Iran-Israel War Explainer: ಇಸ್ರೇಲ್ ಮೇಲೆ ಇರಾನ್ ದಾಳಿಗೆ ಕ್ಷಣಗಣನೆ; ಮುಂದೇನಾಗಬಹುದು? - Vistara News

ವಿದೇಶ

Iran-Israel War Explainer: ಇಸ್ರೇಲ್ ಮೇಲೆ ಇರಾನ್ ದಾಳಿಗೆ ಕ್ಷಣಗಣನೆ; ಮುಂದೇನಾಗಬಹುದು?

Iran-israel War Explainer: ಇಸ್ರೇಲ್ ವಿರುದ್ಧ ಯುದ್ಧ ಸನ್ನದ್ಧವಾಗಿ ನಿಂತಿರುವ ಇರಾನ್ ಅದರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಈ ನಡುವೆ ದೇಶಾದ್ಯಂತ ಯುದ್ಧದ ಸನ್ನಿವೇಶ ಉದ್ಭವವಾಗಿದ್ದು, ಇರಾನ್ ಗೆ ಯುದ್ಧ ನಡೆಸದಂತೆ ತಡೆಯುವ ಪ್ರಯತ್ನವನ್ನು ಯುಎಸ್ ಮಾಡುತ್ತಿದೆ.

VISTARANEWS.COM


on

Iran-israel War fear
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇರಾನ್: ಇಸ್ರೇಲ್ (israel) ಮೇಲೆ ದಾಳಿ ನಡೆಸಲು ಇರಾನ್ (iran) ಸಜ್ಜಾಗಿದ್ದು, ಯಹೂದಿ ಬಹುಸಂಖ್ಯಾತರಿರುವ ರಾಷ್ಟ್ರವು ಇದಕ್ಕೆ ಪ್ರತಿ ದಾಳಿ ನಡೆಸಲು ಸಿದ್ಧವಾಗಿದೆ. ಇಸ್ರೇಲ್ ಈಗಾಗಲೇ ತನ್ನ ರಾಜಧಾನಿ ಟೆಲ್ ಅವಿವ್‌ನಲ್ಲಿ (tel aviv) ಮಿಲಿಟರಿ ನೆಲೆಗಳನ್ನು ಸ್ಥಾಪನೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತೊಂದು ಯುದ್ಧದ ಭೀತಿ (Iran-israel War Explainer) ವಿಶ್ವದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ.

ಇರಾನ್ ದಾಳಿ ಭೀತಿಯ ಹಿನ್ನೆಲೆಯಲ್ಲಿ ಅಮೆರಿಕ (US) ತನ್ನ ರಾಷ್ಟ್ರದ ಪ್ರಜೆಗಳಿಗೆ ಪ್ರಯಾಣವನ್ನು ನಿರ್ಬಂಧಿಸಿದ್ದು, ಜೆರುಸಲೆಮ್‌ನಿಂದ (jerusalem) ಹೊರಗೆ ಹೋಗದಂತೆ ಸೂಚಿಸಿದೆ.

ಯಾಕೆ ಯುದ್ಧ ಪ್ರಾರಂಭ?

11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್‌ನ ದೂತಾವಾಸ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್ ಕ್ರಮವನ್ನು ಖಂಡಿಸಿ ಇರಾನ್ ಯುದ್ಧ ಪ್ರಾರಂಭಿಸಲು ಮುಂದಾಗಿದೆ. ಈಗಾಗಲೇ ಇರಾನ್‌ ಪ್ರೇರಿತ ಹೆಜ್ಬೊಲ್ಲಾ ಉಗ್ರರು ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ಶುರು ಮಾಡಿದ್ದಾರೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ 13 ಮಂದಿ ಮೃತಪಟ್ಟಿದ್ದರು.
ಇಸ್ರೇಲ್ ನ ಕ್ರಮಕ್ಕೆ ಪ್ರತೀಕಾರವಾಗಿ ಶೀಘ್ರದಲ್ಲೇ ಇರಾನ್ ಇಸ್ರೇಲ್ ನ ಟೆಹ್ರಾನ್ ಮೇಲೆ ದಾಳಿ ಇರಾನ್‌ ಅಧಿಕೃತವಾಗಿ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Iran- Israel War : ಮುಂದಿನ 48 ಗಂಟೆಗಳೊಳಗೆ ಇರಾನ್-ಇಸ್ರೇಲ್ ಭೀಕರ ಯುದ್ಧ ಶುರು!

