Ram Navami 2023: ನಮ್ಮ ಅಜ್ಜಿಯರು ರಾಮನವಮಿಯ ಪಾನಕ ಹೀಗೆ ಮಾಡುತ್ತಿದ್ದರು! - Vistara News

ಆಹಾರ/ಅಡುಗೆ

Ram Navami 2023: ನಮ್ಮ ಅಜ್ಜಿಯರು ರಾಮನವಮಿಯ ಪಾನಕ ಹೀಗೆ ಮಾಡುತ್ತಿದ್ದರು!

ಪಾನಕ ಮಾಡಲು ಹಿಂದಿನ ಕಾಲದ ಹಿರಿಯರು ಬೇಕು. ಅವರ ಕೈಯಲ್ಲರಳಿದ ಪಾನಕದ ರುಚಿಯೇ ಬೇರೆ. ಅಜ್ಜಿಯರು ಒಂದು ಕಾಲದಲ್ಲಿ ಈ ಪಾನಕವನ್ನು ಹೇಗೆ ತಯಾರಿಸುತ್ತಿದ್ದರು ಹಾಗೂ ಅದೇ ಹಳೇ ಕಾಲದ ಪಾನಕದ ಶೈಲಿಯನ್ನು ಇಲ್ಲಿ ಇಂದು ತಿಳಿಸಲಾಗಿದೆ.

VISTARANEWS.COM


on

ram navami panaka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನವಮಿ ಎಂದರೆ ಪಾನಕ. ಪಾನಕ ಎಂದರೆ ರಾಮನವಮಿ! ಹೌದು. ಪಾನಕ ಕುಡಿಯಬೇಕು ಎನಿಸಿದಾಗ ರಾಮನವಮಿಯ ನೆನಪಾಗುವುದುಂಟು. ಯಾಕೆಂದರೆ, ರಾಮನವಮಿ ಬಂದಾಕ್ಷಣ ದೇವಸ್ಥಾನಗಳಲ್ಲಿ, ರಾಮ ಮಂದಿರಗಳಲ್ಲಿ, ನಮ್ಮ ಮನೆಗಳಲ್ಲಿ, ನೆಂಟರಿಷ್ಟರ ಮನೆಗಳಲ್ಲಿ ಪಾನಕದ ಮಳೆಯಾಗುತ್ತದೆ. ಚಳಿಗಾಲ ಮುಗಿದು ಬೇಸಗೆ ಬರುವಾಗ ಸೂರ್ಯನ ಝಳ ಮೈಯನ್ನು ತಾಕುವಾಗ ರಾಮನವಮಿಯ ನೆಪದಲ್ಲಿ ಸಿಗುವ ಈ ಪಾನಕ ಕುಡಿದರೆ ಆಹಾ ಎಂಬ ಸ್ವರ್ಗ ಸುಖ. ದಕ್ಷಿಣ ಭಾರತದೆಲ್ಲೆಡೆ, ರಾಮನವಮಿಯ ದಿನದಂದು ಸಿಗುವ ಈ ಸಿಹಿ ಖಾರದ ಈ ಪಾನಕ ಮಾಡುವುದು ಕೂಡಾ ಕಲೆಯೇ. ಬೇರೆ ಶರಬತ್ತುಗಳಿಗಿಂತ ಕೊಂಚ ಭಿನ್ನವಾಗಿ ಕಾಣುವ ಈ ಪಾನಕ ನಮ್ಮ ಹಿರಿಯರು ನಮಗೆ ದಾಟಿಸಿ ಹೋದ ಒಂದು ಅದ್ಭುತ ಪಾನೀಯ. ಹಬ್ಬಗಳ ನೆಪದಲ್ಲಾದರೂ ಇಂತಹ ದೇಸೀ ಪಾನೀಯಗಳನ್ನು ನಾವು ಕುಡಿಯಬೇಕು!

ಪಾನಕ ಸಂಸ್ಕೃತ ಮೂಲದಿಂದ ಬಂದ ಶಬ್ದ. ಅಂದರೆ, ಸಿಹಿಯಾದ ಪಾನೀಯ ಎಂದು ಅರ್ಥ. ಪಾನಕ ದೇಹವನ್ನು ತಂಪು ಮಾಡುವ ಪಾನೀಯವಾದ್ದರಿಂದ ರಾಮನವಮಿ ಬೇಸಿಗೆಯಲ್ಲಿ ಬರುವುದರಿಂದ ದೇಹಕ್ಕೆ ತಂಪು ಎಂಬ ಅರ್ಥದಲ್ಲಿ ರಾಮನವಮಿಯ ದಿನ ಇದನ್ನು ತಯಾರಿಸುವ ಸಂಪ್ರದಾಯ ಬಂದಿದೆ ಎಂಬ ಮಾತಿದೆ. ಪಾನಕದಲ್ಲೂ ಬಹಳ ವಿಧಗಳಿವೆ. ನಿಂಬೆಹಣ್ಣು ಹಿಂಡಿದ ಪಾನಕ, ಒಣ ಶುಂಠೀ ಹಾಕಿದ ಪಾನಕ, ತುಳಸಿ ಹಾಗೂ ಜೇನು ತುಪ್ಪ ಹಾಕಿದ ಪಾನಕ ಎಂಬಿತ್ಯಾದಿ ಬಗೆಗಳು ಸ್ಥಳದಿಂದ ಸ್ಥಳಕ್ಕೆ ಬದಲಾದರೂ ಹೆಸರು ಮಾತ್ರ ಬದಲಾಗುವುದಿಲ್ಲ.

