Ugadi 2024: ಜನವರಿ 1ರ ಗದ್ದಲ ಮರೆಯೋಣ, ಯುಗಾದಿಯನ್ನು ಹೊಸ ವರ್ಷವೆಂದು ಸಂಭ್ರಮಿಸೋಣ - Vistara News

ಧಾರ್ಮಿಕ

Ugadi 2024: ಜನವರಿ 1ರ ಗದ್ದಲ ಮರೆಯೋಣ, ಯುಗಾದಿಯನ್ನು ಹೊಸ ವರ್ಷವೆಂದು ಸಂಭ್ರಮಿಸೋಣ

ನಮ್ಮ ಭಾರತೀಯ ಜೋತಿಷ್ಯ ಶಾಸ್ತ್ರದ ಪರಂಪರೆಯಲ್ಲಿ ಭಾರತೀಯರು ಅನೇಕ ವಿಚಾರಗಳನ್ನು ಸಾಂಕೇತಿಕವಾಗಿ ಗ್ರಹಿಸುತ್ತಾರೆ. ಆಶ್ಚರ್ಯವಾದರೂ ಸತ್ಯ ಇದು ನಮ್ಮ ಭಾರತದ್ದೇ ಮೂಲ ಕಾಲಮಾನ ಎಂದು ಹೆಮ್ಮೆಯಿಂದ ಹೇಳಲು ಯಾರ ಮುಲಾಜೂ ಬೇಕಿಲ್ಲ. ಮಧ್ಯರಾತ್ರಿಯಲ್ಲಿ ಮಾರನೇ ದಿನದ ಕಲ್ಪನೆಯೇ ಅಪ್ರಸ್ತುತ. ಇದು ವಿದೇಶೀಯರ ಆಕ್ರಮಣದ ದುಷ್ಪರಿಣಾಮ ಕಾಲನ ಅವಗಣನೆ. ಹಾಗಾಗಿ ಯುಗಾದಿಯೇ (Ugadi 2024) ನಮಗೆ ಹೊಸ ವರ್ಷ.

VISTARANEWS.COM


on

Ugadi 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Naveenshastri-Puranik
ಪ್ರೊ. ವಿದ್ವಾನ್ ನವೀನಶಾಸ್ತ್ರಿ.ರಾ.ಪುರಾಣಿಕ
(ಲೇಖಕರು ಹಾಗೂ ಸಂಸ್ಕೃತ ಉಪನ್ಯಾಸಕರು, ಜ್ಯೋತಿಷಿಗಳು
)

ಯುಗಾದಿ (Ugadi 2024) ಅಥವಾ ಉಗಾದಿ, ಯುಗದ ಆದಿ, ಹಿಂದೂ ತಿಂಗಳ ಚೈತ್ರ ಮಾಸದ ಮೊದಲ ದಿನ ಕರೆಯಲ್ಪಡುವ ದಿನವೇ ಈ ಯುಗಾದಿ. ನಮ್ಮ ಭಾರತ ದೇಶದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದರ್ಥ.
ನಮ್ಮ ಭಾರತೀಯ ಜೋತಿಷ್ಯ ಶಾಸ್ತ್ರದ ಪರಂಪರೆಯಲ್ಲಿ ಭಾರತೀಯರು ಅನೇಕ ವಿಚಾರಗಳನ್ನು ಸಾಂಕೇತಿಕವಾಗಿ ಗ್ರಹಿಸುತ್ತಾರೆ. ಆಶ್ಚರ್ಯವಾದರೂ ಸತ್ಯ ಇದು ನಮ್ಮ ಭಾರತದ್ದೇ ಮೂಲ ಕಾಲಮಾನ ಎಂದು ಹೆಮ್ಮೆಯಿಂದ ಹೇಳಲು ಯಾರ ಮುಲಾಜೂ ಬೇಕಿಲ್ಲ. ವೇದ- ವೇದಾಂಗಗಳು ಸಂಸ್ಕೃತ ಭಾಷೆಯಲ್ಲಿ ಇದ್ದರೂ ಅವುಗಳನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ‌. ಈ ಕಾರಣಕ್ಕಾಗಿಯೇ ವೇದಾಂಗಗಳನ್ನು ಪುರಾಣಾದಿಗಳನ್ನು ನಾವು ಅವಲಂಬಿಸಬೇಕಾಗುತ್ತದೆ. ಅದರ ಸಂಶೋಧನಾತ್ಮಕ ಅರಿವು, ಮೂಲವನ್ನು ಹುಡುಕುತ್ತಾ ಹೋದಾಗ ಒಂದು ವಿದ್ಯೆ ಇನ್ನೊಂದು ವಿದ್ಯೆಗೆ ಪೂರಕವೇ ಹೊರತು ಬಾಧಕವಲ್ಲ. ಆದರೆ ಪಾಶ್ಚಿಮಾತ್ಯರ ಈ ಗಾಳಿ ಇತ್ತೀಚೆಗೆ ಬಹಳಷ್ಟು ಬೀಸಲು ಪ್ರಾರಂಭವಾಗಿದೆ ಎಂದರೆ ತಪ್ಪಾಗಲಾರದು. ಅದು ಎಷ್ಟರಮಟ್ಟಿಗೆ ಎಂದು ನೀವೇ ಯೋಚಿಸಿ.

Ugadi

ಆಧುನಿಕತೆ ಹುಡುಕುವ ಪರಿಪಾಠ!

ನಮ್ಮಲ್ಲಿ ಇತ್ತೀಚೆಗೆ ಎಲ್ಲವಕ್ಕೂ ತಪ್ಪು ಹುಡುಕುವ ಅಥವಾ ಎಲ್ಲದರಲ್ಲಿಯೂ ಆಧುನಿಕತೆಯನ್ನು ಹುಡುಕುವ ಪರಿಪಾಠವಿದೆ. ಅದು ಇತ್ತಿಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಬಹು ಮುಖ್ಯವಾಗಿ ಪ್ರಾಚೀನತೆ, ನಮಗದು ಅಸಹ್ಯ. ನಾವು ಅಡ್ವಾನ್ಸ್‌ಡ್ ಆಗಬೇಕು ಎಂದು.
ಮಧ್ಯರಾತ್ರಿಯಲ್ಲಿ ಮಾರನೇ ದಿನದ ಕಲ್ಪನೆ. ಅಲ್ಲ ಈ ಮಧ್ಯರಾತ್ರಿಯಲ್ಲಿ ಮಾರನೇ ದಿನದ ಕಲ್ಪನೆಯಾದರು ಹೇಗೆ? ಸ್ವಲ್ಪ ಪರಿಜ್ಞಾನವಾದರೂ ಬೇಕಿನಿಸುತ್ತದೆ. ನಮ್ಮ ಜ್ಯೋತಿಷ್ಯಶಾಸ್ತ್ರದಂತೆ ಅದು ಸೂರ್ಯ ಸಿದ್ಧಾಂತವಿರಲಿ ದೃಕ್ ಸಿದ್ಧಾಂತವಿರಲಿ ದಿನದ ಆರಂಭವನ್ನು ಸೂರ್ಯೋದಯದಿಂದಲೇ ಆರಂಭಿಸುವುದು. ವಿದೇಶೀಯ ಆಕ್ರಮಣದ ದುಷ್ಪರಿಣಾಮ ಕಾಲನ ಅವಗಣನೆ. ಅಲ್ಲಿ ಮಧ್ಯರಾತ್ರಿಯಿಂದ ಕಾಲ ಗಣನೆಯಾದರು ಹೇಗೆ? ಇದನ್ನೇ ಸ್ವಲ್ಪ ಗಮನಿಸೋಣ.

