Wall Clock Vastu : ಮನೆಯಲ್ಲಿ ಗಡಿಯಾರ ಯಾವ ದಿಕ್ಕಿನಲ್ಲಿಟ್ಟರೆ ಶುಭ, ಯಾವ ದಿಕ್ಕಿನಲ್ಲಿದ್ದರೆ ಅಶುಭ? Vistara News
Connect with us

ಧಾರ್ಮಿಕ

Wall Clock Vastu : ಮನೆಯಲ್ಲಿ ಗಡಿಯಾರ ಯಾವ ದಿಕ್ಕಿನಲ್ಲಿಟ್ಟರೆ ಶುಭ, ಯಾವ ದಿಕ್ಕಿನಲ್ಲಿದ್ದರೆ ಅಶುಭ?

ಸಮಯ ನೋಡಲು ಮನೆಗೆ ಗಡಿಯಾರ ಬೇಕೇ ಬೇಕು. ವಾಸ್ತು ಶಾಸ್ತ್ರದ ಪ್ರಕಾರ (Wall Clock Vastu) ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿನಲ್ಲಿಟ್ಟರೆ ಶುಭ, ಯಾವ ದಿಕ್ಕಿನಲ್ಲಿದ್ದರೆ ಅಶುಭ ಎಂಬುದನ್ನು ನೋಡೋಣ.

VISTARANEWS.COM


on

Wall Clock Vastu
Koo

ಸಮಯವನ್ನು ತಿಳಿಸುವ ಗಡಿಯಾರಕ್ಕೆ ಎಲ್ಲರ ಮನೆಯಲ್ಲೂ ಒಂದು ಜಾಗವಿರುತ್ತದೆ. ಮನೆಯ ಅಂದ ಮತ್ತು ಅನುಕೂಲತೆಗೆ ತಕ್ಕಂತೆ ಎಲ್ಲಿ ಬೇಕೋ ಅಲ್ಲಿ ಗಡಿಯಾರವನ್ನು ಇರಿಸಲಾಗುತ್ತದೆ. ಹೀಗೆ ಗಡಿಯಾರವನ್ನು ಗೋಡೆಗೆ ನೇತು ಹಾಕುವ ಅಥವಾ ಟೇಬಲ್‌ ಮೇಲೆ ಇಡುವ ಸಂದರ್ಭದಲ್ಲಿ ಬಹುತೇಕರು ದಿಕ್ಕಿನ ಬಗ್ಗೆ ಯೋಚಿಸುವುದಿಲ್ಲ. ಆದರೆ ತಪ್ಪು ದಿಕ್ಕಿನಲ್ಲಿ ಗಡಿಯಾರವನ್ನು ಇಡುವುದರಿಂದ ವಾಸ್ತು ದೋಷ ಉಂಟಾಗುತ್ತದೆ ಎಂದು ವಾಸ್ತು ಶಾಸ್ತ್ರ (Wall Clock Vastu) ಹೇಳುತ್ತದೆ.

ವಾಸ್ತು ಪ್ರಕಾರ ಮನೆಯಲ್ಲಿ ಗಡಿಯಾರವನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಸಕಾರಾತ್ಮಕ ಶಕ್ತಿಯ ಹರಿವು ಹೆಚ್ಚುತ್ತದೆ. ಅಷ್ಟೇ ಅಲ್ಲದೆ ಮನೆಯಲ್ಲಿ ಸುಖ- ಸೌಭಾಗ್ಯ ಮತ್ತು ಸಮೃದ್ಧಿ ನೆಲೆಸುತ್ತದೆ. ಚಿಕ್ಕ ಪುಟ್ಟ ವಾಸ್ತು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಮನೆಯ ವಸ್ತುಗಳು ವಾಸ್ತು ಪ್ರಕಾರವೇ ಇರುವಂತೆ ನೋಡಿಕೊಂಡರೆ ಮನೆಯಲ್ಲಿ ನೆಮ್ಮದಿ ನೆಲೆಸುತ್ತದೆ. ಹಾಗಾಗಿ ವಾಸ್ತು ಪ್ರಕಾರ ಗಡಿಯಾರವನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಶುಭ ಎಂಬುದನ್ನು ತಿಳಿಯೋಣ.

ಈ ದಿಕ್ಕಿನಲ್ಲಿ ಗಡಿಯಾರ ಬೇಡ!