ಪಾನಕ ಮಾಡಲು ಹಿಂದಿನ ಕಾಲದ ಹಿರಿಯರು ಬೇಕು. ಅವರ ಕೈಯಲ್ಲರಳಿದ ಪಾನಕದ ರುಚಿಯೇ ಬೇರೆ. ಅಜ್ಜಿಯರು ಒಂದು ಕಾಲದಲ್ಲಿ ಈ ಪಾನಕವನ್ನು ಹೇಗೆ ತಯಾರಿಸುತ್ತಿದ್ದರು ಹಾಗೂ ಅದೇ ಹಳೇ ಕಾಲದ ಪಾನಕದ ಶೈಲಿಯನ್ನು ಇಲ್ಲಿ ಇಂದು ತಿಳಿಸಲಾಗಿದೆ.

ಹೀಗೆ ಮಾಡಿ: ಎರಡು ಕಪ್‌ ನೀರು, ನಾಲ್ಕೈದು ಚಮಚ ತುರಿದ ಬೆಲ್ಲ, ಒಂದು ಚಿಟಿಕೆ ಏಲಕ್ಕಿ, ಒಂದು ಚಿಟಿಕೆ ಒಣ ಶುಂಠಿ ಪುಡಿ, ಎರಡು ಚಿಟಿಕೆ ಕರಿಮೆಣಸಿನ ಪುಡಿ ಇಷ್ಟಿದ್ದರೆ ಪಾನಕ ಮಾಡಬಹುದು. ಮೊದಲು ನೀರಿಗೆ ಬೆಲ್ಲದ ಹುಡಿ ಹಾಕಿ ಚೆನ್ನಾಗಿ ಕಲಕಿ. ಬೆಲ್ಲ ಕರಗಿದ ಮೇಲೆ ಅದಕ್ಕೆ ಏಲಕ್ಕಿ, ಶುಂಠಿ ಪುಡಿ, ಹಾಗೂ ಕರಿಮೆಣಸಿನ ಪುಡಿ ಸೇರಿಸಿ. ಕುಟ್ಟಣಿಯಲ್ಲಿ ಕುಟ್ಟಿ ಪುಡಿ ಮಾಡಿದ ಪುಡಿಯಾದರೆ ರುಚಿ ಹೆಚ್ಚು. ಹಿಂದಿನ ಕಾಲದಲ್ಲಿ ಇಂತಹ ಮಸಾಲೆ ಪುಡಿಗಳನ್ನೆಲ್ಲ ಹಿರಿಯರು, ಅಜ್ಜಿಯರು ಮನೆಯಲ್ಲೇ ಕುಟ್ಟಣಿಯಲ್ಲಿ ಕುಟ್ಟಿ ಪುಡಿ ಮಾಡಿ ಬೇಕಾದ ಅಡುಗೆಗೆ ಬಳಸುತ್ತಿದ್ದರು. ಅದಕ್ಕಾಗಿಯೇ, ಕೈಯಲ್ಲೇ ಮಾಡಿದ ಪುಡಿಗಳು ಆಹಾರದ ರುಚಿ ಹಾಗೂ ಘಮವನ್ನು ಹೆಚ್ಚಿಸುತ್ತಿದ್ದವು. ಎಲ್ಲವನ್ನೂ ಚೆನ್ನಾಗಿ ಮಿಕ್ಸ್‌ ಮಾಡಿ. ಈಗ ಶುಂಠಿ ಹಾಗೂ ಕರಿಮೆಣಸಿನ ಖಾರ ಬೆಲ್ಲದ ಜೊತೆಗೆ ಚೆನ್ನಾಗಿ ಹೊಂದಿಕೊಂಡು ಸಿಹಿ ಖಾರದ ಪಾನಕ ಸಿದ್ಧ. ಏಲಕ್ಕಿಯ ಘಮ ಇದಕ್ಕೆ ಅಪೂರ್ವ ಸ್ವಾದವನ್ನೂ ನೀಡುತ್ತದೆ. ನಿಂಬೆಹಣ್ಣು ಬೇಕಾದವರು, ಅರ್ಧ ನಿಂಬೆಹಣ್ಣನ್ನೂ ಇದಕ್ಕೆ ಹಿಂಡಿಕೊಳ್ಳಬಹುದು. ಈ ಪಾನಕವನ್ನು ದೇವರ ಮುಂದೆ ನೈವೇದ್ಯ ರೂಪದಲ್ಲಿ ಇಟ್ಟು, ಪೂಜೆಯ ನಂತರ ಪ್ರತಿಯೊಬ್ಬರೂ ಹಂಚಿಕೊಂಡು ಕುಡಿಯುವುದೇ ರಾಮನವಮಿಯ ಖುಷಿಗಳಲ್ಲೊಂದು.

ಇದನ್ನೂ ಓದಿ: Ram Navami 2023 : ರಘುಕುಲತಿಲಕ ಶ್ರೀರಾಮನ ಪೂಜಿಸುವ ಮಹಾಪರ್ವ ರಾಮನವಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

ಕೆಂಪುಕೆಂಪಾಗಿರುವ ಕಲ್ಲಂಗಡಿ ಹಣ್ಣುಗಳಿಗೆ ನಿಜವಾಗಲೂ ಬಣ್ಣ ಬರಲು (Colour In Food) ಚುಚ್ಚು ಮದ್ದು ನೀಡಲಾಗುತ್ತದೆಯೇ? ಈ ಕುರಿತು ಆಹಾರ ತಜ್ಞರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Color In Food
Koo

