Tirupati Temple Since it takes 40 hours for darshan in Tirupati a new rule has been implemented here are the detailsTirupati Temple : ತಿರುಪತಿಯಲ್ಲಿ ದರ್ಶನಕ್ಕೆ 40 ಗಂಟೆ ತಗಲುತ್ತಿರುವುದರಿಂದ ಹೊಸ ನಿಯಮ ಜಾರಿ, ಇಲ್ಲಿದೆ ಡಿಟೇಲ್ಸ್

ದೇಶ

Tirupati Temple : ತಿರುಪತಿಯಲ್ಲಿ ದರ್ಶನಕ್ಕೆ 40 ಗಂಟೆ ತಗಲುತ್ತಿರುವುದರಿಂದ ಹೊಸ ನಿಯಮ ಜಾರಿ, ಇಲ್ಲಿದೆ ಡಿಟೇಲ್ಸ್

Tirupati Temple ತಿರುಪತಿಯಲ್ಲಿ ಸಾಮಾನ್ಯ ಭಕ್ತರಿಗೆ ದೇವರ ದರ್ಶನಕ್ಕೆ 40 ಗಂಟೆ ತಗಲುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿಯಮಗಳನ್ನು ಟಿಟಿಡಿ ಜಾರಿಗೆ ತಂದಿದೆ. ಅದರ ವಿವರ ಇಲ್ಲಿದೆ.

VISTARANEWS.COM


on

Tirupati Temple Since it takes 40 hours for darshan in Tirupati a new rule has been implemented here are the details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುಪತಿ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ( Tirupati Temple) ದೇವರ ದರ್ಶನಕ್ಕೆ ತಗಲುವ ಸಮಯ 40 ಗಂಟೆಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಕಾಯುವಿಕೆಯ ಸಮಯವನ್ನು ತಗ್ಗಿಸಿ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡಲು ತಿರುಮಲ ತಿರುಪತಿ ದೇವಸ್ಥಾನಮ್‌ (Tirumala Tirupati Devasthanam-TTD) ಹೊಸ ನಿಯಮಗಳನ್ನು ಘೋಷಿಸಿದೆ. ಅದರ ವಿವರ ನೋಡೋಣ.

ಬೇಸಗೆಯ ಅವಧಿಯಾಗಿರುವ ಕಾರಣ ಹಾಗೂ ಕೋವಿಡ್‌ ನಿರ್ಬಂಧಗಳು ಸಡಿಲವಾಗಿ ಮೂರು ವರ್ಷ ಸಮೀಪಿಸಿರುವ ಹಿನ್ನೆಲೆಯಲ್ಲಿ ತಿರುಪತಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ 2023 ಜೂನ್‌ 30 ರ ತನಕ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಟಿಟಿಡಿ ಚೇರ್ಮನ್‌ ವೈ.ವಿ ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

ಟಿಟಿಡಿ ಪ್ರಕಾರ ತಿರುಪತಿಯಲ್ಲಿ ಟೋಕನ್‌ ರಹಿತ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ 30-40 ಗಂಟೆ ಬೇಕಾಗುತ್ತದೆ. ಹೀಗಾಗಿ ವಿಐಪಿ ಬ್ರೇಕ್‌ ದರ್ಶನ್‌ ಮತ್ತು ಆರ್ಜಿತ ಸೇವೆಗಳಲ್ಲಿ ಕೆಲ ಬದಲಾವಣೆ ತರಲಾಗಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಸುಪ್ರಭಾತ ಸೇವೆಯಲ್ಲಿ ವಿವೇಚನಾ ಕೋಟಾ (discretionary quota) ಅನ್ನು ಹಿಂತೆಗೆದುಕೊಳ್ಳಲಾಗಿದೆ. ಇದರಿಂದ ಸಾಮಾನ್ಯ ಭಕ್ತರಿಗೆ ದೇವರ ದರ್ಶನಕ್ಕೆ ತಗಲುವ ಸಮಯದಲ್ಲಿ 20 ನಿಮಿಷ ಉಳಿತಾಯವಾಗಲಿದೆ.

ಅದೇ ರೀತಿ ತಿರುಪ್ಪವಾಡ ಸೇವೆಯನ್ನು ಗುರುವಾರ ನಡೆಸಲು ಟಿಟಿಡಿ ನಿರ್ಧರಿಸಿದೆ. ಇದರಿಂದ 30 ನಿಮಿಷ ಸಮಯ ಉಳಿತಾಯವಾಗಲಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಐಪಿ ರೆಕಮಂಡೇಶನ್‌ ಲೆಟರ್‌ಗಳನ್ನೂ ಟಿಟಿಡಿ ಸ್ವೀಕರಿಸದಿರಲು ನಿರ್ಧರಿಸಿದೆ. ಆದರೆ ಸೆಲ್ಫ್-ವಿಐಪಿಗಳಿಗೆ ಮಾತ್ರ ಬ್ರೇಕ್‌ ದರ್ಶನ್‌ಗೆ ಅನುಮತಿ ನೀಡಲಾಗಿದೆ. ಎಲ್ಲ ಭಕ್ತರು, ವಿಐಪಿಗಳು ಸಹಕರಿಸಬೇಕು ಎಂದು ಟಿಟಿಡಿ ಕೋರಿದೆ.

