Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ - Vistara News

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Ebrahim Raisi:ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

VISTARANEWS.COM


on

Ebrahim Raisi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್‌ ಪತನಗೊಂಡ ಸ್ಥಳವನ್ನು ರಕ್ಷಣಾ ಕಾರ್ಯಾಚರಣೆ ಪಡೆ ಪತ್ತೆ ಹಚ್ಚಿದೆ. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

US Presidential Election: ನೀಲಿಚಿತ್ರ ತಾರೆ ಸ್ಟೊರ್ಮಿ ಡೇನಿಯಲ್ಸ್ ಜೊತೆಗಿನ ಟ್ರಂಪ್‌ ಲೈಂಗಿಕ ಹಗರಣದ ಬಗ್ಗೆ ಪ್ರಸ್ತಾಪಿಸಿದ ಬೈಡೆನ್‌, ಸಿವಿಲ್ ಪೆನಾಲ್ಟಿಗಳಲ್ಲಿ ನೀವು ಎಷ್ಟು ಶತಕೋಟಿ ಡಾಲರ್‌ಗಳನ್ನು ನೀಡಬೇಕಾಗಿದೆ? ಸಾರ್ವಜನಿಕವಾಗಿ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಎಷ್ಟು ದಂಡ ಭರಿಸುತ್ತಿದ್ದೀರಿ? ನಿಮ್ಮ ಹೆಂಡತಿ ಗರ್ಭಿಣಿಯಾಗಿರುವಾಗ ಪೋರ್ನ್‌ಸ್ಟಾರ್ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದೀರಾ? ಎಂದು ಬೈಡೆನ್‌ ಪ್ರಶ್ನಿಸಿದ್ದಾರೆ. ಆದರೆ ಬೈಡೆನ್‌ ಪ್ರಶ್ನೆಗೆ ಅಷ್ಟೇ ವೇಗವಾಗಿ ಉತ್ತರ ಕೊಟ್ಟ ಟ್ರಂಪ್‌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

VISTARANEWS.COM


on

US Presidential Election
Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ(US Presidential Election) ರಂಗೇರಿದೆ. ಇದರ ಮೊದಲ ಭಾಗವಾಗಿ ಕಣದಲ್ಲಿರುವ ಹಾಲಿ ಅಧ್ಯಕ್ಷ ಜೋ ಬೈಡೆನ್‌ (Joe Biden) ಮತ್ತು ಅವರ ಪ್ರತಿ ಸ್ಪರ್ಧಿ, ರಿಪಬ್ಲಿನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ನೀಲಿ ಚಿತ್ರ ತಾರೆ ಸ್ಟೋರ್ಮಿ ಡೇನಿಯಲ್‌ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್‌ ಮಾಡಿದ್ದಾರೆ ಎಂಬುದಾಗಿ ಜೋ ಬೈಡೆನ್‌ ಅವರು ಆರೋಪಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಅಟ್ಲಾಂಟದಲ್ಲಿ ನಡೆದ ಈ ವಿಶೇಷ ಚರ್ಚೆಯನ್ನು ಟಿವಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಂತರ ಜನ ವೀಕ್ಷಿಸಿದ್ದಾರೆ. ಹಾಗಾದರೆ, ಇಬ್ಬರ ನಡುವಿನ ಚರ್ಚೆ ಹೇಗಿತ್ತು? ಯಾವ ಅಂಶಗಳು ಮುನ್ನೆಲೆಗೆ ಬಂದವು ಎಂಬುದರ ಮಾಹಿತಿ ಇಲ್ಲಿದೆ.

ಟ್ರಂಪ್‌ ವಿರುದ್ಧ ಬೈಡೆನ್‌ ಪ್ರಬಲ ಅಸ್ತ್ರ

ಟ್ರಂಪ್‌ರನ್ನು ಲೂಸರ್‌ ಎಂದು ಕರೆದಿರುವ ಬೈಡೆನ್‌, ಇರಾಕ್‌ನಲ್ಲಿರುವ ಅಮೆರಿಕ ಸೇನೆಯಲ್ಲಿ ಕರ್ತವ್ಯ ನಿರ್ಹಿಸಿ ಹುತಾತ್ಮನಾದ ತಮ್ಮ ಪುತ್ರ ಬ್ಯೂ ಬಗ್ಗೆ ಪ್ರಸ್ತಾಪಿಸಿದರು. ನನ್ನ ಪುತ್ರ ಧೀರ, ಧೈರ್ಯಶಾಲಿ. ಆದರೆ ಟ್ರಂಪ್‌ ಒಬ್ಬ ಲೂಸರ್‌, ಅಮಾಯಕರ ರಕ್ತ ಹೀರುವವರು ಎಂದು ಕಿಡಿ ಕಾರಿದರು.

