Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ - Vistara News

ವಿದೇಶ

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

Pak Woman: ದೈವನಿಂದೆಯ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿ ಮಹಿಳೆಯೊಬ್ಬಳ ಮೇಲೆ ಜನರು ಹಲ್ಲೆಗೆ ಮುಂದಾದರು. ಈ ವೇಳೆ, ಮಧ್ಯ ಪ್ರವೇಶಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.

VISTARANEWS.COM


on

Crowd mistakes Arabic words as Quran Verses on the kurta and Pak Women mobbed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅರೇಬಿಕ್ ಅಕ್ಷರಗಳ (Arabic Text) ಮುದ್ರಣವಿರುವ ಕುರ್ತಾ ತೊಟ್ಟಿದ್ದಕ್ಕೆ ಪಾಕಿಸ್ತಾನ ಮಹಿಳೆ (Pak Woman) ಮೇಲೆ ಗುಂಪೊಂದು ಹಲ್ಲೆ ಮುಂದಾದ ಘಟನೆ ನಡೆದಿದೆ(Woman Mobbed in Lahore). ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು, ಆ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ(Pakistan Police). ಧರ್ಮನಿಂದೆಯ (blasphemy) ಆರೋಪ ಹೊತ್ತಿರುವ ಮಹಿಳೆ, ತನ್ನ ಪತಿಯೊಂದಿಗೆ ಅರೇಬಿಕ್ ಅಕ್ಷರಗಳ ಮುದ್ರಣವಿರುವ ಕುರ್ತಾವನ್ನು ಧರಿಸಿ ಲಾಹೋರ್‌ನ ರೆಸ್ಟೋರೆಂಟ್‌ಗೆ ಭೇಟಿ ನೀಡಿದಾಗ, ಕೆಲವರು ಅದನ್ನು ಕುರಾನ್ ಸಾಲುಗಳೆಂದು (Quran Verses) ಭಾವಿಸಿ ಆಕೆಯ ಮೇಲೆ ಹಲ್ಲೆಗೆ ಮುಂದಾದರು ಎಂದು ತಿಳಿದು ಬಂದಿದೆ.

ಹಲವರಿದ್ದ ಗುಂಪು, ಮಹಿಳಯ ಧರಿಸಿದ್ದ ಕುರ್ತಾವನ್ನು ತೆಗೆಯುವಂತೆ ಪಟ್ಟು ಹಿಡಿದರು. ಆಗ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆ ಮಹಿಳೆಯನ್ನು ಗುಂಪಿನಿಂದ ರಕ್ಷಣೆ ಮಾಡಲಾಯಿತು. ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದ ಮತ್ತು ಮಹಿಳೆಯನ್ನು ರೆಸ್ಟೋರೆಂಟ್‌ನಿಂದ ಹೊರಗೆ ಕರೆದೊಯ್ದ ಮಹಿಳಾ ಅಧಿಕಾರಿಯನ್ನು ಪೊಲೀಸರು ಶ್ಲಾಘಿಸಿದರು.

ಪೊಲೀಸ್ ಅಧಿಕಾರಿ ಸೈಯದಾ ಶೆಹರ್ಬಾನೊ ನಖ್ವಿ ಯಾವುದೇ ಹಿಂಸಾಚಾರವನ್ನು ನಡೆಸದಂತೆ ಜನರನ್ನು ಒತ್ತಾಯಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಹಿಳೆಯು ತನ್ನ ಪತಿಯೊಂದಿಗೆ ಶಾಪಿಂಗ್‌ಗೆ ಹೋಗಿದ್ದಳು. ಅವಳು ಕುರ್ತಾವನ್ನು ಧರಿಸಿದ್ದಳು, ಅದರಲ್ಲಿ ಕೆಲವು ಪದಗಳನ್ನು ಬರೆಯಲಾಗಿದೆ. ಅದನ್ನು ನೋಡಿದ ಕೆಲವರು ಕುರ್ತಾವನ್ನು ತೆಗೆಯುವಂತೆ ಕೇಳಿದರು. ಆಗ ಗೊಂದಲ ಉಂಟಾಗಿದೆ ಎಂದು ನಖ್ವಿ ಹೇಳಿದ್ದಾರೆ.

