Donald Trump: ಮೂರನೇ ಮಹಾಯುದ್ಧ ತಡೆಯುವ ಶಕ್ತಿ ಇರುವುದು ನನಗೆ ಮಾತ್ರ ಎಂದ ಡೊನಾಲ್ಡ್​ ಟ್ರಂಪ್​! - Vistara News

ವಿದೇಶ

Donald Trump: ಮೂರನೇ ಮಹಾಯುದ್ಧ ತಡೆಯುವ ಶಕ್ತಿ ಇರುವುದು ನನಗೆ ಮಾತ್ರ ಎಂದ ಡೊನಾಲ್ಡ್​ ಟ್ರಂಪ್​!

ಬೈಡೆನ್​ ಸರ್ಕಾರ ಅಮೆರಿಕವನ್ನು ಪರಮಾಣು ಯುದ್ಧದತ್ತ ಕೊಂಡೊಯ್ಯುತ್ತಿದೆ. ಇದು ಮೂರನೇ ಮಹಾಯುದ್ಧವಾಗಿ ಜಗತ್ತೇ ನಾಶವಾಗಬಹುದು. ಆಡಳಿತದಲ್ಲಿ ಇರುವವರು ಸರಿಯಾಗಿ ವರ್ತಿಸುತ್ತಿಲ್ಲ ಎಂದು ಟ್ರಂಪ್​ ವಾಗ್ದಾಳಿ ನಡೆಸಿದರು.

VISTARANEWS.COM


on

Donald Trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್​: 2024ರಲ್ಲಿ ನಡೆಯಲಿರುವ ಅಮೆರಿಕನ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವುದಾಗಿ ಮಾಜಿ ಅಧ್ಯಕ್ಷ, ರಿಪಬ್ಲಿಕನ್​ ಪಕ್ಷದ ನಾಯಕ ಡೊನಾಲ್ಡ್​ ಟ್ರಂಪ್ (Donald Trump)​ ಈಗಾಗಲೇ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿರುವ ಅವರು ಹಲವೆಡೆ ಪ್ರಚಾರ, ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರ ಅಯೋವಾದ ಡೇವನ್​ಪೋರ್ಟ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದ ಡೊನಾಲ್ಡ್​ ಟ್ರಂಪ್​ ‘ಮೂರನೇ ಮಹಾಯುದ್ಧವನ್ನು ತಡೆಯಬಲ್ಲ ಶಕ್ತಿ ಇರುವುದು ನನಗೆ ಮಾತ್ರ’ ಎಂದು ಹೇಳಿದರು.

ಚುನಾವಣಾ ಪ್ರಚಾರದ ವೇಳೆ, ಈಗಿನ ಅಧ್ಯಕ್ಷ ಜೋ ಬೈಡೆನ್​ ವಿರುದ್ಧ ವಾಕ್​ ಪ್ರಹಾರ ನಡೆಸಿದ ಡೊನಾಲ್ಡ್​ ಟ್ರಂಪ್​ ‘ಜಗತ್ತಿನಲ್ಲಿ ಮೂರನೇ ಮಹಾಯುದ್ಧ ನಡೆಯುವುದು ಗ್ಯಾರೆಂಟಿ. ಆದರೆ ಅದನ್ನು ತಪ್ಪಿಸುವ ಸಾಮರ್ಥ್ಯ ಇರುವುದು ನನಗೆ ಮಾತ್ರ. ನಾನು ಅಮೆರಿಕವನ್ನು ಎಲ್ಲ ರೀತಿಯಿಂದಲೂ ರಕ್ಷಿಸಬಲ್ಲೆ’ ಎಂದು ಹೇಳಿದರು. ಡೊನಾಲ್ಡ್​ ಟ್ರಂಪ್​ ಹೀಗೆ ಹೇಳುತ್ತಿದ್ದಂತೆ ನೆರೆದಿದ್ದ ಜನರು ದೊಡ್ಡದಾಗಿ, ಉತ್ಸಾಹದಿಂದ ಘೋಷಣೆ ಕೂಗಿದರು.

‘ಜೋ ಬೈಡೆನ್ ಆಡಳಿತ ಸಮರ್ಪಕವಾಗಿಲ್ಲ. ಇವರಿಂದಾಗಿ ರಷ್ಯಾ ದೇಶ ಚೀನಾದ ತೆಕ್ಕೆಗೆ ಜಾರುತ್ತಿದೆ. ಈ ಸರ್ಕಾರ ಅಮೆರಿಕವನ್ನು ಪರಮಾಣು ಯುದ್ಧದತ್ತ ಕೊಂಡೊಯ್ಯುತ್ತಿದೆ. ಇದು ಮೂರನೇ ಮಹಾಯುದ್ಧವಾಗಿ ಜಗತ್ತೇ ನಾಶವಾಗಬಹುದು. ಆಡಳಿತದಲ್ಲಿ ಇರುವವರು ಸರಿಯಾಗಿ ವರ್ತಿಸುತ್ತಿಲ್ಲ. ಒಳ್ಳೆಯರ ರೀತಿಯಿಂದ ಮಾತನಾಡಬೇಕಾದಲ್ಲಿ, ಕಠಿಣವಾದ ನಿಲುವು ತಳೆಯುತ್ತಿದ್ದಾರೆ. ಕಠಿಣತೆ ಪ್ರದರ್ಶಿಸಬೇಕಾದಲ್ಲಿ ತುಂಬ ವಿಧೇಯತೆ, ಒಳ್ಳೆಯತನ ತೋರಿಸುತ್ತಿದ್ದಾರೆ. ಅವರೇನು ಮಾಡುತ್ತಿದ್ದಾರೆ ಎಂಬುದು ನಿಜಕ್ಕೂ ಗೊತ್ತಾಗುತ್ತಿಲ್ಲ. ಖಂಡಿತ ಇದು ನಮ್ಮನ್ನು ವಿಶ್ವ ಯುದ್ಧದ ಅಂಚಿಗೇ ಕೊಂಡೊಯ್ಯುತ್ತದೆ. ಆದರೆ ನಾನು ಅದನ್ನು ತಡೆಯಬಲ್ಲೆ’ ಎಂದು ಟ್ರಂಪ್​ ಹೇಳಿದ್ದಾರೆ. ಅಷ್ಟಲ್ಲದೆ, ರಷ್ಯಾ-ಉಕ್ರೇನ್​ ಯುದ್ಧಕ್ಕೂ ಅಂತ್ಯ ಹಾಡಬಲ್ಲೆ ಎಂದಿದ್ದಾರೆ.