ಮಾರುಕಟ್ಟೆಯಲ್ಲಿ (market) ಕೆಂಪು ಕೆಂಪಾಗಿರುವ (Colour In Food) ಕಲ್ಲಂಗಡಿ (Watermelon) ಹಣ್ಣನ್ನು ಕಂಡರೆ ಎಂಥವರ ಬಾಯಲ್ಲೂ ನೀರೂರುತ್ತದೆ. ಆದರೆ ಇತ್ತೀಚೆಗಂತೂ ಈ ಹಣ್ಣುಗಳಿಗೆ ಚುಚ್ಚು ಮದ್ದು (inject the harmful colour) ನೀಡಲಾಗುತ್ತದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ಚರ್ಚೆಯಾಗುತ್ತಿದೆ. ಆದರೆ ಇದು ನಿಜ ಹೌದೋ ಅಲ್ಲವೋ ಎನ್ನುವ ಕುರಿತು ಆಹಾರ ತಜ್ಞರು (Food expert) ಹೇಳುವುದೇನು ಗೊತ್ತೇ?

ಮಾರುಕಟ್ಟೆಯಲ್ಲಿ ಸಿಗುವ ಕಲ್ಲಂಗಡಿ ಹಣ್ಣುಗಳ ಬಗ್ಗೆ ಚಿಂತಿಸುವುದು ಬಿಡಿ. ಇದಕ್ಕೆ ಹಾನಿಕಾರಕ ಬಣ್ಣಗಳಿಂದ ಚುಚ್ಚಲಾಗುತ್ತದೆ ಎಂಬ ವರದಿ ಸರಿಯಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಹಣ್ಣು ಮಾರಾಟಗಾರರು ಕಲ್ಲಂಗಡಿಗಳಿಗೆ ರೆಡ್-ಬಿ ಎಂದು ಕರೆಯಲ್ಪಡುವ ಹಾನಿಕಾರಕ ಬಣ್ಣದ ಎರಿಥ್ರೋಸಿನ್- ಬಿ ಅನ್ನು ಚುಚ್ಚುತ್ತಾರೆ ಎನ್ನುವ ಮಾಧ್ಯಮ ವರದಿಗಳ ಕುರಿತು ಮಾಧ್ಯಮದವರನ್ನು ಹಿರಿಯ ಆಹಾರ ಪರಿಣತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವರ ಪ್ರಕಾರ, ಕಲ್ಲಂಗಡಿ ಹಣ್ಣಿಗೆ ಒಂದೇ ಸ್ಥಳದಲ್ಲಿ ಬಣ್ಣವನ್ನು ಚುಚ್ಚುವುದರಿಂದ ನಿರ್ದಿಷ್ಟ ಭಾಗದಲ್ಲಿ ಮಾತ್ರ ಹಣ್ಣು ಕೆಂಪಾಗಲು ಸಾಧ್ಯ. ಸಂಪೂರ್ಣ ಹಣ್ಣು ಕೆಂಪಾಗುವುದಿಲ್ಲ. ಒಂದು ಸ್ಥಳದಲ್ಲಿ ಕಲ್ಲಂಗಡಿಗೆ ಬಣ್ಣವನ್ನು ಚುಚ್ಚಿದರೆ ಅಲ್ಲಿನ ಪ್ರದೇಶ ಮಾತ್ರ ಬಣ್ಣ ಪಡೆಯುತ್ತದೆ. ಆದರೆ ಮಾಧ್ಯಮಗಳಲ್ಲಿ ತೋರಿಸಿರುವ ಹಣ್ಣುಗಳು ಸಂಪೂರ್ಣವಾಗಿ, ಸಮವಾಗಿ ಕೆಂಪು ಬಣ್ಣದಲ್ಲಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು ಇದರಲ್ಲಿ ಫೋಟೋಶಾಪ್ ಕಾರ್ಯನಿರ್ವಹಿಸಿದೆ.


ಅನೇಕ ಮಂದಿ ಕಲ್ಲಂಗಡಿಯಲ್ಲಿ ಬಳಸುವ ಸಾಮಾನ್ಯ ಕಲಬೆರಕೆ ಎರಿಥ್ರೋಸಿನ್ ಬಿ ಎಂದು ಹೇಳಿದ್ದಾರೆ. ಇದು ಕೆಂಪು ಬಣ್ಣವಾಗಿದ್ದು ಅದು ಹಣ್ಣನ್ನು ಮಾಗಿದ ಮತ್ತು ರಸಭರಿತವಾಗಿ ಕಾಣುವಂತೆ ಮಾಡುತ್ತದೆ. ಇದು ಕಲ್ಲಂಗಡಿಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಇದರ ವಿಡಿಯೋ ಭಾರಿ ವೈರಲ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಕ್ಲಿಪ್ ನಲ್ಲಿ ಈ ಪ್ರಯೋಗ ಮಾಡುತ್ತಿರುವ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕಗಳನ್ನು ಚುಚ್ಚುತ್ತಿರುವುದನ್ನು ಕಾಣಬಹುದು.