ಸಮಾನೋ ಅಧ್ವಾ ಸ್ವಸ್ರೋರನಂತಸ್ತಮನ್ಯಾನ್ಯಾ ಚರತೋ ದೇವಶಿಷ್ಟೇ ।
ನ ಮೇಥೇತೇ ನ ತಸ್ಥತುಃ ಸುಮೇಕೇ ನಕ್ತೋಷಾಸಾ ಸಮನಸಾ ವಿರೂಪೇ ॥

ರಾತ್ರಿ ಮತ್ತು ಬೆಳಗ್ಗೆಗಳೆರಡಕ್ಕೂ ಸಂಚಾರ ಮಾರ್ಗ ಇರುವುದು ಒಂದೇ, ಅದಕ್ಕೆ ಅಂತ್ಯ ಎನ್ನುವುದೇ ಇಲ್ಲ. ಹಗಲು ಮತ್ತು ರಾತ್ರಿ ಇಬ್ಬರೂ ಸೂರ್ಯನ ನಿರ್ದೇಶನದಂತೆ ಸಂಚರಿಸುತ್ತಾರೆ. ರೂಪ ಮತ್ತು ಅವಸ್ಥೆಗಳು ಬೇರೆ ಬೇರೆಯಾದರೂ ಉದ್ದೇಶ ಮಾತ್ರ ಒಂದೇ, ಇಡೀ ಜಗತ್ತಿನ ನಿರ್ಮಾತೃರಾಗಿ ಜಗದ ಸೃಷ್ಟಿಯನ್ನು ನಿಯಂತ್ರಿಸುತ್ತಾ ನಿಲ್ಲದೇ ಸಂಚರಿಸುತ್ತೀರಿ ಎನ್ನುವುದಾಗಿ ಋಗ್ವೇದದ ಒಂದನೇ ಮಂಡಲದ ನೂರ ಹದಿಮೂರನೇ ಸೂಕ್ತದಲ್ಲಿ ಹೇಳಲಾಗಿದೆ.

“ನ ಮೇಥೇತೇ ನ ತಸ್ಥತುಃ ಸುಮೇಕೇ ನಕ್ತೋಷಾಸಾ ಸಮನಸಾ ವಿರೂಪೇ”

ರಾತ್ರಿಯು ಅಂಧಕಾರದಲ್ಲಿರುವುದು ಆಗ ಇಡೀ ಜಗತ್ತು ಚೇತನಾ ರಹಿತವಾಗಿರುತ್ತದೆ ಅಂಥಹ ವಿರೂಪ, ಅಂದರೆ ತಮಸ್ಸಿನಕಾಲವೂ ಸಹ ಚೇತನಾ ಸಹಿತವಾದ ಹಗಲನ್ನು ಅನುಸರಿಸಿಕೊಂಡು ಹೋಗುತ್ತದೆ ಎನ್ನುವುದು ಇಲ್ಲಿನ ಮುಖ್ಯತಾತ್ಪರ್ಯ. ಹಾಗಾದರೆ ಈ ಹನ್ನೆರಡು ಗಂಟೆ ಮಧ್ಯರಾತ್ರಿಯನ್ನು ಮಾರನೇ ದಿನದ ಲೆಕ್ಕಕ್ಕೆ ಸೇರಿಸುವುದು ಸರಿಯೇ ಎಂದರೆ ಇದು ಅಶುದ್ಧ. ಜಡವಾದ ಸಮಯದಲ್ಲಿ ಅಥವಾ ತಮೋ ಗುಣವುಳ್ಳ ಸಮಯ ಮುಗಿಯುವುದೇ ಸೂರ್ಯೋದಯವಾದ ಮೇಲೆ ಹಾಗಿರುವಾಗ ಈ ರೀತಿ ಮಧ್ಯರಾತ್ರಿಯನ್ನು ಲೆಕ್ಕಿಸುವುದು ಪ್ರಾಯಶಃ ಪಾಶ್ಚಾತ್ಯ ಅಂಧಾನುಕರಣೆ ಅವರು ನಮಗೆ ಕೊಟ್ಟ ಬಳುವಳಿ.

Varuna god

ರಾತ್ರಿಯ ಅಧಿದೇವತೆ ವರುಣ

ಋಗ್ವೇದದ ಹೆಚ್ಚಿನ ಕಡೆ ರಾತ್ರಿಯ ಅಧಿದೇವತೆ ವರುಣ ಅನ್ನಲಾಗಿದ್ದರೆ; ಸೂರ್ಯನೇ ಹಗಲಿಗೆ ಅಧಿಪತಿ ಎನ್ನುವುದು ಕಂಡುಬರುತ್ತದೆ.
“ಮೈತ್ರಂ ವಾ ಅಹಃ | ವಾರುಣೀ ರಾತ್ರಿಃ” ಎನ್ನಲಾಗಿದ್ದು ಸಾಕ್ಷಿ ನಿಮಗೆ ಸಿಗುತ್ತದೆ. ಸೂರ್ಯನು ದೇವಲೋಕದ ಮಗ ಎನ್ನುವುದು ಋಗ್ವೇದದ ಹತ್ತನೇ ಮಂಡಲದಲ್ಲಿ ಕಾಣ ಸಿಗುತ್ತದೆ. ದಿವಸ್ಪುತ್ರಾಯ ಸೂರ್ಯಾಯ ಎಂದು ಅಲ್ಲಿ ಹೇಳಿದ್ದರೆ, ಅಲ್ಲಿಯೇ ಇನ್ನೊಂದು ಕಡೆ ’ಸೂರ್ಯಮಾದಿತೇಯಂ’ ಎನ್ನುವುದು ಅದಿತಿಯ ಮಗ ಎಂದು ಕರೆಯಲಾಗಿದೆ. ಸೂರ್ಯನಲ್ಲಿ ಒಂದು ಕಾಂತೀಯ ಗುಣವಿದೆ. ಆತ ಜಗತ್ತಿನ ಎಲ್ಲಾ ವಸ್ತುಗಳಿಗೂ ಆತ್ಮ, ಆತನೇ ನಿಯಂತ್ರಕ ಆತನು ಜಡವನ್ನೂ ಚೇತನಾಯುಕ್ತವನ್ನಾಗಿ ಮಾಡಬಲ್ಲ ಎನ್ನುವುದು ಇದೇ ವೇದಗಳು. ಈ ಸೂರ್ಯ ಎನ್ನುವ ಶಬ್ದದ ಹುಟ್ಟೇ ಹಾಗಿದೆ, ಸೃ ಎನ್ನುವ ಧಾತುವಿನಿಂದ ಸೂರ್ಯ ಶಬ್ದದ ನಿಷ್ಪತ್ತಿಯಾಗಿದ್ದು ಸೃ ಎನ್ನುವುದು ಸಂಚಾರವನ್ನು ಸೂಚಿಸುತ್ತದೆ. ಸದಾ ಸಂಚಾರವನ್ನು ಮಾಡುವ ಗುಣವುಳ್ಳವನು ಎಂದು ಅನೇಕ ಕಡೆ ಕಂಡುಬರುತ್ತದೆ.