ಇದನ್ನೂ ಓದಿ: Joe Biden Visits Kyiv: ಸಮರಪೀಡಿತ ಉಕ್ರೇನ್‌ಗೆ ಜೋ ಬೈಡೆನ್‌ ಅಚ್ಚರಿಯ ಭೇಟಿ, ಹೆಚ್ಚಿನ ಶಸ್ತ್ರಾಸ್ತ್ರ ನೆರವಿನ ಭರವಸೆ

ಡೊನಾಲ್ಡ್​ ಟ್ರಂಪ್​ ಅವರು 2017ರಿಂದ 2021ರವರೆಗೆ, ಅಮೆರಿಕದ 45ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2021ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್​ ಪಕ್ಷ ಗೆದ್ದು, ಜೋ ಬೈಡೆನ್​ ಅಧ್ಯಕ್ಷರಾದರು. ಅಧಿಕಾರ ಬಿಟ್ಟುಕೊಡುವ ಸಂದರ್ಭದಲ್ಲೂ ಕೂಡ ಡೊನಾಲ್ಡ್​ ಟ್ರಂಪ್​ ರಗಳೆ ಮಾಡಿದ್ದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿದ್ದರು. ಸದ್ಯ 2024ರ ಚುನಾವಣೆಗೆ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Viral Video: ಪಾಕಿಸ್ತಾನದಲ್ಲಿ ಮಹಿಳೆಯರು ಹೇಗಿರಬೇಕು, ಯಾವ ರೀತಿ ಉಡುಗೆಗಳನ್ನು ಧರಿಸಬೇಕು ಎಂದು ಹೇಳಲು ಮುಂದಾದ ವ್ಯಕ್ತಿಗೆ ಯೂಟ್ಯೂಬರ್ ಮಹಿಳೆ ನೀಡಿದ ದಿಟ್ಟ ಉತ್ತರವೇನು ಗೊತ್ತೇ?

VISTARANEWS.COM


on

By

Viral Video
Koo

ಇಸ್ಲಾಮಾಬಾದ್: ಯೂಟ್ಯೂಬರ್ (YouTuber) ಮಹಿಳೆಗೆ ಪಾಕಿಸ್ತಾನದ (Pakistan) ಯುವಕನೊಬ್ಬ ಬಲವಂತವಾಗಿ ತಲೆಗೆ ಸ್ಕಾರ್ಫ್ (scarf) ಹೊದಿಸಲು ಪ್ರಯತ್ನಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (viral video) ಆಗಿದ್ದು, ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿ ಯೂಟ್ಯೂಬರ್ ಶೈಲಾ ಖಾನ್ ನ (YouTuber Shaila Khan) ದಿಟ್ಟತನದ ಮಾತಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯೂಟ್ಯೂಬರ್ ಶೈಲಾ ಖಾನ್ ದಾರಿಹೋಕರನ್ನು ಸಂದರ್ಶನ ಮಾಡುತ್ತಿರುತ್ತಾರೆ. ಈ ವೇಳೆ ವ್ಯಕ್ತಿಯೊಬ್ಬ ಆಕೆಗೆ ಎದುರಾಗಿ ಇಸ್ಲಾಮಿಕ್ ದೇಶದಲ್ಲಿ ಮಾಡಬೇಕಾದ ಸರಿಯಾದ ಕೆಲಸವನ್ನು ಹೇಳಲು ನಿರ್ಧರಿಸುತ್ತಾನೆ.

