prerane spiritual column by sadhguru jaggi vasudev about The first step on the road to victory Prerane : ಗೆಲುವಿನ ಹಾದಿಯಲ್ಲಿ ಮೊದಲ ಹೆಜ್ಜೆ ಯಾವುದು? ಸದ್ಗುರು ಉತ್ತರ ಹೀಗಿದೆ! Vistara News

ಧಾರ್ಮಿಕ

Prerane : ಗೆಲುವಿನ ಹಾದಿಯಲ್ಲಿ ಮೊದಲ ಹೆಜ್ಜೆ ಯಾವುದು? ಸದ್ಗುರು ಉತ್ತರ ಹೀಗಿದೆ!

ನಿಮ್ಮ ಇಂದಿನ ಜೀವನಕ್ಕೆ ನೀವೇ ಜವಾಬ್ದಾರರು ಎಂಬುದನ್ನು ನೀವು ಒಪ್ಪಿಕೊಂಡಾಗ ಗೆಲುವಿನ ಹಾದಿಯಲ್ಲಿ ನೀವು ಮೊದಲ ಪ್ರಮುಖ ಹೆಜ್ಜೆಯನ್ನಿಟ್ಟಂತೆ ಎನ್ನುತ್ತಾರೆ ಸದ್ಗುರು. ಅವರ ವಿಶೇಷ ಲೇಖನ ಇಂದಿನ ಪ್ರೇರಣೆ (Prerane) ಅಂಕಣದಲ್ಲಿದೆ.

VISTARANEWS.COM


on

sadhguru jaggi vasudev
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸದ್ಗುರು ಜಗ್ಗಿ ವಾಸುದೇವ್‌
ನಿಮ್ಮ ಜೀವನವನ್ನು ನೀವು ಹೇಗೆ ಅನುಭವಿಸುತ್ತಿದ್ದೀರಿ ಎಂಬುದನ್ನು ಗಮನಿಸಿ ನೋಡಿದ್ದೀರಾ? ನೀವು ಯಾರೇ ಆಗಿರಲಿ, ಏನೇ ಆಗಿರಲಿ, ನಿಮ್ಮಲ್ಲಿರುವ ಯಾವುದೋ ಒಂದು ಅಜ್ಞಾತ ಭಾವ, ನೀವೀಗ ಇರುವುದಕ್ಕಿಂತ ಸ್ವಲ್ಪ ಹೆಚ್ಚಾಗಿರಬೇಕೆಂದು ಒತ್ತಾಯಿಸುತ್ತಲೇ ಇರುತ್ತದೆ, ಅಲ್ಲವೆ? ಇದು ನೀವು ಅರ್ಥಮಾಡಿಕೊಳ್ಳಬೇಕಾಗಿರುವ ಮೂಲಭೂತ ರಹಸ್ಯ. ನೀವು ಹಣಸಂಗ್ರಹಣೆಯಲ್ಲಿ ನಿಸ್ಸೀಮರಾದರೆ, ಹೆಚ್ಚು ಹಣ, ಅಧಿಕಾರಪ್ರಿಯರಾದರೆ ಉನ್ನತ ಪದವಿಗಳು, ಆಸ್ತಿಪಾಸ್ತಿ ಸಂಪಾದನೆ ಪ್ರಿಯವಾದರೆ, ಇನ್ನಷ್ಟು ಸ್ವತ್ತು-ಇದನ್ನಲ್ಲವೇ ನೀವು ಬಯಸುವುದು.

ಪ್ರೀತಿಯೆಂದರೂ ಇನ್ನಷ್ಟು ಬೇಕೆನ್ನುತ್ತೀರ. ಜ್ಞಾನವೆಂದರೆ ಹೆಚ್ಚೆಚ್ಚು ಜ್ಞಾನಿಗಳಾಗಬೇಕೆಂದು ಬಯಸುತ್ತೀರಿ. ಯಾವುದೇ ಆದರೂ ನಿರ್ದಿಷ್ಟ ಮಿತಿಯಲ್ಲಿ ನಿಮ್ಮ ಆಸೆ ನಿಲ್ಲುವುದಿಲ್ಲ. ವಾಹನದಲ್ಲಿ ಹೋಗುತ್ತಿರುವಿರಿ. ರಸ್ತೆಯಲ್ಲೊಂದು ಗುಂಡಿಯನ್ನು ಗಮನಿಸುತ್ತೀರಿ. ಅದನ್ನು ತಪ್ಪಿಸಿ ಹೋಗಬೇಕೆಂದರೆ, ರಸ್ತೆಯ ಬೇರೆ ಭಾಗಗಳನ್ನು ಗಮನಿಸ ಬೇಕಾಗುತ್ತದೆ. ಆದರೆ? ಗುಂಡಿಯನ್ನೇ ಗಮನಿಸುತ್ತಾ ಅದರಲ್ಲಿಯೇ ಹೋಗಿ ಸಿಕ್ಕಿಬೀಳುತ್ತೀರಿ.

prerane

ಇದು ಮನಸ್ಸಿನ ವೈಚಿತ್ರ್ಯ, ಯಾವುದು ಮನಸ್ಸಿನಲ್ಲಿ ಬೇಡವೆಂದು ನೆನೆಯುತ್ತೇವೆಯೋ ಅದೇ ನಡೆಯುತ್ತದೆ. ಒಂದು ಪರೀಕ್ಷೆ ಮಾಡೋಣ, ಐದು ನಿಮಿಷಗಳವರೆಗೆ ಕೋತಿಯನ್ನು ಕುರಿತು ನೆನೆಯಬಾರದೆಂದು, ಮನಸ್ಸಿನಲ್ಲಿ ಅಂದುಕೊಳ್ಳಿ. ಏನು ನಡೆಯುತ್ತದೆಂಬುದನ್ನು ಗಮನಿಸಿ. ಪೂರಾ ಐದು ನಿಮಿಷಗಳೂ ಕೋತಿಗಳೇ ನಿಮ್ಮ ಮನಸ್ಸನ್ನು ಆಕ್ರಮಿಸಿಬಿಡುತ್ತವೆ.

ಹಾಗೆಯೇ, ಒಂದು ಕುಟುಂಬದಲ್ಲಿ ಒಂದು ಸಮಸ್ಯೆಯುಂಟಾದರೆ ಅದನ್ನೇ ಕುರಿತು ಯೋಚಿಸುತ್ತಾ ಮುಳುಗಿದರೆ ಮುಂದೆ ಮಾಡಬೇಕಾಗಿರುವುದನ್ನು ಮಾಡಲಾರದೆ ಕೆಲಸವೆಲ್ಲವೂ ನಿಂತುಹೋಗುತ್ತದೆ. ಇರುವುದು ಸಾಲದೆ, ಮತ್ತಷ್ಟು ತೊಂದರೆಗಳು ಬಂದುಬಿಡುತ್ತವೆ. ತಲೆಯೆತ್ತಲು ಸಾಧ್ಯವಾಗುವುದೇ ಇಲ್ಲ.

ಯಾವುದೇ ಕಷ್ಟ ಬಂದರೂ ನಂಬಿಕೆಯನ್ನು ಬಿಡದೆ, ಮಾಡಬೇಕಾಗಿರುವುದನ್ನು ಗಮನವಿಟ್ಟು ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ ಕುಟುಂಬ ಮತ್ತಷ್ಟು ಏಕೆ ಕೆಡುತ್ತದೆ?

