Sadguru Column : ಬದುಕಿನಲ್ಲಿ ಆಟವಾಡುವುದರ ಮಹತ್ವ ತುಂಬ ದೊಡ್ಡದು - Vistara News

ಧಾರ್ಮಿಕ

Sadguru Column : ಬದುಕಿನಲ್ಲಿ ಆಟವಾಡುವುದರ ಮಹತ್ವ ತುಂಬ ದೊಡ್ಡದು

Sadguru Column : ಸದ್ಗುರು ಜಗ್ಗಿ ವಾಸುದೇವ್‌ ಅವರು ಬದುಕಿನಲ್ಲಿ ಕ್ರೀಡೆಯ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಎಲ್ಲ ಆಟಗಳಲ್ಲೂ ಪರಿಣತಿಯನ್ನು ಹೊಂದಿರುವ, ಮೋಟಾರ್‌ ಬೈಕಿಂಗ್‌ನಲ್ಲಿ ಪರಿಣತಿಯನ್ನು ಹೊಂದಿರುವ ಅವರಿಗೆ ಈ ವಿಚಾರದಲ್ಲಿ ಅಥಾರಿಟಿ ಇದೆ.

VISTARANEWS.COM


on

Sadguru-Column-Cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Sadhuru Jaggi Vasudev

ಸದ್ಗುರು ಜಗ್ಗಿ ವಾಸುದೇವ್, ಈಶ ಫೌಂಡೇಶನ್‌
(Sadguru Jaggi Vasudev, Isha Foundation)

ದೇಹಾರೋಗ್ಯಕ್ಕೆ ಮುಖ್ಯವಾದುದು ಆಟ (Sports is important for health). ನನ್ನ ಶಾಲಾದಿನಗಳಲ್ಲಿ ನಾನು ಆಡದ ಆಟಗಳೇ (Sadguru Column) ಇಲ್ಲವೆನ್ನಬಹುದು. ಹಗ್ಗ ಹಿಡಿದು ಮೇಲಕ್ಕೆ ಹತ್ತುವುದು, ದೇಹವನ್ನು ಬಗ್ಗಿಸುವಂತಹ ಜಿಮ್ನ್ಯಾಸ್ಟಿಕ್ಸ್, ಹೊಡೆದಾಟಗಳು, ಕಬಡ್ಡಿ, ಬ್ಯಾಡ್ಮಿಂಟನ್ – ಯಾವುದನ್ನೂ ಬಿಡಲಿಲ್ಲ. ಚಿಕ್ಕವನಾಗಿದ್ದಾಗ ಕ್ರಿಕೆಟ್ ಯಾರೇ ಆಡುತ್ತಿರಲಿ ಅಲ್ಲಿಗೆ ಹೋಗಿ ಸೇರಿಕೊಳ್ಳುತ್ತಿದ್ದೆ (Sadhguru used to play Every Game) . ಅವರು ನನಗೆ ಬ್ಯಾಟ್ ಮಾಡಲು ಬಿಡುತ್ತಿರಲಿಲ್ಲ. ಆದರೆ, ಫೀಲ್ಡ್ ಮಾಡುವಷ್ಟರಲ್ಲೇ ಸಂತೋಷಪಡುತ್ತಿದ್ದೆ. ಈಗಲೂ, ಮಕ್ಕಳು ಆಟವಾಡುತ್ತಿದ್ದರೆ ನಾನಾಗಿಯೇ ಅವರೊಂದಿಗೆ ಸೇರಿಕೊಳ್ಳುತ್ತೇನೆ.