ವಾಸ್ತು ಶಾಸ್ತ್ರದ ಪ್ರಕಾರ ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ಇಡುವುದರಿಂದ ಉತ್ತಮ ಪರಿಣಾಮಗಳು ಉಂಟಾಗುತ್ತವೆಯೋ ಹಾಗೆಯೇ ತಪ್ಪು ದಿಕ್ಕಿನಲ್ಲಿ ಇಟ್ಟಾಗ ಅದರ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದ ಅನುಸಾರ ಮನೆಯ ದಕ್ಷಿಣ ದಿಕ್ಕಿನ ಗೋಡೆ ಅಥವಾ ಮೇಜಿನ ಮೇಲೆ ಗಡಿಯಾರವನ್ನು ಇಡುವುದರಿಂದ ಮನೆಯ ಮುಖ್ಯಸ್ಥರ ಸ್ವಾಸ್ಥ್ಯ ಹದಗೆಡುತ್ತದೆ. ಜೊತೆಗೆ ಬಾಗಿಲಿನ ಮೇಲ್ಬಾಗದ ಗೋಡೆಯಲ್ಲಿ ಸಹ ಗಡಿಯಾರವನ್ನು ಇಡುವುದು ಅಶುಭವೆಂದೇ ಹೇಳಲಾಗುತ್ತದೆ. ಇದರಿಂದ ಮನೆಯಲ್ಲಿ ಮಾನಸಿಕ ಕಿರಿಕಿರಿ ಹೆಚ್ಚುತ್ತದೆ.

ಸಮಯ ತೋರಿಸದೇ ಹಾಳಾಗಿರುವ ಗಡಿಯಾರವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು. ಇದರಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತವೆ. ಸರಿ ಪಡಿಸಬಹುದಾದ ಗಡಿಯಾರವಾಗಿದ್ದರೆ ಬೇಗ ಸರಿ ಮಾಡಿ ಇಟ್ಟುಕೊಳ್ಳಬೇಕು. ಹಾಗಾಗಿ ಹಾಳಾಗಿರುವ, ಸಮಯವನ್ನು ಸರಿಯಾಗಿ ತೋರಿಸದ ಮತ್ತು ಒಡೆದಿರುವ ಗಡಿಯಾರಗಳಿಂದ ವಾಸ್ತು ದೋಷ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಗಾಢ ಬಣ್ಣಗಳಾದ ಕಪ್ಪು, ನೀಲಿ ಬಣ್ಣದ ಗಡಿಯಾರಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು. ಈ ಬಣ್ಣಗಳು ನಕಾರಾತ್ಮಕತೆಯನ್ನು ಹೆಚ್ಚಿಸುವ ಕಾರ್ಯ ಮಾಡುತ್ತವೆ.

ಗಡಿಯಾರ ಹೀಗಿದ್ದರೆ ಶುಭ

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿ ಗಡಿಯಾರ ಇಡುವುದು ಶುಭ. ಈ ದಿಕ್ಕುಗಳಲ್ಲಿ ಸಾತ್ವಿಕ ಶಕ್ತಿಯ ಹರಿವು ಹೆಚ್ಚಾಗಿ ಇರುತ್ತದೆ. ಹಾಗಾಗಿ ಮನೆಯಲ್ಲಿ ಪೂರ್ವ ಮತ್ತು ಉತ್ತರ ದಿಕ್ಕಿನಲ್ಲಿಯೇ ಗಡಿಯಾರವನ್ನು ಇಟ್ಟುಕೊಳ್ಳಬೇಕು. ಗೋಡೆಗೆ ಪೆಂಡೂಲಮ್ ಗಡಿಯಾರವನ್ನು ಹಾಕುವುದು ಇನ್ನೂ ಉತ್ತಮ ಎಂದು ವಾಸ್ತು ಶಾಸ್ತ್ರ ತಿಳಿಸುತ್ತದೆ.

ಮನೆಯಲ್ಲಿ ಗಡಿಯಾರ ಇಡುವ ದಿಕ್ಕಿನ ಬಗ್ಗೆ ಗಮನಹರಿಸಿದಂತೆಯೇ ಗಡಿಯಾರದ ಆಕಾರದ ಬಗ್ಗೆಯೂ ವಿಶೇಷ ಗಮನ ನೀಡಬೇಕಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ವೃತ್ತಾಕಾರ, ಚೌಕದ ಆಕಾರ ಮತ್ತು ಮೊಟ್ಟೆ ಆಕಾರದ ಗಡಿಯಾರಗಳು ಶುಭ. ಜೊತೆಗೆ ಎಂಟು ಅಥವಾ ಆರು ಮೂಲೆಯ ಗಡಿಯಾರ ಸಹ ಶುಭವೆಂದೇ ಹೇಳಲಾಗುತ್ತದೆ. ಇದರಿಂದ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ಮೊನಚಾದ ಮೂಲೆಗಳನ್ನು ಹೊಂದಿರುವ ಗಡಿಯಾರ ಮನೆಗೆ ಒಳ್ಳೆಯದಲ್ಲ.

ಇನ್ನೊಂದು ಮುಖ್ಯ ಅಂಶವೆಂದರೆ ಗೋಡೆ ಗಡಿಯಾರದ ಸಮಯವು ನೈಜ ಸಮಯಕ್ಕಿಂತ ಹಿಂದಿರಬಾರದು. ಮುಂದಿದ್ದರೆ ಒಳ್ಳೆಯದು. ವಾಸ್ತು ಶಾಸ್ತ್ರದಲ್ಲಿ ತಿಳಿಸಿದ ಈ ರೀತಿಯ ಚಿಕ್ಕ, ಪುಟ್ಟ ಬದಲಾವಣೆಗಳು ಮನೆಯ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗುತ್ತದೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದನ್ನೂ ಓದಿ: Astro Tips : ಎಂದು ಉಗುರು ಕತ್ತರಿಸಿದರೆ ಶುಭ? ಯಾವಾಗ ಕತ್ತರಿಸಿದರೆ ಧನ ಲಾಭ?

