Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ! - Vistara News

ವಿದೇಶ

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Gold Heist: ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

Gold Heist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಬ್ಯಾಂಕ್‌ಗೆ ನುಗ್ಗಿ ಕೋಟ್ಯಂತರ ರೂಪಾಯಿಯನ್ನು ದರೋಡೆ ಮಾಡುವ ಮನಿ ಹೈಸ್ಟ್‌ (Money Heist) ಎಂಬ ರೋಚಕ ವೆಬ್‌ ಸಿರೀಸ್‌ಅನ್ನು ನೀವು ನೋಡಿರಬಹುದು. ಮಾಸ್ಟರ್‌ ಪ್ಲಾನ್‌ ಮೂಲಕ ದರೋಡೆ ಮಾಡುವ ಸಿರೀಸ್‌ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದೆ. ಆದರೆ, ಅಮೆರಿಕದಲ್ಲಿ ಮನಿ ಹೈಸ್ಟ್‌ ಮಾದರಿಯಲ್ಲಿಯೇ ಸುಮಾರು 20 ದರೋಡೆಕೋರರು ಚಿನ್ನಾಭರಣಗಳ ಮಳಿಗೆಗೆ ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ (Gold Heist) ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಚಿನ್ನಾಭರಣಗಳ ಮಳಿಗೆಗೆ ನುಗ್ಗಿದ 20 ಮುಸುಕುಧಾರಿ ಧರೋಡೆಕೋರರು, ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಜೂನ್‌ 12ರಂದು ಮಧ್ಯರಾತ್ರಿ ಇವರು ಮಳಿಗೆಗೆ ನುಗ್ಗಿದ್ದಾರೆ. ಮುಖದ ತುಂಬ ಮುಸುಕು ಧರಿಸಿದ್ದ, ಕೈಯಲ್ಲಿ ಸುತ್ತಿಗೆಗಳನ್ನು ಹಿಡಿದುಕೊಂಡೇ ಬಂದಿದ್ದ ದರೋಡೆಕೋರರು, ಅಂಗಡಿಯಲ್ಲಿ ಗ್ಲಾಸ್‌ಗಳನ್ನು ಒಡೆದು, ಅವಸರದಲ್ಲಿಯೇ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಇಡೀ ಕಳ್ಳತನದ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇಲ್ಲಿದೆ ದರೋಡೆಯ ವಿಡಿಯೊ

ದರೋಡೆಕೋರರು ಮೊದಲು ಜ್ಯುವೆಲರಿ ಸ್ಟೋರ್‌ನ ಬಾಗಿಲನ್ನು ಒದ್ದು, ಸುತ್ತಿಗೆಯಿಂದ ಹೊಡೆದು ಮುರಿದುಹಾಕಿದ್ದಾರೆ. ಏಕಕಾಲಕ್ಕೆ ಅವರು ಮಳಿಗೆಗೆ ನುಗ್ಗಿದ್ದು, ಪ್ರತಿಯೊಂದು ಗಾಜುಗಳನ್ನು ಒಡೆದು, ಚಿನ್ನ, ವಜ್ರದ ಆಭರಣಗಳನ್ನು ಬ್ಯಾಗ್‌ಗೆ ತುಂಬಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೆಲವೇ ಕೆಲವು ನಿಮಿಷಗಳಲ್ಲಿ ಇಡೀ ಮಳಿಗೆಯ ಆಭರಣಗಳನ್ನು ಗುಡಿಸಿ ಗುಂಡಾಂತರ ಮಾಡಿದ್ದಾರೆ.

