NASA Chief Technologist | ಇಂಡಿಯನ್- ಅಮೆರಿಕನ್ ಎ ಸಿ ಚರಾನಿಯಾ ಈಗ ನಾಸಾದ ಚೀಫ್ ಟೆಕ್ನಾಲಜಿಸ್ಟ್ - Vistara News

ಪ್ರಮುಖ ಸುದ್ದಿ

NASA Chief Technologist | ಇಂಡಿಯನ್- ಅಮೆರಿಕನ್ ಎ ಸಿ ಚರಾನಿಯಾ ಈಗ ನಾಸಾದ ಚೀಫ್ ಟೆಕ್ನಾಲಜಿಸ್ಟ್

ನಾಸಾದ ಮುಖ್ಯ ಟೆಕ್ನಾಲಜಿಸ್ಟ್ (NASA Chief Technologist) ಆಗಿ ನೇಮಕವಾಗಿರುವ ಭಾರತೀಯ ಮೂಲದ ಎ ಸಿ ಚರಾನಿಯಾ ಅವರು ಏರೋಸ್ಪೇಸ್ ತಜ್ಞರಾಗಿ ಗುರುತಿಸಿಕೊಂಡಿದ್ದಾರೆ.

VISTARANEWS.COM


on

A C Charania @ NASA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಏರೋಸ್ಪೇಸ್ ತಜ್ಞರಾಗಿರುವ ಇಂಡಿಯನ್-ಅಮೆರಿಕನ್ ಎ ಸಿ ಚರಾನಿಯಾ (AC Charania) ಅವರು ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್(ನಾಸಾ) ಚೀಫ್ ಟೆಕ್ನಾಲಜಿಸ್ಟ್ (NASA Chief Technologist) ಆಗಿ ನೇಮಕಗೊಂಡಿದ್ದಾರೆ. ನಾಸಾದ ಟೆಕ್ನಾಲಜಿ, ಪಾಲಿಸಿ ಮತ್ತು ಸ್ಟ್ರಾಟರ್ಜಿ ವ್ಯಾಪ್ತಿಯಲ್ಲಿ ಚರಾನಿಯಾ ಅವರು ಕೆಲಸ ಮಾಡಲಿದ್ದಾರೆಂದು ನಾಸಾ ತನ್ನ ಹೇಳಿಕೆಯಲ್ಲಿತಿಳಿಸಿದೆ.

ಎಸಿ ಚರಾನಿಯಾ ಅವರು ಆರು ಮಿಷನ್ ನಿರ್ದೇಶನಾಲಯಗಳಾದ್ಯಂತ ಮಿಷನ್ ಅಗತ್ಯತೆಗಳೊಂದಿಗೆ ನಾಸಾದ ಏಜೆನ್ಸಿಯಾದ್ಯಂತ ತಂತ್ರಜ್ಞಾನ ಹೂಡಿಕೆಗಳನ್ನು ಒಟ್ಟುಗೂಡಿಸಲಿದ್ದಾರೆ. ಇತರ ಫೆಡರಲ್ ಏಜೆನ್ಸಿಗಳು, ಖಾಸಗಿ ವಲಯ ಮತ್ತು ಬಾಹ್ಯ ಮಧ್ಯಸ್ಥಗಾರರೊಂದಿಗೆ ತಂತ್ರಜ್ಞಾನ ಸಹಯೋಗದ ಮೇಲ್ವಿಚಾರಣೆ ಹೊಣೆಯನ್ನು ನಿರ್ವಹಿಸುತ್ತಾರೆ ಎಂದು ನಾಸಾ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ಚರಾನಿಯಾ ಅವರು, ನಾಸಾ ಆಡಳಿತಾಧಿಕಾರಿ ಬಿಲ್ ನೆಲ್ಸನ್ ಅವರಿಗೆ ಪ್ರಿನ್ಸಿಪಲ್ ಅಡ್ವೈಸರ್ ಆಗಿಯೂ ಕೆಲಸ ಮಾಡಲಿದ್ದಾರೆ. ನಾಸಾ ಸೇರ್ಪಡೆಯಾಗುವುದಕ್ಕಿಂತ ಮುಂಚೆ ಅವರು, ರಿಲಿಯಬಲ್ ರೊಬೋಟಿಕ್ಸ್‌ ಕಂಪನಿಯಲ್ಲಿ ಪ್ರಾಡಕ್ಟ್ ಸ್ಟ್ರಾಟರ್ಜಿಯ ವಿಭಾಗದ ಉಪಾಧ್ಯಕ್ಷರಾಗಿದ್ದರು. ಇದಕ್ಕೂ ಮೊದಲು ಅವರು ಬ್ಲೂ ಓರಿಜಿನ್ ಸೇರಿದಂತೆ ಅನೇಕ ಕಂಪನಿಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ | NASA | ಚಂದ್ರನ ಮೇಲೂ ಹಕ್ಕು ಸಾಧಿಸಲು ಹವಣಿಸುತ್ತಿದೆ ಚೀನಾ: ನಾಸಾ ಮುಖ್ಯಸ್ಥ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