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Soraba News: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿಯಲ್ಲಿ 18,56,210 ರೂ. ಕಾಣಿಕೆ ಸಂಗ್ರಹ

Soraba News: ಕೇವಲ ಎರಡು ತಿಂಗಳಿನಲ್ಲಿ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಹಣ 41,23,920 ರೂಪಾಯಿ ಸಂಗ್ರಹವಾಗಿದೆ.

VISTARANEWS.COM


on

Edited by

hundi of Chandragutti soraba
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ನಡೆದ ಹುಂಡಿ ಎಣಿಕೆ.
Koo

ಸೊರಬ: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ (Sri Renukamba Temple) ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು.

ಜಾತ್ರೆಯಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯವನ್ನು ಚಂದ್ರಗುತ್ತಿ ನಾಡ ಕಚೇರಿ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸಮ್ಮುಖದಲ್ಲಿ ನಡೆಸಲಾಯಿತು.

ದೇವಸ್ಥಾನದ ಹುಂಡಿಯಲ್ಲಿ 18,56,210 ರೂ. ಕಾಣಿಕೆ ಸಂಗ್ರಹವಾಗಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 22,67,710 ರೂ. ಕಾಣಿಕೆ ಸಂಗ್ರಹವಾಗಿತ್ತು. ಕೇವಲ ಎರಡು ತಿಂಗಳಿನಲ್ಲಿ ದೇವಸ್ಥಾನದಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಹಣ 41,23,920 ರೂ. ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.

ಇದನ್ನೂ ಓದಿ: Anil Shetty: ಬಿಜೆಪಿಯ ಅನಿಲ್‌ ಶೆಟ್ಟಿಗೆ ಕುಕ್ಕರ್‌ ʻಪ್ರೆಶರ್‌ʼ; ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು, ಮುಜರಾಯಿ ಇಲಾಖೆಯ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ, ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಬೇಕಾಗುವ ಮೂಲ ಸೌಕರ್ಯಗಳು ಒದಗಿಸುವಲ್ಲಿ ಸರ್ಕಾರವು ಏಕೆ ಮುಂದಾಗುತ್ತಿಲ್ಲ ಎಂಬುದು ರೇಣುಕಾಂಬ ದೇವಿಯ ಭಕ್ತರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Small savings schemes : ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ 0.70% ತನಕ ಏರಿಕೆ

Continue Reading

ಉತ್ತರ ಕನ್ನಡ

Karwar News: ವಿಜೃಂಭಣೆಯ ಚೆನ್ನಪಟ್ಟಣ ಹನುಮಂತ ದೇವರ ಬ್ರಹ್ಮ ರಥೋತ್ಸವ

Karwar News: ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಧಾರ್ಮಿಕ ಪೂಜಾ ವಿಧಿವಿಧಾನಗಳು ಮಾ.23 ರಿಂದ ಆರಂಭಗೊಂಡಿದ್ದು, ಇಂದು ಕೊನೆಗೊಳ್ಳಲಿದೆ. ಶುಕ್ರವಾರ ಸೂರ್ಯೋದಯದಿಂದಲೇ ಸಾವಿರಾರು ಭಕ್ತರು ರಥ ಕಾಣಿಕೆಗಾಗಿ ಸರತಿ ಸಾಲಿನಲ್ಲಿ ನಿಂತು ಫಲಪುಷ್ಪವನ್ನು ಶ್ರೀದೇವರಿಗೆ ಅರ್ಪಿಸಿದರು.

VISTARANEWS.COM


on

Edited by

Chennapattana Hanumantha Bhatkal karwar
ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಬ್ರಹ್ಮ ರಥೋತ್ಸವ ನಡೆಯಿತು.
Koo

ಕಾರವಾರ: ಭಟ್ಕಳ ಪಟ್ಟಣದ ಗ್ರಾಮ ದೇವರಾದ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಬ್ರಹ್ಮ ರಥೋತ್ಸವವು ಸಾವಿರಾರು ಭಕ್ತಾಧಿಗಳ ಜಯಘೋಷಗಳ ನಡುವೆ ವೈಭವಯುತವಾಗಿ ಗುರುವಾರ (ಮಾ.30) ರಾಮ ನವಮಿಯಂದು ಸಂಪನ್ನಗೊಂಡಿತು.

ಮಾ.23 ರಿಂದ ಆರಂಭಗೊಂಡ ಧಾರ್ಮಿಕ ಪೂಜಾ ವಿಧಿವಿಧಾನಗಳು ಮಾ.31 ರವರೆಗೆ ನಡೆಯಲಿದೆ. ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಸೂರ್ಯೋದಯದಿಂದಲೇ ಸಾವಿರಾರು ಭಕ್ತರು ರಥ ಕಾಣಿಕೆಗಾಗಿ ಸರತಿ ಸಾಲಿನಲ್ಲಿ ನಿಂತು ಫಲಪುಷ್ಪವನ್ನು ಶ್ರೀದೇವರಿಗೆ ಅರ್ಪಿಸಿದರು.

