Gitarama Prison: ಈ ಜೈಲಿನಲ್ಲಿ ಅಪರಾಧಿಗಳೇ ಪಕ್ಕದವರನ್ನು ಕೊಂದು ಮಾಂಸ ತಿನ್ನುತ್ತಿದ್ದರಂತೆ! - Vistara News

ವಿದೇಶ

Gitarama Prison: ಈ ಜೈಲಿನಲ್ಲಿ ಅಪರಾಧಿಗಳೇ ಪಕ್ಕದವರನ್ನು ಕೊಂದು ಮಾಂಸ ತಿನ್ನುತ್ತಿದ್ದರಂತೆ!

ರುವಾಂಡಾ ಪೂರ್ವ ಆಫ್ರಿಕಾದ ದೇಶ. ಇಲ್ಲಿನ ಗಿಟಾರಾಮ ಎಂಬ ಜೈಲು ವಿಶ್ವದ ಅತಿ ಖತರ್ನಾಕ್‌ ಜೈಲುವಾಸಗಳಲ್ಲಿ ಒಂದು. ಈ ಜೈಲು ಅಪರಾಧಿಗಳಿಂದ ತುಂಬಿ ತುಳುಕುತ್ತಿದ್ದು, ಜೈಲುವಾಸಿಗಳಿಗೆ ಮಲಗುವುದು ಬಿಡಿ, ಕೂರಲೂ ಜಾಗವಿರುವುದಿಲ್ಲವಂತೆ.

VISTARANEWS.COM


on

gitarama prison
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನರಕ ಎಂದರೆ ಎಲ್ಲಿದೆ ಎಂದು ತೋರಿಸಲು ಏನೇನೋ ಊಹನೆ ಮಾಡಬೇಕಿಲ್ಲ. ಭೂಮಿಯ ಮೇಲೆ ತಪ್ಪು ಮಾಡಿ ಸಿಕ್ಕಿ ಬಿದ್ದು ಜೈಲಿಗೆ ಹೋದರೆ ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಎಂಬಂತೆ ನರಕ ಪ್ರಾಪ್ತಿ ಎಂದು ನಾವೂ ವಿವರಣೆ ಕೊಡಬಹುದು. ಆದರೆ ಇಲ್ಲೊಂದು ಜೈಲಿದೆ. ಅಲ್ಲಿರುವುದು ನಮ್ಮ ಊಹನೆಗೂ ಮೀರಿದ ನರಕವೇ. ಇಲ್ಲಿನ ಜೈಲುವಾಸಿಗಳು ಹಸಿವಾದರೆ ತಮ್ಮ ಸಹವರ್ತಿಯ ಜೊತೆಗೇ ಬಡಿದಾಡಿ ಅವರ ಮಾಂಸವನ್ನು ತಿಂದಂಥ (ಘಟನೆಗಳೂ ನಡೆದಿವೆಯಂತೆ! ಹೌದು ಇಂತಹ ಕುಖ್ಯಾತಿ ಪಡೆದಿರುವ ಜೈಲು ರುವಾಂಡಾದ ಗಿಟಾರಾಮ ಜೈಲು (Gitarama Prison). ರುವಾಂಡಾ ಪೂರ್ವ ಆಫ್ರಿಕಾದ ದೇಶ. ಇಲ್ಲಿನ ಗಿಟಾರಾಮ ಎಂಬ ಜೈಲು ವಿಶ್ವದ ಅತಿ ಖತರ್ನಾಕ್‌ ಜೈಲುವಾಸಗಳಲ್ಲಿ ಒಂದು. ಈ ಜೈಲು ಅಪರಾಧಿಗಳಿಂದ ತುಂಬಿ ತುಳುಕುತ್ತಿದ್ದು, ಜೈಲುವಾಸಿಗಳಿಗೆ ಮಲಗುವುದು ಬಿಡಿ, ಕೂರಲೂ ಜಾಗವಿರುವುದಿಲ್ಲವಂತೆ. ಹಾಗಾಗಿಯೇ ಈ ಜೈಲು ವಿಶ್ವದ ಅತ್ಯಂತ ಕೆಟ್ಟ ಜೈಲುಗಳಲ್ಲಿ ಒಂದಾಗಿದೆ.

ಈ ಜೈಲೊಂದರಲ್ಲೇ ಐದು ಸಾವಿರದಿಂದ ದಿಂದ ಏಳು ಸಾವಿರವರೆಗೂ ಜೈಲುವಾಸಿಗಳಿದ್ದು, ಜೈಲೊಂದು ಗರಿಷ್ಟ ಎಷ್ಟು ಮಂದಿಯನ್ನು ತನ್ನಲ್ಲಿ ಇರಿಸಿಕೊಳ್ಳಬಹುದು ಎಂಬುದಕ್ಕೆ ವಿರುದ್ಧವಾಗಿ ವರ್ತಿಸುತ್ತಿದೆ ಎಂಬ ದೂರುಗಳೂ ಇವೆ.