ಆತ ಯೂಟ್ಯೂಬರ್ ಶೈಲಾ ಖಾನ್ ಶಾಲು, ಸ್ಕಾರ್ಫ್ ಅನ್ನು ತಲೆಗೆ ಸುತ್ತಿಕೊಳ್ಳದೆ ತನ್ನ ಮುಂದೆ ನಿಂತಿರುವುದು ಆಕೆ ಮಾಡಿರುವ “ಅಪರಾಧ” ಎನ್ನುವಂತ ಮಾತನಾಡುತ್ತಾನೆ. ಮಹಿಳೆ ಹೇಗೆ ಡ್ರೆಸ್ ಮಾಡಿಕೊಳ್ಳಬೇಕು ಎಂಬ ಬಗ್ಗೆ ಆತ ಟೀಕೆಗಳನ್ನು ಮುಂದುವರಿಸುತ್ತಾನೆ. ಅಷ್ಟೇ ಅಲ್ಲದೇ ತನ್ನ ಕುತ್ತಿಗೆಯಲ್ಲಿದ್ದ ಶಾಲ್ ನಿಂದ ಆಕೆಯ ತಲೆಯನ್ನು ಮುಚ್ಚಲು ಪ್ರಯತ್ನಿಸುತ್ತಾನೆ. ಎಕ್ಸ್ ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ಯೂಟ್ಯೂಬರ್ ಶೈಲಾ ಖಾನ್ ಬೀದಿಯಲ್ಲಿ ನಿಂತಿದ್ದ ಕೆಲವು ಜನರಲ್ಲಿ ಸಂದರ್ಶಿಸುತ್ತಿರುತ್ತಾರೆ. ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಅವರ ಅಭಿಪ್ರಾಯಗಳನ್ನು ಕೇಳುತ್ತಿರುತ್ತಾರೆ. ಕೆಲವು ಸೆಕೆಂಡುಗಳ ಬಳಿಕ ವ್ಯಕ್ತಿಯೊಬ್ಬ ಆಕೆಯ ಬಳಿ ಮಾತನಾಡಲು ಮುಂದಾಗಿದ್ದಾನೆ. ನೀನು ಇಸ್ಲಾಮಿಕ್ ರಾಷ್ಟ್ರದಲ್ಲಿರುವೆ. ಅಲ್ಲಾನ ಆದೇಶಗಳನ್ನು ಅನುಸರಿಸಬೇಕು ಎಂದು ಹೇಳುತ್ತಾನೆ.

ನೀವು ನಿಮ್ಮ ತಲೆಯನ್ನು ಮುಚ್ಚಿಕೊಳ್ಳದೆ ಇಸ್ಲಾಮಿಕ್ ದೇಶದಲ್ಲಿ ನನ್ನ ಮುಂದೆ ನಿಂತಿದ್ದೀರಿ ಎಂದು ಆ ವ್ಯಕ್ತಿ ಯೂಟ್ಯೂಬರ್‌ ಶೈಲಾ ಖಾನ್ ಗೆ ಹೇಳುತ್ತಾನೆ. ಅನಂತರ, ಅವನು ಅವಳ ತಲೆಗೆ ಶಾಲನ್ನು ಸುತ್ತಲು ಪ್ರಯತ್ನಿಸುತ್ತಿರುವಾಗ ಶೈಲಾ ಖಾನ್ ಅದನ್ನು ತೀವ್ರವಾಗಿ ವಿರೋಧಿಸುತ್ತಾರೆ ಮತ್ತು ತಕ್ಷಣವೇ ಅವನಿಗೆ ತನ್ನ ಒಪ್ಪಿಗೆ ಇದಕ್ಕೆ ಎಷ್ಟು ಮುಖ್ಯ ಎಂಬುದನ್ನು ಹೇಳುತ್ತಾಳೆ. ಆತನ ಕೃತ್ಯವನ್ನು ಖಂಡಿಸಿದ ಆಕೆ, ಇಸ್ಲಾಮಿಕ್ ನಂಬಿಕೆಗಳು ಮತ್ತು ನೈತಿಕತೆಗಳು ಯಾವಾಗಲೂ ದುಪಟ್ಟಾ ಧರಿಸಲು ಏಕೆ ಸೀಮಿತವಾಗಿದೆ ಎಂದು ಪ್ರಶ್ನಿಸಿದ್ದಾಳೆ.


ಶಾಲನ್ನು ಆತನಿಗೆ ಹಿಂದಿರುಗಿಸುತ್ತಾ, ಅವಳು ತನ್ನದೇ ಆದ ಶಿರಸ್ತ್ರಾಣವನ್ನು ಹೊಂದಿದ್ದಾಳೆ ಎಂದು ಪ್ರತಿಪಾದಿಸುತ್ತಾಳೆ. ಅವಳು ತನ್ನ ತಲೆಯನ್ನು ಮುಚ್ಚಲು ಬಯಸುತ್ತಾಳೆಯೇ ಎಂಬುದಕ್ಕೆ ಅದು ತನ್ನ “ನಿರ್ಧಾರ” ಎಂದು ಹೇಳುತ್ತಾಳೆ. ಅವಳ ಅನುಮತಿಯಿಲ್ಲದೆ ಅವನು ಅವಳನ್ನು ಮುಟ್ಟಿದ್ದೇ ದೊಡ್ಡ ಪಾಪ ಎಂದು ಅವಳು ಅವನಿಗೆ ಹೇಳುತ್ತಾಳೆ. ಇಸ್ಲಾಂ ನಿಮಗೆ ಕಲಿಸುವುದು ಇದನ್ನೇ? ಎಂದು ಅವಳು ಆತನನ್ನು ಪ್ರಶ್ನಿಸಿದ್ದಾಳೆ.

