Ferrari 250 GTO: ಬರೋಬ್ಬರಿ 430 ಕೋಟಿ ರೂ.ಗೆ ಮಾರಾಟವಾಯ್ತು ಫೆರಾರಿ 250 ಜಿಟಿಒ ಕಾರು! - Vistara News

ವಿದೇಶ

Ferrari 250 GTO: ಬರೋಬ್ಬರಿ 430 ಕೋಟಿ ರೂ.ಗೆ ಮಾರಾಟವಾಯ್ತು ಫೆರಾರಿ 250 ಜಿಟಿಒ ಕಾರು!

Ferrari 250 GTO: 1962ರಲ್ಲಿ ತಯಾರಾದ ಕೆಂಪು ಬಣ್ಣದ ಫೆರಾರಿ 250 ಜಿಟಿಒ ಕಾರು ಹರಾಜಿನಲ್ಲಿ ಬರೋಬ್ಬರಿ ಸುಮಾರು 430 ಕೋಟಿ ರೂ.ಗೆ ಮಾರಾಟವಾಗಿದೆ.

VISTARANEWS.COM


on

ferari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್‌: 1962ರಲ್ಲಿ ತಯಾರಾದ ಕೆಂಪು ಬಣ್ಣದ ಫೆರಾರಿ 250 ಜಿಟಿಒ (Ferrari 250 GTO) ಕಾರು ಹರಾಜಿನಲ್ಲಿ ಬರೋಬ್ಬರಿ 51.7 ಮಿಲಿಯನ್‌ ಡಾಲರ್‌ ಅಂದರೆ ಸುಮಾರು 430 ಕೋಟಿ ರೂ.ಗೆ ಮಾರಾಟವಾಗಿದೆ. ನ್ಯೂಯಾರ್ಕ್‌ನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಇಷ್ಟು ದುಬಾರಿ ಮೊತ್ತ ಕೂಗುವ ಮೂಲಕ ಅಪರೂಪದ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ.

ಎರಡನೇ ದುಬಾರಿ ಹರಾಜು

ವಿಶೇಷ ಎಂದರೆ ಎರಡನೇ ಅತೀ ದುಬಾರಿ ಮೊತ್ತಕ್ಕೆ ಮಾರಾಟವಾದ ಕಾರು ಇದು ಎನ್ನುವ ಅಪರೂಪದ ದಾಖಲೆಗೆ ಪಾತ್ರವಾಗಿದೆ. ಐಷಾರಾಮಿ ಕಾರುಗಳ ಅಂಗಸಂಸ್ಥೆಯಾದ ಆರ್.ಎಂ. ಸೋಥೆಬಿಸ್ 250 ಜಿಟಿಒಗೆ 60 ಮಿಲಿಯನ್ ಡಾಲರ್‌ಗಿಂತ ಹೆಚ್ಚಿನ ಮೊತ್ತವನ್ನು ಸಿಗುವ ನಿರೀಕ್ಷೆ ಇಟ್ಟುಕೊಂಡಿತ್ತು. ಸ್ವಲ್ಪ ಕಡಿಮೆ ಮೊತ್ತಕ್ಕೆ ಮಾರಾಟವಾದರೂ ದೊಡ್ಡ ವ್ಯತ್ಯಾಸ ಇಲ್ಲದಿರುವುದು ಸಮಾಧಾನ ತಂದಿದೆ ಎಂದು ಮೂಲಗಳು ತಿಳಿಸಿವೆ.