ಎರಿಥ್ರೋಸಿನ್ ಬಿ ಸೇವನೆ ಪರಿಣಾಮ

WebMD ಪ್ರಕಾರ, ಎರಿಥ್ರೋಸಿನ್ ಬಿ ಸೇವನೆಯಿಂದ ವಾಕರಿಕೆ, ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ಹಸಿವಾಗದಿರುವುದಕ್ಕೆ ಕಾರಣವಾಗಬಹುದು. ಪ್ರಸ್ತುತ ಸಂಶೋಧನೆ ಮತ್ತು ಆಹಾರ ವಿಜ್ಞಾನ ಜರ್ನಲ್‌ನಲ್ಲಿನ ಅಧ್ಯಯನವು ಈ ವಿಷಕಾರಿ ಸಂಯುಕ್ತವು ಗರ್ಭಿಣಿಯರ ಹೊಟ್ಟೆಯಲ್ಲಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಬಂಜೆತನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

ಈ ಚುಚ್ಚುಮದ್ದು ಹಾಕಿರುವ ಹಣ್ಣುಗಳು ವೇಗವಾಗಿ ಕೊಳೆಯಲು ಪ್ರಾರಂಭಿಸುತ್ತದೆ. ಹೀಗಾಗಿ ಇದು ಹೆಚ್ಚಿನ ಕಲ್ಲಂಗಡಿಗಳಿಗೆ ಬಳಸಲು ಸಾಧ್ಯವಿಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಚುಚ್ಚುಮದ್ದುಗಳನ್ನು ಹಾಕಿರುವ ಹಣ್ಣುಗಳಲ್ಲಿ ರಂಧ್ರಗಳು ಕಾಣಿಸುತ್ತವೆ. ಭಾರತದ ಬೇಸಿಗೆಯಲ್ಲಿ ಈ ಹಣ್ಣುಗಳು ವೇಗವಾಗಿ ಕೊಳೆಯಲು ಕಾರಣವಾಗುತ್ತವೆ. ಹೀಗಾಗಿ ಭಾರತೀಯ ರೈತರು ಈ ಅಪಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Rameshwaram Cafe : ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Rameshwaram Cafe
Koo

ಹೈದರಾಬಾದ್: ಹೈಟೆಕ್​ ರೀತಿಯಲ್ಲಿ ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಮೇಲೆ ಹೈದರಾಬಾದ್​​ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ಬಾಂಬ್​ ದಾಳಿ ನಡೆದ ಬಳಿಕ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಬಗ್ಗೆ ಈಗಲೂ ತನಿಖೆ ನಡೆಯುತ್ತಿದೆ.

ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಕಡೆ ದಾಳಿ

ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್​ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ಅನೇಕ ಜನಪ್ರಿಯ ತಿನಿಸುಗಳ ಅಂಗಡಿಗಳು ನೈರ್ಮಲ್ಯ ಮಾನದಂಡಗಳನ್ನು ಕಾಪಾಡಿಕೊಳ್ಳದಿರುವುದು ಕಂಡುಬಂದಿದೆ. ಅದೇ ದಿನ, ಬಾಹುಬಲಿ ಕಿಚನ್ ಎಂಬ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳಲ್ಲಿ ಜಿರಳೆಗಳು ಕಂಡುಬಂದಿದ್ದವು. ರೆಸ್ಟೋರೆಂಟ್​ನ ಅಡುಗೆಮನೆಯ ಆವರಣವು ತುಂಬಾ ಅನೈರ್ಮಲ್ಯ ಸ್ಥಿತಿಯಲ್ಲಿ ಕಂಡುಬಂದಿದ್ದು, ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ (ಕ್ಯೂಎಸ್ಆರ್) ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ. ಈ ವರ್ಷದ ಜನವರಿಯಲ್ಲಿ ಹೈದರಾಬಾದ್​ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್​ ಪ್ರಾರಂಭಿಸಲಾಗಿತ್ತು. ಈ ಕೆಫೆಯು ತುಪ್ಪದ ಇಡ್ಲಿ ಮತ್ತು ದೋಸೆಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹೋಟೆಲ್​ನ ಆಹಾರ ಪ್ರಿಯರಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಸಂಪೂರ್ಣ ಜನದಟ್ಟಣೆಯ ರೆಸ್ಟೋರೆಂಟ್ ಗೆ ಅನೇಕ ಸೆಲೆಬ್ರಿಟಿಗಳು ಆಗಾಗ್ಗೆ ಭೇಟಿ ನೀಡುತ್ತಾರೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಶಾಖೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕಾಗಿ ಸುದ್ದಿಯಲ್ಲಿತ್ತು. ಮಾರ್ಚ್ 1 ರಂದು ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದರು.

Continue Reading

Latest

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಆಯುರ್ವೇದ ಸೂಚಿಸುವ ಏಳು ಗಿಡಮೂಲಿಕೆ ಪಾನೀಯಗಳು ಇವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹವನ್ನು (Diabetes Management Tips) ನಿಯಂತ್ರಿಸಬಹುದು.

VISTARANEWS.COM


on

By

Diabetes Management Tips
Koo

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಕಾಡುವ ಕಾಯಿಲೆ ರಕ್ತದೊತ್ತಡ (blood pressure) ಮತ್ತು ಮಧುಮೇಹ (diabetes). ರಕ್ತದೊತ್ತಡವಾದರೆ ಬಹುಬೇಗನೆ ತನ್ನ ಇರುವಿಕೆಯನ್ನು ಸೂಚಿಸುತ್ತದೆ. ಆದರೆ ಮಧುಮೇಹ ಹೆಚ್ಚಿನವರಿಗೆ ಗೊತ್ತೇ ಆಗುವುದಿಲ್ಲ. ಮಧುಮೇಹದಿಂದ ಬಳಲುತ್ತಿರುವವರು ನೀವಾಗಿದ್ದರೆ ನೈಸರ್ಗಿಕವಾಗಿ ದೇಹದಲ್ಲಿ ಇನ್ಸುಲಿನ್ (insulin) ಉತ್ಪಾದನೆಯನ್ನು ಹೆಚ್ಚಿಸುವ ಹಲವು ಆಯುರ್ವೇದ ಗಿಡಮೂಲಿಕೆಯ (Ayurvedic herbal) ಪಾನೀಯಗಳಿವೆ.

