35 ಸಾವಿರ ಅಡಿ ಎತ್ತರದಲ್ಲಿ ನಡೆಯಬಹುದಾಗಿದ್ದ ವಿಮಾನಗಳ ಡಿಕ್ಕಿಯನ್ನು ಪೈಲಟ್‌ ತಪ್ಪಿಸಿದ್ದು ಹೇಗೆ? - Vistara News

ವಿದೇಶ

35 ಸಾವಿರ ಅಡಿ ಎತ್ತರದಲ್ಲಿ ನಡೆಯಬಹುದಾಗಿದ್ದ ವಿಮಾನಗಳ ಡಿಕ್ಕಿಯನ್ನು ಪೈಲಟ್‌ ತಪ್ಪಿಸಿದ್ದು ಹೇಗೆ?

ಅಂಕಾರಾ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಸೂಚನೆಯಂತೆ UL 504 ವಿಮಾನದ ಕ್ಯಾಪ್ಟನ್‌ ಫ್ಲೈಟ್‌ನ್ನು 35 ಸಾವಿರ ಅಡಿ ಎತ್ತರಕ್ಕೆ ಕೊಂಡೊಯ್ದಿದ್ದರೆ 500ಕ್ಕೂ ಹೆಚ್ಚು ಮಂದಿಯ ಪ್ರಾಣ ಹೋಗುತ್ತಿತ್ತು.

VISTARANEWS.COM


on

ಸಾಂಧರ್ಬಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀಲಂಕಾ: ಲಂಡನ್‌ನಿಂದ ಕೊಲಂಬೋಕ್ಕೆ ಮರಳುತ್ತಿದ್ದ ಶ್ರೀಲಂಕನ್‌ ಏರ್‌ಲೈನ್ಸ್‌ನ ವಿಮಾನವೊಂದು ವಾಯುಮಾರ್ಗದಲ್ಲಿ ನಡೆಯಬಹುದಾಗಿದ್ದ ಬಹುದೊಡ್ಡಮಟ್ಟದ ಅಪಘಾತದಿಂದ (Planes Crashing) ಪಾರಾಗಿದೆ ಮತ್ತು ಇನ್ನೊಂದು ವಿಮಾನವನ್ನು ಅಪಾಯದಿಂದ ಪಾರು ಮಾಡಿದೆ. ಎರಡು ವಿಮಾನಗಳು ಡಿಕ್ಕಿಯಾಗಿ ಸಂಭವಿಸಬಹುದಾಗಿದ್ದ ಸಾವು-ನೋವನ್ನು ತಪ್ಪಿಸಿದ್ದಕ್ಕಾಗಿ ಅದರ ಪೈಲಟ್‌ಗಳನ್ನು ಶ್ರೀಲಂಕನ್‌ ಏರ್‌ಲೈನ್ಸ್‌ ಶ್ಲಾಘಿಸಿದೆ. ಜೂ.13ರಂದು ಘಟನೆ ನಡೆದಿದ್ದು, 275 ಪ್ರಯಾಣಿಕರು ಇದ್ದ ಶ್ರೀಲಂಕಾದ UL 504 ವಿಮಾನ ಟರ್ಕಿಶ್‌ ಏರ್‌ಸ್ಪೇಸ್‌ ಪ್ರವೇಶ ಮಾಡುತ್ತಿದ್ದಂತೆ ಅಪಾಯದ ಮುನ್ಸೂಚನೆಯೊಂದು ಪೈಲಟ್‌ಗಳಿಗೆ ಸಿಕ್ಕಿತ್ತು. ಆದರೆ ತಮ್ಮ ಜಾಗರೂಕತೆ ಮತ್ತು ಸ್ಪಷ್ಟ ಸಂವಹನ ಕೌಶಲದಿಂದ, ಪರಿಸ್ಥಿತಿಯ ಬಗ್ಗೆ ಅತ್ಯಂತ ಎಚ್ಚರಿಕೆಯಿಂದ ನಿಗಾ ವಹಿಸಿ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತಗೊಳಿಸಿದ್ದಾರೆ.

