Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌! - Vistara News

ಧಾರ್ಮಿಕ

Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌!

ವಾಸ್ತು ಶಾಸ್ತ್ರವು ಪ್ರಾಚೀನ ಭಾರತೀಯ ವಾಸ್ತುಶಿಲ್ಪ ವಿಜ್ಞಾನವಾಗಿದೆ. ಇದರಲ್ಲಿ ಮನೆ ಮತ್ತು ಜೀವನದ ವಿವಿಧ ಅಂಶಗಳಿಗೆ ನಿರ್ದಿಷ್ಟ ನಿಯಮಗಳನ್ನು ಹೇಳಲಾಗಿದೆ. ಇವುಗಳಲ್ಲಿ ಮನೆಯಲ್ಲಿ ನಗದು ಪೆಟ್ಟಿಗೆ ಎಲ್ಲಿರಬೇಕು ಎಂಬುದು ಮುಖ್ಯ ವಿಷಯವಾಗಿರುತ್ತದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವುದರಿಂದ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ಅಸಮಾಧಾನಗೊಳಿಸಬಹುದು. ಇದು ಹಲವು ತೊಂದರೆಗಳಿಗೆ ಕಾರಣವಾಗಬಹುದು. ನಗದು ಪೆಟ್ಟಿಗೆಗೆ ಸಂಬಂಧಿಸಿ ವಾಸ್ತು ನಿಯಮದಲ್ಲಿ (Vastu Tips) ಏನು ಹೇಳಲಾಗಿದೆ ಗೊತ್ತೇ? ಈ ಲೇಖನ ಓದಿ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆಯಲ್ಲಿ ಸಂಪತ್ತು (Wealth) ಸದಾ ಸ್ಥಿರವಾಗಿ ಹೆಚ್ಚುತ್ತಲೇ ಇರಬೇಕು ಎಂಬುದು ಎಲ್ಲರ ಬಯಕೆ. ಆದರೆ ಎಲ್ಲ ಸಂದರ್ಭದಲ್ಲೂ ಇದು ಸಾಧ್ಯವಾಗುವುದೇ ಇಲ್ಲ. ಅದಕ್ಕಾಗಿ ನಮ್ಮ ಕಠಿಣ ಪರಿಶ್ರಮದ ಜೊತೆಗೆ ಸರಿಯಾದ ಯೋಜನೆಯೂ ಇರಬೇಕಾಗಿರುತ್ತದೆ. ಜೊತೆಗೆ ಇದರೊಂದಿಗೆ ಮನೆಯಲ್ಲಿ ಸಂಪತ್ತು (Attract Wealth) ನಿರಂತರ ಹೆಚ್ಚಾಗಲು ವಾಸ್ತು ನಿಯಮಗಳನ್ನು (Vastu Tips) ಅನುಸರಿಸುವುದು ಬಹಳ ಮುಖ್ಯ.

ವಾಸ್ತು ಶಾಸ್ತ್ರವು ಪ್ರಾಚೀನ ಭಾರತೀಯ ವಾಸ್ತುಶಿಲ್ಪ ವಿಜ್ಞಾನವಾಗಿದೆ. ಇದರಲ್ಲಿ ಮನೆ ಮತ್ತು ಜೀವನದ ವಿವಿಧ ಅಂಶಗಳಿಗೆ ನಿರ್ದಿಷ್ಟ ನಿಯಮಗಳನ್ನು ಹೇಳಲಾಗಿದೆ. ಇವುಗಳಲ್ಲಿ ಮನೆಯಲ್ಲಿ ತಿಜೋರಿ ಅಥವಾ ನಗದು ಪೆಟ್ಟಿಗೆ ಎಲ್ಲಿರಬೇಕು ಎಂಬುದು ಮುಖ್ಯ ವಿಷಯವಾಗಿರುತ್ತದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವುದರಿಂದ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ಅಸಮಾಧಾನಗೊಳಿಸಬಹುದು ಎನ್ನಲಾಗಿದೆ.

ಮನೆಯಲ್ಲಿ ನಗದು ಪೆಟ್ಟಿಗೆಯು ಸಮೃದ್ಧಿಯನ್ನು ಆಕರ್ಷಿಸುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆಲವು ವಾಸ್ತು ಸಲಹೆಗಳನ್ನು ಪಾಲಿಸುವುದು ಸೂಕ್ತ.

Vastu Tips
Vastu Tips


ಕನ್ನಡಿ ತಪ್ಪಿಸಿ

ವಾಸ್ತು ಶಾಸ್ತ್ರದ ಪ್ರಕಾರ ನಗದು ಪೆಟ್ಟಿಗೆಯೊಳಗೆ ಕನ್ನಡಿಯನ್ನು ಇಡುವುದು ಅಶುಭವೆಂದು ಪರಿಗಣಿಸಲಾಗಿದೆ. ಕನ್ನಡಿ ವಾಸ್ತು ದೋಷವನ್ನು ಆಹ್ವಾನಿಸಬಹುದು. ಹಠಾತ್ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು. ನಗದು ಪೆಟ್ಟಿಗೆಯಲ್ಲಿ ಕನ್ನಡಿಯನ್ನು ಹೊಂದಿದ್ದರೆ ಹಣಕಾಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ತಕ್ಷಣವೇ ಅದನ್ನು ತೆಗೆದುಹಾಕಿ.

