Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ - Vistara News

ವಿದೇಶ

Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

Bangladesh Unrest: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

VISTARANEWS.COM


on

Bangladesh Unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ (Bangladesh Unrest)ದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ (Danish Kaneria) ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಐಎಸ್ಐ ಇದೆ ಎನ್ನಲಾಗುತ್ತಿದೆ. ಪ್ರಧಾನಿ ಶೇಖ್ ಹಸೀನಾ ಅವರ ಮಗ ಕೂಡ ಐಎಸ್ಐ ಪಾತ್ರದ ಬಗ್ಗೆ ಸಂದೇಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾನಿಶ್ ಕನೇರಿಯಾ ಭಾರತಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಸದ್ಯ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ದೇವಾಲಯಗಳ ಮೇಲೆ ಆಕ್ರಮಣ ಮಾಡುತ್ತಿರುವ ಆತಂಕಕಾರಿ ವಿಡಿಯೊ ಹೊರ ಬರುತ್ತಿರುವ ಮಧ್ಯೆ ದಾನಿಶ್ ಕನೇರಿಯಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ಸಹಾಯ ಮಾಡಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

“ಬಾಂಗ್ಲಾದೇಶದ ಹಿಂದೂಗಳನ್ನು ರಕ್ಷಿಸಲು ತಕ್ಷಣ ಮಧ್ಯ ಪ್ರವೇಶಿಸುವಂತೆ ನಾನು ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ. ನಾವು ನಮ್ಮ ಸಹೋದರ ಸಹೋದರಿಯರನ್ನು ಉಗ್ರಗಾಮಿಗಳಿಗೆ ಬಿಟ್ಟು ಕೊಡಬಾರದು. #SaveBangladeshiHindus” ಎಂದು ಅವರು ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದ ಡೈಲಿ ಸ್ಟಾರ್ ವರದಿಯ ಪ್ರಕಾರ, ಕನಿಷ್ಠ 27 ಜಿಲ್ಲೆಗಳಲ್ಲಿನ ಹಿಂದೂಗಳ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಾಕಾರರ ಗುಂಪುಗಳು ದಾಳಿ ನಡೆಸಿವೆ ಮತ್ತು ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿದೆ. ಬಾಂಗ್ಲಾದೇಶದ ಖುಲ್ನಾ ವಿಭಾಗದಲ್ಲಿರುವ ಮೆಹರ್ಪುರದ ಇಸ್ಕಾನ್ ದೇವಾಲಯ ಮತ್ತು ಕಾಳಿ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿದೆ. “ಮೆಹರ್ಪುರದಲ್ಲಿರುವ ನಮ್ಮ ಇಸ್ಕಾನ್ ಕೇಂದ್ರವನ್ನು ಉದ್ರಿಕ್ತರ ಗುಂಪು ಸುಟ್ಟು ಹಾಕಿದೆ. ಇದರಲ್ಲಿ ಭಗವಾನ್ ಜಗನ್ನಾಥ, ಬಲದೇವ್ ಮತ್ತು ಸುಭದ್ರಾ ದೇವಿಯ ವಿಗ್ರಹಗಳೂ ಇದ್ದವು. ಈ ವೇಳೆ ಇಲ್ಲಿದ್ದ ಮೂವರು ಭಕ್ತರು ಹೇಗೋ ತಪ್ಪಿಸಿಕೊಂಡಿದ್ದಾರೆ” ಎಂದು ಇಸ್ಕಾನ್ ವಕ್ತಾರ ಯುಧಿಷ್ಠಿರ ಗೋವಿಂದ ದಾಸ್ ತಿಳಿಸಿದ್ದಾರೆ.

ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ ಅಭಿಯಾನ

ಬಾಂಗ್ಲಾದೇಶದಲ್ಲಿ ಹಿಂದೂಗಳು ಸಂಕಷ್ಟಕ್ಕೆ ಒಳಗಾಗಿರುವ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ (All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗುತ್ತಿದೆ. ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ.  ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿ ಅನೇಕರು ಇನ್‌ಸ್ಟಾಗ್ರಾಮ್‌ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದರು. ಈ ಪೈಕಿ ಬಾಲಿವುಡ್‌ ತಾರೆಯರೂ ಇದ್ದರು.