ಇದೇ ವೇಳೆ ನೀಲಿಚಿತ್ರ ತಾರೆ ಸ್ಟೊರ್ಮಿ ಡೇನಿಯಲ್ಸ್ ಜೊತೆಗಿನ ಟ್ರಂಪ್‌ ಲೈಂಗಿಕ ಹಗರಣದ ಬಗ್ಗೆ ಪ್ರಸ್ತಾಪಿಸಿದ ಬೈಡೆನ್‌, ಸಿವಿಲ್ ಪೆನಾಲ್ಟಿಗಳಲ್ಲಿ ನೀವು ಎಷ್ಟು ಶತಕೋಟಿ ಡಾಲರ್‌ಗಳನ್ನು ನೀಡಬೇಕಾಗಿದೆ? ಸಾರ್ವಜನಿಕವಾಗಿ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಎಷ್ಟು ದಂಡ ಭರಿಸುತ್ತಿದ್ದೀರಿ? ನಿಮ್ಮ ಹೆಂಡತಿ ಗರ್ಭಿಣಿಯಾಗಿರುವಾಗ ಪೋರ್ನ್‌ಸ್ಟಾರ್ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದೀರಾ? ಎಂದು ಬೈಡೆನ್‌ ಪ್ರಶ್ನಿಸಿದ್ದಾರೆ. ಆದರೆ ಬೈಡೆನ್‌ ಪ್ರಶ್ನೆಗೆ ಅಷ್ಟೇ ವೇಗವಾಗಿ ಉತ್ತರ ಕೊಟ್ಟ ಟ್ರಂಪ್‌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಉಕ್ರೇನ್‌ ದಾಳಿ

ಉಕ್ರೇನ್‌ ದಾಳಿ ವಿಚಾರವನ್ನು ಮುಂದಿಟ್ಟುಕೊಂಡು ಬೈಡೆನ್‌ಗೆ ಟಾಂಗ್‌ ಕೊಟ್ಟ ಟ್ರಂಪ್‌, ನೀವು ನಿಜವಾಗಿಯೂ ಒಬ್ಬರು ಉತ್ತಮ ಅಧ್ಯಕ್ಷರಾಗಿದ್ದರೆ, ರಷ್ಯಾ ಅಧ್ಯಕ್ಷ ಪುಟಿನ್‌ ತಮ್ಮ ಬಗ್ಗೆ ಗೌರವ ಹೊಂದಿದ್ದರೆ ಉಕ್ರೇನ್‌ ಮೇಲಿನ ರಷ್ಯಾ ದಾಳಿ ನಡೆಯುತ್ತಿರಲಿಲ್ಲ ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ಬೈಡೆನ್‌, ಟ್ರಂಪ್‌ ಏನು ಹೇಳುತ್ತಿದ್ದಾರೆ ಎಂಬುದು ಅರ್ಥವೇ ಆಗುತ್ತಿಲ್ಲ ಎಂದರು.

ತಾವು ಅಧ್ಯಕ್ಷರಾಗಿದ್ದರೆ ಹಮಾಸ್ ಉಗ್ರಗಾಮಿಗಳು ಇಸ್ರೇಲ್ ಅನ್ನು ಎಂದಿಗೂ ಆಕ್ರಮಿಸುತ್ತಿರಲಿಲ್ಲ. ಬೈಡೆನ್‌ ಪ್ಯಾಲೆಸ್ತೀನಿಯನ್‌ ನಂತೆ ವರ್ತಿಸುತ್ತಿದ್ದಾರೆ. ಆದರೆ ಅವರು ಅವನನ್ನು ಇಷ್ಟಪಡುವುದಿಲ್ಲ ಏಕೆಂದರೆ ಅವರು ತುಂಬಾ ಕೆಟ್ಟ ಪ್ಯಾಲೆಸ್ತೇನಿಯನ್‌. ಅವರು ದುರ್ಬಲರು, ”ಎಂದು ಟ್ರಂಪ್ ಬಿಡೆನ್ ಬಗ್ಗೆ ಹೇಳಿದರು.

