Ram Mandir: ಮಂದಿರಕ್ಕೆ ಅಳವಡಿಸುವ 18 ಬಾಗಿಲು ಹೈದರಾಬಾದ್‌ನಲ್ಲಿ ಕೆತ್ತನೆ; ವಿಶೇಷ ಏನು? - Vistara News

ದೇಶ

Ram Mandir: ಮಂದಿರಕ್ಕೆ ಅಳವಡಿಸುವ 18 ಬಾಗಿಲು ಹೈದರಾಬಾದ್‌ನಲ್ಲಿ ಕೆತ್ತನೆ; ವಿಶೇಷ ಏನು?

Ram Mandir: ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜನವರಿ 22ರ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಬಿಗಿ ಬಂದೋಬಸ್ತ್‌ ಕೂಡ ಏರ್ಪಡಿಸಲಾಗಿದೆ.

VISTARANEWS.COM


on

Ram Mandir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ/ಹೈದರಾಬಾದ್:‌ ಅಯೋಧ್ಯೆಯಲ್ಲಿ (Ayodhya) ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರಕ್ಕೆ (Ram Mandir) 2024ರ ಜನವರಿ 22ರಂದು ಚಾಲನೆ ನೀಡಲಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ದೇಶದ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳುವ ಕಾರಣ ಅಯೋಧ್ಯೆಯಲ್ಲಿ ಅತ್ಯಾಧುನಿಕ ಮೂಲ ಸೌಕರ್ಯದ ಜತೆಗೆ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಇನ್ನು ಭವ್ಯ ರಾಮಮಂದಿರಕ್ಕೆ 18 ಬಾಗಿಲುಗಳನ್ನು (Ram Mandir Doors) ಅಳವಡಿಸಲಾಗುತ್ತಿದ್ದು, ಎಲ್ಲ ಬಾಗಿಲುಗಳು ಹೈದರಾಬಾದ್‌ನಲ್ಲಿ ತಯಾರಾಗಿವೆ ಎಂಬುದು ವಿಶೇಷವಾಗಿದೆ.

ಹೌದು, ಹೈದರಾಬಾದ್‌ನ ಅನುರಾಧಾ ಟಿಂಬರ್ಸ್‌ ಇಂಟರ್‌ನ್ಯಾಷನಲ್‌ ಎಂಬ ಕಂಪನಿಯೇ ರಾಮಮಂದಿರದ 18 ಬಾಗಿಲುಗಳನ್ನು ತಯಾರಿಸಿದೆ. ರಾಮಮಂದಿರದ ಗರ್ಭಗುಡಿಯ ಬಾಗಿಲು ಸೇರಿ 18 ಬಾಗಿಲುಗಳ ತಯಾರಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಅವುಗಳನ್ನು ಅಯೋಧ್ಯೆಗೆ ರವಾನಿಸಲಾಗುತ್ತದೆ. ಗರ್ಭಗುಡಿಯ ಬಾಗಿಲು ಸೇರಿ 18 ಬಾಗಿಲುಗಳು 8 ಅಡಿ ಎತ್ತರ, 12 ಅಡಿ ಅಗಲ ಹಾಗೂ 6 ಇಂಚು ದಪ್ಪ ಇರಲಿವೆ ಎಂದು ಕಂಪನಿಯ ನಿರ್ದೇಶಕ ಶರತ್‌ ಬಾಬು ಮಾಹಿತಿ ನೀಡಿದ್ದಾರೆ.

ಬಾಗಿಲುಗಳ ವಿಶೇಷವೇನು?

