American Bully XL Ban: ಜನರನ್ನು ಸಾಯಿಸುತ್ತಿರುವ ನಾಯಿಯನ್ನು ನಿಷೇಧಿಸಿದ ಇಂಗ್ಲೆಂಡ್ ಸರ್ಕಾರ! - Vistara News

ಪ್ರಮುಖ ಸುದ್ದಿ

American Bully XL Ban: ಜನರನ್ನು ಸಾಯಿಸುತ್ತಿರುವ ನಾಯಿಯನ್ನು ನಿಷೇಧಿಸಿದ ಇಂಗ್ಲೆಂಡ್ ಸರ್ಕಾರ!

American Bully XL Ban: ಒಂದೇ ವಾರದಲ್ಲಿ ಮಗು ಸೇರಿ ಇಬ್ಬರು ಇಂಗ್ಲೆಂಡ್‌ನಲ್ಲಿ ಈ ಅಮೆರಿಕನ್ ಬುಲ್ಲಿ ಎಕ್ಸ್‌ಎಲ್ ತಳಿಯ ನಾಯಿಗಳಿಗೆ ಬಲಿಯಾಗಿದ್ದಾರೆ.

VISTARANEWS.COM


on

American Bully XL Ban in UK Says PM Rishi Sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಅಮೆರಿಕನ್ ಬುಲ್ಲಿ ಎಕ್ಸ್‌ಎಲ್ (American Bully XL Ban) ತಳಿಯ ನಾಯಿಯ ಮೇಲೆ ಇಂಗ್ಲೆಂಡ್ ಸರ್ಕಾರ (UK Government) ನಿಷೇಧ ಹೇರಲು ಮುಂದಾಗಿದೆ. ಇತ್ತೀಚೆಗಷ್ಟೇ, ಸೆಂಟ್ರಲ್ ಇಂಗ್ಲೆಂಡ್‌ನಲ್ಲಿ ಈ ನಾಯಿಯ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಕಾರಣಕ್ಕಾಗಿಯೇ ಬ್ರಿಟನ್ ಪ್ರಧಾನಿ ರಿಷಿ ಸುನಕ್ (Britain PM Rishi Suank) ಅವರು ಅಮೆರಿಕನ್ ಬುಲ್ಲಿ ಎಕ್ಸ್‌ಎಲ್ ನಾಯಿಯನ್ನು ನಿಷೇಧಿಸುವ ನಿರ್ಧಾರವನ್ನು ಕೈಗೊಂಡು, ಜಾರಿ ಮಾಡಲು ಹೊರಟಿದ್ದಾರೆ.

ಅಮೆರಿಕನ್ ಎಕ್ಸ್‌ಎಲ್ ಬುಲ್ಲಿ ನಮ್ಮ ಸಮುದಾಯಗಳಿಗೆ, ವಿಶೇಷವಾಗಿ ಮಕ್ಕಳಿಗೆ ಸ್ಪಷ್ಟ ಮತ್ತು ಮಾರಣಾಂತಿಕವಾದ ಅಪಾಯವನ್ನು ತಂದೊಡ್ಡುತ್ತಿದೆ. ನಾವು ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ತಳಿಯ ನಿಷೇಧಿಸಲು ನಾನು ತುರ್ತು ಸಲಹೆಯನ್ನು ನೀಡಿದ್ದೇನೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಹೇಳಿದ್ದಾರೆ.

ಎರಡು ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆಗಾಗಿ ಗುರುವಾರ ತುರ್ತು ಸೇವೆಗೆ ಕರೆ ಮಾಡಲಾಗಿತ್ತು. ಆದರೆ, ದುರದೃಷ್ಟವಶಾತ್, ನಾಯಿ ದಾಳಿಗಳಿಂದ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ. ಅವರನ್ನು ಉಳಿಸಿಕೊಳ್ಳುವ ಯಾವುದೇ ಪ್ರಯತ್ನಗಳು ಕೈಗೂಡಲಿಲ್ಲ ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಆಂಬ್ಯುಲೆನ್ಸ್ ಸೇವೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Street dog attack | 10 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಊಟಕ್ಕೆ ಹೋಗುತ್ತಿದ್ದಾಗ ಅಟ್ಯಾಕ್‌