ಯುದ್ಧ ತಡೆಗೆ ಅಮೆರಿಕ ಪ್ರಯತ್ನ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವನ್ನು ತಡೆಯಲು ಅಮೆರಿಕ ಪ್ರಯತ್ನಿಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಚೀನಾ, ಟರ್ಕಿ, ಸೌದಿ ಅರೇಬಿಯಾ ಮತ್ತು ಯುರೋಪಿಯನ್ ರಾಷ್ಟ್ರಗಳಲ್ಲಿರುವ ತಮ್ಮ ಸಹವರ್ತಿಗಳೊಂದಿಗೆ ಇರಾನ್ ಗೆ ಇಸ್ರೇಲ್ ಮೇಲೆ ದಾಳಿ ನಡೆಸದಂತೆ ಪ್ರಯತ್ನಿಸಲು ಹೇಳಿದ್ದಾರೆ. ಯುದ್ಧ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಯಾವ ದೇಶದ ಹಿತಾಸಕ್ತಿಗೂ ಇದು ಸರಿಯಲ್ಲ. ಹೀಗಾಗಿ ಇರಾನ್‌ನ ಮಿತ್ರ ರಾಷ್ಟ್ರಗಳು ಯುದ್ಧದ ಸನ್ನಿವೇಶವನ್ನು ತಡೆಯಲು ಒತ್ತಾಯಿಸಬೇಕು ಎಂದು ಹೇಳಿದರು.

Iran-israel War fear
Iran-israel War fear


ಅಮೆರಿಕವೇ ಹೊಣೆ ಎಂದ ಇರಾನ್

ಏಪ್ರಿಲ್ 1ರಂದು ಇರಾನ್ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಸಿರಿಯಾದ ಡಮಾಸ್ಕಸ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್‌ನ ಕುಡ್ಸ್ ಫೋರ್ಸ್‌ನಲ್ಲಿ ಇಬ್ಬರು ಜನರಲ್‌ಗಳು ಮತ್ತು ಐದು ಇತರ ಅಧಿಕಾರಿಗಳನ್ನು ಕೊಲ್ಲಲಾಗಿತ್ತು.
ಈ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರಬ್ದೊಲ್ಲಾಹಿಯಾನ್ ಅವರು, ಇಸ್ರೇಲ್ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇರಾನ್ ರಾಯಭಾರ ಕಚೇರಿಯ ಮೇಲಿನ ಇಸ್ರೇಲ್ ದಾಳಿಗೆ ಅಮೆರಿಕ ಹೊಣೆಯಾಗಿದೆ ಮತ್ತು ಜವಾಬ್ದಾರರಾಗಿರಬೇಕು ಎಂದು ಹೇಳಿದ್ದರು.

ಇರಾನ್‌ನ ರಾಯಭಾರ ಕಚೇರಿ ಮೇಲಿನ ಇಸ್ರೇಲ್ ದಾಳಿಯನ್ನು ಯುಎನ್ ಭದ್ರತಾ ಮಂಡಳಿಯು ಖಂಡಿಸಿದ್ದರೆ ಈ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಅವರು ಹೇಳಿದ್ದರು.

ದಾಳಿ ಎಲ್ಲಿ ನಡೆಯಬಹುದು?

ಇಸ್ರೇಲ್‌ನ ವೈಮಾನಿಕ ದಾಳಿಯ ಅನಂತರ ಇರಾನ್ ಇಸ್ರೇಲ್‌ನೊಳಗಿನ ಕೆಲವು ನಿರ್ದಿಷ್ಟ ಸ್ಥಳಗಳ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ಅಥವಾ ಡ್ರೋನ್‌ಗಳನ್ನು ಬಳಸಿಕೊಂಡು ದಾಳಿಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಯುಎಸ್ ಗುಪ್ತಚರ ವಿಭಾಗ ಬಹಿರಂಗಪಡಿಸಿದೆ.

ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಸೇನಾ ಪ್ರಧಾನ ಕಚೇರಿ ಕಿರಿಯಾವನ್ನು ಗುರಿಯಾಗಿಸಲು ಇರಾನ್ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಯುಎಸ್ ಗುಪ್ತಚರ ಮಾಹಿತಿ ತಿಳಿಸಿದೆ. ಇದಲ್ಲದೇ ಮಧ್ಯ ಇಸ್ರೇಲ್‌ನ ಪಾಲ್ಮಾಚಿಮ್ ಅಥವಾ ಉತ್ತರದ ಮೆರಾನ್‌ನಲ್ಲಿರುವ ವಾಯು ನೆಲೆಗಳು, ನೆಸೆಟ್ (ಸಂಸತ್ತು೦ ಮತ್ತು ಜೆರುಸಲೆಮ್‌ನಲ್ಲಿರುವ ಪ್ರಧಾನ ಮಂತ್ರಿ ಕಚೇರಿ ಮೇಲೆ ದಾಳಿಯಾಗುವ ಸಾಧ್ಯತೆ ಇದೆ.

ದಕ್ಷಿಣ ಅಥವಾ ಉತ್ತರ ಇಸ್ರೇಲ್ ಮೇಲೆ ಇರಾನ್‌ನಿಂದ ನೇರ ದಾಳಿ ನಡೆಸಬಹುದು ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ಸಿರಿಯಾದಿಂದ ಇಸ್ರೇಲ್ ಸ್ವಾಧೀನಪಡಿಸಿಕೊಂಡ ವಿವಾದಿತ ಪ್ರದೇಶವಾದ ಗೋಲಾನ್‌ನಲ್ಲಿ ಅಥವಾ ಗಾಜಾದಲ್ಲಿ ಇರಾನ್ ದಾಳಿಯನ್ನು ಸಿದ್ಧಪಡಿಸುತ್ತಿದೆ ಎಂದು ಅಮೆರಿಕದ ಪತ್ರಿಕೆಯೊಂದು ವರದಿ ಮಾಡಿದೆ.

ಇರಾನ್ ಯುದ್ಧ ತಯಾರಿ ನಡೆಸುತ್ತಿರುವ ಬಗ್ಗೆ ಇಸ್ರೇಲ್ ಪ್ರತಿಕ್ರಿಯೆಯನ್ನು ಆಧರಿಸಿ ದಾಳಿ ಆರಂಭಿಸುವ ಸಾಧ್ಯತೆ ಹೆಚ್ಚಾಗಿದೆ ಇದೆ ಎಂದು ಗುಪ್ತಚರ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇರಾನ್ ಹಮಾಸ್, ಹೆಜ್ಬುಲ್ಲಾ, ಕತೀಬ್ ಹೆಜ್ಬುಲ್ಲಾ, ಹೌತಿಗಳು ಅಥವಾ ಬದ್ರ್ ಸಂಘಟನೆಗಳು ಗಡಿಯಲ್ಲಿ ದಾಳಿ ನಡೆಸಬಹುದು. ದಕ್ಷಿಣ ಲೆಬನಾನ್‌ನಲ್ಲಿರುವ ಹೆಜ್ಬೊಲ್ಲಾ ಇಸ್ರೇಲ್ ಅನ್ನು ಗುರಿಯಾಗಿಸಲು ಬಳಸಬಹುದಾದ ಕ್ಷಿಪಣಿಗಳ ದೊಡ್ಡ ಸಂಗ್ರಹವನ್ನು ಹೊಂದಿದೆ. ಆದರೂ ಇಸ್ರೇಲ್‌ನೊಂದಿಗೆ ಪೂರ್ಣ ಪ್ರಮಾಣದ ಯುದ್ಧವನ್ನು ಮಾಡಲು ಹಿಜ್ಬುಲ್ಲಾ ಹಿಂಜರಿಯುತ್ತಿದೆ ಎನ್ನಲಾಗಿದೆ.