ಇನ್ನು ತೈತ್ತಿರೀಯ ಆರಣ್ಯಕದಲ್ಲಿ ’ಯೋ ಸೌ ತಪನ್ನುದೇತಿ | ಸ ಸರ್ವೇಷಾಂ ಭೂತಾನಾಂ ಪ್ರಾಣಾನಾದಾಯೋದೇತಿ’ ಎನ್ನಲಾಗಿದೆ. ಇದು ಎಂತಹ ಮಾತು ರೀ ಮಧ್ಯ ರಾತ್ರಿಯಲ್ಲಿ ಮಾರನೇ ದಿನವನ್ನು ಆಚರಿಸಿಕೊಳ್ಳೋ ಮೂರ್ಖರಿಗೆ ಇದು ಛಾಟೀ ಏಟು ಹೊಡೆದಂತೆ ಇದೆ. ಸೂರ್ಯನು ಅಸ್ತಂಗತನಾಗುತ್ತಲೇ ಇಡೀ ಜಗತ್ತಿನ ವ್ಯವಹಾರಗಳು ನಿಧಾನವಾಗುತ್ತಾ ಚೈತನ್ಯದ ಶಕ್ತಿಗಳನ್ನು ಕಳೆದುಕೊಳ್ಳುತ್ತವಂತೆ. ನಮ್ಮಲ್ಲಿರುವ ಜ್ಞಾನಯುಕ್ತವಾದ ಕ್ರಿಯೆಯನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಾನಂತೆ. ಅದಕ್ಕೇ ರಾತ್ರಿಯಾದೊಡನೆ ಮಂಪರು ಆವರಿಸುವುದು, ನಿದ್ದೆ ಬರುವುದು, ಅದೇ ಸೂರ್ಯ ಉದಯದ ಸಮಯದಲ್ಲಿ ಪುನಃ ಮರು ಸ್ಥಾಪಿಸುತ್ತಾನಂತೆ ಅದಕ್ಕೆ ಬೆಳಗಿನ ಸಮಯ ಆಹ್ಲಾದವಾಗಿರುತ್ತದೆ ಎಂದು ಈ ತೈತ್ತಿರೀಯ ಆರಣ್ಯಕ ಹೇಳುತ್ತದೆ. ಇದನ್ನೇ ಇಂದಿನ ವಿಜ್ಞಾನವೂ ಹೌದು ಎಂದಿದೆ ಸೂರ್ಯನಿಂದಲೇ ಇಡೀ ಜಗತ್ತು ನಿಯಂತ್ರಣವಾಗುತ್ತಿದೆ ಎಂದು. ಅದನ್ನೇ ಇನ್ನೊಂದು ರೂಪದಲ್ಲಿ ಶಕ್ತಿ (ಎನರ್ಜೀ) ಎಂದು ಕರೆಯಲಾಗಿದೆ. ಅಥರ್ವವೇದದಲ್ಲಿ ನಮ್ಮ ಕಣ್ಣುಗಳಿಗೆ ಒಡೆಯ ಸೂರ್ಯನೇ ಎಂದು ಹೇಳಿದೆ. ಇದು ಎಷ್ಟು ಸತ್ಯ!!, ಸೂರ್ಯನ ಸಂಚಾರದ ಮಾರ್ಗವನ್ನು ಸರಿಪಡಿಸಿ ಕೊಡುವವನು ವರುಣ ಆದುದರಿಂದ ಸೂರ್ಯನ ಜೊತೆ ವರುಣನನ್ನೂ ಗುರುತಿಸಿ ಮಿತ್ರಾವರುಣ ಎನ್ನಲಾಗುತ್ತದೆ.

’ಸಂವತ್ಸರಃ ಕಾಲಾತ್ಮಾ ಸರ್ವಸ್ಯ ಜನಿಮತಃ …….. ತಜ್ಜ್ಯೋತಿಷಾಂ ಜ್ಯೋತಿಃ ||
ಎನ್ನುವ ಶ್ಲೋಕದಲ್ಲಿ ಶಂಕರಾಚಾರ್ಯರು ವಿವರಿಸಿದ್ದಾರೆ. ಈ ಮೂಲ ತತ್ವದ ಆಧಾರದ ಮೇಲೆ ಸಂವತ್ಸರವೇ ಮೊದಲಾದವುಗಳು ಪುನಃ ಪುನಃ ಬರುತ್ತಿರುತ್ತವೆ. ಇದೇ ಸೂರ್ಯನ ಮತ್ತು ಕಾಲದ ಜೊತೆಗೆ ಜಗತ್ತು ನಡೆಯುತ್ತಿದೆ. ಇದೇ ಕಾಲವು ವಿಶ್ವದ ವ್ಯವಹಾರಕ್ಕೆ ಮೂಲ ಎಂದು ಬೃಹದಾರಣ್ಯಕ ಉಪನಿಷತ್ತಿಗೆ ಹೇಳುತ್ತಾರೆ.

