Britain Royal Family | ಬ್ರಿಟನ್ ರಾಯಲ್ ಫ್ಯಾಮಿಲಿಯ ಸ್ಟೋರಿಗಳು ಸಖತ್ ಇಂಟರೆಸ್ಟಿಂಗ್‌! - Vistara News

EXPLAINER

Britain Royal Family | ಬ್ರಿಟನ್ ರಾಯಲ್ ಫ್ಯಾಮಿಲಿಯ ಸ್ಟೋರಿಗಳು ಸಖತ್ ಇಂಟರೆಸ್ಟಿಂಗ್‌!

ಬ್ರಿಟನ್ ರಾಯಲ್ ಫ್ಯಾಮಿಲಿ (Britain Royal Family) ಬಗ್ಗೆ ತಿಳಿದುಕೊಂಡಷ್ಟು ಕುತೂಹಲ ಕತೆಗಳು ತೆರೆದುಕೊಳ್ಳುತ್ತವೆ. ಫ್ಯಾಮಿಲಿಯದ್ದೇ ಒಂದು ಇತಿಹಾಸವಾದರೆ, ಸದಸ್ಯರ ಬಗೆಗಿನ ಮಾಹಿತಿಗಳು ರಣರೋಚಕ….

VISTARANEWS.COM


on

Britain Family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ವೀನ್ ಎಲಿಜಬೆತ್ ನಿಧನದ ಬಳಿಕ ಬ್ರಿಟನ್ ರಾಜಮನೆತನ(Britain Royal Family)ವು ಮತ್ತೆ ಸುದ್ದಿಯಲ್ಲಿದೆ. ಪ್ರಾಚೀನ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಬ್ರಿಟನ್‌ನಲ್ಲಿ ಈಗಲೂ ರಾಯಲ್ ಫ್ಯಾಮಿಲಿಗೇ ಅಗ್ರ ಗೌರವ. ಆಧುನಿಕ ರಾಷ್ಟ್ರಗಳಲ್ಲಿ ಜನರೇ ಪ್ರಭುಗಳು. ಬ್ರಿಟನ್‌ ಕೂಡ ಇದಕ್ಕೆ ಹೊರತಾಗಿಲ್ಲ. ಆದರೂ, ಅವರು ತಮ್ಮ ಕಿಂಗ್/ಕ್ವೀನ್, ರಾಯಲ್ ಫ್ಯಾಮಿಲಿ, ಸಂಪ್ರದಾಯಗಳು, ಪದ್ಧತಿಗಳು, ಆಚಾರ-ವಿಚಾರಗಳಿಗೆ ಬಹಳ ಮಹತ್ವ ನೀಡುತ್ತಾರೆ. ಸಕಾರಾತ್ಮಕ ನೆಲೆಯಲ್ಲಿ ರಾಯಲ್ ಫ್ಯಾಮಿಲಿ ಹೇಗೆ ಆದರ್ಶವಾಗಿದೆಯೋ, ರಾಯಲ್ ಫ್ಯಾಮಿಲಿಯ ಸದಸ್ಯರ ಹರಾಕಿರಿಗಳಿಂದ ಅಗೌರವವೂ ಬಂದಿದೆ. ರಾಜ ಮನೆತನದೊಳಗಿನ ಜಗಳಗಳು, ಸಣ್ಣತನ, ಈರ್ಷೆ, ಹೊಟ್ಟೆಕಿಚ್ಚು, ಕೊಲೆ, ಲೈಂಗಿಕ ಸಂಬಂಧಗಳು ಇತ್ಯಾದಿ ವಿಷಯಗಳು ರಾಯಲ್ ಫ್ಯಾಮಿಲಿಯನ್ನು ಸದಾ ಸ್ಪಾಟ್‌ಲೈಟ್‌ನಲ್ಲಿ ಇಟ್ಟಿರುತ್ತವೆ.

ಬ್ರಿಟನ್‌ನಲ್ಲಿ ಜನರೇ ನೇರ ಅಧಿಕಾರದಲ್ಲಿದ್ದರೂ ಬ್ರಿಟನ್ ಕ್ವೀನ್ ಅಥವಾ ಕಿಂಗ್‌ ಕೆಲಸವಾದರೂ ಏನು, ಜವಾಬ್ದಾರಿಗಳೇನು, ರಾಯಲ್ ಫ್ಯಾಮಿಲಿ ಇತಿಹಾಸ, ರಾಜ/ರಾಣಿಯರ ಸಂಬಂಧಗಳು, ಅಫೇರ್ಸ್, ಒಳ ಜಗಳ, ದಾಯಾದಿ ಕಲಹ ಇತ್ಯಾದಿ ಮಾಹಿತಿ ಇಲ್ಲಿದೆ….

ಬ್ರಿಟನ್ ಕಿಂಗ್ ಮಾಡುವುದಾದರೂ ಏನು?
ನಾವು ಆಧುನಿಕ ಜಗತ್ತಿನಲ್ಲಿದ್ದೇವೆ; ಜನರೇ ಆಡಳಿತಗಾರರು; ಅವರೇ ರಾಜರು. ಎಲ್ಲ ದೇಶಗಳಲ್ಲೂ ಇದೇ ನೀತಿ ಇದೆ. ಹಾಗಿದ್ದೂ, ಬ್ರಿಟನ್‌ನಲ್ಲಿ ರಾಜಮನೆತನ ಇನ್ನೂ ಅಧಿಕೃತವಾಗಿದೆ. ರಾಯಲ್ ಫ್ಯಾಮಿಲಿಗೆ ಎಲ್ಲಿಲ್ಲದ ಮರ್ಯಾದೆ. ಅಲ್ಲೂ ಪ್ರಜಾಪ್ರಭುತ್ವವಿದೆ. ಹಾಗಿದ್ದೂ, ರಾಜನಿಗೆ ಏನು ಕೆಲಸ, ರಾಯಲ್ ಫ್ಯಾಮಿಲಿಯಿಂದ ಏನು ಲಾಭ?
ಉತ್ತರ ತುಂಬ ಸಿಂಪಲ್- ರಾಜ ಹೆಸರಿಗಷ್ಟೇ. ರಾಜನಿಗಿರುವ ಎಲ್ಲ ಅಧಿಕಾರ ಸಾಂಕೇತಿಕ. ರಾಜಕೀಯವಾಗಿ ರಾಜ ತಟಸ್ಥ. ಒಂದಿಷ್ಟು ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅರ್ಥಾತ್, ಬ್ರಿಟನ್‌ನಲ್ಲಿ ರಿಯಲ್‌ ಪವರ್ಸ್ ಪ್ರಧಾನಿ ಹಾಗೂ ಆತನ ಮಂತ್ರಿ ಮಂಡಳದಲ್ಲಿದೆ! ಮತ್ತೊಂದು ಅರ್ಥದಲ್ಲಿ ಜನರೇ ರಾಜರು!

ಬ್ರಿಟನ್ ರಾಜಮನೆತನದ ಇತಿಹಾಸ
ಬ್ರಿಟನ್ ರಾಜಮನೆತನಕ್ಕೆ ಸುದೀರ್ಘ ಇತಿಹಾಸವಿದೆ. 9ನೇ ಶತಮಾನದಲ್ಲಿ ಬ್ರಿಟನ್ ರಾಜಮನೆತನ ಇತಿಹಾಸದ ಬೇರುಗಳಿವೆ. ವೆಸ್ಸೆಕ್ಸ್‌ನ ಆಂಗ್ಲೋ-ಸ್ಯಾಕ್ಸೋನ್ ರಾಜ್ಯವೇ ಮುಂದೆ ಇಂಗ್ಲಿಷ್ ರಾಜ್ಯವಾಗಿ ಉದಯವಾಯಿತು. ಈಗಿರುವ ಬ್ರಿಟನ್ ರಾಜಮನೆತನದ ಇತಿಹಾಸವು 1707ರಿಂದ ಆರಂಭವಾಗುತ್ತದೆ. ಈ ರಾಯಲ್ ಫ್ಯಾಮಿಲಿಗೂ ಮೊದಲು ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಪ್ರತ್ಯೇಕ ರಾಜ್ಯಗಳಾಗಿದ್ದವು. ಆ ಬಳಿಕ ಮೂರು ರಾಜ್ಯಗಳು ಜತೆಯಾಗಿ ಬ್ರಿಟನ್ ರಾಜ್ಯವು ಸೃಷ್ಟಿಯಾಯಿತು. ಜತೆಗೇ ರಾಯಲ್ ಫ್ಯಾಮಿಲಿ ಕೂಡ.

ಐದನೇ ರಾಜ ಜಾರ್ಜ್ (1865-1936) ಮತ್ತು ಮೇರಿ ಆಪ್ ಟೆಕ್ ಅವರು ಎರಡನೇ ಎಲಿಜಬೆತ್ ಅವರ ಅಜ್ಜ ಮತ್ತು ಅಜ್ಜಿ. ಇವರಿಗೆ ಆರು ಮಕ್ಕಳು. ಈ ಪೈಕಿ ನಾಲ್ವರಿಗೆ ಮಕ್ಕಳಿದ್ದರೆ, ಇಬ್ಬರಿಗೆ ಇರಲಿಲ್ಲ. ಹಿರಿಯ ಮಗ 8ನೇ ಕಿಂಗ್ ಎಡ್ವರ್ಡ್ 1936ರಲ್ಲಿ ತಂದೆಯ ನಂತರ, ಬ್ರಿಟನ್ ರಾಜನಾದ. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಮೊನ್ನೆ ನಿಧನರಾದ ಎರಡನೇ ಎಲಿಜಬೆತ್ ಅವರ ದೊಡ್ಡಪ್ಪ. ರಾಣಿ ಎಲಿಜಬೆತ್ ಅವರ ಅಪ್ಪ ಆರನೇ ಕಿಂಗ್ ಜಾರ್ಜ್ ಅವರು ಕಿಂಗ್ ಎಡ್ವರ್ಡ್ ಸಹೋದರ.

