Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ - Vistara News

ವಿದೇಶ

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

Bangladesh Unrest: ಹಿಂದುಗಳು, ಅದರಲ್ಲೂ ಶೇಖ್‌ ಹಸೀನಾ ಅವರ ಜತೆ ಆಪ್ತರಾಗಿದ್ದ ಸೆಲೆಬ್ರಿಟಿಗಳನ್ನು ಹತ್ಯೆ ಮಾಡುತ್ತಿರುವುದರ ಹಿಂದೆ ಗಲ್ಫ್‌ ರಾಷ್ಟ್ರಗಳ ಕೈವಾಡ ಇದೆ. ಹಿಂದು ಗಾಯಕ ರಾಹುಲ್‌ ಆನಂದ್‌, ಕೌನ್ಸಿಲರ್‌ಗಳನ್ನು ಇದೇ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Bangladesh Unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್‌ ಹಸೀನಾ (Sheikh Hasina) ನೇತೃತ್ವದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಸೇರಿ ಹಲವರು ಆರಂಭಿಸಿದ್ದ ಪ್ರತಿಭಟನೆ, ಹಿಂಸಾಚಾರ ಈಗ ಹಿಂದುಗಳ ಮೇಲೆ ತಿರುಗಿದೆ. ಮೀಸಲಾತಿ ವಿರುದ್ಧದ ಹೋರಾಟವೀಗ ಹಿಂದುಗಳ ಮೇಲಿನ ಸೇಡು, ದಾಳಿಯಾಗಿ (Bangladesh Unrest) ಪರಿವರ್ತನೆಗೊಂಡಿದೆ. ಹಿಂದುಗಳ ಮೇಲೆ ದಾಳಿ (Bangladesh Hindus) ನಡೆಸಲಾಗುತ್ತಿದೆ. ಹಿಂದುಗಳನ್ನು ಹತ್ಯೆ ಮಾಡಲಾಗುತ್ತಿದೆ. ಹಿಂದು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ. ಇದರ ಮಧ್ಯೆಯೇ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ನಡೆಸುತ್ತಿರುವುದರ ಹಿಂದೆ ಇಸ್ಲಾಮಿಕ್‌ ರಾಷ್ಟ್ರಗಳ ಹಣ ಹಾಗೂ ಕುತಂತ್ರ ಇದೆ ಎಂದು ತಿಳಿದುಬಂದಿದೆ.

ಹೌದು, ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ದೇವಾಲಯಗಳು ಸೇರಿ 97ಕ್ಕೂ ಹಿಂದು ಸ್ಥಳಗಳ ಮೇಲೆ ದಾಳಿ ಇಸ್ಲಾಮಿಕ್‌ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವುದು, ಹಿಂದು ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸಲಾಗಿದೆ. ಇದಕ್ಕೆಲ್ಲ ಗಲ್ಫ್‌ ದೇಶಗಳು ಬಾಂಗ್ಲಾದೇಶದ ಮೂಲಭೂತವಾದಿಗಳು ನೀಡುತ್ತಿರುವ ಹಣವೇ ಕಾರಣ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಆದರೆ, ಯಾವ ರಾಷ್ಟ್ರಗಳಿಂದ ಬಾಂಗ್ಲಾದೇಶದ ಮೂಲಭೂತವಾದಿಗಳಿಗೆ ಹಣ ಸಂದಾಯವಾಗುತ್ತಿದೆ ಎಂಬುದು ಗೊತ್ತಾಗಿಲ್ಲ.

ಬಾಂಗ್ಲಾದೇಶದಲ್ಲಿರುವ ನಾಲ್ಕು ಇಸ್ಕಾನ್‌ ಹಾಗೂ ಕಾಳಿ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಕಾಳಿ ದೇವಾಲಯಕ್ಕೆ ಬೆಂಕಿ ಹಚ್ಚಿದ ಇಸ್ಲಾಮಿಕ್‌ ಮೂಲಭೂತವಾದಿಗಳು ತಮ್ಮ ಮನಸ್ಥಿತಿ ಪ್ರದರ್ಶಿಸಿದ್ದಾರೆ. ರಂಗ್‌ಪುರ ಸಿಟಿ ಕಾರ್ಪೊರೇಷನ್‌ನ ಹಿಂದು ಕೌನ್ಸಿರ್‌ ಹರಧನ್‌ ರಾಯ್‌ ಹರ ಎಂಬುವರನ್ನು ಉದ್ರಿಕ್ತರು ಕೊಂದು ಹಾಕಿದ್ದಾರೆ. ಇದೇ ಪಟ್ಟಣದ ಮತ್ತೊಬ್ಬ ಹಿಂದು ಕೌನ್ಸಿಲರ್‌ ಕಾಜಲ್‌ ರಾಯ್‌ ಎಂಬವರನ್ನೂ ಕೊಲೆ ಮಾಡಿದ್ದಾರೆ. ಅಲ್ಲದೆ, ಭಾರತೀಯ ಕಲ್ಚರಲ್ ಸೆಂಟರ್‌ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿ, ಕಟ್ಟಡಕ್ಕೆ ಹಾನಿ ಮಾಡಿದ್ದಾರೆ.

