Site icon Vistara News

ಶಿವರಾತ್ರಿ ಜಾತ್ರೆ: 5 ದಿನಗಳು ಮಲೆಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ‌ ನಿರ್ಬಂಧ

ಮಲೆಮಹಾದೇಶ್ವರ ಬೆಟ್ಟ ಶಿವರಾತ್ರಿ ಜಾತ್ರೆ

MM hills

ಚಾಮರಾಜನಗರ: ಮಹಾಶಿವರಾತ್ರಿ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ‌ಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಫೆ.17ರ ಬೆಳಗ್ಗೆ 6 ಗಂಟೆಯಿಂದ 21ರ ಸಂಜೆ 7ಗಂಟೆ ವರೆಗೆ ದ್ವಿಚಕ್ರ ವಾಹನ ಓಡಾಟಕ್ಕೆ ಬ್ರೇಕ್‌ ಹಾಕಲಾಗಿದೆ.

ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಅವರು ಆದೇಶ ಹೊರಡಿಸಿದ್ದಾರೆ. ಬೆಟ್ಟಕ್ಕೆ ದ್ವಿಚಕ್ರ ವಾಹನ ಸಂಚಾರವನ್ನು ನಿಷೇಧ ಮಾಡಿರುವುದರಿಂದ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಲು ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಸಾಧ್ಯತೆ ಇದ್ದು, ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಉಂಟಾಗಬಹುದೆಂದು ಈ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Theft case: ಸಂಬಳ ಜಾಸ್ತಿ ಮಾಡಿಲ್ಲವೆಂದು ಮಾಲೀಕನ ಮನೆಗೆ ಕನ್ನ ಹಾಕಿದ; ತಪ್ಪಾಯ್ತು ಎಂದು ಟೆಂಪಲ್‌ ರನ್‌ ಮಾಡಿದ

ಕೌದಳ್ಳಿ ಬಳಿ ನಿಲುಗಡೆಯ ಜತೆಗೆ ಅಲ್ಲಿಂದಲೇ ಬೆಟ್ಟಕ್ಕೆ ಸಾರಿಗೆ ಬಸ್ ವ್ಯವಸ್ಥೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರ ಮಾಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ಮಾಹಿತಿ ನೀಡಿದ್ದಾರೆ.

Exit mobile version