ನ್ಯೂಯಾರ್ಕ್​ನಲ್ಲಿ ಶಾಲೆಗಳಿಗೆ ದೀಪಾವಳಿಯಂದು ರಜೆ; ಮೇಯರ್​ ಘೋಷಣೆ, ಮಕ್ಕಳಿಗೆ ಖುಷಿಯೋ ಖುಷಿ Vistara News

ವಿದೇಶ

ನ್ಯೂಯಾರ್ಕ್​ನಲ್ಲಿ ಶಾಲೆಗಳಿಗೆ ದೀಪಾವಳಿಯಂದು ರಜೆ; ಮೇಯರ್​ ಘೋಷಣೆ, ಮಕ್ಕಳಿಗೆ ಖುಷಿಯೋ ಖುಷಿ

ದೀಪಾವಳಿ ಹಬ್ಬದಂದು ನ್ಯೂಯಾರ್ಕ್​​ನಲ್ಲಿ ಶಾಲೆಗಳಿಗೆ ರಜಾ ಕೊಡಬೇಕು ಎಂಬ ಹೋರಾಟದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ನ್ಯೂಯಾರ್ಕ್​ ಅಸೆಂಬ್ಲಿ ಸದಸ್ಯೆ ಜೆನಿಫರ್ ರಾಜ್​ಕುಮಾರ್ ಅವರು ಇದೀಗ ಖುಷಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Diwali School Holiday Announced By Eric Adams And Jenifer Rajkumar
Follow us on
Koo

ಭಾರತದಲ್ಲಿ ದೀಪಾವಳಿ ಹಬ್ಬಕ್ಕೆ ಶಾಲಾ-ಕಾಲೇಜುಗಳಿಗೆ ರಜಾ ಇರುವಂತೆ, ಇನ್ನುಮುಂದೆ ಯುಎಸ್​ನ ನ್ಯೂಯಾರ್ಕ್​​ನಲ್ಲೂ ಕೂಡ ದೀಪಾವಳಿಗೆ ಶಾಲೆಗಳಿಗೆ ರಜಾ (Diwali Holiday In New York) ಇರಲಿದೆ. ಇನ್ಮುಂದೆ ನ್ಯೂಯಾರ್ಕ್​ನಲ್ಲಿ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ಸಾರ್ವತ್ರಿಕ ರಜಾ ಕೊಡಲಾಗುವುದು ಎಂದು ಅಲ್ಲಿನ ಮೇಯರ್​ ಎರಿಕ್ ಅಡಮ್ಸ್ (Mayor Eric Adams) ಸೋಮವಾರ​ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ನ್ಯೂಯಾರ್ಕ್​​ನಲ್ಲಿ ದೀಪಾವಳಿಯಂದು ಶಾಲೆಗಳಿಗೆ ಸಾರ್ವತ್ರಿಕ ರಜಾ (School Holiday) ಕೊಡಬೇಕು ಎಂಬ ಹೋರಾಟ ಮಾಡಿಕೊಂಡು ಬಂದಿದ್ದ ಭಾರತೀಯ ಸಮುದಾಯದವರು ಮತ್ತು ಇಲ್ಲಿನ ಅಸೆಂಬ್ಲಿ ಸದಸ್ಯೆ ಜೆನಿಫರ್ ರಾಜ್​ಕುಮಾರ್​ ಅವರೊಂದಿಗೆ ನಾನೂ ದೃಢವಾಗಿ ನಿಂತಿದ್ದೆ. ಇದೀಗ ಆ ಹೋರಾಟಕ್ಕೆ ಜಯ ಸಿಕ್ಕಿದೆ. ಶುಭ ದೀಪವಳಿ’ ಎಂದಿದ್ದಾರೆ.

ಇನ್ನು ದೀಪಾವಳಿ ಹಬ್ಬದಂದು ನ್ಯೂಯಾರ್ಕ್​​ನಲ್ಲಿ ಶಾಲೆಗಳಿಗೆ ರಜಾ ಕೊಡಬೇಕು. ಮಕ್ಕಳು ಈ ಹಬ್ಬದಲ್ಲಿ ಪಾಲ್ಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂಬ ಹೋರಾಟದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ನ್ಯೂಯಾರ್ಕ್​ ಅಸೆಂಬ್ಲಿ ಸದಸ್ಯೆ ಜೆನಿಫರ್ ರಾಜ್​ಕುಮಾರ್ ಅವರು ಇದೀಗ ಖುಷಿ ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿರುವ ಭಾರತೀಯ ಸಮುದಾಯದವರ ಬಹುಕಾಲದ ಬೇಡಿಕೆ ಇದಾಗಿತ್ತು. 2 ದಶಕಗಳಿಂದ ಈ ಬಗ್ಗೆ ಆಗ್ರಹ ಕೇಳಿಬಂದಿತ್ತು. ಅದೀಗ ಈಡೇರಿದ್ದು ತುಂಬ ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.

