Video | ಮಹಿಳೆಯ ಕಣ್ಣುಗಳಲ್ಲಿ ಸಿಕ್ಕಿಬಿದ್ದಿದ್ದ 23 ಕಾಂಟ್ಯಾಕ್ಟ್​ ಲೆನ್ಸ್​​ಗಳನ್ನು ಹೊರತೆಗೆದ ವೈದ್ಯರು !; ಇದು ಹೇಗಾಯ್ತು? - Vistara News

ವಿದೇಶ

Video | ಮಹಿಳೆಯ ಕಣ್ಣುಗಳಲ್ಲಿ ಸಿಕ್ಕಿಬಿದ್ದಿದ್ದ 23 ಕಾಂಟ್ಯಾಕ್ಟ್​ ಲೆನ್ಸ್​​ಗಳನ್ನು ಹೊರತೆಗೆದ ವೈದ್ಯರು !; ಇದು ಹೇಗಾಯ್ತು?

ಮಹಿಳೆ ವಯಸ್ಸಾದವರು. ಕಣ್ಣು ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ಕಾಂಟ್ಯಾಕ್ಟ್​ ಲೆನ್ಸ್​ ಧರಿಸುತ್ತಿದ್ದರು. ಆದರೆ 23 ಲೆನ್ಸ್​​ಗಳು ಕಣ್ಣಲ್ಲಿ ಸಿಕ್ಕಿಬಿದ್ದಿವೆ. ಲೆನ್ಸ್​ ಧರಿಸುವವರು ಈ ತಪ್ಪು ಮಾಡಬೇಡಿ..

VISTARANEWS.COM


on

Doctor removes 23 contact lenses from eyes of Woman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಣ್ಣಿನ ಸಮಸ್ಯೆ ಇರುವವರು, ಅಂದರೆ ದೂರದೃಷ್ಟಿ, ಸಮೀಪ ದೃಷ್ಟಿ ದೋಷ ಇದ್ದು ಕಣ್ಣು ಸರಿಯಾಗಿ ಕಾಣದೆ ಇರುವವರು ಕನ್ನಡಕ ಧರಿಸುವುದು ಸಾಮಾನ್ಯ. ಈಗ ಅನೇಕರು ಕನ್ನಡಕಕ್ಕೆ ಪರ್ಯಾಯವಾಗಿ ಕಾಂಟ್ಯಾಕ್ಟ್​ ಲೆನ್ಸ್​​ಗಳನ್ನು ಬಳಸುತ್ತಾರೆ. ಲೆನ್ಸ್​​ಗಳು ಮುಖದ ಸೌಂದರ್ಯ ಹಾಳು ಮಾಡುವುದಿಲ್ಲ, ತೊಂದರೆ ಕೊಡುವುದಿಲ್ಲ, ಕನ್ನಡಕಕ್ಕಿಂತಲೂ ಇದೇ ಉತ್ತಮ ಎಂಬುದು ಅನೇಕರ ಅಭಿಪ್ರಾಯ. ಆದರೆ ಹೀಗೆ ಲೆನ್ಸ್​ ಬಳಸುವವರು ಅದನ್ನು ಸರಿಯಾಗಿ ಗಮನಕೊಟ್ಟು ನಿಭಾಯಿಸಬೇಕು. ಅದರ ಬಾಳಿಕೆ ಎಷ್ಟು ಅವಧಿಯೋ, ಅಷ್ಟೇ ಅವಧಿಗೆ ಬಳಸಬೇಕು. ಹಾಗೇ ಯಾವ ಕಾರಣಕ್ಕೂ ನಿದ್ದೆ ಮಾಡುವಾಗ ಲೆನ್ಸ್​ ಹಾಕಿಕೊಂಡೇ ನಿದ್ದೆ ಮಾಡಬಾರದು. ಹಾಗೊಮ್ಮೆ ಮಾಡಿದರೆ ಈ ಮಹಿಳೆಗೆ ಆದ ಸ್ಥಿತಿಯೇ ಆಗಬಹುದು..!

