Terrorist Attack: ಪಾಕ್‌ ಪೊಲೀಸ್‌ ಠಾಣೆ ಮೇಲೆ ಉಗ್ರರ ದಾಳಿ; 10 ಪೊಲೀಸರ ದುರ್ಮರಣ - Vistara News

ವಿದೇಶ

Terrorist Attack: ಪಾಕ್‌ ಪೊಲೀಸ್‌ ಠಾಣೆ ಮೇಲೆ ಉಗ್ರರ ದಾಳಿ; 10 ಪೊಲೀಸರ ದುರ್ಮರಣ

Terrorist Attack: ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಪೊಲೀಸ್‌ ಠಾಣೆ ಮೇಲೆ ಉಗ್ರರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ಇದುವರೆಗೆ ಯಾವ ಉಗ್ರ ಸಂಘಟನೆಯೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

VISTARANEWS.COM


on

Terror Attack In Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಉಗ್ರರ ದಾಳಿಗಳು (Terrorist Attack), ಆಂತರಿಕ ಗಲಭೆಗಳು ಹೆಚ್ಚಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ (Khyber Pakhtunkhwa) ಪೊಲೀಸ್‌ ಠಾಣೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದು, 10 ಪೊಲೀಸರು ಮೃತಪಟ್ಟಿದ್ದಾರೆ. ಆರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ (ಫೆಬ್ರವರಿ 5) ಬೆಳಗಿನ ಜಾವ 1.30ರ ಸುಮಾರಿಗೆ ಡೇರಾ ಇಸ್ಮಾಯಿಲ್‌ ಖಾನ್‌ ಜಿಲ್ಲೆಯ ಚೌಧ್ವಾನ್‌ ಪೊಲೀಸ್‌ ಠಾಣೆ ಮೇಲೆ ಸುಮಾರು 30 ಉಗ್ರರು ಸತತವಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಪೊಲೀಸರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಪೊಲೀಸರು ಹಾಗೂ ಉಗ್ರರ ನಡುವೆ ಎರಡೂವರೆ ತಾಸು ಗುಂಡಿನ ಚಕಮಕಿ ನಡೆದಿದೆ. ಆದರೆ, ದಾಳಿಯ ವೇಳೆ ಉಗ್ರರು ಪ್ರಾಬಲ್ಯ ಸಾಧಿಸಿದ್ದು, 10 ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

“ಬೆಳಗಿನ ಜಾವ ಶಸ್ತ್ರಸಜ್ಜಿತ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಪೊಲೀಸರು ಕೂಡ ತಿರುಗೇಟು ನೀಡಲು ಯತ್ನಿಸಿದರು. ಎರಡೂವರೆ ಗಂಟೆ ನಡೆದ ಕಾಳಗದಲ್ಲಿ 10 ಪೊಲೀಸರು ಹತರಾಗಿದ್ದಾರೆ. ಕತ್ತಲಿದ್ದ ಕಾರಣ ಉಗ್ರರು ತಪ್ಪಿಸಿಕೊಂಡರು” ಎಂದು ಖೈಬರ್‌ ಪೊಲೀಸ್ ಚೀಫ್‌ ಅಖ್ತರ್‌ ಹಯಾತ್‌ ಮಾಹಿತಿ ನೀಡಿದ್ದಾರೆ. 2022ರಿಂದ ಇದುವರೆಗೆ ಪೊಲೀಸರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ. ಸೋಮವಾರ ಬೆಳಗ್ಗೆ ನಡೆದ ದಾಳಿಯ ಹೊಣೆಯನ್ನು ಯಾವ ಉಗ್ರ ಸಂಘಟನೆಯೂ ಹೊತ್ತುಕೊಂಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Imran Khan:‌ ಇಮ್ರಾನ್‌ ಖಾನ್‌ಗೆ ಜೈಲೇ ಕಾಯಂ! ಮತ್ತೊಂದು ಪ್ರಕರಣದಲ್ಲಿ ಪಾಕ್‌ ಮಾಜಿ ಪ್ರಧಾನಿ ಮತ್ತು ಪತ್ನಿ ಬುಶ್ರಾ ಬೀಬಿಗೆ 14 ವರ್ಷ ಸಜೆ