ಲಂಡನ್‌ನ ಹೀಥ್ರು ಏರ್‌ಪೋರ್ಟ್‌ನಿಂದ‌ ಟರ್ಕಿ ಮಾರ್ಗದ ಮೂಲಕ ಕೊಲಂಬೊಕ್ಕೆ ಹೊರಟಿದ್ದ UL 504 ವಿಮಾನ ಸುಮಾರು 33 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಇನ್ನೇನು 35 ಸಾವಿರ ಅಡಿ ಎತ್ತರಕ್ಕೆ ಏರಬೇಕು ಎನ್ನುವಷ್ಟರಲ್ಲಿ, ಇದೇ ಟರ್ಕಿ ವಾಯುಪ್ರದೇಶದಲ್ಲಿ ತಮ್ಮ ವಿಮಾನ ಇದ್ದಲ್ಲಿಂದ ಕೇವಲ 15 ಮೈಲುಗಳಷ್ಟು ದೂರದಲ್ಲಿ ಮತ್ತು ಅದೇ 35 ಸಾವಿರ ಅಡಿ ಎತ್ತರದಲ್ಲಿ, ಬ್ರಿಟಿಷ್‌ ಏರ್‌ವೇಸ್‌ಗೆ ಸೇರಿದ ವಿಮಾನವೊಂದು ಅತ್ಯಂತ ವೇಗವಾಗಿ ಪ್ರಯಾಣಿಸುತ್ತಿರುವುದನ್ನು ಈ ಪೈಲಟ್‌ಗಳು ಪತ್ತೆಹಚ್ಚಿದರು. ತಕ್ಷಣ ಅಂಕಾರಾದ ಏರ್‌ ಟ್ರಾಫಿಕ್‌ ಕಂಟ್ರೋಲ್‌ಗೆ ಮಾಹಿತಿ ನೀಡಿದರು. ಅಷ್ಟರಲ್ಲಾಗಲೇ ಅಂಕಾರಾ ಏರ್‌ ಟ್ರಾಫಿಕ್‌, ಶ್ರೀಲಂಕಾ ವಿಮಾನದ ಪೈಲಟ್‌ಗಳಿಗೆ ʼವಾಯುಮಾರ್ಗ ಕ್ಲಿಯರ್‌ ಇದೆ. ನೀವು ಇನ್ನಷ್ಟು ಎತ್ತರಕ್ಕೆ ಏರಬಹುದುʼ ಎಂದು ಎರಡು ಬಾರಿ ಸೂಚನೆ ಕೊಟ್ಟಿತ್ತು. ಹಾಗಿದ್ದಾಗ್ಯೂ ಕ್ಯಾಪ್ಟನ್‌, ಈ ವಿಮಾನವನ್ನು ಎತ್ತರಕ್ಕೆ ಕೊಂಡೊಯ್ಯಲಿಲ್ಲ. ಮತ್ತೊಮ್ಮೆ ಪರಿಶೀಲಿಸುವಂತೆ ಅಂಕಾರಾ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಅಧಿಕಾರಿಗಳಿಗೆ ಹೇಳಿದ್ದಾರೆ. ಪುನಃ ಪರಿಶೀಲಿಸಿದಾಗ, ಬ್ರಿಟಿಷ್‌ ಏರ್‌ವೇಸ್‌ ಅದಾಗಲೇ 35 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿರುವುದು ಗೊತ್ತಾಯಿತು. ಆಗ ಶ್ರೀಲಂಕನ್‌ ಏರ್‌ಲೈನ್ಸ್‌ ವಿಮಾನ ಇನ್ನೆರಡು ಸಾವಿರ ಅಡಿ ಎತ್ತರಕ್ಕೆ ಏರುವುದನ್ನು ತಡೆಯಲಾಯಿತು.