ಇದನ್ನೂ ಓದಿ: ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ತಾಲೂಕಿನ ಗ್ರಾಮೀಣ ಭಾಗಗಳಿಂದ ಹಾಗೂ ಹೊರ ಊರುಗಳಿಂದ ಆಗಮಿಸಿದ ಸಹಸ್ರಾರು ಜನರು ಪೂಜೆ ಪುನಸ್ಕಾರದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಜೆ 5.35ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ವಾಡಿಕೆಯಂತೆ ಶಿರ್ಕಿನ ಅನ್ಸಾರಿ, ಶಾಬಂದ್ರಿ ಮನೆ ಮತ್ತು ಜೈನ ಮನೆತನಕ್ಕೆ ಆಮಂತ್ರಣ ನೀಡಲಾಯಿತು. ಮಹಾರಥವನ್ನು ದೇವಸ್ಥಾನದ ಎದುರಿನ ಹೂವಿನ ಪೇಟೆಯಿಂದ ಮಾರಿಗುಡಿಯ ಮೂಲಕ ಜನತಾ ಬ್ಯಾಂಕಿನ ಎದುರಿನಿಂದ ಸಾವಿರಾರು ಭಕ್ತಾದಿಗಳ ಜಯ ಘೋಷದೊಂದಿಗೆ ರಥವನ್ನು ಎಳೆಯಲಾಯಿತು.

ಇದನ್ನೂ ಓದಿ: New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ರಥೋತ್ಸವದ ಸಂದರ್ಭದಲ್ಲಿ 20 ಸಾವಿಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಂಡಿದ್ದರು. ಈ ಬಾರಿ ಡೊಳ್ಳು ಕುಣಿತ, ರೇಡಿಯೋ ಕಲಾವಿದ ಉದಯಪ್ರಭು ತಂಡದಿಂದ ಭಜನೆ, ವಾದ್ಯಗೋಷ್ಠಿ ಜನಮನ ಸೆಳೆದವು. ಆಡಳಿತಾಧಿಕಾರಿ ಮಮತಾ ದೇವಿ ಎಸ್, ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕರಾದ ಮಂಕಾಳು ವೈದ್ಯ, ಜೆ.ಡಿ ನಾಯ್ಕ, ಬೆಂಗಳೂರು ಕಾಸ್ಕಾರ್ಡ್ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಈಶ್ವರ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಠ್ಠಲ್ ನಾಯ್ಕ ಮತ್ತಿತರ ಗಣ್ಯರು ದೇವರಿಗೆ ಪೂಜೆ ಸಲ್ಲಿಸಿದರು.

ದೇವಸ್ಥಾನದ ಶ್ರೀಧರ ಮೊಗೇರ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯ‌ ಕುಮಾರ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಉಪ ವಿಭಾಗದ ಡಿವೈಎಸ್‌ಪಿ ಶ್ರೀಕಾಂತ ನೇತೃತ್ವದಲ್ಲಿ ಸಿಪಿಐ, ಪಿಎಸ್‌ಐ ಸುರಕ್ಷತೆಯನ್ನು ಒದಗಿಸಿದ್ದು ಬ್ರಹ್ಮ ರಥೋತ್ಸವವು ಶಾಂತಿಯುತವಾಗಿ ಜರುಗಿತು.

ಇದನ್ನೂ ಓದಿ: Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Continue Reading

ಉತ್ತರ ಕನ್ನಡ

Sirsi News: ಏ.6 ರಂದು ಮಂಜುಗುಣಿಯ ಪುರಾಣ ಪ್ರಸಿದ್ಧ ವೆಂಕಟರಮಣ ದೇವರ ರಥೋತ್ಸವ

Sirsi News: ಮಂಜುಗುಣಿಯ ವೆಂಕಟರಮಣ ದೇವರ ರಥೋತ್ಸವ ಏ.6 ರಂದು ನಡೆಯಲಿದೆ. ಅಂದು ರಾತ್ರಿ ರಥಾವರೋಹಣ, ವಸಂತ ಪೂಜೆ ನಡೆಯಲಿದೆ.