ಟಿಟಿಡಿ ಪ್ರಕಾರ ವೆಂಕಟೇಶ್ವರನ ಸನ್ನಿಧಿಯಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಪ್ರಧಾನ ಪೂಜೆಗಳು ನಡೆಯುತ್ತವೆ. ರಾತ್ರಿಯ ಪೂಜೆಯಲ್ಲಿ ಅರ್ಚಕರು, ಪರಿಚಾರಕರು, ಆಚಾರ್ಯರು ಮಾತ್ರ ಭಾಗವಹಿಸುತ್ತಾರೆ. ಉಳಿದ ಪೂಜೆಗಳನ್ನು ಎಲ್ಲ ಭಕ್ತಾದಿಗಳೂ ವೀಕ್ಷಿಸಬಹುದು.

ಇದನ್ನೂ ಓದಿ: Tirupati Temple: ಮಾರ್ಚ್ 1ರಿಂದ ತಿರುಪತಿ ದೇಗುಲದಲ್ಲಿ ಫೇಸ್‌ ರಿಕಗ್ನೇಷನ್ ವ್ಯವಸ್ಥೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kunwar Sarvesh: ಮತದಾನ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿ ಹೃದಯಾಘಾತಕ್ಕೆ ಬಲಿ!

ಉತ್ತರ ಪ್ರದೇಶದ ಮೊರಾದಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ರಿತೇಶ್‌ ಗುಪ್ತಾ ಅವರು ಮಾಹಿತಿ ನೀಡಿದ್ದಾರೆ. ಶುಕ್ರವಾರವಷ್ಟೇ ಮೊರಾದಾಬಾದ್‌ನಲ್ಲಿ ಮತದಾನ ನಡೆದಿತ್ತು.

VISTARANEWS.COM


on

Kunwar Sarvesh Singh
Koo

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಸೇರಿ ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ (ಏಪ್ರಿಲ್‌ 19) ಮತದಾನ ನಡೆದಿದೆ. ಮತದಾನ ನಡೆದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ (Moradabad) ಕೂಡ ಸೇರಿದೆ. ಆದರೆ, ಮತದಾನ ನಡೆದ ಮರುದಿನವೇ ಅಂದರೆ, ಶನಿವಾರ (ಏಪ್ರಿಲ್‌ 20) ಮೊರಾದಾಬಾದ್‌ ಬಿಜೆಪಿ ಅಭ್ಯರ್ಥಿ (BJP Candidate) ಕುನ್ವರ್‌ ಸರ್ವೇಶ್‌ ಸಿಂಗ್‌ (71) (Kunwar Sarvesh Singh) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

“ಕುನ್ವರ್‌ ಸರ್ವೇಶ್‌ ಸಿಂಗ್‌ ಅವರಿಗೆ ಹೃದಯಾಘಾತ ಉಂಟಾಯಿತು. ಕೂಡಲೇ ಅವರನ್ನು ದೆಹಲಿಯಲ್ಲಿರುವ ಏಮ್ಸ್‌ಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಮೃತಪಟ್ಟಿದ್ದಾರೆ” ಎಂಬುದಾಗಿ ಮೊರಾದಾಬಾದ್‌ ನಗರ ಶಾಸಕ ರಿತೇಶ್‌ ಗುಪ್ತಾ ಅವರು ತಿಳಿಸಿದ್ದಾರೆ. ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಕೆಲ ದಿನಗಳಿಂದ ಪ್ರಚಾರದಲ್ಲಿ ತೊಡಗಿರಲಿಲ್ಲ. ಆದರೂ ಅವರು ಈ ಬಾರಿ ಗೆಲುವಿನ ವಿಶ್ವಾಸದಲ್ಲಿದ್ದರು. ಆದರೆ, ಚುನಾವಣೆ ಫಲಿತಾಂಶ ಬರುವ ಮೊದಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುನ್ವರ್‌ ಸರ್ವೇಶ್‌ ಸಿಂಗ್‌ ಅವರ ನಿಧನಕ್ಕೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.

ಕುನ್ವರ್‌ ಸರ್ವೇಶ್‌ ಸಿಂಗ್‌ ಅವರ ನಿಧನಕ್ಕೆ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಸಂತಾಪ ಸೂಚಿಸಿದ್ದಾರೆ. “ಮಾಜಿ ಸಂಸದ ಕುನ್ವರ್‌ ಸರ್ವೇಶ್‌ ಸಿಂಗ್‌ ಅವರು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು, ನಾಯಕರಿಗೆ ಸ್ಫೂರ್ತಿಯಾಗಿದ್ದರು. ಅವರು ಪರಿಶ್ರಮದಲ್ಲಿ ಹೆಚ್ಚು ನಂಬಿಕೆ ಹೊಂದಿದ್ದರು. ಇಂತಹ ಮೇರು ನಾಯಕನ ನಿಧನದಿಂದ ಮೊರಾದಾಬಾದ್‌ ಮಾತ್ರವಲ್ಲ, ಉತ್ತರ ಪ್ರದೇಶ ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಮೊರಾದಾಬಾದ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕುನ್ವರ್‌ ಸರ್ವೇಶ್‌ ಸಿಂಗ್‌ ಗೆಲುವು ಸಾಧಿಸಿದ್ದರು. ಆದರೆ, 2019ರಲ್ಲಿ ಸಮಾಜವಾದಿ ಪಕ್ಷದ ಡಾ.ಟಿ.ಎಸ್. ಹಸನ್‌ ಅವರ ವಿರುದ್ಧ ಕುನ್ವರ್‌ ಸರ್ವೇಶ್‌ ಸಿಂಗ್‌ ಸೋಲುಂಡಿದ್ದರು.