ವಿಚ್ಛೇದಿತಳಿಗಾಗಿ ಸಿಂಸಾಹನ ತೊರೆದ ಎಡ್ವರ್ಡ್!
ಎಂಟನೇ ಕಿಂಗ್ ಎಡ್ವರ್ಡ್ ಅಮೆರಿಕದ ವಿಚ್ಛೇದಿತ ವಾಲಿಸ್ ಸಿಂಪ್ಸನ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ಹಾಗಾಗಿ, ಅವರು ರಾಯಲ್ ಫ್ಯಾಮಿಲಿ ಕರ್ತವ್ಯಗಳಿಂದ ಮುಕ್ತರಾಗಬೇಕ್ದಾದರಿಂದ, ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವುದ್ಕಕಾಗಿ ಸಿಂಹಾಸನವನ್ನು ತೊರೆದರು.

ಎಲಿಜಬೆತ್ ಅಪ್ಪ ರಾಜನಾದ!
ರಾಜನಾಗಿದ್ದ ತನ್ನ ಪ್ರೀತಿಗಾಗಿ 8ನೇ ಎಡ್ವರ್ಡ್ ಕಿಂಗ್ ಸಿಂಹಾಸನ ತೊರೆದ ಬಳಿಕ, ಅವರ ಸಹೋದರ ಪ್ರಿನ್ಸ್‌ 6ನೇ ಜಾರ್ಜ್ ಬ್ರಿಟನ್ ರಾಜನಾದ. ಮುಂದೆ 15 ವರ್ಷಗಳ ಕಾಲ ಬ್ರಿಟನ್ ರಾಜಮನೆತನದ ಜವಾಬ್ದಾರಿಗಳನ್ನು ನಿರ್ವಹಿಸಿದ. 6ನೇ ಕಿಂಗ್ ಜಾರ್ಜ್ ಮತ್ತು ಪತ್ನಿ ಎಲಿಜಬೆತ್‌ ಅವರಿಗೆ ಇಬ್ಬರು ಹೆಣ್ಣುಮಕ್ಕಳು ಜನಿಸಿದರು. ಆ ಪೈಕಿ ಮೊದಲನೆಯವಳೇ ಎರಡನೇ ಎಲಿಜಬೆತ್(ಮೊನ್ನೆಯಷ್ಟೇ ನಿಧನರಾದರು) ಹಾಗೂ ಅವರ ಸಹೋದರಿ ಮಾರ್ಗರೇಟ್.

2ನೇ ಎಲಿಜಬೆತ್ ರಾಜ್ಯಭಾರ ಶುರು
ರಾಜರಾಗಿದ್ದ 6ನೇ ಕಿಂಗ್ ಜಾರ್ಜ್ ಅವರು 1952ರಲ್ಲಿ ನಿಧನರಾದರು. ಗಂಡುಮಕ್ಕಳು ಇಲ್ಲದ್ದರಿಂದ ಸಹಜವಾಗಿಯೇ ಎರಡನೇ ಎಲಿಜಬೆತ್ ಉತ್ತರಾಧಿಕಾರಿಯಾದರು. ಹೀಗಿದ್ದೂ ಉತ್ತರಾಧಿಕಾರಿಯಾಗುವ ಅನುಮಾನಗಳಿದ್ದವು. ಆದರೆ, ಬ್ರಿಟನ್ ಇತಿಹಾಸದಲ್ಲಿ ಸಹಜ ಉತ್ತರಾಧಿಕಾರಿಯೇ ರಾಜ ಅಥವಾ ರಾಣಿಯಾಗುವುದು ನಡೆದುಕೊಂಡು ಬಂದಿದ್ದರಿಂದ, ಅಂತಿಮವಾಗಿ 2ನೇ ಕ್ವೀನ್ ಎಲಿಜಬೆತ್ 1952 ಫೆಬ್ರವರಿ 6ರಂದು ಬ್ರಿಟನ್ ಸಿಂಹಾಸನವೇರಿದರು. ಎಡಿನ್‌ಬರ್ಗ್ ಡ್ಯೂಕ್ ಪ್ರಿನ್ಸ್ ಫಿಲಿಪ್ ಅವರನ್ನು ವಿವಾಹವಾದರು. ಇವರಿಗೆ ನಾಲ್ವರು ಮಕ್ಕಳು. ಮೂರನೇ ಪ್ರಿನ್ಸ್ ಚಾರ್ಲ್ಸ್(ಹಾಲಿ ಬ್ರಿಟನ್ ರಾಜ), ಪ್ರಿನ್ಸೆಸ್ ರಾಯಲ್ ಆ್ಯನಿ, ಪ್ರಿನ್ಸ್ ಆಂಡ್ರೋ ಮತ್ತು ಪ್ರಿನ್ಸ್ ಎಡ್ವರ್ಡ್.

ಈಗ ಮೂರನೇ ಚಾರ್ಲ್ಸ್ ರಾಜ
ತಮ್ಮ 73ನೇ ವಯಸ್ಸಿನಲ್ಲಿ ರಾಜನಾಗಿದ್ದಾರೆ ಮೂರನೇ ಚಾರ್ಲ್ಸ್. ಅಲ್ಲಿ ತನಕ ಅವರು ಬ್ರಿಟನ್‌ನ ಪ್ರಿನ್ಸ್ ಆಗಿದ್ದರು! ತಾಯಿ ಎರಡನೇ ಎಲಿಜಬೆತ್ ಅವರು ಬ್ರಿಟನ್ ರಾಜಮನೆತನದಲ್ಲಿ ಅತಿ ದೀರ್ಘಕಾಲದ ಆಡಳಿತ ನಡೆಸಿದ ಕೀರ್ತಿ ಪಾತ್ರರಾಗಿದ್ದಾರೆ. ಹಾಗಾಗಿ, ಚಾರ್ಲ್ಸ್ ತಮ್ಮ ಸರದಿಗಾಗಿ ದೀರ್ಘಸಮಯದವರೆಗೆ ಕಾಯಬೇಕಾಯಿತು!

ಮದ್ವೆ ಮುಂಚೆ ಚಾರ್ಲ್ಸ್‌ಗೆ ಅಫೇರ್
ಈಗ ರಾಜನಾಗಿರುವ ಮೂರನೇ ಕಿಂಗ್ ಚಾರ್ಲ್ಸ್ ಬಗ್ಗೆ ನಾನಾ ಕತೆಗಳಿವೆ. ಈ ಯಾರು ಚಾರ್ಲ್ಸ್ ಯಾರು ಎಂದರೆ, ಸುರಸುಂದರಿ ಡಯಾನಾಳ ಗಂಡ. ಮದುವೆ ಮುಂಚೆಯೇ ಚಾರ್ಲ್ಸ್‌, ವಿವಾಹಿತೆ ಕ್ಯಾಮಿಲ್ಲಾ ಪಾರ್ಕರ್ ಜತೆ ಅಫೇರ್ ಇಟ್ಟುಕೊಂಡಿದ್ದರು. ಈ ಬಗ್ಗೆ ತಾಯಿ ಎರಡನೇ ಎಲಿಜಬೆತ್ ಬುದ್ಧಿ ಹೇಳಿದ್ದಳು. ರಾಜಮನೆತನದಲ್ಲಿ ಈ ಬಗ್ಗೆ ಸಾಕಷ್ಟು ಕಿರಿಕಿರಿಯಾಗಿತ್ತು. ಆದರೆ, ಅವರೇನೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. 1981ರಲ್ಲಿ ಡಯಾನಾ ಅವರನ್ನು ಮದುವೆಯಾದರು. ಅಂತಿಮವಾಗಿ ಚಾರ್ಲ್ಸ್ ಮತ್ತು ಡಯಾನಾ 1996ರ ಡೈವೋರ್ಸ್ ಪಡೆದುಕೊಂಡರು. ಇದಾದ ವರ್ಷದಲ್ಲೇ 1997ರಲ್ಲಿ ಪ್ಯಾರಿಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಯಾನಾ ನಿಧನರಾದರು. ಕಾರಿನಲ್ಲಿ ಆಕೆಯ ಗೆಳೆಯ ದೋದಿ ಅಲ್ ಫಯಾದ್ ಕೂಡ ಇದ್ದ. 2005ರಲ್ಲಿ ಚಾರ್ಲ್ಸ್, ಕ್ಯಾಮಿಲ್ಲಾ ಪಾರ್ಕರ್ ಅವರನ್ನು ವಿವಾಹವಾದರು.

ಡಯಾನಳದ್ದೇ ಬೇರೆಯ ಕತೆ
ಈಗ ಬ್ರಿಟನ್‌ ರಾಜನಾಗಿರುವ ಕಿಂಗ್ ಚಾರ್ಲ್ಸ್ ಅವರ ಮೊದಲ ಪತ್ನಿ ಡಯಾನಾ. ಬಹುಶಃ ಬ್ರಿಟನ್ ಕಂಡ ಅತ್ಯಂತ ವರ್ಣ ರಂಜಿತ ಪ್ರಿನ್ಸೆಸ್. ಮದುವೆ, ಅಫೇರ್, ಮಕ್ಕಳು, ಆಕ್ಟಿವಿಸಮ್, ನೇರ ನಿಷ್ಠುರ ನಡೆ ಮತ್ತಿತರ ಕಾರಣಗಳಿಂದಾಗಿ ಡಯಾನ ಜಗತ್ತಿನಾದ್ಯಂತ ಸದಾ ಸುದ್ದಿಯಲ್ಲಿರುತ್ತಿದ್ದರು. ರಾಜಮನೆತನದ ಹೊರಗಿನವರಾದ ಡಯಾನಾ, 1981ರಲ್ಲಿ ಪ್ರಿನ್ಸ್ ಚಾರ್ಲ್ಸ್ ಅವರನ್ನು ವಿವಾಹವಾದರು. ಕ್ವೀನ್ ಎಲೆಜಬೆತ್ ಪರವಾಗಿ ರಾಯಲ್ ಕರ್ತವ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊತ್ತರು. ಸಾಮಾಜಿಕ ಕೆಲಸಗಳಿಂದಾಗಿ ಬಹಳ ಬೇಗ ಸುದ್ದಿಯಾಗತೊಡಗಿದರು. ರಾಜಮನೆತನ ಪಾಲಿಸಿಕೊಂಡ ಬಂದ ಅನೇಕ ಪದ್ಧತಿಗಳನ್ನು ಮುರಿದು ತಮ್ಮದೇ ಆದ ರೀತಿಯಲ್ಲಿ ಮುನ್ನುಗ್ಗುತ್ತಿದ್ದರು. ಆ ಕಾರಣಕ್ಕಾಗಿಯೇ ಅವರು ಎಲ್ಲರ ಅಚ್ಚುಮೆಚ್ಚಿನವರಾದರು. ಆದರೆ, ಡಯಾನಾ ಅವರು ಅನುಸರಿಸುತ್ತಿರುವ ರೀತಿ ನೀತಿ, ರಾಜಮನೆತನಕ್ಕೆ ಹೊಂದಾಣಿಕೆಯಾಗುತ್ತಿರಲಿಲ್ಲ. ದಿನಗಳೆದಂತೆ ಡಯಾನಾ ಮತ್ತು ರಾಯಲ್ ಫ್ಯಾಮಿಲಿಯ ನಡುವಿನ ಕಂದಕ ಹೆಚ್ಚುತ್ತಲೇ ಹೋಯಿತು.

