Readymade Bagina Trend: ಗೌರಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗೆ ಕಾಲಿಟ್ಟ 3 ಶೈಲಿಯ ರೆಡಿಮೇಡ್‌ ಬಾಗಿಣ - Vistara News

ಗಣೇಶ ಚತುರ್ಥಿ

Readymade Bagina Trend: ಗೌರಿ ಹಬ್ಬದ ಪ್ರಯುಕ್ತ ಮಾರುಕಟ್ಟೆಗೆ ಕಾಲಿಟ್ಟ 3 ಶೈಲಿಯ ರೆಡಿಮೇಡ್‌ ಬಾಗಿಣ

ಗೌರಿ ಹಬ್ಬದ ಪ್ರಯುಕ್ತ ಈ ಬಾರಿಯು ನಾನಾ ಬಗೆಯ ಮೊರದ ಬಾಗಿಣ (Readymade Bagina Trend) ಮಾರುಕಟ್ಟೆಗೆ ಕಾಲಿಟ್ಟಿದ್ದು, ಅವುಗಳಲ್ಲಿ 3 ಬಗೆಯವು ಅತಿ ಹೆಚ್ಚು ಬೇಡಿಕೆಯಲ್ಲಿದೆ. ಅವು ಯಾವ್ಯುವು? ಹೇಗೆಲ್ಲಾ ಇರುತ್ತವೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

VISTARANEWS.COM


on

Readymade Bagina Trend
ಚಿತ್ರಗಳು : ಇನ್ಸ್ಟಾಗ್ರಾಮ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ಗೌರಿ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ನಾನಾ ಬಗೆಯ ವೈವಿಧ್ಯಮಯ ರೆಡಿಮೇಡ್‌ ಬಾಗಿಣಗಳು (Readymade Bagina Trend) ಕಾಲಿಟ್ಟಿವೆ. ಬ್ಯುಸಿ ಇರುವ ಉದ್ಯೋಗಸ್ಥ ಮಹಿಳೆಯರಿಗೆ ಮಾತ್ರವಲ್ಲ, ಗೃಹಿಣಿಯರ ಹಬ್ಬದ ಆಚರಣೆಗೂ ಸಾಥ್‌ ನೀಡುತ್ತಿವೆ.

“ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೌರಿ ಹಬ್ಬದ ಪ್ರಯುಕ್ತ ಹೆಣ್ಣು ಮಕ್ಕಳಿಗೆ ನೀಡುವ ನಾನಾ ಬಗೆಯ ವೆರೈಟಿ ಬಾಗಿಣಕ್ಕೆ ಬೇಡಿಕೆ ಹೆಚ್ಚಾಗಿದೆ. ಗೃಹಿಣಿಯರು ಮಾತ್ರವಲ್ಲ, ಉದ್ಯೋಗಸ್ಥ ಮಹಿಳೆಯರು ಕೂಡ ಹಬ್ಬವನ್ನು ಆಚರಿಸುವುದು ಇತ್ತೀಚೆಗೆ ಹೆಚ್ಚಾಗಿದೆ. ಅವರವರ ಅಭಿರುಚಿಗೆ ತಕ್ಕಂತೆ ನಾನಾ ಬಗೆಯ ರೆಡಿಮೇಡ್‌ ಬಾಗಿಣಗಳು ಮಾರುಕಟ್ಟೆಗೆ ಕಾಲಿಟ್ಟಿವೆ. ಅವುಗಳಲ್ಲಿ ಹೊಸದಾಗಿ ಮದುವೆಯಾದ ಹೆಣ್ಣುಮಕ್ಕಳಿಗೆ ಕೊಡುವ ವಿಶೇಷ ಬಾಗಿಣಗಳು ಕೂಡ ಪ್ರತ್ಯೇಕವಾಗಿ ದೊರಕುತ್ತಿವೆ. ಇದು ಮಹಿಳೆಯರಿಗೆ ಹಬ್ಬದ ತಯಾರಿಯಲ್ಲಿ ಕೊಂಚ ಕೆಲಸವನ್ನು ತಗ್ಗಿಸಿದೆ“ ಎನ್ನುತ್ತಾರೆ ಗಾಂಧಿ ಬಜಾರ್‌ನ ಶಾಪ್‌ವೊಂದರ ಮಾರಾಟಗಾರರು.

