ವಿದೇಶ
Gitarama Prison: ಈ ಜೈಲಿನಲ್ಲಿ ಅಪರಾಧಿಗಳೇ ಪಕ್ಕದವರನ್ನು ಕೊಂದು ಮಾಂಸ ತಿನ್ನುತ್ತಿದ್ದರಂತೆ!
ರುವಾಂಡಾ ಪೂರ್ವ ಆಫ್ರಿಕಾದ ದೇಶ. ಇಲ್ಲಿನ ಗಿಟಾರಾಮ ಎಂಬ ಜೈಲು ವಿಶ್ವದ ಅತಿ ಖತರ್ನಾಕ್ ಜೈಲುವಾಸಗಳಲ್ಲಿ ಒಂದು. ಈ ಜೈಲು ಅಪರಾಧಿಗಳಿಂದ ತುಂಬಿ ತುಳುಕುತ್ತಿದ್ದು, ಜೈಲುವಾಸಿಗಳಿಗೆ ಮಲಗುವುದು ಬಿಡಿ, ಕೂರಲೂ ಜಾಗವಿರುವುದಿಲ್ಲವಂತೆ.
ನರಕ ಎಂದರೆ ಎಲ್ಲಿದೆ ಎಂದು ತೋರಿಸಲು ಏನೇನೋ ಊಹನೆ ಮಾಡಬೇಕಿಲ್ಲ. ಭೂಮಿಯ ಮೇಲೆ ತಪ್ಪು ಮಾಡಿ ಸಿಕ್ಕಿ ಬಿದ್ದು ಜೈಲಿಗೆ ಹೋದರೆ ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಎಂಬಂತೆ ನರಕ ಪ್ರಾಪ್ತಿ ಎಂದು ನಾವೂ ವಿವರಣೆ ಕೊಡಬಹುದು. ಆದರೆ ಇಲ್ಲೊಂದು ಜೈಲಿದೆ. ಅಲ್ಲಿರುವುದು ನಮ್ಮ ಊಹನೆಗೂ ಮೀರಿದ ನರಕವೇ. ಇಲ್ಲಿನ ಜೈಲುವಾಸಿಗಳು ಹಸಿವಾದರೆ ತಮ್ಮ ಸಹವರ್ತಿಯ ಜೊತೆಗೇ ಬಡಿದಾಡಿ ಅವರ ಮಾಂಸವನ್ನು ತಿಂದಂಥ (ಘಟನೆಗಳೂ ನಡೆದಿವೆಯಂತೆ! ಹೌದು ಇಂತಹ ಕುಖ್ಯಾತಿ ಪಡೆದಿರುವ ಜೈಲು ರುವಾಂಡಾದ ಗಿಟಾರಾಮ ಜೈಲು (Gitarama Prison). ರುವಾಂಡಾ ಪೂರ್ವ ಆಫ್ರಿಕಾದ ದೇಶ. ಇಲ್ಲಿನ ಗಿಟಾರಾಮ ಎಂಬ ಜೈಲು ವಿಶ್ವದ ಅತಿ ಖತರ್ನಾಕ್ ಜೈಲುವಾಸಗಳಲ್ಲಿ ಒಂದು. ಈ ಜೈಲು ಅಪರಾಧಿಗಳಿಂದ ತುಂಬಿ ತುಳುಕುತ್ತಿದ್ದು, ಜೈಲುವಾಸಿಗಳಿಗೆ ಮಲಗುವುದು ಬಿಡಿ, ಕೂರಲೂ ಜಾಗವಿರುವುದಿಲ್ಲವಂತೆ. ಹಾಗಾಗಿಯೇ ಈ ಜೈಲು ವಿಶ್ವದ ಅತ್ಯಂತ ಕೆಟ್ಟ ಜೈಲುಗಳಲ್ಲಿ ಒಂದಾಗಿದೆ.
ಈ ಜೈಲೊಂದರಲ್ಲೇ ಐದು ಸಾವಿರದಿಂದ ದಿಂದ ಏಳು ಸಾವಿರವರೆಗೂ ಜೈಲುವಾಸಿಗಳಿದ್ದು, ಜೈಲೊಂದು ಗರಿಷ್ಟ ಎಷ್ಟು ಮಂದಿಯನ್ನು ತನ್ನಲ್ಲಿ ಇರಿಸಿಕೊಳ್ಳಬಹುದು ಎಂಬುದಕ್ಕೆ ವಿರುದ್ಧವಾಗಿ ವರ್ತಿಸುತ್ತಿದೆ ಎಂಬ ದೂರುಗಳೂ ಇವೆ.