ಸಮಸ್ಯೆಗಳು ತಾವಾಗಿಯೇ ಬರುವುದಿಲ್ಲ. ನಿಮಗೆ ತಿಳಿಯದಂತೆ ಅವುಗಳನ್ನು ನೀವೇ ಸೃಷ್ಟಿಸಿಕೊಳ್ಳುತ್ತೀರಿ. ಎಡವಿದ ಕಾಲಿನತ್ತ, ತೊಂದರೆಯ ಕುಟುಂಬದತ್ತ ಗಮನವಿಡದೆ, ಮಾಡಬೇಕಾಗಿರುವುದನ್ನು ಸರಿಯಾದ ರೀತಿಯಲ್ಲಿ ಮಾಡಲು ಯೋಚಿಸಿ. ಅದನ್ನು ಪೂರ್ಣವಾಗಿ ಮನಸ್ಸಿಟ್ಟು ತಲೀನತೆಯಿಂದ ಮಾಡಿ ನೋಡಿ. ಈ ಭಯ ಅರ್ಥವಿಲ್ಲದ್ದೆಂದು ಆಗ ತಿಳಿದುಬರುತ್ತದೆ.

ಹೀಗೆ ಯಾವಾಗಲೂ ನಿಮ್ಮ ಮನಸ್ಸಿನಲ್ಲಿ, ವಿಸ್ತರಿಸುವಿಕೆಗೆ ಇನ್ನೊಂದು ಮಾರ್ಗವು ಇದ್ದೇ ಇರುತ್ತದೆಯಲ್ಲವೆ? ಇನ್ನೂ ಸ್ವಲ್ಪ, ಇನ್ನೂ ಸ್ವಲ್ಪ ಬೇಕೆಂಬ ಆಸೆ, ನೀವಿರುವ ಸ್ಥಿತಿಯಿಂದ ಮತ್ತಷ್ಟು ಮೇಲಕ್ಕೆ, ವಿಸ್ತಾರಕ್ಕೆ ಹೋಗಬೇಕೆಂಬ ಆಸೆ.
ನಿಮ್ಮನ್ನು ಇಡೀ ಭೂಮಂಡಲಕ್ಕೆ ರಾಜನನ್ನಾಗಿಯೋ ರಾಣಿಯನ್ನಾಗಿಯೋ ಮಾಡಿಬಿಟ್ಟೆವೆಂದು ಭಾವಿಸೋಣ.
ನೀವು ಅದರಿಂದಲಾದರೂ ತೃಪ್ತರಾಗುತ್ತೀರಾ? ‘ಅದು ಸರಿ, ಆ ಚಂದ್ರ….’ಎಂದಲ್ಲವೇ ನೀವು ಯೋಚನೆ ಮಾಡುವುದು? ಗಮನವಿಟ್ಟು ನೋಡಿ. ಹಾಗಾದರೆ ನೀವು ನಿಜವಾಗಿಯೂ ಬಯಸುವುದು ಏನು? ಹಣವೆ, ಸ್ವತ್ತೆ, ಪ್ರೀತಿಯೆ, ಜ್ಞಾನವೆ? ನಿಮಗೆ ಬೇಕಾಗಿರುವುದಾದರೂ ಏನು? ವಾಸ್ತವದಲ್ಲಿ ನೀವು ಹುಡುಕುತ್ತಿರುವುದೇನು? ವಿಸ್ತಾರವಾಗುತ್ತಾ ಹೋಗುವುದು ಮಾತ್ರ, ಅಲ್ಲವೆ?

ಈಗಿರುವುದಕ್ಕಿಂತ ಸ್ವಲ್ಪ ಹೆಚ್ಚಿನದನ್ನೇ ನೀವು ಬಯಸುತ್ತೀರಿ. ನೀವು ಜೀವನವೆಂಬ ಮರದಲ್ಲಿ, ಪ್ರತಿದಿನ ಮೇಲಕ್ಕೆ ಏರುತ್ತಾ, ಅಲ್ಲಿ ದೊರೆಯುವ ಫಲವನ್ನು ಸವಿಯಬೇಕೆಂದು ಎಣಿಸುತ್ತಿದ್ದೀರಿ, ಅಲ್ಲವೆ? ಹಾಗಾದರೆ ನೀವು ಹುಡುಕುತ್ತಿರುವ ವಿಸ್ತಾರ, ಯಾವ ಅಳತೆಯದಾಗಿದ್ದರೆ ಸಾಕೆಂದು ನಿಶ್ಚಯಿಸಿಕೊಳ್ಳುತ್ತೀರಿ? ಎಷ್ಟು ವಿಸ್ತಾರವಾದರೆ ಇದು ನಿಲ್ಲುತ್ತದೆ? ಅದು ಏನು? ಎಲ್ಲಿದೆ? ಅದರ ಗಡಿ ಏನಾದರೂ ತಿಳಿಯುತ್ತದೆಯೆ? ನೋಡಿ, ನೀವು ಎಲ್ಲೆಯಿಲ್ಲದ ವಿಸ್ತಾರವನ್ನು ಆಸೆಪಡುತ್ತಿದ್ದೀರಿ. ಎಲ್ಲೆ ಮೀರಿದ ವಿಸ್ತಾರವನ್ನು ಬಯಸುತ್ತಿದ್ದೀರಿ. ಅದನ್ನು ಪಡೆದು ಅನುಭವಿಸಲು ನಿಮ್ಮ ಬಳಿ ಇರುವ ಸಾಧನಗಳಾದರೂ ಯಾವುವು?

ಹೀಗೆ ಜೀವನದಲ್ಲಿ ಮುನ್ನಡೆದು ಉನ್ನತ ಗುರಿಗಳನ್ನು ಸಾಧಿಸಬೇಕಾದರೆ, ಎಲ್ಲವನ್ನು ಅನುಭವಿಸಬೇಕಾದರೆ, ಎಲ್ಲೆಗೆ ಸೀಮಿತವಾಗಿರುವ ನಮ್ಮ ಐದು ಪಂಚೇಂದ್ರಿಯಗಳನ್ನು ದಾಟಿ ಹೋಗಬೇಕು.

sadhguru jaggi vasudev

ಈ ಪಂಚೇಂದ್ರಿಯಗಳನ್ನು ಅರ್ಥಮಾಡಿಕೊಂಡು, ಅವನ್ನು ದಾಟಿ ಹೋಗಲು, ನಿಮ್ಮ ಗ್ರಹಿಕೆಯ ಸಾಮರ್ಥ್ಯ ಉನ್ನತ ಮಟ್ಟಕ್ಕೇರಬೇಕು. ಗ್ರಹಿಕೆ ಉನ್ನತ ಮಟ್ಟಕ್ಕೇರಬೇಕಾದರೆ, ಮೊತ್ತಮೊದಲು ನಿಮ್ಮ ಗ್ರಹಿಕೆಯಲ್ಲಿರುವ ದೋಷಕ್ಕೆ ಕಾರಣವೇನೆಂದು ಮತ್ತು ಸರಿಯಾದ ಅರ್ಥವನ್ನು ಗ್ರಹಿಸುವುದಕ್ಕೆ ಏನು ಅಡ್ಡಿಯಾಗುತ್ತಿದೆ, ಎಂಬುದನ್ನು ತಿಳಿದುಕೊಳ್ಳಬೇಕು.