California Eye Associates ಎಂಬ ಇನ್​ಸ್ಟಾಗ್ರಾಂ ಪೇಜ್​​ನಲ್ಲಿ ವೈದ್ಯರೊಬ್ಬರು ಒಂದು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಅವರು ಮಹಿಳೆಯೊಬ್ಬರ ಕಣ್ಣಿನಿಂದ 23 ಕಾಂಟ್ಯಾಕ್ಟ್​ ಲೆನ್ಸ್​​ಗಳನ್ನು ಹೊರತೆಗೆಯುವುದನ್ನು ನೋಡಬಹುದು. ಈ ದೃಶ್ಯ ನೋಡುತ್ತಿದ್ದರೆ ಮೈ ಜುಂ ಎನ್ನುತ್ತದೆ. ಆ ಲೆನ್ಸ್​ಗಳೆಲ್ಲ ಆಕೆಯ ಕಣ್ಣಿನ ಮೇಲ್ಭಾಗಕ್ಕೆ ಹೋಗಿ ಸೇರಿಕೊಂಡಿದ್ದವು. ಅದನ್ನು ವೈದ್ಯರು ಒಂದೊಂದಾಗಿ ತೆಗೆದಿದ್ದಾರೆ. ಈ ವಿಡಿಯೋ ಶೇರ್ ಮಾಡಿಕೊಂಡ ವೈದ್ಯರು ‘ಲೆನ್ಸ್​ ಬಳಸುವವರು ಯಾವ ಕಾರಣಕ್ಕೂ ರಾತ್ರಿ ಮಲಗುವಾಗ ಅದನ್ನು ಹಾಕಿಕೊಂಡೇ ನಿದ್ದೆ ಮಾಡಬೇಡಿ’ ಎಂದು ಎಚ್ಚರಿಕೆಯ ಕ್ಯಾಪ್ಷನ್​ ಬರೆದಿದ್ದಾರೆ.

ಈ ಮಹಿಳೆ ಕಣ್ಣಿಗೆ ಲೆನ್ಸ್​ ಧರಿಸುತ್ತಿದ್ದರು. ಆದರೆ ರಾತ್ರಿ ಅದನ್ನು ತೆಗೆಯುತ್ತಿರಲಿಲ್ಲ. ಹಾಗೇ ನಿದ್ದೆ ಮಾಡಿ, ಬೆಳಗ್ಗೆ ಎದ್ದು ಮತ್ತೆ ಹೊಸದೊಂದು ಲೆನ್ಸ್​ ಹಾಕಿಕೊಳ್ಳುತ್ತಿದ್ದರು. ತಿಂಗಳು ಕಾಲ ಇದೇ ಮುಂದುವರಿದೆ. ಲೆನ್ಸ್​​ಗಳೆಲ್ಲ ಕಣ್ಣಿನ ಗುಡ್ಡೆ ಮೇಲ್ಭಾಗಕ್ಕೆ ಹೋಗಿ, ಒಂದಕ್ಕೊಂದು ಅಂಟಿಕೊಂಡು ಕುಳಿತಿದ್ದವು. ಇದರಿಂದಾಗಿ ಅವರಿಗೆ ನೋವು ಬರಲು ಪ್ರಾರಂಭವಾಗಿತ್ತು. ಲೆನ್ಸ್​​ಗಳನ್ನು ತೆಗೆಯಲು ನಾನು ಅತಿ ಸೂಕ್ಷ್ಮವಾದ ಉಪಕರಣ ಬಳಸಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಕಾಂಟ್ಯಾಕ್ಟ್​ ಲೆನ್ಸ್​ಗಳು ಸಾಮಾನ್ಯವಾಗಿ ನೀಲಿ ಬಣ್ಣದಲ್ಲಿ ಇರುತ್ತವೆ. ನಾನು ಅದನ್ನು ಹೊರತೆಗೆಯಬೇಕಾದರೆ ಫ್ಲೋರಾಕ್ಸ್​ ಎಂಬ ವಿಶೇಷ ಸ್ಟೇನ್​ (Stain) ಬಳಸಿದ್ದೇನೆ. ಹಾಗಾಗಿ ಅವು ಹಸಿರು ಬಣ್ಣಕ್ಕೆ ತಿರುಗಿದ್ದವು ಎಂದೂ ವೈದ್ಯರು ತಿಳಿಸಿದ್ದಾರೆ.