ಬಂಧಿತ ಆರೋಪಿಗಳು

ದರೋಡೆಕೋರರು ಹಲವು ಕಾರುಗಳಲ್ಲಿ ಬಂದು ದರೋಡೆ ಮಾಡಿದ್ದಾರೆ. ಕೂಡಲೇ ಪೊಲೀಸರು ಇವರ ಕಾರುಗಳನ್ನು ಬೆನತ್ತಿದರೂ ಕೇವಲ ಐವರು ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಬಂಧಿತರಿಂದ ಕೆಲ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಐವರನ್ನೂ ಜೈಲಿಗೆ ಹಾಕಿದ್ದಾರೆ. ದರೋಡೆಕೋರರು ಕದ್ದಿರುವ ಚಿನ್ನಾಭರಣಗಳ ಒಟ್ಟು ಮೌಲ್ಯ ಎಷ್ಟು ಎಂಬುದು ಇದುವರೆಗೆ ಗೊತ್ತಿಲ್ಲ. ಮಳಿಗೆಯಲ್ಲಿ ಕಳ್ಳತನ ಮಾಡಲು ದರೋಡೆಕೋರರು ಹಲವು ದಿನಗಳಿಂದ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಉಳಿದ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Hajj Pilgrims: Hajj Pilgrims: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್​ ತಲುಪಿದ್ದು, ಹಜ್‌ ಯಾತ್ರೆ ಕೈಗೊಂಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಬಿಸಿಲಿನ ಹೊಡೆತಕ್ಕೆ ಸಿಲುಕಿ ಸುಮಾರು 550 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಶಾಖ ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇವರಲ್ಲಿ ಭಾರತೀಯರೂ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Hajj Pilgrims
Koo

ಮೆಕ್ಕಾ: ಸೌದಿ ಅರೇಬಿಯಾದ (Saudi Arabia) ಮೆಕ್ಕಾದಲ್ಲಿರುವ ಮುಸ್ಲಿಮರ ಪವಿತ್ರ ಹಜ್‌ ಯಾತ್ರೆ ಕೈಗೊಂಡಿರುವವರಿಗೆ ಬೇಸಿಗೆಯ ಬಿಸಿಲು, ಬಿಸಿಗಾಳಿಯ ಹೊಡೆತವು ಮಾರಣಾಂತಿಕವಾಗಿ ಪರಿಣಮಿಸಿದೆ. ಬಿಸಿಗಾಳಿ ಸಂಬಂಧಿತ ಕಾಯಿಲೆಯಿಂದ ಮೆಕ್ಕಾದಲ್ಲಿ (Mecca) 550ಕ್ಕೂ ಅಧಿಕ ಯಾತ್ರಿಕರು ಮೃತಪಟ್ಟಿದ್ದು, ಮೃತರಲ್ಲಿ ಭಾರತದ 68 ಯಾತ್ರಿಕರು (Hajj Pilgrims) ಇದ್ದಾರೆ ಎಂದು ಸೌದಿ ಅರೇಬಿಯಾದ ರಾಜತಾಂತ್ರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಭಾರತದ 68 ಯಾತ್ರಿಕರು ಮೃತಪಟ್ಟಿರುವುದು ದೃಢವಾಗಿದೆ. ಇವರಲ್ಲಿ ಕೆಲವು ಜನ ವಯೋಸಹಜ ಕಾಯಿಲೆಯಿಂದ ಮೃತಪಟ್ಟರೆ, ಹೆಚ್ಚಿನ ಜನ ಉಷ್ಣಗಾಳಿ ಸಂಬಂಧಿತ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ” ಎಂಬುದಾಗಿ ರಾಜತಾಂತ್ರಿಕ ಅಧಿಕಾರಿಗಳು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಈ ಕಾರಣಕ್ಕೆ ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಸೋಮವಾರ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, 60 ಮಂದಿ ಜೋರ್ಡಾನ್‌ನವರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಇನ್ನು ತನ್ನ ದೇಶದ ಐವರು ಯಾತ್ರಿಕರು ಸಾವಿಗೀಡಾಗಿದ್ದಾರೆ ಎಂದು ಇರಾನ್ ಹೇಳಿದ್ದು, ಕಾರಣವನ್ನು ಬಹಿರಂಗಪಡಿಸಿಲ್ಲ. ಸೆನೆಗಲ್ ಮೂರು ಸಾವುಗಳನ್ನು ವರದಿ ಮಾಡಿದೆ. ಹಜ್ ಸಮಯದಲ್ಲಿ 136 ಇಂಡೋನೇಷ್ಯಾದ ಯಾತ್ರಿಕರು ಮತಪಟ್ಟಿದ್ದಾರೆ, ಇದರಲ್ಲಿ ಕನಿಷ್ಠ ಮೂವರು ಶಾಖದ ಹೊಡೆತದಿಂದ ನಿಧನರಾಗಿದ್ದಾರೆ ಎಂದು ಅಲ್ಲಿನ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೌದಿ ಅರೇಬಿಯಾದ ಅಧಿಕಾರಿಗಳು ಶಾಖದ ಒತ್ತಡದಿಂದ ಬಳಲುತ್ತಿರುವ 2,000ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ವರದಿ ಹೇಳಿದೆ. ಕಳೆದ ವರ್ಷ ಇಲ್ಲಿ ವಿವಿಧ ದೇಶಗಳಲ್ಲಿ ಕನಿಷ್ಠ 240 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಈ ಪೈಕಿ ಹೆಚ್ಚಿನವರು ಇಂಡೋನೇಷ್ಯಾದವರು. ಈ ವರ್ಷ ಸುಮಾರು 18,00,000 ಯಾತ್ರಾರ್ಥಿಗಳು ಹಜ್ ಯಾತ್ರೆಯಲ್ಲಿ ಭಾಗವಹಿಸಿದ್ದು, ಆ ಪೈಕಿ 16,00,000 ವಿದೇಸಿಗರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕೃತ ಹಜ್ ವೀಸಾ ದುಬಾರಿಯಾದ ಕಾರಣ ಪ್ರತಿವರ್ಷ ಸಾವಿರಾರು ಯಾತ್ರಿಕರು ಅಕ್ರಮವಾಗಿಯೂ ಇಲ್ಲಿಗೆ ಆಗಮಿಸುತ್ತಾರೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನದ ಜೇಬುಗಳ್ಳರ ಕಾಟ; ಸೌದಿ ಅರೇಬಿಯಾ ಖಡಕ್ ವಾರ್ನಿಂಗ್‌

