Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ - Vistara News

ವಿದೇಶ

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Intel Layoffs: ಇಂಟೆಲ್ ಕಳೆದ ವರ್ಷದ ಕೊನೆಯಲ್ಲಿ 124,800 ಉದ್ಯೋಗಿಗಳನ್ನು ಹೊಂದಿದೆ ಎಂದು ವರದಿ ಮಾಡಿದೆ. ಹೀಗಾಗಿ ಬರೋಬ್ಬರಿ 18,000 ನೌಕರರು ವಜಾಗೊಳ್ಳುವ ಸಾಧ್ಯತೆ ಇದೆ. ಜೂನ್‌ನಲ್ಲಿ, ಇಂಟೆಲ್ ಇಸ್ರೇಲ್‌ನಲ್ಲಿನ ಪ್ರಮುಖ ಕಾರ್ಖಾನೆಯ ಯೋಜನೆಯ ವಿಸ್ತರಣೆಯನ್ನು ನಿಲ್ಲಿಸುವುದಾಗಿ ಘೋಷಿಸಿತು.

VISTARANEWS.COM


on

intel layoffs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್ ಫ್ರಾನ್ಸಿಸ್ಕೋ: ಆರ್ಥಿಕ ಹಿಂಜರಿತದ ಭೀತಿಯ ಹಿನ್ನೆಲೆಯಲ್ಲಿ ದೈತ್ಯ ಟೆಕ್ ಕಂಪನಿಗಳು ತಮ್ಮ ವೆಚ್ಚವನ್ನು ಕಡಿಮೆ ಮಾಡುವುದಕ್ಕಾಗಿ ಉದ್ಯೋಗಗಳನ್ನು ಕಡಿತ(Intel Layoffs) ಮಾಡುತ್ತಿವೆ. ಇದೀಗ ಇದರ ಸಾಲಿಗೆ ಅಮೆರಿಕದ ಚಿಪ್ ತಯಾರಕ ಇಂಟೆಲ್(Intel) ಕೂಡ ಸೇರಿದೆ. ಶೇ.15ಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಇಂಟೆಲ್‌ ನಿರ್ಧರಿಸಿದ್ದು, ಇದರಿಂದ 20 ಶತಕೋಟಿ ಡಾಲರ್‌ ವೆಚ್ಚ ಕಡಿಮೆಯಾಗಲಿದೆ.

ಇಂಟೆಲ್ ಇತ್ತೀಚೆಗೆ ಕೊನೆಗೊಂಡ ತ್ರೈಮಾಸಿಕದಲ್ಲಿ $1.6 ಶತಕೋಟಿ ನಷ್ಟವನ್ನು ವರದಿ ಮಾಡಿದ್ದರಿಂದ ಈ ವರ್ಷ ಅಂದಾಜು $20 ಶತಕೋಟಿ ವೆಚ್ಚವನ್ನು ಕಡಿತಗೊಳಿಸುವ ಯೋಜನೆ ರೂಪಿಸಿದೆ. ಈ ಬಗ್ಗೆ ಇಂಟೆಲ್ ಮುಖ್ಯ ಕಾರ್ಯನಿರ್ವಾಹಕ ಪ್ಯಾಟ್ ಗೆಲ್ಸಿಂಗರ್ ಪ್ರತಿಕ್ರಿಯಿಸಿದ್ದು, ನಾವು ಪ್ರಮುಖ ಉತ್ಪನ್ನ ಮತ್ತು ಪ್ರಕ್ರಿಯೆ ತಂತ್ರಜ್ಞಾನದ ಮೈಲಿಗಲ್ಲುಗಳನ್ನು ಮುಟ್ಟಿದರೂ ಸಹ ನಮ್ಮ Q2 ಆರ್ಥಿಕ ಕಾರ್ಯಕ್ಷಮತೆ ನಿರಾಶಾದಾಯಕವಾಗಿತ್ತು. ಮುಂದಿನ ಅರ್ಧವಾರ್ಷಿಕ ನಾವು ಹಿಂದೆ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸವಾಲಿನವುಗಳಾಗಿವೆ ಎಂದು ಹೇಳಿದ್ದಾರೆ.

“ನಮ್ಮ ಖರ್ಚು ಕಡಿತವನ್ನು ಕಾರ್ಯಗತಗೊಳಿಸುವ ಮೂಲಕ, ನಮ್ಮ ಲಾಭವನ್ನು ಸುಧಾರಿಸಲು ಮತ್ತು ನಮ್ಮ ಆಯವ್ಯಯವನ್ನು ಬಲಪಡಿಸಲು ನಾವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಜಿನ್ಸ್ನರ್ ಹೇಳಿದರು.

18,000 ನೌಕರರು ವಜಾ?

ಇಂಟೆಲ್ ಕಳೆದ ವರ್ಷದ ಕೊನೆಯಲ್ಲಿ 124,800 ಉದ್ಯೋಗಿಗಳನ್ನು ಹೊಂದಿದೆ ಎಂದು ವರದಿ ಮಾಡಿದೆ. ಹೀಗಾಗಿ ಬರೋಬ್ಬರಿ 18,000 ನೌಕರರು ವಜಾಗೊಳ್ಳುವ ಸಾಧ್ಯತೆ ಇದೆ. ಜೂನ್‌ನಲ್ಲಿ, ಇಂಟೆಲ್ ಇಸ್ರೇಲ್‌ನಲ್ಲಿನ ಪ್ರಮುಖ ಕಾರ್ಖಾನೆಯ ಯೋಜನೆಯ ವಿಸ್ತರಣೆಯನ್ನು ನಿಲ್ಲಿಸುವುದಾಗಿ ಘೋಷಿಸಿತು, ಇದು ಚಿಪ್ ಸ್ಥಾವರಕ್ಕೆ ಹೆಚ್ಚುವರಿ 15 ಶತಕೋಟಿ ಡಾಲರ್‌ ವೆಚ್ಚ ತಗುಲಿತ್ತು.

ಇಂಟೆಲ್ ಪ್ರತಿಸ್ಪರ್ಧಿಗಳಾದ ಎನ್ವಿಡಿಯಾ, ಎಎಮ್‌ಡಿ ಮತ್ತು ಕ್ವಾಲ್‌ಕಾಮ್‌ನಿಂದ ಪ್ರಬಲ ಸವಾಲುಗಳನ್ನೊಡ್ಡಿದೆ. ದಶಕಗಳಿಂದ, ಲ್ಯಾಪ್‌ಟಾಪ್‌ಗಳಿಂದ ಡೇಟಾ ಕೇಂದ್ರಗಳವರೆಗೆ ಎಲ್ಲವನ್ನೂ ನಡೆಸುವ ಚಿಪ್‌ಗಳ ಮಾರುಕಟ್ಟೆಯಲ್ಲಿ ಇಂಟೆಲ್ ಪ್ರಾಬಲ್ಯ ಹೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ, ಅದರ ಪ್ರತಿಸ್ಪರ್ಧಿಗಳು ಅದರಲ್ಲೂ ಮುಖ್ಯವಾಗಿ ವಿಶೇಷವಾಗಿ ಎನ್ವಿಡಿಯಾ – ವಿಶೇಷ AI ಪ್ರೊಸೆಸರ್‌ಗಳಲ್ಲಿ ಮುಂದೆ ಸಾಗಿವೆ.