ಬಲೂಚಿಸ್ತಾನದಲ್ಲಿ 78 ಯೋಧರ ಹತ್ಯೆ

ಬಲೂಚಿಸ್ತಾನದಲ್ಲೂ ಆಂತರಿಕ ದಂಗೆ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಬಲೂಚ್ ಲಿಬರೇಶನ್ ಆರ್ಮಿ ತನ್ನ ಆಪರೇಷನ್ ದಾರಾ-ಎ-ಬೋಲನ್ (Operation Dara-e-Bolan) ಕಾರ್ಯಾಚರಣೆಯಲ್ಲಿ 78 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ ಎಂದು ಬಿಎಲ್ಎ ಹೇಳಿಕೊಂಡಿದೆ. “12 ಫಿದಾಯಿನ್‌ಗಳು (ಸ್ವಯಂ ತ್ಯಾಗಿಗಳು) ಸೇರಿದಂತೆ 385 ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ಆಪರೇಷನ್ ದಾರಾ-ಎ-ಬೋಲನ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ 78 ಪಾಕಿಸ್ತಾನಿ ಸೈನಿಕರನ್ನು ನಿರ್ಮೂಲನೆ ಮಾಡಲಾಗಿದೆ. ಸಾಮಾನ್ಯ ಶತ್ರುವಿನ ವಿರುದ್ಧ ನಡೆಸುವ ಹೋರಾಟದಲ್ಲಿ ಯಾವುದೇ ರಾಷ್ಟ್ರದೊಂದಿಗೆ ಕೈ ಜೋಡಿಸಲು ಬಿಎಲ್ಎ ಸಿದ್ಧ” ಎಂದು ಬಲೂಚ್ ಲಿಬರೇಶನ್ ಆರ್ಮಿ ತಿಳಿಸಿದೆ. ಪಾಕಿಸ್ತಾನದಲ್ಲಿ ಫೆಬ್ರವರಿ 14ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Prajwal Revanna Case: ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ, ಹಾಸನ ಸಂಸದನ ವಿರುದ್ಧ ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅಶ್ಲೀಲ ವಿಡಿಯೊ, ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಹಾಸನ ಜೆಡಿಎಸ್‌ ಸಂಸದ (Hassan JDS MP) ಪ್ರಜ್ವಲ್‌ ರೇವಣ್ಣ (Prajwal Revanna Case) ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ಮುಂದುವರಿಸಿದ್ದಾರೆ. ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಬಳಿಕ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಈಗ ಮತ್ತೊಂದು ದೇಶಕ್ಕೆ ಹಾರಿರುವ ಪ್ರಜ್ವಲ್‌ ರೇವಣ್ಣ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರು ನೋಟಿಸ್ ಹಾಗೂ ಕೊನೆಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರೇವಣ್ಣ ಅವರು ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ನೀಡಿದೆ. ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Continue Reading

ಪ್ರಮುಖ ಸುದ್ದಿ

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು (International Firefighters Day 2024) ಆಚರಿಸಲಾಗುತ್ತಿದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Firefighters Day 2024
Koo

ಪ್ರಾಕೃತಿಕ ವಿಕೋಪವಾಗಿರಬಹುದು (Natural disaster) ಅಥವಾ ಯಾವುದಾದರೂ ದುರಂತ (Tragedy) ಉಂಟಾಗಿರಬಹುದು ಇಂತಹ ವಿವಿಧ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿರುವ ಜನ ಸಾಮಾನ್ಯರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕೆ ಇಡುವವರು ಅಗ್ನಿ ಶಾಮಕದಳದ ಸಿಬ್ಬಂದಿ. ಇವರನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಮೇ 4ರಂದು ಅಂತಾರಾಷ್ಟ್ರೀಯ ಅಗ್ನಿ ಶಾಮಕ ದಿನವನ್ನು (International Firefighters Day 2024) ಆಚರಿಸಲಾಗುತ್ತದೆ.