ತೇಗದ ಮರಗಳ ತುಂಡುಗಳಿಂದ ರಾಮಮಂದಿರದ ಬಾಗಿಲುಗಳನ್ನು ತಯಾರಿಸಲಾಗಿದೆ. ತಮಿಳುನಾಡಿನ ನುರಿತ ಕುಶಲಕರ್ಮಿಗಳು ಬಾಗಿಲುಗಳನ್ನು ಕೆತ್ತಿದ್ದಾರೆ. ನಾಗರ ಶೈಲಿಯಲ್ಲಿ ಬಾಗಿಲುಗಳನ್ನು ಕೆತ್ತಲಾಗಿದ್ದು, ಅವುಗಳ ಮೇಲೆ ಕಮಲ, ನವಿಲು ಸೇರಿ ಹಲವು ಪಕ್ಷಿಗಳ ಚಿತ್ರಗಳನ್ನು ಕೆತ್ತಲಾಗಿದೆ. ನಾಗರ ಶೈಲಿಯು ಮೂರನೇ ಶತಮಾನದ ಉತ್ತರ ಭಾರತದ ಪ್ರಮುಖ ಕೆತ್ತನೆ ಶೈಲಿಯಾಗಿದೆ. ಎಲ್ಲ ಬಾಗಿಲುಗಳಿಗೆ ಚಿನ್ನದ ಲೇಪನ ಇರಲಿದೆ ಎಂದು ಶರತ್‌ ಬಾಬು ತಿಳಿಸಿದ್ದಾರೆ.

ರಾಜಸ್ಥಾನದ ಅಮೃತಶಿಲೆ ಬಳಕೆ

ರಾಮಮಂದಿರ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರಾನ ಅಮೃತಶಿಲೆ, ಪಿಂಕ್‌ ಸ್ಯಾಂಡ್‌ಸ್ಟೋನ್‌, ತಮಿಳುನಾಡು ಹಾಗೂ ತೆಲಂಗಾಣದ ಗ್ರಾನೈಟ್‌ ಸ್ಟೋನ್‌, ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಸಿಗುವ ಬಣ್ಣದ ಮಾರ್ಬಲ್‌ಗಳನ್ನು ಬಳಸಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜಸ್ಥಾನದ ಭರತ್‌ಪುರದಿಂದ 4.7 ಲಕ್ಷ ಕ್ಯೂಬಿಕ್‌ ಫೀಟ್‌ ಪಿಂಕ್‌ ಸ್ಯಾಂಡ್‌ಸ್ಟೋನ್‌, 17 ಸಾವಿರ ಬಿಳಿ ಅಮೃತ ಶಿಲೆಗಳನ್ನು ಬಳಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Amith Sha : 550 ವರ್ಷಗಳ ರಾಮಮಂದಿರದ ಕನಸು… ಅಮಿತ್​ ಶಾ ಹೇಳಿಕೆಗೊಂದು ಕಾರಣವಿದೆ

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ಉತ್ತರ ದೆಹಲಿಯಲ್ಲಿ 17 ಲಕ್ಷ ರೂಪಾಯಿಗಾಗಿ ಇಬ್ಬರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ಗುರಿ ತಪ್ಪಿ (Accident) ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

By

Accident
Koo

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಧಿ ಹೇಳಿದ್ದಕ್ಕೆ ಶಿಕ್ಷಕನನ್ನೇ ಕೊಂದ ವಿದ್ಯಾರ್ಥಿ

ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು ಕೊಂದಿ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು. ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎನ್ನಲಾಗಿದೆ.

ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.
ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು.

ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

Puri Jagannath Rath Yatra: ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Rath Yatra
Koo

ಪುರಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಒಡಿಶಾದಲ್ಲಿರುವ (Odisha) ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯ (Puri Jagannath Rath Yatra) ವೇಳೆಯೂ ಕಾಲ್ತುಳಿತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟರೆ, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲು ಆಗದೆ ಒಬ್ಬ ಭಕ್ತ ಮೃತಪಟ್ಟಿದ್ದಾರೆ. ನೂಕುನುಗ್ಗಲು ಬಳಿಕ ಕಾಲ್ತುಳಿತ (Stampede) ಉಂಟಾಗಿದ್ದು, 400ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

“ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದೆ. ಒಬ್ಬ ಭಕ್ತ ಉಸಿರಾಡಲು ಆಗದೆ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ರಥ ಎಳೆಯುವಾಗ ಒಬ್ಬರಿಗೊಬ್ಬರು ನೂಕುನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಕಾಲ್ತುಳಿತ ಉಂಟಾಗಿದೆ” ಎಂದು ಅಧಿಕಾರಿಗಳು ತಿಳಿಸಿದರು. “ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಹೃದಯಾಘಾತದಿಂದ ಅಲ್ಲ. ನೂಕುನುಗ್ಗಲು ಉಂಟಾದ ಕಾರಣ ಉಸಿರಾಡಲು ಆಗದೆ, ಉಸಿರುಗಟ್ಟಿ ಆತ ಮೃತಪಟ್ಟಿದ್ದಾನೆ” ಎಂದು ಸೇಂಟ್‌ ಜಾನ್‌ ಆಂಬುಲೆನ್ಸ್‌ ಸೇವೆಗಳ ವಿಭಾಗದ ಅಸಿಸ್ಟಂಟ್‌ ಕಮಾಂಡಂಟ್‌ ಸುಶಾಂತ್‌ ಕುಮಾರ್‌ ಪಟ್ನಾಯಕ್‌ ತಿಳಿಸಿದ್ದಾರೆ.

ಕಾಲ್ತುಳಿತದ ಬಳಿಕ 300 ಜನರನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 50 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಡಿಸ್‌ಚಾರ್ಜ್‌ ಮಾಡಲಾಗಿದೆ. ಯಾರಿಗೂ ಗಂಭೀರವಾಗಿ ಗಾಯಗಳಾಗಿಲ್ಲ. ಕಾಲ್ತುಳಿತದ ಬಳಿಕವೂ ರಥಯಾತ್ರೆಯು ಸುಗಮವಾಗಿ ಸಾಗಿದೆ ಎಂಬುದಾಗಿ ಒಡಿಶಾ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ರಥಯಾತ್ರೆ ವೀಕ್ಷಿಸಿದ ದ್ರೌಪದಿ ಮುರ್ಮು

ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಇದನ್ನೂ ಓದಿ: Puri Jagannath Yatra: ಪ್ರತಿ ವರ್ಷ ಹೊಸ ರಥ, ಜಗನ್ನಾಥನಿಗೆ ಜ್ವರ! ಪುರಿ ರಥ ಯಾತ್ರೆ ವಿಶೇಷ ಹಲವು!

Continue Reading

ದೇಶ

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

NIA Arrest: ಸಯ್ಯದ್‌ ಸಲೀಂ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಈತನ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ನಾರ್ಕೋ ಭಯೋತ್ಪಾದನೆ ನಿಗ್ರಹಿಸುವಲ್ಲಿ ಪಣತೊಟ್ಟಿರುವ ಎನ್‌ಐಎಗೆ ಇದು ಬಹುದೊಡ್ಡ ಮಟ್ಟದ ಯಶಸ್ಸು ಎಂದು ಹೇಳಲಾಗಿದೆ. ಈತ ಗಡಿ ಭಾಗದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