ಸಾಮಾಜಿಕ ಕಿರುಕುಳದ ಆಧಾರದ ಮೇಲೆ ತನ್ನ ನಡವಳಿಕೆಗಾಗಿ ಆತನನ್ನು ಬಂಧಿಸಬಹುದು ಎಂದು ಯೂಟ್ಯೂಬರ್ ಶೈಲಾ ಖಾನ್ ಆತನನ್ನು ಎಚ್ಚರಿಸುತ್ತಾಳೆ. ಆದರೆ ಆತ ತಾನು ಮಾಡಿರುವುದು ತಪ್ಪು ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಾನೆ ಮತ್ತು ತನ್ನದೇ ಸರಿ ಎಂದು ಅಭಿಪ್ರಾಯ ಮಂಡಿಸುತ್ತಾನೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಗೆ ಹಲವಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಮತಾಂಧ ವ್ಯಕ್ತಿಯ ವಿರುದ್ಧ ದಿಟ್ಟವಾಗಿ ಮಾತನಾಡಿದ ಯೂಟ್ಯೂಬರ್ ಮಹಿಳೆಯನ್ನು ಸಾಕಷ್ಟು ಮಂದಿ ಹೊಗಳಿದ್ದಾರೆ.

ಒಬ್ಬ ಬಳಕೆದಾರ “ಬ್ರೇವ್ ಪಾಕಿಸ್ತಾನಿ ಗರ್ಲ್ ಯೂಟ್ಯೂಬರ್” ಎಂದು ಹೇಳಿದ್ದು, ಮತ್ತೊಬ್ಬ “ತಮ್ಮ ಪರವಾಗಿ ನಿಂತಿರುವ ಹುಡುಗಿಗೆ ಹ್ಯಾಟ್ಸ್ ಆಫ್!! ಅಂತಹ ದೇಶದಲ್ಲಿ ಹಾಗೆ ಮಾಡಲು ಧೈರ್ಯ ಬೇಕು!! ಎಂದು ಕಾಮೆಂಟ್ ಮಾಡಿದ್ದಾನೆ. ಪಾಕಿಸ್ತಾನದಲ್ಲಿ ಈ ವ್ಯಕ್ತಿಯ ವರ್ತನೆ ಎಲ್ಲಿಯವರೆಗೆ ವ್ಯಾಪಕವಾಗಿದೆಯೋ ಅಲ್ಲಿಯವರೆಗೆ ಅದು ಕೆಳಗಿಳಿಯುತ್ತದೆ ಮತ್ತು ಹೊರಗಿರುತ್ತದೆ ಎಂದು ಮತ್ತೊಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾನೆ.

ಇದನ್ನೂ ಓದಿ: Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Continue Reading

ವಿದೇಶ

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

Elon Musk: ಭಾರತಕ್ಕೆ ಎಲಾನ್‌ ಮಸ್ಕ್‌ ಅವರು ಏಪ್ರಿಲ್‌ 21 ಹಾಗೂ 22ರಂದು ಆಗಮಿಸಬೇಕಿತ್ತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಕೊನೆಯಲ್ಲಿ ಕ್ಷಣದಲ್ಲಿ ಅವರು ಭಾರತದ ಭೇಟಿಯನ್ನು ಮುಂದೂಡಿದ್ದಾರೆ. ಆದರೆ, ಇದೇ ವರ್ಷ ಭಾರತಕ್ಕೆ ಭೇಟಿ ನೀಡುವುದು ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Elon Musk
Koo

ವಾಷಿಂಗ್ಟನ್‌: ಎಲೆಕ್ಟ್ರಾನಿಕ್‌ ಕಾರುಗಳ ಉತ್ಪಾದನೆಯ ದೈತ್ಯ ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ (Elon Musk) ಅವರು ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿಗಾಗಿ ಭಾರತಕ್ಕೆ ಎಲಾನ್‌ ಮಸ್ಕ್‌ ಅವರು ಏಪ್ರಿಲ್‌ 21 ಹಾಗೂ 22ರಂದು ಆಗಮಿಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಎಲಾನ್‌ ಮಸ್ಕ್‌ ಅವರು ಭಾರತದ ಭೇಟಿಯನ್ನು ಮುಂದೂಡಿಕೆ ಮಾಡಿದ್ದಾರೆ.

ಭಾರತದ ಭೇಟಿಯನ್ನು ಮುಂದೂಡಿರುವ ಕುರಿತು ಎಲಾನ್‌ ಮಸ್ಕ್‌ ಅವರೇ ಮಾಹಿತಿ ನೀಡಿದ್ದಾರೆ. “ಟೆಸ್ಲಾ ಕಂಪನಿಯ ಅತಿ ಹೆಚ್ಚು ಜವಾಬ್ದಾರಿಗಳಿರುವ ಕಾರಣ ಭಾರತದ ಭೇಟಿಯನ್ನು ಮುಂದೂಡಲು ಬೇಸರವಾಗುತ್ತಿದೆ. ಆದರೆ, ಇದೇ ವರ್ಷದಲ್ಲಿಯೇ ಭಾರತಕ್ಕೆ ನಾನು ಭೇಟಿ ನೀಡುವುದು ನಿಶ್ಚಿತ” ಎಂದು ಎಲಾನ್‌ ಮಸ್ಕ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಎಲಾನ್‌ ಮಸ್ಕ್‌ ಅವರು ಅಮೆರಿಕದಲ್ಲಿ ಏಪ್ರಿಲ್‌ 23ರಂದು ನಡೆಯುವ ಮಹತ್ವದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಅವರು ಟೆಸ್ಲಾ ಕಂಪನಿಯ ಮೊದಲ ತ್ರೈಮಾಸಿದಲ್ಲಿ ನಡೆಸಿದ ವಹಿವಾಟು ಕುರಿತು ಮಾಹಿತಿ ಒದಗಿಸಲಿದ್ದಾರೆ. ಇದರ ಜತೆಗೆ ಹಲವು ಸಭೆಗಳು ಕೂಡ ಇರುವುದರಿಂದ ಅವರು ಭಾರತದ ಭೇಟಿಯನ್ನು ಮುಂದೂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೋದಿ ಭೇಟಿಯ ಅಜೆಂಡಾ ಏನು?