Continue Reading

Latest

Hindujas Family: ಶ್ರೀಮಂತ ಹಿಂದೂಜಾ ಮನೆ ಕೆಲಸದವರಿಗೆ ಸಂಬಳ ಎಷ್ಟು? ನಾಯಿ ಸಾಕುವ ಖರ್ಚಿಗಿಂತ ಕಡಿಮೆ!

Hindujas Family: ಹಿಂದೂಜಾ ಕುಟುಂಬ ಬ್ರಿಟನ್‌ನ ಅತ್ಯಂತ ಶ್ರೀಮಂತ ಕುಟುಂಬಗಳಲ್ಲಿ ಒಂದು. ಇಂತಹ ಶ್ರೀಮಂತ ಕುಟುಂಬದಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆಗೆ ಅವರ ನಾಯಿಗೆ ಖರ್ಚು ಮಾಡುವುದಕ್ಕಿಂತ ಕಡಿಮೆ ಸಂಬಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಿಂದೂಜಾ ಕುಟುಂಬದ ಲೇಕ್ ಜಿನೀವಾ ವಿಲ್ಲಾದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮಹಿಳೆಗೆ ಕಡಿಮೆ ಸಂಬಳ ನೀಡುತ್ತಿದ್ದಾರೆ. ಆಕೆಯನ್ನು ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿದ್ದಕ್ಕೆ ಕೇವಲ ಏಳು ಸ್ವಿಸ್ ಅಂದರೆ 650ರೂ. ಸಂಬಳ ನೀಡುತ್ತಾರೆ. ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ ಖರ್ಚು ಮಾಡುತ್ತಾರೆ ಎನ್ನಲಾಗಿದೆ.

VISTARANEWS.COM


on

Hindujas Family
Koo

ಹಣವಿದ್ದವರಿಗೆ ಶ್ರೀಮಂತರು ಎಂದು ಕರೆಯುತ್ತಾರೆ. ಆದರೆ ಶ್ರೀಮಂತಿಕೆ ಎನ್ನುವುದು ಹಣದಲ್ಲಿ ಮಾತ್ರವಲ್ಲ ಗುಣದಲ್ಲೂ ಇರಬೇಕಾಗುತ್ತದೆಯಲ್ಲವೆ? ಆದರೆ ಕೆಲವು ಶ್ರೀಮಂತರು ತಮ್ಮಲ್ಲಿ ಹಣವಿದೆ ಎಂಬ ದರ್ಪ ತೋರುತ್ತಾರೆ. ಅದಕ್ಕಾಗಿ ತಮ್ಮ ಮನೆಯ ಕೆಲಸದವರು, ಬಡವರನ್ನು ಕೀಳಾಗಿ ಕಾಣುತ್ತಾರೆ. ಬ್ರಿಟನ್‌ನಲ್ಲಿರುವ ಭಾರತೀಯ ಮೂಲದ ಅತಿ ಶ್ರೀಮಂತರಾದ ಹಿಂದೂಜಾ ಕುಟುಂಬದ್ದೂ ಇದೇ ಕತೆ. ಹಿಂದೂಜಾ ಕುಟುಂಬ (Hindujas Family) ಬ್ರಿಟನ್‌ನ ಅತ್ಯಂತ ಶ್ರೀಮಂತ ಕುಟುಂಬಗಳಲ್ಲಿ ಒಂದು. ಇಂತಹ ಶ್ರೀಮಂತ ಕುಟುಂಬದಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆಗೆ ಅವರ ನಾಯಿಗೆ ಖರ್ಚು ಮಾಡುವುದಕ್ಕಿಂತ ಕಡಿಮೆ ಸಂಬಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಿಂದೂಜಾ ಕುಟುಂಬದ ನಾಲ್ವರಾದ ಪ್ರಕಾಶ್‌ ಹಿಂದೂಜಾ, ಅವರ ಪತ್ನಿ ಕಮಲ್, ಮಗ ಅಜಯ್ ಹಾಗೂ ಸೊಸೆ ನಮ್ರತಾ ಅವರ ಮೇಲೆ ಆರೋಪ ಮಾಡಲಾಗಿದೆ.

