ಕಗ್ಗತ್ತಲಲ್ಲಿ ಮುಳುಗಿದ ಶ್ರೀಲಂಕಾ: ಪೆಟ್ರೋಲ್‌-ಡೀಸೆಲ್‌ಗೆ ಕಿಲೋಮೀಟರ್‌ಗಟ್ಟಲೇ ಕ್ಯೂ - Vistara News

ವಿದೇಶ

ಕಗ್ಗತ್ತಲಲ್ಲಿ ಮುಳುಗಿದ ಶ್ರೀಲಂಕಾ: ಪೆಟ್ರೋಲ್‌-ಡೀಸೆಲ್‌ಗೆ ಕಿಲೋಮೀಟರ್‌ಗಟ್ಟಲೇ ಕ್ಯೂ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ಇದೀಗ ಕಗ್ಗತ್ತಲಲ್ಲಿ ಮುಳುಗಿದೆ. ಅಲ್ಲಿನ ಸರ್ಕಾರ ದೇಶದಾದ್ಯಂತ ದಿನಕ್ಕೆ 15 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವುದಾಗಿ ತಿಳಿಸಿದೆ.

ಜಲಜನಕ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಅಲಭ್ಯತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀಲಂಕಾದ ಲೋಕೋಪಯೋಗಿ ಆಯೋಗ ತಿಳಿದುಬಂದಿದೆ. ಕಳೆದೊಂದು ತಿಂಗಳಿನಿಂದ ಲಂಕಾದಲ್ಲಿ ದಿನಕ್ಕೆ 7 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಗುರುವಾರದಿಂದ ದಿನಕ್ಕೆ 15 ಗಂಟೆ ಲೋಡ್‌ ಶೆಡ್ಡಿಂಗ್‌ ಮಾಡುವುದಾಗಿ ಶ್ರೀಲಂಕಾ ಸರ್ಕಾರ ಹೇಳಿದೆ.

ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಲೋಡ್‌ ಶೆಡ್ಡಿಂಗ್‌ಗೆ ಕಾರಣ. ಡೀಸೆಲ್ ಕೊರತೆಯೇ ಈ ಎಲ್ಲಾ ಸಮಸ್ಯೆಗಳಿಗೆ ಮೂಲ ಎಂದು ತಿಳಿದು ಬಂದಿದೆ.

ಲೋಡ್‌ ಶೆಡ್ಡಿಂಗ್‌ನಿಂದ ಜನಸಾಮಾನ್ಯರು ಕತ್ತಲಲ್ಲೇ ಕಾಲ ಕಳೆಯುವ ಅನಿವಾರ್ಯತೆ ಎದುರಾಗಿದೆ. ಅಲ್ಲದೆ, ಶ್ರೀಲಂಕಾದಲ್ಲಿರುವ ಕಾರ್ಖಾನೆಗಳು ಹಾಗೂ ಕಂಪನಿಗಳು ಕೂಡ ವಿದ್ಯುತ್‌ ವ್ಯತ್ಯಯದಿಂದಾಗಿ ಪರದಾಡುವಂತಾಗಿದೆ.

ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಗಂಟೆಗಟ್ಟಲೇ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪೆಟ್ರೋಲ್ ಪಂಪ್‌ ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಅಲ್ಲಿನ ಸರ್ಕಾರ ಸೇನಾ ಭದ್ರತೆ ಒದಗಿಸಿದೆ.

ಶ್ರೀಲಂಕಾದ ಆಸ್ಪತ್ರೆಗಳಿಗೂ ಲೋಡ್‌ ಶೆಡ್ಡಿಂಗ್‌ ಎಫೆಕ್ಟ್‌ ತಟ್ಟಿದ್ದು, ಬಹುತೇಕ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರೋಗಿಗಳು ಪರದಾಡುವಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

ನರೇಂದ್ರ ಮೋದಿ ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಸಾಜಿದ್‌ ತರಾರ್‌ ಹೇಳಿದ್ದಾರೆ.