ಕೆಲವೆಡೆ ಇವಿಎಂ ದೋಷ

ಮೊದಲ ಹಂತದ ಮತದಾನದ ವೇಳೆ ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

Continue Reading

ಪ್ರಮುಖ ಸುದ್ದಿ

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

ರಾಜಸ್ಥಾನದ ಜೋಧ್‌ಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕರಣ್‌ ಸಿಂಗ್‌ ಉಚಿಯಾರ್ದ ಅವರು ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಹಾ ಮಾರುತ್ತಿದ್ದ ಮೋದಿ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ ಮಾತನಾಡಲು ಹೇಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಿದ್ದಾರೆ.

VISTARANEWS.COM


on

Narendra Modi
Koo

ಜೈಪುರ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಯಾಗುತ್ತಿದೆ. ರಾಜಕೀಯ ನಾಯಕರ ಹೇಳಿಕೆಗಳು ಕೂಡ ತೀವ್ರ ಮೊನಚಾಗುತ್ತಿವೆ. ಇನ್ನೂ ಕೆಲ ನಾಯಕರು ಪ್ರತಿಸ್ಪರ್ಧಿಗಳು, ಎದುರಾಳಿ ಪಕ್ಷದ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ, ಆರೋಪ, ಏಕವಚನ ಪ್ರಯೋಗ ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜೋಧ್‌ಪುರ ಕಾಂಗ್ರೆಸ್‌ ಅಭ್ಯರ್ಥಿ ಕರಣ್‌ ಸಿಂಗ್‌ ಉಚಿಯಾರ್ದ ಅವರು ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಚಹಾ ಮಾಡುತ್ತಿದ್ದ ಮೋದಿ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ ಮಾತನಾಡಲು ಹೇಗೆ ಸಾಧ್ಯ” ಎಂದಿದ್ದಾರೆ.

ಮಾಧ್ಯಮವೊಂದರ ಜತೆ ಮಾತನಾಡಿದ ಕರಣ್‌ ಸಿಂಗ್‌ ಉಚಿಯಾರ್ದ, “ನಮ್ಮ ದೇಶದಲ್ಲಿ ಐಐಟಿ, ಐಐಎಂ ಸಂಸ್ಥೆಗಳನ್ನು ಸ್ಥಾಪಿಸಿದ್ದು ಯಾರು? ನರೇಂದ್ರ ಮೋದಿ ಅವರು ಇವುಗಳನ್ನು ದೇಶದಲ್ಲಿ ಸ್ಥಾಪಿಸಿದ್ದಾ? ನೀವು ನಿಮ್ಮ ಮನೆಯಲ್ಲಿ ಚಹಾ ಮಾರುತ್ತಿದ್ದಿರಿ. ಅಷ್ಟಕ್ಕೂ, ಚಹಾ ಮಾರುವವನ ಮಗನೊಬ್ಬ ಐಐಟಿ, ಐಐಎಂ ಸಂಸ್ಥೆಗಳ ಬಗ್ಗೆ, ಅವುಗಳ ವಿಚಾರಗಳ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಹುರುಳಿಲ್ಲದೆ ಹೇಗೆ ಇವುಗಳ ಬಗ್ಗೆ ಮಾತನಾಡಲು ಸಾಧ್ಯವಾಗುತ್ತದೆ” ಎಂದು ಹೇಳಿರುವುದು ವಿವಾದಕ್ಕೆ ಗುರಿಯಾಗಿದೆ.