ಆಮ್ನೇಸ್ಟಿ ಇಂಟರ್‌ನ್ಯಾಷನಲ್‌ ಪ್ರಕಾರ, ೩೦೦೦ ಮಂದಿ ಇರಬಹುದಾದ ಜಾಗವಿರುವ ಈ ಜೈಲಿನಲ್ಲಿ 2007ರಲ್ಲಿ 7,477 ಮಂದಿಯಿದ್ದರು ಎನ್ನಲಾಗಿದೆ. ಹಾಗಾಗಿ ಇಲ್ಲಿನ ಜೈಲುವಾಸಿಗಳು ಕೆಲವೊಮ್ಮೆ ತಮ್ಮೊಳಗೇ ಬಡಿದಾಡಿ, ಕೊಂದು ಕೊನೆಗೆ ಅವರ ಮಾಂಸವನ್ನೇ ತಿಂದಂಥ ಘಟನೆಗಳ ಉದಾಹರಣೆಗಳಿವೆ ಎನ್ನಲಾಗಿದೆ.

Gitarama Prison

ಇಲಿಗಳು, ಹೆಗ್ಗಣಗಳು ಜೈಲಿನ ತುಂಬ ಓಡಾಡಿಕೊಂಡಿದ್ದು, ಅತ್ಯಂತ ಅನಾರೋಗ್ಯಕರ ವಾತಾವರಣ ಇಲ್ಲಿದೆ. 1995ರಲ್ಲಿ ಈ ಜೈಲಿನ ಪರಿಸ್ಥಿತಿಯ ಬಗ್ಗೆ ಸಾಕಷ್ಟು ವಿವಾದ ಎದ್ದಿತ್ತು. ಅಪರಾಧಿಗಳು ಎಂಥ ನರಕದ ಪರಿಸ್ಥಿತಿಯಲ್ಲಿ ಇಲ್ಲಿ ಕೊಳೆಯಬೇಕಾಗಿದೆ ಎಂಬ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. 1994ರ ರುವಾಂಡ ನರಮೇಧ ಘಟನೆಯ ನಂತರ ಈ ಜೈಲು ಸಾಕಷ್ಟು ಸುದ್ದಿ ಮಾಡಿತ್ತು. ರೆಡ್‌ ಕ್ರಾಸ್‌ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳು ಇದರ ವಿರುದ್ಧ ದನಿ ಎತ್ತಿದ್ದವು. ಇದೊಂದು ಅಮಾನವೀಯ ನಡೆಯಾಗಿದ್ದು ಪ್ರತಿನಿತ್ಯ 5-6 ಮಂದಿ ಸಾವಿಗೀಡಾಗುತ್ತಾರೆ. ಅಲ್ಲಿನ ಪರಿಸ್ಥಿತಿಯನ್ನು ಶೀಘ್ರದಲ್ಲೇ ಸರಿ ಮಾಡಬೇಕಿದೆ. ಅದಕ್ಕೆ ಹೆಚ್ಚಿನ ಅಗತ್ಯವಿದೆ ಎಂದಿದ್ದವು.

ರುವಾಂಡಾ ಜೈಲಿನ ಇತಿಹಾಸದಲ್ಲಿ ಸಾಕಷ್ಟು ಇಂತಹ ಘಟನೆಗಳಿವೆ. 1995ರಲ್ಲಿ ಸುಮಾರು ಒಂದು ಸಾವಿರ ಮಂದಿ ಅಪರಾಧಿಗಳು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಗಂಟೆಗಟ್ಟಲೆ ನಿಂತೇ ಇರಬೇಕಾದ ಪರಿಸ್ಥಿತಿ ಇಲ್ಲಿರುವುದರಿಂದ ಅಲ್ಲಿನ ಇಲ್ಲನ ಅಪರಾಧಿಗಳ ಕಾಲುಗಳು ಕೊಳೆತು ಹೋಗುವಂತ ಆರೋಗ್ಯ ಸಮಸ್ಯೆಗಳೂ ಉಲ್ಬಣಿಸಿತ್ತು. ಸರಿಯಾದ ಆಹಾರ, ಔಷಧಿ ಮತ್ತಿತರ ಯಾವುದೇ ನೆರವಿಲ್ಲದೆ ಅತ್ಯಂತ ಕ್ಲಿಷ್ಕರ ಪರಿಸ್ಥಿತಿ ಇಲ್ಲಿದು ಕಳೆದ ವರ್ಷವೊಂದರಲ್ಲೇ ರುವಾಂಡಾದ ಜೈಲುಗಳಲ್ಲಿ ಇಟ್ಟು 2000 ಮಂದಿ ಸತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಗಿಟರಮ ಜೈಲುವಾಸಿಗಳೇ ಎನ್ನಲಾಗಿದೆ.

