Vladimir Putin: ಉಕ್ರೇನ್‌ ಮೇಲೆ ದಾಳಿ; ವ್ಲಾಡಿಮಿರ್‌ ಪುಟಿನ್‌ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ ಅರೆಸ್ಟ್‌ ವಾರಂಟ್ Vistara News
Connect with us

ಪ್ರಮುಖ ಸುದ್ದಿ

Vladimir Putin: ಉಕ್ರೇನ್‌ ಮೇಲೆ ದಾಳಿ; ವ್ಲಾಡಿಮಿರ್‌ ಪುಟಿನ್‌ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ ಅರೆಸ್ಟ್‌ ವಾರಂಟ್

Vladimir Putin: ಉಕ್ರೇನ್‌ನಲ್ಲಿ ಕಳೆದ ಒಂದು ವರ್ಷದಿಂದ ರಷ್ಯಾ ಸೈನಿಕರು ದಾಳಿ ನಡೆಸಿ, ಜನರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ವ್ಲಾಡಿಮಿರ್‌ ಪುಟಿನ್‌ ವಿರುದ್ಧ‌ ಅಂತಾರಾಷ್ಟ್ರೀಯ ನ್ಯಾಯಾಲಯವು ಅರೆಸ್ಟ್‌ ವಾರಂಟ್‌ ಹೊರಡಿಸಿದೆ.

VISTARANEWS.COM


on

ICC issues arrest warrant against Vladimir Putin for Ukraine war crimes
Koo

ಹೇಗ್‌: ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿ ಒಂದು ವರ್ಷ ತುಂಬಿದೆ. ಸಾವಿರಾರು ಜನರ ಸಾವು, ಲಕ್ಷಾಂತರ ಜನ ದೇಶದಿಂದ ಪಲಾಯನ, ಲಕ್ಷಾಂತರ ಜನರಿಗೆ ಗಾಯ, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ರಷ್ಯಾ ಪಡೆಗಳ ಕ್ಷಿಪಣಿ, ರಾಕೆಟ್‌ ದಾಳಿಗೆ ಉಕ್ರೇನ್‌ನ ಬಹುತೇಕ ಭಾಗ ಮಸಣದಂತಾಗಿದೆ. ಹೀಗಿದ್ದರೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಯುದ್ಧ ನಿಲ್ಲಿಸುವ ಲಕ್ಷಣ ಕಾಣುತ್ತಿಲ್ಲ. ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ (International Criminal Court) ಪುಟಿನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌ ಹೊರಡಿಸಿದೆ.

“ಉಕ್ರೇನ್‌ನಲ್ಲಿ ನಡೆದಿರುವ ಯುದ್ಧಾಪರಾಧಗಳು, ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಉಕ್ರೇನ್‌ನಿಂದ ಕಾನೂನುಬಾಹಿರವಾಗಿ ಮಕ್ಕಳು ಹಾಗೂ ಜನರನ್ನು ಗಡಿಪಾರು ಮಾಡಿದ ಕಾರಣಕ್ಕಾಗಿ ವ್ಲಾಡಿಮಿರ್‌ ಪುಟಿನ್‌ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ” ಎಂದು ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ತಿಳಿಸಿದೆ.

ವ್ಲಾಡಿಮಿರ್‌ ಪುಟಿನ್‌ ಬಂಧನವಾಗುತ್ತಾ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಬಂಧನಕ್ಕೆ ಐಸಿಸಿ ಅರೆಸ್ಟ್‌ ವಾರಂಟ್‌ ಹೊರಡಿಸಿದ್ದು, ಅವರನ್ನು ಶೀಘ್ರದಲ್ಲೇ ಬಂಧನವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಐಸಿಸಿಯು ಯಾರ ವಿರುದ್ಧವೇ ಅರೆಸ್ಟ್‌ ವಾರಂಟ್‌ ಹೊರಡಿಸಿದರೆ, ಅವರನ್ನು ಬಂಧಿಸಲಾಗುತ್ತದೆ. ಈಗ ಪುಟಿನ್‌ ವಿರುದ್ಧ ವಾರಂಟ್‌ ಹೊರಡಿಸಿರುವ ಕಾರಣ ಈ ಕುರಿತು ರಷ್ಯಾದ ಹಿರಿಯ ಅಧಿಕಾರಿಗಳು, ಸೈನಿಕರು ಹಾಗೂ ನಾಗರಿಕರಿಗೆ ಮಾಹಿತಿ ರವಾನಿಸಲಾಗುತ್ತದೆ. ಹಾಗೊಂದು ವೇಳೆ ಪುಟಿನ್‌ ಅವರು ಶರಣಾಗದಿದ್ದರೆ ಪುಟಿನ್ ಅಂತಾರಾಷ್ಟ್ರೀಯ ಪ್ರವಾಸಕ್ಕೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ.

