Solar Eclipse 2022 | ಗ್ರಹಣದಿಂದ ಯಾವ ರಾಶಿಗೆ ಶುಭ? ಯಾವೆಲ್ಲಾ ರಾಶಿಗೆ ಅಶುಭ? ಪರಿಹಾರಕ್ಕೆ ಯಾವ ಮಂತ್ರ ಪಠಿಸಬೇಕು? - Vistara News

ಧಾರ್ಮಿಕ

Solar Eclipse 2022 | ಗ್ರಹಣದಿಂದ ಯಾವ ರಾಶಿಗೆ ಶುಭ? ಯಾವೆಲ್ಲಾ ರಾಶಿಗೆ ಅಶುಭ? ಪರಿಹಾರಕ್ಕೆ ಯಾವ ಮಂತ್ರ ಪಠಿಸಬೇಕು?

ಮಂಗಳವಾರ ಸಂಭವಿಸಲಿರುವ ಕೇತುಗ್ರಸ್ತ ಸೂರ್ಯಗ್ರಹಣ (Solar Eclipse 2022) ಸ್ವಾತೀ ನಕ್ಷತ್ರದವರಿಗೆ, ತುಲಾ ರಾಶಿಯವರಿಗೆ ಅಶುಭವನ್ನುಂಟು ಮಾಡಲಿದೆ. ಬೇರೆ ರಾಶಿಯವರಿಗೆ ಯಾವ ಫಲವಿದೆ? ಪರಿಹಾರಕ್ಕಿರುವ ಮಂತ್ರ ಯಾವುದು?

VISTARANEWS.COM


on

Solar Eclipse 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಶ್ವಯುಜ ಮಾಸ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಅಂದರೆ ಅಕ್ಟೋಬರ್‌ 25 ರಂದು ಕೇತುಗ್ರಸ್ತ ಸೂರ್ಯಗ್ರಹಣ (Solar Eclipse 2022) ಸಂಭವಿಸಲಿದೆ.

ಈ ಗ್ರಹಣವು ಸ್ವಾತೀ ನಕ್ಷತ್ರ ತುಲಾ ರಾಶಿಯಲ್ಲಿ ಸಂಭವಿಸುತ್ತಿದೆ. ಈ ನಕ್ಷತ್ರ ಮತ್ತು ರಾಶಿಯವರಿಗೆ ವಿಶೇಷ ದೋಷವಿರಲಿದೆ. ಈ ಗ್ರಹಣವು ಚಿತ್ತಾ, ಸ್ವಾತೀ, ವಿಶಾಖ, ಆರಿದ್ರಾ, ಶತಭಿಷ ನಕ್ಷತ್ರದವರಿಗೂ, ತುಲಾ, ವೃಶ್ಚಿಕ, ಮೀನ, ಕಟಕ ರಾಶಿಯವರಿಗೂ ಅಶುಭವನ್ನುಂಟು ಮಾಡುತ್ತದೆ.

ಧನು, ಮಕರ, ವೃಷಭ, ಸಿಂಹ ರಾಶಿಯವರಿಗೆ ಶುಭ ಫಲಗಳಿದ್ದರೆ, ಕನ್ಯಾ, ಕುಂಭ, ಮೇಷ, ಮಿಥುನ ರಾಶಿಯವರಿಗೆ ಮಿಶ್ರ ಫಲಗಳಿರಲಿವೆ ಎಂದು ಪಂಚಾಂಗದಲ್ಲಿ ಹೇಳಲಾಗಿದೆ.

ಗ್ರಹಣದ ದೋಷವಿರುವ ನಕ್ಷತ್ರ ಅಥವಾ ರಾಶಿಯವರು ಈ ಕೆಳಗಿನ ಶ್ಲೋಕವನ್ನು ಪಠಿಸಬೇಕು;

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||  ‌

ಇದನ್ನೂ ಓದಿ | Solar Eclipse 2022 | ಸೂರ್ಯ ಗ್ರಹಣ ಏಕೆ ಸಂಭವಿಸುತ್ತಿದೆ? ಇದನ್ನು ನೋಡುವುದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

ಅಕ್ಷಯ ತೃತೀಯ ಅಂಗವಾಗಿ ಈ ಬಾರಿ ವಿಶೇಷವಾಗಿ ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ 50 ಸಾವಿರ ರೂ. ಮೇಲ್ಪಟ್ಟು ಖರೀದಿಸುವ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದೆ.ಕಾರ್ಯಕ್ರಮಕ್ಕೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಬಾರಿ, ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಆಗಮಿಸಲಿದ್ದಾರೆ.