ಬೈಡೆನ್‌ ಅವರು ಚೀನಾದೊಂದಿಗೆ ವ್ಯವಹರಿಸಲು ಹೆದರುತ್ತಾರೆ ಏಕೆಂದರೆ ಅವರು ಅವರಿಂದ ಹಣವನ್ನು ಪಡೆಯುತ್ತಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. “ನಾವು ಈಗ ನಮ್ಮ ದೇಶದ ಇತಿಹಾಸದಲ್ಲಿ ಅತಿದೊಡ್ಡ ಸಮಸ್ಯೆಯನ್ನು ಹೊಂದಿದ್ದೇವೆ. ನಾವು ಚೀನಾದೊಂದಿಗೆ ಬಿಕ್ಕಟ್ಟು ಹೊಂದಿದ್ದೇವೆ. ಬೈಡೆನ್‌ ಚೀನಾದಿಂದ ಹಣ ಪಡೆಯುತ್ತಿದ್ದಾರೆ ಎಂದು ಟ್ರಂಪ್ ಹೇಳಿದರು.

ಹಣದುಬ್ಬರವು ನಮ್ಮ ದೇಶವನ್ನು ಕೊಲ್ಲುತ್ತಿದೆ. ಇದು ನಮ್ಮನ್ನು ಸಂಪೂರ್ಣವಾಗಿ ಕೊಲ್ಲುತ್ತಿದೆ ”ಎಂದು 2017-2021 ರ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಟ್ರಂಪ್ ಆರೋಪಿಸಿದರೆ, “ಎಲ್ಲವೂ ಉತ್ತಮವಾಗಿದೆ.” ಟ್ರಂಪ್ ಆಡಳಿತಾವಧಿಯಲ್ಲಿ ಅಡಿಯಲ್ಲಿ ಆರ್ಥಿಕತೆಯು ಕುಸಿದಿತ್ತು ಎಂದು ಬಿಡೆನ್ ತಿರುಗೇಟು ಕೊಟ್ಟರು.

ಇದನ್ನೂ ಓದಿ: ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Continue Reading

ಪ್ರಮುಖ ಸುದ್ದಿ

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

ಚೀನಾದಲ್ಲಿ ನಡೆದ ಶ್ರೀಮಂತರ ಮದುವೆಗೆ ಜಗತ್ತಿನ ಮೂಲೆ ಮೂಲೆಯಿಂದ ಸಾವಿರಾರು ಜನ ಮದುವೆಗೆ ಹಾಜರಾಗಿದ್ದಾರೆ. ಮದುವೆಗೆ ಬರುವವರಿಗೆ ಎಲ್ಲರಿಗೂ ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ. ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅದ್ಧೂರಿ ಮದುವೆಯ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rich Wedding
Koo

ಬೀಜಿಂಗ್‌: ಸಂಬಂಧಿಕರು, ಸ್ನೇಹಿತರು, ಹಿತೈಷಿಗಳ ಮದುವೆಗೆ ಹೋದರೆ ಮುಯ್ಯಿ ಮಾಡಿ ಬರುವುದು, ಉಡುಗೊರೆ ನೀಡಿ, ಶುಭ ಹಾರೈಸಿ ಬರುವುದು ವಾಡಿಕೆ. ಆದರೆ, ಮದುವೆಗೆ ಹೋದವರಿಗೇ ಯಾರೂ ಉಡುಗೊರೆ ಕೊಡುವುದಿಲ್ಲ. ಶ್ರೀಮಂತರ ಮದುವೆಯಾದರೆ ಸಣ್ಣ-ಪುಟ್ಟ ಉಡುಗೊರೆ ನೀಡುತ್ತಾರೆ. ಆದರೆ, ಚೀನಾದಲ್ಲಿ (China) ಹಾಗಲ್ಲ. ಶ್ರೀಮಂತ ಯುವಕ-ಯುವತಿಯು ಅದ್ಧೂರಿಯಾಗಿ (Rich Wedding) ಮದುವೆಯಾಗಿದ್ದು, ಮದುವೆಗೆ ಹಾಜರಾದವರಿಗೇ 66 ಸಾವಿರ ರೂ. ನಗದು ಉಡುಗೊರೆ ಸೇರಿ ಹಲವು ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ.