Xiaomi Car: ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ.

VISTARANEWS.COM


on

Xiaomi Car in China
Koo

ಬೀಜಿಂಗ್: ಕಡಿಮೆ ಬೆಲೆಯಲ್ಲಿ ಸ್ಮಾರ್ಟ್​ಫೋನ್​​​ಗಳನ್ನು ಮಾರಾಟ ಮಾಡುವ ಮೂಲಕ ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದ ಶಿಯೋಮಿ (Xiaomi Car) ತನ್ನ ಮೊಟ್ಟ ಮೊದಲ ಎಲೆಕ್ಟ್ರಿಕ್​ ಕಾರನ್ನು (EV Car) ಮಾರುಕಟ್ಟೆಗೆ ಇಳಿಸಿದೆ. ಇದು ಮೊಬೈಲ್​ನಂತೆಯೇ (Smart Phoni) ಹಲವಾರು ಫ್ಯಾನ್ಸಿ ಫೀಚರ್​ಗಳನ್ನು ಹೊಂದಿರುವ ಕಾರು ಎಂದು ಹೇಳಲಾಗಿದೆ. ಆದರೆ, ಈ ಕಾರು ಸದ್ಯ ಬಿಡುಗಡೆಗೊಂಡಿರುವುದು ಚೀನಾದಲ್ಲಿ. ಭಾರತಕ್ಕೆ ಬರುವುದೇ ಎಂದು ಗೊತ್ತಿಲ್ಲ.

ಚೀನಾದ ಗ್ರಾಹಕ ಟೆಕ್ ದೈತ್ಯ ಶಿಯೋಮಿ ಗುರುವಾರ ಬೀಜಿಂಗ್ ನಲ್ಲಿ ಈ ಕಾರನ್ನು ಬಿಡುಗಡೆ ಮಾಡಿದೆ. ಅಲ್ಲದೆ ವಿಶ್ವದ ಅತಿದೊಡ್ಡ ಕಾರು ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆಗೆ ಇಳಿದಿದೆ. ಚೀನಾದ ಇವಿ ವಲಯವು ಇತ್ತೀಚಿನ ವರ್ಷಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಆ ಕ್ಷೇತ್ರಕ್ಕೆ ಎಂಟ್ರಿ ಪಡೆದಿದೆ. ಶಿಯೋಮಿ ತನ್ನ ಕೈಗೆಟುಕುವ ಸ್ಮಾರ್ಟ್​ಫೋನ್​ಗಳು ಮತ್ತು ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾಗಿದೆ. ಇದೀಗ MI SU 7 ಇವಿಯೊಂದಿಗೆ ತನ್ನ ಖ್ಯಾತಿಯನ್ನು ಹೆಚ್ಚಿಸಲು ಮುಂದಾಗಿದೆ. ಚೀನಾದ ಕಾರು ಮಾರುಕಟ್ಟೆಯ ದೈತ್ಯ ಬಿವೈಡಿ ಮತ್ತು ಎಲೋನ್ ಮಸ್ಕ್ ಅವರ ಟೆಸ್ಲಾಗೆ ಸವಾಲು ಹಾಕುವುದು ಪಕ್ಕಾ.