ಕರಣ್‌ ಸಿಂಗ್‌ ಉಚಿಯಾರ್ದ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. “ದೇಶದಲ್ಲಿ ಸಾಮಾನ್ಯ ಜನರು, ಅದರಲ್ಲೂ ಚಹಾ ಮಾರುವವರ ವಿರುದ್ಧ ಕಾಂಗ್ರೆಸ್‌ ದ್ವೇಷ ಕಾರುತ್ತಿದೆ. ಯಾರು ಬಾಯಿಯಲ್ಲಿ ಚಿನ್ನದ ಚಮಚವನ್ನು ಇಟ್ಟುಕೊಂಡು ಹುಟ್ಟಿರುತ್ತಾರೋ, ಕುಟುಂಬ ರಾಜಕಾರಣವನ್ನು ಮುಂದುವರಿಸುತ್ತಾರೋ, ಅವರ ಬೂಟು ನೆಕ್ಕವುದು ಮಾತ್ರ ಇವರಿಗೆ ಗೊತ್ತಿದೆ. ಇದಕ್ಕೆ ಕರಣ್‌ ಸಿಂಗ್‌ ಉಚಿಯಾರ್ದ ಅವರೇ ದೊಡ್ಡ ಉದಾಹರಣೆಯಾಗಿದ್ದಾರೆ” ಎಂದು ಕಾಂಗ್ರೆಸ್‌ ನಾಯಕಿ ಪ್ರೀತಿ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಣ್‌ ಸಿಂಗ್‌ ಉಚಿಯಾರ್ದ ಅವರು ಜೋಧ್‌ಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಎದುರಿಸುತ್ತಿದ್ದಾರೆ. ಇವರು ಸಚಿನ್‌ ಪೈಲಟ್‌ ಅವರ ಆಪ್ತರಾಗಿದ್ದಾರೆ. ಕಾಂಗ್ರೆಸ್‌ ನಾಯಕರು ಮೊದಲು ನರೇಂದ್ರ ಮೋದಿ ಅವರನ್ನು ಚಾಯ್‌ವಾಲಾ ಎಂಬುದಾಗಿ ಟೀಕಿಸಿದ್ದರು. ಇದನ್ನೇ ಮೋದಿ ಅವರು ಪ್ರಚಾರದ ಭಾಗವನ್ನಾಗಿಸಿಕೊಂಡರು. ನಾನು ಚಾಯ್‌ವಾಲಾ ಆಗಿದ್ದೆ, ಚಾಯ್‌ವಾಲಾನೊಬ್ಬ ಪ್ರಧಾನಿಯಾಗಿರುವುದು ಕಾಂಗ್ರೆಸ್‌ ನಾಯಕರಿಗೆ ಇಷ್ಟವಿಲ್ಲ ಎಂದು ಮೋದಿ ಟೀಕಿಸಿದ್ದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading

Lok Sabha Election 2024

Loka sabha election-2024: ಮೋದಿ ಗೆದ್ದಿದ್ದ ವಡೋದರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ!

Loka sabha election-2024: ಬಿಜೆಪಿಯ ಭದ್ರಕೋಟೆ, ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರವಾಗಿದ್ದ ಗುಜರಾತ್‌ನ ವಡೋದರಾ ಲೋಕಸಭಾ ಸ್ಥಾನಕ್ಕೆ ಬಿಜೆಪಿಯಿಂದ ಅತ್ಯಂತ ಕಿರಿಯ ಅಭ್ಯರ್ಥಿ ಹೇಮಂಗ್ ಜೋಶಿ ಅವರನ್ನು ಕಣಕ್ಕೆ ಇಳಿಸಿದ್ದು, ಇವರ ವಿರುದ್ಧ ಕಾಂಗ್ರೆಸ್‌ನ ಪದ್ರಾದ ಮಾಜಿ ಶಾಸಕ ಜಸ್ಪಾಲ್‌ಸಿನ್ಹ್ ಪಾಧಿಯಾರ್ ಸ್ಪರ್ಧಿಸಲಿದ್ದಾರೆ.

VISTARANEWS.COM


on

By

Loka sabha election-2024
Koo

ವಡೋದರಾ: ಪ್ರಧಾನಿ (PM) ನರೇಂದ್ರ ಮೋದಿ (narendra modi) ಅವರ ಕ್ಷೇತ್ರವಾಗಿದ್ದ ಗುಜರಾತ್‌ನ (gujarath) ವಡೋದರಾ (Vadodara) ಲೋಕಸಭಾ ಸ್ಥಾನಕ್ಕೆ (Loka sabha election-2024) ಬಿಜೆಪಿಯಿಂದ (bjp) ಅತ್ಯಂತ ಕಿರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಸಂಸದ ರಂಜನ್ ಭಟ್ ಅವರು ಅನಿರೀಕ್ಷಿತವಾಗಿ ಚುನಾವಣೆ ಕಣದಿಂದ ಹಿಂದೆ ಸರಿದಿರುವುದರಿಂದ ಅವರ ಸ್ಥಾನಕ್ಕೆ 33 ವರ್ಷದ ಹೇಮಂಗ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ. ಜೋಶಿ ಅವರ ವಿರುದ್ಧ ಕಾಂಗ್ರೆಸ್‌ನ ಪದ್ರಾದ ಮಾಜಿ ಶಾಸಕ ಜಸ್ಪಾಲ್‌ಸಿನ್ಹ್ ಪಾಧಿಯಾರ್ ಕಣಕ್ಕೆ ಇಳಿದಿದ್ದಾರೆ.

ವಡೋದರಾ ಕ್ಷೇತ್ರದಲ್ಲಿ ಸಂಸದ ರಂಜನ್ ಭಟ್ ಅವರು ಮರುನಾಮನಿರ್ದೇಶನಗೊಂಡಿದ್ದರೂ ಅನಿರೀಕ್ಷಿತವಾಗಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಆಗ ಲೋಕಸಭಾ ಅಭ್ಯರ್ಥಿಯಾಗಿ ತನ್ನ ಹೆಸರು ಸೂಚನೆಯಾಗಬಹುದು ಎನ್ನುವ ಕಲ್ಪನೆಯೂ ಹೇಮಂಗ್ ಜೋಶಿ ಅವರಿಗೆ ಇರಲಿಲ್ಲ.