VISTARANEWS.COM


on

Akshaya Tritiya Bala Rama Silver Idol gift from Sri Sai Gold Palace in bengaluru
Koo

ಬೆಂಗಳೂರು: ಅಕ್ಷಯ ತೃತೀಯ (Akshaya Tritiya 2024) ಅಂಗವಾಗಿ ಈ ಬಾರಿ ವಿಶೇಷವಾಗಿ ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ (Sri Sai Gold Palace) 50 ಸಾವಿರ ರೂ. ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದೆ.

ಇದನ್ನೂ ಓದಿ: Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಅಕ್ಷಯ ತೃತೀಯದಂದು ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಎಲ್ಲಾ ಶಾಖೆಗಳು ಬೆಳಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೂ ತೆರೆದಿರುತ್ತವೆ.

ಇದನ್ನೂ ಓದಿ: SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

ಮೇ 10 ರಂದು ಶುಕ್ರವಾರ ಆಚರಿಸುವ ಅಕ್ಷಯ ತೃತೀಯ ಕಾರ್ಯಕ್ರಮಕ್ಕೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಭಾರಿ ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ವಿಜಯನಗರ

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Vijayanagara News: ಅಕ್ಷತ್ತದಿಗಿ ಅಮವಾಸ್ಯೆ ನಿಮಿತ್ತ ಕೊಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದರ್ಶನ ಪಡೆದುಕೊಳ್ಳಲು ನಾಡಿನ ವಿವಿಧೆಡೆಯಿಂದ ಬುಧವಾರ ಬೆಳ್ಳಿಗ್ಗೆಯಿಂದಲೇ ಪಟ್ಟಣದತ್ತ ದಂಡು ದಂಡಾಗಿ ಭಕ್ತರು ಆಗಮಿಸಿದರು. ಅಕ್ಷತ್ತದಿಗಿ ಅಮವಾಸ್ಯೆ ಅಂಗವಾಗಿ ಶ್ರೀ ಗುರು ಕೊಟೂರೇಶ್ವರ ಸ್ವಾಮಿಯ ಹಿರೇಮಠದಲ್ಲಿ ಸ್ವಾಮಿಗೆ ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು.

VISTARANEWS.COM


on

Akshattadigi Amavasya Devotees darshan of Sri Guru Kottureswara Swamy
Koo

ಕೊಟ್ಟೂರು: ಅಕ್ಷತ್ತದಿಗಿ ಅಮವಾಸ್ಯೆ ನಿಮಿತ್ತ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದರ್ಶನ ಪಡೆದುಕೊಳ್ಳಲು ನಾಡಿನ ವಿವಿಧೆಡೆಯಿಂದ ಬುಧವಾರ ಬೆಳ್ಳಿಗ್ಗೆಯಿಂದಲೇ ಪಟ್ಟಣದತ್ತ ದಂಡುದಂಡಾಗಿ ಭಕ್ತರು (Vijayanagara News) ಆಗಮಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಅಕ್ಷತ್ತದಿಗಿ ಅಮವಾಸ್ಯೆ ಅಂಗವಾಗಿ ಶ್ರೀ ಗುರು ಕೊಟೂರೇಶ್ವರ ಸ್ವಾಮಿಯ ಹಿರೇಮಠದಲ್ಲಿ ಸ್ವಾಮಿಗೆ ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

ಬುಧವಾರ ಅಮವಾಸ್ಯೆ ನಿಮಿತ್ತ ಪಟ್ಟಣ ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ನೆರಳಿಗೆಂದು ಶಾಮಿಯಾನ ವ್ಯವಸ್ಥೆಯನ್ನು ಮಾಡಲಾಗಿತ್ತು.

