Recession In Germany: ವಿಶ್ವದ 4ನೇ ಬೃಹತ್‌ ವಿತ್ತ ರಾಷ್ಟ್ರ ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ; ಭಾರತಕ್ಕೂ ಹೊಡೆತ? - Vistara News

ಪ್ರಮುಖ ಸುದ್ದಿ

Recession In Germany: ವಿಶ್ವದ 4ನೇ ಬೃಹತ್‌ ವಿತ್ತ ರಾಷ್ಟ್ರ ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ; ಭಾರತಕ್ಕೂ ಹೊಡೆತ?

Recession In Germany: ಕೊರೊನಾ ಬಿಕ್ಕಟ್ಟಿನಿಂದಾಗಿ ಜಗತ್ತಿನ ರಾಷ್ಟ್ರಗಳು ಆರ್ಥಿಕ ಹಿಂಜರಿತದ ಸುಳಿಗೆ ಸಿಲುಕುತ್ತವೆ ಎಂಬ ತಜ್ಞರ ಎಚ್ಚರಿಕೆಯಂತೆ ಜರ್ಮನಿಯು ಆರ್ಥಿಕ ಹಿಂಜರಿತದ ಹೊಡೆತಕ್ಕೆ ಸಿಲುಕಿದೆ. ಇದು ಬೇರೆ ದೇಶಗಳಲ್ಲೂ ಆತಂಕ ಮೂಡಿಸಿದೆ.

VISTARANEWS.COM


on

Germany People
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಜಾಗತಿಕವಾಗಿ ಆರ್ಥಿಕ ಹಿಂಜರಿತ ಉಂಟಾಗುತ್ತದೆ ಎಂಬ ತಜ್ಞರ ಅಭಿಪ್ರಾಯವು ನಿಜವಾಗುವ ಸಮಯ ಸನ್ನಿಹಿತವಾಗಿದೆ. ಜಗತ್ತಿನಲ್ಲಿಯೇ ನಾಲ್ಕನೇ ಬೃಹತ್‌ ಆರ್ಥಿಕತೆ ಹೊಂದಿರುವ ರಾಷ್ಟ್ರವಾದ, ಯುರೋಪಿನಲ್ಲಿಯೇ ಬೃಹತ್‌ ಆರ್ಥಿಕತೆ ಹೊಂದಿರುವ ರಾಷ್ಟ್ರ ಎನಿಸಿದ ಜರ್ಮನಿಯೇ (Recession In Germany) ಆರ್ಥಿಕ ಹಿಂಜರಿತದ ಸುಳಿಗೆ ಸಿಲುಕಿದೆ. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಜರ್ಮನಿ ಜಿಡಿಪಿಯು ಶೇ.0.3ರಷ್ಟು ಕುಸಿದಿದೆ. ಇದರಿಂದಾಗಿ ದೇಶವು ಅಧಿಕೃತವಾಗಿ ಆರ್ಥಿಕ ಹಿಂಜರಿತದ ಹೊಡೆತಕ್ಕೆ ಸಿಲುಕಿದಂತಾಗಿದೆ.

2022ರ ನಾಲ್ಕನೇ ತ್ರೈಮಾಸಿಕದಲ್ಲಿ ಜರ್ಮನಿಯ ಜಿಡಿಪಿಯು ಶೇ.0.5ರಷ್ಟು ಕುಸಿದಿತ್ತು. ಇದಾದ ಬಳಿಕ ಜರ್ಮನಿಯ ಆರ್ಥಿಕತೆಯು ಚೇತರಿಕೆ ಹೊಂದುತ್ತದೆ ಎಂದು ಅಲ್ಲಿನ ಸರ್ಕಾರ ಹೇಳಿತ್ತು. ಆದರೆ, 2023ರ ಮೊದಲ ತ್ರೈಮಾಸಿಕದಲ್ಲಿ ಶೇ.0.3ರಷ್ಟು ಕುಸಿದಿದೆ. “ಜರ್ಮನಿಯ ಆರ್ಥಿಕತೆ ಬೆಳವಣಿಗೆಯು ಅಚ್ಚರಿಯ ರೀತಿಯಲ್ಲಿ ನಕಾರಾತ್ಮಕವಾಗಿದೆ” ಎಂದು ಜರ್ಮನಿ ಹಣಕಾಸು ಸಚಿವ ಕ್ರಿಶ್ಟಿಯನ್‌ ಲಿಂಡ್ನೆರ್‌ ಅವರೇ ಹೇಳಿದ್ದಾರೆ.

