Solar Eclipse 2022 | ದೀಪಾವಳಿ ಹಬ್ಬದಲ್ಲಿಯೇ ಸೂರ್ಯ ಗ್ರಹಣ; ಯಾವ ರಾಶಿಯ ಮೇಲೆ ಏನು ಪರಿಣಾಮ? - Vistara News

ಧಾರ್ಮಿಕ

Solar Eclipse 2022 | ದೀಪಾವಳಿ ಹಬ್ಬದಲ್ಲಿಯೇ ಸೂರ್ಯ ಗ್ರಹಣ; ಯಾವ ರಾಶಿಯ ಮೇಲೆ ಏನು ಪರಿಣಾಮ?

ಅಕ್ಟೋಬರ್‌ 25ರ ಮಂಗಳವಾರದಂದು ಸೂರ್ಯ ಗ್ರಹಣ (Solar Eclipse 2022 ) ಸಂಭವಿಸಲಿದೆ. ಇದನ್ನು “ಗ್ರಸ್ತಾಸ್ತʼʼ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಏನಿದರ ವಿಶೇಷ, ಸ್ಪರ್ಶ-ಮೋಕ್ಷ ಎಷ್ಟು ಹೊತ್ತಿಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೀಪಾವಳಿಯ ಅಮಾವಾಸ್ಯೆಯಂದು (ಆಶ್ವಯುಜ ಮಾಸ ಕೃಷ್ಣ ಪಕ್ಷದ ಅಮಾವಾಸ್ಯೆ) ಅಂದರೆ ಅಕ್ಟೋಬರ್‌ 25 ರಂದು ಕೇತುಗ್ರಸ್ತ ಸೂರ್ಯಗ್ರಹಣ (Solar Eclipse 2022) ಸಂಭವಿಸಲಿದೆ. ಈ ಗ್ರಹಣವು ಬಹುತೇಕವಾಗಿ ಭಾರತದ ಎಲ್ಲ ಪ್ರದೇಶಗಳಲ್ಲೂ ಗೋಚರಿಸಲಿದೆ. ಆದರೆ ಈಶಾನ್ಯ ರಾಜ್ಯಗಳಾದ ಮೇಘಾಲಯ, ಮಣಿಪುರ, ಮಿಜೋರಂ, ನಾಗಾಲ್ಯಾಂಡ್ ಗೋಚರಿಸುವುದಿಲ್ಲ. ನಮ್ಮ ದೇಶದಲ್ಲಿ ಈ ಗ್ರಹಣದ ಸ್ಪರ್ಶ ಮಾತ್ರ ಕಾಣಿಸಲಿದೆ.

ಈ ಖಗೋಳ ವಿಸ್ಮಯವು ಜ್ಯೋತಿಷದ ಪ್ರಕಾರ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವ ಪಡೆದಿದ್ದು, ಈ ಗ್ರಹಣವು “ಗ್ರಸ್ತಾಸ್ತವಾಗಿʼʼ ಖಂಡಗ್ರಾಸವಾಗಿ ಗೋಚರಿಸಲಿದೆ ಎಂದು ಪಂಚಾಂಗದಲ್ಲಿ ಹೇಳಲಾಗಿದೆ.

ಗ್ರಹಣದ ಸ್ಪರ್ಶ-ಮೋಕ್ಷ ಎಷ್ಟು ಹೊತ್ತಿಗೆ?
ಗ್ರಹಣ ಸ್ಪರ್ಶ ಸಂಜೆ 05-02
ಗ್ರಹಣ ಮಧ್ಯ ಸಂಜೆ 05-47
ಗ್ರಸ್ತಾಸ್ತ(ರವಿಅಸ್ತ್ರ) ಸಂಜೆ 05-58
ಗ್ರಹಣಮೋಕ್ಷ ಸಂಜೆ 06-20
ಗ್ರಹಣ ಆದ್ಯಂತ ಪುಣ್ಯ ಕಾಲ: 57 ನಿಮಿಷ.
ಪುಣ್ಯಕಾಲ: 25-10-2022 ರಂದು ಮಂಗಳವಾರ ಸಂಜೆ 05-02 ನಿಮಿಷದಿಂದ ಸಂಜೆ 5-58 ನಿಮಿಷಗಳ ವರೆಗೆ ಪರ್ವಪುಣ್ಯಕಾಲ ಎಂದು ಪಂಚಾಂಗದಲ್ಲಿ ತಿಳಿಸಲಾಗಿದೆ.

Solar Eclipse 2022

ಏನಿದು ಗ್ರಸ್ತಾಸ್ತವಾಗಿ ಗೋಚರ?
ಯಾವುದೇ ಗ್ರಹಣವು ಸಂಭವಿಸಿ, ಆ ದಿನವೇ ಮೋಕ್ಷ ಕಾಣದಿದ್ದರೆ ಅದನ್ನು “ಗ್ರಸ್ತಾಸ್ತವಾಗಿʼʼ ಗೋಚರ ಎಂದು ಕರೆಯಲಾಗುತ್ತದೆ. ಈ ಸೂರ್ಯ ಗ್ರಹಣದ ಸ್ಪರ್ಶ ಮಾತ್ರ ಭಾರತದಲ್ಲಿ ಗೋಚರಿಸಲಿದ್ದು, ಮೋಕ್ಷ ಕಾಣಿಸುವುದಿಲ್ಲ. ಹೀಗಾಗಿ ಕೇತುಗ್ರಸ್ತ ಸೂರ್ಯ ಗ್ರಹಹಣವನ್ನು “ಗ್ರಸ್ತಾಸ್ತʼʼ ಗ್ರಹಣ ಎಂದು ಕರೆಯಲಾಗಿದೆ.