ಇದನ್ನೂ ಓದಿ: Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

ಇದೀಗ ಬಾಂಗ್ಲಾದಲ್ಲಿ ಹಿಂದೂಗಳ ಮನೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ಎಬ್ಬಿಸುತ್ತಿದ್ದರೂ, ಯಾರೊಬ್ಬರೂ ತುಟಿಕ್‌ ಪಿಟಿಕ್‌ ಅನ್ನದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗುತ್ತಿದೆ. ಸಿನಿತಾರೆಯರ ಏಕಪಕ್ಷೀಯ ನಡೆಗೆ ಹಲವು ಟೀಕೆ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Bangladesh Unrest: ಬಾಂಗ್ಲಾದೇಶಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ ದಿಲ್ಲಿಯಿಂದ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ.

VISTARANEWS.COM


on

Bangladesh Unrest
Koo

ನಬದೆಹಲಿ: ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿರುವ ತಮ್ಮ ನಿವಾಸಿಗಳ ಸುರಕ್ಷತೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಈ ಮಧ್ಯೆ ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ (ಆಗಸ್ಟ್‌ 7) ದಿಲ್ಲಿಯಿಂದ ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲು ತೀರ್ಮಾನಿಸಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ ಬುಧವಾರ ದಿಲ್ಲಿಯಿಂದ ಢಾಕಾಗೆ ತನ್ನ ನಿಗದಿತ ಎರಡು ದೈನಂದಿನ ವಿಮಾನಗಳ ಹಾರಾಟ ನಡೆಸಲಿದೆ. ಜತೆಗೆ ವಿಸ್ತಾರ ಮತ್ತು ಇಂಡಿಗೋ ಬುಧವಾರದಿಂದ ಬಾಂಗ್ಲಾದೇಶದ ರಾಜಧಾನಿಗೆ ನಿಗದಿಪಡಿಸಿದ ಸೇವೆಗಳನ್ನು ನಿರ್ವಹಿಸಲಿವೆ. ವಿಸ್ತಾರ ಮತ್ತು ಇಂಡಿಗೋ ಎರಡೂ ವಿಮಾನಯಾನ ಸಂಸ್ಥೆಗಳು ಮಂಗಳವಾರ ಢಾಕಾಗೆ ತೆರಳುವ ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದವು.

ವಿಸ್ತಾರ ವಿಮಾನ ಢಾಕಾಗೆ ಮುಂಬೈನಿಂದ ಪ್ರತಿದಿನ ಮತ್ತು ದಿಲ್ಲಿಯಿಂದ ವಾರಕ್ಕೆ ಮೂರು ಸೇವೆಗಳನ್ನು ಒದಗಿಸುತ್ತದೆ. ಇಂಡಿಗೋ ಒಂದು ವಿಮಾನ ಪ್ರತಿ ದಿನ ದಿಲ್ಲಿ, ಮುಂಬೈ ಮತ್ತು ಚೆನ್ನೈನಿಂದ ಢಾಕಾಗೆ ತೆರಳುತ್ತದೆ. ಜತೆಗೆ ಕೋಲ್ಕತ್ತಾದಿಂದ ಬಾಂಗ್ಲಾದೇಶಕ್ಕೆ ಪ್ರತಿದಿನ ಎರಡು ಸೇವೆಗಳನ್ನು ಒದಗಿಸುತ್ತದೆ.

ದಿಲ್ಲಿಗೆ ಬಂದಿಳಿದ 205 ಭಾರತೀಯರು

ಈ ಮಧ್ಯೆ ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ. ಮಂಗಳವಾರ ತಡರಾತ್ರಿ ಢಾಕಾದಿಂದ ಈ ಎ 321 (A321) ವಿಮಾನ ಟೇಕ್‌ ಆಫ್‌ ಆಗಿತ್ತು. ಈ ವಿಮಾನದಲ್ಲಿ 6 ಮಕ್ಕಳೂ ಇದ್ದರು.

ಮೇಘಾಲಯ, ಮಣಿಪುರಗಳಲ್ಲಿ ರಾತ್ರಿ ಕರ್ಫ್ಯೂ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಮೀಪದ ಮಣಿಪುರ ಮತ್ತು ಮೇಘಾಲಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲಿನ ಗಲಭೆ ಕಾರಣದಿಂದ ಅಲ್ಲಿನ ಜನರು ಮಣಿಪುರಕ್ಕೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಂದು ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ತಿಳಿಸಿದ್ದಾರೆ. ಮಣಿಪುರವು ಮ್ಯಾನ್ಮಾರ್‌ನೊಂದಿಗೆ 398 ಕಿ.ಮೀ. ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿದೆ. ಅದಾಗ್ಯೂ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿಲ್ಲ. ಆದರೆ ಮಣಿಪುರವು ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಅಸ್ಸಾಂನೊಂದಿಗೆ ಅಂತಾರಾಜ್ಯ ಗಡಿಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