ಯಾವ ದೇಶಕ್ಕೆ ಹಿಂಜರಿತದ ಸಾಧ್ಯತೆ ಎಷ್ಟಿದೆ?

ಕೊರೊನಾ ಹೊಡೆತದಿಂದ ಜಗತ್ತಿನ ಹತ್ತಾರು ದೇಶಗಳು ತಾತ್ಕಾಲಿಕವಾಗಿ ಚೇತರಿಸಿಕೊಂಡಿದ್ದರೂ ಪ್ರಸಕ್ತ ವರ್ಷದಲ್ಲಿ ಆರ್ಥಿಕ ಹಿಂಜರಿತ ನಿಶ್ಚಿತ ಎಂದೇ ಹೇಳಲಾಗುತ್ತಿತ್ತು. ಅದರಂತೆ, ಜರ್ಮನಿಯಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಡಾಲರ್‌ ಎದುರು ಯುರೋ ಮೌಲ್ಯವು ಶೇ.0.02ರಷ್ಟು ಕುಸಿದಿದೆ. ಇದರಿಂದಾಗಿ ಮುಂದಿನ ದಿನಗಳಲ್ಲೂ ಜರ್ಮನಿಯು ಸಂಕಷ್ಟ ಎದುರಿಸಲಿದೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: Money secrets : ಉಳಿತಾಯದ ಅಭ್ಯಾಸ ಭಾರತೀಯರನ್ನು ಆರ್ಥಿಕ ಹಿಂಜರಿತದಿಂದ ಪಾರು ಮಾಡಿದೆ: ಹರಿಪ್ರಕಾಶ್‌ ಕೋಣೆಮನೆ

ಭಾರತಕ್ಕೂ ಇದೆಯೇ ಆತಂಕ?

ಕೊರೊನಾ ನಂತರ ಜಗತ್ತಿಗೇ ಆರ್ಥಿಕ ಹಿಂಜರಿತ ಭೀತಿ ಕಾಡುತ್ತಿದ್ದರೂ ಜಾಗತಿಕ ವರದಿಗಳು, ಲೆಕ್ಕಾಚಾರಗಳು ಭಾರತದ ಪರ ಇರುವುದರಿಂದ ದೇಶದಲ್ಲಿ ಆರ್ಥಿಕ ಹಿಂಜರಿತದ ಭೀತಿ ಇಲ್ಲ ಎಂದೇ ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯೇ (IMF) ಭಾರತದ ಆರ್ಥಿಕತೆ ಸಕಾರಾತ್ಮಕವಾಗಿದೆ ಎಂದು ತಿಳಿಸಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಅವರು ಭಾರತದ ಜಿಡಿಪಿ ಬೆಳವಣಿಗೆ ಶೇ.7ಕ್ಕೆ ಏರಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಸದ್ಯಕ್ಕೆ ಯಾವುದೇ ಆತಂಕ ಇಲ್ಲ ಎನ್ನಲಾಗುತ್ತಿದೆ. ಅಲ್ಲದೆ, ಜರ್ಮನಿಯು ಆರ್ಥಿಕ ಹಿಂಜರಿತದಿಂದ ಬಳಲಿ, ಆರ್‌ಬಿಐ ಲೆಕ್ಕಾಚಾರದಂತೆ ಭಾರತದ ಆರ್ಥಿಕತೆ ಬಲಿಷ್ಠವಾದರೆ ಮುಂದಿನ ದಿನಗಳಲ್ಲಿ ಭಾರತವು ವಿಶ್ವದ ನಾಲ್ಕನೇ ಬೃಹತ್‌ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಲಿದೆ. ಸದ್ಯ, ಭಾರತವು ಜಗತ್ತಿನಲ್ಲಿಯೇ ಬೃಹತ್‌ ಆರ್ಥಿಕತೆ ಹೊಂದಿರುವ ಐದನೇ ರಾಷ್ಟ್ರವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Lok Sabha Election 2024: ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