Firefighters

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಆಚರಿಸಲಾಗುತ್ತಿದೆ. ಇವರು ಜನ ಸಮುದಾಯಗಳನ್ನು ರಕ್ಷಿಸುವ ಜೊತೆಗೆ ವಿವಿಧ ಪರಿಸ್ಥಿತಿಗಳಲ್ಲಿ ಅಪಾಯಕ್ಕೆ ಸಿಲುಕಿರುವವರ ಜೀವಗಳನ್ನು ಉಳಿಸುವ ಕೆಲಸವನ್ನೂ ನಿರ್ವಹಿಸುತ್ತಾರೆ. ಅಗ್ನಿಶಾಮಕ ದಳದವರ ತ್ಯಾಗವನ್ನು ಗುರುತಿಸಲು ಮತ್ತು ಪ್ರಶಂಸಿಸಲು ಈ ಒಂದು ದಿನ ಖಂಡಿತ ಸಾಕಾಗಲಾರದು. ಆದರೂ ಅವರ ತ್ಯಾಗ, ಪರಿಶ್ರಮವನ್ನು ನೆನಪಿಸುವ ಈ ಒಂದು ದಿನ ಅತ್ಯಂತ ಮಹತ್ವದ್ದು ಎಂದರೆ ತಪ್ಪಾಗಲಾರದು. ಅಂತಾರಾಷ್ಟ್ರೀಯ ಅಗ್ನಿಶಾಮಕ ದಳದ ದಿನವು (International Firefighters Day) ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಕಳೆದುಕೊಂಡ ಅಗ್ನಿಶಾಮಕರನ್ನು ನೆನಪಿನ ದಿನವಾಗಿಯೂ ಆಚರಿಸಲಾಗುತ್ತದೆ.

Firefighters extinguishing an industrial fire

ಯಾವಾಗ ?

ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಮೇ 4 (international firefighters day may 4)ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಅಗ್ನಿಶಾಮಕ ದಳದ ಪೋಷಕ ಸಂತ ಸೇಂಟ್ ಫ್ಲೋರಿಯನ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಸೇಂಟ್ ಫ್ಲೋರಿಯನ್ ಅನ್ನು ರೋಮನ್ ಸಾಮ್ರಾಜ್ಯದಲ್ಲಿ ಅಗ್ನಿಶಾಮಕ ದಳದ ಮೊದಲ ಕಮಾಂಡರ್ ಎಂದು ಪರಿಗಣಿಸಲಾಗಿದೆ. ಅವರು ಪ್ರಾಚೀನ ರೋಮನ್ ನಗರವಾದ ನೊರಿಕಮ್ ನಲ್ಲಿ ಅಗ್ನಿಶಾಮಕ ಘಟಕದ ನಾಯಕರಾಗಿದ್ದರು.

Two firefighters go through the fire

ದಿನದ ಇತಿಹಾಸ

ಆಸ್ಟ್ರೇಲಿಯಾದಲ್ಲಿ ನಡೆದ ದುರಂತ ಘಟನೆಯ ಬಳಿಕ ಅಗ್ನಿ ಶಾಮಕ ದಿನವನ್ನು ಆಚರಿಸಲಾಯಿತು. 1998ರ ಡಿಸೆಂಬರ್ 2ರಂದು ವಿಕ್ಟೋರಿಯಾದ ಲಿಂಟನ್‌ನಲ್ಲಿ ಭೀಕರ ಕಾಡ್ಗಿಚ್ಚು ಉಂಟಾಗಿತ್ತು. ಈ ಸಂದರ್ಭದಲ್ಲಿ ಐವರು ಅಗ್ನಿಶಾಮಕ ದಳದವರು ಪ್ರಾಣ ಕಳೆದುಕೊಂಡರು. ಗೀಲಾಂಗ್ ಪಶ್ಚಿಮ ಅಗ್ನಿಶಾಮಕ ದಳದ ಸದಸ್ಯರಾಗಿದ್ದ ಗ್ಯಾರಿ ವ್ರೆಡೆವೆಲ್ಡ್ಟ್, ಕ್ರಿಸ್ಟೋಫರ್ ಇವಾನ್ಸ್, ಸ್ಟುವರ್ಟ್ ಡೇವಿಡ್ಸನ್, ಜೇಸನ್ ಥಾಮಸ್ ಮತ್ತು ಮ್ಯಾಥ್ಯೂ ಆರ್ಮ್ ಸ್ಟ್ರಾಂಗ್ ಅವರು ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು. ಬಳಿಕ ಘಟನೆಯ ಮಹತ್ವವನ್ನು ತಿಳಿಸಲು ಅಂತಿಮವಾಗಿ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನದ ಆಚರಣೆಯ ಪ್ರಸ್ತಾಪಕ್ಕೆ ಕಾರಣವಾಯಿತು. ಆಸ್ಟ್ರೇಲಿಯನ್ ಅಗ್ನಿಶಾಮಕ ದಳದ ಜೆಜೆ ಎಡ್ಮಂಡ್ಸನ್ ಅವರು ಅಗ್ನಿಶಾಮಕ ದಳದವರಿಗೆ ಮೀಸಲಾದ ದಿನವನ್ನು ಸ್ಥಾಪಿಸುವ ಉಪಕ್ರಮದ ನೇತೃತ್ವ ವಹಿಸಿದ್ದರು. ಎಡ್ಮಂಡ್ಸನ್ 1999 ರ ಹೊಸ ವರ್ಷದ ನಿರ್ಣಯದಂತೆ “ಎಲ್ಲಾ ಅಗ್ನಿಶಾಮಕ ದಳದವರಿಗೆ ಬೆಂಬಲ ಮತ್ತು ಗೌರವದ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವನ್ನು ಆಯೋಜಿಸಲು ಮತ್ತು ಇದನ್ನು ವಿಶ್ವಾದ್ಯಂತ ಸಂಘಟಿಸಬಹುದಾದ ದಿನಾಂಕವನ್ನು ಆಯೋಜಿಸಲು ನಿರ್ಧರಿಸಿದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ಕೆಂಪು ಮತ್ತು ನೀಲಿ ರಿಬ್ಬನ್