ಇನ್ನು ಬಾಂಗ್ಲಾದೇಶದೊಂದಿಗೆ 445 ಕಿ.ಮೀ. ಗಡಿಯನ್ನು ಹಂಚಿಕೊಂಡಿರುವ ಮೇಘಾಲಯದಲ್ಲಿ ಸೋಮವಾರ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ನಿರಾಶ್ರಿತರ ಚಲನೆಯನ್ನು ತಡೆಗಟ್ಟಲು ಗಡಿಯಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮೇಘಾಲಯ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟಿನ್ಸಾಂಗ್ ಹೇಳಿದ್ದಾರೆ. ರಾಜ್ಯದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಬಿಎಸ್ಎಫ್ ಕಟ್ಟುನಿಟ್ಟಾದ ಜಾಗ್ರತೆ ವಹಿಸಲಿದೆ ಎಂದೂ ವಿವರಿಸಿದ್ದಾರೆ.

Continue Reading

ವಿದೇಶ

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Israel Palestine war: ವೈರಲ್‌ ಆಗಿರುವ ವಿಡಿಯೋದಲ್ಲಿ ಗುರುತು ಪತ್ತೆಯಾಗದ ಸಂತ್ರಸ್ತನೋರ್ವ, ಗುದನಾಳ, ಮುರಿದ ಪಕ್ಕೆಲುಬುಗಳು ಮತ್ತು ಕರುಳುಗಳು ಛಿದ್ರಗೊಂಡಿರುವುದು ಸೇರಿದಂತೆ ತೀವ್ರ ಗಾಯಗಳಾಗಿದ್ದು, ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೂ ಅಲ್ಲದೇ ಇಸ್ರೇಲಿ ಯೋಧರು ಮಹಿಳಾ ಒತ್ತೆಯಾಳುಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿರುವುದನ್ನೂ ವಿಡಿಯೋದಲ್ಲಿ ಕಾಣಬಹುದಾಗಿದೆ. ಇದೀಗ ಈ ಸುದ್ದಿ ಬಹಳ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Israel Palestine war
Koo

ನವದೆಹಲಿ: ಒತ್ತೆಯಾಳುಗಳನ್ನಾಗಿರಿಸಿಕೊಂಡಿರುವ ಮಹಿಳಾ ಸೈನಿಕರ ಮೇಲೆ ಹಮಾಸ್‌ ಉಗ್ರರು ಲೈಂಗಿಕ ದೌರ್ಜನ್ಯ(Sexual Assault) ಎಸಗುತ್ತಿರುವ ವಿಡಿಯೋವೊಂದು ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಪ್ಯಾಲೆಸ್ತೇನಿಯನ್‌ ಒತ್ತೆಯಾಳು ಮೇಲೆ ಇಸ್ರೇಲ್‌(Israel Palestine war)ನ ಯೋಧರ ಅಟ್ಟಹಾಸದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎಸ್‌ಡೆ ಟೆಯ್ಮನ್‌ ಶಿಬಿರದಲ್ಲಿ ಒತ್ತೆಯಾಳುಗಳನ್ನಾಗಿರಿಸಿಕೊಂಡಿರುವ ಪ್ಯಾಲೆಸ್ತೇನಿಯನ್‌ ಜನರ ಮೇಲೆ ಇಸ್ರೇಲಿ ಯೋಧರು ಮನಸ್ಸೋಇಚ್ಛೆ ದೌರ್ಜನ್ಯ ಎಸಗುತ್ತಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಗುರುತು ಪತ್ತೆಯಾಗದ ಸಂತ್ರಸ್ತನೋರ್ವ, ಗುದನಾಳ, ಮುರಿದ ಪಕ್ಕೆಲುಬುಗಳು ಮತ್ತು ಕರುಳುಗಳು ಛಿದ್ರಗೊಂಡಿರುವುದು ಸೇರಿದಂತೆ ತೀವ್ರ ಗಾಯಗಳಾಗಿದ್ದು, ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೂ ಅಲ್ಲದೇ ಇಸ್ರೇಲಿ ಯೋಧರು ಮಹಿಳಾ ಒತ್ತೆಯಾಳುಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿರುವುದನ್ನೂ ವಿಡಿಯೋದಲ್ಲಿ ಕಾಣಬಹುದಾಗಿದೆ. ಇದೀಗ ಈ ಸುದ್ದಿ ಬಹಳ ಚರ್ಚೆಗೆ ಗ್ರಾಸವಾಗಿದೆ.