VISTARANEWS.COM


on

NIA Arrest
Koo

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ (LeT) ಮತ್ತು ಹಿಜ್ಬುಲ್‌ ಮುಜಾಹಿದ್ದೀನ್‌(HM) ಸಂಘಟನೆ ಜೊತೆಗೆ ನಂಟು ಹೊಂದಿದ್ದ ಪ್ರಮುಖ ಆರೋಪಿಯನ್ನು ಎನ್‌ಐಎ(NIA Arrest) ಅರೆಸ್ಟ್‌ ಮಾಡಿದೆ. ನಾರ್ಕೋ-ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಯ್ಯದ್‌ ಸಲೀಂ ಜಹಾಂಗೀರ್‌ ಅಂದ್ರಾಬಿ ಅಲಿಯಾಸ್‌ ಸಲೀಂ ಅಂದ್ರಾಬಿ ಕಳೆದ ನಾಲ್ಕೈದು ವರ್ಷಗಳಿಂದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಸಯ್ಯದ್‌ ಸಲೀಂ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಲ್ಲಿ ಈತನ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ನಾರ್ಕೋ ಭಯೋತ್ಪಾದನೆ ನಿಗ್ರಹಿಸುವಲ್ಲಿ ಪಣತೊಟ್ಟಿರುವ ಎನ್‌ಐಎಗೆ ಇದು ಬಹುದೊಡ್ಡ ಮಟ್ಟದ ಯಶಸ್ಸು ಎಂದು ಹೇಳಲಾಗಿದೆ. ಈತ ಗಡಿ ಭಾಗದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಗ್ರೇಟರ್ ಕಾಶ್ಮೀರ ವೆಬ್‌ಸೈಟ್‌ನ ಪ್ರಕಾರ, ಜೂನ್ 26, 2020 ರಂದು ಸ್ಥಳೀಯ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಕೇಂದ್ರೀಯ ಸಂಸ್ಥೆ ವಹಿಸಿಕೊಂಡಿತ್ತು. ಎನ್‌ಐಎ ತನ್ನ ತನಿಖೆಯ ಸಮಯದಲ್ಲಿ, ಭಾನುವಾರ ಬಂಧಿತ ಆರೋಪಿ ಅಂದ್ರಾಬಿ ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಇತರ ಭಾಗಗಳಲ್ಲಿ ಮಾದಕ ದ್ರವ್ಯಗಳನ್ನು ಸಂಗ್ರಹಿಸಲು ಮತ್ತು ಮಾರಾಟ ಮಾಡುವ ಜಾಲದಲ್ಲಿ ಭಾಗಿಯಾಗಿದ್ದ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಮೋಮಿನ್ ಪೀರ್ ಎಂಬಾತನನ್ನು ಬಂಧಿಸಿದ ಹಂದ್ವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿದ ಪೊಲೀಸರು ₹20 ಲಕ್ಷ ನಗದು ಹಾಗೂ 2 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ, NIA ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಚಾರ್ಜ್ ಶೀಟ್ ಮಾಡಿದೆ. ಈ ಚಾರ್ಜ್ ಶೀಟ್‌ಗಳನ್ನು ಡಿಸೆಂಬರ್ 2020 ಮತ್ತು ಫೆಬ್ರವರಿ 2023 ರ ನಡುವೆ ಸಲ್ಲಿಸಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಕೇರಳದಲ್ಲಿ ಉಗ್ರ ಸಂಘಟನೆಗಳಿಗೆ ಯುವಕರನ್ನು ನೇಮಕಾತಿ ಮಾಡುತ್ತಿದ್ದ ಆರೋಪದಲ್ಲಿ ಕುಖ್ಯಾತ ಮಾವೋವಾದಿ ಸಂಜಯ್‌ ದೀಪಕ್‌ ರಾವ್‌(Sanjay Deepak Rao) ವಿರುದ್ಧ ಎನ್‌ಐಎ(NIA Charge sheet) ಚಾರ್ಜ್‌ ಶೀಟ್‌ ದಾಖಲಿಸಿತ್ತು.. ಸಿಪಿಐ (ಮಾವೋವಾದಿ)ಯ ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ (ಡಬ್ಲ್ಯುಜಿಎಸ್‌ಝಡ್‌ಸಿ) ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ವಿರುದ್ಧ ಎನ್‌ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಐಪಿಸಿ ಮತ್ತು ಯುಎ (ಪಿ) ಕಾಯ್ದೆ ಯುಎಪಿಎಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಎರ್ನಾಕುಲಂನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಎನ್‌ಐಎ ಈ ಚಾರ್ಜ್‌ಶೀಟ್‌ ದಾಖಲಿಸಿದೆ.

