shani jayanti 2023 importance-and-Significance of shani devaru in kannadaShani Jayanti 2023 : ಕರ್ಮಫಲ ನೀಡುವ ಶನಿ ದೇವರ ಬಗ್ಗೆ ನಿಮಗೆಷ್ಟು ಗೊತ್ತು? - Vistara News

ಧಾರ್ಮಿಕ

Shani Jayanti 2023 : ಕರ್ಮಫಲ ನೀಡುವ ಶನಿ ದೇವರ ಬಗ್ಗೆ ನಿಮಗೆಷ್ಟು ಗೊತ್ತು?

ಇಂದು ಶನಿ ಜಯಂತಿ (Shani Jayanti 2023) ಶನಿದೇವನೆಂದರೆ ಆತ ಪೀಡಕನಲ್ಲ, ಕರ್ಮಫಲ ಪ್ರದಾನ ಮಾಡುವ ದೇವರು. ಶನಿದೇವರ ಬಗ್ಗೆ ತಿಳಿಸುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

shani jayanti 2023 importance-and-Significance of shani devaru in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Shani Jayanti 2023

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಶನಿಯು ಸೂರ್ಯದೇವ, ಛಾಯಾ ದೇವಿಗೆ ಮಗನಾಗಿ ಹುಟ್ಟಿ ಲೋಕದಲ್ಲಿ ಖ್ಯಾತಿ ಸಂಪಾದಿಸಿ ದೈವತ್ವವನ್ನು ಪಡೆದ ಮಹಾನುಭವ. ಶನಿಯನ್ನು ಕರ್ಮಫಲದಾತ ಎಂದು ಕರೆಯುತ್ತಾರೆ. ಪ್ರತಿಯೊಬ್ಬರಿಗೂ ಅವರ ಕರ್ಮಗಳಿಗೆ ಅನುಸಾರವಾಗಿ ಫಲ ನೀಡುತ್ತಾನೆ. ಒಳ್ಳೆಯ ಕೆಲಸ ಮಾಡಿದರೆ, ಶನಿದೇವರು ಆ ಮನುಷ್ಯನಿಗೆ ಸುಖ ಸಂತೋಷ ದಯಪಾಲಿಸುತ್ತಾನೆ. ಅದೇ ರೀತಿ ಕೆಟ್ಟ ಕೆಲಸ ಮಾಡುವ ವ್ಯಕ್ತಿ ಶನಿದೇವರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿಯೇ ಈತನಿಗೆ ದಾರ್ಶನಿಕ ಹಾಗೂ ಆಧ್ಯಾತ್ಮಿಕ ಪ್ರವೃತ್ತಿಯನ್ನು ದಯಪಾಲಿಸುವ ದೇವರು ಎನ್ನುತ್ತಾರೆ. ಇಂದು ಶನಿ ಜಯಂತಿ (Shani Jayanti 2023). ಹೀಗಾಗಿ ಶನಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ.

ಪೌರಾಣಿಕ ಕತೆಗಳಲ್ಲಿ ಶನಿ ಮಹಾತ್ಮೆಯನ್ನು ವಿಧವಿಧವಾಗಿ ಬಣ್ಣಿಸಲಾಗಿದೆ. ಶನಿ ದೇವನು ದೇವತೆಗಳಿಗೆ ನೆರವಾದವನು. ಹಿಂದೆ ಪಾರ್ವತಿಯ ಶಾಪದಿಂದ ದೇವತೆಗಳೆಲ್ಲರೂ ವೃಕ್ಷಗಳಾದರು, ವಿಷ್ಣು ಸಹ ಅಶ್ವತ್ಥವೃಕ್ಷವಾದ. ಅಶ್ವಥಮರದಲ್ಲಿ ಅಶ್ವತ್ಥನೆಂಬ ರಾಕ್ಷಸನು ವಾಸವಾಗಿದ್ದನು. ಅಲ್ಲಿ ಯಾರು ಬಂದರೂ ಅವರನ್ನು ಹಿಂಸಿಸಿ ಕೊಲ್ಲುತ್ತಿದ್ದ. ಅವನಿಗೊಬ್ಬ ತಮ್ಮನಿದ್ದನು ಅವನ ಹೆಸರು ಹಿಪ್ಪಲ. ಇಬ್ಬರು ವೃಕ್ಷ ರೂಪವನ್ನು ಧರಿಸಿ ಅದರ ನೆರಳಿಗೆ ಬಂದವರನ್ನೆಲ್ಲ ನುಂಗುತ್ತಿದ್ದರು.