VISTARANEWS.COM


on

Lok Sabha Election 2024 Only a guaranteed wave in Karnataka says Cm Siddaramaiah
Koo

ಚಿತ್ರದುರ್ಗ: ಚುನಾವಣೆ (Lok Sabha Election 2024) ಸಂದರ್ಭದಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ. ಕರ್ನಾಟಕ ರಾಜ್ಯ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಕೇಳಲಿಲ್ಲ. ಈಗ ಮತ ಕೇಳಲು ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಬಂದಿದ್ದಾರೆ. ಕರ್ನಾಟಕದಲ್ಲಿ ಮೋದಿ (Modi wave in Karnataka) ಅಲೆಯಿಲ್ಲ. ಏಕೆಂದರೆ ಅವರ ಸುಳ್ಳು ಜನರಿಗೆ ಅರ್ಥವಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿಗಳ ಅಲೆಯಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಹಸೀ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿದ್ದಾರೆ. ಹತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದವರು, ಮಹಿಳೆಯರು, ಬಡವರ ಪರವಾಗಿ ಅವರು ಏನೂ ಮಾಡಿಲ್ಲ. ಆರ್ಥಿಕ ಶಕ್ತಿ ತುಂಬುವಲ್ಲಿ ವಿಫಲರಾಗಿದ್ದಾರೆ. 2014ರಲ್ಲಿ‌ ಮೋದಿಯವರು ಅನೇಕ ಭರವಸೆ ಕೊಟ್ಟಿದ್ದರು. ಆದರೆ ಯಾವುದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Lok Sabha Election 2024 Only a guaranteed wave in Karnataka says Cm Siddaramaiah

ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಂದಾಗಿದ್ದಾರೆ. ಸೋಲುವ ಭಯದಿಂದ ಈ ಇಬ್ಬರೂ ಒಂದಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಸೋಲುತ್ತೇವೆ ಎಂದು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಪೈಪೋಟಿ ಮೇಲೆ ಸುಳ್ಳು

ಈ ಮೊದಲು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹೇಳಿದ್ದರು. ಆದರೆ ಈಗ ಕೋಮುವಾದಿ ಬಿಜೆಪಿ ಪಕ್ಷದ ಜತೆಗೆ ಸೇರಿಕೊಂಡಿದ್ದಾರೆ. ಮನಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು, ಮೋದಿ ಅದನ್ನು ಅಕ್ಷಯ ಪಾತ್ರೆ ಮಾಡಿಟ್ಟಿದಾರೆ. ಮೋದಿ, ದೇವೇಗೌಡರು ಪೈಪೋಟಿ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ‌ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ರೈತರ ಸಾಲ ಮನ್ನಾ ಮಾಡದ ಮೋದಿ

ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಬಿಜೆಪಿಯವರು ಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯವರು ಅಲ್ಲ, 2028ರವರೆಗೆ ನಮಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನೀವು ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Continue Reading

ಪ್ರಮುಖ ಸುದ್ದಿ

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Virat Kohli : ಈ ಮನ್ನಣೆ ನಿಸ್ಸಂದೇಹವಾಗಿ ಅರ್ಹವಾಗಿದೆ. ಏಕೆಂದರೆ ಮುಂಬೈನ ಕ್ರಿಕೆಟ್​ ಪ್ರೇಕ್ಷಕರು ಕೊಹ್ಲಿ ಇತಿಹಾಸವನ್ನು ನಿರ್ಮಿಸುವುದಕ್ಕೆ ಸಾಕ್ಷಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಶತಕ ಬಾರಿಸುವ ಮೂಲಕ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೊಹ್ಲಿ, ವಿಶ್ವಕಪ್​ನ ಮೊದಲ ಸೆಮಿಫೈನಲ್​​ನಲ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.

