Fazil Khan: ಅಮೆರಿಕದಲ್ಲಿ ಮೃತಪಟ್ಟ ಇನ್ನೊಬ್ಬ ಭಾರತೀಯ; ಪತ್ರಕರ್ತನ ಸಾವಿಗೆ ಕಾರಣವೇನು? - Vistara News

ವಿದೇಶ

Fazil Khan: ಅಮೆರಿಕದಲ್ಲಿ ಮೃತಪಟ್ಟ ಇನ್ನೊಬ್ಬ ಭಾರತೀಯ; ಪತ್ರಕರ್ತನ ಸಾವಿಗೆ ಕಾರಣವೇನು?

Fazil Khan: ಅಮೆರಿಕದಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಭಾರತೀಯ ಮೂಲದ ಪತ್ರಕರ್ತ 27 ವರ್ಷದ ಫಾಜಿಲ್ ಖಾನ್ ಮೃತಪಟ್ಟಿದ್ದಾರೆ.

VISTARANEWS.COM


on

Fazil Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಭಾರತೀಯ ಮೂಲದ ಪತ್ರಕರ್ತರೊಬ್ಬರು ಮೃತಪಟ್ಟಿದ್ದಾರೆ. 27 ವರ್ಷದ ಫಾಜಿಲ್ ಖಾನ್ (Fazil Khan) ಮೃತಪಟ್ಟವರು. ನ್ಯೂಯಾರ್ಕ್‌ನ ಹಾರ್ಲೆಮ್‌ (New York’s Harlem)ನಲ್ಲಿರುವ ಸೇಂಟ್ ನಿಕೋಲಸ್ ಪ್ಲೇಸ್ ಅಪಾರ್ಟ್‌ಮೆಂಟ್‌ (St. Nicholas Place apartment)ನಲ್ಲಿ ಈ ದುರಂತ ಸಂಭವಿಸಿದ್ದು, ಬೆಂಕಿಯಿಂದ ಪಾರಾಗಲು ಕಿಟಿಕಿಯಿಂದ ಜಿಗಿದ ಇತರ 17 ಮಂದಿ ಗಾಯಗೊಂಡಿದ್ದಾರೆ.

ʼʼಮೃತನನ್ನು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಅವರ ಸ್ನೇಹಿತರು ಮತ್ತು ಕುಟುಂಬವರು ಸಂಪರ್ಕದಲ್ಲಿದ್ದಾರೆʼʼ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೂಲಗಳು ತಿಳಿಸಿವೆ. “ಫಾಜಿಲ್ ಖಾನ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತಲುಪಿಸಲು ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತೇವೆ” ಎಂದು ಭರವಸೆ ನೀಡಿದೆ.

ಘಟನೆಯ ವಿವರ

ಲಿಥಿಯಂ-ಐಯಾನ್ ಬ್ಯಾಟರಿಯಿಂದಾಗಿ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಹತ್ತಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ. ಕೊಲಂಬಿಯಾ ಜರ್ನಲಿಸಂ ಸ್ಕೂಲ್‌ (Columbia Journalism School)ನ ಹಳೆಯ ವಿದ್ಯಾರ್ಥಿಯಾಗಿರುವ ಫಾಜಿಲ್ ಖಾನ್ ಅವರು ಶಿಕ್ಷಣದಲ್ಲಿನ ಅಸಮಾನತೆ ಮತ್ತು ನಾವೀನ್ಯತೆಗಳ ಬಗ್ಗೆ ವರದಿ ಮಾಡುವ ಲಾಭರಹಿತ ಸುದ್ದಿಮನೆ ʼದಿ ಹೆಚಿಂಗರ್ ರಿಪೋರ್ಟ್‌ʼ (The Hechinger Report)ನಲ್ಲಿ ಡೇಟಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು. ಇದು ಕೊಲಂಬಿಯಾ ವಿಶ್ವವಿದ್ಯಾಲಯದ ಟೀಚರ್ಸ್ ಕಾಲೇಜಿನಲ್ಲಿದೆ.

ಭಾರತದಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಫಾಜಿಲ್ ಖಾನ್

ಫಾಜಿಲ್ ಖಾನ್ ತಮ್ಮ ವೃತ್ತಿ ಜೀವನವನ್ನು ಭಾರತದಲ್ಲಿ ಆರಂಭಿಸಿದ್ದರು. ಅವರ ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ, ಖಾನ್ 2018ರಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್‌ (Business Standard) ಪತ್ರಿಕೆಯಲ್ಲಿ ಕಾಪಿ ಎಡಿಟರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು. ಬಳಿಕ ದೆಹಲಿಯ ಸಿಎನ್ಎನ್-ನ್ಯೂಸ್ 18 (CNN-News18)ನಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದರು. 2020ರಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆಯಲು ನ್ಯೂಯಾರ್ಕ್‌ಗೆ ತೆರಳಿದ್ದರು.

ಸಂತಾಪ ಸೂಚಿಸಿದ ʼದಿ ಹೆಚಿಂಗರ್ ರಿಪೋರ್ಟ್‌ʼ

ಸಹೋದ್ಯೋಗಿಯನ್ನು ಕಳೆದುಕೊಂಡಿರುವ ಬಗ್ಗೆ ʼದಿ ಹೆಚಿಂಗರ್ ರಿಪೋರ್ಟ್‌ʼ ಆಘಾತ ವ್ಯಕ್ತಪಡಿಸಿದೆ. “ಫಾಜಿಲ್ ಖಾನ್ ಬೆಂಕಿ ದುರಂತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ದುಃಖವಾಗಿದೆ. ಅಂತಹ ಉತ್ತಮ ಸಹೋದ್ಯೋಗಿ ಮತ್ತು ಅದ್ಭುತ ವ್ಯಕ್ತಿಯನ್ನು ಕಳೆದುಕೊಂಡಿರುವುದಕ್ಕೆ ಅತೀವ ನೋವು ಕಾಡುತ್ತಿದೆʼʼ ಎಂದು ಅದು ಬರೆದುಕೊಂಡಿದೆ.

ಕಟ್ಟಡದಿಂದ ಜಿಗಿದಿದ್ದ ಹಲವರು

ʼʼಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಪ್ರಾಣ ಉಳಿಸಿಕೊಳ್ಳಲು ಅನೇಕರು ಕಿಟಕಿಯಿಂದ ಕೆಳಗೆ ಜಿಗಿದಿದ್ದರುʼʼ ಎಂದು ಘಟನೆಯ ತೀವ್ರತೆಯನ್ನು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಾರ್ಟ್‌ಮೆಂಟ್‌ನಿಂದ ಹದಿನೆಂಟು ಜನರನ್ನು ರಕ್ಷಿಸಲಾಗಿದೆ. ಆ ಪೈಕಿ 12 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಇದನ್ನೂ ಓದಿ: Akul Dhawan: ಅಮೆರಿಕದಲ್ಲಿ ಮೃತಪಟ್ಟ ಭಾರತೀಯ ಮೂಲದ ವಿದ್ಯಾರ್ಥಿ; ಸಾವಿಗೆ ಕಾರಣವಾಗಿದ್ದು ಇದು

ಸಂತ್ರಸ್ತರ ನೆರವಿಗೆ ರೆಡ್ ಕ್ರಾಸ್ ಸಂಸ್ಥೆ ಧಾವಿಸಿದ್ದು, ಅವರಿಗೆ ಹತ್ತಿರದ ಶಾಲೆಗಳಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದೆ. ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯೂಯಾರ್ಕ್‌ ಅಗ್ನಿ ಶಾಮಕ ದಳ (New York City Fire Department- FDNY)ದ ವರದಿಯ ಪ್ರಕಾರ, 2023ರಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಯಿಂದಾಗಿ ಸುಮಾರು 267 ಅಗ್ನಿ ದುರಂತಗಳು ಸಂಭವಿಸಿತ್ತು. ಇವುಗಳಲ್ಲಿ ಸುಮಾರು 18 ಮಂದಿ ಮೃತಪಟ್ಟು, 150 ಮಂದಿ ಗಾಯಗೊಂಡಿದ್ದರು. ಈ ವರ್ಷ ಲಿಥಿಯಂ-ಐಯಾನ್ ಬ್ಯಾಟರಿಯಿಂದಾಗಿ ಇದುವರೆಗೆ ಸುಮಾರು 24 ಬೆಂಕಿ ದುರಂತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