’ಏತಸ್ಯ ವಾ ಅಕ್ಷರಸ್ಯ ಪ್ರಶಾಸನೇ’ ಎನ್ನುವಲ್ಲಿ ಸೂರ್ಯ ಮತ್ತು ಚಂದ್ರ ಅವರವರ ನಿಯಮಿತವಾದ ಸ್ಥಾನದಲ್ಲಿ ಇದ್ದಾರೆ. ದೇವ ಲೋಕ ಮತ್ತು ಈ ಭೂಮಿ ಎರಡೂ ತಮ್ಮ ಮೇರೆಯನ್ನು ಮೀರುವುದಿಲ್ಲ, ನಿಮಿಷಗಳು, ಮುಹೂರ್ತಗಳು, ಅಹೋರಾತ್ರಗಳು, ಅರ್ಧಮಾಸ ಮತ್ತು ಮಾಸ, ಋತು, ಸಂವತ್ಸರಗಳು ತಮ್ಮ ಪರಿಮಿತಿಯಲ್ಲಿಯೇ ದೃಶ್ಯ ಮತ್ತು ಅದೃಶ್ಯ ಎರಡೂ ಆಗುತ್ತವೆ. ನದಿಗಳೂ ಸಹ ಹಾಗೇ. ಇವೆಲ್ಲವೂ ಅಕ್ಷರಕ್ಕೆ ಅಧೀನವಾಗಿಯೇ ಇವೆ ಎನ್ನುವುದು ಬೃಹದಾರಣ್ಯಕದ ಮಾತು. ಇನ್ನು ಜಾಸ್ತಿ ಹೇಳಿದರೆ ಅದು ಜ್ಯೋತಿಷ್ಯ ಶಾಸ್ತ್ರಕ್ಕೆ ಹೋಗುತ್ತದೆ. ಇಲ್ಲಿಗೆ ಪ್ರಸ್ತುತವಾದದ್ದನ್ನು ಹೇಳುವೆ.

ಷಡ್ಭಾರಾಂ ಅಚರನ್ಬಿಭರ್ತ್ಯೃತಂ ವರ್ಷಿಷ್ಠಮುಪ ಗಾವ ಆಗುಃ |

ತಿಸ್ರೋ ಮಹಿರುಪರಾಸ್ತ ಸ್ಥುರತ್ಯಾ ಗುಹಾ ದ್ವೇ ನಿಹಿತೇ ದರ್ಶ್ಯೇಕಾ || ಇದು ಋಗ್ವೇದದ 3 ಮಂಡಲದ 56ನೇ ಸೂಕ್ತದ 2ನೇ ಋಕ್ಕು.

ಸಂವತ್ಸರಗಳು ಆರು ಋತುಗಳನ್ನು ಹೊಂದಿವೆ. ಸೂರ್ಯ ಸತ್ಯದ ಪ್ರತೀಕನಾಗಿದ್ದಾನೆ. ಶ್ರೇಷ್ಠನಾದ ಆತನಲ್ಲಿ ರಶ್ಮಿಗಳು ಸೇರಿಕೊಳ್ಳುತ್ತವೆ. ಇವುಗಳ ಆಧಾರದಲ್ಲಿಯೇ ಮೂರು ಲೋಕಗಳು ನಿಂತಿವೆ. ಮತ್ತು ಒಂದರ ಮೇಲೊಂದರಂತೆ ಇವೆ. ಆದರೆ ಭೂಮಿಯಿಂದ ಮಿಕ್ಕುಳಿದ ಲೋಕಗಳು ಕಾಣಿಸಿಕೊಳ್ಳುವುದಿಲ್ಲ. ಎಂತಹ ಋಕ್ಕು!! ಈ ಕಿರಣಗಳಿಗೂ ಸಂವತ್ಸರ ಮತ್ತು ಋತುಗಳಿಗೂ ಇರುವ ಸಂಬಂಧವನ್ನು ಸ್ಪಷ್ಟಗೊಳಿಸುತ್ತದೆ. ಸೂರ್ಯ ಈ ಕಾಲದ ಅಧಿಪತಿ ಎನ್ನುವುದು ಮೇಲ್ನೋಟಕ್ಕೆ ಕಂಡರೆ ಆರು ಋತುಗಳಲ್ಲಿಯೂ ಸೂರ್ಯನ ಕಿರಣಗಳಲ್ಲಿನ ವ್ಯತ್ಯಾಸವನ್ನು ತಿಳಿಸಿಕೊಡುತ್ತದೆ. ಇಂತಹ ಕಿರಣಗಳಿಂದಲೇ ಪ್ರಕೃತಿಯಲ್ಲಿನ ಬದಲಾವಣೆಗಳು ಆಗುತ್ತಿರುತ್ತವೆ. ಇನ್ನೂ ಬರೆಯಬಹುದು. ಆದರೆ ಇಷ್ಟೇ ಸಾಕು ನಮ್ಮ ಮೂರ್ಖತನವನ್ನು ಬಿಡಲು. ಯಾರೋ ಯಾವುದೋ ದೇಶದಲ್ಲಿ. ಅಥವಾ ಸಂಸ್ಕಾರವರಿಯದ ಯಾವುದೋ ಕಡೆ ಸೂರ್ಯನ ಕಿರಣಗಳು ಕಡಿಮೆಯಾಗಿ ಸೂರ್ಯಾಸ್ತದ ಸಮಯದ ನಂತರ ಜ್ಞಾನಗಳು ಕಳೆಗುಂದಿ ಹುಮ್ಮಸ್ಸಿಲ್ಲದ ಕಾಲದಲ್ಲಿ ಏನೇನೋ ತಿಂದು ಕುಡಿಯಬಾರದ್ದು ಕುಡಿದು ಅಂತಹ ಮತ್ತು ತಲೆಗೇರಿ ತಾವೀಗ ಉತ್ಸಾಹ ಭರಿತರು ಎಂದು ಅಪರಾತ್ರಿಯಲ್ಲಿ ಮಾರನೇ ದಿನ ಆಚರಿಸುವ ಕಾಲಕ್ಕೂ ಶುದ್ಧ ಶಾಸ್ತ್ರೀಯವಾದ ಸೂರ್ಯೋದಯದ ಕಾಲಕ್ಕೂ ಇರುವ ವ್ಯತ್ಯಾಸವನ್ನು ನಾನು ಹೇಳುವುದಕ್ಕಿಂತ ನಾವು ಆಲೋಚಿಸಬೇಕು. ಮಧ್ಯರಾತ್ರಿಯ ಹಸ್ತಾಂತರದಂತಹ ಕ್ರಿಯೆ ನಡೆಯುವುದು ಸುರರಲ್ಲಿಲ್ಲ ಅದು ಅಸುರರಲ್ಲಿ ಮಾತ್ರ. ಸೂರ್ಯೋದಯದ ನವೋಲ್ಲಾಸದಲ್ಲಿ ಕೆಲಸ ಆರಂಭಿಸಿದರೆ ಅದರ ಆನಂದ ನಾವೇ ಅನುಭವಿಸಬಹುದು. ಯಾವುದಕ್ಕೂ ಯೋಚಿಸೋಣವೇ ? ಯಾಕೆಂದರೆ ನಮ್ಮ ದೇಶದ ಋಷಿ ಪರಂಪರೆ ಇರಬಹುದು,ಸನಾತನ ಪರಂಪರೆ ಅಥವಾ ರಾಜಪರಂಪರೆ ಇರಬಹುದು ಮಧ್ಯರಾತ್ರಿಯಲ್ಲಿ ಯಾವ ವ್ಯವಹಾರವನ್ನೂ ಮಾಡಿದಂತಿಲ್ಲ. ಪ್ರಚಂಡ ಶಾಸನ ಬರೆಸಿದ ಯಾವ ರಾಜರೂ ನಮ್ಮ ಪರಂಪರೆಯನ್ನೋ ಅಥವಾ ಸಂಸ್ಕಾರವನ್ನೋ ಹಾಳು ಮಾಡಿಲ್ಲ. ಇದು ಬಂದದ್ದು ಇತ್ತೀಚೆಗೆ.