ಆಗ ಋಷಿ ಮಹರ್ಷಿಗಳು ನಾರದರ ಸಹಾಯದಿಂದ ಪರಮೇಶ್ವರನಲ್ಲಿಗೆ ಬಂದು ಸಹಾಯವನ್ನು ಕೇಳಿದರು. ಪರಮೇಶ್ವರನು ಸೂರ್ಯಪುತ್ರ ಶನಿಯನ್ನು ಸ್ತುತಿಸಿದನು. ಬ್ರಾಹ್ಮಣರು, ಋಷಿಮುನಿಗಳು ಶನಿಯನ್ನು ಆರಾಧಿ ಸಿದರು. ಆಗ ಶನಿ ಆ ರಾಕ್ಷಸರಿಬ್ಬರನ್ನು ಸಂಹರಿಸಿದ. ಹೀಗೆ ದೇವತೆಗಳಿಗೆ ಸಹಾಯ ಮಾಡಿ ಪರಮೇಶ್ವರನ ಕೃಪೆಗೆ ಪಾತ್ರನಾಗಿ ತಾಯಿ ಪಾರ್ವತಿ ದೇವಿಯ ಅನುಗ್ರಹ ಸಂಪಾದಿಸಿದನು ಈ ಶನಿ. ಶನಿಯನ್ನು ‘ಶನೈಚ್ಚರ’ ಎಂದೂ ಕರೆಯಲಾಗುತ್ತದೆ ‘ಚರ’ ಎಂದರೆ ಮಂದ ಗತಿಯಲ್ಲಿ ಸಾಗುವವನು ಎಂದು ಅರ್ಥ.

ನ್ಯಾಯವಂತರು ಶನಿಗೆ ಹೆದರಬೇಕಾಗಿಲ್ಲ !

Shani Jayanti 2022

ತ್ರಿಶೂಲ, ಬಿಲ್ಲು, ಬಾಣ ಮತ್ತು ಕೊಡಲಿ ಶನಿಯ ಆಯುಧಗಳು. ಶನಿ ನ್ಯಾಯದೇವತೆ. ಶಿಕ್ಷಿಸುವ ಅಧಿಕಾರ ಹೊಂದಿರುವ ದೇವರು. ನಾವು ಮಾಡಿದ್ದ ತಪ್ಪುಗಳಿಗೆಲ್ಲಾ ಯೋಗ್ಯತಾನುಸಾರ ಶಿಕ್ಷೆ ವಿಧಿಸುತ್ತಾನೆ. ದೇವತೆಗಳನ್ನೂ ಬಿಡದೆ ಪ್ರತಿಯೊಬ್ಬರೂ ತಮ್ಮ ಕರ್ಮಲ ಅನುಭವಿಸುವಂತೆ ನೋಡಿಕೊಳ್ಳುವ ಹೊಣೆಯನ್ನು ಹೊತ್ತಿದ್ದಾನೆ. ಆದ್ದರಿಂದಲೇ ಶನಿ ಎಂದರೆ ಜನರು ಭಯಪಡುತ್ತಾರೆ. ಶನಿ ಎಂದರೆ ಪೀಡಕ ಎಂಬ ಅಭಿಪ್ರಾಯಕ್ಕೆ ಬಂದಿರುತ್ತಾರೆ. ನ್ಯಾಯವಂತರು ಶನಿಗೆ ಹೆದರಬೇಕಾಗಿಯೇ ಇಲ್ಲ.

 ಭಕ್ತರಿಂದ ‘ಶನಿ ಮಹಾರಾಜ’ ಎಂದು ಕರೆಸಿಕೊಳ್ಳುವ ಶನಿಯು ನೀಡುವ ಕಷ್ಟಗಳಿಗಿಂತ, ನೀಡುವ ಒಳ್ಳೆಯ ವರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾನೆ. ಆಶೀರ್ವಾದದ ದೃಷ್ಟಿಯಿಂದ ಶನಿ ಮಹಾರಾಜನಷ್ಟು ಬೇರೆ ಯಾವ ಗ್ರಹಗಳೂ ಹೋಲಿಕೆಗೆ ಸಿಗಲು ಸಾಧ್ಯವಿಲ್ಲ. ಆತನು ತನ್ನ ದೆಶೆಯ ಕೊನೆಯಲ್ಲಿ ವರವನ್ನು ನೀಡುತ್ತಾನೆ ಎನ್ನುವುದನ್ನು ‘ಶನಿ ಮಹಾತ್ಮೆ’ ಬಹಳ ಸೊಗಸಾಗಿ ವರ್ಣಿಸಲಾಗಿದೆ.

ಶನಿಯ ವಾಹನ ಯಾವುದು ಗೊತ್ತೇ?