VISTARANEWS.COM


on

Edited by

Manjuguni Venkataramana sirsi
ಮಂಜುಗುಣಿಯ ವೆಂಕಟರಮಣ ದೇವರು.
Koo

ಶಿರಸಿ: ತಾಲೂಕಿನ ಮಂಜುಗುಣಿಯ (Manjuguni) ಪುರಾಣ ಪ್ರಸಿದ್ಧ ವೆಂಕಟರಮಣ ದೇವರ ರಥೋತ್ಸವ ಏ.6ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏ.1 ರಂದು ಬೆಳಗ್ಗೆ ಧ್ವಜ ಪೂಜೆ, ಧ್ವಜಾರೋಹಣ, ಧ್ವಜ ಬಲಿ, ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಸಂಜೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ರತ್ನ ಮಂಟಪೋತ್ಸವ, ಏ.2 ರಂದು ಬೆಳಗ್ಗೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಮಧ್ಯಾಹ್ನ ಸೂರ್ಯಪ್ರಭಾ ಉತ್ಸವ, ಸಂಜೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಗಜ ಯಂತ್ರೋತ್ಸವ, ಏ.3 ರಂದು ಬೆಳಗ್ಗೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಮಧ್ಯಾಹ್ನ ಸೂರ್ಯಪ್ರಭಾ ಉತ್ಸವ, ಸಂಜೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಸಿಂಹ ಯಂತ್ರೋತ್ಸವ, ಏ.4 ರಂದು ಬೆಳಗ್ಗೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಮಧ್ಯಾಹ್ನ ಧನಲಕ್ಷ್ಮೀ ಪೂಜೆ, ಕಾಣಿಕೆ ಡಬ್ಬಿ ಪೂಜೆ, ಮುಸಲ ಪೂಜೆ ಚೂರ್ಣಿಕರಣ, ಸಂಜೆ ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ಶೇಷ ಯಂತ್ರೋತ್ಸವ ನಡೆಯಲಿದೆ.

ಇದನ್ನೂ ಓದಿ: K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

ಏ.5 ರಂದು ಬೆಳಗ್ಗೆ ದೇವರ ವರ್ಧಂತಿ ಉತ್ಸವ, ಹಂಡೆ ಪೂಜೆ, ಪಾಕಸಿದ್ಧಿ, ಅನ್ನ ಸಂಗ್ರಹ, ಕ್ಷೇತ್ರ ಪ್ರಾಕಾರ ಬಲಿ, ಭೂತರಾಜ ಬಲಿ, ವರ್ಧಂತಿ, ಮಹಾ ಸಂತರ್ಪಣೆ, ಮಧ್ಯಾಹ್ನ ಸೂರ್ಯಪ್ರಭಾ ಉತ್ಸವ, ರಾತ್ರಿ ಕ್ಷೇತ್ರ ಪ್ರಾಕಾರ ಬಲಿ, ಧ್ವಜ ಪ್ರಾಥನೆ, ಮಹಾ ದಂಡ ಬಲಿ, ವಿಶೇಷ ಭೂತರಾಜ ಬಲಿ, ಗರುಡ ಯಂತ್ರೋತ್ಸವ, ಏ.7 ರಂದು ಮಧ್ಯಾಹ್ನ ವಸಂತ ಪೂಜಾ ಸಂವಾದ, ಕಲಹ, ಅಂಕುರ ಸಮರ್ಪಣ ಪೂಜಾ ಪ್ರಸಾದ ವಿತರಣೆ, ಅವಭೃತ ತೀರ್ಥ ಸ್ನಾನ, ಪೂರ್ಣಾಹುತಿ, ಧ್ವಜಾರೋಹಣ, ಏ.19 ರಂದು ಅಮಾವಾಸ್ಯೆಯ ದಿನ ಸಂಪ್ರೋಕ್ಷಣ ಇರುತ್ತದೆ.

ಇದನ್ನೂ ಓದಿ: ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

ರಥೋತ್ಸವ: ಏ.6 ರಂದು ಶ್ರೀ ದೇವರ ರಥೋತ್ಸವವಿದ್ದು, ಪ್ರಾತಃಕಾಲ ಮಹಾರಥ ಶುದ್ಧಿ, ರಥ ಬಲಿ, ರಥಾಗಮನ, ರಥಾರೋಹಣ, ಪೂಜಾ ಪ್ರಾರ್ಥನ ರಥನಯನ(ರಥ ಎಳೆಯುವುದು), ನಂತರ ಭಕ್ತರಿಗೆ ಶ್ರೀ ದೇವರ ದರ್ಶನವಿರುತ್ತದೆ. ಅಂದು ರಾತ್ರಿ 9 ಗಂಟೆಗೆ ಮರ್ಯಾದೆ ಕಾಯಿ ಹಂಚುವುದು, ರಥದ ಗಾಲಿಗೆ ಕಾಯಿ ಒಡೆಯುವುದು, ರಥಾವರೋಹಣ, ವಸಂತ ಪೂಜೆ ನಡೆಯಲಿದೆ.

ಇದನ್ನೂ ಓದಿ: Chenab Bridge | ಐಫೆಲ್‌ ಟವರ್‌ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ

Continue Reading

ಧಾರ್ಮಿಕ

Prerane : ಪಲಾಯನ ಪರಿಹಾರವಲ್ಲ!