‌2013ರಿಂದ 4 ಸಾವಿರ ದಾಳಿ

ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರು, ಅದರಲ್ಲೂ ಹಿಂದುಗಳ ಮೇಲೆ ಹಲವು ವರ್ಷಗಳಿಂದ ದಾಳಿ ನಡೆಯುತ್ತಿದೆ. ವರದಿಗಳ ಪ್ರಕಾರ 2013ರಿಂದ ಇದುವರೆಗೆ ಹಿಂದುಗಳ ಮೇಲೆ ಸುಮಾರು 4 ಸಾವಿರ ದಾಳಿಗಳು ನಡೆದಿವೆ ಎಂದು ತಿಳಿದುಬಂದಿದೆ. ಹಿಂದುಗಳು, ಅದರಲ್ಲೂ ಶೇಖ್‌ ಹಸೀನಾ ಅವರ ಜತೆ ಆಪ್ತರಾಗಿದ್ದ ಸೆಲೆಬ್ರಿಟಿಗಳನ್ನು ಹತ್ಯೆ ಮಾಡುತ್ತಿರುವುದರ ಹಿಂದೆ ಗಲ್ಫ್‌ ರಾಷ್ಟ್ರಗಳ ಕೈವಾಡ ಇದೆ. ಹಿಂದು ಗಾಯಕ ರಾಹುಲ್‌ ಆನಂದ್‌, ಕೌನ್ಸಿಲರ್‌ಗಳನ್ನು ಇದೇ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರಕ್ಕೆ ಮಹಮ್ಮದ್ ಯೂನಸ್‌ರನ್ನು ಮುಖ್ಯಸ್ಥರಾಗಿ ಮಾಡಿದ್ದೇಕೆ? ಏನಿವರ ಹಿನ್ನೆಲೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

ಬಾಂಗ್ಲಾದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯು (Bangladesh Unrest) ಹಲವು ಭಾರತೀಯ ಕಂಪನಿಗಳ ತೀವ್ರ ಪರಿಣಾಮ ಬೀರಿದೆ. ಇದರಿಂದ ಕಂಪನಿಗಳಿಗಾಗುವ ಆಗುವ ನಷ್ಟು ಎಷ್ಟು, ಇದು ಭಾರತದ ವ್ಯಾಪಾರ ವಹಿವಾಟಿನ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ, ಯಾವ ಉದ್ಯಮಕ್ಕೆ ಹೆಚ್ಚಿನ ನಷ್ಟ ಉಂಟಾಗುತ್ತದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Bangladesh Unrest
Koo

ಉದ್ಯೋಗ ಮೀಸಲಾತಿ (Job reservation) ವಿರೋಧದ ನೆಪದಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಳೆದ ಬಳಿಕ ಬಾಂಗ್ಲಾದಲ್ಲಿ (Bangladesh Unrest) ಪ್ರಧಾನಮಂತ್ರಿ ಶೇಖ್ ಹಸೀನಾ (PM Sheikh Hasina) ಅವರ ಸರ್ಕಾರ ಪತನಗೊಂಡಿತ್ತು. ಇದರಿಂದ ನೆರೆಯ ದೇಶಗಳಲ್ಲೂ ಆತಂಕ ಉಂಟಾಗಿದೆ. ಇದಕ್ಕೆ ಮುಖ್ಯ ಕಾರಣ ಹಲವು ಸುಪ್ರಸಿದ್ಧ ಕಂಪನಿಗಳ ದೈನಂದಿನ ಕೆಲಸಕ್ಕೆ ಅಡ್ಡಿಯಾಗಿರುವುದು.

ಮಾರಿಕೋ, ಡಾಬರ್, ಹಿಂದೂಸ್ತಾನ್ ಯೂನಿಲಿವರ್, ನೆಸ್ಲೆ, ಪೆಪ್ಸಿಕೋ ಮತ್ತು ಕೋಕಾ-ಕೋಲಾದಂತಹ ಎಫ್‌ಎಂಸಿಜಿ ಕಂಪನಿಗಳು ಈಗ ಬಾಂಗ್ಲಾದಲ್ಲಿ ತೊಂದರೆಗೆ ಸಿಲುಕಿಕೊಂಡಿದೆ. ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯೊಳಗೆ ಇರಲು ಮತ್ತು ಮನೆಯಿಂದಲೇ ಕೆಲಸ ಮಾಡಲು ಸಲಹೆ ನೀಡಿವೆ. ಇನ್ನು ಕೆಲವರು ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಮಾರಾಟ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಾರೆ.

ಪ್ರಮುಖ ಕಂಪನಿಗಳಿಗೆ ಆತಂಕ

ಮಾರಿಕೊ, ಡಾಬರ್, ಇಮಾಮಿ ಮತ್ತು ಎಚ್‌ಯುಎಲ್ ಸೇರಿದಂತೆ ಭಾರತೀಯ ಎಫ್‌ಎಂಸಿಜಿ ಕಂಪೆನಿಗಳು ಬಾಂಗ್ಲಾದೇಶದಲ್ಲಿ ಶೇ. 1-5ರಷ್ಟು ಆದಾಯವನ್ನು ಹೊಂದಿವೆ. ಹೆಚ್‌ಯುಎಲ್ ಮ್ಯಾನೇಜಿಂಗ್ ಡೈರೆಕ್ಟರ್ ರೋಹಿತ್ ಜಾವಾ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ಪರಿಸ್ಥಿತಿ ಶೀಘ್ರದಲ್ಲೇ ಸ್ಥಿರಗೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಯಾಕೆಂದರೆ ಇದು ಯೂನಿಲಿವರ್‌ಗೆ ಬಹಳ ಮುಖ್ಯವಾದ ದೇಶವಾಗಿದೆ. ಪರಿಸ್ಥಿತಿಯು ಸಹಜವಾದ ತಕ್ಷಣ ನಾವು ಮತ್ತೆ ಕಾರ್ಯಾಚರಣೆಗೆ ಮರಳುತ್ತೇವೆ. ಯಾಕೆಂದರೆ ಹೆಚ್ಯುಎಲ್ ನಲ್ಲಿರುವಂತೆ ನಾವು ಬಾಂಗ್ಲಾದೇಶದಲ್ಲಿ ಸಾಕಷ್ಟು ದೈನಂದಿನ ಸರಕು ಮತ್ತು ಅಗತ್ಯ ವಸ್ತುಗಳನ್ನು ಮಾರಾಟ ಮಾಡುತ್ತೇವೆ. ಆದ್ದರಿಂದ ನಾವು ಎಷ್ಟು ಬೇಗನೆ ಕಾರ್ಯಾಚರಣೆಗೆ ಹಿಂತಿರುಗಬಹುದು ಅಷ್ಟು ಶೀಘ್ರದಲ್ಲೇ ನಾವು ಮತ್ತೆ ಪೂರೈಕೆಯನ್ನು ಪ್ರಾರಂಭಿಸಬಹುದು. ಇದು ಗ್ರಾಹಕರಿಗೆ ಸಹ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