ಶನಿದೇವರ ತಾಯಿ ಛಾಯಾದೇವಿಯು ಶನಿಯ ಮುಂದಿನ ಭವಿಷ್ಯವನ್ನು ತಿಳಿದು, ಈತನ ನಡೆ-ನುಡಿ, ಮಂದಗತಿ ಇವೆಲ್ಲವನ್ನೂ ಗಮನಿಸಿ, ಇದಕ್ಕೆ ತಕ್ಕಂತೆ ‘ಗೃಧ್ರ’ ಪಕ್ಷಿಯನ್ನು ವಾಹನವಾಗಿ ಅನುಗ್ರಹಿಸುತ್ತಾಳೆ. ಇದು ಒಂದು ತರಹದ ಕಾಗೆ ಜಾತಿಯ ಪಕ್ಷಿ. ಇದರ ಮೇಲೆ ಶನಿಯು ಕೂತು ತನ್ನ ಸ್ಥಾನವನ್ನು ಸೇರಿಕೊಳ್ಳುತ್ತಾನೆ.

ಮುಂದೆ ಶನಿಯು ತಾಯಿಯನ್ನು ಭೇಟಿಯಾದಾಗ ಕುತೂಹಲದಿಂದ ‘ಅಮ್ಮ ಈ ಗೃಧ್ರ ಪಕ್ಷಿಯನ್ನು ನನಗೆ ವಾಹನವಾಗಿ ಕಾಣಿಕೆ ನೀಡಿದೆ. ಇದರ ವಿಶೇಷತೆ ಏನು?’ ಎಂದು ಕೇಳುತ್ತಾನೆ. ಆಗ ಛಾಯಾದೇವಿಯು, ‘ಈ ಪಕ್ಷಿಯು ಹಿಂದೆ ‘ಪಾಪಭುಶಂಡಿ’ ಎಂಬ ಹೆಸರನ್ನು ಪಡೆದು ಮಾನಸ ಸರೋವರದ ಹತ್ತಿರ ಈ ಕಾಗೆಯು ಗರುಡನಿಗೆ ರಾಮಾಯಣದ ಕಥೆಯನ್ನು ಹೇಳಿದೆ. ಇದಕ್ಕೆ ಭೂತ-ವರ್ತಮಾನ-ಭವಿಷ್ಯತ್ ತಿಳಿಯುವ ಶಕ್ತಿ ಇದೆ ಎಂದು ವಿವರಿಸುತ್ತಾಳೆ.

ಈ ಪಕ್ಷಿಯು ಪೂರ್ವದಲ್ಲಿ ಕಾಕಾಸುರನ ರೂಪತಾಳಿ ಅರಣ್ಯದಲ್ಲಿ ರಾಮ ಸೀತೆಯರನ್ನು ಕಾಡುತ್ತಿತ್ತು. ಆಗ ರಾಮನು ದರ್ಬೆಯನ್ನು ಗಾಯತ್ರಿ ಮಂತ್ರದಿಂದ ಮಂತ್ರಿಸಿ ಎಸೆದನು. ಆಗ ಕಾಕಾಸುರ ಎಲ್ಲಿ ಹೋದರೂ ಯಾರೂ ರಕ್ಷಿಸಲಿಲ್ಲ. ವಿಧಿಯಿಲ್ಲದೆ ಅದು ಕೊನೆಗೆ ರಾಮನ ಮೊರೆಹೋಯಿತು. ಆಗ ದರ್ಬೆಯು ಅಸರೂಪವನ್ನು ತಾಳಿ ಕಾಗೆಯ ಬಲಗಣ್ಣನ್ನು ಕಿತ್ತುಕೊಂಡಿತು. ಇದರಿಂದ ಕಣ್ಣನ್ನು ಕಳೆದುಕೊಂಡ ಈ ಪಕ್ಷಿಯು ಮುಂದೆ ರಾಮನ ಅನುಗ್ರಹಕ್ಕೆ ಪಾತ್ರವಾಯಿತು’ ಎಂದು ಆಕೆ ವಿವರಿಸುತ್ತಾಳೆ.