ಕೆಲವರು ಮೋಹದ ಅಂಧಕಾರವನ್ನು ಭೇದಿಸಲು ಪ್ರಯತ್ನಮಾಡುವುದಿಲ್ಲ. ಮೋಹಕ್ಕೆ ವಿರುದ್ಧವಾಗಿ ಅಮೋಹ ಸಾಧಿಸಲು ತೊಡಗುತ್ತಾರೆ. ಇದರಿಂದ ಯಾವ ಪ್ರಯೋಜನವೂ ಇಲ್ಲ ಎನ್ನುತ್ತಾರೆ ಸ್ವಾಮಿ ಶ್ರೀ ಕೈವಲ್ಯಾನಂದ ಸರಸ್ವತೀ. ಪಲಾಯನ ವಾದದ ಕುರಿತ ಅವರ ಲೇಖನ ಇಂದಿನ ಪ್ರೇರಣೆ (Prerane) ಅಂಕಣದಲ್ಲಿ.

VISTARANEWS.COM


on

Edited by

prerane morning spiritual thoughts in kannada about moha
Koo

ಶ್ರೀ ಕೈವಲ್ಯಾನಂದ ಸರಸ್ವತೀ
ಇತ್ತೀಚಿನ ದಿನಗಳಲ್ಲಿ ಹಲವಾರು ಧಾರ್ಮಿಕ ಸಂಘ- ಸಸ್ಥೆಗಳು ತಲೆಎತ್ತಿವೆ. ಅವುಗಳ ನಾಯಕರು, ಸ್ವಯಂಘೋಷಿತ ಧಾರ್ಮಿಕ ಮುಖಂಡರು, ಆಧ್ಯಾತ್ಮಿಕ ದಾರಿಯಲ್ಲಿ ಮೋಹ ಉಂಟು ಮಾಡುವ ವಸ್ತುಗಳಿಂದ ದೂರಹೋಗುವುದೇ ಪರಿಹಾರವೆಂದು ಹೇಳುತ್ತಾರೆ. ಮೋಹದ ವ್ಯಕ್ತಿಯಿಂದ ಪಲಾಯನ ಮಾಡುವುದೇ ಪರಿಹಾರವೆಂದು ಹೇಳುತ್ತಾರೆ. ನೀವು ಮನೆಯನ್ನು ಬಿಡಿ, ನಮ್ಮ ಸಂಸ್ಥೆಯಲ್ಲಿ ಬಂದಿರಿ- ಎನ್ನುತ್ತಾರೆ. ಇವರುಗಳಿಗೆ ಯಾವ ರೀತಿಯ ಪ್ರಮಾಣ ಗ್ರಂಥವಿಲ್ಲ. ಹೋಗಲಿ, ಹೇಳುವುದಾದರೂ ಯುಕ್ತಿ ಯುಕ್ತವೇ? ಎಂದರೆ ಅದೂ ಅಲ್ಲ. ಅನುಭವ ಸಮ್ಮತವೇ ಎಂದರೆ ಅದೂ ಇಲ್ಲ. ಮುಮುಕ್ಷುಗಳು ಇಂತಹವರಿಂದ ದೂರವಿರಬೇಕು. ಓಡಿಹೋಗುವುದರಿಂದ, ಇಲ್ಲಿ ಸಂಸಾರವೂ ಇಲ್ಲದೆ, ಉಭಯ ಭ್ರಷ್ಟರಾಗುವುದೊಂದೇ ದಾರಿ. ತಸ್ಮಾತ್ ಜಾಗ್ರತ, ಜಾಗ್ರತ.

ಕೆಲವರು ಮೋಹದ ಅಂಧಕಾರವನ್ನು ಭೇದಿಸಲು ಪ್ರಯತ್ನಮಾಡುವುದಿಲ್ಲ. ಮೋಹಕ್ಕೆ ವಿರುದ್ಧವಾಗಿ ಅಮೋಹ ಸಾಧಿಸಲು ತೊಡಗುತ್ತಾರೆ. ಮನೆಯಲ್ಲಿ ಮೋಹವಿದೆಯೆಂದು ಮನೆಯನ್ನು ಬಿಟ್ಟುಬಿಡುತ್ತಾರೆ. ಕಾಡಿಗೆ ಹೋಗುತ್ತಾರೆ. ಆದರೆ ಮೋಹವೆಂಬುದು ಮನೆಯಲ್ಲಿತ್ತೊ ಅಥವಾ ಮನೆ ಬಿಟ್ಟು ಹೋದವನಲ್ಲಿ ಇತ್ತೊ? ಒಂದು ವೇಳೆ ಮನೆಯ ಮೇಲೆ ಇದ್ದಿದ್ದೇ ಆದರೆ, ಮನೆ ಬಿಟ್ಟಾಗ ಮೋಹದಿಂದ ಹೊರಹೋದನೆಂದು ಹೇಳಬಹುದು. ಆದರೆ ಮನೆಗೆ ನಿಮ್ಮ ಬಗ್ಗೆ ಯಾವ ಮೋಹವೂ ಇಲ್ಲ. ಮನೆಯ ಬಗ್ಗೆ ನಿಮ್ಮಲ್ಲಿ ಮೋಹವಿದೆ. ಆದ್ದರಿಂದ ನೀವೆಲ್ಲಿ ಹೋದರೂ ಮೋಹ ಅಲ್ಲೂ ಸೇರಿಕೊಳ್ಳುತ್ತದೆ.