POK: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ(POK) ತನ್ನ ಭಾಗವಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಪಿಒಕೆಯನ್ನು ಆಜಾದ್ ಕಾಶ್ಮೀರ ಅಥವಾ ಎಜೆಕೆ ಎಂದು ಉಲ್ಲೇಖಿಸಿರುವ ಪಾಕಿಸ್ತಾನ, ವಿವಾದಿತ ಭೂಮಿಗೆ ಸಂಬಂಧಿಸಿದಂತೆ ತನ್ನದೇ ಆದ ಸಂದಿಗ್ಧತೆ ಇದೆ ಎಂದು ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರವು ವಿದೇಶಿ ಭೂ ಪ್ರದೇಶ ಎಂದು ಪಾಕಿಸ್ತಾನದ ಸರ್ಕಾರಿ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

VISTARANEWS.COM


on

POK
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ(POK) ತನ್ನ ಭಾಗವಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಪಿಒಕೆಯನ್ನು ಆಜಾದ್ ಕಾಶ್ಮೀರ ಅಥವಾ ಎಜೆಕೆ ಎಂದು ಉಲ್ಲೇಖಿಸಿರುವ ಪಾಕಿಸ್ತಾನ, ವಿವಾದಿತ ಭೂಮಿಗೆ ಸಂಬಂಧಿಸಿದಂತೆ ತನ್ನದೇ ಆದ ಸಂದಿಗ್ಧತೆ ಇದೆ ಎಂದು ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರವು ವಿದೇಶಿ ಭೂ ಪ್ರದೇಶ ಎಂದು ಪಾಕಿಸ್ತಾನದ ಸರ್ಕಾರಿ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಪಿಒಕೆ ಭಾರತದ ಅವಿಭಾಜ್ಯ ಭೂ ಭಾಗ ಎನಿಸಿಕೊಂಡಿದೆ. ಆದರೆ ಪಾಕಿಸ್ತಾನ ಈ ಪ್ರದೇಶವನ್ನು ಅತಿಕ್ರಮಿಸಲು ಯತ್ನಿಸುತ್ತಿದ್ದು, ಅದನ್ನು ಆಜಾದ್ ಕಾಶ್ಮೀರ ಎಂದು ಹೇಳಿಕೊಂಡಿದೆ. ಇದೀಗ ಪಿಒಕೆ ವಿದೇಶಿ ಭೂ ಪ್ರದೇಶವಾಗಿದೆ ಮತ್ತು ಅದರ ಮೇಲೆ ಪಾಕಿಸ್ತಾನಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಪಾಕಿಸ್ತಾನ ಸರ್ಕಾರ ಇಸ್ಲಾಮಾಬಾದ್ ಹೈಕೋರ್ಟ್ ಮುಂದೆ ಒಪ್ಪಿಕೊಂಡಿದೆ.