Continue Reading

ದೇಶ

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

ಭಾರತದ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ (Hindu Population) ಕಳೆದ 65 ವರ್ಷಗಳಲ್ಲಿ ಶೇ. 7.8ರಷ್ಟು ಕುಸಿತವಾಗಿದ್ದು, ಅಲ್ಪಸಂಖ್ಯಾತರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. 1950 ಮತ್ತು 2015ರ ನಡುವೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯ ಪಾಲು ಶೇ. 43.15ರಷ್ಟು ಹೆಚ್ಚಾಗಿದೆ. ಕ್ರಿಶ್ಚಿಯನ್ನರು ಶೇ.5.38, ಸಿಖ್ಖರು ಶೇ.6.58 ಮತ್ತು ಬೌದ್ಧರ ಜನಸಂಖ್ಯೆ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಿದೆ.

VISTARANEWS.COM


on

By

Hindu population
Koo

ಭಾರತದ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ (Hindu Population) 1950 ಮತ್ತು 2015ರ ನಡುವೆ ಶೇ. 7.8ರಷ್ಟು ಕುಸಿತವಾಗಿದೆ ಎಂದು ಪ್ರಧಾನಮಂತ್ರಿಯ ( Prime Minister) ಆರ್ಥಿಕ ಸಲಹಾ ಮಂಡಳಿ (Economic Advisory Council) (EAC- PM) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ.

ಭಾರತದಲ್ಲಿ ಹಿಂದೂ ಜನಸಂಖ್ಯೆಯು ಕುಗ್ಗಿದರೆ, ಮುಸ್ಲಿಂ (muslim), ಕ್ರಿಶ್ಚಿಯನ್ (Christian), ಬೌದ್ಧ (Buddhist) ಮತ್ತು ಸಿಖ್ಖರು (Sikhs) ಸೇರಿದಂತೆ ಅಲ್ಪಸಂಖ್ಯಾತರ ಜನಸಂಖ್ಯೆ ಬಹುತೇಕ ಹೆಚ್ಚಾಗಿದೆ. ಆದರೆ ಜೈನ (jain) ಮತ್ತು ಪಾರ್ಸಿಗಳ (Parsis ) ಸಂಖ್ಯೆ ಕುಸಿತವಾಗಿದೆ.

1950 ಮತ್ತು 2015ರ ನಡುವೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯ ಪಾಲು ಶೇ. 43.15ರಷ್ಟು ಹೆಚ್ಚಾಗಿದೆ. ಕ್ರಿಶ್ಚಿಯನ್ನರು ಶೇ.5.38, ಸಿಖ್ಖರು ಶೇ.6.58 ಮತ್ತು ಬೌದ್ಧರ ಜನಸಂಖ್ಯೆ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಿದೆ.

ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿ ಪ್ರಕಾರ 65 ವರ್ಷಗಳಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 1950ರಲ್ಲಿ ಶೇ. 84ರಿಂದ 2015ರಲ್ಲಿ ಶೇ.78ಕ್ಕೆ ಕುಸಿತವಾಗಿದೆ. ಆದರೆ ಮುಸ್ಲಿಮರ ಸಂಖ್ಯೆ ಇದೇ ಅವಧಿಯಲ್ಲಿ ಶೇ.9.84ರಿಂದ ಶೇ.14.09ಕ್ಕೆ ಏರಿಕೆಯಾಗಿದೆ.


ಮ್ಯಾನ್ಮಾರ್‌, ನೇಪಾಳದಲ್ಲೂ ಕುಸಿತ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆಯ ಕುಗ್ಗುವಿಕೆ ಶೇ. 7.8ರಷ್ಟಿದ್ದರೆ, ಮ್ಯಾನ್ಮಾರ್‌ನಲ್ಲಿ ಶೇ. 10ರಷ್ಟು ಕುಸಿತವಾಗಿದೆ. ಇದು ನೆರೆಹೊರೆಯ ರಾಷ್ಟ್ರದಲ್ಲಿ ಎರಡನೇ ಅತ್ಯಂತ ಮಹತ್ವದ ಕುಸಿತವಾಗಿದೆ. ಭಾರತವನ್ನು ಹೊರತುಪಡಿಸಿ, ನೇಪಾಳದ ಬಹುಸಂಖ್ಯಾತ ಸಮುದಾಯವಾದ ಹಿಂದೂಗಳ ಜನಸಂಖ್ಯೆಯ ತನ್ನ ಪಾಲಿನಲ್ಲಿ ಶೇ. 3.6ರಷ್ಟು ಕುಸಿತವನ್ನು ಕಂಡಿದೆ.