prerane morning spiritual thoughts in kannada

ಅದು ನಿಮ್ಮ ಜತೆಯಲ್ಲೇ ಬರುತ್ತದೆ. ಅದು ನಿಮ್ಮ ನೆರಳು. ಮತ್ತೇ ಆಶ್ರಮದಲ್ಲಿ ʻನನ್ನ ಆಶ್ರಮ’ ಎಂಬ ಮೋಹವುಂಟಾಗುತ್ತದೆ. ಮನೆಗೆ ಅಂಟಿಕೊಂಡಂತೆ ಆಶ್ರಮಕ್ಕೆ ಅಂಟಿಕೊಳ್ಳುತ್ತೇವೆ. ಹೆಂಡತಿ ಮಕ್ಕಳನ್ನು ಬಿಟ್ಟುಹೋದಲ್ಲಿ, ಅವರ ಸ್ಥಾನದಲ್ಲಿ ಗುರು-ಶಿಷ್ಯರು ಬರುತ್ತಾರೆ. ಸಂಸಾರದಲ್ಲಿರುವವರಿಗೆ ಅಂಟಿಕೊಂಡಂತೆ ಇವರಿಗೂ ಅಂಟಿಕೊಳ್ಳುತ್ತಾರೆ. ಅರಮನೆಗೆ ಅಂಟಿಕೊಂಡಂತೆ ಈಗ ಒಂದು ಗುಡಿಸಲಿಗೆ ಅಂಟಿಕೊಳ್ಳಬಹುದು.

ಬೆಲೆಬಾಳುವ ವಸ್ತುಗಳನ್ನು ಬಿಟ್ಟು ಹುಲಿ ಚರ್ಮವನ್ನು ಧರಿಸಬಹುದು. ಆದರೆ ರಾಜನ ವಸ್ತ್ರಗಳಂತೆ ಹುಲಿ ಚರ್ಮವೂ ಬಂಧನವೇ. ನಗ್ನವಾಗಿ ತಿರುಗಿದರೂ ನಗ್ನತ್ವಕ್ಕೆ ಮೋಹ ಬರುವುದು. ನನ್ನ ಮನೆ, ನನ್ನ ಆಶ್ರಮ; ನನ್ನ ಮಗ, ನನ್ನ ಶಿಷ್ಯ – ಇವುಗಳಲ್ಲಿ ವ್ಯತ್ಯಾಸವೇನು?ಮೋಹವು ಹೊಸ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತದೆ. ಮೋಹವು ಹೊಸ ಗೃಹಸ್ಥೆಯಾಗಿ, ಗೃಹಸ್ಥನಾಗಿ ಪುನಃ ವಾಸಮಾಡುತ್ತದೆ. ಮನೆ ಎಂಬುದರ ಅರ್ಥ ಕಟ್ಟಡವಲ್ಲ. ಮನೆ ಎಂಬುದರ ಅರ್ಥ ಅದರಲ್ಲಿ ವಾಸಮಾಡುವವರ ಮೋಹ – ಯಾರು ಮನೆಯನ್ನು ಮಾಡಿಕೊಂಡಿರುತ್ತಾರೋ, ಅವರ ಮೋಹದಿಂದ ಮನೆ ಎನಿಸಿಕೊಳ್ಳುತ್ತದೆ. ಅಂತಹ ವ್ಯಕ್ತಿ ಎಲ್ಲಾದರೂ ಮನೆಯನ್ನು ಮಾಡಿಕೊಳ್ಳುತ್ತಾನೆ. ಒಂದು ಮರದ ಕೆಳಗೆ ಕೂತರೂ ಅದು ʻʻನನ್ನ’’ದಾಗುವುದು.