ಪ್ರಕರಣದ ಹಿನ್ನೆಲೆ

ಸದ್ಯ ಕಾಶ್ಮೀರಿ ಕವಿ ಮತ್ತು ಪತ್ರಕರ್ತ ಅಹ್ಮದ್ ಫರ್ಹಾದ್ ಶಾ ಜೂನ್‌ 2ರ ತನಕ ಆಜಾದ್‌ ಕಾಶ್ಮೀರದಲ್ಲಿ ಬಂಧನದಲ್ಲಿದ್ದಾರೆ ಎಂದು ಫೆಡರಲ್‌ ಪ್ರಾಸಿಕ್ಯೂಟರ್‌ ಜನರಲ್‌ ಶುಕ್ರವಾರ ಇಸ್ಲಾಮಾಬಾದ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದರು. ಈ ವೇಳೆ ಆಜಾದ್‌ ಕಾಶ್ಮೀರ ವಿದೇಶಿ ಪ್ರದೇಶವಾಗಿರುವುದರಿಂದ ಅಹ್ಮದ್ ಫರ್ಹಾದ್ ಶಾ ಅವರನ್ನು ಇಸ್ಲಾಮಾಬಾದ್‌ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೇ 15ರಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ರಾವಲ್ಪಿಂಡಿಯಿಂದ ಅಹ್ಮದ್ ಫರ್ಹಾದ್ ಶಾ ಅವರನ್ನು ಅಪಹರಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಇಸ್ಲಾಮಾಬಾದ್ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಕೀಲರ ವಾದವನ್ನು ಆಲಿಸಿದ ಇಸ್ಲಾಮಾಬಾದ್‌ ಹೈಕೋರ್ಟ್‌, ಆಜಾದ್‌ ಕಾಶ್ಮೀರವು ವಿದೇಶಿ ಭೂಪ್ರದೇಶವಾಗಿದ್ದರೆ ಮತ್ತು ಪಾಕಿಸ್ತಾನದ ಅವಿಭಾಜ್ಯ ಅಂಗವಲ್ಲದಿದ್ದರೆ, ಪಾಕಿಸ್ತಾನಿ ಮಿಲಿಟರಿ ಮತ್ತು ಪಾಕಿಸ್ತಾನಿ ರೇಂಜರ್‌ಗಳು ಪಾಕಿಸ್ತಾನದಿಂದ ಇಲ್ಲಿಗೆ ಹೇಗೆ ಪ್ರವೇಶಿಸಿದರು? ಎಂದು ಪ್ರಶ್ನಿಸಿತು. ವಿಚಾರಣೆಯ ವೇಳೆ ಕೋರ್ಟ್‌, ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಜನರನ್ನು ಬಲವಂತವಾಗಿ ಅಪಹರಿಸುವ ಅಭ್ಯಾಸವನ್ನು ಮುಂದುವರಿಸಿವೆ ಎಂದು ಚಾಟಿ ಬೀಸಿದೆ.

ಅಹ್ಮದ್ ಫರ್ಹಾದ್ ಶಾ ಅವರನ್ನು ಧೀರ್ಕೋಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ವಿಚಾರ ನ್ಯಾಯಾಲಯದ ವಾದದ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಪಿಒಕೆಯಲ್ಲಿ ಅಹ್ಮದ್ ಫರ್ಹಾದ್ ಶಾ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ರಾವಲ್ಪಿಂಡಿಯಲ್ಲಿರುವ ತಮ್ಮ ನಿವಾಸದಿಂದ ಫರ್ಹಾದ್ ಶಾ ಅವರನ್ನು ಅಪಹರಿಸಿದ ಬಗ್ಗೆ ಅವರ ಪತ್ನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading

ವಿದೇಶ

Anti Islam Rally: ಇಸ್ಲಾಂ ಹಿಂಸಾಚಾರ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದ ಮತಾಂಧ; ಗುಂಡಿಕ್ಕಿದ ಪೊಲೀಸರು

Anti Islam Rally: ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಇನ್ನು, ರ‍್ಯಾಲಿ ನಡೆಯುವಾಗಲೇ ದುಷ್ಕರ್ಮಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾನೆ.

