Porn Websites: ನಿಷೇಧ ಬದಲಿಗೆ ಪೋರ್ನ್ ವೆಬ್‌ಸೈಟ್ಸ್ ನಾರ್ಮಲ್ ಮಾಡಿ! ಪೋರ್ನ್‌ಹಬ್ ಮಾಲೀಕನ ಸಲಹೆ Vistara News
Connect with us

ಪ್ರಮುಖ ಸುದ್ದಿ

Porn Websites: ನಿಷೇಧ ಬದಲಿಗೆ ಪೋರ್ನ್ ವೆಬ್‌ಸೈಟ್ಸ್ ನಾರ್ಮಲ್ ಮಾಡಿ! ಪೋರ್ನ್‌ಹಬ್ ಮಾಲೀಕನ ಸಲಹೆ

ಕೆನಡಾದ ಎಥಿಕಲ್ ಕ್ಯಾಪಿಟಲ್‌ ಪಾರ್ಟ್‌ನರ್ಸ್‌ ಇತ್ತೀಚೆಗಷ್ಟೇ ಪೋರ್ನ್ ಹಬ್ ಸ್ವಾಧೀನ ಪಡಿಸಿಕೊಂಡಿದ್ದು, ಸಾಕಷ್ಟು ಕಾನೂನಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿದೆ.

VISTARANEWS.COM


on

porn websites
Koo

ನವದೆಹಲಿ: ಅಶ್ಲೀಲ ವೆಬ್‌ಸೈಟ್‌ಗಳನ್ನು (Porn Websites) ನಿಷೇಧಿಸುವ ಬದಲಿಗೆ ಲೈಂಗಿಕ ಅಭಿವ್ಯಕ್ತಿಯನ್ನು (Sexual expression) ಸರ್ಕಾರಗಳು ಹಿರಿಮೆ ಎಂದು ಭಾವಿಸಬೇಕು. ಅಲ್ಲದೇ ಅಶ್ಲೀಲತೆಯನ್ನು ಸಾಮಾನ್ಯವಾಗಿಸುವ (Porn Normal) ಮೂಲಕ ಬೋರಿಂಗ್ (Boring) ಆಗುವಂತೆ ಮಾಡಬೇಕು ಎಂದು ಪೋರ್ನ್ ಹಬ್ (Pornhub) ಮಾಲೀಕ ಸೊಲೊಮನ್ ಫ್ರೀಡ್ಮನ್ (Solomon Friedman) ಅವರು ಹೇಳಿದ್ದಾರೆ. ಎಎಫ್‌ಪಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸೋಲೊಮನ್ ಫ್ರೀಡ್ಮನ್ ಅವರು, ಲೈಂಗಿಕ ಅಭಿವ್ಯಕ್ತಿಯನ್ನು ಹೆಮ್ಮೆ ಪಡುವ ದಿಕ್ಕಿನತ್ತ ಸಮಾಜವು ಸಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ(viral News).

ನಾವು ಲೈಂಗಿಕ ಅಭಿವ್ಯಕ್ತಿಯ ಬಗ್ಗೆ ಹೆಮ್ಮೆಪಡುವ ದಿಕ್ಕಿನಲ್ಲಿ ಸಮಾಜವು ಸಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಎಥಿಕಲ್ ಕ್ಯಾಪಿಟಲ್ ಪಾರ್ಟ್‌ನರ್ಸ್‌ನ ಸೊಲೊಮನ್ ಫ್ರೈಡ್‌ಮನ್ ಹೇಳಿದ್ದಾರೆ. ಕೆನಡಾದಲ್ಲಿ ಕಾನೂನುಬದ್ಧವಾಗಿಯೇ ಗಾಂಜಾ ಅನುಮತಿ ನೀಡಲಾಯಿತು. ಬಳಿಕ ಈಗ ಅಲ್ಲಿ ಸಾಮಾನ್ಯವಾಗಿದೆ ಮತ್ತು ಜನರಿಗೆ ಅದು ಬೋರಿಂಗ್ ಕೂಡ ಆಗುತ್ತಿದೆ. ಹಾಗೆಯೇ ಪೋರ್ನ್‌ದಿಂದಲೂ ಜನರು ಬೋರಿಂಗ್ ಆಗುತ್ತಾರೆ ಎಂದು ಅವರು ಹೇಳಿದರು.