VISTARANEWS.COM


on

Virat kohli
Koo

ಬೆಂಗಳೂರು: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್​ನಲ್ಲಿ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ ವಿರಾಟ್ ಕೊಹ್ಲಿ (Virat Kohli) ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿದ್ದರು. ಈ ಮೂಲಕ ಅವರು ಸಚಿನ್ ತೆಂಡೂಲ್ಕರ್​ ಅವರ 49 ಏಕ ದಿನ ಶತಕಗಳ ಸಾಧನೆಯನ್ನು ಮುರಿದಿದ್ದರು. ಹೀಗಾಗಿ ಅದು ಕ್ರೀಡಾ ಇತಿಹಾಸದಲ್ಲಿ ಚಾರಿತ್ರಿಕ ಘಟನೆಯಾಗಿದೆ. ಅವರು ಶತಕ ಬಾರಿಸಿದ ಬಳಿಕ ದೇಶ ವಿದೇಶಗಳ ಅಥ್ಲೀಟ್​ಗಳಿಂದ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಇದೀಗ ಅವರ ಆ ಅವಿಸ್ಮರಣೀಯ ಶತಕಕ್ಕೆ ಅಂತಾರಾಷ್ಟ್ರೀಯ ಗೌರವವೊಂದು ದೊರಕಿದೆ ಎಂಬುದಾಗಿ ವರದಿಯಾಗಿದೆ. ಕೊಹ್ಲಿಯ ಅಭಿಮಾನಿ ಎಂಬ ಹೆಸರಲ್ಲಿ ಸೃಷ್ಟಿ ಮಾಡಿರುವ ಎಕ್ಸ್​ ಖಾತೆಯಲ್ಲಿ ಈ ಮಾಹಿತಿಹಂಚಿಕೊಳ್ಳಲಾಗಿದೆ.

ಸ್ಪೇನ್ ನ ಮ್ಯಾಡ್ರಿಡ್ ನ ಪಲಾಸಿಯೊ ಡಿ ಸಿಬೆಲೆಸ್ ನಲ್ಲಿ ಸೋಮವಾರ (ಏಪ್ರಿಲ್ 22) ನಡೆದ ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ ನಲ್ಲಿ ಕೊಹ್ಲಿಯ ಈ ಅಸಾಧಾರಣ ಸಾಧನೆಯನ್ನು ಉನ್ನತ ಕ್ರೀಡಾ ಕ್ಷಣಗಳಲ್ಲಿ ಒಂದಾಗಿ ಗೌರವಿಸಲಾಗಿದೆ ಎಂದು ಎಕ್ಸ್​ನಲ್ಲಿ ಬರೆಯಲಾಗಿದೆ.

ಈ ಮನ್ನಣೆ ನಿಸ್ಸಂದೇಹವಾಗಿ ಅರ್ಹವಾಗಿದೆ. ಏಕೆಂದರೆ ಮುಂಬೈನ ಕ್ರಿಕೆಟ್​ ಪ್ರೇಕ್ಷಕರು ಕೊಹ್ಲಿ ಇತಿಹಾಸವನ್ನು ನಿರ್ಮಿಸುವುದಕ್ಕೆ ಸಾಕ್ಷಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಶತಕ ಬಾರಿಸುವ ಮೂಲಕ ತಮ್ಮ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೊಹ್ಲಿ, ವಿಶ್ವಕಪ್​ನ ಮೊದಲ ಸೆಮಿಫೈನಲ್​​ನಲ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.