VISTARANEWS.COM


on

Narendra Modi
Koo

ವಾಷಿಂಗ್ಟನ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ, ಅವರ ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನ ಮೂಲದ, ಅಮೆರಿಕದಲ್ಲಿ ನೆಲೆಸಿರುವ ಉದ್ಯಮಿ ಸಾಜಿದ್‌ ತರಾರ್‌ (Sajid Tarar) ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. “ನರೇಂದ್ರ ಮೋದಿ ಬಲಿಷ್ಠ ನಾಯಕರಾಗಿದ್ದಾರೆ. ಅವರು ಹುಟ್ಟಿನಿಂದಲೇ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ” ಎಂದು ಉದ್ಯಮಿ ಹೇಳಿದ್ದಾರೆ.

“ನರೇಂದ್ರ ಮೋದಿ ಅದ್ಭುತ ನಾಯಕರಾಗಿರುವ ಕಾರಣದಿಂದಾಗಿಯೇ ಭಾರತ ಅಷ್ಟೊಂದು ಉತ್ತಮವಾಗಿ ಏಳಿಗೆ ಹೊಂದಿದೆ. ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ” ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ನಾಯಕತ್ವವು ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಪ್ರಮುಖವಾಗಿದೆ. ಇದೇ ಕಾರಣಕ್ಕಾಗಿಯೇ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತವಾಗಿದೆ. ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಪಾಕಿಸ್ತಾನದಿಂದ ಭಾರತಕ್ಕೂ ಅನುಕೂಲವಿದೆ. ಪಾಕಿಸ್ತಾನಕ್ಕೂ ಭಾರತದಿಂದ ಅನುಕೂಲವಿದೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿ ಸಂಬಂಧ ಸುಧಾರಿಸುವ ವಿಶ್ವಾಸವಿದೆ” ಎಂದು ಹೇಳಿದರು. ಪಾಕಿಸ್ತಾನದವರಾದ ಸಾಜಿದ್‌ ತರಾರ್‌, 1990ರ ದಶಕದಲ್ಲಿ ಅಮೆರಿಕಕ್ಕೆ ತೆರಳಿ, ಅಲ್ಲಿಯೇ ನೆಲೆಸಿದ್ದಾರೆ.

ಅಂತಾರಾಷ್ಟ್ರಿಯ ಖ್ಯಾತಿಯ ಆಫ್ರಿಕನ್​-ಅಮೆರಿಕನ್​ ಗಾಯಕಿ ಮೇರಿ ಮಿಲ್​​ಬೆನ್ ಅವರು ಕೂಡ ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದಾರೆ. ಆಗಾಗ ಅವರು ಮೋದಿ ಅವರನ್ನು ಹೊಗಳುತ್ತಲೇ ಇರುತ್ತಾರೆ. ಭಾರತ ತನ್ನ ದೇಶದ ನಾಯಕನ ಮೇಲೆ ಆತ್ಮವಿಶ್ವಾಸ ಹೊಂದಿದೆ. ಮಣಿಪುರದ ಮಾತೆಯರು, ಪುತ್ರಿಯರು ಹಾಗೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆ. ನಿಮ್ಮ ಸ್ವಾತಂತ್ರ್ಯಕ್ಕಾಗಿ ನರೇಂದ್ರ ಮೋದಿ ಅವರು ಎಂದಿಗೂ ಹೋರಾಡುತ್ತಾರೆ. ನರೇಂದ್ರ ಮೋದಿ ಅವರೇ ನಿಮ್ಮ ಮೇಲೆ ವಿಶ್ವಾಸ ಇದೆ. ನಿಮಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಕೆಲ ತಿಂಗಳ ಹಿಂದಷ್ಟೇ ಮೇರಿ ಮಿಲ್​​ಬೆನ್ ಹೇಳಿದ್ದರು.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Continue Reading

ತಂತ್ರಜ್ಞಾನ

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Facebook, Instagram Down: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆ ಹೇಳಿದೆ.

VISTARANEWS.COM


on

Facebook, Instagram Down
Koo

ನವದೆಹಲಿ: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯ ಪ್ರಕಾರ, ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸುಮಾರು 18,000ಕ್ಕೂ ಹೆಚ್ಚು ವರದಿಗಳು ಬಂದಿದ್ದು, ಆ ಪೈಕಿ ಶೇ. 59ರಷ್ಟು ಮಂದಿ ಅಪ್ಲಿಕೇಶನ್ ಪ್ರವೇಶಿಸುವಾಗ ಸಮಸ್ಯೆಗಳನ್ನು ಎದುರಿಸಿದರೆ ಶೇ. 34ರಷ್ಟು ಬಳಿಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶೇ. 7ರಷ್ಟು ಮಂದಿಗೆ ಲಾಗಿನ್ ಮಾಡುವಾಗ ಸಮಸ್ಯೆ ಕಂಡು ಬಂದಿದೆ.

ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ್ಯಪ್‌ ಓಪನ್‌ ಮಾಡುವಾಗ ʼSomething went wrong. There’s an issue and the page could not be loadedʼ, ʼError loading media’ ಮುಂತಾದ ಮೆಸೇಜ್‌ ಕಂಡು ಬರುತ್ತಿದೆ ಎಂದು ಬಳಕೆದಾರರು ದೂರಿದ್ದಾರೆ. ಇಂಟರ್‌ನೆಟ್‌ ಮೇಲ್ವಿಚಾರಣಾ ಗುಂಪು ನೆಟ್‌ಬ್ಲಾಕ್ಸ್‌ (NetBlocks) ಕೂಡ ಎರಡು ಸಾಮಾಜಿಕ ಜಾಲತಾಣದ ವೆಬ್‌ಸೈಟ್‌ಗಳು ಪ್ರಸ್ತುತ ‘ಅಂತಾರಾಷ್ಟ್ರೀಯ ಸ್ಥಗಿತಗಳನ್ನು’ ಅನುಭವಿಸುತ್ತಿವೆ ಎಂಬ ಅಂಶವನ್ನು ಗಮನಿಸಿದೆ.

“ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಸೇರಿದಂತೆ ಮೆಟಾ ಪ್ಲಾಟ್‌ಫಾರ್ಮ್‌ಗಳು ಪ್ರಸ್ತುತ ಅಂತಾರಾಷ್ಟ್ರೀಯ ಸ್ಥಗಿತಗಳನ್ನು ಅನುಭವಿಸುತ್ತಿವೆ. ಇದು ದೇಶೀಯ ಮಟ್ಟದ ಇಂಟರ್‌ನೆಟ್‌ ಅಡೆತಡೆಗಳು ಅಥವಾ ಫಿಲ್ಟರಿಂಗ್‌ಗೆ ಸಂಬಂಧಿಸಿಲ್ಲ” ಎಂದು ನೆಟ್‌ಬ್ಲಾಕ್ಸ್‌ ತಿಳಿಸಿದೆ. ವಿಶೇಷವೆಂದರೆ ಈ ವರ್ಷದ ಮಾರ್ಚ್‌ನಲ್ಲಿಯೂ ಇದೇ ರೀತಿಯ ಸಮಸ್ಯೆ ಕಂಡು ಬಂದಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಬಳಕೆದಾರರು ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಖಾತೆ ಲಾಗ್ ಔಟ್ ಆಗುತ್ತಿರುವ ಬಗ್ಗೆ ದೂರು ನೀಡಿದ್ದರು.

ನೆಟ್ಟಿಗರು ಏನಂದ್ರು?

ಮೆಟಾ ಫ್ಲಾಟ್‌ಫಾರ್ಮ್‌ನಲ್ಲಿ ಪದೇ ಪದೆ ಇಂತಹ ಸಮಸ್ಯೆ ಎದುರಾಗುತ್ತಿರುವ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಯಾವ ಅಪ್ಲಿಕೇಷನ್‌ಗಳಲ್ಲಿಯೂ ಇಷ್ಟರ ಮಟ್ಟಿಗೆ ಸಮಸ್ಯೆ ಕಂಡುಬರುತ್ತಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯಿಂದ ನಿರಾಶೆಗೊಂಡ ಬಳಕೆದಾರರೊಬ್ಬರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಸ್ಥಗಿತದ ಬಗೆಗಿನ ನೆಟ್‌ಬ್ಲಾಕ್ಸ್‌ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಬಹುಶಃ ಈ ಸಮಸ್ಯೆ ಬಗೆಹರಿಯುವಂತೆ ಕಾಣಿಸುತ್ತಿಲ್ಲʼʼ ಎಂದು ಹೇಳಿದ್ದಾರೆ. ʼʼಮೆಟಾ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿರಬೇಕು. ಅದೇ ಕಾರಣಕ್ಕೆ ಫೇಸ್‌ಬುಕ್‌ ಕೂಡ ಕೆಲಸ ಮಾಡುತ್ತಿಲ್ಲʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