ಹಿಂದೂಜಾ ಕುಟುಂಬ ತಮ್ಮ ಲೇಕ್ ಜಿನೀವಾ ವಿಲ್ಲಾದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮಹಿಳೆಯೊಬ್ಬಳಿಗೆ ಕಡಿಮೆ ಸಂಬಳ ನೀಡುತ್ತಿದ್ದಾರೆ. ಆಕೆಯನ್ನು ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿದ್ದಕ್ಕೆ ಕೇವಲ ಏಳು ಸ್ವಿಸ್, ಅಂದರೆ ದಿನಕ್ಕೆ 650 ರೂ. ಸಂಬಳ ನೀಡುತ್ತಾರೆ. ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ (ಸುಮಾರು 8 ಲಕ್ಷ ರೂ.) ಖರ್ಚು ಮಾಡುತ್ತಾರೆ. ಹಾಗಾಗಿ ಹಿಂದೂಜಾ ಕುಟುಂಬದವರು ತಮ್ಮ ಸೇವಕರಿಗಿಂತ ಸಾಕು ನಾಯಿಗಳಿಗೆ ಹೆಚ್ಚು ಖರ್ಚು ಮಾಡುತ್ತಾರೆ ಎಂದು ಸ್ವಿಟ್ಜರ್ಲ್ಯಾಂಡ್ ನ್ಯಾಯಾಲಯದ ಸರ್ಕಾರಿ ವಕೀಲ ಯವೆಸ್ ಬರ್ಟೋಸಾ ಹಿಂದೂಜಾ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Hindujas Family

ಅಷ್ಟೇ ಅಲ್ಲದೇ ಹಿಂದೂಜಾ ಕುಟುಂಬದವರು ಮನೆ ಕೆಲಸದ ಮಹಿಳೆಯ ಪಾಸ್‌ಪೋರ್ಟ್ ಕಿತ್ತುಕೊಂಡು ಅನುಮತಿಯಿಲ್ಲದೇ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಿದೆ. ಕೆಲಸದವರಿಗೆ ರಜೆ ಕೂಡ ನೀಡುತ್ತಿರಲಿಲ್ಲ. ಅಲ್ಲದೇ ಕರೆನ್ಸಿಯಲ್ಲಿ ಸಂಬಳ ನೀಡುತ್ತಿದ್ದ ಕಾರಣ ಅವರಿಗೆ ಸ್ವಿಟ್ಜರ್ಲ್ಯಾಂಡ್‌ನಲ್ಲಿ ಖರ್ಚು ಮಾಡಲು ಹಣವಿರುತ್ತಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.