ಇಟಲಿ ಮತ್ತು ಸಿಸಿಲಿಯಲ್ಲಿ ಟ್ರ್ಯಾಕ್‌ಗಳನ್ನು ಅಲಂಕರಿಸಿದ ನಂತರ ಈ ಕಾರು 1960ರ ದಶಕದ ಉತ್ತರಾರ್ಧದಲ್ಲಿ ಅಟ್ಲಾಂಟಿಕ್ ಪ್ರಯಾಣವನ್ನು ಪ್ರಾರಂಭಿಸಿತ್ತು. ಬಳಿಕ ಬದಲಾವಣೆಗೆ ಒಳಗಾದ 250 ಜಿಟಿಒ 1985ರಲ್ಲಿ ಓಹಿಯೋ ಮೂಲದ ಸಂಗ್ರಾಹಕರ ಕೈ ಸೇರುವ ಮುನ್ನ ಹಲವು ಅಮೆರಿಕನ್‌ ಮಾಲಕರ ಒಡೆತನದಲ್ಲಿತ್ತು. ಸುಮಾರು ನಾಲ್ಕು ದಶಕಗಳ ನಂತರ ಅದನ್ನು ಸೋಮವಾರ (ನವೆಂಬರ್‌ 13) ಮತ್ತೆ ಮಾರುಕಟ್ಟೆಗೆ ತರಲಾಗಿತ್ತು.

ಕಾರಿಗಿಂತ ಹೆಚ್ಚು

ಫೆರಾರಿ 250 ಜಿಟಿಒ ಕಾರಿಗಿಂತ ವಿಶೇಷವಾದುದು ಎಂದು ಸೋಥೆಬಿಸ್ ಹರಾಜು ಸಂಸ್ಥೆ ವಿವರಿಸಿದೆ. ಇದು ಶ್ರೀಮಂತ ಮತ್ತು ಅಂತಸ್ತಿನ ಇತಿಹಾಸದ ಮತ್ತೊಂದು ಅಧ್ಯಾಯ ಎಂದು ಕರೆದಿದೆ. 2022ರಲ್ಲಿ 135 ಮಿಲಿಯನ್ ಡಾಲರ್‌ (ಸಾವಿರದ ನೂರ ಇಪ್ಪತ್ತೊಂದು ಕೋಟಿ ರೂ.)ಗೆ ಹರಾಜಾದ ಮರ್ಸಿಡಿಸ್ 300 ಎಸ್.ಎಲ್.ಆರ್.ಉಹ್ಲೆನ್ ಹೌಟ್ ಕೂಪೆ ಅತ್ಯಂತ ಹೆಚ್ಚಿನ ಮೌಲ್ಯಕ್ಕೆ ಮಾರಾಟವಾದ ಕಾರು ಎನ್ನುವ ಹೆಗ್ಗಳಿಕೆ ಪಡೆದಿದೆ ಎಂದು ಹರಾಜು ಸಂಸ್ಥೆ ತಿಳಿಸಿದೆ. ಜರ್ಮನ್ ತಯಾರಕರ ವಸ್ತು ಸಂಗ್ರಹಾಲಯದಲ್ಲಿ ನಡೆದ ಗೌಪ್ಯ ಹರಾಜಿನಲ್ಲಿ ಇದು ಮಾರಾಟವಾಗಿತ್ತು. ಇದು ಹರಾಜಿನಲ್ಲಿ ಅಥವಾ ಖಾಸಗಿಯಾಗಿ ಜಾಗತಿಕವಾಗಿ ಮಾರಾಟವಾದ ಅತ್ಯಂತ ದುಬಾರಿ ಕಾರು ಎಂದು ಮೂಲಗಳು ತಿಳಿಸಿವೆ.

ಇಟಾಲಿಯನ್ ಮುಖ್ಯಭೂಮಿ ಮತ್ತು ಸಿಸಿಲಿಯಲ್ಲಿ ಹಲವಾರು ವರ್ಷಗಳ ಸ್ಪರ್ಧೆಯ ನಂತರ, ಈ ಕಾರನ್ನು 1960ರ ದಶಕದ ಉತ್ತರಾರ್ಧದಲ್ಲಿ ಅಮೆರಿಕಾಕ್ಕೆ ಮಾರಾಟ ಮತ್ತು ರಫ್ತು ಮಾಡಲಾಯಿತು. ಈ ಹರಾಜು ಮಾರುಕಟ್ಟೆಯು ಚೀನಾ ಮತ್ತು ಏಷ್ಯಾದಿಂದ ನಡೆಸಲ್ಪಡುತ್ತದೆ ಮತ್ತು ಉದ್ವಿಗ್ನ ಅಂತಾರಾಷ್ಟ್ರೀಯ ಸನ್ನಿವೇಶದ ಇದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Titanic: ಬರೋಬ್ಬರಿ 84.5 ಲಕ್ಷ ರೂ.ಗೆ ಹರಾಜಾಯ್ತು ಟೈಟಾನಿಕ್‌ನ ಅಂತಿಮ ಭೋಜನ ಮೆನು!