Sadguru Column Foot Bal

ಕಾಲೇಜಿನ ಹಾಕಿ ಟೀಮಿನಲ್ಲಿ ಅವಕಾಶ ಪಡೆದುಕೊಂಡೆ. ಆ ವಯಸ್ಸಿನಲ್ಲಿ ಮೋಟಾರ್ ಸೈಕಲ್‌ಗಳನ್ನು ಓಡಿಸುವುದರಲ್ಲಿ ಮತ್ತು ಹಾರಾಟದಲ್ಲಿದ್ದಷ್ಟು ಆಸಕ್ತಿ ಬೇರೆ ಆಟಗಳಿಗಿಂತಲೂ ಹೆಚ್ಚಾಗಿತ್ತು. ಕೆಲವೇ ನಿಮಿಷಗಳು ಗಾಳಿಯಲ್ಲಿ ಹಾರಾಡಲು, ಗಂಟೆಗಳ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ನನಗೆ ಆಗ ಇಪ್ಪತ್ತೆರಡು ವಯಸ್ಸಿರಬಹುದು, ಒಮ್ಮೆ ನೀಲಗಿರಿ ಪರ್ವತದಿಂದ ಗ್ಲೈಡರಿನಲ್ಲಿ ಹಾರಾಡಿದೆ. ಎಲ್ಲಿಯೋ ಬಹಳ ದೂರದಲ್ಲಿ ನೆಲಕ್ಕೆ ಇಳಿದೆ. ಸೂರ್ಯನನ್ನು ಹಿಂಬಾಲಿಸಿ ದಿಕ್ಕನ್ನು ಗುರುತಿಸಿ ಅಲ್ಲಿಂದ ನಡೆದು ಬಂದೆ. ರಾತ್ರಿ ಹಗಲು ಕಾಡುಗಳಲ್ಲಿ ಕಿಲೋಮೀಟರ್‌ಗಳು ಲೆಕ್ಕವಿಲ್ಲದೆ ನಡೆದಾಡಿದೆ. ಕೈಯಲ್ಲಿದ್ದ ಒಂದೇ ಒಂದು ಸ್ಯಾಂಡ್‌ವಿಚ್ ತಿಂದೆ. ಹಸಿವು ನೀಗಲಿಲ್ಲ. ಅಲ್ಲಲ್ಲಿ ಒಂದೆರಡು ಹಳ್ಳಿಗಳನ್ನು ಸಮೀಪಿಸಿದೆ. ಅಲ್ಲಿದ್ದವರು ತಮಿಳು ಬಿಟ್ಟು ಬೇರೇನನ್ನೂ ಮಾತನಾಡಲಿಲ್ಲ. ನನಗಾದರೋ ಆಗ ತಮಿಳು ಗೊತ್ತಿರಲಿಲ್ಲ.

Sadguru Column Bike Riding

ಹೇಗೋ ಒಂದು ಟೀ ಅಂಗಡಿಯನ್ನು ಕಂಡುಹಿಡಿದೆ. ಅಲ್ಲಿ ಬಿಸಿಬಿಸಿಯಾಗಿ ಇಡ್ಲಿ ತಯಾರಾಗಿತ್ತು. ನನಗಿದ್ದ ಹಸಿವೆಯನ್ನು ನೀಗಲು ಸುಮಾರು ಇಪ್ಪತ್ತೈದು ಇಡ್ಲಿಗಳಾದರೂ ಬೇಕಾಗುತ್ತಿತ್ತು. ನನ್ನ ಕೈಲ್ಲಿರುವುದನ್ನು ನೋಡಿಕೊಂಡೆ. ನನ್ನನ್ನು ಕಂಡು ಹಿಡಿಯಲು ನಮ್ಮ ಗುಂಪಿನವರಿಗೆ ಅದೆಷ್ಟು ದಿನಗಳು ಬೇಕಾಗಬಹುದೆಂಬುದು ತಿಳಿಯದು. ಅಂತಹ ಪರಿಸ್ಥಿತಿಯಲ್ಲಿ ಇರುವ ಎಲ್ಲ ಹಣವನ್ನು ಖರ್ಚು ಮಾಡಿಬಿಟ್ಟರೆ ಹೇಗೆ ಎಂದು ಯೋಚಿಸಿ, ಒಂದೂವರೆ ರೂಪಾಯಿ ಕೊಟ್ಟು ಎರಡೇ ಎರಡು ಇಡ್ಲಿಗಳನ್ನು ಖರೀದಿಸಿ ಅದನ್ನು ತಿಂದೆ. ನನ್ನ ಗುಂಪಿನವರು ಎರಡೂವರೆ ದಿನಗಳ ನಂತರ ನನ್ನನ್ನು ಪತ್ತೆ ಹಚ್ಚಿದರು.

