Prerane | ಕಾರ್ಪೊರೇಟ್ ಜಗತ್ತಿನಲ್ಲಿ ಅಪರಿಗ್ರಹ ಯೋಗ  - Vistara News

ಧಾರ್ಮಿಕ

Prerane | ಕಾರ್ಪೊರೇಟ್ ಜಗತ್ತಿನಲ್ಲಿ ಅಪರಿಗ್ರಹ ಯೋಗ 

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮ ಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ಇಂದು ಕಾರ್ಪೊರೇಟ್ ಜಗತ್ತಿನಲ್ಲಿನ ಲೀನ್ ಪ್ರಿನ್ಸಿಪಲ್ ತತ್ವದ ಕುರಿತು ಚರ್ಚಿಸಲಾಗಿದೆ.

VISTARANEWS.COM


on

Prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಿ ನಾಗರಾಜ
ಅಪರಿಗ್ರಹ ಎನ್ನುವುದು ಪತಂಜಲಿ ಸೂತ್ರದ ಅಷ್ಟಾಂಗಯೋಗದ “ಯಮʼʼ ಎನ್ನುವ ಮೆಟ್ಟಿಲಿನ ಒಂದು ಭಾಗ. ಪರಿಗ್ರಹ ಎಂದರೆ ಸ್ವೀಕಾರ ಮಾಡುವುದು, ತೆಗೆದುಕೊಳ್ಳುವುದು ಎಂದರ್ಥ ಮತ್ತು ದಾನವನ್ನು ಸ್ವೀಕಾರ ಮಾಡದೇ ಇರುವಿಕೆಯೇ ಅಪರಿಗ್ರಹ. ಮೇಲುನೋಟದಲ್ಲಿ ಈ ಯಮವು ಇಂದಿನ ಆಧುನಿಕ ಜೀವನದ ಚಿಂತನಾಕ್ರಮ ಹಾಗೂ ಜೀವನಶೈಲಿಯ ಚೌಕಟ್ಟಿನಲ್ಲಿ ಅಪ್ರಸ್ತುತ ಎಂದು ಅನ್ನಿಸಬಹುದೇನೋ! ಆದರೆ ಈ ಯಮದ ಹಿಂದಿರುವ ತತ್ತ್ವದ ಅಳವಡಿಕೆ ಆಧುನಿಕ ಕಾರ್ಪೊರೇಟ್‌ ಜಗತ್ತಿನಲ್ಲಿ ಅಲೆಗಳನ್ನೇ ಎಬ್ಬಿಸಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಉಂಟು ಮಾಡಿದೆ. ಆದುದರಿಂದ ಈ ವಿಷಯದ ಹಿಂದಿರುವ ತತ್ತ್ವವೇನು? ಹೇಗೆ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎನ್ನುವುದನ್ನು ಮೌಲಿಕವಾಗಿ ತಿಳಿಯಬೇಕಾಗಿದೆ.

ಮೌಲಿಕವಾಗಿ ಚಿಂತಿಸುವುದಾದರೆ, ಪತಂಜಲಿಗಳ ಪ್ರಕಾರ, ಯೋಗ ಎಂದರೆ ಚಿತ್ತವೃತ್ತಿಗಳ ನಿರೋಧವೇ ಆಗಿದೆ. ಮನಸ್ಸಿನ ಅಲೆಗಳು ಸಂಪೂರ್ಣವಾಗಿ ಶಾಂತವಾದಾಗ, ವ್ಯಕ್ತಿಯು ತನ್ನ ಮೂಲಸ್ವರೂಪವನ್ನು ದರ್ಶನ ಮಾಡ ಬಹುದು ಎನ್ನುವುದು ಈ ಸೂತ್ರದ ತಾತ್ಪರ್ಯ. ಯಾವ ಅಭ್ಯಾಸಗಳು ಚಿತ್ತವೃತ್ತಿಗಳನ್ನು ಕಡಿಮೆ ಮಾಡುತ್ತವೆಯೋ ಅವೆಲ್ಲವೂ ಯೋಗಕ್ಕೆ ಪೋಷಕ ಮತ್ತು ಯಾವ ಅಭ್ಯಾಸಗಳು ಚಿತ್ತವೃತ್ತಿಯನ್ನು ಹೆಚ್ಚಿಸುತ್ತವೆಯೋ ಅವು ಯೋಗಕ್ಕೆ ವಿರೋಧ ಎಂದು ಪರಿಗಣಿಸಬಹುದು.

ವಸ್ತುಗಳು ಅಥವಾ ಪದಾರ್ಥಗಳು ನಮ್ಮ ಮನಸ್ಸಿನ ಮೇಲೆ ಪರಿಣಾಮವನ್ನು ಬೀರಿ ಚಿತ್ತವೃತ್ತಿಗಳನ್ನು ಹೆಚ್ಚಿಸುತ್ತವೆ. ಪರಿಗ್ರಹ ಮಾಡುತ್ತಿದ್ದರೆ, ಅಂದರೆ ದಾನ ಕೊಟ್ಟ ವಸ್ತುಗಳನ್ನು ಸ್ವೀಕರಿಸುತ್ತಿದ್ದರೆ ನಮ್ಮಲ್ಲಿ ಪದಾರ್ಥಸಂಗ್ರಹವು ಜಾಸ್ತಿಯಾಗೆ ತನ್ಮೂಲಕ ಚಿತ್ತವೃತ್ತಿಗಳು ಜಾಸ್ತಿಯಾಗಿ ಯೋಗಕ್ಕೆ ಬಾಧಕವಾಗುತ್ತದೆ. ಆದುದರಿಂದ ದಾನವನ್ನು ಸ್ವೀಕರಿಸದೇ ಇರುವುದರಿಂದ, ಪದಾರ್ಥ ಸಂಗ್ರಹವು ಮಿತಿಯಲ್ಲಿದ್ದು ತನ್ಮೂಲಕ ಚಿತ್ತವೃತ್ತಿಗಳನ್ನು ಹತೋಟಿಯಲ್ಲಿರುವಂತೆ ಆಗುವುದರಿಂದ ಅಪರಿಗ್ರಹ ಎನ್ನುವ ಯಮವು ಒಂದು ಯೋಗಾಂಗವಾಗಿದೆ.