ಕೆಲವು ತಿಂಗಳ ಹಿಂದೆ ಪೋರ್ಹ್‌ನಬ್‌ನ ಮೂಲ ಸಂಸ್ಥೆ ಮೈಂಡ್‌ಗೀಕ್ ಅನ್ನು ಕೆನಡಾದ ಖಾಸಗಿ ಸಂಸ್ಥೆ ಎಥಿಕಲ್ ಕ್ಯಾಪಿಟಲ್ ಪಾರ್ಟ್‌ನರ್ಸ್ ಖರೀದಿಸಿತು. ಇದರಿಂದಾಗಿ ಇಸಿಪಿ ಯುಪೋರ್ನ್ ಸೇರಿದಂತೆ ಇತರ ಸೈಟ್‌ಗಳ ಏಕೈಕ ನಿಯಂತ್ರಕ ಸಂಸ್ಥೆಯಾಗಿ ಮಾರ್ಪಟ್ಟಿತು. ಇತ್ತೀಚೆಗೆ ಇಸಿಪಿ ಸಂಸ್ಥಾಪಕ ಸೊಲೊಮನ್ ಫ್ರೈಡ್‌ಮನ್ ಅವರು ತಮ್ಮ ಕಂಪನಿಯು ಸ್ವಾಧೀನಪಡಿಸಿಕೊಂಡ ನಂತರ ಎದುರಿಸಿದ ಸಮಸ್ಯೆ ಮತ್ತು ಅದರ ವೆಬ್‌ಸೈಟ್‌ಗಳಲ್ಲಿ ಲೈಂಗಿಕವಾಗಿ ನಿಂದನೀಯ ಮತ್ತು ಹಿಂಸಾತ್ಮಕ ವಿಷಯವನ್ನು ತೆಗೆದುಹಾಕಲು ಏನು ಮಾಡಿದೆ ಎಂಬುದರ ಕುರಿತು ವಿವರವಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: India Porn Ban | 67 ಅಶ್ಲೀಲ ವೆಬ್‌ಸೈಟ್ ನಿಷೇಧಿಸಿದ ಕೇಂದ್ರ ಸರ್ಕಾರ, ಕಾರಣ ಏನು?

ಹೆಚ್ಚಿನ ಸಂಖ್ಯೆಯ ಅಪ್ರಾಪ್ತ ವೀಕ್ಷಕರು ಹಾಗೂ ಲೈಂಗಿಕ ಹಿಂಸೆ ಮತ್ತು ನಿಂದನೆ ಪ್ರಕರಣಗಳಿಂದಾಗಿ ಇಸಿಪಿಯ ಅನೇಕ ಅಶ್ಲೀಲ ವೆಬ್‌ಸೈಟ್‌ಗಳು ವಿವಿಧ ದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಎದುರಿಸುತ್ತಿವೆ. ಪೋರ್ನ್ ಹಬ್ ಸ್ವಾಧೀನಪಡಿಸಿಕೊಂಡ ಬಳಿಕ ಇಸಿಪಿ ಬಹಳಷ್ಟು ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿದೆ. ಅಮೆರಿಕದ ಉತಾಹ್‌ದಿಂದ ಇಸಿಪಿಯ ಅನೇಕ ಪೋರ್ನ್ ವೆಬ್‌ಸೈಟ್‌ಗಳನ್ನು ತೆಗೆದು ಹಾಕಲಾಯಿತು. ಈ ಅಶ್ಲೀಲ ಜಾಲತಾಣಗಳ ವೀಕ್ಷಕರು ಅಪ್ರಾಪ್ತರು ಎಂದು ಗೊತ್ತಾಗುತ್ತಿದ್ದಂತೆ ಅಲ್ಲಿನ ಸರ್ಕಾರ ಈ ನಿರ್ಧಾರ ಕೈಗೊಂಡಿತು. ಸಾಕಷ್ಟು ಕಾನೂನಾತ್ಮಕ ತೊಂದರೆಗಳನ್ನು ಎದುರಿಸುತ್ತಿರುವ ಇಸಿಪಿ ತನ್ನ ಬಹುತೇಕ ಅಶ್ಲೀಲ ಜಾಲತಾಣಗಳನ್ನು ಜುಲೈ 7ರಂದು ಸ್ಥಗಿತ ಮಾಡುವ ಅನಿವಾರ್ಯತೆಗೆ ಸಿಲುಕಿದೆ. ಈ ಮಧ್ಯೆ ಜಾಲತಾಣಗಳ ಮಾಲೀಕರು ಮತ್ತು ಕಾನೂನು ಪ್ರತಿಬಂಧಕ ಸಂಸ್ಥೆಗಳ ನಡುವೆ ಮಾತುಕತೆ ನಡೆದಿದೆ.

ವಿದೇಶದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

Chaitra Kundapura : ವಂಚಕಿ ಚೈತ್ರಾ ಜತೆ ಕುಂದಾಪುರದ ಹೆಸರು ಬಳಸಬಾರದು ಎಂಬ ಅರ್ಜಿದಾರರ ದಾವೆಗೆ ಕೋರ್ಟ್‌ ತಾತ್ಕಾಲಿಕವಾಗಿ ಓಕೆ ಎಂದಿದೆ. ಮುಂದಿನ ವಿಚಾರಣೆಯ ಬಳಿಕ ಇದಕ್ಕೆ ಸ್ಪಷ್ಟತೆ ಸಿಗಲಿದೆ.