ಈ ಘಟನೆಗೆ ಸಂಬಂಧಿಸಿದಂತೆ ಸ್ಟಾಫರ್ಡ್‌ಶೈರ್ ಪೋಲಿಸರು 30 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಈತ ತನ್ನ ನಾಯಿಗಳ ಮೇಲಿನ ನಿಯಂತ್ರಣ ಕಳೆದುಕೊಂಡ ಪರಿಣಾಮವೇ ಅವರು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿದವು. ಈ ಘಟನೆಯನ್ನು ಕುರಿತು ಪೊಲೀಸ್ ತಂಡಗಳು ಇನ್ನೂ ತನಿಖೆ ನಡೆಸುತ್ತಿವೆ. ಸ್ಟಾಫರ್ಡ್‌ಶೈರ್ ಬುಲ್ ಟೆರಿಯರ್ ಕ್ರಾಸ್‌ಬ್ರೀಡ್ ಮತ್ತು ಅಮೇರಿಕನ್ ಬುಲ್ಲಿ ಎಕ್ಸ್‌ಎಲ್‌ ನಾಯಿಗಳ ದಾಳಿಯಲ್ಲಿ 11 ವರ್ಷದ ಬಾಲಕಿ ಗಾಯಗೊಂಡಿರುವ ಒಂದು ವಾರದೊಳಗೆ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

RBI Guideline: ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅವೈಜ್ಞಾನಿಕವಾಗಿ ಬಡ್ಡಿ ವಿಧಿಸಿ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುವ ಬ್ಯಾಂಕುಗಳು ಮತ್ತು ಇತರ ಸಾಲ ನೀಡುವ ಸಂಸ್ಥೆಗಳಿಗೆ ಬಿಸಿ ಮುಟ್ಟಿಸಿದೆ. ಸಂಗ್ರಹಿಸಿದ ಹೆಚ್ಚುವರಿ ಬಡ್ಡಿ ಮತ್ತು ಇತರ ಶುಲ್ಕಗಳನ್ನು ಗ್ರಾಹಕರಿಗೆ ಮರುಪಾವತಿಸಲು ಸಲಹೆ ನೀಡಿದೆ. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

RBI Guideline
Koo

ನವದೆಹಲಿ: ಕೆಲವು ಬ್ಯಾಂಕುಗಳು ಮತ್ತು ಸಾಲ ನೀಡುವ ಸಂಸ್ಥೆಗಳು ಅವೈಜ್ಞಾನಿಕವಾಗಿ ಬಡ್ಡಿ ವಿಧಿಸಿ ಗ್ರಾಹಕರಿಗೆ ಅನ್ಯಾಯ ಎಸಗುತ್ತಿರುವ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India) ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕೂಡಲೇ ಈ ತಪ್ಪು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಹಕರಿಂದ ಪಡೆದುಕೊಂಡ ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಬೇಕು ಎಂದು ನಿರ್ದೇಶನ ನೀಡಿದೆ (RBI Guideline).

2003ರಲ್ಲಿ ವಿವಿಧ ನಿಯಂತ್ರಿತ ಘಟಕಗಳಿಗೆ (REs) ಹೊರಡಿಸಲಾದ ನ್ಯಾಯೋಚಿತ ಆಚರಣೆಗಳ ಸಂಹಿತೆಯ ಮಾರ್ಗಸೂಚಿ ಪ್ರಕಾರ, ಸಾಲ ನೀಡುವವರು ಬಡ್ಡಿ ವಿಧಿಸುವಾಗ ನಿಯಮಗಳನ್ನು ಪಾಲಿಸಬೇಕು ಮತ್ತು ಪಾರದರ್ಶಕತೆಯನ್ನು ಪ್ರದರ್ಶಿಸಬೇಕು. “2023ರ ಮಾರ್ಚ್ 31ಕ್ಕೆ ಕೊನೆಗೊಂಡ ಅವಧಿಯ ಆರ್‌ಇಗಳ ಆನ್‌ಸೈಟ್‌ ಪರಿಶೀಲನೆಯ ಸಮಯದಲ್ಲಿ, ಸಾಲದಾತರು ಬಡ್ಡಿ ವಿಧಿಸುವಾಗ ಕೆಲವೊಂದು ನಿಯಮಗಳನ್ನು ಮುರಿದಿರುವುದು ಕಂಡು ಬಂದಿದೆʼʼ ಎಂದು ಆರ್‌ಬಿಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