ಈ ವರ್ಷ ಮಾರ್ಚ್‌ನಲ್ಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿತ್ತು. ಕೆಲಹೊತ್ತು ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿರಲಿಲ್ಲ. ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಇಲ್ಲದೆ ಜನ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮೆಟಾ ಕಂಪನಿಯು ಪ್ರತಿಕ್ರಿಯಿಸಿದ್ದು, ಜನರ ಕ್ಷಮೆಯಾಚಿಸಿತ್ತು.

Continue Reading

ವಿದೇಶ

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Shehbaz Sharif: ಆರ್ಥಿಕವಾಗಿ ದಿವಾಳಿಯಾಗಿರುವ, ಉತ್ತಮ ನಾಯಕ ಸಿಗದೆ ಆಡಳಿತಾತ್ಮಕವಾಗಿಯೂ ಅರಾಜಕತೆಯಿಂದ ಕೂಡಿರುವ, ಉಗ್ರರ ಪೋಷಣೆಗಾಗಿ ಜಾಗತಿಕವಾಗಿ ಹಣಕಾಸು ನೆರವು ಸಿಗದೆ ಒದ್ಡಾಡುತ್ತಿರುವ ಪಾಕಿಸ್ತಾನ ಇದೀಗ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಮಾಹಿತಿ ನೀಡಿ, ʼʼನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆʼʼ ಎಂದಿದ್ದಾರೆ.

VISTARANEWS.COM


on

Shehbaz Sharif
Koo

ಇಸ್ಲಾಮಾಬಾದ್:‌ ಆರ್ಥಿಕವಾಗಿ ದಿವಾಳಿಯಾಗಿರುವ, ಉತ್ತಮ ನಾಯಕ ಸಿಗದೆ ಆಡಳಿತಾತ್ಮಕವಾಗಿಯೂ ಅರಾಜಕತೆಯಿಂದ ಕೂಡಿರುವ, ಉಗ್ರರ ಪೋಷಣೆಗಾಗಿ ಜಾಗತಿಕವಾಗಿ ಹಣಕಾಸು ನೆರವು ಸಿಗದೆ ಒದ್ಡಾಡುತ್ತಿರುವ ಪಾಕಿಸ್ತಾನ(Pakistan) ಈಗ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ (Shehbaz Sharif) ಮಂಗಳವಾರ ತಿಳಿಸಿದರು.

ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಸರ್ಕಾರಿ ಉದ್ಯಮಗಳ (SOEs) ಖಾಸಗೀಕರಣ ಪ್ರಕ್ರಿಯೆಯ ಪರಿಶೀಲನಾ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು 2024ರಿಂದ 29ರವರೆಗೆ ಹಂತ ಹಂತವಾಗಿ ನಡೆಯಲಿರುವ ಖಾಸಗೀಕರಣದ ಮಾರ್ಗಸೂಚಿಯನ್ನು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

“ಲಾಭದಲ್ಲಿರಲಿ ಅಥವಾ ನಷ್ಟದಲ್ಲಿರಲಿ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ಯಮಗಳನ್ನು ಖಾಸಗೀಕರಣಗೊಳಿಸಲಾಗುವುದು” ಎಂದು ಷರೀಫ್ ತಿಳಿಸಿದರು. ʼʼಈ ಕ್ರಮದಿಂದ ತೆರಿಗೆದಾರರ ಹಣವನ್ನು ಉಳಿಸಬಹುದುʼʼ ಎಂದು ಅವರು ಹೇಳಿದರು. ಆದರೆ ಯಾವ ಕ್ಷೇತ್ರಗಳನ್ನು ಕಾರ್ಯತಂತ್ರ ಮತ್ತು ಕಾರ್ಯತಂತ್ರೇತರ ಎಂದು ಪರಿಗಣಿಸಲಾಗುತ್ತದೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟನೆ ಹೊರ ಬಿದ್ದಿಲ್ಲ. ಹೀಗಾಗಿ ಯಾವೆಲ್ಲ ಕಂಪನಿಗಳು ಖಾಸಗೀಕರಣಕ್ಕೆ ಒಳಪಡುತ್ತವೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ 3 ಶತಕೋಟಿ ಡಾಲರ್‌ ಮೊತ್ತದ ಸಾಲದ ಪ್ಯಾಕೇಜ್‌ ಒದಗಿಸಲು ಐಎಂಎಫ್‌ (International Monetary Fund) ಸಮ್ಮತಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಐಎಂಎಫ್‌ನ ಶಿಫಾರಸ್ಸು