ಕೆಲವು ದಿನಗಳ ಹಿಂದೆ ಹಮಾಸ್‌ ಉಗ್ರರೂ ಇಂತಹದ್ದೇ ಒಂದು ವಿಡಿಯೋ ಬಿಡುಗಡೆ ಮಾಡಿದ್ದರು.ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಹಮಾಸ್‌ ಉಗ್ರರು ಲೈಂಗಿಕ ದೌರ್ಜನ್ಯ ನಡೆಸುವ ವಿಡಿಯೊ ಇದಾಗಿತ್ತು. ಬಂದೂಕುಧಾರಿ ಭಯೋತ್ಪಾದಕನೊಬ್ಬ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ತಮ್ಮ ಯೋಜನೆಯನ್ನು ಘೋಷಿಸುವುದು ಕೂಡ ವಿಡಿಯೊದಲ್ಲಿ ಸೆರೆಯಾಗಿದೆ. ʼʼಗರ್ಭಿಣಿಯಾಗಬಹುದಾದ ಕೆಲವು ಮಹಿಳೆಯರು ಇಲ್ಲಿದ್ದಾರೆʼʼ ಒಂದು ಓರ್ವ ಹೇಳಿದರೆ, ಇನ್ನೋರ್ವ ಸೆರೆ ಸಿಕ್ಕ ಮಹಿಳೆಯ ಸೌಂದರ್ಯವನ್ನು ಹೊಗಳುತ್ತಿರುವುದೂ ಕಂಡು ಬಂದಿದೆ.

ನಹಾಲ್ ಓಜ್‌ನ ಬಾಂಬ್‌ ಶೆಲ್ಟರ್‌ನಲ್ಲಿ ಸೆರೆ ಹಿಡಿಯಲಾದ ಈ ವಿಡಿಯೊದಲ್ಲಿ ಉಗ್ರರು ಸೆರೆಸಿಕ್ಕವರು ನಾಯಿಗಳೆಂದು ನಿಂದಿಸುತ್ತಿರುವುದೂ ಸೆರೆಯಾಗಿದೆ. ಜತೆಗೆ ಫೋಟೊಗಳಿಗೆ ಪೋಸ್‌ ನೀಡುವಂತೆಯೂ ಮಹಿಳೆಯರಿಗೆ ಹಿಂಸೆ ನೀಡುತ್ತಾರೆ. ಈ ಪೈಕಿ ಒಬ್ಬಾಕೆಯ ಮುಖದಲ್ಲಿ ರಕ್ತ ಸೋರುತ್ತಿದ್ದರೆ, ಇನ್ನೋರ್ವ ಮಹಿಳೆಯ ಬಾಯಿಯಿಂದ ರಕ್ತ ಜಿನುಗುತ್ತಿದೆ. ಮಹಿಳೆಯರ ಪೈಕಿ ಒಬ್ಬಾಕೆ ಇಂಗ್ಲಿಷ್‌ ಗೊತ್ತಿರುವವರನ್ನು ಕರೆತನ್ನಿ ಎಂದು ಮನವಿ ಮಾಡುತ್ತಾರೆ. ಜತೆಗೆ ಇನ್ನೊಬ್ಬರು ತಮಗೆ ಗಾಜಾದಲ್ಲಿ ಸ್ನೇಹಿತರೊಬ್ಬರಿದ್ದು, ಅವರನ್ನು ಭೇಟಿ ಮಾಡಿಸುವಂತೆ ಆಗ್ರಹಿಸುತ್ತಾರೆ. ಆದರೆ ಬಂಧೂಕುದಾರಿಗಳು ಇದ್ಯಾವುದನ್ನೂ ಲೆಕ್ಕಿಸುವುದಿಲ್ಲ. ಕಿರುಚಿ ಸುಮ್ಮನೆ ಕುಳಿತುಕೊಳ್ಳುವಂತೆ ಬೆದರಿಸುತ್ತಾರೆ. ತಮ್ಮ ಸಂಗಾತಿಗಳ ಸಾವಿಗೆ ಇವರೇ ಕಾರಣ ಎಂದು ಆರೋಪಿಸುತ್ತಾರೆ.