ಪದಾರ್ಥಗಳಿಗೂ ಮತ್ತು ಮನಸ್ಸಿಗೂ ಇರುವ ಸಂಬಂಧವೇನು? ಅವು ಹೇಗೆ ಚಿತ್ತವೃತ್ತಿಗಳನ್ನು ಹೆಚ್ಚಿಸುತ್ತವೆ ಎನ್ನುವುದನ್ನು ನಮ್ಮ ದೈನಂದಿನ ಜೀವನವನ್ನು ಗಮನಿಸುವ ಮೂಲಕವೇ ಅರ್ಥ ಮಾಡಿಕೊಳ್ಳಬಹುದು. ಒಂದು ಪದಾರ್ಥ ನಮ್ಮಲ್ಲಿ ಬಂದು ಸೇರಿದರೆ ಅದರ ಉಪಯೋಗ ಏನು? ಅದನ್ನು ಎಲ್ಲಿಟ್ಟಿರುವುದು? ಅದರ maintenance ಹೇಗೆ? ಮುಂತಾಗಿ ಆಲೋಚಿಸಬೇಕಾಗುತ್ತದೆ. ಕನಿಷ್ಠ ಪಕ್ಷ ಅದರ ಧೂಳು ಹೊಡೆಯುವುದಷ್ಟು ಕೆಲಸವನ್ನಂತೂ ಮಾಡಲೇಬೇಕಾಗುತ್ತದೆ. ಮನೆಯಲ್ಲಿ ವಸ್ತುಗಳು ಚೊಕ್ಕವಾಗಿದ್ದರೆ ಮನಸ್ಸು ಪ್ರಸನ್ನವಾಗಿರುತ್ತದೆ. ಶುಭ್ರವಾಗಿ, ಚೊಕ್ಕವಾಗಿ, ಅಂದವಾಗಿಟ್ಟುರುವ ಸನ್ನಿವೇಶವೇ ಮನಸ್ಸು ಅರಳುವಂತೆ ಮಾಡುತ್ತದೆ. ಆದರೆ ವಸ್ತುಗಳು ಅಸ್ತ್ಯವಸ್ತ್ಯವಾಗಿ ಹರಡಿದ್ದರೆ ಅಥವಾ ಬಿಸಾಡಲ್ಪಟ್ಟಿದ್ದರೆ ಮನಸ್ಸು ಕೆರಳಬಹುದು ಅಥವಾ ಒಂದು ಮಬ್ಬು ಕವಿಯಬಹುದು ಒಟ್ಟಿನಲ್ಲಿ ಪ್ರಸನ್ನತೆ ಹಾಳಾಗಬಹುದು.

ಒಟ್ಟಾರೆ ವಸ್ತುಗಳಿಗೂ ಮನಸ್ಥಿತಿಗೂ ಸಂಬಂಧವುಂಟು ಎನ್ನುವುದು ಸ್ಪಷ್ಟವಾಗುತ್ತದೆ. ಹೀಗೆ, ವಸ್ತುಗಳಿಗೂ ಚಿತ್ತವೃತ್ತಿಗಳಿಗೂ ಸಂಬಂಧವಿರುವುದರಿಂದ ವಸ್ತು ಸಂಗ್ರಹವನ್ನು ಕನಿಷ್ಠವಾಗಿಟ್ಟುಕೊಳ್ಳುವುದು ಚಿತ್ತವೃತ್ತಿಗಳು ಕಡಿಮೆಯಾಗುವುದಕ್ಕೆ ಕಾರಣವಾಗಿ ಯೋಗಕ್ಕೆ ಪೋಷಕವಾಗಿರುತ್ತದೆ. ಈ ಕನಿಷ್ಠ ಪದಾರ್ಥ ಸಂಗ್ರಹವೇ ಅಪರಿಗ್ರಹ ಎನ್ನುವ ಯಮದ ಹಿಂದಿರುವ ತತ್ತ್ವ. ಈ ತತ್ತ್ವವನ್ನೇ ಆಧುನಿಕ ಕಾರ್ಪೊರೇಟ್ ಜಗತ್ತು ವ್ಯಾಪಕವಾಗಿ, ಜಾಗತಿಕ ಮಟ್ಟದಲ್ಲಿ ಅಳವಡಿಸಿಕೊಂಡು ಬಹಳ ದೊಡ್ಡ ಮಟ್ಟದ ಪ್ರಯೋಜನವನ್ನು ಗಳಿಸಿರುವುದು.

ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ‘ಲೀನ್ ಪ್ರಿನ್ಸಿಪಲ್’ (Lean principles) ಬಹಳ ವ್ಯಾಪಕವಾಗಿ ರೂಢಿಯಲ್ಲಿದ್ದು ಅನೇಕ ಸಂಸ್ಥೆಗಳು ದೊಡ್ಡ ಗುಣಮಟ್ಟದ ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ತಯಾರಿಸಿ ಜಾಗತಿಕ ಮಾರುಕಟ್ಟೆಯಲ್ಲಿ ಕ್ರಾಂತಿಯನ್ನೇ ಉಂಟುಮಾಡಿವೆ. ಇಂತಹ ಸಂಸ್ಥೆಗಳಲ್ಲಿ ಅಗ್ರಗಣ್ಯವಾಗಿರುವುದು ಜಪಾನಿನಟೊಯೋಟ ಸಂಸ್ಥೆ. ಜಪಾನಿನಲ್ಲಿ ಶಿಂಟೋಯಿಸಮ್ ಹಾಗೂ ಜೆನ್ ಬುದ್ಧಿಸಂ ಗಳು ಪ್ರಚಲಿತವಿದ್ದು ಇವು ಭಾರತೀಯ ಸಂಸ್ಕೃತಿಯಿಂದ ಪ್ರಭಾವಿತವಾಗಿವೆ ಎನ್ನುವುದು ಬಹುತೇಕ ಮಾನ್ಯವಾಗಿರುವ ವಿಷಯವಾಗಿದೆ.