ಚಾರ್ಲ್ಸ್ ಮತ್ತು ಡಯಾನಾ ದಂಪತಿಗೆ ಪ್ರಿನ್ಸ್ ವಿಲಿಯಂ ಮತ್ತು ಹ್ಯಾರಿ ಮಕ್ಕಳು. ಮೂರನೇ ಕಿಂಗ್ ಚಾರ್ಲ್ಸ್ ನಂತರ ಉತ್ತರಾಧಿಕಾರಿಯಾಗಿ ಪ್ರಿನ್ಸ್ ವಿಲಿಯಂ ಅವರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಸಹೋದರ ಪ್ರಿನ್ಸ್ ಹ್ಯಾರಿ, ಹಾಲಿವುಡ್ ನಟಿ ಮೇಘನ್ ಮಾರ್ಕೆಲ್ ಅವರನ್ನು ವಿವಾಹವಾಗಿ ರಾಯಲ್ ಫ್ಯಾಮಿಲಿಯಿಂದ ಹೊರ ಬಂದಿದ್ದಾರೆ.

ರಾಯಲ್ ಫ್ಯಾಮಿಲಿಯ ಮೇಲೆ ಡಯಾನಾ ಅವರ ಪ್ರಭಾವ ಗಾಢವಾಗಿತ್ತು. ಪ್ಯಾರಿಸ್‌ನಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದರು. ಇಡೀ ಜಗತ್ತೇ ಡಯಾನಾ ಸಾವಿಗೆ ಕಂಬನಿಗರೆಯಿತು. ಆಕೆಯ ನಿಧನದ ಬಳಿಕ, ಅಫೇರ್ಸ್ ಮತ್ತಿತರ ವಿಷಯಗಳು ಟ್ಯಾಬ್ಲಾಯ್ಡ್‌ಗಳಿಗೆ ಆಹಾರವಾಯಿತಾದರೂ, ಸಾಮಾಜಿಕ ಕಾರ್ಯಗಳು ತಮ್ಮ ಸ್ನಿಗ್ಧ ಸೌಂದರ್ಯದಿಂದಾಗಿ ಡಯಾನಾ ಇಂದಿಗೂ ಜಗತ್ತಿನ ಕಣ್ಮಣಿ.

ರಾಯಲ್ ಫ್ಯಾಮಿಲಿ ಕ್ರಿಟಿಕ್ ಡಯಾನಾಳ ಮಗ
ಪ್ರಿನ್ಸ್ ವಿಲಿಯಂ ಮತ್ತು ಪ್ರಿನ್ಸ್ ಹ್ಯಾರಿ ಡಯಾನಾಳ ಇಬ್ಬರು ಮಕ್ಕಳು. ಪ್ರಿನ್ಸ್ ವಿಲಿಯಂ, ಮೂರನೇ ಕಿಂಗ್ಸ್ ಚಾರ್ಲ್ಸ್ ನಂತರ ಬ್ರಿಟನ್ ರಾಜನಾಗಲಿದ್ದಾರೆ. ಆದರೆ, ಅವರ ಸಹೋದರ ಪ್ರಿನ್ಸ್ ಹ್ಯಾರಿ ಮಾತ್ರ ಥೇಟ್ ಅವರ ಅಮ್ಮನ ಹಾಗೆ. ಹ್ಯಾರಿ ಮದುವೆಯಾಗಿದ್ದು ರಾಜಮನೆತನದ ಹೊರಗಿನ ಹುಡುಗಿಯನ್ನು. ಹಾಲಿವುಡ್ ನಟಿ ಮೇಘನ್ ಮಾರ್ಕೆಲ್. ಇಬ್ಬರು ಲವ್ ಮಾಡಿ, ಪ್ರೀತಿಸಿ ಮದುವೆಯಾದರು. ಸಹಜವಾಗಿಯೇ ಮೇಘನ್ ರಾಜಮನೆತನದ ರೀತಿ ರಿವಾಜುಗಳಿಗೆ ಹೊಂದಿಕೊಳ್ಳುವುದು ಕಷ್ಟವಾಯಿತು. ರಾಯಲ್ ಫ್ಯಾಮಿಲಿಯೂ ಅಷ್ಟು ಸಲೀಸಾಗಿ ಮೇಘನ್ ಅವರನ್ನು ಬಿಟ್ಟುಕೊಳ್ಳಲಿಲ್ಲ. ಡಯಾನಾ ಎದುರಿಸಿದ ಸ್ಥಿತಿಯನ್ನೇ ಮೇಘನ್ ಕೂಡ ಎದುರಿಸಿದರು. ಮೊದಲೇ ರಾಯಲ್ ಫ್ಯಾಮಿಲಿಯ ಕಾರ್ಯವೈಖರಿ ಬಗ್ಗೆ ತುಸು ಕ್ರಿಟಿಕಲ್ ಆಗಿದ್ದ ಪ್ರಿನ್ಸ್ ಹ್ಯಾರಿ, ಹೆಂಡತಿ ಜತೆಗೂಡಿ ಅಮೆರಿಕದ ಕ್ಯಾಲಿಫೋರ್ನಿಯಾಗೆ ವಲಸೆ ಹೋದರು, ರಾಯಲ್ ಫ್ಯಾಮಿಲಿಯ ಎಲ್ಲ ಕರ್ತವ್ಯ, ಜವಾಬ್ದಾರಿಗಳಿಂದ ಕಳಚಿಕೊಂಡರು.

ಟಾಪ್‌ಲೆಸ್ ಆಗಿದ್ದ ವಿಲಿಯಂ ಪತ್ನಿ
ಪ್ರಿನ್ಸ್ ವಿಲಿಯಂ. ಡಯಾನಾ-ಚಾರ್ಲ್ಸ್ ಅವರ ಹಿರಿಯ ಪುತ್ರ. ಮುಂದಿನ ಉತ್ತರಾಧಿಕಾರಿಯೂ ಹೌದು. 2012ರಲ್ಲಿ ವಿಚಿತ್ರ ಕಾರಣಕ್ಕೆ ವಿಲಿಯಂ ಮತ್ತು ಪತ್ನಿ ಕೇಟ್ ಮಿಡ್ಲಟನ್ ಸುದ್ದಿಯಲ್ಲಿದ್ದರು. ಕೇಟ್ ಮಿಡ್ಲಟನ್ ಅವರ ಟಾಪ್‌ಲೆಸ್ ಫೋಟೊ ಫ್ರೆಂಚ್ ಮ್ಯಾಗ್‌ಜಿನ್‌ನಲ್ಲಿ ಪ್ರಕಟವಾಗಿತ್ತು. ರಾಯಲ್ ಫ್ಯಾಮಿಲಿಗೆ ಇದು ಇರಿಸುಮುರಿಸು ತಂದಿತು. ಪ್ರಿನ್ಸ್ ವಿಲಿಯಂ ಕೆಂಡಾಮಂಡಲವಾದರು. ಮ್ಯಾಗ್‌ಜಿನ್ ವಿರುದ್ಧ ದೂರು ಕೂಡ ದಾಖಲಿಸಲಾಯಿತು.

ಮೈದುನ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಜತೆ ಕೇಟ್ ಮಿಡ್ಲಟನ್ ಅವರ ಸಂಬಂಧಗಳು ಚೆನ್ನಾಗಿಲ್ಲ ಎಂಬ ಗುಸು ಗುಸುಗಳಿದ್ದವು. ಆದರೆ, ಈ ಬಗ್ಗೆ ರಾಯಲ್ ಫ್ಯಾಮಿಲಿಯೇನೂ ಸ್ಪಷ್ಟನೆ ಕೊಡಲು ಹೋಗಲಿಲ್ಲ. ಕೇಟ್ ಮಿಡ್ಲಟನ್ ಚೊಚ್ಚಲು ಬಸುರಿಯಾಗಿದ್ದಾಗ ಅವರನ್ನು ನೋಡಿಕೊಳ್ಳಲು ನರ್ಸ್ ಒಬ್ಬರನ್ನು ನೇಮಿಸಲಾಗಿತ್ತು. ಆಕೆ ಆತ್ಮಹತ್ಯೆ ಮಾಡಿಕೊಂಡಳು. ಆ ಬಗ್ಗೆ ಸಾಕಷ್ಟು ಪುಕಾರುಗಳೆದ್ದವು.

ಬಾಲಕಿ ಮೇಲೆ ಪ್ರಿನ್ಸ್ ಆ್ಯಂಡ್ರೋ ರೇಪ್?
ಕ್ವೀನ್ ಎಲಿಜಬೆತ್ ಅವರ ಎರಡನೇ ಪುತ್ರ ಆ್ಯಂಡ್ರೋ ಅವರಿಂದಾಗಿ ಇಡೀ ರಾಜಮನೆತನವು ತಲೆ ತಗ್ಗಿಸುವಂತಾಯಿತು. ಪ್ರಿನ್ಸ್ ಆ್ಯಂಡ್ರೋ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು 2019ರಲ್ಲಿ ಕೇಳಿ ಬಂತು. ಇದರಿಂದಾಗಿ ಅವರಿಗೆ ನೀಡಲಾಗಿದ್ದ ಡ್ಯೂಕ್ ಆಫ್ ಯಾರ್ಕ್ ಪದವಿಯನ್ನು ಕಿತ್ತುಕೊಳ್ಳಲಾಯಿತು, ಜತೆಗೇ ರಾಯಲ್ ಹೈನೆಸ್ ಬಳಸುವುದನ್ನು ನಿರ್ಬಂಧಿಸಲಾಯಿತು. ಈ ಆರೋಪದಿಂದಾಗಿ ಅವರು ಸಿಂಹಾಸನಕ್ಕೇರುವ ಹಕ್ಕನ್ನು ಕಳೆದುಕೊಂಡರು.