ಕಪ್ಪು ಬಣ್ಣ ಬಳಸಬೇಡಿ

ಹಿಂದೂ ಸಂಪ್ರದಾಯದ ಪ್ರಕಾರ ಕಪ್ಪು ಬಣ್ಣವು ಸಾಮಾನ್ಯವಾಗಿ ನಕಾರಾತ್ಮಕತೆಯೊಂದಿಗೆ ಸಂಬಂಧಿಸಿದೆ. ಮಂಗಳಕರ ಚಟುವಟಿಕೆಗಳಲ್ಲಿ ದೂರವಿರುತ್ತದೆ. ಆದ್ದರಿಂದ ನಗದು ಪೆಟ್ಟಿಗೆಯಲ್ಲಿ ಯಾವುದೇ ವಸ್ತುಗಳನ್ನು ಕಟ್ಟಲು ಕಪ್ಪು ಬಟ್ಟೆಯನ್ನು ಬಳಸುವುದನ್ನು ಸರಿಯಲ್ಲ. ಬದಲಾಗಿ ಕೆಂಪು ಬಟ್ಟೆಯನ್ನು ಬಳಸಿ. ಇದು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಮತ್ತು ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಹಳೆಯ ವಸ್ತುಗಳನ್ನು ಸಂಗ್ರಹಿಸಬೇಡಿ

ಸ್ಕ್ರ್ಯಾಪ್ ಪೇಪರ್‌ಗಳಂತಹ ಹಳೆಯ ಅಥವಾ ತ್ಯಾಜ್ಯ ವಸ್ತುಗಳು ನಗದು ಪೆಟ್ಟಿಗೆಯಲ್ಲಿ ಸಂಗ್ರಹಿಸುವುದು ಸರಿಯಲ್ಲ ಎನ್ನುತ್ತದೆ ವಾಸ್ತು ಶಾಸ್ತ್ರ. ಹಾಗೆ ಮಾಡುವುದರಿಂದ ಆರ್ಥಿಕ ತೊಂದರೆಗಳು ಮತ್ತು ಬಡತನವೂ ಉಂಟಾಗಬಹುದು. ನಗದು ಬಾಕ್ಸ್ ಸ್ವಚ್ಛವಾಗಿಟ್ಟು ಮೌಲ್ಯಯುತವಾದ ವಸ್ತುಗಳು ಮತ್ತು ದಾಖಲೆಗಳನ್ನು ಮಾತ್ರ ಅದರಲ್ಲಿ ಇರಿಸಬೇಕು.

ಸುಗಂಧ ದ್ರವ್ಯಗಳನ್ನು ಇಡಬೇಡಿ

ಸುಗಂಧ ದ್ರವ್ಯಗಳನ್ನು ನಗದು ಪೆಟ್ಟಿಗೆಯಲ್ಲಿ ಇಡುವುದು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ಅಭ್ಯಾಸವು ವಾಸ್ತು ದೋಷವನ್ನು ಆಕರ್ಷಿಸುತ್ತದೆ. ಇದರಿಂದ ಮನೆಯ ಸದಸ್ಯರಿಗೆ ಆರ್ಥಿಕ ತೊಂದರೆ ಉಂಟು ಮಾಡಬಹುದು. ಸುಗಂಧ ದ್ರವ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸುವುದು ಉತ್ತಮ.

Vastu Tips
Vastu Tips


ಯಾವ ದಿಕ್ಕು ಸೂಕ್ತ?

ಹಣದ ಪೆಟ್ಟಿಗೆಯನ್ನು ಉತ್ತರ ದಿಕ್ಕಿನಲ್ಲಿ ಇರಿಸಿ. ಯಾಕೆಂದರೆ ಇದು ವಾಸ್ತು ಶಾಸ್ತ್ರದಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಸಂಬಂಧಿಸಿದೆ.

ಇದನ್ನೂ ಓದಿ: Vastu Tips: ಮನೆ ಖರೀದಿ ಮಾಡುವಾಗ ಈ ಸಂಗತಿಗಳನ್ನು ತಪ್ಪದೇ ಗಮನಿಸಿ

ಆಕಾರ ಮತ್ತು ವಸ್ತು

ಲೋಹ ಅಥವಾ ಮರದಿಂದ ಮಾಡಿದ ಆಯತಾಕಾರದ ಅಥವಾ ಚೌಕಾಕಾರದ ನಗದು ಪೆಟ್ಟಿಗೆಗೆ ಆದ್ಯತೆ ನೀಡಬೇಕು.