ಜೋಶಿ ಮತ್ತು ಅವರ ಪತ್ನಿ ಹೋಳಿಯ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಅವರಿಗೆ ಅನೇಕ ಅಭಿನಂದನಾ ಕರೆಗಳು ಬಂದಿವೆ. ಆಗ ಜೋಶಿ ಅವರಿಗೆ ಬಿಜೆಪಿ ತನ್ನನ್ನು ವಡೋದರಾ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ತಿಳಿಯಿತು.

ಇದನ್ನೂ ಓದಿ: Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

ಕಿರಿಯ ಅಭ್ಯರ್ಥಿ ಜೋಶಿ

ಗುಜರಾತ್ ನಲ್ಲಿ ಒಟ್ಟು 26 ಲೋಕಸಭಾ ಕ್ಷೇತ್ರಗಳಿದ್ದು, ಈ 26 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಕಿರಿಯ ಅಭ್ಯರ್ಥಿ ಹೇಮಂಗ್ ಜೋಶಿ. ರಾಜ್ಯದ ಇತರ ಕ್ಷೇತ್ರಗಳಲ್ಲಿ ಗೆಲುವಿನ ಅಂತರದ ಗುರಿ 5 ಲಕ್ಷವಾಗಿದೆ. ಆದರೆ ವಡೋದರಾದಲ್ಲಿ ರಾಜ್ಯ ಮುಖ್ಯಸ್ಥ ಸಿ.ಆರ್. ಪಾಟೀಲ್ ಅದನ್ನು 10 ಲಕ್ಷಕ್ಕೆ ಏರಿಸಿದ್ದಾರೆ. 40 ವರ್ಷದೊಳಗಿನ ಭಾರತದ 40 ಯುವ ನಾಯಕರ ಪಟ್ಟಿಯಲ್ಲಿ ಜೋಶಿ ಅವರ ಹೆಸರೂ ಇದೆ.


ಪ್ರಧಾನಿ ಅವರ ಕ್ಷೇತ್ರ

ವಡೋದರಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕ್ಷೇತ್ರವಾಗಿತ್ತು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಗೆ ತೆರಳಿ ಕಣಕ್ಕೆ ಇಳಿದರು. ಅದಕ್ಕೂ ಮೊದಲು ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೆಸರುವಾಸಿಯಾಗಿದ್ದ ವಡೋದರಾದಲ್ಲಿ ಅವರು ಗೆದ್ದಿದ್ದರು.

ಯಾವಾಗ ಮತದಾನ?

ಬಿಜೆಪಿಯ ಯುವ ಅಭ್ಯರ್ಥಿಯಾಗಿರುವ ಜೋಶಿ ಅವರು ಇಲ್ಲಿ 10 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲು ಶ್ರಮಿಸುತ್ತಿದ್ದಾರೆ. ಇದು ಅವರ ರಾಜ್ಯ ಮುಖ್ಯಸ್ಥ ಸಿ.ಆರ್. ಪಾಟೀಲ್ ಅವರ ಗುರಿಯಾಗಿದೆ. ದೇಶದಾದ್ಯಂತ ನಡೆಯಲಿರುವ ಮೂರನೇ ಹಂತದ ಚುನಾವಣೆ ವೇಳೆ ಗುಜರಾತ್ ರಾಜ್ಯದ ಎಲ್ಲ ಸಂಸದ ಕ್ಷೇತ್ರಗಳಿಗೂ ಮೇ 7ರಂದು ಮತದಾನ ನಡೆಯಲಿದೆ.

ಟಿಕೆಟ್ ಸಿಕ್ಕಿದ್ದಕ್ಕೆ ಆಶ್ಚರ್ಯ

ವಡೋದರಾ ಕ್ಷೇತ್ರದಿಂದ ಟಿಕೆಟ್ ಪಡೆದಿರುವ ಜೋಶಿ ಅವರಿಗೆ ಇಲ್ಲಿ ತಮಗೆ ಟಿಕೆಟ್ ಸಿಗುತ್ತೆ ಎನ್ನುವುದನ್ನು ಅವರು ಕನಸಿನಲ್ಲಿಯೂ ಯೋಚಿಸಿರಲಿಲ್ಲ. ಟಿಕೆಟ್ ಸಿಕ್ಕಿರುವುದು ಅವರಿಗೆ ಆಶ್ಚರ್ಯ ತಂದಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿಕೊಂಡಿದ್ದಾರೆ.

ರಂಜನ್ ಭಟ್ ಕಣದಿಂದ ಹಿಂದೆ ಸರಿದದ್ದು ಯಾಕೆ?

2014ರಲ್ಲಿ ವಡೋದರಾ ಉಪಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಕ್ಷೇತ್ರವನ್ನು ಬಿಟ್ಟುಕೊಟ್ಟ ಬಳಿಕ ರಂಜನ್ ಭಟ್ ಅವರು ಇಲ್ಲಿ ಗೆದ್ದಿದ್ದರು. 2019ರಲ್ಲೂ ಅವರು ತಮ್ಮ ಸ್ಥಾನವನ್ನು ಉಳಿಸಿಕೊಂಡರು. ಮತ್ತೆ ಮೂರನೇ ಅವಧಿಗೆ ಅವರು ಕಣಕ್ಕೆ ಇಳಿಯಲು ಸಜ್ಜಾಗುತ್ತಿದ್ದಾಗ ಸ್ಥಳೀಯ ಬಿಜೆಪಿ ಘಟಕದಲ್ಲಿ ಆಂತರಿಕ ಬಂಡಾಯವೆದ್ದಿತ್ತು. ಇದು ಅವರ ವಿಶ್ವಾಸವನ್ನು ಹಾಳುಮಾಡಿತು. ಹೀಗಾಗಿ ಅವರು ಮಾರ್ಚ್ ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಘೋಷಿಸಿದರು. ಹೀಗಾಗಿ ಜೋಶಿ ಅವರನ್ನು ಮರುದಿನವೇ ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು.