ಆಮ್ನೇಸ್ಟಿ ಇಂಟರ್ನ್ಯಾಷನಲ್ ಪ್ರಕಾರ, ೩೦೦೦ ಮಂದಿ ಇರಬಹುದಾದ ಜಾಗವಿರುವ ಈ ಜೈಲಿನಲ್ಲಿ 2007ರಲ್ಲಿ 7,477 ಮಂದಿಯಿದ್ದರು ಎನ್ನಲಾಗಿದೆ. ಹಾಗಾಗಿ ಇಲ್ಲಿನ ಜೈಲುವಾಸಿಗಳು ಕೆಲವೊಮ್ಮೆ ತಮ್ಮೊಳಗೇ ಬಡಿದಾಡಿ, ಕೊಂದು ಕೊನೆಗೆ ಅವರ ಮಾಂಸವನ್ನೇ ತಿಂದಂಥ ಘಟನೆಗಳ ಉದಾಹರಣೆಗಳಿವೆ ಎನ್ನಲಾಗಿದೆ.
ಇಲಿಗಳು, ಹೆಗ್ಗಣಗಳು ಜೈಲಿನ ತುಂಬ ಓಡಾಡಿಕೊಂಡಿದ್ದು, ಅತ್ಯಂತ ಅನಾರೋಗ್ಯಕರ ವಾತಾವರಣ ಇಲ್ಲಿದೆ. 1995ರಲ್ಲಿ ಈ ಜೈಲಿನ ಪರಿಸ್ಥಿತಿಯ ಬಗ್ಗೆ ಸಾಕಷ್ಟು ವಿವಾದ ಎದ್ದಿತ್ತು. ಅಪರಾಧಿಗಳು ಎಂಥ ನರಕದ ಪರಿಸ್ಥಿತಿಯಲ್ಲಿ ಇಲ್ಲಿ ಕೊಳೆಯಬೇಕಾಗಿದೆ ಎಂಬ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. 1994ರ ರುವಾಂಡ ನರಮೇಧ ಘಟನೆಯ ನಂತರ ಈ ಜೈಲು ಸಾಕಷ್ಟು ಸುದ್ದಿ ಮಾಡಿತ್ತು. ರೆಡ್ ಕ್ರಾಸ್ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳು ಇದರ ವಿರುದ್ಧ ದನಿ ಎತ್ತಿದ್ದವು. ಇದೊಂದು ಅಮಾನವೀಯ ನಡೆಯಾಗಿದ್ದು ಪ್ರತಿನಿತ್ಯ 5-6 ಮಂದಿ ಸಾವಿಗೀಡಾಗುತ್ತಾರೆ. ಅಲ್ಲಿನ ಪರಿಸ್ಥಿತಿಯನ್ನು ಶೀಘ್ರದಲ್ಲೇ ಸರಿ ಮಾಡಬೇಕಿದೆ. ಅದಕ್ಕೆ ಹೆಚ್ಚಿನ ಅಗತ್ಯವಿದೆ ಎಂದಿದ್ದವು.
ರುವಾಂಡಾ ಜೈಲಿನ ಇತಿಹಾಸದಲ್ಲಿ ಸಾಕಷ್ಟು ಇಂತಹ ಘಟನೆಗಳಿವೆ. 1995ರಲ್ಲಿ ಸುಮಾರು ಒಂದು ಸಾವಿರ ಮಂದಿ ಅಪರಾಧಿಗಳು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಗಂಟೆಗಟ್ಟಲೆ ನಿಂತೇ ಇರಬೇಕಾದ ಪರಿಸ್ಥಿತಿ ಇಲ್ಲಿರುವುದರಿಂದ ಅಲ್ಲಿನ ಇಲ್ಲನ ಅಪರಾಧಿಗಳ ಕಾಲುಗಳು ಕೊಳೆತು ಹೋಗುವಂತ ಆರೋಗ್ಯ ಸಮಸ್ಯೆಗಳೂ ಉಲ್ಬಣಿಸಿತ್ತು. ಸರಿಯಾದ ಆಹಾರ, ಔಷಧಿ ಮತ್ತಿತರ ಯಾವುದೇ ನೆರವಿಲ್ಲದೆ ಅತ್ಯಂತ ಕ್ಲಿಷ್ಕರ ಪರಿಸ್ಥಿತಿ ಇಲ್ಲಿದು ಕಳೆದ ವರ್ಷವೊಂದರಲ್ಲೇ ರುವಾಂಡಾದ ಜೈಲುಗಳಲ್ಲಿ ಇಟ್ಟು 2000 ಮಂದಿ ಸತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಗಿಟರಮ ಜೈಲುವಾಸಿಗಳೇ ಎನ್ನಲಾಗಿದೆ.