Gitarama Prison

ರುವಾಂಡಾ ನರಮೇಧ: ರುವಾಂಡಾ ದೇಶದಲ್ಲಿ 1994ರಲ್ಲಿ ನಡೆದ ನರಮೇಧ ಇತಿಹಾಸದಲ್ಲಿನ ಕಪ್ಪುಚುಕ್ಕೆ. ರುವಾಂಡಾ ದೇಶದ ಬಹುಸಂಖ್ಯಾತ ಹುಟು ಜನಾಂಗಕ್ಕೂ ಅಲ್ಪಸಂಖ್ಯಾತ ಟೂಟ್ಸಿ ಜನಾಂಗಕ್ಕೂ ಎಣ್ಣೆ ಸೀಗೆ ಸಂಬಂಧ. 1994ರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಲು ಬೀದಿಗಿಳಿದಿದ್ದ ಟೂಟ್ಸಿ ಜನಾಂಗದವರು ಹುಟು ಜನಾಂಗದ ರಾಷ್ಟ್ರಪತಿ ತೆರಳಿದ ವಿಮಾನ ಹೊಡೆದುರುಳಿಸಿದ್ದರು. ಈ ಘಟನೆ ನಡೆದ ಹಿನ್ನೆಲೆಯಲ್ಲಿ ಹುಟು ಜನಾಂಗದವರು ಟೂಟ್ಸಿ ಜನಾಂಗದ ಮಂದಿಯನ್ನು ಹುಡುಕಿ ಹುಡುಕಿ ಕೊಲ್ಲಲಾರಂಭಿಸಿದರು. ಕೇವಲ 100 ದಿನಗಳಲ್ಲಿ 10 ಲಕ್ಷ ಮಂದಿಯ ನರಮೇಧ ನಡೆದಿತ್ತು. ಇದು ಇತಿಹಾಸ ಕಂಡ ಅತ್ಯಂತ ಭೀಕರ ನರಮೇಧಗಳಲ್ಲಿ ಒಂದಾಗಿದೆ ಎಂಬುದನ್ನಿಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Adipurush Movie: ಕಟ್ಟಪ್ಪ ಬಾಹುಬಲಿ ಕೊಂದಿದ್ದು ಯಾಕೆ ಅಂತ ಗೊತ್ತಾಯ್ತು; ಸೆಹ್ವಾಗ್ ಟ್ವೀಟ್‌ ವೈರಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಆಹಾರದ ಕೊರತೆಯಿಂದ ಗಾಜಾ ಪಟ್ಟಿಯಲ್ಲಿ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಒಮಾನಿ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು ಇದಕ್ಕೆ ಸಾಕ್ಷಿಯನ್ನು ನೀಡಿದ್ದಾರೆ. ಇದರ ವಿಡಿಯೋ ಭಾರೀ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ಗಾಜಾ ಪಟ್ಟಿಯಲ್ಲಿ (Gaza strip) ಆಹಾರದ ಕೊರತೆಯಿಂದ ತೀವ್ರ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಸ್ತೆಯಲ್ಲಿ ಸಿಕ್ಕಿದ್ದನ್ನೆಲ್ಲ ತಿನ್ನುತ್ತಿದ್ದಾರೆ ಎಂದು ಪ್ಯಾಲೆಸ್ಟೀನಿಯಾದವರಿಗೆ (Palestinians) ಚಿಕಿತ್ಸೆ ನೀಡಲು ಗಾಜಾದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸ್ವಯಂಸೇವಕರಾಗಿ ಕೆಲಸ ಮಾಡುವ ಒಮಾನಿ (omani) ವೈದ್ಯ ಖಲೀದ್ ಅಲ್-ಶಮೌಸಿ (Khaled Al-Shamousi) ಅವರು ಸಾಮಾಜಿಕ ಜಾಲತಾಣವಾದ (Viral News) ಎಕ್ಸ್ ನಲ್ಲಿ (x) ಹೇಳಿಕೊಂಡಿದ್ದಾರೆ.

ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿನ ಅವರ ಖಾತೆಯಲ್ಲಿ ಡಾ. ಖಲೀದ್ ಅಲ್-ಶಮೌಸಿ ಅವರು, ಒಂದು ಮಗು ಲೋಹದ ತುಂಡನ್ನು ನುಂಗಿತ್ತು. ಅದು ಅನ್ನನಾಳದಲ್ಲಿ ಸಿಲುಕಿಕೊಂಡಿತ್ತು ಎಂದು ವಿವರಿಸಿದ್ದಾರೆ.

ಅವರು ಪರೀಕ್ಷಿಸಿದ ಚಿಕ್ಕ ಹುಡುಗಿಯ ಎದೆಯ ಎಕ್ಸ್-ರೇ ಅನ್ನು ತೋರಿಸಿರುವ ಅವರು ಗಾಜಾದ ಮಕ್ಕಳು ತೀವ್ರ ಹಸಿವಿನಿಂದ ನಾಣ್ಯಗಳು, ಬೆಣಚುಕಲ್ಲುಗಳು ಮತ್ತು ಸಣ್ಣ ಬ್ಯಾಟರಿಗಳನ್ನು ತಿನ್ನುತ್ತಿದ್ದಾರೆ. ಅವುಗಳಲ್ಲಿ ಒಬ್ಬಾಕೆ 8 ವರ್ಷದ ಬಾಲಕಿ. ಅವಳು ಲೋಹದ ತುಂಡನ್ನು ನುಂಗಿದಳು ಮತ್ತು ಅದು ಅವಳ ಅನ್ನನಾಳದಲ್ಲಿ ಸಿಲುಕಿಕೊಂಡಿತು ಎಂದು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಅವರು ಮಗುವಿನ ಮೇಲೆ ಸೂಕ್ಷ್ಮವಾದ ಆಪರೇಷನ್ ಮಾಡುತ್ತಿರುವ ವಿಡಿಯೋ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಲೋಹದ ತುಂಡನ್ನು ತೆಗೆದುಹಾಕಿದ ಬಳಿಕ ವೈದ್ಯಕೀಯ ಸಿಬ್ಬಂದಿಯ ಚಪ್ಪಾಳೆಗಳನ್ನು ಕೇಳಿದಾಗ ಶಮೌಸಿ ತನ್ನ ಬಾಯಿಯ ಮೂಲಕ ಮಗುವಿನ ಕರುಳಿನಿಂದ ಸಣ್ಣ ಬ್ಯಾಟರಿಯನ್ನು ತೆಗೆದುಹಾಕುತ್ತಿರುವಂತೆ ಕಾಣಿಸಿಕೊಂಡರು.