167 ದೇಶಗಳ ಮೌಲ್ಯಮಾಪನ

ಮೇ 2024ರಲ್ಲಿ ಬಿಡುಗಡೆಯಾದ ಈ ಅಧ್ಯಯನವು ಪ್ರಪಂಚದಾದ್ಯಂತ 167 ದೇಶಗಳಲ್ಲಿನ ಪ್ರವೃತ್ತಿಯನ್ನು ಮೌಲ್ಯಮಾಪನ ಮಾಡಿದೆ. ಭಾರತದ ಕಾರ್ಯಕ್ಷಮತೆಯು ದೊಡ್ಡ ಜಾಗತಿಕ ಪ್ರವೃತ್ತಿಗಳೊಂದಿಗೆ ಸ್ಥಿರವಾಗಿದೆ ಎನ್ನುತ್ತಾರೆ ಅಧ್ಯಯನಕಾರರು. ಅಲ್ಪಸಂಖ್ಯಾತರು ಭಾರತದಲ್ಲಿ ಕೇವಲ ರಕ್ಷಿಸಲ್ಪಟ್ಟಿಲ್ಲ, ನಿಜವಾಗಿಯೂ ಬೆಳೆಯುತ್ತಿದ್ದಾರೆ ಎಂಬುದನ್ನು ಈ ಅಂಕಿ ಅಂಶಗಳು ತೋರಿಸಿವೆ ಎನ್ನುತ್ತಾರೆ ತಜ್ಞರು.

ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹೆಚ್ಚಳ

ಭಾರತದ ಜನಸಂಖ್ಯೆಯ ಬೆಳವಣಿಗೆಯ ಕಥೆಯು ಅದರ ನೆರೆಹೊರೆಯ ದೇಶಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. 1950 ಮತ್ತು 2015ರ ನಡುವೆ ಭಾರತ ದೇಶದ ಜನಸಂಖ್ಯೆಯಲ್ಲಿ ಭಾರತೀಯ ಬಹುಸಂಖ್ಯಾತ ಸಮುದಾಯವಾದ ಹಿಂದೂಗಳ ಪಾಲು ಶೇ. 7.8ರಷ್ಟು ಕಡಿಮೆಯಾಗಿದೆ. ಆದರೆ ಮುಸ್ಲಿಮರು ಬಹುಸಂಖ್ಯಾತರಾಗಿರುವ ನೆರೆಯ ದೇಶಗಳಲ್ಲಿ ಮುಸ್ಲಿಂ ಸಮುದಾಯದ ಪಾಲು ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಮುಸ್ಲಿಮರ ಜನಸಂಖ್ಯೆಯಲ್ಲಿ ಬಾಂಗ್ಲಾದೇಶವು ಶೇ. 18.5ರಷ್ಟು ಏರಿಕೆಯನ್ನು ಕಂಡಿದ್ದು, ಅನಂತರ ಪಾಕಿಸ್ತಾನದಲ್ಲಿ ಶೇ. 3.75 ಮತ್ತು ಅಫ್ಘಾನಿಸ್ತಾನದಲ್ಲಿ 0.29ರಷ್ಟು ಹೆಚ್ಚಳವಾಗಿದೆ.

1971ರಲ್ಲಿ ಬಾಂಗ್ಲಾದೇಶದ ರಚನೆಯ ಹೊರತಾಗಿಯೂ ಪಾಕಿಸ್ತಾನವು ಬಹುಸಂಖ್ಯಾತ ಧಾರ್ಮಿಕ ಪಂಗಡದ (ಹನಾಫಿ ಮುಸ್ಲಿಂ) ಪಾಲನ್ನು ಶೇ. 3.75ರಷ್ಟು ಹೆಚ್ಚಿಸಿಕೊಂಡಿದೆ ಮತ್ತು ಒಟ್ಟು ಮುಸ್ಲಿಂ ಜನಸಂಖ್ಯೆಯ ಪಾಲಿನಲ್ಲಿ ಶೇ.10ರಷ್ಟು ಹೆಚ್ಚಾಗಿದೆ ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ. ಮ್ಯಾನ್ಮಾರ್‌ನಲ್ಲಿ ಥೇರವಾಡ ಬೌದ್ಧರ ಬಹುಪಾಲು ಜನಸಂಖ್ಯೆಯು 65 ವರ್ಷಗಳಲ್ಲಿ ಶೇ. 10ರಷ್ಟು ಕುಸಿದಿದೆ.

ನೇಪಾಳದಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಯಲ್ಲಿ ಶೇ. 3.6 ಕುಸಿತವನ್ನು ಕಂಡಿದೆ. ಮಾಲ್ಡೀವ್ಸ್‌ನಲ್ಲಿ ಬಹುಪಾಲು ಗುಂಪಿನ (ಶಾಫಿ ಸುನ್ನಿಗಳು) ಪಾಲು ಶೇ.1.47ರಷ್ಟು ಕುಸಿದಿದೆ.

ಬೌದ್ಧ ಜನಸಂಖ್ಯೆಯಲ್ಲಿ ಏರಿಕೆ

ಬಹುಪಾಲು ಬೌದ್ಧ ಜನಸಂಖ್ಯೆಯನ್ನು ಹೊಂದಿರುವ ಭಾರತದ ನೆರೆಯ ದೇಶಗಳಾದ ಭೂತಾನ್ ಮತ್ತು ಶ್ರೀಲಂಕಾ ಕ್ರಮವಾಗಿ ಶೇ. 17.6 ಮತ್ತು ಶೇ. 5.25ರಷ್ಟು ಏರಿಕೆ ಕಂಡಿವೆ.

ಇದನ್ನೂ ಓದಿ: Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

ಒಟ್ಟು ಜನಸಂಖ್ಯೆಯ ಪಾಲಿನ ಅಲ್ಪಸಂಖ್ಯಾತರ ಅನುಪಾತದಲ್ಲಿನ ಬದಲಾವಣೆಯು ದೇಶದಲ್ಲಿ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದು ಅಲ್ಪಸಂಖ್ಯಾತರನ್ನು ವ್ಯಾಖ್ಯಾನಿಸುವುದು ಸೇರಿದಂತೆ ನೀತಿಗಳ ಮೂಲಕ ಪೋಷಿಸಲು ಕಾರಣವಾಗುತ್ತದೆ. ಜಾಗತಿಕವಾಗಿ ಇದೊಂದು ಅಪರೂಪದ ಘಟನೆ ಎಂದು ಅಧ್ಯಯನ ಹೇಳಿದೆ.

Continue Reading

ಫ್ಯಾಷನ್

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

ಅಕ್ಷಯ ತೃತೀಯ ಆಗಮಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಈ ಜನರೇಷನ್‌ನವರು ಇಷ್ಟಪಡುವಂತಹ ಊಹೆಗೂ ಮೀರಿದ ನಾನಾ ವೆರೈಟಿ ಡಿಸೈನ್‌ನ ಬಂಗಾರದ ಫ್ಯಾಷನ್‌ ಜ್ಯುವೆಲರಿಗಳು (Akshaya Tritiya Jewellery) ಎಂಟ್ರಿ ನೀಡಿವೆ. ಯಾವ್ಯಾವ ಬಗೆಯವು ಈ ಸೀಸನ್‌ಗೆ ಕಾಲಿಟ್ಟಿವೆ? ಎಂಬುದರ ಬಗ್ಗೆ ಜ್ಯುವೆಲ್‌ ಡಿಸೈನರ್‌ಗಳು ಇಲ್ಲಿ ತಿಳಿಸಿದ್ದಾರೆ.