ಕೆಂಪು ಮತ್ತು ನೀಲಿ ರಿಬ್ಬನ್ ಸಾಮಾನ್ಯವಾಗಿ ಅಗ್ನಿಶಾಮಕ ದಳದವರನ್ನು ಗೌರವಿಸುವ ಸಂಕೇತವಾಗಿದೆ. IFFD ಯೊಂದಿಗೆ ಸಂಬಂಧ ಹೊಂದಿರುವ ಈ ರಿಬ್ಬನ್ ಅನ್ನು ಸಾಮಾನ್ಯವಾಗಿ ಸೇವೆ ಮತ್ತು ರಕ್ಷಿಸುವ ಅಗ್ನಿಶಾಮಕರಿಗೆ ಬೆಂಬಲ ಮತ್ತು ಮೆಚ್ಚುಗೆಯ ಸಂಕೇತವಾಗಿ ಧರಿಸಲು ನೀಡಲಾಗುತ್ತದೆ.
ಅಗ್ನಿಶಾಮಕ ದಳದವರು ಹೆಚ್ಚಾಗಿ ಎದುರಿಸುವ ಎರಡು ಅಂಶಗಳನ್ನು ಬಣ್ಣಗಳು ಸಂಕೇತಿಸುತ್ತವೆ. ಬೆಂಕಿಗೆ ಕೆಂಪು ಮತ್ತು ನೀರಿಗೆ ನೀಲಿ.

Continue Reading

ವಿದೇಶ

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Nijjar Killing: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳು ಭಾರತೀಯ ಮೂಲದವರು ಎಂಬುದು ಬಯಲಾಗಿದೆ. ರ್ದೀಪ್‌ ಸಿಂಗ್‌ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಡೇವಿಡ್‌ ಟೆಬೌಲ್‌ ಹೇಳಿದ್ದಾರೆ.

VISTARANEWS.COM


on

Nijjar Killling
Koo

ಒಟ್ಟಾವ: ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳು ಭಾರತೀಯ ಮೂಲದವರು ಎಂಬುದು ಬಯಲಾಗಿದೆ. ಕಳೆದ ವರ್ಷ ಕೆನಡಾ (Canada) ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಇದೀಗ ಮೂವರು ಹಂತಕರನ್ನು ಅರೆಸ್ಟ್‌ ಮಾಡಿರುವ ಕೆನಡಾ ಪೊಲೀಸರು ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದಾರೆ.

ಅರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ. ಇನ್ನಿ ಬಂಧಿತ ಆರೋಪಿಗಳು ಇದುವರೆಗೆ ಪೊಲೀಸರ ಕ್ರಿಮಿನಲ್‌ ರೆಕಾರ್ಡ್‌ನಲ್ಲಿಲ್ಲದ ವ್ಯಕ್ತಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ. ಅಲ್ಲದೇ ಹರ್ದೀಪ್‌ ಸಿಂಗ್‌ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಡೇವಿಡ್‌ ಟೆಬೌಲ್‌ ಹೇಳಿದ್ದಾರೆ. ಇನ್ನು ಬಂಧಿತ ಆರೋಪಿಗಳು ನಿಜ್ಜರ್‌ ಹತ್ಯೆ ಸಂದರ್ಭದಲ್ಲಿ ಶೂಟರ್‌, ಚಾಲಕ ಮತ್ತು ಸ್ಪಾಟರ್‌ಗಳಲ್ಲಿ ಕೊಲೆಯಲ್ಲಿ ಭಾಗಿಯಾಗಿದ್ದರು. ನಿನ್ನೆ ಎರಡು ಪ್ರದೇಶಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ ಮೂವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮತ್ತೆ ಭಾರತದತ್ತ ಬೊಟ್ಟು ಮಾಡಿದ ಕೆನಾಡ

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದಾರೆ.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ: Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

Continue Reading

ವೈರಲ್ ನ್ಯೂಸ್

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Viral Video: ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

VISTARANEWS.COM


on

Viral Video
Koo

ಕಜಕೀಸ್ತಾನ: ರೆಸ್ಟೋರೆಂಟ್‌ವೊಂದರಲ್ಲಿ ಮಾಜಿ ಸಚಿವನೋರ್ವ ತನ್ನ ಪತ್ನಿಯನ್ನು ದಾರುಣವಾಗಿ ಥಳಿಸಿದ್ದು, ಪರಿಣಾಮವಾಗಿ ಎಂಟು ಗಂಟೆಗಳಲ್ಲಿ ಆಕೆ ಕೊನೆಯುಸಿರೆಳೆದಿರುವ ಘಟನೆ ಕಜಕೀಸ್ತಾನ(Kajakistan)ದಲ್ಲಿ ನಡೆದಿದೆ. ಘಟನೆಯ ಶಾಕಿಂಗ್‌ ವಿಡಿಯೋ(Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೆಚ್ಚಿಬೀಳುವಂತಿದೆ. ಕಜಕೀಸ್ತಾನದ ಮಾಜಿ ಆರ್ಥಿಕ ಸಚಿವನಾಗಿದ್ದ ಕುವಾಂಡಿಕ್ ಬಿಶಿಂಬಾಯೆವ್ ತನ್ನ 31 ವರ್ಷದ ಸಲ್ತಾನೇಟ್‌ ನ್ಯೂಕೆನೋವಾ ಮೇಲೆ ಈ ಡೆಡ್ಲಿ ಅಟ್ಯಾಕ್‌(Deadly Attack) ಮಾಡಿದ್ದಾನೆ. ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಪತ್ನಿ ಕೂದಲು ಹಿಡಿದು ಎಳೆದು ತಂದ ಬಿಶಿಂಬಾಯೆವ್, ಆಕೆಯ ಮುಖಾಮೂತಿ ನೋಡದೇ ಚಚ್ಚುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾವಾಗಿ ಗಾಯಗೊಂಡಿದ್ದ ಸಲ್ತಾನೇಟ್‌ ನ್ಯೂಕೆನೋವಾ ಎಂಡು ಗಂಟೆಗಳ ಬಳಿಕ ಕೊನೆಯುಸಿರೆಳೆದಿದ್ದಾಳೆ. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಸಿಸಿಟಿವಿ ವಿಡಿಯೋವನ್ನು ಪ್ರದರ್ಶಿಸಲಾಯಿತು. ಹೀಗಾಗಿ ಈ ವಿಚಾರ ಮತ್ತೊಮ್ಮೆ ಸುದ್ದಿಯಾಗಿದೆ. ಇನ್ನು ಈ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಮಧ್ಯ ಏಷ್ಯಾದ ರಾಷ್ಟಗಳ ಹತ್ತು ಸಾವಿರಕ್ಕೂ ಅಧಿಕ ಜನರು ಸಹಿ ಹಾಕಿರುವ ಅರ್ಜಿಯನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ.