ಬಳಿಕ ಈ ಕುರಿತು ಎಕ್ಸ್ ನಲ್ಲಿ ಹೇಳಿರುವ ಅವರು, ತೀವ್ರವಾದ ಹಸಿವು,ಆಹಾರ ಪದಾರ್ಥಗಳ ಸರಬರಾಜುಗಳ ಕೊರತೆ ಮತ್ತು ಸುತ್ತಮುತ್ತಲಿನ ದೇಶಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳು ಬ್ಯಾಟರಿಗಳನ್ನು ಮಿಠಾಯಿಗಳೆಂದು ಭಾವಿಸಿ ನುಂಗಿದರು. ಇಲ್ಲಿ ನಾವು ಗಾಜಾದಲ್ಲಿ ಮಗು ನುಂಗಿದ ಬ್ಯಾಟರಿಯನ್ನು ಹೊರತೆಗೆದಿದ್ದೇವೆ ಎಂದು ಹೇಳಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಅಲ್ಲಿ ಅನೇಕರು ಈ ಗೊಂದಲದ ದೃಶ್ಯಗಳ ಬಗ್ಗೆ ತಮ್ಮ ಕೋಪ ಮತ್ತು ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.

ಆಹಾರ ಪೂರೈಕೆ ಇಲ್ಲ

ಕಳೆದ ವಾರದಿಂದ ದಕ್ಷಿಣ ಗಾಜಾದ ಎರಡು ಪ್ರಮುಖ ಪ್ರದೇಶಗಳಿಗೆ ಯಾವುದೇ ಆಹಾರ ಪೂರೈಕೆಯಾಗಿಲ್ಲ. ಗಾಜಾದಲ್ಲಿ ಸುಮಾರು 1.1 ಮಿಲಿಯನ್ ಪ್ಯಾಲೆಸ್ಟೀನಿಯಾದವರು ಹಸಿವಿನಿಂದ ಕಂಗೆಟ್ಟಿದ್ದಾರೆ. ಹಸಿವಿನ ದುರಂತದ ಮಟ್ಟವನ್ನು ಇಲ್ಲಿನ ಜನರು ಎದುರಿಸುತ್ತಿದ್ದಾರೆ ಮತ್ತು ಯುಎನ್ ಪ್ರಕಾರ ಉತ್ತರದಲ್ಲಿ “ಪೂರ್ಣ ಕ್ಷಾಮ” ಉಂಟಾಗಿದೆ ಎನ್ನಲಾಗಿದೆ.

ದಕ್ಷಿಣ ಮತ್ತು ಉತ್ತರ ಗಾಜಾದಲ್ಲಿ ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳನ್ನು ಹೆಚ್ಚಿಸುವ ಮೂಲಕ ಇತ್ತೀಚಿನ ದಿನಗಳಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸ್ಥಳಾಂತರಗೊಂಡಿದ್ದಾರೆ. ಕಳೆದ ವಾರದಲ್ಲಿ ಸುಮಾರು 4,50,000 ಪ್ಯಾಲೆಸ್ಟೀನಿಯನ್ನರನ್ನು ಗಾಜಾದ ದಕ್ಷಿಣದಲ್ಲಿರುವ ರಫಾದಿಂದ ಹೊರಹಾಕಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

ಇಸ್ರೇಲ್ ನಗರಕ್ಕೆ ತಳ್ಳುವ ಮೊದಲು ರಫಾದಲ್ಲಿ ಸುಮಾರು 1.3 ಮಿಲಿಯನ್ ಜನರು ಆಶ್ರಯ ಪಡೆದಿದ್ದರು. ಇದು ಕೊನೆಯ ಹಮಾಸ್ ಭದ್ರಕೋಟೆ ಎಂದು ಇಸ್ರೇಲ್ ಹೇಳುತ್ತದೆ.