ಹಾಗಿದ್ದಾಗ್ಯೂ ಈ ವರ್ಷ ನ್ಯೂಯಾರ್ಕ್​​ನಲ್ಲಿ ಶಾಲೆಗಳಿಗೆ ರಜೆ ಇರುವುದಿಲ್ಲ. ದೀಪಾವಳಿ ರಜೆಯ ಕಾನೂನು ರಚನೆಗೊಳ್ಳುವ ಮೊದಲೇ 2023-2024ನೇ ಸಾಲಿನ ಕ್ಯಾಲೆಂಡರ್​ ಸಿದ್ಧವಾಗಿಬಿಟ್ಟಿತ್ತು. ಅದರಲ್ಲಿ ದೀಪಾವಳಿಗೆ ಶಾಲೆಗಳಿಗೆ ಸಾರ್ವತ್ರಿಕ ರಜಾ ಎಂದು ಪ್ರಕಟಿಸಿಲ್ಲ. ಇನ್ನು ಮಸೂದೆ ಪಾಸ್​ ಆಗಿದ್ದು, ನ್ಯೂಯಾರ್ಕ್​ ಸಿಟಿಯ ಗವರ್ನರ್ ಕ್ಯಾಥಿ ಹೋಚುಲ್ ಸಹಿ ಆಗುವುದು ಬಾಕಿ ಇದೆ. ಅದಾದ ಮೇಲೆ ಅಧಿಕೃತಗೊಳ್ಳಲಿದೆ. ಇನ್ನು ಭಾರತೀಯ ಸಮುದಾಯದ ಮಕ್ಕಳಂತೂ ದೀಪಾವಳಿ ಆಚರಣೆಗೆ ಶಾಲೆಗೆ ರಜಾ ಸಿಗುತ್ತಿರುವುದಕ್ಕೆ ಫುಲ್ ಖುಷಿಯಾಗಿದ್ದಾರೆ.

ಇದನ್ನೂ ಓದಿ: ದೀಪಾವಳಿಗೆ ಯುಎಸ್​​ನಲ್ಲಿ ಸಾರ್ವತ್ರಿಕ ರಜೆ ಕೊಡಬೇಕು; ಮಸೂದೆ ಮಂಡನೆ ಮಾಡಿದ ಅಮೆರಿಕ ಜನಪ್ರತಿನಿಧಿ

2023ರಿಂದ ನ್ಯೂಯಾರ್ಕ್​ ಸಿಟಿಯಲ್ಲಿ ದೀಪಾವಳಿ ಹಬ್ಬದಂದು ಶಾಲೆಗಳಿಗೆ ಸಾರ್ವತ್ರಿಕ ರಜೆ ನೀಡಲಾಗುವುದು ಮೇಯರ್​ ಎರಿಕ್​ ಅಡಮ್ಸ್​ ಅವರು ಕಳೆದವರ್ಷವೇ ಹೇಳಿದ್ದರು. ದೀಪಾವಳಿ ಹಬ್ಬ ಆಚರಣೆಗೆ ಪ್ರೋತ್ಸಾಹ ಕೊಡುವುದೇ ನಮ್ಮ ಪ್ರಮುಖ ಉದ್ದೇಶ. ನ್ಯೂಯಾರ್ಕ್​ ಸಿಟಿಯಲ್ಲಿ ಅನೇಕರು ಈ ದೀಪಗಳ ಹಬ್ಬವನ್ನು ಆಚರಣೆ ಮಾಡುತ್ತಾರೆ. ಅವರ ಸಂಭ್ರಮದಲ್ಲಿ ನಾವೂ ಜತೆಯಾಗುವ ಜತೆ, ಮಕ್ಕಳಿಗೆ ಹಬ್ಬಗಳ ಪ್ರಾಮುಖ್ಯತೆ ತಿಳಿಸಬೇಕು. ಶೈಕ್ಷಣಿಕವಾಗಿಯೂ ಇದು ಮಹತ್ವ ಪಡೆದಿದೆ. ದೀಪಗಳ ಹಬ್ಬ ದೀಪಾವಳಿ, ನಮ್ಮೊಳಗೂ ಕೂಡ ಬೆಳಕು ಮೂಡಿಸುತ್ತದೆ ಎಂಬುದು ಮಕ್ಕಳಿಗೆ ಅರ್ಥವಾಗಬೇಕು’ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

Vivek Ramaswamy: ರಿಪಬ್ಲಿಕ್ ಪಕ್ಷದ ಸದಸ್ಯರಾಗಿರುವ ವಿವೇಕ್ ರಾಮಸ್ವಾಮಿ ಅವರು 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗುವ ಮುಂಚೂಣಿ ವ್ಯಕ್ತಿಯಾಗಿದ್ದಾರೆ.

