Antonio Guterres | ಪ್ರತಿ 11 ನಿಮಿಷಕ್ಕೆ ಸಂಗಾತಿಯಿಂದಲೇ ಮಹಿಳೆ ಕೊಲೆ! ಹೀಗಾದ್ರೆ ಅವರು ಯಾರನ್ನ ನಂಬೋದು? - Vistara News

ಪ್ರಮುಖ ಸುದ್ದಿ

Antonio Guterres | ಪ್ರತಿ 11 ನಿಮಿಷಕ್ಕೆ ಸಂಗಾತಿಯಿಂದಲೇ ಮಹಿಳೆ ಕೊಲೆ! ಹೀಗಾದ್ರೆ ಅವರು ಯಾರನ್ನ ನಂಬೋದು?

ಮಹಿಳೆಯರ ವಿರುದ್ಧ ಹಿಂಸಾಚಾರಗಳು ಹೆಚ್ಚುತ್ತಿದ್ದು ಅವುಗಳನ್ನು ತಡೆಯುವ ಕೆಲಸವನ್ನು ಸರ್ಕಾರಗಳು ಮಾಡಬೇಕಿದೆ ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟರೆಸ್ (Antonio Guterres) ಅವರು ಹೇಳಿದ್ದಾರೆ.

VISTARANEWS.COM


on

Antonio Guterres
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವಸಂಸ್ಥೆ: ಪ್ರತಿ 11 ನಿಮಿಷಕ್ಕೆ ಮಹಿಳೆ ಅಥವಾ ಹೆಣ್ಣು ಮಗು ತನ್ನ ಕುಟುಂಬದ ಸದಸ್ಯರು ಅಥವಾ ತಮ್ಮ ಹತ್ತಿರದ ಸಂಗಾತಿಯಿಂದ ಕೊಲೆಯಾಗುತ್ತಿದ್ದಾರೆಂದು ವಿಶ್ವಸಂಸ್ಥೆಯ (United Nations) ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟರೆಸ್ (Antonio Guterres) ಅವರು ಹೇಳಿದ್ದಾರೆ. ಮಹಿಳೆಯರ ವಿರುದ್ಧ ಹಿಂಸಾಚಾರ ಹೆಚ್ಚುತ್ತಿದ್ದು, ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅಗತ್ಯವಿದೆ ಎಂದು ಅವರು ಸಲಹೆ ನೀಡಿದ್ದಾರೆ. ಇತ್ತೀಚೆಗೆ ಬೆಳಕಿಗೆ ಬಂದ ಶ್ರದ್ಧಾ ವಾಳ್ಕರ್ (Shraddha Murder Case) ಭೀಕರ ಕೊಲೆಯನ್ನು ರೆಫರೆನ್ಸ್ ಆಗಿಟ್ಟುಕೊಂಡು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟರೆಸ್ ಅವರು ಈ ಮಾಹಿತಿಯನ್ನು ಹೊರಗೆಡವಿದ್ದಾರೆ.

ನವೆಂಬರ್ 25ರಂದು ಮಹಿಳೆಯರ ವಿರುದ್ಧ ಹಿಂಸೆ ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಮತ್ತು ಹೆಣ್ಣು ಮಗುವಿನ ವಿರುದ್ಧ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಪ್ರತಿ 11 ನಿಮಿಷಕ್ಕೆ ಮಹಿಳೆ ಅಥವಾ ಹೆಣ್ಣು ಮಗು ತನ್ನ ಕುಟುಂಬದ ಸದಸ್ಯರು ಅಥವಾ ಹತ್ತಿರದ ಸಂಗಾತಿಯಿಂದಲೇ ಕೊಲೆಯಾಗುತ್ತಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಬಳಿಕ ಉಂಟಾದ ಒತ್ತಡಗಳು, ಅನಿವಾರ್ಯತೆಗಳು ಮಹಿಳೆಯರ ವಿರುದ್ಧದ ಹಿಂಸೆಯನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಅವರು ತಿಳಿಸಿದರು.