Sadguru Column bike riding1

Sadguru Column :ಇಷ್ಟಾದರೂ ನನ್ನ ಹಾರಾಡುವ ಆಸೆ ತೀರಲಿಲ್ಲ!

ಸೊರಗಿ ಹೋದ ಹೃದಯವುಳ್ಳ ಮತ್ತು ಕಠಿಣ ಮನಸ್ಸಿನ ಸೆರೆಯಾಳುಗಳಲ್ಲಿಯೂ ಆಟದ ಬಗೆಗೆ ಇರುವ ಆಸಕ್ತಿಯನ್ನು ಕಣ್ಣಾರೆ ಕಂಡವನು ನಾನು. ಮೊದಲನೆಯ ಬಾರಿಗೆ ಕೈದಿಗಳಿಗೆ ಯೋಗ ಕಾರ್ಯಕ್ರಮ ನಡೆಸಲು ನನಗೆ ಅನುಮತಿ ದೊರೆತಿತ್ತು. ಸೆರೆಮನೆಯೊಳಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಗಾಳಿಯಲ್ಲಿಯೇ ಒಂದು ಬಗೆಯ ತೀರಲಾರದ ವೇದನೆ ಹೆಪ್ಪುಗಟ್ಟಿರುವಂತೆ ನನಗೆ ಭಾಸವಾಯಿತು. ಸುಮಾರು ಇನ್ನೂರು ಮಂದಿ ಖೈದಿಗಳನ್ನು ಆಟದ ಮೈದಾನಕ್ಕೆ ಬರುವಂತೆ ಹೇಳಿದೆ.

Sadguru Column bike riding2

ನಿಮಗೆ ಯೋಗ ಹೇಳಿಕೊಡಲು ಬರಲಿಲ್ಲ, ನಿಮ್ಮೊಂದಿಗೆ ಚೆಂಡಾಟವನ್ನು ಆಡಲು ಬಂದಿದ್ದೇನೆ ಎಂದು ಹೇಳಿದೆ. ಅವರ ಮುಖದಲ್ಲಿ ಆದ ಬದಲಾವಣೆಯನ್ನು ಕಂಡುಕೊಂಡೆ. ಆಟ ಪ್ರಾರಂಭವಾಯಿತು. ಆಟದಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದವರು ಸಹ ಹತ್ತು ಹದಿನೈದು ನಿಮಿಷಗಳ ನಂತರ ಆಟದಲ್ಲಿ ನಿರತರಾಗಿ, ತಲ್ಲೀನರಾಗಿ, ತಮ್ಮನ್ನು ತಾವೇ ಮರೆತರು. ಆಟದಲ್ಲಿ ತನ್ಮಯರಾದ ಅವರು ಕಿರುಚಾಡುತ್ತಾ, ಕುಪ್ಪಳಿಸುತ್ತಾ ಮಕ್ಕಳಂತೆ ಆಡಿಕುಣಿದರು. ಆಟ ಮುಗಿದು ನಾನು ಹೊರಡಲು ಸಿದ್ಧವಾದಾಗ ಹೋಗಬೇಡಿ ಎಂದು ಕೆಲವರು ನನ್ನ ಕೈ ಹಿಡಿದುಕೊಂಡು ಕಣ್ಣೀರು ಸುರಿಸಿದರು. ಆಟದ ಮಹಿಮೆಯೇ ಅಂತಹುದು.