VISTARANEWS.COM


on

Vivek Ramaswamy offering rs 80 lakh to nanny Says media report
ಹೆಂಡತಿ ಮತ್ತು ಮಕ್ಕಳೊಂದಿಗೆ ವಿವೇಕ್ ರಾಮಸ್ವಾಮಿ.
Koo

ನವದೆಹಲಿ: ಅಮೆರಿಕ ಅಧ್ಯಕ್ಷ (US President Election) ಚುನಾವಣೆಗೆ ರಿಪಬ್ಲಿಕ್ ಪಕ್ಷದ (Republic Party) ಅಭ್ಯರ್ಥಿಯಾಗಲು ಹೊರಟಿರುವ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ದಾದಿಯರನ್ನು (Nanny) ಹುಡುಕುತ್ತಿದ್ದಾರೆ. ಈ ಕೆಲಸಕ್ಕಾಗಿ ಅವರು ಆಫರ್ ಮಾಡುತ್ತಿರುವ ಸಂಬಳದ ಮೊತ್ತ ಕೇಳಿದ್ರೆ ನೀವು ಬೆಚ್ಚಿ ಬೀಳುತ್ತೀರಿ. ವಿವೇಕ್ ರಾಮಸ್ವಾಮಿ ದಾದಿ(ಆಯಾ) ಕೆಲಸಕ್ಕೆ 80 ಲಕ್ಷ ರೂ. ಸಂಬಳ ನೀಡಲು ಮುಂದಾಗಿದ್ದಾರೆ. ಅವರು ಭಾರತೀಯ ಕೋಟ್ಯಧಿಪತಿ ಅಪೂರ್ವ ಅವರನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ತಮ್ಮ ಮಕ್ಕಳನ್ನು ನೋಡಿಕೊಳ್ಳಲು ನ್ಯಾನಿ(ದಾದಿ) ಬೇಕಾಗಿದ್ದಾರೆ ಎಂದು ರಾಮಸ್ವಾಮಿ ಅವರು ಎಸ್ಟೇಟ್‌ಜಾಬ್ಸ್ ವೆಬ್‌ಸೈಟ್‌ನಲ್ಲಿ ಜಾಹೀರಾತು ನೀಡಿದ್ದಾರೆ. ಕುತೂಹಲ, ಸಾಹಸ ಮತ್ತು ನಿರಂತರ ಚಲನೆಯು ಕುಟುಂಬದ ಜೀವನಶೈಲಿಯನ್ನು ವ್ಯಾಖ್ಯಾನಿಸುತ್ತದೆ. ಇದು ಉನ್ನತ-ಪ್ರೊಫೈಲ್ ಕುಟುಂಬವನ್ನು ಸೇರಲು ಒಂದು ಅಸಾಧಾರಣ ಅವಕಾಶವಾಗಿದೆ, ಅನನ್ಯ ಕೌಟುಂಬಿಕ ಸಾಹಸಗಳಲ್ಲಿ ಭಾಗವಹಿಸುವಾಗ ಅವರ ಮಕ್ಕಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಎಸ್ಟೇಟ್‌ಜಾಬ್ಸ್ ಡಾಟ್ ಕಾಮ್ ಈ ಜಾಹೀರಾತಿನಲ್ಲಿ ಬರೆದುಕೊಂಡಿದೆ.

ವಾರಕ್ಕೆ 84 ರಿಂದ 96 ಗಂಟೆಗಳ ಕೆಲಸದ ಅಗತ್ಯವಿದೆ, ನಂತರ ಇಡೀ ವಾರದ ರಜೆ ಇರುತ್ತದೆ. ಮಕ್ಕಳಿಗೆ ತಡೆರಹಿತ ದೈನಂದಿನ ದಿನಚರಿಯನ್ನು ಒದಗಿಸುವ ಸಲುವಾಗಿ ದಾದಿಯು, ಒಬ್ಬ ಬಾಣಸಿಗ, ಸಹಾಯಕಿಯರು, ಹೌಸ್‌ಕೀಪರ್ ಮತ್ತು ಖಾಸಗಿ ಭದ್ರತೆಯನ್ನು ಒಳಗೊಂಡಂತೆ ಮೀಸಲಾದ ತಂಡದೊಂದಿಗೆ ವ್ಯವಹರಿಸಬೇಕಾಗುತ್ತದೆ. ಈ ತಂಡದೊಂದಿಗೆ ಸಮನ್ವಯತೆಯನ್ನು ಕಾಯ್ದುಕೊಳ್ಳಬೇಕಾಗುತ್ತದೆ. ಜತೆಗೆ, ಹುಡುಗರ ಆಟದ ಪ್ರದೇಶಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಉತ್ತೇಜಿಸುವ ಮತ್ತು ಸಂಘಟಿತ ವಾತಾವರಣವನ್ನು ಬೆಳೆಸಲು ಕ್ಯುರೇಟ್ ಮಾಡುವುದೂ ಕೂಡ ಜವಾಬ್ದಾರಿಯಾಗಿರುತ್ತದೆ ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಹಾಗೆ ನೋಡಿದರೆ, ಎಸ್ಟೇಟ್‌ಜಾಬ್ಸ್ ಡಾಟ್ ಕಾಮ್‍‌ನಲ್ಲಿ ನೀಡಿರುವ ಜಾಹೀರಾತಿನಲ್ಲಿ ಕ್ಲೈಂಟ್ ಹೆಸರು ಎಲ್ಲೂ ನಮೂದಿಸಿಲ್ಲ. ಆದರೂ, ವಿವರಗಳನ್ನು ವಿಶ್ಲೇಷಿಸಿದರೆ ಖಂಡಿತವಾಗಿಯೂ ಅದು ವಿವೇಕ ರಾಮಸ್ವಾಮಿ ಅವರ ಕುಟುಂಬದತ್ತ ಬೆರಳು ಮಾಡುತ್ತದೆ ಎಂದು ಬಿಸಿನೆಸ್‌ ಇನ್‌ಸೈಡರ್ ವರದಿ ಮಾಡಿದೆ.