Bangladesh Unrest
Bangladesh Unrest


ಗಣನೀಯ ಆದಾಯ

ಮಾರಿಕೊದ ವ್ಯವಸ್ಥಾಪಕ ನಿರ್ದೇಶಕ ಸೌಗತಾ ಗುಪ್ತೋ ಅವರು ಪ್ರತಿಕ್ರಿಯಿಸಿ, ಅಂತಾರಾಷ್ಟ್ರೀಯ ಆದಾಯದ ಶೇ. 44ರಷ್ಟು ಬಾಂಗ್ಲಾದೇಶದಿಂದ ಬರುತ್ತದೆ. ಬಾಂಗ್ಲಾದೇಶದ ವ್ಯವಹಾರವು ವಿಶಾಲ ಮತ್ತು ದೃಢವಾಗಿದೆ. ಪ್ರಸ್ತುತ ಪರಿಸ್ಥಿತಿ ಹಿನ್ನೆಲೆಯಲ್ಲಿ ನಾವು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಪ್ರಧಾನಿ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ತಕ್ಷಣ ಮಾರಿಕೊ ಆದಾಯ ಶೇಕಡಾ 5ಕ್ಕಿಂತ ಹೆಚ್ಚು ಕುಸಿದಿದೆ.

ತಜ್ಞರು ಏನು ಹೇಳುತ್ತಾರೆ?

ಬಾಂಗ್ಲಾದೇಶವು ಭಾರತಕ್ಕೆ ಪ್ರಮುಖ ವ್ಯಾಪಾರ ಪಾಲುದಾರನಾಗಿದ್ದರೂ, ತೀವ್ರ ರಾಜಕೀಯ ಬಿಕ್ಕಟ್ಟಿನ ಪರಿಣಾಮವು ಭಾರತದ ಒಟ್ಟಾರೆ ವ್ಯಾಪಾರದ ಮೇಲೆ ಸೀಮಿತ ಪರಿಣಾಮವನ್ನು ಮಾತ್ರ ಬೀರುತ್ತದೆ. ಬಾಂಗ್ಲಾದೇಶಕ್ಕೆ ರಫ್ತು ಪ್ರಮಾಣ ಭಾರತದ ಒಟ್ಟು ಸರಕು ರಫ್ತಿನ ಕೇವಲ ಶೇ. 2.5ರಷ್ಟಿದೆ.

ಇದನ್ನೂ ಓದಿ: Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

ಬಾಂಗ್ಲಾಕ್ಕೆ ರಫ್ತು ಮಾಡುವ ನಿರ್ದಿಷ್ಟ ಉದ್ಯಮ ವಿಭಾಗದಲ್ಲಿ ಹತ್ತಿ ನೂಲು ದೊಡ್ಡ ಪಾಲನ್ನು ಹೊಂದಿದೆ. ಇದರ ಮೇಲೆ ಕೊಂಚ ಪರಿಣಾಮ ಉಂಟಾಗಬಹುದು. ಮತ್ತೊಂದೆಡೆ ಬಾಂಗ್ಲಾದೇಶಕ್ಕೆ ಈ ಹಿಂದೆ ರಫ್ತು ಮಾರುಕಟ್ಟೆಯನ್ನು ಕಳೆದುಕೊಂಡಿದ್ದ ಭಾರತೀಯ ಆರ್‌ಎಂಜಿಗೆ ಇದು ಅವಕಾಶವಾಗಿದೆ.

ಭಾರತೀಯ ಉತ್ಪಾದನೆ ಮತ್ತು ಮೂಲಸೌಕರ್ಯ ಕಂಪನಿಗಳ ವ್ಯಾಪಾರ ಅಥವಾ ಯೋಜನಾ ಕಾರ್ಯಾಚರಣೆಗಳಲ್ಲಿ ಕೊಂಚ ಅಡ್ಡಿ ಮತ್ತು ಅನಿಶ್ಚಿತತೆ ಉಂಟಾಗಬಹುದು. ಮುಖ್ಯವಾಗಿ ಹೊಸದಾಗಿ ಹೂಡಿಕೆ ಮಾಡಲು ನಿರ್ಧರಿಸುವ ಭಾರತೀಯ ಕಂಪನಿಗಳು ಹೂಡಿಕೆಗಳನ್ನು ಮುಂದೂಡುವ ಅಥವಾ ವಿಳಂಬಗೊಳಿಸುವ ಸಾಧ್ಯತೆ ಇದೆ ಎನ್ನುತ್ತಾರೆ ಅಕ್ಯೂಟ್ ರೇಟಿಂಗ್ಸ್ ಆಂಡ್ ರಿಸರ್ಚ್‌ನ ಮುಖ್ಯ ಅರ್ಥಶಾಸ್ತ್ರಜ್ಞ ಮತ್ತು ಮುಖ್ಯಸ್ಥ ಸುಮನ್ ಚೌಧರಿ.