ಹಿಂದೂಜಾ ಕುಟುಂಬ ನ್ಯಾಯಾಲಯದ ವೆಚ್ಚಕ್ಕಾಗಿ 1 ಮಿಲಿಯನ್ ಸ್ವಿಸ್ ಫ್ರಾಂಕ್ ಹಾಗೂ ಉದ್ಯೋಗಿಗಳ ನಿಧಿಗೆ 3.5 ಮಿಲಿಯನ್ ಫ್ರಾಂಕ್ ನೀಡಬೇಕೆಂದು ಅವರು ವಾದಿಸಿದ್ದಾರೆ. ಆದರೆ ಹಿಂದೂಜಾ ಕುಟುಂಬ ಈ ಆರೋಪವನ್ನು ತಳ್ಳಿಹಾಕಿದ್ದು, ತಾವು ಸಿಬ್ಬಂದಿಯನ್ನು ಘನತೆ, ಗೌರವದಿಂದ ನೋಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಬೈಕ್‌ ಇಳಿದು ಓಡಿದರೂ ಮಹಿಳೆಯನ್ನು ಅಟ್ಟಾಡಿಸಿ ತಿವಿದ ಹಸು

ಮನೆ ಕೆಲಸದವರಿಗೆ ಸ್ವಾತಂತ್ರ್ಯ, ಊಟ, ವಸತಿ, ಉತ್ತಮ ಸಂಬಳವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳನ್ನು ನೀಡಿದ್ದಾರೆ. ಆದರೆ ಸರ್ಕಾರಿ ವಕೀಲರು ಈ ಯಾವುದೇ ಮಾಹಿತಿಯನ್ನು ಉಲ್ಲೇಖಿಸಿಲ್ಲ ಎಂದು ಅವರು ವಾದಿಸಿದ್ದಾರೆ.

Continue Reading

ವಿದೇಶ

Elon Musk: ಟೆಸ್ಲಾದಲ್ಲಿ ಎಲಾನ್ ಮಸ್ಕ್ ಒಬ್ಬರ ಸಂಬಳ ಟಾಟಾ ಮೋಟಾರ್ಸ್‌ ಒಟ್ಟು ಆದಾಯಕ್ಕಿಂತ ಹೆಚ್ಚು!

ಟೆಸ್ಲಾ ಷೇರುದಾರರು ಇತ್ತೀಚೆಗೆ ಸಿಇಒ ಎಲಾನ್ ಮಸ್ಕ್‌ (Elon Musk) ಅವರಿಗೆ 56 ಶತಕೋಟಿ ಡಾಲರ್ ವೇತನ ಪ್ಯಾಕೇಜ್ ಅನ್ನು ಅನುಮೋದಿಸಿದ್ದಾರೆ. ಈ ಸಂಬಳವು ಟಾಟಾ ಮೋಟಾರ್ಸ್‌ನ ಆರ್ಥಿಕ ವರ್ಷ 24ರ ಒಟ್ಟು ಆದಾಯಕ್ಕಿಂತ ಹೆಚ್ಚಾಗಿದೆ. 52.44 ಡಾಲರ್ ಶತಕೋಟಿ ಸುಮಾರು ಭಾರತದ ಕರೆನ್ಸಿಯಲ್ಲಿ 4.38 ಲಕ್ಷ ಕೋಟಿ ರೂ. ಆಗಿದೆ.

VISTARANEWS.COM


on

By

Elon Musk
Koo

ಎಲಾನ್ ಮಸ್ಕ್ (Elon Musk) ಅವರ ಸಂಭಾವನೆ ಪ್ಯಾಕೇಜ್ (pay package) ಅನ್ನು ಪರಿಷ್ಕರಿಸಲಾಗಿದ್ದು, ಇದು 2023- 24ರಲ್ಲಿ ಟಾಟಾ ಮೋಟಾರ್ಸ್‌ನ (Tata Motors) ಒಟ್ಟು ಆದಾಯಕ್ಕಿಂತ ಹೆಚ್ಚಾಗಿದೆ. ಟೆಸ್ಲಾದ (Tesla) ವಿಶ್ಲೇಷಕರು ಮತ್ತು ಹೂಡಿಕೆದಾರರು ಮಸ್ಕ್ ಅವರ ಹೊಸ ಸಂಭಾವನೆ ಪ್ಯಾಕೇಜ್ ಅನ್ನು ಅನುಮೋದಿಸಿದ್ದಾರೆ. ಇದರಿಂದ ಮಸ್ಕ್ ಟೆಸ್ಲಾವನ್ನು ತೊರೆಯುವ ಅಪಾಯವನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗಿದೆ.