ಇನ್ನೊಂದು ಕತೆಯ ಪ್ರಕಾರ, ದೇವಲೋಕದಲ್ಲಿ ಕಾಕಾಸುರನೆಂಬ ರಾಕ್ಷಸ ಎಲ್ಲರನ್ನೂ ಬೆದರಿಸುತ್ತ, ತೊಂದರೆ ಕೊಡುತ್ತಿರುತ್ತಾನೆ. ಒಮ್ಮೆ ಜಗನ್ಮಾತೆಯಾದ ಲಕ್ಷ್ಮೀಯು ಸ್ನಾನ ಮಾಡುತ್ತಿರುವಾಗ ಈ ಕಾಕಾಸುರ ಕದ್ದು ನೋಡುತ್ತಾನೆ. ಲಕ್ಷ್ಮೀ ಚೀರಿಕೊಳ್ಳುತ್ತಾಳೆ. ಲೋಕ ಪರ್ಯಟನೆಗೆ ಹೋಗಿದ್ದ ನಾರಾಯಣ ಏನಾಯಿತು ಎಂದು ಓಡಿ ಬರುತ್ತಾನೆ. ಆಗ ಲಕ್ಷ್ಮೀಯು ನಡೆದ ವಿಷಯ ಹೇಳುತ್ತಾಳೆ. ನಾರಾಯಣ ಕಾಕಾಸುರನನ್ನು ಬೆನ್ನಟ್ಟಿ ಹೋಗುತ್ತಾನೆ. ಕಾಕಾಸುರನು ಈಶ್ವರನ ಮೊರೆ ಹೋಗುತ್ತಾನೆ. ಆಗ ಈಶ್ವರನು ನನ್ನಿಂದ ಸಾಧ್ಯವಿಲ್ಲ, ನಾರಾಯಣ ಸಾಮಾನ್ಯದವನಲ್ಲ ನಿನ್ನನ್ನು ಅವನು ಬಿಡುವುದಿಲ್ಲ, ನಿನ್ನ ರಕ್ಷಣೆ ಶನಿಯಿಂದ ಮಾತ್ರ ಸಾಧ್ಯ. ನೀನು ಕೂಡಲೇ ಶನಿಯ ಪಾದಕ್ಕೆ ಶರಣಾಗು ಎನ್ನುತ್ತಾನೆ.

Shani Jayanti 2023

ಆಗ ಕಾಕಾಸುರನು ಶನಿಯ ಪಾದಕ್ಕೆ ಬೀಳುತ್ತಾನೆ; ‘ನನ್ನನ್ನು ಕಾಪಾಡು ದೇವ, ನನ್ನಿಂದ ತಪ್ಪಾಗಿದೆ’ ಎಂದಾಗ ನಾರಾಯಣನು ಅಲ್ಲಿಗೆ ಬರುತ್ತಾನೆ. ಶನಿ ಅವನನ್ನು ಕಳಿಸಿಕೊಡು ಎನ್ನುತ್ತಾನೆ. ಆಗ ಶನಿಯು ‘ನಾರಾಯಣ ಶಾಂತನಾಗು. ನೀನೇ ಈ ರೀತಿ ಕೋಪ ಮಾಡಿಕೊಂಡರೆ ಜಗತ್ತು ಉಳಿಯುವುದಿಲ್ಲ’ ಎನ್ನುತ್ತಾ, ಕಾಕಾಸುರನಿಗೆ ನಿನ್ನ ಒಂದು ಕಣ್ಣನ್ನು ಕಿತ್ತು ನಾರಾಯಣನ ಪಾದಕ್ಕಿಡು ಎಂದಾಗ ಕಾಕಾಸುರ ತನ್ನ ಒಂದು ಕಣ್ಣು ಕಿತ್ತು ನಾರಾಯಣನ ಪಾದಕ್ಕಿಡುತ್ತಾನೆ.

ಹೀಗಾಗಿ ಈಗಲೂ ಕಾಗೆಗೆ ಒಂದೇ ಕಣ್ಣು. ಆಗ ನಾರಾಯಣನು ‘ನಿನ್ನನ್ನು ಬಿಡುವುದಿಲ್ಲ ಸಮಯ ನೋಡಿ ನಿನ್ನನ್ನು ಕೊಂದೇ ಕೊಲ್ಲುತ್ತೇನೆ’ ಎಂದು ಹೇಳಿ ಹೋಗುತ್ತಾನೆ. ಕಾಕಾಸುರ ಶನಿಗೆ ‘ನಿನ್ನನ್ನು ಬಿಟ್ಟು ಹೋಗುವುದಿಲ್ಲ. ನಿನ್ನ ವಾಹನ ವಾಗಿರುತ್ತೇನೆ ನಿನ್ನ ವಾಹನದ ವಾಗಿ ನನ್ನನ್ನು ಸ್ವೀಕರಿಸು’ ಎಂದಾಗ ಶನಿಯು ಆಗಲಿ ಎಂದು ಹೇಳುತ್ತಾನೆ. ಹೀಗಾಗಿ ಕಾಗೆಯು ಶನಿಯ ವಾಹನವಾಗುತ್ತದೆ.