2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್‌ (Israel Hamas War) ಮೇಲೆ ದಾಳಿ ಮಾಡಿದ ಬಳಿಕ “ಹಮಾಸ್‌ ಉಗ್ರರು ಯುದ್ಧ ಆರಂಭಿಸಿದ್ದಾರೆ ಹಾಗೂ ನಾವು ಯುದ್ಧವನ್ನು ಅಂತ್ಯಗೊಳಿಸುತ್ತೇವೆ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದರು. ಈಗ ಅದರಂತೆ, ಇಸ್ರೇಲ್‌ ದಾಳಿಯನ್ನು ಚುರುಕುಗೊಳಿಸಿದ್ದು, ಇಸ್ರೇಲ್‌ ಮಿಲಿಟರಿ ಚೀಫ್‌ ಮೊಹಮ್ಮದ್‌ ಡೈಫ್‌ನನ್ನು (Mohammed Deif) ಹೊಡೆದುರುಳಿಸಿದೆ. ಈ ಕುರಿತು ಇಸ್ರೇಲ್‌ ಸೇನೆಯೇ ಅಧಿಕೃತವಾಗಿ ಘೋಷಣೆ ಮಾಡಿದೆ.

ಹೌದು, ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯ ರೂವಾರಿಯಾದ ಮೊಹಮ್ಮದ್‌ ಡೈಫ್‌ನನ್ನು ಇಸ್ರೇಲ್‌ ಸೇನೆಯು ದಾಳಿ ಮೂಲಕ ಹತ್ಯೆ ಮಾಡಿದೆ. “ಇಸ್ರೇಲ್‌ ಡಿಫೆನ್ಸ್‌ ಪಡೆಗಳು ಜುಲೈ 13ರಂದು ಖಾನ್‌ ಯುನಿಸ್‌ನಲ್ಲಿ ನಡೆಸಿದ ವಾಯುದಾಳಿಯಲ್ಲಿ ಮೊಹಮ್ಮದ್‌ ಡೈಫ್‌ ಹತ್ಯೆಗೀಡಾಗಿದ್ದಾನೆ. ಗುಪ್ತಚರ ಮಾಹಿತಿಯನ್ನು ಆಧರಿಸಿ ಐಡಿಎಫ್‌ ದಾಳಿ ನಡೆಸಿ, ಅಕ್ಟೋಬರ್‌ 7ರ ದಾಳಿಯ ಮಾಸ್ಟರ್‌ಮೈಂಡ್‌ನನ್ನು ಹತ್ಯೆ ಮಾಡಲಾಗಿದೆ” ಎಂದು ಇಸ್ರೇಲ್‌ ಮಾಹಿತಿ ನೀಡಿದೆ.

ಇದನ್ನೂ ಓದಿ:Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

Continue Reading

ವಿದೇಶ

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳ ಬರ್ಬರ ಹತ್ಯೆ, ದೇಗುಲಗಳಿಗೆ ಬೆಂಕಿ, ಮಹಿಳೆಯರ ಮೇಲೂ ದೌರ್ಜನ್ಯ; ಇಲ್ಲಿವೆ ವಿಡಿಯೊಗಳು

Bangladesh Unrest: ಬಾಂಗ್ಲಾದೇಶದ ಪತ್ರಿಕೆಗಳ ವರದಿ ಪ್ರಕಾರ 27 ಜಿಲ್ಲೆಗಳಲ್ಲಿ ಹಿಂದೂಗಳ ವ್ಯಾಪಾರ ಮಳಿಗೆ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಇನ್ನು ಜಮಾತ್‌-ಎ- ಇಸ್ಲಾಮಿ ಹಿಂದೂ ದೇಗುಲಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವುದನ್ನು ಒಪ್ಪಿಕೊಂಡಿದೆ.

VISTARANEWS.COM


on

Bangladesh unrest
Koo

ಢಾಕಾ: ದಂಗೆ ಪೀಡಿತ ಬಾಂಗ್ಲಾದೇಶದಲ್ಲಿ ಹಿಂಸಾಚಾರ(Bangladesh Unrest), ಲೂಟಿ, ದರೋಡೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಪಾಡು ಹೇಳುವವರಿಲ್ಲ…ಕೇಳುವವರಿಲ್ಲ ಎಂಬಂತಾಗಿದೆ. ಅದರಲ್ಲೂ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಶೇಖ್‌ ಹಸೀನಾ(Sheikh Hasina) ದೇಶದಿಂದ ಪಲಾಯಣ ಮಾಡಿರುವ ಬೆನ್ನಲ್ಲೇ ಹಿಂದೂಗಳನ್ನು ಗುರಿಯಾಗಿ ಎಗ್ಗಿಲ್ಲದೇ ದಾಳಿ ನಡೆಯುತ್ತಿದೆ. ಸಾಲದೆನ್ನುವಂತೆ ಉದ್ರಿಕ್ತ ಪ್ರತಿಭಟನಾಕಾರರು ಹಿಂದೂ ದೇಗುಲಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ.