Continue Reading

ವಿದೇಶ

Helicopter crashed: ನೇಪಾಳದಲ್ಲಿ ಹೆಲಿಕಾಪ್ಟರ್‌ ಪತನ; ನಾಲ್ವರ ದುರ್ಮರಣ

Helicopter crashed: ಹೆಲಿಕಾಪ್ಟರ್ ಟೇಕಾಫ್ ಆಗುವಾಗ ಅದರಲ್ಲಿ ನಾಲ್ವರು ಚೀನಾದ ಪ್ರಜೆಗಳು ಮತ್ತು ಪೈಲಟ್ ಸೇರಿದಂತೆ ಒಟ್ಟು ಐದು ಮಂದಿ ಇದ್ದರು. ಚೀನಾದ ಪ್ರಜೆಗಳು ರಾಸುವಾಗೆ ತೆರಳುತ್ತಿದ್ದರು. ಈ ವೇಳೆ ಕಠ್ಮಂಡುವಿನ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸಂಪರ್ಕ ಕಳೆದುಕೊಂಡು ನೆಲಕ್ಕಪ್ಪಳಿಸಿದೆ ಎನ್ನಲಾಗಿದೆ.

VISTARANEWS.COM


on

Helicopter crashed
Koo

ಕಠ್ಮಂಡು: ನೇಪಾಳ(Nepal)ದ ನುವಾಕೋಟ್ ಜಿಲ್ಲೆಯ ಶಿವಪುರಿ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಏರ್ ಡೈನಾಸ್ಟಿ ಹೆಲಿಕಾಪ್ಟರ್ ಪತನ(Helicopter crashed)ಗೊಂಡಿದೆ. ಘಟನೆಯಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಹೆಲಿಕಾಪ್ಟರ್ ಕಠ್ಮಂಡುವಿನಿಂದ ಹೊರಟು ಸೈಫ್ರುಬೆನ್ಸಿಗೆ ತೆರಳುತ್ತಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹೆಲಿಕಾಪ್ಟರ್ ಅನ್ನು ಹಿರಿಯ ಕ್ಯಾಪ್ಟನ್ ಅರುಣ್ ಮಲ್ಲಾ ಅವರು ಚಲಾಯಿಸಿದ್ದು, ಟೇಕ್ ಆಫ್ ಆದ ಕೇವಲ ಮೂರು ನಿಮಿಷಗಳ ನಂತರ ಹೆಲಿಕಾಪ್ಟರ್‌ ಸಂಪೂರ್ಣವಾಗಿ ಸಂಪರ್ಕ ಕಳೆದುಕೊಂಡಿತ್ತು ಎನ್ನಲಾಗಿದೆ.

ಹೆಲಿಕಾಪ್ಟರ್ ಟೇಕಾಫ್ ಆಗುವಾಗ ಅದರಲ್ಲಿ ನಾಲ್ವರು ಚೀನಾದ ಪ್ರಜೆಗಳು ಮತ್ತು ಪೈಲಟ್ ಸೇರಿದಂತೆ ಒಟ್ಟು ಐದು ಮಂದಿ ಇದ್ದರು. ಚೀನಾದ ಪ್ರಜೆಗಳು ರಾಸುವಾಗೆ ತೆರಳುತ್ತಿದ್ದರು. ಈ ವೇಳೆ ಕಠ್ಮಂಡುವಿನ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸಂಪರ್ಕ ಕಳೆದುಕೊಂಡು ನೆಲಕ್ಕಪ್ಪಳಿಸಿದೆ ಎನ್ನಲಾಗಿದೆ. ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Tribhuvan International Airport) ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮವು ಬುಧವಾರ ಮಧ್ಯಾಹ್ನ 1:54 ಕ್ಕೆ ಹೆಲಿಕಾಪ್ಟರ್ ಕಠ್ಮಂಡುವಿನಿಂದ ಹೊರಟಿತ್ತು ಎಂದು ಹೇಳಿದೆ. ಸೂರ್ಯ ಚೌರ್ ತಲುಪಿದ ನಂತರ 1:57 ರ ಸುಮಾರಿಗೆ ಹೆಲಿಕಾಪ್ಟರ್ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಕಳೆದುಕೊಂಡಿತು.

ಎರಡು ವಾರಗಳ ಹಿಂದೆಯೂ ಇದೇ ರೀತಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು. 19 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿರುವ ಘಟನೆ ವರದಿಯಾಗಿತ್ತು. ರಾಷ್ಟ್ರ ರಾಜಧಾನಿ ಕಾಠ್ಮಂಡುವಿನಲ್ಲಿರುವ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಶೌರ್ಯ ವಿಮಾನಯಾನ ಸಂಸ್ಥೆ ವಿಮಾನ ಪತನ(Plane Crash)ಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಟೇಕ್‌ ಆಫ್‌ ಆಗುತ್ತಿದ್ದಂತೆ ಇದ್ದಕ್ಕಿದ್ದಂತೆ ವಿಮಾನದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ವಿಮಾನ ಪತನಗೊಂಡಿತ್ತು. ಶೌರ್ಯ ಏರ್‌ಲೈನ್ಸ್‌ ವಿಮಾನ ಹಿಮಾಲಯ ಪ್ರಸಿದ್ಧ ಪ್ರವಾಸಿ ತಾಣವಾಗಿ ರುವ ಪೋಖರಾಕ್ಕೆ ಪ್ರಯಾಣ ಬೆಳೆಸಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Plane Crash: ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ; ವಿಡಿಯೋ ಇದೆ

Continue Reading

ವಿದೇಶ

Bangladesh Unrest: ಖ್ಯಾತ ಹಿಂದೂ ಗಾಯಕನ ಮನೆಯೂ ಧ್ವಂಸ; 3000 ಸಂಗೀತೋಪಕರಣಗಳು ಬೆಂಕಿಗಾಹುತಿ

Bangladesh Unrest: ಬಾಂಗ್ಲಾದೇಶದ ಖ್ಯಾತ ಗಾಯಕ ರಾಹುಲ್ ಆನಂದ್(Rahul Anand) ಅವರ ಧಾಕಾದ ಧನ್ಮೋಂಡಿಯಲ್ಲಿದ್ದಂತಹ ಮನೆಯನ್ನು ಲೂಟಿ ಮಾಡಿ ಅದಕ್ಕೆ ಬೆಂಕಿ ಹಚ್ಚಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗಿವೆ.