ಪ್ರವಾಸಿ ಇನ್‌ಫ್ಲುಯೆನ್ಸರ್‌ ಆಗಿರುವ ದಾನಾ ಚಾಂಗ್‌ ಅವರು ಶ್ರೀಮಂತರ ಮದುವೆಯೊಂದರ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಏಷ್ಯಾದ ಅದ್ಧೂರಿ ಮದುವೆಯು ಅದ್ಧೂರಿಯಾಗಿದೆ. ನಾನು ನನ್ನ ಜೀವನದಲ್ಲಿಯೇ ಇಂತಹ ಅದ್ಧೂರಿ ಮದುವೆಯನ್ನು ನೋಡಿಲ್ಲ” ಎಂದು ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಆದರೆ, ಅದು ಯಾರ ಮದುವೆ? ಯುವಕ-ಯುವತಿಯ ತಂದೆ-ತಾಯಿ ಯಾರು? ಅವರು ಎಷ್ಟು ಶ್ರೀಮಂತರು ಎಂಬುದು ಸೇರಿ ಯಾವುದೇ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.

ಮದುವೆಗೆ ಹಾಜರಾಗುವವರಿಗೆ ಏನೆಲ್ಲ ಸೌಲಭ್ಯ?

ಜಗತ್ತಿನ ಮೂಲೆ ಮೂಲೆಯಿಂದ ಸಾವಿರಾರು ಜನ ಮದುವೆಗೆ ಹಾಜರಾಗಿದ್ದಾರೆ. ಮದುವೆಗೆ ಬರುವವರಿಗೆ ಎಲ್ಲರಿಗೂ ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ. ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಫೈವ್‌ ಸ್ಟಾರ್‌ ಹೋಟೆಲ್‌ನಿಂದ ಮದುವೆ ನಡೆಯುವ ಸ್ಥಳಕ್ಕೆ ರೋಲ್ಸ್‌ ರಾಯ್ಸ್‌ ಕಾರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಇನ್ನು, ಮದುವೆ ಮಂಟಪದಲ್ಲಿ ಊಟ-ತಿಂಡಿ, ಐಸ್‌ಕ್ರೀಮ್‌ಗಳ ವೈವಿಧ್ಯತೆಗಂತೂ ಲೆಕ್ಕವೇ ಇರಲಿಲ್ಲ ಎಂದು ತಿಳಿದುಬಂದಿದೆ.

ಭಾರತದಲ್ಲೂ ಮುಕೇಶ್‌ ಅಂಬಾನಿ ಅವರಂತಹ ಶ್ರೀಮಂತರು ಅದ್ಧೂರಿಯಾಗಿ ಮದುವೆ ಮಾಡುತ್ತಾರೆ. ವಿರಾಟ್‌ ಕೊಹ್ಲಿ, ರಣವೀರ್‌ ಸಿಂಗ್‌ ಅವರಂತಹ ಸೆಲೆಬ್ರಿಟಿಗಳು ಇಟಲಿ ಸೇರಿ ಬೇರೆ ದೇಶಗಳಲ್ಲಿ ಅದ್ಧೂರಿಯಾಗಿ ಮದುವೆಯಾಗಿ, ಭಾರತದಲ್ಲಿ ರೆಸೆಪ್ಶನ್‌ ಇಟ್ಟುಕೊಳ್ಳುತ್ತಾರೆ. ಆದರೆ, ಯಾರೂ ಮದುವೆಗೆ ಬಂದವರಿಗೆ ಸಾವಿರಾರು ರೂ. ನಗದು, ದುಬಾರಿ ಉಡುಗೊರೆ ಕೊಡುವುದಿಲ್ಲ. ಕೊಡಬೇಕು ಎಂಬ ಸಂಪ್ರದಾಯ ಇಲ್ಲದಿದ್ದರೂ ಚೀನಾದಲ್ಲಿ ಮಾತ್ರ ಶ್ರೀಮಂತ ಯುವಕ-ಯುವತಿಯು ಉಡುಗೊರೆ ಕೊಟ್ಟು ಸುದ್ದಿಯಾಗಿದ್ದಾರೆ.

ಇದನ್ನೂ ಓದಿ: Sapthami Gowda: ʻಯುವʼ ಹೇಳಿದ್ದಕ್ಕೆ ಮುಂದುವರಿದೆ, ನನ್ನದೂ ತಪ್ಪಿದೆ; ಸಪ್ತಮಿ ಗೌಡ ಆಡಿಯೊ ವೈರಲ್!