VISTARANEWS.COM


on

Edited by

Chaitra Kundapura
Koo

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಐದು ಕೋಟಿ ರೂ. ವಂಚನೆ ಮಾಡಿರುವ ಕುಂದಾಪುರ ಮೂಲದ ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ (Chaitra Kundapura) ಹೆಸರು ಈಗ ಎಲ್ಲೆಡೆ ಫೇಮಸ್‌. ಆದರೆ, ಈಕೆಯ ಹೆಸರನ್ನು ಪದೇಪದೆ ವಂಚನೆಯ ಹೆಸರಲ್ಲಿ ಬಳಸುತ್ತಿರುವುದು ಕುಂದಾಪುರ (Kundapura Name of a town) ಎಂಬ ಊರಿಗೆ ಅಪಮಾನ ಮಾಡಿದಂತಾಗುತ್ತಿದೆ. ಹೀಗಾಗಿ ಆಕೆಯ ಹೆಸರಿನ ಜತೆಗಿರುವ ʻಕುಂದಾಪುರʼ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಎಂದು ಕುಂದಾಪುರದ ವ್ಯಕ್ತಿಯೊಬ್ಬರು ಕೋರ್ಟ್‌ ಮೊರೆ ಹೊಕ್ಕಿದ್ದರು. ಈ ಕೋರ್ಟ್‌ ಈ ಬೇಡಿಕೆಗೆ ತಾತ್ಕಾಲಿಕ ಅಸ್ತು (Court restricts media from using Kundapuara name with Chaitra) ಎಂದಿದೆ.

ವಂಚನೆ ಪ್ರಕರಣವಾಗಿರುವುದರಿಂದ, ಬಿಜೆಪಿ ಟಿಕೆಟ್‌ ವಂಚನೆಯಾಗಿರುವುದರಿಂದ, ಪ್ರಧಾನ ಆರೋಪಿ ಸಾಕಷ್ಟು ಜನಪ್ರಿಯಳಾಗಿರುವುದರಿಂದ ಆಕೆಯ ಹೆಸರು ಮತ್ತು ಸುದ್ದಿ ಗಮನ ಸೆಳೆದಿತ್ತು. ಹೀಗಾಗಿ ಆಕೆಯೊಂದಿಗೆ ಆಕೆಯ ಊರಿನ ಹೆಸರೂ ಜತೆಯಾಗಿ ಬರುತ್ತಿತ್ತು. ಇದು ಸಹಜವಾಗಿ ಅಲ್ಲಿನ ಜನರಿಗೆ ಬೇಸರ ಉಂಟು ಮಾಡಿದೆ.

ಇದನ್ನು ಗಮನಿಸಿದ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿರುವ ವ್ಯಕ್ತಿಯೊಬ್ಬರು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆಕೆಯ ಹೆಸರಿನ ಜತೆ ಕುಂದಾಪುರದ ಹೆಸರು ತಳುಕು ಹಾಕುವುದು ಬೇಡ ಎಂದು ಕೋರಿದ್ದರು.

ಬೆಂಗಳೂರಿನ ಬಸವನಗುಡಿಯಲ್ಲಿ ಕಾಫಿ ಶಾಪ್‌ ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ದಾವೆ ಹೂಡಿದವರು. ನಾನು ಕುಂದಾಪುರ ಮೂಲದವನಾಗಿದ್ದು, ಹೋಟೆಲ್ ನಡೆಸುತ್ತಿದ್ದೇನೆ. ಹೋಟೆಲ್ ಗೆ ಬರುವ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ಅವರು ದಾವೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರದಲ್ಲಿ ಆಳ್ವಿಕೆ ನಡೆಸಿದ್ದು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಂತರ ಪೋರ್ಚಗೀಸರು, ಜರ್ಮನ್ನರು, ಟಿಪ್ಪುಸುಲ್ತಾನ್‌, ಬ್ರಿಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿತ್ತು.

ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿತ್ತು.

ಇದನ್ನೂ ಓದಿ: Chaitra Kundapura : ಫೈರ್‌ ಬ್ರಾಂಡ್‌ ಚೈತ್ರಾ ಕುಂದಾಪುರ ಪರಪ್ಪನ ಅಗ್ರಹಾರಕ್ಕೆ; 14 ದಿನ ನ್ಯಾಯಾಂಗ ಬಂಧನ

ಹೀಗಾಗಿ ಮಾಧ್ಯಮಗಳು ಆಕೆಯ ವಿಚಾರ ಬಂದಾಗ ಕುಂದಾಪುರ ಎಂಬ ಹೆಸರನ್ನು ಉಲ್ಲೇಖಿಸದಂತೆ ಸೂಚನೆ ನೀಡಬೇಕು ಎಂದು ಅವರು ಕೋರಿದ್ದರು. ಜತೆಗೆ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ಕೂಡಾ ಕೇಳಿದ್ದರು.