VISTARANEWS.COM


on

Bangladesh unrest
Koo

ಢಾಕಾ: ನೆರೆಯ ರಾಷ್ಟ್ರ ಬಾಂಗ್ಲಾದಲ್ಲಿ ಭುಗಿಲೆದ್ದಿರುವ ದಂಗೆ(Bangladesh Unrest) ಯಲ್ಲಿ ಅಲ್ಪಸಂಖ್ಯಾತ ಹಿಂದೂ ದಿನೇ ದಿನೇ ನರಕಯಾತನೆ ಅನುಭವಿಸುವಂತಾಗಿದೆ. ಕಂಡ ಕಂಡಲ್ಲಿ ಹಿಂದೂಗಳನ್ನು, ಅವರಿಗೆ ಸಂಬಂಧಿಸಿದ ಮನೆ ಅಂಗಡಿಗಳನ್ನು ಮತ್ತು ದೇಗುಲಗಳನ್ನು ಕಿಡಿಗೇಡಿಗಳು ಪುಡಿಗಟ್ಟಿದ್ದಾರೆ. ಕೈಗೆ ಸಿಕ್ಕವಸ್ತುಗಳನ್ನು ದೋಚುತ್ತಿದ್ದಾರೆ. ಇದೀಗ ಬಾಂಗ್ಲಾದೇಶದ ಖ್ಯಾತ ಗಾಯಕ(Bangladesh Singer)ನ ಮನೆಗೆ ಪ್ರತಿಭಟನಾಕಾರರು(Protester) ಬೆಂಕಿ ಇಟ್ಟಿರುವುದು ವರದಿಯಾಗಿದೆ.

ಬಾಂಗ್ಲಾದೇಶದ ಖ್ಯಾತ ಗಾಯಕ ರಾಹುಲ್ ಆನಂದ್(Rahul Anand) ಅವರ ಧಾಕಾದ ಧನ್ಮೋಂಡಿಯಲ್ಲಿದ್ದಂತಹ ಮನೆಯನ್ನು ಲೂಟಿ ಮಾಡಿ ಅದಕ್ಕೆ ಬೆಂಕಿ ಹಚ್ಚಲಾಗಿದೆ. ಸೋಮವಾರದಂದು ಈ ಘಟನೆ ನಡೆದಿದ್ದು ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗಿವೆ. ಗಾಯಕನ ಆಪ್ತ ಕುಟುಂಬಸ್ಥರು ಬಾಂಗ್ಲಾದೇಶದ ಪತ್ರಿಕೆಗೆ ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪ್ರತಿಭಟನಾಕಾರರು ಗೇಟ್ ಮುರಿದು ನಂತರ ಮನೆಯಲ್ಲಿದ್ದ ವಸ್ತುಗಳನ್ನು ಒಡೆದು ಹಾಕಲಾರಂಭಿಸಿದ್ದರು.

3000 ಸಂಗೀತೋಪಕರಣಗಳು ಬೆಂಕಿಗಾಹುತಿ

ಇನ್ನು ದುಷ್ಕರ್ಮಿಗಳ ಹಚ್ಚಿದ ಬೆಂಕಿಗೆ ರಾಹುಲ್‌ ಆನಂದ್‌ ಅವರ ಮನೆಯಲ್ಲಿದ್ದ 3000ಕ್ಕೂ ಅಧಿಕ ಸಂಗೀತೋಪಕರಣಗಳು ಬೆಂಕಿಗಾಹುತಿಯಾಗಿವೆ. ಇನ್ನು ಕಿಡಿಗೇಡಿಗಳು ರಾಹುಲ್‌ ಆನಂದ್‌ ಮನೆಯಲ್ಲಿದ್ದ ಪೀಠೋಪಕರಣಗಳು, ಕನ್ನಡಿಗಳು ಸೇರಿದಂತೆ ಮನೆಯಲ್ಲಿದ್ದಂತಹ ದುಬಾರಿ ವಸ್ತುಗಳನ್ನೆಲ್ಲ ಕೊಂಡೊಯ್ದಿದ್ದಾರೆ. ಈ ಮನೆಯು ಸುಮಾರು 140 ವರ್ಷ ಹಳೆಯದ್ದಾಗಿತ್ತು. ರಾಹುಲ್ ಆನಂದ್ ಅವರು ಜಾನಪದ ಬ್ಯಾಂಡ್ ನಡೆಸುತ್ತಿದ್ದು ಇದಕ್ಕೆ ಜೋಲರ್ ಗಾನ್ ಎಂದು ಹೆಸರಿಟ್ಟಿದ್ದರು. ಇದೀಗ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಡೀ ಪರಂಪರೆಯೇ ನಾಶವಾಗಿದೆ.

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಶೇಖ್‌ ಹಸೀನಾ(Sheikh Hasina) ದೇಶದಿಂದ ಪಲಾಯಣ ಮಾಡಿರುವ ಬೆನ್ನಲ್ಲೇ ಹಿಂದೂಗಳನ್ನು ಗುರಿಯಾಗಿ ಎಗ್ಗಿಲ್ಲದೇ ದಾಳಿ ನಡೆಯುತ್ತಿದೆ. ಸಾಲದೆನ್ನುವಂತೆ ಉದ್ರಿಕ್ತ ಪ್ರತಿಭಟನಾಕಾರರು ಹಿಂದೂ ದೇಗುಲಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ.