Continue Reading

ವಿದೇಶ

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

US Presidential Election: ನೀಲಿಚಿತ್ರ ತಾರೆ ಸ್ಟೊರ್ಮಿ ಡೇನಿಯಲ್ಸ್ ಜೊತೆಗಿನ ಟ್ರಂಪ್‌ ಲೈಂಗಿಕ ಹಗರಣದ ಬಗ್ಗೆ ಪ್ರಸ್ತಾಪಿಸಿದ ಬೈಡೆನ್‌, ಸಿವಿಲ್ ಪೆನಾಲ್ಟಿಗಳಲ್ಲಿ ನೀವು ಎಷ್ಟು ಶತಕೋಟಿ ಡಾಲರ್‌ಗಳನ್ನು ನೀಡಬೇಕಾಗಿದೆ? ಸಾರ್ವಜನಿಕವಾಗಿ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಎಷ್ಟು ದಂಡ ಭರಿಸುತ್ತಿದ್ದೀರಿ? ನಿಮ್ಮ ಹೆಂಡತಿ ಗರ್ಭಿಣಿಯಾಗಿರುವಾಗ ಪೋರ್ನ್‌ಸ್ಟಾರ್ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದೀರಾ? ಎಂದು ಬೈಡೆನ್‌ ಪ್ರಶ್ನಿಸಿದ್ದಾರೆ. ಆದರೆ ಬೈಡೆನ್‌ ಪ್ರಶ್ನೆಗೆ ಅಷ್ಟೇ ವೇಗವಾಗಿ ಉತ್ತರ ಕೊಟ್ಟ ಟ್ರಂಪ್‌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

VISTARANEWS.COM


on

Koo

ವಾಷಿಂಗ್ಟನ್‌: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ(US Presidential Election) ರಂಗೇರಿದೆ. ಇದರ ಮೊದಲ ಭಾಗವಾಗಿ ಕಣದಲ್ಲಿರುವ ಹಾಲಿ ಅಧ್ಯಕ್ಷ ಜೋ ಬೈಡೆನ್‌(Joe Biden) ಮತ್ತು ಅವರ ಪ್ರತಿ ಸ್ಪರ್ಧಿ, ರಿಪಬ್ಲಿನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌(Donald Trump) ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಅಟ್ಲಾಂಟದಲ್ಲಿ ನಡೆದ ಈ ವಿಶೇಷ ಚರ್ಚೆಯನ್ನು ಟಿವಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಂತರ ಜನ ವೀಕ್ಷಿಸಿದ್ದಾರೆ. ಹಾಗಿದ್ದರೆ ಯಾವೆಲ್ಲಾ ವಿಚಾರಗಳು ಚರ್ಚೆಗೆ ಬಂದವು ಎಂಬುದನ್ನು ನೋಡೋಣ ಬನ್ನಿ.

ಟ್ರಂಪ್‌ ವಿರುದ್ಧ ಬೈಡೆನ್‌ ಪ್ರಬಲ ಅಸ್ತ್ರ

ಟ್ರಂಪ್‌ರನ್ನು ಲೂಸರ್‌ ಎಂದು ಕರೆದಿರುವ ಬೈಡೆನ್‌, ಇರಾಕ್‌ನಲ್ಲಿರುವ ಅಮೆರಿಕ ಸೇನೆಯಲ್ಲಿ ಕರ್ತವ್ಯ ನಿರ್ಹಿಸಿ ಹುತಾತ್ಮನಾದ ತಮ್ಮ ಪುತ್ರ ಬ್ಯೂ ಬಗ್ಗೆ ಪ್ರಸ್ತಾಪಿಸಿದರು. ನನ್ನ ಪುತ್ರ ಧೀರ, ಧೈರ್ಯಶಾಲಿ. ಆದರೆ ಟ್ರಂಪ್‌ ಒಬ್ಬ ಲೂಸರ್‌, ಅಮಾಯಕರ ರಕ್ತ ಹೀರುವವರು ಎಂದು ಕಿಡಿ ಕಾರಿದರು.

