Zodiac Compatibility: ಈ ಕೆಳಗಿನ ರಾಶಿಯ ಮಂದಿ ಅಷ್ಟು ಸುಲಭದಲ್ಲಿ ಪ್ರೀತಿಯಲ್ಲಿ ಬೀಳುವುದಿಲ್ಲ! - Vistara News

ಭವಿಷ್ಯ/ಧಾರ್ಮಿಕ

Zodiac Compatibility: ಈ ಕೆಳಗಿನ ರಾಶಿಯ ಮಂದಿ ಅಷ್ಟು ಸುಲಭದಲ್ಲಿ ಪ್ರೀತಿಯಲ್ಲಿ ಬೀಳುವುದಿಲ್ಲ!

ಯಾವೆಲ್ಲ ರಾಶಿಯ ಮಂದಿ (Zodiac compatibility) ಅಷ್ಟು ಸುಲಭಕ್ಕೆ ಪ್ರೀತಿಯಲ್ಲಿ ಬೀಳುವುದಿಲ್ಲ ಎಂಬುದನ್ನು ನೋಡೋಣ ಬನ್ನಿ.

VISTARANEWS.COM


on

love and zodiac
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲರ ಗುಣವೂ ಒಂದೇ ಥರ ಇರುವುದಿಲ್ಲ. ತಮ್ಮ ರಾಶಿಯ ಗುಣಗಳಿಗೆ ಅನುಸಾರವಾಗಿ ಪ್ರತಿಯೊಬ್ಬರಿಗೂ ಅವರವರ ಮೂಲ ಗುಣಗಳಿದ್ದೇ (Zodiac Characters) ಇರುತ್ತದೆ ಎಂಬುದನ್ನು ಜ್ಯೋತಿಷ್ಯ ವಿಜ್ಞಾನ (Astrology) ಹೇಳುತ್ತದೆ. ಪ್ರೀತಿಯ ವಿಚಾರವೂ ಅಷ್ಟೇ. ರಾಶಿ ಉಣದ ಆಧಾರದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಗೆಯ ಮೂಲಗುಣಗಳು ಇವೆ. ಅಂದರೆ, ಕೆಲವರಿಗೆ ಪ್ರೀತಿಯಲ್ಲಿ ಬೀಳಲು ಸೆಕೆಂಡುಗಳು ಸಾಕು. ನೋಡಿದ ತಕ್ಷಣ ಬೀಳುವುದು ಪ್ರೀತಿಯಲ್ಲೇ. ಹಾಗಂತ ಇವರದ್ದು ನಿಜವಾದ ಪ್ರೀತಿ ಅಲ್ಲ, ಪ್ರೀತಿಯಲ್ಲಿ ಬೀಳುವುದೇ ಇವರಿಗೆ ಚಟ ಎಂದು ಅರ್ಥೈಸಿಕೊಳ್ಳಬೇಕಾಗಿಲ್ಲ. ಕೆಲವರು ಪ್ರೀತಿ ಎಂದು ತಿಳಿದು ಮೋಸ ಹೋಗಬಹುದು, ಇನ್ನೂ ಕೆಲವರು, ನಿಜವಾದ ಪ್ರೀತಿಯನ್ನೇ ದಕ್ಕಿಸಿಕೊಂಡಿರಬಹುದು ಹೀಗೆ ಅನೇಕ ಬಗೆಗಳಿರುತ್ತವೆ. ಆದರೆ, ಕೆಲವರು ಮಾತ್ರ ಸುಲಭಕ್ಕೆ ಪ್ರೀತಿಯಲ್ಲಿ ಬೀಳುವುದಿಲ್ಲ. ಅವರು ಪ್ರೀತಿಯಲ್ಲಿ ಬಿದ್ದರೂ ಅಷ್ಟು ಸುಲಭಕ್ಕೆ ಬಿದ್ದೆವೆಂಬುದನ್ನು ಒಪ್ಪಿಕೊಳ್ಳುವುದಿಲ್ಲ. ಪ್ರೀತಿ ಪಕ್ವವಾಗುವವರೆಗೂ ಸಮಯ ತೆಗೆದುಕೊಳ್ಳುತ್ತಾರೆ. ಒರೆಗೆ ಹಚ್ಚಿ, ಇದು ಪ್ರೀತಿಯಾ ಎಂಬುದನ್ನು ಮತ್ತೆ ಮತ್ತೆ ಖಚಿತಪಡಿಸಿಕೊಳ್ಳುತ್ತಾರೆ. ಪೂರ್ತಿ ನಂಬಿಕೆ ಬರಲು ದೀರ್ಘ ಸಮಯ ತೆಗೆದುಕೊಂಡರೂ, ಪ್ರೀತಿಯಲ್ಲಿ ಬಿದ್ದೆವೆಂದು (love and zodiac) ಒಪ್ಪಿಕೊಂಡರೆ ಇವರದ್ದು ಕರಡಿ ಪ್ರೀತಿ. ಬನ್ನಿ, ಯಾವೆಲ್ಲ ರಾಶಿಯ ಮಂದಿ (Zodiac compatibility) ಅಷ್ಟು ಸುಲಭಕ್ಕೆ ಪ್ರೀತಿಯಲ್ಲಿ ಬೀಳುವುದಿಲ್ಲ ಎಂಬುದನ್ನು ನೋಡೋಣ ಬನ್ನಿ.