ಇಸ್ರೇಲ್‌ಗೆ ಅಮೆರಿಕ ಬೆಂಬಲ

ಇಸ್ರೇಲ್ ವಿರುದ್ಧ ಇರಾನ್ ದಾಳಿಯ ಸಾಧ್ಯತೆಯು ಬಗ್ಗೆ ವಿಶ್ವವೇ ಎಚ್ಚೆತ್ತುಕೊಂಡಿದೆ. ಯುನೈಟೆಡ್ ಸ್ಟೇಟ್ಸ್ ಯುದ್ಧ ತಡೆಯಲು ಇತರ ದೇಶಗಳಿಂದ ಸಹಾಯವನ್ನು ಕೋರುತ್ತಿದೆ ಮತ್ತು ಇಸ್ರೇಲ್ ಗೆ ಬೆಂಬಲ ನೀಡುವ ಪ್ರತಿಜ್ಞೆಯನ್ನೂ ಮಾಡಿದೆ.

ಈ ಕುರಿತು ಮಾತನಾಡಿರುವ ಯುಎಸ್ ಅಧ್ಯಕ್ಷ ಜೋ ಬಿಡೆನ್, ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಿದೆ. ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಹೇಳಿದಂತೆ, ಇರಾನ್ ಮತ್ತು ಅದರ ಪ್ರಾಕ್ಸಿಗಳಿಂದ ಈ ಬೆದರಿಕೆಗಳ ವಿರುದ್ಧ ಇಸ್ರೇಲ್‌ನ ಭದ್ರತೆಗೆ ನಮ್ಮ ಬದ್ಧತೆ ಇದೆ. ಇಸ್ರೇಲ್‌ ಅನ್ನು ರಕ್ಷಿಸಲು ನಾವು ನಮ್ಮ ಕೈಲಾದಷ್ಟು ಸಹಾಯ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಯುದ್ಧ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿ, ಇರಾನ್ ತನ್ನ ಪ್ರದೇಶದಿಂದ ದಾಳಿ ಮಾಡಿದರೆ, ಇಸ್ರೇಲ್ ಪ್ರತಿಕ್ರಿಯಿಸುತ್ತದೆ ಮತ್ತು ಇರಾನ್‌ ಮೇಲೆ ದಾಳಿ ನಡೆಸುತ್ತದೆ ಎಂದು ಹೇಳಿದ್ದಾರೆ.

ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಚೀನಾದ ವಾಂಗ್ ಯಿ ಅವರೊಂದಿಗೆ ಮಾತನಾಡಿದ್ದು, ಇರಾನ್‌ ಗೆ ಯುದ್ಧ ಮಾಡದಂತೆ ಸೂಚಿಸಲು ಒತ್ತಾಯಿಸಿದ್ದಾರೆ. ರಷ್ಯಾ, ಜರ್ಮನಿ ಮತ್ತು ಬ್ರಿಟನ್ ಕೂಡ ಇರಾನ್ ಮತ್ತು ಇಸ್ರೇಲ್ ಸಂಯಮ ತೋರಿಸುವಂತೆ ಒತ್ತಾಯಿಸಿದೆ.

ಪ್ರಜೆಗಳಿಗೆ ನಾನಾ ದೇಶಗಳ ಎಚ್ಚರಿಕೆ

ಇಸ್ರೇಲ್‌ನಲ್ಲಿನ ತನ್ನ ಉದ್ಯೋಗಿಗಳಿಗೆ ಅಮೆರಿಕ ಪ್ರಯಾಣವನ್ನು ನಿರ್ಬಂಧಿಸಿದೆ. ಜೆರುಸಲೆಮ್, ಟೆಲ್ ಅವಿವ್ ಅಥವಾ ಬೀರ್ ಶೆವಾ ಪ್ರದೇಶಗಳ ಹೊರಗೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದೆ.
ಯುಕೆ ವಿದೇಶಾಂಗ ಕಚೇರಿಯು ಇಸ್ರೇಲ್‌ಗೆ ಪ್ರಯಾಣ ನಡೆಸದಂತೆ ನಾಗರಿಕರಿಗೆ ಸೂಚಿಸಿದೆ. ಇಸ್ರೇಲ್ ಮೇಲಿನ ದಾಳಿ ಸಾಧ್ಯತೆಯನ್ನು ಇರಾನ್‌ ಹೆಚ್ಚಿಸಿದೆ ಎಂದು ಹೇಳಿದೆ.