ಸಾಂಪ್ರದಾಯಿಕ ಆಚರಣೆ ಮತ್ತು ಮಹತ್ವ

ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಮುಖ್ಯವಾಗಿ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಪಂಚಾಂಗ ಶ್ರವಣ, ಗುಡಿ ಪೂಜೆ ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು – ಬೆಲ್ಲದ” ಸೇವನೆ.
ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ. ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪದ್ಧತಿಗಳು, ಹಿಂದೂ ಧರ್ಮದ ವೇದಾಂಗದ ಒಂದು ಅಂಗವಾದ ಜೋತಿಷ್ಯ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಬಹುಮುಖ್ಯವಾಗಿ ಚಾಂದ್ರಮಾನ ಪದ್ಧತಿ ಮೊದಲಿನಿಂದ ಆಚರಿಸಿಕೊಂಡು ಬಂದಿರುವ ಪದ್ಧತಿ ರೂಢಿಯಲ್ಲಿದೆ.

ಭೂಮಿಯಿಂದ ನೋಡಿದಾಗ, ಸೂರ್ಯ ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗದ ಭಾಗ ಜ್ಯೋತಿಷದ ಪ್ರಕಾರ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ- 13:20 ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಹೊಸಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
ರವಿಚಂದ್ರರ ಗತಿಯನ್ನವಲಂಬಿಸಿ, 11ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರವಾದ ಜ್ಞಾನ ಇಲ್ಲಿ ವ್ಯಕ್ತವಾಗುತ್ತದೆ.

ugadi-may-the-path-lead-to-new-hopeful-days

ಹಬ್ಬದ ಆಚರಣೆಯ ವಿಧಾನ

ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ,ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುತ್ತಾರೆ. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡವಾ ಪಾಡ್ಯ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಆ ಕೋಲಿಗೆ ಸುಣ್ಣ, ಕೆಂಪುಮಣ್ಣು ಹಚ್ಚಿ ತಳಿರು ತೋರಣಗಳಿಂದ ಸಿಂಗರಿಸಿ, ಹೂವಿನ ಹಾರವನ್ನು ಏರಿಸಿ ಅದರ ತುದಿಯ ಮೇಲೆ ಒಂದು ಕಂಚಿನ, ಅಥವಾ ತಾಮ್ರದ ಒಂದು ಗಿಂಡಿ (ಕಳಶ)ವನ್ನು ‘ಗುಡಿ’ ಎಂದು ತಲಬಾಗಿಲ ಒಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತವಾಗಿದೆ.

ಯುಗಾದಿಯ ದಿನದಂದು ಅಭ್ಯಂಜನ ಸ್ನಾನ:
ವತ್ಸರಾದೌ ವಸಂತಾದೌ ಬಲಿರಾಜ್ಯೇ ತಥೈವ ಚ ।
ತೈಲಾಭ್ಯಂಗಮಕುರ್ವಾಣೋ ನರಕಂ ಪ್ರತಿಪದ್ಯತೇ।।
ಹೊಸ ವರ್ಷದ ಮೊದಲ ದಿನ (ಚೈತ್ರ ಶುಕ್ಲ ಪ್ರತಿಪದ ಯುಗಾದಿ ದಿನ)
ಫಾಲ್ಗುಣ ಕೃಷ್ಣ ಪ್ರತಿಪದ(ಹೋಳಿ ಹುಣ್ಣಿಮೆ ಮಾರನೆಯ ದಿನ) ಕಾರ್ತಿಕ ಶುಕ್ಲ ಪ್ರತಿಪದ (ದೀಪಾವಳಿ ಪಾಡ್ಯ) ಈ ಮೂರು ದಿವಸಗಳಲ್ಲಿ ನರಕವಾಸ ತಪ್ಪಿಸಲು ತೈಲಾಭ್ಯಂಗ (ಎಣ್ಣೆ ಹಚ್ಚಿಕೊಂಡು) ಸ್ನಾನ ಮಾಡಬೇಕು.
ಬೇವಿನ ಎಲೆಗಳನ್ನು ನೀರಿಗೆ ಹಾಕಿ ಸ್ನಾನ ಮಾಡುವುದು,ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಹಚ್ಚಿ ಸ್ನಾನ ಮಾಡುವುದು) ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

ಮನೆಯ ಮುಂದಿನ ಅಂಗಳದಲ್ಲಿ ಬಣ್ಣ ಬಣ್ಣದ ರಂಗೋಲಿಯನ್ನು ಹಾಕಿ ಅಂಗಳವನ್ನು ಸಿಂಗರಿಸುವ ಮೂಲಕ ಹಬ್ಬದ ಸಂಭ್ರಮ ಹೆಚ್ಚಿಸುತ್ತಾರೆ. ಬೇವು ಮತ್ತು ಬೆಲ್ಲದ ಹಿಂದೆ ಅಡಗಿದೆ ವೈಜ್ಞಾನಿಕ ಹಿನ್ನಲೆ. ಬೇವಿನ ಹೂಗಳನ್ನು ಬೆಲ್ಲದೊಂದಿಗೆ ಬೆರಸಿ ತಿನ್ನುವುದು. ಅಂದರೆ ಬೇಸಿಗೆ ಬಿಸಿಲಿನ ತಾಪದಿಂದ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಾಗಿ ಚರ್ಮಕ್ಕೆ ಸಂಬಂಧಿಸಿದ ಅನೇಕ ಖಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಇಂತಹ ಚರ್ಮಕ್ಕೆ ಸಂಬಂಧಿಸಿದ ಅನೇಕ ಖಾಯಿಲೆಗಳಿಗೆ ಈ ಬೇವಿನ ಎಲೆ,ಹೂ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಬಹಳ ಮಹತ್ವ ಪಡಿದಿದೆ,ಬೆಲ್ಲವು ನಮ್ಮ ದೇಹದಲ್ಲಿ ನೀರಿನ ಅಂಶವನ್ನು ಸಮತೋಲನಗೊಳಿಸಿ ಉತ್ಸಾಹವನ್ನು ತುಂಬುತ್ತದೆ. ಅಲ್ಲದೆ ಬಳಲಿದ ದೇಹಕ್ಕೆ ಆರಾಮವೆನಿಸುತ್ತದೆ.ಇಂದಿಗೂ ಅನೇಕ ಕಡೆಗಳಲ್ಲಿ ಮಧ್ಯಾಹ್ನ ಅತಿಥಿಗಳನ್ನು ಉಪಚರಿಸಲು ಈ ಪದ್ಧತಿ ಇನ್ನೂ ರೂಡಿಯಲ್ಲಿದೆ.

ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ

ಉಪ್ಪು , ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಅಥವಾ ಪಾನಕ ಕೋಸಂಬರಿಯನ್ನು ನೈವಿಧ್ಯಮಾಡಿ ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಅಲಂಕಾರ ಮಾಡಿ ಇಷ್ಟದ ದೇವರ ದರ್ಶನ ಮಾಡಿ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ.
ಪಂಚಾಂಗ ಪುಜೆಯನ್ನು ಮಾಡಿದ ನಂತರ ಪಂಚಾಂಗ ಶ್ರವಣ ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.

ಪಂಚಾಂಗ ಶ್ರವಣ ಹಾಗೂ ರಾಶಿ ಫಲ

ಪಂಚಾಂಗ ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು,ರಾಶಿಗಳ ಆಯ-ವ್ಯಯ ಒಟ್ಟಾರೆಯಾಗಿ ಜನಜೀವನದ ಸ್ಥಿತಿಯನ್ನು ತಿಳಿಯಲು ವರ್ಷ ಭವಿಷ್ಯ ಕೇಳುವ ಪದ್ಧತಿ ಇದೆ. ಅಂದು ಮನೆ ಮಂದಿ (ನವ ವಸ್ತ್ರ ಧಾರಣೆ) ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಖಣಿ ಇಡುವುದು

ಕರಾವಳಿಯ ಸೌರಮಾನ ಯುಗಾದಿಯ ವಿಶೇಷತೆ ಖಣಿ ಇಡುವುದು. ಬಾಳೆ ಎಲೆ, ತಟ್ಟೆಯಲಿ ಅಕ್ಕಿ ಹಾಕಿ ಅದರ ಮೇಲೆ ತೆಂಗಿನಕಾಯಿ, ಸೌತೇಕಾಯಿ, ರವಿಕೆ ಕಣ, ಹೊಸ ಬಟ್ಟೆ, ಚಿನ್ನ, ಬತ್ತದ ತೆನೆ, ಹಣ್ಣು, ಇಷ್ಟದ ದೇವರ ಪ್ರತಿಮೆ ಅದರ ಮುಂದೆ ಒಂದು ಕನ್ನಡಿ ಆ ಕನ್ನಡಿಯಲಿ ದೇವರ ಪ್ರತಿಮೆ ಹಾಗೂ ತಟ್ಟೆಯಲಿ ಇಟ್ಟಂತಹ ವಸ್ತುಗಳನ್ನು ಕಾಣುವ ಹಾಗೆ ಇಡುತ್ತಾರೆ. ಯುಗಾದಿ ಹಬ್ಬದಂದು ಬೆಳಿಗ್ಗೆ ಬೇಗ ಎದ್ದು ದೇವರ ದೀಪ ಹಚ್ಚಿ ಖಣಿಯಲ್ಲಿನ ಕನ್ನಡಿಯಲಿ ದೇವ ದರ್ಶನ ಪಡೆಯುವುದು ಅಂದಿನ ವಿಶೇಷ. ನಂತರ ಸ್ನಾನ, ವೈವಿಧ್ಯಮಯ ರುಚಿ ರುಚಿಯಾದ ಅಡುಗೆ ಮಾಡಿ ನೈವೇದ್ಯ ಅರ್ಪಿಸಿ, ದೇಗುಲಕ್ಕೆ ಹಾಗೂ ಹಿರಿಯರ ಆಶೀರ್ವಾದ ಪಡೆದು , ಪಂಚಾಂಗ ಶ್ರವಣ ಮಾಡುವರು ಅಂದಿನ ವಿಶೇಷವೇ ಒಬ್ಬಟ್ಟು ಅಥವಾ ಹೋಳಿಗೆ.
ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಕಡಲೆ ಅಥವಾ ತೊಗರೀ ಬೇಳೆಯ ಹೂರಣದಲ್ಲಿ ಮಾಡುವರು. ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು.
ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

Neem And Jaggery

ಬೇವು-ಬೆಲ್ಲ

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ.

ಬೇವುಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಶ್ಲೋಕ:
ಶತಾಯುವ್ರಜ್ರದೇಹತ್ವ ಸರ್ವಸಂಪತ್ ಪ್ರದಂ ತಥಾ।
ಸರ್ವಾರಿಷ್ಟ ಹರಂ ಕುರ್ವೇ ನಿಂಬಪತ್ರಾಶನಂ ಶುಭಂ।। –

ಅದರರ್ಥ ಹೀಗಿದೆ: ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ ಎಂದರ್ಥ.

ಪಾರಿಭದ್ರಸ್ಯ ಪತ್ರಾಣಿ ಕೋಮಲನಿ ವಿಶೇಷತಃ।
ಸಪುಷ್ಪಾಣಿ ಸಾಮಾನೀಯ ಚೂರ್ಣಂ ಕೃತ್ವಾ ವಿಧಾನತಃ।।
ಮರೀಚಿ-ಹಿಂಗು ಲವಣಮಜೋದಾಃ ಸಶರ್ಕರಾಃ।
ತಿಂತ್ರಣೀಮೇಲನಂ ಕೃತ್ವಾ ಭಕ್ಷಯೇದ್ ರೋಗಶಾಂತಯೇ।।

ಅತ್ಯಂತ ಕೋಮಲವಾದ ನಿಂಬ(ಬೇವಿನ ಚಿಗುರೆಲೆಗಳನ್ನು) ಪತ್ರಗಳನ್ನು ಹೂವು ಸಹಿತವಾಗಿ ತಂದು ವಿಧಿಯಿಂದ ಚೂರ್ಣ ಮಾಡಿ, ಮೆಣಸು,ಇಂಗು, ಸೈಂದಲವಣ, ಅಜವಾನ, ಹುಣಸೆಹಣ್ಣು, ಸಕ್ಕರೆ ಕೊಡಿಸಿ ರೋಗ ಶಮನಕ್ಕಾಗಿ ಭಕ್ಷಿಸಬೇಕು.

ಜನೆವರಿ ನ್ಯೂ ಇಯರ್ ಡೇ?