ಫೋನ್ ಕರೆ ಕೂಡ ಬಂದಿಲ್ಲ!

ನನ್ನನ್ನು ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಿಸುವವರೆಗೂ ಪಕ್ಷದ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ ಎಂದು ಯಾರೂ ಕೂಡ ಫೋನ್ ಕರೆ ಮಾಡಿಲ್ಲ. ಹೆಸರು ಅಧಿಕೃತವಾದ ತಕ್ಷಣ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕರೆ ಮಾಡಿ ತಿಳಿಸಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ನನ್ನಂತಹ ವ್ಯಕ್ತಿಗೆ ಅಂತಹ ದೊಡ್ಡ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಮತ್ತು ಅದಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದು ನನಗೆ ಅಗಾಧವಾಗಿದೆ. ಕ್ಷೇತ್ರದ ಯುವ ಮತದಾರರಿಂದ ಹೆಚ್ಚಿನ ಬೆಂಬಲ ಸಿಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಶಿಕ್ಷಣ ರಾಜಧಾನಿ

ವಡೋದರಾ ಪ್ರದೇಶವು ಗುಜರಾತ್‌ನ ಶಿಕ್ಷಣ ರಾಜಧಾನಿಯಾಗಿದೆ. ಎಂಎಸ್ ವಿಶ್ವವಿದ್ಯಾಲಯ, ಕೇಂದ್ರೀಯ ವಿಶ್ವವಿದ್ಯಾಲಯ, ಕ್ರೀಡಾ ವಿಶ್ವವಿದ್ಯಾಲಯ, ಗತಿ ಶಕ್ತಿ ವಿಶ್ವವಿದ್ಯಾಲಯಗಳು ಇಲ್ಲಿದ್ದು ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಇಲ್ಲಿ ಶೇ. 30- 35 ರಷ್ಟು ಯುವ ಮತದಾರರಿದ್ದಾರೆ.

ಮತದಾರರಿಗೆ ಜೋಶಿ ಭರವಸೆ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ದೇಶದ ಯುವ ಜನತೆಯನ್ನು ಸಜ್ಜುಗೊಳಿಸುವ ಮೋದಿ ಸರ್ಕಾರದ ಪ್ರಯತ್ನಗಳನ್ನು ಜಾರಿಗೊಳಿಸಲು ಅವರ ಪ್ರತಿನಿಧಿಯಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ ಜೋಶಿ.

ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ‘ಸಂಕಲ್ಪ ಪತ್ರ’ ಪ್ರಣಾಳಿಕೆ ದೇಶದ ಯುವಕರ ಆಕಾಂಕ್ಷೆಗಳು ಮತ್ತು ನಿರೀಕ್ಷೆಗಳ ಪ್ರತಿಬಿಂಬವಾಗಿದೆ. ಇನ್ನೂ ಒಂದು ಶತಮಾನದ ಅನಂತರ ನಮ್ಮನ್ನು ಮುಟ್ಟುವ ಹಲವು ಅಂಶಗಳನ್ನು ಹೊಂದಿದೆ. ನಾಲ್ಕು ಪ್ರಮುಖ ಅಂಶಗಳಲ್ಲಿ ಗರೀಬ್, ಯುವ, ಅನ್ನದಾತ ಮತ್ತು ನಾರಿ (ಗ್ಯಾನ್) – ಯುವ ದೊಡ್ಡ ಪಾತ್ರವನ್ನು ವಹಿಸುತ್ತದೆ. ಪ್ರಧಾನಿ ಮೋದಿ ಅವರು ಬಹಳಷ್ಟು ಹೇಳುತ್ತಾರೆ ಅದನ್ನು ಸಾಧಿಸುವುದು ಯುವಕರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಜೋಶಿ ತಿಳಿಸಿದರು.

1998 ರಿಂದ ಬಿಜಿಪಿಯ ಭದ್ರಕೋಟೆ

ವಡೋದರಾದಲ್ಲಿ ಬಿಜೆಪಿ 1998 ರಿಂದ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಲೇ ಇದೆ. ಈ ಕ್ಷೇತ್ರದಲ್ಲಿ 1991 ರಿಂದ ಮೂರು ಮಹಿಳಾ ಸಂಸದರನ್ನು ಆಯ್ಕೆ ಮಾಡಿದೆ.

