Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ? - Vistara News

ವಿದೇಶ

Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

ಉದ್ಯೋಗ ಮೀಸಲಾತಿ ವಿಚಾರವಾಗಿ ಬಾಂಗ್ಲಾದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ (Bangladesh Violence) ಇಳಿದಿದ್ದು, ಈಗಾಗಲೇ ಇದು ಹಿಂಸಾಚಾರ ರೂಪ ತಳೆದಿದೆ. ಕನಿಷ್ಠ 40 ಮಂದಿ ಸಾವನ್ನಪ್ಪಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪ್ರತಿಭಟನೆ ಯಾವಾಗ ಏಕೆ ಪ್ರಾರಂಭವಾಯಿತು? ಇಲ್ಲಿನ ವಿದ್ಯಾರ್ಥಿಗಳ ಬೇಡಿಕೆಗಳೇನು? ಇದರ ಹಿಂದಿನ ರಾಜಕೀಯ ಏನು ಎಂಬುದರ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

Bangla Agitation Explainer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1971ರಲ್ಲಿ ನಡೆದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ (Bangla Agitation Explainer) ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.30 ಮೀಸಲಾತಿ (Job Reservation) ವ್ಯವಸ್ಥೆಯನ್ನು ವಿರೋಧಿಸಿ ಬಾಂಗ್ಲಾದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ (Bangladesh Violence) ಇಳಿದಿದ್ದಾರೆ. ಪ್ರತಿಭಟನೆಯು ಹಿಂಸೆಯ ರೂಪ ತಳೆದು 40 ಮಂದಿ ಸಾವನ್ನಪ್ಪಿದ್ದು, 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೆಚ್ಚುತ್ತಿರುವ ಘರ್ಷಣೆಯನ್ನು ಶಾಂತಗೊಳಿಸಲು ಪ್ರಧಾನಿ ಶೇಖ್ ಹಸೀನಾ (PM Sheikh Hasina ) ಅವರು ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಪ್ರತಿಭಟನಾಕಾರರು ಪ್ರಮುಖ ಟಿವಿ ಕಚೇರಿಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ಹಲವು ವಾರಗಳಿಂದ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯು ಉಗ್ರ ಸ್ವರೂಪ ಪಡೆಯಲು ಹಲವು ಕಾರಣಗಳಿವೆ.

ಪ್ರತಿಭಟನೆ ಯಾವಾಗ ಪ್ರಾರಂಭ?

1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರು ಮತ್ತು ಹೋರಾಟಗಾರರ ಸಂಬಂಧಿಕರಿಗೆ ಉದ್ಯೋಗಗಳಲ್ಲಿ ಶೇ.30ರಷ್ಟು ಮೀಸಲಾತಿ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ರಾಜಧಾನಿ ಢಾಕಾ ಮತ್ತು ಇತರ ನಗರಗಳಲ್ಲಿ ನೂರಾರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ತಿಂಗಳಿನಿಂದ ರ‍್ಯಾಲಿಗಳನ್ನು ಪ್ರಾರಂಭಿಸಿದರು. ಶಾಂತವಾಗಿಯೇ ನಡೆಯುತ್ತಿದ್ದ ಪ್ರತಿಭಟನೆಕಾರರ ಮೇಲೆ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದರು. ಆ ಬಳಿಕ ಪ್ರತಿಭಟನೆ ಹಿಂಸೆಯ ರೂಪ ತಾಳಿತು.

Bangladesh Violence


ಪ್ರತಿಭಟನೆಗೆ ಕಾರಣ?

1971ರ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯದ ಯುದ್ಧದಲ್ಲಿ ಹೋರಾಡಿದವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30 ಮೀಸಲಾತಿ ವ್ಯವಸ್ಥೆಯನ್ನು ಬಾಂಗ್ಲಾದೇಶದ ಹೈಕೋರ್ಟ್‌ ಕಳೆದ ಜೂನ್ 5ರಂದು ಮತ್ತೆ ಜಾರಿಗೆ ತಂದ ಬಳಿಕ ಪ್ರತಿಭಟನೆ ಪ್ರಾರಂಭವಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನೇತೃತ್ವದ ಬೃಹತ್ ಹೋರಾಟದ ಬಳಿಕ 2018ರಲ್ಲಿ ಈ ಮೀಸಲು ವ್ಯವಸ್ಥೆಯನ್ನು ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು ರದ್ದುಗೊಳಿಸಿತ್ತು. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಈ ಮೀಸಲನ್ನು ಮರು ಜಾರಿಗೆ ಆದೇಶಿಸಿತ್ತು. ಬಾಂಗ್ಲಾ ಸರ್ಕಾರ ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತು. ಇದೀಗ ಸುಪ್ರೀಂ ಕೋರ್ಟ್‌ ಮೀಸಲು ಜಾರಿ ಕುರಿತ ಹೈಕೋರ್ಟ್‌ ತೀರ್ಪಿಗೆ ತಡೆ ನೀಡಿದೆ. ಆದರೆ ವಿದ್ಯಾರ್ಥಿಗಳ ಮುಷ್ಕರ ಮುಂದುವರಿದಿದೆ.