ಇದೀಗ ಕೋರ್ಟ್‌ ಅವರ ದಾವೆಯನ್ನು ಸ್ವೀಕರಿಸಿದ್ದು ಮುಂದಿನ ವಿಚಾರಣೆಯ ವರೆಗೆ ಮಾಧ್ಯಮಗಳು ಆಕೆಯ ಹೆಸರಿನ ಜತೆಗೆ ಕುಂದಾಪುರ ಎಂಬ ಹೆಸರನ್ನು ಬಳಸದಂತೆ ತಾತ್ಕಾಲಿಕ ನಿರ್ಬಂಧವನ್ನು ವಿಧಿಸಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಮುಂದಿನ ವಿಚಾರಣೆಯವರೆಗೆ ಈ ನಿರ್ಬಂಧವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.

Continue Reading

ದೇಶ

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

8 ವರ್ಷದ ಮಗುವಿನ ತಾಯಿ ಹಾಗೂ ಚಿಕ್ಕಪ್ಪ ಸೇರಿಕೊಂಡು (Illicit Affair) ಕತ್ತು ಹಿಸುಕಿ ಕೊಂದಿದ್ದಾರೆ. ಅವರು ಮಗುವಿನ ಮೃತ ದೇಹವನ್ನು ಹೊಲದಲ್ಲಿ ಕೊಂದ ನಂತರ ಸಮಾಧಿ ಮಾಡಿದ್ದರು.

VISTARANEWS.COM


on

women arrested
Koo

ಜೈಪುರ : ತನ್ನ ಮತ್ತು ಭಾವನ ನಡುವಿನ ಅಕ್ರಮ ಸಂಬಂಧವನ್ನು (Illicit Affair) ನೋಡಿದ ಮಗುವನ್ನು ಕೊಂದು ಹಾಕಿದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ. ಕೊಲೆ ಆರೋಪ ಹಾಗೂ ಸಾಕ್ಷಿ ನಾಶ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಭಾವನನ್ನು ಬಂಧಿಸಲಾಗಿದೆ. ಅವರಿಬ್ಬರು ಮಗುವಿನ ಕತ್ತು ಹಿಸುಕಿ ಕೊಂದು ಮೃತದೇಹವನ್ನು ಹೊಲದಲ್ಲಿ ಹೂತು ಹೋಗಿದ್ದರು. ಪ್ರಕರಣದ ಬಗ್ಗೆ ನಾನಾ ಹಂತಗಳಲ್ಲಿ ತನಿಖೆ ನಡೆದು ಎರಡು ವರ್ಷಗಳ ಬಳಿಕ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರಂಭದಲ್ಲಿ ಅವರು ನಾನಾ ನೆಪ ಹೇಳಿ ಬಚಾವಾಗಿದ್ದರು. ಆದರೆ ಹತ್ಯೆಯಾದ ಮಗುವಿನ ತಂದೆಯ ನಿರಂತರ ಹೋರಾಟದ ಬಳಿಕ ಆರೋಪಿಗಳು ಕಾನೂನು ಬಲೆಗೆ ಬಿದ್ದಿದ್ದಾರೆ.

ಯಾಕೆ ಕೊಲೆ ಮಾಡಿದ್ದರು

ಬಂಧನಕ್ಕೊಳಗಾದವರನ್ನು ಕೃಷ್ಣ ಕಾಂತ್ ಮತ್ತು ತಾಯಿ ಹೇಮಲತಾ ಎಂದು ಗುರುತಿಸಲಾಗಿದೆ. ಕೃಷ್ಣಕಾಂತ್ ನ ಸಹೋದರನ ಪತ್ನಿಯೇ ಹೇಮಲತಾ. ಅವರಿಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಒಂದು ದಿನ ಅವರಿಬ್ಬರು ಹೊಲದಲ್ಲಿ ಲೈಂಗಿಕ ಸಂಪರ್ಕ ನಡೆಸುತ್ತಿದ್ದಾಗ ಮಗ ಗೋಲು ಬಂದು ನೋಡಿದ್ದ. ಆತ ವಿಷಯವನ್ನು ಎಲ್ಲರಿಗೂ ತಿಳಿಸುತ್ತಾನೆ ಎಂಬ ಭಯದಿಂದ ಅವರಿಬ್ಬರೂ ಸೇರಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದರು.

ರುಬ್​ಪಾಸ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಚಂದನ್ಪುರ ಗ್ರಾಮದಲ್ಲಿ 2021 ರಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮಗುವಿನ ತಂದೆ ಗ್ಯಾನ್ ಸಿಂಗ್ ತನ್ನ ಮಗ ಗೋಲು ಫೆಬ್ರವರಿ 2021 ರಲ್ಲಿ ಕಾಣೆಯಾದ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದರು. ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಮೂರು ದಿನಗಳ ನಂತರ ಗ್ರಾಮದ ಹೊಲದಲ್ಲಿ ಗೋಲು ಮೃತ ದೇಹ ಪತ್ತೆಯಾಗಿತ್ತು.