ಮೈಕ್ರೋಸಾಫ್ಟ್ (Microsoft Layoffs) ಕೂಡ ವರ್ಷದ ಹಿಂದೆ ಇದೇ ರೀತಿಯಾಗಿ ಉದ್ಯೋಗಿಗಳನ್ನು ಕಡಿತಗೊಳಿಸಿತ್ತು. ಕಂಪನಿಯು ಸುಮಾರು ಹತ್ತು ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ಈಗಾಗಲೇ ಮೆಟಾ, ಟ್ವಿಟರ್, ಅಮೆಜಾನ್, ಗೋಲ್ಡಮನ್ ಸಾಚ್ಸ್ ಸೇರಿದಂತೆ ಅನೇಕ ಕಂಪನಿಗಳು ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗಗಳನ್ನು ಕಡಿಮೆ ಮಾಡಿವೆ.

ಇದನ್ನೂ ಓದಿ: Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ismail Haniyh Killing: ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ನಡೆದಿತ್ತಾ ಮಾಸ್ಟರ್‌ ಪ್ಲ್ಯಾನ್? ತಿಂಗಳ ಹಿಂದೆಯೇ ಗೆಸ್ಟ್‌ಹೌಸ್‌ನಲ್ಲಿ‌ ಇಡಲಾಗಿತ್ತಾ ಬಾಂಬ್‌?

Ismail Haniyh Killing: ಅತಿಥಿಗೃಹವು ಉತ್ತರ ಟೆಹ್ರಾನ್‌ನ ಉನ್ನತ ಮಟ್ಟದ ನೆರೆಹೊರೆಯಾದ ನೆಶಾತ್‌ನಲ್ಲಿದೆ. ಅಧ್ಯಕ್ಷೀಯ ಉದ್ಘಾಟನೆಗಾಗಿ ಇರಾನ್‌ನಲ್ಲಿದ್ದ ಹನಿಯೆಹ್ ಅವರು ಕೋಣೆಯೊಳಗೆ ಇದ್ದಾರೆ ಎಂದು ದೃಢಪಡಿಸಿದ ನಂತರ ಬಾಂಬ್ ಅನ್ನು ರಿಮೋಟ್‌ನಿಂದ ಸ್ಫೋಟಿಸಿದಾಗ ಕೊಲ್ಲಲ್ಪಟ್ಟರು. ಸ್ಫೋಟದಲ್ಲಿ ಅಂಗರಕ್ಷಕ ಕೂಡ ಸಾವನ್ನಪ್ಪಿದ್ದಾರೆ. ಹೀಗಾಗಿ ಇದೊಂದು ಪೂರ್ವಯೋಜಿತ ಕೊಲೆ ಎಂಬುದು ಸ್ಪಷ್ಟವಾಗಿದೆ.

VISTARANEWS.COM


on

Ismail Haniyeh Killing
Koo

ಟೆಹ್ರಾನ್‌: ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಎರಡು ದಿನಗಳ ಹಿಂದೆಯಷ್ಟೇ ಹಮಾಸ್‌(Hamas) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನ (Ismail Haniyh Killing) ಹತ್ಯೆಯಾಗಿದ್ದ. ಇದೀಗ ಆತನ ಹತ್ಯೆಗೆ ಸಂಬಂಧಿಸಿದಂತೆ ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಹೆನಿಯೆಹ್‌ ತಂಗಿದ್ದ ಟೆಹ್ರಾನ್‌ ಗೆಸ್ಟ್‌ಹೌಸ್‌ನಲ್ಲಿ ಒಂದು ತಿಂಗಳ ಮುಂಚೆಯೇ ಬಾಂಬ್‌ ಇಡಲಾಗಿತ್ತು ಎಂಬ ವಿಚಾರ ಬಯಲಾಗಿದೆ. ಇಸ್ಲಾಮಿಕ್‌ ರೆವೊಲ್ಯೂಷನರಿ ಗಾರ್ಡ್‌ಗಳಿಂದ ಅಷ್ಟು ಭದ್ರತೆಯಿದ್ದರೂ ಸ್ಫೋಟಕ ವಸ್ತು(Explosive) ಅತಿಥಿ ಗೃಹಕ್ಕೆ ಹೇಗೆ ತಲುಪಿದ ಎಂಬ ಪ್ರಶ್ನೆ ಈ ಭುಗಿಲೆದ್ದಿದೆ.

ಅತಿಥಿಗೃಹವು ಉತ್ತರ ಟೆಹ್ರಾನ್‌ನ ಉನ್ನತ ಮಟ್ಟದ ನೆರೆಹೊರೆಯಾದ ನೆಶಾತ್‌ನಲ್ಲಿದೆ. ಅಧ್ಯಕ್ಷೀಯ ಉದ್ಘಾಟನೆಗಾಗಿ ಇರಾನ್‌ನಲ್ಲಿದ್ದ ಹನಿಯೆಹ್ ಅವರು ಕೋಣೆಯೊಳಗೆ ಇದ್ದಾರೆ ಎಂದು ದೃಢಪಡಿಸಿದ ನಂತರ ಬಾಂಬ್ ಅನ್ನು ರಿಮೋಟ್‌ನಿಂದ ಸ್ಫೋಟಿಸಿದಾಗ ಕೊಲ್ಲಲ್ಪಟ್ಟರು. ಸ್ಫೋಟದಲ್ಲಿ ಅಂಗರಕ್ಷಕ ಕೂಡ ಸಾವನ್ನಪ್ಪಿದ್ದಾರೆ. ಹೀಗಾಗಿ ಇದೊಂದು ಪೂರ್ವಯೋಜಿತ ಕೊಲೆ ಎಂಬುದು ಸ್ಪಷ್ಟವಾಗಿದೆ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಹನಿಯೆಹ್‌ ಹತ್ಯೆಗೆ ಪ್ರತೀಕಾರ ತೆಗೆದುಕೊಳ್ಳಲು ನಪಣ ತೊಟ್ಟಿರುವ ಇರಾನ್‌ ಶೀಘ್ರದಲ್ಲಿ ಇಸ್ರೇಲ್‌ ಮೇಲೆ ಪ್ರತಿದಾಳಿ ನಡೆಸಲಿದೆ ಎಂಬ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಬುಧವಾರ ಬೆಳಗ್ಗೆ ಅಯತೊಲ್ಲಾ ಅಲಿ ಖಮೇನಿ ಇರಾನ್‌ನ ಸುಪ್ರೀಂ ನ್ಯಾಶನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಖಮೇನಿ ಈ ಆದೇಶವನ್ನು ನೀಡಿದರು. ಇನ್ನು ಹನಿಯೆಹ್‌ ಹತ್ಯೆಗೆ ಇರಾನ್‌ ಮತ್ತು ಹಮಾಸ್‌ ನೇರವಾಗಿ ಇಸ್ರೇಲ್‌ ಅನ್ನು ಹೊಣೆಯಾಗಿಸಿದೆ. ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೆ ಇಸ್ರೇಲ್‌ ಒಪ್ಪಿಕೊಂಡಿಲ್ಲ. ಅಲ್ಲದೇ ನಿರಕಾರಿಸಿಯೂ ಇಲ್ಲ.