“ಹಣಕಾಸು ಮಾರುಕಟ್ಟೆಗಳಲ್ಲಿ ಏನೇ ಆಗಲಿ; ಇಲ್ಲಿ ಸಮಸ್ಯೆಯಾಗುವುದಿಲ್ಲ. ಇದೀಗ ಈ ಕಾರು ಸಂಗ್ರಾಹಕರ ಕೈ ಸೇರಲಿದೆ. ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ದೊರೆಯುವ ಅವಕಾಶ ಇದಾಗಿದೆ” ಎಂದು ಆರ್.ಎಂ.ಸೋಥೆಬಿಸ್‌ನ ಮೈಕೆಲ್ ಕೈಮಾನೊ ಮಾರಾಟಕ್ಕೆ ಮೊದಲು ತಿಳಿಸಿದ್ದರು. ಫೆರಾರಿ ಕಾರನ್ನು “ಸ್ಪರ್ಶಿಸಬಹುದಾದ, ಅನುಭವಿಸಬಹುದಾದ ಮತ್ತು ಕೇಳಬಹುದಾದ ಕಲಾಕೃತಿ”ಗೆ ಅವರು ಹೋಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ.

VISTARANEWS.COM


on

Pakistan
Koo

ಕೆಲವು ದಿನಗಳ ಹಿಂದೆ ಪಾಕ್‌(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್‌(Viral Video) ಆಗಿತ್ತು. ಇದೀಗ ಮತ್ತೊಬ್ಬ ಸಂಸದ ಭಾರತದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್‌ ರೆಹಮಾನ್‌ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ, ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್‌ ಪವರ್‌ಫುಲ್‌ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದತ್ತ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಕಟುವಾಗಿ ಪ್ರಶ್ನಿಸಿದ್ದರು.

ಪಾಕಿಸ್ತಾನದ ವೈಫಲ್ಯಗಳ ಪಟ್ಟಿ ಮಾಡಹೊರಟರೆ ಮುಗಿಯುವುದೇ ಇಲ್ಲ. ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಸರಿಯಾದ ಆಧುನಿಕ ಶಿಕ್ಷಣ ಕಲಿಸುವ ಶಾಲೆಗಳಿಲ್ಲ. ಸಿಂಧ್‌ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಅಲ್ಲಿ ಒಟ್ಟು 2.62 ಕೋಟಿ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಮತಾಂಧತೆ ಕಲಿಸುವ ಮದ್ರಸ ಶಿಕ್ಷಣ ಮಾತ್ರ ವ್ಯಾಪಕವಾಗಿದೆ. ಹಣದುಬ್ಬರದ ಏರಿಕೆಯಿಂದಾಗಿ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಹಣಕಾಸಿನ ಕೊರತೆಯಿಂದ ಬಳಲುತ್ತಿರುವ ಪಾಕ್‌ನ ವಿದೇಶಿ ವಿನಿಮಯ ಮೀಸಲು ನಿಧಿ ಆಮದನ್ನು ಪೂರೈಸಲು ಸಾಕಾಗುತ್ತಿಲ್ಲ.

ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಈಗಾಗಲೇ ಐಎಂಎಫ್‌ 3 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂದು ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ. ಇದಕ್ಕಾಗಿಯೇ, ಆಡಳಿತ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಐಎಂಎಫ್‌ ಪಾಕಿಸ್ತಾನಕ್ಕೆ ಸೂಚಿದ ಶಿಫಾರಸ್ಸಿನ ಪಟ್ಟಿಯಲ್ಲಿ ನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣವೂ ಸೇರಿದೆ.