ಪೊಲೀಸರು ಕೊಲೆಗಾರರನ್ನು ಬಂಧಿಸಲು ತನಿಖೆಯನ್ನು ಪ್ರಾರಂಭಿಸಿದ್ದರೂ ಕೊಲೆಗಾರರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಡಿಸೆಂಬರ್ 2021 ರಂದು ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ಆದರೆ ಮಗುವಿನ ತಂದೆ ಬಿಟ್ಟುಕೊಡಲಿಲ್ಲ. ತನ್ನ ಮಗನ ಕೊಲೆಗಾರರನ್ನು ಕಂಡುಹಿಡಿಯದಿರುವ ಬಗ್ಗೆ ಜೈಪುರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು ಹಾಗೂ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಈ ವಿಚಾರಣೆ ನಡೆಸಿದ ಜೈಪುರ ಹೈಕೋರ್ಟ್ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಆದೇಶಿಸಿತ್ತು.

ತಂಡ ರಚನೆ

ಬಯಾನಾದ ಸರ್ಕಲ್ ಆಫೀಸರ್ (ಸಿಒ) ನಿತಿರಾಜ್ ಸಿಂಗ್ ಅವರ ನೇತೃತ್ವದಲ್ಲಿ ಕೊಲೆ ಆರೋಪಿಗಳ ಪತ್ತೆ ತಂಡವನ್ನು ರಚಿಸಲಾಯಿತು. ಎಂಟು ವರ್ಷದ ಮಗುವಿನ ಕೊಲೆಗಾರರನ್ನು ಬಂಧಿಸಲು ಮತ್ತೊಮ್ಮೆ ತನಿಖೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಮಗುವಿನ ಚಿಕ್ಕಪ್ಪ ಮತ್ತು ತಾಯಿ ಅಕ್ರಮ ಸಂಬಂಧ ಹೊಂದಿದ್ದಾರೆಂದು ತಿಳಿಯಿತು. ಚಿಕ್ಕಪ್ಪ ಕೃಷ್ಣ ಕಾಂತ್ ಮತ್ತು ತಾಯಿ ಹೇಮಲತಾ ಅವರು ಹೆಚ್ಚಿನ ವಿಚಾರಣೆಗೆ ಕರೆಯಲಾಗಿತ್ತು.

ಇದನ್ನೂ ಓದಿ : Murder Case : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ಮಗುವಿನ ಶವ; ಮೊಮ್ಮಗಳನ್ನೇ ಕೊಂದು ಬಿಟ್ಟನಾ!

ಆರಂಭದಲ್ಲಿ, ಅವರಿಬ್ಬರು ಮಗುವಿನ ಕೊಲೆಯಲ್ಲಿ ತಮ್ಮ ಪಾತ್ರವನ್ನು ನಿರಾಕರಿಸಿದ್ದರು. ಆದಾಗ್ಯೂ, ಸಮಗ್ರ ವಿಚಾರಣೆಯ ನಂತರ ಅವರಿಬ್ಬರೂ ತಮ್ಮ ಅಪರಾಧವನ್ನು ಒಪ್ಪಿಕೊಂಡರು. ತಾವಿಬ್ಬರೂ ಏಕಾಂತದಲ್ಲಿ ಇರುವ ಸಮಯವನ್ನು ಮಗುವು ನೋಡಿತ್ತು. ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಹೇಳಿಕೊಂಡರೆ ಎಂಬ ಭಯದಿಂದ ಕತ್ತು ಹಿಸುಕಿ ಕೊಂದಿದ್ದೇವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲ ಆಗವಾಗ ಎರಡು ವರ್ಷ ಕಳೆದಿತ್ತು. ಆರೋಪಿಗಳು ಬಂಧನವಾದ ಬಳಿಕ ಗೋಲುವಿನ ತಂದೆಗೆ ಸಮಾಧಾನವಾಗಿದೆ.

Continue Reading

ಕರ್ನಾಟಕ

HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು

HD Kumaraswamy: ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟಿಗೆ ಹೋಗಿ ನೀರಿನ ಪರಿಸ್ಥಿತಿ ಅವಲೋಕನ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಮೂರು ಸಲಹೆ ಕೊಟ್ಟಿದ್ದಾರೆ.