ಮಧುಮೇಹವು ಇಂದು ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಆರೋಗ್ಯಕರ ಜೀವನ ನಡೆಸಲು ಮಧುಮೇಹದ ಲಕ್ಷಣಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಪುರಾತನ ಭಾರತೀಯ ವೈದ್ಯಕೀಯ ಪದ್ಧತಿಯಾದ ಆಯುರ್ವೇದವು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ನೈಸರ್ಗಿಕ ಚಿಕಿತ್ಸೆಗಳನ್ನು ಶಿಫಾರಸು ಮಾಡುತ್ತದೆ. ಮಧುಮೇಹದ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಹಾಯ ಮಾಡುವ ಏಳು ಪ್ರಸಿದ್ಧ ಆಯುರ್ವೇದ ಪಾನೀಯಗಳಿವೆ.

ಆಯುರ್ವೇದವು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ನೈಸರ್ಗಿಕ ಪದಾರ್ಥಗಳ ಬಳಕೆಯನ್ನು ಪ್ರೋತ್ಸಾಹಿಸುತ್ತದೆ. ಆಯುರ್ವೇದದ ಪಾನೀಯಗಳು ಔಷಧೀಯ ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಹಣ್ಣುಗಳನ್ನು ದೈನಂದಿನ ಜೀವನದಲ್ಲಿ ಸೇರಿಸಲು ನೆಚ್ಚಿನ ವಿಧಾನವಾಗಿದೆ. ಇದು ಕೇವಲ ರುಚಿಕರವಲ್ಲ ಆದರೆ ಸುಧಾರಿತ ಸೇರಿದಂತೆ ಆರೋಗ್ಯ ಪ್ರಯೋಜನಗಳಿಂದ ಕೂಡಿದೆ.


ದಾಲ್ಚಿನ್ನಿ ಮತ್ತು ಮೆಂತ್ಯ

ದಾಲ್ಚಿನ್ನಿ ಮತ್ತು ಮೆಂತ್ಯ ಮಧುಮೇಹ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ದಾಲ್ಚಿನ್ನಿ ಮತ್ತು ಮೆಂತ್ಯಯೊಂದಿಗೆ ಒಂದು ಕಪ್ ಚಹಾ ಮಾಡಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಹೆಚ್ಚಿಸುತ್ತದೆ. ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಈ ಪದಾರ್ಥಗಳು ಮಧುಮೇಹ ರೋಗಲಕ್ಷಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

ಹಾಗಲಕಾಯಿ

ಹಾಗಲಕಾಯಿಯನ್ನು ಆಯುರ್ವೇದದಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಪರಿಣಾಮಕ್ಕಾಗಿ ಪ್ರಶಂಸಿಸಲಾಗುತ್ತದೆ. ಇದರ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸಬಹುದು. ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಬಹುದು.


ನೆಲ್ಲಿಕಾಯಿ

ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಆಮ್ಲಾ ಜ್ಯೂಸ್ ಮಧುಮೇಹವನ್ನು ನಿರ್ವಹಿಸಲು ಪ್ರಸಿದ್ಧವಾದ ಆಯುರ್ವೇದ ಟಾನಿಕ್ ಆಗಿದೆ. ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ಆಮ್ಲಾವು ಮೇದೋಜ್ಜೀರಕ ಗ್ರಂಥಿಯ ಕಾರ್ಯಗಳನ್ನು ಮತ್ತು ಇನ್ಸುಲಿನ್ ಸ್ರವಿಸುವಿಕೆಯನ್ನು ಸುಧಾರಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಅರಿಶಿನ

ಅರಿಶಿನವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಲಗುವ ಮುನ್ನ ಅರಿಶಿನ ಬೆರೆಸಿದ ಹಾಲನ್ನು ಕುಡಿಯುವುದು ಉರಿಯೂತವನ್ನು ಕಡಿಮೆ ಮಾಡುತ್ತದೆ, ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ಅರಿಶಿನದಲ್ಲಿರುವ ಅಗತ್ಯ ಸಂಯುಕ್ತವಾದ ಕರ್ಕ್ಯುಮಿನ್ ಸ್ವಾಭಾವಿಕವಾಗಿ ಮಧುಮೇಹದ ಲಕ್ಷಣಗಳನ್ನು ನಿರ್ವಹಿಸಬಲ್ಲದು.

ಬೇವಿನ ಎಲೆ

ಔಷಧೀಯ ಗುಣಗಳು ಸಮೃದ್ಧವಾಗಿರುವ ಬೇವಿನ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಸ್ವಲ್ಪ ಕಹಿಯಾಗಿದ್ದರೂ, ಬೇವಿನ ಎಲೆಯ ಚಹಾವು ಪರಿಣಾಮಕಾರಿ ಆಯುರ್ವೇದ ಪಾನೀಯವಾಗಿದ್ದು ಅದು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ.


ನಿಂಬೆ ಮತ್ತು ಶುಂಠಿ

ನಿಂಬೆ ಮತ್ತು ಶುಂಠಿ ಆರೋಗ್ಯದ ಪರಿಣಾಮಗಳಿಗೆ ಹೆಸರುವಾಸಿಯಾಗಿದೆ. ಶುಂಠಿ ಮತ್ತು ನಿಂಬೆಯ ಬೆಚ್ಚಗಿನ ಪಾನೀಯವು ದೇಹವನ್ನು ನಿರ್ವಿಷಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ನೈಸರ್ಗಿಕವಾಗಿ ಇನ್ಸುಲಿನ್ ಉತ್ಪಾದನೆ ಮಾಡುತ್ತದೆ.