ಮೂಲ ಎಸ್ ಯು 7 ಮಾದರಿಯ ಬೆಲೆ 215,900 ಯುವಾನ್ (24,90,198 ರೂಪಾಯಿ) ಎಂದು ಲೀ ಜುನ್ ಗುರುವಾರ ಸಂಜೆ ಬೀಜಿಂಗ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸ್ಪೋರ್ಟಿ ಎಸ್ ಯು 7 ಒಂಬತ್ತು ಬಣ್ಣಗಳಲ್ಲಿ ಲಭ್ಯವಿರುತ್ತದೆ ಮತ್ತು “ಸೌಂಡ್ ಸಿಮ್ಯುಲೇಶನ್” ಅನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

ಇದು ಕರೋಕೆ ಉಪಕರಣಗಳು ಮತ್ತು ಮಿನಿ-ಫ್ರಿಜ್ ನಂತಹ ಸಾಕಷ್ಟು ಇತರ ಆಕರ್ಷಕ ಫೀಚರ್​ಗಳನ್ನು ಹೊಂದಿದೆ. 500,000 ಯುವಾನ್ ಗಿಂತ ಕಡಿಮೆ ಬೆಲೆಯ “ಅತ್ಯುತ್ತಮವಾಗಿ ಕಾಣುವ, ಅತ್ಯುತ್ತಮವಾಗಿ ಚಲಿಸುವ ಮತ್ತು ಸ್ಮಾರ್ಟ್ ಕಾರು” ಎಂದು ಶಿಯೋಮಿ ಹೇಳಿದೆ. ಈ ಕಾರಿನ ಬೆಲೆಯು ಉಳಿದ ಕಾರಿಗಿಂತ ಹೆಚ್ಚು ಸ್ಪರ್ಧಾತ್ಮಕವಾಗಿದೆ.

ಟೆಸ್ಲಾಗೆ ಹೋಲಿಕೆ

ಲೀ ಜುನ್ ಗುರುವಾರದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಂಪನಿಯ ಚೊಚ್ಚಲ ವಾಹನವನ್ನು ಟೆಸ್ಲಾದ ಮಾಡೆಲ್ 3 ಗೆ ಹೋಲಿಸಬಹುದು ಮತ್ತು ಕೆಲವು ಅಂಶಗಳಲ್ಲಿ ಅಮೇರಿಕನ್ ತಯಾರಕರ ಸೆಡಾನ್ ಅನ್ನು ಮೀರಿಸಿದೆ ಎಂದು ಹೇಳಿಕೊಂಡಿದ್ದಾರೆ.

ಶಿಯೋಮಿ ವಿಶ್ವದ ಮೂರನೇ ಅತಿದೊಡ್ಡ ಸ್ಮಾರ್ಟ್​ಫೋನ್ ತಯಾರಕ ಕಂಪನಿಯಾಗಿದ್ದು, ಆ ವಲಯದಲ್ಲಿ ಅದರ ಅನುಭವವು ಅದರ ಇವಿ ಕಾರ್ಯತಂತ್ರವನ್ನು ರೂಪಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಕಟುವಾದ ಮಾರುಕಟ್ಟೆ

“ಪ್ರೀಮಿಯಂ ವಿಭಾಗವನ್ನು ಪ್ರವೇಶಿಸುವ ಮೂಲಕ, ಶಿಯೋಮಿ ಟೆಸ್ಲಾ ಮತ್ತು ನಿಯೋದಂತಹ ಸ್ಥಾಪಿತ ಬ್ರಾಂಡ್​ಗ ಳಿಗೆ ಪೈಪೋಟಿ ನೀಡಬಹುದು” ಎಂದು ರೈಸ್ಟಾಡ್ ಎನರ್ಜಿಯ ಹಿರಿಯ ಎಲೆಕ್ಟ್ರಿಕ್ ವಾಹನ ವಿಶ್ಲೇಷಕ ಅಭಿಷೇಕ್ ಮುರಳಿ ಎಎಫ್ಪಿಗೆ ತಿಳಿಸಿದರು.

ಚೀನಾ ವಿಶ್ವದಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ಹೊಂದಿರುವ ದೇಶ. ಹೀಗಾಗಿ 2035 ರ ವೇಳೆಗೆ ಹೆಚ್ಚಿನ ದೇಶೀಯ ಕಾರು ಮಾರಾಟವನ್ನು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಮಾದರಿಗಳಿಂದ ತಯಾರಿಸಲು ಯೋಜಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ವಿಶ್ವದ ಅಗ್ರ ಮಾರಾಟಗಾರ ಬಿವೈಡಿ ದಾಖಲೆಯ ವಾರ್ಷಿಕ ಲಾಭವನ್ನು ದಾಖಲಿಸಿದ ಕೆಲವೇ ದಿನಗಳ ನಂತರ ಎಸ್ ಯು 7 ಬಿಡುಗಡೆಯಾಗಿದೆ, ಏಕೆಂದರೆ ಇದು ಆಗ್ನೇಯ ಏಷ್ಯಾದ ದೇಶಗಳಿಗೆ ಮತ್ತು ಲ್ಯಾಟಿನ್ ಅಮೆರಿಕ ಮತ್ತು ಯುರೋಪ್ ಗೆ ವಿಸ್ತರಣೆಗೊಳ್ಳಬಹುದು.