VISTARANEWS.COM


on

Edited by

Kumaraswamys three suggestions to Government
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕೆಆರ್‌ಎಸ್‌ ಡ್ಯಾಂಗೆ ಭೇಟಿ ನೀಡಿ ಬತ್ತಿದ ಅಣೆಕಟ್ಟನ್ನು ವೀಕ್ಷಿಸಿದರು.
Koo

ಮೈಸೂರು: ಬಿಜೆಪಿ ನಾಯಕರ ಜತೆ ಮೈತ್ರಿ ಮಾತುಕತೆಗಾಗಿ (BJP-JDS Alliance) ದಿಲ್ಲಿಗೆ ತೆರಳಿದ್ದ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ(HD Kumaraswamy) ಅವರು ಅಲ್ಲಿಂದ ಮರಳುತ್ತಲೇ ಕಾವೇರಿ ಹೋರಾಟದ ಕಣಕ್ಕೆ (Cauvery dispute) ಧುಮುಕಿದ್ದಾರೆ. ಶನಿವಾರ ದಿಲ್ಲಿಯಿಂದ ಬಂದವರೇ ನೇರವಾಗಿ ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆಗೆ (KRS Dam) ಭೇಟಿ ನೀಡಿ ಅಲ್ಲಿನ ನೀರಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ (Protest at Mandya) ಪಾಲ್ಗೊಂಡರು.

ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಮೂರು ಸಲಹೆ

ಕೆಆರ್‌ಎಸ್‌ ಅಣೆಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿನ ಪರಿಸ್ಥಿತಿಯನ್ನು ಕಂಡು ಈ ಪರಿಸ್ಥಿತಿಯಲ್ಲಿ ನೀರು ಬಿಡುವುದು ಸಾಧ್ಯವೇ ಎಂದು ಕೇಳಿದರು. ಕೆಆರ್‌ಎಸ್ ಅಣೆಕಟ್ಟೆಗೆ ಭೇಟಿ ನೀಡಿದ ಜೆಡಿಎಸ್ ನಿಯೋಗದಲ್ಲಿ ಕುಮಾರಸ್ವಾಮಿ ಅವರ ಜತೆ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಿ.ಸಿ.ತಮ್ಮಣ್ಣ ಸೇರಿದಂತೆ ಪ್ರಮುಖರು ಇದ್ದರು.

ಅಣೆಕಟ್ಟೆ ಅವಲೋಕನ ಮಾಡಿದ ಬಳಿಕ ಮಾತನಾಡಿದ ಅವರು ಮೂರು ಸಲಹೆಗಳನ್ನು ನೀಡಿದರು.

  1. ಪಾಲಿಸಲಾಗದ ಆದೇಶ ಪಾಲಿಸದೇ ಇದ್ದರೆ ನ್ಯಾಯಾಂಗ ನಿಂಧನೆ ಆಗಲ್ಲ. ಈ ಸಂಬಂಧ 2016ರಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಇದರ ಆಧಾರದ ಮೇಲೆ ನೀರು ನಿಲ್ಲಿಸಿ ಸುಪ್ರೀಂಕೋರ್ಟ್‌ನಲ್ಲಿ ಚಾಲೆಂಜ್ ಮಾಡಿ.
  2. ಮೂವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಾಜ್ಯದಲ್ಲಿ ಇದ್ದಾರೆ. 6 ನ್ಯಾಯಾಲಯಗಳು, ಅಕ್ವೋಕೇಟ್ ಜನರಲ್ ಆಗಿದ್ದವರು ಇದ್ದಾರೆ. ಅವರ ಸಭೆ ಮಾಡಿ ಕಾನೂ‌ನು ಹೋರಾಟಕ್ಕೆ ಸಲಹೆ ಪಡೆಯಿರಿ.
  3. ಸಂಕಷ್ಟ ಸೂತ್ರ ರಚಿಸಲು ಇದು ಸಕಾಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮಾರ್ಗಸೂಚಿ ಸಿದ್ಧಪಡಿಸಿ.
Kumaraswamy and team at KRS dam

ಮಾಜಿ ಪ್ರಧಾನಿ ದೇವೇಗೌಡರು ಕೂಡಾ ಸರಕಾರಕ್ಕೆ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಸಮರ್ಥರವಾಗಿ ಬಳಸಿಕೊಳ್ಳಬೇಕು. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಸಲಹೆ ನೀಡಿದರು.

ಪ್ರಾಧಿಕಾರಕ್ಕೆ ಮಾಹಿತಿ ನೀಡುವಲ್ಲಿ ಸರ್ಕಾರ ವಿಫಲ ಎಂದ ಎಚ್‌ಡಿಕೆ

ಮಂಡ್ಯದಲ್ಲಿ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಬಂದ್‌ ಮತ್ತು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದ ಮುಂದೆ ಸೂಕ್ತ ಮಾಹಿತಿ ಕೊಡವಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ʻʻಸರ್ಕಾರ ಆರಂಭಿಕ ದಿನಗಳಲ್ಲಿ ವಿಷಯ ಪ್ರಸ್ತಾಪಿಸುವಾಗ ಲಘುವಾಗಿ ತೆಗೆದುಕೊಂಡಿದ್ದಾರೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಮುಂದೆ ಮನವರಿಕೆ ಮಾಡಿಕೊಡುವುದರಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಸಮಸ್ಯೆ ಉದ್ಭವವಾಗಿದೆ ಎಂದರು.