ಜನವರಿ 1ರಂದು New Year Day (ಪಾಶ್ಚಿಮಾತ್ಯರ ಹೊಸ ವರ್ಷ)ಆಚರಣೆಗೆ ಬಂದಿದ್ದಾರೂ ಹೇಗೆ ಎನ್ನುವುದನ್ನ ನಾವು ಭಾರತೀಯರು ತಿಳಿದುಕೊಳ್ಳಲೇಬೇಕಾದ ಮುಖ್ಯ ವಿಷಯವಾಗಿದೆ. ಇತಿಹಾಸದ ಕಾಲ ಘಟ್ಟವನ್ನು ಅವಲೋಕಿಸುತ್ತ ಕೆಲವು ವಿಚಾರಗಳನ್ನು ಅವಲೋಕಿಸಿ ನೋಡಿದಾಗ 1753ರಲ್ಲಿ ಇಂಗ್ಲೆಂಡಿನಲ್ಲಿ ಪ್ರಥಮ ಬಾರಿಗೆ New Year Day (ಪಾಶ್ಚಿಮಾತ್ಯರ ಹೊಸ ವರ್ಷ)ವನ್ನು ಆಚರಿಸಲಾಯಿತು. ಮತ್ತದರ ಹಿಂದಿನ ರಹಸ್ಯವನ್ನು ಜಾಲಾಡುತ್ತಾ ಹೋದಾಗ ಆಶ್ಚರ್ಯಕಾರಿ ವಿಷಯಗಳು ಹೊರ ಹೊಮ್ಮುತ್ತವೆ.
ಪ್ರಾಚೀನ ಕಾಲದಿಂದಲೂ ಕಾಲಮಾನ ಪದ್ಧತಿ, ಖಗೋಳಶಾಸ್ತ್ರ ಮತ್ತು ಜ್ಯೋತಿಷ್ಯಶಾಸ್ತ್ರಗಳ ಬಳಕೆಯಲ್ಲಿ ಭಾರತೀಯರು ಮತ್ತು ರೋಮನ್ನರದ್ದು ಮೇಲುಗೈ. ಅದೇ ತರಹ ಭಾರತೀಯರು ಕಾಲ ನಿರ್ಣಯವನ್ನು ಗ್ರಹ ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿ, ತಿಥಿ, ಯೋಗ,ಕರ್ಣ, ನಕ್ಷತ್ರ, ವಾರ, ಮಾಸ, ಸಂವತ್ಸರಗಳನ್ನು ನಿಖರವಾಗಿ ಸಿದ್ಧಗೊಳಿಸುವ ಪಂಚಾಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಪ್ರಾಚೀನ ರೋಮ್ ಸಾಮ್ರಾಜ್ಯದ ಕಾಲ ನಿರ್ಣಯ ಪದ್ದತಿ ಹೇಗಿತ್ತು? ಒಂದು ವರ್ಷಕ್ಕೆ ಹತ್ತೇ ತಿಂಗಳೆಂದು ರೋಮನ್ನರು ನಂಬಿದ್ದರು. ‘ಭಾರತಿಯ ಕಾಲಶಾಸ್ತ್ರ ನಿರ್ಣಯ ಪದ್ಧತಿಯಿಂದ ಕಲಿತು ರೋಮನ್ನರು ರೋಮನ್ ಕ್ಯಾಲೆಂಡರಿಗೆ ಜನವರಿ ಮತ್ತು ಫೆಬ್ರವರಿಗಳನ್ನು ಸೇರಿಸಿ ಅವರ ಪ್ರಕಾರದ ವರ್ಷಕ್ಕಿರುವ ಒಟ್ಟು ತಿಂಗಳುಗಳನ್ನು ಹತ್ತರಿಂದ ಹನ್ನೆರಡಕ್ಕೆ ಏರಿಸಿದರು. ಜೂನ್ ತಿಂಗಳಲ್ಲಿ 29 ದಿವಸಗಳು ಮಾತ್ರ ಇದ್ದು ಅದನ್ನು 30ಕ್ಕೆ ಏರಿಸಿದರು. ನಂತರ ರೋಮ್ ದೊರೆ ‘ಜೂಲಿಯಸ್ ಸೀಸರ್’ ಆತನ ಹೆಸರಿನಲ್ಲಿಯೇ “ಜುಲೈ” ತಿಂಗಳನ್ನು ನಾಮಕರಣ ಮಾಡಿದನು. ಆತನ ಉತ್ತರಾಧಿಕಾರಿ “ಆಗಸ್ಟಸ್” ಆತನ ಹೆಸರಿನಲ್ಲಿ ಮುಂದಿನ ತಿಂಗಳನ್ನು ‘ಆಗಸ್ಟ್’ ಎಂದು ಕರೆದನು. ಭಾರತೀಯ ಶಾಸ್ತ್ರದಿಂದ ರೋಮನ್ನರು ಅವರ ಮುಂದಿನ ತಿಂಗಳುಗಳನ್ನು; ಸೆಪ್ಟೆಂಬರ್ (ಸಂಸ್ಕೃತ – ಸಪ್ತ = 7 ನೇ+ ಅಂಬರ= ತಿಂಗಳು/ ಆಕಾಶ), ಅಕ್ಟೋಬರ್ (ಅಷ್ಟ= 8ನೇ), ನವೆಂಬರ (ನವ= 9ನೇ) ಮತ್ತು ದಶಂಬರ (ದಶ= 10ನೇ) ಅಂಬರ /ತಿಂಗಳು ಎಂದು ಕರೆದರು. ಜನೆವರಿ ಮತ್ತು ಫೆಬ್ರವರಿ ನೂತನ ಎರಡು ಮಾಸಗಳನ್ನು ಸೇರಿಸುವ ಮೊದಲು ಇವುಗಳು ಕ್ರಮವಾಗಿ 7, 8, 9, 10 ನೇ ತಿಂಗಳುಗಳು ಆಗಿದ್ದವು. ಆದರೆ ನೂತನ ಎರಡು ತಿಂಗಳುಗಳನ್ನು ಅವರ ತಿಂಗಳುಗಳ ಪಟ್ಟಿಯಲ್ಲಿ ಕೊನೆಗೆ ಸೇರಿಸುವ ಬದಲು ಮೊದಲಿಗೆ ಸೇರಿಸಿದರು. ಈ ಸೇರ್ಪಡೆಯಿಂದ ಮಾರ್ಚಿನಿಂದ ಡಿಸೆಂಬರದವರೆಗಿನ ಎಲ್ಲಾ ತಿಂಗಳುಗಳು 2 ಸ್ಥಾನ ಕೆಳಗೆ ಜಾರಿದವು. ಆದ ಕಾರಣ ಈಗ ಸೆಪ್ಟಂಬರ್, ಅಕ್ಟೋಬರ್, ನವೆಂಬರ್, ದಶಂಬರ್ ತಿಂಗಳುಗಳು ನಿಜವಾದ ಅರ್ಥ ಕಳೆದು ಕೊಂಡು ವಿರೋಧವಾಗಿ 9, 10, 11, 12ನೇ ತಿಂಗಳುಗಳಾಗಿವೆ. ನವೆಂಬರ (ನವ ಅಂಬರ) 9ರ ಬದಲಿಗೆ 11ಕ್ಕೆ ಬಂದಿದ್ದು, ಡಿಸೆಂಬರ (ದಶ ಅಂಬರ 10)ರ ಬದಲಿಗೆ 12ಕ್ಕೆ ಬಂದಿದೆ.