ರಾಜ ಶುದ್ಧಾನುಶುದ್ಧನಾಗರಿಬೇಕು!
ಬ್ರಿಟನ್ ಮಾತ್ರವಲ್ಲ, ಬಹುತೇಕ ಪಶ್ಚಿಮ ರಾಷ್ಟ್ರಗಳು ಮುಕ್ತ ಸಮಾಜ, ಸಂಸ್ಕೃತಿಯನ್ನು ಹೊಂದಿವೆ. ಮದುವೆ, ಸೆಕ್ಸ್‌ಗೆ ಸಂಬಂಧಿಸಿದಂತೆ ಜನರು ಮುಕ್ತ ಮನಸ್ಸು ಹೊಂದಿರುತ್ತಾರೆ. ಆದರೆ, ಅದೇ ತಮ್ಮನ್ನಾಳುವ ರಾಜ ಅಥವಾ ಸರ್ಕಾರದ ಮುಖ್ಯಸ್ಥರು ಮಾತ್ರ ಈ ವಿಷಯದಲ್ಲಿ ಶುದ್ಧ ಚಾರಿತ್ರ್ಯವನ್ನು ಹೊಂದಿರಬೇಕು ಎಂದು ಬಯಸುತ್ತಾರೆ. ಇದಕ್ಕೆ ಬ್ರಿಟನ್ ರಾಜಮನೆತನವೂ ಹೊರತಲ್ಲ. ಸಂಪ್ರದಾಯಗಳು, ಪದ್ಧತಿಗಳ ಅಡಿಯಲ್ಲಿ ರಾಯಲ್ ಫ್ಯಾಮಿಲಿಯ ಸದಸ್ಯರು ಇರಬೇಕಾಗುತ್ತದೆ.

ಸಂಪ್ರದಾಯಬದ್ಧವಾಗಿ ನಡೆದುಕೊಳ್ಳದೇ ಹೋದರೆ ಜನರ ಬಾಯಿಗೆ ಆಹಾರವಾಗಬೇಕಾಗುತ್ತದೆ. ಬಹುಶಃ ಇದಕ್ಕೆ ಡಯಾನಾಗಿಂತಲೂ ದೊಡ್ಡ ಉದಾಹರಣೆ ಮತ್ತೊಬ್ಬರಿಲ್ಲ. ಚೆಂದುಳ್ಳ ಚೆಲುವೆ ಡಯನಾ ತಾನೆಷ್ಟು ಸುಂದರಿಯೋ ಅಷ್ಟೇ ಹೃದಯವಂತಳು ಹೌದು. ರಾಯಲ್ ಫ್ಯಾಮಿಲಿಯ ಪದ್ಧತಿಗಳನ್ನು ಮೀರಿ ಆಕೆ, ಜನರನ್ನು ತಲುಪಲು ಪ್ರಯತ್ನಿಸಿದಳು. ಅದೇ ಅವಳಿಗೆ ಮುಳುವಾಯಿತು. ಆಕೆಯ ಇಷ್ಟ, ಕಷ್ಟಗಳಿಗೆ ಬೆಲೆ ಇರಲಿಲ್ಲ. ಅಂತಿಮವಾಗಿ ಟ್ಯಾಬ್ಲಾಯ್ಡ್ ಪತ್ರಿಕೆಗಳಿಗೆ ಆಕೆಯ ಪ್ರತಿಯೊಂದು ಚಲನ ವಲನವು ಆಹಾರವಾಯಿತು.

ಅದೇ ರೀತಿಯ ಸ್ಥಿತಿಯು ಪ್ರಿನ್ಸ್ ಹ್ಯಾರಿ ಅವರ ಪತ್ನಿ ಮತ್ತು ನಟಿ ಮೇಘನ್ ಕೂಡ ಎದುರಿಸುವಂತಾಯಿತು. ಇವರೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ರಾಯಲ್ ಫ್ಯಾಮಿಲಿಗೆ ಎಂಟ್ರಿ ಕೊಟ್ಟ ಮೇಲೆ ಅಲ್ಲಿನ ರೀತಿ ರಿವಾಜುಗಳಂತೆಯೇ ಎಲ್ಲವನ್ನು ಮಾಡಬೇಕಿತ್ತು. ಅಂತಿಮವಾಗಿ ತನ್ನ ತಾಯಿಗೆ ಬಂದ ಸ್ಥಿತಿ ತನ್ನ ಹೆಂಡತಿಗೂ ಬರಬಾರದು ಎಂದು ನಿರ್ಧರಿಸಿದ ಪ್ರಿನ್ಸ್ ಹ್ಯಾರಿ ಹೆಂಡತಿಯೊಂದಿಗೆ ಲಂಡನ್ ತೊರೆದು ಅಮೆರಿಕಕ್ಕೆ ಹೋಗಿ ನೆಲೆಸಿದರು.

ನೆಕ್ಸ್ಟ್ ಕಿಂಗ್/ಕ್ವೀನ್ ಆಗುವ ಸಾಲಿನಲ್ಲಿ ಯಾರು?
73 ವರ್ಷದ ಮೂರನೇ ಕಿಂಗ್ ಚಾರ್ಲ್ಸ್ ರಾಜನಾಗಿದ್ದಾರೆ. ಅವರ ನಂತರ ಅವರ ಹಿರಿಯ ಪುತ್ರ ಪ್ರಿನ್ಸ್ ವಿಲಿಯಂ ರಾಜನಾಗುತ್ತಾರೆ. ಒಂದೊಮ್ಮೆ ಅವರು ಸಿಂಹಾಸನ ಏರದಿದ್ದರೆ ಅವರ ಮೂವರ ಮಕ್ಕಳ ಪೈಕಿ ಹಿರಿಯ ಮಗ ಪ್ರಿನ್ಸ್ ಜಾರ್ಜ್(9 ವರ್ಷ) ಆಗಬಹುದು. ಮುಂದಿನ ತಲೆಮಾರಿನ ಪಟ್ಟಿಯಲ್ಲಿ ಪ್ರಿನ್ಸೆಸ್ ಷಾರ್ಲೆಟ್(7 ವರ್ಷ), ಪ್ರಿನ್ಸ್ ಲೂಯಿಸ್(4 ವರ್ಷ) ಹಾಗೂ ಪ್ರಿನ್ಸ್ ಹ್ಯಾರಿ ಮತ್ತು ಪ್ರಿನ್ಸೆಸ್ ಮೇಘನ್ ಅವರ ಮಕ್ಕಳಾದ ಆರ್ಚಿ ಹ್ಯಾರಿಸನ್ ಮೌಂಟ್‌ಬ್ಯಾಟನ್ (3 ವರ್ಷ) ಮತ್ತು ಲಿಲೆಬೆಟ್ ‘ಲಿಲ್’ ಡಯಾನಾ(1 ವರ್ಷ) ಇದ್ದಾರೆ.

ಇದನ್ನೂ ಓದಿ | Queen Elizabeth Death | ಬ್ರಿಟನ್ ರಾಣಿ ಎಲಿಜಬೆತ್ ಬಗ್ಗೆ ತೆರೆಕಂಡ ಸಿನಿಮಾಗಳಿವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Party symbols: ಭಾರತದಲ್ಲಿ ಚುನಾವಣೆ ಆರಂಭದಿಂದಲೂ ವಿವಿಧ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ನೀಡಲಾಗುತ್ತಿದೆ. ಆದರೆ ಈಗ ಇರುವ ಚುನಾವಣೆ ಚಿಹ್ನೆಗಳು ಮೊದಲು ಇರಲಿಲ್ಲ. ಪಕ್ಷ ಹುಟ್ಟಿಕೊಂಡ ಕೆಲವು ವರ್ಷಗಳ ಬಳಿಕ ಬಳಕೆಗೆ ಬಂದವು. ಕೆಲವು ಪಕ್ಷಗಳು ತನ್ನ ಚಿಹ್ನೆಯನ್ನು ಕಳೆದುಕೊಂಡು ಹೊಸ ಗುರುತನ್ನು ಪಡೆದಿದೆ. ಈ ಚಿಹ್ನೆಯ ಮಹತ್ವ ಎಷ್ಟು ಗೊತ್ತೇ? ಈ ಕುರಿತ ಸಂಗ್ರಹಯೋಗ್ಯ ಮಾಹಿತಿ ಇಲ್ಲಿದೆ.

VISTARANEWS.COM


on

By

Party symbols
Koo

ಚುನಾವಣೆ (election) ವೇಳೆ ಎಲ್ಲರ ಗಮನ ಸೆಳೆಯುವುದು ಚುನಾವಣಾ ಚಿಹ್ನೆಗಳು. ಈ ಬಾರಿಯೂ ಲೋಕಸಭಾ ಚುನಾವಣೆ- 2024ರಲ್ಲಿ (loksabha election-2024) ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ನೀಡಿದ್ದ ಚುನಾವಣಾ ಚಿಹ್ನೆಗಳು ಎಲ್ಲರ ಗಮನ ಸೆಳೆದಿತ್ತು. ಚುನಾವಣಾ ಚಿಹ್ನೆಯ (Party symbols) ಬಳಕೆ ಹೊಸದೇನಲ್ಲ 1951ರ ಮೊದಲ ಚುನಾವಣೆಯಿಂದಲೇ ಅಭ್ಯರ್ಥಿಯನ್ನು (candidate) ಗುರುತಿಸಲು ಚುನಾವಣಾ ಚಿಹ್ನೆಗಳನ್ನು ಬಳಸಲಾಗುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಜನರ ಗಮನಸೆಳೆಯುವ ಚುನಾವಣಾ ಚಿಹ್ನೆಗಳು ಒಂದೇ ಹೆಸರಿನ ಅಭ್ಯರ್ಥಿಗಳು ಕಣದಲ್ಲಿ ಇದ್ದರೆ ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ. ಚಿತ್ರಗಳು ಸಾಮಾನ್ಯವಾಗಿ ಎಲ್ಲರಿಗೂ ನೆನಪಿನಲ್ಲಿ ಉಳಿಯುತ್ತದೆ. ದೇಶದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಾಕ್ಷರರ ಪ್ರಮಾಣ ಕಡಿಮೆ ಇತ್ತು. ಹೀಗಾಗಿಯೇ ಚುನಾವಣಾ ಆಯೋಗ ಚಿಹ್ನೆಗಳನ್ನು ಬಳಸಲು ಪ್ರಾರಂಭಿಸಿತ್ತು.