ಹೀಗೆ ಮಹಿಳೆಯ ಕಣ್ಣಿನಿಂದ ಕಾಂಟ್ಯಾಕ್ಟ್ ಲೆನ್ಸ್​ ತೆಗೆಯುವ ವಿಡಿಯೊವನ್ನು ನೋಡಿ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ‘ನಾನೂ ಲೆನ್ಸ್​​ಗಳನ್ನು ಧರಿಸುತ್ತೇನೆ. ಆದರೆ ನನ್ನ ಕಣ್ಣಲ್ಲಿ ಅದು ಇದೆ ಎನ್ನುವುದು ನನಗೆ ಸದಾ ನೆನಪಿನಲ್ಲಿ ಇರುತ್ತದೆ. ಆದರೆ ಈ ಮಹಿಳೆಗೆ ಏನಾಗಿದೆ? 23 ಲೆನ್ಸ್​ಗಳಿದ್ದರೂ ಗೊತ್ತಾಗಲಿಲ್ಲವೇ?’ ಎಂದು ಒಬ್ಬರು ಪ್ರಶ್ನಿಸಿದ್ದಾರೆ. ‘ಇದು ಹೇಗಾಯಿತು ಎಂದು ಸರಿಯಾಗಿ ವಿವರಿಸಿ ಹೇಳಿ’ ಎಂದು ಇನ್ನೊಬ್ಬರು ಕೇಳಿದ್ದಾರೆ. ‘ಇಷ್ಟೆಲ್ಲ ನಿರ್ಲಕ್ಷ್ಯ ಮಾಡುವವರೂ ಇರುತ್ತಾರಾ?’ ಎಂದೂ ಕೇಳಿದವರು ಇದ್ದಾರೆ.

ಇದನ್ನೂ ಓದಿ: Cancer Update | ಕಣ್ಣೀರಿನಿಂದ ಕ್ಯಾನ್ಸರ್‌ ಪತ್ತೆಹಚ್ಚುವ ಲೆನ್ಸ್‌ ಅಭಿವೃದ್ಧಿ, ಹೇಗಿದರ ಕಾರ್ಯ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Viral video: ಮಧ್ಯ ಆಕಾಶದಲ್ಲಿ ಉಂಟಾದ ಘರ್ಷಣೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿತು. ಮಿಲಿಟರಿ ಹೆಲಿಕಾಪ್ಟರ್‌ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಎರಡು ಹೆಲಿಕಾಪ್ಟರ್‌ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ.

VISTARANEWS.COM


on

malasia helicopter crash viral video
Koo

ಮಲೇಷ್ಯಾ: ಮಲೇಷ್ಯಾದಿಂದ (Malasia) ವರದಿಯಾದ ದುರಂತ ಘಟನೆಯೊಂದರಲ್ಲಿ (Helicopter Crash) ಮಂಗಳವಾರ ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್‌ಗಳು ಗಾಳಿಯಲ್ಲಿ ಡಿಕ್ಕಿ (Air Accident) ಹೊಡೆದು ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಇಂದು ಬೆಳಿಗ್ಗೆ ಲುಮುಟ್‌ನಲ್ಲಿರುವ ರಾಯಲ್ ಮಲೇಷಿಯನ್ ನೇವಿ (ಆರ್‌ಎಂಎನ್) ನೆಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಸೋಶೀಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಘಟನೆಯ ವೀಡಿಯೊ (Viral video), ದುರಂತದ ಕ್ಷಣಗಳನ್ನು ತೋರಿಸಿದೆ.

ಮಧ್ಯ ಆಕಾಶದಲ್ಲಿ ಉಂಟಾದ ಘರ್ಷಣೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿತು. ಮಿಲಿಟರಿ ಹೆಲಿಕಾಪ್ಟರ್‌ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಸ್ಥಳೀಯ ಸುದ್ದಿವಾಹಿನಿಗಳ ಆರಂಭಿಕ ದೃಢೀಕೃತ ವರದಿಗಳ ಪ್ರಕಾರ, ಎರಡು ಹೆಲಿಕಾಪ್ಟರ್‌ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ.