ಭಾರತದಲ್ಲಿ ಟೆಸ್ಲಾ ಕಾರು ಉತ್ಪಾದನೆ ಘಟಕ ಸ್ಥಾಪಿಸಲು ಟೆಸ್ಲಾ ಕಂಪನಿಯು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಲೇ ಇದೆ. ಭಾರತದ ಷರತ್ತುಗಳು, ಟೆಸ್ಲಾ ಘಟಕ ಸ್ಥಾಪಿಸಲು ಮಸ್ಕ್‌ ಹಾಕಿಕೊಂಡಿರುವ ನಿಯಮಗಳಿಂದಾಗಿ ಘಟಕ ಸ್ಥಾಪನೆ ಮುಂದೂಡಿಕೆಯಾಗುತ್ತಲೇ ಇದೆ. ಆದರೆ, ಈ ಬಾರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೂಲಕ ಘಟಕ ಸ್ಥಾಪನೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ಎಲಾನ್‌ ಮಸ್ಕ್‌ ಅವರು ಭಾರತಕ್ಕೆ ಭೇಟಿ ನೀಡುರುವುದು ಮಹತ್ವ ಪಡೆದಿದೆ.

ಎಲಾನ್‌ ಮಸ್ಕ್‌ ಅವರು ಕೆಲ ತಿಂಗಳ ಹಿಂದಷ್ಟೇ ಭಾರತದ ಪರವಾಗಿ ಮಾತನಾಡಿದ್ದರು. “ವಿಶ್ವಸಂಸ್ಥೆಯು ಬದಲಾವಣೆ ತರಲು ಹಿಂಜರಿಯುತ್ತಿದೆ. ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವ ಪಡೆದಿರುವ ಬಲಿಷ್ಠ ರಾಷ್ಟ್ರಗಳು ತಾವು ಹೊಂದಿರುವ ಹೆಚ್ಚಿನ ಅಧಿಕಾರವನ್ನು ಬಳಸಿಕೊಳ್ಳಲು ಬಯಸುತ್ತಿವೆ. ಇದೇ ಕಾರಣಕ್ಕಾಗಿ ಆಫ್ರಿಕಾ ಹಾಗೂ ಭಾರತಕ್ಕೆ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು” ಎಂದು ಎಲಾನ್‌ ಮಸ್ಕ್‌ ಅವರು ಕಳೆದ ಜನವರಿಯಲ್ಲಿ ಆಗ್ರಹಿಸಿದ್ದರು.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Continue Reading

ವಿದೇಶ

China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

China Missile: ಪಾಕಿಸ್ತಾನದ ಮಿತ್ರ ರಾಷ್ಟ್ರವಾದ ಚೀನಾ, ಇಸ್ಲಾಮಾಬಾದ್​ನ ಮಿಲಿಟರಿ ಆಧುನೀಕರಣ ಕಾರ್ಯಕ್ರಮಕ್ಕೆ ಶಸ್ತ್ರಾಸ್ತ್ರ ಮತ್ತು ರಕ್ಷಣಾ ಉಪಕರಣಗಳ ಪ್ರಮುಖ ಪೂರೈಕೆ ಮಾಡುವ ದೇಶವಾಗಿದೆ. ಬೆಲಾರಸ್​​ನ ಮಿನ್ಸ್ಕ್ ವ್ಹೀಲ್ ಟ್ರಾಕ್ಟರ್ ಸ್ಥಾವರವು ಪಾಕಿಸ್ತಾನದ ದೀರ್ಘ-ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜೆ ವಿಶೇಷ ವಾಹನ ಚಾಸಿಸ್ ಅನ್ನು ಪೂರೈಸಿದೆ.

VISTARANEWS.COM


on

China Missile
Koo

ವಾಷಿಂಗ್ಟನ್: ದೂರಗಾಮಿ ಕ್ಷಿಪಣಿ ಸೇರಿದಂತೆ ಪಾಕಿಸ್ತಾನದ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಗಳಿಗೆ ಪೂರಕವಾಗಿರುವ ವಸ್ತುಗಳನ್ನು ರಹಸ್ಯವಾಗಿ ಪೂರೈಸಿದ್ದಕ್ಕಾಗಿ ಮೂರು ಚೀನೀ ಕಂಪನಿಗಳು ( China Missile) ಮತ್ತು ಬೆಲಾರಸ್​​ನ ಒಂದು ಕಂಪನಿಗೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ಪ್ರಕಟಿಸಿದೆ. ಕ್ಸಿಯಾನ್ ಲಾಂಗ್ಡೆ ಟೆಕ್ನಾಲಜಿ ಡೆವಲಪ್ಮೆಂಟ್, ಚೀನಾದ ಟಿಯಾಂಜಿನ್ ಕ್ರಿಯೇಟಿವ್ ಸೋರ್ಸ್ ಇಂಟರ್​ನ್ಯಾಷನಲ್ ಟ್ರೇಡ್ ಆ್ಯಂಡ್ ಗ್ರ್ಯಾನ್ಪೆಕ್ಟ್ ಕಂಪನಿ ಲಿಮಿಟೆಡ್ ಮತ್ತು ಬೆಲಾರಸ್​ನ ಮಿನ್ಸ್ಕ್ ವ್ಹೀಲ್ ಟ್ರಾಕ್ಟರ್ ಪ್ಲಾಂಟ್ ಕಂಪನಿಗಳು ನಿರ್ಬಂಧಕ್ಕೆ ಒಳಗಾಗಿವೆ.