ಪ್ರತಿಭಟನೆ ವೇಳೆ ಮೀಸಲಾತಿ ವಿರೋಧಿ ಸಾವಿರಾರು ಪ್ರತಿಭಟನಾಕಾರರು ಮತ್ತು ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ವಿದ್ಯಾರ್ಥಿ ವಿಭಾಗದ ಸದಸ್ಯರ ನಡುವೆ ಘರ್ಷಣೆ ನಡೆಯುತ್ತಲೇ ಇದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ರಬ್ಬರ್ ಬುಲೆಟ್‌ಗಳು, ಅಶ್ರುವಾಯು ಮತ್ತು ಗ್ರೆನೇಡ್‌ಗಳನ್ನು ಬಳಸುತ್ತಿದ್ದಾರೆ. ಆದರೂ ಹಿಂಸಾಚಾರ ನಿಯಂತ್ರಣಕ್ಕೆ ಬರುತ್ತಿಲ್ಲ. ಹಿಂಸಾಚಾರ ತೀವ್ರವಾಗಿದ್ದರಿಂದ ಢಾಕಾಕ್ಕೆ ಮತ್ತು ಅಲ್ಲಿಂದ ಬರುವ ರೈಲ್ವೆ ಸೇವೆಗಳ ಜೊತೆಗೆ ರಾಜಧಾನಿಯೊಳಗೆ ಮೆಟ್ರೋ ರೈಲನ್ನು ಮುಚ್ಚಲಾಗಿದೆ. ದೇಶದ ಹಲವಾರು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ನೆಟ್‌ವರ್ಕ್‌ಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿದೆ. ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ ಬಾಂಗ್ಲಾದೇಶ ಸರ್ಕಾರವು ಶಾಲೆ ಮತ್ತು ವಿಶ್ವವಿದ್ಯಾಲಯಗಳನ್ನು ಅನಿರ್ದಿಷ್ಟವಾಗಿ ಮುಚ್ಚಿದೆ.

ವಿದ್ಯಾರ್ಥಿಗಳ ಬೇಡಿಕೆ ಏನು?

ಪಾಕಿಸ್ತಾನದ ವಿರುದ್ಧ 1971ರ ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಹೋರಾಡಿದ ಕುಟುಂಬದವರಿಗೆ ಶೇ. 30ರಷ್ಟು ಮೀಸಲನ್ನು ಉದ್ಯೋಗ ನೇಮಕಾತಿಯಲ್ಲಿ ನೀಡಬಾರದು. ಈ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ. ಹೋರಾಟಗಾರರಿಗೆ ಗೌರವ ನೀಡೋಣ. ಆದರೆ ಮೂರನೆ ತಲೆಮಾರಿನ ಮೊಮ್ಮಕ್ಕಳಿಗೆ ಮೀಸಲು ಸೌಕರ್ಯ ಏಕೆ ಎನ್ನುವುದು ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ.


ಮೀಸಲಾತಿ ಪರಿಣಾಮ ಏನು?

ಬಾಂಗ್ಲಾದೇಶದ ಮೀಸಲಾತಿ ವ್ಯವಸ್ಥೆಯನ್ನು 1972ರಲ್ಲಿ ಪರಿಚಯಿಸಲಾಗಿತ್ತು. ಅಂದಿನಿಂದ ದೇಶಾದ್ಯಂತ ಹಲವಾರು ಬದಲಾವಣೆಗಳಿಗೆ ಕಾರಣವಾಯಿತು. ಈ ವ್ಯವಸ್ಥೆಯು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಹೆಚ್ಚಿನ ಪ್ರಯೋಜನ ದೊರೆಯಿತು. ಮಹಿಳೆಯರು ಮತ್ತು ಹಿಂದುಳಿದ ವರ್ಗದವರಿಗೆ ತಲಾ ಶೇ. 10ರಷ್ಟು, ಸ್ಥಳೀಯ ಸಮುದಾಯಗಳಿಗೆ ಶೇ. 5 ಮತ್ತು ಅಂಗವಿಕಲರಿಗೆ ಶೇ. 1ರಷ್ಟು ಮೀಸಲಾತಿಯನ್ನು ನಿಗದಿಪಡಿಸಿತ್ತು. ಹೀಗಾಗಿ ಶೇ.44ರಷ್ಟು ಉದ್ಯೋಗ ಮಾತ್ರ ಮೆರಿಟ್‌ ಆಧರಿಸಿ ನೀಡಲಾಗುತ್ತಿತ್ತು. ಇದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ, ಸ್ಯಾತಂತ್ರ್ಯ ಹೋರಾಟದ ಹೆಸರಿನಲ್ಲಿ ಅವರ ಮೊಮ್ಮಕ್ಕಳು ಉದ್ಯೋಗ ಗಿಟ್ಟಿಸುತ್ತಿದ್ದಾರೆ ಎನ್ನುವುದು ವಿದ್ಯಾರ್ಥಿಗಳ ಆಕ್ಷೇಪವಾಗಿದೆ.

ಇದನ್ನೂ ಓದಿ: Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌

ಸರ್ಕಾರ ಹೇಳುವುದೇನು?

ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದ ಅನಂತರ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲು ಬಾಂಗ್ಲಾದೇಶದ ಕಾನೂನು ಸಚಿವ ಅನಿಸುಲ್ ಹಕ್ ಇಚ್ಛೆ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಒಪ್ಪಿದಾಗ ನಾವು ಮಾತುಕತೆಗೆ ಕುಳಿತುಕೊಳ್ಳುತ್ತೇವೆ. ಈ ಬಗ್ಗೆ ಮಾತುಕತೆ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಈ ನಡುವೆ ಹಸೀನಾ ಅವರು ಪ್ರತಿಭಟನೆಯಿಂದ ಆಗಿರುವ ಜೀವಹಾನಿಯನ್ನು ಖಂಡಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೆ ತಾಳ್ಮೆಯಿಂದಿರಿ ಎಂದು ಕರೆ ನೀಡಿದ್ದಾರೆ. ಆದರೆ ಈ ಪ್ರತಿಭಟನೆಯ ಹಿಂದೆ ರಾಜಕೀಯದ ಛಾಯೆಯೂ ಇದೆ. 1971ರ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದುದು ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಅವಾಮಿ ಲೀಗ್‌ ಪಕ್ಷ. ಈಗ ಪ್ರಧಾನಿ ಆಗಿರುವ ಶೇಖ್‌ ಹಸೀನಾ ಇವರ ಮಗಳು. ಹಾಗಾಗಿ ಅವಾಮಿ ಲೀಗ್‌ನ ಬೆಂಬಲಿಗರಿಗೆ ಮಾತ್ರ ಈ ಮೀಸಲಾತಿಯಿಂದ ಲಾಭ ಆಗುತ್ತದೆ ಎನ್ನುವುದು ಪ್ರತಿಪಕ್ಷಗಳ ಆಪಾದನೆಯಾಗಿದೆ. ಪ್ರತಿಪಕ್ಷಗಳು ಈ ವಿದ್ಯಾರ್ಥಿ ಚಳವಳಿಗೆ ಬೆಂಬಲ ನೀಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Bangladesh Protests: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; 1000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Bangladesh Protests: ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 1000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

VISTARANEWS.COM


on

Bangladesh protests
Koo

ಢಾಕಾ: ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ (Bangladesh Protests) ಪ್ರತಿಭಟನೆ ಹಾಗೂ ಹಿಂಸಾಚಾರ (Bangladesh Violence) ದಿನೇ ದಿನೇ ಉಲ್ಬಣಿಸಿದ್ದು, ಅಲ್ಲಿರುವ 1000ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು (Indian Students) ಸ್ವದೇಶಕ್ಕೆ ಮರಳಿದ್ದಾರೆ. ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 115ಕ್ಕೆ ಏರಿಕೆ ಆಗಿದೆ. ಇನ್ನು ಇಡೀ ದೇಶದಲ್ಲಿ ಕರ್ಫ್ಯೂ ಹೇರಲಾಗಿದೆ.

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 1000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಹಲವಾರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿದ್ದು, ಸಾವುನೋವಿಗೆ ಕಾರಣವಾಗಿದೆ. ಶುಕ್ರವಾರ ಕೂಡ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಪ್ರತಿಭಟನಾ ನಿರತರು ನರಸಿಂಗಡಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದ್ದಾರೆ. ನಂತರ ಜೈಲಿಗೆ ಬೆಂಕಿ ಹಚ್ಚಿದ್ದಾರೆ. ಗಲಭೆಯ ಬಿಸಿ ಸಾಮಾನ್ಯ ಜನರ ಬದುಕಿಗೂ ತಟ್ಟಿದೆ.

ದೇಶಾದ್ಯಂತ ಹರಡಿರುವ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಶುಕ್ರವಾರ ಕರ್ಫ್ಯೂ ಮತ್ತು ಮಿಲಿಟರಿ ಪಡೆಗಳ ನಿಯೋಜನೆಯನ್ನು ಘೋಷಿಸಿದೆ. ಆಸ್ಪತ್ರೆಗಳು ನೀಡಿದ ವರದಿಗಳನ್ನು ಉಲ್ಲೇಖಿಸಿ ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಈ ವಾರದ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. 15 ವರ್ಷಗಳ ಅಧಿಕಾರದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಶೇಖ್ ಹಸೀನಾ ಸರ್ಕಾರ ದೊಡ್ಡ ಸವಾಲನ್ನು ಎದುರಿಸಿದೆ.

ಪ್ರತಿಭಟನೆಗಳು ಪ್ರಾರಂಭವಾದ ನಂತರ ಮೊದಲ ಬಾರಿಗೆ ಹೆಚ್ಚಿನ ಹಿಂಸಾಚಾರವನ್ನು ತಡೆಯುವ ಪ್ರಯತ್ನದಲ್ಲಿ ರಾಜಧಾನಿ ಢಾಕಾದಲ್ಲಿ ಪೊಲೀಸರು ಮೊದಲ ದಿನ ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದಾರೆ. ‘ನಾವು ಇಂದು ಢಾಕಾದಲ್ಲಿ ಎಲ್ಲಾ ರ್ಯಾಲಿಗಳು, ಮೆರವಣಿಗೆಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದೇವೆ’ ಎಂದು ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್ ತಿಳಿಸಿದ್ದಾರೆ.

ರ್ಯಾಲಿಗಳನ್ನು ವಿಫಲಗೊಳಿಸಲು ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಆದರೆ ನಗರದಲ್ಲಿ ಜನರ ಬೃಹತ್ ಗುಂಪುಗಳು ಜಮಾಯಿಸಿವೆ. ಇದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾರಣಾಂತಿಕ ಘರ್ಷಣೆಗೆ ಕಾರಣವಾಯಿತು. ‘ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ’ ಎಂದು ರಾಜಧಾನಿಯಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದವರು ಘೋಷಿಸಿದ್ದಾರೆ. ‘ಈ ಹತ್ಯೆಗಳಿಗೆ ಸರ್ಕಾರವೇ ಹೊಣೆಯಾಗಿರುವುದರಿಂದ ಶೇಖ್ ಹಸೀನಾ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