ಜೀವನದ ಉನ್ನತ ರಹಸ್ಯಗಳು ಕೆಲವರಿಗೆ ಮಾತ್ರ ಸುಲಭವಾಗಿ ಅರ್ಥವಾಗುತ್ತದೆ, ಮತ್ತೆ ಕೆಲವರಿಗೆ ಅರ್ಥವಾಗದ ಒಗಟಾಗಿ ಪರಿಣಮಿಸುವುದು ಏಕೆ? ಇದಕ್ಕೆ ಕಾರಣ ಅವರು ಬೇರೆ ರೀತಿಯಲ್ಲಿ ಹುಟ್ಟಿರಬಹುದೆಂದು ಹೇಳಲಾಗದು.
ಇದಕ್ಕಿರುವ ಕಾರಣವೆಂದರೆ, ಈಗ ನಾವಿರುವ ರೀತಿಯಲ್ಲಿ ಕೆಲವು ಮೂಲಭೂತವಾದ ನ್ಯೂನತೆಗಳನ್ನು ಸೃಷ್ಟಿಸಿಕೊಂಡಿದ್ದೇವೆ. ಹಾಗೆ, ನಿಮಗೆ ನೀವಾಗಿಯೇ ಮಾಡಿಕೊಂಡ ಅಡಚಣೆಗಳು ಯಾವುವು? ಅಂತಹ ಅಡಚಣೆಗಳನ್ನು ಹೋಗಲಾಡಿಸುವುದು ಹೇಗೆ? ಅದಕ್ಕೆ ಅಗತ್ಯವಾದ ತಂತ್ರಜ್ಞಾನ ಯಾವುದು? ಆ ನಿಟ್ಟಿನಲ್ಲಿ ಮಾರ್ಗೋಪಾಯಗಳನ್ನು ಒಂದೊಂದಾಗಿ ನೋಡೋಣ.

ಒಬ್ಬ ಹೊಸದಾದ ಡಾಕ್ಟರಿದ್ದರು. ಅವರು ಪರೀಕ್ಷೆ ಪಾಸು ಮಾಡಬೇಕೆಂದು ಓದಿದವರಲ್ಲ. ಒಬ್ಬ ಒಳ್ಳೆಯ ಡಾಕ್ಟರಾಗಬೇಕೆಂದು, ಏನಾದರೂ ಒಳ್ಳೆಯದನ್ನು ಮಾಡಬೇಕೆಂಬ ಗುರಿಯಿದ್ದವರು. ಅವರ ಬಳಿಗೆ ರೋಗಿಯೊಬ್ಬ ಬಂದ.

ಆ ರೋಗಿಯದು, ತತ್‌ಕ್ಷಣ ಗಮನ ನೀಡದಿದ್ದರೆ, ಪ್ರಾಣ ಹೋಗಿಬಿಡುವಂತಹ ಪರಿಸ್ಥಿತಿ. ಈ ಡಾಕ್ಟರು ಎಲ್ಲವನ್ನೂ ಶ್ರದ್ಧೆಯಿಂದ ಕೇಳಿ, ಸಮಸ್ಯೆ ಏನೆಂಬುದನ್ನು ಕಂಡುಹಿಡಿದು, ಅದಕ್ಕೆ ಸರಿಯಾದ ಚಿಕಿತ್ಸೆಯನ್ನು ಮಾಡಿದರು. ಆ ರೋಗಿ ಎರಡೇ ದಿನಗಳಲ್ಲಿ ಎದ್ದು ಕುಳಿತುಕೊಳ್ಳುವಂತಾದರು. ಒಂದೇ ವಾರದಲ್ಲಿ ಓಡಾಡುವಂತೆಯೂ ಆಯಿತು.
‘ಅವರು ಸಾಯುವ ಸ್ಥಿತಿಯಲ್ಲಿದ್ದರು. ಬೇರೆ ಯಾವ ಡಾಕ್ಟರ ಬಳಿ ಹೋಗಿದ್ದರೂ ಬದುಕುತ್ತಿರಲಿಲ್ಲ. ನಾನು ಸರಿಯಾಗಿ ಓದಿಕೊಂಡು ಎಲ್ಲವನ್ನು ಸರಿಯಾಗಿ ಮಾಡಿದ್ದರಿಂದ ಈಗವರು ಜೀವಂತವಾಗಿದ್ದಾರೆ. ಇವರಿಗೆ ಪ್ರಾಣವನ್ನು ಕೊಟ್ಟವನು ನಾನೇ’, ಎಂದುಕೊಂಡರು.

ಇನ್ನೊಂದು ದಿನ ಅವರ ಬಳಿಗೆ ಮತ್ತೊಬ್ಬ ರೋಗಿ ಬಂದರು. ಅವರ ದೇಹಸ್ಥಿತಿಯೂ, ಒಡನೆಯೇ ಗಮನ ನೀಡದಿದ್ದರೆ, ಪ್ರಾಣ ಹೋಗಿಬಿಡುವಂತಿತ್ತು. ಮತ್ತೆ ಡಾಕ್ಟರು ಸಮಸ್ಯೆ ಏನೆಂಬುದನ್ನು ಸರಿಯಾಗಿ ಪರೀಕ್ಷಿಸಿ ತಕ್ಕ ರೀತಿಯಲ್ಲಿ ಚಿಕಿತ್ಸೆ ನೀಡಿದರು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಆದರೆ ರೋಗಿ ನಿಧನನಾದನು. ಈಗ ಇದೇ ಡಾಕ್ಟರು ಏನು ಹೇಳುತ್ತಾರೆ? ‘ಎಷ್ಟು ಸರಿಯಾಗಿ ನಾನು ಅವರನ್ನು ಮೇಲಕ್ಕೆ ಕಳುಹಿಸಿಬಿಟ್ಟೆ!’ ಎಂದೆ? ಇಲ್ಲ, ‘ಇದು ದೇವರಿಚ್ಛೆ. ಆ ರೋಗಿಯ ಹಣೆಬರಹ, ಅವರನ್ನು ಕರೆದುಕೊಂಡು ಬಂದವರು ತಡವಾಗಿ ಬಂದರು, ’ಎಂದು ಏನಾದರೊಂದನ್ನು ಹೇಳಿ, ಅಪವಾದ ವರ್ಗಾಯಿಸುತ್ತಾರೆ. ನಾವು ನೆನೆದಂತೆಯೇ ನಡೆದರೆ ಅಂಥದನ್ನು‘ನಾನು ಮಾಡಿದೆ’ ಎಂದೂ, ಹಾಗೆ ನಡೆಯದಿದ್ದರೆ ‘ನಾನು ಜವಾಬ್ದಾರನಲ್ಲ’ ಎನ್ನುವುದು ನಮ್ಮ ಜಾಯಮಾನ.

ನೀವು ಎಲ್ಲವನ್ನೂ ಹೀಗೆಯೇ ನಡೆಯಬೇಕೆಂದು ಬಯಸುತ್ತೀರಿ. ಅದು ಹಾಗೆಯೇ ನಡೆದರೆ ಅದಕ್ಕೆ ನೀವೇ ಜವಾಬ್ದಾರರು. ಹಾಗೆ ನಡೆಯದಿದ್ದರೆ ಅದರ ಜವಾಬ್ದಾರಿಯನ್ನು ಯಾರ ಮೇಲೆ ಹೊರಿಸಬೇಕು? ಯಾರೂ ದೊರೆಯದೆ ಹೋದರೆ, ಯಾವಾಗಲೂ ನಾವು ಹೇಳುವುದೆಲ್ಲವನ್ನೂ ಕೇಳಲು ಮೇಲೆ ಒಬ್ಬ ಮೂರ್ಖನಿದ್ದಾನೆ. ಅಲ್ಲವೆ!
ನೀವು ಪರೀಕ್ಷೆಯನ್ನು ಚೆನ್ನಾಗಿ ಬರೆದಿದ್ದರೆ ‘ಚೆನ್ನಾಗಿ ಬರೆದಿದ್ದೇನೆ’ ಎನ್ನುತ್ತೀರಿ. ಸರಿಯಾಗಿ ಬರೆಯದಿದ್ದರೆ?
‘ಸಮಯವೇ ಸಾಲದು’, ‘ಸಿಲಬಸ್‌ನಲ್ಲಿ ಇಲ್ಲದ ಪ್ರಶ್ನೆಗಳೆಲ್ಲವೂ ಬಂದುಬಿಟ್ಟಿವೆ’ ಎನ್ನುತ್ತೀರಿ. ಇಲ್ಲವೆ, ಬೇರೇನಾದರೂ ಕಾರಣಗಳನ್ನು ಹುಡುಕುತ್ತೀರಿ. ಏಕೆ?