ಐಎಂಎಫ್‌ ಪಾಕಿಸ್ತಾನಕ್ಕೆ ಸೂಚಿದ ಶಿಫಾರಸ್ಸಿನ ಪಟ್ಟಿಯಲ್ಲಿ ನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣವೂ ಸೇರಿದೆ. ಸದ್ಯ ಪಾಕ್‌ ಹಣಕಾಸಿನ ಕೊರತೆಯಿಂದ ಬಳಲುತ್ತಿದೆ. ವಿದೇಶಿ ವಿನಿಮಯ ಮೀಸಲು ನಿಧಿ ಆಮದನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕೆಲವು ಮಧ್ಯಪ್ರಾಚ್ಯ ದೇಶಗಳಿಗೆ ಹೋಲಿಸಿದರೆ ಪಾಕಿಸ್ತಾನದ ಸರ್ಕಾರಿ ಉದ್ಯಮಗಳು 2019ರಲ್ಲಿ ಜಿಡಿಪಿಯ ಶೇ. 44ರಷ್ಟು ಗಣನೀಯ ಪಾಲನ್ನು ಹೊಂದಿವೆ. 2019ರಲ್ಲಿ ಸುಮಾರು ಅರ್ಧದಷ್ಟು ಸರ್ಕಾರಿ ಉದ್ಯಮಗಳು ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಎಂದು ಐಎಂಎಫ್‌ ಹೇಳಿದೆ.

ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹಿಂದಿನ ಖಾಸಗೀಕರಣ ಪ್ರಯತ್ನಗಳು ವಿಫಲವಾಗಿದ್ದವು ಎಂದು ಆರ್ಥಿಕ ತಜ್ಞರು ಕಂಡುಕೊಂಡಿದ್ದಾರೆ. ನಷ್ಟದಲ್ಲಿರುವ ಅತಿದೊಡ್ಡ ಉದ್ಯಮಗಳಲ್ಲಿ ಒಂದಾದ ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ಸೇರಿದಂತೆ ಹಲವು ಎಸ್ಒಇಗಳಿಗೆ ಪಾಕಿಸ್ತಾನ ವರ್ಷಗಳಿಂದ ಶತಕೋಟಿ ಡಾಲರ್‌ ಖರ್ಚು ಮಾಡುತ್ತಿದೆ. ಸದ್ಯ ಇದು ಮಾರಾಟದ ಅಂತಿಮ ಹಂತದಲ್ಲಿದೆ. ಖರೀದಿದಾರರಿಗೆ ಈ ವಾರಾಂತ್ಯದವರೆಗೆ ಗಡುವು ನೀಡಲಾಗಿದೆ.

ಇದನ್ನೂ ಓದಿ: ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

ಮಾರಾಟ ಮಾಡಲು ನಿರ್ಧರಿಸಿರುವ ಪಟ್ಟಿಯಲ್ಲಿ ಅಮೆರಿಕದ ನ್ಯೂಯಾರ್ಕ್‌ನ ಮ್ಯಾನ್ಹ್ಯಾಟನ್‌ನಲ್ಲಿರುವ ಐಷಾರಾಮಿ ರೂಸ್‌ವೆಲ್ಟ್‌ ಹೋಟೆಲ್ ಮತ್ತು ಎರಡು ವಿಮಾ ಕಂಪೆನಿಗಳು ಸೇರಿವೆ. ಇದರ ಜತೆಗೆ ನಾಲ್ಕು ವಿದ್ಯುತ್ ಸ್ಥಾವರಗಳೂ ಇವೆ. ʼʼನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಂತ ಹಂತವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆʼʼ ಎಂದು ಪ್ರಧಾನಿ ಶೆಹಬಾಜ್ ಷರೀಫ್ ವಿವರಿಸಿದ್ದಾರೆ.