ಬಾಂಗ್ಲಾದೇಶದ ಪತ್ರಿಕೆಗಳ ವರದಿ ಪ್ರಕಾರ 27 ಜಿಲ್ಲೆಗಳಲ್ಲಿ ಹಿಂದೂಗಳ ವ್ಯಾಪಾರ ಮಳಿಗೆ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಇನ್ನು ಜಮಾತ್‌-ಎ- ಇಸ್ಲಾಮಿ ಹಿಂದೂ ದೇಗುಲಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವುದನ್ನು ಒಪ್ಪಿಕೊಂಡಿದೆ.

ಇದನ್ನೂ ಓದಿ: Shehzad Poonawalla: ಬಾಂಗ್ಲಾದಂತೆ ಭಾರತದಲ್ಲಿಯೂ ಹಿಂಸಾಚಾರ; ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ಬಿಜೆಪಿ ಕಿಡಿ

Continue Reading

ವಿದೇಶ

Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರಕ್ಕೆ ಮಹಮ್ಮದ್ ಯೂನಸ್‌ರನ್ನು ಮುಖ್ಯಸ್ಥರಾಗಿ ಮಾಡಿದ್ದೇಕೆ? ಏನಿವರ ಹಿನ್ನೆಲೆ?

Muhammad Yunus: ಬಾಂಗ್ಲಾದಲ್ಲಿ ಹೊಸದಾಗಿ ಚುನಾವಣೆ ಆಯೋಜಿಸುವವರೆಗೆ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 83 ವರ್ಷದ ಮುಹಮ್ಮದ್ ಯೂನಸ್ ಅವರು ಶೇಖ್‌ ಹಸೀನಾ ಅವರ ಪ್ರಮುಖ ಟೀಕಾಕಾರರು ಮತ್ತು ರಾಜಕೀಯ ವಿರೋಧಿಯೂ ಆಗಿದ್ದಾರೆ. ಅರ್ಥಶಾಸ್ತ್ರಜ್ಞರು ಆಗಿರುವ ಯೂನಸ್ 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಯೂನಸ್‌ ಅವರ ಕುರಿತ ಮತ್ತಷ್ಟು ವಿವರಕ್ಕೆ ಈ ಲೇಖನ ಓದಿ.

VISTARANEWS.COM


on

By

Muhammad Yunus
Koo

ಪ್ರಧಾನಮಂತ್ರಿ ಶೇಖ್ ಹಸೀನಾ (PM  Sheikh Hasina) ಅವರು ರಾಜೀನಾಮೆ ಕೊಟ್ಟು ದೇಶ ಬಿಟ್ಟು ಪಲಾಯನ ಮಾಡಿರುವುದರಿಂದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ( Bangladesh interim govt) ಮುನ್ನಡೆಸಲು ಬಡ ಸಮುದಾಯಗಳೊಂದಿಗಿನ ಕೆಲಸಕ್ಕೆ ಹೆಸರುವಾಸಿಯಾಗಿರುವ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ (Nobel Peace Prize winner) ಮುಹಮ್ಮದ್ ಯೂನಸ್ (Muhammad Yunus) ಅವರನ್ನು ನೇಮಕಗೊಳಿಸಲಾಗಿದೆ.

ಶೇಖ್ ಹಸೀನಾ ಅವರ ಆಡಳಿತದ ವಿರುದ್ಧ ವ್ಯಾಪಕ ವಿರೋಧ, ದೇಶಾದ್ಯಂತ ಹಿಂಸಾತ್ಮಕ ಹೋರಾಟ ಆರಂಭವಾದ ಬಳಿಕ ಅವರು ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ದೇಶದಲ್ಲಿ ಹೊಸ ಚುನಾವಣೆಗಳನ್ನು ಆಯೋಜಿಸುವವರೆಗೆ ಯೂನಸ್ ಹಂಗಾಮಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಈ ನೇಮಕಾತಿಯನ್ನು ನಿರ್ಧರಿಸಲಾಯಿತು.

ಹಸೀನಾ ಅವರ ನಿರ್ಗಮನವು ಬಾಂಗ್ಲಾದೇಶವನ್ನು ರಾಜಕೀಯ ಬಿಕ್ಕಟ್ಟಿಗೆ ತಳ್ಳಿದೆ. ಮಿಲಿಟರಿಯು ತಾತ್ಕಾಲಿಕವಾಗಿ ಆಡಳಿತದ ನಿಯಂತ್ರಣವನ್ನು ಪಡೆದುಕೊಂಡಿದೆ.


ಮುಹಮ್ಮದ್ ಯೂನಸ್‌ ಎಲ್ಲಿದ್ದಾರೆ?

ಪ್ರಸ್ತುತ ಪ್ಯಾರಿಸ್‌ನಲ್ಲಿ ಒಲಿಂಪಿಕ್ ಸಂಘಟಕರಿಗೆ ಸಲಹೆ ನೀಡುತ್ತಿರುವ ಮುಹಮ್ಮದ್ ಯೂನಸ್‌ ಅವರಿಗೆ ಮಧ್ಯಂತರ ಸರ್ಕಾರವನ್ನು ಮುನ್ನಡೆಸುವಂತೆ ಪ್ರತಿಭಟನೆಯ ಹಿಂದಿರುವ ವಿದ್ಯಾರ್ಥಿ ಮುಖಂಡರು ಕರೆ ಕಳುಹಿಸಿದ್ದಾರೆ. ಶೇಖ್ ಹಸೀನಾ ಅವರ ರಾಜಿನಾಮೆಯನ್ನು ದೇಶದ ಎರಡನೇ ವಿಮೋಚನಾ ದಿನ ಎಂದು ಕರೆದಿರುವ ಯೂನಸ್ ಅವರನ್ನು ಶೇಖ್ ಹಸೀನಾ ಹಿಂದೊಮ್ಮೆ ʼರಕ್ತ ಹೀರುವ ಪ್ರಾಣಿʼ ಎಂದು ಕರೆದಿದ್ದರು.