ಮತ್ತೊಂದೆಡೆ ಬಾಂಗ್ಲಾದೇಶದ ಮುಸ್ಲಿಂ ಧರ್ಮಗುರುಗಳು ಕುಮಿಲ್ಲಾದಲ್ಲಿನ ಹಿಂದೂ ದೇವಾಲಯವನ್ನು ಕಾಪಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಢಾಕಾದಲ್ಲಿರುವ ಢಾಕೇಶ್ವರಿ ಮಂದಿರವನ್ನು ವಿದ್ಯಾರ್ಥಿಗಳ ಗುಂಪು ರಕ್ಷಿಸುತ್ತಿರುವುದನ್ನು ಮತ್ತೊಂದು ವೀಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬಾಂಗ್ಲಾದೇಶದ ಪತ್ರಿಕೆಗಳ ವರದಿ ಪ್ರಕಾರ 27 ಜಿಲ್ಲೆಗಳಲ್ಲಿ ಹಿಂದೂಗಳ ವ್ಯಾಪಾರ ಮಳಿಗೆ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಇನ್ನು ಜಮಾತ್‌-ಎ- ಇಸ್ಲಾಮಿ ಹಿಂದೂ ದೇಗುಲಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವುದನ್ನು ಒಪ್ಪಿಕೊಂಡಿದೆ.

ಇಸ್ಕಾನ್‌ ದೇಗುಲದ ಮೇಲೆ ದಾಳಿ

ಬಾಂಗ್ಲಾದೇಶದ ಖುಲ್ನಾ ವಿಭಾಗದಲ್ಲಿರುವ ಮೆಹೆರೆಪುರದಲ್ಲಿರುವ ಇಸ್ಕಾನ್‌ ದೇಗುಲದ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಅಲ್ಲಿರುವ ಕಾಳಿ ಮಂದಿರವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಇಸ್ಕಾನ್ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್ ಟ್ವೀಟ್‌ ಮಾಡಿದ್ದು, ಮೆಹರ್‌ಪುರದಲ್ಲಿರುವ ನಮ್ಮ ಇಸ್ಕಾನ್ ಕೇಂದ್ರಗಳಲ್ಲಿ ಒಂದನ್ನು (ಬಾಡಿಗೆಗೆ ನೀಡಲಾಗಿದೆ) ಭಗವಾನ್ ಜಗನ್ನಾಥ, ಬಲದೇವ್ ಮತ್ತು ಸುಭದ್ರಾ ದೇವಿ ದೇವತೆಗಳನ್ನು ಸುಟ್ಟು ಹಾಕಲಾಯಿತು. ಕೇಂದ್ರದಲ್ಲಿ ವಾಸವಾಗಿದ್ದ ಮೂವರು ಭಕ್ತರು ಹೇಗಾದರೂ ತಪ್ಪಿಸಿಕೊಂಡು ಬದುಕುಳಿದರು ಎಂದಿದ್ದಾರೆ.

ಪ್ರತಿಭಟನೆಯ ಪ್ರಾರಂಭವಾಗುತ್ತಿದ್ದಂತೆ ರಂಗ್‌ಪುರ ಸಿಟಿ ಕಾರ್ಪೊರೇಷನ್‌ನ ಹಿಂದೂ ಕೌನ್ಸಿಲರ್ ಹರದನ್ ರಾಯ್ ಕೂಡ ಭಾನುವಾರ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಕಾಜಲ್ ರಾಯ್ ಎಂದು ಗುರುತಿಸಲಾದ ಮತ್ತೊಬ್ಬ ಕೌನ್ಸಿಲರ್ ಕೂಡ ಹಲ್ಲೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಕಾರರು ಶೇಖ್ ಹಸೀನಾ ಅವರ ರಾಜೀನಾಮೆಗೆ ಕರೆ ನೀಡಿದರು ಮತ್ತು ಪೊಲೀಸರೊಂದಿಗೆ ಘರ್ಷಣೆಯಲ್ಲಿ ಭಾನುವಾರ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

ಇದನ್ನೂ ಓದಿ: Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Continue Reading

ವಿದೇಶ

Asif Merchant: ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ಸಂಚು ರೂಪಿಸಿದ್ದ ಪಾಕಿಸ್ತಾನಿ ಪ್ರಜೆ ಅರೆಸ್ಟ್‌

Asif Merchant: US ನ್ಯಾಯಾಂಗ ಇಲಾಖೆಯ ಪ್ರಕಾರ, ಆಸಿಫ್ ಮರ್ಚೆಂಟ್(46), ಅಮೆರಿಕದಲ್ಲಿ ರಾಜಕಾರಣಿ ಅಥವಾ US ಸರ್ಕಾರಿ ಅಧಿಕಾರಿಯನ್ನು ಹತ್ಯೆ ಮಾಡಲು ಹಂತಕರನ್ನು ನೇಮಿಸಿಕೊಂಡಿದೆ. ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಕಾಸ್ಸೆಮ್ ಸೊಲೈಮಾನಿಯನ್ನು ಅಮೆರಿಕ ಕೊಂದ ಪ್ರತೀಕಾರವಾಗಿ ಈ ದಾಳಿ ನಡೆದಿತ್ತು.