ಜ್ಯೋತಿಷದಲ್ಲಿ ಪ್ರಮುಖ ಪಾತ್ರ

‘ಶನಿಯೇ ಕ್ರಮತಿ ಸಃ’ ಅಂದರೆ, ಯಾರು ನಿಧಾನವಾಗಿ ಚಲಿಸುತ್ತಾರೋ ಅವರೇ ಶನಿ ಎಂದು. ಶನಿಗ್ರಹವು ಸೂರ್ಯನನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಲು ತೆಗೆದುಕೊಳ್ಳುವ ಸಮಯ 30 ವರ್ಷ. ಅಂದರೆ ಶನಿಗೆ ಎಲ್ಲಾ 12 ರಾಶಿಗಳನ್ನೂ ದಾಟಲು 30 ವರ್ಷದ ಅವಧಿ ಬೇಕಾಗುತ್ತದೆ. (ಏಕೆಂದರೆ ಆತನ ಸಂಚಾರಪಥವೇ ಬಹಳ ದೊಡ್ಡದು. ಆದ್ದರಿಂದ ಚಂದ್ರನು ಎರಡೂವರೆ ದಿನಗಳಲ್ಲಿ ಒಂದು ರಾಶಿಯನ್ನು ದಾಟಿದರೆ ಶನಿಯು ಅದನ್ನು ದಾಟಲು ಎರಡೂವರೆ ವರ್ಷ ಬೇಕಾಗುತ್ತದೆ)

Shani Jayanti 2022

ಪ್ರತಿಯೊಂದು ರಾಶಿಯಲ್ಲಿ ಶನಿಯು ಎರಡೂವರೆ ವರ್ಷ ಕಾಲವನ್ನು ಕಳೆಯುತ್ತಾನೆ. ಈ ಮುಖಾಂತರದ ಚಲನೆಯ ಶನಿಯ ಅವಧಿಯು ಮುಖ್ಯವಾದುದಾಗಿದೆ ಹಾಗೂ ಜಾತಕದ ತಿಳುವಳಿಕೆಗೆ ಇದರ ಅಗತ್ಯವಿರುತ್ತದೆ. ಒಬ್ಬ ವ್ಯಕ್ತಿಯ ಜನ್ಮರಾಶಿಯ ಹಿಂದಿನ ಮನೆಯ ರಾಶಿಯ ಪ್ರವೇಶವಾದಾಗ, ಶನಿಯ ಪ್ರಭಾವವು ಪ್ರಾರಂಭವಾಗಿ ಜನ್ಮರಾಶಿಯ ಮುಂದಿನ ಮನೆ ಪ್ರವೇಶದೊಂದಿಗೆ ಶನಿಯ ಪ್ರಭಾವವು ನಿಲ್ಲುತ್ತದೆ. ಒಟ್ಟು ಅವಧಿಯ ಏಳೂವರೆ ವರ್ಷ (2.5ವರ್ಷ ಸ 3) ವನ್ನು ಸಾಡೇ ಸಾತಿ ಅಥವಾ ಏಳರಾಟ ಶನಿ ಎಂದು ಕರೆಯಲಾಗುತ್ತದೆ. ಈ ಅವಧಿಯು ಅತ್ಯಂತ ತ್ರಾಸದಾಯಕವಾದುದಾಗಿದೆ.

ಶನಿ ಸಂಚಾರದ ಬಗ್ಗೆ ಇಲ್ಲಿ ತಿಳಿಯಿರಿ

 ಶನಿ ಮಹಾದೆಶೆಯು ಮನುಷ್ಯನಲ್ಲಿ ನಡೆಯುವಾಗ ಆತನ ಪ್ರಭಾವವು ಉನ್ನತ ಮಟ್ಟದಲ್ಲಿ ನಿಶ್ಚಿತವಾಗುತ್ತದೆ. ನವಗ್ರಹಗಳಲ್ಲಿ ಶನಿಯು ಒಂಬತ್ತನೇ ಗ್ರಹವಾಗಿದ್ದು, ಅತ್ಯಂತ ಪ್ರಭಾವಶಾಲಿ. ಶನಿಯು ಗುಂಪುಗಳನ್ನು ಆಳುವವನಾಗಿದ್ದಾನೆ. ಒಬ್ಬರ ಜಾತಕದಲ್ಲಿ ಗ್ರಹಗಳ ಆಶೀರ್ವಾದವಿಲ್ಲದೆ, ಗುಂಪುಗಳನ್ನು ಪರಿಗಣಿಸುವುದು ಕಷ್ಟದಾಯಕ. ಶನಿ ಗ್ರಹವು ಉಚ್ಚಸ್ಥಾನ (ಅಥವಾ ಲಗ್ನ ) ದಲ್ಲಿದ್ದಾಗ ಜ್ಯೋತಿಷ್ಯದ ಜಾತಕ ಫಲದನ್ವಯ ನಾಯಕತ್ವದ ಗುಣ ಅವನದಾಗಿದ್ದು, ಹೆಸರು ಮತ್ತು ಅಧಿಕಾರವನ್ನು ಹೊಂದಿದವನಾಗುತ್ತಾನೆ. ಜೊತೆಗೆ ಅಂತಹ ಜನರು ಹೆಚ್ಚಿನ ಶ್ರದ್ಧೆಯುಳ್ಳವರಾಗಿದ್ದು, ಕೈಯಲ್ಲಿ ಹಿಡಿದ ಕೆಲಸವನ್ನು ಬಿಡದೆ ಮಾಡುವವರಾಗಿರುತ್ತಾರೆ.