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ. ಅಲ್ಲಿನ ರಾಜಕೀಯ ನಾಯಕರೇ ತಮ್ಮ ಸ್ಥಿತಿಯನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಾಗ, ತಿದ್ದಿಕೊಳ್ಳಲು ಸರಿಯಾದ ಕಾಲ ಬಂದಿದೆ ಎಂದರ್ಥ.

ಇದನ್ನೂ ಓದಿ: CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Continue Reading

ದೇಶ

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

CAA: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ. ಪೌರತ್ವ ಪಡೆದ ಹಿಂದುಗಳು ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

CAA
Koo

ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ (Indian Citizenship) ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು (Central Government) 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು (Citizenship Papers) ಹಸ್ತಾಂತರಿಸಲಾಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.

ಹೌದು, ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. “ಪಾಕಿಸ್ತಾನದಲ್ಲಿ ಹಿಂದು ಹೆಣ್ಣುಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಹಿಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಬಿಡಿ, ಮನೆಯಿಂದಲೂ ಹೊರಗೆ ಬರಲು ಆಗುವುದಿಲ್ಲ. ಮುಸ್ಲಿಮರು ಹಿಂದು ಹೆಣ್ಣುಮಕ್ಕಳನ್ನು ಅಪಹರಣ ಮಾಡುತ್ತಾರೆ. ಬಲವಂತವಾಗಿ ಮತಾಂತರ ಮಾಡುತ್ತಾರೆ, ಕಿರುಕುಳ ನೀಡುತ್ತಾರೆ. ಈಗ ಭಾರತದ ಪೌರತ್ವ ಸಿಕ್ಕಿರುವುದು ಖುಷಿಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಧನ್ಯವಾದಗಳು” ಎಂದು ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಭಾವನಾ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading

ವಿದೇಶ

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

Robert Fico: ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಅವರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಆತನನ್ನು ಆತನನ್ನು 71 ವರ್ಷದ ಜುರಾಜ್ ಸಿಂಟುಲಾ ಎಂದು ಗುರತಿಸಲಾಗಿದೆ. ಸಾಹಿತಿಯೂ ಆಗಿರುವ ಜುರಾಜ್ ಸಿಂಟುಲಾ ಮೂಲತಃ ದಕ್ಷಿಣ ಸ್ಲೊವಾಕಿಯಾದವನು. ಸದ್ಯ ಆತ ಹತ್ಯೆ ಪ್ರಯತ್ನದ ಕಾರಣವನ್ನು ತಿಳಿಸಿದ್ದಾನೆ. ಅದೇನು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

Robert Fico
Koo

ಬ್ರಾಟಿಸ್ಲಾವಾ: ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Robert Fico) ಅವರ ಹತ್ಯೆಗೆ ಮೇ 15ರಂದು ಯತ್ನಿಸಲಾಗಿದೆ (Assassination attempt). ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯರೊಂದಿಗೆ ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರರಿಂದ ನಾಲ್ಕು ಸುತ್ತು ಶೂಟ್‌ ಮಾಡಿದ್ದಾನೆ. ಸದ್ಯ ಆತನನ್ನು 71 ವರ್ಷದ ಜುರಾಜ್ ಸಿಂಟುಲಾ (Juraj Cintula) ಎಂದು ಗುರತಿಸಲಾಗಿದ್ದು, ಬಂಧಿಸಲಾಗಿದೆ. ರಾಬರ್ಟ್ ಫಿಕೊ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜುರಾಜ್ ಸಿಂಟುಲಾ ಹಿನ್ನೆಲೆ