ಮಹಮ್ಮದ್ ಯೂನಸ್ ಹಿನ್ನೆಲೆ ಏನು?

83 ವರ್ಷದ ಮುಹಮ್ಮದ್ ಯೂನಸ್ ಅವರು ಶೇಖ್‌ ಹಸೀನಾ ಅವರ ಪ್ರಮುಖ ಟೀಕಾಕಾರರು ಮತ್ತು ರಾಜಕೀಯ ವಿರೋಧಿಯೂ ಆಗಿದ್ದಾರೆ. ಅರ್ಥಶಾಸ್ತ್ರಜ್ಞರು ಆಗಿರುವ ಯೂನಸ್ 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಡ ವ್ಯಕ್ತಿಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಮೈಕ್ರೋಕ್ರೆಡಿಟ್‌ನೊಂದಿಗೆ ಅವರ ಅದ್ಭುತ ಕೆಲಸಕ್ಕಾಗಿ ನೊಬೆಲ್ ಸಮಿತಿಯು ಯೂನಸ್ ಮತ್ತು ಅವರ ಗ್ರಾಮೀಣ ಬ್ಯಾಂಕ್ ಅನ್ನು ಗುರುತಿಸಿದೆ. ತಳಮಟ್ಟದಿಂದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಅವರ ಕಾರ್ಯವನ್ನು ಗೌರವಿಸುವ ಸಲುವಾಗಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಸಾಂಪ್ರದಾಯಿಕ ಸಾಲಕ್ಕೆ ಸಾಮಾನ್ಯವಾಗಿ ಅನರ್ಹರಾಗಿರುವ ಉದ್ಯಮಿಗಳಿಗೆ ಕಿರು ಸಾಲಗಳನ್ನು ನೀಡಲು ಯೂನಸ್ 1983ರಲ್ಲಿ ಗ್ರಾಮೀಣ ಬ್ಯಾಂಕ್ ಅನ್ನು ಸ್ಥಾಪಿಸಿದರು. ಬಡತನವನ್ನು ನಿವಾರಿಸುವಲ್ಲಿ ಬ್ಯಾಂಕಿನ ಯಶಸ್ಸು ಜಾಗತಿಕವಾಗಿ ಇದೇ ರೀತಿಯ ಕಿರುಬಂಡವಾಳ ಉಪಕ್ರಮಗಳನ್ನು ಪ್ರೇರೇಪಿಸಿತು.


ಹಸೀನಾ ಅವರೊಂದಿಗೆ ವಿರೋಧ ಯಾಕೆ?

2008ರಲ್ಲಿ ಶೇಖ್ ಹಸೀನಾ ಅವರ ಸರ್ಕಾರವು ಯುನಸ್ ಅವರ ವಹಿವಾಟಿನ ಬಗ್ಗೆ ತನಿಖೆ ಪ್ರಾರಂಭಿಸಿತು. ಆಗ ಹಸೀನಾ ಅವರೊಂದಿಗೆ ಯೂನಸ್ ಅವರ ಸಂಬಂಧವು ಹದಗೆಟ್ಟಿತು. 2007ರಲ್ಲಿ ಯೂನಸ್ ರಾಜಕೀಯ ಪಕ್ಷವನ್ನು ರಚಿಸುವ ಯೋಜನೆಯನ್ನು ಘೋಷಿಸಿದ ಅನಂತರ ಇದು ಮತ್ತಷ್ಟು ಉದ್ವಿಗ್ನವಾಯಿತು.

ತನಿಖೆಯ ಸಮಯದಲ್ಲಿ ಶೇಖ್ ಹಸೀನಾ ಅವರು ಗ್ರಾಮೀಣ ಬ್ಯಾಂಕ್‌ನ ಚುಕ್ಕಾಣಿ ಹಿಡಿದಿರುವಾಗ ಬಡ ಗ್ರಾಮೀಣ ಮಹಿಳೆಯರಿಂದ ಸಾಲ ವಸೂಲಿ ಮಾಡಲು ಮುಹಮ್ಮದ್ ಯೂನಸ್ ಬಲವಂತ ಮತ್ತು ಇತರ ವಿಧಾನಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಿದ್ದರು. ಯೂನಸ್ ಇದನ್ನು ನಿರಾಕರಿಸಿದ್ದರು.

2011ರಲ್ಲಿ ಹಸೀನಾ ಅವರ ಸರ್ಕಾರವು ಬ್ಯಾಂಕಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಪ್ರಾರಂಭಿಸಿತು. ಇದು ನಿವೃತ್ತಿ ನಿಯಮಗಳನ್ನು ಉಲ್ಲಂಘಿಸಿದ ಆಧಾರದ ಮೇಲೆ ವ್ಯವಸ್ಥಾಪಕ ನಿರ್ದೇಶಕರಾಗಿರುವ ಯೂನಸ್ ಅವರನ್ನು ವಜಾಗೊಳಿಸಲು ಕಾರಣವಾಯಿತು. 2013ರಲ್ಲಿ ಯೂನಸ್ ಅವರ ನೊಬೆಲ್ ಪ್ರಶಸ್ತಿ ಮತ್ತು ಪುಸ್ತಕದಿಂದ ರಾಯಧನ ಸೇರಿದಂತೆ ಸರ್ಕಾರದ ಅನುಮೋದನೆಯಿಲ್ಲದೆ ಹಣವನ್ನು ಸ್ವೀಕರಿಸಿದ ಆರೋಪದ ಮೇಲೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