Prerane

ಈ ಮತಗಳ ಪ್ರಭಾವದಿಂದ ಜಪಾನ್ ಸಂಸ್ಕೃತಿಯಲ್ಲಿ ಕನಿಷ್ಠ ಪದಾರ್ಥ ಸಂಗ್ರಹ ಎನ್ನುವುದು ಬಹಳ ವ್ಯಾಪಕವಾಗಿ ರೂಢಿಯಲ್ಲಿದೆ. ಆ ಸಂಸ್ಕೃತಿಯಲ್ಲಿ ಯಾವುದೇ ವಸ್ತುವನ್ನು ಅವರು ಉಡಾಫೆಯಿಂದ ನೋಡುವುದಿಲ್ಲ. ಪ್ರತಿಯೊಂದು ಪದಾರ್ಥಕ್ಕೂ ಅದರದರ ಗೌರವವನ್ನು ಕೊಡುತ್ತಾರೆ. ಬೇರೆ ದೇಶದ ಜನರಜೊತೆ ವ್ಯವಹರಿಸಬೇಕಾದರೆ ಅವರ ಈ ವರ್ತನೆ ಹೆಚ್ಚು ಬೆಳಕಿಗೆ ಬರುತ್ತದೆ.

ಉದಾಹರಣೆಗೆ ಯಾವುದಾದರೂ use and throw pen ಅನ್ನು ಬೇರೆ ದೇಶದವನೊಬ್ಬ ಪೂರ್ಣವಾಗಿ ಬಳಸದೇ, ಅಸಡ್ಡೆಯಿಂದ ಅಥವಾ ಉಡಾಫೆಯಿಂದ ಎಸೆದರೆ, ಜಪಾನಿನವರು ಬಹಳ ಬೇಸರ ಪಟ್ಟುಕೊಂಡುಬಿಡುತ್ತಾರೆ. ಭಾರತೀಯ ಮಹರ್ಷಿ ಸಂಸ್ಕೃತಿಯ “ಪ್ರತಿಯೊಂದು ಪದಾರ್ಥವೂ ದೈವಪ್ರೀತಿಗಾಗಿ ನಿರ್ಮಿತವಾದದ್ದು” ಎನ್ನುವ ಭಾವನೆ ಶಿಂಟೋಯಿಸಮ್ ನಲ್ಲಿಯೂ ಇದೆ. ಆಧುನಿಕ ಭಾರತೀಯ ಸಮಾಜದಲ್ಲಿ ಬಹುತೇಕ ಮರೆಯಾಗಿರುವ ಈ ಭಾವನೆ ಜಪಾನಿನಲ್ಲಿ ಮಾತ್ರ ಬಹುತೇಕಸಜೀವವಾಗಿದೆ. ಆದುದರಿಂದ ಇಲ್ಲಿ ಪದಾರ್ಥಗಳನ್ನು ನೋಡುವ ನೋಟವೇ ಬೇರೆಯಾಗಿರುತ್ತದೆ. ಅವರುಗಳ ಮನೆಗೆ ಒಂದು ಹೊಸಪದಾರ್ಥ ತರಬೇಕಾದರೆ ಮನೆಯಲ್ಲಿರುವ ಯಾವವಸ್ತು ಹೊರಗೆ ಹೋಗಬೇಕು ಎಂದು ಆಲೋಚಿಸಿ ನಂತರವೇ ಒಂದು ಹೊಸಪದಾರ್ಥವನ್ನು ಖರೀದಿಸುತ್ತಾರೆ. ಹೀಗೆ ಅವರು ಕನಿಷ್ಠಪದಾರ್ಥ ಸಂಗ್ರಹವನ್ನು ಬಹಳ ಶಿಸ್ತಿನಿಂದ ಪಾಲಿಸುತ್ತಾರೆ.

ಜಪಾನ್ ಸಂಸ್ಥೆಗಳು ತಮ್ಮ ಸಂಸ್ಕೃತಿಯನ್ನು ಗೌರವದಿಂದ ಕಾಣುತ್ತಾರೆ ಮತ್ತು ಸಂಸ್ಕೃತಿಯ ಯಾವುದಾದರೂ ರೂಢಿಯು ಸಂಸ್ಥೆಗೆ ಪ್ರಯೋಜನಕಾರಿಯಾಗಿದ್ದರೆ ಅದನ್ನು ಹಿಂಜರಿಯದೇ, ಪಾಶ್ಯಾತ್ಯ ಜಗತ್ತಿನ ಅನುಮೋದನೆಗೆ ಕಾಯದೇ ಅಳವಡಿಸಿಕೊಳ್ಳುತ್ತಾರೆ. ಅಲ್ಲಿನ ಟೊಯೋಟ ಸಂಸ್ಥೆಯು ಈ ಕನಿಷ್ಠ ಪದಾರ್ಥಸಂಗ್ರಹ ಎನ್ನುವ ತತ್ತ್ವವನ್ನು ಲೀನ್ ಪ್ರಿನ್ಸಿಪಲ್ ಗಳಲ್ಲಿ ಒಂದಾದ ಶೂನ್ಯದಾಸ್ತಾನು (zero inventory) ಎನ್ನುವ ಹೆಸರಿನಲ್ಲಿ ಅಳವಡಿಸಿಕೊಂಡಿದೆ. ಉದಾಹರಣೆಗೆ ಕರ್ನಾಟಕದ ಬಿಡದಿಯಲ್ಲಿರುವ ಟೊಯೋಟ ಸಂಸ್ಥೆಯು ಕಾರು ತಯಾರಿಕೆಗೆ ಬೇಕಾದ ಬಿಡಿಭಾಗಗಳನ್ನು ತಂದಿಟ್ಟುಕೊಳ್ಳುವುದೇ ಇಲ್ಲ. ಬಿಡಿಭಾಗಗಳ ಪೂರೈಕೆದಾರರು ನಿಗಧಿತ ಸಮಯಕ್ಕೆ ಮುಂಚೆಯೇ ತಮ್ಮ ಸರಕುವಾಹನಗಳನ್ನು ತಯಾರಿಟ್ಟುಕೊಂಡು ನಿಗಧಿತ ಸಮಯಕ್ಕೆ ಸರಿಯಾಗಿ ಬಿಡಿಭಾಗಗಳನ್ನು ತಯಾರಿಕಾ ಘಟಕಕ್ಕೆ ಒದಗಿಸುತ್ತಾರೆ.