ಒಂದೊಮ್ಮೆ ಅಂಕಾರಾ ಏರ್‌ ಟ್ರಾಫಿಕ್‌ ಸೂಚನೆಯಂತೆ UL 504 ವಿಮಾನದ ಕ್ಯಾಪ್ಟನ್‌, ಫ್ಲೈಟ್‌ನ್ನು 33 ಸಾವಿರ ಅಡಿ ಎತ್ತರದಿಂದ 35 ಸಾವಿರ ಅಡಿ ಎತ್ತರಕ್ಕೆ ಕೊಂಡೊಯ್ದಿದ್ದರೆ ಬ್ರಿಟಿಷ್‌ ಏರ್‌ವೇಸ್‌ ವಿಮಾನಕ್ಕೆ ಇದು ಡಿಕ್ಕಿಯಾಗುತ್ತಿತ್ತು. ಮತ್ತು ಆ ವಿಮಾನದಲ್ಲಿದ್ದ ಸುಮಾರು 250 ಪ್ರಯಾಣಿಕರು ಸೇರಿ 500ಕ್ಕೂ ಹೆಚ್ಚು ಮಂದಿಯ ಜೀವ ಹೋಗುತ್ತಿತ್ತು ಎಂದು ಡೇಲಿಮೇಲ್‌ ವರದಿ ಮಾಡಿದೆ. ಕೊಲಂಬೋದ ಬಂಡಾರ ನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುಎಲ್‌ 504 ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಈ ವಿಚಾರ ಗೊತ್ತಾಯಿತು. ಪೈಲಟ್‌ನ ಸಮಯಪ್ರಜ್ಞೆಗೆ ಭರ್ಜರಿ ಶ್ಲಾಘನೆ ವ್ಯಕ್ತವಾಯಿತು.

ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನಿಂದ ಹೊರಟ ಕೆಲವೇ ಹೊತ್ತಲ್ಲಿ ವಾಪಸ್‌ ಬಂದು ಲ್ಯಾಂಡ್‌ ಆದ 2 ವಿಮಾನಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

CAA: ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ. ಅಷ್ಟಕ್ಕೂ ಸಿಎಎ ಎಂದರೇನು? ಕೇಂದ್ರದ ಪ್ರಮಾಣಪತ್ರಗಳಲ್ಲಿ ಏನಿರುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಯಾವ ದಾಖಲೆ ಕೊಡುವುದು ಕಡ್ಡಾಯ?

ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.

ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ

ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.

ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.

ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Continue Reading

ವಿದೇಶ

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Google: ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ.

VISTARANEWS.COM


on

Google
Koo

ವಾಷಿಂಗ್ಟನ್:‌ ಇದೇನಿದ್ದರೂ ಡಿಜಿಟಲ್‌ (Digital) ಯುಗ. ಎಲ್ಲ ಮಾಹಿತಿಯೂ ಈಗ ಕಂಪ್ಯೂಟರ್‌ನಲ್ಲಿ, ಗೂಗಲ್‌ ಕ್ಲೌಡ್‌ ಸೇರಿ ಹಲವು ಮಾದರಿಯಲ್ಲಿ ಸಂಗ್ರಹಿಸಲಾಗುತ್ತದೆ. ಬ್ಯಾಂಕಿಂಗ್‌ನಿಂದ ಹಿಡಿದು ಎಲ್ಲ ಕ್ಷೇತ್ರಗಳ ಮಾಹಿತಿಯೂ ಆನ್‌ಲೈನ್‌ನಲ್ಲೇ ಸಂಗ್ರಹಿಸಲಾಗುತ್ತದೆ. ಆದರೆ, ಈ ಮಾಹಿತಿ ಡಿಲೀಟ್‌ ಮಾಡಿದರೆ, ಯಾರಾದರೂ ಡಿಲೀಟ್‌ ಮಾಡಿದರೆ ಆಗುವ ಅನಾಹುತಗಳು ಅಷ್ಟಿಷ್ಟಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಗೂಗಲ್‌ (Google) ಸಂಸ್ಥೆಯು ಗೂಗಲ್‌ ಕ್ಲೌಡ್‌ನಲ್ಲಿ (Google Cloud) ಸುಮಾರು 10.43 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾವನ್ನು ಅಚಾತುರ್ಯವಾಗಿ ಡಿಲೀಟ್‌ ಮಾಡಿದೆ.