Continue Reading

Lok Sabha Election 2024

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Lok Sabha Election 2024: 40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 Prajwal Revanna gets Rs 40 crore worth asset
Koo

ಹಾಸನ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಒಬ್ಬೊಬ್ಬರೇ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಗುರುವಾರ (ಮಾ. 28) ಹಾಸನ ಲೋಕಸಭಾ ಕ್ಷೇತ್ರಕ್ಕೆ (Hassan Lok Sabha constituency) ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ (Prajwal Revanna) ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ 40.94 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ.

40 ಕೋಟಿ 94 ಲಕ್ಷ ರೂ. ಮೌಲ್ಯರ ಚರ – ಸ್ಥಿರಾಸ್ಥಿಯನ್ನು ಪ್ರಜ್ವಲ್‌ ರೇವಣ್ಣ ಹೊಂದಿದ್ದಾರೆ. ಇದರಲ್ಲಿ 5.44 ಕೋಟಿ ರೂಪಾಯಿ ಚರ ಹಾಗೂ 35.40 ಕೋಟಿ ರೂಪಾಯಿ ಸ್ಥಿರ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂಪಾಯಿ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ರೂ. ನಗದನ್ನು ಹೊಂದಿರುವ ಪ್ರಜ್ವಲ್‌ ರೇವಣ್ಣ, ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ರೂಪಾಯಿ ಆದಾಯವನ್ನು ಗಳಿಕೆ ಮಾಡಿದ್ದಾರೆ.

ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ

31 ಹಸು, ನಾಲ್ಕು ಎತ್ತು, ಒಂದು ಟ್ರ್ಯಾಕ್ಟರ್ ಅನ್ನು ಪ್ರಜ್ವಲ್ ರೇವಣ್ಣ ಹೊಂದಿದ್ದಾರೆ. ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡಗಳನ್ನು ಸಹ ಇವರು ಹೊಂದಿದ್ದಾರೆ. ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವ ಎಚ್‌.ಡಿ. ರೇವಣ್ಣ ಪುತ್ರ ಕೋಟಿಗಳ ಒಡೆಯರಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಕುಟುಂಬದವರಿಂದ 4.48 ಕೋಟಿ ರೂ. ಸಾಲ

ಅತ್ತೆ ಅನುಸೂಯ ಅವರಿಂದ 22 ಲಕ್ಷ ರೂ., ಅತ್ತೆ ಶೈಲಜಾರಿಂದ 10 ಲಕ್ಷ ರೂಪಾಯಿ ಹಾಗೂ ಅಜ್ಜಿ ಚನ್ನಮ್ಮರಿಂದ 23 ಲಕ್ಷ ರೂಪಾಯಿ, ತಂದೆ ರೇವಣ್ಣ ಅವರಿಂದ 86 ಲಕ್ಷ ರೂಪಾಯಿ, ಸಹೋದರ ಡಾ. ಸೂರಜ್ ಅವರಿಂದ 1 ಕೋಟಿ ರೂಪಾಯಿ ಸಾಲವನ್ನು ಪ್ರಜ್ವಲ್‌ ರೇವಣ್ಣ ಪಡೆದಿದ್ದಾರೆ. ಒಟ್ಟು 4.48 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾಗಿ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.

ಸರ್ಕಾರಕ್ಕೆ 3.04 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೆಜಿಗಟ್ಟಲೆ ಚಿನ್ನ ಬೆಳ್ಳಿ ಹೊಂದಿರುವ ಪ್ರಜ್ವಲ್

ಪ್ರಜ್ವಲ್‌ ರೇವಣ್ಣ ಅವರ ಬಳಿ ಒಟ್ಟು 67 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನವಿದೆ. ಅಲ್ಲದೆ, 17.48 ಲಕ್ಷ ರೂಪಾಯಿ ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರೂಪಾಯಿ ಮೌಲ್ಯದ ವಜ್ರದ ಆಭರಣವನ್ನು ಸಹ ಹೊಂದಿದ್ದಾರೆ.