Continue Reading

ವಿದೇಶ

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಆಹಾರದ ಕೊರತೆಯಿಂದ ಗಾಜಾ ಪಟ್ಟಿಯಲ್ಲಿ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಒಮಾನಿ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು ಇದಕ್ಕೆ ಸಾಕ್ಷಿಯನ್ನು ನೀಡಿದ್ದಾರೆ. ಇದರ ವಿಡಿಯೋ ಭಾರೀ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ಗಾಜಾ ಪಟ್ಟಿಯಲ್ಲಿ (Gaza strip) ಆಹಾರದ ಕೊರತೆಯಿಂದ ತೀವ್ರ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಪ್ಯಾಲೆಸ್ಟೀನಿಯಾದವರಿಗೆ (Palestinians) ಚಿಕಿತ್ಸೆ ನೀಡಲು ಗಾಜಾದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸ್ವಯಂಸೇವಕರಾಗಿ ಕೆಲಸ ಮಾಡುವ ಒಮಾನಿ (omani) ವೈದ್ಯ ಖಲೀದ್ ಅಲ್-ಶಮೌಸಿ (Khaled Al-Shamousi) ಅವರು ಸಾಮಾಜಿಕ ಜಾಲತಾಣವಾದ (Viral News) ಎಕ್ಸ್ ನಲ್ಲಿ (x) ಹೇಳಿಕೊಂಡಿದ್ದಾರೆ.

ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿನ ಅವರ ಖಾತೆಯಲ್ಲಿ ಡಾ. ಖಲೀದ್ ಅಲ್-ಶಮೌಸಿ ಅವರು, ಒಂದು ಮಗು ಲೋಹದ ತುಂಡನ್ನು ನುಂಗಿತ್ತು. ಅದು ಅನ್ನನಾಳದಲ್ಲಿ ಸಿಲುಕಿಕೊಂಡಿತ್ತು ಎಂದು ವಿವರಿಸಿದ್ದಾರೆ.

ಅವರು ಪರೀಕ್ಷಿಸಿದ ಚಿಕ್ಕ ಹುಡುಗಿಯ ಎದೆಯ ಎಕ್ಸ್-ರೇ ಅನ್ನು ತೋರಿಸಿರುವ ಅವರು ಗಾಜಾದ ಮಕ್ಕಳು ತೀವ್ರ ಹಸಿವಿನಿಂದ ನಾಣ್ಯಗಳು, ಬೆಣಚುಕಲ್ಲುಗಳು ಮತ್ತು ಸಣ್ಣ ಬ್ಯಾಟರಿಗಳನ್ನು ತಿನ್ನುತ್ತಿದ್ದಾರೆ. ಅವುಗಳಲ್ಲಿ ಒಬ್ಬಾಕೆ 8 ವರ್ಷದ ಬಾಲಕಿ. ಅವಳು ಲೋಹದ ತುಂಡನ್ನು ನುಂಗಿದಳು ಮತ್ತು ಅದು ಅವಳ ಅನ್ನನಾಳದಲ್ಲಿ ಸಿಲುಕಿಕೊಂಡಿತು ಎಂದು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಅವರು ಮಗುವಿನ ಮೇಲೆ ಸೂಕ್ಷ್ಮವಾದ ಆಪರೇಷನ್ ಮಾಡುತ್ತಿರುವ ವಿಡಿಯೋ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಲೋಹದ ತುಂಡನ್ನು ತೆಗೆದುಹಾಕಿದ ಬಳಿಕ ವೈದ್ಯಕೀಯ ಸಿಬ್ಬಂದಿಯ ಚಪ್ಪಾಳೆಗಳನ್ನು ಕೇಳಿದಾಗ ಶಮೌಸಿ ತನ್ನ ಬಾಯಿಯ ಮೂಲಕ ಮಗುವಿನ ಕರುಳಿನಿಂದ ಸಣ್ಣ ಬ್ಯಾಟರಿಯನ್ನು ತೆಗೆದುಹಾಕುತ್ತಿರುವಂತೆ ಕಾಣಿಸಿಕೊಂಡರು.

