜನ್ಮದ ಸಾರ್ಥಕವೇನು? ಆ ಜಂತುವಿಗೂ ಮಾನವರಿಗೂ ಇರುವ ವ್ಯತ್ಯಾಸವೇನು? ತಾತಯ್ಯನವರು ಹೀಗೆ ಬೋಧಿಸಿದ್ದಾರೆ.

ಮುನುಪಟಿ ವಿಧಂಬುನ ಮೂರ್ಖುಡೈ ಪೋವಲದು
ಜಗದೀಶ್ವರುನಿ ಜಪಮು ಚೇಸಿ ನೀವು
ಪಟ್ಟು ವದಲಕ ಪರಮಂದೆ ದೃಷ್ಟಿವುಂಚಿ
ಚಾವು-ಪುಟ್ಟು ಲೇನಿ ಸೌಖ್ಯಸಂಪದಲನುಂಡು||

kaivara tatayya2

ಹಿಂದಿನ ಜನ್ಮಗಳಲ್ಲಿ ಮಾಡಿದದಂತೆ ಈ ಸಲವೂ ಮೂರ್ಖನಾಗಿ ಹೊರಡುವವನಾಗಬೇಡ. ಮಾನವಜನ್ಮವನ್ನು ಎಷ್ಟೋ ಪೂರ್ವಜನ್ಮಗಳ ಪುಣ್ಯದಿಂದ ಪಡೆದಿದ್ದೀಯ. ಈ ಸದಾವಕಾಶವನ್ನು ಕಳೆದುಕೊಳ್ಳಬೇಡ. ಪರಮಾತ್ಮನಾದ ಜಗದೀಶ್ವರನ ಜಪಸ್ಮರಣೆಯನ್ನು ಮಾಡು. ಪಟ್ಟು ಬಿಡದೆ ಪರಮಲಕ್ಷ್ಯವಾಗಿರುವ ಮೋಕ್ಷದಲ್ಲೇ ದೃಷ್ಟಿಯನ್ನಿಟ್ಟು, ಸಾವು-ಹುಟ್ಟುಗಳಿಲ್ಲದ ಸೌಖ್ಯ ಸಂಪತ್ತುಗಳನ್ನು ಅನುಭವಿಸು ಎನ್ನುತ್ತಿದ್ದಾರೆ ತಾತಯ್ಯನವರು.

“ಪಟ್ಟು ವದಲಕ ಮರಮಂದೆ ದೃಷ್ಠಿವುಂಚಿ” ತಾತಯ್ಯನವರು ಮಾನವರಿಗೆ ನೀಡುತ್ತಿರುವ ಎಚ್ಚರಿಕೆ ಇದು. ಪರಮಾತ್ಮನ ಸ್ಮರಣೆ ಮಾಡು, ಇದು ತಾತಯ್ಯನವರು ಬೋಧಿಸುತ್ತಿರುವ ಉಪದೇಶ. ದೃಢ ಸಂಕಲ್ಪದಿಂದ, ಹಿಡಿದ ಪಟ್ಟು ಬಿಡದೆ ಪರಮಾತ್ಮನ ಸ್ಮರಣೆಯನ್ನು ಮಾಡಬೇಕು ಎನ್ನುತ್ತಿದ್ದಾರೆ. ಉದಾಸೀನದ ಸ್ಮರಣೆಯಿಂದ ಪ್ರಯೋಜನವಿಲ್ಲ. ಆದುದರಿಂದ ಜಪಸ್ಮರಣೆಯಲ್ಲಿ ಸಡಿಲವಾಗದೆ ಬಿಗಿಯಾದ, ದೃಢವಾದ ಹಿಡಿತವಿರಬೇಕು.