ಈ ರೂಢಿಯಿಂದ ಸಂಸ್ಥೆಯು ತಯಾರಿಕೆಯ ವೆಚ್ಚವನ್ನು ಕಡಿಮೆ ಮಾಡಿ, ಗ್ರಾಹಕರಿಗೆ ಕಡಿಮೆ ದರದಲ್ಲಿ ಕಾರುಗಳನ್ನು ಒದಗಿಸುವ ಮೂಲಕ ಮಾರುಕಟ್ಟೆಯ ದೊಡ್ಡ ಪಾಲನ್ನು ತಮ್ಮದಾಗಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ. ಶೂನ್ಯದಾಸ್ತಾನಲ್ಲದೇ, ಇನ್ನಿತರ ಲೀನ್ ರೂಢಿಗಳಿಂದಾಗಿ ತಯಾರಿಕೆಯ ಗುಣಮಟ್ಟವನ್ನು ಹೆಚ್ಚಿಸಿ, ಟೊಯೋಟ ಸಂಸ್ಥೆಯು ತಾನು ಜಾಗತಿಕ ಮಾರುಕಟ್ಟೆಗಳಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆಯುವುದಲ್ಲದೇ ಕೈಗಾರಿಕಾಡಳಿತ ಚಿಂತನೆಯಲ್ಲಿ ಒಂದು ಕ್ರಾಂತಿಯನ್ನೇ ಉಂಟುಮಾಡಿದ್ದಾರೆ. ವಿವಿಧ ಕೈಗಾರಿಕಾ ಕ್ಷೇತ್ರಗಳು, ಆಡಳಿತಗಳು, ಲೀನ್ ಪ್ರಿನ್ಸಿಪಲ್ ಗಳನ್ನು ಅಳವಡಿಸಿಕೊಳ್ಳುತ್ತವೆ. ಸಂಶೋಧನಾ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸಂಶೋಧನೆ ಮತ್ತು ಅಧ್ಯಯನ ಮಾಡುತ್ತವೆ. ಒಟ್ಟಿನಲ್ಲಿ ಲೀನ್ ಎನ್ನುವ ಪದ ಇಂದು ಒಂದು ಮಾರುಕಟ್ಟೆ ಮಂತ್ರವಾಗಿದೆ.

ಹೀಗೆ, ಹೊರನೋಟದಲ್ಲಿ ಅಪ್ರಸ್ತುತ ಎನ್ನಿಸಬಹುದಾದ ಒಂದು ಯೋಗಾಂಗವು ಆಳವಾಗಿ ರೂಢಿಸಿಕೊಂಡಲ್ಲಿ ಎಂತಹಾ ಪರಿಣಾಮವನ್ನಾದರೂ ಉಂಟು ಮಾಡಬಹುದೆಂಬುದಕ್ಕೆ ಟೊಯೋಟಸಂಸ್ಥೆಯೇ ನಿದರ್ಶನವಾಗಿದೆ. ಈ ನಿದರ್ಶನದಿಂದ ನಾವೂ ಸಹ ಯೋಗಾಂಗಗಳನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಲಿಕ್ಕೆ ಸ್ಪೂರ್ತಿಯನ್ನು ಪಡೆಯೋಣ.

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನು ಓದಿ| Prerane | ಸಪ್ತ ಪ್ರಾಣಗಳೆಂಬ ಸಪ್ತ ವೃಷಭಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಮನೆಯನ್ನು ಸ್ವಚ್ಛ ಮಾಡುವಾಗಲೂ ಪಾಲಿಸಬೇಕಾದ ವಾಸ್ತು ನಿಯಮಗಳಿವೆ. ಅದರಲ್ಲೂ ಮನೆ ಒರೆಸುವ ಕುರಿತು ವಾಸ್ತು ಶಾಸ್ತ್ರದಲ್ಲಿ (Vastu Tips) ಏನು ಹೇಳಿದೆ ಗೊತ್ತೇ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಮನೆಯ (home) ಒಳಾಂಗಣ, ಹೊರಾಂಗಣ ಸ್ವಚ್ಛತೆ (cleaning) ಬಗ್ಗೆ ನಾವೆಲ್ಲ ಅತೀ ಹೆಚ್ಚು ಕಾಳಜಿ ವಹಿಸುತ್ತೇವೆ. ಆದರೆ ಇದರಲ್ಲೂ ವಾಸ್ತು ನಿಯಮ (Vastu Tips) ಪಾಲಿಸುವುದು ಬಹು ಮುಖ್ಯ ಎಂಬುದನ್ನು ಮರೆಯಬಾರದು. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಮನೆಯಿಂದ ಕಸ (garbage) ಹೊರಗೆ ಹಾಕುವ, ಕೊಳಕು ನೀರು ಹೊರ ಚೆಲ್ಲುವ ಬಗ್ಗೆಯೂ ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಇದನ್ನು ಪಾಲಿಸಿದರೆ ಮನೆಯ ವಾಸ್ತುವಿಗೆ ಬಹಳ ಒಳ್ಳೆಯದು.