ಸ್ವಚ್ಛತೆಗೆ ಆದ್ಯತೆ ನೀಡಿ

ನಗದು ಪೆಟ್ಟಿಗೆಯನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ. ಧನಾತ್ಮಕ ಶಕ್ತಿ ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯವು ಧಾರ್ಮಿಕ ಆಚರಣೆಯಲ್ಲಿ ಇದಕ್ಕೆ ಪೂಜೆ ಸಲ್ಲಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Vastu Tips: ಮನೆ ಖರೀದಿ ಮಾಡುವಾಗ ಈ ಸಂಗತಿಗಳನ್ನು ತಪ್ಪದೇ ಗಮನಿಸಿ

ಮನೆ ವಾಸ್ತು ಪ್ರಕಾರ (Vastu Tips) ಇಲ್ಲದಿದ್ದರೆ ಜೀವನದಲ್ಲಿ ಹಲವಾರು ರೀತಿಯ ಸಮಸ್ಯೆಗಳು ಮತ್ತು ಅಡೆತಡೆಗಳು ಬರಲು ಪ್ರಾರಂಭಿಸುತ್ತವೆ ಎಂಬ ನಂಬಿಕೆ ಇದೆ. ಇದರಿಂದಾಗಿ ಜೀವನವು ತೊಂದರೆಗಳಿಂದ ಸುತ್ತುವರಿಯುವ ಸಂಭವ ಇರುತ್ತದೆ. ಹೀಗಾಗಿ ಸ್ವಂತ ಮನೆ ಹೊಂದುವ ಕನಸು ಇರುವವರು ಕೆಲವೊಂದು ವಿಚಾರಗಳ ಬಗ್ಗೆ ತಿಳಿದಿರುವುದು ಉತ್ತಮ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಪ್ರತಿಯೊಬ್ಬರಿಗೂ ಮನೆ ಖರೀದಿ (Buy new home) ಮಾಡಬೇಕು ಎನ್ನುವ ಕನಸು (dream) ಇರುತ್ತದೆ. ಆದರೆ ಎಲ್ಲರಿಗೂ ಇದು ನನಸು ಮಾಡಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಹೊಸ ಮನೆ (new home) ಖರೀದಿ ಮಾಡುವಾಗ ವಾಸ್ತು ಅಂಶಗಳನ್ನು (Vastu Tips) ನಾವು ಗಮನದಲ್ಲಿ ಇರಿಸುವುದು ಒಳ್ಳೆಯದು. ಇದರಿಂದ ನಾವು ನಮ್ಮ ಸ್ವಂತ ಮನೆಯಲ್ಲಿ ಸೌಕರ್ಯ, ಸಂತೋಷ ಮತ್ತು ಶಾಂತಿಯನ್ನು ಪಡೆಯಬಹುದು.

ಹೊಸ ಮನೆ ಖರೀದಿ ಮಾಡುವಾಗ ಮನೆಯ ವಾಸ್ತು ಸರಿಯಾಗಿ ಇದೆಯೇ ಎಂಬುದನ್ನು ಮೊದಲು ನೋಡಿಕೊಳ್ಳಬೇಕು. ಇದರಿಂದ ಮನೆಯಲ್ಲಿ ವಾಸಿಸುವ ಎಲ್ಲಾ ಸದಸ್ಯರಿಗೂ ತಮ್ಮ ಜೀವನದಲ್ಲಿ ಪ್ರಗತಿ ಸಾಧ್ಯವಾಗುತ್ತದೆ.

ಮನೆಯಲ್ಲಿರುವ ಎಲ್ಲಾ ವಸ್ತುಗಳು ವಾಸ್ತು ಪ್ರಕಾರ ಇಲ್ಲದಿದ್ದರೆ ಜೀವನದಲ್ಲಿ ಹಲವಾರು ರೀತಿಯ ಸಮಸ್ಯೆಗಳು ಮತ್ತು ಅಡೆತಡೆಗಳು ಬರಲು ಪ್ರಾರಂಭಿಸುತ್ತವೆ. ಇದರಿಂದಾಗಿ ಜೀವನವು ತೊಂದರೆಗಳಿಂದ ಸುತ್ತುವರಿಯುತ್ತದೆ. ಹೀಗಾಗಿ ಸ್ವಂತ ಮನೆ ಹೊಂದುವ ಕನಸು ಇರುವವರು ಕೆಲವೊಂದು ವಿಚಾರಗಳ ಬಗ್ಗೆ ತಿಳಿದಿರುವುದು ಉತ್ತಮ.

Vastu Tips
Vastu Tips


ಮುಖ್ಯ ಬಾಗಿಲು ಮತ್ತು ಕಿಟಕಿಗಳು

ಮನೆಯ ಮುಖ್ಯ ಬಾಗಿಲು ಮತ್ತು ಕಿಟಕಿಗಳನ್ನು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ಮಾತ್ರ ಇಡುವುದು ಮಂಗಳಕರ. ಯಾಕೆಂದರೆ ಧನಾತ್ಮಕ ಶಕ್ತಿಯಿಂದ ತುಂಬಿದ ಸೂರ್ಯನ ಕಿರಣಗಳು ನೇರವಾಗಿ ಮನೆಯನ್ನು ಪ್ರವೇಶಿಸುತ್ತವೆ. ಇದು ಮನೆಯ ಮಾಲೀಕರಿಗೆ ದೀರ್ಘಾಯುಷ್ಯ ಮತ್ತು ಮಕ್ಕಳಲ್ಲಿ ಸಂತೋಷವನ್ನು ತುಂಬುತ್ತದೆ.