ಬಳಿಕ ಈ ಕುರಿತು ಎಕ್ಸ್ ನಲ್ಲಿ ಹೇಳಿರುವ ಅವರು, ತೀವ್ರವಾದ ಹಸಿವು,ಆಹಾರ ಪದಾರ್ಥಗಳ ಸರಬರಾಜುಗಳ ಕೊರತೆ ಮತ್ತು ಸುತ್ತಮುತ್ತಲಿನ ದೇಶಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳು ಬ್ಯಾಟರಿಗಳನ್ನು ಮಿಠಾಯಿಗಳೆಂದು ಭಾವಿಸಿ ನುಂಗಿದರು. ಇಲ್ಲಿ ನಾವು ಗಾಜಾದಲ್ಲಿ ಮಗು ನುಂಗಿದ ಬ್ಯಾಟರಿಯನ್ನು ಹೊರತೆಗೆದಿದ್ದೇವೆ ಎಂದು ಹೇಳಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಅಲ್ಲಿ ಅನೇಕರು ಈ ಗೊಂದಲದ ದೃಶ್ಯಗಳ ಬಗ್ಗೆ ತಮ್ಮ ಕೋಪ ಮತ್ತು ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆಹಾರ ಪೂರೈಕೆ ಇಲ್ಲ

ಕಳೆದ ವಾರದಿಂದ ದಕ್ಷಿಣ ಗಾಜಾದ ಎರಡು ಪ್ರಮುಖ ಪ್ರದೇಶಗಳಿಗೆ ಯಾವುದೇ ಆಹಾರ ಪೂರೈಕೆಯಾಗಿಲ್ಲ. ಗಾಜಾದಲ್ಲಿ ಸುಮಾರು 1.1 ಮಿಲಿಯನ್ ಪ್ಯಾಲೆಸ್ಟೀನಿಯಾದವರು ಹಸಿವಿನಿಂದ ಕಂಗೆಟ್ಟಿದ್ದಾರೆ. ಹಸಿವಿನ ದುರಂತದ ಮಟ್ಟವನ್ನು ಇಲ್ಲಿನ ಜನರು ಎದುರಿಸುತ್ತಿದ್ದಾರೆ ಮತ್ತು ಯುಎನ್ ಪ್ರಕಾರ ಉತ್ತರದಲ್ಲಿ “ಪೂರ್ಣ ಕ್ಷಾಮ” ಉಂಟಾಗಿದೆ ಎನ್ನಲಾಗಿದೆ.

ದಕ್ಷಿಣ ಮತ್ತು ಉತ್ತರ ಗಾಜಾದಲ್ಲಿ ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳನ್ನು ಹೆಚ್ಚಿಸುವ ಮೂಲಕ ಇತ್ತೀಚಿನ ದಿನಗಳಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸ್ಥಳಾಂತರಗೊಂಡಿದ್ದಾರೆ. ಕಳೆದ ವಾರದಲ್ಲಿ ಸುಮಾರು 4,50,000 ಪ್ಯಾಲೆಸ್ಟೀನಿಯನ್ನರನ್ನು ಗಾಜಾದ ದಕ್ಷಿಣದಲ್ಲಿರುವ ರಫಾದಿಂದ ಹೊರಹಾಕಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

ಇಸ್ರೇಲ್ ನಗರಕ್ಕೆ ತಳ್ಳುವ ಮೊದಲು ರಫಾದಲ್ಲಿ ಸುಮಾರು 1.3 ಮಿಲಿಯನ್ ಜನರು ಆಶ್ರಯ ಪಡೆದಿದ್ದರು. ಇದು ಕೊನೆಯ ಹಮಾಸ್ ಭದ್ರಕೋಟೆ ಎಂದು ಇಸ್ರೇಲ್ ಹೇಳುತ್ತದೆ.

ಗಾಜಾದಲ್ಲಿ ಏಳು ತಿಂಗಳ ಇಸ್ರೇಲಿ ಬಾಂಬ್ ದಾಳಿ ಮತ್ತು ನೆಲದ ಕಾರ್ಯಾಚರಣೆಗಳು 35,000 ಕ್ಕೂ ಹೆಚ್ಚು ಜನರನ್ನು ಕೊಂದಿವೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
viral video shakti scheme women fight
ವೈರಲ್ ನ್ಯೂಸ್2 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಅಂಗಿ ಹರಿದುಕೊಂಡು ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ5 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ19 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ23 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ45 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ57 mins ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ60 mins ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ1 hour ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ1 hour ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