2022ರ ಫೆಬ್ರವರಿಯಿಂದಲೂ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡುತ್ತಿದೆ. ಜಾಗತಿಕ ನಿರ್ಬಂಧ, ವ್ಯಾಪಾರ ಒಪ್ಪಂದಗಳ ರದ್ದು ಸೇರಿ ಹಲವು ಕ್ರಮಗಳ ಹೊರತಾಗಿಯೂ ವ್ಲಾಡಿಮಿರ್‌ ಪುಟಿನ್‌ ಯುದ್ಧ ನಿಲ್ಲಿಸಿಲ್ಲ. ಹಾಗಾಗಿ, ಪ್ರಕರಣವು ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ಮೆಟ್ಟಿಲೇರಿದೆ.

ಇದನ್ನೂ ಓದಿ: PM Modi: ಉಕ್ರೇನ್ ವಿರುದ್ಧದ​ ಯುದ್ಧ ಕೊನೆಗಾಣಿಸುವಂತೆ ಪುಟಿನ್​​ ಮನವೊಲಿಸಲು ಪ್ರಧಾನಿ ಮೋದಿಗೆ ಸಾಧ್ಯ ಎಂದ ಅಮೆರಿಕ

ದೇಶ

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ.

VISTARANEWS.COM


on

Tricolor flag flown in America Patriots strike back at Khalistanis
Koo

ಅಮೆರಿಕದ ಕಾನ್ಸುಲೇಟ್ ಕಚೇರಿ ಎದುರು ಸಾವಿರಾರು ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ ಭಾರತದ ಪರ ಘೋಷಣೆ ಮೊಳಗಿಸಿದ್ದಾರೆ. ಹಿಂದೂ, ಮುಸ್ಲಿಂ, ಸಿಖ್ ಸೇರಿದಂತೆ ಎಲ್ಲ ಧರ್ಮೀಯರೂ ಇದರಲ್ಲಿ ಭಾಗವಹಿಸಿದ್ದು ಗಮನಾರ್ಹ. ಪಾಕ್ ಪ್ರೇರಿತ ಸಿಖ್ ಪ್ರತ್ಯೇಕತಾವಾದಿಗಳಿಗೆ ಇದು ತಕ್ಕ ತಿರುಗೇಟಾಗಿದೆ. ಕಳೆದ ಭಾನುವಾರ ಖಲಿಸ್ತಾನಿಗಳ ಗುಂಪು ಇಂಡಿಯನ್ ಕಾನ್ಸುಲೇಟ್ ಕಚೇರಿ ಮೇಲೆ ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗಿಸಿ ಅವಮಾನ ಮಾಡಿತ್ತು. ಇವರನ್ನು ಪತ್ತೆಹಚ್ಚಿ ಸೂಕ್ತ ಶಿಕ್ಷೆಯನ್ನು ಅಲ್ಲಿನ ಸರ್ಕಾರಗಳು ವಿಧಿಸಬೇಕು ಅಥವಾ ಭಾರತಕ್ಕೆ ಹಸ್ತಾಂತರಿಸಬೇಕು. ಇದು ರಾಜನೀತಿಯ ಮಟ್ಟದಲ್ಲಿ ಆಗಬೇಕಾದ ಉಪಕ್ರಮ. ಈ ಬಗ್ಗೆ ಉಭಯ ದೇಶಗಳ ಸರ್ಕಾರಗಳು ಕ್ರಮ ತೆಗೆದುಕೊಳ್ಳಬೇಕಿದೆ. ಆದರೆ ನೈಜ ಭಾರತೀಯರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಬೇಕೋ ಆ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂಬುದು ನಮ್ಮ ಹೆಮ್ಮೆಗೆ ಕಾರಣವಾಗಿದೆ.