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಹಮಾಸ್‌ ಉಗ್ರರಿಗೆ ಇರಾನ್‌ನಲ್ಲಿ ತರಬೇತಿ, ಹಣಕಾಸು ನೆರವು ಸೇರಿ ಹಲವು ರೀತಿಯಲ್ಲಿ ಸಹಕಾರ ಸಿಗುತ್ತಿರುವ ಕಾರಣ ಇಸ್ಮಾಯಿಲ್‌ ಹನಿಯೆಹ್‌ ಇರಾನ್‌ಗೆ ತೆರಳಿದ್ದ. ಇದರ ಮಧ್ಯೆಯೇ ಆತ ಮಂಗಳವಾರ (ಜುಲೈ 30) ಸುದ್ದಿಗಾರರೊಂದಿಗೆ ಮಾತನಾಡಿದ್ದ. ಇಸ್ರೇಲ್‌ ದಾಳಿ, ಇರಾನ್‌ ಜತೆಗಿನ ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ್ದ.

2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ನಡೆಸಿದ ದಾಳಿಯಲ್ಲಿ ಒಂದು ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದ್ದು, ಗಾಜಾದಲ್ಲಿ ಇದುವರೆಗೆ ಇಸ್ರೇಲ್‌ ದಾಳಿಗೆ 39,400 ಮಂದಿ ಮೃತಪಟ್ಟಿದ್ದಾರೆ. ಸುಮಾರು 90 ಸಾವಿರ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಹಮಾಸ್‌ ಉಗ್ರರ ಜತೆಗೆ ಹಮಾಸ್‌ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನು ಇಸ್ರೇಲ್‌ ಯೋಧರು ಹುಡುಕಿ ಹುಡುಕಿ ಕೊಲ್ಲುತ್ತಿದ್ದಾರೆ.

ಇದನ್ನೂ ಓದಿ: Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

Continue Reading

ಅಂಕಣ

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

ರಾಜಮಾರ್ಗ ಅಂಕಣ: ತನ್ನ ಬಾಲ್ಯದಲ್ಲಿ ಪೋಲಿಯೋ ಎಂಬ ಮಹಾಮಾರಿಗೆ ಸಂತ್ರಸ್ತಳಾದ, ಕಪ್ಪು ಚರ್ಮ ಎಂಬ ಕಾರಣಕ್ಕೆ ಅಪಮಾನ ಮತ್ತು ತಿರಸ್ಕಾರಕ್ಕೆ ಒಳಗಾದ ವಿಲ್ಮಾ ತನ್ನ ಕ್ರೀಡಾಸಾಧನೆಗಳ ಮೂಲಕ ಇತಿಹಾಸವನ್ನೇ ಬರೆದಳು! ಮುಂದೆ ಅವಳನ್ನು ‘ಶತಮಾನದ ಕ್ರೀಡಾಪಟು’ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಗೌರವಿಸಿತು.

VISTARANEWS.COM


on

wilma rudolph ರಾಜಮಾರ್ಗ ಅಂಕಣ
Koo

ʼಕಪ್ಪು ಜಿಂಕೆ’ ಎಂದು ಕೀರ್ತಿ ಪಡೆದ ವಿಲ್ಮಾ ರುಡಾಲ್ಫ್

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಪ್ಯಾರಿಸ್ ನಗರದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ (Olympics) ಸುದ್ದಿಗಳು ಸಮುದ್ರದ ಅಲೆಗಳಂತೆ ತೇಲಿ ಬರುತ್ತಿರುವ ಈ ಹೊತ್ತಲ್ಲಿ ಇನ್ನೋರ್ವ ಮಹಾನ್ ಕ್ರೀಡಾ ಸಾಧಕಿಯ ಪರಿಚಯವು ನಿಮ್ಮ ಮುಂದೆ. ಹಾಗೆಯೇ ಜಗತ್ತಿನ ವರ್ಣ ದ್ವೇಷದ ಬೆಂಕಿಯ ಕುಲುಮೆಯಲ್ಲಿ ಚಂದವಾಗಿ ಅರಳಿದ ಒಂದು ಅದ್ಭುತ ಕ್ರೀಡಾ ಪ್ರತಿಭೆಯನ್ನು ತಮಗೆ ಪರಿಚಯಿಸಲು ಹೆಮ್ಮೆ ಪಡುತ್ತಿರುವೆ.

ಆಕೆಯನ್ನು ಜಗತ್ತು ‘ಕಪ್ಪು ಜಿಂಕೆ’ ಎಂದು ಕರೆಯಿತು

ಆಕೆಯ ಸಾಧನೆಯು ಮುಂದೆ ಸಾವಿರ ಸಾವಿರ ಕಪ್ಪು ವರ್ಣದ ಸಾಧಕರಿಗೆ ಪ್ರೇರಣೆ ನೀಡಿತು. ಆಕೆ ವಿಲ್ಮಾ ರುಡಾಲ್ಫ್ (Wilma Rudolph).

ಆಕೆ ಹುಟ್ಟಿದ್ದು ಅಮೆರಿಕಾದ ಸೈಂಟ್ ಬೆಥ್ಲೆಹೆಮ್ ಎಂಬ ಪುಟ್ಟ ನಗರದಲ್ಲಿ. ಅವಳು Premature Baby ಆಗಿ ಹುಟ್ಟಿದವಳು. ಹುಟ್ಟುವಾಗ ಅವಳ ತೂಕ ನಾಲ್ಕೂವರೆ ಪೌಂಡ್ ಮಾತ್ರ ಆಗಿತ್ತು. ಮಗು ಬದುಕುವ ಭರವಸೆ ವೈದ್ಯರಿಗೇ ಇರಲಿಲ್ಲ! ಅವಳ ಅಪ್ಪ ರೈಲ್ವೆ ನಿಲ್ದಾಣದಲ್ಲಿ ಪೋರ್ಟರ್ ಆಗಿದ್ದರು. ತೀವ್ರ ಬಡತನ. ಜೊತೆಗೆ ಅಪ್ಪನಿಗೆ ಎರಡು ಮದುವೆಯಾಗಿದ್ದು ಹುಟ್ಟಿದ್ದು ಒಟ್ಟು 22 ಮಕ್ಕಳು! ಅದರಲ್ಲಿ ವಿಲ್ಮಾ 20ನೆಯ ಮಗು! ಆದ್ದರಿಂದ ಅವಳು ಅಪ್ಪನಿಗೆ ಬೇಡವಾದ ಮಗಳು. ಅಮ್ಮನ ಮುದ್ದಿನ ಮಗಳು.

ಬಾಲ್ಯದಲ್ಲಿಯೇ ಆಕೆಗೆ ಕಾಡಿತ್ತು ಪೋಲಿಯೋ!

ಅಂತಹ ಹುಡುಗಿಗೆ ಬಾಲ್ಯದಲ್ಲಿ ಸಾಲು ಸಾಲು ಕಾಯಿಲೆಗಳ ಸರಮಾಲೆಯೇ ಎದುರಾಯಿತು. ಎರಡು ವರ್ಷದಲ್ಲಿ ಪುಟ್ಟ ಮಗುವಿಗೆ ನ್ಯೂಮೋನಿಯಾ ಬಂದು ಅವಳ ಅರ್ಧ ಶಕ್ತಿಯನ್ನು ತಿಂದು ಹಾಕಿತ್ತು. ಚೇತರಿಸಲು ಅವಕಾಶ ಕೊಡದೆ ನಂತರ ಬಂದದ್ದು ಸ್ಕಾರ್ಲೆಟ್ ಜ್ವರ. ಮೈ ಮೇಲೆ ರಕ್ತ ವರ್ಣದ ಗುಳ್ಳೆಗಳು ಬಂದು ಕೀವು ತುಂಬುವ ಖಾಯಿಲೆ ಅದು. ಅಮ್ಮ ಮಗಳ ಆರೈಕೆ ಮಾಡಿ ಹೈರಾಣಾಗಿ ಬಿಟ್ಟರು! ಸರಿಯಾಗಿ ಐದನೇ ವರ್ಷ ತುಂಬುವ ಹೊತ್ತಿಗೆ ಮಗುವಿಗೆ ಮತ್ತೆ ತೀವ್ರ ಜ್ವರ ಬಂತು. ಪರೀಕ್ಷೆ ಮಾಡಿದಾಗ ವೈದ್ಯರು ಪತ್ತೆ ಹಚ್ಚಿದ್ದು ಪೋಲಿಯೋ ಎಂಬ ಮಹಾ ಕಾಯಿಲೆ! ಆಗಿನ ಕಾಲದಲ್ಲಿ ಭಯ ಹುಟ್ಟಿಸುವ ಕಾಯಿಲೆ ಅದು!

