Israel attack: ಗಾಜಾದ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಮಂದಿ ಸಾವು - Vistara News

ವಿದೇಶ

Israel attack: ಗಾಜಾದ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಮಂದಿ ಸಾವು

Israel attack: ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಪ್ರಾರ್ಥನೆ ನಡೆಸುತ್ತಿದ್ದಾಗ ಇಸ್ರೇಲ್ ದಾಳಿ ನಡೆಸಿದೆ. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. 10 ತಿಂಗಳ ಕಾಲ ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 40,000ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಕಳೆದ ಅಕ್ಟೋಬರ್ 7ರಂದು ಪ್ಯಾಲೇಸ್ಟಿನಿಯನ್ ಉಗ್ರರು ಇಸ್ರೇಲ್‌‌ನೊಳಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು 250 ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಿದ್ದರು.

VISTARANEWS.COM


on

Israel Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೂರ್ವ ಗಾಜಾದಲ್ಲಿ (eastern Gaza) ಸ್ಥಳಾಂತರಗೊಂಡ ಜನರು ವಾಸವಾಗಿರುವ ವಸತಿ ಶಾಲೆಯನ್ನು (housing school) ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ (Israel attack) 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಹಮಾಸ್ (hamas) ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ದಾಳಿ ಸಂಭವಿಸಿದೆ ಎನ್ನಲಾಗಿದೆ.

ವಸತಿ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಫಜ್ರ್ ಪ್ರಾರ್ಥನೆಯನ್ನು ನಿರ್ವಹಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇದು ಸಾವುನೋವುಗಳ ಸಂಖ್ಯೆಯಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಯಿತು ಎಂದು ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಹಿಂದಿನ ವಾರದಲ್ಲಿ ಗಾಜಾದಾದ್ಯಂತ ನಾಲ್ಕು ಶಾಲೆಗಳ ಮೇಲೆ ದಾಳಿ ನಡೆಸಿದ ಅನಂತರ ಈ ದಾಳಿಗಳು ನಡೆದಿವೆ. ಆಗಸ್ಟ್ 4 ರಂದು ಗಾಜಾ ನಗರದಲ್ಲಿ ಸ್ಥಳಾಂತರಗೊಂಡ ಜನರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸುತ್ತಿರುವ ಎರಡು ಶಾಲೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. 30 ಮಂದಿ ಸಾವನ್ನಪ್ಪಿದರು ಮತ್ತು ಹಲವಾರು ಮಂದಿ ಗಾಯಗೊಂಡರು. ಹಿಂದಿನ ದಿನ, ಗಾಜಾ ನಗರದ ಹಮಾಮಾ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿ 17 ಜನರನ್ನು ಕೊಂದಿತ್ತು.


ಆಗಸ್ಟ್ 1ರಂದು, ದಲಾಲ್ ಅಲ್-ಮುಘ್ರಾಬಿ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಜನರು ಸಾವನ್ನಪ್ಪಿದರು.
ಇಸ್ರೇಲ್ ಗಾಜಾದಾದ್ಯಂತ ಶಾಲೆಗಳು ಸೇರಿದಂತೆ ಕಟ್ಟಡಗಳ ಮೇಲೆ ದಾಳಿಗಳನ್ನು ನಡೆಸುತ್ತಿದೆ. ಕಳೆದ ಅಕ್ಟೋಬರ್‌ನಲ್ಲಿ ಪ್ಯಾಲೇಸ್ಟಿನಿಯನ್ ವಿರುದ್ಧ ಪೂರ್ಣ ಪ್ರಮಾಣದ ಮಿಲಿಟರಿ ದಾಳಿಯನ್ನು ಇಸ್ರೇಲ್ ಪ್ರಾರಂಭಿಸಿದ ಅನಂತರ “ಹಮಾಸ್ ಕಮಾಂಡ್ ಕಂಟ್ರೋಲ್ ಸೆಂಟರ್” ನಿಂದ ಕಾರ್ಯನಿರ್ವಹಿಸುವ ಆವರಣದಲ್ಲಿ “ಭಯೋತ್ಪಾದಕರು” ಇದ್ದಾರೆ ಎಂದು ಇಸ್ರೇಲ್ ಪ್ರತಿಪಾದಿಸುತ್ತಿದೆ.