ಇದನ್ನೂ ಓದಿ: ತಾತಯ್ಯ ತತ್ವಾಮೃತಂ: ನವರಾತ್ರಿ ವಿಶೇಷ: ಅಖಿಲಾಂಡೇಶ್ವರಿಯ ವರ್ಣನೆ

ಪರದಲ್ಲಿ ದೃಷ್ಠಿ ಇರಿಸಬೇಕೆಂದು ಹೇಳಿದ್ದಾರೆ. ಇದು ಬಹಳ ಮುಖ್ಯವಾದುದು. ಲೌಕಿಕ ಭೋಗಗಳನ್ನು ಬಯಸಿ ಮಾಡುವ ಅನೇಕ ಜಪಗಳು ಶಾಶ್ವತವಾದ ಸುಖಗಳನ್ನು ನೀಡುವುದಿಲ್ಲ. ಅಜ್ಞಾನಿ ಜನರು ಧನಕನಕ ಭೋಗಗಳೆಂಬ ಅಲ್ಪಲಾಭಕ್ಕೆ ಮರುಳಾಗಿ ಅದನ್ನೇ ಸುಖವೆಂದು ಭ್ರಮಿಸುತ್ತಾರೆ. ಆದರೆ ಸ್ವಲ್ಪವೇ ಕಾಲದ ನಂತರ ಭೋಗವು ರೋಗವಾಗಿ ಪರಿಣಮಿಸುತ್ತದೆ. ಕೊನೆಗೆ ತಮ್ಮ ತಪ್ಪಿನ ಅರಿವಾಗುತ್ತದೆ. ನೀನು ಹಾಗಾಗಬೇಡ, ಜ್ಞಾನಿಯಾಗಿ ಹುಟ್ಟುಸಾವುಗಳಿಲ್ಲದ ಭಗವಂತನ ಸಾನ್ನಿಧ್ಯವನ್ನು ಸೌಖ್ಯ ಸಂಪದವೆಂದು ಅರಿತುಕೋ. ಲೋಕದ ಇನ್ನಿತರ ಅಲ್ಪವಸ್ತುಗಳಿಗೆ ಆಸೆಪಡದೆ ಮೋಕ್ಷತತ್ವದಲ್ಲಿ ಮನಸ್ಸಿಟ್ಟು ಸ್ಮರಿಸು, ಆಗ ಜಗದೀಶ್ವರನು ನಿನ್ನನ್ನು ತನ್ನ ಲೋಕಕ್ಕೆ ಕರೆದುಕೊಂಡು ತನ್ನ ಬಳಿ ಇರಿಸಿಕೊಳ್ಳುತ್ತಾನೆ. ಇದು ಮೋಕ್ಷಪದವಿ. ಇಲ್ಲಿಗೆ ಹೋದಮೇಲೆ ಪುನ: ಈ ಲೋಕಕ್ಕೆ ಹಿಂತಿರುಗಿ ಬರಬೇಕಾಗಿಲ್ಲ. ಹುಟ್ಟುಸಾವುಗಳ ತಂಟೆ ಇರುವುದಿಲ್ಲ. ಇದೇ ನಿಜವಾದ ಆನಂದ. ಭಗವಂತನ ನಾಮಜಪದ ಸ್ಮರಣೆಯಿಂದ ಈ ಮೋಕ್ಷಸಾಧನೆಯನ್ನು ಮಾಡು, ಹಿಂದಿನ ಜನ್ಮಗಳಲ್ಲಿ ಮೂರ್ಖತನದಿಂದ ಮಾಡಿದ ತಪ್ಪು ಮತ್ತೆ ಮರುಕಳಿಸದಂತೆ ನೋಡಿಕೋ ಎನ್ನುತ್ತಿದ್ದಾರೆ ತಾತಯ್ಯನವರು.

ಹುಟ್ಟು ಸಾವುಗಳಿಲ್ಲದ ಮೋಕ್ಷ ಪಡೆಯಲು ಈ ಮಾನವದೇಹದಲ್ಲಿಯೇ ಸಾಧನೆ ಮಾಡಬೇಕು. ಈ ಸಾಧನೆಗೆ ಪರಮಾತ್ಮನ ನಿರಂತರ ಸ್ಮರಣೆಯೇ ಉತ್ತಮವಾದ ಸಾಧನ ವಿಧಾನವಾಗಿದೆ. ಮಾನವಜನ್ಮ ಲಭಿಸಿರುವ ಈ ಸಮಯದಲ್ಲೂ ಮೋಕ್ಷ ಸಾಧನೆಗಾಗಿ ಭಗವಂತನ ಸ್ಮರಣೆಮಾಡದೆ, ಇಹಭೋಗಗಳಿಗೆ ಆಸೆಪಟ್ಟರೇ ಯಮಪಾಶಕ್ಕೆ ತುತ್ತಾಗಬೇಕಾಗುತ್ತದೆ. ಭಕ್ತನಾಗು, ಭಜನೆ ಮಾಡು, ಹುಟ್ಟುಸಾವುಗಳಿಲ್ಲದ ಸೌಖ್ಯಸಂಪತ್ತನ್ನು ಅನುಭವಿಸು ಎಂದು ತಾತಯ್ಯನವರು ಮಾನವರನ್ನು ಈ ಬೋಧನೆಯ ಮೂಲಕ ಜಾಗೃತಗೊಳಿಸಿದ್ದಾರೆ.

ಇದನ್ನೂ ಓದಿ: ತಾತಯ್ಯ ತತ್ವಾಮೃತಂ ಅಂಕಣ: ಮೂಢಭಕ್ತಿಯಿಂದ ಶೀಘ್ರಮುಕ್ತಿ

Continue Reading

ದೇಶ

ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Ayodhya Ram Mandir: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

beautiful Ayodhya ram mandir Temple's Sanctum Sanctorum
Koo

ನವದೆಹಲಿ: ಮುಂದಿನ ತಿಂಗಳು ಲೋಕಾರ್ಪಣೆಯಾಗಲಿರುವ ಅಯೋಧ್ಯೆ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ವಿಗ್ರಹವನ್ನು ನೆಲ ಮಹಡಿಯಲ್ಲಿರುವ ‘ಗ್ರಹಗೃಹ’ದಲ್ಲಿ ಪ್ರತಿಷ್ಠಾಪಿಸಲಾಗುವುದು. ದೇವಾಲಯದ ನೆಲ ಮಹಡಿ ಬಹುತೇಕ ಸಿದ್ಧವಾಗಿದೆ. ಹಾಗಾಗಿ ‘ಪ್ರಾಣ-ಪ್ರತಿಷ್ಠಾ’ (ಪ್ರತಿಷ್ಠಾಪನಾ ಸಮಾರಂಭ)ಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಚಂಪತ್ ರಾಯ್ ಅವರು ತಿಳಿಸಿದ್ದಾರೆ. ಮುಂದಿನ ತಿಂಗಳು ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: Ram Mandir: ಜನವರಿ 22ಕ್ಕೆ ರಾಮ ಮಂದಿರ ಉದ್ಫಾಟನೆ, ಆಹ್ವಾನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

Continue Reading
Advertisement
Fans brave the dampness, waiting for India's tour of South Africa to kick off
ಕ್ರಿಕೆಟ್6 mins ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್28 mins ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ40 mins ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ1 hour ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್1 hour ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ2 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Chhattisgarh to be CM Vishnu has two deputies and Raman Singh Speaker
ದೇಶ2 hours ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Rambhapuri seer and MB Patil
ಕರ್ನಾಟಕ2 hours ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್2 hours ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ3 hours ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ6 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ9 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