ಪಂಜಾಬ್‌ನಲ್ಲಿ ಖಲಿಸ್ತಾನಿಗಳು ಈಗಾಗಲೇ ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪಾಕ್‌ ಪ್ರೇರಿತ ಡ್ರೋನ್‌ಗಳ ಮೂಲಕ ಪೂರೈಕೆಯಾಗುವ ಶಸ್ತ್ರಾಸ್ತ್ರಗಳು ಹಾಗೂ ಮಾದಕ ದ್ರವ್ಯಗಳ ಮೂಲಕ ಪಂಜಾಬ್‌ನ ಯುವಜನತೆಯನ್ನು ಹಾದಿ ತಪ್ಪಿಸಲು ಯತ್ನಿಸುತ್ತಿದ್ದಾರೆ. ಇವರು ಎಷ್ಟು ಬೆಳೆದಿದ್ದಾರೆ ಎಂದರೆ, ಇತ್ತೀಚೆಗೆ ಅಲ್ಲಿನ ತರಣ್ ತಾರಣ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ರಾಕೆಟ್ ಲಾಂಚರ್‌ನಿಂದ ದಾಳಿ ನಡೆಸಲಾಗಿತ್ತು. ಪಂಜಾಬ್ ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಮೇಲೆಯೂ ಇದೇ ರೀತಿಯ ದಾಳಿ ನಡೆಸಲಾಗಿತ್ತು. ಇವರಿಗೆ ಬೆಂಬಲವಾಗಿ ದೇಶದಾಚೆಯ ಕೆಲವು ಪ್ರತ್ಯೇಕತಾವಾದಿ ಸಿಖ್ಖರ ಗುಂಪುಗಳು, ಖಲಿಸ್ತಾನ್ ಪರ ಸಂಘಟನೆಗಳೂ ವರ್ತಿಸುತ್ತಿವೆ. ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮತ್ತು ಅಮೆರಿಕದಲ್ಲಿ ಇವು ಹೆಚ್ಚಾಗಿವೆ. ಇವರ ಟಾರ್ಗೆಟ್‌ ಎಂದರೆ ಅಲ್ಲಿನ ಭಾರತೀಯರು, ಅವರ ಶ್ರದ್ಧಾಕೇಂದ್ರಗಳಾದ ದೇವಾಲಯಗಳು ಹಾಗೂ ಕಾನ್ಸುಲೇಟ್‌ಗಳು. ಇತ್ತೀಚಿನ ದಿನಗಳಲ್ಲಿ ಅನೇಕ ದೇವಾಲಯಗಳನ್ನು ಹಾನಿಗೊಳಪಡಿಸಲಾಗಿದೆ. ಈ ಸಂಘಟನೆಗಳು ವಿನಾಕಾರಣ ಭಾರತೀಯರನ್ನು ಕೆಣಕುತ್ತಿವೆ.

ಇದಕ್ಕೆ ತಕ್ಕ ಉತ್ತರವನ್ನು ಭಾರತೀಯರು ನೀಡಿದ್ದಾರೆ. ಈವರೆಗೆ ಇದನ್ನೆಲ್ಲ ತಾಳ್ಮೆಯಿಂದ ಸಹಿಸಿಕೊಂಡಿದ್ದ ಅನಿವಾಸಿ ಭಾರತೀಯರು ಈಗ ತಿರುಗಿ ಬಿದ್ದಿದ್ದಾರೆ. ಅಮೆರಿಕ ಮಾತ್ರವಲ್ಲ, ವಿಶ್ವದ ಮೂಲೆ ಮೂಲೆಗಳಲ್ಲಿ ಅನಿವಾಸಿ ಭಾರತೀಯರು ಒಗ್ಗಟ್ಟಿನಿಂದ ಇದ್ದಾರೆ ಮತ್ತು ಸದಾ ಭಾರತದ ಪರ ದನಿ ಎತ್ತುತ್ತಿದ್ದಾರೆ. ವಿದೇಶಗಳಲ್ಲಿನ ಭಾರತ ವಿರೋಧಿ ಚಟುವಟಿಕೆ ವಿರುದ್ಧ ಭಾರತ ಸರ್ಕಾರ ಈಗಾಗಲೇ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪ್ರತೀಕಾರದ ಕ್ರಮವಾಗಿ ಭಾರತವು ದಿಲ್ಲಿಯಲ್ಲಿನ ಬ್ರಿಟನ್ ದೂತಾವಾಸ ಕಚೇರಿಯಲ್ಲಿನ ಹೆಚ್ಚುವರಿ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಖಲಿಸ್ತಾನಿಗಳಿಗೆ ಅನಿವಾಸಿ ಭಾರತೀಯರು ಇಷ್ಟೊಂದು ಸದರವಾಗಿರುವುದೇಕೆ? ಇವರಿಗೆ ಭದ್ರತೆಯಿಲ್ಲವೆಂದು ಖಲಿಸ್ತಾನಿಗಳು ಭಾವಿಸಿರಬಹುದು. ಆದರೆ ಅನಿವಾಸಿ ಭಾರತೀಯರ ನೆರವಿಗೆ ಭಾರತ ಸದಾ ಸನ್ನದ್ಧವಾಗಿದೆ. ಈ ಸಂದೇಶವನ್ನು ನಾವು ರವಾನಿಸಬೇಕು. ಅನಿವಾಸಿ ಭಾರತೀಯರೂ ತಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಕೇಂದ್ರೀಯ ತನಿಖಾ ದಳಗಳ ದುರುಪಯೋಗ ಆರೋಪ; ಪಾರದರ್ಶಕತೆ ಅಗತ್ಯ