“ನ್ಯಾಯಸಮ್ಮತ ಮತ್ತು ಪಾರದರ್ಶಕತೆಯ ಹಿತದೃಷ್ಟಿಯಿಂದ ಸಾಲಗಳ ವಿತರಣೆಯ ವಿಧಾನ, ಬಡ್ಡಿ ವಿಧಿಸುವುದು ಮತ್ತು ಇತರ ಶುಲ್ಕಗಳಿಗೆ ಸಂಬಂಧಿಸಿದಂತೆ ಈಗಿರುವ ನಿಯಮಗಳನ್ನು ಪರಿಶೀಲಿಸಲು ಮತ್ತು ಅಗತ್ಯವಿದ್ದರೆ ಸಿಸ್ಟಮ್ ಮಟ್ಟದ ಬದಲಾವಣೆಗಳು ಸೇರಿದಂತೆ ಹಲವು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಆರ್‌ಇಗಳಿಗೆ ನಿರ್ದೇಶಿಸಲಾಗಿದೆ” ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಆರ್‌ಬಿಐ ಗಮನಿಸಿದ್ದೇನು?

ಆರ್‌ಇಗಳ ಆನ್‌ಸೈಟ್‌ ಪರಿಶೀಲನೆ ವೇಳೆ ಗ್ರಾಹಕರಿಗೆ ಹಣವನ್ನು ವಿತರಿಸಿದ ದಿನಾಂಕದ ಬದಲಾಗಿ ಸಾಲ ಮಂಜೂರಾದ ದಿನದಿಂದ ಅಥವಾ ಸಾಲ ಒಪ್ಪಂದವನ್ನು ನಡೆಸಿದ ತಾರೀಕಿನಿಂದ ಬಡ್ಡಿ ವಿಧಿಸುವುದನ್ನು ಆರ್‌ಬಿಐ ಗಮನಿಸಿದೆ. ಅಲ್ಲದೆ ಚೆಕ್ ಅನ್ನು ಗ್ರಾಹಕರಿಗೆ ಹಸ್ತಾಂತರಿಸುವ ಮೊದಲೇ ಬಡ್ಡಿ ವಿಧಿಸಿದ ನಿದರ್ಶನವೂ ಬೆಳಕಿಗೆ ಬಂದಿದೆ ಎಂದು ಆರ್‌ಬಿಐ ಹೇಳಿದೆ.

ಗ್ರಾಹಕರಿಗೆ ಮರುಪಾವತಿಸಲು ಸೂಚನೆ

ಕೆಲವು ಸಂದರ್ಭಗಳಲ್ಲಿ ಒಂದು ಅಥವಾ ಹೆಚ್ಚಿನ ಕಂತುಗಳನ್ನು ಮುಂಚಿತವಾಗಿ ಸಂಗ್ರಹಿಸುತ್ತಿರುವುದು ಮತ್ತು ಬಡ್ಡಿಯನ್ನು ವಿಧಿಸಲು ಪೂರ್ಣ ಸಾಲದ ಮೊತ್ತವನ್ನು ಲೆಕ್ಕ ಹಾಕುತ್ತಿರುವುದನ್ನೂ ಗಮನಿಸಲಾಗಿದೆ. ಜತೆಗೆ ಗ್ರಾಹಕರೊಂದಿಗೆ ವ್ಯವಹರಿಸುವಾಗ ಬಡ್ಡಿ ವಿಧಿಸುವ ಕೆಲವೊಂದು ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದಿರುವ ಆರ್‌ಬಿಐ, “ಇವು ರಿಸರ್ವ್ ಬ್ಯಾಂಕ್‌ಗೆ ಅತ್ಯಂತ ಗಂಭೀರ ವಿಷಯವಾಗಿದೆ. ಇಂತಹ ಸಂದರ್ಭದಲ್ಲಿ ಸಂಗ್ರಹಿಸಿದ ಹೆಚ್ಚುವರಿ ಬಡ್ಡಿ ಮತ್ತು ಇತರ ಶುಲ್ಕಗಳನ್ನು ಗ್ರಾಹಕರಿಗೆ ಮರುಪಾವತಿಸಲು ಸಲಹೆ ನೀಡಲಾಗಿದೆʼʼ ಎಂದು ತಿಳಿಸಿದೆ.