ಮಹಿಳೆಯರು ಮತ್ತು ಹೆಣ್ಣು ಮಕ್ಕಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರವು ಎಲ್ಲಾ ಹಂತಗಳಲ್ಲಿ ಭಾಗವಹಿಸುವಿಕೆಯನ್ನು ಮಿತಿಗೊಳಿಸುತ್ತದೆ. ಅವರ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ನಿರಾಕರಿಸುತ್ತದೆ. ನಮ್ಮ ಜಗತ್ತಿಗೆ ಅಗತ್ಯವಿರುವ ಸಮಾನ ಆರ್ಥಿಕ ಚೇತರಿಕೆ ಮತ್ತು ಸುಸ್ಥಿರ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ. ಹಾಗಾಗಿ, ಈ ನಿಟ್ಟಿನಲ್ಲಿ ಎಲ್ಲ ಸರ್ಕಾರಗಳ ಗಂಭೀರವಾಗಿ ಆಲೋಚಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ | UN Security Council | ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವಕ್ಕೆ ಭಾರತವನ್ನು ಬೆಂಬಲಿಸಿದ ರಷ್ಯಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

Gopi Hinduja: ಗೋಪಿಚಂದ್‌ ಅವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

VISTARANEWS.COM


on

Gopi Hinduja
Koo

ಲಂಡನ್‌: ಬ್ರಿಟಿಷರು ನಮ್ಮನ್ನು ಆಳಿದರು, ಶತಮಾನಗಳವರೆಗೆ ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದರು ಎಂಬ ಬೇಸರವು ಪ್ರತಿ ಭಾರತೀಯನನ್ನೂ ಕಾಡುತ್ತದೆ. ಆದರೆ, ಭಾರತ ಮೂಲದ ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾದರೆ, ಭಾರತವು ಆರ್ಥಿಕತೆ ಸೇರಿ ಯಾವುದೇ ವಿಷಯದಲ್ಲಿ ಹಿಂದಿಕ್ಕಿದರೆ ನಮಗೆ ಖುಷಿಯಾಗುತ್ತದೆ. ಇಂತಹ ಖುಷಿಗೆ ಮತ್ತೊಂದು ಕಾರಣ ಸಿಕ್ಕಿದೆ. ಭಾರತ ಮೂಲದ ಗೋಪಿಚಂದ್‌ ಹಿಂದುಜಾ (Gopi Hinduja) ಹಾಗೂ ಅವರ ಕುಟುಂಬವು ಬ್ರಿಟನ್‌ನ ಶ್ರೀಮಂತ (UK’s Richest) ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಅಷ್ಟೇ ಅಲ್ಲ, ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

‘ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋಪಿಚಂದ್‌ ಹಿಂದುಜಾ ಅವರೇ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ. ಬ್ರಿಟನ್‌ನವರೇ ಆದ ಸರ್‌ ಲೆನಾರ್ಡ್‌ ಬ್ಲಾವಾಟ್ನಿಕ್‌ (29 ಶತಕೋಟಿ ಪೌಂಡ್ಸ್)‌, ಡೇವಿಡ್‌, ಸೈಮನ್‌ ರುಬೇನ್‌ ಮತ್ತು ಕುಟುಂಬ (24.98 ಶತಕೋಟಿ ಪೌಂಡ್ಸ್)‌, ಸರ್‌ ಜಿಮ್‌ ರ‍್ಯಾಟ್‌ಕ್ಲಿಫ್‌ (23 ಶತಕೋಟಿ ಪೌಂಡ್ಸ್)‌ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಗೋಪಿಚಂದ್‌ ಹಿಂದುಜಾ ಅವರು ಭಾರತ ಮೂಲದವರಾಗಿದ್ದು, ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರ ತಂದೆಯೂ ಉದ್ಯಮಿಯಾಗಿದ್ದರು. ಹಿಂದುಜಾ ಗ್ರೂಪ್‌ಗೆ ಗೋಪಿಚಂದ್‌ ಹಿಂದುಜಾ ಅವರು ಸಹ ಚೇರ್ಮನ್‌ ಆಗಿದ್ದಾರೆ. ಇವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

“ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬವು ಜಗತ್ತಿನಾದ್ಯಂತ 48 ದೇಶಗಳಲ್ಲಿ ಉದ್ಯಮಗಳನ್ನು ಹೊಂದಿದೆ. ಆಟೋಮೋಟಿವ್‌, ತೈಲ, ಕೆಮಿಕಲ್‌, ಬ್ಯಾಂಕಿಂಗ್‌, ಐಟಿ, ಫೈನಾನ್ಸ್‌, ಸೈಬರ್‌ ಸೆಕ್ಯುರಿಟಿ, ಆರೋಗ್ಯ, ಮೂಲ ಸೌಕರ್ಯ ಅಭಿವೃದ್ಧಿ, ಮನರಂಜನೆ, ಮಾಧ್ಯಮ, ರಿಯಲ್‌ ಎಸ್ಟೇಟ್‌ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಹಿಂದುಜಾ ಗ್ರೂಪ್‌ ಪ್ರಾಬಲ್ಯ ಸಾಧಿಸಿದೆ” ಎಂದು ದಿ ಸಂಡೇ ಟೈಮ್ಸ್‌ ಬಣ್ಣಿಸಿದೆ. ಹಿಂದುಜಾ ಕುಟುಂಬಸ್ಥರು ಮುಂಬೈನಲ್ಲಿ ಸಣ್ಣದೊಂದು ಉದ್ಯಮ ಆರಂಭಿಸಿ, ಈಗ ಬ್ರಿಟನ್‌ನ ಶ್ರೀಮಂತ ಔದ್ಯಮಿಕ ಕುಟುಂಬ ಎನಿಸಿದೆ. ಇವರ ಮನೆಯು ಬ್ರಿಟನ್‌ ಅರಸ ವಾಸಿಸುವ ಬಕಿಂಗ್‌ಹ್ಯಾಮ್‌ ಪ್ಯಾಲೇಸ್‌ ಬಳಿಯೇ ಇದೆ.

ಇದನ್ನೂ ಓದಿ: Indian billionaires: ಭಾರತದಲ್ಲಿ 200 ಬಿಲಿಯನೇರ್‌ಗಳು! ಅತಿ ಶ್ರೀಮಂತರ ಸಂಖ್ಯೆಯಲ್ಲಿ ಭಾರತ ನಂ.3

Continue Reading

ಕರ್ನಾಟಕ

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC 2024 Exam 2: ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮಾಡಲು ಉದ್ದೇಶಿಸಲಾಗಿದ್ದ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಲಾಗಿದೆ. ಮೇ 29ರಿಂದ ಜೂ.6ರವರೆಗೆ ಈ ವಿಶೇಷ ತರಗತಿಗಳು ನಡೆಯಲಿವೆ. ಇನ್ನು ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ

VISTARANEWS.COM


on

SSLC Exam 2024
Koo

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2

ಎಸ್ಎಸ್ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ (Karnataka SSLC 2024 Exam 2) ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಲಿದೆ. ಈ ಹಿಂದೆ ಜೂನ್‌ 7ರಿಂದ 14ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ-2 ನಿಗದಿಯಾಗಿತ್ತು. ಆದರೆ, ಪರೀಕ್ಷೆ ಮುಂದೂಡಿಕೆಯಾಗಿದ್ದು, ಜೂನ್‌ 14ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLC Result 2024 SSLC 2nd and 3rd exam aspirants to have special classes

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ | SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

Continue Reading

ಕ್ರಿಕೆಟ್

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Gautam Gambhir : ಮುಂದಿನ ತಿಂಗಳು ಟಿ 20 ವಿಶ್ವಕಪ್ ಮುಗಿದ ನಂತರ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಈ ಬಾರಿ ವಿಸ್ತರಣೆ ಅವಧಿ ಸ್ವೀಕರಿಸದಿರಲು ಭಾರತದ ಮಾಜಿ ನಾಯಕ ನಿರ್ಧರಿಸಿದ್ದಾರೆ. ಅವರ ಮೂಲ ಒಪ್ಪಂದವು ಏಕದಿನ ವಿಶ್ವಕಪ್ ನಂತರ ಕಳೆದ ವರ್ಷವೇ ಕೊನೆಗೊಂಡಿತ್ತು ಆದರೆ ಟಿ 20 ವಿಶ್ವಕಪ್ ವರೆಗೆ ಕೋಚ್ ಆಗಿ ಮುಂದುವರಿಯಲು ಬಿಸಿಸಿಐ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು.