ರುವಾಂಡಾ ನರಮೇಧ: ರುವಾಂಡಾ ದೇಶದಲ್ಲಿ 1994ರಲ್ಲಿ ನಡೆದ ನರಮೇಧ ಇತಿಹಾಸದಲ್ಲಿನ ಕಪ್ಪುಚುಕ್ಕೆ. ರುವಾಂಡಾ ದೇಶದ ಬಹುಸಂಖ್ಯಾತ ಹುಟು ಜನಾಂಗಕ್ಕೂ ಅಲ್ಪಸಂಖ್ಯಾತ ಟೂಟ್ಸಿ ಜನಾಂಗಕ್ಕೂ ಎಣ್ಣೆ ಸೀಗೆ ಸಂಬಂಧ. 1994ರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಲು ಬೀದಿಗಿಳಿದಿದ್ದ ಟೂಟ್ಸಿ ಜನಾಂಗದವರು ಹುಟು ಜನಾಂಗದ ರಾಷ್ಟ್ರಪತಿ ತೆರಳಿದ ವಿಮಾನ ಹೊಡೆದುರುಳಿಸಿದ್ದರು. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಹುಟು ಜನಾಂಗದವರು ಟೂಟ್ಸಿ ಜನಾಂಗದ ಮಂದಿಯನ್ನು ಹುಡುಕಿ ಹುಡುಕಿ ಕೊಲ್ಲಲಾರಂಭಿಸಿದರು. ಕೇವಲ 100 ದಿನಗಳಲ್ಲಿ 10 ಲಕ್ಷ ಮಂದಿಯ ನರಮೇಧ ನಡೆದಿತ್ತು. ಇದು ಇತಿಹಾಸ ಕಂಡ ಅತ್ಯಂತ ಭೀಕರ ನರಮೇಧಗಳಲ್ಲಿ ಒಂದಾಗಿದೆ ಎಂಬುದನ್ನಿಲ್ಲಿ ಸ್ಮರಿಸಬಹುದು.
ಇದನ್ನೂ ಓದಿ: Adipurush Movie: ಕಟ್ಟಪ್ಪ ಬಾಹುಬಲಿ ಕೊಂದಿದ್ದು ಯಾಕೆ ಅಂತ ಗೊತ್ತಾಯ್ತು; ಸೆಹ್ವಾಗ್ ಟ್ವೀಟ್ ವೈರಲ್!
ದೇಶ
Nijjar Killing: ಭಾರತ ವಿರುದ್ಧ ಪಾಕ್ ಕುತಂತ್ರ; ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಹಿಂದೆ ಐಎಸ್ಐ ಕೈವಾಡ
Nijjar Killing: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಕೈವಾಡ ಇದೆ ಎಂದು ತಿಳಿದುಬಂದಿದೆ. ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಇಂತಹ ಷಡ್ಯಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಉಗ್ರ ಪೋಷಣೆ, ಉಗ್ರರ ದಾಳಿಗೆ ಸಹಕಾರ ನೀಡುವ ಮೂಲಕ ಭಾರತದ ಜತೆ ವ್ಯಾಪಾರ, ಸಹಕಾರ, ದ್ವಿಪಕ್ಷೀಯ ನೆರವಿನಿಂದ ವಂಚಿತವಾಗಿರುವ ಪಾಕಿಸ್ತಾನವು (Pakistan) ಭಾರತ ಜತೆಗೆ ಮಾತುಕತೆ ನಡೆಸಲು ಜಾಗತಿಕ ಮಟ್ಟದಲ್ಲಿ ಲಾಬಿ ನಡೆಸುತ್ತಿದೆ. ನಾವು ಮಾತುಕತೆಗೆ ಸಿದ್ಧ ಎಂದು ಜಾಗತಿಕ ವೇದಿಕೆಗಳಲ್ಲಿಯೂ ಹೇಳಿಕೊಳ್ಳುತ್ತಿದೆ. ಆದರೆ, ಭಾರತದ ವಿರುದ್ಧ ಕುತಂತ್ರ ಮಾಡುವ ಬುದ್ಧಿಯನ್ನು ಮಾತ್ರ ಪಾಕಿಸ್ತಾನ ಬಿಟ್ಟಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ. ಭಾರತದ ವಿರುದ್ಧ ಷಡ್ಯಂತ್ರದ ಭಾಗವಾಗಿಯೇ ಪಾಕಿಸ್ತಾನ ಇಂತಹ ಕೃತ್ಯ (Nijjar Killing) ಎಸಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳೇ ತಿಳಿಸಿವೆ.
“ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ (ISI) ಕೈವಾಡವಿದೆ. ಕೆನಡಾದಲ್ಲಿ ರಾಹತ್ ರಾವ್ ಹಾಗೂ ತಾರಿಕ್ ಕಿಯಾನಿ ಎಂಬುವರು ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ಅಪರಾಧ ಎಸಗಿ ಕೆನಡಾಗೆ ತೆರಳುವವರಿಗೂ ಇವರು ನೆರವು ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೂ ಇವರೇ ಪ್ಲಾನ್ ರೂಪಿಸಿದ್ದಾರೆ. ಭಾರತದ ವಿರುದ್ಧ ಕೆನಡಾದಲ್ಲಿ ಪಾಕಿಸ್ತಾನ ಕುತಂತ್ರ ಮಾಡುತ್ತಿದೆ” ಎಂದು ತಿಳಿದುಬಂದಿದೆ.
ನಿಜ್ಜರ್ ನಿವಾಸದ ಬಳಿಯೇ ಠಿಕಾಣಿ
“ಹರ್ದೀಪ್ ಸಿಂಗ್ ನಿಜ್ಜರ್ ತುಂಬ ಎಚ್ಚರದಿಂದ ಇರುತ್ತಿದ್ದ. ಆತನಿಗೆ ಹೆಚ್ಚಿನ ಪ್ರಮಾಣದಲ್ಲಿ ಭದ್ರತೆ ಇರುತ್ತಿತ್ತು. ಆತನ ವಸತಿ, ಪ್ರಯಾಣ ಸೇರಿ ಹಲವು ವಿಷಯಗಳಲ್ಲಿ ಭಾರಿ ಗೌಪ್ಯತೆ ಇರುತ್ತಿತ್ತು. ಹಾಗಾಗಿ, ಸಾಮಾನ್ಯರಿಗೆ ಆತನ ಬಗ್ಗೆ ಯಾವುದೇ ಸುಳಿವು ಇರುತ್ತಿರಲಿಲ್ಲ. ಆದರೆ, ಹರ್ದೀಪ್ ಸಿಂಗ್ ನಿಜ್ಜರ್ ಚಲನವಲನ ಸೇರಿ ಹಲವು ಮಾಹಿತಿ ರಾಹತ್ ರಾವ್ ಹಾಗೂ ತಾರಿಕ್ ಕಿಯಾನಿಗೆ ಇತ್ತು. ನಿಜ್ಜರ್ ಮನೆಯ ಬಳಿಯೇ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳು ವಾಸವಿದ್ದರು. ಇವರೇ ನಿಜ್ಜರ್ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಮೂಲಗಳು ತಿಳಿಸಿವೆ.
ಜೂನ್ 18ರಂದು ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೀಡಾಗಿದ್ದಾನೆ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪ ಕೂಡ ಮಾಡಿದ್ದಾರೆ. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.
ಪ್ರಮುಖ ಸುದ್ದಿ
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
Iraq Fire Accident: ಇರಾಕ್ನ ನಿನೆವೆಹ್ ಪ್ರಾಂತ್ಯದ ವೆಡ್ಡಿಂಗ್ ಹಾಲ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 114 ಜನ ಮೃತಪಟ್ಟಿದ್ದಾರೆ. 550ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಬಾಗ್ದಾದ್: ಇರಾಕ್ನ ನಿನೆವೆಹ್ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿರುವ ಮದುವೆ ಹಾಲ್ನಲ್ಲಿ (Wedding Hall) ಭೀಕರ ಅಗ್ನಿ ದುರಂತ (Iraq Fire Accident) ಸಂಭವಿಸಿದ್ದು, 114 ಜನ ಮೃತಪಟ್ಟಿದ್ದಾರೆ. ಹಾಗೆಯೇ, 550ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಹಲವು ಜನ ಅಗ್ನಿಯ ಕೆನ್ನಾಲಗೆಗೆ ಸಿಲುಕಿರುವ ಶಂಕೆ ಇರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ. ದುರಂತದಲ್ಲಿ ಮದುಮಕ್ಕಳು ಕೂಡ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮೊಸುಲ್ ನಗರದ ಹಮ್ದನಿಯಾ ಪ್ರದೇಶದಲ್ಲಿರುವ ಕ್ರಿಶ್ಚಿಯನ್ ಸಮುದಾಯದ ಹಾಲ್ನಲ್ಲಿ ಮದುವೆ ಪಾರ್ಟಿ ನಡೆಯುತ್ತಿತ್ತು. ಎಲ್ಲರೂ ಮದುವೆಯ ಸಂಭ್ರಮದಲ್ಲಿದ್ದರು. ಇದೇ ವೇಳೆ ಒಂದು ಅಗ್ನಿ ಕಡೆ ಅಗ್ನಿಯ ಸ್ಪರ್ಶವಾಗಿದೆ. ಇದಾಗುತ್ತಲೇ ಇಡೀ ಮದುವೆ ಹಾಲ್ಗೆ ಬೆಂಕಿ ಆವರಿಸಿದೆ. ಕೂಡಲೇ ಕಿರುಚಾಡುತ್ತ ಜನ ಹೊರಗೆ ಬರಲು ಯತ್ನಿಸಿದರಾದರೂ ಬಹುತೇಕ ಮಂದಿ ಅಗ್ನಿ ಕೆನ್ನಾಲಗೆಗೆ ಸಿಲುಕಿದರು. ಇಡೀ ಕಲ್ಯಾಣ ಮಂಟಪ ಸುಟ್ಟು ಕರಕಲಾಗಿದ್ದು, ಬಹುತೇಕ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮನಕಲಕುವ ವಿಡಿಯೊ
BREAKING: Fire breaks out at wedding hall in northern Iraq, killing at least 100 people – INA pic.twitter.com/PvfJ1psHRN
— BNO News (@BNONews) September 26, 2023
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ಅಗ್ನಿ ಅವಘಡ ಸಂಭವಿಸುತ್ತಲೇ ಹಲವು ಅಗ್ನಿ ಶಾಮಕ ವಾಹನಗಳು, ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಅಷ್ಟೊತ್ತಿಗಾಗಲೇ ಇಡೀ ಕಲ್ಯಾಣ ಮಂಟಪಕ್ಕೆ ಬೆಂಕಿ ಆವರಿಸಿತ್ತು. ಇಷ್ಟಾದರೂ ಸಿಬ್ಬಂದಿಯು 550 ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನ ಜನರಿಗೆ ಗಂಭೀರ ಗಾಯಗಳಾಗಿರುವುದರಿಂದ ಹಾಗೂ ಇನ್ನೂ ಹಲವು ಜನ ಕಲ್ಯಾಣ ಮಂಟಪದಲ್ಲಿ ಸಿಲುಕಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸುಟ್ಟುಕರಕಲಾದ ವೆಡ್ಡಿಂಗ್ ಹಾಲ್
Photo of wedding hall in Iraq where a fire has killed at least 100 people
— Steve Lookner (@lookner) September 26, 2023
(from @SardarSattar) pic.twitter.com/wSpRQR53tm
ಇದನ್ನೂ ಓದಿ: Car blast : ಗ್ಯಾಸ್ ತುಂಬಿಸುವಾಗ ಅಗ್ನಿ ಅವಘಡ; ಧಗಧಗನೆ ಹೊತ್ತಿ ಉರಿದ ಒಮಿನಿ ಕಾರು
ಅಗ್ನಿ ಅವಘಡದಲ್ಲಿ ನೂರಾರು ಜನ ಮೃತಪಟ್ಟಿರುವುದಕ್ಕೆ ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್ ಸುದಾನಿ (Mohammed Shia al-Sudani) ಸಂತಾಪ ಸೂಚಿಸಿದ್ದು, ಘಟನೆಯನ್ನು ತನಿಖೆಗೆ ಆದೇಶಿಸಿದ್ದಾರೆ. ಹಾಗೆಯೇ, ಗಾಯಾಳುಗಳಿಗೆ ಚಿಕಿತ್ಸೆ, ಜನರ ರಕ್ಷಣೆಗೆ ಸಕಲ ರೀತಿಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮದುವೆ ಹಾಲ್ಅನ್ನು ಹಲವು ರೀತಿಯಲ್ಲಿ ಸಿಂಗರಿಸಿದ್ದು, ಅವುಗಳಿಗೆ ಬೆಂಕಿ ತಗುಲಿದ್ದೇ ಹೆಚ್ಚಿನ ಜನ ಮೃತಪಡಲು ಕಾರಣ ಎನ್ನಲಾಗಿದೆ. ಆದಾಗ್ಯೂ, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ದೇಶ
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
UNGA Speech: 78ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ಪಾಲ್ಗೊಂಡು ದೇಶದ ವಾದವನ್ನು ಮಂಡಿಸಿದರು.