Continue Reading

ಬೆಂಗಳೂರು

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rameswaram cafe: ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ. ಈಗ ಬಾಂಬ್‌ ಬ್ಲಾಸ್ಟ್‌ನ ಪ್ರಮುಖ ಆರೋಪಿ ಮುಜಾವೀರ್ ಹುಸೇನ್‌ಗೆ ಸಹಕಾರ ನೀಡಿದ ಪ್ರಮುಖ ಸಂಚುಕೋರನಾಗಿರುವ ಮುಜಾಮಿಲ್ ಶರೀಫ್‌ನನ್ನು ಬಂಧಿಸಲಾಗಿದೆ. ಈತ ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Rameswaram cafe bomb blast case
Koo

ಬೆಂಗಳೂರು: ವೈಟ್‌ಫೀಲ್ಡ್‌ ಬಳಿಕ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Rameswaram cafe blast case) ಸಂಬಂಧಪಟ್ಟಂತೆ ಎನ್ಐಎ ಅಧಿಕಾರಿಗಳು (NIA Officers) ಮುಖ್ಯ ಸಂಚುಕೋರನೊಬ್ಬನನ್ನು ಬಂಧಿಸಿದ್ದಾರೆ. ಬಾಂಬರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧನ ಮಾಡಲಾಗಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಮುಜಾಮಿಲ್ ಶರೀಫ್ ಬಂಧಿತ ಉಗ್ರ ಎನ್ನಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಮುಜಾವೀರ್ ಹುಸೇನ್ ಜತೆ ಮುಜಾಮಿಲ್ ಶರೀಫ್ ನಿರಂತರ ಸಂಪರ್ಕದಲ್ಲಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ದೇಶಾದ್ಯಂತ 18 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಕರ್ನಾಟಕದಲ್ಲಿಯೇ 12 ಕಡೆ ದಾಳಿ ನಡೆಸಲಾಗಿತ್ತು. ಈ ವೇಳೆ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿದ್ದಲ್ಲದೆ, ಕೆಲವು ಸುಳಿವುಗಳು ಸಹ ಸಿಕ್ಕಿದೆ ಎನ್ನಲಾಗಿದೆ. ಮುಜಾವೀರ್ ಹುಸೇನ್‌ಗೆ ಮುಜಾಮಿಲ್ ಶರೀಫ್ ಸಹಕಾರ ನೀಡಿದ್ದ ಅಲ್ಲದೆ, ಅಬ್ದುಲ್ ಮತೀನ್ ತಾಹಾ ಜತೆ ಕೂಡ ಸಂಪರ್ಕವನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದೆ.

ಗುರುವಾರ ದಾಳಿ ನಡೆಸಿದ್ದ NIA

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್ ಸಂಬಂಧ ಬುಧವಾರ ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಹದಿನೆಂಟು ಕಡೆ ಎನ್‌ಐಎ ತಂಡ ದಾಳಿ ನಡೆಸಿದೆ. ದಾಳಿ ವೇಲೆ ಹಲವು ವಸ್ತುಗಳು ಹಾಗೂ ಭಾರಿ ಪ್ರಮಾಣದ ಹಣ ಸಹ ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿತ್ತು. ಡಿಜಿಟಲ್ ಡಿವೈಸ್‌ಗಳನ್ನೂ ಸೀಜ್‌ ಮಾಡಲಾಗಿತ್ತು. ಈಗ ಓರ್ವ ಶಂಕಿತನನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಾಂಬರ್‌ಗೆ ಸಹಾಯ ಮಾಡಿದ್ದ?

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಮಾಡಿದವನಿಗೆ ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದ. ಆತನ ಓಡಾಟಕ್ಕೆ ಹಾಗೂ ಪರಾರಿಯಾಗಲು ಸಹಾಯ ಮಾಡಿದ್ದ ಎಂಬ ಅಂಶ ತನಿಖೆ ವೇಳೆ ಗೊತ್ತಾಗಿದೆ. ಮುಜಾವೀರ್ ಶಜೀಬ್ ಹುಸೇನ್, ಅಬ್ದುಲ್ ಮತೀನ್ ತಾಹಗೆ ಸಹ ಸಹಾಯ ಮಾಡಿದ್ದ ಎಂದು ತಿಳಿದುಬಂದಿದೆ.