ತಕ್ಷಣದಿಂದ ಜಾರಿ

ಸಾಲ ವಿತರಣೆಯ ಸಂದರ್ಭಗಳಲ್ಲಿ ನೀಡಲಾಗುವ ಚೆಕ್‌ಗಳಿಗೆ ಬದಲಾಗಿ ಆನ್‌ಲೈನ್‌ ಖಾತೆ ವರ್ಗಾವಣೆಗಳನ್ನು ಬಳಸಲು ಆರ್‌ಇಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಲಾಗಿದೆ. ಈ ನಿಯಮ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಆರ್‌ಬಿಐ ಪ್ರಕಟಿಸಿದೆ. ಸದ್ಯ ಆರ್‌ಬಿಐ ಹೊರಟಿಸಿರುವ ಈ ಪ್ರಕಟಣೆಯಿಂದ ದೇಶದ ಅನೇಕ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Continue Reading

ಪ್ರಮುಖ ಸುದ್ದಿ

IPL 2024 : ಬುದ್ಧಿ ಹೇಳಿದರೂ ಕೇಳದ ಕೆಕೆಆರ್​ ಬೌಲರ್​ ರಾಣಾಗೆ ಮತ್ತೆ ದಂಡ ; ಒಂದು ಪಂದ್ಯದಿಂದ ಸಸ್ಪೆಂಡ್​​

IPL 2024 : ಮಾರ್ಚ್ 23 ರಂದು ಎಸ್ಆರ್​ಎಚ್​ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾಗೆ ದಂಡ ವಿಧಿಸಲಾಗಿತ್ತು. ಈಡನ್ ಗಾರ್ಡನ್ಸ್​ನಲ್ಲಿ ನಡೆದ ಆ ಪಂದ್ಯದಲ್ಲಿ ಬ್ಯಾಟರ್​ ಮಯಾಂಕ್ ಅಗರ್ವಾಲ್ ಅವರನ್ನು ಔಟ್ ಮಾಡಿದ ಫ್ಲೈಯಿಂಗ್ ಕಿಸ್ ನೀಡಿದ್ದರು. ಅದಕ್ಕಾಗಿ ಅವರಿಗೆ ದಂಡ ವಿಧಿಸಲಾಗಿತ್ತು.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ ಋತುವಿನಲ್ಲಿ ಎರಡನೇ ಬಾರಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಅವರಿಗೆ ಪಂದ್ಯದ ಶುಲ್ಕದ ಶೇಕಡಾ 100 ರಷ್ಟು ದಂಡ ವಿಧಿಸಲಾಗಿದೆ. ಏಪ್ರಿಲ್ 29 ರ ಮಂಗಳವಾರ ಈಡನ್ ಗಾರ್ಡನ್ಸ್​​ನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಕೆಕೆಆರ್ ಗೆಲುವಿನ ಸಂದರ್ಭದಲ್ಲಿ ಹರ್ಷಿತ್ ಎರಡನೇ ಅಪರಾಧ ಎಸಗಿದ್ದಾರೆ. ಐಪಿಎಲ್ 2024 ರಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿಷೇಧ ಶಿಕ್ಷೆ ಎದುರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಹರ್ಷಿತ್ ರಾಣಾ ಪಾತ್ರರಾಗಿದ್ದಾರೆ.