VISTARANEWS.COM


on

Asif Merchant
Koo

ನವದೆಹಲಿ: ಕಳೆದ ತಿಂಗಳು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump) ಸೇರಿದಂತೆ ರಾಜಕಾರಣಿಗಳು ಮತ್ತು ಅಮೆರಿಕ ಸರ್ಕಾರದ ಅಧಿಕಾರಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಅರೆಸ್ಟ್‌ ಮಾಡಲಾಗಿದೆ. ಇರಾನ್‌ ಜೊತೆ ನಂಟು ಹೊಂದಿದ್ದ ಆಸಿಫ್‌ ಮರ್ಚೆಂಟ್‌(Asif Merchant) ಅರೆಸ್ಟ್‌ ಮಾಡಲಾಗಿದೆ. ಆದಾಗ್ಯೂ, ಕಳೆದ ತಿಂಗಳು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಯತ್ನಕ್ಕೂ ಆಸಿಫ್ ಮರ್ಚೆಂಟ್‌ನ ಯೋಜನೆಗೂ ಸಂಬಂಧವಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಇನ್ನೊಬ್ಬ ವ್ಯಕ್ತಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

US ನ್ಯಾಯಾಂಗ ಇಲಾಖೆಯ ಪ್ರಕಾರ, ಆಸಿಫ್ ಮರ್ಚೆಂಟ್(46), ಅಮೆರಿಕದಲ್ಲಿ ರಾಜಕಾರಣಿ ಅಥವಾ US ಸರ್ಕಾರಿ ಅಧಿಕಾರಿಯನ್ನು ಹತ್ಯೆ ಮಾಡಲು ಹಂತಕರನ್ನು ನೇಮಿಸಿಕೊಂಡಿದೆ. ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಕಾಸ್ಸೆಮ್ ಸೊಲೈಮಾನಿಯನ್ನು ಅಮೆರಿಕ ಕೊಂದ ಪ್ರತೀಕಾರವಾಗಿ ಈ ದಾಳಿ ನಡೆದಿತ್ತು.

ಅಮೆರಿಕದಲ್ಲಿ ನಡೆದಿರುವ ರಾಜಕಾರಣಿಗಳು ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಇರಾನ್‌ ಜೊತೆ ನಂಟು ಹೊಂದಿದ್ದ ವ್ಯಕ್ತಿಯನ್ನು ಅರೆಸ್ಟ್‌ ಮಾಡಲಾಗಿದೆ. ಸರ್ಕಾರಿ ಅಧಿಕಾರಿ ಅಥವಾ ಯಾವುದೇ ಯುಎಸ್ ಪ್ರಜೆಯನ್ನು ಕೊಲ್ಲಲು ವಿದೇಶಿ-ನಿರ್ದೇಶಿತ ಸಂಚು, ಇದು ನಮ್ಮ ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಎಂದು FBI ನಿರ್ದೇಶಕ ಕ್ರಿಸ್ಟೋಫರ್ ವ್ರೇ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯಾರಿಯವನು ಆಸಿಫ್‌ ಮರ್ಚೆಂಟ್‌?