ನಂತರ, ಪೊಲೀಸ್ ಠಾಣೆಗೆ ಕರೆದೊಯ್ದ ಮಹಿಳೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಕ್ಷಮೆಯಾಚಿಸಿದರು. “ನನಗೆ ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ. ಕುರ್ತಾ ಉತ್ತಮ ವಿನ್ಯಾಸ ಹೊಂದಿದ್ದರಿಂದ ಖರೀದಿಸಿದ್ದೇನೆ” ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ.

ಈ ಸುದ್ದಿಯನ್ನೂ ಓದಿ: ದೇವ ನಿಂದನೆ ಆರೋಪ: ನಾನೇ ದೇವರು ಎಂದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲಿಸಲು ಜೆಡಿಎಸ್‌ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Kuwait Fire: ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

VISTARANEWS.COM


on

Kuwait Fire
Koo

ಕುವೈತ್‌ ಸಿಟಿ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ (Fire Accident In Kuwait) ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಇದರಿಂದಾಗಿ 41 ಭಾರತೀಯರು (Indians) ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದುರ್ಘಟನೆ ಸಂಭವಿಸುತ್ತಲೇ ಕುವೈತ್‌ ಪ್ರಧಾನಿ ಶೇಖ್‌ ಫಹಾದ್‌ ಯುಸುಫ್‌ ಸೌದ್‌ ಅಲ್‌-ಸಬಾಹ್‌ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದುರಂತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಕುವೈತ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಸುಮಾರು 11 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಅಗತ್ಯ ನೆರವು ನೀಡಲು ಕೂಡ ಕ್ರಮ ತೆಗೆದುಕೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಕೂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರ ಎಂದು ತಿಳಿದುಬಂದಿದೆ.

ವರದಿಯ ಪ್ರಕಾರ, ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತಪಟ್ಟವರಲ್ಲಿ ಹೆಚ್ಚಿನವರು ಕೇರಳ ಹಾಗೂ ತಮಿಳುನಾಡಿನವರಾದರೆ, ಉಳಿದವರು ಉತ್ತರ ಭಾರತದವರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಸಂತಾಪ ಸೂಚಿಸಿದ ಜೈಶಂಕರ್‌

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಭಾರತೀಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಸಂತಾಪ ಸೂಚಿಸಿದ್ದಾರೆ. “ಅಗ್ನಿದುರಂತದ ಸುದ್ದಿ ತಿಳಿದು ಶಾಕ್‌ ಆಯಿತು. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಶಿಬಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಜೈಶಂಕರ್‌ ಪೋಸ್ಟ್‌ ಮಾಡಿದ್ದಾರೆ.

ಭಾರತೀಯ ಉದ್ಯಮಿಯ ಒಡೆತನದ ಕಟ್ಟಡ: ವರದಿ

ಒನ್​ಮನೋರಮಾ ವರದಿಯ ಪ್ರಕಾರ, ಹತ್ತಿರದ ವಾಣಿಜ್ಯ ಪ್ರದೇಶದ ಸುಮಾರು 195 ಕಾರ್ಮಿಕರು ಮತ್ತು ಹಲವಾರು ಮಲಯಾಳಿಗಳನ್ನು ವಾಸಿಸುತ್ತಿದ್ದ ಈ ಈ ಕಟ್ಟಡವು ಎನ್​ಬಿಟಿಸಿ ಗ್ರೂಪ್ ಗೆ ಸೇರಿದ್ದು. ಕೇರಳದ ಉದ್ಯಮಿ ಕೆಜಿ ಅಬ್ರಹಾಂ ಅವರ ಒಡೆತನದಲ್ಲಿರುವ ಈ ಕಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದ್ದರೂ, ಇನ್ನೂ ಹಲವಾರು ಮಂದಿ ಒಳಗೆ ಸಿಲುಕಿರುವ ವರದಿಗಳಿವೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

Continue Reading

ಪ್ರಮುಖ ಸುದ್ದಿ

Kuwait fire : ಕುವೈತ್ ನಲ್ಲಿ ಅಗ್ನಿ ಅವಘಡ: 5 ಭಾರತೀಯರು ಸೇರಿ 35 ಮಂದಿ ಸಾವು

Kuwait fire : ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

VISTARANEWS.COM


on

Kuwait fire
Koo

ಕುವೈತ್: ದಕ್ಷಿಣ ಕುವೈತ್ ನ ಮಂಗಾಫ್ ನಗರದಲ್ಲಿ ಸಂಭವಿಸಿದ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Kuwait fire) ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ಆ ದೇಶದ ಸರ್ಕಾರಿ ಮಾಧ್ಯಮ ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಕನಿಷ್ಠ ಐದು ಮಂದಿ ಭಾರತೀಯರು ಸಹ ಮೃತಪಟ್ಟಿದ್ದಾರೆ . ಈ ಕಟ್ಟಡವು ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಪ್ರಕಟಗೊಂಡಿಲ್ಲ.

ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

ವರದಿಯ ಪ್ರಕಾರ, ಬುಧವಾರ ಮುಂಜಾನೆ 4: 30 ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.

ಭಾರತೀಯ ಉದ್ಯಮಿಯ ಒಡೆತನದ ಕಟ್ಟಡ: ವರದಿ
ಒನ್​ಮನೋರಮಾ ವರದಿಯ ಪ್ರಕಾರ, ಹತ್ತಿರದ ವಾಣಿಜ್ಯ ಪ್ರದೇಶದ ಸುಮಾರು 195 ಕಾರ್ಮಿಕರು ಮತ್ತು ಹಲವಾರು ಮಲಯಾಳಿಗಳನ್ನು ವಾಸಿಸುತ್ತಿದ್ದ ಈ ಈ ಕಟ್ಟಡವು ಎನ್​ಬಿಟಿಸಿ ಗ್ರೂಪ್ ಗೆ ಸೇರಿದ್ದು. ಕೇರಳದ ಉದ್ಯಮಿ ಕೆಜಿ ಅಬ್ರಹಾಂ ಅವರ ಒಡೆತನದಲ್ಲಿರುವ ಈ ಕಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದ್ದರೂ, ಇನ್ನೂ ಹಲವಾರು ಮಂದಿ ಒಳಗೆ ಸಿಲುಕಿರುವ ವರದಿಗಳಿವೆ.

Continue Reading

ಕ್ರೈಂ

Fraud Case: 300 ರೂ. ಬೆಲೆಯ ನಕಲಿ ಆಭರಣವನ್ನು ವಿದೇಶಿ ಮಹಿಳೆಗೆ 6 ಕೋಟಿ ರೂ.ಗೆ ಮಾರಿದರು!

Fraud Case: ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್ ನಲ್ಲಿರುವ ಅಂಗಡಿಯೊಂದರಲ್ಲಿ ಅಮೇರಿಕಾದ ಮಹಿಳೆ ಚೆರಿಶ್ ಅವರು ಚಿನ್ನ ಖರೀದಿಸಿದ್ದಾರೆ. ಆಗ ಅಂಗಡಿಯ ಮಾಲೀಕ ಚಿನ್ನದ ಪಾಲಿಶ್ ಇರುವ 300 ರೂ ಬೆಲೆಯ ಬೆಳ್ಳಿ ಆಭರಣಕ್ಕೆ 6 ಕೋಟಿ ರೂಪಾಯಿ ಬೆಲೆ ಹೇಳಿ ಮಾರಾಟ ಮಾಡಿದ್ದಾನೆ. ಆ ಮಹಿಳೆ ಅಮೆರಿಕಕ್ಕೆ ಮರಳಿದಾಗ ಈ ಮೋಸ ಬಯಲಾಗಿದೆ.

VISTARANEWS.COM


on

Fraud Case
Koo

ಚಿನ್ನದ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಚಿನ್ನದ ಮೌಲ್ಯ ಹೆಚ್ಚಾಗಿ ಜನರು ಕಂಡಕಂಡಲ್ಲಿ ಚಿನ್ನದ ವಿಚಾರದಲ್ಲಿ ಮೋಸ, ವಂಚನೆ ಮಾಡುತ್ತಿದ್ದಾರೆ. ಚಿನ್ನಕ್ಕಾಗಿ ಜನರ ಪ್ರಾಣವನ್ನು ತೆಗೆಯುತ್ತಿದ್ದಾರೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಕಳ್ಳತನ ಪ್ರಕರಣ ಹೆಚ್ಚಾಗಿದೆ ಇದರ ಜೊತಗೆ ಚಿನ್ನವೆಂದು ನಂಬಿಸಿ ವಂಚನೆ ಮಾಡುವ ಪ್ರಕರಣ (Fraud Case) ಹೆಚ್ಚಾಗಿದ್ದಾರೆ. ಇಂತಹದೊಂದು ಘಟನೆ ಜೈಪುರದಲ್ಲಿ ನಡೆದಿದೆ.