ಇದನ್ನೂ ಓದಿ: FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ತ್ರಿಫಲ

ಆಯುರ್ವೇದ ಗಿಡಮೂಲಿಕೆಗಳ ಮಿಶ್ರಣವು ಮೂರು ಹಣ್ಣುಗಳನ್ನು ಒಳಗೊಂಡಿದೆ: ಆಮ್ಲಾ, ಬಿಭಿಟಕಿ ಮತ್ತು ಹರಿತಕಿ. ತ್ರಿಫಲಾ ಚಹಾವು ಒಟ್ಟಾರೆ ಆರೋಗ್ಯ ಮತ್ತು ಜೀರ್ಣಕಾರಿ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ ಮತ್ತು ಕರುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.

Continue Reading

ಆರೋಗ್ಯ

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ʻಬೀನ್‌ ಕರ್ಡ್‌ʼ ಎಂಬ ಹೆಸರಿನಿಂದಲೂ ಕರೆಸಿಕೊಳ್ಳುವ ಈ ತೋಫು ಸೋಯಾ ಉತ್ಪನ್ನ. ಸಸ್ಯದಿಂದಲೇ ಸಿದ್ಧಗೊಂಡ ಈ ತೋಫು ಅತಿ ಹೆಚ್ಚಿನ ಪ್ರೊಟೀನ್‌ ಹೊಂದಿರುವ ತಿನಿಸು. ಜೊತೆಗೆ ಹಲವು ರೀತಿಯ ಪೋಷಕಸತ್ವಗಳು ಇದರಲ್ಲಿದ್ದು, ಅತ್ಯಂತ ಆರೋಗ್ಯಕರ (Health benefits Of Tofu) ತಿನಿಸು ಎಂಬ ಖ್ಯಾತಿಗೂ ಪಾತ್ರವಾಗಿದೆ.

VISTARANEWS.COM


on

Health Benefits Of Tofu
Koo

ನೋಡುವುದಕ್ಕೆ ಪನೀರ್‌ನಂತೆಯೇ ಕಾಣುವ ಈ ವಸ್ತುವಿನ ಬಗ್ಗೆ ಬಹಳಷ್ಟು ಜನರಿಗೆ ಕುತೂಹಲವಿದೆ. ಅದೂ ಪನೀರ್‌ನ ಒಂದು ಬಗೆ ಎಂದು ಭಾವಿಸಿದವರಿದ್ದಾರೆ. ಹಾಲಿನಿಂದಲೇ ಮಾಡಿದ್ದು ಎಂದು ತಿಳಿದವರಿದ್ದಾರೆ. ಆದರೆ ʻತೋಫುʼ ಎಂಬ ಹೆಸರು ಕೇಳಿ ಇದೇನು ಸಸ್ಯಜನ್ಯವೋ, ಪ್ರಾಣಿಜನ್ಯವೋ ಎಂಬ ಗೊಂದಲಕ್ಕೆ ಬಿದ್ದವರೂ ಇದ್ದಾರೆ. ʻಬೀನ್‌ ಕರ್ಡ್‌ʼ ಎಂಬ ಹೆಸರಿನಿಂದಲೂ ಕರೆಸಿಕೊಳ್ಳುವ ಇದು ಸೋಯಾ ಉತ್ಪನ್ನ. ಸಸ್ಯದಿಂದಲೇ ಸಿದ್ಧಗೊಂಡ ಈ ತೋಫು ಅತಿ ಹೆಚ್ಚಿನ ಪ್ರೊಟೀನ್‌ ಹೊಂದಿರುವ ತಿನಿಸು. ಜೊತೆಗೆ ಹಲವು ರೀತಿಯ ಪೋಷಕಸತ್ವಗಳು ಇದರಲ್ಲಿದ್ದು, ಅತ್ಯಂತ ಆರೋಗ್ಯಕರ (Health benefits Of Tofu) ತಿನಿಸು ಎಂಬ ಖ್ಯಾತಿಗೂ ಪಾತ್ರವಾಗಿದೆ.

Tofu

ಏನಿದು ತೋಫು?

ಸರಳವಾಗಿ ಹೇಳುವುದಾದರೆ ಸೋಯಾ ಹಾಲಿನ ಪನೀರ್‌ ಎಂದು ತಿಳಿಯಬಹುದು. ನೋಡುವುದಕ್ಕೆ ಪನೀರ್‌ನಂತೆಯೇ ಇದ್ದರೂ, ಇವೆರಡರಲ್ಲಿ ಬಹಳಷ್ಟು ವ್ಯತ್ಯಾಸಗಳಿವೆ. ಸೋಯಾ ಹಾಲಿಗೆ ಕ್ಯಾಲ್ಸಿಯಂ ಮತ್ತು ಮೆಗ್ನೀಶಿಯಂ ಉಪ್ಪನ್ನು ಸೇರಿಸಿ, ಹಸುವಿನ ಹಾಲಿನಂತೆಯೇ ಒಡೆಸಿ ಪನೀರ್‌ ರೀತಿಯಲ್ಲಿ ಕಾಣುವಂತೆಯೇ ತೋಫುವನ್ನು ಸಿದ್ಧಪಡಿಸಲಾಗುತ್ತದೆ. ನಂತರ ಇದನ್ನು ಚಚ್ಚೌಕವಾಗಿ ಕತ್ತರಿಸಲಾಗುತ್ತದೆ. ಇದು ಸಂಪೂರ್ಣ ಸಸ್ಯಜನ್ಯ ಉತ್ಪನ್ನ. ವೇಗನ್‌ಗಳಿಗೆ ಹೇಳಿ ಮಾಡಿಸಿದ ಆಹಾರ. ಇದನ್ನು ಎಲ್ಲರೂ ಸೇವಿಸಬಹುದು. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ರೀತಿಯಲ್ಲಿ ಲಾಭಗಳಿವೆ. ಏನು ಪ್ರಯೋಜನಗಳಿವೆ ಸೋಯಾ ಹಾಲಿನ ಪನೀರ್‌ ಅಥವಾ ತೋಫು ಸೇವನೆಯಿಂದ?