ಲಕ್ಷ್ಮಿ ದೇವಿಯು ಯಾವಾಗಲೂ ಸ್ವಚ್ಛವಾಗಿರುವ ಮನೆಗಳಲ್ಲಿ ನೆಲೆಸುತ್ತಾಳೆ. ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಒರೆಸುವುದು ನಿತ್ಯ ಮಾಡಲೇಬೇಕಾದ ಸಾಮಾನ್ಯ ವಿಷಯ. ಮನೆಯ ಕೊಳೆಯನ್ನು ನಿತ್ಯ ಶುಚಿಗೊಳಿಸುವುದರಿಂದ ಮನೆಯಿಂದ ರೋಗಗಳನ್ನು ದೂರ ಮಾಡಬಹುದು ಮತ್ತು ಲಕ್ಷ್ಮಿ ದೇವಿಯು ಮನೆಯಲ್ಲಿ ಸಂತೋಷವಾಗಿ ನೆಲೆಯಾಗುವಂತೆ ಮಾಡಬಹುದು. ವಾಸ್ತು ಶಾಸ್ತ್ರದಲ್ಲಿ ನೆಲ ಒರೆಸುವ ಕೆಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಮನೆಯ ಸ್ವಚ್ಛತೆ ಮಾಡುವ ನೆಲ ಒರೆಸುವಾಗ ಕೆಲವು ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬಾರದು.


ಮಾಪ್ ಅನ್ನು ಬಾಲ್ಕನಿಯಲ್ಲಿ ಇಡಬೇಡಿ

ಮನೆಯ ಬಾಲ್ಕನಿಯಲ್ಲಿ ಮಾಪ್ ಅನ್ನು ಎಂದಿಗೂ ನಿಲ್ಲಿಸಬಾರದು. ಮಾಪ್ ಮಾಡುವಾಗ ಬಟ್ಟೆಯನ್ನು ಹಿಸುಕಿ ಮತ್ತು ಸರಿಯಾದ ಸ್ಥಳದಲ್ಲಿ ಇರಿಸಿ. ಇದನ್ನು ಮಾಡದಿದ್ದರೆ, ಭಾರೀ ನಷ್ಟವನ್ನು ಅನುಭವಿಸಬೇಕಾಗಬಹುದು.

ತಕ್ಷಣ ಮಾಪ್ ಮಾಡಬಾರದು

ಮನೆಯಿಂದ ಯಾರಾದರೂ ಹೊರಗೆ ಹೋಗುತ್ತಿದ್ದರೆ ಅವರು ಹೋದ ತಕ್ಷಣ ನೆಲವನ್ನು ಒರೆಸಬಾರದು. ಹೀಗೆ ಮಾಡುವುದರಿಂದ ಹೊರಗೆ ಹೋದವರ ಆರೋಗ್ಯ ಕೆಡುತ್ತದೆ. ಅವರು ತಮ್ಮ ಕೆಲಸ ಅಥವಾ ವ್ಯವಹಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗಬಹುದು.

ಮುರಿದ ಬಕೆಟ್ ಬಳಸದಿರಿ

ಜ್ಯೋತಿಷ್ಯಶಾಸ್ತ್ರದ ಪ್ರಕಾರ ನೆಲವನ್ನು ಒರೆಸುವಾಗ ತಪ್ಪಾಗಿಯೂ ಮುರಿದ ಬಕೆಟ್‌ನಲ್ಲಿ ನೆಲವನ್ನು ಒರೆಸದಂತೆ ವಿಶೇಷ ಕಾಳಜಿ ವಹಿಸಿ. ಮುರಿದ ಬಕೆಟ್ ಕೆಂಪು ಬಣ್ಣದಲ್ಲಿರಬಾರದು. ಅಪ್ಪಿತಪ್ಪಿಯೂ ಮಧ್ಯಾಹ್ನ ನೆಲವನ್ನು ಒರೆಸಬಾರದು. ಬೆಳಗ್ಗೆ ನೆಲವನ್ನು ಒರೆಸುವುದು ಸರಿಯಾದ ಸಮಯ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ Vastu Tips: ಮನೆಯಲ್ಲಿ ಚಪ್ಪಲಿ, ಶೂ ಎಲ್ಲೆಂದರಲ್ಲಿ ಇಟ್ಟು ಸಂಕಷ್ಟ ಮೈಮೇಲೆ ಎಳೆದುಕೊಳ್ಳಬೇಡಿ!

ಹೊಸ್ತಿಲಲ್ಲಿ ನೀರು ಸುರಿಯಬಾರದು

ಹೆಚ್ಚಿನ ಜನರು ಇದನ್ನು ಮಾಡುತ್ತಾರೆ. ನೆಲವನ್ನು ಒರೆಸಿದ ಅನಂತರ ಅವರು ಹೊಸ್ತಿಲಲ್ಲಿ ಕೊಳಕು ನೀರನ್ನು ಸುರಿಯುತ್ತಾರೆ. ಆದರೆ ಇದನ್ನು ಮಾಡುವುದು ತುಂಬಾ ಅಶುಭವೆಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ಮನೆಯ ಹೊಸ್ತಿಲನ್ನು ಲಕ್ಷ್ಮಿ ದೇವಿಯ ಪ್ರವೇಶ ಎಂದು ಪರಿಗಣಿಸಲಾಗುತ್ತದೆ. ಅಲ್ಲಿ ಕೊಳಕು ನೀರನ್ನು ಸುರಿದರೆ ಲಕ್ಷ್ಮಿ ದೇವಿಗೆ ಅವಮಾನ ಮಾಡಿದಂತೆ. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು.