VISTARANEWS.COM


on

Koo

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟರ್​ ಗೌತಮ್ ಗಂಭೀರ್ (Gautam Gambhir) ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ. ಬಿಸಿಸಿಐ ಪ್ರಸ್ತುತ ರಾಹುಲ್ ದ್ರಾವಿಡ್ ಅವರ ಬದಲಿ ಆಟಗಾರನನ್ನು ಹುಡುಕುತ್ತಿದೆ. ಈಗಾಗಲೇ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅವರಲ್ಲಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಸಿಸಿಐ ಯೋಜನೆ ರೂಪಿಸಿದೆ.

ಮುಂದಿನ ತಿಂಗಳು ಟಿ 20 ವಿಶ್ವಕಪ್ ಮುಗಿದ ನಂತರ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಈ ಬಾರಿ ವಿಸ್ತರಣೆ ಅವಧಿ ಸ್ವೀಕರಿಸದಿರಲು ಭಾರತದ ಮಾಜಿ ನಾಯಕ ನಿರ್ಧರಿಸಿದ್ದಾರೆ. ಅವರ ಮೂಲ ಒಪ್ಪಂದವು ಏಕದಿನ ವಿಶ್ವಕಪ್ ನಂತರ ಕಳೆದ ವರ್ಷವೇ ಕೊನೆಗೊಂಡಿತ್ತು ಆದರೆ ಟಿ 20 ವಿಶ್ವಕಪ್ ವರೆಗೆ ಕೋಚ್ ಆಗಿ ಮುಂದುವರಿಯಲು ಬಿಸಿಸಿಐ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು.

ಅಂತಿಮವಾಗಿ ದ್ರಾವಿಡ್ ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದರೆ ಗೌತಮ್ ಗಂಭೀರ್ ಅವರನ್ನು ಬದಲಿಯಾಗಿ ಬಿಸಿಸಿಐ ಬಯಸಿದೆ ಎಂದು ಇಎಸ್​​ಪಿಎನ್​ ಕ್ರಿಕ್ಇನ್ಫೋ ವರದಿ ಮಾಡಿದೆ. ಮಾಜಿ ಬ್ಯಾಟರ್​ ಬಿಸಿಸಿಐನ ವಿಶ್ ಲಿಸ್ಟ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: rfan Pathan : ಕಹಿ ನೆನಪು; ಬುರ್ಖಾ ಧರಿಸದ ಪತ್ನಿ ಜತೆ ಫೋಟೋ ತೆಗಿಸಿಕೊಳ್ಳಲು ಒಪ್ಪದ ಇರ್ಫಾನ್ ಪಠಾಣ್​​

ವರದಿಯ ಪ್ರಕಾರ, ಬಿಸಿಸಿಐ ಈಗಾಗಲೇ ಗೌತಮ್ ಗಂಭೀರ್ ಅವರನ್ನು ಸಂಪರ್ಕಿಸಿದೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ನ ಅಭಿಯಾನವು ಕೊನೆಗೊಂಡ ನಂತರ ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ನಡೆಯುವ ನಿರೀಕ್ಷೆಯಿದೆ. ವಿಶ್ವಕಪ್ ವಿಜೇತ ಆಟಗಾರ ಪ್ರಸ್ತುತ ಕೆಕೆಆರ್ಗೆ ಮಾರ್ಗದರ್ಶಕರಾಗಿ ತಮ್ಮ ವೃತ್ತಿಯನ್ನು ನಡೆಸುತ್ತಿದ್ದಾರೆ. ಐಪಿಎಲ್ ಫೈನಲ್ ಪಂದ್ಯದ ಬಳಿಕ ಮೇ 27ರಂದು ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಗೌತಮ್ ಗಂಭೀರ್ ಅವರ ಕೋಚಿಂಗ್ ಅನುಭವ