ಗಾಜಾದಲ್ಲಿ ಏಳು ತಿಂಗಳ ಇಸ್ರೇಲಿ ಬಾಂಬ್ ದಾಳಿ ಮತ್ತು ನೆಲದ ಕಾರ್ಯಾಚರಣೆಗಳು 35,000 ಕ್ಕೂ ಹೆಚ್ಚು ಜನರನ್ನು ಕೊಂದಿವೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ವಿದೇಶ

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

America:ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮೊಹಮ್ಮದ್ ಇಕ್ಬಾಲ್ ಬರೆದ ದೇಶಭಕ್ತಿ ಗೀತೆಯನ್ನು ವಾರ್ಷಿಕ ಕಾರ್ಯಕ್ರಮಕ್ಕೆ ಅಧ್ಯಕ್ಷರಿಂದ ಆಹ್ವಾನಿಸಲ್ಪಟ್ಟ ಭಾರತೀಯ ಅಮೆರಿಕನ್ನರ ಕೋರಿಕೆಯ ಮೇರೆಗೆ ಶ್ವೇತಭವನದ ಮೆರೈನ್ ಬ್ಯಾಂಡ್ ಎರಡು ಬಾರಿ ನುಡಿಸಿತು. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವು ಭಾರತೀಯರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

America
Koo

ವಾಷಿಂಗ್ಟನ್‌: ಅಮೆರಿಕ(America)ದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತದ ದೇಶಭಕ್ತಿಗೀತೆ ಸಾರಾ ಜಹಾನ್‌ ಸೇ ಅಚ್ಛಾ ಹಾಡು ಮೊಳಗಿದೆ. ಶ್ವೇತಭವನದಲ್ಲಿ ಆಯೋಜನೆಗೊಂಡಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ (AANHPI) ಪಾರಂಪರ್ಯ ಮಾಸಾಚರಣೆ(Heritage Month) ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌(Joe Biden) ಮತ್ತು ಉಪಾಧ್ಯಕ್ಷ ಕಮಲಾ ಹ್ಯಾರೀಸ್‌(Kamala Harris) ಭಾಗಿಯಾಗಿದ್ದರು. ಈ ವೇಳೆ ಶ್ವೇತಭವನದ ಮೆರೈನ್ ಬ್ಯಾಂಡ್ ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ(Sare Jahan Se Achha Hindustan Hamara) ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿದೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮೊಹಮ್ಮದ್ ಇಕ್ಬಾಲ್ ಬರೆದ ದೇಶಭಕ್ತಿ ಗೀತೆಯನ್ನು ವಾರ್ಷಿಕ ಕಾರ್ಯಕ್ರಮಕ್ಕೆ ಅಧ್ಯಕ್ಷರಿಂದ ಆಹ್ವಾನಿಸಲ್ಪಟ್ಟ ಭಾರತೀಯ ಅಮೆರಿಕನ್ನರ ಕೋರಿಕೆಯ ಮೇರೆಗೆ ಶ್ವೇತಭವನದ ಮೆರೈನ್ ಬ್ಯಾಂಡ್ ಎರಡು ಬಾರಿ ನುಡಿಸಿತು. ಇದೊಂದು ಹೆಮ್ಮೆಯ ವಿಚಾರವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವು ಭಾರತೀಯರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಶ್ವೇತಭವನದ ರೋಸ್‌ ಗಾರ್ಡನ್‌ ಪ್ರದೇಶದಲ್ಲಿ AANHPI ಪಾರಂಪರಿಕ ಮಾಸಾಚರಣೆಯನ್ನು ಬಹಳ ಅದ್ಭುತವಾಗಿ ಆಚರಣೆ ಮಾಡಲಾಗಿತ್ತು. ಅತ್ಯುತ್ತಮ ಭಾಗವೆಂದರೆ, ನಾನು ಶ್ವೇತಭವನಕ್ಕೆ ಕಾಲಿಟ್ಟಾಗ, ಸಂಗೀತಗಾರರು ನನ್ನನ್ನು ‘ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ’ ನುಡಿಸುತ್ತಾ ಸ್ವಾಗತಿಸಿದರು. ಇಡೀ ವಿಶ್ವಕ್ಕಿಂತ ಉತ್ತಮವಾದುದು ನಮ್ಮ ಹಿಂದೂಸ್ತಾನ್” ಎಂದು ಭಾರತೀಯ ಅಮೆರಿಕನ್ ಸಮುದಾಯದ ನಾಯಕ ಅಜಯ್ ಜೈನ್ ಭುಟೋರಿಯಾ ರೋಸ್ ಗಾರ್ಡನ್ ಸ್ವಾಗತದ ನಂತರ ಮಾಧ್ಯಮಗಳಿಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದರು. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಬಾರಿ ಶ್ವೇತಭವನದಲ್ಲಿ ಜನಪ್ರಿಯ ಭಾರತೀಯ ದೇಶಭಕ್ತಿ ಗೀತೆಯನ್ನು ನುಡಿಸಲಾಗಿದೆ. ಕಳೆದ ವರ್ಷ ಜೂನ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಅಮೆರಿಕ ಭೇಟಿಯ ಸಮಯದಲ್ಲಿ ದೇಶಭಕ್ತಿಗೀತೆಯನ್ನು ಹಾಡಲಾಗಿತ್ತು.