ಈ ಸುದ್ದಿಯನ್ನೂ ಓದಿ: Vivek Ramaswamy: ಅಮೆರಿಕ ಚುನಾವಣೆ ಮೊದಲೇ ಭಾರತ ಮೂಲದ ವಿವೇಕ್‌ ರಾಮಸ್ವಾಮಿಯನ್ನು ಹೊಗಳಿದ ಎಲಾನ್‌ ಮಸ್ಕ್

ರಾಮಸ್ವಾಮಿ ಅವರ ಪ್ರಚಾರದ ವಕ್ತಾರರಾದ ಟ್ರಿಸಿಯಾ ಮೆಕ್‌ಲಾಫ್ಲಿನ್ ಅವರು ಈ ಹಿಂದೆ ಸುದ್ದಿ ಪೋರ್ಟಲ್‌ ಮಾಹಿತಿ ನೀಡಿ, ಲಿವ್-ಇನ್ ದಾದಿಯರ ಕಲ್ಪನೆಯೊಂದಿಗೆ ಕುಟುಂಬವು ಹೊಂದಾಣಿಕೆಯಾಗುವುದಿಲ್ಲ ಎಂದು ಹೇಳಿದ್ದರು. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗುವುದಕ್ಕೆ ವಿವೇಕ್ ರಾಮಸ್ವಾಮಿ ಅವರು ತಯಾರಿ ನಡೆಸಿದ್ದಾರೆ.

ಭಾರತೀಯ ಮೂಲದ ರಿಪಬ್ಲಿಕನ್ ಅಭ್ಯರ್ಥಿಯನ್ನು(ವಿವೇಕ್ ರಾಮಸ್ವಾಮಿ) ಒಮ್ಮೆ ಟೈಮ್ ಮ್ಯಾಗಜೀನ್ “ಟ್ರಂಪ್ ಅವರ ಸ್ಪಷ್ಟ ಉತ್ತರಾಧಿಕಾರಿ” ಎಂದು ಕರೆದಿತ್ತು. ಆಗಸ್ಟ್ 23 ರಂದು ನಡೆದ ಅವರ ಮೊದಲ ರಿಪಬ್ಲಿಕನ್ ಅಧ್ಯಕ್ಷೀಯ ಪ್ರಾಥಮಿಕ ಚರ್ಚೆಯ ನಂತರ ಅವರು ಅಮೆರಿಕದಲ್ಲಿ ಸಾಕಷ್ಟು ಗಮನ ಸೆಳೆದಿದ್ದಾರೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

India Canada Row: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿದೆ.

VISTARANEWS.COM


on

Justin Trudeau
Koo

ಟೊರೊಂಟೊ, ಕೆನಡಾ: ಸದ್ಯ ಕೆನಡಾವು ಭಾರತದೊಂದಿಗೆ (Canada and India Relations) ಅತ್ಯಂತ ಸವಾಲಿನ ಸಮಯವನ್ನು ಎದುರಿಸುತ್ತಿದೆ. ಹಾಗಿದ್ದೂ, ರಚನಾತ್ಮಕ ಸಂಬಂಧವನ್ನು (Constructive Relations) ಮುಂದುರಿಸುತ್ತಿರುವುದಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ (Canada PM Justin Trudeau) ಅವರು ಮಂಗಳವಾರ ಹೇಳಿದ್ದಾರೆ. ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಟ್ರೂಡೊ ಅವರ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ(India Canada Row).