ಜೀವನದಲ್ಲಿ ಯಶಸ್ಸು ಪಡೆಯಬೇಕೇ? ಈ ವಿಡಿಯೋವನ್ನು ನೋಡಿ.

ಗೆಲುವಿಗೆ ತಕ್ಷಣವೇ ಹೊಣೆಯನ್ನು ಹೊತ್ತುಕೊಳ್ಳುತ್ತ ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಾಗಿರುವ ನಾವು, ತಪ್ಪು ನಡೆದಾಗ ಮಾತ್ರ ಅದಕ್ಕೆ ಬೇರೆಯದೇ ಹೊಣೆಗಾರಿಕೆಯನ್ನು ಯೋಚಿಸುತ್ತೇವೆ.

ಈಗ ನಾನು ಕೇಳುವುದೇನೆಂದರೆ, ನೀವು ನೆನೆದಂತೆ ನಡೆಯದಿದ್ದರೂ ಅದಕ್ಕೆ ನೀವೇ ಜವಾಬ್ದಾರರೆ? ಈಗ, ನೀವೆಂದುಕೊಂಡಂತೆ ನಡೆಯದ ಘಟನೆಗೆ ನೀವು ಜವಾಬ್ದಾರನೆಂದು ತಿಳಿಯುವುದಾದರೆ, ಅದನ್ನು ಹೇಗೆ ನಡೆಸುವುದೆಂಬ ಸಾಮರ್ಥ್ಯವನ್ನು ನೀವು ಸಂಪಾದಿಸಲು ಸಾಧ್ಯವಾಗುತ್ತದೆ. ಈಗ ನಿಮ್ಮ ಸಾಮರ್ಥ್ಯಕ್ಕೆ ನೀವು ಜವಾಬ್ದಾರರಾದರೆ ನಿಮ್ಮ ಅಸಾಮರ್ಥ್ಯಕ್ಕೂ ನೀವೇ ತಾನೆ?

ಇದನ್ನೂ ಓದಿ :Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

ನಾಳೆ ನಾನು ಹೀಗಿರಬೇಕು, ನನ್ನ ಜೀವನ ಹೀಗೆ ಅರಳಬೇಕೆಂದು ಆಸೆಪಡುತ್ತೀರಿ. ಈಗ ನೀವಿರುವ ಸ್ಥಿತಿಗೆ ‘ನಾನೇ ಜವಾಬ್ದಾರ’ಎಂದು ಹೊಣೆ ಹೊರಲು ನೀವು ಸಿದ್ಧರಾಗಿಲ್ಲದಿದ್ದರೆ, ನಾಳೆ ಹೇಗಿರಬೇಕೆಂಬುದನ್ನು ನೀವು ರೂಪುಗೊಳಿಸಲು ಸಾಧ್ಯವೆ? ‘ಈಗ ನಾನು ಹೇಗಿದ್ದೇನೆಯೋ ಅದಕ್ಕೆ ಸಂಪೂರ್ಣವಾಗಿ ನಾನೇ ಹೊಣೆ’ ಎಂದು ಹೇಳುವ ಸ್ಥಿತಿ ನಿಮಗೆ ಬಂದರೆ ಮಾತ್ರ, ನಾಳೆ ಹೇಗೆ ಇರಬೇಕೆಂಬುದನ್ನು ಕನಸು ಕಾಣಲು ನಿಮಗೆ ಹಕ್ಕು ದೊರೆಯುತ್ತದೆ. ನಿಮ್ಮ ಜೀವನದ ಮಟ್ಟ ಉನ್ನತವಾಗಿರಲಿ, ಕೆಳಮಟ್ಟದಲ್ಲಿರಲಿ, ಸುಂದರವಾಗಿಯೋ, ಕೊಳಕಾಗಿಯೋ, ಅದು ಹೇಗಾದರೂ ಇರಲಿ, ನೀವು ಅದಕ್ಕೆ ಸಂಪೂರ್ಣವಾಗಿ ಹೊಣೆ ಹೊರುತ್ತೀರಾ?

ನಿಮ್ಮ ಉತ್ತರ ‘ಹೌದು, ನಾನೇ ಜವಾಬ್ದಾರ’ ಎಂದರೆ, ಗೆಲುವಿನ ಹಾದಿಯಲ್ಲಿ ನೀವು ಮೊದಲ ಪ್ರಮುಖ ಹೆಜ್ಜೆಯನ್ನಿಟ್ಟಿದ್ದೀರೆಂದು ಅರ್ಥ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Vastu Tips: ಇದು ಬರೀ ಬೆಳಕಲ್ಲ… ಅದೃಷ್ಟಕ್ಕಾಗಿ ವಾಸ್ತು ಪ್ರಕಾರ ಮನೆಯನ್ನು ಈ ರೀತಿ ಬೆಳಗಿ

Vastu Tips: ಮನೆಯ ಪ್ರತಿಯೊಂದು ಕೋಣೆ ಯಾವ ರೀತಿ ಪ್ರಕಾಶ ಹೊಂದಿರಬೇಕು ಎನ್ನುವುದನ್ನು ವಾಸ್ತು ಶಾಸ್ತ್ರ ಹೇಳುತ್ತದೆ.

VISTARANEWS.COM


on

home
Koo

ಬೆಂಗಳೂರು: ಮನೆ ನಿರ್ಮಾಣ ಎನ್ನುವುದು ಬಹುತೇಕರ ಎಷ್ಟೋ ವರ್ಷದ ಕನಸಾಗಿರುತ್ತದೆ. ಅಂತಹ ಮನೆಯಲ್ಲಿ ನೆಮ್ಮದಿಯಿಂದ, ಖುಷಿ ಖುಷಿಯಾಗಿ ಜೀವನ ಕಳೆಯುವಂತಿರಬೇಕು. ಸುಮಾರು 5 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ವಾಸ್ತು ಶಾಸ್ತ್ರ ನೆಮ್ಮದಿ, ಸಮೃದ್ಧಿ ಹೊಂದಿದ ಮನೆಗಾಗಿ ಕೆಲವೊಂದು ವಿಚಾರಗಳನ್ನು ಪ್ರಸ್ತಾವಿಸಿದೆ. ಯಾವ ರೂಮ್‌ ಹೇಗಿರಬೇಕು, ಅಲ್ಲಿ ಯಾವ ರೀತಿಯ ಬೆಳಕಿನ ವ್ಯವಸ್ಥೆ ಮಾಡಬೇಕು ಎನ್ನುವುದನ್ನು ವಾಸ್ತು ಶಾಸ್ತ್ರ ತಿಳಿಸುತ್ತದೆ. ಆ ಕುರಿತಾದ ವಿವರ ಇಂದಿನ ವಾಸ್ತು ಟಿಪ್ಸ್‌ (Vastu Tips)ನಲ್ಲಿದೆ.