ವಿಶ್ವ ಸಂಸ್ಥೆ: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದು(Respect for territorial integrity), ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಷೇರಿದಂತೆ ಅನೇಕ ವಿಷಯಗಳನ್ನು ಭಾರತದ ವಿದೇಶಾಂಗ ಸಚಿವ ಎಸ್ ಜೈ ಶಂಕರ್ (External affairs minister S Jaishankar) ಅವರು, ಮಂಗಳವಾ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ”ನಮಸ್ತೆ, ನಾನು ಭಾರತದಿಂದ ಬಂದಿದ್ದೇನೆ(Bharat)” ಎಂದು ಮಾತು ಆರಂಭಿಸಿದ ಜೈ ಶಂಕರ್ ಅವರು, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಮತ್ತು ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರು. ಇದೇ ವೇಳೆ, ಪರೋಕ್ಷವಾಗಿ ಕೆನಡಾಕ್ಕೆ ಕುಟುಕಿದ ಜೈ ಶಂಕರ್ ಅವರು, ಭಯೋತ್ಪಾದನೆಯ ಪ್ರತಿಕ್ರಿಯೆಯು ರಾಜಕೀಯ ಅನುಕೂಲಕ್ಕಾಗಿ ನಿರ್ಧರಿಸಬಾರದು ಎಂದು ಹೇಳಿದರು(UNGA Speech).
ಲಸಿಕೆ ವರ್ಣಭೇದ ನೀತಿಯಂತಹ ಅನ್ಯಾಯವನ್ನು ಮರುಕಳಿಸಲು ನಾವು ಎಂದಿಗೂ ಅವಕಾಶವನ್ನು ನೀಡಬಾರದು. ಹವಾಮಾನ ಕ್ರಿಯೆಯು ಸಹ ಐತಿಹಾಸಿಕ ಜವಾಬ್ದಾರಿಗಳ ತಪ್ಪಿಸಿಕೊಳ್ಳುವಿಕೆಗೆ ಸಾಕ್ಷಿಯಾಗಲು ಸಾಧ್ಯವಿಲ್ಲ. ಆಹಾರ ಮತ್ತು ಶಕ್ತಿಯನ್ನು ಅಗತ್ಯವಿರುವವರಿಂದ ಶ್ರೀಮಂತರಿಗೆ ಸಾಗಿಸಲು ಮಾರುಕಟ್ಟೆಯ ಶಕ್ತಿಯನ್ನು ಬಳಸಬಾರದು ಎಂದು ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರು ಹೇಳಿದರು.
ರಾಜಕೀಯ ಅನುಕೂಲವು ಭಯೋತ್ಪಾದನೆ, ಉಗ್ರವಾದ ಮತ್ತು ಹಿಂಸೆಗೆ ಪ್ರತಿಕ್ರಿಯೆಗಳನ್ನು ನಿರ್ಧರಿಸುತ್ತದೆ ಎಂದು ನಾವು ಪರಿಗಣಿಸಬಾರದು. ಅದೇ ರೀತಿ, ಪ್ರಾದೇಶಿಕ ಸಮಗ್ರತೆಗೆ ಗೌರವ ಮತ್ತು ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದು ಎಂದು ಭಾರತೀಯ ವಿದೇಶಾಂಗ ಸಚಿವರು ಹೇಳಿದರು.
78 ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಅವರ ಭಾಷಣವು ಗಮನ ಸೆಳೆಯಿತು. ನ್ಯಾಯಯುತ, ಸಮಾನ ಮತ್ತು ಪ್ರಜಾಪ್ರಭುತ್ವದ ವಿಶ್ವ ಕ್ರಮಕ್ಕಾಗಿ ಕರೆ ನೀಡಿದರು. ನಮ್ಮ ಚರ್ಚೆಗಳಲ್ಲಿ, ನಾವು ಸಾಮಾನ್ಯವಾಗಿ ನಿಯಮಾಧಾರಿತ ಆದೇಶದ ಪ್ರಚಾರವನ್ನು ಪ್ರತಿಪಾದಿಸುತ್ತೇವೆ. ಕಾಲಕಾಲಕ್ಕೆ, ಯುಎನ್ ಚಾರ್ಟರ್ಗೆ ಗೌರವವನ್ನು ಸಹ ಒಳಗೊಂಡಿರುತ್ತದೆ. ಆದರೆ ಎಲ್ಲಾ ಚರ್ಚೆಗಾಗಿ, ಇನ್ನೂ ಕೆಲವು ರಾಷ್ಟ್ರಗಳು ಕಾರ್ಯಸೂಚಿಯನ್ನು ರೂಪಿಸುತ್ತವೆ ಮತ್ತು ರೂಢಿಗಳನ್ನು ವ್ಯಾಖ್ಯಾನಿಸಲು ಪ್ರಯತ್ನಿಸುತ್ತವೆ. ಇದು ಅನಿರ್ದಿಷ್ಟವಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ: ಯುರೋಪ್ ದೇಶಗಳಿಗೆ ತಮ್ಮ ಸಮಸ್ಯೆ ಜಗತ್ತಿನ ಸಮಸ್ಯೆ ಎಂಬ ಭ್ರಮೆ: ವಿದೇಶಾಂಗ ಸಚಿವ ಜೈ ಶಂಕರ್ ಖಡಕ್ ಮಾತು
ಮಹಿಳಾ ಮಸೂದೆ ಪ್ರಸ್ತಾಪ
ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆಯೂ ವಿದೇಶಾಂಗ ಸಚಿವರು ಮಾತನಾಡಿದರು. “ನಮ್ಮ ಇತ್ತೀಚಿನ ಸಮರ್ಥನೆಯು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಶಾಸನ ಮಾಡಿದ್ದೇವೆ. ಪ್ರಜಾಪ್ರಭುತ್ವದ ಪ್ರಾಚೀನ ಸಂಪ್ರದಾಯಗಳು ಆಳವಾದ ಆಧುನಿಕ ಬೇರುಗಳನ್ನು ಹೊಂದಿರುವ ಸಮಾಜ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಪರಿಣಾಮವಾಗಿ, ನಮ್ಮ ಆಲೋಚನೆಗಳು, ವಿಧಾನಗಳು ಮತ್ತು ಕಾರ್ಯಗಳು ಹೆಚ್ಚು ಆಧಾರವಾಗಿವೆ ಮತ್ತು ಅಧಿಕೃತವಾಗಿವೆ ಎಂದು ಸಚಿವರು ಪ್ರತಿಪಾದಿಸಿದರು.
ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೇಶ
Kashmir Dispute: ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಅಮೆರಿಕ ರಾಯಭಾರಿ ರಹಸ್ಯ ಭೇಟಿ! ಭಾರತಕ್ಕೆ ಶೀಘ್ರ ಸಿಗುತ್ತಾ ಸಿಹಿ ಸುದ್ದಿ?
Kashmir Dispute: ಪಾಕ್ ಆಕ್ರಮಿತ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಕ್ಕೆ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರಿ ಭೇಟಿ ನೀಡಿರುವ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ನವದೆಹಲಿ: ಭಾರತ-ಪಾಕಿಸ್ತಾನ (India and Pakistan) ನಡುವಿನ ಕಾಶ್ಮೀರ ವಿವಾದ (Kashmir Dispute) ಬಗೆಹರಿಸಲು ಅಮೆರಿಕ (America) ಮಧ್ಯಸ್ಥಿಕೆಗೆ ಮುಂದಾಗಿದೆಯಾ? ಇಂಥದೊಂದು ಅನುಮಾನ ಮೂಡಲು ಕಾರಣವಿದೆ. ಜಿ20 ಶೃಂಗಸಭೆ (G20 Summit) ನಡೆಯುತ್ತಿರುವಾಗಲೇ ಅಮೆರಿಕನ್ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿದರೆ, ಅದೇ ಸಮಯದಲ್ಲಿ ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೇವಿಡ್ ಬ್ಲೋಮ್ (David Blome) ಅವರು ಪಾಕಿಸ್ತಾನ್ ಆಕ್ರಮಿತ ಕಾಶ್ಮೀರ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ (Gilgit-Baltistan) ರಹಸ್ಯ ಭೇಟಿ ನೀಡಿದ್ದರು. ಈ ಕಾರಣಕ್ಕಾಗಿಯೇ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ (Eric Garcetti) ಅವರು ಮಾತ್ರ, ಪಾಕಿಸ್ತಾನ ಮತ್ತು ಭಾರತಗಳು ತಮ್ಮ ನಡುವಿನ ಈ ಸಮಸ್ಯೆಯವನ್ನು ದ್ವಿಪಕ್ಷೀಯವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿನ ಅಮೆರಿಕ ರಾಯಭಾರಿಗೆ ಪ್ರತಿಕ್ರಿಯಿಸುವುದು ನನ್ನ ಕೆಲಸವಲ್ಲ. ಆದರೆ, ಅವರು ಆಗಲೇ ಅಲ್ಲಿದ್ದರು. ಜಿ20 ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ನಿಯೋಗದ ಭಾಗವವಾಗಿ ನಾವಿದ್ದೇವೆ ಎಂದು ಅಮೆರಿಕದ ರಾಯಭಾರಿ 20 ನೇ ಭಾರತ-ಅಮೆರಿಕ ಆರ್ಥಿಕ ಶೃಂಗದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಾಶ್ಮೀರ ವಿಷಯದ ಬಗ್ಗೆ ಅಮೆರಿಕದ ಹೊಂದಿರುವ ನಿಲುವನ್ನು ರಾಯಭಾರಿ ಗಾರ್ಸೆಟ್ಟಿ ಅವರು ಪುನರುಚ್ಚಾರ ಮಾಡಿದರು. ಕಾಶ್ಮೀರ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯ ಮೂಲಕ ಪರಿಹರಿಸಬೇಕಾದ ದ್ವಿಪಕ್ಷೀಯ ವಿಷಯವಾಗಿದೆ. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಹರಿಸಬೇಕಾದ ಸಮಸ್ಯೆಯಾಗಿದೆ ಮತ್ತು ಅಮೆರಿಕ ಸೇರಿದಂತೆ ಮೂರನೇ ವ್ಯಕ್ತಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಎರಿಕ್ ಗಾರ್ಸೆಟ್ಟಿ ಅವರು ಹೇಳಿದರು.
ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಇತ್ತೀಚೆಗೆ ಗಿಲ್ಗಿಟ್-ಬಾಲ್ಟಿಸ್ತಾನ್ಗೆ ಖಾಸಗಿ ಭೇಟಿ ನೀಡಿದ್ದರು. ಈ ಘಟನೆಯೇ ಗಾರ್ಸೆಟ್ಟಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪ್ರೇರಣೆಯಾಗಿದೆ. ಗಿಲ್ಗಿಟ್-ಬಾಲ್ಟಿಸ್ತಾನವನ್ನು ನವದೆಹಲಿಯು, ಅವಿಭಜಿತ ಜಮ್ಮು ಮತ್ತು ಕಾಶ್ಮೀರ ಹಾಗೂ ಭಾರತದ ಅವಿಭಾಜ್ಯ ಅಂಗ ಎಂದು ಪರಿಗಣಿಸುತ್ತದೆ.
ಈ ಸುದ್ದಿಯನ್ನೂ ಓದಿ: G 20 Meeting: ಚೀನಾ ಮತ್ತೆ ಉದ್ಧಟತನ; ಕಾಶ್ಮೀರ ವಿವಾದಿತ ಪ್ರದೇಶ ಎಂದು ಹೇಳಿಕೆ, ಜಿ-20 ಸಭೆ ಬಹಿಷ್ಕಾರ
ಭೇಟಿಯ ವೇಳೆ ಪಾಕಿಸ್ತಾನದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಗಿಲ್ಗಿಟ್-ಬಾಲ್ಟಿಸ್ತಾನದ ಅನೇಕ ಮನರಂಜನೆಯ ಸ್ಥಳಗಳಿಗೆ ಭೇಟಿ ನೀಡಿದರು ಮತ್ತು ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಅವರು ಗಿಲ್ಗಿಟ್-ಬಾಲ್ಟಿಸ್ತಾನ್ ಅಸೆಂಬ್ಲಿಯ ಡೆಪ್ಯುಟಿ ಸ್ಪೀಕರ್ ಸಾದಿಯಾ ಡ್ಯಾನಿಶ್ ಮತ್ತು ಅಸೆಂಬ್ಲಿ ಸದಸ್ಯೆ ರಾಣಿ ಸನಮ್ ಫರ್ಯಾದ್ ಅವರೊಂದಿಗೆ ಸಭೆ ನಡೆಸಿದರು.
ಅಮೆರಿಕದ ರಾಜತಾಂತ್ರಿಕರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. 2002ರ ಅಕ್ಟೋಬರ್ನಲ್ಲಿ ಡೊನಾಲ್ಡ್ ಬ್ಲೋಮ್ ಅವರು ಮುಜಫರಾಬಾದ್ಗೆ ಭೇಟಿ ನೀಡಿ, ಪಾಕ್ನಿಂದ ನೇಮಕವಾಗಿರುವ ತನ್ವೀರ್ ಇಲ್ಯಾಸ್ ಅವರನ್ನು ಭೇಟಿ ಮಾಡಿದ್ದರು. 2005ರ ಭೂಕಂಪದಲ್ಲಿ ಮೃತಪಟ್ಟ ಜನರಿಗೆ ಈ ವೇಳೆ ಬ್ಲೋಮ್ ಶ್ರದ್ಧಾಂಜಲಿ ಸಲ್ಲಿಸಿದ್ದರು. ಅಲ್ಲದೇ, ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯನ್ನು ದೃಢಪಡಿಸಿದ್ದರು.
-
ದೇಶ15 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ16 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್22 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ22 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್19 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್