ಪೂಜಾ ಸ್ಥಳ

ಮನೆಯಲ್ಲಿ ಪೂಜೆ ಮಾಡುವ ಸ್ಥಳವು ಪ್ರಮುಖವಾಗಿದೆ. ಮನೆ ಖರೀದಿಸುವಾಗ ವಾಸ್ತು ಪ್ರಕಾರ ಮನೆಯ ದೇವಸ್ಥಾನವನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಿ.
ಈಶಾನ್ಯ ದಿಕ್ಕನ್ನು ದೇವ-ದೇವತೆಗಳಿಗೆ ಒಳ್ಳೆಯದೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಪೂಜಾ ಕೊಠಡಿಯನ್ನು ಸರಿಯಾದ ದಿಕ್ಕಿನಲ್ಲಿ ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ, ಇದು ಮನೆಯ ಜನರಿಗೆ ಸಾಕಷ್ಟು ಪ್ರಗತಿಯನ್ನು ತಂದುಕೊಡುತ್ತದೆ.

ಅಡುಗೆಮನೆಯ ದಿಕ್ಕು

ಅಡುಗೆ ಕೋಣೆಗೆ ಅತ್ಯಂತ ಮಂಗಳಕರವಾದ ಸ್ಥಳವೆಂದರೆ ಆಗ್ನೇಯ ದಿಕ್ಕು. ಈ ದಿಕ್ಕಿನಲ್ಲಿ ಅಡುಗೆ ಮನೆ ಇದ್ದರೆ ಕುಟುಂಬದ ಸದಸ್ಯರು ಆರೋಗ್ಯವಾಗಿರುತ್ತಾರೆ. ಇದಲ್ಲದೇ ವಾಯವ್ಯ ದಿಕ್ಕು ಕೂಡ ಅಡುಗೆ ಕೋಣೆಗೆ ಸರಿಯಾಗಿದೆ.

Vastu Tips
Vastu Tips


ಇದನ್ನೂ ಓದಿ: Vastu Tips: ಈ ವಾಸ್ತು ನಿಯಮ ಪಾಲಿಸಿ; ಹಣಕಾಸಿನ ಸಮಸ್ಯೆಯಿಂದ ಪಾರಾಗಿ

ಮಲಗುವ ಕೋಣೆ

ಮನೆಯಲ್ಲಿ ಮಲಗುವ ಕೋಣೆ ನೈಋತ್ಯ ಅಥವಾ ವಾಯವ್ಯ ದಿಕ್ಕಿನಲ್ಲಿರಬೇಕು. ಮಲಗುವ ಕೋಣೆಯಲ್ಲಿ ಹಾಸಿಗೆಯ ಮುಂದೆ ಮತ್ತು ಬಾಗಿಲಿನ ಮುಂಭಾಗದಲ್ಲಿ ಕನ್ನಡಿ ಇಡಬೇಡಿ. ಇದು ಪ್ರಗತಿಯನ್ನು ನಿಲ್ಲಿಸುತ್ತದೆ.

ವಿತ್ತೀಯ ಲಾಭದ ಚಿಹ್ನೆಗಳು

ಹಾಸಿಗೆಯ ಮೇಲೆ ಮಲಗುವಾಗ ಪಾದಗಳು ದಕ್ಷಿಣ ಮತ್ತು ಪೂರ್ವ ದಿಕ್ಕಿನಲ್ಲಿರಬಾರದು. ಉತ್ತರ ದಿಕ್ಕಿಗೆ ಪಾದಗಳನ್ನು ಇಟ್ಟು ಮಲಗುವುದರಿಂದ ಆರೋಗ್ಯ ಪ್ರಯೋಜನ ಮತ್ತು ಹಣದ ಲಾಭವನ್ನು ಪಡೆಯಬಹುದು.

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Shivamogga News: ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ಮಂಗಳವಾರ ನಡೆದ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ, ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

VISTARANEWS.COM


on

Kenchanala Marikamba Jatra
Koo

ರಿಪ್ಪನ್‌ಪೇಟೆ: ಸಮೀಪದ ಕೆಂಚನಾಲ ಗ್ರಾಮದಲ್ಲಿ ಮಂಗಳವಾರ ನಡೆದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರೆಗೆ ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ (Shivamogga News) ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯು ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತದೆ.

ಇದನ್ನೂ ಓದಿ: Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ಬೆಳಗ್ಗೆಯಿಂದಲೂ ನಿರಂತರವಾಗಿ ಸುರಿಯುತ್ತಿದ್ದ ಭಾರೀ ಮಳೆಯಲ್ಲಿ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ದೇವಸ್ಥಾನ ಸಮಿತಿ ಅಧ್ಯಕ್ಷರು, ಸದಸ್ಯರು, ಮುಜರಾಯಿ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯ ಪಿಎಸ್‌ಐ ಎ. ಪ್ರವೀಣ್ ಹಾಗೂ ಸಿಬ್ಬಂದಿ, ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಿದ್ದರು.

Continue Reading

Latest

Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ? ಈ ತಿಂಗಳ ಮಹತ್ವ ಏನು?