ಹಾಲ್‌

ಇದು ಮನೆಯ ಮುಖ್ಯ ಭಾಗ. ಇಲ್ಲಿ ಗರಿಷ್ಠ ಬೆಳಕು ಇರುವುದು ಮುಖ್ಯ. ಹಾಲ್‌ನ ನೈಋತ್ಯ ಭಾಗದಲ್ಲಿ ಗೋಡೆ ಇದ್ದರೆ ಕುಟುಂಬದ ಸದಸ್ಯರಿಗೆ ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲು ಪ್ರಕಾಶಮಾನವಾದ ಸ್ಪಾಟ್ ಲೈಟ್ ಅಳವಡಿಸಿ. ಜತೆಗೆ ಕುಟುಂಬದ ಭಾವಚಿತ್ರವನ್ನು ಅಲ್ಲಿಡಬಹುದು. ಕಲಾಕೃತಿಗಳು ಅಥವಾ ಸಸ್ಯಗಳಿದ್ದರೆ ಅವುಗಳಿಗೆ ಪ್ರತ್ಯೇಕ ಲೈಟ್‌ ಅಳವಡಿಸುವುದು ಉತ್ತಮ.

ಬೆಡ್‌ ರೂಮ್‌

ಇಡೀ ದಿನದ ಆಯಾಸ ಕಳೆದು ನೆಮ್ಮದಿಯಿಂದ, ಬೆಚ್ಚಗೆ ವಿಶ್ರಾಂತಿ ಪಡೆಯಲಿರುವ ಜಾಗ ಬೆಡ್‌ ರೂಮ್‌. ನಾವು ಇಲ್ಲಿ ಹೆಚ್ಚಿನ ಸಮಯ ಕಳೆಯುತ್ತೇವೆ. ಇಲ್ಲಿ ಓದುವುದು, ಸಿನಿಮಾ ನೋಡುವುದು, ನಿದ್ದೆ ಮಾಡುವುದು ಸೇರಿದಂತೆ ನಮ್ಮಿಷ್ಟದ ಚಟುವಟಿಕೆಗಳಲ್ಲಿ ನಿರತರಾಗಿರುತ್ತೇವೆ. ಹೀಗಾಗಿ ಈ ಕೋಣೆಯ ಬಗ್ಗೆ ಮುತುವರ್ಜಿ ವಹಿಸುವುದು ಅಗತ್ಯ. ಛಾಯಾಚಿತ್ರಗಳು ಅಥವಾ ವರ್ಣಚಿತ್ರಗಳಿಗೆ ಪ್ರತ್ಯೇಕ ಲೈಟ್‌ ಅಳವಡಿಸಿ. ಮಲಗುವ ಕೋಣೆಯಲ್ಲಿ ಹಿತಕರ ಬೆಳಕು ಸೂಸುವ ದೀಪ ಬಳಸಿ. ಟೇಬಲ್ ಲ್ಯಾಂಪ್‌ಗಳನ್ನು ಇರಿಸುವುದು ಸೂಕ್ತ.

ಡೈನಿಂಗ್‌ ರೂಮ್‌

ಇಲ್ಲಿ ಸ್ಫಟಿಕದ ಶಾಂಡ್ಲಿಯರ್ ದೀಪಗಳನ್ನು ಅಳವಡಿಸಿಕೊಳ್ಳಬಹುದು. ಇದು ಅದೃಷ್ಟವನ್ನು ಹೊತ್ತು ತರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅಲಂಕಾರಿಕ ಹೋಲ್ಡರ್‌ಗಳಲ್ಲಿ ಕ್ಯಾಂಡಲ್‌ ಇರಿಸಬಹುದು. ಇದು ಡೈನಿಂಗ್‌ ರೂಮ್‌ ಅನ್ನು ಆಕರ್ಷಕವಾಗಿಸುತ್ತದೆ. ಒಟ್ಟಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳಕು ಬೀರುವ ಬಲ್ಬ್‌ ಅಳವಡಿಸಿ. ಊಟ ಮಾಡುವಾಗ ಮಬ್ಬು ಇರಬಾರದು.

ಅಡುಗೆ ಕೋಣೆ

ಕುಟುಂಬ ಸದಸ್ಯರು ಒಟ್ಟಿಗೆ ಸೇರುವ ಮತ್ತು ತಮಗಾಗಿ ಆಹಾರ ಸಿದ್ಧಪಡಿಸುವ ಸ್ಥಳ ಅಡುಗೆ ಕೋಣೆ. ಇದು ಮನೆಯ ಇನ್ನೊಂದು ಬಹಳ ಮುಖ್ಯವಾದ ಸ್ಥಳವಾಗಿದ್ದು, ಇದನ್ನು ಸಮರ್ಪಕವಾಗಿ ಬೆಳಗಿಸಬೇಕು. ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ನಿರ್ದಿಷ್ಟ ಕಡೆಗಳಲ್ಲಿ ಲೈಟ್‌ ಅಳವಡಿಸಬೇಕು. ಇಲ್ಲಿ ಬೆಳಕು ಮತ್ತು ನೆರಳು ಸಮಾನವಾಗಿ ಹಂಚಿಕೆಯಾಗಬೇಕು. ಇಲ್ಲಿ ಟ್ಯೂಬ್‌ಲೈಟ್‌ಗಳನ್ನು ಬಳಸಬಹುದು. ಅಕ್ಕಿ, ಬೇಳೆ ಮುಂತಾದ ವಸ್ತುಗಳನ್ನು ದಾಸ್ತಾನು ಇರಿಸುವ ಜಾಗ ಪ್ರಕಾಶಮಾನವಾಗಿರಲಿ.

ಬಾತ್‌ ರೂಮ್‌

ಬಾತ್‌ ರೂಮ್‌ನ ಎಲ್ಲ ಕಡೆ ಬೆಳಕು ಹರಡುವಂತಿರಬೇಕು. ಮಂದ ಬೆಳಕು ಬೀರಲು ಕಡಿಮೆ ವ್ಯಾಟ್‌ನ ಬಲ್ಬ್ ಬಳಸಬಹುದು. ಸೋಪ್‌, ಪೇಸ್ಟ್‌, ಬ್ರಷ್‌ ಮುಂತಾದ ವಸ್ತುಗಳನ್ನು ಇರಿಸುವ ಸ್ಥಳಗಳ ಸುತ್ತಲೂ ಬೆಳಕಿನ ವ್ಯವಸ್ಥೆ ಮಾಡಿ. ಅಪಾಯಗಳನ್ನು ತಪ್ಪಿಸಲು ಟಬ್ ಅಥವಾ ಶವರ್ ಮೇಲಿನ ಲೈಟ್‌ಗಳು ನೀರು ಮತ್ತು ಆವಿ-ನಿರೋಧಕ ಎನ್ನುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ.