ಅಕ್ಷರಗಳಿಗಿಂತ ಹೆಚ್ಚು ವೇಗವಾಗಿ ಮನ ಮುಟ್ಟುವ ಚುನಾವಣಾ ಚಿಹ್ನೆಗಳು ಮತ್ತು ಅವುಗಳ ಸೃಜನಾತ್ಮಕ ಬಳಕೆಯ ಕುರಿತು ಭಾರತದಲ್ಲಿ ಹಿನ್ನೆಲೆ ಹೇಗಿತ್ತು ಗೊತ್ತೇ ?

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

ಯಾವಾಗ ಆರಂಭ?

1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಸೇರಿ 53 ಪಕ್ಷಗಳ ಅಭ್ಯರ್ಥಿಗಳು ಸುಮಾರು 4,500 ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಅಭ್ಯರ್ಥಿಗಳು ಸ್ಪರ್ಧಿಸಬಹುದಾದ ಪಕ್ಷಗಳಿಗೆ ಚಿಹ್ನೆಗಳನ್ನು ನಿಗದಿಪಡಿಸಿತ್ತು. ಈ ಪ್ರಕ್ರಿಯೆಯು ಚುನಾವಣಾ ಚಿಹ್ನೆಗಳ ಮೀಸಲಾತಿ ಮತ್ತು ಹಂಚಿಕೆ ಆದೇಶ 1968ರಲ್ಲಿ ಹೊರಬಂದು ಇದು ಹೆಚ್ಚು ಸುವ್ಯವಸ್ಥಿತವಾಯಿತು. ಇದರ ಪ್ರಕಾರ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪಕ್ಷಗಳಿಗೆ ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ಮಾಡಲಾಗುತ್ತದೆ. ಇದು ಎರಡು ಅಥವಾ ಹೆಚ್ಚಿನ ಪಕ್ಷಗಳ ವಿಲೀನದ ಸಂದರ್ಭದಲ್ಲಿ ಅಥವಾ ಪಕ್ಷದಲ್ಲಿ ವಿಭಜನೆಯ ಸಂದರ್ಭದಲ್ಲಿ ಅನ್ವಯಿಸಬಹುದಾದ ನಿಯಮಗಳನ್ನೂ ಹೊಂದಿದೆ.

ವಿಲೀನ, ವಿಭಜನೆಯಾದ ಸಂದರ್ಭದಲ್ಲಿ ಕೆಲವು ಚಿಹ್ನೆಗಳು ಹೊಸದಾಗಿ ಬರುತ್ತದೆ, ಇನ್ನು ಕೆಲವು ಅಳಿಸಿ ಹೋಗುತ್ತದೆ. ಪ್ರಸ್ತುತ ಇರುವ ಚಿಹ್ನೆಗಳು ಹುಟ್ಟಿಕೊಳ್ಳುವುದರ ಹಿಂದೆ ಬಹು ದೊಡ್ಡ ಕಥೆಯೇ ಇದೆ.


ಕಾಂಗ್ರೆಸ್ ನ ಕೈ

ಕಾಂಗ್ರೆಸ್ ಪ್ರಾರಂಭದಲ್ಲಿ ಚುನಾವಣಾ ಚಿಹ್ನೆಯಾಗಿ ನೊಗ ಹಿಡಿದ ಎತ್ತುಗಳನ್ನು ಹೊಂದಿತ್ತು. ಜವಾಹರಲಾಲ್ ನೆಹರು, 1969ರಲ್ಲಿ ಇಂದಿರಾ ಗಾಂಧಿ ಅವರೂ ಜೋಡಿ ಎತ್ತಿನ ಚಿಹ್ನೆಯನ್ನು ಹೊಂದಿದ್ದರು. 1969ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಸ್. ನಿಜಲಿಂಗಪ್ಪ ಅವರು ಪಕ್ಷದಿಂದ ಹೊರಹೋದಾಗ ಕಾಂಗ್ರೆಸ್ ವಿಭಜನೆಯಾಯಿತು. ಈ ಸಂದರ್ಭದಲ್ಲಿ ಚುನಾವಣಾ ಚಿನ್ಹೆಯಾಗಿದ್ದ ಜೋಡಿ ಎತ್ತುಗಳ ಬಗ್ಗೆ ವಿವಾದ ಉಂಟಾಯಿತು. ಇಂದಿರಾ ಗಾಂಧಿಯವರ ಬಣಕ್ಕೆ ಹಸು, ಕರು ಚಿಹ್ನೆಯನ್ನು ನೀಡಲಾಯಿತು. ಇದಕ್ಕೂ ಆಕ್ಷೇಪಣೆ ವ್ಯಕ್ತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

ತುರ್ತುಪರಿಸ್ಥಿತಿಯ ಬಳಿಕ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಕೈಯಲ್ಲಿ ಸೋಲು ಅನುಭವಿಸಿದ ಇಂದಿರಾ ಗಾಂಧಿ ಅವರು ಮರಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿದರು. ತಮ್ಮ ಅಧೀನದಲ್ಲಿರುವ ಪಕ್ಷ ನಿಜವಾದ ಕಾಂಗ್ರೆಸ್ ಎಂದು ಹೇಳಿ ಕಾಂಗ್ರೆಸ್ (ಇಂದಿರಾ) ರಚನೆಯನ್ನು ಘೋಷಿಸಿದರು. 1979ರವರೆಗೆ ಇದ್ದ ಹಸುಕರು ಚಿಹ್ನೆಯನ್ನು ಫ್ರೀಜ್ ಮಾಡಲಾಯಿತು. ಚುನಾವಣಾ ಆಯೋಗವು ಹಲವಾರು ಚಿಹ್ನೆಗಳ ನಡುವೆ ಆಯ್ಕೆಯನ್ನು ನೀಡಿತು. ಅದರಲ್ಲಿ ಕಲ್ಲೇಕುಳಂಗರದ ಕೈಪತಿ ದೇವಸ್ಥಾನ ಅಥವಾ ಕೈ ದೇವಸ್ಥಾನದ ಕಥೆಯು ಇಂದಿರಾ ಗಾಂಧಿಯವರಿಗೆ ‘ಕೈ’ ಚಿಹ್ನೆಯನ್ನು ಪಡೆಯಲು ಪ್ರೇರೇಪಿಸಿತು ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷ

1980ರಲ್ಲಿ ಬಿಜೆಪಿ ಜನಸಂಘದಿಂದ ಹುಟ್ಟಿಕೊಂಡಿತ್ತು. 1977ರಲ್ಲಿ ಜನ ಸಂಘವು ಜನತಾ ಪಕ್ಷದೊಂದಿಗೆ ವಿಲೀನಗೊಂಡು ಕೇಂದ್ರ ಸರ್ಕಾರವನ್ನು ರಚಿಸಿತ್ತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಜನಸಂಘದ ಚುನಾವಣಾ ಚಿಹ್ನೆ 1977ರ ತನಕ ಎಣ್ಣೆ ದೀಪವಾಗಿತ್ತು. ಬಳಿಕ ಅದು ನೊಗ ಹಿಡಿದ ರೈತನನ್ನು ತನ್ನ ಚಿಹ್ನೆಯಾಗಿ ಬಳಸಿತ್ತು. 1980ರಲ್ಲಿ ಜನತಾ ಪಕ್ಷ ದಿಂದ ಹೊರಬಂದ ಜನಸಂಘ ನಾಯಕರು ಭಾರತೀಯ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿ ಅದಕ್ಕೆ ಕಮಲದ ಹೂವು ಚುನಾವಣಾ ಚಿಹ್ನೆಯಾಗಿ ಪಡೆದರು.

ಇದಕ್ಕೆ ಸ್ಫೂರ್ತಿಯಾಗಿದ್ದು 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಮುಂಬಯಿಯಲ್ಲಿ ರ್ಯಾಲಿ ನಡೆಸುತ್ತಿದ್ದಾಗ ಕಾಂಗ್ರೆಸ್ ವಿರುದ್ಧ ಮಾತನಾಡುತ್ತ “ಅಂಧೇರಾ ಚಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ” ಎಂದು ಹೇಳಿದ್ದರು. 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷದ ರಚನೆಯ ವೇಳೆ ವಾಜಪೇಯಿಯವರ ಕಮಲದ ಚಿಹ್ನೆಯ ಆಯ್ಕೆಯು ಹೊಸ ಪಕ್ಷದ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಗೆ ಹೊಂದಿಕೆಯಾಯಿತು. ಹೀಗಾಗಿ ಕಮಲ ಬಿಜೆಪಿಯ ಚಿಹ್ನೆಯಾಯಿತು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಪ್ರಾರಂಭದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯು ಕತ್ತಿ (ಕುಡುಗೋಲು) ಸುತ್ತಿಗೆ ನಕ್ಷತ್ರಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಂಡಿತ್ತು. 1964ರ ಬಳಿಕ ಐದು-ಬಿಂದುಗಳ ನಕ್ಷತ್ರವನ್ನು ಸೇರಿಸಲಾಯಿತು. ಬಳಿಕ ವಿಭಜನೆಯಾಗಿ ಸಿಪಿಐ (ಎಂ), ಸಿಪಿಐ (ಎಡ) ಪಕ್ಷಗಳು ಹುಟ್ಟಿಕೊಂಡವು. ಆಂಧ್ರಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳದ ಲ್ಲಿ ಮಾತ್ರ ಸ್ಥಾನಗಳನ್ನು ಪಡೆದಿರುವ ಸಿಪಿಐ ಪಕ್ಷಕ್ಕೆ 1964ರಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಯಿತು. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ (ಮಾರ್ಕ್ಸ್‌ವಾದಿ)ಯ ಚುನಾವಣಾ ಚಿಹ್ನೆ ಕತ್ತಿ ಮತ್ತು ಜೋಳದ ತೆನೆಯಾಗಿತ್ತು.