Continue Reading

ವಿಜಯನಗರ

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Vijayanagara News : ರಾತ್ರೋ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ಕಿಡಿಗೇಡಿಗಳು ಆಂಜನೇಯ ಮೂರ್ತಿಯನ್ನು ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Vijayanagara News
Koo

ವಿಜಯನಗರ: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಆಂಜನೇಯ ಪ್ರತಿಮೆ ತುಂಡಾಗಿದೆ. ವಿಜಯನಗರ (Vijayanagara News) ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಡರಾತ್ರಿ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬೀಗ ಮುರಿದು, ಒಳ ನುಗ್ಗಿರುವ ದುಷ್ಟರು ಮೂರ್ತಿಯನ್ನು ಒಡೆದು ಹಾಕಿದ್ದಾರೆ. ಮುಂಜಾನೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಹೊಸಪೇಟೆ ಡಿವೈಎಸ್‌ಪಿ ಶರಣಬಸವೇಶ್ವರ, ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು

ದಾವಣಗೆರೆ/ತುಮಕೂರು: ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ತುಮಕೂರಿನ 2 ಸೂಪರ್ ಮಾರ್ಕೆಟ್‌ಗಳಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಶ್ರೀನಿವಾಸ ಹೈಪರ್ ಮಾರ್ಕೆಟ್ ಹಾಗೂ ಜಿಎಮ್‌ಆರ್ ಮೆಗಾ ಮಾರ್ಟ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಜಿಎಮ್‌ಆರ್ ಮೆಗಾ ಮಾರ್ಟ್‌ನ ಬೀಗ ಮುರಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕಳ್ಳತನ ತಡೆಯಲು ಬಂದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿ ಮಾಲೀಕರನ್ನೇ ಹೆದರಿಸಿ ಕಳ್ಳರು ಪರಾರಿಯಾಗಿದ್ದಾರೆ.

theft Case

50 ಸಾವಿರ ರೂ. ನಗದು ಹಾಗೂ 10ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಕದ್ದಿದ್ದು, ಜತೆಗೆ ಸಿಸಿಟಿವಿಯ ಡಿವಿಆರ್ ಕದ್ದಿದ್ದಾರೆ. ಸುಮಾರು ನಾಲ್ಕೈದು ಕಳ್ಳರ ತಂಡ ಲಗ್ಗೆ ಇಟ್ಟ ಪೂರ್ತಿ ದೃಶ್ಯವು ಮತ್ತೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದ ಭಕ್ತರ ಮೇಲೆ ಹಿಂಬದಿಯಿಂದ ಬಂದ ಲಾರಿಯೊಂದು (Road Accident) ಹರಿದಿದೆ. ಪರಿಣಾಮ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Huligemma Temple Road Accident
Koo

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ (Huligemma Temple) ನಿಮಿತ್ತ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಲಾರಿಯೊಂದು (Lorry Hit) ಹರಿದಿದೆ. ಪಾದಯಾತ್ರೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್‌ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್‌ ಫ್ಲೈಓವರ್‌ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

ಬಿಸಿ ಗಾಳಿ ಶಾಖಕ್ಕೆ ತತ್ತರಿಸಿದ ಬಿಹಾರ; ಎರಡೇ ಗಂಟೆಗಳಲ್ಲಿ 16 ಮಂದಿ ಸಾವು

ಪಾಟ್ನಾ: ಬಿಹಾರ(Bihar)ದಲ್ಲಿ ಬಿಸಿ ಗಾಳಿ(Heat Wave) ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಇದರ ಪರಿಣಾಮವಾಗಿ ಕೇವಲ ಎರಡೇ ಗಂಟೆಗಳಲ್ಲಿ ಬಿಸಿಗಾಳಿ ಶಾಖಕ್ಕೆ ಬರೋಬ್ಬರಿ 16 ಜನ ಬಲಿಯಾಗಿದ್ದಾರೆ. ಔರಂಗಾಬಾದ್‌ ಜಿಲ್ಲಾಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನಗರದ ಉಷ್ಣಾಂಶ 48.2 ಡಿಗ್ರಿಗೆ ಏರಿಕೆ ಆಗಿದೆ. ಇದು ಬಿಹಾರದಲ್ಲೇ ಅತಿ ಹೆಚ್ಚ ಉಷ್ಣಾಂಶ ಹೊಂದಿರುವ ನಗರವಾಗಿದೆ.

ಈ ಕುರಿತು ಔರಂಗಾಬಾದ್‌ ಜಿಲ್ಲಾಸ್ಪತ್ರೆ ವೈದ್ಯರು ಪ್ರತಿಕ್ರಿಯಿಸಿದ್ದು, ತೀವ್ರ ಬಿಸಿ ಗಾಳಿಗೆ ತುತ್ತಾಗಿ ಅಸ್ವಸ್ಥಗೊಂಡಿರುವ 35 ಕ್ಕೂ ಅಧಿಕ ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ದುರಾದೃಷ್ಟವಶಾತ್‌ 16ಕ್ಕೂ ಅಧಿಕ ಜನ ಬಿಸಿಗಾಳಿ ಶಾಖಕ್ಕೆ ಬಲಿಯಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ನಮ್ಮ ಸಾಕಷ್ಟು ತಜ್ಞ ವೈದ್ಯರಿದ್ದಾರೆ. ಔಷಧ, ಐಸ್‌ ಪ್ಯಾಕ್‌ ಮತ್ತು ಅನೇಕ ಕೂಲರ್‌ಗಳ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಗಾಳಿ ಸಮಸ್ಯೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಬಿಹಾರ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳನ್ನು ಜೂ.8ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಕೆಲವು ದಿನಗಳಿಂದ ಶಾಲೆಗಳಲ್ಲಿ ಬಿಸಿ ಗಾಳಿ ಶಾಖಕ್ಕೆ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆ ವರದಿ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಬಿಹಾರದ ಶೇಖ್‌ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯವಾಗಿ ಮಂಗಳವಾರ ಗರಿಷ್ಠ ತಾಪಮಾನ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಕ್ಕಳು ಪ್ರಜ್ಞೆ ತಪ್ಪಿರುವ ವೀಡಿಯೊಗಳು ವೈರಲ್ ಆಗಿದ್ದು, ಶಾಲೆಯ ವಿದ್ಯಾರ್ಥಿಗಳು ತುಂಬಾ ದಣಿದಿದ್ದಾರೆ ಎಂದು ಕಂಡುಬಂದಿದೆ. ಶಿಕ್ಷಕರು ಅವರಿಗೆ ನೀರು ಒದಗಿಸುವ ಮೂಲಕ ಮತ್ತು ಅವರಿಗೆ ಗಾಳಿ ಬೀಸುವ ಮೂಲಕ ಸಹಾಯ ಮಾಡಲು ಪ್ರಯತ್ನಿಸಿದರು. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಿಗೆ ಸಲೈನ್ ಚುಚ್ಚುಮದ್ದು ನೀಡಲಾಗಿದೆ. ಇನ್ನು ವಿದ್ಯಾರ್ಥಿಗಳು ಮಾತ್ರವಲ್ಲದೇ ಶಿಕ್ಷಕರೂ ಬಿಸಿಗಾಳಿಯ ತಾಪಮಾನಕ್ಕೆ ಪ್ರಜ್ಞೆ ತಪ್ಪಿ ಬೀಳುತ್ತಿರುವ ಘಟನೆಯೂ ವರದಿ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರ್ಮಿಕ