ಇದರ ಜತೆಗೆ ಭಾರತದಲ್ಲಿ ಕೂಡ ಕೇಂದ್ರ ಸರ್ಕಾರ ಸಿಖ್ ಫಾರ್ ಜಸ್ಟಿಸ್, ವಾರಿಸ್ ಪಂಜಾಜ್ ದೇ ಇತ್ಯಾದಿ ಖಲಿಸ್ತಾನ್‌ ಪರ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಆರಂಭಿಸಿದೆ. ಪಂಜಾಬಿನಲ್ಲಿ ಪ್ರತ್ಯೇಕತೆಯ ಬೀಜ ಬಿತ್ತುತ್ತಿರುವ ಅಮೃತ್ ಪಾಲ್ ಸಿಂಗ್‌ನನ್ನು ಬೇಟೆಯಾಡಲು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆತನ ಹಲವಾರು ಬೆಂಬಲಿಗರನ್ನು ಬಂಧಿಸಿದ್ದಾರೆ. ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಎರಕವಾಗಿ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ ಹಾಕಬೇಕಿದೆ. ಇದನ್ನು ಪೋಷಿಸುತ್ತಿರುವ ಕೆನಡಾ ಹಾಗೂ ಬ್ರಿಟನ್‌ನ ಕೆಲವು ರಾಜಕಾರಣಿಗಳ ಬಣ್ಣವನ್ನೂ ಬಯಲು ಮಾಡಬೇಕಿದೆ.

Continue Reading

ಕ್ರೀಡೆ

Women’s Boxing: ಚಿನ್ನಕ್ಕೆ ಸಿಹಿ ಮುತ್ತು ನೀಡಿದ ಸ್ವೀಟಿ ಬೂರಾ

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಬಾಕ್ಸರ್​ಗಳಾದ ನೀತು ಗಂಗಾಸ್​ ಮತ್ತು ಸ್ವೀಟಿ ಬೂರಾ ಚಿನ್ನದ ಪದಕಕ್ಕೆ ಪಂಚ್​ ನೀಡಿದ್ದಾರೆ.

VISTARANEWS.COM


on

Edited by

Womens Boxing Sweetie Boora gave gold a sweet kiss
Koo

ನವದೆಹಲಿ: ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ(World Women’s Boxing) ಭಾರತದ ಬಾಕ್ಸರ್​ಗಳು ಪ್ರಾಬಲ್ಯ ಮರೆದಿದ್ದಾರೆ ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಭಾರತ 2 ಚಿನ್ನದ ಪದಕ ಗೆದ್ದಿದೆ. ಆರಂಭದಲ್ಲಿ ನೀತು ಗಂಗಾಸ್​ ಚಿನ್ನ ಗೆದ್ದು ಭಾರತದ ಖಾತೆ ತೆರೆದರೆ ಇದರ ಬೆನ್ನಲ್ಲೇ ಸ್ವೀಟಿ ಬೂರಾ(Saweety Boora) ಕೂಡ ಚಿನ್ನದ ಪದಕ ಗೆದ್ದು ಸಿಹಿ ಸುದ್ದಿ ನೀಡಿದರು.

ಶನಿವಾರ ಇಲ್ಲಿ ನಡೆದ 81 ಕೆಜಿ ವಿಭಾಗದ ಫೈನಲ್​ ಪಂದ್ಯದಲ್ಲಿ ಭಾರತದ ಸ್ವೀಟಿ ಬೂರಾ ಅವರು 4-3 ಅಂಕಗಳ ಅಂತರದಿಂದ ಚೀನಾದ ವಾಂಗ್​ ಲೀನಾ ಅವರನ್ನು ಪ್ರಬಲ ಪಂಚ್​ಗಳ ಮೂಲಕ ಹಿಮ್ಮೆಟ್ಟಿಸಿದರು. ರೋಚಕವಾಗಿ ಸಾಗಿದ ಈ ಪಂದ್ಯದಲ್ಲಿ ಆರಂಭಿಕ ಬೌಟ್​ನಲ್ಲಿ ಸ್ವೀಟಿ ಬೂರಾ ಹಿನ್ನಡೆ ಅನುಭವಿಸಿದರೂ ಆ ಬಳಿಕದ ಬೌಟ್​ನಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ಕೊಟ್ಟು ಅಂತಿಮವಾಗಿ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು.