ಎರಡೂ ಹೆಲಿಕಾಪ್ಟರ್‌ಗಳಲ್ಲಿದ್ದ ಚಾಲಕರು ತರಬೇತಿ ಪಡೆಯುತ್ತಿದ್ದವರಾಗಿದ್ದರು. ಕೆಲವು ತರಬೇತಿ ವಿದ್ಯಾರ್ಥಿಗಳು ಹಾಗೂ ತರಬೇತಿದಾರರು ಇವುಗಳಲ್ಲಿದ್ದರು. ಸ್ಥಳೀಯ ವರದಿಗಳ ಪ್ರಕಾರ, M503-3 ಮಾರಿಟೈಮ್ ಆಪರೇಷನ್ಸ್ ಹೆಲಿಕಾಪ್ಟರ್ (HOM) ಏಳು ಸಿಬ್ಬಂದಿಯನ್ನು ಹೊಂದಿತ್ತು. ಆದರೆ ಇನ್ನೊಂದು, M502-6, ಮೂರು ಸದಸ್ಯರನ್ನು ಹೊಂದಿತ್ತು. ಎರಡೂ ಹೆಲಿಕಾಪ್ಟರ್‌ಗಳು ಮೇ 3-5ರಿಂದ ನಡೆಯಲಿರುವ ನೌಕಾಪಡೆಯ ದಿನ ಆಚರಣೆಗೆ ಸಂಬಂಧಿಸಿದ ತಾಲೀಮನ್ನು ಪಡೆಯುತ್ತಿದ್ದವು.

ಇದನ್ನೂ ಓದಿ: Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Continue Reading

ದೇಶ

Anant-Radhika Wedding: ಅನಂತ್‌ ಅಂಬಾನಿ-ರಾಧಿಕಾ ಮರ್ಚಂಟ್‌ ವಿವಾಹ ಸಮಾರಂಭಕ್ಕೆ ಸ್ಥಳ ನಿಗದಿ

Anant-Radhika Wedding: ಕಳೆದ ತಿಂಗಳು ಅದ್ಧೂರಿಯಾಗಿ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮ ನಡೆದಿತ್ತು. ಜುಲೈಯಲ್ಲಿ ಇವರ ವಿವಾಹ ನಡೆಯಲಿದೆ. ಇದೀಗ ವಿವಾಹ ನಡೆಯಲಿರುವ ಸ್ಥಳದ ಮಾಹಿತಿ ತಿಳಿದು ಬಂದಿದೆ. ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ನಲ್ಲಿ ಈ ಪ್ರತಿಷ್ಠಿತ, ವೈಭವದ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Anant-Radhika Wedding
Koo

ನವದೆಹಲಿ: ಇತ್ತೀಚೆಗೆ ಅದ್ಧೂರಿಯಾಗಿ ವಿವಾಹಪೂರ್ವ ಕಾರ್ಯಕ್ರಮ ಆಚರಿಸಿದ್ದ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಜುಲೈಯಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇದೀಗ ಈ ಪ್ರತಿಷ್ಠಿತ ವಿವಾಹ ನಡೆಯುವ ಸ್ಥಳದ ಮಾಹಿತಿ ಬಹಿರಂಗಗೊಂಡಿದೆ. ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ (Stoke Park estate)ನಲ್ಲಿ ನಡೆಯಲಿರುವ ವೈಭವದ ಸಮಾರಂಭದಲ್ಲಿ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ವಿವಾಹವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ (Anant-Radhika Wedding).

ಈಗಾಗಲೇ ಬಾಲಿವುಡ್‌ನ ಖ್ಯಾತ ಕಲಾವಿದರಿಗೆಲ್ಲ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ವರದಿಯೊಂದು ಹೇಳಿದೆ. ಮದುವೆಯ ಸಿದ್ಧತೆಗಳೆಲ್ಲ ಈಗಾಗಲೇ ಆರಂಭವಾಗಿದ್ದು, ಅನಂತ್‌ ಅವರ ತಾಯಿ ನೀತಾ ಅಂಬಾನಿ ಎಲ್ಲದರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಿ ವೆಡ್ಡಿಂಗ್‌ ಕಾರ್ಯಕ್ರಮವನ್ನೂ ನೀತಾ ಅಂಬಾನಿ ಅವರೇ ಯಶಸ್ವಿಯಾಗಿ ನಿರ್ವಹಿಸಿದ್ದರು.