ಇದನ್ನೂ ಓದಿ:Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

ಇನ್ನು ಅಜಯ್‌ ಜೈನ್‌ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಕೂಡ ಮಾಡಿದ್ದು, ಶ್ವೇತಭವನದಲ್ಲಿ ಜೋ ಬೈಡೆನ್‌ ಮತ್ತು ಕಮಲಾ ಹ್ಯಾರಿಸ್‌ ಇದ್ದ ಕಾರ್ಯಕ್ರಮದಲ್ಲಿ ಭಾರತೀಯ ದೇಶಭಕ್ತಿಗೀತೆ ಸಾರಾ ಜಹಾನ್‌ ಸೇ ಅಚ್ಛಾ ಗೀತೆಯನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ದೇಶೀಯ ಆಹಾರವಾದ ಪಾನಿಪುರಿ ಮತ್ತು ಖೋಯಾಗಳನ್ನು ಸರ್ವ್‌ ಮಾಡಲಾಯಿತು. ಭಾರತ ಮತ್ತು ಅಮೆರಿಕದ ನಂಟು ಭದ್ರವಾಗಿದೆ ಎಂದು ಹೇಳಿದರು.

Continue Reading

ವಿದೇಶ

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

US sanction: ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

VISTARANEWS.COM


on

US Sanction
Koo

ವಾಷಿಂಗ್ಟನ್‌: ಇರಾನ್‌(Iran) ಜೊತೆಗೆ ಭಾರತ ಚಬಾಹರ್‌ ಬಂದರು(Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದೆ. ಇರಾನ್‌ ಜೊತೆಗೆ ವ್ಯಾಪಾರ-ವಹಿವಾಟಿಗಳನ್ನು ಮುಂದುವರೆಸಿದರೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಅಮೆರಿಕ ಎಲ್ಲಾ ದೇಶಗಳಿಗೆ ಎಚ್ಚರಿಸಿದೆ. ಸ್ಟೇಟ್‌ ಡಿಪಾರ್ಟ್‌ಮೆಂಟ್‌ ಉಪ ವಕ್ತಾರ ವೇದಾಂತ್‌ ಪಟೇಲ್‌(State Department Deputy Spokesperson Vedant Patel) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಚಬಾಹರ್‌ ಬಂದರಿಗೆ ಸಂಬಂಧಿಸಿದಂತೆ ಭಾರತ-ಇರಾನ್‌ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಇರಾನ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ತನ್ನದೇ ಆದ ವಿದೇಶಾಂಗ ನೀತಿ ಅನುಸರಿಸಲು ಭಾರತ ಮುಕ್ತವಾಗಿದೆ. ಆದರೆ ಇರಾನ್‌ ಮೇಲೆ ಅಮೆರಿಕ ನಿರ್ಬಂಧ ಹೇರಿರುವುದನ್ನು ಭಾರತ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಇರಾನ್‌ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಇನ್ನೂ ಮುಂದುವರೆಯಲಿದೆ. ಇದು ಭಾರತಕ್ಕೆ ಮುಂದೊಂದು ದಿನ ಭಾರೀ ಅಪಾಯವನ್ನು ತಂದೊಡ್ಡಬಹುದು ಎಂದು ಎಚ್ಚರಿಕೆ ನೀಡಿದೆ. ಕೆಲವು ದಿನಗಳ ಹಿಂದೆ ಇರಾನ್‌ ಜೊತೆ ವ್ಯಾಪಾರ ಸಂಬಂದ ಹೊಂದಿದ್ದ ಸಂಸ್ಥೆಗಳು, ವ್ಯಕ್ತಿಗಳ ಮೇಲೆ ಅಮೆರಿಕ ನಿರ್ಬಂಧ ಹೇಳಿರುವ ಬಗ್ಗೆ ನಿಮಗೆ ತಿಳಿದಿರಬಹುದು. ಹೀಗಾಗಿ ಇರಾನ್‌ ಜೊತೆಗೆ ಸಂಬಂಧ ಬೆಳೆಸಿ ನಿರ್ಬಂಧದ ರಿಸ್ಕ್‌ ಅನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಅಮೆರಿಕ ಹೇಳಿದೆ.

ಎರಡು ವಾರಗಳ ಹಿಂದೆ ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿತ್ತು. ಇದರಲ್ಲಿ ಭಾರತ ಮೂರು ಕಂಪನಿಗಳು(Indian based firms) ಸೇರಿದ್ದವು. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿತ್ತು.

ಇನ್ನು ಇರಾನ್‌ನ ಸಾಗರೋತ್ತರ ವ್ಯಾಪಾರ ವಹಿವಾಟು ನೋಡಿಕೊಳ್ಳುತ್ತಿರುವ ಕಂಪನಿಗಳಲ್ಲಿ ಸಹರಾ ಥಂಡರ್‌ ಪ್ರಮುಖವಾಗಿದೆ. ಈ ಕಂಪನಿಗೆ ಭಾರತೀಯ ಮೂಲದ ಮೂರು ಕಂಪನಿಗಳು ಸಹಾಯ ನೀಡುತ್ತಿವೆ. ಹೀಗಾಗಿ ಭಾರತೀಯ ಮೂಲದ ಜೆನ್‌ ಶಿಪ್ಪಿಂಗ್‌, ಪೋರ್ಟ್‌ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ ಮತ್ತು ಸೀ ಆರ್ಟ್‌ ಶಿಪ್‌ ಮ್ಯಾನೇಜ್‌ಮೆಂಟ್‌(OPC) ಪ್ರೈವೆಟ್‌ ಲಿಮಿಟೆಡ್‌ಗೆ ಅಮೆರಿಕ ನಿರ್ಬಂಧ ವಿಧಿಸಿದೆ.