ಅವಳ ವಯಸ್ಸಿನ ಬೇರೆ ಮಕ್ಕಳು ಶಾಲೆಗೆ ಹೋಗಲು ಆರಂಭ ಮಾಡಿದ್ದರು. ಆದರೆ ವಿಲ್ಮಾ ನೆಲದಲ್ಲಿ ತೆವಳುತಿದ್ದಳು. ವಾಶ್ ರೂಮಿಗೆ ಅವಳನ್ನು ಅಮ್ಮ ಹೊತ್ತುಕೊಂಡು ಹೋಗಬೇಕಾದ ಅನಿವಾರ್ಯತೆ ಇತ್ತು. ಅವರಿದ್ದ ನಗರದಲ್ಲಿ ಆಗ ಕಪ್ಪು ವರ್ಣದವರಿಗೆ ಆಸ್ಪತ್ರೆಗಳಿಗೆ ಪ್ರವೇಶ ಇರಲಿಲ್ಲ. ಎಲ್ಲವೂ ಬಿಳಿ ಚರ್ಮದವರಿಗೆ ಮೀಸಲು. ಆದ್ದರಿಂದ ಅವಳ ಚಿಕಿತ್ಸೆಗೆ ಅಮ್ಮ ಅವಳನ್ನು 50 ಮೈಲು ದೂರದ ನಗರಕ್ಕೆ ಹೋಗಿ ಬರಬೇಕಾಯಿತು. ಅದೂ ಸತತ ಎರಡು ವರ್ಷ! ಏಳು ವರ್ಷದ ಮಗಳನ್ನು ಆ ಮಹಾತಾಯಿಯು ಸೊಂಟದ ಮೇಲೆ ಕೂರಿಸಿ ಆಸ್ಪತ್ರೆಯ ವಾರ್ಡಗಳಿಗೆ ಎಡತಾಕುವುದನ್ನು ನೋಡಿದವರಿಗೆ ‘ಅಯ್ಯೋ ಪಾಪ’ ಅನ್ನಿಸುತಿತ್ತು.

ʼಅಮ್ಮಾ, ನನ್ನ ಮಂಚವನ್ನು ಕಿಟಕಿಯ ಪಕ್ಕ ಸರಿಸು’

‘ಹೊರಗೆ ಮಕ್ಕಳು ಆಡುವುದನ್ನು ನಾನು ನೋಡಬೇಕು ಅಮ್ಮಾ ‘ ಎಂದು ಹೇಳಿದಾಗ ಪ್ರೀತಿಯ ಅಮ್ಮ ಹಾಗೆ ಮಾಡಿದ್ದರು. ಈ ಹುಡುಗಿ ಕಿಟಕಿಯಿಂದ ಹೊರಗೆ ಮೈದಾನದಲ್ಲಿ ಮಕ್ಕಳು ಆಡುವುದನ್ನು, ಓಡುವುದನ್ನು ನೋಡುತ್ತಾ ಸಂಭ್ರಮಿಸುವುದು, ಖುಷಿ ಪಡುವುದನ್ನು ನೋಡುತ್ತಾ ಅಮ್ಮನ ಮುಖದಲ್ಲಿ ಅಪರೂಪದ ನಗುವಿನ ಗೆರೆಯು ಚಿಮ್ಮುತ್ತಿತ್ತು! ಮನೆಯ ಒಳಗೆ ಗೋಡೆ ಹಿಡಿದುಕೊಂಡು ನಡೆಯಲು ಮೊದಲು ಪ್ರಯತ್ನ ನಡೆಯಿತು. ಅದರೊಂದಿಗೆ ಹಲವು ತಿಂಗಳು ಆರ್ಥೋಪೆಡಿಕ್ ಚಿಕಿತ್ಸೆಗಳು ನಡೆದವು. ಮುಂದೆ ದೀರ್ಘ ಕಾಲ ಫಿಸಿಯೋ ತೆರೆಪಿ ನಡೆದು ಬಲಗಾಲಿನ ಶಕ್ತಿಯು ಮರಳಿತು. ಆದರೆ ಎಡಗಾಲಿನ ಶಕ್ತಿ ಇನ್ನೂ ಕುಂಠಿತವಾಗಿತ್ತು. ಇನ್ನೊಂದು ದೊಡ್ಡ ಸಮಸ್ಯೆ ಎಂದರೆ ಅವಳ ಪಾದಗಳು ಅಸಮ ಆಗಿದ್ದವು. ಅವಳ ಸೈಜಿನ ಶೂಗಳು ಎಲ್ಲಿಯೂ ಸಿಗುತ್ತಿರಲಿಲ್ಲ.

ಈ ಸಮಸ್ಯೆಗಳ ನಡುವೆ ಅಮ್ಮನಿಗೆ ಮಗಳ ಶಾಲೆಯ ಚಿಂತೆ. ಅವಳು ಏಳು ವರ್ಷ ಪ್ರಾಯದಲ್ಲಿ ನೇರವಾಗಿ ಎರಡನೇ ತರಗತಿಗೆ ಸೇರ್ಪಡೆ ಆದವಳು. ಎಡಗಾಲನ್ನು ಕೊಂಚ ಎಳೆದುಕೊಂಡು ನಡೆಯುವ ರೀತಿಯನ್ನು ನೋಡಿ ಅವಳ ಓರಗೆಯ ಮಕ್ಕಳಿಗೆ ಒಂಥರಾ ತಮಾಷೆ ಅನ್ನಿಸುತ್ತಿತ್ತು. ಅವರು ಅಣಕು, ಕೀಟಲೆ ಮಾಡಿ ಅವಳ ಕಣ್ಣಲ್ಲಿ ನೀರು ತರಿಸುತ್ತಿದ್ದರು.

ಇದರಿಂದ ನೊಂದುಕೊಂಡ ವಿಲ್ಮಾ ತರಗತಿಗಳಿಗೆ ಚಕ್ಕರ್ ಹೊಡೆದು ಮೈದಾನದಲ್ಲಿ ಹೆಚ್ಚು ಹೊತ್ತನ್ನು ಕಳೆಯುವುದನ್ನು ಅಭ್ಯಾಸ ಮಾಡಿದಳು.ಅದೇ ರೀತಿ ಎಡಗಾಲಿಗೆ ಆಧಾರವನ್ನು ಕೊಡುವ ‘ಲೆಗ್ ಬ್ರೇಸ್’ ಹಾಕಿ ವೇಗವಾಗಿ ನಡೆಯಲು ಆರಂಭ ಮಾಡಿದಳು. ಅವಳ ಒಳಗೆ ಅದಮ್ಯವಾದ ಒಂದು ಚೈತನ್ಯ ಇರುವುದನ್ನು ಒಬ್ಬ ಕೋಚ್ ದಿನವೂ ನೋಡುತ್ತಿದ್ದರು. ಅವರ ಹೆಸರು ಎಡ್ ಟೆಂಪಲ್.