ಸ್ಟೋಕ್ ಪಾರ್ಕ್‌ನಲ್ಲಿ ಆಯೋಜಿಸಲಾಗುವ ಈ ಸಮಾರಂಭದ ಥೀಮ್ ಇನ್ನೂ ಬಹಿರಂಗಗೊಂಡಿಲ್ಲ. ಇಲ್ಲಿ ಕಾಕ್‌ಟೈಲ್‌ ಅಥವಾ ಸಂಗೀತ್ ನೈಟ್ ಆಯೋಜಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ಅನಂತ್ ಮತ್ತು ರಾಧಿಕಾ ದುಬೈಯ ಎರಡು ಪ್ರತಿಷ್ಠಿತ ಮಾಲ್‌ಗಳಲ್ಲಿ ಬಿಗಿ ಭದ್ರತೆಯ ನಡುವೆ ಶಾಪಿಂಗ್ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು.

ಅದ್ಧೂರಿ ಪ್ರೀ ವೆಡ್ಡಿಂಗ್‌

ಗುಜರಾತ್‌ನ ಜಾಮ್‌ನಗರದಲ್ಲಿ ಕಳೆದ ತಿಂಗಳು ಅದ್ಧೂರಿ ಪ್ರೀ ವೆಡ್ಡಿಂಗ್‌ ಸಮಾರಂಭ ಆಯೋಜಿಸಲಾಗಿತ್ತು. ಅಂದಾಜು 12,00 ಕೋಟಿ ರೂ.ಗಳಲ್ಲಿ ಈ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ಗಣ್ಯರ ಉಪಸ್ಥಿತಿ, ಬಾಲಿವುಡ್‌ ನಟ-ನಟಿಯರ ಹಾಡು, ನೃತ್ಯ, ಮೋಜು-ಮಸ್ತಿಯನ್ನು ಆಯೋಜಿಸಲಾಗಿತ್ತು. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಅನಂತ್ ಮತ್ತು ರಾಧಿಕಾ ಅವರ ವಿವಾಹ ನಿಶ್ಚಿತಾರ್ಥ ಆಪ್ತರ ಸಮ್ಮುಖದಲ್ಲಿ 2023ರ ಜನವರಿಯಲ್ಲಿ ಮುಂಬೈಯಲ್ಲಿ ಸಾಂಪ್ರದಾಯಿಕವಾಗಿ ನಡೆದಿತ್ತು. ವಿವಾಹ ನಡೆಯಲಿರುವ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಸುಮಾರು 900 ವರ್ಷಗಳ ಇತಿಹಾಸ ಹೊಂದಿದ್ದು, ಈ ಐತಿಹಾಸಿಕ ಸ್ಥಳದಲ್ಲಿ ಬಹಳ ವಿಶೇಷ ರೀತಿಯಲ್ಲೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಧು ಮೂಲಗಳು ಹೇಳಿವೆ.

ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್‌ ಅಂಬಾನಿ- ರಾಧಿಕಾ ಮದುವೆ ವಿಶೇಷ!