ಸಚಿನ್​ ದಾಖಲೆ ಮುರಿದ ಕೊಹ್ಲಿ

ಎರಡು ದಶಕಗಳ ಕಾಲ ರಾಷ್ಟ್ರದ ಭರವಸೆಗಳನ್ನು ಹೊತ್ತ ಬ್ಯಾಟಿಂಗ್ ದಂತಕಥೆ ಸಚಿನ್ ಅವರ ಹೆಜ್ಜೆಗಳನ್ನು ಅನುಸರಿಸಿ, ಸಚಿನ್ ತೆಂಡೂಲ್ಕರ್ ಅವರ ಸ್ಮರಣೀಯ ವಿಶ್ವಕಪ್ ವಿದಾಯದ 12 ವರ್ಷಗಳ ನಂತರ, ಕೊಹ್ಲಿ 50 ನೇ ಏಕದಿನ ಶತಕವನ್ನು ತಲುಪಿದರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

ಭಾರತದ 3ನೇ ಕ್ರಮಾಂಕದ ಬ್ಯಾಟರ್​ ತಮ್ಮ 279ನೇ ಏಕದಿನ ಇನ್ನಿಂಗ್ಸ್​ನಲ್ಲಿ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ. ವಿಶೇಷವೆಂದರೆ ಕೊಹ್ಲಿಯ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಲು ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಕ್ರೀಡಾಂಗಣದಲ್ಲಿದ್ದರು.

ಸೋಮವಾರ ಸಂಜೆ ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್​​ 25 ನೇ ಆವೃತ್ತಿಗೆ ಸಾಕ್ಷಿಯಾಯಿತು. ಇದು ಹಿಂದಿನ ವರ್ಷದ ಅತ್ಯುತ್ತಮ ವೈಯಕ್ತಿಕ ಮತ್ತು ಕ್ರೀಡಾ ಸಾಧನೆಗಳನ್ನು ಗುರುತಿಸಲು ಮೀಸಲಾಗಿರುವ ಕಾರ್ಯಕ್ರಮವಾಗಿದೆ. ಸರ್ಬಿಯಾದ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ಮತ್ತು ಸ್ಪೇನ್ ನ ಐಟಾನಾ ಬೊನ್ಮಾಟಿ ಕ್ರಮವಾಗಿ ವರ್ಷದ ಕ್ರೀಡಾಪಟು ಮತ್ತು ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿಶ್ವಕಪ್ ಫೈನಲ್​​ನಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ ಆಸ್ಟ್ರೇಲಿಯಾದ ಕ್ರಿಕೆಟಿಗ ಟ್ರಾವಿಸ್ ಹೆಡ್ ಅವರ ಗಮನಾರ್ಹ ಕ್ಯಾಚ್ ಸೇರಿದಂತೆ ಗಮನಾರ್ಹ ಕ್ರೀಡಾ ಕ್ಷಣಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗಿದೆ.

Continue Reading

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆನ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಪ್ರಮುಖ ಸುದ್ದಿ

Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Yuzvendra Chahal: ಐಪಿಎಲ್ ಹರಾಜಿನಲ್ಲಿ ಫ್ರಾಂಚೈಸಿ ಅವರನ್ನು ಮತ್ತೆ ಖರೀದಿಸುತ್ತದೆ ಎಂದು ಅವರಿಗೆ ಸೂಚನೆ ನೀಡಿತ್ತು ಎಂಬ ವರದಿಗಳೂ ಇದ್ದವು. ಆದಾಗ್ಯೂ, ಅವರ ಹೆಸರು ಬಿಡ್ಡಿಂಗ್​​ಗೆ ಬಂದಾಗ, ಆರ್​ಸಿಬಿ ಆಡಳಿತ ಬಗ್ಗೆ ಯಾವುದೇ ಆಸಕ್ತಿ ತೋರಿಸಿರಲಿಲ್ಲ. ಹೀಗಾಗಿ ಉದ್ದೇಶಪೂರ್ವಕ ಕೆಲಸ ಎಂಬುದು ಬಹಿರಂಗಗೊಂಡಿತು.