ಇದನ್ನೂ ಓದಿ : Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಮತ್ತೊಂದು ಭಾಗದಲ್ಲಿ, ಅದೇ ಶನಿ ಗ್ರಹವು ನೀಚ ಸ್ಥಾನದಲ್ಲಿದ್ದಾಗ, ಒಬ್ಬ ವ್ಯಕ್ತಿಯ ‘ಕರ್ಮ’ದನ್ವಯ ದುರ್ಬಲನಾಗಿದ್ದು, ಕೆಲಸಗಳಲ್ಲಿ ಆಸಕ್ತಿಯಿಲ್ಲದೆ, ಕರ್ಮವನ್ನು ಹಳಿಯುತ್ತಾ, ನಿರಾಶಾದಾಯಕವಾಗಿ ಸೋಲನ್ನು ಅನುಭವಿಸುತ್ತಾನೆ. ಒಬ್ಬನ ಜಾತಕದಲ್ಲಿ ಶನೀಶ್ವರನ ಪ್ರಭಾವವಿಲ್ಲದಿದ್ದರೆ, ಆತನಿಗೆ ‘ಮೋಕ್ಷ’ ದುರ್ಲಭವಾಗುತ್ತಾ ಹೋಗುತ್ತದೆ. ಹೀಗೆ ಜ್ಯೋತಿಷದಲ್ಲಿ ಶನಿಯದ್ದೇ ಪ್ರಾಬಲ್ಯ.

ಲೇಖಕರು ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

Tumkur News: ಕೊರಟಗೆರೆ ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರೆವೇರಿತು. ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

VISTARANEWS.COM


on

Shree Bevinalamma Devi Jaladhi Mahotsav celebration in koratagere taluk
Koo

ಕೊರಟಗೆರೆ: ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ (Tumkur News) ನೆರೆವೇರಿತು.

ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದನ್ನೂ ಓದಿ:Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಸಾಹಿತಿ ಡಾ. ನರಸಿಂಹಮೂರ್ತಿ ಮಾತನಾಡಿ, ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಳಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲಧಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಜಟ್ಟಿ ಅಗ್ರಹಾರ ಎಂದರೇ ಜಟ್ಟಿ ಮನೆತನದವರಿಗೆ ರಾಜ ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ ಯಾವುದೇ ತೊಂದರೆ ತೊಡಕುಗಳು ಆಗದಂತೆ ಕಾಪಾಡಿಕೊಂಡು ಬರುತ್ತಿದ್ದಾಳೆ. ಬರಗಾಲವಿರುವುದರಿಂದ ಅದ್ದೂರಿಯಾಗಿ ಜಾತ್ರೆ ಮಾಡಲು ಆಗದ ಕಾರಣ ಜಲಧಿಯನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಈ ಸಂದರ್ಭದಲ್ಲಿ ಪೂಜಾರು ಲಕ್ಷ್ಮೀಶ್, ಗ್ರಾಮಸ್ಥರಾದ ತಿಮ್ಮರಾಜು, ಮಧುಸೂಧನ್, ಟೈಗರ್ ನಾಗರಾಜು, ಬಸವರಾಜು, ಕೇಬಲ್ ಸಿದ್ದಗಂಗಯ್ಯ, ಮಂಜುನಾಥ್, ಹನುಮಂತರಾಜು, ಚಂದ್ರಕುಮಾರ್, ಸಿದ್ದರಾಜು, ದೇವರಾಜು, ನಾಗರಾಜು, ಕೆಂಪರಾಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನದಿಂದ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

VISTARANEWS.COM


on

udupi Shree Bhandarakeri math annual award programme in bengaluru
Koo

ಬೆಂಗಳೂರು: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (Bengaluru News) ತಿಳಿಸಿದರು.

ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ರಾಜ ಪ್ರಭುತ್ವ ಇದ್ದಾಗ ಮಹಾರಾಜರೇ ಪ್ರಜೆಗಳಿಗೆ ಸಂತೋಷವಾಗುವ ರೀತಿ ರಾಜ್ಯಭಾರ ಮಾಡುತ್ತ ಇದ್ದರು. ರಾಮ ಇದಕ್ಕೆ ಆದರ್ಶ ಪುರುಷ. ಆದರೆ ಇಂದು ಪ್ರಜಾಪ್ರಭುತ್ವ ಇದೆ. ಪ್ರಜೆಗಳೇ ಸಮಾಜಕ್ಕೆ ಹಿತವಾಗುವಂತೆ ಬಾಳಬೇಕು. ಇತರರಿಗೆ ನೆಮ್ಮದಿ, ಸಂಭ್ರಮ ನೀಡುವ ಉದಾತ್ತ ಮನೋಭಾವ ರೂಢಿಸಿಕೊಂಡರೆ ನಾಡು ಸುಭಿಕ್ಷವಾಗಿರುತ್ತದೆ ಎಂದರು.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಶ್ರೀ ಭಂಡಾರ ಕೇರಿ ಗುರುಗಳು ವೇದವ್ಯಾಸರ ಜಯಂತಿಯನ್ನು ರಾಷ್ಟ್ರಗುರು ವೇದವ್ಯಾಸ ಜಯಂತಿಯನ್ನಾಗಿ ಆಚರಿಸಬೇಕೆಂದು ಸಂಕಲ್ಪ ಮಾಡಿ, ಆ ನಿಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ವಿಶೇಷವಾದ ಕಾರ್ಯಕ್ರಮವನ್ನು ರೂಪಿಸುತ್ತಿದ್ದಾರೆ. ಪಂಡಿತರಿಗೆ, ವಿದ್ವಾಂಸರಿಗೆ ಸಾಕಷ್ಟು ಮನ್ನಣೆ ನೀಡಿ ಗೌರವಾದರಗಳನ್ನು ದಯ ಪಾಲಿಸಿದ್ದಾರೆ. ಶ್ರೀ ಭಂಡಾರಕೇರಿ ಗುರುಗಳ ಆಶಯ ಈಡೇರಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಗವಾನ್ ವೇದವ್ಯಾಸರ ಜಯಂತಿಯನ್ನು ಎಲ್ಲರೂ ಸಂಭ್ರಮಿಸುವಂತಾಗಲಿ ಎಂದು ಪೇಜಾವರ ಶ್ರೀಗಳು ಆಶಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಮತ್ತು 48 ದಿನಗಳ ಮಂಡಲೋತ್ಸವದಲ್ಲಿ ಶ್ರೀ ಪೇಜಾವರ ಶ್ರೀಗಳು ವಿಶೇಷ ಸಾನಿಧ್ಯ ವಹಿಸಿ ಎಲ್ಲಾ ಕಾರ್ಯವನ್ನು ಸಾಂಗವಾಗಿ ನೆರವೇರಿಸಿ ಕೊಟ್ಟಿದ್ದು ವಿಶ್ವದ ಹೆಮ್ಮೆ ಎಂದು ತಿಳಿಸಿದರು.

70 ಜನರಿಗೆ ಸನ್ಮಾನ ಸಂಕಲ್ಪ

ಶ್ರೀ ವೇದವ್ಯಾಸ ಜಯಂತಿ ಸಂದರ್ಭದಲ್ಲಿ ಮೂವರು ಪಂಡಿತರಿಗೆ ಶ್ರೀಮಠ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇದರೊಂದಿಗೆ ನಮ್ಮ ಎಪ್ಪತ್ತನೇ ವರ್ಧಂತಿ ಸಮಾರಂಭವೂ ನಡೆಯುತ್ತಿದ್ದು, ಈ ವರ್ಷ ಪೂರ್ಣ 70 ಜನ ಪಂಡಿತರಿಗೆ ಸನ್ಮಾನ ಮತ್ತು ಗೌರವವನ್ನು ಮಾಡಿ ಅವರನ್ನು ಪ್ರೋತ್ಸಾಹಿಸುವ ಸಂಕಲ್ಪ ಮಾಡಲಾಗಿದೆ ಎಂದು ಭಂಡಾರ ಕೇರಿ ಶ್ರೀಗಳು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ವೇದವ್ಯಾಸ ಜಯಂತಿ ಅಂಗವಾಗಿ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ ನೆರವೇರಿತು.