ಜಾಮ್‌ನಗರದ ವಿಶೇಷತೆ

ಅನಂತ್ ಮತ್ತು ರಾಧಿಕಾ ಅವರ ವಿವಾಹಪೂರ್ವ ಸಮಾರಂಭ ನಡೆದ ಜಾಮ್‌ನಗರಕ್ಕೂ ಅಂಬಾನಿ ಕುಟುಂಬಕ್ಕೂ ಬಿಡಿಸಲಾರದ ನಂಟಿದೆ. “ಜಾಮ್‌ನಗರದಲ್ಲೇ ವಿವಾಹ ಪೂರ್ವ ಕಾರ್ಯಕ್ರಮ ಆಯೋಜಿಸಲು ಬೇರೆ ದೇಶಗಳ ಬದಲು ದೇಶದಲ್ಲಿಯೇ ಮದುವೆಯಾಗಿ (Wed In India) ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ನನಗೆ ಸ್ಫೂರ್ತಿಯಾಯಿತು. ಇನ್ನು, ಜಾಮ್‌ನಗರವು ನನ್ನ ಅಜ್ಜಿಯ ಜನ್ಮಸ್ಥಳವಾಗಿದೆ. ಅಷ್ಟೇ ಅಲ್ಲ, ನನ್ನ ಅಜ್ಜ ಧೀರೂಭಾಯಿ ಅಂಬಾನಿ ಹಾಗೂ ಅಪ್ಪ ಮುಕೇಶ್‌ ಅಂಬಾನಿ ಅವರು ಜಾಮ್‌ನಗರದಿಂದಲೇ ಉದ್ಯಮ ಆರಂಭಿಸಿದ್ದಾರೆ. ಹಾಗಾಗಿ, ಜಾಮ್‌ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಅನಂತ್‌ ಈ ಹಿಂದೆ ತಿಳಿಸಿದ್ದರು.

Continue Reading

ದೇಶ

Everest Spices: ಸಿಂಗಾಪುರ ಬಳಿಕ ಹಾಂಕಾಂಗ್‌ನಲ್ಲೂ ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ ಬ್ಯಾನ್!

Everest Spices: ಮಸಾಲಾ ಉತ್ಪನ್ನಗಳಿಗಾಗಿ ಜಾಗತಿಕವಾಗಿ ಹೆಸರು ಗಳಿಸಿರುವ ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಕಂಪನಿಗಳು ಈಗ ನಕಾರಾತ್ಮಕವಾಗಿ ಸುದ್ದಿಯಾಗುತ್ತಿವೆ. ಸಿಂಗಾಪುರ ಬಳಿಕ ಹಾಂಕಾಂಗ್‌ಲ್ಲೂ ಎವರೆಸ್ಟ್‌ ಹಾಗೂ ಎಂಡಿಎಚ್‌ ಕಂಪನಿಯ ನಾಲ್ಕು ಮಸಾಲಾ ಪದಾರ್ಥಗಳ ಮಾರಾಟ ನಿಷೇಧಿಸಿದ್ದು, ಕಂಪನಿಗಳು ಈಗ ಸಂಕಷ್ಟಕ್ಕೆ ಸಿಲುಕಿವೆ.

VISTARANEWS.COM


on

Everest Spices
Koo

ಸಿಟಿ ಆಫ್‌ ವಿಕ್ಟೋರಿಯಾ: ಸಿಂಗಾಪುರದಲ್ಲಿ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ (Spices) ತಯಾರಕ ಎವರೆಸ್ಟ್‌ನ (Everest Spices) ಫಿಶ್ ಕರಿ ಮಸಾಲಾ (Fish Curry Masala) ಮಾರಾಟ ನಿಷೇಧಗೊಳಿಸಿದ ಬೆನ್ನಲ್ಲೇ, ಹಾಂಕಾಂಗ್‌ನಲ್ಲೂ (Hong Kong) ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹಾಗಾಗಿ, ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ. ಇದರ ಪರಿಣಾಮ ಭಾರತದ ಉತ್ಪನ್ನಗಳ ಮೇಲೂ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿಸಲಾಗಿದೆ.

“ಎಂಡಿಎಚ್‌ನ ಮೂರು ಹಾಗೂ ಎವರೆಸ್ಟ್‌ನ ಒಂದು ಉತ್ಪನ್ನದ ಸ್ಯಾಂಪಲ್‌ ಪಡೆದು ಪರಿಶೀಲನೆ ನಡೆಸಲಾಗಿದೆ. ಇವುಗಳಲ್ಲಿ ಪೆಸ್ಟಿಸೈಡ್‌ ಎಥಿಲೀನ್‌ ಆಕ್ಸೈಡ್‌ ಪತ್ತೆಯಾಗಿದೆ. ಈ ಆಕ್ಸೈಡ್‌ ಮನುಷ್ಯನು ಸೇವಿಸಲು ಅಪಾಯಕಾರಿಯಾಗಿದೆ. ಕ್ಯಾನ್ಸರ್‌ ಕಾರಕ ಕಾರ್ಸಿನೋಜೆನಿಕ್‌ ರಾಸಾಯನಿಕವೂ ಪತ್ತೆಯಾಗಿದೆ. ಹಾಗಾಗಿ, ದೇಶದ ಮಾರಾಟಗಾರರಿಗೆ ಈ ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಮಳಿಗೆಗಳಲ್ಲಿ ಇರಿಸದಂತೆ ಸೂಚಿಸಲಾಗಿದೆ” ಎಂಬುದಾಗಿ ಹಾಂಕಾಂಗ್‌ನ ಸೆಂಟರ್‌ ಫಾರ್‌ ಫುಡ್‌ ಸೇಫ್ಟಿ ತಿಳಿಸಿದೆ. ಇವುಗಳನ್ನು ನಿಷೇಧಿಸಿ ಏಪ್ರಿಲ್‌ 5ರಂದೇ ಆದೇಶ ಹೊರಡಿಸಿದೆ.