Sadguru Column Golf

Sadguru Column : ಶಂಕರನ್‌ ಪಿಳ್ಳೆ ಮತ್ತು ಅವನ ನಾಯಿ ಚೆಸ್‌ ಆಡಿದ ಕಥೆ

ಶಂಕರನ್ ಪಿಳ್ಳೆ ಒಮ್ಮೆ ತನ್ನ ಸ್ನೇಹಿತನ ಮನೆಗೆ ಹೋದರು. ಅಲ್ಲಿ ಅವರ ಸ್ನೇಹಿತ ತನ್ನ ನಾಯಿಯೊಂದಿಗೆ ಕುಳಿತುಕೊಂಡು ಚೆಸ್ ಆಡುತ್ತಿದ್ದರು. ಶಂಕರನ್ ಪಿಳ್ಳೆ ಆಶ್ಚರ್ಯದಿಂದ, ‘ಅರೆ! ಇಂತಹ ಬುದ್ಧಿವಂತ ನಾಯಿಯನ್ನು ನಾನು ಇದುವರೆಗೆ ನೋಡಿಯೇ ಇಲ್ಲ’ ಎಂದರು. ಅದಕ್ಕೆ ಆ ಸ್ನೇಹಿತರು, ’ನೀನು ಎಣಿಸಿದಂತೆ ಇದೇನು ಅಂತಹ ಬುದ್ಧಿಶಾಲಿಯಲ್ಲ. ಹತ್ತು ಸಲ ನನ್ನೊಂದಿಗೆ ಆಡಿದ ಆಟದಲ್ಲಿ, ಅದು ಮೂರು ಬಾರಿ ಸೋತುಹೋಯಿತು’ ಎಂದರು.
ತಮಾಷೆಯಾಗಿದೆ ಈ ಕಥೆ. ಆದರೆ ಆಟದಲ್ಲಿ ಕೆಲವು ಸಂದರ್ಭಗಳಲ್ಲಿ ಸೋತರೂ ಮತ್ತೆ ಆಡಬೇಕೆಂಬ ಉತ್ಸಾಹ ಅಗತ್ಯವೆಂಬುದನ್ನು ಆ ನಾಯಿಯಿಂದ ಅಥವಾ ಆ ಸ್ನೇಹಿತರಿಂದ ಕಲಿಯಬಹುದು.

Sadguru Column foot ball

ಆಟದಲ್ಲಿ ಇದೇ ಮುಖ್ಯವಾದ ಅಂಶ. ಗೆಲ್ಲಬೇಕೆಂಬುದು ಗುರಿಯಾದರೂ, ಸೋಲನ್ನು ತೆರೆದ ಮನಸ್ಸಿನಿಂದ ಸ್ವೀಕರಿಸಬೇಕೆಂಬ ಮಾನಸಿಕ ಪ್ರಬುದ್ಧತೆ, ಪಕ್ವತೆ ಇದ್ದರೆ ಮಾತ್ರ ಆಟ ಚೆನ್ನಾಗಿರುತ್ತದೆ. ಆಟವಾಡುವಾಗ ಸಂಪೂರ್ಣ ಗಮನ ಆಟದಲ್ಲಿರಬೇಕೇ ಹೊರತು ಅದರ ಫಲಿತಾಂಶದಲ್ಲಿರಬಾರದು.

ನೀವು ಯಾವುದೇ ಕಾರ್ಯದಲ್ಲಿದ್ದರೂ, ಸಂಪೂರ್ಣವಾಗಿ ಅದರಲ್ಲಿ ಮುಳುಗದೆ, ತೀವ್ರವಾಗಿ ಅದರಲ್ಲಿ ತಲ್ಲೀನರಾಗದೆ ಇದ್ದಲ್ಲಿ, ಅದು ನಿಮಗೆ ಪೂರ್ಣ ಸಂತೃಪ್ತಿಯನ್ನು ತಂದುಕೊಡುವುದಿಲ್ಲ. ಕೆಲಸದ ಸ್ಥಳದಲ್ಲಿ ಮಾತ್ರವಲ್ಲ, ನಿಮ್ಮ ತಂದೆ ತಾಯಂದಿರಲ್ಲಿ, ಹೆಂಡತಿಯೊಂದಿಗೆ, ಗಂಡನೊಂದಿಗೆ, ಮಕ್ಕಳೊಂದಿಗೆ ಸಂಪೂರ್ಣವಾಗಿ ಅರ್ಪಣೆ ಮಾಡಿಕೊಳ್ಳದಿದ್ದರೆ, ಜೀವನವೆಂಬುದು ನಿಮ್ಮ ಪಾಲಿಗೆ ಒಂದು ಅರ್ಥಹೀನವಾದ ಹೊರೆಯಾಗುತ್ತದೆ. ನೀವು ಅದರಲ್ಲಿ ಸಂಪೂರ್ಣವಾಗಿ ತಲ್ಲೀನರಾದರೆ ಆಗ ಅದು ಸ್ವರ್ಗ, ಹಾಗಿಲ್ಲದಿದ್ದರೆ ಅದು ನರಕ.