1971ರಲ್ಲಿ ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರ ಸಂಬಂಧಿಕರಿಗೆ ಕೆಲವು ಸಾರ್ವಜನಿಕ ವಲಯದ ಉದ್ಯೋಗಗಳನ್ನು ಮೀಸಲಿಡುವ ವ್ಯವಸ್ಥೆಯ ವಿರುದ್ಧ ಢಾಕಾ ಮತ್ತು ಇತರ ನಗರಗಳಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

Continue Reading

ವೈರಲ್ ನ್ಯೂಸ್

Viral News: ಸ್ತನ ಸೌಂದರ್ಯ ಶಸ್ತ್ರಚಿಕಿತ್ಸೆಯ ವಿಡಿಯೊ; ಆಸ್ಪತ್ರೆ ವಿರುದ್ಧ ಮಹಿಳೆಯಿಂದ ಕೇಸ್‌!

Viral News: ವೈದ್ಯೋ ನಾರಾಯಣೋ ಹರಿಃ ಎನ್ನುತ್ತಾರೆ. ತಮ್ಮ ಕಾಯಿಲೆಯ ವಿಷಯವನ್ನು ವೈದ್ಯರು ಗೌಪ್ಯವಾಗಿ ಇಡುತ್ತಾರೆ ಎಂಬ ನಂಬಿಕೆ. ಆದರೆ ಚೀನಾದ ಈ ಆಸ್ಪತ್ರೆಯೊಂದು ಮಹಿಳೆಯೊಬ್ಬಳ ಖಾಸಗಿ ಅಂಗದ ಶಸ್ತ್ರಚಿಕಿತ್ಸೆಯ ವಿಡಿಯೊವನ್ನು ಎಲ್ಲೆಡೆ ಹರಿಬಿಟ್ಟು ಮಹಿಳೆ ತಲೆತಗ್ಗಿಸುವ ಹಾಗೆ ಮಾಡಿದೆ. ಮಹಿಳೆ ಜನವರಿಯಲ್ಲಿ ಮಧ್ಯ ಚೀನಾದ ಕಾಸ್ಮೆಟಿಕ್ ಸರ್ಜರಿ ಆಸ್ಪತ್ರೆಯಲ್ಲಿ ಸ್ತನದ ಗಾತ್ರ ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ತಿಂಗಳುಗಳ ನಂತರ, ಇತರ ಹಲವಾರು ಮಹಿಳೆಯರೊಂದಿಗೆ ತನ್ನ ವಿಡಿಯೊ ಚೀನಾದ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿರುವುದನ್ನು ಕಂಡು ಅವಳು ಶಾಕ್ ಆಗಿ ಕ್ರಮಕ್ಕೆ ಮುಂದಾಗಿದ್ದಾಳೆ.

VISTARANEWS.COM


on

Viral News
Koo

ಕೆಲವೊಂದು ಆಸ್ಪತ್ರೆಗಳು ತಮ್ಮಲ್ಲಿ ನಡೆದ ಶಸ್ತ್ರಚಿಕಿತ್ಸೆಗಳನ್ನು ವಿಡಿಯೊ ಮಾಡಿ ಯುಟ್ಯೂಬ್‍ನಲ್ಲಿ ಪೋಸ್ಟ್ ಮಾಡುತ್ತಾರೆ. ಹಾಗಾಗಿ ನಾವು ಯುಟ್ಯೂಬ್‍ನಲ್ಲಿ ಹಲವು ಶಸ್ತ್ರಚಿಕಿತ್ಸೆಗಳ ವಿಡಿಯೊಗಳನ್ನು ನೋಡುತ್ತೇವೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬಳ ಸ್ತನ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆಯನ್ನು ರಹಸ್ಯವಾಗಿ ಚಿತ್ರೀಕರಿಸಿದ ಆಸ್ಪತ್ರೆ ಅದನ್ನು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡಿದೆ. ಈ ವಿಡಿಯೊ ಎಲ್ಲೆಡೆ ವೈರಲ್‌ (Viral News) ಆಗಿದೆ. ಇದರಿಂದ ನೊಂದ ಮಹಿಳೆ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ವರದಿ ಪ್ರಕಾರ, ಮಹಿಳೆ ಜನವರಿಯಲ್ಲಿ ಮಧ್ಯ ಚೀನಾದ ಕಾಸ್ಮೆಟಿಕ್ ಸರ್ಜರಿ ಆಸ್ಪತ್ರೆಯಲ್ಲಿ ಸ್ತನದ ಗಾತ್ರದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ತಿಂಗಳುಗಳ ನಂತರ, ಇತರ ಹಲವಾರು ಮಹಿಳೆಯರೊಂದಿಗೆ ತನ್ನ ವಿಡಿಯೊ ಚೀನಾದ ಸೋಶಿಯಲ್ ಮೀಡಿಯಾದ ಪ್ಲಾಟ್‍ಫಾರ್ಮ್‍ನಲ್ಲಿ ಪ್ರಸಾರವಾಗುತ್ತಿರುವುದನ್ನು ಕಂಡು ಅವಳು ಶಾಕ್‌ ಆದಳು. ಈ ಕ್ಲಿಪ್‍ನಲ್ಲಿ ಆಕೆಗೆ ಶಸ್ತ್ರಚಿಕಿತ್ಸೆಯ ನಂತರ, ಬ್ಯಾಂಡೇಜ್ ಮತ್ತು ಅರಿವಳಿಕೆಗೆ ಒಳಗಾಗಿರುವುದನ್ನು ತೋರಿಸಿದೆ ಎಂದು ವರದಿಯಾಗಿದೆ.