ಒಟ್ಟಾವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಅವರು, ಭಾರತದಲ್ಲಿ ಕೆನಾಡ ರಾಜತಾಂತ್ರಿಕರನ್ನು ಹೊಂದಿರುವುದು ಮಹತ್ವದ್ದಾಗಿದೆ ಎಂದು ಹೇಳಿದರು. ದಿಲ್ಲಿಯ ಕೆನಡಾ ರಾಜತಾಂತ್ರಿಕ ಕಚೇರಿಯಲ್ಲಿರುವ 62 ಸಿಬ್ಬಂದಿಯ ಪೈಕಿ 41 ಜನರನ್ನು ವಾಪಸ್ ಕೆನಡಾಗೆ ಕರೆಯಿಸಿಕೊಳ್ಳುವಂತೆ ಭಾರತ ಸರ್ಕಾರವು ಹೇಳಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಟ್ರೂಡೋ ಅವರು ಹೇಳಿಕೆಯನ್ನು ನೀಡಿದ್ದಾರೆ.

ನಿಸ್ಸಂಶಯವಾಗಿ, ನಾವು ಇದೀಗ ಭಾರತದೊಂದಿಗೆ ಅತ್ಯಂತ ಸವಾಲಿನ ಸಮಯವನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದ ಪ್ರಧಾನಿ ಟ್ರೂಡೋ ಅವರು, ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿಮೆ ಮಾಡುವಂತೆ ದಿಲ್ಲಿ ಹೇಳಿದೆ ಎಂಬ ಮಾಧ್ಯಮ ವರದಿಯ ಬಗ್ಗೆ ಯಾವುದೇ ಟಿಪ್ಪಣಿಯನ್ನು ಅವರು ಮಾಡಲಿಲ್ಲ.

ಈ ಸುದ್ದಿಯನ್ನೂ ಓದಿ: India Canada Row: ʼಇಷ್ಟು ರಾಜತಾಂತ್ರಿಕರು ಇಲ್ಲಿ ಬೇಕಿಲ್ಲ, ವಾಪಸ್‌ ಕರೆಸಿಕೊಳ್ಳಿ!ʼ ಕೆನಡಾಕ್ಕೆ ಮತ್ತೆ ಭಾರತ ತಪರಾಕಿ

ದಿಲ್ಲಿಯ ಕ್ರಮಕ್ಕೆ ಪ್ರತಿಯಾಗಿ ಕೆನಡಾ ಸರ್ಕಾರವು, ಭಾರತೀಯ ರಾಜತಾಂತ್ರಿಕರನ್ನು ಕಿತ್ತು ಹಾಕಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈಗಾಗಲೇ ಹೇಳಿದಂತೆ ನಾವು ಸಮಸ್ಯೆಯನ್ನು ಹೆಚ್ಚಿಸಲು ಹೋಗುವುದಿಲ್ಲ. ಈ ಅತ್ಯಂತ ಕಷ್ಟದ ಸಮಯದಲ್ಲಿ ಭಾರತದೊಂದಿಗೆ ರಚನಾತ್ಮಕ ಸಂಬಂಧವನ್ನು ಮುಂದುವರಿಸುವಲ್ಲಿ ನಾವು ಮುಖ್ಯವಾದ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.

ಜೂನ್ 18ರಂದು ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆನ್ಸಿಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಅವರು ಕಳೆದ ತಿಂಗಳು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿತ್ತು. ಭಾರತವು ಟ್ರೂಡೋ ಆರೋಪಕ್ಕೆ ಪ್ರತಿಕ್ರಿಯಿಸಿ, ಇದೊಂದು ಆಧಾರ ರಹಿತ ಆರೋಪ ಎಂದು ಹೇಳಿತ್ತು. ಅಲ್ಲದೇ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಅಧಿಕಾರಿಗಳನ್ನು ವಜಾ ಮಾಡುವ ಮೂಲಕ ಸ್ಪರ್ಧೆಗೆ ಇಳಿದಿದ್ದವು.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಪ್ರಮುಖ ಸುದ್ದಿ

Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ

Bed Bugs: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ ನಗರದಲ್ಲಿ ತಿಗಣೆ ಕಾಟ ವಿಪರೀತವಾಗಿದ್ದು, ಈ ಕುರಿತಾದ ಫೋಟೋ, ವಿಡಿಯೋಗಳನ್ನು ಜನರು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡುತ್ತಿದ್ದಾರೆ.

VISTARANEWS.COM


on

Paris facing bed bugs and France government is trying to tackle crisis
Koo

ಪ್ಯಾರಿಸ್: ಫ್ರಾನ್ಸ್ (France) ರಾಜಧಾನಿ ಪ್ಯಾರಿಸ್ (Paris City) ತನ್ನ ಐಫೆಲ್ ಟವರ್, ಚಾಂಪ್ಸ್-ಎಲಿಸೀಸ್ ಮತ್ತು ಲೌವ್ರೆ ಮ್ಯೂಸಿಯಂ ಸೇರಿದಂತೆ ಇನ್ನ ಅನೇಕ ಐತಿಹಾಸಿಕ ಹೆಗ್ಗುರುತಗಳಿಗಾಗಿ ಪ್ರಸಿದ್ಧಿಯಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ಪ್ಯಾರಿಸ್ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ಈ ನಗರದಲ್ಲಿ ಎಲ್ಲೆಂದರಲ್ಲಿ ಕಂಡು ಬರುತ್ತಿರುವ ತಿಗಣೆಗಳಿಂದ (Bed Bugs) ಜನರು ಭಾರೀ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ, ತಿಗಣೆಗಳ ನಿರ್ಮೂಲನಕ್ಕಾಗಿ ಫ್ರಾನ್ಸ್ ಸರ್ಕಾರವು (France Government) ಸಮರವನ್ನೇ ಸಾರಿದೆ(Viral News).