ಇದೇ ವೇಳೆ ನೀಲಿಚಿತ್ರ ತಾರೆ ಸ್ಟೊರ್ಮಿ ಡೇನಿಯಲ್ಸ್ ಜೊತೆಗಿನ ಟ್ರಂಪ್‌ ಲೈಂಗಿಕ ಹಗರಣದ ಬಗ್ಗೆ ಪ್ರಸ್ತಾಪಿಸಿದ ಬೈಡೆನ್‌, ಸಿವಿಲ್ ಪೆನಾಲ್ಟಿಗಳಲ್ಲಿ ನೀವು ಎಷ್ಟು ಶತಕೋಟಿ ಡಾಲರ್‌ಗಳನ್ನು ನೀಡಬೇಕಾಗಿದೆ? ಸಾರ್ವಜನಿಕವಾಗಿ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಎಷ್ಟು ದಂಡ ಭರಿಸುತ್ತಿದ್ದೀರಿ? ನಿಮ್ಮ ಹೆಂಡತಿ ಗರ್ಭಿಣಿಯಾಗಿರುವಾಗ ಪೋರ್ನ್‌ಸ್ಟಾರ್ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದೀರಾ? ಎಂದು ಬೈಡೆನ್‌ ಪ್ರಶ್ನಿಸಿದ್ದಾರೆ. ಆದರೆ ಬೈಡೆನ್‌ ಪ್ರಶ್ನೆಗೆ ಅಷ್ಟೇ ವೇಗವಾಗಿ ಉತ್ತರ ಕೊಟ್ಟ ಟ್ರಂಪ್‌ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಉಕ್ರೇನ್‌ ದಾಳಿ

ಉಕ್ರೇನ್‌ ದಾಳಿ ವಿಚಾರವನ್ನು ಮುಂದಿಟ್ಟುಕೊಂಡು ಬೈಡೆನ್‌ಗೆ ಟಾಂಗ್‌ ಕೊಟ್ಟ ಟ್ರಂಪ್‌, ನೀವು ನಿಜವಾಗಿಯೂ ಒಬ್ಬರು ಉತ್ತಮ ಅಧ್ಯಕ್ಷರಾಗಿದ್ದರೆ, ರಷ್ಯಾ ಅಧ್ಯಕ್ಷ ಪುಟಿನ್‌ ತಮ್ಮ ಬಗ್ಗೆ ಗೌರವ ಹೊಂದಿದ್ದರೆ ಉಕ್ರೇನ್‌ ಮೇಲಿನ ರಷ್ಯಾ ದಾಳಿ ನಡೆಯುತ್ತಿರಲಿಲ್ಲ ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ಬೈಡೆನ್‌, ಟ್ರಂಪ್‌ ಏನು ಹೇಳುತ್ತಿದ್ದಾರೆ ಎಂಬುದು ಅರ್ಥವೇ ಆಗುತ್ತಿಲ್ಲ ಎಂದರು.

ತಾವು ಅಧ್ಯಕ್ಷರಾಗಿದ್ದರೆ ಹಮಾಸ್ ಉಗ್ರಗಾಮಿಗಳು ಇಸ್ರೇಲ್ ಅನ್ನು ಎಂದಿಗೂ ಆಕ್ರಮಿಸುತ್ತಿರಲಿಲ್ಲ. ಬೈಡೆನ್‌ ಪ್ಯಾಲೆಸ್ತೀನಿಯನ್‌ ನಂತೆ ವರ್ತಿಸುತ್ತಿದ್ದಾರೆ. ಆದರೆ ಅವರು ಅವನನ್ನು ಇಷ್ಟಪಡುವುದಿಲ್ಲ ಏಕೆಂದರೆ ಅವರು ತುಂಬಾ ಕೆಟ್ಟ ಪ್ಯಾಲೆಸ್ತೇನಿಯನ್‌. ಅವರು ದುರ್ಬಲರು, ”ಎಂದು ಟ್ರಂಪ್ ಬಿಡೆನ್ ಬಗ್ಗೆ ಹೇಳಿದರು.

ಬೈಡೆನ್‌ ಅವರು ಚೀನಾದೊಂದಿಗೆ ವ್ಯವಹರಿಸಲು ಹೆದರುತ್ತಾರೆ ಏಕೆಂದರೆ ಅವರು ಅವರಿಂದ ಹಣವನ್ನು ಪಡೆಯುತ್ತಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. “ನಾವು ಈಗ ನಮ್ಮ ದೇಶದ ಇತಿಹಾಸದಲ್ಲಿ ಅತಿದೊಡ್ಡ ಸಮಸ್ಯೆಯನ್ನು ಹೊಂದಿದ್ದೇವೆ. ನಾವು ಚೀನಾದೊಂದಿಗೆ ಬಿಕ್ಕಟ್ಟು ಹೊಂದಿದ್ದೇವೆ. ಬೈಡೆನ್‌ ಚೀನಾದಿಂದ ಹಣ ಪಡೆಯುತ್ತಿದ್ದಾರೆ ಎಂದು ಟ್ರಂಪ್ ಹೇಳಿದರು.