VISTARANEWS.COM


on

Akshaya Tritiya Jewellery
ಚಿತ್ರಕೃಪೆ: ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಈ ಜನರೇಷನ್‌ನವರು ಇಷ್ಟಪಡುವಂತಹ ನಾನಾ ವೆರೈಟಿ ಡಿಸೈನ್‌ನ ಫ್ಯಾಷನ್‌ ಜ್ಯುವೆಲರಿಗಳು ಎಂಟ್ರಿ ನೀಡಿವೆ. ಚಿಕ್ಕ ಮಕ್ಕಳಿಂದ ಹಿಡಿದು ಯುವತಿಯರು, ಉದ್ಯೋಗಸ್ಥ ಮಹಿಳೆಯರು ಹಾಗೂ ಗೃಹಿಣಿಯರು ಕೂಡ ಇಷ್ಟಪಡುವಂತಹ ಸಿಂಪಲ್‌ ಫ್ಯಾಷನ್‌ ಜ್ಯುವೆಲರಿಗಳು (Akshaya Tritiya Jewellery), ಕಾರ್ಪೋರೇಟ್‌ ಕ್ಷೇತ್ರದ ಮಹಿಳೆಯರು ಧರಿಸುವಂತಹ ಬಿಗ್‌ ಹಾಗೂ ಹ್ಯಾಂಗಿಂಗ್‌ ಫ್ಯಾಷನ್‌ ಜ್ಯುವೆಲರಿಗಳು ಕಾಲಿಟ್ಟಿವೆ.

Akshaya Tritiya Jewellery

ವೈವಿಧ್ಯಮಯ ಜ್ಯುವೆಲರಿಗಳು

ಈ ಬಾರಿ ಕಳೆದ ಬಾರಿಗಿಂತ ಅತಿ ಹೆಚ್ಚು ಫ್ಯಾಷನ್‌ ಜ್ಯುವೆಲರಿಗಳು ಕಾಲಿಟ್ಟಿವೆ. ಮೊದಲೆಲ್ಲ ಕೇವಲ ದೊಡ್ಡ ಬ್ರಾಂಡ್‌ಗಳಲ್ಲಿ ಮಾತ್ರ ದೊರಕುತ್ತಿದ್ದ ಬಂಗಾರದ ಫ್ಯಾಷನ್‌ ಜ್ಯುವೆಲರಿಗಳು ಇದೀಗ ಸಾಮಾನ್ಯ ಬ್ರಾಂಡ್‌ಗಳಲ್ಲೂ ಬಂದಿರುವುದು ವಿಶೇಷ. ಇನ್ನು, ಕಡಿಮೆ ಗ್ರಾಮ್‌ಗಳಲ್ಲೂ ದೊರಕುತ್ತಿರುವುದು ಗ್ರಾಹಕರನ್ನು ಆಕರ್ಷಿಸಲು ಪ್ರಮುಖ ಕಾರಣ. ಇದರಿಂದಾಗಿ ಸಾಮಾನ್ಯ ಜನರು ಕೂಡ ಫ್ಯಾಷನ್‌ ಜ್ಯುವೆಲರಿಗಳತ್ತ ವಾಲಿದ್ದಾರೆ. ಪರಿಣಾಮ, ಫ್ಯಾಷನ್‌ ಜ್ಯುವೆಲರಿಗಳು ಸಖತ್‌ ಬೇಡಿಕೆ ಹೆಚ್ಚಿಸಿಕೊಂಡಿವೆ ಎನ್ನುತ್ತಾರೆ ಜ್ಯುವೆಲ್‌ ಮಾರಾಟಗಾರರು.