paneer tofu

ಅತ್ತ್ಯುತ್ತಮ ಪ್ರಾಣಿಜನ್ಯ ಪ್ರೊಟೀನ್

ಸಸ್ಯಾಹಾರಿಗಳಿಗೆ ಪ್ರೊಟೀನ್‌ ಸಾಲುವುದಿಲ್ಲ ಎಂಬ ದೂರು ಸಾಮಾನ್ಯ. ಆದರೆ ನಿಯಮಿತವಾಗಿ ಪನೀರ್‌, ತೋಫು ಸೇವನೆಯನ್ನು ರೂಢಿಸಿಕೊಂಡರೆ ಸಸ್ಯಾಹಾರಿಗಳೂ ಪ್ರೊಟೀನ್‌ ಕೊರತೆಯನ್ನು ನೀಗಿಸಿಕೊಳ್ಳಬಹುದು. ಅರ್ಧ ಕಪ್‌ ತೋಫುವಿನಲ್ಲಿ 181 ಕ್ಯಾಲೊರಿಗಳು, 21.8 ಗ್ರಾಂನಷ್ಟು ಪ್ರೊಟೀನ್‌, 11 ಗ್ರಾಂ ಕೊಬ್ಬು ಪ್ರಮುಖವಾಗಿ ದೊರೆಯುತ್ತದೆ. ಇದರಲ್ಲಿ ಅಗತ್ಯವಾದ ಎಲ್ಲ 9 ಅಮೈನೊ ಆಮ್ಲಗಳು ಸಮೃದ್ಧವಾಗಿ ದೊರೆಯುತ್ತವೆ. ಸ್ನಾಯುಗಳ ದುರಸ್ತಿ ಮಾಡಿ, ಬೆಳವಣಿಗೆಗೆ ಅಗತ್ಯವಾದಂಥ ಸಂಪೂರ್ಣ ಪ್ರೊಟೀನ್‌ ತೋಫುವಿನಲ್ಲಿ ದೊರೆಯುತ್ತದೆ.

weight loss

ತೂಕ ಇಳಿಕೆಗೆ ಸೂಕ್ತ

ಕಡಿಮೆ ಕ್ಯಾಲರಿ ಮತ್ತು ಹೆಚ್ಚು ಪ್ರೊಟೀನ್‌ ಹೊಂದಿರುವ ಕಾರಣದಿಂದ, ತೂಕ ಇಳಿಸುವವರಿಗೆ ಹೇಳಿ ಮಾಡಿಸಿದ ಆಹಾರವಿದು. ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುವ ಇದು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದರಿಂದ ಆಗಾಗ ಕಾಡುವ ಕಳ್ಳ ಹಸಿವನ್ನು ದೂರ ಮಾಡಿ, ದೇಹದಲ್ಲಿ ಅನಗತ್ಯ ಕೊಬ್ಬು ಜಮಾಯಿಸುವುದನ್ನು ಸಹ ತಡೆಯಬಹುದು. ಹೀಗಾಗಿ ತೂಕ ಇಳಿಸುವವರಿಗೆ ಇದು ಸೂಕ್ತವಾದ ಆಹಾರವಿದು.

Heart Health In Winter

ಹೃದಯದ ಮಿತ್ರ

ತೋಫುವಿನಲ್ಲಿ ಸ್ಯಾಚುರೇಟೆಡ್‌ ಕೊಬ್ಬಿನ ಪ್ರಮಾಣ ಅತಿ ಕಡಿಮೆ. ಇದರಲ್ಲಿ ಇರುವ ಐಸೊಫ್ಲೇವನ್‌ಗಳು ಎಲ್‌ಡಿಎಲ್‌ ಕೊಲೆಸ್ಟ್ರಾಲ್‌ಗಳ ಜಮಾವಣೆಯನ್ನು ತಗ್ಗಿಸಲು ಸಹಾಯ ಮಾಡುತ್ತವೆ. ಹೀಗೆ ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯ ಕಾಪಾಡಲು ಸೋಯಾ ಪನೀರ್‌ ನೆರವಾಗುತ್ತದೆ.