ಕ್ರೀಡಾ ತರಬೇತಿ ಆರಂಭವಾಯಿತು

ಅವಳಿಗೆ ದೇವರು ಅದ್ಭುತ ಎತ್ತರವನ್ನು ಕೊಟ್ಟಿದ್ದರು (5 ಅಡಿ 11 ಇಂಚು). ಪ್ರೌಢಶಾಲೆಯ ಹಂತಕ್ಕೆ ಬಂದಾಗ ಎಡಗಾಲಿನ ಶಕ್ತಿ ಮರಳಿತ್ತು. ನಡೆಯುವಾಗ ಒಂದು ಸಣ್ಣ ಜರ್ಕ್ ಬಿಟ್ಟರೆ ಬೇರೆ ಯಾವುದೇ ವ್ಯತ್ಯಾಸವು ಕಾಣುತ್ತಿರಲಿಲ್ಲ. ಮೊದಲ ಬಾರಿಗೆ ಪ್ರತಿಷ್ಠಿತ ಕಾಲೇಜಿನ ಬಾಸ್ಕೆಟ್ಬಾಲ್ ಟೀಮಿಗೆ ಅವಳು ಆಯ್ಕೆಯಾದಾಗ ಕುಣಿದು ಸಂಭ್ರಮ ಪಟ್ಟಿದ್ದಳು. ಬಾಸ್ಕೆಟ್ಬಾಲ್ ಕೋರ್ಟಲ್ಲಿ ಅವಳು ಮಿಂಚಿನಂತೆ ಓಡುವುದನ್ನು ನೋಡಿದ ಕೋಚ್ ಅವಳನ್ನು ಅಥ್ಲೆಟಿಕ್ಸ್ ತಂಡಕ್ಕೆ ಸೇರಿಸಿ ಕೋಚಿಂಗ್ ಆರಂಭಿಸಿದರು. ಎಡ್ ಟೆಂಪಲ್ ಎಂಬ ಆ ಕೋಚ್ ಅವಳಲ್ಲಿ ಇದ್ದ ಅದ್ಭುತವಾದ ಕ್ರೀಡಾಪ್ರತಿಭೆಯನ್ನು ಪುಟವಿಟ್ಟ ಚಿನ್ನದಂತೆ ಹೊರತಂದರು. ಅವಳು ಮೊದಲ ಬಾರಿಗೆ ಭಾಗವಹಿಸಿದ ಓಪನ್ ಕ್ರೀಡಾಕೂಟದಲ್ಲಿ ಎಲ್ಲಾ ಒಂಬತ್ತು ಸ್ಪರ್ದೆಗಳಲ್ಲಿ ಕೂಡ ಚಿನ್ನದ ಪದಕವನ್ನು ಗೆದ್ದಿದ್ದಳು. ಅವಳ ಒಳಗೆ ಎಂದಿಗೂ ದಣಿಯದ, ಸೋಲನ್ನು ಸುಲಭವಾಗಿ ಒಪ್ಪಿಕೊಳ್ಳದ, ಬಿದ್ದಲ್ಲಿಂದ ಪುಟಿದು ಮತ್ತೆ ಎದ್ದುಬರುವ ಚೈತನ್ಯ ಶಕ್ತಿ ಇತ್ತು!

1956ರ ಮೆಲ್ಬೋರ್ನ್ ಒಲಿಂಪಿಕ್ಸ್ ಕಣದಲ್ಲಿ ಅವಳು!

ಅಲ್ಲಿ ವಿಲ್ಮಾ ರುಡಾಲ್ಫ್ ಅಮೇರಿಕಾವನ್ನು ಪ್ರತಿನಿಧಿಸಿ ರಿಲೇ ಓಟದಲ್ಲಿ ಒಂದು ಕಂಚಿನ ಪದಕ ಮಾತ್ರ ಗೆದ್ದಳು. ಆಗ ಅವಳಿಗೆ ಕೇವಲ 16 ವರ್ಷ! ಮತ್ತೆ ಸ್ಪಷ್ಟ ಗುರಿಯೊಂದಿಗೆ ನಾಲ್ಕು ವರ್ಷ ಪ್ರಾಕ್ಟೀಸ್ ಮಾಡಿ ಮುಂದಿನ ಒಲಿಂಪಿಕ್ಸ್ ಸ್ಪರ್ಧೆಗೆ ಪ್ರವೇಶ ಪಡೆದಳು. ಅವಳು ಎಲ್ಲ ನೋವುಗಳನ್ನೂ ಮರೆತು, ಬಾಲ್ಯದ ಕಹಿ ನೆನಪುಗಳನ್ನು ಮರೆತು ಟ್ರಾಕನಲ್ಲಿ ಓಡುವಾಗ ಯಾರಿಗಾದರೂ ರೋಮಾಂಚನ ಆಗುತ್ತಿತ್ತು.

1960ರ ರೋಮ್ ಒಲಿಂಪಿಕ್ಸ್ – ವಿಲ್ಮಾ ವಿಶ್ವದಾಖಲೆ ಬರೆದಳು!

ಜಗತ್ತಿನಾದ್ಯಂತ ಟಿವಿಯ ಕವರೇಜ್ ಆಗ ತಾನೆ ಆರಂಭ ಆಗಿತ್ತು. ಆದ್ದರಿಂದ ಸಹಜವಾಗಿ ಒಲಿಂಪಿಕ್ಸ್ ಕ್ರೇಜ್ ಹೆಚ್ಚಿತ್ತು. ಮೈದಾನದಲ್ಲಿ ಕೂಡ 43 ಡಿಗ್ರಿ ಉಷ್ಣತೆ ಇತ್ತು! ಆ ಒಲಿಂಪಿಕ್ಸ್ ಕಣದಲ್ಲಿ ವಿಲ್ಮಾ ರುಡಾಲ್ಫ್ ಬಿರುಗಾಳಿಯ ಹಾಗೆ ಓಡಿದಳು. 100 ಮೀಟರ್ ಚಿನ್ನದ ಪದಕ, ಜಗತ್ತಿನ ಅತ್ಯಂತ ವೇಗದ ಮಹಿಳೆ ಎಂಬ ಕೀರ್ತಿ ಆಕೆಗೆ ಒಲಿಯಿತು! ಟೈಮಿಂಗ್ 11.2 ಸೆಕೆಂಡ್ಸ್! ಅದು ಕೂಡ ವಿಶ್ವದಾಖಲೆಯ ಓಟ! 200 ಮೀಟರ್ ಓಟದಲ್ಲಿ ಮತ್ತೆ ವಿಶ್ವ ದಾಖಲೆಯ ಜೊತೆಗೆ ಚಿನ್ನದ ಪದಕ! ಟೈಮಿಂಗ್ 22.9 ಸೆಕೆಂಡ್ಸ್! ಮತ್ತೆ 4X100 ಮೀಟರ್ ರಿಲೇ ಓಟದಲ್ಲಿ ಚಿನ್ನದ ಪದಕ! ಹೀಗೆ ಮೂರು ಚಿನ್ನದ ಪದಕ ಒಂದೇ ಕೂಟದಲ್ಲಿ ಪಡೆದ ವಿಶ್ವದ ಮೊದಲ ಮಹಿಳಾ ಅತ್ಲೇಟ್ ಎಂಬ ಕೀರ್ತಿಯು ಅವಳಿಗೆ ದೊರೆಯಿತು!