ಪ್ರಶಸ್ತಿ ಪ್ರದಾನ

ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲದ ದಾಮೋದರಾಚಾರ್ಯರ ಪರವಾಗಿ ಅವರ ಶಿಷ್ಯ ಸಂತಾನ ಕೃಷ್ಣ ಅವರಿಗೆ (1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ), ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ ಅವರಿಗೆ (ರಾಜಹಂಸ ಪ್ರಶಸ್ತಿ), ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ಪಂಡಿತ ಸತ್ಯಬೋಧಾಚಾರ್ಯ ಹೊನ್ನಾಳಿ ಅವರಿಗೆ (ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿ) ತಲಾ 50 ಸಾವಿರ ರೂ. ನಗದು, ಸನ್ಮಾನ ಪತ್ರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಶ್ರೀ ಭಂಡಾರಕೇರಿ ಶ್ರೀಗಳು ‘ಶ್ರೀ ರಾಮ ಲಲನ ಲಾಲನ ಲಲಾಮ ತೀರ್ಥ’ ಎಂದು ಬಿರುದು ನೀಡಿ, ಸನ್ಮಾನಿಸಿದರು. ನೂರಾರು ಜನ ವಿದ್ವಾಂಸರು, ಪಂಡಿತರು ಇದಕ್ಕೆ ಸಾಕ್ಷಿಯಾದರು.

Continue Reading

ಕರ್ನಾಟಕ

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ. ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ.

VISTARANEWS.COM


on

5 foreign coins found in anjanadri temple hundi counting
Koo

ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ (Anjaneya Temple) ಕಾಣಿಕೆ ಹುಂಡಿಯಲ್ಲಿ (Koppala News) ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಐದು ದೇಶಗಳ ನಾಣ್ಯಗಳು ಪತ್ತೆಯಾಗಿವೆ.

ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ಮೆರೆಗೆ, ತಹಸೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ದೇಗುಲ ಸಿಬ್ಬಂದಿ ಮಂಗಳವಾರ ಕಾಣಿಕೆ ಪೆಟ್ಟಿಗೆಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆಸಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ.

ಇದನ್ನೂ ಓದಿ: Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

ಪಾಕಿಸ್ತಾನದ ಐದು ರೂಪಾಯಿ ಮುಖ ಬೆಲೆಯ ನಾಣ್ಯ, ಯುನೈಟೆಡ್ ಸ್ಟೇಟ್ ಆಫ್ ಆಮೆರಿಕಾದ ಒಂದು ಸೆಂಟ್‌, ಮೊರಾಕ್ಕೊದಾ ಒಂದು ದಿರಮ್, ನೇಪಾಳದ ಒಂದು ನಾಣ್ಯ ಹಾಗೂ ಶ್ರೀಲಂಕದ ಐದು ರೂಪಾಯಿ ನಾಣ್ಯಗಳು ಹುಂಡಿಯಲ್ಲಿ ಪತ್ತೆಯಾಗಿವೆ.

30.21 ಲಕ್ಷ ರೂ. ಸಂಗ್ರಹ

ಐದು ವಿದೇಶಿ ನಾಣ್ಯ ಸೇರಿದಂತೆ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ. ಕಳೆದ ಮಾರ್ಚ್‌ 27 ರಿಂದ ಇಲ್ಲಿವರೆಗೂ ಅಂದರೆ ಮೇ 21ರ ವರೆಗಿನ ಒಟ್ಟು 56 ದಿನಗಳಲ್ಲಿ 31.21 ಲಕ್ಷ ಮೊತ್ತದ ಹಣ ಸಂಗ್ರಹವಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಹುಂಡಿ ಎಣಿಕೆಯ ವೇಳೆ ಶಿರಸ್ತೇದಾರ್‌ ರವಿಕುಮಾರ ನಾಯಕ್ವಾಡಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್, ಮಹೇಶ್ ದಲಾಲ, ಹಾಲೇಶ ಗುಂಡಿ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.

Continue Reading

ಧಾರ್ಮಿಕ

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Pretha Maduve: ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ.

VISTARANEWS.COM


on

pretha maduve
Koo

ಮಂಗಳೂರು: ಕರ್ನಾಟಕ ಕರಾವಳಿಯ (karnataka Coastal) ತುಳುನಾಡಿನ (Tulunadu) ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ (Pretha Maduve) ಸಜ್ಜಾಗಿದ್ದ ವಧುವಿಗೆ (bride) ವರ (groom) ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ (Souls) ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ (Folk) ರೀತಿಯಲ್ಲಿ ನಡೆಯುತ್ತದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಈ ʼವಧುʼ ಒಂದು ವಾರದ ಮಗುವಾಗಿದ್ದಾಗಲೇ ತೀರಿಕೊಂಡಿದ್ದಳು. ಇದು ನಡೆದು 30 ವರ್ಷಗಳು ಆಗಿವೆ. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ. ಈ ಮಗುವಿಗೆ ನಾಮಕರಣವೂ ಆಗಿರಲಿಲ್ಲ. ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

Pretha Maduve

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.

ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ಇದನ್ನೂ ಓದಿ: Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Continue Reading
Advertisement
Mobile
ದೇಶ4 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ4 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ5 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು5 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ5 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ6 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ6 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ6 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ6 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು15 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು17 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