Viral News

ಈ ಘಟನೆಯ ಬಗ್ಗೆ ಬೇಸರಗೊಂಡ ಮಹಿಳೆ ತನ್ನ ಜೀವನದಲ್ಲಿ ರಹಸ್ಯವಾಗಿಡಬೇಕಾಗಿದ್ದ ಈ ವಿಚಾರವನ್ನು ಬಹಿರಂಗಪಡಿಸಬಾರದೆಂದು ತಿಳಿಸಿ ವಿಡಿಯೊ ಶೂಟ್ ಮಾಡಿದ ವ್ಯಕ್ತಿಯನ್ನು ಗುರುತಿಸುವಂತೆ ಮತ್ತು ವಿಡಿಯೊವನ್ನು ಡಿಲೀಟ್ ಮಾಡುವಂತೆ ಆಕೆ ಪದೇ ಪದೇ ಆಸ್ಪತ್ರೆಯನ್ನು ಸಂಪರ್ಕಿಸಿ ವಿನಂತಿಸಿಕೊಂಡಿದ್ದಾಳೆ. ಹಾಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಮತ್ತು ಪರಿಹಾರವನ್ನು ನೀಡುವಂತೆ ಆಕೆ ಆಸ್ಪತ್ರೆಯ ಅಧಿಕಾರಿಗಳನ್ನು ಕೇಳಿದ್ದಾಳೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಕ್ಷಮೆಯಾಚಿಸಲು ಹಾಗೂ ವಿಡಿಯೊವನ್ನು ಡಿಲೀಟ್ ಮಾಡಲು ನಿರಾಕರಿಸಿದ್ದಾರೆ. ಈ ವಿಡಿಯೊವನ್ನು ಯಾರು ಮಾಡಿದರೆಂದು ಪತ್ತೆಹಚ್ಚುವುದು ಅಸಾಧ್ಯ ಎಂದು ಆಸ್ಪತ್ರೆ ಹೇಳಿದೆ.

ಆದರೆ ವಿಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿ ಯಾರು ಎಂಬುದು ಆಸ್ಪತ್ರೆಯವರಿಗೆ ತಿಳಿದಿರಬೇಕು. ಯಾಕೆಂದರೆ ಆಸ್ಪತ್ರೆಯ ಆಪರೇಟಿಂಗ್ ಥಿಯೇಟರ್‌ನೊಳಗೆ ವೈದ್ಯರ ಅನುಮತಿ ಇಲ್ಲದೇ ಸಾಮಾನ್ಯ ಜನರು ಬರಲು ನಿಷೇಧವಿದೆ. ಮತ್ತು ಈ ವಿಡಿಯೊದಲ್ಲಿ ವೈದ್ಯರು ಮತ್ತು ನರ್ಸ್‍ಗಳಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದರಿಂದಾಗಿ ಹೊರಗಿನವರು ಪ್ರವೇಶಿಸಲು ಮತ್ತು ವಿಡಿಯೊ ಮಾಡಲು ಸಾಧ್ಯವಿಲ್ಲ ಎಂದು ಮಹಿಳೆ ವಾದಿಸಿದ್ದಾಳೆ. ಆದರೆ ವಿಡಿಯೊವನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ಆಸ್ಪತ್ರೆಯಿಂದ ಹೊರಹೋಗಿದ್ದಾನೆ ಮತ್ತು ಅವರು ತಮ್ಮ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಎಂದು ಆಸ್ಪತ್ರೆ ಹೇಳಿಕೊಂಡಿದೆ. ಹಾಗಾಗಿ ಆಸ್ಪತ್ರೆಯ ವಿರುದ್ದ ಸಿಟ್ಟಿಗೆದ್ದ ಮಹಿಳೆ ಆಸ್ಪತ್ರೆಯ ವಿರುದ್ಧ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾಳೆ.

ಇದನ್ನೂ ಓದಿ: ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ; ವಿಡಿಯೋ ಇದೆ

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕಾರಣ ಆಸ್ಪತ್ರೆಯ ಈ ಪ್ರತಿಕ್ರಿಯೆಗೆ ಆನ್‍ಲೈನ್‍ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆಯ ಬೇಜವಾಬ್ದಾರಿಯ ಬಗ್ಗೆ ನೆಟ್ಟಿಗರು ರೊಚ್ಚಿಗೆದ್ದಿದ್ದಾರೆ. ಈ ಘಟನೆಯ ಬಗ್ಗೆ ಮಾತನಾಡಿದ ಹೆನಾನ್ನ ಟಿಯಾನ್ಕ್ಸಿನ್(Tianxin) ಕಾನೂನು ಸಂಸ್ಥೆಯ ವಕೀಲ ಮಾ ಬಿನ್, ರೋಗಿಗಳ ಮುಖಗಳನ್ನು ಅವರ ಒಪ್ಪಿಗೆಯಿಲ್ಲದೆ ತೋರಿಸುವ ವಿಡಿಯೊಗಳನ್ನು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡುವುದು ಗೌಪ್ಯತೆ ಹಕ್ಕುಗಳು ಮತ್ತು ಇಮೇಜ್ ಹಕ್ಕುಗಳ ಉಲ್ಲಂಘನೆಯಾಗಿದೆ . ವಿಡಿಯೊವನ್ನು ಹೊರಗಿನ ವ್ಯಕ್ತಿ ಮಾಡಿದ್ದರೂ ಕೂಡ ಅದಕ್ಕೆ ಆಸ್ಪತ್ರೆಯೇ ಜವಾಬ್ದಾರವಾಗಿರುತ್ತದೆ ಎಂದು ತಿಳಿಸಿದ್ದಾರೆ

Continue Reading

ದೇಶ

Microsoft Global Outage: ಮೈಕ್ರೊಸಾಫ್ಟ್ ಟ್ರಬಲ್; ಯಾರ ಮೇಲೆ ಏನು ಪರಿಣಾಮ? ಮುಂದೇನು?