1. ವೃಷಭ: ಈ ರಾಶಿ ಮಂದಿಯ ಲೆಕ್ಕಾಚಾರ ಬೇರೆಯೇ. ಇವರು ನಂಬಿಕೆ ಎಂಬುದರ ತಳಹದಿ ಗಟ್ಟಿಯಾಗಿಸಿದ ಮೇಲೆಯೇ ಪ್ರೀತಿಯ ಸೌಧ ಕಟ್ಟಲು ಹೊರಡುತ್ತಾರೆ. ನಂಬಿಕೆಯ ತಳಹದಿ ಸ್ವಲ್ಪ ಅಲ್ಲಾಡಿದರೂ ಸಾಕು, ಆ ಕಟ್ಟಡ ಕಟ್ಟುವ ಆಸಕ್ತಿಯೇ ಇವರಿಗೆ ಹೊರಟುಹೋಗುತ್ತದೆ. ಹಾಗಾಗಿ ಇವರು ನಿಜವಾದ ಪ್ರೀತಿಯಲ್ಲಿ ಬೀಳಲು ಬಹಳ ಸಮಯ ತೆಗೆದುಕೊಳ್ಳುತ್ತಾರೆ.

2. ಕನ್ಯಾ: ಕನ್ಯಾ ರಾಶಿಯ ಮಂದಿ ಭಾವನೆಗೆ ಬೆಲೆ ಕೊಡುವವರು. ಇವರಿಗೆ ಭಾವನಾತ್ಮಕವಾಗಿ ಇನ್ನೊಬ್ಬರ ಜೊತೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ತಮಗೆ ಇಷ್ಟವಾದರು ನಿಜವಾಗಿಯೂ ನಮ್ಮ ಪ್ರೀತಿ ಅರ್ಹರೇ ಎಂದು ತಿಳಿದುಕೊಳ್ಳಲು ಇವರು ನಾನಾ ಬಗೆಗಳಲ್ಲಿ ಅವರನ್ನು ನೋಡುತ್ತಾರೆ. ಅವರ ಇಷ್ಟಾನಿಷ್ಟಗಳು, ಭಾವನೆಗಳು, ಆಸಕ್ತಿಗಳು ಹೀಗೆ ಬಹಳ ವಿಚಾರಗಳಲ್ಲಿ ಹೊಂದಾಣಿಕೆ ಇದೆ ಅನಿಸಿದರೆ ಇವರು ನಿಧಾನವಾಗಿ ಪ್ರೀತಿಯ ಆಳಕ್ಕೆ ಬೀಳುತ್ತಾರೆ.

3. ವೃಶ್ಚಿಕ: ಈ ರಾಶಿಯ ಮಂದಿ ಗಾಢತೆ ಹಾಗೂ ಆಳವಾದ ಪ್ರೀತಿಗೆ ಹೆಸರಾದವರು. ಇವರಿಗೆ ತಮ್ಮ ನಿಜವಾದ ಭಾವನೆಯನ್ನು ಅರಿತುಕೊಳ್ಳಲು ಹಾಗೂ ಮತ್ತೊಬ್ಬರಿಗೆ ತಿಳಿಸಲು ಸಮಯ ಬೇಕಾಗುತ್ತದೆ. ಪ್ರೀತಿಯ ಆಳ ಅವರಿಗೆ ಅರಿತ ಮೇಲಷ್ಟೇ ಇವರು ಪ್ರೀತಿಸಿದವರಿಗೆ ನಿವೇದಿಸಲು ಬಯಸುತ್ತಾರೆ.