ಸಹಾರಾ ಥಂಡರ್‌ ಕಂಪನಿ ಇರಾನ್‌ ಸೇನೆಯ ಪರವಾಗಿ ಇರಾನಿಯನ್‌ ಸರಕುಗಳನ್ನು ಚೀನಾ, ರಷ್ಯಾ ಮತ್ತು ವೆನೆಜುವೆಲಾಗಳಿಗೆ ಸಾಗಾಟ ಮಾಡುತ್ತಿದೆ. ಇದೀಗ ಈ ಕಂಪನಿ ಯುಎಇ ಮೂಲದ ಸೇಫ್ ಸೀಸ್ ಶಿಪ್ ಮ್ಯಾನೇಜ್‌ಮೆಂಟ್ ಎಫ್‌ಜೆಇನ ಕುಕ್ ಐಲ್ಯಾಂಡ್ಸ್-ಫ್ಲ್ಯಾಗ್ಡ್ ನೌಕೆ CHEM (IMO 9240914) ಗಾಗಿ ಭಾರತ ಮೂಲದ ಝೆನ್ ಶಿಪ್ಪಿಂಗ್ ಮತ್ತು ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಭಾರತ ಮೂಲದ ಸೀ ಆರ್ಟ್ ಶಿಪ್ ಮ್ಯಾನೇಜ್‌ಮೆಂಟ್ (OPC) ಪ್ರೈವೇಟ್ ಲಿಮಿಟೆಡ್ ಮತ್ತು ಯುಎಇ ಮೂಲದ ಕಂಪನಿ ಟ್ರಾನ್ಸ್ ಗಲ್ಫ್ ಏಜೆನ್ಸಿ LLC ಸಹಾರಾ ಥಂಡರ್‌ಗೆ ಬೆಂಬಲವಾಗಿ ಹಡಗು ನಿರ್ವಹಣಾ ಸೇವೆಗಳನ್ನು ಒದಗಿಸಲು ಒಟ್ಟಾಗಿ ಕೆಲಸ ಮಾಡಿದೆ ಎಂದು ಅಮೆರಿಕ ಹೇಳಿದೆ.

ಇದನ್ನೂ ಓದಿ:Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

ರಷ್ಯಾ-ಉಕ್ರೇನ್‌ ಯುದ್ಧದ ಸಂದರ್ಭದಲ್ಲಿ ಇರಾನ್‌, ರಷ್ಯಾಗೆ ತನ್ನ ಬೆಂಬಲ ಸೂಚಿಸಿತ್ತು. ಅಲ್ಲದೇ ಇದೀಗ ಇಸ್ರೇಲ್‌ ಮೇಲೂ ದಾಳಿ ಮಾಡುವ ಮೂಲಕ ತನ್ನ ಉದ್ದಟತನ ಮೆರೆದಿದೆ. ಡ್ರೋನ್‌, ಯುದ್ಧ ಸಾಮಾಗ್ರಿಗಳು ಉಗ್ರರ ಕೈಗೆ ಸುಲಭವಾಗಿ ಸಿಗುವಂತೆ ಮಾಡುವ ಮೂಲಕ ವಿನಾಶಕಾರಿಯಾಗಿ ಇರಾನ್‌ ಬೆಳೆಯುತ್ತಿದೆ ಎಂದು ಅಮೆರಿಕ ಆತಂಕ ವ್ಯಕ್ತಪಡಿಸಿದೆ.

Continue Reading

ವಿದೇಶ

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Israel-Hamas Conflict: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Israel-Hamas Conflict
Koo

ಗಾಜಾ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ನಡೆಸಿದ ದಾಳಿಗೆ ತೀವ್ರ ಪ್ರಮಾಣದಲ್ಲಿ ಪ್ರತಿದಾಳಿ (Israel-Hamas Conflict) ನಡೆಸುತ್ತಿರುವ ಇಸ್ರೇಲ್‌ ಸೈನಿಕರು ಇಂದಿಗೂ ಕದನ ವಿರಾಮ ಘೋಷಿಸಿಲ್ಲ. ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಇಸ್ರೇಲ್‌ ಸತತವಾಗಿ ದಾಳಿ ನಡೆಸಿ, ಉಗ್ರರನ್ನು ಸದೆಬಡಿಯುತ್ತಿದೆ. ಈ ಮಧ್ಯೆ ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ರಫಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತ ಸಿಬ್ಬಂದಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆಯ (DSS) ಸದಸ್ಯರಾಗಿದ್ದರು. ಮೃತರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲವಾದರೂ ಅವರು ಭಾರತದಿಂದ ಮೂಲದವರು ಮತ್ತು ಭಾರತೀಯ ಮಾಜಿ ಸೇನಾ ಸಿಬ್ಬಂದಿ ಎಂದು ಮೂಲಗಳು ತಿಳಿಸಿವೆ.

ʼʼಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದ ಬಳಿಕ ಗಾಜಾದಲ್ಲಿ ಮೊದಲ ಬಾರಿ ವಿಶ್ವಸಂಸ್ಥೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ರಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಅವರಿದ್ದ ವಾಹನ ಅಪಘಾತಕ್ಕೆ ಈಡಾಗಿ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಮತ್ತೊಬ್ಬ ಡಿಎಸ್ಎಸ್ ಸಿಬ್ಬಂದಿ ಗಾಯಗೊಂಡಿದ್ದಾರೆʼʼ ಎಂದು ವರದಿಯೊಂದು ತಿಳಿಸಿದೆ.

ಸಂತಾಪ

ಘಟನೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ʼʼವಿಶ್ವಸಂಸ್ಥೆಯ ಸುರಕ್ಷತಾ ಮತ್ತು ಭದ್ರತಾ ಇಲಾಖೆಯ ಸಿಬ್ಬಂದಿಯೊಬ್ಬರು ಸೋಮವಾರ ಬೆಳಿಗ್ಗೆ ರಾಫಾದ ಯುರೋಪಿಯನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ ಮೃತಪಟ್ಟಿದ್ದಾರೆ ಎನ್ನುವ ವಿಚಾರ ತಿಳಿದು ತೀವ್ರ ದುಃಖವಾಗಿದೆʼʼ ಎಂದು ಬರೆದುಕೊಂಡು ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ವಿಶ್ವಸಂಸ್ಥೆಯ ಸಿಬ್ಬಂದಿಯ ಮೇಲಿನ ಎಲ್ಲ ದಾಳಿಗಳನ್ನು ಗುಟೆರೆಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಜಾದಲ್ಲಿನ ಸಂಘರ್ಷವು ನಾಗರಿಕರ ಮೇಲೆ ಮಾತ್ರವಲ್ಲದೆ ಮಾನವೀಯ ಕಾರ್ಯಕರ್ತರ ಮೇಲೂ ಭಾರಿ ಹಾನಿಯನ್ನುಂಟು ಮಾಡುತ್ತಿರುವುದು ಖಂಡನೀಯ. ಮಾನವೀಯ ಕದನ ವಿರಾಮಕ್ಕಾಗಿ ಮತ್ತು ಎಲ್ಲ ಒತ್ತೆಯಾಳುಗಳ ಬಿಡುಗಡೆಗಾಗಿ ಆಗ್ರಹಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2023ರ ಅಕ್ಟೋಬರ್ 7ರಂದು ಆರಂಭವಾದ ಸಂಘರ್ಷದಲ್ಲಿ ಇದುವರೆಗೆ ಇಸ್ರೇಲ್‌ನಲ್ಲಿ 33 ಮಕ್ಕಳು ಸೇರಿದಂತೆ 1,200ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ. ಜತೆಗೆ ಗಾಜಾದಲ್ಲಿ ಕನಿಷ್ಠ 35,091 ಪ್ಯಾಲೆಸ್ತೀನ್‌ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 78,827 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (Coordination of Humanitarian Affairs) ತಿಳಿಸಿದೆ. 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್‌ಗೆ ನುಗ್ಗಿದಾಗ ಗಾಜಾದಲ್ಲಿ ಯುದ್ಧ ಪ್ರಾರಂಭವಾಗಿತ್ತು. ಹಮಾಸ್‌ ಉಗ್ರರು 1,200 ಜನರನ್ನು ಕೊಂದು 253 ಒತ್ತೆಯಾಳುಗಳನ್ನು ವಶಪಡಿಸಿಕೊಂಡಿದೆ ಎಂದು ಇಸ್ರೇಲ್‌ ಹೇಳಿದೆ.

ಇದನ್ನೂ ಓದಿ: Israel Palestine War: ಗಾಜಾದಲ್ಲಿ ರಕ್ತದೋಕುಳಿ; ಆಹಾರಕ್ಕಾಗಿ ಬಂದವರ ಮೇಲೆ ದಾಳಿ; ಕನಿಷ್ಠ 104 ಮಂದಿ ಸಾವು

ಅಪೌಷ್ಟಿಕತೆ

ಗಾಜಾ ಪಟ್ಟಿಯಾದ್ಯಂತ ಜನಸಂಖ್ಯೆಯ ಕಾಲು ಭಾಗದಷ್ಟು ಜನರು- ವಿನಾಶಕಾರಿ ಮಟ್ಟದ ಆಹಾರ ಅಭದ್ರತೆಯನ್ನು ಎದುರಿಸುತ್ತಿದ್ದಾರೆ ಮತ್ತು ಕ್ಷಾಮದ ಅಪಾಯದಲ್ಲಿದ್ದಾರೆ. ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಆರು ಮಕ್ಕಳಲ್ಲಿ ಒಬ್ಬರು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎಂದು ವಿಶ್ವಸಂಸ್ಥೆಯ ಹಿರಿಯ ನೆರವು ಅಧಿಕಾರಿಯೊಬ್ಬರು ಈ ಹಿಂದೆ ಎಚ್ಚರಿಸಿದ್ದರು.

Continue Reading
Advertisement
copper mine lift collapse
ಪ್ರಮುಖ ಸುದ್ದಿ17 mins ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ22 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ1 hour ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ1 hour ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ7 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್8 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು20 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