VISTARANEWS.COM


on

Anti Islam Rally
Koo

ಬರ್ಲಿನ್:‌ ಜರ್ಮನಿಯ ಮ್ಯಾನ್‌ಹೆಮ್‌ನಲ್ಲಿ ನಡೆದ ಇಸ್ಲಾಂ ಹಿಂಸಾಚಾರ ವಿರೋಧಿ ರ‍್ಯಾಲಿಯಲ್ಲಿ (Anti Islam Rally) ದುಷ್ಕರ್ಮಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ರ‍್ಯಾಲಿಯ ಮಧ್ಯೆ ಏಕಾಏಕಿ ನುಗ್ಗಿ, ಚಾಕು ಇರಿದ ಕಾರಣ ಒಬ್ಬ ಪೊಲೀಸ್‌ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ಮಾರ್ಕ್ಟ್‌ಪ್ಲಾಟ್ಜ್‌ ಪ್ರದೇಶದ ಬಳಿ ಇಸ್ಲಾಂ ಹಿಂಸಾಚಾರ ವಿರೋಧಿಸಿ ರ‍್ಯಾಲಿ ನಡೆಯುತ್ತಿರುವಾಗ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವ್ಯಕ್ತಿಯೊಬ್ಬರು ಸಮಾವೇಶವನ್ನು ಉದ್ದೇಶಿಸಿ ಮಾತನಾಡುವವರಿದ್ದರು. ಇಸ್ಲಾಮಿಕ್‌ ಹಿಂಸಾಚಾರ ಖಂಡಿಸಿ ಅವರು ಭಾಷಣ ಮಾಡುವವರಿದ್ದರು. ಆದರೆ, ಇದೇ ವೇಳೆ ವ್ಯಕ್ತಿಯು ದಾಳಿ ಮಾಡಿದ್ದಾನೆ. ಆತನನ್ನು ಹಿಡಿಯಲು ಹೋದ ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಇನ್ನು, ಮತ್ತೊಬ್ಬ ಪೊಲೀಸ್‌ ಅಧಿಕಾರಿಯು ದುಷ್ಕರ್ಮಿಯ ಮೇಲೆ ಗುಂಡು ಹಾರಿಸುವ ಮೂಲಕ ಆತನನ್ನು ಹಿಡಿದಿದ್ದಾರೆ. ಪೊಲೀಸ್‌ ಗುಂಡಿನ ದಾಳಿಗೆ ಗಾಯಗೊಂಡಿರುವ ದುಷ್ಕರ್ಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

“ಇಸ್ಲಾಂ ವಿರೋಧಿ ರ‍್ಯಾಲಿಯ ವೇಳೆ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿ ಸೇರಿ ಹಲವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಾಗೊಂದು ವೇಳೆ, ದಾಳಿಯ ಹಿಂದೆ ಇಸ್ಲಾಮಿಕ್‌ ಕೈವಾಡ ಇದೆ ಎಂಬುದು ಗೊತ್ತಾದರೆ ದೇಶದಲ್ಲಿ ಮತ್ತೊಂದು ಇಸ್ಲಾಮಿಕ್‌ ಹಿಂಸಾಚಾರ ನಡೆಯಲಿದೆ. ಇಂತಹ ಹಿಂಸಾಚಾರದ ಬಗ್ಗೆ ನಾವು ಮೊದಲಿನಿಂದಲೂ ಎಚ್ಚರಿಕೆ ನೀಡುತ್ತಲೇ ಬಂದಿದ್ದೇವೆ” ಎಂಬುದಾಗಿ ಜರ್ಮನಿ ಗೃಹ ಸಚಿವ ನ್ಯಾನ್ಸಿ ಫೇಸರ್‌ ಪ್ರಕಟಣೆ ಹೊರಡಿಸಿದ್ದಾರೆ.

ಇಸ್ಲಾಂ ವಿರೋಧಿ ಹೋರಾಟಗಾರ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಕರೆ ನೀಡಿದ ಕಾರಣ ನಗರದಲ್ಲಿ ಸಾವಿರಾರು ಜನ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇಸ್ಲಾಂಅನ್ನು ಟೀಕಿಸುವ ಪತ್ರಕರ್ತ ಎಂದೇ ಕರೆದುಕೊಳ್ಳುವ ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಅವರು ಬಲಪಂಥೀಯ ಸಂಘಟನೆಗಳ ಜತೆ ಗುರುತಿಸಿಕೊಂಡಿದ್ದಾರೆ. ಪೂರ್ವ ಜರ್ಮನಿಯಲ್ಲಿ ಇಸ್ಲಾಂ ಧರ್ಮೀಯರ ಉಪಟಳ ಖಂಡಿಸಿ ಪೆಜಿಡಾ (PEGIDA) ಎಂಬ ಸಂಘಟನೆಯು ನಿಯಮಿತವಾಗಿ ಇಸ್ಲಾಂ ವಿರುದ್ಧ ರ‍್ಯಾಲಿಗಳನ್ನು ನಡೆಸುತ್ತಲೇ ಇರುತ್ತದೆ. ಮೈಕೆಲ್‌ ಸ್ಟುಯೆರ್‌ಜೆನ್‌ಬರ್ಗರ್‌ ಈ ಸಂಘಟನೆಯ ಸದಸ್ಯರೂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Continue Reading