ನಾನು, ಬಸವರಾಜ ಬೊಮ್ಮಾಯಿಯವರು ನೀರು ಬಿಡಬೇಡಿ ಎಂದು ಹೇಳಿದೆವು. ಆದರೂ ಕಾನೂನು ತಜ್ಞರ ಮಾತು ಕೇಳಿ ನೀರು ಬಿಟ್ಟಿದ್ದಾರೆ. ಈಗ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಿದರು.

ಇದನ್ನೂ ಓದಿ: Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

ʻʻಬಂಗಾರಪ್ಪನವರು ಚಿಟಿಕೆ ಹೊಡೆದಂಗೆ ಸಮಸ್ಯೆ ಬಗೆಹರಿಸಿದ್ರು ಅಂತ ಮಧು ಬಂಗಾರಪ್ಪ ಹೇಳಿದ್ದಾರೆ. ಯಾವ ಸಮಸ್ಯೆ ಪರಿಹರಿಸಿದ್ರು? ಬೆಂಗಳೂರಿನಲ್ಲಿ ಬಂದ್ ಹೆಸರಲ್ಲಿ ಲೂಟಿ ಮಾಡಿಸಿದರು. ಬಂದ್ ಹೆಸರಲ್ಲಿ ಏನೇನಾಯ್ತು ಅಂತ ನಾವು ನೋಡಿದ್ದೇವೆ. ಮುಗ್ಧ ಜನರ ವಿಷಯದಲ್ಲಿ ನಾವು ಆಟ ಆಡಬಾರದು. ಇದರಲ್ಲಿ ತಾಂತ್ರಿಕ ವಿಷಯಗಳಿವೆʼʼ ಎಂದರು.

Continue Reading

ದೇಶ

Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

ರಾಹುಲ್ ಗಾಂಧಿ ಮಾತು ಕೇಳಲು ಸಿದ್ಧರಿದ್ದರೆ ಈ ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ ಎಂದಿರುವ ಬಿಜೆಪಿ ನಾಯಕ ಶರದ್ ಪವಾರ್ ಮತ್ತು ಗೌತಮ್ ಅದಾನಿ (Gautam Adani) ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Gautam Adani
Koo

ನವದೆಹಲಿ: ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಅಹಮದಾಬಾದ್​ನಲ್ಲಿ ದೈತ್ಯ ಉದ್ಯಮಿ ಗೌತಮ್ ಅದಾನಿ (Gautam Adani) ಅವರನ್ನು ಭೇಟಿಯಾಗಿದ್ದಾರೆ. ಅವರ ನಿವಾಸ ಹಾಗೂ ಕಚೇರಿಗೆ ಭೇಟಿ ನೀಡಿದ್ದರು ಎಂಬುದಾಗಿ ವರದಿಯಾಗಿದೆ. ಅದಕ್ಕಿಂತ ಮೊದಲು ಇಬ್ಬರೂ ಅಹಮದಾಬಾದ್​​ನಲ್ಲಿ ಭಾರತದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಟ್ ಉದ್ಘಾಟನಾ ಸಮಾರಂಭದಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು

ಉದ್ಯಮಿ ಅದಾನಿ ವಿರುದ್ಧ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಿರಂತರ ಮಾತಿನ ದಾಳಿ ನಡೆಸುತ್ತಿರುವ ನಡುವೆಯೇ 2024 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಸಂಘಟಿಸಿರುವ ಪ್ರತಿಪಕ್ಷಗಳ ಇಂಡಿಯಾ ಬಣದ ಸದಸ್ಯರಾಗಿರುವ ಶರದ್​ ಪವಾರ್​ ಅವರು ಅದಾನಿಯನ್ನು ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ. ಗೌತಮ್ ಅದಾನಿ ಅವರೊಂದಿಗೆ ಗುಜರಾತ್​್ನ ಚಾಚಾರ್ವಾಡಿಯ ವಾಸ್ನಾದಲ್ಲಿ ಭಾರತದ ಮೊದಲ ಲ್ಯಾಕ್ಟೋಫೆರಿನ್ ಸ್ಥಾವರ ಎಕ್ಸಿಂಪವರ್ ಅನ್ನು ಉದ್ಘಾಟಿಸುವ ಸೌಭಾಗ್ಯ ದೊರಕಿದೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Rahul Gandhi: ರಾಹುಲ್ ಆಧುನಿಕ ಭಾರತದ ಮಹಾತ್ಮ ಗಾಂಧಿ ಹಾಗೂ ರಾಷ್ಟ್ರ ಪುತ್ರ! ಹೀಗೆ ಹೇಳಿದ್ದು ಯಾರು?