ಇದಕ್ಕೂ ಮುನ್ನ ನಡೆದ ದಿನದ ಮತ್ತೊಂದು ಪಂದ್ಯದಲ್ಲಿ 48 ಕೆಜಿ ವಿಭಾಗದದ ಫೈನಲ್ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ್ದ ನೀತು ಗಂಗಾಸ್‌ ಚಿನ್ನ ಗೆದ್ದಿದ್ದರು. ಅವರು ಪ್ರಬಲ ಪಂಚ್​ಗಳ ಮೂಲಕ ಮಂಗೋಲಿಯಾದ ಲುತ್ಸಾಯಿಖಾನ್‌ ಅಲ್ಟಂಟ್‌ಸೆಟ್‌ಸೆಗ್‌ ವಿರುದ್ಧ 5-0 ಅಂತರದ ಅಧಿಕಾರಯುತ ಗೆಲುವು ದಾಖಲಿಸಿದ್ದರು.

ಇದನ್ನೂ ಓದಿ World Women’s Boxing​; ಚಿನ್ನದ ಪದಕಕ್ಕೆ ಪಂಚ್​​ ನೀಡಿದ ನೀತು ಗಂಗಾಸ್‌

ಇನ್ನೂ ಎರಡು ಚಿನ್ನ ನಿರೀಕ್ಷೆ

ಭಾನುವಾರ ನಡೆಯುವ 52 ಕೆಜಿ ವಿಭಾಗದಲ್ಲಿ ನಿಖತ್ ಮತ್ತು 75 ಕೆಜಿ ವಿಭಾಗದಲ್ಲಿ ಲವ್ಲಿನಾ ಬೊರ್ಗೊಹೈನ್‌ ಫೈನಲ್​ ಪಂದ್ಯ ಆಡಿಲಿದ್ದಾರೆ. ಉಭಯ ಬಾಕ್ಸರ್​ಗಳ ಮೇಲು ಪದಕ ನಿರೀಕ್ಷೆ ಇರಿಸಲಾಗಿದೆ. ಒಂದೊಮ್ಮೆ ಈ ಇಬ್ಬರು ಫೈನಲ್​ನಲ್ಲಿ ಗೆದ್ದರೆ ಭಾರತ ನಾಲ್ಕು ಚಿನ್ನದ ಪದಕ ಗೆದ್ದಂತಾಗುತ್ತದೆ.

Continue Reading

ಕರ್ನಾಟಕ

Reservation : ಮೀಸಲಾತಿ ಪರಿಷ್ಕರಣೆ ಮೂಲಕ ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ಬಿಜೆಪಿ ಯತ್ನ ಎಂದ ಜೆಡಿಎಸ್‌

ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಲಾಗಿದೆ ಎಂದು ಜೆಡಿಎಸ್‌ ಹೇಳಿದೆ.

VISTARANEWS.COM


on

Edited by

Devegowda Kumaraswamy
Koo

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿದ ಪರಿಷ್ಕೃತ ಮೀಸಲಾತಿ ನೀತಿಯನ್ನು ಜೆಡಿಎಸ್‌ ತೀವ್ರವಾಗಿ ಆಕ್ಷೇಪಿಸಿದೆ. ಇದು ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ನಡೆಸಿದ ಯತ್ನ ಮತ್ತು ಜಾತಿ ಜಗಳ ಸೃಷ್ಟಿಸುವ ಸಂಚು ಎಂದು ಅದು ಹೇಳಿದೆ. ಜೆಡಿಎಸ್‌ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿ ಹತ್ತು ಅಂಶಗಳನ್ನು ಹಂಚಿಕೊಂಡಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ ಎಂದು ಹೇಳಿದೆ.

ಜೆಡಿಎಸ್‌ನ ಆಕ್ರೋಶದ ಮಾತುಗಳು ಇಲ್ಲಿವೆ.