3 types of bagina

3 ಬಗೆಯ ಮೊರದ ಬಾಗಿಣ

ಇದೀಗ ಅತಿ ಹೆಚ್ಚು ಬೇಡಿಕೆಯಲ್ಲಿರುವ ಮೊರದ ಬಾಗಿಣದಲ್ಲಿ ಸಿಂಗಾರಗೊಂಡ ಆಕರ್ಷಕ ಡಿಸೈನರ್‌ ಬಾಗಿಣ, ಮಿನಿ ಗೌರಿ ಮುಖವನ್ನು ಎಂಬೋಸಿಂಗ್‌ನಂತೆ ಅಂಟಿಸಿ ಅಲಂಕಾರ ಮಾಡಲಾದ ಬಾಗಿಣ ಮತ್ತು ಮಿನಿ ಬಾಗಿಣಗಳು ಅತಿ ಹೆಚ್ಚು ಮಾರಾಟವಾಗುತ್ತಿವೆ ಎನ್ನುತ್ತಾರೆ ಮೊರದ ಬಾಗಿಣ ಮಾರಾಟಗಾರರು.

Attractive designer room

ಆಕರ್ಷಕ ಡಿಸೈನರ್‌ ಬಾಗಿಣ

ಅರೇ, ಇದೇನಿದು ಬಾಗಿಣಕ್ಕೂ ಡಿಸೈನರ್‌ ಹೆಸರು ತಗುಲಿ ಹಾಕಿಕೊಂಡಿತಾ! ಎಂದುಕೊಂಡರೇ ಹೌದು. ಈ ಬಗೆಯ ಬಾಗಿಣಗಳು ಸಾಕಷ್ಟು ದಿನಗಳ ಹಿಂದೆಯೇ ಸಿದ್ಧಗೊಂಡಿರುತ್ತವೆ. ಮೊರದ ಮೇಲ್ಭಾಗವನ್ನು ಕಲಾವಿದರು ಅಥವಾ ಮಹಿಳಾ ಕರಕುಶಲ ಕರ್ಮಿಗಳು ನಾನಾ ಬಗೆಯ ಡಿಸೈನ್‌ ಮಾಡಿರುತ್ತಾರೆ. ಝರಿಯಿಂದ ಮೇಲ್ಭಾಗವನ್ನು ವಿನ್ಯಾಸಗೊಳಿಸಿ, ಸೈಡಿನಲ್ಲಿ ಕುಚ್ಚು ಹಾಗೂ ಬೀಡ್ಸ್‌ ಅಂಟಿಸಿ ಸಿಂಗರಿಸಿರುತ್ತಾರೆ. ಹೊಸದಾಗಿ ಮದುವೆಯಾಗಿರುವ ಹೆಣ್ಣು ಮಕ್ಕಳಿಗೆ ಗೌರಿ ಹಬ್ಬದ ದಿನದಂದು ನೀಡಲು ಅತಿ ಹೆಚ್ಚಾಗಿ ಖರೀದಿಸುತ್ತಾರೆ. ಫೋಟೋಶೂಟ್‌ಗೂ ಇವು ಹೆಚ್ಚುಬಳಕೆಯಾಗುತ್ತಿವೆ .

Gauri's face is curvy

ಗೌರಿ ಮುಖದ ಮೊರದ ಬಾಗಿಣ

ಪುಟ್ಟ ಗೌರಿಯ ಮುಖವನ್ನು ಎಂಬೋಸಿಂಗ್‌ ರೀತಿಯಲ್ಲಿ ಅಂಟಿಸಿ, ರೇಷ್ಮೆ ಬಾರ್ಡರ್‌ನಲ್ಲಿ ನಾನಾ ಬಗೆಯಲ್ಲಿ ಸಿಂಗರಿಸಿ ಸಿದ್ಧಪಡಿಸಿದ ಮೊರದ ಬಾಗಿಣವೇ ಇದು. ಇದು ಕೂಡ ಈ ಬಾರಿ ಸಾಕಷ್ಟು ವೈವಿಧ್ಯಮಯ ಡಿಸೈನ್‌ಗಳಲ್ಲಿ ದೊರೆಯುತ್ತಿವೆ.