ಇದನ್ನೂ ಓದಿ: Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್


10 ತಿಂಗಳ ಕಾಲ ಇಸ್ರೇಲ್ ದಾಳಿಯಿಂದಾಗಿ ಗಾಜಾದಲ್ಲಿ 40,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಕಳೆದ ಅಕ್ಟೋಬರ್ 7ರಂದು ಪ್ಯಾಲೇಸ್ಟಿನಿಯನ್ ಉಗ್ರರು ಇಸ್ರೇಲ್‌‌ನೊಳಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು 250 ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Viral News: ಚೀನಾದ ಕಂಪನಿಯೊಂದು ದಂತ ಕಸಿ ಮಾಡಲು ಸ್ಮಶಾನಗಳು ಮತ್ತು ವೈದ್ಯಕೀಯ ಪ್ರಯೋಗಾಲಯಗಳಿಂದ 4,000ಕ್ಕೂ ಹೆಚ್ಚು ಶವಗಳನ್ನು ಕದ್ದಿದೆ ಎಂದು ಆರೋಪಿಸಲಾಗಿದೆ. ಅಲೋಜೆನಿಕ್ ಮೂಳೆ ಕಸಿಗಳನ್ನು ಉತ್ಪಾದಿಸಲು ಮೂಳೆಗಳನ್ನು ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರ ಪ್ರಾಂತ್ಯದ ಶಾಂಕ್ಸಿಯ ರಾಜಧಾನಿ ತೈಯುವಾನ್ನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಬೀಜಿಂಗ್ ಬ್ರೇವ್ ವಕೀಲರ ಸಂಘದ ಅಧ್ಯಕ್ಷ ಯಿ ಶೆಂಗ್ಹುವಾ ಹೇಳಿದ್ದಾರೆ.

VISTARANEWS.COM


on

Viral News
Koo


ಚೀನಾದ ಕಂಪನಿಯೊಂದು ದಂತ ಕಸಿ ಮಾಡಲು ಸ್ಮಶಾನಗಳು ಮತ್ತು ವೈದ್ಯಕೀಯ ಪ್ರಯೋಗಾಲಯಗಳಿಂದ 4,000 ಕ್ಕೂ ಹೆಚ್ಚು ಶವಗಳನ್ನು ಕದ್ದಿದೆ ಎಂದು ಆರೋಪಿಸಲಾಗಿದೆ. ಪ್ರಸಿದ್ಧ ಕ್ರಿಮಿನಲ್ ವಕೀಲರು ಗುರುವಾರ ಈ ಪ್ರಕರಣಕ್ಕೆ ಸಂಬಂಧಪಟ್ಟ ವಿವರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ನಂತರ ಈ ವಿಚಾರ ಬೆಳಕಿಗೆ ಬಂದಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್‌ (Viral News) ಆಗಿದೆ.

ಬೀಜಿಂಗ್ ಬ್ರೇವ್ ವಕೀಲರ ಸಂಘದ ಅಧ್ಯಕ್ಷ ಯಿ ಶೆಂಗ್ಹುವಾ, ಉತ್ತರ ಪ್ರಾಂತ್ಯದ ಶಾಂಕ್ಸಿಯ ರಾಜಧಾನಿ ತೈಯುವಾನ್‍ನ ಪೊಲೀಸರು ಅಲೋಜೆನಿಕ್ ಮೂಳೆ ಕಸಿಗಳನ್ನು ಉತ್ಪಾದಿಸಲು ಮೂಳೆಗಳನ್ನು ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಶಾಂಕ್ಸಿ ಅರೋಯಿ ಬಯೋಮೆಟೀರಿಯಲ್ಸ್ ಎಂಬ ಕಂಪನಿಯು ಸಿಚುವಾನ್, ಗುವಾಂಗ್ಕ್ಸಿ ಮತ್ತು ಶಾಂಡೊಂಗ್ ಪ್ರಾಂತ್ಯಗಳಿಂದ ಶವಗಳು ಮತ್ತು ಶವದ ಕೈಕಾಲುಗಳನ್ನು ಅಕ್ರಮವಾಗಿ ಖರೀದಿಸಿ ಮೂಳೆ ಕಸಿಗಳನ್ನು ತಯಾರಿಸಲು ಬಳಸುತ್ತಿದೆ ಎಂದು ಶಂಕಿಸಲಾಗಿದೆ ಎಂದು ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ತಿಳಿಸಲಾಗಿದೆ.