ಇದನ್ನು ವರ್ಣಿಸುವ ಶ್ಲೋಕ ಇಲ್ಲಿದೆ;
ಗ್ರಸ್ತಾವೇವಾಸ್ತಮಾನಂ ತು ರವೀಂದೂ ಪ್ರಾಪ್ಪುತೋ ಯದಿ ।
ಪರೇದ್ಯುರುದಯೇ ಸ್ನಾತ್ವಾ ಶುದ್ಧೋಽಭ್ಯವಹರೇತ್ ನರಃ ||
ಸಂಧ್ಯಾಕಾಲೇ ಯದಾ ರಾಹುಗ್ರ್ರಸತೇ ಶಶಿಭಾಸ್ಕರೌ |
ತದಹರ್ನೈವ ಭೋಕ್ತವ್ಯಂ ರಾತ್ರಾವಪಿ ಕದಾಚನ |

ಯಾವಾಗ ಆಹಾರ ಸೇವಿಸಬಹುದು?
ಈ ಸೂರ್ಯಗ್ರಹಣವು ಹಗಲು ನಾಲ್ಕನೇಯ ಯಾಮದಲ್ಲಿ ಸಂಭವಿಸುತ್ತಿರುವುದರಿಂದ ಸೂರ್ಯೋದಯದಿಂದಲೇ ಗ್ರಹಣ ನಿಷಿದ್ಧಗಳು ಜಾರಿಯಾಗಲಿವೆ. ಈ ದಿನ ಪೂರ್ತಿ ಭೋಜನಕ್ಕೆ , ಫಲಾಹಾರ ಸೇವನೆಗೆ ಅವಕಾಶವಿರುವುದಿಲ್ಲ. ಮಾರನೇ ದಿನ ಅಂದರೆ ಬುಧವಾರ ಬೆಳಗ್ಗೆ ಸೂರ್ಯೋದಯವಾದ ನಂತರವಷ್ಟೇ ಆಹಾರ ಸೇವಿಸಬಹುದು.

ಮಕ್ಕಳು, ವೃದ್ಧರು, ಗರ್ಭಿಣಿಯರು, ಅಶಕ್ತರು, ಅನಾರೋಗ್ಯ ಪೀಡಿತರು ಮಾತ್ರ ಮಧ್ಯಾಹ್ನ ಗ್ರಹಣ ಸಂಭವಿಸುವುದಕ್ಕೂ ಮೊದಲು, 2-00 ಗಂಟೆಯವರೆಗೆ ಆಹಾರವನ್ನು ಸೇವಿಸಬಹುದು. ನಂತರ ಗ್ರಹಣ ಬಿಟ್ಟ ಮೇಲೆ ಸ್ನಾನವನ್ನು ಮಾಡಿ, ಆಹಾರ ಸೇವನೆ ಮಾಡಬಹುದು ಎಂದು ಪಂಚಾಂಗದಲ್ಲಿ ಹೇಳಲಾಗಿದೆ.

ಸೂರ್ಯಾಸ್ತವಾದ ಮೇಲೆ ಶುದ್ಧಿಸ್ನಾನವನ್ನು ಮಾತ್ರ ಮಾಡಬೇಕು. ಮೈಲಿಗೆ ನಿವೃತ್ತಿಯಾಗುತ್ತದೆ. ಹೀಗಾಗಿ ಬಟ್ಟೆ, ಹಾಸಿಗೆ ಇತ್ಯಾದಿಗಳನ್ನು ಮುಟ್ಟಬಹುದು. ಆದರೆ ಆಹಾರ ಸ್ವೀಕರಿಸಲು ಶಾಸ್ತ್ರದ ಪ್ರಕಾರ ಅವಕಾಶವಿಲ್ಲ.

ಈ ಗ್ರಹಣದ ಫಲಗಳೇನು?
ಈ ಗ್ರಹಣವು ಚಿತ್ತಾ ನಕ್ಷತ್ರ ತುಲಾ ರಾಶಿಯಲ್ಲಿ ಸಂಭವಿಸುತ್ತಿದೆ. ಈ ನಕ್ಷತ್ರ ಮತ್ತು ರಾಶಿಯವರಿಗೆ ವಿಶೇಷ ದೋಷವಿರಲಿದೆ. ಧನು, ಮಕರ, ವೃಷಭ, ಸಿಂಹ ರಾಶಿಯವರಿಗೆ ಶುಭ ಫಲಗಳಿದ್ದರೆ, ಕನ್ಯಾ, ಕುಂಭ, ಮೇಷ, ಮಿಥುನ ರಾಶಿಯವರಿಗೆ ಮಿಶ್ರ ಫಲಗಳಿರಲಿವೆ. ತುಲಾ, ವೃಶ್ಚಿಕ, ಮೀನ, ಕಟಕ ರಾಶಿಯವರಿಗೆ ಅನಿಷ್ಟ ಫಲಗಳಿರಲಿವೆ ಎಂದು ಪಂಚಾಂಗದಲ್ಲಿ ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
pm Narendra Modi
ಪ್ರಮುಖ ಸುದ್ದಿ3 mins ago

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

karnataka Weather Forecast
ಮಳೆ50 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್58 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ7 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