Microsoft Global Outage: ಕ್ಲೌಡ್-ಆಧಾರಿತ ಕಂಪನಿಗಳಿಗೆ ಸೈಬರ್‌ ಸುರಕ್ಷತೆಯಲ್ಲಿ ಪರಿಣತಿ ಹೊಂದಿರುವ ಕ್ರೌಡ್‌ಸ್ಟ್ರೈಕ್‌ನಿಂದ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರರಿಗೆ ನೀಡಲಾದ ಅಸಮರ್ಪಕ ಸಾಫ್ಟ್‌ವೇರ್ ಅಪ್‌ಡೇಟ್‌ನಿಂದ ಸ್ಥಗಿತವು ಉಂಟಾಗಿದೆ.
ಮೈಕ್ರೋಸಾಫ್ಟ್ ವಿಂಡೋಸ್ ಪ್ಲಾಟ್‌ಫಾರ್ಮ್‌ನಲ್ಲಿ ಕ್ರೌಡ್‌ಸ್ಟ್ರೈಕ್ ಬಳಸುವ ಕಂಪನಿಗಳು ಅಥವಾ ವ್ಯಕ್ತಿಗಳ ಮೇಲೆ ಇದು ಬಹುದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿವೆ. ಅವರು ಅಪ್ಡೇಟ್‌ ಅನ್ನು ಕ್ಲಿಕ್‌ ಮಾಡಿದಾಗ, ಹೊಂದಾಣಿಕೆಯಾಗದ ಸಾಫ್ಟ್‌ವೇರ್‌ಗಳು ಕಂಪ್ಯೂಟರ್‌ಗಳನ್ನು ಕ್ರ್ಯಾಶ್‌ ಮಾಡಿತ್ತು.

VISTARANEWS.COM


on

Microsoft Global Outage
Koo

ಹೊಸದಿಲ್ಲಿ: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ನಿನ್ನೆ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು (Microsoft Global Outage). ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಸಮಸ್ಯೆಯಿಂದಾಗಿ ಯಾರ ಮೇಲೆ ಎಲ್ಲಾ ಪರಿಣಾಮ ಬೀರಿದೆ ಎಂಬುದನ್ನು ನೋಡೋಣ.

ಏರ್‌ಲೈನ್‌ಗಳು, ಬ್ಯಾಂಕ್‌ಗಳು, ಟಿವಿ ಚಾನೆಲ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತಿದೊಡ್ಡ ಐಟಿ ಕ್ರ್ಯಾಶ್‌ಗಳಿಂದ ಗಂಟೆಗಳ ಕಾಲ ಸಮಸ್ಯೆ ಉಂಟಾಗಿತ್ತು. ಇದು ಆಂಟಿವೈರಸ್ ಪ್ರೋಗ್ರಾಂನ ಅಪ್‌ಡೇಟ್‌ನಿಂದ ಉಂಟಾಯಿತು.

ಕ್ಲೌಡ್-ಆಧಾರಿತ ಕಂಪನಿಗಳಿಗೆ ಸೈಬರ್‌ ಸುರಕ್ಷತೆಯಲ್ಲಿ ಪರಿಣತಿ ಹೊಂದಿರುವ ಕ್ರೌಡ್‌ಸ್ಟ್ರೈಕ್‌ನಿಂದ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರರಿಗೆ ನೀಡಲಾದ ಅಸಮರ್ಪಕ ಸಾಫ್ಟ್‌ವೇರ್ ಅಪ್‌ಡೇಟ್‌ನಿಂದ ಸ್ಥಗಿತವು ಉಂಟಾಗಿದೆ.
ಮೈಕ್ರೋಸಾಫ್ಟ್ ವಿಂಡೋಸ್ ಪ್ಲಾಟ್‌ಫಾರ್ಮ್‌ನಲ್ಲಿ ಕ್ರೌಡ್‌ಸ್ಟ್ರೈಕ್ ಬಳಸುವ ಕಂಪನಿಗಳು ಅಥವಾ ವ್ಯಕ್ತಿಗಳ ಮೇಲೆ ಇದು ಬಹುದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿವೆ. ಅವರು ಅಪ್ಡೇಟ್‌ ಅನ್ನು ಕ್ಲಿಕ್‌ ಮಾಡಿದಾಗ, ಹೊಂದಾಣಿಕೆಯಾಗದ ಸಾಫ್ಟ್‌ವೇರ್‌ಗಳು ಕಂಪ್ಯೂಟರ್‌ಗಳನ್ನು ಕ್ರ್ಯಾಶ್‌ ಮಾಡಿತ್ತು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) ಸೇರಿದಂತೆ ಭಾರತದ ಎಲ್ಲ ವಿಮಾನ ನಿಲ್ದಾಣಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೆ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲಕಲ್ಲೋಲ ಉಂಟಾಗಿತ್ತು, ಭಾರತದಲ್ಲಿ, ಹಲವಾರು ವಿಮಾನ ನಿಲ್ದಾಣಗಳು ಪ್ರಯಾಣಿಕರಿಗೆ ಕೈಬರಹದ ಬೋರ್ಡಿಂಗ್ ಪಾಸ್‌ಗಳನ್ನು ನೀಡಿವೆ. ಬೆಂಗಳೂರು, ಮುಂಬೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳು ಹಲವು ರದ್ದಾಗಿದ್ದವು. ಇದೀಗ ಮತ್ತೆ ಸೇವೆ ಪುನರಾರಂಭಗೊಳ್ಳುತ್ತಿವೆ ಎಂದು ಏರ್‌ಲೈನ್ಸ್ ಹೇಳಿದೆ.