ಬಹುಜನ ಸಮಾಜ ಪಕ್ಷ

1984ರಲ್ಲಿ ಹುಟ್ಟಿಕೊಂಡ ಬಹುಜನ ಸಮಾಜ ಪಕ್ಷ (BSP) 1988ರ ಅಲಹಾಬಾದ್ ಉಪ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸಿತ್ತು. ಬಿಎಸ್‌ಪಿಯ ಸಂಸ್ಥಾಪಕ ಕಾನ್ಶಿ ರಾಮ್ ಅವರು ಪ್ರಚಾರದ ವೇಳೆ ಆನೆಯ ಮೇಲೆ ನೀಲಿ ಧ್ವಜದ ಚಿಹ್ನೆಯನ್ನು ಬಳಸಿಕೊಂಡರು. ಹಿಂದೂ ಮತ್ತು ಬೌದ್ಧ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ಹೊಂದಿರುವ ‘ಆನೆ’ ಚಿಹ್ನೆಯು ಕಾನ್ಶಿರಾಮ್‌ಗೆ ಹೆಚ್ಚಿನ ಬಲ ತುಂಬಿತ್ತು. ಬಿಎಸ್ಪಿಯ ‘ಆನೆ’ ಭಾರತದಲ್ಲಿ ಕೆಲವು ಪ್ರಾಣಿ ಆಧಾರಿತ ಚುನಾವಣಾ ಚಿಹ್ನೆಗಳಲ್ಲಿ ಒಂದಾಗಿದೆ. ಯಾಕೆಂದರೆ ಚುನಾವಣಾ ಆಯೋಗವು ಈಗ ಹೊಸದಾಗಿ ಪ್ರಾಣಿಗಳ ಚಿಹ್ನೆಗಳನ್ನು ನೀಡುವುದನ್ನು ನಿಲ್ಲಿಸಿದೆ.

ಆಮ್ ಆದ್ಮಿ ಪಕ್ಷ

2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಸಂಘಟನೆ ಇದು. ಅರವಿಂದ್ ಕೇಜ್ರಿವಾಲ್ ಅವರು 2012ರಲ್ಲಿ ಆಮ್ ಆದ್ಮಿ ಪಕ್ಷವನ್ನು ರಚಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರು. ‘ಪೊರಕೆ’ಯ ಇದರ ಚುನಾವಣಾ ಚಿಹ್ನೆಯಾಗಿದೆ. ಚುನಾವಣಾ ಆಯೋಗಕ್ಕೆ ಪಕ್ಷವು ಸಲ್ಲಿಸಿದ ಮೂರು ಚಿಹ್ನೆಗಳಲ್ಲಿ ‘ಮೇಣದಬತ್ತಿ’ ಮತ್ತು ‘ಟ್ಯಾಪ್’ ಕೂಡ ಇತ್ತು.

ಪೊರಕೆಯ ಚಿಹ್ನೆ ಕಾರ್ಮಿಕರ ಘನತೆಗಾಗಿ ಮಾತ್ರವಲ್ಲ, ನಮ್ಮ ಸರ್ಕಾರ ಮತ್ತು ನಮ್ಮ ಶಾಸಕಾಂಗವನ್ನು ವ್ಯಾಪಿಸಿರುವ ಕೊಳೆಯನ್ನು ಸ್ವಚ್ಛಗೊಳಿಸುವ ಪಕ್ಷದ ಆಶಯವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾರೆ ಪಕ್ಷದ ಮುಖಂಡರು.

ನ್ಯಾಷನಲ್ ಪೀಪಲ್ಸ್ ಪಾರ್ಟಿ

ಭಾರತದಲ್ಲಿನ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಅನ್ನು 2013ರಲ್ಲಿ ಸ್ಥಾಪಿಸಲಾಯಿತು. ಅದರ ಸಂಸ್ಥಾಪಕ ಮಾಜಿ ಮೇಘಾಲಯ ಮುಖ್ಯಮಂತ್ರಿ ಪಿ.ಎ. ಸಂಗ್ಮಾ ಅವರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಪುಸ್ತಕವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡ ಅವರು ಸಾಕ್ಷರತೆ ಮತ್ತು ಶಿಕ್ಷಣವು ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಎಂದು ನಂಬುವುದಾಗಿ ಹೇಳಿ ಶಿಕ್ಷಣಕ್ಕೆ ಒತ್ತು ನೀಡುವ ಭರವಸೆ ನೀಡಿದ್ದರು.

ವಿವಿಧ ಪಕ್ಷಗಳಿಗೆ ಒಂದೇ ಚಿಹ್ನೆಗಳು

ಇನ್ನು ರಾಜ್ಯ ಮಟ್ಟದಲ್ಲಿ ಒಂದೇ ಚುನಾವಣಾ ಚಿಹ್ನೆಯನ್ನು ಪಡೆದು ಬೇರೆಬೇರೆ ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಇತಿಹಾಸವೂ ಇದೆ. ಒಂದೇ ಕ್ಷೇತ್ರದಿಂದ ಪರಸ್ಪರರ ವಿರುದ್ಧ ಸ್ಪರ್ಧಿಸುವುದಿಲ್ಲವೋ ಅಲ್ಲಿಯವರೆಗೆ ಅದು ಸಾಮಾನ್ಯವಾಗಿ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ಪಕ್ಷಗಳು ತನ್ನ ಕಾಯ್ದಿರಿಸಿದ ಚಿಹ್ನೆಯಡಿ ಬೇರೆಯವರಿಗೆ ಸ್ಪರ್ಧಿಸಲು ಅನುಮತಿಸುವುದಿಲ್ಲ ಎಂಬ ಷರತ್ತು ವಿಧಿಸುತ್ತದೆ.

ಬೈಸಿಕಲ್ ಗಾಗಿ ಸ್ಪರ್ಧೆ

ಭಾರತೀಯ ರಾಜಕೀಯ ಇತಿಹಾಸದಲ್ಲಿ ಬೈಸಿಕಲ್ ತೀವ್ರ ಪೈಪೋಟಿಯ ಸಂಕೇತವಾಗಿದೆ. ಎನ್.ಟಿ. ರಾಮರಾವ್ ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಡುವೆ ಬೈಸಿಕಲ್ ಗಾಗಿ ಪೈಪೋಟಿ ಏರ್ಪಟ್ಟಿತ್ತು.

1982ರಲ್ಲಿ ಸ್ಥಾಪನೆಯಾದ ಟಿಡಿಪಿಯಿಂದ 1995ರಲ್ಲಿ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡಾಗ ಟಿಡಿಪಿಯನ್ನು ಅದರ ‘ಬೈಸಿಕಲ್ ಚಿಹ್ನೆ’ಯೊಂದಿಗೆ ಪಡೆದರು.
ಸುಮಾರು ಒಂದು ದಶಕದ ಅನಂತರ ಸಮಾಜವಾದಿ ಪಕ್ಷದ ರಚನೆಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಮಗ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಮುಲಾಯಂ ಅವರ ಸಹೋದರ ಶಿವಪಾಲ್ ಯಾದವ್ ನಡುವೆ ಕಲಹ ಉಂಟಾಗಿ ಪಕ್ಷ ಮತ್ತು ಅದರ ಚಿಹ್ನೆಯ ಮೇಲೆ ಅಧಿಕಾರವನ್ನು 2017ರಲ್ಲಿ ಅಖಿಲೇಶ್‌ಗೆ ನೀಡಲಾಯಿತು.


ಬಿಲ್ಲು ಮತ್ತು ಬಾಣ

ಪ್ರಸ್ತುತ ಸ್ಪರ್ಧೆಯಲ್ಲಿರುವ ಮತ್ತೊಂದು ಚಿಹ್ನೆ ಮಹಾರಾಷ್ಟ್ರದಲ್ಲಿ ‘ಬಿಲ್ಲು ಮತ್ತು ಬಾಣ’. ಏಕನಾಥ್ ಶಿಂಧೆ ನೇತೃತ್ವದ “ನೈಜ” ಶಿವಸೇನೆಗೆ ಹಂಚಲ್ಪಟ್ಟ ಈ ಚಿಹ್ನೆಯನ್ನು ಮೊದಲು 1989ರಲ್ಲಿ ಬಾಳ್ ಠಾಕ್ರೆ ಅವರು ಬಳಸಿದ್ದರು.

1972ರಲ್ಲಿ ರಚಿಸಲಾದ ಜಾರ್ಖಂಡ್ ಮುಕ್ತಿ ಮೋರ್ಚಾ ಜಾರ್ಖಂಡ್‌ನಲ್ಲಿ ಅದೇ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಬಳಸುತ್ತದೆ. ಬಿಹಾರದ ಜನತಾ ದಳ (ಯುನೈಟೆಡ್) ಪಕ್ಷದ ಚಿಹ್ನೆಯು ‘ಬಾಣ’ವಾಗಿದೆ. 2019 ರಲ್ಲಿ ಚುನಾವಣಾ ಆಯೋಗವು ಮಹಾರಾಷ್ಟ್ರ ಅಥವಾ ಜಾರ್ಖಂಡ್‌ನಲ್ಲಿ ಈ ಚಿಹ್ನೆಯನ್ನು ಬಳಸಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. .

Continue Reading

Lok Sabha Election 2024

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

VISTARANEWS.COM


on

evm vvpat verification lok sbha election 2024
Koo

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Continue Reading

Latest

Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ

Lok sabha Election 2024: ಕಳೆದ ಒಂದು ದಶಕದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಆದರೆ ಈ ಸಂದರ್ಭದಲ್ಲಿ ಅದು ಹಲವು ಬಾರಿ ಎಡವಿದ್ದರೂ ಮತ್ತೆ ಹಲವು ಬಾರಿ ಪುಟಿದು ಎದ್ದೇಳುವ ಪ್ರಯತ್ನದಲ್ಲಿ ಯುಶಸ್ವಿಯಾಗಿದೆ. ಇದರಲ್ಲಿ ಈ ಬಾರಿ ಚುನಾವಣೆ ಮೇಲೆ ಪ್ರಭಾವ ಬೀರಬಹುದಾದ ಹಲವಾರು ಅಂಶಗಳಿವೆ ಅವು ಯಾವುದು ಗೊತ್ತೇ? ಇಲ್ಲಿದೆ ವಿಸ್ತೃತ ವಿಶ್ಲೇಷಣೆ.