ವಿಲ್ಮಾ ರುಡಾಲ್ಫ್ ಸ್ಥಾಪಿಸಿದ ಎರಡು ವಿಶ್ವ ಮಟ್ಟದ ದಾಖಲೆಗಳು ಮುಂದೆ ಹಲವು ವರ್ಷಗಳ ಕಾಲ ಅಬಾಧಿತವಾಗಿ ಉಳಿದವು. ಆ ಎತ್ತರದ ಸಾಧನೆಯ ನಂತರ ವಿಲ್ಮಾ ವಿಶ್ವಮಟ್ಟದ ಹಲವು ಕೂಟಗಳಲ್ಲಿ ನಿರಂತರವಾಗಿ ಓಡಿದಳು ಮತ್ತು ಓಡಿದ್ದಲ್ಲೆಲ್ಲ ಪದಕಗಳನ್ನು ಸೂರೆ ಮಾಡಿದಳು.

22ನೆಯ ವರ್ಷಕ್ಕೆ ಕ್ರೀಡಾ ನಿವೃತ್ತಿ

ತನ್ನ 22ನೆಯ ವರ್ಷದಲ್ಲಿ ಕೀರ್ತಿಯ ಶಿಖರದಲ್ಲಿ ಇರುವಾಗಲೇ ವಿಲ್ಮಾ ಕ್ರೀಡೆಗೆ ವಿದಾಯ ಕೋರಿದಳು ! 1964ರ ಟೋಕಿಯೋ ಒಲಿಂಪಿಕ್ಸನಲ್ಲಿ ಭಾಗವಹಿಸುವ ಅವಕಾಶ ಇದ್ದರೂ ಕೂಡ ಸ್ಪರ್ಧೆ ಮಾಡಲೇ ಇಲ್ಲ.

ಭರತ ವಾಕ್ಯ

ತನ್ನ ಬಾಲ್ಯದಲ್ಲಿ ಪೋಲಿಯೋ ಎಂಬ ಮಹಾಮಾರಿಗೆ ಸಂತ್ರಸ್ತಳಾದ, ಕಪ್ಪು ಚರ್ಮ ಎಂಬ ಕಾರಣಕ್ಕೆ ಅಪಮಾನ ಮತ್ತು ತಿರಸ್ಕಾರಕ್ಕೆ ಒಳಗಾದ ವಿಲ್ಮಾ ತನ್ನ ಕ್ರೀಡಾಸಾಧನೆಗಳ ಮೂಲಕ ಇತಿಹಾಸವನ್ನೇ ಬರೆದಳು! ಮುಂದೆ ಅವಳನ್ನು ‘ಶತಮಾನದ ಕ್ರೀಡಾಪಟು’ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಗೌರವಿಸಿತು. ಅವಳ ಆತ್ಮಚರಿತ್ರೆಯಾದ ‘ Wilma – The Story of Wilma Rudolph’ ಲಕ್ಷಾಂತರ ಮಂದಿಗೆ ಪ್ರೇರಣೆಯನ್ನು ಕೊಟ್ಟಿತು. ಅವಳ ಸಾಧನೆಗಳ ಬಗ್ಗೆ 21 ಪ್ರಸಿದ್ಧ ಲೇಖಕರು ಪುಸ್ತಕಗಳನ್ನು ಬರೆದಿದ್ದಾರೆ. ಅವಳ ಬದುಕಿನ ಕಥೆ ಅಮೆರಿಕ ಮತ್ತು ಇತರ ದೇಶಗಳ ಕಾಲೇಜಿನ ಪಠ್ಯಪುಸ್ತಕಗಳಲ್ಲಿ ಸ್ಥಾನ ಪಡೆಯಿತು!

ಈಗ ಹೇಳಿ ವಿಲ್ಮಾ ಗ್ರೇಟ್ ಹೌದಾ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಜಗತ್ತಿನ ಯಾರ ಪ್ರೀತಿಯೂ ಇವರ ಪ್ರೀತಿಗೆ ಸಮನಲ್ಲ!

Continue Reading

ದೇಶ

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

Kupwara Encounter: ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಆಗ ಭಾರತದ ಯೋಧರು ಗುಂಡಿನ ದಾಳಿ ಮೂಲಕ ಈತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Kupwara Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರ ಚಟುವಟಿಕೆಗಳು ಹೆಜ್ಜಾಗಿದ್ದು, ಸೈನಿಕರು ಹಾಗೂ ವಲಸಿಗ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಜಾಸ್ತಿಯಾಗಿವೆ. ಭಾರತೀಯ ಸೇನೆಯೂ ಉಗ್ರರನ್ನು ಮಟ್ಟ ಹಾಕಲು ಸತತ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಭಾರತೀಯ ಸೇನೆಯು (Indian Army) ಭಾರಿ ಮುನ್ನಡೆ ಸಾಧಿಸಿದೆ. ಮುಂಬೈ ದಾಳಿ ರೂವಾರಿ, ಜಾಗತಿಕ ಉಗ್ರ ಹಫೀಜ್‌ ಸಯೀದ್‌ ಆಪ್ತನನ್ನು ಭಾರತದ ಯೋಧರು ಕುಪ್ವಾರದಲ್ಲಿ (Kupwara Encounter) ಹೊಡೆದುರುಳಿಸಿದ್ದಾರೆ.

ಹೌದು, ಕುಪ್ವಾರದಲ್ಲಿ ಹಫೀಜ್‌ ಸಯೀದ್‌ ಆಪ್ತ, ಪಾಕಿಸ್ತಾನದ ಸೇನೆಯ ಸ್ಪೆಷಲ್‌ ಸರ್ವಿಸ್‌ ಗ್ರೂಪ್‌ (SSG) ಕಮಾಂಡೋ ಕೂಡ ಆಗಿರುವ ನೊಮಾನ್‌ ಜಿಯಾವುಲ್ಲಾನನ್ನು ಭಾರತದ ಯೋಧರು ಹತ್ಯೆಗೈದಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶದ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ನೊಮಾನ್‌ ಜಿಯಾವುಲ್ಲಾ ಪ್ರಯತ್ನಿಸುತ್ತಿದ್ದ. ಇದರ ಕುರಿತು ನಿಖರ ಮಾಹಿತಿ ಪಡೆದ ಭಾರತದ ಯೋಧರು, ನೊಮಾನ್‌ ಜಿಯಾವುಲ್ಲಾನನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜುಲೈ 27ರಂದೇ ನೊಮಾನ್‌ ಜಿಯಾವುಲ್ಲಾ ಭಾರತದೊಳಗೆ ಅಕ್ರಮವಾಗಿ ನುಸುಳಲು ಪ್ರಯತ್ನಿಸಿದ್ದ. ಅದೇ ದಿನ ಸೈನಿಕರು ಹತ್ಯೆ ಮಾಡಿದ್ದಾರೆ. ನೊಮಾನ್‌ ಜಿಯಾವುಲ್ಲಾನು ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳು ಧರಿಸುವ ಜಾಕೆಟ್‌ಗಳನ್ನು ಧರಿಸಿ ತೆಗೆಸಿಕೊಂಡ ಫೋಟೊಗಳು ಈಗ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಈತನು ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವುದಲ್ಲದೆ, ಎಸ್‌ಎಸ್‌ಜಿ ಕಮಾಂಡೋ ಕೂಡ ಆಗಿದ್ದ ಎಂದು ತಿಳಿದುಬಂದಿದೆ. ಈತನ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ನ 600 ಕಮಾಂಡೋಗಳ ಪ್ರವೇಶ?

ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದರು. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದರು. ಇದರ ಬೆನ್ನಲ್ಲೇ ಕಣಿವೆಯಲ್ಲಿ ಪಾಕ್‌ ಕಮಾಂಡೋನನ್ನು ಹೊಡೆದುರುಳಿಸಿರುವುದು ಹಲವು ಅನುಮಾನ ಮೂಡಲು ಕಾರಣವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

Continue Reading

ಸಿನಿಮಾ

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Movies on Israel: ಯುದ್ಧದ ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷದಿಂದ (Israel-Palestine Conflict) ಆಗುತ್ತಿರುವ ಪ್ರಮುಖ ಸಮಸ್ಯೆಗಳು ಮತ್ತು ಸಂಘರ್ಷದ ಮಧ್ಯೆ ವಾಸಿಸುವ ಜನರ ಬದುಕನ್ನು ತೆರೆದಿಟ್ಟಿದೆ. ತಮ್ಮ ದೇಶದ ಮೇಲೆ, ತಮ್ಮ ಜನರ ಮೇಲೆ ದಾಳಿ ಮಾಡುವ ಪ್ಯಾಲೇಸ್ತಿನ್‌ ಉಗ್ರರ ಮೇಲೆ ಇಸ್ರೇಲ್‌ ಬೇಹುಗಾರಿಕೆ ಪಡೆ ಪ್ರತಿದಾಳಿ ನಡೆಸುವ, ಅವರನ್ನು ಹುಡುಕಿ ಹುಡುಕಿ ನಾಶಪಡಿಸುವ ದೃಶ್ಯಗಳು ರೋಚಕವಾಗಿವೆ.

VISTARANEWS.COM


on

By

Movies on Israel
Koo

ಇಸ್ರೇಲ್-ಪ್ಯಾಲೇಸ್ತಿನ್‌ ಸಂಘರ್ಷ (Israel-Palestine Conflict) ಕೆಲವು ತಿಂಗಳುಗಳಿಂದ (Movies on Israel) ಉಲ್ಬಣಗೊಂಡಿದೆ. ಇದರಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ವಸತಿ ಕಳೆದುಕೊಂಡು ಬೇರೆ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಯುದ್ಧದ (war) ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು (film) ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಯುದ್ಧದ ಚಿತ್ರಣವನ್ನು ಮನಮುಟ್ಟುವಂತೆ ಕಟ್ಟಿ ಕೊಟ್ಟಿದೆ.

ಮ್ಯೂನಿಚ್

2005ರ ಈ ಚಲನಚಿತ್ರವು ಪಶ್ಚಿಮ ಜರ್ಮನಿಯ ಮ್ಯೂನಿಚ್‌ನಲ್ಲಿ 1972ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 11 ಇಸ್ರೇಲ್ ಕ್ರೀಡಾಪಟುಗಳು ಮತ್ತು ಅಧಿಕಾರಿಗಳ ಅಪಹರಣ-ಹತ್ಯೆಯನ್ನು ಆಧರಿಸಿದೆ.


ಹೆಸರಾಂತ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ನಿರ್ದೇಶನದ ಈ ಚಲನಚಿತ್ರವು ‘ಬ್ಲ್ಯಾಕ್ ಸೆಪ್ಟೆಂಬರ್’ ಎಂಬ ಪ್ಯಾಲೆಸ್ತೀನಿಯನ್ ಭಯೋತ್ಪಾದಕ ಸಂಘಟನೆ ನಡೆಸಿದ ಭೀಕರ ಹತ್ಯೆಯ ಅನಂತರದ ಪರಿಣಾಮಗಳನ್ನು ಬಿಂಬಿಸಿದೆ. ಸೇಡಿನ ಕಥೆಯನ್ನು ಆಧರಿಸಿರುವ ಈ ಚಿತ್ರವು ಮುಯ್ಯಿಗೆ ಮುಯ್ಯಿ ಎಂಬಂತೆ ‘ಕಣ್ಣಿಗೆ ಕಣ್ಣು’ ಎಂಬುದನ್ನು ಉಲ್ಲೇಖಿಸುತ್ತದೆ. ತನ್ನ ದೇಶದ ಕ್ರೀಡಾಪಟುಗಳ ಬರ್ಬರ ಹತ್ಯೆ ನಡೆಸಿದ ಉಗ್ರರನ್ನು ಇಸ್ರೇಲ್‌ ಬೇಹುಗಾರಿಕೆ ಪಡೆ ಹುಡುಕಿ ಹುಡುಕಿ ಕೊಲ್ಲುವ ಸನ್ನಿವೇಶಗಳು ರೋಮಾಂಚನಗೊಳಿಸುತ್ತವೆ.

ರೈಡ್ ಆನ್ ಎಂಟೆಬ್ಬೆ

1977ರ ಈ ಚಲನಚಿತ್ರವು ʼಆಪರೇಷನ್ ಎಂಟೆಬ್ಬೆʼ ಮೇಲೆ ಆಧರಿತವಾಗಿದೆ. ನಾಲ್ವರು ಪ್ಯಾಲೇಸ್ತಿನಿಯನ್‌ ಭಯೋತ್ಪಾದಕರು ಹಲವಾರು ಇಸ್ರೇಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಫ್ರಾನ್ಸ್ ಏರ್‌ಬಸ್ ಎ300 ಅನ್ನು ಹೈಜಾಕ್ ಮಾಡಿದ ಅನಂತರ ಇಸ್ರೇಲ್ ಸರ್ಕಾರವು ಯೋಜಿಸಿದ ರಕ್ಷಣಾ ಕಾರ್ಯಾಚರಣೆ ಇದಾಗಿದೆ.


ಚಿತ್ರವು ಉಗಾಂಡಾದ ಎಂಟೆಬ್ಬೆ ವಿಮಾನ ನಿಲ್ದಾಣದಿಂದ ಡೇರ್‌ಡೆವಿಲ್ ರಕ್ಷಣಾ ಕಾರ್ಯಾಚರಣೆಗಳ ಮೇಲೆ ಕೇಂದ್ರೀಕರಿಸುತ್ತದೆ. ‘ಆಪರೇಷನ್ ಥಂಡರ್ಬೋಲ್ಟ್’ ಶೀರ್ಷಿಕೆಯ ಕಾರ್ಯಾಚರಣೆಯು ಅತ್ಯಂತ ಕಷ್ಟಕರವಾಗಿತ್ತು. ಯಾಕೆಂದರೆ ಭಯೋತ್ಪಾದಕರು ಉಗಾಂಡಾದ ಅಧ್ಯಕ್ಷ ಇದಿ ಅಬಿನ್ ಅವರ ಬೆಂಬಲವನ್ನು ಹೊಂದಿದ್ದರು. ಆದರೂ ಇಸ್ರೇಲ್‌ ಯೋಧರು ಭಾರಿ ಸಾಹಸದಿಂದ ಮೇಲುಗೈ ಸಾಧಿಸಿದರು. ಈ ಚಿತ್ರವು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದಿದೆ.