Vastu Tips: ಮನೆಯಲ್ಲಿ ಚಪ್ಪಲಿ, ಶೂ ಎಲ್ಲೆಂದರಲ್ಲಿ ಇಟ್ಟು ಸಂಕಷ್ಟ ಮೈಮೇಲೆ ಎಳೆದುಕೊಳ್ಳಬೇಡಿ!

ವಾಸ್ತು ನಿಯಮಗಳನ್ನು (Vastu Tips) ಪಾಲಿಸುವುದು ಮನೆಯ ಸಮೃದ್ಧಿಗಾಗಿ ಒಳ್ಳೆಯದು. ಇದರಲ್ಲಿ ಕೆಲವೊಮ್ಮೆ ವೈಜ್ಞಾನಿಕ ಅಂಶಗಳು ಅಡಕವಾಗಿರುತ್ತದೆ. ಶೂ, ಚಪ್ಪಲಿಗಳನ್ನು ಇಡುವ ಬಗ್ಗೆಯೂ ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಅವುಗಳನ್ನು ಅನುಸರಿಸಿದರೆ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಯಾಗುವಂತೆ ಮಾಡಬಹುದು.

VISTARANEWS.COM


on

By

Vastu Tips
Koo

ಮನೆಯ (home) ಹೊರಗೆ ಸುತ್ತಾಡಲು ಬಳಸುವ ಬೂಟು ಮತ್ತು ಚಪ್ಪಲಿಗಳನ್ನು (shoes and slippers) ಮನೆಯೊಳಗೇ ಕೊಂಡೊಯ್ಯಬಾರದು ಎನ್ನುತ್ತಾರೆ ಹಿರಿಯರು. ಅಲ್ಲದೇ ಮನೆಯ ಮೆಟ್ಟಿಲ ಬಳಿ ಚಪ್ಪಲಿ ಇಡಬಾರದು, ಅಡ್ಡಾದಿಡ್ಡಿಯಾಗಿ ಚಪ್ಪಲಿಗಳನ್ನು ಇರಿಸಬಾರದು ಎನ್ನುವ ಶಾಸ್ತ್ರವೇ (Vastu Tips) ಇದೆ. ನಾವು ಮಾಡುವ ಸಣ್ಣಪುಟ್ಟ ಅಜಾಗರೂಕತೆಗಳು ಮನೆಯ ವಾಸ್ತುವಿಗೆ ದೋಷ ಉಂಟು ಮಾಡುತ್ತದೆ. ಚಪ್ಪಲಿಯನ್ನು ಇಡುವ ವಿಚಾರದಲ್ಲೂ ಇದು ಅನ್ವಯವಾಗುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ.

ಶೂ ಮತ್ತು ಚಪ್ಪಲಿಗಳನ್ನು ಇಡಲು ವಾಸ್ತು ಸಲಹೆಗಳಿವೆ. ಬೂಟು ಮತ್ತು ಚಪ್ಪಲಿಗಳು ಅಲ್ಲೊಂದು ಇಲ್ಲೊಂದು ಬಿದ್ದಿರುವ ಮನೆಗಳಲ್ಲಿ ಎಂದಿಗೂ ಸಮೃದ್ಧಿ ಇರುವುದಿಲ್ಲ. ಇದರಿಂದ ವಾಸ್ತು ದೋಷವನ್ನು ಎದುರಿಸಬೇಕಾಗಬಹುದು ಎನ್ನುತ್ತದೆ ವಾಸ್ತುಶಾಸ್ತ್ರ.

ಅನೇಕ ಜನರು ತಮ್ಮ ಬೂಟು ಮತ್ತು ಚಪ್ಪಲಿಗಳನ್ನು ಮನೆಯಲ್ಲಿ ಎಲ್ಲಿಯಾದರೂ ತೆಗೆಯುತ್ತಾರೆ ಅಥವಾ ಅಲ್ಲೇ ಇಟ್ಟು ಬಿಡುತ್ತಾರೆ. ಇದನ್ನು ಮಾಡಲೇಬಾರದು. ಹೀಗೆ ಮಾಡುವುದು ನಿಮಗೂ, ಮನೆಗೂ ಒಳ್ಳೆಯದಲ್ಲ.