ಹೈಸ್ಪೀಡ್ ರೈಲುಗಳು, ಬಸ್‌ಗಳು, ಸಿನಿಮಾ ಥಿಯೇಟರ್‌ಗಳು, ಚಾರ್ಲ್ಸ್ ಡೇ ಗೌಲ್ ವಿಮಾನ ನಿಲ್ದಾಣ ಸೇರಿದಂತೆ ನಗರದ ಬಹುತೇಕ ತಿಗಣೆ ಕಾಟದ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ಯಾರಿಸ್ ಜನರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಫ್ರಾನ್ಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಫ್ರಾನ್ಸ್ ಸರ್ಕಾರ ಈಗ ತಿಗಣೆ ಸಂಹಾರಕ್ಕೆ ಮುಂದಾಗಿದೆ. ಫ್ರಾನ್ಸ್ ಸಾರಿಗೆ ಸಚಿವ ಕ್ಲೆಮೆಂಟ್ ಬ್ಯೂನ್ ಅವರು, ಸಾರ್ವಜನಿಕ ಸಾರಿಗೆ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಸಲಿದ್ದೇನೆ. ಈ ವೇಳೆ, ತಿಗಣೆಗಳ ಸಮಸ್ಯೆಯನ್ನು ಬಗೆಹರಿಸುವ ಕುರಿತು ಚರ್ಚಿಸಲಾಗುವುದು. ಅಲ್ಲದೇ, ಪ್ರಯಾಣಿಕರಿಗೆ ತಿಗಣೆ ಕಾಟದಿಂದ ತಪ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಫ್ರಾನ್ಸ್ ಸರ್ಕಾರ ಕೈಗೊಳ್ಳಲಿದೆ ಎಂಬ ಭರವಸೆ ನೀಡಿದ್ದಾರೆ ಎಂದು ಫ್ರಾನ್ಸ್ 24 ವರದಿ ಮಾಡಿದೆ.

ತಿಗಣೆ ಸಂವಹಾರ ಮಾಡುವುದಕ್ಕಾಗಿಯೇ ಮೀಸಲಾದ ಕಾರ್ಯಪಡೆಯನ್ನು ರಚಿಸುವ ಮೂಲಕ ಜನರ ನೆರವಿಗೆ ಧಾವಿಸಬೇಕು ಎಂದು ಪ್ಯಾರಿಸ್ ಸಿಟಿ ಹಾಲ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಒತ್ತಾಯಿಸಿದೆ. ಫ್ರೆಂಚ್ ಸಾರಿಗೆ ಪೂರೈಕೆದಾರರು ಇತ್ತೀಚೆಗೆ ಈ ತಿಗಣೆಗಳು ಕಂಡು ಬಂದಿಲ್ಲ ವಾಸ್ತವದ ನಡುವೆಯೂ ಅವುಗಳ ಬಗ್ಗೆ ಎಚ್ಚರಿಕೆ ವಹಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Viral News: 163 ಇಲಿ ಹಿಡಿಯಲು 69 ಲಕ್ಷ ರೂ. ವೆಚ್ಚ ಮಾಡಿದ ರೈಲ್ವೆ ಇಲಾಖೆ! ಭ್ರಷ್ಟಾಚಾರ ಎಂದು ಕಿಡಿಕಾರಿದ ಕಾಂಗ್ರೆಸ್

ಪ್ಯಾರಿಸ್ ಮೆಟ್ರೋ ಕಾರ್ಯನಿರ್ವಹಣೆ ಮಾಡುವ ಆರ್‌ಎಟಿಪಿ, ಪ್ರತಿಯೊಂದು ಅಂಶವನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆದರೆ, ಕಳೆದ ಕೆಲವು ದಿನಗಳಿಂದ ನಮ್ಮ ಉಪಕರಣಗಳಲ್ಲಿ ತಿಗಣೆಗಳ ಕುರಿತಾದ ಯಾವುದೇ ಸಾಬೀತಾದ ಪ್ರಕರಣಗಳು ದಾಖಲಾಗಿಲ್ಲ ಎಂದು ಸಿಎನ್ಎನ್‌ಗೆ ತಿಳಿಸಿದೆ.