VISTARANEWS.COM


on

By

Lok sabha election-2024
Koo

ದೇಶಾದ್ಯಂತ ಏಳು ಹಂತದಲ್ಲಿ ನಡೆಯಲಿರುವ 2024ರ ಲೋಕಸಭಾ ಚುನಾವಣೆಯ (Lok sabha election-2024) ಮೊದಲ ಹಂತದ ಮತದಾನ (voting) ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿದೆ. ವಿಶ್ವದ ಅತಿ ದೊಡ್ಡ ಚುನಾವಣೆಯಲ್ಲಿ ಸುಮಾರು 100 ಕೋಟಿ ಭಾರತೀಯರು (indians) ಮತ ಚಲಾಯಿಸಲಿದ್ದಾರೆ.

ಚುನಾವಣೆ ಪೂರ್ವದಲ್ಲೇ ಸಾಕಷ್ಟು ಸಮೀಕ್ಷೆಗಳನ್ನು ನಡೆಸಲಾಗಿದ್ದು, ಈ ಬಾರಿಯೂ ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಭಾರತೀಯ ಜನತಾ ಪಕ್ಷ (BJP) ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂಬುದು ತಿಳಿದು ಬಂದಿದೆ. ಒಂದು ವೇಳೆ ಈ ಬಾರಿಯೂ ಬಿಜೆಪಿ ಗೆಲುವು ದಾಖಲಿಸಿದರೆ ಸತತ ಮೂರನೇ ಅವಧಿಗೆ ಅಧಿಕಾರ ಬಿಜೆಪಿ ಪಾಲಾದಂತಾಗುತ್ತದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ ನಡೆಯಲಿರುವ ಏಳು ಹಂತಗಳಲ್ಲಿಮತದಾನದ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಸಂಸತ್ತಿನ ಕೆಳಮನೆಯಾದ ಲೋಕಸಭೆಯ 543 ಸ್ಥಾನಗಳಿಗೆ ನಡೆಯುವ ಚುನಾವಣೆಯ ಮೇಲೆ ಪ್ರಭಾವ ಬೀರುವ ಹಲವಾರು ಅಂಶಗಳಿವೆ.

ಇದನ್ನೂ ಓದಿ: Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

1. ಆರ್ಥಿಕತೆಯ ಪ್ರಗತಿ

ಮಾರ್ಚ್ 31ರಂದು ಆರ್ಥಿಕ ವರ್ಷ ಕೊನೆಯಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಸುಮಾರು ಶೇ. 8ರಷ್ಟು ಬೆಳವಣಿಗೆಯಾಗಿದೆ. ಇದು ಅತ್ಯಂತ ವೇಗವಾದ ಬೆಳವಣಿಗೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕಳೆದ ಒಂದು ದಶಕದಲ್ಲಿ ಭಾರತದ ಆರ್ಥಿಕತೆಯು ಮೊದಲಿಗಿಂತ ಐದು ಸ್ಥಾನಗಳನ್ನು ಜಿಗಿದು ವಿಶ್ವದಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ಈ ಬಾರಿ ಚುನಾವಣೆಯಲ್ಲಿ ತಾವು ಗೆದ್ದರೆ ಅದನ್ನು ಮೂರನೇ ಸ್ಥಾನಕ್ಕೆ ಏರಿಸುವ ಭರವಸೆ ನೀಡಿದ್ದಾರೆ.

2. ಅಭಿವೃದ್ಧಿಯ ತೀವ್ರಗತಿ

ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಪ್ರಮುಖ ನಗರಗಳಾದ ನವದೆಹಲಿ ಮತ್ತು ಮುಂಬಯಿ ಸೇರಿದಂತೆ ದೇಶದಾದ್ಯಂತ ಇರುವ ರಸ್ತೆಗಳು ಮತ್ತು ಸೇತುವೆಗಳು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಗ್ರಾಮಾಂತರಕ್ಕಿಂತ ನಗರಗಳಲ್ಲೇ ಹೆಚ್ಚು ಕೇಂದ್ರಿತವಾಗಿವೆ ಎಂಬ ಆರೋಪವೂ ಇದೆ.


3. ಹಣದುಬ್ಬರ, ಬೆಲೆ ಏರಿಕೆ

2021-22 ರಲ್ಲಿ ಶೇ.5.5ರಷ್ಟು ಇದ್ದ ಹಣದುಬ್ಬರ 2022- 23ರಲ್ಲಿ ಶೇ. 6.7ಕ್ಕೆ ಏರಿದೆ. ಕೇವಲ ಫೆಬ್ರವರಿಯಲ್ಲಿ ಹಣದುಬ್ಬರ ಶೇ. 5.09 ರಷ್ಟು ಆಗಿತ್ತು. ಬೆಲೆ ಏರಿಕೆ ವಿಷಯ ಕೂಡ ಈ ಬಾರಿಯ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿದೆ.

4. ಮೋದಿ ಕಲ್ಯಾಣ ನೀತಿಗಳು

ಕೋವಿಡ್ ಸಾಂಕ್ರಾಮಿಕದ ಬಳಿಕ ಸರ್ಕಾರವು ಭಾರತದ 1.42 ಶತಕೋಟಿ ಜನರಲ್ಲಿ 814 ಮಿಲಿಯನ್ ಜನರಿಗೆ ಉಚಿತ ಆಹಾರ ಪಡಿತರವನ್ನು ನೀಡುತ್ತಿದೆ. ಭಾರತದ ಜನಸಂಖ್ಯೆಯ ಸುಮಾರು ಶೇ.60ರಷ್ಟು ಜನರಿಗೆ ಉಚಿತ ಸಿರಿಧಾನ್ಯಗಳನ್ನು ಸರ್ಕಾರ ಒದಗಿಸುತ್ತಿರುವುದು ದೇಶದ ಅಸಮ ಆರ್ಥಿಕ ಬೆಳವಣಿಗೆಯ ಸಂಕೇತ ಎನ್ನಲಾಗುತ್ತದೆ.
ಕಳೆದ ವರ್ಷದ ಅಂತ್ಯದ ವೇಳೆಗೆ ಭಾರತದ ಶ್ರೀಮಂತ ನಾಗರಿಕರು ಶೇ.40.1ರಷ್ಟು ಸಂಪತ್ತು ಹೊಂದಿದ್ದರು. ಇದು 1961ರ ಬಳಿಕ ಅತ್ಯಧಿಕವಾಗಿದೆ.

5. ಮಹಿಳೆಯರ ಪ್ರಭಾವ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮಹಿಳಾ ಮತದಾರರನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಹಣ ಹಂಚಿಕೆ, ಪೈಪ್‌ಲೈನ್ ಮೂಲಕ ಮನೆಮನೆಗೆ ನೀರು, 24/7 ವಿದ್ಯುತ್ ಮತ್ತು ಅಡುಗೆ ಅನಿಲ ಸಂಪರ್ಕಗಳಂತಹ ಗೃಹೋಪಯೋಗಿ ಸೌಲಭ್ಯಗಳ ಮೂಲಕ ಅವರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ. ಇವು ದೇಶದ ಮಹಿಳೆಯರು ಮೋದಿ ಆಡಳಿತ ಕುರಿತು ಸಕಾರಾತ್ಮಕ ಅಭಿಪ್ರಾಯ ಹೊಂದಲು ಕಾರಣವಾಗಿದೆ.


6. ಧಾರ್ಮಿಕ ಪ್ರಭಾವ

ಬಿಜೆಪಿ ಸುಮಾರು 35 ವರ್ಷಗಳ ಹಿಂದೆ ನೀಡಿದ ಭರವಸೆಯನ್ನು ಈಗ ಈಡೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮನ ಜನ್ಮ ಸ್ಥಳ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ಮೊಘಲ್ ದೊರೆ ಬಾಬರ್ ನಿಂದ ಕೆಡವಲ್ಪಟ್ಟ ದೇವಾಲಯ ಈಗ ಪುನರ್ ನಿರ್ಮಾಣಗೊಂಡಿದೆ.

ಅಲ್ಲದೇ ಪ್ರಧಾನಿಯವರು ದೇಶಾದ್ಯಂತ ಇರುವ ಹಿಂದೂ ದೇವಾಲಯಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ಇದು ಬಿಜೆಪಿಗೆ ಹೆಚ್ಚು ಜನ ಬೆಂಬಲವನ್ನು ನೀಡಬಲ್ಲದು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮೋದಿಯವರ ಸರ್ಕಾರವು ಮುಸ್ಲಿಂ ಶಾಲೆಗಳು ಅಥವಾ ಮದರಸಾಗಳಿಗೆ ಬೆಂಬಲವನ್ನು ಕೊನೆಗೊಳಿಸಿದೆ ಮತ್ತು ಕೆಲವು ಬಿಜೆಪಿ ರಾಜ್ಯಗಳು ಅವುಗಳಲ್ಲಿ ಹಲವನ್ನು ಮುಚ್ಚಿವೆ. ಆದರೆ ಮೋದಿ ಅವರು ಪೌರತ್ವ ಕಾನೂನನ್ನು ಜಾರಿಗೆ ತಂದು ಹೊರದೇಶಗಳಿಂದ ವಲಸೆ ಬಂದಿರುವ ಅನೇಕರಿಗೆ ಸಹಾಯ ಮಾಡಿದೆ.