Sadguru Column Running

ಇದನ್ನೂ ಓದಿ : Prerane Column : ಕ್ಷಣಿಕ ಲಾಭದ ಆಸೆಯ ಮೇಲೆ ನಿಂತ ವ್ಯವಹಾರವೂ ಕ್ಷಣಿಕವೇ!

ಸಂಪೂರ್ಣ ತಲ್ಲೀನತೆಯಿಲ್ಲದೆ ನೀವು ಅನುಭವಿಸಿದ ಯಾವುದಾದರೂ ಒಂದು ಅಂಶವಿದೆಯೆ ಹೇಳಿ. ನಿಮ್ಮ ದೇಹ ಹಾಗೂ ಮನಸ್ಸನ್ನು ಪೂರ್ತಿಯಾಗಿ ತಲ್ಲೀನಗೊಳಿಸದೆ, ನೀವು ಪಡೆದ ಗೆಲುವು ಯಾವುದಾದರೂ ಇದೆಯೆ ಎಂಬುದನ್ನು ಯೋಚಿಸಿ.

Sadguru Column : ದೇಹ, ಮನಸ್ಸು ಮತ್ತು ಕ್ರೀಡೆಯ ನಡುವಿನ ಸಂಬಂಧ

ನೀವು ಜೀವನದ ಯಾವುದೇ ಹಂತದಲ್ಲಿದ್ದರೂ, ನಿಮ್ಮ ಗೆಲುವನ್ನು ಬಹುಮಟ್ಟಿಗೆ ತೀರ್ಮಾನಿಸುವ ಮುಖ್ಯವಾದ ವಿಷಯ ಯಾವುದು? ನಿಮ್ಮ ದೇಹ ಮತ್ತು ಮನಸ್ಸನ್ನು ಯಾವ ಪ್ರಮಾಣದಲ್ಲಿ ನಿಮ್ಮ ಅಧೀನದಲ್ಲಿರಿಸಿಕೊಳ್ಳಲು ಸಾಧ್ಯವೆಂಬುದು ಬಹಳ ಅಗತ್ಯವಿರುವ ಮುಖ್ಯಾಂಶ. ಆಟವೂ ಹಾಗೆಯೇ.

ಒಬ್ಬ ನಾಯಕನಿಗೆ ಮುಖ್ಯವಾಗಿರಬೇಕಾದ ಗುಣಗಳು ಯಾವುವು? ಕೆಲಸದಲ್ಲಿ ಸಂಪೂರ್ಣವಾಗಿ ತಲ್ಲೀನನಾಗಿರಬೇಕು. ತನ್ನ ಭಾಗದ ಕೆಲಸವನ್ನಾದರೂ ಪರಿಪೂರ್ಣವಾಗಿ ಮಾಡುವಂತಹ ಮನಸ್ಸುಳ್ಳವನಾಗಿರಬೇಕು. ಸಾಧನೆ ಮಾಡಬೇಕೆಂಬ ಛಲವಿರುವುದಾದರೂ, ಸೋಲನ್ನು ಕಂಡಾಗ ಹಿಂದೆಗೆಯದೆ, ಮತ್ತೊಂದು ಅವಕಾಶ ದೊರೆಯಿತೆಂದು ಭಾವಿಸಿ, ಅದನ್ನು ಸಂತೋಷದಿಂದ ಸ್ವೀಕರಿಸುವಂತಹ ಮನಸ್ಸಿರಬೇಕು.