  • ರಾಜ್ಯ @BJP4Karnataka ಸರಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತದೆ, ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟದಲ್ಲಿ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ.
  • ಚುನಾವಣೆ ಎಂಬ ಚದುರಂಗದಾಟದಲ್ಲಿ @BJP4Karnataka ಬಿಸಿಲುಗುದುರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ; ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್‌ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ.
  • ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ @BJP4Karnataka ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲಪಕ್ಷದ ಕುಟಿಲತೆ.
  • ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕ ಗುಬ್ಬಕ್ಕನ ಕಥೆ ಹೇಳಿದ್ದ @BJP4Karnataka, ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ. ಕಳ್ಳ ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ.
  • ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸ ಚಾಳಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು.
  • ಮೀಸಲು ಕೊಡುವುದು ತಪ್ಪಲ್ಲ, ಆದರೆ, ತನ್ನ ಹಿಡೆನ್‌ ಅಜೆಂಡಾವನ್ನು ಮೀಸಲಿನೊಳಕ್ಕೂ ನುಸುಳಿಸಿದ @BJP4Karnataka ನರಿ ರಾಜಕಾರಣ ಆಘಾತಕಾರಿ.
  • ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ ಕರ್ನಾಟಕವನ್ನು ಮೀಸಲು ಮೂಲಕವೇ ವಿಭಜಿಸಿ ಮತ ಫಸಲು ತೆಗೆಯುವ ದುರಾಲೋಚನೆಯೊಂದಿಗೆ ಬಿಜೆಪಿ, ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ.
  • ಒಳ ಮೀಸಲು ಎನ್ನುವುದು ಒಡೆಯಲಾಗದ ಕಗ್ಗಂಟೇನಲ್ಲ. ಬಿಜೆಪಿ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲವಷ್ಟೇ. ಆದರೆ, ಚುನಾವಣೆ ಹೊತ್ತಿನಲ್ಲಿ ಜಾತಿ ಜಾತಿಗಳ ನಡುವೆ ವೈಮನಸ್ಸು ತಂದು ಉರಿಯುವ ಕಿಚ್ಚಿನಲ್ಲಿ ಚಳಿ ಕಾಯಿಸಿಕೊಳ್ಳಬೇಕು ಎನ್ನುವುದೇ ಬಿಜೆಪಿಯ ಅಸಲಿ ಆಟ.
  • ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ.
  • ಬಿಜೆಪಿ ಪಾಪದಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದುಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ. ಉರಿಯುತ್ತಿರುವ ಜನರ ಒಡಲು ತಣ್ಣಗಾಗುವುದಿಲ್ಲ. ನೆನಪಿರಲಿ.

ಇದನ್ನೂ ಓದಿ : Panchamasali Reservation : 2ಡಿ ಮೀಸಲಾತಿಗೆ ಪಂಚಮಸಾಲಿ ಒಪ್ಪಿಗೆ, ಎರಡು ವರ್ಷಗಳ ಹೋರಾಟಕ್ಕೆ ತೆರೆ

Continue Reading

ಕರ್ನಾಟಕ

Modi security lapse : ಮೋದಿ ರೋಡ್‌ ಶೋ ವೇಳೆ ಭದ್ರತಾಲೋಪ; ಬ್ಯಾರಿಕೇಡ್‌ ಹಾರಿ ನುಗ್ಗಿದ ಯುವಕ, ಪೊಲೀಸರಿಂದ ತಡೆ

ದಾವಣಗೆರೆಯಲ್ಲಿ ನಡೆದ ನರೇಂದ್ರ ಮೋದಿ ಅವರ ಆಂತರಿಕ ರೋಡ್‌ ಶೋ ಸಂದರ್ಭ ಯುವಕನೊಬ್ಬ ಬ್ಯಾರಿಕೇಡ್‌ ಮುರಿದು ಮೋದಿ ಅವರ ವಾಹನದತ್ತ ಧಾವಿಸಿದ ಹಿನ್ನೆಲೆಯಲ್ಲಿ (Modi security lapse) ಒಮ್ಮೆಗೇ ಆತಂಕ ಸೃಷ್ಟಿಯಾಗಿತ್ತು.

VISTARANEWS.COM


on

Edited by

security lapse
ಮೋದಿ ಅವರ ರೋಡ್‌ ಶೋ ವೇಳೆ ಬ್ಯಾರಿಕೇಡ್‌ ಹಾರಿ ಧಾವಿಸಿದ ಯುವಕನನ್ನು ಪೊಲೀಸರು ಅಡ್ಡಗಟ್ಟಿ ಹಿಡಿದರು
Koo