A mini bow for decoration

ಅಲಂಕಾರಕ್ಕಾಗಿ ಮಿನಿ ಬಾಗಿಣ

ಗೌರಿ ಪೂಜೆಯನ್ನು ಮಾಡುವ ಮಹಿಳೆಯರು ತಾವು ಬಾಗಿಣದ ಅಲಂಕಾರವನ್ನು ಮಾಡುತ್ತಾರೆ. ನೋಡಲು ಕಡಿಮೆ ಜಾಗದಲ್ಲೆ ಇರಿಸಬಹುದಾಗಿರುವ ಈ ಮಿನಿ ಮೊರದ ಬಾಗಿಣದಲ್ಲಿ ಎಲ್ಲವೂ ಪುಟ್ಟ ಪುಟ್ಟ ಸಾಮಗ್ರಿಗಳು ಒಳಗೊಂಡಿರುತ್ತವೆ.

  • ರೆಡಿಮೇಡ್‌ ಬಾಗಿಣ ಎಲ್ಲವನ್ನೂ ಒಳಗೊಂಡಿರುತ್ತದೆ.
  • ಆಯಾ ವಿನ್ಯಾಸಕ್ಕೆ ತಕ್ಕಂತೆ ಬೆಲೆ ನಿಗಧಿಯಾಗಿರುತ್ತದೆ.
  • ಆನ್‌ಲೈನ್‌ನಲ್ಲೂ ಇವು ದೊರೆಯುತ್ತವೆ.

(ಲೇಖಕಿ : ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Gowri Ganesha Kids Fashion: ಹಬ್ಬದ ಫ್ಯಾಷನ್‌ನಲ್ಲಿ ಹೆಣ್ಣು ಮಕ್ಕಳಿಗೆ ಬಂತು ಟ್ರೆಡಿಷನಲ್‌ ಉದ್ದ ಲಂಗದ ಡ್ರೆಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        Covaxin
        ದೇಶ21 mins ago

        Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

        Prajwal Revanna Case Another victim gives statement before judge Will Revanna get anticipatory bail
        ಕ್ರೈಂ23 mins ago

        Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

        KL Rahul
        ಕ್ರೀಡೆ37 mins ago

        KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

        T20 World Cup
        ಕ್ರೀಡೆ1 hour ago

        T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

        Shine Shetty Summer Fashion
        ಫ್ಯಾಷನ್1 hour ago

        Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

        IPL 2024
        ಕ್ರೀಡೆ1 hour ago

        IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

        assault Case
        ಬೆಂಗಳೂರು1 hour ago

        Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

        Prajwal Revanna Case Centre says it has no power to revoke Prajwal diplomatic passport Big relief for MP
        ಕರ್ನಾಟಕ2 hours ago

        Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

        Virat kohli
        ಪ್ರಮುಖ ಸುದ್ದಿ2 hours ago

        Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

        Brij Bhushan Singh
        ದೇಶ2 hours ago

        ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

        Sharmitha Gowda in bikini
        ಕಿರುತೆರೆ7 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ7 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ5 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ7 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ6 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ5 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ6 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        Prajwal Revanna Case Another victim gives statement before judge Will Revanna get anticipatory bail
        ಕ್ರೈಂ23 mins ago

        Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

        Dina Bhavishya
        ಭವಿಷ್ಯ14 hours ago

        Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

        dina bhavishya read your daily horoscope predictions for April 30 2024
        ಭವಿಷ್ಯ3 days ago

        Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

        PM Narendra modi in Bagalakote and Attack on Congress
        Lok Sabha Election 20243 days ago

        PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

        PM Narendra modi in Bagalakote for Election Campaign and here is Live telecast
        Lok Sabha Election 20243 days ago

        PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

        dina bhavishya read your daily horoscope predictions for April 29 2024
        ಭವಿಷ್ಯ4 days ago

        Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

        Vote Jihad
        Lok Sabha Election 20244 days ago

        PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

        PM Narendra Modi in Sirsi
        Lok Sabha Election 20244 days ago

        PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

        If Congress comes to power all your assets will belong to Government says PM Narendra Modi
        Lok Sabha Election 20244 days ago

        Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

        Congress ties with Aurangzeb supporters and Girls killed under his rule says Narendra Modi
        Lok Sabha Election 20244 days ago

        Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

        ಟ್ರೆಂಡಿಂಗ್‌