ಯುದ್ಧದ ತಯಾರಿಯಲ್ಲಿ ಇದ್ದರೂ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸುವುದಿಲ್ಲ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಸ್ರೇಲ್‌ ಗೆ ಎಚ್ಚರಿಕೆ ನೀಡಲು ಯುದ್ಧದ ತಯಾರಿ ನಡೆಸುತ್ತಿದೆ. ಇಸ್ರೇಲ್‌ನ ಮಿಲಿಟರಿಯನ್ನು ನಿರಂತರ ಎಚ್ಚರಿಕೆಯ ಸ್ಥಿತಿಯಲ್ಲಿ ಇರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಅದರ ದೌರ್ಬಲ್ಯಗಳನ್ನು ಪರಿಶೀಲಿಸುತ್ತಿದೆ ಎಂಬ ವಿಶ್ಲೇಷಣೆಯೂ ಕೇಳಿ ಬಂದಿದೆ.

ಭಾರತದ ಪಾತ್ರ ಏನು?

ಭಾರತದ ಬೆಂಬಲ ಯಾವಾಗಲೂ ಇಸ್ರೇಲ್‌ ಕಡೆಗೇ ಇರುತ್ತದೆ. ಹಾಗಂತ ಇರಾನ್‌ ಕೂಡ ಭಾರತದ ವೈರಿ ದೇಶ ಏನಲ್ಲ. ಹಾಗಾಗಿ ಭಾರತ ಎಚ್ಚರಿಕೆಯ ಹೆಜ್ಜೆ ಇಡಲಿದೆ. ಇಸ್ರೇಲ್‌-ಇರಾನ್‌ ಯುದ್ಧ ತಡೆಯಲು ಭಾರತ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಿದೆ. ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ತೈಲ ದರದ ಮೇಲ ಪರಿಣಾಮ ಏನು?

ಒಂದೊಮ್ಮೆ ಇಸ್ರೇಲ್‌-ಇರಾನ್‌ ನಡುವೆ ಯುದ್ಧ ಸ್ಫೋಟಗೊಂಡರೆ ಇದರ ಮೊದಲ ಪರಿಣಾಮ ಬೀರುವುದು ತೈಲ ದರದ ಮೇಲೆ. ವಿಶ್ವದಲ್ಲಿ ಯಾವುದೇ ಭಾಗದಲ್ಲಿ ಯುದ್ಧ ನಡೆದರೂ ತೈಲ ಪೂರೈಕೆ ಜಾಲ ಏರುಪೇರಾಗುತ್ತದೆ. ಅದರಲ್ಲೂ ಇರಾನ್‌ ತೈಲ ಪೂರೈಸುವ ಪ್ರಮುಖ ರಾಷ್ಟ್ರ ಆಗಿರುವುದರಿಂದ, ಯುದ್ಧ ಸಂಭವಿಸಿದರೆ ತೈಲ ದರ ಏರಿಕೆ ಆಗುವ ಅಪಾಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

ದೇಶ

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Narendra Modi: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು.

VISTARANEWS.COM


on

Narendra Modi
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನೀಡದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) ಎಚ್ಚರಿಕೆ ನೀಡಿದ ಬೆನ್ನಲ್ಲೇ ನೆರೆ ರಾಷ್ಟ್ರವು ಥಂಡಾ ಹೊಡೆದಿದೆ. ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ ಬಳಿಕ ಪಾಕಿಸ್ತಾನ ಸೇನೆಯು ಗಲಿಬಿಲಿಗೊಂಡಿದ್ದು, ಗಡಿಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದೆ.

ಹೌದು, ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​​ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ ಕೇಂದ್ರಗಳಿಗೆ ಬೆಂಕಿ ಹಚ್ಚವಲಾಗಿದೆ. ದುರುದ್ದೇಶದ ಕೃತ್ಯಗಳಿಂದಾಗಿ ರೈಲು ಸಂಪರ್ಕ ಜಾಲಕ್ಕೆ ಹಾನಿಯಾಗಿದೆ. ಇದು ದೇಶದ ಜನನಿಬಿಡ ರೈಲು ಮಾರ್ಗಗಳಿಗೆ ಅಡ್ಡಿಯಾಗಿದ್ದು, ಪ್ರಯಾಣಿಕರು ಅರ್ಧ ದಾರಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ಪ್ರಯಾಣಕ್ಕೆ ಅಡ್ಡಿಪಡಿಸಲು ಈ ದಾಳಿ ನಡೆಸಲಾಗಿದ್ದು ಇದು ಸಂಘಟಿತ ವಿಧ್ವಂಸಕ ಕೃತ್ಯ ಎಂದು ಹೇಳಲಾಗಿದೆ.