ಅಜಾಮಿ

ಈ ಚಲನಚಿತ್ರದ ಕತೆಯನ್ನು ಪ್ಯಾಲೇಸ್ತಿನಿಯನ್ ಸ್ಕ್ಯಾಂಡರ್ ಕಾಪ್ಟಿ ಮತ್ತು ಇಸ್ರೇಲ್ ಯಹೂದಿ ಯಾರೋನ್ ಶಾನಿ ಬರೆದಿದ್ದಾರೆ. ಇದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಜೀವನದ ಸುತ್ತ ಸುತ್ತುತ್ತದೆ.


ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಜಾಫಾ ಚಿತ್ರದ ಕೇಂದ್ರ ಬಿಂದು. ಇಲ್ಲಿ ಹಲವಾರು ಪಾತ್ರಗಳಿವೆ. ಅವರೆಲ್ಲರೂ ಬಡವರು ಮತ್ತು ಸಾಕಷ್ಟು ಸಂಘರ್ಷವನ್ನು ಎದುರಿಸುತ್ತಾರೆ. ಇಸ್ರೇಲ್ – ಅರಬ್ ಜಗತ್ತಿನಲ್ಲಿ ಜೀವನದ ಸಂಪೂರ್ಣ ವಾಸ್ತವ, ಹಿಂಸೆ, ಪ್ರೀತಿ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಈ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಪ್ಯಾರಡೈಸ್ ನೌ

ಈ ಚಿತ್ರವು ಟೆಲ್ ಅವೀವ್‌ನ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಬಾಂಬ್‌ಗಳನ್ನು ಸ್ಫೋಟಿಸುವ ಕಾರ್ಯವನ್ನು ವಹಿಸಿಕೊಂಡಿರುವ ಇಬ್ಬರು ಪ್ಯಾಲೇಸ್ತಿನಿಯನ್ ಆತ್ಮಹತ್ಯಾ ಬಾಂಬರ್‌ಗಳನ್ನು ಆಧರಿಸಿದೆ. ಮದುವೆಯಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಇಬ್ಬರು ಇಸ್ರೇಲ್ ಪ್ರಜೆಗಳಂತೆ ವೇಷ ಧರಿಸಿ ಸ್ಫೋಟಕ್ಕೆ ಮುಂದಾಗಿದ್ದರು.


ಇಸ್ರೇಲ್ ಗಡಿ ದಾಟುವಾಗ ನಡೆಯುವ ಘಟನೆಗಳು, ಆತ್ಮಹತ್ಯಾ ಬಾಂಬರ್‌ಗಳಾಗಲು ಕಾರಣವಾಗುವ ಭಾವನಾತ್ಮಕ ಮತ್ತು ಮಾನಸಿಕ ಅಂಶಗಳನ್ನು ಸೂಕ್ಷ್ಮವಾಗಿ ಸಿನೆಮಾದಲ್ಲಿ ಮನೋಜ್ಞವಾಗಿ ಚಿತ್ರಿಸಲಾಗಿದೆ. ಇದು ಅತ್ಯುತ್ತಮ ವಿದೇಶಿ ಚಿತ್ರ ಎಂಬ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿದೆ.

ಲೆಮನ್ ಟ್ರೀ

ಪ್ಯಾಲೇಸ್ತಿನಿಯನ್ ಮಹಿಳೆಯ ಹೋರಾಟದ ಕಟುವಾದ ಮತ್ತು ಸುಂದರವಾದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇಸ್ರೇಲ್ ಅಧಿಕಾರಿಗಳು ತನ್ನ ನಿಂಬೆ ತೋಟದಲ್ಲಿನ ಮರಗಳನ್ನು ಕಿತ್ತು ಹಾಕುವುದನ್ನು ತಡೆಯುವುದು ಈ ಚಿತ್ರದ ಸಾರ. ಪ್ರಪಂಚದಾದ್ಯಂತದ ವಿವಿಧ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇಸ್ರೇಲಿ ರಕ್ಷಣಾ ಸಚಿವ ಇಸ್ರೇಲ್ ನವೊನ್ ಅವರು ಪ್ಯಾಲೇಸ್ತಿನಿಯನ್ ಮಹಿಳೆ ಸಲ್ಮಾ ಅವರ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದರು.


ಇದನ್ನೂ ಓದಿ: Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

ಸಲ್ಮಾ ಅವರ ನಿಂಬೆ ತೋಟ ಅವರಿಗೆ ರಹಸ್ಯವಾಗಿ ಕಾಣುತ್ತದೆ ಮತ್ತು ಬೆದರಿಕೆಯನ್ನು ಒಡ್ಡಿದಂತೆ ಭಾಸವಾಗುತ್ತದೆ. ಹೀಗಾಗಿ ಅಧಿಕಾರಿಗಳು ಎಲ್ಲಾ ಮರಗಳನ್ನು ಕಿತ್ತುಹಾಕಲು ಯೋಜಿಸುತ್ತಾರೆ. ಆದರೆ ಸಲ್ಮಾ ಮತ್ತು ಅವರ ವಕೀಲರು ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಳ್ಳಲು ನಿರ್ಧರಿಸುತ್ತಾರೆ. ಚಲನಚಿತ್ರವು ವಿವಿಧ ವಿಷಯಗಳ ಮೇಲೆ ನೆಲೆಸಿದೆ. ಮಾನವ ಸಹಾನುಭೂತಿ ಮತ್ತು ಭಾವನೆಯ ಮೇಲೂ ಬೆಳಕು ಚೆಲ್ಲಿದೆ.

Continue Reading
Advertisement
Model Monsoon Fashion
ಲೈಫ್‌ಸ್ಟೈಲ್17 mins ago

Model Monsoon Fashion: ಮಾನ್ಸೂನ್‌ ಫ್ಯಾಷನ್‌ನಲ್ಲಿ ಮಾಡೆಲ್‌ ಸನ್ನಿಧಿಯ ಸಿಂಪಲ್‌ ಲುಕ್ಸ್!

Ismail Haniyeh Killing
ವಿದೇಶ26 mins ago

Ismail Haniyh Killing: ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ನಡೆದಿತ್ತಾ ಮಾಸ್ಟರ್‌ ಪ್ಲ್ಯಾನ್? ತಿಂಗಳ ಹಿಂದೆಯೇ ಗೆಸ್ಟ್‌ಹೌಸ್‌ನಲ್ಲಿ‌ ಇಡಲಾಗಿತ್ತಾ ಬಾಂಬ್‌?

Paris Olympics
ಕ್ರೀಡೆ30 mins ago

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

BBMP Property Tax
ಪ್ರಮುಖ ಸುದ್ದಿ1 hour ago

BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

Love Case
ಬಳ್ಳಾರಿ2 hours ago

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

thawar chand gehlot siddaramaiah Governor versus state
ಪ್ರಮುಖ ಸುದ್ದಿ2 hours ago

Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

Viral Video
Latest2 hours ago

Viral Video: ಥೋ! ಈ ಮುದುಕರಿಗೆ ಈ ವಯಸ್ಸಲ್ಲಿ ಏನೆಲ್ಲ ಚಪಲ ನೋಡಿ! ಹಿಂದೆಂದೂ ಕಂಡಿರದಂಥ ವಿಡಿಯೊ!

Paris Olympics
ಕ್ರೀಡೆ2 hours ago

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

intel layoffs
ವಿದೇಶ2 hours ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest2 hours ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