ಕ್ಯಾನ್ಸರ್‌ ಕುರಿತು ಸಂಶೋಧನೆ ಮಾಡುವ ಅಂತಾರಾಷ್ಟ್ರೀಯ ಸಂಸ್ಥೆಯೇ ಎಥಿಲೀನ್‌ ಆಕ್ಸೈಡ್‌ನ ಅಪಾಯದ ಕುರಿತು ವರದಿ ನೀಡಿದೆ. ಇದು ಕ್ಯಾನ್ಸರ್‌ ಕಾರಕ ಎಂಬುದಾಗಿ ಜಾಗತಿಕ ಸಂಸ್ಥೆ ತಿಳಿಸಿದೆ. ಹಾಗಾಗಿ, ನಾಲ್ಕೂ ಉತ್ಪನ್ನಗಳ ಸಂಗ್ರಹ, ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಹಾಂಕಾಗ್‌ ತಿಳಿಸಿದೆ. ಅನುಮತಿ ನೀಡಿದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿ ಇಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಸಿಂಗಾಪುರ ಕೂಡ ಎವರೆಸ್ಟ್‌ ಫಿಶ್‌ ಕರಿ ಮಸಾಲಾ ನಿಷೇಧಿಸುವಾಗ ತಿಳಿಸಿತ್ತು.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Continue Reading

ಪ್ರಮುಖ ಸುದ್ದಿ

PM Narendra Modi: ಮಕ್ಕಳಾಗಿ ವಿಶ್ವನಾಯಕರು! ಎಐ ಮೋಡಿಯಲ್ಲಿ ನರೇಂದ್ರ ಮೋದಿ ನೋಡಿ

ಎಐ ಮೂಲಕ ರಚಿಸಲಾದ ನಾಯಕರ ಚಿತ್ರಗಳ ವೀಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೋಟೋ ಸಹಿತ ಇದೆ.

VISTARANEWS.COM


on

world leaders as babies narendra modi
Koo

ಹೊಸದಿಲ್ಲಿ: ವಿಶ್ವ ನಾಯಕರು ಮಕ್ಕಳಾಗಿ (World leaders as babies) ಹೇಗೆ ಕಾಣಬಹುದು ಎಂಬ ಕಲ್ಪನೆಯನ್ನು ಕೃತಕ ಬುದ್ಧಿಮತ್ತೆ (AI) ಮೂಲಕ ಸಾಕಾರಗೊಳಿಸಿಕೊಂಡು ನೋಡಿದ ಒಂದು ಪ್ರಯತ್ನ ಇದೀಗ ವೈರಲ್‌ (viral video) ಆಗಿದೆ. ಎಐ ಮೂಲಕ ರಚಿಸಲಾದ ನಾಯಕರ ಚಿತ್ರಗಳ ವೀಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೋಟೋ ಸಹಿತ ಇದೆ.

ಪಿಎಂ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬಿಡನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ರಷ್ಯನ್ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಅನೇಕರು ಇದರಲ್ಲಿ ಕಂಡುಬರುತ್ತಾರೆ. ವೀಡಿಯೊ ಈ ಚಿತ್ರಗಳನ್ನು ಒಂದೊಂದಾಗಿ ತೋರಿಸುತ್ತದೆ. ಶೀರ್ಷಿಕೆಯಲ್ಲಿ ನಾಯಕನ ಹೆಸರನ್ನು ಕೊಡಲಾಗಿದೆ. ಶೀರ್ಷಿಕೆ ಕೊಡದಿದ್ದರೂ ಆಯಾ ನಾಯಕರ ಮುಖ ನೋಡಿಯೇ ನಾವು ಊಹಿಸಬಹುದಾಗಿದೆ.