ಟೆಸ್ಲಾ ಷೇರುದಾರರು ಇತ್ತೀಚೆಗೆ ಸಿಇಒ ಎಲಾನ್ ಮಸ್ಕ್‌ ಅವರಿಗೆ 56 ಶತಕೋಟಿ ಡಾಲರ್ ವೇತನ ಪ್ಯಾಕೇಜ್ ಅನ್ನು ಅನುಮೋದಿಸಿದ್ದಾರೆ. ಈ ಸಂಬಳವು ಟಾಟಾ ಮೋಟಾರ್ಸ್‌ನ ಆರ್ಥಿಕ ವರ್ಷ 2024ರ ಒಟ್ಟು ಆದಾಯಕ್ಕಿಂತ ಹೆಚ್ಚಾಗಿದೆ. 52.44 ಶತಕೋಟಿ ಡಾಲರ್ ಸುಮಾರು ಭಾರತದ ಕರೆನ್ಸಿಯಲ್ಲಿ 4.38 ಲಕ್ಷ ಕೋಟಿ ರೂ. ಆಗಿದೆ.

ಮಸ್ಕ್‌ ಅವರ ವೇತನ ಪ್ಯಾಕೇಜ್ ಎಚ್‌ಪಿಸಿಎಲ್ 52.09 ಶತಕೋಟಿ ಡಾಲರ್, ಎಸ್‌ಬಿಐ 40.35 ಶತಕೋಟಿ ಡಾಲರ್ ಮತ್ತು ಟಿಸಿಎಸ್ 29.04 ಶತಕೋಟಿ ಡಾಲರ್ ಸೇರಿದಂತೆ ಇತರ ಪ್ರಮುಖ ಭಾರತೀಯ ಘಟಕಗಳ ಒಟ್ಟು ಆದಾಯವನ್ನು ಮೀರಿಸಿದೆ.

ಎಲಾನ್ ಮಸ್ಕ್ ಅವರ 56 ಶತಕೋಟಿ ಡಾಲರ್ ಸಂಭಾವನೆ ಪ್ಯಾಕೇಜ್ 2023-24ರಲ್ಲಿ ಟಾಟಾ ಮೋಟಾರ್ಸ್‌ನ ಒಟ್ಟು ಆದಾಯಕ್ಕಿಂತ ಹೆಚ್ಚಾಗಿದೆ. 2023-24ರ ಹಣಕಾಸು ವರ್ಷದಲ್ಲಿ ಟಾಟಾ ಮೋಟಾರ್ಸ್‌ನ ಆದಾಯ 52.44 ಬಿಲಿಯನ್ ಡಾಲರ್ ಅಂದರೆ ಸರಿಸುಮಾರು 4.38 ಲಕ್ಷ ಕೋಟಿ ರೂ. ಆಗಿದೆ.

ಟೆಸ್ಲಾ ಷೇರುದಾರರು ಇತ್ತೀಚೆಗೆ ಪ್ರಮುಖ ವಾರ್ಷಿಕ ಷೇರುದಾರರ ಸಭೆಯಲ್ಲಿ ಸಿಇಒ ಎಲೋನ್ ಮಸ್ಕ್ ಅವರ 56 ಶತಕೋಟಿ ಡಾಲರ್ ಸಂಭಾವನೆ ಪ್ಯಾಕೇಜ್ ಅನ್ನು ಎರಡನೇ ಬಾರಿಗೆ ಅನುಮೋದಿಸಿದ್ದಾರೆ.

ವಿಶ್ಲೇಷಕರು ಮತ್ತು ಹೂಡಿಕೆದಾರರು ಮಸ್ಕ್ ಅವರ ಸಂಭಾವನೆ ಪ್ಯಾಕೇಜ್ ಅನ್ನು ಅನುಮೋದಿಸುವುದರಿಂದ ಅವರು ಟೆಸ್ಲಾವನ್ನು ತೊರೆಯುವ ಅಪಾಯವನ್ನು ತಗ್ಗಿಸಿದ್ದಾರೆ ಎನ್ನಲಾಗಿದೆ.

ಟೆಸ್ಲಾ ಮಂಡಳಿಯಿಂದ ವಿಶ್ವಾಸ ಮತದ ಹೊರತಾಗಿಯೂ, ಕಂಪೆನಿಯ 2024ರ ತ್ರೈಮಾಸಿಕ ಆದಾಯವು ಕಳೆದ ಸಾಲಿನ 23,329 ಮಿಲಿಯನ್‌ ಡಾಲರ್ ಗೆ ಹೋಲಿಸಿದರೆ ಶೇ. 8.7ರಷ್ಟು ಕುಸಿದು 21,301 ಮಿಲಿಯನ್‌ ಡಾಲರ್ ಗೆ ಕುಸಿದಿದೆ.