ವಡೋದರಾ ಸಾಂಪ್ರದಾಯಿಕವಾಗಿ ಬಿಜೆಪಿ ಭದ್ರಕೋಟೆಯಾಗಿದೆ. ವರ್ಗ ಮತ್ತು ಜಾತಿಯ ರೇಖೆಗಳನ್ನು ಮೀರಿ ಜನರು ಬಿಜೆಪಿಯನ್ನು ಇಷ್ಟಪಟ್ಟಿದ್ದಾರೆ. ವಡೋದರಾ ಪ್ರಧಾನಿ ಮೋದಿಯವರ ಕರ್ಮಭೂಮಿಯಾಗಿಯೂ ಕಾರ್ಯನಿರ್ವಹಿಸಿದೆ. ಆದ್ದರಿಂದ ಇಲ್ಲಿ ನಾವು ಪಕ್ಷಕ್ಕಾಗಿ ಪ್ರಚಾರ ಮಾಡುವ ಅಗತ್ಯವಿಲ್ಲ. ಆದರೆ ಪಕ್ಷದೊಂದಿಗಿನ ಜನರ ಅಸ್ತಿತ್ವದಲ್ಲಿರುವ ಸಂಪರ್ಕವನ್ನು ಪುನರುಜ್ಜೀವನಗೊಳಿಸಲು ಮತ್ತು ಪುನಶ್ಚೇತನಗೊಳಿಸಲು ಶ್ರಮಿಸಬೇಕಿದೆ ಎನ್ನುತ್ತಾರೆ ಜೋಶಿ.

ಅನುಭವ

ಜೋಶಿ ಅವರು ಮುನ್ಸಿಪಲ್ ಪ್ರಾಥಮಿಕ ಶಾಲಾ ಮಂಡಳಿಯ ಉಪಾಧ್ಯಕ್ಷರಾಗಿದ್ದು, ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರಾಗಿದ್ದರು.

ಐಐಎಂ ಅಹಮದಾಬಾದ್‌ನಿಂದ ಶಿಕ್ಷಣದಲ್ಲಿ ನಾಯಕತ್ವದ ಕುರಿತು ಕೋರ್ಸ್ ಮಾಡಿದ್ದು, ಪ್ರಸ್ತುತ ನಾಯಕತ್ವದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಇವರ ಪತ್ನಿ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ.

Continue Reading

ದೇಶ

Farmers Protest: ರೈತರ ಪ್ರತಿಭಟನೆ; ಅಂಬಾಲಾ-ಅಮೃತಸರ ಮಾರ್ಗದ 54 ರೈಲು ಸಂಚಾರ ರದ್ದು

Farmers Protest: ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ಹಳಿಗಳ ಮೇಲೆ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಂಬಾಲಾ-ಅಮೃತಸರ ಮಾರ್ಗದ ಒಟ್ಟು 54 ರೈಲು ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ. ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಈ ಹೋರಾಟ ಕೈಗೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿಈ ಹೋರಾಟ ನಡೆಯುತ್ತಿದೆ.

VISTARANEWS.COM


on

Farmers Protest
Koo

ಚಂಡಿಗಢ: ನಿರಂತರ 4 ದಿನಗಳಿಂದ ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣ (Shambhu railway station)ದಲ್ಲಿ ಹಳಿಗಳ ಮೇಲೆ ರೈತರು ಪ್ರತಿಭಟನೆ (Farmers Protest) ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಂಬಾಲಾ-ಅಮೃತಸರ (Ambala-Amritsar) ಮಾರ್ಗದ ಒಟ್ಟು 54 ರೈಲು ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ. ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಈ ಹೋರಾಟ ಕೈಗೊಂಡಿದ್ದಾರೆ. ನವದೆಹಲಿ-ಅಮೃತಸರ, ಹೃಷಿಕೇಶ- ಶ್ರೀ ಗಂಗಾನಗರ ಮತ್ತು ಲುಧಿಯಾನ-ಅಂಬಾಲಾ ಕಂಟೋನ್ಮೆಂಟ್ ರೈಲು ಸೇರಿದಂತೆ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟಿಯಾಲಾದ ಶಂಭುವಿನಲ್ಲಿ ರೈತರು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಬಗ್ಗೆ ಮಾತನಾಡಿದ ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್, ʼʼಮೂವರು ರೈತರನ್ನು ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆʼʼ ಎಂದು ಘೋಷಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಬಹಿರಂಗ ಬೆಂಬಲ ನೀಡಲು ನಿರಾಕರಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಮಾತನಾಡಿ, ʼʼಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾರಿಗೆ ಮತ ಚಲಾಯಿಸಬೇಕು ಎಂದು ಯಾರಿಗೂ ಹೇಳುವುದಿಲ್ಲ. ಈಗಾಗಲೇ ರೈತರು ಯಾವ ಪಕ್ಷ ಅಥವಾ ಅಭ್ಯರ್ಥಿ ಉತ್ತಮ ಎನ್ನುವುದನ್ನು ಕಂಡುಕೊಂಡಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಈ ಪ್ರತಿಭಟನೆ ಕಾರಣದಿಂದ ಮೂರು ದಿನಗಳಿಂದ ಸುಮಾರು 380 ರೈಲುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 13ರಂದು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖನೌರಿ ಗಡಿಗಳಲ್ಲಿ ಭದ್ರತಾ ಪಡೆಗಳು ರೈತರ ಮೆರವಣಿಗೆಯನ್ನು ನಿಲ್ಲಿಸಿದಾಗಿನಿಂದ ಅವರು ಅಲ್ಲಿಯೇ ಉಳಿದಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ನವದೀಪ್ ಜಲ್ಬೆರಾ, ಗುರ್ಕಿರತ್ ಶಹಪುರ್ ಮತ್ತು ಅನೀಶ್ ಖಟ್ಕರ್ ಎಂಬ ಮೂವರು ರೈತರನ್ನು ಭದ್ರತಾ ಪಡೆಗಳು ಬಂಧಿಸಿವೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಫೆಬ್ರವರಿ 13ರಂದು ದಾಖಲಾದ ಕೊಲೆ ಯತ್ನ ಪ್ರಕರಣದಲ್ಲಿ ನವದೀಪ್ ಮತ್ತು ಗುರ್ಕೀರತ್ ಅವರನ್ನು ಫೆಬ್ರವರಿ 28ರಂದು ಮೊಹಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಂಧಿಸಲಾಗಿದ್ದರೆ, ಅನೀಶ್ ಖಟ್ಕರ್ ಅವರನ್ನು ಮಾರ್ಚ್ 19ರಂದು ಹರಿಯಾಣ ಪೊಲೀಸರು ಬಂಧಿಸಿದ್ದರು. ಅನೀಶ್ ಖಟ್ಕರ್ ಬಂಧನವಾದಾಗಿನಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಮತ್ತು ಅವರ ಆರೋಗ್ಯವು ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Farmers protest: ಪ್ರತಿಭಟನಾನಿರತ ರೈತ ಶುಭ್ ಕರಣ್ ಸಿಂಗ್ ಮರಣೋತ್ತರ ಪರೀಕ್ಷಾ ವರದಿ ಬಹಿರಂಗ; ಸಾವಿಗೆ ಕಾರಣವಾಗಿದ್ದೇನು?