ರಾಜಸ್ಥಾನದ ಅಂಗಡಿ ಮಾಲೀಕನೊಬ್ಬ 300 ರೂ. ಮೌಲ್ಯದ ಕೃತಕ ಆಭರಣಕ್ಕೆ 6 ಕೋಟಿ ರೂಪಾಯಿ ಬೆಲೆಗೆ ಅಮೇರಿಕಾದ ಮಹಿಳೆಗೆ ಮಾರಾಟ ಮಾಡಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಚಿನ್ನದ ಪಾಲಿಶ್‌ ಇರುವ ಬೆಳ್ಳಿ ಆಭರಣ ಮಾರಾಟ

ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್ ನಲ್ಲಿರುವ ಅಂಗಡಿಯೊಂದರಲ್ಲಿ ಅಮೇರಿಕಾದ ಮಹಿಳೆ ಚೆರಿಶ್ ಅವರು ಚಿನ್ನ ಖರೀದಿಸಿದ್ದಾರೆ. ಆಗ ಅಂಗಡಿಯ ಮಾಲೀಕ ಚಿನ್ನದ ಪಾಲಿಶ್ ಇರುವ 300ರೂ ಬೆಲೆಯ ಬೆಳ್ಳಿ ಆಭರಣಕ್ಕೆ 6 ಕೋಟಿ ರೂಪಾಯಿ ಬೆಲೆ ಹೇಳಿ ಮಾರಾಟ ಮಾಡಿದ್ದಾನೆ. ಮಹಿಳೆ ಈ ವರ್ಷ ಏಪ್ರಿಲ್ ನಲ್ಲಿ ಅಮೇರಿಕಾದಲ್ಲಿ ನಡೆದ ಪ್ರದರ್ಶನದಲ್ಲಿ ತಾನು ಜೈಪುರದಲ್ಲಿ ಖರೀದಿಸಿದ ಆಭರಣವನ್ನು ಪ್ರದರ್ಶಿಸಿದಾಗ ಅದು ನಕಲಿ ಎಂಬುದಾಗಿ ತಿಳಿದುಬಂದಿದೆ. ಆಗ ಮಹಿಳೆ ಭಾರತಕ್ಕೆ ಬಂದು ಅಂಗಡಿ ಮಾಲೀಕನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ.

ಅಂಗಡಿ ಮಾಲೀಕ ಗೌರವ್ ಸೋನಿ ಎಂಬುದಾಗಿ ತಿಳಿದುಬಂದಿದೆ. ಈತ ತನ್ನ ಕೃತ್ಯವನ್ನು ಒಪ್ಪಿಕೊಳ್ಳದ ಕಾರಣ ಮಹಿಳೆ ಜೈಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿಗಳು ಮಹಿಳೆಯ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ಮಹಿಳೆ ಯುಎಸ್ ನ ರಾಯಭಾರ ಕಚೇರಿಯಿಂದ ಸಹಾಯ ಕೋರಿದ್ದಾಳೆ. ಅವರು ಈ ಬಗ್ಗೆ ತನಿಖೆ ನಡೆಸುವಂತೆ ಜೈಪುರ ಪೊಲೀಸರಿಗೆ ಒತ್ತಾಯಿಸಿದ್ದಾರೆ.

2022ರಲ್ಲಿ ಇನ್ ಸ್ಟಾಗ್ರಾಂನಲ್ಲಿ ಗೌರವ್ ಸೋನಿಯನ್ನು ಸಂಪರ್ಕಿಸಿದ ಮಹಿಳೆ ಕಳೆದ 2 ವರ್ಷಗಳಲ್ಲಿ ಈ ಕೃತಕ ಆಭರಣಗಳಿಗಾಗಿ 6 ಕೋಟಿ ರೂಪಾಯಿಗಳನ್ನು ಪಾವತಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಗೌರವ್ ಮತ್ತು ಆತನ ತಂದೆ ರಾಜೇಂದ್ರ ಸೋನಿ ಇಬ್ಬರು ಪರಾರಿಯಾಗಿದ್ದಾರೆ. ಹಾಗಾಗಿ ಪೊಲೀಸರು ಅವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದು, ಅದಕ್ಕಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ. ಹಾಗೇ ಆಭರಣಕ್ಕೆ ನಕಲಿ ಪ್ರಮಾಣಪತ್ರ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