Sadguru Column Bowling

ಜೀವನದ ಬಹಳ ಮುಖ್ಯವಾದ ಅಂಶ ಅದು. ನಿಮ್ಮ ಅಂತರಂಗ ಸಂಪೂರ್ಣವಾಗಿ ನೆಮ್ಮದಿಯನ್ನು ಪಡೆದಿದ್ದರೆ, ಗೆಲುವಾಗಲಿ, ಸೋಲಾಗಲಿ ಪ್ರತಿಯೊಂದು ಅಂಶವೂ ನಿಮಗೆ ಸುಲಭವಾಗಿ ತೋರುತ್ತದೆ.ಇಡೀ ಜೀವನ ಹೋರಾಟವಿಲ್ಲದೆ ಸುಲಭವಾಗಿ ನಡೆಯುತ್ತದೆ. ಅಂತರಂಗ ನೆಮ್ಮದಿಯಿಲ್ಲದಿದ್ದಾಗ ಪ್ರತಿಯೊಂದೂ ಕಷ್ಟಕರವಾಗಿ ಭಾಸವಾಗುತ್ತದೆ. ಸಣ್ಣ ಪುಟ್ಟ ವಿಷಯಗಳು ಸಹ ಸಮಸ್ಯೆಯಾಗಿ ಕಂಡುಬರುತ್ತವೆ. ಇವೆಲ್ಲವೂ ಆಟದಲ್ಲಿ ಸಹ ಕೂಡ ಕಂಡುಬರುವ ಅಂಶಗಳು.

ಈಶ ನಡೆಸಿದ ಗ್ರಾಮೋತ್ಸವದಲ್ಲಿ, ಇಂತಹ ಅಂಶಗಳನ್ನು ಆಟಗಳಲ್ಲಿ ಕಣ್ಣಾರೆ ನೋಡಲು ಸಾಧ್ಯವಾಯಿತು. ಗ್ರಾಮೋತ್ಸವದಲ್ಲಿ ಸುಮಾರು ಮುನ್ನೂರು ಗುಂಪುಗಳು ಆಟಗಳಲ್ಲಿ ಭಾಗವಹಿಸಿದು ವು. ಮೂರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಇದನ್ನು ವೀಕ್ಷಿಸಿದರು. ಹಳ್ಳಿಗಳಲ್ಲಿ ಜನರ ಮುಂದೆ ಬಂದು ನಿಲ್ಲಲು ಹಿಂದೇಟು ಹಾಕುತ್ತಿದ್ದ ಹಲವರು, ಆಟಗಳಲ್ಲಿ ಪಾಲ್ಗೊಂಡು ತಮ್ಮ ಗುಂಪನ್ನು ಮುನ್ನಡೆಸಲು ತಾವಾಗಿಯೇ ಮುಂದೆ ಬಂದರು. ಅವರಲ್ಲಿ ಹುದುಗಿಕೊಂಡಿದ್ದ ಸಾಮರ್ಥ್ಯ ಹೀಗೆ ಹೊರಬಂದಿತು.

ಆಟದಲ್ಲಿ ನಿಮ್ಮೊಂದಿಗೆ ಬೇರೆಯವರನ್ನು ಸೇರಿಸಿಕೊಂಡು ಆತ್ಮೀಯತೆಯನ್ನು ಬೆಳೆಸಿಕೊಳ್ಳುವಂತಹ ಸಹಜ ಸ್ವಭಾವವಿರುತ್ತದೆ. ನಿಮ್ಮ ಗುಂಪಿಗೆ ಸೇರಿದವರು ಎಂಬ ಭಾವನೆಯೊಂದಿಗೆ – ಅಕ್ಕಪಕ್ಕದವರನ್ನು – ನಿಮ್ಮ ಇಷ್ಟಾನಿಷ್ಟಗಳನ್ನು ತೊರೆದು ಸೇರಿಸಿಕೊಳ್ಳುತ್ತೀರಿ. ಎಲ್ಲರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಂದೇ ದೃಷ್ಟಿಯನ್ನಿರಿಸಿಕೊಂಡು ಒಮ್ಮನಸ್ಸಿನಲ್ಲಿ ಕ್ರಿಯಾಶೀಲರಾಗುತ್ತೀರಿ. ಬೇರೆಯವರನ್ನು ನಿಮ್ಮೊಂದಿಗೆ ಸೇರಿಸಿಕೊಳ್ಳುವ ಗುಣ ಒಂದು ಒಳ್ಳೆಯ ಸಮುದಾಯದ ನಿರ್ಮಾಣಕ್ಕೆ ಅಡಿಪಾಯವಲ್ಲವೆ?