ಹಣದುಬ್ಬರವು ನಮ್ಮ ದೇಶವನ್ನು ಕೊಲ್ಲುತ್ತಿದೆ. ಇದು ನಮ್ಮನ್ನು ಸಂಪೂರ್ಣವಾಗಿ ಕೊಲ್ಲುತ್ತಿದೆ ”ಎಂದು 2017-2021 ರ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಟ್ರಂಪ್ ಆರೋಪಿಸಿದರೆ, “ಎಲ್ಲವೂ ಉತ್ತಮವಾಗಿದೆ.” ಟ್ರಂಪ್ ಆಡಳಿತಾವಧಿಯಲ್ಲಿ ಅಡಿಯಲ್ಲಿ ಆರ್ಥಿಕತೆಯು ಕುಸಿದಿತ್ತು ಎಂದು ಬಿಡೆನ್ ತಿರುಗೇಟು ಕೊಟ್ಟರು.

ಇದನ್ನೂ ಓದಿ:Hajj Pilgrims: 98 ಭಾರತೀಯ ಹಜ್‌ ಯಾತ್ರಿಕರು ಸಾವು- ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ

Continue Reading

ವಿದೇಶ

Indian Origin Crow: ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ನಿರ್ಧರಿಸಿದ್ದೇಕೆ?

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು(Indian Origin Crow) ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ ಯಾಕೆ ಗೊತ್ತೇ? ಇಲ್ಲಿದೆ ಮಾಹಿತಿ.

VISTARANEWS.COM


on

By

Indian Origin Crow
Koo

ಭಾರತೀಯ ಮೂಲದ 10 ಲಕ್ಷ ಕಾಗೆಗಳನ್ನು (Indian Origin Crow) ಈ ವರ್ಷಾಂತ್ಯದ ವೇಳೆಗೆ ಕೊಲ್ಲಲು ಕೀನ್ಯಾ (Kenya) ಯೋಜನೆ ಹಾಕಿಕೊಂಡಿದೆ. ಕಾಗೆಯು ಪ್ರಾಥಮಿಕ ಪರಿಸರ ವ್ಯವಸ್ಥೆಯ ಭಾಗವಲ್ಲ. ಈ ಕಾಗೆಗಳು ದಶಕಗಳಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯ ಪಕ್ಷಿಗಳನ್ನು ಸಾಯಿಸುತ್ತಿವೆ ಎಂದು ಕೀನ್ಯಾದ ವನ್ಯಜೀವಿ ಇಲಾಖೆ (Wildlife Department) ಹೇಳಿದೆ.

2024ರ ಅಂತ್ಯದ ವೇಳೆಗೆ ಅಂದರೆ ಮುಂಬರುವ ಆರು ತಿಂಗಳಲ್ಲಿ ಭಾರತೀಯ ಮೂಲದ ಕಾಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. 10 ಲಕ್ಷ ಕಾಗೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಭಾರತೀಯ ಮೂಲದ ಕಾಗೆಗಳನ್ನು ‘ಆಕ್ರಮಣಕಾರಿ ವಿದೇಶಿ ಪಕ್ಷಿಗಳು’ ಎಂದು ಕರೆದಿರುವ ಕೀನ್ಯಾದ ವನ್ಯಜೀವಿ ಪ್ರಾಧಿಕಾರವು ಈ ಕಾಗೆಗಳು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿಲ್ಲ ಎಂದಿದೆ.

ಕಳೆದ ಕೆಲವು ವರ್ಷಗಳಲ್ಲಿ ಕರಾವಳಿ ನಗರಗಳಾದ ಮೊಂಬಾಸಾ, ಮಲಿಂಡಿ, ಕಿಲಿಫಿ ಮತ್ತು ವಟಮುಗಳಲ್ಲಿ ಅವುಗಳ ಸಂಖ್ಯೆಯು ವೇಗವಾಗಿ ಹೆಚ್ಚಾಗಿದೆ. ಇದರಿಂದ ಉಂಟಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು 1 ಮಿಲಿಯನ್ ಕಾಗೆಗಳನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದೆ. ಹೊಟೇಲ್ ಉದ್ಯಮದ ಪ್ರತಿನಿಧಿಗಳು ಮತ್ತು ಕಾಗೆ ನಿಯಂತ್ರಣದಲ್ಲಿ ಪರಿಣತಿ ಹೊಂದಿರುವ ವೈದ್ಯರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೊಟೇಲ್ ಉದ್ಯಮಕ್ಕೆ ತೊಂದರೆ