Shravan 2024: ಶ್ರಾವಣ ಮಾಸ ಬಂದಾಗ…ಆನಂದ ತಂದಾಗ….ಹೌದು, ಶ್ರಾವಣ ಈ ಹೆಸರು ಕೇಳುತ್ತಲೆ ಖುಷಿಯಾಗುತ್ತದೆ. ಆಷಾಢದ ಆಲಸ್ಯ ಕಳೆದು ಹೊಸ ಹುರುಪು ತುಂಬುತ್ತದೆ ಈ ಶ್ರಾವಣ. ಹಬ್ಬಹರಿದಿನಗಳು ಸಾಲು ಸಾಲಾಗಿ ಶುರುವಾಗುತ್ತದೆ. ಮನಸ್ಸು ಕೂಡ ಗರಿಗೆದರುತ್ತದೆ. ಹೆಂಗಳೆಯರಿಗೆ ಈ ಮಾಸವೆಂದರೆ ತುಸು ಪ್ರೀತಿ. ವ್ರತ, ಪೂಜೆ, ಉಪಾವಾಸ ಎಂದೆಲ್ಲಾ ಬ್ಯುಸಿಯಾಗಿಬಿಡುತ್ತಾರೆ.ಅಂದಹಾಗೇ, ಈ ಶ್ರಾವಣ ಮಾಸವನ್ನು ಹೇಗೆಲ್ಲಾ ಆಚರಿಸಲಾಗುತ್ತದೆ, ಇದರ ವಿಶೇಷತೆ ಏನು ಎಂಬುದರ ಕುರಿತ ಮಾಹಿತಿ ಇಲ್ಲಿದೆ ನೋಡಿ.

VISTARANEWS.COM


on

Shravan 2024
Koo


ಹಿಂದೂ ಕ್ಯಾಲೆಂಡರ್‌ನ ಪ್ರಕಾರ ಶ್ರಾವಣ ಮಾಸವು ಮಾಸಗಳಲ್ಲಿ (shravan 2024) ಐದನೇಯದಾಗಿದೆ. ಶ್ರವಣ ನಕ್ಷತ್ರ ದಿನದಂದು ಈ ಮಾಸ ಆರಂಭವಾಗುವುದರಿಂದ ಇದನ್ನು ಶ್ರಾವಣ ಮಾಸ (Shravan Masa) ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಪವಿತ್ರವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಜನರು ಹೆಚ್ಚಾಗಿ ಶಿವನ ಆರಾಧನೆ ಮಾಡುತ್ತಾರೆ. ಜೊತೆಗೆ ಲಕ್ಷ್ಮಿ,, ಗೌರಿಯ ಪೂಜೆ ಮಾಡಲಾಗುತ್ತದೆ. ಹಾಗೇ ಈ ಮಾಸದಲ್ಲಿ ಹಲವು ಹಬ್ಬ ಹರಿದಿನಗಳನ್ನು, ವ್ರತ ಉಪವಾಸಗಳನ್ನು ಜನರು ಆಚರಿಸುತ್ತಾರೆ. ಹಾಗಾಗಿ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಅಲ್ಲದೇ ಶ್ರಾವಣ ಮಾಸ ಮಹಿಳೆಯರಿಗೆ ಬಹಳ ಪ್ರಿಯವಾದ ಮಾಸ. ಯಾಕೆಂದರೆ ಮಹಿಳೆಯರಿಗೆ ದೇವರ ಪೂಜೆ ಮಾಡಲು ಇದು ಬಹಳ ಶ್ರೇಷ್ಠವಾದ ಮಾಸವಾಗಿದೆ. ಮತ್ತು ಈ ಮಾಸದಲ್ಲಿ ಮಾಡಿದ ಪೂಜೆಗಳಿಗೆ ಬಹಳ ಬೇಗ ಫಲ ದೊರೆಯುತ್ತದೆಯಂತೆ.

Shravan Masa
Shravan Masa

ಶ್ರಾವಣ ಮಾಸ ಶುರು ಯಾವಾಗ?

ಆಷಾಢ ಮಾಸ ಮುಗಿದ ನಂತರ ಅಂದರೆ ಭೀಮನ ಅಮಾವಾಸ್ಯೆ ನಂತರ ಶ್ರಾವಣ ಮಾಸ ಪ್ರಾರಂಭವಾಗುತ್ತದೆ. ಅಂದರೆ ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಮರುದಿನ ಭಾದ್ರಪದ ಮಾಸ ಆರಂಭವಾಗುತ್ತದೆ.

ಶ್ರಾವಣ ಮಾಸದ ವಿಶೇಷತೆ ಏನು?

ಶ್ರಾವಣ ಮಾಸದಲ್ಲಿ ಬರುವ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಈ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸದಲ್ಲಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳಿಗೆ ಶ್ರೇಷ್ಠವಾಗಿದೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಜೊತೆಗೆ ಈ ಮಾಸದಲ್ಲಿ ಹಬ್ಬಗಳು ಸಾಲುಸಾಲಾಗಿ ಬರುತ್ತವೆ.