7. ಭ್ರಷ್ಟಾಚಾರ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಕಳೆದ ಒಂದು ದಶಕದಲ್ಲಿ ವಿರೋಧ ಪಕ್ಷದ ಸುಮಾರು 150 ರಾಜಕಾರಣಿಗಳನ್ನು ಕರೆಸಿ, ಪ್ರಶ್ನಿಸಿದೆ. ಹಲವಾರು ಅಧಿಕಾರಿಗಳು, ರಾಜಕಾರಣಿಗಳ ಆಸ್ತಿ ಮೇಲೆ ದಾಳಿ ನಡೆಸಿ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ರಾಜಕೀಯ ಲಾಭಕ್ಕಾಗಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವೂ ವಿರೋಧ ಪಕ್ಷಗಳಿಂದ ಕೇಳಿ ಬರುತ್ತಿದೆ. ಆದರೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಳೆದ 10 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಹೀಗಾಗಿ ಈ ಅಂಶವೂ ಈ ಬಾರಿಯ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಬಲ್ಲದು.

8. ನಿರುದ್ಯೋಗ

2014ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನರಿಗೆ ಹತ್ತಾರು ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದ್ದು, ಇದರಲ್ಲಿ ಅರ್ಧದಷ್ಟು ಪೂರೈಕೆ ಮಾಡಲೂ ಸಾಧ್ಯವಾಗಿಲ್ಲ ಎಂಬ ಆರೋಪ ಇದೆ. ನಿರುದ್ಯೋಗ ದರವು ಫೆಬ್ರವರಿಯಲ್ಲಿ ಶೇ. 8ಕ್ಕೆ ಏರಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ತಿಳಿಸಿದೆ.

ಸರ್ಕಾರದ ಅಂಕಿ ಅಂಶಗಳ ಪ್ರಕಾರ 2023ರ ಮಾರ್ಚ್ ನಿಂದ ನಿರುದ್ಯೋಗ ದರವು ಶೇ.5.4ಕ್ಕೆ ಏರಿದೆ. ಮೋದಿ ಅಧಿಕಾರ ವಹಿಸಿಕೊಳ್ಳುವ ಮೊದಲು 2013-14 ರಲ್ಲಿ ಇದು ಶೇ. 4.9ರಷ್ಟಿತ್ತು.

15- 29 ವರ್ಷದ ಸುಮಾರು ಶೇ. 16ರಷ್ಟು ನಗರ ಯುವಕರು 2022-23 ರಲ್ಲಿ ಕಳಪೆ ಕೌಶಲ್ಯ ಮತ್ತು ಗುಣಮಟ್ಟದ ಉದ್ಯೋಗಗಳ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿದೆ. ಈ ವಿಷಯ ಮೋದಿ ಆಡಳಿತಕ್ಕೆ ನಕಾರಾತ್ಮಕವಾಗಿದೆ. ಪ್ರತಿಪಕ್ಷಗಳ ಪ್ರಬಲ ಅಸ್ತ್ರವಾಗಿದೆ.


9. ರೈತರ ಪ್ರತಿಭಟನೆ

ಕಳೆದ ಚುನಾವಣೆಯ ಪ್ರಣಾಳಿಕೆಯಲ್ಲಿ 2022ರ ವೇಳೆಗೆ ಕೃಷಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಆದರೆ ಅದರ ಲಕ್ಷಣ ಕಾಣುತ್ತಿಲ್ಲ. ವಿಶೇಷವಾಗಿ ರೈತರು ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ದೇಶದ ರೈತರ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸಲು ಮೋದಿಗಿನ್ನೂ ಸಾಧ್ಯವಾಗಿಲ್ಲ.

10. ಜಾಗತಿಕ ಸ್ಥಾನಮಾನ

ಕಳೆದ ವರ್ಷ ಜಿ 20 ಶೃಂಗಸಭೆಯನ್ನು ಆಯೋಜಿಸಿರುವುದು, ರಷ್ಯಾದ ದಾಳಿಯ ವೇಳೆ ಉಕ್ರೇನ್‌ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿರುವುದು ಪ್ರಧಾನಿ ನರೇಂದ್ರ ಮೋದಿಯ ಪ್ರಮುಖ ಸಾಧನೆಯಾಗಿದೆ. ಇದರಿಂದ ದೇಶಕ್ಕೆ ಸಿಗುತ್ತಿರುವ ಆರ್ಥಿಕತೆ ಬೆಂಬಲದೊಂದಿಗೆ ಭಾರತದ ಏರುತ್ತಿರುವ ಜಾಗತಿಕ ಸ್ಥಾನಮಾನ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ.

Continue Reading

ಚಿನ್ನದ ದರ

Gold Price Explainer: ಚಿನ್ನದ ದರ ಇಷ್ಟೊಂದು ಏರಲು ಏನು ಕಾರಣ? ಬಂಗಾರದ ಮೇಲೆ ಹೂಡಿಕೆಗಿದು ಸಕಾಲವೇ?

Gold Price Explainer: ಚಿನ್ನದ ಬೆಲೆ ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿದೆ. ಆದರೂ ಶುಭ ಸಮಾರಂಭಗಳ ಸೀಸನ್ ಗಳಲ್ಲಿ ಎಲ್ಲರೂ ಚಿನ್ನ ಖರೀದಿಗೆ ಮುಗಿ ಬೀಳುತ್ತಾರೆ. ಚಿನ್ನದ ದರ ನಿರಂತರ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಈ ಕುರಿತ ವಿಸ್ತೃತ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

By

Gold price
Koo

ನವದೆಹಲಿ: ಚಿನ್ನ (gold) ಯಾರಿಗೆ ಪ್ರಿಯವಿಲ್ಲ ಹೇಳಿ? ಆದರೆ ಇತ್ತೀಚೆಗೆ ವಿಪರೀತ ಏರುತ್ತಿರುವ ಚಿನ್ನದ ದರ ಶೀಘ್ರದಲ್ಲೇ ಲಕ್ಷದ ಗಡಿ ದಾಟುವ ಹಾಗೆ ತೋರುತ್ತಿದೆ. ಚಿನ್ನ ಎಷ್ಟೇ ದುಬಾರಿಯಾದರೂ ಮದುವೆ ಇತ್ಯಾದಿ ಶುಭ ಸಂದರ್ಭಗಳಲ್ಲಿ ಇದರ ಖರೀದಿಗೆ (shopping) ಜನ ಮುಗಿಬೀಳುತ್ತಾರೆ. ಜಾಗತಿಕ ಅನಿಶ್ಚಿತತೆ ಪರಿಣಾಮವಾಗಿ ಶೀಘ್ರದಲ್ಲೇ ಫೆಡರಲ್ ರಿಸರ್ವ್ (Federal Reserve) ದರ ಇಳಿಸುವ ನಿರೀಕ್ಷೆ, ಮದುವೆ ಸೀಸನ್ (Wedding season) ಪ್ರಾರಂಭ ಇತ್ಯಾದಿ ಕಾರಣಗಳಿಂದ ಈ ಬಾರಿ ಚಿನ್ನದ ದರ (Gold Price Explainer) ಮಾತ್ರ ಸಾರ್ವಕಾಲಿಕ ದಾಖಲೆ ಬರೆದಿದೆ. 24 ಕ್ಯಾರೆಟ್‌ನ ಪ್ರತಿ ಹತ್ತು ಗ್ರಾಮ್‌ ಚಿನ್ನದ ದರ 71,652 ರೂ. ಗರಿಷ್ಠ ಮಟ್ಟವನ್ನು ತಲುಪಿದೆ.

ಚಿನ್ನ ಎಷ್ಟೇ ದುಬಾರಿಯಾದರೂ ಖರೀದಿ ಮಾಡುವವರು ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿಯೇ ಇದು ಹೂಡಿಕೆ ದಾರರನ್ನು ಸದಾ ಆಕರ್ಷಿಸುತ್ತಿದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ದಾಖಲೆ ಏರಿಕೆ; 10 ಗ್ರಾಂಗೆ 73,000 ಮೀರಿಸಿದ ಬೆಲೆ

1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೆಡ್ಜ್ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.


2. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

3. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

4. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.


5. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

6. ದರ ಹೆಚ್ಚಳದ ಪರಿಣಾಮ ಏನು?

ಈ ವರ್ಷದ ಆರಂಭದಿಂದಲೂ ಮಾರುಕಟ್ಟೆ ಹೆಚ್ಚು ಸಕ್ರಿಯವಾಗಿದೆ. ಭೌಗೋಳಿಕ-ರಾಜಕೀಯ ಉದ್ವಿಗ್ನತೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬಿರುತ್ತಿದೆ. ಇದೇ ಬೆಳವಣಿಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಎರಡಕ್ಕೂ ಹೆಚ್ಚಿನ ಲಾಭವಿದೆ. ದರ ಕಡಿತದ ನಿರೀಕ್ಷೆಗಳು ಡಾಲರ್ ಸೂಚ್ಯಂಕ ಮತ್ತು ಯುಎಸ್ ಉತ್ಪಾದನೆಯ ಮೇಲೆ ಚಂಚಲತೆಯನ್ನು ಹೆಚ್ಚಿಸಿದೆ. ಚಿನ್ನದ ಟ್ರೆಂಡ್ ಇನ್ನೂ ಸಕಾರಾತ್ಮಕವಾಗಿದೆ. ಇದು ಮುಂದಿನ ಅವಧಿಯಲ್ಲಿ 72,800 ತಲುಪುವ ನಿರೀಕ್ಷೆ ಇದ್ದು, 70,000 ರೂ. ಗಿಂತ ಕಡಿಮೆ ಕುಸಿಯುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಹಾಗಾಗಿ ಚಿನ್ನದ ಮೇಲೆ ಹಣ ಹೂಡಿದರೆ ನಷ್ಟವಿಲ್ಲ ಎಂಬುದು ಆರ್ಥಿಕ ಪರಿಣತರ ಅಭಿಮತವಾಗಿದೆ.

Continue Reading
Advertisement
Karnataka Weather Forecast
ಮಳೆ12 mins ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ29 mins ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Modi in Karnataka PM Modi to address rally in Bengaluru Here live video
Lok Sabha Election 202450 mins ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ52 mins ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್52 mins ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Mrunal Thakur and Siddhant Chaturvedi to start shoot
ಟಾಲಿವುಡ್52 mins ago

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

IPL 2024
ಕ್ರೀಡೆ54 mins ago

IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

Viral Video
ವೈರಲ್ ನ್ಯೂಸ್54 mins ago

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Murder Case
ಬೆಂಗಳೂರು55 mins ago

Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Lok Sabha Election 2024
ಕರ್ನಾಟಕ58 mins ago

Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ1 hour ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20242 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ5 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ6 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