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ (Modi in Karnataka) ಭದ್ರತೆ ಎಷ್ಟೇ ಬಿಗಿಯಾಗಿದ್ದರೂ ಕೆಲವೊಂದು ಸಣ್ಣಪುಟ್ಟ ಭದ್ರತಾ ಉಲ್ಲಂಘನೆ (Modi security lapse) ಘಟನೆಗಳು ನಡೆಯುತ್ತಲೇ ಇರುತ್ತವೆ. ಕಳೆದ ಜನವರಿಯಲ್ಲಿ ಮೋದಿ ಹುಬ್ಬಳ್ಳಿಗೆ ಬಂದಿದ್ದಾಗ ಒಬ್ಬ ಪುಟ್ಟ ಬಾಲಕ ಬ್ಯಾರಿಕೇಡ್‌ ದಾಟಿ ಬಂದು ಮೋದಿ ಅವರಿಗೆ ಹೂವು ನೀಡಿದ್ದ. ಬಳಿಕ ಆತನ ಹಿನ್ನೆಲೆ, ತಂದೆ -ತಾಯಿ ವಿವರಗಳನ್ನೆಲ್ಲ ಪರಿಶೀಲಿಸಿ ಯಾವುದೇ ಅಪಾಯವಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದರು ಪೊಲೀಸರು.

ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿಯ ಬೃಹತ್‌ ಸಮಾವೇಶದ ಸಂದರ್ಭದಲ್ಲೂ ಇದೇ ಮಾದರಿಯ ಅಚಾತುರ್ಯವೊಂದು ನಡೆದಿದೆ. ಪ್ರಧಾನಿ ಮೋದಿ ಅವರು ಬೃಹತ್‌ ಪೆಂಡಾಲ್‌ನ ಸುತ್ತ ವಾಹನದಲ್ಲಿ ರೋಡ್‌ ಶೋ ನಡೆಸುತ್ತಿದ್ದರೆ ಯುವಕನೊಬ್ಬ ಬ್ಯಾರಿಕೇರ್‌ ಹಾರಿ ಮೋದಿ ಅವರಿದ್ದ ವಾಹನದತ್ತ ದೌಡಾಯಿಸಿದ್ದ. ಕೂಡಲೇ ಎಚ್ಚೆತ್ತ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯಾದ್ಯಂತ ನಡೆದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ಆಯೋಜನೆಯಾಗಿತ್ತು. ಅಲ್ಲಿ ಸುಮಾರು 2 ಲಕ್ಷ ಜನರಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗಿತ್ತು. ಅವರ ಮಧ್ಯೆ ಪ್ರಧಾನಿಯವರು ವಾಹನದ ಮೂಲಕ ರೋಡ್‌ ಶೋ ನಡೆಸಿದರು.

ಹೊರಗಿನ ಆವರಣದಲ್ಲೂ ಲಕ್ಷಾಂತರ ಜನರು ಸೇರಿದ್ದು, ಅವರಿಗೂ ಕೈಬೀಸುವುದಕ್ಕಾಗಿ ಮೋದಿ ಅವರು ಹೊರಾವರಣದಲ್ಲೂ ಒಂದು ಸುತ್ತು ಹೊಡೆದರು. ಆಗ ವೇದಿಕೆಯ ಹಿಂಭಾಗದಲ್ಲಿ ಸಾಕಷ್ಟು ಜನರು ಸೇರಿದ್ದರು. ಅವರು ಮುಂದೆ ಬರಲಾಗದಂತೆ ಬ್ಯಾರಿಕೇಡ್‌ ಅಳವಡಿಸಲಾಯಿತು. ಒಂದು ಹಂತದಲ್ಲಿ ಜನರ ಒತ್ತಡದಿಂದ ಬ್ಯಾರಿಕೇಡ್‌ ಮುರಿದುಬಿತ್ತು. ಆಗ ಒಬ್ಬ ಯುವಕ ಒಳಗೆ ಓಡಿಬಂದಿದ್ದ. ಅಷ್ಟು ಹೊತ್ತಿಗೆ ಸರಿಯಾಗಿ ಮೋದಿ ಅವರ ವಾಹನವೂ ಅದೇ ಜಾಗಕ್ಕೆ ಬಂದಿತ್ತು. ಇದರಿಂದ ಸ್ವಲ್ಪ ಹೊತ್ತು ಆತಂಕ ಸೃಷ್ಟಿಯಾಯಿತು. ಕೂಡಲೇ ಅಲ್ಲಿದ್ದ ಪೊಲೀಸರು ಯುವಕನನ್ನು ಹಿಡಿದುಕೊಂಡರು. ಬಳಿಕ ಆತನ ಹಿನ್ನೆಲೆಯನ್ನು ವಿಚಾರಿಸಿ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಭದ್ರತಾ ಲೋಪ ಆಗಿಲ್ಲ ಎಂದ ದಾವಣಗೆರೆ ಎಸ್ಪಿ