ಈ ಕಂಪನಿಗಳು “ಸಾಮೂಹಿಕ ವಿನಾಶಕಾರಿ ಶಸ್ತ್ರಾಸ್ತ್ರಗಳ ಪ್ರಸರಣಕ್ಕೆ ಭೌತಿಕವಾಗಿ ಕೊಡುಗೆ ನೀಡಿದ ಅಥವಾ ಭೌತಿಕವಾಗಿ ಕೊಡುಗೆ ನೀಡುವ ಅಪಾಯವನ್ನುಂಟುಮಾಡುವ ಚಟುವಟಿಕೆಗಳು ಅಥವಾ ವಹಿವಾಟುಗಳಲ್ಲಿ ತೊಡಗಿವೆ. ಅಂತಹ ವಸ್ತುಗಳನ್ನು ಪಾಕಿಸ್ತಾನದಲ್ಲಿ ತಯಾರಿಸುವ, ಸ್ವಾಧೀನಪಡಿಸಿಕೊಳ್ಳುವ, ಅಭಿವೃದ್ಧಿಪಡಿಸುವ, ವರ್ಗಾಯಿಸುವ ಅಥವಾ ಬಳಸುವ ಯಾವುದೇ ಪ್ರಯತ್ನಗಳನ್ನು ನಡೆಸಲಾಗಿದೆ, ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಶುಕ್ರವಾರ ಹೇಳಿದ್ದಾರೆ.

ಕಳವಳಕಾರಿ ಚಟುವಟಿಕೆಗಳನ್ನು ಬೆಂಬಲಿಸುವ ಖರೀದಿ ಜಾಲಗಳನ್ನು ಅಡ್ಡಿಪಡಿಸಲು ಕ್ರಮ ಕೈಗೊಳ್ಳಲು ಅಮೆರಿಕ ಬದ್ಧವಾಗಿದೆ ಎಂದು ಮಿಲ್ಲರ್ ಹೇಳಿದ್ದಾರೆ.

ಇದನ್ನೂ ಓದಿ: Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

ಪಾಕಿಸ್ತಾನದ ಮಿತ್ರ ರಾಷ್ಟ್ರವಾದ ಚೀನಾ, ಇಸ್ಲಾಮಾಬಾದ್​ನ ಮಿಲಿಟರಿ ಆಧುನೀಕರಣ ಕಾರ್ಯಕ್ರಮಕ್ಕೆ ಶಸ್ತ್ರಾಸ್ತ್ರ ಮತ್ತು ರಕ್ಷಣಾ ಉಪಕರಣಗಳ ಪ್ರಮುಖ ಪೂರೈಕೆ ಮಾಡುವ ದೇಶವಾಗಿದೆ. ಬೆಲಾರಸ್​​ನ ಮಿನ್ಸ್ಕ್ ವ್ಹೀಲ್ ಟ್ರಾಕ್ಟರ್ ಸ್ಥಾವರವು ಪಾಕಿಸ್ತಾನದ ದೀರ್ಘ-ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜೆ ವಿಶೇಷ ವಾಹನ ಚಾಸಿಸ್ ಅನ್ನು ಪೂರೈಸಿದೆ.

ಚೀನಾದ ಕ್ಸಿಯಾನ್ ಲಾಂಗ್ಡೆ ಟೆಕ್ನಾಲಜಿ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್, ಪಾಕಿಸ್ತಾನದ ದೀರ್ಘ-ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಕ್ಕೆ ಫಿಲಮೆಂಟ್ ವೈಂಡಿಂಗ್ ಯಂತ್ರ ಸೇರಿದಂತೆ ಕ್ಷಿಪಣಿ ಸಂಬಂಧಿತ ಉಪಕರಣಗಳನ್ನು ಪೂರೈಸಿದೆ. ರಾಕೆಟ್ ಮೋಟರ್ ಕೇಸ್ ಗಳನ್ನು ತಯಾರಿಸಲು ಫಿಲಮೆಂಟ್ ವೈಂಡಿಂಗ್ ಯಂತ್ರಗಳನ್ನು ಬಳಸಬಹುದು.

ಇದರಲ್ಲಿ ಸ್ಟಿರ್ ವೆಲ್ಡಿಂಗ್ ಉಪಕರಣಗಳು (ಬಾಹ್ಯಾಕಾಶ ಉಡಾವಣಾ ವಾಹನಗಳಲ್ಲಿ ಬಳಸುವ ಪ್ರೊಪೆಲ್ಲಂಟ್ ಟ್ಯಾಂಕ್​ಗಳನ್ನು ತಯಾರಿಸಲು ಬಳಸಬಹುದು ಎಂದು ಯುನೈಟೆಡ್ ಸ್ಟೇಟ್ಸ್ ನಿರ್ಣಯಿಸುತ್ತದೆ. ದೊಡ್ಡ ವ್ಯಾಸದ ರಾಕೆಟ್ ಮೋಟರ್ ಗಳನ್ನು ಪರೀಕ್ಷಿಸಲು ಉಪಕರಣಗಳನ್ನು ತಯಾರಿಸಲು ಗ್ರಾನ್ ಪೆಕ್ಟ್ ಕಂಪನಿಯು ಪಾಕಿಸ್ತಾನದ ಸುಪಾರ್ಕೊದೊಂದಿಗೆ ಕೆಲಸ ಮಾಡಿತು. ಗ್ರ್ಯಾನ್ಪೆಕ್ಟ್ ಕಂಪನಿ ಲಿಮಿಟೆಡ್ ಪಾಕಿಸ್ತಾನದ ಎನ್ಡಿಸಿಗೆ ದೊಡ್ಡ ವ್ಯಾಸದ ರಾಕೆಟ್ ಮೋಟರ್ಗಳನ್ನು ಪರೀಕ್ಷಿಸಲು ಉಪಕರಣಗಳನ್ನು ಪೂರೈಸಲು ಸಹ ಕೆಲಸ ಮಾಡಿತು.