Sadguru Column sports

Sadguru Column: ಆಟದ ಅತಿ ಪ್ರಮುಖ ಮಹತ್ವವೇನು?

ಆಟದ ಪ್ರಮುಖ ಮಹತ್ವವೇನು? ಅದರಲ್ಲಿ ಅರೆಬರೆ ಮನಸ್ಸಿನಲ್ಲಿ ಪಾಲ್ಗೊಳ್ಳಲಾಗದು. ದೇಹ ಹಾಗೂ ಮನಸ್ಸು ಎರಡನ್ನೂ ಒಂದೇ ಸಮಯದಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆ ಮೂಲಕ ಪ್ರಯೋಜನ ಪಡೆಯುವುದಾಗಿದೆ.
ಮೈದಾನದಲ್ಲಿ ಆಟವಾಡುವಂತಹ ಯಾವುದೇ ಆಟವಾದರೂ ನಿಮ್ಮ ದೇಹ, ಮನಸ್ಸು ಪೂರ್ತಿಯಾಗಿ ಅದರಲ್ಲಿ ಬೇರೂರಿದರೆ ಮಾತ್ರ ಸರಿಯಾದ ಆಟವಾಗುತ್ತದೆ. ಹಾಗಲ್ಲದಿದ್ದರೆ ಅದು ನರಕವಾಗುತ್ತದೆ.

ಒಂದು ಚೆಂಡನ್ನು ಎತ್ತಿ ಎಸೆಯಬೇಕಾದರೂ ಸಹ ಅದರಲ್ಲಿ ಸಂಪೂರ್ಣವಾದ ಆಸಕ್ತಿಯಿಲ್ಲದಿದ್ದರೆ ಅದು ಸುಲಭವಾಗುವುದಿಲ್ಲ. ನಿಮ್ಮ ಗುರಿಯನ್ನು ಮುಟ್ಟಲು ಅದಕ್ಕೆ ಸರಿಯಾದ ವೇಗ ಅಗತ್ಯ. ಹಾಗೆ ಅದು ನಿಮ್ಮ ಇಷ್ಟದಂತೆ ಮುಟ್ಟಬೇಕಾದರೆ ಅದನ್ನು ನೀವು ಎಸೆಯುವುದರ ಹಿಂದೆ ಒಂದು ವಿಜ್ಞಾನ ಅಡಗಿದೆ. ಜೀವನವೂ ಒಂದು ವಿಜ್ಞಾನದಂತೆಯೇ. ವೇಗ ಹಾಗೂ ತಲ್ಲೀನತೆಯು ಒಂದು ಜೀವನವನ್ನು ಪರಿಪೂರ್ಣಗೊಳಿಸಲು ಅಗತ್ಯ. ಅರೆಬರೆಯಾಗಿ ಜೀವಿಸಿದರೆ ಅದೊಂದು ಚಿತ್ರಹಿಂಸೆ. ದೇಹ ಹಾಗೂ ಮನಸ್ಸನ್ನು ಹರಿತವಾಗಿರಿಸಿಕೊಳ್ಳಲು ಹಾಗೂ ಕ್ರಿಯೆಯಲ್ಲಿ ಪೂರ್ಣವಾಗಿ ಮನಸ್ಸನ್ನು ನೆಲೆಗೊಳಿಸಲು ಅದು  ಕಲಿಸುವುದರಿಂದ ಆಟ ನನ್ನನ್ನು ಬಹುವಾಗಿ ಆಕರ್ಷಿಸುತ್ತದೆ.

ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ನಾಯಕ. isha.sadhguru.org/in/kn
ಸದ್ಗುರುಗಳ ಇತರ ಪುಸ್ತಕ/ವಿವರಗಳಿಗೆ ಸಂಪರ್ಕಿಸಿ – kannadapublications@ishafoundation.org

ಈ ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್‌ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