ದೊಡ್ಡ ಮಟ್ಟದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ದಾಳಿ ವೇಳೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ, ರಾಮೇಶ್ವರಂ ಕೆಫೆಗೆ ಪ್ರಮುಖ ಆರೋಪಿ ಮುಜಾವೀರ್ ಶಜೀಬ್ ಹುಸೇನ್ ಬಾಂಬ್ ಅನ್ನು ತಂದಿದ್ದ. ಈತನಿಗೆ ಅಬ್ದುಲ್ ಮತೀನ್ ತಾಹ, ಮುಜಾಮಿಲ್ ಶರೀಫ್ ಸಹಾಯ ಮಾಡಿದ್ದರು ಎಂಬುದು ಎನ್‌ಐಎಗೆ ತನಿಖೆ ವೇಳೆ ಗೊತ್ತಾಗಿದೆ. ಈ ಮಾಹಿತಿ ಸಿಕ್ಕ ಕೂಡಲೇ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ. ಈಗ ಉಳಿದ ಇಬ್ಬರಿಗಾಗಿ ತೀವ್ರ ಹುಡುಕಾಟವನ್ನು ನಡೆಸಲಾಗಿದೆ.

ಗುರಪ್ಪನಪಾಳ್ಯದಲ್ಲಿ ನೆಲಸಿದ್ದ ಮುಜಾವೀರ್ ಹುಸೇನ್!

ಸುದ್ಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ ಉಗ್ರ ಮುಜಾವೀರ್ ಹುಸೇನ್ ನೆಲಸಿದ್ದ. ಎನ್‌ಐಎ ದಾಳಿ ನಡೆಸಿದಾಗ 10ಕ್ಕೂ ಹೆಚ್ಚು ಜೀವಂತ ಗುಂಡುಗಳು, ಒಂದು ಗನ್, ಡಿಟೋನೇಟರ್ ಹಾಗೂ ಕಚ್ಚಾ ಬಾಂಬ್ ತಯಾರಿಕೆಗೆ ಬೇಕಾದ ವಸ್ತುಗಳನ್ನು ಸೀಜ್‌ ಮಾಡಲಾಗಿತ್ತು. 2020ರಂದು ಎನ್‌ಐಎ ದಾಳಿ ನಡೆಸಿತ್ತು. ಅಂದಿನಿಂದ ಮುಜಾವಿರ್ ಹುಸೇನ್ ತಲೆಮರೆಸಿಕೊಂಡಿದ್ದ. ಸದ್ಯ ಈತನಿಗೆ ಸಹಾಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್‌ನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಸ್ಫೋಟ; ಮತ್ತಿಬ್ಬರನ್ನು ಬಂಧಿಸಿದ ಎನ್‌ಐಎ!

ಅಬ್ದುಲ್ ಮತೀನ್ ಜತೆಗೂ ಮುಜಾಮಿಲ್ ಶರೀಫ್ ಸಂಪರ್ಕ

ಮುಜಾಮಿಲ್ ಶರೀಫ್‌ ಇದ್ದ ನಿವಾಸದ ಮೇಲೆ ದಾಳಿ ನಡೆಸಿ ಡಿಜಿಟಲ್ ಡಿವೈಸ್,‌ ನಗದನ್ನು ವಶಕ್ಕೆ ಪಡೆಯಲಾಗಿದೆ. ಈತ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದ ಮೋಸ್ಟ್‌ ವಾಂಟೆಡ್‌ ಅಬ್ದುಲ್ ಮತೀನ್ ಜತೆಗೆ ನಿರಂತರ ಸಂಪರ್ಕದಲ್ಲಿದ್ದ. ಅಬ್ದುಲ್ ಮತೀನ್ ನೇರವಾಗಿ ಹೊರದೇಶದ ಹ್ಯಾಂಡ್ಲರ್‌ಗಳ ಜತೆಗೆ ಸಂಪರ್ಕವನ್ನು ಹೊಂದಿದ್ದ. ಅಲ್ಲದೆ, ಶಾರೀಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಜತೆಗೂ ಈತ ಸಂಪರ್ಕ ಸಾಧಿಸಿದ್ದ ಎಂದು ತಿಳಿದುಬಂದಿದೆ.

Rameswaram cafe bomb blast Main conspirator trapped by NIA and Terrorist Abdul mateen taha
ಅಬ್ದುಲ್ ಮತೀನ್ ತಾಹ

ಯಾರು ಈ ಅಬ್ದುಲ್ ಮತೀನ್ ತಾಹ?