ಆಸ್ಟ್ರೇಲಿಯಾದ ನಿವೃತ್ತಿದಾರರಿಗೆ ಪಿಂಚಣಿ ಒದಗಿಸುವ ಯುನಿಸೂಪರ್‌ (UniSuper) ಎಂಬ ಸಂಸ್ಥೆಯ 6.2 ಲಕ್ಷ ಜನರ ಮಾಹಿತಿಯನ್ನು ಗೂಗಲ್‌ ಡಿಲೀಟ್‌ ಮಾಡಿದೆ. ಯುನಿಸೂಪರ್‌ ಸಂಸ್ಥೆಯು ಡೇಟಾ ಸಂಗ್ರಹಕ್ಕಾಗಿ ಗೂಗಲ್‌ ಕ್ಲೌಡ್‌ ಜತೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಗೂಗಲ್‌ ಸಂಸ್ಥೆಯು ಅಚಾತುರ್ಯದಿಂದ 6.2 ಲಕ್ಷ ಜನರ ಡೇಟಾವನ್ನು ಡಿಲೀಟ್‌ ಮಾಡಿದೆ. ಕಳೆದ ಒಂದು ವಾರದಿಂದ ಯುನಿಸೂಪರ್‌ ಸದಸ್ಯರು ತಮ್ಮ ಪಿಂಚಣಿ ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Sorry ಎಂದ ಗೂಗಲ್‌

ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಿ ಎಂಬುದಾಗಿ ಸಂಸ್ಥೆಯನ್ನು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಗೂಗಲ್‌ ಜತೆಗಿನ ಒಪ್ಪಂದವನ್ನು ಯುನಿಸೂಪರ್‌ ರದ್ದುಗೊಳಿಸಿದೆ.

ಬ್ಯಾಕಪ್‌ಗಾಗಿ ಹರಸಾಹಸ

6 ಲಕ್ಷಕ್ಕೂ ಅಧಿಕ ಮಾಹಿತಿಯನ್ನು ಮರು ಸಂಗ್ರಹಿಸಲು (ಬ್ಯಾಕಪ್‌) ಯುನಿಸೂಪರ್‌ ಹರಸಾಹಸ ಮಾಡುತ್ತಿದೆ. ಡಿಲೀಟ್‌ ಆಗಿರುವ ಎಲ್ಲ ಮಾಹಿತಿಯನ್ನು ಬ್ಯಾಕಪ್‌ ಮಾಡಿಕೊಳ್ಳಲು ಬೇರೊಂದು ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಮಾಹಿತಿಯು ತಾತ್ಕಾಲಿಕವಾಗಿ ಡಿಲೀಟ್‌ ಆಗಿದೆಯೋ, ಇಲ್ಲವೋ? ಅದನ್ನು ಬ್ಯಾಕಪ್‌ ಮಾಡುವುದು ಸುಲಭವೋ, ಇಲ್ಲವೋ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಾಹಿತಿ ಲಭ್ಯವಾಗುವವರೆಗೂ ಗ್ರಾಹಕರು ಹಾಗೂ ಕಂಪನಿಗೆ ಆತಂಕ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading

ದೇಶ

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

ನರೇಂದ್ರ ಮೋದಿ ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಸಾಜಿದ್‌ ತರಾರ್‌ ಹೇಳಿದ್ದಾರೆ.

VISTARANEWS.COM


on

Narendra Modi
Koo

ವಾಷಿಂಗ್ಟನ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ, ಅವರ ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನ ಮೂಲದ, ಅಮೆರಿಕದಲ್ಲಿ ನೆಲೆಸಿರುವ ಉದ್ಯಮಿ ಸಾಜಿದ್‌ ತರಾರ್‌ (Sajid Tarar) ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. “ನರೇಂದ್ರ ಮೋದಿ ಬಲಿಷ್ಠ ನಾಯಕರಾಗಿದ್ದಾರೆ. ಅವರು ಹುಟ್ಟಿನಿಂದಲೇ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ” ಎಂದು ಉದ್ಯಮಿ ಹೇಳಿದ್ದಾರೆ.