heart attack and Diabetes control

ಮಧುಮೇಹ ನಿಯಂತ್ರಣ

ತೋಫುವಿನ ಗ್ಲೈಸೆಮಿಕ್‌ ಸೂಚಿ ಕಡಿಮೆಯಿದೆ. ಅಂದರೆ ರಕ್ತದಲ್ಲಿರುವ ಸಕ್ಕರೆಯಂಶ ದಿಢೀರ್‌ ಏರಿಕೆಯಾಗಲು ಇದು ಅವಕಾಶ ನೀಡುವುದಿಲ್ಲ. ದೇಹದ ಚಯಾಪಚಯವನ್ನು ಹೆಚ್ಚಿಸುವ ಇದು, ನಾರು ಮತ್ತು ಪ್ರೊಟೀನನ್ನು ಸಾಂದ್ರವಾಗಿ ಹೊಂದಿದೆ. ಇಂಥ ಆಹಾರಗಳು ಮಧುಮೇಹಿಗಳಿಗೆ ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತವೆ. ಗರ್ಭಾವಸ್ಥೆಯ ಮಧುಮೇಹ ಹೊಂದಿದವರ ಮೇಲೆ ನಡೆಸಿದ ಪ್ರಯೋಗದಲ್ಲಿ, ಆರು ವಾರಗಳವರೆಗೆ ಹೆಚ್ಚಿನ ಪ್ರಮಾಣದ ಸೋಯ್‌ ಪ್ರೊಟೀನ್‌ ಸೇವಿಸಿದ ಮಹಿಳೆಯರಲ್ಲಿ ಸಕ್ಕರೆ ಕಾಯಿಲೆ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದ್ದು ದಾಖಲಾಗಿದೆ.

ealthy internal organs of human digestive system / highlighted blue organs

ಜೀರ್ಣಾಂಗಗಳು ಕ್ಷೇಮ

ತೋಫುವಿನಲ್ಲಿ ಸಾಕಷ್ಟು ನಾರಿನಂಶವಿದೆ. ಇದು ಮಲಬದ್ಧತೆಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ, ನಾರು ಹೆಚ್ಚಿರುವ ಆಹಾರಗಳಿಂದ ಜೀರ್ಣಾಂಗಗಳಲ್ಲಿರುವ ಉತ್ತಮ ಬ್ಯಾಕ್ಟೀರಿಯಗಳ ಸಂಖ್ಯೆಯನ್ನು ವೃದ್ಧಿಸಬಹುದು. ಇದಲ್ಲದೆ, ಕೆಲವು ಬಗೆಯ ತೋಫುಗಳ ತಯಾರಿಕೆಯ ಪ್ರಕ್ರಿಯೆಯಲ್ಲಿ ಒಂದಿಷ್ಟು ಪ್ರೊಬಯಾಟಿಕ್‌ ಬ್ಯಾಕ್ಟೀರಿಯಗಳು ಸೇರಿಕೊಳ್ಳುತ್ತವೆ. ಈ ಎಲ್ಲದರಿಂದ ಜೀರ್ಣಾಂಗಗಳ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಾಧ್ಯವಿದೆ.

Bone Health In Winter

ಮೂಳೆಗಳ ಸಾಂದ್ರತೆ ರಕ್ಷಣೆ

ತೋಫು ತಯಾರಿಸುವ ಪ್ರಕ್ರಿಯೆಯಲ್ಲಿಯೇ ಕ್ಯಾಲ್ಶಿಯಂ ಮತ್ತು ಮೆಗ್ನೀಶಿಯಂ ಇದರಲ್ಲಿ ಸೇರಿಕೊಳ್ಳುತ್ತವೆ. ಮೂಳೆಗಳ ಸಾಂದ್ರತೆಯ ರಕ್ಷಣೆಗೆ ಈ ಖನಿಜಗಳು ಅಗತ್ಯವಾಗಿ ಬೇಕು. ಹಾಗಾಗಿ ಆಸ್ಟಿಯೊಪೊರೊಸಿಸ್‌ ಇರುವಂಥವರಿಗೆ ಇದು ಒಳ್ಳೆಯ ಆಹಾರ. ಜೊತೆಗೆ, ಋತುಬಂಧದ ಸಮಪದಲ್ಲಿರುವವರು, ಯಾವುದೇ ರೀತಿಯ ಕ್ಯಾಲ್ಶಿಯಂ ಕೊರತೆ ಇರುವವರಿಗೂ ಇದು ಸೂಕ್ತ. ಮಿತ ಪ್ರಮಾಣದಲ್ಲಿ ಎಲ್ಲರೂ ಇದನ್ನು ಸೇವಿಸುವುದು ಒಳ್ಳೆಯದೆ.

ಇದನ್ನೂ ಓದಿ: Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

ಜಾಗ್ರತೆ ಮಾಡಿ

ಹಾಗೆಂದು ಇದನ್ನು ಮಿತಿಮೀರಿಯೂ ತಿನ್ನುವಂತಿಲ್ಲ. ಸೋಯ್‌ ಅಲರ್ಜಿ ಇರುವವರು, ಥೈರಾಯ್ಡ್‌ ತೊಂದರೆಗಳು ಇರುವವರು, ಅದರಲ್ಲೂ ಮುಖ್ಯವಾಗಿ ಹೈಪೊ ಥೈರಾಯ್ಡ್‌ ಇರುವವರು, ಕಿಡ್ನಿ ಕಲ್ಲು ಇರುವವರು ಇದನ್ನು ಮಿತವಾಗಿ ಬಳಸುವುದು ಸೂಕ್ತ. ಹೆಚ್ಚಿನ ಪ್ರೊಟೀನ್‌ ಮತ್ತು ನಾರು ಸೇವನೆಯಿಂದ ಕೆಲವರಿಗೆ ಹೊಟ್ಟೆ ಉಬ್ಬರ, ಅಜೀರ್ಣ, ಡಯರಿಯಾ ಕಾಡಬಹುದು. ಹಾಗಾಗಿ ತೋಫು ಒಳ್ಳೆಯದೇ ಆದರೂ ಇದನ್ನು ಮಿತವಾಗಿ ಸೇವಿಸುವುದು ಉತ್ತಮ.

Continue Reading
Advertisement
Prajwal Revanna Case
ಕರ್ನಾಟಕ25 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ49 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