ನನಗಿಂತಲೂ ಭಿನ್ನವಾದ ಇತರ ವಸ್ತುಗಳು ಸರ್ವತ್ರ ಇವೆ. ಈ ಪ್ರಪಂಚದಲ್ಲಿ ಇತರ ವಸ್ತುಗಳನ್ನು ತಪ್ಪಿಸಿಕೊಂಡು ಓಡಿಹೋಗಲು ಸಾಧ್ಯವಿಲ್ಲ. ಏಕೆಂದರೆ ಪ್ರಪಂಚವೇ ಇತರ ವಸ್ತುಗಳು. ಹಾಗೂ ಎಲ್ಲಿ ಹೋದರೂ ಪ್ರಪಂಚ ನಿನ್ನ ಜತೆಯಲ್ಲಿಯೇ ಇರುತ್ತದೆ. ಪ್ರಪಂಚದಿಂದ ಆಚೆಗೆ ನೀನು ಹೋಗಲಾಗದು. ಎಲ್ಲಿ ಹೋದರೂ ʻʻಇತರೆ’’ ಎನ್ನುವುದು ಅಲ್ಲಿ ಇರುವುದು. ಆದ್ದರಿಂದ ʻʻಇತರೆ’’ ಎಂಬುದರಿಂದ ಓಡಿಹೋಗಲಾರದು. ‘ಇತರೆ’ ಎಂಬುದು ಹೊಸರೂಪವನ್ನು ಪಡೆಯಬಹುದು. ಆದರೆ ಅಲ್ಲಿ ತಪ್ಪದೆ ಇರುತ್ತದೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ದೃಶ್ಯವನ್ನು ಬದಲಾಯಿಸುವುದರಿಂದ ಮೋಹದಿಂದ ಮುಕ್ತಿಯಾಗದು. ಎಲ್ಲಿ ಹೋದರೂ ʻಇತರೆ’ ಎಂಬುದು ದೃಶ್ಯರೂಪದಲ್ಲಿರುತ್ತದೆ ಎಂಬ ಸತ್ಯವನ್ನು ಬದಲಾಯಿಸಲಾಗದು. ಈ ಸತ್ಯದ ಇನ್ನೊಂದು ಮುಖವೇನೆಂದರೆ ಎಲ್ಲಿ ಹೋದರೂ ʻಅಹಂ’ ಎಂಬುದು ಇದ್ದೇ ಇರುತ್ತದೆ. ನೀನು ʻʻಅಹಂ’’ ರೂಪದಲ್ಲಿ ಇರುವವರೆಗೂ ʻʻಇತರೆ’’ ಎಂಬುದು ಇದ್ದೇ ಇರುತ್ತದೆ. ಕಣ್ಣುಮುಚ್ಚಿಕೊಂಡರು ʻʻಇತರೆ’’ ಎಂಬುದು ಅದೃಶ್ಯವಾಗದು. ʻʻಇತರೆ’’ ಎಂಬುದು ಮುಚ್ಚಿದ ಕಣ್ಣಿನ ಹಿಂಭಾಗದಲ್ಲಿರುವುದು. ನಿನ್ನ ಆಸೆಗಳಲ್ಲಿ, ಆತುರತೆಯ ಆಸೆಗಳಲ್ಲಿ, ನಿನ್ನಿ ಕನಸಿನಲ್ಲಿ – ಹಗಲುಕನಸಿನಲ್ಲಿ – ‘ಇತರೆ’ ಎಂಬುದು ಇರುವುದು. ಅಹಂ ಇರುವವರೆಗೂ, ʻʻಇತರೆ’’ ಎಂಬುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲಿ ಹೋದರೂ ಪ್ರಪಂಚವಿದೆ, ಅಹಂ ಇದೆ. ಇವೆರಡಕ್ಕೂ ಸಂಬಂಧ ತಪ್ಪದೇ ಬರುತ್ತದೆ. ಸಂಬಂಧದಲ್ಲಿ ʻಮೋಹ’ದ ಉಗಮವಾಗುತ್ತದೆ. ಆದ್ದರಿಂದ ಪಲಾಯನ ಪರಿಹಾರವಲ್ಲ.

ಲೇಖಕರು ವೇದಾಂತೋಪದೇಶ ಮಾಡುವ ಪರಿವ್ರಾಜಕರು.

ಇದನ್ನೂ ಓದಿ : Navavidha Bhakti : ಭಕ್ತಿ- ಮುಕ್ತಿಗಳನ್ನೀವ ಭಗವಂತನ ಸ್ಮರಣೆ

Continue Reading
Advertisement
Elephant trap
ಕರ್ನಾಟಕ4 hours ago

Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್‌ಗೆ ಬಿತ್ತು!

Unaccounted 6.4 Crore rupees seized in Chikmagalur
ಕರ್ನಾಟಕ4 hours ago

Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ

Champion Gujarat won by 5 wickets in the first match, CSK was disappointed
ಕ್ರಿಕೆಟ್5 hours ago

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

holalu urus
ಕರ್ನಾಟಕ5 hours ago

Communal Harmony : ಉರೂಸ್‌ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು

Nelyadi suicide
ಕರ್ನಾಟಕ5 hours ago

Suicide case : ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್‌!

Bangalore mysore highway
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಟೋಲ್ ದರ ಜನರಿಗೆ ದುಃಸ್ವಪ್ನವಾಗದಿರಲಿ

IT Raid on the bank owned by Belgaum Congress leader VS Sadhunavar
ಕರ್ನಾಟಕ5 hours ago

IT Raid: ಕಾಂಗ್ರೆಸ್‌ ಮುಖಂಡ ವಿ.ಎಸ್.‌ ಸಾಧುನವರ ಒಡೆತನದ ಬ್ಯಾಂಕ್‌ ಮೇಲೆ ಐಟಿ ದಾಳಿ

IPL 2023
ಕ್ರಿಕೆಟ್5 hours ago

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

People In Pakistan Unhappy, Believe Partition Was A Mistake: Says Mohan Bhagwat
ದೇಶ5 hours ago

Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್‌ ಭಾಗವತ್‌

Mohammad Shami who scored a century in bowling, what is the achievement?
ಕ್ರಿಕೆಟ್6 hours ago

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್6 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ16 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ1 day ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ2 days ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ5 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ5 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ2 weeks ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ2 weeks ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!