ಮಾಧ್ಯಮ ಕಂಪನಿಗಳು ಸಹ ಹೆಣಗಾಡುತ್ತಿದ್ದವು, ಬ್ರಿಟನ್‌ನ ಸ್ಕೈ ನ್ಯೂಸ್ ತನ್ನ ಬೆಳಗಿನ ಸುದ್ದಿ ಪ್ರಸಾರವನ್ನು ಕೊನೆಗೊಳಿಸಿದೆ ಎಂದು ಹೇಳಿದೆ ಮತ್ತು ಆಸ್ಟ್ರೇಲಿಯಾದ ABC ಅದೇ ರೀತಿಯ ಪ್ರಮುಖ ತೊಂದರೆಗಳನ್ನು ಎದುರಿಸಿದೆ. ನಿನ್ನೆ, CrowdStrike ಜಾಗತಿಕವಾಗಿ IT ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ಒಂದು ಅಪ್‌ಡೇಟ್ ಅನ್ನು ಬಿಡುಗಡೆ ಮಾಡಿದೆ. ನಾವು ಈ ಸಮಸ್ಯೆಯ ಬಗ್ಗೆ ತಿಳಿದಿರುತ್ತೇವೆ. ಗ್ರಾಹಕರಿಗೆ ತಾಂತ್ರಿಕ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸಲು CrowdStrike ಮತ್ತು ಉದ್ಯಮದಾದ್ಯಂತ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಸತ್ಯ ನಾದೆಲ್ಲಾ ಹೇಳಿದರು

ಜಗತ್ತಿನಾದ್ಯಂತ ಏರ್‌ಲೈನ್‌ಗಳು, ಬ್ಯಾಂಕ್‌ಗಳು ಮತ್ತು ವ್ಯವಹಾರಗಳ ಕಾರ್ಯಾಚರಣೆ ಸ್ಥಗಿತಗೊಂಡು ಬೃಹತ್ ಜಾಗತಿಕ ಸಮಸ್ಯೆ ಎದರಾಗಿದೆ. ಮೂರನೇ ವ್ಯಕ್ತಿಯ ಸಾಫ್ಟ್‌ವೇರ್ ಪ್ಲಾಟ್‌ಫಾರ್ಮ್‌ನಿಂದ ನವೀಕರಣದಿಂದಾಗಿ ವಿಂಡೋಸ್ ಸಾಧನಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಯ ಬಗ್ಗೆ ತನಗೆ ತಿಳಿದಿದೆ ಎಂದು ಮೈಕ್ರೋಸಾಫ್ಟ್ ಈ ಹಿಂದೆ ಹೇಳಿದೆ. ನಾವು ರೆಸಲ್ಯೂಶನ್ ಬರಲಿದೆ ಎಂದು ನಿರೀಕ್ಷಿಸುತ್ತೇವೆ ಎಂದು ಮೈಕ್ರೋಸಾಫ್ಟ್ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದಲ್ಲಿ ಹಿಂಸಾಚಾರ ಉಲ್ಬಣ, 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ

Continue Reading

ಪ್ರಮುಖ ಸುದ್ದಿ

Bangladesh Protests: ಬಾಂಗ್ಲಾದಲ್ಲಿ ಹಿಂಸಾಚಾರ ಉಲ್ಬಣ, 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ

Bangladesh Protests: ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 300 ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.

VISTARANEWS.COM


on

bangladesh protests dhaka
Koo

ಢಾಕಾ: ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ (Bangladesh Protests) ಪ್ರತಿಭಟನೆ ಹಾಗೂ ಹಿಂಸಾಚಾರ (Bangladesh Violence) ಇದೀಗ ಉಲ್ಬಣಿಸಿದ್ದು, ಅಲ್ಲಿರುವ ಸುಮಾರು 300 ಭಾರತೀಯ ವಿದ್ಯಾರ್ಥಿಗಳು (Indian Students) ಸ್ವದೇಶಕ್ಕೆ ಮರಳಿದ್ದಾರೆ. ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದಾರೆ. ದೇಶವಿಡೀ ಕರ್ಫ್ಯೂ ಹಾಕಲಾಗಿದೆ.

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ. ಆದರೆ ಸುಮಾರು 300 ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಹಲವಾರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿದ್ದು, ಸಾವುನೋವಿಗೆ ಕಾರಣವಾಗಿದೆ. ಶುಕ್ರವಾರ ಕೂಡ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಪ್ರತಿಭಟನಾ ನಿರತರು ನರಸಿಂಗಡಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದ್ದಾರೆ. ನಂತರ ಜೈಲಿಗೆ ಬೆಂಕಿ ಹಚ್ಚಿದ್ದಾರೆ. ಗಲಭೆಯ ಬಿಸಿ ಸಾಮಾನ್ಯ ಜನರ ಬದುಕಿಗೂ ತಟ್ಟಿದೆ.