Continue Reading

ವೈರಲ್ ನ್ಯೂಸ್

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

Ancient snake: 2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು.

VISTARANEWS.COM


on

Ancient snake vasuki indicus
Koo

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ, ಭಾರೀ ಗಾತ್ರದ ಹಾವು (big snake) ಭಾರತದಲ್ಲಿ ಬದುಕಿತ್ತು ಎಂಬುದು ಇದೀಗ ಸಂಶೋಧನೆಯಿಂದ ಗೊತ್ತಾಗಿದೆ. ಗುಜರಾತ್‌ನಲ್ಲಿ ಪತ್ತೆಯಾದ ಪ್ರಾಚೀನ ಹಾವೊಂದರ (Ancient snake) ಪಳೆಯುಳಿಕೆಗಳು (follisls) ಅದರ ಭಾರೀ ಗಾತ್ರ ಹಾಗೂ ತೂಕವನ್ನು ತಿಳಿಯಪಡಿಸಿವೆ. ಅದು ಸುಮಾರು 50 ಅಡಿ ಉದ್ದ ಹಾಗೂ 1,000 ಕೆಜಿ ತೂಕವಿತ್ತಂತೆ!

2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು. ನಿನ್ನೆ ವಿಜ್ಞಾನ ಪತ್ರಿಕೆಗಳಲ್ಲಿ ಇದು ವರದಿಯಾಗಿದೆ. ಈ ಜಾತಿಯ ಹಾವು 36ರಿಂದ ಸುಮಾರು 50 ಅಡಿ ಉದ್ದದವರೆಗೂ ಬೆಳೆಯುತ್ತಿತ್ತು.

ಗಾತ್ರದಲ್ಲಿ ʼವಾಸುಕಿʼಯ ಗಾತ್ರ ಹಾಗೂ ತೂಕ ಈಗ ಅಳಿವಿನಂಚಿನಲ್ಲಿರುವ ʼಟೈಟಾನೊಬೊವಾʼವನ್ನು ಮೀರಿರಬಹುದು. ಇದು 42 ಅಡಿ ಅಳತೆಯ ಅತಿದೊಡ್ಡ ಹಾವು. ಇದು 1 ಟನ್ ಅಥವಾ 1,000 ಕಿಲೋಗ್ರಾಂಗಳಷ್ಟು ತೂಕವನ್ನು ಹೊಂದಿರಬಹುದು ಎಂದು ಸಂಶೋಧಕರು ಹೇಳುತ್ತಾರೆ. ಇಂದು ಜೀವಂತವಾಗಿರುವ ಅತಿದೊಡ್ಡ ಹಾವೆಂದರೆ ಏಷ್ಯಾದ 33 ಅಡಿ ಉದ್ದದ ರೆಟಿಕ್ಯುಲೇಟೆಡ್ ಹೆಬ್ಬಾವು.

“ಅದರ ದೊಡ್ಡ ಗಾತ್ರವನ್ನು ಪರಿಗಣಿಸಿದರೆ, ವಾಸುಕಿಯು ನಿಧಾನವಾಗಿ ಚಲಿಸುವ ಹೊಂಚುದಾಳಿ ಪರಭಕ್ಷಕವಾಗಿತ್ತು. ಅದು ಅನಕೊಂಡಗಳು ಮತ್ತು ಹೆಬ್ಬಾವುಗಳಂತೆ ಸುತ್ತುವರಿದು ಬಿಗಿಯುವಿಕೆಯ ಮೂಲಕ ತನ್ನ ಬೇಟೆಯನ್ನು ಪಡೆಯುತ್ತಿತ್ತು” ಎಂದು ಐಐಟಿ-ರೂರ್ಕಿಯಲ್ಲಿ ಪ್ಯಾಲಿಯಂಟಾಲಜಿಯ ಪೋಸ್ಟ್‌ ಡಾಕ್ಟರಲ್ ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕ ದೇಬಜಿತ್ ದತ್ತಾ ಹೇಳುತ್ತಾರೆ. “ಈ ಹಾವು ಕರಾವಳಿಯ ಸಮೀಪವಿರುವ ಜೌಗು ಪ್ರದೇಶದಲ್ಲಿ ಜಾಗತಿಕ ತಾಪಮಾನವು ಇಂದಿನಕ್ಕಿಂತ ಹೆಚ್ಚಿರುವ ಸಮಯದಲ್ಲಿ ವಾಸಿಸುತ್ತಿತ್ತು” ಎಂದಿದ್ದಾರೆ.