4. ಮಕರ: ಈ ರಾಶಿಯ ಮಂದಿ ಪ್ರೀತಿಯಲ್ಲಿ ಅಷ್ಟು ಸುಲಭವಾಗಿ ಬೀಳುವುದಿಲ್ಲ. ಬಿದ್ದರೂ ಅದನ್ನು ಒಪ್ಪಿಕೊಳ್ಳುವುದಕ್ಕೆ ಬಹಳ ಸಮಯ ತೆಗೆದುಕೊಳ್ಳುತ್ತಾರೆ. ಅಂದರೆ, ತಮ್ಮಿಬ್ಬರ ಇಷ್ಟಾನಿಷ್ಟಗಳನ್ನು ಬಹಳಷ್ಟು ಅಳೆದು ತೂಗಿ, ಒಂದಕ್ಕೊಂದು ಹೊಂದಿಕೆ ಆಗುತ್ತದಾ ಎಂದು ಸಾಕಷ್ಟು ಯೋಚಿಸಿದ ಮೇಲೆ ಪ್ರೀತಿ ಪಕ್ಕಾ ಆಗಿದೆ ಎಂದು ಅನಿಸಿದರೆ, ನಾನಾ ಪ್ರಕಾರಗಳಲ್ಲಿ ಒರೆಗೆ ಹಚ್ಚಿ ನೋಡಿ ಇದು ಅಪ್ಪಟ ಚಿನ್ನ ಎಂದು ತಿಳಿದ ಮೇಲಷ್ಟೇ ಪ್ರೀಯ ದೋಣಿಗೆ ಕಾಲಿಡುತ್ತಾರೆ.

5. ಕುಂಭ:‌ ಈ ರಾಶಿಯ ಮಂದಿ ಬಹಳ ಇಂಡಿಪೆಂಡೆಂಟ್‌ ವ್ಯಕ್ತಿತ್ವವುಳ್ಳವರು. ಪ್ರೀತಿಯಲ್ಲಿ ಬಿದ್ದಾಗಲೂ ಅಷ್ಟೇ ತಮ್ಮದೇ ವ್ಯಕ್ತಿತ್ವವನ್ನು ಹಾಗೆಯೇ ಇರಬಯಸುವವರು. ಹಾಗಾಗಿ ತಮ್ಮೊಳಗೆ ಪ್ರೀತಿಯಿಂದಾದ ಆಳವಾದ ಪರಿಣಾಮವನ್ನು ಅರ್ಥ ಮಾಡಿಕೊಳ್ಳಲು ಹಾಗೂ ಭಾವನೆಯನ್ನು ತಿಳಿಸಲು ಇವರಿಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಹಾಗಾಗಿ ಪ್ರೀತಿಯಂತಹ ಸಂಬಂಧಗಳ ವಿಚಾರದಲ್ಲಿ ಇವರು ಅಷ್ಟು ಸುಲಭದಲ್ಲಿ ಬೀಳುವುದಿಲ್ಲ.

ಇದನ್ನೂ ಓದಿ: Zodiac Compatibility: ಯಾವ ರಾಶಿ ಜೋಡಿಗಳು ಸಂಬಂಧದಲ್ಲಿ ಹಾವು ಮುಂಗುಸಿಗಳಂತಾಗುತ್ತಾರೆ ಗೊತ್ತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 30 2024
Koo

ಚಂದ್ರನು ಮಂಗಳವಾರ ಬೆಳಗ್ಗೆ 11.29ಕ್ಕೆ ಕುಂಭ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಉತ್ಸಾಹ ತುಂಬಿದ ವಾತಾವರಣ ಸಿಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಸಿಂಹ ರಾಶಿಯವರು ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 07:04 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 28:08 ಯೋಗ: ಸಾಧ್ಯ 22:22
ಕರಣ: ವಣಿಜ 07:04 ಅಮೃತಕಾಲ: ರಾತ್ರಿ 09:54 ರಿಂದ 11:28

ಸೂರ್ಯೋದಯ : 05:59   ಸೂರ್ಯಾಸ್ತ : 06:34

ರಾಹುಕಾಲ : ಸಂಜೆ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರವನ್ನು ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಬಗ್ಗೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ನಿಮ್ಮದಾಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ. ಮಾತಿನಲ್ಲಿ ಆದಷ್ಟು ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಹಾಗೂ ನಿಮ್ಮ ಕೆಲಸಗಳಿಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ ಇದಾಗಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭ ಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಹೆಚ್ಚಿದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರು ಭೇಟಿಯಾಗಲಿದ್ದು, ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಲಿದ್ದೀರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಪಡೆಯುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗಲಿದೆ. ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for April 29 2024
Koo