ಈಡನ್ ಗಾರ್ಡನ್ಸ್​​ನಲ್ಲಿ ನಡೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ 4 ಓವರ್​​ಗಳಲ್ಲಿ 28 ರನ್​ ನೀಡಿ 2 ವಿಕೆಟ್ ಪಡೆದು ಕೆಕೆಆರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪಂದ್ಯದ 7 ನೇ ಓವರ್​ನಲ್ಲಿ ಎಡಗೈ ಬ್ಯಾಟ್ಸ್ಮನ್ ಅಭಿಷೇಕ್​ ಪೊರೆಲ್​ ವಿಕೆಟ್ ಪಡೆದ ನಂತರ ಅವರತ್ತ ಕೈಬೀಸಿ ಲೇವಡಿ ಮಾಡಿದ್ದಾರೆ. ಇದು ಐಪಿಎಲ್​ ನಿಯಮಗಳ ಉಲ್ಲಂಘನೆಯಾಗಿದೆ. ಈ ರೀತಿಯ ತಪ್ಪು ಮಾಡುತ್ತಿರುವುದು ಎರಡನೇ ಬಾರಿಯಾಗಿರುವ ಕಾರಣ ಅವರಿಗೆ ನಿಷೇಧ ಶಿಕ್ಷೆ ನೀಡಲಾಗಿದೆ. ಹೀಗಾಗಿ ಮೇ 3 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ವಿರುದ್ಧದ ಕೆಕೆಆರ್ ಪಂದ್ಯಕ್ಕೆ ಹರ್ಷಿತ್ ಲಭ್ಯವಿರುವುದಿಲ್ಲ.

ಮಾರ್ಚ್ 23 ರಂದು ಎಸ್ಆರ್​ಎಚ್​ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾಗೆ ದಂಡ ವಿಧಿಸಲಾಗಿತ್ತು. ಈಡನ್ ಗಾರ್ಡನ್ಸ್​ನಲ್ಲಿ ನಡೆದ ಆ ಪಂದ್ಯದಲ್ಲಿ ಬ್ಯಾಟರ್​ ಮಯಾಂಕ್ ಅಗರ್ವಾಲ್ ಅವರನ್ನು ಔಟ್ ಮಾಡಿದ ಫ್ಲೈಯಿಂಗ್ ಕಿಸ್ ನೀಡಿದ್ದರು. ಅದಕ್ಕಾಗಿ ಅವರಿಗೆ ದಂಡ ವಿಧಿಸಲಾಗಿತ್ತು.

“ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.5 ರ ಅಡಿಯಲ್ಲಿ ರಾಣಾ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ. ಅವರು ಅಪರಾಧವನ್ನು ಒಪ್ಪಿಕೊಂಡರು ಮತ್ತು ಮ್ಯಾಚ್ ರೆಫರಿಯ ಅನುಮತಿಯನ್ನು ಸ್ವೀಕರಿಸಿದ್ದರೆ. ನಿಯಮಗಳ ಲೆವೆಲ್ 1 ಉಲ್ಲಂಘನೆಗಾಗಿ ಮ್ಯಾಚ್ ರೆಫರಿ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿರುತ್ತದೆ. ಈ ಹಿಂದೆ ಐಪಿಎಲ್ ನೀತಿ ಸಂಹಿತೆಯಡಿ ಈ ಆಟಗಾರನಿಗೆ ದಂಡ ವಿಧಿಸಲಾಗಿತ್ತು, “ಎಂದು ಐಪಿಎಲ್ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

ಡೆಲ್ಲಿ ನಾಯಕ ರಿಷಭ್ ಪಂತ್ ಸೇರಿದಂತೆ ಕ್ಯಾಪಿಟಲ್ಸ್ ತಂಡದ ಒಂದೆರಡು ಕ್ಯಾಚ್​​ ಳನ್ನು ಬಿಟ್ಟುಕೊಟ್ಟ ನಂತರ ಒತ್ತಡದಲ್ಲಿದ್ದ ಹರ್ಷಿತ್ ರಾಣಾ ಕೋಪಗೊಂಡಿದ್ದರು. ಆದಾಗ್ಯೂ, ಡಿಸಿಯನ್ನು 20 ಒವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್​ಗಳಿಗೆ ನಿಯಂತ್ರಿಸಿತ್ತು. ಫಿಲ್ ಸಾಲ್ಟ್ 33 ಎಸೆತಗಳಲ್ಲಿ 68 ರನ್ ಸಿಡಿಸಿದ ಕಾರಣ ಕೆಕೆಆರ್ ಬೆವರು ಸುರಿಸದೆ ಗುರಿ ತಲುಪಿತು.