ಅಬ್ದುಲ್ ಮತೀನ್ ತಾಹ ಅಲ್ ಹಿಂದ್‌ ಸಂಘಟನೆಯ ಪ್ರಮುಖ ಸದಸ್ಯನಾಗಿದ್ದಾನೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸೊಪ್ಪುಗುಡ್ಡೆ ನಿವಾಸಿಯಾಗಿರುವ ಈತ 2020ರಿಂದ ನಾಪತ್ತೆ ಆಗಿದ್ದಾನೆ. ಕಳೆದ ಐದು ವರ್ಷಗಳಿಂದ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಆರಂಭದಲ್ಲಿ ಬ್ರಾಡ್‌ಬ್ಯಾಂಡ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ನಂತರ ಫುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಡಾರ್ಕ್‌ವೆಬ್ ಬಳಕೆ ಮಾಡುವುದರಲ್ಲಿ ಈತ ಪರಿಣಿತಿಯನ್ನು ಹೊಂದಿದ್ದ. ಇದರ ಜತೆಗೆ ಕುಕ್ಕರ್ ಬಾಂಬ್ ತಯಾರಿಕೆ ಮಾಡುವುದರಲ್ಲೂ ನಿಪುಣನಾಗಿದ್ದ. ಮ್ಯಾಚ್‌ಸ್ಟಿಕ್‌ನಲ್ಲಿರುವ ಫಾಸ್ಪರಸ್ ಬಳಸಿ ಕುಕ್ಕರ್ ಬಾಂಬ್ ಅನ್ನು ಈತ ತಯಾರಿಸುತ್ತಿದ್ದ. ಇದಲ್ಲದೆ, ಅಲ್ ಹಿಂದ್ ಸಂಘಟನೆ ಸದಸ್ಯರಿಗೆ ಅಡಗುದಾಣ ಕಲ್ಪಿಸುವ ಜವಾಬ್ದಾರಿ ಈತನದ್ದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಈಗಾಗಲೇ ಘೋಷಿಸಿದೆ.

Continue Reading

ಪ್ರಮುಖ ಸುದ್ದಿ

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

IPL 2024 : ದಕ್ಷಿಣ ಆಫ್ರಿಕಾದ ಕೇಶವ್​ ಮಹಾರಾಜ್​ ಆರ್​ಆರ್​ ತಂಡವನ್ನು ಸೇರಿಕೊಂಡಿದ್ದರೆ ಅಲ್ಲಾ ಘಜನ್ಫರ್​​ ಕೆಕೆಆರ್​ ತಂಡಕ್ಕೆ ಮೂಲ ಬೆಲೆ 20 ಲಕ್ಷ ರೂಪಾಯಿಯೊಂದಿಗೆ ಸೇರಿಕೊಂಡಿದ್ದಾರೆ.

VISTARANEWS.COM


on

Rajasthan Royals
Koo

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ (KKR) ಮತ್ತು ರಾಜಸ್ಥಾನ್ ರಾಯಲ್ಸ್ (Rajasathan Royals) ಕ್ರಮವಾಗಿ ಮುಜೀಬ್ ಉರ್ ರೆಹಮಾನ್ ಮತ್ತು ಪ್ರಸಿದ್ಧ್ ಕೃಷ್ಣ ಅವರ ಬದಲಿಗೆ ಹೊಸ ಆಟಗಾರರನ್ನು ಘೋಷಿಸಿವೆ. ಇಬ್ಬರೂ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ನಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಫೆಬ್ರವರಿ 23, 2024 ರಂದು ಎಡ ಪ್ರಾಕ್ಸಿಮಲ್ ಕ್ವಾಡ್ರಿಸೆಪ್ಸ್ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಪ್ರಸಿದ್ಧ್ ಕೃಷ್ಣ ಐಪಿಎಲ್ 2024 ರಲ್ಲಿ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಈ ತಿಂಗಳ ಆರಂಭದಲ್ಲಿ ದೃಢಪಡಿಸಿತ್ತು.

ಬೌಲರ್ ಶೀಘ್ರದಲ್ಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತನ್ನ ಪುನಶ್ಚೇತನವನ್ನು ಪುನರಾರಂಭಿಸಲಿದ್ದಾರೆ ಎಂದು ಮಂಡಳಿ ತಿಳಿಸಿತ್ತು. ಗಾಯದಿಂದಾಗಿ ಪ್ರಸಿದ್ಧ್ ಕೃಷ್ಣ ಸತತ ಎರಡನೇ (IPL 2024) ಐಪಿಎಲ್ ಋತುವಿನಿಂದ ಹೊರಗುಳಿಯುವಂತಾಗಿದೆ. ಅವರು ಇಡೀ ಐಪಿಎಲ್ 2023 ರಿಂದ ಹೊರಗುಳಿದಿದ್ದರು. ಐಪಿಎಲ್ 2022 ರಲ್ಲಿ, ಅವರು 19 ವಿಕೆಟ್​​ಗಳನ್ನು ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2008 ರ ನಂತರ ಮೊದಲ ಬಾರಿಗೆ ಫೈನಲ್ಸ್​ಗೆ ಅರ್ಹತೆ ಪಡೆಯಲು ಸಹಾಯ ಮಾಡಿದ್ದರು.