ವಾಸ್ತು ಪ್ರಕಾರ ಲೈಟ್‌ ಅಳವಡಿಕೆಯ ಸಾಮಾನ್ಯ ನಿಯಮಗಳು

  • ಲೈಟ್‌ ಉತ್ತರ ಮತ್ತು ಪೂರ್ವ ಗೋಡೆಗಳ ಮೇಲಿರಿಸುವುದು ಸಕಾರಾತ್ಮಕತೆಯ ಸಂಕೇತ.
  • ಯಾವುದೇ ಕೋಣೆಯ ಆಗ್ನೇಯ ದಿಕ್ಕಿನಲ್ಲಿ ಲೈಟ್‌ ಅಳವಡಿಸಬೇಡಿ. ಇದನ್ನು ನಕಾರಾತ್ಮಕವೆಂದು ಪರಿಗಣಿಸಲಾಗುತ್ತದೆ.
  • ದಕ್ಷಿಣ ಭಾಗದಲ್ಲಿ ಪ್ರಕಾಶಮಾನವಾದ ದೀಪಗಳನ್ನು ಇರಿಸಿ. ಇದರಿಂದ ವೃತ್ತಿ ಜೀವನದಲ್ಲಿ ಏಳಿಗೆ ಕಾಣಬಹುದು.
  • ದೇವರ ಕೋಣೆ ಪೂರ್ವ, ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿದ್ದರೆ ನಕಾರಾತ್ಮಕ ಶಕ್ತಿಯನ್ನು ತಪ್ಪಿಸಲು ಬಿಳಿ ಬಣ್ಣದ ಬೆಳಕನ್ನು ಬಳಸಿ
  • ಮುಖ್ಯ ಬಾಗಿಲಿಗೆ ಹೋಗುವ ದಾರಿ ಸಾಕಷ್ಟು ಪ್ರಕಾಶಮಾನವಾಗಿರಬೇಕು.
  • ಮೆಟ್ಟಿಲು ಇಳಿಯುವ ಸ್ಥಳದಲ್ಲಿಯೂ ಪ್ರಕಾಶಮಾನವಾದ ದೀಪಗಳನ್ನು ಅಳವಡಿಸಿ. ಇದನ್ನು ಸಹ ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Vastu Tips: ಅದೃಷ್ಟದ ಬಾಗಿಲು ತೆರೆಯಲು ಈ ಟಿಪ್ಸ್‌ ಫಾಲೋ ಮಾಡುವುದನ್ನು ಮರೆಯಬೇಡಿ

Continue Reading

ದೇಶ

Ram Mandir: ರಾಮಮಂದಿರ ಉದ್ಘಾಟನೆಗೆ ಆಹ್ವಾನ ಪತ್ರಿಕೆ ಸಿದ್ಧ; 6 ಸಾವಿರ ಗಣ್ಯರಿಗೆ ಆಮಂತ್ರಣ

Ram Mandir: ಭವ್ಯ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

VISTARANEWS.COM


on

Ram Mandir Invitations
Koo

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ (Ram Mandir) ನಿರ್ಮಾಣ ಕಾಮಗಾರಿಯು ಕೊನೆಯ ಹಂತಕ್ಕೆ ಬಂದಿದೆ. 2024ರ ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಮಾಡಲಾಗುತ್ತದೆ. ರಾಮಲಲ್ಲಾ ಮೂರ್ತಿಗೆ ಪ್ರಾಣಪ್ರತಿಷ್ಠಾನೆ (Pran Pratishta) ನೆರವೇರಿಸಿ, ಗರ್ಭಗುಡಿಯಲ್ಲಿ ಇರಿಸಿ ಪೂಜೆ ಮಾಡಲಾಗುತ್ತದೆ. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳು ಸಿದ್ಧವಾಗಿದ್ದು, 6 ಸಾವಿರ ಗಣ್ಯರಿಗೆ ರವಾನಿಸಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಿಂದ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ ದೇಶಾದ್ಯಂತ ಇರುವ 6 ಸಾವಿರ ಗಣ್ಯರಿಗೆ ಟ್ರಸ್ಟ್‌ನಿಂದ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಲಾಗಿದೆ. ಆಮಂತ್ರಣ ಪತ್ರಿಕೆಗಳ ಫೋಟೊಗಳು ಕೂಡ ಲಭ್ಯವಾಗಿವೆ. ದೇಶದ ಪ್ರಮುಖ ರಾಜಕಾರಣಿಗಳು, ಹಿಂದು ಸಂಘಟನೆಗಳ ಮುಖಂಡರು, ಸಾಧು-ಸಂತರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆ ವಿಮಾನ ನಿಲ್ದಾಣವೂ ಸಿದ್ಧ

ರಾಮಮಂದಿರ ಲೋಕಾರ್ಪಣೆಗೆ ಮೊದಲೇ ಅಯೋಧ್ಯೆ ವಿಮಾನ ನಿಲ್ದಾಣವು ಸಿದ್ಧವಾಗಿರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. “ಡಿಸೆಂಬರ್‌ 15ರ ವೇಳೆಗೆ ವಿಮಾನ ನಿಲ್ದಾಣ ಸಿದ್ಧವಾಗಿರಲಿದೆ. ಮೊದಲ ಹಂತದಲ್ಲಿ ವಿಮಾನ ನಿಲ್ದಾಣ ಮುಗಿಯಲಿದ್ದು, ವಿಮಾನಗಳ ಹಾರಾಟ ಶುರುವಾಗಲಿದೆ. ಇದಾದ ಬಳಿಕ ಹಂತ ಹಂತವಾಗಿ ಬೃಹತ್‌ ವಿಮಾಣ ನಿಲ್ದಾಣ ನಿರ್ಮಿಸಲಾಗುವುದು” ಎಂದು ಯೋಗಿ ಆದಿತ್ಯನಾಥ್‌ ಮಾಹಿತಿ ನೀಡಿದ್ದಾರೆ. ಮರ್ಯಾದಾ ಪುರುಷೋತ್ತಮ ಶ್ರೀರಾಮ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಎಂಬುದಾಗಿ ಹೆಸರಿಡಲು ತೀರ್ಮಾನಿಸಲಾಗಿದೆ.

ಆರ್‌ಎಸ್‌ಎಸ್‌ಗೆ ಕಾರ್ಯಕ್ರಮಗಳ ಆಯೋಜನೆ ಹೊಣೆ

ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Amith Sha : 550 ವರ್ಷಗಳ ರಾಮಮಂದಿರದ ಕನಸು… ಅಮಿತ್​ ಶಾ ಹೇಳಿಕೆಗೊಂದು ಕಾರಣವಿದೆ

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರ್ಮಿಕ

Vastu Tips: ವಾಸ್ತು ಪ್ರಕಾರ ನಿಮ್ಮ ಬಾಲ್ಕನಿ ಹೇಗಿರಬೇಕು? ಇಲ್ಲಿದೆ ಸಲಹೆ

Vastu Tips: ಮನೆಯಲ್ಲಿ ಹಲವರ ನೆಚ್ಚಿನ ಜಾಗ ಬಾಲ್ಕನಿ. ವಾಸ್ತು ಪ್ರಕಾರ ಬಾಲ್ಕನಿ ಹೇಗಿರಬೇಕು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

home balcony
Koo

ಬೆಂಗಳೂರು: ಮನೆಯ ಬಾಲ್ಕನಿ (Balcony) ಎನ್ನುವುದು ಬಹುತೇಕರ ನೆಚ್ಚಿನ ಸ್ಥಳ. ಬೆಳಗ್ಗೆ ಎದ್ದ ಕೂಡಲೇ ಬಾಲ್ಕನಿಗೆ ಬಂದು ಸ್ವಚ್ಛ ಗಾಳಿಯನ್ನು ಉಸಿರಾಡುತ್ತ ಚಾ/ಕಾಫಿ ಕುಡಿಯುವುದು ಬಹುತೇಕರ ದಿನಚರಿಯ ಭಾಗವೇ ಆಗಿದೆ. ಫ್ರೀ ಸಮಯ ಕಳೆಯಲು, ಸ್ನೇಹಿತರೊಂದಿಗೆ ಹರಟೆ ಹೊಡೆಯಲು, ಯೋಗ, ಧ್ಯಾನ ಮಾಡಲು, ವ್ಯಾಯಾಮ ಮಾಡಲು, ಸಿನಿಮಾ ನೋಡಲು ಬಾಲ್ಕನಿಗಿಂತ ಉತ್ತಮ ಜಾಗ ಇನ್ನೊಂದಿಲ್ಲ. ಇಂತಹ ನಿಮ್ಮ ನೆಚ್ಚಿನ ಬಾಲ್ಕನಿಯನ್ನು ವಾಸ್ತು ಪ್ರಕಾರ ಹೇಗೆ ಇನ್ನಷ್ಟು ಉತ್ತಮಗೊಳಿಸಬಹುದು? ಬಾಲ್ಕನಿಯಲ್ಲಿ ಯಾವ ಅಂಶಗಳತ್ತ ಗಮನ ಹರಿಸಬೇಕು? ಎನ್ನುವುದರ ವಿವರ ಇಂದಿನ ವಾಸ್ತುಟಿಪ್ಸ್‌ (Vastu Tips)ನಲ್ಲಿದೆ.