“ನರೇಂದ್ರ ಮೋದಿ ಅದ್ಭುತ ನಾಯಕರಾಗಿರುವ ಕಾರಣದಿಂದಾಗಿಯೇ ಭಾರತ ಅಷ್ಟೊಂದು ಉತ್ತಮವಾಗಿ ಏಳಿಗೆ ಹೊಂದಿದೆ. ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ” ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ನಾಯಕತ್ವವು ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಪ್ರಮುಖವಾಗಿದೆ. ಇದೇ ಕಾರಣಕ್ಕಾಗಿಯೇ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತವಾಗಿದೆ. ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಪಾಕಿಸ್ತಾನದಿಂದ ಭಾರತಕ್ಕೂ ಅನುಕೂಲವಿದೆ. ಪಾಕಿಸ್ತಾನಕ್ಕೂ ಭಾರತದಿಂದ ಅನುಕೂಲವಿದೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿ ಸಂಬಂಧ ಸುಧಾರಿಸುವ ವಿಶ್ವಾಸವಿದೆ” ಎಂದು ಹೇಳಿದರು. ಪಾಕಿಸ್ತಾನದವರಾದ ಸಾಜಿದ್‌ ತರಾರ್‌, 1990ರ ದಶಕದಲ್ಲಿ ಅಮೆರಿಕಕ್ಕೆ ತೆರಳಿ, ಅಲ್ಲಿಯೇ ನೆಲೆಸಿದ್ದಾರೆ.

ಅಂತಾರಾಷ್ಟ್ರಿಯ ಖ್ಯಾತಿಯ ಆಫ್ರಿಕನ್​-ಅಮೆರಿಕನ್​ ಗಾಯಕಿ ಮೇರಿ ಮಿಲ್​​ಬೆನ್ ಅವರು ಕೂಡ ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದಾರೆ. ಆಗಾಗ ಅವರು ಮೋದಿ ಅವರನ್ನು ಹೊಗಳುತ್ತಲೇ ಇರುತ್ತಾರೆ. ಭಾರತ ತನ್ನ ದೇಶದ ನಾಯಕನ ಮೇಲೆ ಆತ್ಮವಿಶ್ವಾಸ ಹೊಂದಿದೆ. ಮಣಿಪುರದ ಮಾತೆಯರು, ಪುತ್ರಿಯರು ಹಾಗೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆ. ನಿಮ್ಮ ಸ್ವಾತಂತ್ರ್ಯಕ್ಕಾಗಿ ನರೇಂದ್ರ ಮೋದಿ ಅವರು ಎಂದಿಗೂ ಹೋರಾಡುತ್ತಾರೆ. ನರೇಂದ್ರ ಮೋದಿ ಅವರೇ ನಿಮ್ಮ ಮೇಲೆ ವಿಶ್ವಾಸ ಇದೆ. ನಿಮಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಕೆಲ ತಿಂಗಳ ಹಿಂದಷ್ಟೇ ಮೇರಿ ಮಿಲ್​​ಬೆನ್ ಹೇಳಿದ್ದರು.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Continue Reading

ತಂತ್ರಜ್ಞಾನ

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Facebook, Instagram Down: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆ ಹೇಳಿದೆ.

VISTARANEWS.COM


on

Facebook, Instagram Down
Koo

ನವದೆಹಲಿ: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯ ಪ್ರಕಾರ, ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸುಮಾರು 18,000ಕ್ಕೂ ಹೆಚ್ಚು ವರದಿಗಳು ಬಂದಿದ್ದು, ಆ ಪೈಕಿ ಶೇ. 59ರಷ್ಟು ಮಂದಿ ಅಪ್ಲಿಕೇಶನ್ ಪ್ರವೇಶಿಸುವಾಗ ಸಮಸ್ಯೆಗಳನ್ನು ಎದುರಿಸಿದರೆ ಶೇ. 34ರಷ್ಟು ಬಳಿಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶೇ. 7ರಷ್ಟು ಮಂದಿಗೆ ಲಾಗಿನ್ ಮಾಡುವಾಗ ಸಮಸ್ಯೆ ಕಂಡು ಬಂದಿದೆ.

ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ್ಯಪ್‌ ಓಪನ್‌ ಮಾಡುವಾಗ ʼSomething went wrong. There’s an issue and the page could not be loadedʼ, ʼError loading media’ ಮುಂತಾದ ಮೆಸೇಜ್‌ ಕಂಡು ಬರುತ್ತಿದೆ ಎಂದು ಬಳಕೆದಾರರು ದೂರಿದ್ದಾರೆ. ಇಂಟರ್‌ನೆಟ್‌ ಮೇಲ್ವಿಚಾರಣಾ ಗುಂಪು ನೆಟ್‌ಬ್ಲಾಕ್ಸ್‌ (NetBlocks) ಕೂಡ ಎರಡು ಸಾಮಾಜಿಕ ಜಾಲತಾಣದ ವೆಬ್‌ಸೈಟ್‌ಗಳು ಪ್ರಸ್ತುತ ‘ಅಂತಾರಾಷ್ಟ್ರೀಯ ಸ್ಥಗಿತಗಳನ್ನು’ ಅನುಭವಿಸುತ್ತಿವೆ ಎಂಬ ಅಂಶವನ್ನು ಗಮನಿಸಿದೆ.

“ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಸೇರಿದಂತೆ ಮೆಟಾ ಪ್ಲಾಟ್‌ಫಾರ್ಮ್‌ಗಳು ಪ್ರಸ್ತುತ ಅಂತಾರಾಷ್ಟ್ರೀಯ ಸ್ಥಗಿತಗಳನ್ನು ಅನುಭವಿಸುತ್ತಿವೆ. ಇದು ದೇಶೀಯ ಮಟ್ಟದ ಇಂಟರ್‌ನೆಟ್‌ ಅಡೆತಡೆಗಳು ಅಥವಾ ಫಿಲ್ಟರಿಂಗ್‌ಗೆ ಸಂಬಂಧಿಸಿಲ್ಲ” ಎಂದು ನೆಟ್‌ಬ್ಲಾಕ್ಸ್‌ ತಿಳಿಸಿದೆ. ವಿಶೇಷವೆಂದರೆ ಈ ವರ್ಷದ ಮಾರ್ಚ್‌ನಲ್ಲಿಯೂ ಇದೇ ರೀತಿಯ ಸಮಸ್ಯೆ ಕಂಡು ಬಂದಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಬಳಕೆದಾರರು ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಖಾತೆ ಲಾಗ್ ಔಟ್ ಆಗುತ್ತಿರುವ ಬಗ್ಗೆ ದೂರು ನೀಡಿದ್ದರು.

ನೆಟ್ಟಿಗರು ಏನಂದ್ರು?

ಮೆಟಾ ಫ್ಲಾಟ್‌ಫಾರ್ಮ್‌ನಲ್ಲಿ ಪದೇ ಪದೆ ಇಂತಹ ಸಮಸ್ಯೆ ಎದುರಾಗುತ್ತಿರುವ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಯಾವ ಅಪ್ಲಿಕೇಷನ್‌ಗಳಲ್ಲಿಯೂ ಇಷ್ಟರ ಮಟ್ಟಿಗೆ ಸಮಸ್ಯೆ ಕಂಡುಬರುತ್ತಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯಿಂದ ನಿರಾಶೆಗೊಂಡ ಬಳಕೆದಾರರೊಬ್ಬರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಸ್ಥಗಿತದ ಬಗೆಗಿನ ನೆಟ್‌ಬ್ಲಾಕ್ಸ್‌ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಬಹುಶಃ ಈ ಸಮಸ್ಯೆ ಬಗೆಹರಿಯುವಂತೆ ಕಾಣಿಸುತ್ತಿಲ್ಲʼʼ ಎಂದು ಹೇಳಿದ್ದಾರೆ. ʼʼಮೆಟಾ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿರಬೇಕು. ಅದೇ ಕಾರಣಕ್ಕೆ ಫೇಸ್‌ಬುಕ್‌ ಕೂಡ ಕೆಲಸ ಮಾಡುತ್ತಿಲ್ಲʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

ಈ ವರ್ಷ ಮಾರ್ಚ್‌ನಲ್ಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿತ್ತು. ಕೆಲಹೊತ್ತು ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿರಲಿಲ್ಲ. ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಇಲ್ಲದೆ ಜನ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮೆಟಾ ಕಂಪನಿಯು ಪ್ರತಿಕ್ರಿಯಿಸಿದ್ದು, ಜನರ ಕ್ಷಮೆಯಾಚಿಸಿತ್ತು.

Continue Reading
Advertisement
Online scams
Latest7 mins ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ20 mins ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ31 mins ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ31 mins ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ1 hour ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

EPF Withdrawal Rule
ಮನಿ ಗೈಡ್1 hour ago

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

IND vs AUS Test
ಕ್ರೀಡೆ2 hours ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ2 hours ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Amit Shah
ದೇಶ2 hours ago

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Prajwal Revanna Case Will SIT team go abroad for arrest Prajwal
ಕ್ರೈಂ2 hours ago

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ12 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ15 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