ವಿದೇಶ

Spelling Bee: ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆ; ಭಾರತ ಮೂಲಕ ಬೃಹತ್‌ಗೆ ಚಾಂಪಿಯನ್‌ ಪಟ್ಟ

Spelling Bee:ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

VISTARANEWS.COM


on

Spelling Bee
Koo

ಅಮೆರಿಕ: ಭಾರತ ಮೂಲದ 12 ವರ್ಷದ ಬಾಲಕ ಸ್ಕ್ರಿಪ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ(Spelling Bee) ಚಾಂಪಿಯನ್‌ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತೀಯ ಮೂಲದ ಅಮೆರಿಕನ್‌ ಬಾಲಕ ಬೃಹತ್‌ ಸೋಮ(Bruhat Soma) 29 ಪದಗಳ ಸ್ಪೆಲ್ಲಿಂಗ್‌ ಅನ್ನು ಸರಿಯಾಗಿ ಹೇಳುವ ಮೂಲಕ ಚಾಂಪಿಯನ್‌ ಆಗಿ ಹೊರ ಹೊಮ್ಮುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾನೆ.

ಇನ್ನು ಫೈಜಾನ್‌ ಜಾಕಿಯನ್ನು ಸೋಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿರುವ ಬೃಹತ್‌, 50,000 ಡಾಲರ್‌ ನಗದು ಬಹುಮಾನವನ್ನೂ ಪಡೆದಿದ್ದಾನೆ. ಇನ್ನು ಈ ಸ್ಪೆಲ್ಲಿಂಗ್ ಬೀ ಇಂಗ್ಲೀಷ್‌ ಭಾಷೆಯ ಅತ್ಯಂತ ಪ್ರತಿಷ್ಠೆಯ ಸ್ಪರ್ಧೆ ಇದಾಗಿದ್ದು, ಈ ಬಾರಿ ವಾಷಿಂಗ್ಟನ್‌ನಲ್ಲಿ ಆಯೋಜನೆಗೊಂಡಿತ್ತು. ಇನ್ನು ಏಳನೇ ತರಗತಿಯಲ್ಲಿ ಓದುತ್ತಿರುವ ಬೃಹತ್‌, ಇದಕ್ಕೂ ಮುನ್ನ ನಡೆದ ಮೂರು ಸ್ಪೆಲ್ಲಿಂಗ್‌ ಬೀ ಸ್ಪರ್ಧೆಗಳನ್ನು ಗೆದ್ದ ಬಳಿಕ ಅಂತಿಮ ಘಟ್ಟಕ್ಕೆ ತಲುಪಿದ್ದ.

ಇನ್ನು ತನ್ನ‌ ಗೆಲುವಿನ ಬಗ್ಗೆ ಮಾತನಾಡಿದ ಬೃಹತ್‌, ಕಳೆದ ಮೂರು ಸ್ಪೆಲ್ಲಿಂಗ್‌ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿರುವುದ ದೊಡ್ಡ ವಿಚಾರವೇನಲ್ಲ. ನನ್ನ ಅಂತಿಮ ಗುರಿ ಇದಾಗಿತ್ತು. ಈ ಸ್ಪರ್ಧೆಯನ್ನು ನಾನು ಗೆದ್ದಿದ್ದೇನೆ. ಆ ಬಗ್ಗೆ ನನಗೆ ಬಹಳಷ್ಟು ಸಂತೋಷವಿದೆ ಎಂದು ಹೇಳಿದ್ದಾರೆ. ಇನ್ನು ಕಳೆದ 35 ವರ್ಷಗಳಲ್ಲಿ 29 ನೇ ಬಾರಿ ಭಾರತೀಯ ಮೂಲದ ಅಮೆರಿಕನ್‌ ಬಾಲಕ ಈ ಸ್ಪರ್ಧೆಯಲ್ಲಿ ಗೆಲುವು ಸಾಧಿಸುತ್ತಿರುವುದು.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