ಬಿಶಿಂಬಾಯೆವ್ (44) ಮಾಜಿ ಪ್ರಧಾನಿ ನರ್ಸುಲ್ತಾನ್ ನಜರ್ಬಯೇವ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ಹಿಸುತ್ತಿದ್ದ. 2018ರಲ್ಲಿ ಲಂಚ ಪ್ರಕರಣದಲ್ಲಿ ಆತ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತನ ಪತ್ನಿ ಸಂಬಂಧಿಕರ ರೆಸ್ಟೋರೆಂಟ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಒಂದು ವಾರದವರೆಗೆ ಬಿಶಿಂಬಾಯೆವ್ ತನಗೇನು ಗೊತ್ತಿಲ್ಲ, ತಾನೊಬ್ಬ ಅಮಾಯಕ ಎಂಬಂತೆ ಪೊಲೀಸರ ಎದುರು ನಟಿಸಿದ್ದ. ಆತನ ವಿರುದ್ಧ ಸಾಕ್ಷ್ಯಾಧಾರ ಸಿಗದಂತೆ ರೆಸ್ಟೋರೆಂಟ್‌ ಮಾಲೀಕ, ಸಿಬ್ಬಂದಿಗಳೂ ಸಹಕರಿಸಿದ್ದರು. ಆದರೆ ಕೋರ್ಟ್‌ನಲ್ಲಿ ತಾನೇ ಆಕೆಯಲ್ಲಿ ಹೊಡೆದು ಸಾಯಿಸಿರೋದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

ವೈದ್ಯರ ಮಾಹಿತಿ ಪ್ರಕಾರ ಸಲ್ತಾನೇಟ್‌ ನ್ಯೂಕೆನೋವಾ ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಆಕೆ ಮೃತಪಟ್ಟಿದ್ದಳು. ಇನ್ನು ಆಕೆಯ ಸಹೋದರ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದು, ತನ್ನ ಸಹೋದರಿ ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾನೆ. ಈಗಾಗಲೇ ಮೃತಳಿಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದಾರೆ. ರಷ್ಯಾದಂತೆ ಕಜಕೀಸ್ತಾದಲ್ಲೂ ಪುರುಷ ಪ್ರಧಾನ ಸಂಸ್ಕೃತಿ ಚಾಲ್ತಿಯಲ್ಲಿದ್ದು, ಹೀಗಾಗಿ ಕೌಟುಂಬಿಕ ಕಲಹ, ಲೈಂಗಿಕ ದೌರ್ಜನ್ಯ ಮೊದಲಾದ ಅಪರಾಧಗಳು ಹೆಚ್ಚಾಗಿವೆ.2018ರಲ್ಲಿ ವಿಶ್ವಸಂಸ್ಥೆ ನೀಡಿರುವ ವರದಿ ಪ್ರಕಾರ ಪ್ರತಿ ವರ್ಷ 400 ಕ್ಕೂ ಅಧಿಕ ಮಹಿಳೆಯರು ಕೌಟುಂಬಿಕ ಕಲಹಕ್ಕೆ ಬಲಿಯಾಗುತ್ತಿದ್ದಾರೆ.

Continue Reading
Advertisement
Virat Kohli
ಕ್ರೀಡೆ1 min ago

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Rohit Sharma
ಕ್ರೀಡೆ2 mins ago

Rohit Sharma : ರೋಹಿತ್​​ ಶರ್ಮಾಗೆ ಗಾಯ; ವಿಶ್ವ ಕಪ್​ ಮೊದಲೇ ಭಾರತ ತಂಡಕ್ಕೆ ಸಮಸ್ಯೆ?

Prajwal Revanna Case
ಕರ್ನಾಟಕ7 mins ago

Prajwal Revanna Case: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್, ಕೆಲವೇ ಕ್ಷಣಗಳಲ್ಲಿ ಆದೇಶ

Rowdy sheeter camel Rohit escapes from DCPs office after ccb officials spotted him
ಬೆಂಗಳೂರು14 mins ago

Rowdy Sheeter: ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Job Alert
ಉದ್ಯೋಗ17 mins ago

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

IPL 2024
ಕ್ರೀಡೆ21 mins ago

IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

Nikhil Kumaraswamy
ಕರ್ನಾಟಕ38 mins ago

Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

PBKS vs CSK
ಕ್ರೀಡೆ49 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ49 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ50 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