Akshaya Tritiya Jewellery

ಫ್ಯಾಷನ್‌ ಜ್ಯುವೆಲರಿಗಳ ಲೋಕ

ಪುಟ್ಟ ಚಿಕ್ಕ ಸ್ಟಡ್ಸ್‌ನಂತಹ ಫ್ಲೋರಲ್‌, ಟ್ರಾಪಿಕಲ್‌, ನಕ್ಷತ್ರ, ರಂಗೋಲಿ ಡಿಸೈನ್‌ನಂತಹ ಫ್ಯಾಷನ್‌ ಜ್ಯುವೆಲರಿಗಳು, ಜಿಯಾಮೆಟ್ರಿಕಲ್‌ ಡಿಸೈನ್‌ನ ಹ್ಯಾಂಗಿಂಗ್‌ ಫ್ಯಾಷನ್‌ ಜ್ಯುವೆಲರಿಗಳು, ಬಿಗ್‌ ಹರಳಿನೊಂದಿಗೆ ಮಿಕ್ಸ್‌ ಮ್ಯಾಚ್‌ ಮಾಡಿರುವಂತಹ ಡಿಸೈನ್‌ನ ಫ್ಯಾಷನ್‌ ಜ್ಯುವೆಲರಿಗಳು, ಇಮ್ಯಾಜೀನ್‌ಗೂ ಸಿಗದ ವೆರೈಟಿ ಡಿಸೈನ್‌ಗಳು, ಇನ್ನು, ಉಡುಪಿಗೆ ಮ್ಯಾಚ್‌ ಆಗುವಂತಹ ಫ್ಯಾಷನ್‌ ಜ್ಯುವೆಲರಿಗಳು ಸೇರಿದಂತೆ ನಾನಾ ಬಗೆಯವು ಟ್ರೆಂಡ್‌ನಲ್ಲಿವೆ. ಜ್ಯುವೆಲರಿ ಶಾಪ್‌ಗಳು ಕೂಡ ಫ್ಯಾಷೆನಬಲ್‌ ಜ್ಯುವೆಲರಿಗಳನ್ನು ಗ್ರಾಹಕರ ಮನೋಭಿಲಾಷೆಗೆ ತಕ್ಕಂತೆ ಆರ್ಡರ್‌ ತೆಗೆದುಕೊಂಡು ನೀಡುತ್ತಿವೆ. ಆ ಸೌಲಭ್ಯವನ್ನು ನೀಡಿವೆ. ಅಷ್ಟು ಮಾತ್ರವಲ್ಲದೇ, ಕಾಲೇಜು ಹುಡುಗಿಯರಿಗೆ ಪ್ರಿಯವಾಗುವಂತಹ ಇಂದು ಮಾರುಕಟ್ಟೆಯಲ್ಲಿ ಪ್ರಚಲಿತದಲ್ಲಿರುವ ಫ್ಯಾಷನ್‌ ಜ್ಯುವೆಲರಿಗಳನ್ನು ಬಿಡುಗಡೆಗೊಳಿಸಿವೆ.

Akshaya Tritiya Jewellery

ಫ್ಯಾಷನ್‌ ಜ್ಯುವೆಲರಿಗಳನ್ನು ಖರೀದಿಸುವವರು ಗಮನದಲ್ಲಿಟ್ಟುಕೊಳ್ಳಬೇಕಾದ ಸಂಗತಿಗಳಿವು

  • ಆದಷ್ಟೂ ಲೈಟ್‌ವೈಟ್‌ನವನ್ನು ಆಯ್ಕೆ ಮಾಡಿ.
  • ಟ್ರೆಂಡಿ ಡಿಸೈನ್‌ನವನ್ನು ಸೆಲೆಕ್ಟ್‌ ಮಾಡಿ ಖರೀದಿಸಿ.
  • ಮಕ್ಕಳಿಗಾದಲ್ಲಿ ಸಿಂಪಲ್‌ ಸ್ಟಡ್ಸ್‌ ಡಿಸೈನ್‌ನವನ್ನು ಕೊಳ್ಳಿ.
  • ಕಾಲೇಜು ಯುವತಿಯರಾದಲ್ಲಿ ಬಹುತೇಕ ಔಟ್‌ಫಿಟ್‌ಗಳಿಗೆ ಮ್ಯಾಚ್‌ ಆಗುವಂತದ್ದನ್ನು ನೋಡಿ.
  • ಉದ್ಯೋಗಸ್ಥ ಮಹಿಳೆಯರು ಅಗಲವಾದ ಡಿಸೈನ್‌ನವನ್ನು ಆಯ್ಕೆ ಮಾಡಬಹುದು.
  • ಹೆವಿ ಭಾರವಿರುವಂಥದ್ದನ್ನು ಅವಾಯ್ಡ್‌ ಮಾಡಿ.
  • ಬೀಡ್ಸ್‌ ಇರುವಂತವು ರೀಸೇಲ್‌ ಮಾಡುವಾಗ ಉತ್ತಮ ಬೆಲೆ ದೊರಕುವುದಿಲ್ಲ ಎಂಬುದು ನೆನಪಿರಲಿ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

Continue Reading
Advertisement
Mureder Case
ಪ್ರಮುಖ ಸುದ್ದಿ2 hours ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು3 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ5 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ5 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ6 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ7 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ7 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ7 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ7 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ7 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ8 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ9 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ15 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ15 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ16 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು18 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