ಕಳೆದ ವರ್ಷ ಇದೇ ಸ್ಪರ್ಧೆಯಲ್ಲಿ ಭಾರತೀಯ ಮೂಲದ ದೇವ್‌ ಶಾ ಎಂಬ 14 ವರ್ಷದ ಬಾಲಕ ಪ್ರತಿಷ್ಠಿತ ‘ಸ್ಕ್ರಿಫ್ಸ್‌ ನ್ಯಾಷನಲ್‌ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತನಾಗಿದ್ದಾನೆ. ಅಮೆರಿಕದ ಮಾರ್ಯಾಲ್ಯಾಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಕೊನೆಯ ಸುತ್ತಿನಲ್ಲಿPsammophilus (ಪ್ಸಾಮ್ಮೊಫೈಲ್‌) ಎಂಬ ಇಂಗ್ಲಿಷ್‌ನ 11 ಸ್ಪೆಲ್ಲಿಂಗ್‌ ಅನ್ನು ದೇವ್‌ ಸರಿಯಾಗಿ ಉಚ್ಚರಿಸಿ ವಿಜೇತನಾಗಿದ್ದು, 41 ಲಕ್ಷ ರು. ನಗದು ಬಹುಮಾನ ಸ್ವೀಕರಿಸಿದ್ದ.

Continue Reading

ವಿದೇಶ

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Donald Trump: ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾರ್ಕ್‌ನ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾ (Trump Media)ದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ. ಈ ಕಂಪನಿಯು ಟ್ರೂತ್ ಸೋಷಿಯಲ್ ಪ್ಲಾಟ್ ಫಾರ್ಮ್‌ (Truth Social platform)ನ ಮಾತೃ ಸಂಸ್ಥೆಯಾಗಿದೆ.

ಟ್ರಂಪ್‌ ಈ ಕಂಪನಿಯಲ್ಲಿ ಶೇ. 65ರಷ್ಟು ಪಾಲು ಹೊಂದಿದ್ದಾರೆ. ಸುಮಾರು ಶೇ. 10ರಷ್ಟು ಕುಸಿತವು ಮಾಜಿ ಅಧ್ಯಕ್ಷರ ಷೇರುಗಳ ಮೌಲ್ಯದಲ್ಲಿ 532 ಮಿಲಿಯನ್ ಡಾಲರ್ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಫೋರ್ಬ್ಸ್ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಫೇಸ್‌ಬುಕ್‌ (Facebook) ಮತ್ತು ಎಕ್ಸ್‌ (ಹಿಂದಿನ ಟ್ವಿಟ್ಟರ್‌)ಗೆ ಸವಾಲು ಸ್ಪರ್ಧೆ ಒಡ್ಡಲು ಡೊನಾಲ್ಡ್ ಟ್ರಂಪ್ ತಮ್ಮದೇ ಹೊಸ ಸೋಷಿಯಲ್ ಮೀಡಿಯಾ ಆದ ಟ್ರೂತ್ ಸೋಷಿಯಲ್ (Truth Social) ಆರಂಭಿಸಿದ್ದರು.

2021ರಲ್ಲಿ ಅಮೆರಿಕ ಸಂಸತ್‌ ಭವನದಲ್ಲಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ಸಾಮಾಜಿಕ ಜಾಲತಾಣಗಳು ನಿಷೇಧ ಹೇರಿದ್ದವು. ಹೀಗಾಗಿ ಅವರು 2021ರ ಅಕ್ಟೋಬರ್‌ನಲ್ಲಿ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದರು. ಅದಂತೆ 2022ರಲ್ಲಿ ಟ್ರೂತ್ ಸೋಷಿಯಲ್ ಅಪ್ಲಿಕೇಷನ್‌ ಆರಂಭಿಸಿದ್ದರು. ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌ನ ಮಾಲಿಕತ್ವದಲ್ಲಿ ಈ ಅಪ್ಲಿಕೇಷನ್‌ ಅನ್ನು ಆರಂಭಿಸಲಾಗಿತ್ತು.

ಇದನ್ನೂ ಓದಿ: Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್‌ ಸ್ಪರ್ಧಿಸಲಿದ್ದಾರೆ.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ2 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ2 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ2 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ3 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ3 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ4 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ5 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ5 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ5 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ5 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು9 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