ಹರ್ಷಿತ್ ರಾಣಾ 8 ಪಂದ್ಯಗಳಲ್ಲಿ 11 ವಿಕೆಟ್ ಪಡೆದು ಕೆಕೆಆರ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

Continue Reading

ಪ್ರಮುಖ ಸುದ್ದಿ

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣಗೆ ನೋಟಿಸ್‌ ನೀಡಿದ್ದಾರೆ.

VISTARANEWS.COM


on

Hassan Pen Drive case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading

ಪ್ರಮುಖ ಸುದ್ದಿ

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

ಕ್ಲಿಪ್​ನಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ, “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ನೀಡುತ್ತಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಓಡಾಡಿದೆ. “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

Fact check
Koo

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಳುಗಳ ಭರಾಟೆ ಜೋರಾಗಿದೆ. ಡೀಪ್​ಫೇಕ್​ ಸೇರಿದಂತೆ ಎಡಿಟಿಂಗ್​ ತಾಂತ್ರಿಕತೆ ಮಿತಿಮೀರಿ ಅಭಿವೃದ್ಧಿಯಾಗಿರುವ ಕಾರಣ ಸತ್ಯ ಯಾವುದು ಸುಳ್ಳು ಯಾವುದು ಎಂದು ಒಂದೇ ನೋಟಕ್ಕೆ ತಿಳಿದುಕೊಳ್ಳುವುದು ಕೂಡ ಕಷ್ಟವಾಗಿದೆ. ಇದೇ ಮಾದರಿಯಲ್ಲಿ ರೀತಿ ಪ್ರಧಾನಿ ಮೋದಿ (Narendra Modi) ಕರ್ನಾಟಕದ ಜನತೆಯನ್ನು ಪಾಪಿಗಳು ಎಂದು ಕರೆದಿದ್ದಾರೆ ಎಂಬ ವಿಡಿಯೊವೊಂದು ವೈರಲ್​ ಆಗಿದೆ. ಪ್ರಧಾನಿ ಆ ರೀತಿ ಹೇಳಿದ್ದಾರೆ ಎಂಬುದಾಗಿ ಕೇರಳ ಕಾಂಗ್ರೆಸ್​ ಸೇರಿದಂತೆ ಪ್ರತಿಪಕ್ಷಗಳ ಹಲವರ ಎಕ್ಸ್​ ಹ್ಯಾಂಡಲ್​ನಲ್ಲಿ ವಿಡಿಯೊ ಶೇರ್​ ಆಗಿದೆ. ಹಾಗಾದರೆ ಮೋದಿ ಕನ್ನಡದ ಮಂದಿಯನ್ನು ಪಾಪಿಗಳು ಅಂಥ ಹೇಳಿದ್ದು ಹೌದಾ? ಕಾಂಗ್ರೆಸ್​ ಪೋಸ್ಟ್​ ಮಾಡಿದ ವಿಡಿಯೊದ ಸಾಚಾತನವೇನು (Fact Check) ಎಂಬುದನ್ನು ಗಮನಿಸೋಣ.

2024 ರ ಲೋಕಸಭಾ ಚುನಾವಣೆಯ (Lok Sabha Election) ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29, 2024 ರಂದು ದಾವಣಗೆರೆ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ್ದರು. ಈ ಸಭೆಗಳಲ್ಲಿ ಅವರು ಮಾಡಿದ ಭಾಷಣದ ಕ್ಲಿಪ್​ಗಳೇ ಚರ್ಚೆಯ ವಿಷಯವಾಗಿರುವುದು. ಹಿಂದಿನ ಚುನಾವಣೆಯಲ್ಲಿ ಮತದಾನ ಮಾಡಿದ ಕರ್ನಾಟಕದ ಜನ ಪಾಪಿಗಳು. ಅವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ ಎನ್ನಲಾದ ವಿಡಿಯೊ ವೈರಲ್​ ಆಗಿದೆ.