ಮನೆಗಳಲ್ಲಿ ತಿಗಣೆ ಹೆಚ್ಚಾಗುವ ಸಂಭವಗಳಿವೆ. ತ್ವರಿತಗತಿಯಲ್ಲಿ ತಿಗಣೆಗಳು ಹೆಚ್ಚಾಗುತ್ತಿರುವ ಕುರಿತು ಅಗತ್ಯವಿರುವ ಎಲ್ಲ ಸಂಗತಿಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಪ್ರಯಾಣ, ಹಂಚಿಕೊಳ್ಳುವ ವಸತಿ ವ್ಯವಸ್ಥೆ ಸೇರಿದಂತೆ ಕೆಲವು ಸಂಗತಿಗಳು ತಿಗಣೆಗಳ ಸಮಸ್ಯೆ ಕಾರಣವಾಗಿರಬಹುದು ಎಂದು ANSESನ ಸಾಮಾಜಿಕ ವಿಜ್ಞಾನ, ಅರ್ಥಶಾಸ್ತ್ರ ಮತ್ತು ಸಮಾಜ ವಿಭಾಗದ ಉಪ ನಿರ್ದೇಶಕರಾದ ಕರೀನ್ ಫಿಯೋರ್ ಅವರು ತಿಳಿಸಿದ್ದಾರೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಪ್ರಮುಖ ಸುದ್ದಿ

Nobel Prize 2023: ಅಗೋಸ್ಟಿನಿ, ಕ್ರೌಸ್ಟ್, ಎಲ್‌’ಹುಲ್ಲಿಯರ್‌ಗೆ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ

Nobel Prize 2023: ಫ್ರಾನ್ಸ್, ಹಂಗೇರಿ, ಸ್ವೀಡನ್‌ ಹಾಗೂ ಆಸ್ಟ್ರಿಯಾದ ಮೂರು ವಿಜ್ಞಾನಿಗಳಿಗೆ ಭೌತಶಾಸ್ತ್ರ ನೊಬೆಲ್ ಪುರಸ್ಕಾರವನ್ನು ಸೋಮವಾರ ಪ್ರಕಟಿಸಲಾಯಿತು.

VISTARANEWS.COM


on

Pierre Agostini, Ferenc Krausz And Anne L' Huillier gets Nobel Prize 2023 for physics
Koo

ನವದೆಹಲಿ: 2023ರ ಸಾಲಿನ ನೊಬೆಲ್ ಪ್ರಶಸ್ತಿ (Nobel Prize 2023) ಘೋಷಣೆಯಾಗುತ್ತಿದ್ದು, ಫ್ರಾನ್ಸ್‌ನ ಪಿಯರೆ ಅಗೋಸ್ಟಿನಿ(Pierre Agostini), ಹಂಗೇರಿ-ಆಸ್ಟ್ರಿಯಾದ ಫೆರೆಂಕ್ ಕ್ರೌಸ್ಟ್ (Ferenc Krausz) ಮತ್ತು ಫ್ರಾನ್ಸ್-ಸ್ವೀಡನ್‌ನ ಆನ್ನೆ ಎಲ್’ಹುಲ್ಲಿಯರ್ (Anne L’ Huillier) ವಿಜ್ಞಾನಿಗಳಿಗೆ ಸೋಮವಾರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ವಸ್ತುಗಳಲ್ಲಿನ ಎಲೆಕ್ಟ್ರಾನ್ ಡೈನಾಮಿಕ್ಸ್ ಅಧ್ಯಯನಕ್ಕಾಗಿ ಬೆಳಕಿನ ಅಟೊಸೆಕೆಂಡ್ ಪಲ್ಸ್ ಅನ್ನು ಉತ್ಪಾದಿಸುವ ಪ್ರಾಯೋಗಿಕ ವಿಧಾನಗಳಿಗಾಗಿ ಈ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ನೊಬೆಲ್ ಪ್ರಶಸ್ತಿ ನೀಡುವ ಸಂಸ್ಥೆ ತಿಳಿಸಿದೆ.

ನಿನ್ನೆಯಷ್ಟೇ ವೈದ್ಯಕೀಯ ಸಂಶೋಧನೆಗಾಗಿ ಕಟಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ತ್ವರಿತ ಕೋವಿಡ್ ವ್ಯಾಕ್ಸಿನ್ (Covid Vaccine) ‌ತಯಾರಿಕೆಗೆ ದಾರಿ ಮಾಡಿಕೊಟ್ಟ ಮೆಂಸೆಂಜರ್ ಆರ್‌ಎನ್ಎ(mRNA) ತಂತ್ರಜ್ಞಾನದ ಕೆಲಸಕ್ಕಾಗಿ ಕಟಲಿನ್ ಕರಿಕೊ (Katalin Kariko) ಮತ್ತು ಡ್ರೂ ವೈಸ್‌ಮನ್ (Drew Weissman) ಅವರಿಗೆ ವೈದ್ಯಕೀಯ (Medicine) ನೊಬೆಲ್ ಪುರಸ್ಕಾರ ಲಭಿಸಿದೆ(Nobel Prize 2023). ಆಧುನಿಕ ಕಾಲದ ಮಾನವ ಆರೋಗ್ಯಕ್ಕೆ ದೊಡ್ಡ ಬೆದರಿಕೆಯ ಸಮಯದಲ್ಲಿ ಲಸಿಕೆ ಅಭಿವೃದ್ಧಿಗೆ ಅಭೂತಪೂರ್ವ ಕಾಣಿಕೆಯನ್ನು ಮೆಂಸೆಂಜರ್ ಆರ್‌ಎನ್ಎ ನೀಡಿದೆ ಎಂದು ತೀರ್ಪುಗಾರರ ಸಮಿತಿ ಹೇಳಿದೆ.