ದೇಶಾದ್ಯಂತ ಹರಡಿರುವ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಶುಕ್ರವಾರ ಕರ್ಫ್ಯೂ ಮತ್ತು ಮಿಲಿಟರಿ ಪಡೆಗಳ ನಿಯೋಜನೆಯನ್ನು ಘೋಷಿಸಿದೆ. ಆಸ್ಪತ್ರೆಗಳು ನೀಡಿದ ವರದಿಗಳನ್ನು ಉಲ್ಲೇಖಿಸಿ ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಈ ವಾರದ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. 15 ವರ್ಷಗಳ ಅಧಿಕಾರದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಶೇಖ್ ಹಸೀನಾ ಸರ್ಕಾರ ದೊಡ್ಡ ಸವಾಲನ್ನು ಎದುರಿಸಿದೆ.

ಪ್ರತಿಭಟನೆಗಳು ಪ್ರಾರಂಭವಾದ ನಂತರ ಮೊದಲ ಬಾರಿಗೆ ಹೆಚ್ಚಿನ ಹಿಂಸಾಚಾರವನ್ನು ತಡೆಯುವ ಪ್ರಯತ್ನದಲ್ಲಿ ರಾಜಧಾನಿ ಢಾಕಾದಲ್ಲಿ ಪೊಲೀಸರು ಮೊದಲ ದಿನ ಎಲ್ಲಾ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದಾರೆ. ‘ನಾವು ಇಂದು ಢಾಕಾದಲ್ಲಿ ಎಲ್ಲಾ ರ್ಯಾಲಿಗಳು, ಮೆರವಣಿಗೆಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದ್ದೇವೆ’ ಎಂದು ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್ ತಿಳಿಸಿದ್ದಾರೆ.

ರ್ಯಾಲಿಗಳನ್ನು ವಿಫಲಗೊಳಿಸಲು ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಆದರೆ ನಗರದಲ್ಲಿ ಜನರ ಬೃಹತ್ ಗುಂಪುಗಳು ಜಮಾಯಿಸಿವೆ. ಇದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾರಣಾಂತಿಕ ಘರ್ಷಣೆಗೆ ಕಾರಣವಾಯಿತು. ‘ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ’ ಎಂದು ರಾಜಧಾನಿಯಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದವರು ಘೋಷಿಸಿದ್ದಾರೆ. ‘ಈ ಹತ್ಯೆಗಳಿಗೆ ಸರ್ಕಾರವೇ ಹೊಣೆಯಾಗಿರುವುದರಿಂದ ಶೇಖ್ ಹಸೀನಾ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

1971ರಲ್ಲಿ ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರ ಸಂಬಂಧಿಕರಿಗೆ ಕೆಲವು ಸಾರ್ವಜನಿಕ ವಲಯದ ಉದ್ಯೋಗಗಳನ್ನು ಮೀಸಲಿಡುವ ವ್ಯವಸ್ಥೆಯ ವಿರುದ್ಧ ಢಾಕಾ ಮತ್ತು ಇತರ ನಗರಗಳಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Continue Reading
Advertisement
Ravindra Jadeja
ಕ್ರಿಕೆಟ್20 mins ago

Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು?

Bangladesh protests
ವಿದೇಶ22 mins ago

Bangladesh Protests: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; 1000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್‌; ಸಾವಿನ ಸಂಖ್ಯೆ 115ಕ್ಕೆ ಏರಿಕೆ

Star suvarna Ravi Shankar entered television suvarna grahamanthri
ಕಿರುತೆರೆ32 mins ago

Star Suvarna: `ಸುವರ್ಣ ಗೃಹಮಂತ್ರಿ’ಯ ಸಾರಥಿಯಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ರವಿಶಂಕರ್

Paris Olympics 2024
ಕ್ರೀಡೆ40 mins ago

Paris Olympics 2024 : ಒಲಿಂಪಿಕ್ಸ್​ಗೆ ತೆರಳಿರುವ ಭಾರತದ ಹಿರಿಯ ಮತ್ತು ಕಿರಿಯ ಸ್ಪರ್ಧಿಗಳು ಯಾರು ಗೊತ್ತೇ? ಇಲ್ಲಿದೆ ಅವರ ವಿವರ

Union Budget 2024
ದೇಶ54 mins ago

Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತರಿಗೆ ರಿಲೀಫ್?

Kanguva Movie Suriya to have 3 different looks in Siva
ಕಾಲಿವುಡ್1 hour ago

Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

Building Collapsed
ದೇಶ1 hour ago

Building Collapsed: ಭಾರೀ ಮಳೆಗೆ ನಾಲ್ಕು ಅಂತಸ್ತಿಗೆ ಕಟ್ಟಡ ಧರಾಶಾಹಿ; ಮಹಿಳೆ ಬಲಿ

Opposition Party leader R Ashok pressmeet about Valmiki Development Corporation scam
ಕರ್ನಾಟಕ1 hour ago

R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

King Cobra Rescue
ವೈರಲ್ ನ್ಯೂಸ್1 hour ago

King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ

ಕ್ರೀಡೆ1 hour ago

Mohammed Shami: ಪಾಕ್​ ಮಾಜಿ ನಾಯಕ ಇಂಜಮಾಮ್ ಬೆಂಡೆತ್ತಿದ ಮೊಹಮ್ಮದ್​ ಶಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