ಗೌತಮ್ ಗಂಭೀರ್ ಅವರು ಅಂತಾರಾಷ್ಟ್ರೀಯ ಅಥವಾ ರಾಜ್ಯ ತಂಡಕ್ಕೆ ತರಬೇತುದಾರರಾಗಿ ತಮ್ಮ ವೃತ್ತಿಜೀವನವನ್ನು ಇನ್ನೂ ನಡೆಸಿಲ್ಲ. ಆದಾಗ್ಯೂ, ಮಾಜಿ ಕ್ರಿಕೆಟಿಗ ಕಳೆದ ಮೂರು ಋತುಗಳಲ್ಲಿ ಐಪಿಎಲ್ ಫ್ರಾಂಚೈಸಿಗಳೊಂದಿಗೆ ತರಬೇತುದಾರರಾಗಿ ಸಂಬಂಧ ಹೊಂದಿದ್ದರು. 2022 ಮತ್ತು 2023ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದರು. ಅವರ ಅಧಿಕಾರಾವಧಿಯಲ್ಲಿ, ಎಲ್ಎಸ್​ಜಿ ಎರಡೂ ಋತುಗಳಲ್ಲಿ ಪ್ಲೇಆಫ್​ಗೆ ಅರ್ಹತೆ ಪಡೆಯಿತು.

ಪ್ರಸಕ್ತ ಋತುವಿನಲ್ಲಿ, ಅವರು ಕೆಕೆಆರ್ಗೆ ಸೇರಲು ನಿರ್ಧರಿಸಿದರು ಮತ್ತು ತಕ್ಷಣದ ಪರಿಣಾಮ ಬೀರಿದ್ದಾರೆ. ಕೆಕೆಆರ್ ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನವನ್ನು ಪಡೆದ ನಂತರ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಗೌತಮ್ ಗಂಭೀರ್ ದೊಡ್ಡ ಸಂದರ್ಭಗಳಲ್ಲಿ ಪ್ರದರ್ಶನ ನೀಡುವ ಖ್ಯಾತಿಯನ್ನು ಹೊಂದಿದ್ದಾರೆ.

2007ರ ಟಿ20 ವಿಶ್ವಕಪ್ ಫೈನಲ್ ಹಾಗೂ 2011ರ ವಿಶ್ವಕಪ್ ಫೈನಲ್ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಐಪಿಎಲ್ನಲ್ಲಿ ಗಂಭೀರ್ 2012 ರಲ್ಲಿ ಕೆಕೆಆರ್ ತಂಡವನ್ನು ಚೊಚ್ಚಲ ಪ್ರಶಸ್ತಿಗೆ ಮುನ್ನಡೆಸಿದರು ಮತ್ತು 2014 ರಲ್ಲಿ ಮತ್ತೊಂದು ಪ್ರಶಸ್ತಿಗೆ ಮಾರ್ಗದರ್ಶನ ನೀಡಿದರು. 2014ರಲ್ಲಿ ಕೆಕೆಆರ್ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯ ಫೈನಲ್ಗೆ ಅರ್ಹತೆ ಪಡೆದಿತ್ತು.

Continue Reading

ರಾಜಕೀಯ

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Prajwal Revanna Case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ ಎಂದು ಜೆಡಿಎಸ್‌ ದೂರಿದೆ.

VISTARANEWS.COM


on

Prajwal Revanna Case JDS calls CD Shivakumar pen drive gang
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದೇ ಇದರ ಹಿಂದಿರುವ ಸಂಚಾಗಿದೆ ಎಂದು ಜೆಡಿಎಸ್‌ ಟ್ವೀಟ್‌ ಮೂಲಕ ಆರೋಪ ಮಾಡಿದೆ.

ಜೆಡಿಎಸ್‌ ಟ್ವೀಟ್‌ನಲ್ಲೇನಿದೆ?

“CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್”
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ” ಎಂದು ಜೆಡಿಎಸ್‌ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

Continue Reading
Advertisement
Fan Code OTT Subscription Now for Jio AirFiber JioFiber Jio Mobility Customers
ದೇಶ3 mins ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ8 mins ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ49 mins ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ54 mins ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ59 mins ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಕ್ರಿಕೆಟ್1 hour ago

Gautam Gambhir : ಗೌತಮ್​ ಗಂಭೀರ್ ಟೀಮ್ ಇಂಡಿಯಾದ ಮುಂದಿನ ಕೋಚ್​​?

Retirement Plan
ಮನಿ ಗೈಡ್1 hour ago

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

Siddharth Kak
ದೇಶ1 hour ago

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

Prajwal Revanna Case JDS calls CD Shivakumar pen drive gang
ರಾಜಕೀಯ1 hour ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Swati Maliwal
ದೇಶ1 hour ago

Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 hour ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ15 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