ಸಾಹಿತಿಯೂ ಆಗಿರುವ ಜುರಾಜ್ ಸಿಂಟುಲಾ ಮೂಲತಃ ದಕ್ಷಿಣ ಸ್ಲೊವಾಕಿಯಾದವನು. ಆತ ಸಾಹಿತ್ಯ ಕ್ಲಬ್ ಒಂದರ ಸಹ-ಸ್ಥಾಪಕ. 2005ರಲ್ಲಿ ಆರಂಭವಾದ ಇದನ್ನು 2016ರವರೆಗೆ ಮುನ್ನಡೆಸಿದ್ದ. ಜುರಾಜ್ ಸಿಂಟುಲಾ ಬರೆದ ಸುಮಾರು ಮೂರು ಕವಿತೆಗಳು ಈಗಾಗಲೇ ಪ್ರಕಟಗೊಂಡಿವೆ. ಆತ ಸ್ಲೋವಾಕ್ ಬರಹಗಾರರ ಸಂಘದ ಸದಸ್ಯನೂ ಹೌದು. ಸ್ಥಳೀಯ ಪತ್ರಿಕೆ ಡೆನ್ನಿಕ್ ಎನ್ (Dennik N) ಪ್ರಕಾರ ಸಿಂಟುಲಾ ಈ ದಾಳಿಯನ್ನು ನಡೆಸಲು ಕಾನೂನುಬದ್ಧವಾಗಿ ನೋಂದಾಯಿತ ಶಾರ್ಟ್ ಬ್ಯಾರೆಲ್ ಗನ್‌ ಅನ್ನು ಬಳಸಿದ್ದಾನೆ.

ಕಾರಣವೇನು?

ದಾಳಿಯ ನಂತರ ಸಿಂಟುಲಾ ಪ್ರತಿಕ್ರಿಯಿಸಿ, ಪ್ರಧಾನಿ ರಾಬರ್ಟ್ ಫಿಕೊ ಅವರ ನೀತಿಗಳನ್ನು ಒಪ್ಪುವುದಿಲ್ಲ. ಹೀಗಾಗಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ. ʼʼಹತ್ಯೆಯ ಪ್ರಯತ್ನದ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆʼʼ ಎಂದು ಸಚಿವ ಮಾತುಸ್ ಸುತಾಜ್ ಎಸ್ಟೋಕ್ ಸ್ಪಷ್ಟಪಡಿಸಿದ್ದಾರೆ. ʼʼಕಳೆದ ವರ್ಷ ಫಿಕೊ ಮೂರನೇ ಅವಧಿಗೆ ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಶಂಕಿತರು ಈ ಸಂಚು ರೂಪಿಸಿದ್ದಾರೆʼʼ ಎಂದೂ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಖಂಡನೆ

ಘಟನೆಯನ್ನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರು ಖಂಡಿಸಿದ್ದಾರೆ. ʼʼಸ್ಲೋವಾಕಿಯಾದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಅವರ ಮೇಲೆ ನಡೆದ ಗುಂಡಿನ ದಾಳಿಯ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಈ ಹೇಡಿತನದ ಮತ್ತು ಪೈಶಾಚಿಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ ಮತ್ತು ಪ್ರಧಾನಿ ಫಿಕೊ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಭಾರತವು ಸ್ಲೋವಾಕ್ ಗಣರಾಜ್ಯದ ಬೆಂಬಲಕ್ಕೆ ನಿಲ್ಲಲಿದೆʼʼ ಎಂದು ಮೋದಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼʼ ಎಂದು ಹೇಳಿದ್ದಾರೆ. ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕೂಡ ಘಟನೆಯನ್ನು ಖಂಡಿಸಿ, ರಾಬರ್ಟ್ ಫಿಕೊ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೂ ದಾಳಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

ಆರೋಗ್ಯ ಸ್ಥಿತಿ ಹೇಗಿದೆ?

ಒಂದು ಗುಂಡು ಪ್ರಧಾನಿ ರಾಬರ್ಟ್ ಫಿಕೊ ಅವರ ಹೊಟ್ಟೆಗೆ ತಗುಲಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ವಿದೇಶ

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Pakistan:ಮುತ್ತಾಹಿದ್‌ ಕ್ವಾಮಿ ಮೂಮೆಂಟ್‌ ಪಾಕಿಸ್ತಾನ ಎಂಬ ಪಕ್ಷದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌, ಸಂಸತ್‌ನಲ್ಲಿ ಪಾಕಿಸ್ತಾನದಲ್ಲಿ ತಲೆದೋರಿರುವ ಸಮಸ್ಯೆ ಬಗ್ಗೆ ವಿವರಿಸುತ್ತಾರೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ

VISTARANEWS.COM


on

Pakistan
Koo

ಪಾಕಿಸ್ತಾನ: ಕೆಲವು ದಿನಗಳ ಹಿಂದೆ ಪಾಕ್‌(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್‌(Viral Video) ಆಗಿತ್ತು. ಇದೀಗ ಮತ್ತೊರ್ವ ಸಂಸದ ಭಾರತ(India)ದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೈರಲಾಗಿರುವ ವಿಡಿಯೋದಲ್ಲೇನಿದೆ?