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಘಟನೆ ʼದೆಹಲಿ ಚಲೋ’ ಮೆರವಣಿಗೆಯನ್ನು ನಡೆಸುತ್ತಿದೆ. ಪಂಜಾಬ್- ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ವೇಳೆ ಈ ವರ್ಷದ ಫೆಬ್ರವರಿಯಲ್ಲಿ 22 ವರ್ಷದ ರೈತ ಶುಭಕರನ್ ಸಿಂಗ್ ಮೃತಪಟ್ಟಿದ್ದರು.

Continue Reading
Advertisement
Viral Video
ವೈರಲ್ ನ್ಯೂಸ್3 mins ago

Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

ಹರಿಹರಪುರ ಧರ್ಮಸಭೆ
ಚಿಕ್ಕಮಗಳೂರು4 mins ago

ಹರಿಹರಪುರ ಧರ್ಮಸಭೆ; ಸನಾತನ ಹಿಂದು ಸಮಾಜ ಕಟ್ಟುವುದು ನಮ್ಮೆಲ್ಲರ ಧ್ಯೇಯ ಎಂದ ತ್ರಯಾಚಾರ್ಯರು

Kunwar Sarvesh Singh
ದೇಶ17 mins ago

Kunwar Sarvesh: ಮತದಾನ ನಡೆದ ಮರುದಿನವೇ ಬಿಜೆಪಿ ಅಭ್ಯರ್ಥಿ ಹೃದಯಾಘಾತಕ್ಕೆ ಬಲಿ!

IPL 2024
ಕ್ರೀಡೆ30 mins ago

IPL 2024: ಟಿ20 ಕ್ರಿಕೆಟ್​ನಲ್ಲೇ ನೂತನ ದಾಖಲೆ ಬರೆದ ಸನ್​ರೈರ್ಸ್​ ಹೈದರಾಬಾದ್

Prajadhwani 2 Lok Sabha election campaign meeting at KR Nagar
ಮಂಡ್ಯ36 mins ago

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Uttara Kannada Lok Sabha Constituency BJP Candidate Vishweshwara Hegde Kageri latest Statement
ಉತ್ತರ ಕನ್ನಡ38 mins ago

Sirsi News: ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ: ಕಾಗೇರಿ ಖಂಡನೆ

Narendra Modi
ಪ್ರಮುಖ ಸುದ್ದಿ39 mins ago

ಚಾಯ್‌ವಾಲಾ ಮೋದಿ ಐಐಟಿ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದ ಕಾಂಗ್ರೆಸ್ ನಾಯಕ; ಭುಗಿಲೆದ್ದ ವಿವಾದ

House roof collapsed due to heavy rain at ripponpet
ಶಿವಮೊಗ್ಗ39 mins ago

Karnataka Weather: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಚಾವಣಿ; ಅಪಾರ ಹಾನಿ

Protest against Neha murder case in Yadgiri
ಯಾದಗಿರಿ41 mins ago

Yadgiri News: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ

Ballari Lok Sabha Congress candidate e Tukaram election campaign in Hagaribommanahalli
ರಾಜಕೀಯ41 mins ago

Lok Sabha Election 2024: ದೇಶದಲ್ಲಿ ಅಭಿವೃದ್ಧಿ ಕ್ರಾಂತಿ ಮಾಡಿದ್ದು ಕಾಂಗ್ರೆಸ್‌ ಪಕ್ಷ: ಈ. ತುಕಾರಾಂ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20247 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ9 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ9 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