ಇದನ್ನೂ ಓದಿ: Sensex Jump: ಷೇರುಪೇಟೆಯಲ್ಲಿ ದಾಖಲೆ ಬರೆದ ಸೆನ್ಸೆಕ್ಸ್, 23,500 ಮೀರಿದ ನಿಫ್ಟಿ

ಟೆಸ್ಲಾ ಷೇರುಗಳು ಕಳೆದ ವರ್ಷ ಶೇ. 32ರಷ್ಟು ನಷ್ಟವನ್ನು ಅನುಭವಿಸಿತ್ತು. 2023-24ರಲ್ಲಿ ಟಾಟಾ ಮೋಟಾರ್ಸ್‌ನ ನಾಲ್ಕನೇ ತ್ರೈಮಾಸಿಕ ಆದಾಯವು 1.20 ಲಕ್ಷ ಕೋಟಿ ರೂ. ಗಳಷ್ಟಿದ್ದು, ವರ್ಷದಿಂದ ವರ್ಷಕ್ಕೆ ಶೇ. 13.3 ಹೆಚ್ಚಳವಾಗಿದೆ. ವಾಹನ ತಯಾರಕರ ಷೇರುಗಳು ವರ್ಷದಿಂದ ದಿನಾಂಕದ ಆಧಾರದ ಮೇಲೆ ಶೇ. 25ರಷ್ಟು ಏರಿಕೆ ಕಂಡಿವೆ.

Continue Reading

ವಿದೇಶ

Hajj Pilgrims: ಪವಿತ್ರ ಹಜ್‌ ಯಾತ್ರೆಗೆ ತಟ್ಟಿದ ಬಿಸಿಲಿನ ತಾಪ; 550 ಯಾತ್ರಾರ್ಥಿಗಳ ಸಾವು

Hajj Pilgrims: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್​ ತಲುಪಿದ್ದು, ಹಜ್‌ ಯಾತ್ರೆ ಕೈಗೊಂಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಬಿಸಿಲಿನ ಹೊಡೆತಕ್ಕೆ ಸಿಲುಕಿ ಸುಮಾರು 550 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಶಾಖ ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

VISTARANEWS.COM


on

Hajj Pilgrims
Koo

ಜೆರುಸಲೇಂ: ಮುಸ್ಲಿಮರ ಅತ್ಯಂತ ಪವಿತ್ರ ಹಜ್‌ ಯಾತ್ರೆ (Hajj Pilgrims)ಗೆ ಬಿಸಿಲಿನ ತಾಪ ತಟ್ಟಿದೆ. ಲಕ್ಷಾಂತರ ಭಕ್ತರು ಹಜ್ ಯಾತ್ರೆಗಾಗಿ ಸೌದಿ ಅರೇಬಿಯಾದ ಮೆಕ್ಕಾ (Mecca)ಗೆ ತೆರಳಿದ್ದು, ಇಲ್ಲಿನ ಗರಿಷ್ಠ ತಾಪಮಾನದ ಹೊಡೆತಕ್ಕೆ ಸಿಲುಕಿ ಸುಮಾರು 550 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್​ ತಲುಪಿದ್ದು, ಮೃತರ ಪೈಕಿ ಈಜಿಪ್ಟ್‌ನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈಜಿಪ್ಟ್‌ನ ಕನಿಷ್ಠ 323 ಮಂದಿ ಸಾವನ್ನಪ್ಪಿದ್ದಾರೆ. ಜೋರ್ಡಾನ್‌ನ ಕನಿಷ್ಠ 60 ಯಾತ್ರಿಕರು ಅಸುನೀಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತರಲ್ಲಿ ಹೆಚ್ಚಿನವರು ಶಾಖ ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ. ಬಿಸಿಲಿನಲ್ಲಿ ಯಾತ್ರಾರ್ಥಿಗಳ ಮೃತದೇಹಗಳು ರಸ್ತೆ ಬದಿ ಎಲ್ಲೆಂದರಲ್ಲಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ.

ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಈ ಕಾರಣಕ್ಕೆ ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಸೋಮವಾರ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, 60 ಮಂದಿ ಜೋರ್ಡಾನ್‌ನವರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಇನ್ನು ತನ್ನ ದೇಶದ ಐವರು ಯಾತ್ರಿಕರ ಸಾವನ್ನಪ್ಪಿದ್ದಾರೆ ಎಂದು ಇರಾನ್ ಹೇಳಿದ್ದು, ಕಾರಣವನ್ನು ಬಹಿರಂಗಪಡಿಸಿಲ್ಲ. ಸೆನೆಗಲ್ ಮೂರು ಸಾವುಗಳನ್ನು ವರದಿ ಮಾಡಿದೆ. ಹಜ್ ಸಮಯದಲ್ಲಿ 136 ಇಂಡೋನೇಷ್ಯಾದ ಯಾತ್ರಿಕರು ಸಾವನ್ನಪ್ಪಿದ್ದಾರೆ, ಇದರಲ್ಲಿ ಕನಿಷ್ಠ ಮೂವರು ಶಾಖದ ಹೊಡೆತದಿಂದ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೌದಿ ಅರೇಬಿಯಾದ ಅಧಿಕಾರಿಗಳು ಶಾಖದ ಒತ್ತಡದಿಂದ ಬಳಲುತ್ತಿರುವ 2,000ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ವರದಿ ಹೇಳಿದೆ. ಕಳೆದ ವರ್ಷ ಇಲ್ಲಿ ವಿವಿಧ ದೇಶಗಳಲ್ಲಿ ಕನಿಷ್ಠ 240 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಈ ಪೈಕಿ ಹೆಚ್ಚಿನವರು ಇಂಡೋನೇಷಿಯಾದವರು.

ಕೋಲ್ಡ್‌ ನೀರಿನ ಮೊರೆ ಹೋದ ಭಕ್ತರು

ಯಾತ್ರಾರ್ಥಿಗಳು ಬಿಸಿಲಿನ ಹೊಡೆತದಿಂದ ಪಾರಾಗಲು ತಮ್ಮ ತಲೆಯ ನೀರು ಸುರಿಯುತ್ತಿರುವ ದೃಶ್ಯ ಸಾಮಾನ್ಯ ಎಂಬಂತಾಗಿದೆ. ಸ್ವಯಂಸೇವಕರು ಅಲ್ಲಲ್ಲಿ ತಂಪು ಪಾನೀಯ ಮತ್ತು ಐಸ್‌ಕ್ರೀಮ್ ವಿತರಿಸುವುದು ಕಂಡು ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೌದಿ ಅಧಿಕಾರಿಗಳು ಯಾತ್ರಾರ್ಥಿಗಳಿಗೆ ಛತ್ರಿಗಳನ್ನು ಬಳಸಲು, ಸಾಕಷ್ಟು ನೀರು ಕುಡಿಯಲು ಮತ್ತು ದಿನದ ಅತ್ಯಂತ ಬಿಸಿಯಾದ ಸಮಯದಲ್ಲಿ ಸೂರ್ಯನಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸಲಹೆ ನೀಡಿದ್ದಾರೆ.

ಈ ವರ್ಷ ಸುಮಾರು 18,00,000 ಯಾತ್ರಾರ್ಥಿಗಳು ಹಜ್ ಯಾತ್ರೆಯಲ್ಲಿ ಭಾಗವಹಿಸಿದ್ದು, ಆ ಪೈಕಿ 16,00,000 ವಿದೇಸಿಗರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕೃತ ಹಜ್ ವೀಸಾ ದುಬಾರಿಯಾದ ಕಾರಣ ಪ್ರತಿವರ್ಷ ಸಾವಿರಾರು ಯಾತ್ರಿಕರು ಅಕ್ರಮವಾಗಿಯೂ ಇಲ್ಲಿಗೆ ಆಗಮಿಸುತ್ತಾರೆ.

ಇದನ್ನೂ ಓದಿ: Hajj 2023: ಇತಿಹಾಸ ಬರೆದ ಭಾರತದ ಮುಸ್ಲಿಂ ಮಹಿಳೆಯರು; ಪುರುಷರ ನೆರವಿಲ್ಲದೆ ಹಜ್‌ ಯಾತ್ರೆ ಮಾಡಿ ವಾಪಸ್

Continue Reading
Advertisement
Hooch Tragedy
ದೇಶ54 mins ago

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Blacklist contractors who do not complete work within time says Minister Mankala Vaidya
ಉತ್ತರ ಕನ್ನಡ1 hour ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು1 hour ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ1 hour ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ2 hours ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ3 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ3 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ4 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್4 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ4 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