ಅಲ್ಲದೇ ಅಂಗಡಿ ಮಾಲೀಕರು ಇತ್ತೀಚೆಗೆ 3 ಕೋಟಿ ರೂ. ಮೌಲ್ಯದ ಅಪಾರ್ಟ್ ಮೆಂಟ್ ಖರೀದಿಸಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಟ್ಟಾರೆ ಈ ಪ್ರಕರಣದಿಂದ ವಿದೇಶದವರ ಮುಂದೆ ಭಾರತದ ಮರ್ಯಾದೆ ತೆಗೆದ ಹಾಗಾಗಿದೆ. ವಿದೇಶಿ ಮಹಿಳೆಗೆ ನಮ್ಮ ದೇಶದಲ್ಲಿ ಈ ರೀತಿ ವಂಚಿಸಿದ್ದು, ಘೋರ ಕೃತ್ಯವೇ ಸರಿ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಬೇಗನೆ ತನಿಖೆ ನಡೆಸಿ ಅದರ ಸತ್ಯವನ್ನು ಕಂಡುಹಿಡಿಯುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದರೆ ವಿದೇಶದಲ್ಲಿ ಭಾರತೀಯರ ಮರ್ಯಾದೆ ಹರಾಜಾಗುವುದಂತು ಖಂಡಿತ.

Continue Reading

ಪ್ರಮುಖ ಸುದ್ದಿ

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Joe Biden : ಹಂಟರ್ ಬೈಡನ್ ಪ್ರಕರಣದಲ್ಲಿ 12 ನ್ಯಾಯಾಧೀಶರ ತಮಡ ಸೋಮವಾರ ವಿಚಾರಣೆ ಪ್ರಾರಂಭಿಸಿದ್ದರು. ಡೆಲಾವೇರ್​ನ ವಿಲ್ಮಿಂಗ್ಟನ್​​ನಲ್ಲಿರುವ ಫೆಡರಲ್ ನ್ಯಾಯಾಲಯವು ಮಂಗಳವಾರ ಹಂಟರ್ ಬೈಡನ್​​ಗೆ ಶಿಕ್ಷೆ ವಿಧಿಸಿದೆ. ಹಂಟರ್ ಅಮೆರಿಕದ ಹಾಲಿ ಅಧ್ಯಕ್ಷರ ಮೊದಲ ಪುತ್ರ.

VISTARANEWS.COM


on

Joe Biden
Koo

ಬೆಂಗಳೂರು: ಬಂದೂಕು ಖರೀದಿ ಮಾಡುವ ವೇಳೆ ಸುಳ್ಳು ಮಾಹಿತಿ ನೀಡಿರುವ ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪುತ್ರ ಹಂಟರ್ ಬೈಡನ್ (Hunter Biden) ತಪ್ಪಿತಸ್ಥರೆಂದು ಸಾಬೀತಾಗಿದೆ. ಬಂದೂಕು ಖರೀದಿ ವೇಳೆ ತಾವು ಮಾದಕ ವಸ್ತುಗಳನ್ನು(Banned Drug) ಬಳಸುತ್ತಿಲ್ಲ ಎಂದು ಸುಳ್ಳು ಹೇಳಿದೆ ಆರೋಪ ಅವರ ಮೇಲಿತ್ತು. ಆ ಪ್ರಕರಣದಲ್ಲಿ ಹಂಟರ್ ಬೈಡನ್ ತಪ್ಪಿತಸ್ಥರೆಂದು ತೀರ್ಪುಗಾರರು ತೀರ್ಪು ನೀಡಿದ್ದಾರೆ. ಹಂಟರ್ ಬೈಡನ್ ಮೊದಲ ಪ್ರಕರಣದಲ್ಲಿ 10 ವರ್ಷಗಳವರೆಗೆ, ಎರಡನೇ ಪ್ರಕರಣದಲ್ಲಿ ಐದು ವರ್ಷಗ ಮತ್ತು ಮೂರನೇ ಪ್ರಕರಣದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಎಲ್ಲ ಪ್ರಕರಣಗಳು ಸಾಬೀತಾದರೆ ಅವರು ತಮ್ಮ ಜೀವಿತಾವಧಿಯ 25 ವರ್ಷವನ್ನು ಜೈಲಿನಲ್ಲಿ ಕಳೆಯಬೇಕಾಗುತ್ತದೆ.