VISTARANEWS.COM


on

Yuzvendra Chahal
Koo

ನವದೆಹಲಿ: ಐಪಿಎಲ್ 2022 ರ ಹರಾಜಿಗೆ ಮೊದಲು ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB)​ ಫ್ರಾಂಚೈಸಿಯು ಯುಜ್ವೇಂದ್ರ ಚಾಹಲ್ ಅವರನ್ನು ಬಿಡುಗಡೆ ಮಾಡಿದ್ದಕ್ಕೆ ಹಾಗೂ ಆ ಮೇಲೆ ಖರೀದಿ ಮಾಡದಿರುವುದಕ್ಕೆ ಆರ್​ಸಿಬಿಯ ಮಾಜಿ ಮುಖ್ಯ ಕೋಚ್ ಮತ್ತು ಕ್ರಿಕೆಟ್ ನಿರ್ದೇಶಕ ಮೈಕ್ ಹೆಸನ್ ಇದೀಗ ಕಾರಣಕೊಟ್ಟಿದ್ದಾರೆ. ಯಜ್ವೇಂದ್ರ ಚಹಲ್ (Yuzvendra Chahal) 2014ರಿಂದ 2021ರ ಅವಧಿಯಲ್ಲಿ ಆರ್​​ಸಿಬಿ ಪರ 139 ವಿಕೆಟ್​ಗಳನ್ನು ಪಡೆದು ಅತ್ಯಂತ ಯಶಸ್ವಿ ಬೌಲರ್ ಆಗಿದ್ದ ಹೊರತಾಗಿಯೂ ತಂಡದಲ್ಲಿ ಉಳಿದಿರುವ ವಿಚಾರವನ್ನು ತಿಳಿಸಿದ್ದಾರೆ.

ಐಪಿಎಲ್ 2022 ರ ಮೆಗಾ ಹರಾಜಿಗೆ ಮುಂಚಿತವಾಗಿ, ಆರ್​​ಸಿಬಿ ಫ್ರಾಂಚೈಸಿ ಯುಜ್ವೇಂದ್ರ ಚಹಲ್ ಅವರನ್ನು ಉಳಿಸಿಕೊಳ್ಳದಿದ್ದಾಗ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದರು. ತನ್ನನ್ನು ಉಳಿಸಿಕೊಳ್ಳಲಾಗುವುದಿಲ್ಲ ಎಂದು ಫ್ರಾಂಚೈಸಿಯಿಂದ ಫೋನ್ ಕರೆ ಅಥವಾ ಮಾಹಿತಿಯೂ ಸ್ವೀಕರಿಸಿಲ್ಲ ಎಂದು ಸ್ಪಿನ್ನರ್​ ನಂತರ ಬಹಿರಂಗಪಡಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು ಹಾಗೂ ಈಗಲೂ ಅಭಿಮಾನಿಗಳಿಗೆ ಬೇಸರವಿದೆ.

ಐಪಿಎಲ್ ಹರಾಜಿನಲ್ಲಿ ಫ್ರಾಂಚೈಸಿ ಅವರನ್ನು ಮತ್ತೆ ಖರೀದಿಸುತ್ತದೆ ಎಂದು ಅವರಿಗೆ ಸೂಚನೆ ನೀಡಿತ್ತು ಎಂಬ ವರದಿಗಳೂ ಇದ್ದವು. ಆದಾಗ್ಯೂ, ಅವರ ಹೆಸರು ಬಿಡ್ಡಿಂಗ್​​ಗೆ ಬಂದಾಗ, ಆರ್​ಸಿಬಿ ಆಡಳಿತ ಬಗ್ಗೆ ಯಾವುದೇ ಆಸಕ್ತಿ ತೋರಿಸಿರಲಿಲ್ಲ. ಹೀಗಾಗಿ ಉದ್ದೇಶಪೂರ್ವಕ ಕೆಲಸ ಎಂಬುದು ಬಹಿರಂಗಗೊಂಡಿತು.