ಈ ಘಟನೆಯ ಬಗ್ಗೆ ದಾವಣಗೆರೆಯ ಎಸ್ಪಿ ರಿಷ್ಯಂತ್‌ ಅವರು ಪ್ರತಿಕ್ರಿಯಿಸಿ ಈ ಘಟನೆಯನ್ನು ಭದ್ರತಾ ಲೋಪ ಎನ್ನುವ ಹಾಗಿಲ್ಲ ಎಂದಿದ್ದಾರೆ. ಹಾಗೇನಾದರು ಇದ್ದಿದ್ದರೆ ಎಸ್‌ಪಿಜಿಯವರು ನಮ್ಮ ಗಮನಕ್ಕೆ ತರುತ್ತಿದ್ದರು ಎಂದು ಹೇಳಿದ್ದಾರೆ.

ದೊಡ್ಡ ಗುಂಪು ಬ್ಯಾರಿಕೇಡ್‌ ಮುರಿದ ಪರಿಣಾಮ ವ್ಯಕ್ತಿ ಮೋದಿಯತ್ತ ನುಗ್ಗಿದ್ದ. ಇದನ್ನು ಭದ್ರತಾ ಲೋಪ ಎನ್ನುವ ಹಾಗಿಲ್ಲ. ವ್ಯಕ್ತಿಯನ್ನು ಅಲ್ಲಿಂದ ಹೊರಗೆ ಹಾಕಲಾಗಿದೆ. ಅವನನ್ನು ಯಾವುದೇ ರೀತಿ ವಿಚಾರಣೆ ಮಾಡಿಲ್ಲ ಎಂದು ರಿಷ್ಯಂತ್‌ ಹೇಳಿದರು.

ಇದನ್ನೂ ಓದಿ : Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್‌ ಶೋ ನಡೆಸಿದ್ದೇಕೆ?

Continue Reading
Advertisement
Uttara Kannada News
ಉತ್ತರ ಕನ್ನಡ2 hours ago

Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ

Modi in Karnataka
ಕರ್ನಾಟಕ2 hours ago

Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ

rahul-gandhi-will-act-like-a-martyr-with-an-eye-on-karnataka-elections-bjp
ದೇಶ2 hours ago

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸ್ತಾ ಇರೋ ರಾಹುಲ್ ಗಾಂಧಿ: ಬಿಜೆಪಿ

Your rules don't apply to the Gandhi family; Spark of Congress MP!
ದೇಶ3 hours ago

Rahul Gandhi Disqualified : ನಿಮ್ಮ ರೂಲ್ಸ್​ ಗಾಂಧಿ ಫ್ಯಾಮಿಲಿಗೆ ಅನ್ವಯವಾಗಲ್ಲ; ಕಾಂಗ್ರೆಸ್​ ಸಂಸದನ ಕಿಡಿ!

Zaheer Khan: Team India is still sailing in an old boat; Why did Zaheer Khan say this?
ಕ್ರಿಕೆಟ್3 hours ago

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

Amit Shah to visit karnataka on march 26 and Participate in various programmes
ಕರ್ನಾಟಕ4 hours ago

Amit Shah Visit: ಭಾನುವಾರ ಅಮಿತ್‌ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

heavy rainfall likely to occur at isolated places in the karnataka on March 26 and 27
ಕರ್ನಾಟಕ4 hours ago

Karnataka Rain: ಮಾ.26, 27 ರಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

Tricolor flag flown in America; Patriots strike back at Khalistanis
ದೇಶ4 hours ago

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

WPL 2023: Nita Ambani dances with team players in Khasi in finals; The video is viral
ಕ್ರಿಕೆಟ್4 hours ago

WPL 2023: ಫೈನಲ್​ಗೆ ಲಗ್ಗೆಯಿಟ್ಟ ಖಷಿಯಲ್ಲಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಕುಪ್ಪಳಿಸಿದ ನೀತಾ ಅಂಬಾನಿ; ವಿಡಿಯೊ ವೈರಲ್

Final race of Moto GP today in Portugal
ಕ್ರೀಡೆ4 hours ago

Moto GP : ಫೋರ್ಚುಗಲ್​ನಲ್ಲಿ ಭಾನುವಾರ ಮೋಟೊ ಜಿಪಿ ಮೊದಲ ಸುತ್ತಿನ ಫೈನಲ್​ ರೇಸ್​

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ4 days ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ5 days ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ5 days ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ6 days ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ6 days ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ6 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ6 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ6 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ1 week ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ1 week ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!