ದಿಕ್ಕು

ಮನೆಯಲ್ಲಿ ಬಾಲ್ಕನಿ ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿರಬೇಕು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಇದು ಗರಿಷ್ಠ ಪ್ರಮಾಣದ ಸೂರ್ಯನ ಬೆಳಕನ್ನು ಪಡೆಯುವ ಪ್ರದೇಶವಾಗಿರುವುದರಿಂದ ಇದು ಆದರ್ಶ ದಿಕ್ಕು. ಬಾಲ್ಕನಿ ನಿರ್ಮಿಸಲು ದಕ್ಷಿಣ ಅಥವಾ ಪಶ್ಚಿಮವನ್ನು ನಕಾರಾತ್ಮಕ ದಿಕ್ಕುಗಳು ಎಂದು ಪರಿಗಣಿಸಲಾಗುತ್ತದೆ.

ಪೀಠೋಪಕರಣಗಳ ಸ್ಥಾನ

ಪೀಠೋಪಕರಣಗಳು ಬಾಲ್ಕನಿಯ ಪ್ರಮುಖ ಭಾಗ. ಕುಳಿತುಕೊಳ್ಳಲು, ವಿಶ್ರಾಂತಿ ಪಡೆಯಲು ವಿವಿಧ ರೀತಿಯ ಪೀಠೋಪಕರಣಗಳನ್ನು ಇಲ್ಲಿ ಜೋಡಿಸಿಡುತ್ತೇವೆ. ಹೀಗಾಗಿ ನಿಮ್ಮ ಬಾಲ್ಕನಿಗೆ ಸೂಕ್ತವಾದ ಪೀಠೋಪಕರಣಗಳು ಯಾವುವು ಎನ್ನುವುದರತ್ತ ಗಮನ ಹರಿಸಬೇಕು. ಕುರ್ಚಿಗಳು, ಸ್ಟೂಲ್‌ಗಳು ಮತ್ತು ಟೇಬಲ್‌ಗಳಂತಹ ಭಾರವಾದ ಪೀಠೋಪಕರಣಗಳನ್ನು ಬಾಲ್ಕನಿಯ ನೈಋತ್ಯ ಮೂಲೆಯಲ್ಲಿ ಇಡಬೇಕು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಚಾವಣಿ ಹೀಗಿರಲಿ

ನಿಮ್ಮ ಬಾಲ್ಕನಿಯ ಚಾವಣಿ ಯಾವಾಗಲೂ ಉತ್ತರ ಅಥವಾ ಪೂರ್ವ ದಿಕ್ಕಿನ ಕಡೆಗೆ ಇಳಿಜಾರಾಗಿರಬೇಕು. ಯಾವುದೇ ಕಾರಣಕ್ಕೂ ದಕ್ಷಿಣ ಅಥವಾ ಪಶ್ಚಿಮದ ಕಡೆಗೆ ಅಲ್ಲ. ಚಾವಣಿಯ ಎತ್ತರವು ಮುಖ್ಯ ಕಟ್ಟಡದ ಛಾವಣಿಗಿಂತ ಕಡಿಮೆ ಇರಬೇಕು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಅಲ್ಲದೆ ನಿಮ್ಮ ಬಾಲ್ಕನಿಯ ಚಾವಣಿಗೆ ಟಿನ್ ಬಳಕೆ ಬೇಡ.

ಅಲಂಕಾರ

ಬಾಲ್ಕನಿಯಲ್ಲಿ ಸಣ್ಣ ಹೂವಿನ ಕುಂಡಗಳನ್ನು ಇರಿಸಲು ವಾಸ್ತು ಶಾಸ್ತ್ರ ಸಲಹೆ ನೀಡುತ್ತದೆ. ಯಾಕೆಂದರೆ ಅವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ. ತುಂಬಾ ದೊಡ್ಡ ಸಸ್ಯಗಳನ್ನು ಇಡುವುದನ್ನು ತಪ್ಪಿಸಿ. ಅಲ್ಲದೆ ನಿಮ್ಮ ಬಾಲ್ಕನಿಗೆ ವರ್ಣರಂಜಿತ ಹೂವಿನ ಗಿಡಗಳನ್ನು ಆರಿಸಿ ಮತ್ತು ಬಳ್ಳಿಗಳನ್ನು ಎಂದಿಗೂ ಇಡಬೇಡಿ. ಇವು ಸೂರ್ಯನ ಬೆಳಕನ್ನು ತಡೆಯುತ್ತವೆ. ನಿಮ್ಮ ಬಾಲ್ಕನಿಯ ಪಶ್ಚಿಮ, ದಕ್ಷಿಣ ಅಥವಾ ನೈಋತ್ಯ ಭಾಗದಲ್ಲಿ ಯಾವಾಗಲೂ ಹೂವಿನ ಕುಂಡಗಳನ್ನು ಇರಿಸಿ. ಮಧ್ಯ ಭಾಗ ಖಾಲಿಯಾಗಿರಲಿ.

ಇದನ್ನೂ ಓದಿ: Vastu Tips: ನಿಮ್ಮ ಜೀವನ ಸಮೃದ್ಧಿಗಾಗಿ ಈ ಗಿಡಗಳನ್ನು ಬೆಳೆಸಿ

ಸೂಕ್ತ ಲೈಟ್‌ಗಳು

ಕತ್ತಲೆ ಅಥವಾ ತುಂಬಾ ಮಂದ ಬೆಳಕಿನ ಬಾಲ್ಕನಿಯಲ್ಲಿ ಕುಳಿತುಕೊಳ್ಳುವುದು ನಕಾರಾತ್ಮಕತೆಗೆ ಕಾರಣವಾಗಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ನಿಮ್ಮ ಬಾಲ್ಕನಿಗೆ ತುಂಬಾ ತೀಕ್ಷ್ಣ ಬೆಳಕನ್ನು ನೀಡದ ಲೈಟ್‌ಗಳನ್ನು ಆರಿಸಿ.

ಯಾವ ಬಣ್ಣ ಸೂಕ್ತ?

ಬಾಲ್ಕನಿ ಮನೆಯ ಒಂದು ಪ್ರಮುಖ ಸ್ಥಳವಾಗಿ ಪರಿಗಣಿಸಲ್ಪಡುತ್ತದೆ. ಅಲ್ಲಿ ನಿಮ್ಮ ಮನಸ್ಸು ವಿಶ್ರಾಂತಿ ಪಡೆಯಲು ಬಯಸುತ್ತದೆ. ಬಾಲ್ಕನಿ ದಣಿದ ದೇಹಕ್ಕೆ ನೆಮ್ಮದಿ ಒದಗಿಸುತ್ತದೆ. ಹೀಗಾಗಿ ಗೋಡೆಗಳಿಗೆ ಮೇಲೆ ಗಾಢ ಬಣ್ಣವನ್ನು ಬಳಿಯಬೇಡಿ. ವಾಸ್ತು ಪ್ರಕಾರ, ಬಿಳಿ, ನೀಲಿ ಮತ್ತು ತಿಳಿ ಗುಲಾಬಿಯಂತಹ ಶಾಂತ ಬಣ್ಣಗಳು ನಿಮ್ಮ ಬಾಲ್ಕನಿಗೆ ಸೂಕ್ತ.