  • ನ್ಯಾಯಾಲಯದ ದಾಖಲೆಗಳ ಪ್ರಕಾರ, ಆಸಿಫ್ ಮರ್ಚಂಟ್ ಪಾಕಿಸ್ತಾನಿ ಪ್ರಜೆ. ಅವರು ಸುಮಾರು 1978 ರಲ್ಲಿ ಕರಾಚಿಯಲ್ಲಿ ಜನಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.
  • ಆಸಿಫ್ ಮರ್ಚೆಂಟ್ ಇರಾನ್‌ನಲ್ಲಿ ಪತ್ನಿ ಮತ್ತು ಮಕ್ಕಳನ್ನು ಹೊಂದಿದ್ದು, ಪಾಕಿಸ್ತಾನದಲ್ಲಿ ಮತ್ತೊಂದು ಕುಟುಂಬವಿದೆ ಎಂದು ಎಫ್‌ಬಿಐ ತಿಳಿಸಿದೆ.
  • ಆಸಿಫ್ ಮರ್ಚೆಂಟ್ ಆಗಾಗ್ಗೆ ಇರಾನ್, ಸಿರಿಯಾ ಮತ್ತು ಇರಾಕ್‌ಗೆ ಹೋಗುತ್ತಿದ್ದ ಎಂದು ಯುಎಸ್ ನ್ಯಾಯಾಂಗ ಇಲಾಖೆ ತಿಳಿಸಿದೆ.
  • ಎಫ್‌ಬಿಐ ಪ್ರಕಾರ, ಆಸಿಫ್ ಮರ್ಚಂಟ್ ಏಪ್ರಿಲ್ 2024 ರಲ್ಲಿ ಪಾಕಿಸ್ತಾನದಿಂದ ಯುಎಸ್‌ಗೆ ಬಂದು ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಹತ್ಯೆಯ ಸಂಚುಗಳಲ್ಲಿ ಅವನಿಗೆ ಸಹಾಯ ಮಾಡಬಹುದೆಂದು ನಂಬಿದ ವ್ಯಕ್ತಿಯನ್ನು ಸಂಪರ್ಕಿಸಿದರು.
  • ಕೋಡ್ ಪದಗಳನ್ನು ಬಳಸಿಕೊಂಡು ಸಾಗರೋತ್ತರದಿಂದ ಅವರೊಂದಿಗೆ ಸಂವಹನ ನಡೆಸುತ್ತಾರೆ ಎಂದು ಎಫ್‌ಬಿಐ ಹೇಳಿದೆ.
  • FBI ಹೇಳಿಕೆಯ ಪ್ರಕಾರ, ಮರ್ಚೆಂಟ್ ಒಬ್ಬ ಅಧಿಕಾರಿಯನ್ನು ಆಗಸ್ಟ್ ಕೊನೆಯ ವಾರದಲ್ಲಿ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಕೊಲ್ಲಲು ಯೋಜಿಸಿದ್ದರು.
  • ಜೂನ್ 21 ರಂದು, ಹಿಟ್‌ಮೆನ್‌ಗಳೊಂದಿಗೆ ಮರ್ಚೆಂಟ್‌ ಮತ್ತು ಸಂಚನ್ನು ನಿರ್ವಹಿಸಲು $5,000 ಪಾವತಿಸಿದ್ದ. ನಂತರ, ವಿಮಾನದ ಮೂಲಕ ಜುಲೈ 12 ರಂದು US ಗೆ ಹೊರಡಲು ಯೋಜಿಸಿದ್ದ. ಆದಾಗ್ಯೂ, ಕಾನೂನು ಜಾರಿ ಏಜೆಂಟ್ ಅವರು ಹೊರಡುವ ಮೊದಲು ಅವರನ್ನು ಬಂಧಿಸಿದರು.

ಇದನ್ನೂ ಓದಿ: Donald Trump: ಡೊನಾಲ್ಡ್‌ ಟ್ರಂಪ್‌ ಕಿವಿಗೆ ತಾಗಿದ್ದು ಬುಲೆಟ್‌ ಅಲ್ಲ? ಹಾಗಾದ್ರೆ ಏನದು? ಹುಸಿ ದಾಳಿಯ ಅನುಮಾನ ಏಕೆ?

Continue Reading
Advertisement
Vinesh Phogat
ಪ್ರಮುಖ ಸುದ್ದಿ30 mins ago

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Niharika Konidela Nagendra Babu says Industry Is Not Our Father's Property
ಟಾಲಿವುಡ್40 mins ago

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Bangladesh Unrest
ದೇಶ56 mins ago

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Israel Palestine war
ವಿದೇಶ59 mins ago

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

nelamangala road accident
ಬೆಂಗಳೂರು1 hour ago

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Rishabh Pant
ಕ್ರೀಡೆ1 hour ago

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Akshay Kumar Riteish Fardeen recreate Heyy Babyy
ಬಾಲಿವುಡ್1 hour ago

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Viral Video
Latest2 hours ago

Viral Video: ಮೃಗಾಲಯದಲ್ಲಿ ಮಂಗನ ಎದುರು ಯುವತಿಯ ‘ಕಪಿ ಚೇಷ್ಟೆ’! ಪರಿಣಾಮ ಏನಾಯ್ತು ನೋಡಿ!

chemicals in food
ಬೆಂಗಳೂರು2 hours ago

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು19 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ20 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