ಬಾಂಗ್ಲಾದೇಶದ ಅತಿದೊಡ್ಡ ಮೊಬೈಲ್ ನೆಟ್‌ವರ್ಕ್‌ನ ಭಾಗವಾಗಿರುವ ಗ್ರಾಮೀಣ ಟೆಲಿಕಾಂ, ನಾರ್ವೇಜಿಯನ್ ಟೆಲಿಕಾಂ ದೈತ್ಯ ಟೆಲಿನಾರ್‌ನ ಅಂಗಸಂಸ್ಥೆಯಾದ ಗ್ರಾಮೀಣ್‌ಫೋನ್‌ ಸೇರಿದಂತೆ ಇತರ ಉದ್ಯಮಗಳಿಗೆ ಸಂಬಂಧಿಸಿದ ಆರೋಪಗಳಿಂದ ಯೂನಸ್‌ ಮತ್ತಷ್ಟು ತೊಂದರೆಗಳನ್ನು ಎದುರಿಸಿದರು. ಯೂನಸ್ ಅವರ ವಿರುದ್ಧ 2023ರಲ್ಲಿ ಉದ್ಯೋಗದ ಪ್ರಯೋಜನಗಳನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಮೊಕದ್ದಮೆ ಹೂಡಲಾಯಿತು. ಆದರೆ ಇದನ್ನೂ ಯೂನಸ್ ಅವರು ಇದನ್ನು ನಿರಾಕರಿಸಿದರು.


ಈ ವರ್ಷದ ಆರಂಭದಲ್ಲಿ ಯೂನಸ್ ಮತ್ತು ಇತರ 13 ಮಂದಿಯ ವಿರುದ್ಧ ಬಾಂಗ್ಲಾದೇಶದ ವಿಶೇಷ ನ್ಯಾಯಾಲಯವು 2 ಮಿಲಿಯನ್ ಡಾಲರ್ ದುರುಪಯೋಗ ಪ್ರಕರಣ ಆರೋಪದ ಮೇಲೆ ದೋಷಾರೋಪಣೆ ಮಾಡಿತ್ತು. ಇದನ್ನು ಯೂನಸ್ ನಿರಾಕರಿಸಿದ್ದು, ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಶೇಖ್ ಹಸೀನಾ ಅವರೊಂದಿಗಿನ ಹಳಸಿದ ಸಂಬಂಧದಿಂದಾಗಿ ಮುಹಮ್ಮದ್ ಯೂನಸ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಅವರ ಬೆಂಬಲಿಗರು ವಾದಿಸುತ್ತಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳ ಬರ್ಬರ ಹತ್ಯೆ, ದೇಗುಲಗಳಿಗೆ ಬೆಂಕಿ, ಮಹಿಳೆಯರ ಮೇಲೂ ದೌರ್ಜನ್ಯ; ಇಲ್ಲಿವೆ ವಿಡಿಯೊಗಳು


1940ರಲ್ಲಿ ಬಾಂಗ್ಲಾದೇಶದ ಬಂದರು ನಗರವಾದ ಚಿತ್ತಗಾಂಗ್‌ನಲ್ಲಿ ಜನಿಸಿದ ಯೂನಸ್ ಅವರು ಅಮೆರಿಕದ ವಂಡೆರ್‌ಬಿಲ್ಟ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಗಳಿಸಿದ್ದಾರೆ. ಅನಂತರ ಅವರು ಬಾಂಗ್ಲಾದೇಶಕ್ಕೆ ಮರಳಿದರು. ಬಿದಿರಿನ ಕುರ್ಚಿ ನೇಯುತ್ತಿದ್ದ ಬಡ ಮಹಿಳೆಯೊಬ್ಬರು ಪಡೆದ ಸಾಲವನ್ನು ಮರುಪಾವತಿಸಲು ಹೆಣಗಾಡುತ್ತಿದ್ದುದು ಯುನಸ್‌ ಅವರ ಗಮನ ಸೆಳೆದು ಅದು ಅವರಿಗೆ ಕಿರು ಸಾಲ ಯೋಜನೆ ರೂಪಿಸಲು ಪ್ರೇರೇಪಿಸಿತು. ಮುಂದೆ ಇದು ಗ್ರಾಮೀಣ ಬ್ಯಾಂಕ್ ಸ್ಥಾಪಿಸಬೇಕು ಎನ್ನುವ ಚಿಂತನೆ ಮೂಡಿಸಿತು ಎಂದು ಯೂನಸ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

Continue Reading
Advertisement
ಕರ್ನಾಟಕ57 mins ago

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

John Abraham
ಕ್ರೀಡೆ59 mins ago

John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

Karnataka Governor
ಕರ್ನಾಟಕ1 hour ago

Karnataka Governor: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಸಿಎಂ

Dinesh Gundu Rao
ಬೆಂಗಳೂರು1 hour ago

Dinesh Gundu Rao: ರಾಜ್ಯದಲ್ಲಿ ಕಳಪೆ ಔಷಧಗಳ ಜಾಲ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ತರಾಟೆ

Bangladesh Unrest
ವಿದೇಶ2 hours ago

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight
ಕರ್ನಾಟಕ2 hours ago

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

Bangladesh Unrest
ವಿದೇಶ2 hours ago

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

World Breastfeeding Week 2024
ಆರೋಗ್ಯ2 hours ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ2 hours ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

IND vs SL 3rd ODI
ಕ್ರೀಡೆ2 hours ago

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