ಇದನ್ನೂ ಓದಿ: Match Fixing : ಇರ್ಫಾನ್​ ಪಠಾಣ್​, ಸುರೇಶ್ ರೈನಾ ಪಾಲ್ಗೊಂಡಿದ್ದ ​ ಕ್ರಿಕೆಟ್ ಲೀಗ್​ನಲ್ಲಿ ಮ್ಯಾಚ್​ ಫಿಕ್ಸಿಂಗ್?

2019 ರಿಂದ 2023 ರವರೆಗೆ ಫ್ರಾಂಚೈಸಿಯ ಕ್ರಿಕೆಟ್ ವ್ಯವಹಾರಗಳ ನೇತೃತ್ವ ವಹಿಸಿದ್ದ ಮೈಕ್​ ಹೆಸ್ಸನ್, ಚಾಹಲ್ ನಿರ್ಗಮನದ ಹಿಂದಿನ ತಾರ್ಕಿಕತೆಯನ್ನು ಬಹಿರಂಗಪಡಿಸಿದ್ದಾರೆ. ಚಾಹಲ್ ಅವರನ್ನು ಉಳಿಸಿಕೊಳ್ಳದಿರುವುದು ಆರ್​​ಸಿಬಿಗೆ ಹೆಚ್ಚುವರಿ ಆರ್ಥಿಕ ಒತ್ತಡ ಕಡಿಮೆ ಮಾಡುತ್ತದೆ. ಚಹಲ್ ಮತ್ತು ವೇಗಿ ಹರ್ಷಲ್ ಪಟೇಲ್ ಇಬ್ಬರನ್ನೂ ಹರಾಜಿನಲ್ಲಿ ಭದ್ರಪಡಿಸುವ ಗುರಿಯನ್ನು ಹೊಂದಿತ್ತು. ಆದರೆ ಅದು ಸಾಧ್ಯವಾಗಿಲ್ಲ ಎಂದಿದೆ.

ನಾವು ಚಾಹಲ್ ಅವರನ್ನು ಉಳಿಸಿಕೊಳ್ಳಲಿಲ್ಲ. ಏಕೆಂದರೆ ಕೇವಲ ಮೂವರು ಆಟಗಾರರನ್ನು ಬಿಡುಗಡೆ ಮಾಡಿ ಹೆಚ್ಚುವರಿ ನಾಲ್ಕು ಕೋಟಿ ರೂಪಾಯಿ ಮೂಲಕ ಅವರನ್ನು ವಾಪಸ್​ ಕರೆಸಬೇಕಾಗಿತ್ತು. ಅದರ ಮೂಲಕ ನಾವು ಚಹಲ್ ಮತ್ತು ಹರ್ಷಲ್ ಪಟೇಲ್ ಇಬ್ಬರನ್ನೂ ಮರಳಿ ಖರೀದಿಸುವ ಗುರಿ ಹೊಂದಿದ್ದೆವು”ಎಂದು ಹೆಸನ್ ಜಿಯೋ ಸಿನೆಮಾದಲ್ಲಿ ಬಹಿರಂಗಪಡಿಸಿದರು.

ತಡವಾಗಿ ಬಂದ ಹೆಸರು

ಹರಾಜಿನಲ್ಲಿ ಚಾಹಲ್ ಹೆಸರು ತಡವಾಗಿ ಬಂತು. ಈ ವೇಳೆ ಆರ್​ಸಿಬಿ ತನ್ನ ಯೋಜನೆಗಳಲ್ಲಿ ಬಿಕ್ಕಟ್ಟನ್ನು ಎದುರಿಸಿತು. ಇದು ಶ್ರೀಲಂಕಾದ ಸ್ಪಿನ್ ಆಲ್ರೌಂಡರ್ ವನಿಂದು ಹಸರಂಗ ಅವರನ್ನು ತೆಗೆದುಕೊಳ್ಳುವ ಮೂಲಕ ಅವಕಾಶ ನಷ್ಟವಾಯಿತು ಎಂದು ಹೇಳಿದರು.