ಈ ಸುದ್ದಿಯನ್ನೂ ಓದಿ: Nobel Peace Prize: 20ನೇ ಶತಮಾನದ ಮೇರು ನಾಯಕ ‘ಮಹಾತ್ಮ ಗಾಂಧಿ’ಗೇಕೆ ಸಿಗಲಿಲ್ಲ ನೊಬೆಲ್ ಪ್ರಶಸ್ತಿ?

ವೈದ್ಯಕೀಯ ಕ್ಷೇತ್ರದಲ್ಲಿ ನೊಬೆಲ್ ಪುರಸ್ಕಾರಕ್ಕೆ ಪರಿಗಣಿಸುವಾಗ ದಶಕಗಳ ಹಳೆಯ ಸಂಶೋಧನೆಯನ್ನು ಗೌರವಿಸುವ ತನ್ನ ಸಂಪ್ರದಾಯವನ್ನು ನೊಬೆಲ್ ಸಮಿತಿ ಈ ಬಾರಿ ಕೈ ಬಿಟ್ಟಿದೆ. ಬಹುಮಾನ ವಿಜೇತ ವಿಜ್ಞಾನವು 2005ರ ಹಿಂದಿನದ್ದಾರೂ ಎಂಆರ್‌ಎನ್‌ಎ ತಂತ್ರಜ್ಞಾನವನ್ನು ಬಳಸಿಕೊಂಡು ಫೈಜರ್/ಬಯೋಎನ್‌ಟೆಕ್ ಮತ್ತು ಮಾಡರ್ನಾ ಕೋವಿಡ್ ಲಸಿಕೆಗಳನ್ನು ತಯಾರಿಸಿದವು.

ಕರಿಕೊ ಅವರು ಹಂಗ್ರಿ ದೇಶದವರು ಮತ್ತು ವೈಸ್‌ಮನ್ ಅವರು ಅಮೆರಿಕದವರು. ಯುನಿರ್ವಸಿಟಿ ಆಫ್ ಪೆನ್ಸಿಲ್ವೇನಿಯಾ ಇಬ್ಬರು ಕೊಲಿಗ್ಸ್ ಆಗಿದ್ದವು. ತಮ್ಮ ಸಂಶೋಧನೆಗಳಿಗಾಗಿ 2021ರಲ್ಲಿ ಲಸ್ಕರ್ ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
dina bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Vivek Ramaswamy offering rs 80 lakh to nanny Says media report
ಪ್ರಮುಖ ಸುದ್ದಿ6 hours ago

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

MLC TA Sharavana
ಬೆಂಗಳೂರು6 hours ago

TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ

Justin Trudeau
ದೇಶ7 hours ago

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

Netherlands cricket team
ಕ್ರಿಕೆಟ್7 hours ago

ICC World Cup 2023 : ವಿಶ್ವ ಕಪ್​ನಲ್ಲಿ ಆಡಲಿರುವ ನೆದರ್ಲ್ಯಾಂಡ್ಸ್​​ ತಂಡದ ಬಲವೇನು? ದೌರ್ಬಲ್ಯವೇನು?

Modi and KTR
ದೇಶ7 hours ago

ಎನ್‌ಡಿಎಗೆ ಸೇರಿಸಿಕೊಳ್ಳಿ ಎಂದಿದ್ದ ಕೆಸಿಆರ್; ಮೋದಿ! ಬಿಜೆಪಿ ಜತೆ ಹೋಗಲು ನಮಗೇನು ಹುಚ್ಚು ನಾಯಿ ಕಚ್ಚಿದೆಯಾ; ಕೆಟಿಆರ್

Child dies
ಕರ್ನಾಟಕ7 hours ago

Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು

MB Patil visits america
ಕರ್ನಾಟಕ8 hours ago

MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್

Top 10 news
ಟಾಪ್ 10 ನ್ಯೂಸ್8 hours ago

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

The maintenance train finally lifted Metro services as usual
ಕರ್ನಾಟಕ14 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ15 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ2 days ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ3 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

ಟ್ರೆಂಡಿಂಗ್‌