Continue Reading

ಕರ್ನಾಟಕ

Shabarimale Bus : ಶಬರಿಮಲೆ ಯಾತ್ರಿಕರಿಗೆ KSRTC ವಿಶೇಷ ಬಸ್‌ ಸೇವೆ, ಬುಕಿಂಗ್‌ ಹೇಗೆ?

Shabarimale Bus: ಬೆಂಗಳೂರಿನಿಂದ ಶಬರಿಮಲೆಗೆ ಡಿಸೆಂಬರ್‌ 11ರಿಂದ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ. ಇದರ ಟೈಮಿಂಗ್ಸ್‌ ಮತ್ತು ಬುಕಿಂಗ್‌ ವಿವರ ಇಲ್ಲಿದೆ.

VISTARANEWS.COM


on

Shabarimale yatre KSRTC BUS
Koo

ಬೆಂಗಳೂರು: ಡಿಸೆಂಬರ್‌ ಆರಂಭವಾಗುತ್ತಿದ್ದಂತೆಯೇ ಕೇರಳದ ಪುಣ್ಯ ಕ್ಷೇತ್ರ ಶಬರಿಮಲೆಗೆ (Shabarimale yatre) ಹೋಗುವ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಯಾತ್ರಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ. ಡಿಸೆಂಬರ್‌ 1ರಿಂದ ವಿಶೇಷ ಬಸ್‌ ಸೌಲಭ್ಯವನ್ನು (Special bus Service) ಒದಗಿಸಲಾಗುತ್ತಿದ್ದು, ಯಾತ್ರಾರ್ಥಿಗಳು ಇದನ್ನು ಉಪಯೋಗ ಮಾಡಿಕೊಳ್ಳಬಹುದು (Shabarimale Bus) ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಡಿಸೆಂಬರ್‌ 1ರಿಂದ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಕಾರ್ಯಾಚರಣೆ ನಡೆಸಲಿದೆ. ಬೆಂಗಳೂರಿಂದ ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗವಾಗಿ ವೋಲ್ವೋ ಮತ್ತು ರಾಜಹಂಸ ಬಸ್ ಸಂಚರಿಸಲಿದೆ ಎಂದು ತಿಳಿಸಿರುವ ಕೆ.ಎಸ್‌.ಆರ್‌.ಟಿ.ಸಿಯು ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದರ ಎಷ್ಟು, ಯಾವ ಹೊತ್ತಿಗೆ ಹೊರಡುತ್ತದೆ?

ಕೆ.ಎಸ್‌.ಆರ್‌.ಟಿಸಿ ವೋಲ್ವೋ ಬಸ್‌ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಹೊರಡಲಿದೆ. ಮರುದಿನ ಬೆಳಿಗ್ಗೆ 6.45ಕ್ಕೆ ಪಂಪಾ ತಲುಪಲಿದೆ. ಅದೇ ದಿನ ಸಂಜೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ವೋಲ್ವೋ ಬಸ್‌ನಲ್ಲಿ ಒಂದು ಟಿಕೆಟ್‌ನ ದರ 1600 ರೂ. ಆಗಿರುತ್ತದೆ.

ರಾಜಹಂಸ ಬಸ್ (ನಾನ್‌ಎಸಿ) ಬಸ್‌ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.

ಡಿಸೆಂಬರ್‌ ತಿಂಗಳಲ್ಲಿ ಶಬರಿಮಲೆ ಸನ್ನಿಧಿಯಲ್ಲಿ ಮಂಡಲೋತ್ಸವ ನಡೆಯಲಿದ್ದು, ಆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಆ ಬಳಿಕ ಜನವರಿ 14ರಂದು ಮಕರ ವಿಳಕ್ಕು (ಮಕರ ಜ್ಯೋತಿ) ನಡೆಯುತ್ತದೆ. ಆ ಸಂದರ್ಭದಲ್ಲಿ 48 ದಿನಗಳ ಕಾಲ ಮಾಲಾ ಧಾರಣೆ ಮಾಡಿ ವ್ರತಧಾರಿಗಳಾದ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಹೊಸ ಬಸ್‌ ಸೇವೆ ಅನುಕೂಲಕರವಾಗಲಿದೆ.

ಇದನ್ನೂ ಓದಿ : Shobha Karandlaje: ಶಬರಿಮಲೆಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಬಸ್​ ಟಿಕೆಟ್ ಬುಕಿಂಗ್ ಹೇಗೆ?

ಶಬರಿಮಲೆಗೆ ಹೋಗುವ ಬಸ್‌ಗಳ ಬುಕಿಂಗ್‌ನ್ನು ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ (www.ksrtc.in) ಮೂಲಕ ಮಾಡಬಹುದು. ಅದಲ್ಲದೆ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಕರ್ನಾಟಕ ರಾಜ್ಯದಾದ್ಯಂತ ಮತ್ತು ನೆರೆಯ ರಾಜ್ಯಗಳ ಪ್ರಮುಖ ಕಡೆಗಳಲ್ಲಿ ಒಟ್ಟು 707 ಟಿಕೆಟ್ ಕೌಂಟರ್‌ಗಳು ಇವೆ.

Continue Reading
Advertisement
Assembly Election Results 2023 Live
ದೇಶ16 mins ago

Election Results 2023: ನಾಲ್ಕೂ ರಾಜ್ಯಗಳಲ್ಲಿ ಪೈಪೋಟಿ ಹೇಗಿದೆ? ಯಾರಿಗೆ ವಿಜಯಮಾಲೆ?

Girl Child
ಕರ್ನಾಟಕ41 mins ago

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Dina Bhavihsya
ಪ್ರಮುಖ ಸುದ್ದಿ1 hour ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Assembly Election Results 2023
Live News7 hours ago

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Kapil Sharma And Sunil Grover
ಕಿರುತೆರೆ/ಒಟಿಟಿ7 hours ago

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

women seriously injured
ಕರ್ನಾಟಕ7 hours ago

Kalaburagi News: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರಿಗೆ ಗಂಭೀರ ಗಾಯ

Bangalore Bulls
ಕ್ರೀಡೆ7 hours ago

Pro Kabaddi : ಗುಜರಾತ್​ ತಂಡಕ್ಕೆ ಸೆಡ್ಡು ಹೊಡೆಯುವುದೇ ಬುಲ್ಸ್​

Heart Attack
ಆರೋಗ್ಯ7 hours ago

Heart Attack: ಹೃದಯಾಘಾತಕ್ಕೆ 6 ತಿಂಗಳಲ್ಲಿ 1,052 ಜನ ಬಲಿ; 80% ಮಂದಿ 11-25 ವರ್ಷದವರೇ!

Pro Kabaddi Day 1
ಕ್ರೀಡೆ7 hours ago

Pro Kabaddi: ಮೊದಲ ದಿನ ಗುಜರಾತ್​, ಮುಂಬಾ ತಂಡಕ್ಕೆ ಗೆಲುವು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Dina Bhavihsya
ಪ್ರಮುಖ ಸುದ್ದಿ1 hour ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ14 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

ಟ್ರೆಂಡಿಂಗ್‌