Ugadi

ಭಾರತೀಯ ಸಂಸ್ಕೃತಿಯ ಪ್ರಕಾರ

ಅದೇ ಪ್ರಾಚೀನ ಭಾರತೀಯ ಸಂಸ್ಕೃತಿಯ ಪ್ರಕಾರ ಯುಗಾದಿಯ ದಿನದಂದು ಹೊಸ ವರ್ಷವೆಂದು ಆಚರಿಸುತ್ತಿದ್ದರು. ಇದು ಸರಿಸುಮಾರು ಪಾಶ್ಚಿಮಾತ್ಯರ (ರೋಮನ್ನರ ) ಮಾರ್ಚ್ ತಿಂಗಳಿನಲ್ಲಿ ಬರುತ್ತದೆ. ಮತ್ತು ರೋಮನ್ನರ ಹಳೆಯ ಕ್ಯಾಲೆಂಡರ್ ನಲ್ಲೂ ಕೂಡ ನ್ಯೂ ಇಯರ್ ಮಾರ್ಚ್ ನಿಂದ ಪ್ರಾರಂಭವಾಗುತ್ತಿತ್ತು. ಆದರೆ ಅವರು ಹೆಚ್ಚುವರಿಯಾಗಿ ಸೇರಿಸಿದ ಜನೆವರಿ ಮತ್ತು ಫೆಬ್ರವರಿಗಳನ್ನು ಕೊನೆಯ ತಿಂಗಳಾದ ಡಿಸೆಂಬರ್‌‌ ನಂತರ ಸೇರಿಸುವ ಬದಲು ಪ್ರಥಮ ತಿಂಗಳು ಮಾರ್ಚ್ ಗಿಂತ ಮೊದಲು ಸೇರಿಸಿ ಜನೆವರಿಯಿಂದ ತಿಂಗಳುಗಳ ಲೆಕ್ಕ ಹಾಕಿದರು. ಹಾಗಾಗಿ ಅಂದಿನಿಂದ ಅವರ ಹೊಸದಾಗಿ ತಯಾರಾದ ಕ್ಯಾಲೆಂಡರ್ ಜನೆವರಿ ಯಿಂದ ಪ್ರಾರಂಭವಾಗಿ ಡಿಸೆಂಬರ್‌ಗೆ ಕೊನೆಗೊಳ್ಳುತ್ತದೆ. ಆದರೆ ದುರದೃಷ್ಟ ಏನೆಂದರೆ ನಾವಿಂದು ನಮ್ಮ ಮೂಲ ಕಾಲಮಾನ ಪದ್ಧತಿ ಗೊತ್ತಿದ್ದರೂ ಸಹ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ನಮ್ಮ ಮೂಲತನವನ್ನೇ ಕಳೆದುಕೊಂಡು ಅವರ ಕ್ಯಾಲೆಂಡರ್ ನಂತೆ ಹೊಸವರ್ಷವನ್ನು ಆಚರಿಸುತ್ತಿರುವುದು. ಮಾರ್ಚ್ ತಿಂಗಳಿನಲ್ಲಿ ಬರುವ ಯುಗಾದಿಯ ಸಮಯದಲ್ಲಿ ಹವಾಮಾನದಲ್ಲಿ ಬದಲಾವಣೆಯನ್ನು ಕಾಣಬಹುದು. ಅದೇ ಕಾರಣಕ್ಕೆ ಯುಗಾದಿಯ ನಂತರ ನಮ್ಮ ರೈತರು ಬೆಳೆ ಬಿತ್ತುವುದು. ಆದರೆ ಈಗಿನ ನಮ್ಮ ಯುವ ಜನರು ಪಾಶ್ಚಾತ್ಯ ಸಂಸ್ಕೃತಿಯ DAYಯನ್ನು ಆಚರಿಸುವ ಮೂಲಕ ನಮ್ಮ ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಅಷ್ಟೇ ಅಲ್ಲದೇ ಈ New Year Day ಸಂದರ್ಭದಲ್ಲಿ ಹಲವಾರು ಯುವಕ, ಯುವತಿಯರು ಕುಡಿತ, ಸಲುಗೆ, ಕಾಮಕೇಳಿಯಂತಹ ದುಶ್ಚಟಕ್ಕೆ ಬಿದ್ದು, ತಮ್ಮ ಪ್ರಾಣ, ಮಾನವನ್ನು ಹಾಳು ಮಾಡಿ ಕೊಳ್ಳುತ್ತಿದ್ದಾರೆ. New Year Day ಆಚರಣೆಯಲ್ಲಿ ಕುಡಿತದ ಮತ್ತಿನಲ್ಲಿ ಎಷ್ಟೋ ಅಪಘಾತ ಆಗಿರುವುದನ್ನು , ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಕೆಡಿಸಿಕೊಂಡವರನ್ನು ನೋಡಿದ್ದೇವೆ. ಅದೇ ರೀತಿಯಾಗಿ ಈ ಸಂದರ್ಭದಲ್ಲಿ ಬಹಳಷ್ಟು ರಾಷ್ಟ್ರಗಳಲ್ಲಿ (ಭಾರತವೂ ಸೇರಿ) ಅನ್ಯಮತೀಯರ ಮತಾಂತರ ಎಂಬ ದೊಡ್ಡ ಸಾಮಾಜಿಕ ರೋಗ ಆಗುತ್ತವೆ. ಭವ್ಯ ಭಾರತೀಯ ಸಂಸ್ಕೃತಿಯ, ಸಂಪ್ರದಾಯಗಳನ್ನು ಆಚರಿಸಿ, ಆರೋಗ್ಯವನ್ನು ಕಾಪಾಡಿಕೊಂಡು ಮುಂದಿನ ತಲೆಮಾರಿಗೆ ಮಾದರಿ ಆಗುವ ನಿಟ್ಟಿನಲ್ಲಿ ಇನ್ನಾದರೂ ಯೋಚನೆ ಮಾಡೋಣ. ನಮ್ಮ ಯುಗಾದಿಗೆ ಮಹತ್ವವನ್ನು ಕೊಡೋಣ. ಕ್ರೋಧಿನಾಮ ಸಂವತ್ಸರ ಸಕಲರಿಗೂ ಶುಭವನ್ನುಂಟು ಮಾಡಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aloe Vera face mask
ಆರೋಗ್ಯ30 seconds ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ1 hour ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ1 hour ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು4 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ5 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ6 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ6 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ6 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ6 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ7 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