ವನ್ಯಜೀವಿ ಪ್ರಾಧಿಕಾರವು ನೀಡಿರುವ ಹೇಳಿಕೆಯಲ್ಲಿ ಕರಾವಳಿ ನಗರಗಳ ಹೊಟೇಲ್ ಉದ್ಯಮಕ್ಕೆ ಈ ಕಾಗೆಗಳು ದೊಡ್ಡ ಸಮಸ್ಯೆಯಾಗುತ್ತಿವೆ. ಕಾಗೆಗಳಿಂದ ಪ್ರವಾಸಿಗರು ತೆರೆದ ಜಾಗದಲ್ಲಿ ಕುಳಿತು ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಟೇಲ್ ಉದ್ಯಮಕ್ಕೆ ಸಂಬಂಧಿಸಿದವರು ಸಹ ಕಾಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಅವುಗಳ ಮೇಲೆ ನಿಯಂತ್ರಣಕ್ಕೆ ಒತ್ತಾಯಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಿಂದ ಕಾಗೆಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಲಾಗಿದೆ ಎಂದು ಕೀನ್ಯಾ ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಯಾರಿಗೆ ಅಪಾಯ?

ಕೀನ್ಯಾದಲ್ಲಿ ಕಾಗೆಗಳಿಂದಾಗಿ ಅನೇಕ ಪಕ್ಷಿಗಳು ಅಳಿವಿನಂಚಿನಲ್ಲಿವೆ. ಅಂತಹ ಪಕ್ಷಿಗಳನ್ನು ಕಾಗೆಗಳು ನಿರಂತರವಾಗಿ ಬೇಟೆಯಾಡುತ್ತಿವೆ ಎಂದು ವನ್ಯಜೀವಿ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: Norway Tour: ಜಗತ್ತಿನ ಕೊನೆಯ ದೇಶ ಇದು! ಇಲ್ಲಿ 6 ತಿಂಗಳು ಹಗಲು, 6 ತಿಂಗಳು ರಾತ್ರಿ!

ಈ ಕಾಗೆಗಳು ಸಣ್ಣ ಸ್ಥಳೀಯ ಪಕ್ಷಿಗಳ ಗೂಡುಗಳನ್ನು ನಾಶಪಡಿಸುತ್ತವೆ ಮತ್ತು ಅವುಗಳ ಮೊಟ್ಟೆಗಳು ಮತ್ತು ಮರಿಗಳನ್ನು ತಿನ್ನುತ್ತವೆ, ಇದರಿಂದಾಗಿ ಅನೇಕ ಪಕ್ಷಿ ಪ್ರಭೇದಗಳು ಕಡಿಮೆಯಾಗುತ್ತಿವೆ ಎಂದು ಕೀನ್ಯಾದ ಪಕ್ಷಿವಿಜ್ಞಾನಿ ಕಾಲಿನ್ ಜಾಕ್ಸನ್ ತಿಳಿಸಿದ್ದಾರೆ.

ಸ್ಥಳೀಯ ಪಕ್ಷಿಗಳ ಕೊರತೆಯಿಂದ ಪರಿಸರ ಸಂರಕ್ಷಣೆಗೆ ತೊಂದರೆಯಾಗಿದೆ. ಕಾಗೆಗಳ ಹೆಚ್ಚುತ್ತಿರುವ ಸಂಖ್ಯೆಯ ಪರಿಣಾಮವು ಅಂತಹ ಪಕ್ಷಿಗಳ ಮೇಲೆ ಮಾತ್ರವಲ್ಲ ಇಡೀ ಪರಿಸರ ವ್ಯವಸ್ಥೆಯು ಪರಿಣಾಮ ಬೀರುತ್ತಿದೆ ಎಂದು ಕೀನ್ಯಾ ಹೇಳಿದೆ.

Continue Reading
Advertisement
Vikram Misri
ಪ್ರಮುಖ ಸುದ್ದಿ10 mins ago

Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Prajwal Revanna Case
ಕರ್ನಾಟಕ15 mins ago

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Vasavi Condiments owner attempts suicide by consuming sleeping pills
ಬೆಂಗಳೂರು19 mins ago

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

Dengue Prevention
ಆರೋಗ್ಯ27 mins ago

Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಕ್ರೀಡೆ38 mins ago

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

CM Siddaramaiah
ಕರ್ನಾಟಕ51 mins ago

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Dhanya Ramkumar heroine in choukidaar cinema
ಸ್ಯಾಂಡಲ್ ವುಡ್1 hour ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ1 hour ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest1 hour ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ1 hour ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