ಮುತ್ತಾಹಿದ್‌ ಕ್ವಾಮಿ ಮೂಮೆಂಟ್‌ ಪಾಕಿಸ್ತಾನ ಎಂಬ ಪಕ್ಷದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌, ಸಂಸತ್‌ನಲ್ಲಿ ಪಾಕಿಸ್ತಾನದಲ್ಲಿ ತಲೆದೋರಿರುವ ಸಮಸ್ಯೆ ಬಗ್ಗೆ ವಿವರಿಸುತ್ತಾರೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ

ಕರಾಚಿ ಪಾಕಿಸ್ತಾನದ ಆದಾಯದ ಮೂಲ. ಆದರೇ ಕಳೆದ 15ವರ್ಷಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಕರಾಚಿಗೆ ಸಾಧ್ಯವಾಗುತ್ತಿಲ್ಲ. ನೀರು ಬಂದರೂ ಟ್ಯಾಂಕರ್‌ ಮಾಫಿಯಾ ಶುರುವಾಗುತ್ತದೆ. ಇನ್ನು ನಾವು 48,000 ಶಾಲೆಗಳಿವೆ. ಆದರೆ ವರದಿ ಪ್ರಕಾರ 11,000 ಶಾಲೆಗಳು ಮುಚ್ಚಿವೆ. ಸಿಂಧ್‌ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ದೇಶದಲ್ಲಿ ಒಟ್ಟು 2,62,00,000 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಆದರೂ ಸರ್ಕಾರ ಮಾತ್ರ ನಿದ್ದೆಯಿಂದ ಏಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್‌ ರೆಹಮಾನ್‌ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ ಭಾರತದ ವಿಚಾರವನ್ನು ಪ್ರಸ್ತಾಪಿಸಿದರು. ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್‌ ಪವರ್‌ಫುಲ್‌ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಜಮಾತ್‌ ಉಲೇಮಾ ಎ-ಇಸ್ಲಾಂನ ಅಧ್ಯಕ್ಷರೂ ಆಗಿರುವ ಫಜ್ಲೂರ್‌ ರೆಹಮಾನ್‌ ಕಟುವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಅವರು ಇತ್ತೀಚೆಗೆ ನಡೆದ ಚುನಾವಣೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಇದು ಎಂಥಾ ಚುನಾವಣೆ? ಇಲ್ಲಿ ಸೋಲುಂಡವರಿಗೆ ತೃಪ್ತಿಯೇ ಇಲ್ಲ ಮತ್ತು ಗೆದ್ದವರಿಗೆ ಸಂತೋಷವೇ ಇಲ್ಲ. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರದ ಸದಸ್ಯರು ನೈತಿಕತೆಯನ್ನು ಮರೆತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಮಾರಾಟ ಮಾಡುತ್ತಿದ್ದಾರೆ. ಗೋಡೆಗಳ ಹಿಂದೆ ನಮ್ಮನ್ನು ನಿಯಂತ್ರಿಸುವ ಶಕ್ತಿಗಳಿವೆ, ಮತ್ತು ನಾವು ಕೇವಲ ಕೈಗೊಂಬೆಗಳಾಗಿದ್ದಾಗ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಫಜ್ಲುರ್ ರೆಹಮಾನ್ ಕಿಡಿ ಕಾರಿದ್ದರು.


Continue Reading
Advertisement
Pakistan
ಸಂಪಾದಕೀಯ18 mins ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ18 mins ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ28 mins ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ40 mins ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ44 mins ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು59 mins ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ1 hour ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ1 hour ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ2 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ10 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು13 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