ಸಿಪಿಐ (ಮಾವೋವಾದಿ) ಪಶ್ಚಿಮ ಘಟ್ಟದ ​​ವಿಶೇಷ ವಲಯ ಸಮಿತಿಯ (ಡಬ್ಲ್ಯುಜಿಎಸ್‌ಝಡ್‌ಸಿ) ಕೇಂದ್ರ ಸಮಿತಿ ಸದಸ್ಯ ಸಂಜಯ್ ದೀಪಕ್ ರಾವ್ ಅಲಿಯಾಸ್‌ ವಿಕಾಸ್, ಸಿಪಿಐನ ಮುಂಚೂಣಿ ಸಂಘಟನೆಯಾದ ಕ್ರಾಂತಿಕಾರಿ ಲೇಖಕಿಯರ ಸಂಘದ ಸದಸ್ಯರಾದ ಪಿನಾಕಾ ಪಾಣಿ ಅಲಿಯಾಸ್‌ ಪಾಣಿ ಮತ್ತು ವರಲಕ್ಷ್ಮಿ ಆರೋಪಿಗಳು ಎಂದು ತನಿಖೆಯಿಂದ ತಿಳಿದುಬಂದಿದೆ. ಆಂಧ್ರಪ್ರದೇಶದಲ್ಲಿ (ಮಾವೋವಾದಿ), ವಯನಾಡಿನ ಶ್ರೀಕಾಂತ್ ಮತ್ತು ಆಂಧ್ರಪ್ರದೇಶದ ಆಂಜನೇಯಲು ಅಕಾ ಸುಧಾಕರ್ ಮುಂತಾದವರು ಚೈತನ್ಯ ಅಕಾ ಸೂರ್ಯನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಸಿಪಿಐ (ಮಾವೋವಾದಿ)ಗೆ ಸೇರ್ಪಡೆಗೊಳ್ಳಲು ಪ್ರೇರೇಪಿಸಿದ್ದಾರೆ ಎಂಬುದನ್ನು ಎನ್‌ಐಎ ಹೇಳಿದೆ. ನೇಮಕಾತಿಯ ನಂತರ, ಭಾರತದ ಒಕ್ಕೂಟದ ಭದ್ರತೆ, ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಆತನಿಗೆ ತರಬೇತಿ ನೀಡಲಾಯಿತು.

ಇದನ್ನೂ ಓದಿ:Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ದೇಶ

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

Mobile Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗುತ್ತಿದೆ. ಏರ್‌ಟೆಲ್‌, ವೋಡಾಫೋನ್-ಐಡಿಯಾ ಸಂಸ್ಥೆಗಳು ಕೂಡ ಬೆಲೆಯೇರಿಕೆ ಮಾಡಿವೆ.

VISTARANEWS.COM


on

Mobile Tariffs
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆ ಮಾಡಿದೆ. ಹಾಗಾಗಿ, ಕೇಂದ್ರ ಸರ್ಕಾರವು (Central Government) ಮಧ್ಯಪ್ರವೇಶಿಸಿ, ರಿಚಾರ್ಜ್‌ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ಕಾರಣಕ್ಕೂ ಖಾಸಗಿ ಟೆಲಿಕಾಂ ಕಂಪನಿಗಳ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.

“ಖಾಸಗಿ ಕಂಪನಿಗಳ ಬೆಲೆಯೇರಿಕೆ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ನಿಯಮಗಳ ಅನ್ವಯವೇ ಖಾಸಗಿ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಹಾಗಾಗಿ, ಇಂತಹ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ” ಎಂದು ಕೇಂದ್ರ ಸರ್ಕಾರವು ಪ್ರಕಟಣೆ ತಿಳಿಸಿದೆ. ಮೂರೂ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಮಾಡಿದ ಕಾರಣ ಸರ್ಕಾರವು ಬೆಲೆ ಇಳಿಸಬೇಕು ಎಂಬುದಾಗಿ ಜನ ಆಗ್ರಹಿಸಿದ್ದರು.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಏರ್‌ಟೆಲ್‌ ಮೊಬೈಲ್‌ ರಿಚಾರ್ಜ್‌ ದರಪಟ್ಟಿ ಇಲ್ಲಿದೆ

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ವೋಡಾಫೋನ್-ಐಡಿಯಾ ಬೆಲೆ ಇಷ್ಟಿದೆ

ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading
Advertisement
Dengue Scare
ಕರ್ನಾಟಕ11 mins ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ52 mins ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest1 hour ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ1 hour ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ1 hour ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು1 hour ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Viral News
ವೈರಲ್ ನ್ಯೂಸ್2 hours ago

Viral News: ಸಮುದ್ರದಲ್ಲಿ ಮೂತ್ರ ವಿಸರ್ಜನೆ ಮಾಡಿದರೆ 67 ಸಾವಿರ ರೂ. ದಂಡ; ಕಂಡು ಹಿಡಿಯೋದು ಹೇಗೆ?

Bengaluru News Physical Abuse
ಬೆಂಗಳೂರು2 hours ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ2 hours ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ2 hours ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ6 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ6 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ17 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