ಪ್ಯಾರಿಸ್ ಅನ್ನು ಪಶ್ಚಿಮ, ಉತ್ತರ ಮತ್ತು ಪೂರ್ವ ಪ್ರದೇಶಗಳೊಂದಿಗೆ ಸಂಪರ್ಕಿಸುವ ಮಾರ್ಗಗಳಲ್ಲಿನ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎಸ್ಎನ್​ಸಿಎಫ್ ತಿಳಿಸಿದೆ. ಇಂಗ್ಲಿಷ್ ಕಾಲುವೆಯ ಕೆಳಗಿರುವ ಲಂಡನ್ ಮತ್ತು ನೆರೆಯ ಬೆಲ್ಜಿಯಂಗೆ ಪ್ರಯಾಣದ ಮೇಲೂ ಇದು ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

ಅಲ್ಲಿ ರೈಲು ವಿಭಾಗ ಹಲವಾರು ರೈಲುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು ಮತ್ತು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಗಿದೆ. ದುರಸ್ತಿಯ ಮೇಲ್ವಿಚಾರಣೆಗಾಗಿ ಸುರಕ್ಷತಾ ತಂಡ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ. ವಾರಾಂತ್ಯದಲ್ಲಿ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.

“ಅಟ್ಲಾಂಟಿಕ್, ಉತ್ತರ ಮತ್ತು ಪೂರ್ವ ಹೈಸ್ಪೀಡ್ ಮಾರ್ಗಗಳಲ್ಲಿ ಹಲವೆಡೆ ಬೆಂಕಿ ಹಚ್ಚಲಾಗಿದೆ. ನಮ್ಮ ರೈಲ್ವೆ ವ್ಯವಸ್ಥೆಗಳನ್ನು ಹಾನಿಗೊಳಿಸಲು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ನಡೆದ ದಾಳಿಗಳನ್ನು ಸರ್ಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಈ ಘಟನೆಗಳಿಂದ ಕ್ರೀಡಾಕೂಟಗಳ ತಾಣಕ್ಕೆ ಯಾವುದೇ ಸಂಪರ್ಕ ಕಡಿತಗೊಂಡಿಲ್ಲ.

ಸಾರಿಗೆ ಸಚಿವ ಪ್ಯಾಟ್ರಿಸ್ ವೆರ್ಗ್ರೀಟ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ “ಕ್ರಿಮಿನಲ್ ಘಟನೆಗಳನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲು ಎಸ್ ಎನ್ ಸಿಎಫ್ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.ದುರಸ್ತಿ ಕಾರ್ಯಗಳು ನಡೆಯುತ್ತಿದೆ. ರೈಲುಗಳನ್ನು ತಮ್ಮ ನಿರ್ಗಮನ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಆದಾಗ್ಯೂ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಪ್ರಯಾಣಿಕರಿಗೆ ಕೋಲಾಗಿದೆ.

ಇಷ್ಟು ದೊಡ್ಡ ಪ್ರಮಾಣದ ದಾಳಿಯು “ಟಿಜಿವಿ ನೆಟ್ವರ್ಕ್ ಅನ್ನು ನಿಷ್ಕ್ರಿಯಗೊಳಿಸುವ” ಗುರಿ ಹೊಂದಿತ್ತು ರೈಲ್ವೆ ಕಂಪನಿ ಹೇಳಿದೆ. ಸುಮಾರು 800,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಅದು ಹೇಳಿದೆ.

ವಿಧ್ವಂಸಕ ಕೃತ್ಯದಿಂದ ಲಂಡನ್ ಮತ್ತು ಪ್ಯಾರಿಸ್ ನಡುವಿನ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

Continue Reading
Advertisement
illicit relationship raichur siravara
ಕ್ರೈಂ4 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ4 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ24 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ51 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ54 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್2 hours ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