ಈ ವೀಡಿಯೊವನ್ನು “ಆಸ್ಕಿಂಗ್ AI ಟು ಡ್ರಾ ವರ್ಲ್ಡ್ ಲೀಡರ್ಸ್ ಆಸ್ ಬೇಬೀಸ್” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಪ್ಲಾನೆಟ್ AI ಇದನ್ನು ಹಂಚಿದೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್, ಫ್ರೆಂಚ್ ಅಧ್ಯಕ್ಷರನ್ನೂ ವೀಡಿಯೊ ತೋರಿಸುತ್ತದೆ. ಇಮ್ಯಾನುಯೆಲ್ ಮ್ಯಾಕ್ರನ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಪೋಪ್ ಫ್ರಾನ್ಸಿಸ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಇನ್ನಷ್ಟು ನಾಯಕರು ಇದರಲ್ಲಿ ಇದ್ದಾರೆ. ತೀರಿಹೋದ ನಾಯಕ ಜಾನ್‌ ಕೆನೆಡಿ, ಪೋಪ್ ಥರವದರೂ ಇದ್ದಾರೆ. ‌

ಮಾಸ್ಸಿಮೊ ಎಂಬ ಬಳಕೆದಾರರಿಂದ ಈ ವೀಡಿಯೊವನ್ನು ಇತ್ತೀಚೆಗೆ Xನಲ್ಲಿ ಹಂಚಿಕೊಳ್ಳಲಾಗಿದೆ. ವೀಡಿಯೊವನ್ನು ಹಂಚಿಕೊಂಡ ಖಾತೆಯ ಬಳಕೆದಾರ ಹೆಸರು @Rainmaker1973. ಶೀರ್ಷಿಕೆಯಲ್ಲಿ ಬಳಕೆದಾರರು ಹೀಗೆ ಬರೆದಿದ್ದಾರೆ: “AI ಪ್ರಕಾರ ಶಿಶುಗಳಾಗಿ ವಿಶ್ವ ನಾಯಕರು”. ಪೋಸ್ಟ್ Xನಲ್ಲಿ ವೈರಲ್ ಆಗಿದೆ. 1.45 ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಖಾತೆಯೇ 19 ಕೋಟಿಗಿಂತ ಅಧಿಕ ಫಾಲೋವರ್ಸ್‌ ಹೊಂದಿದೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

Continue Reading
Advertisement
Drought In Karnataka
ಬೆಳಗಾವಿ26 mins ago

Drought In Karnataka : ಭೀಕರ ಬರ; ಆಹಾರ ಸಿಗದೆ ಪ್ಲಾಸ್ಟಿಕ್, ನಟ್ಟು ಬೋಲ್ಟು ತಿನ್ನುತ್ತಿರುವ ಹಸುಗಳು!

Vastu Tips
ಲೈಫ್‌ಸ್ಟೈಲ್31 mins ago

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Karun Nair
ಕ್ರೀಡೆ35 mins ago

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

OM Puri
ಬಾಲಿವುಡ್57 mins ago

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

malasia helicopter crash viral video
ವೈರಲ್ ನ್ಯೂಸ್1 hour ago

Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

CSK vs LSG
ಕ್ರೀಡೆ2 hours ago

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

Bengaluru Karaga
ಬೆಂಗಳೂರು2 hours ago

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

Rohit Sharma
ಕ್ರೀಡೆ2 hours ago

Rohit Sharma: ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಬಂದ ರಾಜಸ್ಥಾನ್​ ಕೋಚ್​; ವಿಡಿಯೊ ವೈರಲ್

Amit Shah
ಕರ್ನಾಟಕ3 hours ago

Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

bolero hit 3 death road accident raichur
ರಾಯಚೂರು3 hours ago

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು18 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ19 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು22 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು24 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