ಹಿಂದೂ ಪುರಾಣಗಳಲ್ಲಿ ʼವಾಸುಕಿʼ ಎಂಬ ಭಾರೀ ನಾಗರಾಜನ ಕತೆಗಳು ಇವೆ. ಇದನ್ನು ಸಾಮಾನ್ಯವಾಗಿ ಶಿವನ ಕುತ್ತಿಗೆಗೆ ಸುತ್ತುವಂತೆ ಚಿತ್ರಿಸಲಾಗುತ್ತದೆ. ಸಮುದ್ರ ಮಥನಕ್ಕೆ ಈ ಹಾವನ್ನು ಬಳಸಿಕೊಳ್ಳಲಾಗಿತ್ತು ಎಂದು ಕತೆಯಿದೆ. ಈ ಹಿನ್ನೆಲೆಯಲ್ಲಿ ಸಂಶೋಧಕರು ಇದಕ್ಕೆ ʼವಾಸುಕಿ ಇಂಡಿಕಸ್ʼ ಎಂಬ ಹೆಸರನ್ನು ನೀಡಿದ್ದಾರೆ.

“ಇದು ಬಹಳ ಸಾಂಕೇತಿಕವಾಗಿದೆ” ಎಂದು ನಾಮಕರಣದ ನಂತರ ದತ್ತ ಹೇಳಿದ್ದಾರೆ. “ವಾಸುಕಿ ನಮ್ಮ ಸರ್ಪರಾಜ. ಹೀಗಾಗಿ ಇಲ್ಲಿರುವ ಅಸಾಧಾರಣವಾದ ದೊಡ್ಡ ಗಾತ್ರದ ಹಾವೂ ಅದೇ” ಎಂದು ಅವರು ವಿವರಿಸಿದರು.

ವಾಸುಕಿ ಇಂಡಿಕಸ್‌ನ ಪಳೆಯುಳಿಕೆಯನ್ನು IIT-ರೂರ್ಕಿಯ ಪ್ರಾಗ್ಜೀವಶಾಸ್ತ್ರದ ಪ್ರಾಧ್ಯಾಪಕ ಸುನಿಲ್ ಬಾಜಪೇಯಿ ಅವರು 2005ರಲ್ಲಿ ಕಂಡುಹಿಡಿದರು. ಅವರು ಕಚ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಅವಶೇಷಗಳನ್ನು ಪತ್ತೆಹಚ್ಚಿದರು.

ಆ ಸಮಯದಲ್ಲಿ, ʼಸೈಂಟಿಫಿಕ್ ಅಮೇರಿಕನ್ʼ ಪ್ರಕಾರ, ಅವಶೇಷಗಳು ಈಗಾಗಲೇ ತಿಳಿದಿರುವ ಇತಿಹಾಸಪೂರ್ವ ಜಾತಿಯ ಮೊಸಳೆಗೆ ಸೇರಿವೆ ಎಂದು ಬಾಜಪೇಯಿ ನಂಬಿದ್ದರು. 2022ರವರೆಗೆ ಪಳೆಯುಳಿಕೆ ಅವರ ಪ್ರಯೋಗಾಲಯದಲ್ಲಿ ಇತ್ತು. ಅದೇ ವರ್ಷ ಪ್ರಯೋಗಾಲಯಕ್ಕೆ ಸೇರಿದ ದತ್ತಾ ಅವುಗಳನ್ನು ಪರೀಕ್ಷಿಸಲು ಪ್ರಾರಂಭಿಸಿದರು. ಆ ಚೂರುಗಳು ಬೇರೆ ಜಾತಿಗೆ ಸೇರಿದವು ಎಂದು ಇಬ್ಬರಿಗೂ ಅರಿವಾಯಿತು.

“ಪಳೆಯುಳಿಕೆಯು 2005ರಲ್ಲಿ ಕಂಡುಬಂದಿದೆ, ಆದರೆ ನಾನು ಬೇರೆ ಬೇರೆ ಪಳೆಯುಳಿಕೆಗಳ ಮೇಲೆ ಕೆಲಸ ಮಾಡುತ್ತಿರುವುದರಿಂದ, ಅದು ಹಾಗೇ ಉಳಿಯಿತು. 2022ರಲ್ಲಿ ನಾವು ಪಳೆಯುಳಿಕೆಯನ್ನು ಮರು-ಪರಿಶೀಲಿಸಲು ಪ್ರಾರಂಭಿಸಿದ್ದೇವೆ. ಆರಂಭದಲ್ಲಿ ಅದರ ಗಾತ್ರದಿಂದಾಗಿ, ಇದು ಮೊಸಳೆ ಎಂದು ನಾನು ಭಾವಿಸಿದೆ. ಆದರೆ ನಂತರ ಅದು ಹಾವಿನದ್ದಾಗಿದೆ ಎಂದು ಅರಿತುಕೊಂಡೆವು” ಎಂದು ಬಾಜಪೇಯಿ ತಿಳಿಸಿದರು.

ಇದನ್ನೂ ಓದಿ: Hottest Year: 1.25 ಲಕ್ಷ ವರ್ಷಗಳಲ್ಲೇ 2023 ಅತಿ ಬಿಸಿಯಾದ ವರ್ಷ, ಕಾರಣ ಏನು?

Continue Reading
Advertisement
Apricot Benefits
ಆರೋಗ್ಯ2 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್3 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ8 mins ago

Modi in Karnataka: ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ42 mins ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ44 mins ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ52 mins ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ53 mins ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ53 mins ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Karnataka Weather Forecast
ಮಳೆ1 hour ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ1 hour ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ6 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ7 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