Shravan Masa
Shravan Masa

ಶ್ರಾವಣದಲ್ಲಿ ಶಿವನ ಆರಾಧನೆ

ಇನ್ನು ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಹೆಚ್ಚು ಪ್ರಾಮುಖ್ಯತೆ ಇರುವುದರಿಂದ ಶ್ರಾವಣ ಮಾಸದ ಪ್ರತಿ ಸೋಮವಾರವನ್ನು ಶ್ರಾವಣ ಸೋಮವಾರ ಎಂದೇ ಕರೆಯುತ್ತಾರೆ. ಈ ಮಾಸದಲ್ಲಿ ಶಿವನಿಗೆ ವಿವಿಧ ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಯಾಕೆಂದರೆ ಸಮುದ್ರ ಮಂಥನ ನಡೆದಿದ್ದು ಶ್ರಾವಣ ಮಾಸದಲ್ಲಿ. ಆಗ ಈ ಸಮಯದಲ್ಲಿ ಹೊರಗೆ ಬಂದ ಹಾಲಾಹಲವನ್ನು ಶಿವನು ಕುಡಿಯುತ್ತಾನೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಹಾಲಾಹಲದ ತಾಪವನ್ನು ಶಿವನಿಗೆ ಸಹಿಸಲು ಸಾಧ್ಯವಾಗದ ಕಾರಣ ದೇಹವನ್ನು ತಂಪಾಗಿಸಲು ಚಂದ್ರನನ್ನು ಹಾಗೂ ಗಂಗೆಯನ್ನು ಶಿರದಲ್ಲಿ ಧರಿಸುತ್ತಾನೆ. ಹಾಗಾಗಿ ಶ್ರಾವಣ ಮಾಸದಲ್ಲಿ ಶಿವನನ್ನು ತಂಪಾಗಿಲು ಅಭಿಷೇಕ ಮಾಡಲಾಗುತ್ತದೆ. ಇದರಿಂದ ಶಿವನ ಕೃಪೆ ದೊರೆಯುತ್ತದೆ ಎಂಬ ನಂಬಿಕೆ ಇದೆ.

ಶ್ರಾವಣ ಮಾಸದಲ್ಲಿ ಆಚರಿಸುವ ಹಬ್ಬಗಳು

  • ಈ ಮಾಸದಲ್ಲಿ ನಾಗರ ಪಂಚಮಿ, ವರಮಹಾಲಕ್ಷ್ಮಿ ವ್ರತ, ಮಂಗಳ ಗೌರಿ ವ್ರತ, ರಕ್ಷಾಬಂಧನ, ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಮುಂತಾದ ಹಬ್ಬಗಳನ್ನು ಆಚರಿಸಲಾಗುತ್ತದೆ.
Shravan Masa
Shravan Masa
  • ಮಂಗಳಗೌರಿ ವ್ರತ : ಶ್ರಾವಣ ಮಾಸದ ಮೊದಲಿಗೆ ಮಂಗಳವಾರ ಬರುವುದರಿಂದ ಮಂಗಳ ಗೌರಿಯ ವ್ರತ ಮಾಡುತ್ತಾರೆ. ಇದನ್ನು ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಉತ್ತಮವಾಗಿರುತ್ತದೆಯಂತೆ. ಹಾಗಾಗಿ ಶ್ರಾವಣ ಮಾಸದಲ್ಲಿ ಬರುವ ಎಲ್ಲಾ ಮಂಗಳವಾರದಂದು ಮಂಗಳಗೌರಿ ವ್ರತ ಆಚರಿಸಿದರೆ ಒಳ್ಳೆಯದು.
Shravan Masa
Shravan Masa
  • ನಾಗರ ಪಂಚಮಿ: ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನಕ್ಕೆ ಅಂದರೆ ಆಗಸ್ಟ್ 9ರಂದು ನಾಗರ ಪಂಚಮಿ ಹಬ್ಬ ಬರಲಿದೆ. ಈ ದಿನ ಜನರು ತಾವು ನಂಬಿದಂತಹ ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
Shravan Masa
Shravan Masa
  • ವರಮಹಾಲಕ್ಷ್ಮಿ ವ್ರತ : ಶ್ರಾವಣ ಅಮಾವಾಸ್ಯೆಯ 2ನೇ ಶುಕ್ರವಾರದಂದು ಅಂದರೆ ಆಗಸ್ಟ್ 16ರಂದು ಆಚರಿಸಲಾಗುತ್ತದೆ. ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
Shravan Masa
Shravan Masa
  • ಸಂಪತ್ ಗೌರಿ ವ್ರತ : ಇದನ್ನು ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನ ಸಂಪತ್ತಿನ ದೇವತೆ ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ.
Shravan Masa
Shravan Masa
  • ಶ್ರಾವಣ ಶನಿವಾರ: ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.
Shravan Masa
Shravan Masa
  • ರಕ್ಷಾ ಬಂಧನ : ಶ್ರಾವಣ ಮಾಸದ ಹುಣ್ಣಿಮೆಯಂದು ರಕ್ಷಾಬಂಧನವನ್ನು ಆಚರಿಸುತ್ತಾರೆ. ಇದನ್ನು ನೂಲು ಹುಣ್ಣಿಮೆಯಂದು ಕರೆಯುತ್ತಾರೆ. ಈ ದಿನ ಸಹೋದರಿಯರು ತಮ್ಮ ಸಹೋದರನ ಕೈಗೆ ರಕ್ಷಾ ಬಂಧನವನ್ನು ಕಟ್ಟಿ ಒಳಿತಾಗಲಿ ಎಂದು ಹಾರೈಸುತ್ತಾರೆ. ಮತ್ತು ಉಪನಯನವಾದವರು ಈ ದಿನ ಉಪಕರ್ಮವನ್ನು ಆಚರಿಸಬೇಕು. ಅಂದರೆ ಜನೀವಾರವನ್ನು ಬದಲಾಯಿಸಿ ಹೊಸ ಜನೀವಾರವನ್ನು ಧರಿಸಬೇಕು. ಈ ವರ್ಷ ಆಗಸ್ಟ್ 19ರಂದು ರಕ್ಷಾ ಬಂಧನವನ್ನು ಆಚರಿಸುತ್ತಾರೆ.
Shravan Masa
Shravan Masa
  • ಶ್ರೀಕೃಷ್ಣ ಜನ್ಮಾಷ್ಟಮಿ: ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಮಹಾವಿಷ್ಣು ಕಂಸನ ಸಂಹಾರಕ್ಕಾಗಿ ಶ್ರೀಕೃಷ್ಣನ ಅವತಾರದಲ್ಲಿ ಜನ್ಮ ತಾಳುತ್ತಾನೆ. ಹಾಗಾಗಿ ಈ ವರ್ಷ ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಮಾಸವಾಗಿದೆ. ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಬಹುದು. ಹಾಗಾಗಿ ಈ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಬರಮಾಡಿಕೊಳ್ಳಿ.

Continue Reading

ದೇಶ

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kalika Temple: ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಈಗ ದೇವಾಲಯದ ಆಡಳಿತ ಮಂಡಳಿಯು ತುಂಡುಡುಗೆ, ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಿದೆ. ಭಕ್ತರು ಆಡಳಿತ ಮಂಡಳಿಯ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

VISTARANEWS.COM


on

Kalika Temple
Koo

ಭೋಪಾಲ್:‌ ಬದಲಾದ ಕಾಲಘಟ್ಟದಲ್ಲಿ, ದೇವಾಲಯಗಳಿಗೂ ತುಂಡುಡುಗೆ ಧರಿಸಿ ಬರುವ ಭಕ್ತರ ಸಂಖ್ಯೆ ಜಾಸ್ತಿಯಾಗಿರುವ ಕಾರಣ ಭಾರತದ ಹಲವು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯಕ್ಕೆ ಆಗಮಿಸಬೇಕು ಎಂಬುದಾಗಿ ದೇವಾಲಯಗಳ ಆಡಳಿತ ಮಂಡಳಿಗಳು ಆದೇಶ ಹೊರಡಿಸಿವೆ. ಈಗ ಮಧ್ಯಪ್ರದೇಶದ (Madhya Pradesh) ರತ್ಲಾಮ್‌ನಲ್ಲಿರುವ (Ratlam), ಪ್ರಸಿದ್ಧ ಕಾಳಿಕಾ ದೇವಾಲಯವು (Kalika Temple) ಕೂಡ ವಸ್ತ್ರಸಂಹಿತೆ ಜಾರಿಗೊಳಿಸಿದ್ದು, ಭಕ್ತಾದಿಗಳು ವಿದೇಶಿ ಹಾಗೂ ತುಂಡುಡುಗೆ ಧರಿಸಿ ಬರುವಂತಿಲ್ಲ ಎಂದು ಆದೇಶಿಸಿದೆ.

ದೇವಾಲಯದ ಅರ್ಚಕ ರಾಜೇಂದ್ರ ಶರ್ಮಾ ಅವರು ವಸ್ತ್ರಸಂಹಿತೆ ಜಾರಿಗೊಳಿಸಿದ್ದಾರೆ. “ದೇವಾಲಯದ ಪಾವಿತ್ರ್ಯ ಕಾಪಾಡಲು, ಭಕ್ತರು ವಿದೇಶಿ ಹಾಗೂ ತುಂಡುಡುಗೆ, ಶಾರ್ಟ್ಸ್‌ಗಳನ್ನು ಧರಿಸಿ ಬಂದರೆ, ಅವರಿಗೆ ದೇವಾಲಯ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಇಂತಹ ಉಡುಪು ಧರಿಸಿ ಬರುವ ಯಾರಿಗೂ ದೇವಾಲಯದ ಗರ್ಭಗುಡಿ ಪ್ರವೇಶಿಸಲು ಭದ್ರತಾ ಸಿಬ್ಬಂದಿಯು ಬಿಡುವುದಿಲ್ಲ. ಅಂತಹ ಭಕ್ತಾದಿಗಳು ದೇವಾಲಯದ ಹೊರಗಿನಿಂದಲೇ ದರ್ಶನ ಪಡೆದು ಹೋಗಬೇಕಾಗುತ್ತದೆ” ಎಂಬುದಾಗಿ ಅರ್ಚಕ ತಿಳಿಸಿದ್ದಾರೆ.

ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ದೇವಾಲಯವನ್ನು ನಿರ್ಮಿಸಿದ್ದಾರೆ. ಪ್ರಸಕ್ತ ದೇವಾಲಯದ ನಿರ್ವಹಣೆಯನ್ನು ಕೋರ್ಟ್‌ ಆಫ್‌ ವಾರ್ಡ್ಸ್‌ ಕಾಯ್ದೆ ಅಡಿಯಲ್ಲಿ ಜಿಲ್ಲಾಡಳಿತವೇ ನೋಡಿಕೊಳ್ಳುತ್ತದೆ. ತಹಸೀಲ್ದಾರ್‌ ರಿಷಭ್‌ ಠಾಕೂರ್‌ ಅವರು ಕೂಡ ವಸ್ತ್ರಸಂಹಿತೆ ಕುರಿತು ಮಾತನಾಡಿದ್ದಾರೆ. “ದೇವಾಲಯದ ನಿರ್ವಹಣಾ ಸಮಿತಿಯು ಪಾಶ್ಚಿಮಾತ್ಯ ಉಡುಪುಗಳನ್ನು ನಿರ್ಬಂಧಿಸಿದೆ” ಎಂದು ಹೇಳಿದ್ದಾರೆ.

ನಿರ್ಧಾರ ಸ್ವಾಗತಿಸಿದ ಭಕ್ತರು

ಕಾಳಿಕಾ ದೇವಾಲಯದಲ್ಲಿ ಪಾಶ್ಚಿಮಾತ್ಯ ಹಾಗೂ ತುಂಡುಡುಗೆಯನ್ನು ನಿಷೇಧಿಸಿರುವ ದೇವಾಲಯ ಆಡಳಿತ ಮಂಡಳಿ ತೀರ್ಮಾನವನ್ನು ಭಕ್ತರು ಸ್ವಾಗತಿಸಿದ್ದಾರೆ. ದೇಶ-ವಿದೇಶಗಳಿಂದ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗೆ ದೇವಾಲಯಕ್ಕೂ ತುಂಡುಡುಗೆ ಧರಿಸಿ ಬರುವವರ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ, ದೇವಾಲಯವು ವಸ್ತ್ರಸಂಹಿತೆ ಜಾರಿಗೊಳಿಸಿರುವುದು ಉತ್ತಮ ನಿರ್ಧಾರವಾಗಿದೆ. ಭಕ್ತರು ಸಾಂಪ್ರದಾಯಿಕ ದಿರಸು ಧರಿಸಿ ದೇವಾಲಯಕ್ಕೆ ಆಗಮಿಸುವುದು ಉತ್ತಮ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 16 ದೇಗುಲಗಳಲ್ಲಿ ವಸ್ತ್ರಸಂಹಿತೆ; ಹರಿದ ಜೀನ್ಸ್‌, ಶಾರ್ಟ್ಸ್‌ ತೊಟ್ಟು ಹೋದರೆ ಹೆಣ್ಣುಮಕ್ಕಳಿಗಿಲ್ಲ ಪ್ರವೇಶ

Continue Reading
Advertisement
NEET-UG 2024
ದೇಶ6 mins ago

NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

KEA exams time table
ಪ್ರಮುಖ ಸುದ್ದಿ25 mins ago

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

instagram love story
ಕ್ರೈಂ50 mins ago

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Yogi Adityanath
ದೇಶ60 mins ago

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

India's National Pension System
ಮನಿ-ಗೈಡ್1 hour ago

National Pension System: ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಎನ್‌ಪಿಎಸ್ ಯೋಜನೆ ಸೂಕ್ತ

Karnataka Rain
ಮಳೆ1 hour ago

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

wilma rudolph ರಾಜಮಾರ್ಗ ಅಂಕಣ
ಅಂಕಣ2 hours ago

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

Things to Avoid Cleaning with Lemon
ಲೈಫ್‌ಸ್ಟೈಲ್2 hours ago

Things to Avoid Cleaning with Lemon: ಇವುಗಳನ್ನು ಸ್ವಚ್ಛ ಮಾಡಲು ಯಾವ ಕಾರಣಕ್ಕೂ ನಿಂಬೆಹಣ್ಣನ್ನು ಬಳಸಲೇಬೇಡಿ!

LIC New Jeevan Shanti Plan
ಮನಿ-ಗೈಡ್2 hours ago

LIC New Jeevan Shanti Plan: ಒಮ್ಮೆ ಪಾವತಿಸಿದರೆ ಸಾಕು; ಜೀವನ ಪರ್ಯಂತ ಪಿಂಚಣಿ!

Vastu Tips
ಧಾರ್ಮಿಕ3 hours ago

Vastu Tips: ಗಲ್ಲಾ ಪೆಟ್ಟಿಗೆಯಲ್ಲಿ ಇಂಥ ವಸ್ತುಗಳನ್ನು ಇಟ್ಟರೆ ಲಾಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ19 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ20 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