ಹಂಟರ್ ಬೈಡನ್ ಪ್ರಕರಣದಲ್ಲಿ 12 ನ್ಯಾಯಾಧೀಶರ ತಂಡ ಸೋಮವಾರ ವಿಚಾರಣೆ ಪ್ರಾರಂಭಿಸಿದ್ದರು. ಡೆಲಾವೇರ್​ನ ವಿಲ್ಮಿಂಗ್ಟನ್​​ನಲ್ಲಿರುವ ಫೆಡರಲ್ ನ್ಯಾಯಾಲಯವು ಮಂಗಳವಾರ ಹಂಟರ್ ಬೈಡನ್​​ಗೆ ಶಿಕ್ಷೆ ವಿಧಿಸಿದೆ. ಹಂಟರ್ ಅಮೆರಿಕದ ಹಾಲಿ ಅಧ್ಯಕ್ಷರ ಮೊದಲ ಪುತ್ರ.

ಹಂಟರ್ ಬೈಡನ್ ಅವರು ಕೋಲ್ಟ್ ಕೋಬ್ರಾ 38-ಕ್ಯಾಲಿಬರ್ ರಿವಾಲ್ವರ್ ಖರೀದಿಸಿದ್ದರು. ಈ ವೇಳೆ ಅಕ್ರಮ ಮಾದಕವಸ್ತುಗಳ ಬಳಕೆಯನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ. ಹೀಗಾಗಿ ಅದು ಅಕ್ರಮವಾಗುತ್ತದೆ. ಅಕ್ಟೋಬರ್ 2018 ರಲ್ಲಿ 11 ದಿನಗಳ ಕಾಲ ಅಕ್ರಮವಾಗಿ ಶಸ್ತ್ರಾಸ್ತ್ರವನ್ನು ಹೊಂದಿದ್ದರು ಎಂಬ ಗಂಭೀರ ಆರೋಪಗಳನ್ನು ಒಪ್ಪಿಕೊಂಡಿದ್ದರು.

ನ್ಯಾಯಾಧೀಶರು ಮಂಗಳವಾರ ಹಂಟರ್ ಬೈಡನ್ ಅವರ ಶಿಕ್ಷೆಯ ದಿನಾಂಕವನ್ನು ನಿಗದಿಪಡಿಸಲಿಲ್ಲ. ಇನ್ನೂ 120 ದಿನಗಳಲ್ಲಿ ಶಿಕ್ಷೆ ಪ್ರಕಟಗೊಳ್ಳಲಿದೆ. ನವೆಂಬರ್ 5 ರಂದು ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ಶಿಕ್ಷೆ ಪ್ರಕಟಗೊಳ್ಳಲಿದೆ.

ಏನಿದು ಪ್ರಕರಣ?

2018ರಲ್ಲಿ ಹಂಟರ್ ಬೈಡನ್ ಬಂದೂಕು ಖರೀದಿಸಿದ್ದರು. ಅಮೆರಿಕದಲ್ಲಿ ಬಂದೂಕು ಖರೀದಿಸುವಾಗ ಒಬ್ಬ ವ್ಯಕ್ತಿಯು ಅರ್ಜಿಯೊಂದನ್ನು ಅನ್ನು ಭರ್ತಿ ಮಾಡಬೇಕು. ಈ ವೇಳೆ ಮಾದಕವಸ್ತು ಬಳಕೆಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಬೇಕು. ಅಂದರೆ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂದು ಖಾತರಿ ಕೊಡಬೇಕು. ಮಾದಕ ವಸ್ತುಗಳನ್ನು ಹೊಂದಿರುವವರಿಗೆ ಅಲ್ಲಿ ಬಂದೂಕು ಲೈಸನ್ಸ್ ಸಿಗುವುದಿಲ್ಲ. ಹಂಟರ್ ಬೈಡನ್ ಮಾದಕವಸ್ತು ಬಳಕೆಯ ಪ್ರಶ್ನೆಗೆ “ಇಲ್ಲ” ಎಂದು ಉತ್ತರಿಸಿದ್ದರು. ಆದರೆ ಅವರು ಆ ಸಮಯದಲ್ಲಿ ಅವುಗಳನ್ನು ಬಳಸುತ್ತಿದ್ದರು ಎಂದು ವರದಿಯಾಗಿದೆ.