ಶರದ್ ಪವಾರ್ ಅವರ ಹ್ಯಾಂಡಲ್​ನಲ್ಲಿ ಮಾತ್ರ ಪೋಸ್ಟ್ ಮಾಡಲಾದ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ, ಈ ಚಿತ್ರವು ಸಾವಿರ ಪದಗಳನ್ನು ವಿವರಿಸುತ್ತವೆ. ಆದರೆ ರಾಹುಲ್ ಗಾಂಧಿ ಅವರ ಮಾತನ್ನು ಕೇಳಲು ಸಿದ್ಧರಿದ್ದರೆ ಮಾತ್ರ ಎಂದು ಬರೆದುಕೊಂಡಿದ್ದಾರೆ. ರಾಹುಲ್ ಗಾಂಧಿಯನ್ನು ಇಂಡಿಯಾ ಬಣದಲ್ಲಿ ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಪೂನಾವಾಲಾ ಟೀಕಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿ ಯಾರೂ ರಾಹುಲ್​ ಅವರನ್ನು ಮತ್ತು ಅವರ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸವುದಿಲ್ಲ. ಆ ಕಾರಣ ಶರದ್ ಪವಾರ್ ಜಿ ಅವರನ್ನು ಅಲ್ಕಾ ಲಂಬಾ ಅವರಂತಹವರು ಮತ್ತೆ ನಿಂದಿಸುವುದಿಲ್ಲ ರಾಹುಲ್ ಗಾಂಧಿ ಅವರ ಮಾತು ಕೇಳಲು ಸಿದ್ಧರಿದ್ದರೆ ಈ ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ ಎಂದು ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ಅದಾನಿ ಜತೆ ಉತ್ತಮ ಗೆಳೆತನ ಹೊಂದಿರುವ ಪವಾರ್​

ಅದಾನಿ ಜೊತೆ ಶರದ್ ಪವಾರ್ ಅವರ ನಿಕಟ ಸಂಪರ್ಕ ಬೆಳಕಿಗೆ ಬರುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಆರಂಭದಲ್ಲಿ ಸಂದರ್ಶನವೊಂದರಲ್ಲಿ, ಶರದ್ ಪವಾರ್ ಅವರು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ವಿರೋಧಿಸಿದ್ದರು. ಬದಲಿಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸಮಿತಿಯ ಪರವಾಗಿರುವುದಾಗಿ ಹೇಳಿದ್ದರು.

ಶರದ್ ಪವಾರ್ ತಮ್ಮ ಆತ್ಮಚರಿತ್ರೆ ಲೋಕ್ ಮೇಜ್ ಸಾಂಗತಿಯಲ್ಲಿ ಗೌತಮ್ ಅದಾನಿ ಅವರನ್ನು ಕಠಿಣ ಪರಿಶ್ರಮಿ, ಸರಳ ಮತ್ತು ಕೆಳಮಟ್ಟದ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಶರದ್ ಪವಾರ್ ಅವರ ಒತ್ತಾಯದ ಮೇರೆಗೆ ಗೌತಮ್ ಅದಾನಿ ಥರ್ಮಲ್ ವಿದ್ಯುತ್ ಕ್ಷೇತ್ರಕ್ಕೆ ಕಾಲಿಟ್ಟರು ಎಂದು ಶರದ್ ಪವಾರ್ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.

Continue Reading
Advertisement
Chaitra Kundapura
ಉಡುಪಿ8 mins ago

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

women arrested
ದೇಶ39 mins ago

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

Kumaraswamys three suggestions to Government
ಕರ್ನಾಟಕ45 mins ago

HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು

CM Siddaramaiah
ಕರ್ನಾಟಕ46 mins ago

Women’s Reservation Bill: ಮೋದಿಯವರ ಮಹಿಳಾ ಮೀಸಲಾತಿ 2024, 2029, 2034ರಲ್ಲೂ ಜಾರಿಯಾಗಲ್ಲ: ಸಿದ್ದರಾಮಯ್ಯ

naveen ul haq and gautam gambhir
ಕ್ರಿಕೆಟ್1 hour ago

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

Gautam Adani
ದೇಶ1 hour ago

Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

Cauvry protest in Bangalore
ಕರ್ನಾಟಕ1 hour ago

Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

karnataka film chamber
ಪ್ರಮುಖ ಸುದ್ದಿ2 hours ago

Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ

Book release in Ananth Namana Programme
ಕರ್ನಾಟಕ2 hours ago

Ananth Namana: ಅನಂತ ಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ ಎಂದ ಡಿಕೆಶಿ

Shubman Gill and Sara Tendulkar
ಕ್ರಿಕೆಟ್2 hours ago

Sara vs Gill: ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