ಚಹಲ್​ಗಿಂತ ಮೊಲದೇ ಹರಾಜಿನಲ್ಲಿ ಹಸರಂಗ ಅವರ ಹೆಸರು ಕಾಣಿಸಿಕೊಂಡಾಗ ಆರ್​ಸಿಬಿ ಅವರಿಗೆ ಆದ್ಯತೆ ನೀಡಿತು. ಅಜಾಗರೂಕತೆಯಿಂದಾಗಿ ಚಾಹಲ್ ಅವರನ್ನು ಕಳೆದುಕೊಂಡಿತು ಎಂದು ಹೆಸ್ಸಾನ್ ಹೇಳಿದ್ದಾರೆ.

“ನಾನು ನನ್ನ ವೃತ್ತಿಜೀವನವನ್ನು ಮುಗಿಸುವವರೆಗೂ ಮತ್ತು ಬಹುಶಃ ಅದರಾಚೆಗೂ ಯೂಜಿ (ಚಾಹಲ್) ಅವರನ್ನು ಕಳೆದುಕೊಂಡಿರುವುದಕ್ಕೆ ನಾನು ನಿರಾಶೆಗೊಳ್ಳುತ್ತೇನೆ. ಅವರು ಅತ್ಯುತ್ತಮ ಬೌಲರ್, “ಎಂದು ಹೆಸ್ಸನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಐಪಿಎಲ್​ನಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಚಾಹಲ್ ಪಾತ್ರರಾಗಿದ್ದಾರೆ. ಇದರಲ್ಲಿ ಆರು ನಾಲ್ಕು ವಿಕೆಟ್ ಸಾಧನೆ ಮತ್ತು ಐದು ವಿಕೆಟ್ ಸಾಧನೆಗಳು ಸೇರಿವೆ. ಇರದಲ್ಲೊಂದು ಹ್ಯಾಟ್ರಿಕ್​ ಸಾಧನೆಯೂ ಇದೆ.

Continue Reading
Advertisement
HD Devegowda
ಕರ್ನಾಟಕ6 mins ago

HD Devegowda: ನಾನು ಇನ್ನೆರಡು ವರ್ಷ ಬದುಕಬಹುದು ಎಂದು ಕಣ್ಣೀರು ಹಾಕಿದ ದೇವೇಗೌಡರು

Lok Sabha Election 2024 Only a guaranteed wave in Karnataka says Cm Siddaramaiah
ಕರ್ನಾಟಕ13 mins ago

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Virat kohli
ಪ್ರಮುಖ ಸುದ್ದಿ28 mins ago

Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

Job Alert
ಉದ್ಯೋಗ29 mins ago

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Murder case In Bengaluur
ಬೆಂಗಳೂರು30 mins ago

Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Summer Hairstyles
ಫ್ಯಾಷನ್30 mins ago

Summer Hairstyles: ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

hardik pandya
ಕ್ರೀಡೆ30 mins ago

IPL 2024: ಹಾರ್ದಿಕ್​ ಪಾಂಡ್ಯ ನಿಜವಾಗಿಯೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರಾ?; ವಿಚಿತ್ರ ವರ್ತನೆಯ ವಿಡಿಯೊ ವೈರಲ್​

Yuzvendra Chahal
ಪ್ರಮುಖ ಸುದ್ದಿ59 mins ago

Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Three boys drown
ಕರ್ನಾಟಕ1 hour ago

Yadgir News: ಕೆರೆಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರ ದುರ್ಮರಣ

Fraud case
ಬೆಂಗಳೂರು1 hour ago

Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