VISTARANEWS.COM


on

ಬೆಳಗಾವಿ: ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ತಿರುಪತಿಯ ಭವ್ಯ ವೆಂಕಟೇಶ್ವರ ದೇವಾಲಯದ ಮಾದರಿಯಲ್ಲೇ ಬೆಳಗಾವಿಯಲ್ಲಿಯೂ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀನಿವಾಸನ ಸನ್ನಿಧಿ ತಲೆಯೆತ್ತಲಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಹೊರವಲಯದ ಸುಮಾರು 7 ಎಕರೆ ಪ್ರದೇಶದಲ್ಲಿ ಈ ಯೋಜನೆ ಸಾಕಾರಗೊಳ್ಳಲಿದ್ದು, ಇದಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಭೂಮಿಯನ್ನು ಖರೀದಿಸಿ ಈಗಾಗಲೇ ಟಿಟಿಡಿ ಮಂಡಳಿಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಈ ಮೂಲಕ ಕುಂದಾನಗರಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಮೊದಲ ಭದ್ರ ಬುನಾದಿ ಬಿದ್ದಿದೆ.

ಈ ದೇವಾಲಯವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ವಾಸ್ತುಶಿಲ್ಪ, ಲಡ್ಡು ವಿತರಣೆ ಮತ್ತು ಭಕ್ತರ ವಾಸ್ತವ್ಯದ ಸೌಲಭ್ಯ ಸೇರಿದಂತೆ ಪ್ರತಿಯೊಂದೂ ಅಂಶದಲ್ಲೂ ಮೂಲ ತಿರುಪತಿ ಕ್ಷೇತ್ರವನ್ನೇ ಹೋಲುವಂತೆ ನಿರ್ಮಾಣವಾಗಲಿದೆ. ನೂರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಶೇ. 10ರಷ್ಟು ಹಣವನ್ನು ಮಾತ್ರ ದಾನಿಗಳಿಂದ ಸಂಗ್ರಹಿಸಿ, ಉಳಿದ ವೆಚ್ಚವನ್ನು ಟಿಟಿಡಿ ಭರಿಸಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಟಿಟಿಡಿ ಪ್ರತ್ಯೇಕ ಟ್ರಸ್ಟ್ ರಚಿಸಿ ಸ್ಥಳೀಯರನ್ನು ಒಳಗೊಳ್ಳಲಿದೆ. ಈ ದೇವಾಲಯದ ನಿರ್ಮಾಣದಿಂದ ಬೆಳಗಾವಿ ಜಿಲ್ಲೆಯಷ್ಟೇ ಅಲ್ಲದೆ, ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೂ ತಿಮ್ಮಪ್ಪನ ದರ್ಶನ ಪಡೆಯಲು ಸುಲಭವಾಗಲಿದೆ.

ನೂತನ ದೇವಾಲಯಗಳ ನಿರ್ಮಾಣಕ್ಕಾಗಿ ಟಿಟಿಡಿ ಮೀಸಲಿಟ್ಟಿರುವ ಒಂಬತ್ತು ಸಾವಿರ ಕೋಟಿ ರೂಪಾಯಿ ನಿಧಿಯಲ್ಲಿ ಬೆಳಗಾವಿ ಯೋಜನೆಯೂ ಸೇರಿದೆ. ದೇಶದ ಆರು ಪ್ರಮುಖ ಸ್ಥಳಗಳಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಟಿಟಿಡಿ, ಬೆಳಗಾವಿಯಲ್ಲಿ ಶೀಘ್ರವೇ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದೆ. ರೆಡ್ಡಿ ಸಂಘದ ಈ ಉದಾರ ಕಾರ್ಯಕ್ಕೆ ಟಿಟಿಡಿ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಬೆಳಗಾವಿ ನಗರವು ಧಾರ್ಮಿಕ ಭೂಪಟದಲ್ಲಿಯೂ ಹೊಸ ಗುರುತು ಪಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಈ ವೆಂಕಟರಮಣನ ಸನ್ನಿಧಿ ಮತ್ತಷ್ಟು ಮೆರುಗು ನೀಡಲಿದೆ.

Continue Reading

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

mysore dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಬೆಂಗಳೂರು

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌ ಆಗಿವೆ. ಸವಾರರು ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.

VISTARANEWS.COM


on

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Ayudha Puja celebrations across the karnataka state  Temples housefull by devotees

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

Ayudha Puja celebrations across the karnataka state  Temples housefull by devotees

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest9 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest14 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest15 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