ಪ್ರತ್ಯೇಕ ಮಾಡಿ ಹಂಚಲಾದ ವಿಡಿಯೊದಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ; “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ಕೊಡುತ್ತಾರೆ. ಇದನ್ನೇ ಎತ್ತಿಕೊಂಡು “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಿ ಪ್ರತಿಪಕ್ಷಗಳು ಪೋಸ್ಟ್​ಹಾಕಿಕೊಂಡಿವೆ.

ಕೇರಳ ಕಾಂಗ್ರೆಸ್​ನ ಅಧಿಕೃತ ಎಕ್ಸ್ ಖಾತೆಯಲ್ಲೂ ಇದನ್ನು ಪೋಸ್ಟ್ ಮಾಡಲಾಗಿದೆ “ಮೋದಿ ಸರ್ವಸ್ಸ ಕಳೆದುಕೊಂಡಿದ್ದಾರೆ. ಅವರು ತಮ್ಮ ಸ್ವಯಂ ಗೋಲ್ ಹೊಡೆಯುತ್ತಿದ್ದಾರೆ. ಅವರು ಈಗ ಕರ್ನಾಟಕದ ಜನರನ್ನು ಪಾಪಿಗಳು ಎಂದು ಕರೆದಿದ್ದಾರೆ. ಇಂತಹ ಅವಮಾನಗಳಿಗೆ ಕರ್ನಾಟಕದ ಜನರು ಕಪಾಳಮೋಕ್ಷ ಮಾಡದೇ ಬಿಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಿರ್ನಾಮವಾಗಲಿದೆ’ ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಸಂಯೋಜಕ ಗೌರವ್ ಪಾಂಧಿ ಅವರು ಈ ವೀಡಿಯೊಗೆ “ಕರ್ನಾಟಕದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ ಮಾತ್ರಕ್ಕೆ, ಅವರು ಪಾಪಿಗಳು ಎಂದು ಪ್ರಧಾನಿ ಮೋದಿ ಭಾವಿಸುತ್ತಾರೆ.” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಹತಾಶೆಯೇ? ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎಂಬ ಭಯವೇ? ಎಂದು ಟ್ವೀಟ್​ ಮಾಡಿದ್ದಾರೆ.

ವಾಸ್ತವಾಂಶಗಳು ಯಾವುವು?

ಪ್ರಧಾನಿ ಮೋದಿ ಅವರ ಅಧಿಕೃತ ಯೂಟ್ಯೂಬ್​ ಪೇಜ್​ನಲ್ಲಿ ಭಾಷಣ ನೇರ ಪ್ರಸಾರ ವಿಡಿಯೊ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಸುಮಾರು 29:00 ರಿಂದ 31:04 ನಿಮಿಷ ತನಕ ಪಿಎಂ ಮೋದಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಾರೆ. ಬಿಜೆಪಿ ಆಡಳಿತದಲ್ಲಿ ಭಾರತೀಯ ರೈತರು ಅನುಭವಿಸಿದ ವಿವಿಧ ಪ್ರಯೋಜನಗಳ ಬಗ್ಗೆ ಮಾತನಾಡಿದ ಮೋದಿ “ಕಾಂಗ್ರೆಸ್ ಇಲ್ಲಿನ ರೈತರಿಗೆ ಮಾಡಿದ ದ್ರೋಹವು ದೊಡ್ಡ ಪಾಪ” ಎಂದು ಹೇಳುತ್ತಾರೆ. ‘ಇಲ್ಲಿ’ ಎಂಬುದು ಕರ್ನಾಟಕ ಎಂಬರ್ಥವಾಗಿದೆ.

“ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಖಾತೆಗಳಿಗೆ 10,000 ರೂ.ಗಳನ್ನು ಜಮಾ ಮಾಡಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ₹ 4,000 ನೀಡುವುದನ್ನು ನಿಲ್ಲಿಸಿತು. ಅವರು ತಮ್ಮ ಮತವನ್ನು ಪಡೆಯುವಲ್ಲಿ ಯಶಸ್ವಿಯಾದ ನಂತರ, ಅವರು ರೈತರು ಮತ್ತು ಅವರ ಕೆಲಸದ ಬಗ್ಗೆ ಕಾಳಜಿ ವಹಿಸುವುದನ್ನು ನಿಲ್ಲಿಸಿದರು. ಉಳಿದ 6,000 ರೂ.ಗಳನ್ನು ಮೋದಿ ಸರ್ಕಾರ ಕಳುಹಿಸುತ್ತದೆ. ಅದನ್ನು ರೈತರು ಪಡೆಯುತ್ತಾರೆ. ಅವರು ಇಲ್ಲಿ ನೀಡಿದ ಹಣದ ಒಂದು ಭಾಗವನ್ನು ಕಡಿತಗೊಳಿಸಿದರು.” ಎಂದು ಟೀಕಿಸಿದ್ದಾರೆ.

ಮುಂದುವರಿದ ಅವರು “ಈ ಚುನಾವಣೆಯಲ್ಲಿ ಅವರು ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರು ಶಿಕ್ಷಿಸಬೇಕು. ದೆಹಲಿಯಿಂದ ಕಳುಹಿಸಿದ ಎಲ್ಲವೂ ಮುಂದಿನ ವರ್ಷಗಳಲ್ಲಿ ಮುಂದುವರಿಯುತ್ತದೆ ಎಂಬುದು ಮೋದಿಯ ಭರವಸೆ ” ಎಂದು ಅವರು ಹೇಳಿದ್ದಾರೆ. 31:00ರ ನಿಮಿಷದ ನಂತರ ನೋಡಿದಾಗ ಇದು ಕರ್ನಾಟಕ ಸರ್ಕಾರದ ವಿರುದ್ಧದ ಟೀಕೆ ಎಂಬುದು ಖಾತರಿಯಾಗುತ್ತದೆ.

ಪ್ರಧಾನಿ ಮೋದಿಯವರ ವೆಬೆ್​ಸೈಟ್​ನಲ್ಲಿ ಲಭ್ಯವಿರುವ ಭಾಷಣದ ಟ್ರಾನ್​ಸ್ಕ್ರಿಪ್ಟ್​​ ಈ ಮಾಹಿತಿಯನ್ನು ದೃಢಪಡಿಸುತ್ತದೆ. “ಈ ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ಈ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು” ಎಂದು ಅಲ್ಲಿ ಬರೆಯಲಾಗಿದೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಈ ಕ್ಲಿಪ್ ಅನ್ನು ಆಯ್ದು ಎಡಿಟ್ ಮಾಡಲಾಗಿದೆ ಮತ್ತು ಹಿಂದೆ ಮುಂದೆ ಏನೂ ಇಲ್ಲದೆ ಪ್ರಸಾರ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತಿದೆ. ಪಿಎಂ ಮೋದಿ ನಿಖರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ಹೇಳಿದ್ದರೂ ಕರ್ನಾಟಕದ ಜನರು ಎಂದು ತಪ್ಪುದಾರಿಗೆಳೆಯುವ ವ್ಯಾಖ್ಯಾನ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.

Continue Reading
Advertisement
Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ3 mins ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Divorce Celebration
ವೈರಲ್ ನ್ಯೂಸ್9 mins ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ11 mins ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

IPL 2024
ಪ್ರಮುಖ ಸುದ್ದಿ17 mins ago

IPL 2024 : ಬುದ್ಧಿ ಹೇಳಿದರೂ ಕೇಳದ ಕೆಕೆಆರ್​ ಬೌಲರ್​ ರಾಣಾಗೆ ಮತ್ತೆ ದಂಡ ; ಒಂದು ಪಂದ್ಯದಿಂದ ಸಸ್ಪೆಂಡ್​​

Minister Lakshmi hebbalkar spoke in Prajadhwani 02 Lok Sabha election campaign programme at Gokak
ಕರ್ನಾಟಕ21 mins ago

Lok Sabha Election: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Ballari Lok Sabha constituency Congress candidate eTukaram election campaign in Hosapete
ಬಳ್ಳಾರಿ24 mins ago

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Hassan Pen Drive case
ಪ್ರಮುಖ ಸುದ್ದಿ48 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ51 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್1 hour ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ1 hour ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