ಪ್ರಸಿದ್ಧ್ ಕೃಷ್ಣ ಅವರನ್ನು ಕೈಬಿಟ್ಟಿರುವುದರಿಂದ ಆರ್​ಆರ್​​ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅನುಭವಿ ಸ್ಪಿನ್ನರ್ ಆಗಿರುವ ಮಹಾರಾಜ್ ಇನ್ನೂ ಐಪಿಎಲ್​​ನಲ್ಲಿ ಆಡಿಲ್ಲ. 27 ಟಿ20, 44 ಏಕದಿನ ಹಾಗೂ 50 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು 237 ವಿಕೆಟ್ ಕಬಳಿಸಿದ್ದಾರೆ. 130 ಟಿ20 ಪಂದ್ಯಗಳಲ್ಲಿ 130 ವಿಕೆಟ್ ಪಡೆದಿದ್ದಾರೆ. ಆರ್​ಆರ್​​ ಅವರನ್ನು ಮೂಲ ಬೆಲೆ 50 ಲಕ್ಷ ರೂ.ಗೆ ಖರೀದಿಸಿದೆ.

ಇದನ್ನೂ ಓದಿ: Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

ಮತ್ತೊಂದೆಡೆ, ಕೆಕೆಆರ್ ಮುಜೀಬ್ ಉರ್ ರೆಹಮಾನ್ ಬದಲಿಗೆ ಅವರ ಸಹ ಆಟಗಾರ ಅಲ್ಲಾ ಘಜನ್ಫರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಮುಜೀಬ್ ಅವರ ಬಲ ಫಲಾಂಕ್ಸ್ ನಲ್ಲಿ ಉಳುಕು ಆಗಿದ್ದು ಅವರೂ ಆಡುತ್ತಿಲ್ಲ. ಕಳೆದ ಹರಾಜಿನಲ್ಲಿ ಕೆಕೆಆರ್ ಅವರನ್ನು ಮೂಲ ಬೆಲೆ 2 ಕೋಟಿ ರೂ.ಗೆ ಖರೀದಿಸಿತ್ತು.

ವಿಶ್ವದ ಪ್ರಮುಖ ಟಿ 20 ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಮುಜೀಬ್ 2021 ರಿಂದ ಐಪಿಎಲ್​ನಲ್ಲಿ ಆಡಿಲ್ಲ. ಅವರು 2018 ರಲ್ಲಿ ಪಂಜಾಬ್ ಕಿಂಗ್ಸ್ ಪರ ಐಪಿಎಲ್​​​ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ ಚೊಚ್ಚಲ ಐಪಿಎಲ್ ಋತುವಿನಲ್ಲಿ, ಅವರು 11 ಪಂದ್ಯಗಳಲ್ಲಿ 14 ವಿಕೆಟ್​ ಉರುಳಿಸಿದ್ದರು. 7 ಕ್ಕಿಂತ ಕಡಿಮೆ ಎಕಾನಮಿ ರೇಟ್ ಅನ್ನು ಕಾಯ್ದುಕೊಂಡಿದ್ದರು.

ಅಲ್ಲಾ ಘಜನ್ಫರ್ ಕೆಕೆಆರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಘಝಾನ್ಫರ್ ಈವರೆಗೆ 3 ಟಿ 20 ಮತ್ತು 6 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ. ಕೆಕೆಆರ್ ಅವರನ್ನು ಅವರ ಮೂಲ ಬೆಲೆ 20 ಲಕ್ಷ ರೂ.ಗೆ ಖರೀದಿಸಿದೆ.

Continue Reading
Advertisement
Xiaomi Car in China
ಪ್ರಮುಖ ಸುದ್ದಿ39 mins ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್49 mins ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು53 mins ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 202454 mins ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ57 mins ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು1 hour ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ2 hours ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ2 hours ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ2 hours ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ3 hours ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20248 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202410 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ17 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