ಚಂದ್ರನು ಸೋಮವಾರವೂ ಮಕರ ರಾಶಿಯಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಧನಸ್ಸು ರಾಶಿಯವರಿಗೆ ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 07:56 ವಾರ: ಸೋಮವಾರ
ನಕ್ಷತ್ರ: ಪೂರ್ವ ಆಷಾಢ 28:41 ಯೋಗ: ಸಿದ್ಧಿ 24:24
ಕರಣ: ತೈತುಲ 07:56 ಅಮೃತಕಾಲ: ಸೋಮವಾರ ರಾತ್ರಿ 11:56 ರಿಂದ ಮಂಗಳವಾರ ಮುಂಜಾನೆ 01:31
ದಿನದ ವಿಶೇಷ: ಬ್ರಹ್ಮಾವರ ರಥೋತ್ಸವ, ನೊಣವಿನಕೆರೆ ಬೇಟೆರಾಯ ರಥೋತ್ಸವ

ಸೂರ್ಯೋದಯ : 06:00   ಸೂರ್ಯಾಸ್ತ : 06:34

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲದಿಂದಾಗಿ ನೀವು ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಹೀಗಾಗಿ ಮಾತನಾಡುವಾಗ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಿ, ಇದರಿಂದ ನಿಮಗೆ ಆರ್ಥಿಕವಾಗಿ ಪ್ರಗತಿ ಸಿಗಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ತುಸು ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿಯಾಗುವುದು. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯವನ್ನು ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆಯು ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹದು. ಹೀಗಾಗಿ ಸ್ವಲ್ಪ ತಾಳ್ಮೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ ಉಂಟಾಗಲಿದೆ. ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ನಿಮ್ಮದಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಪಡೆಯಿರಿ. ಅದು ನಿಮ್ಮ ಗುರಿಗೆ ಸ್ಪಷ್ಟತೆಯನ್ನು ನೀಡಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಹೆಚ್ಚಿದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮವನ್ನು ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ, ಅದೇ ಸಮಯದಲ್ಲಿ ಖರ್ಚುಗಳೂ ಹೆಚ್ಚಾಗುತ್ತದೆ. ನಿಮ್ಮ ಬಗ್ಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಹೀಗಾಗಿ ಅದರತ್ತ ಹೆಚ್ಚಿನ ಗಮನವನ್ನು ಕೊಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಈ ವೇಳೆ ನಿಮ್ಮ ಸಂಗಾತಿ ನೀಡುವ ಸಲಹೆ ಹಿತಕರವೆನಿಸಲಿದೆ. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಉಂಟು. ಕೌಟುಂಬಿಕವಾಗಿ ಶುಭಫಲ ನಿಮ್ಮದಾಗಲಿದೆ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಭಾನುವಾರ ಬೆಳಗ್ಗೆ 05:37ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 08:21 ವಾರ: ಭಾನುವಾರ
ನಕ್ಷತ್ರ: ಮೂಲಾ 28:47 ಯೋಗ: ಶಿವ 26:04
ಕರಣ: ಬಾಲವ 08:21 ಅಮೃತಕಾಲ: ರಾತ್ರಿ 10:19 ರಿಂದ 11:57
ದಿನದ ವಿಶೇಷ: ಪಂಚಮಿ

ಸೂರ್ಯೋದಯ : 06:00   ಸೂರ್ಯಾಸ್ತ : 06:34

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ:ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ:ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
2nd PUC Paper Leak
ಕರ್ನಾಟಕ14 mins ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 202418 mins ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

T20 World Cup
ಪ್ರಮುಖ ಸುದ್ದಿ18 mins ago

T20 World Cup : ಈ ದಿನದಂದು ವಿಶ್ವ ಕಪ್​ಗಾಗಿ ಯುಎಸ್​ಎಗೆ ಹೊರಡಲಿದೆ ಟೀಮ್ ಇಂಡಿಯಾ

Kantesh
ಪ್ರಮುಖ ಸುದ್ದಿ43 mins ago

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Election Commission
Lok Sabha Election 202452 mins ago

Election Commission: ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ; ಹೊಸ ವೇಳಾಪಟ್ಟಿ ಇಂತಿದೆ

Hassan Pen drive Case
ಪ್ರಮುಖ ಸುದ್ದಿ56 mins ago

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

IPL 2024
ಪ್ರಮುಖ ಸುದ್ದಿ1 hour ago

IPL 2024 : ಅತಿ ವೇಗದ ಬೌಲರ್​ ಮಾಯಾಂಕ್​ ಯಾದವ್​ಗೆ ಮತ್ತೆ ಗಾಯ?

labour Day
ಪ್ರಮುಖ ಸುದ್ದಿ2 hours ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 20242 hours ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್2 hours ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ19 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