ಸೆಪ್ಟೆಂಬರ್ 2023ರಲ್ಲಿ, ಹಂಟರ್ ಬೈಡನ್ ವಿರುದ್ಧ ಈ ಬಂದೂಕು ಖರೀದಿಗೆ ಸಂಬಂಧಿಸಿದ ಮೂರು ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಯಿತು. ಈ ಆರೋಪಗಳಲ್ಲಿ ಅವರ ಮಾದಕವಸ್ತು ಬಳಕೆಯ ಬಗ್ಗೆ ಸುಳ್ಳು ಹೇಳುವುದು ಮತ್ತು ಮಾದಕವಸ್ತು ಬಳಕೆದಾರರಾಗಿದ್ದಾಗ ಬಂದೂಕು ಹೊಂದಿರುವುದು ಸೇರಿಕೊಂಡಿದೆ. 2023 ರಲ್ಲಿ, ಹಂಟರ್ ವಿಚಾರಣೆಗೆ ಹೋಗಿರಲಿಲ್ಲ. ಕಾನೂನು ಪಾಲನೆಯಲ್ಲೂ ಅವರು ವಿಫಲಗೊಂಡಿದ್ದರು.

ಇದನ್ನೂ ಓದಿ: Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

ಹಂಟರ್ ಬೈಡನ್ ತಮ್ಮ ಆರೋಪಗಳನ್ನು ಮೊದಲಿಗೆ ಒಪ್ಪಿಕೊಂಡಿರಲಿಲ್ಲ. ವಿಚಾರಣೆಯ ವೇಳೆ ಹಂಟರ್ ಅವರ ವಿರುದ್ಧ ಸಾಕ್ಷಿಗಳು ದಾಖಲಾಗಿದ್ದವು. ಅವರ ಮಾಜಿ ಪತ್ನಿ, ಮಾಜಿ ಗೆಳತಿ ಮತ್ತು ಅತ್ತಿಗೆಯ ಹೇಳಿಕೆಯ ಪ್ರಕಾರ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು. ಅವರು ಅಕ್ಟೋಬರ್ 2018 ರಲ್ಲಿ ಬಂದೂಕು ಖರೀದಿಸುವ ಮೊದಲು ಮತ್ತು ನಂತರದ ವಾರಗಳಲ್ಲಿ ಮಾದಕ ವಸ್ತುಗಳನ್ನ ಸೇವಿಸಿದ್ದು ಗೊತ್ತಾಗಿತ್ತು.

Continue Reading
Advertisement
New Chief Ministers
ದೇಶ3 mins ago

ಒಡಿಶಾಗೆ ಬಿಜೆಪಿಯ ಮೋಹನ್‌ ಚರಣ್‌ ಮಾಝಿ, ಅರುಣಾಚಲಕ್ಕೆ ಪೆಮಾ ಖಂಡು ಸಿಎಂ; ಖಂಡು ನಾಳೆ ಪದಗ್ರಹಣ

VIP Security
Latest8 mins ago

VIP Security: ಬ್ಲ್ಯಾಕ್‌ ಕ್ಯಾಟ್‌ ಕಮಾಂಡೊಗಳಿಗಿನ್ನು ವಿಐಪಿಗಳನ್ನು ಕಾಯೋ ಕೆಲಸ ಇಲ್ಲ!

IPL 2025
ಕ್ರೀಡೆ12 mins ago

IPL 2025: ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ ಏರಿಕೆ; ಕಪ್​ ಗೆಲ್ಲದಿದ್ದರೂ ಆರ್​ಸಿಬಿ ಪ್ರಾಬಲ್ಯ

Rave Party
ಕರ್ನಾಟಕ13 mins ago

Rave Party: ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

Actor Darshan
ಪ್ರಮುಖ ಸುದ್ದಿ53 mins ago

Actor Darshan: ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು; ದರ್ಶನ್ ವಿರುದ್ಧ ನಟಿ ರಮ್ಯಾ ಮತ್ತೊಂದು ಟ್ವೀಟ್‌!

Tamilisai Soundararajan
ದೇಶ53 mins ago

Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

karnataka weather Forecast
ಮಳೆ1 hour ago

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

TK Chathunni
ಕ್ರೀಡೆ1 hour ago

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

Ready Saree Fashion Tips
ಫ್ಯಾಷನ್2 hours ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ2 hours ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