ಸುಖ, ಶಾಂತಿ, ಸಮೃದ್ಧಿಗಾಗಿ ಮನೆಯಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ಬಾರಿ ನಾವು ಚಪ್ಪಲಿಗಳನ್ನು ಇಡುವ ವಿಚಾರದಲ್ಲಿ ವಾಸ್ತು ನಿಯಮಗಳ ಏನು ಹೇಳುತ್ತವೆ ಎಂಬುದನ್ನು ತಿಳಿದುಕೊಳ್ಳೋಣ.


ಯಾವ ದಿಕ್ಕಿನಲ್ಲಿ ಇಡಬಾರದು?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಉತ್ತರ ಮತ್ತು ಪೂರ್ವ ದಿಕ್ಕಿನಲ್ಲಿ ಪಾದರಕ್ಷೆ ಮತ್ತು ಚಪ್ಪಲಿಗಳನ್ನು ಇಡಬಾರದು. ಈ ದಿಕ್ಕಿನಲ್ಲಿ ಬೂಟು ಮತ್ತು ಚಪ್ಪಲಿಗಳನ್ನು ಇಟ್ಟುಕೊಳ್ಳುವುದರಿಂದ ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.

ಎಲ್ಲಿ ಇಡಬೇಕು?

ಯಾವಾಗಲೂ ಬೂಟು ಮತ್ತು ಚಪ್ಪಲಿಗಳನ್ನು ಮುಚ್ಚಿರುವ ಬೀರುಗಳಲ್ಲಿ ಇಡಬೇಕು ಎನ್ನುತ್ತದೆ ವಾಸ್ತು ನಿಯಮ. ಚಪ್ಪಲಿಗಳು ನೆಗೆಟಿವ್ ಎನರ್ಜಿಯನ್ನು ಹೆಚ್ಚಿಸುವುದರಿಂದ ತೆರೆದ ಜಾಗದಲ್ಲಿ, ಮನೆಯ ಮೆಟ್ಟಿಲುಗಳ ಬಳಿ ಇಡಬಾರದು.

ಎಲ್ಲಿ ತೆಗೆಯಬಾರದು?

ಮನೆಯ ಬಾಗಿಲಿನ ಬಳಿ ಶೂ ಮತ್ತು ಚಪ್ಪಲಿಗಳನ್ನು ಬಿಚ್ಚಿಡುವ ಅಭ್ಯಾಸ ಹೆಚ್ಚಿನವರಿಗೆ ಇದೆ. ಈ ಅಭ್ಯಾಸ ಇದ್ದರೆ ಕೂಡಲೇ ಬದಲಾಯಿಸಿಕೊಳ್ಳಿ. ವಾಸ್ತು ನಿಯಮದ ಪ್ರಕಾರ ಮನೆಯ ಬಾಗಿಲ ಬಳಿ ಶೂ, ಚಪ್ಪಲಿಗಳನ್ನು ಎಂದಿಗೂ ತೆಗೆಯಬೇಡಿ. ಹೀಗೆ ಮಾಡುವುದರಿಂದ ಕೌಟುಂಬಿಕ ಕಲಹದ ಸಾಧ್ಯತೆ ಹೆಚ್ಚುತ್ತದೆ. ಕುಟುಂಬ ಸದಸ್ಯರ ನಡುವೆ ಜಗಳಗಳು ಉಂಟಾಗಬಹುದು.

ಇದನ್ನೂ ಓದಿ: Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು


ಶೂ ರಾಕ್ ಎಲ್ಲಿ ಇಡಬೇಕು?

ಶೂ ರಾಕ್ ಗಳನ್ನು ಯಾವಾಗಲೂ ಮನೆಯ ಹೊರಗೆ ಇಡಬೇಕು. ಮನೆಯೊಳಗೆ ಶೂ ರಾಕ್ ಗಳನ್ನು ಇಡುವುದರಿಂದ ಪತಿ-ಪತ್ನಿಯರ ನಡುವೆ ಘರ್ಷಣೆಗಳು ಹೆಚ್ಚಾಗುತ್ತವೆ.

ಹೇಗಿಡಬೇಕು?

ಶೂ ಮತ್ತು ಚಪ್ಪಲಿಗಳನ್ನು ಎಂದಿಗೂ ತಲೆಕೆಳಗಾಗಿ ಇಡಬಾರದು. ಯಾಕೆಂದರೆ ಇದು ಮನೆಯಲ್ಲಿ ರೋಗಗಳು ನೆಲೆಸುವಂತೆ ಮಾಡುತ್ತದೆ ಎನ್ನುತ್ತದೆ ವಾಸ್ತು ನಿಯಮ.

Continue Reading
Advertisement
Modi Meditation
ಪ್ರಮುಖ ಸುದ್ದಿ57 seconds ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ16 mins ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ27 mins ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Vastu Tips
ಧಾರ್ಮಿಕ50 mins ago

Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

T20 World Cup
ಕ್ರೀಡೆ50 mins ago

T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

Lok Sabha Election
ದೇಶ54 mins ago

Lok Sabha Election: ನಾಳೆ ಕೊನೆಯ ಹಂತದ ಮತದಾನ; ಮೋದಿ, ಕಂಗನಾ ಸೇರಿ ಹಲವರ ಭವಿಷ್ಯ ನಿರ್ಧಾರ

Shocking Video
ವೈರಲ್ ನ್ಯೂಸ್1 hour ago

Shocking Video: ಮಗುವನ್ನು ಎತ್ತಿಕೊಂಡು ಹೋಗಲು ಕೋತಿಯ ಶತಪ್ರಯತ್ನ; ಮುಂದೇನಾಯ್ತು?

MLC Election
ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್‌ ಚುನಾವಣೆ; ಯತೀಂದ್ರ ಸಿದ್ದರಾಮಯ್ಯ ಅವಿರೋಧ ಆಯ್ಕೆ

Karnataka Weather Forecast
ಮಳೆ1 hour ago

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

World No Tobacco Day
ಆರೋಗ್ಯ2 hours ago

World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