ಇದರಿಂದ ಕಂಪನಿಯು 380 ಮಿಲಿಯನ್ ಯುವಾನ್ (ಯುಎಸ್ $ 53 ಮಿಲಿಯನ್) ಗಳಿಸಿದೆ. ಅದರಲ್ಲೂ ದಂತ ಕಸಿಗಾಗಿ ಮೂಳೆಗಳನ್ನು ಮಾರಾಟ ಮಾಡುವುದರಿಂದ ಹೆಚ್ಚು ಆದಾಯ ಗಳಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ರೋಗಿಗಳಲ್ಲಿ ಕಸಿಗಳಿಗೆ ಸಾಕಷ್ಟು ಮೂಳೆ ಸಾಂದ್ರತೆ ಇಲ್ಲದಿದ್ದಾಗ ಅಲೋಜೆನಿಕ್ ಕಸಿಗಳನ್ನು ಬಳಸಲಾಗುತ್ತದೆ, ಆದರೆ ಮೂಳೆಯನ್ನು ಸಾಮಾನ್ಯವಾಗಿ ಸೊಂಟದ ಬದಲಿಯಂತಹ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗುವ ರೋಗಿಗಳಿಂದ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಪೊಲೀಸರು 18 ಟನ್ ಮೂಳೆಗಳು ಮತ್ತು 34,000 ಕ್ಕೂ ಹೆಚ್ಚು ಈಗಾಗಲೇ ಸಿದ್ಧಪಡಿಸಿದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಯಿ ಪ್ರಕಟಿಸಿದ ದಾಖಲೆಗಳು ತಿಳಿಸಿವೆ. ಕಂಪನಿಯ ಜನರಲ್ ಮ್ಯಾನೇಜರ್ ಆಗಿದ್ದ ಸು ಎಂಬ ಶಂಕಿತನು ಯುನ್ನಾನ್, ಚಾಂಗ್ಕಿಂಗ್, ಗುಯಿಝೌ ಮತ್ತು ಸಿಚುವಾನ್ ನ ಸ್ಮಶಾನಗಳಿಂದ 4,000 ಕ್ಕೂ ಹೆಚ್ಚು ಮಾನವ ದೇಹಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು. ಯುನ್ನಾನ್ ಪ್ರಾಂತ್ಯದ ಶುಯಿಫು, ಚಾಂಗ್ಕಿಂಗ್ ನ ಬನಾನ್ ಜಿಲ್ಲೆ, ಗುಯಿಝೌನ ಶಿಕಿಯಾನ್ ಕೌಂಟಿ ಮತ್ತು ಸಿಚುವಾನ್‍ನ ಡೇಯಿಂಗ್ ಕೌಂಟಿಯ ಚಿತಾಗಾರದ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಹೆಚ್ಚಿನ ಸಂಸ್ಕರಣೆಗಾಗಿ ಸು ಅವರ ಕಂಪನಿಗೆ ಸಾಗಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

ಅಲ್ಲದೇ ತನಿಖೆಯ ಸಮಯದಲ್ಲಿ ಇನ್ನೂ75 ಮಂದಿ ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಚಿತಾಗಾರಗಳಲ್ಲಿನ ಕಾರ್ಮಿಕರು ಮೂಳೆಗಳನ್ನು ಸುಗೆ ಮಾರಾಟ ಮಾಡಲು ಶವಗಳನ್ನು ತುಂಡು ತುಂಡುಗಳಾಗಿ ಕತ್ತರಿಸಿದ್ದಾರೆ ಎಂದು ಶಂಕಿಸಲಾಗಿದೆ. ಶಾಂಡೊಂಗ್‌ನ ಕಿಂಗ್ಡಾವೊ ಯೂನಿವರ್ಸಿಟಿ ಆಸ್ಪತ್ರೆಯ ಲಿವರ್ ಸೆಂಟರ್ ಅಕ್ರಮವಾಗಿ ಶವಗಳನ್ನು ಕಂಪನಿಗೆ ಮಾರಾಟ ಮಾಡಿದೆ ಎಂಬ ಹೇಳಿಕೆಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಹಾಗೇ ವೈದ್ಯಕೀಯ ವಿಜ್ಞಾನಕ್ಕೆ ಉತ್ತಮ ಕೊಡುಗೆ ನೀಡಿದ ಲಿವರ್ ಸೆಂಟರ್ ನ ನಿರ್ದೇಶಕ ಲಿ ಬಾಕ್ಸಿಂಗ್ ಅವರು ಈ ಪ್ರಕರಣದಲ್ಲಿ ಕೈಜೋಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

Continue Reading

ವಿದೇಶ

Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್

Bangladesh Unrest: ಪ್ರತಿಭಟನಾಕಾರರ ಆಗ್ರಹದಂತೆ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತ ಎನಿಸಿಕೊಂಡಿರುವ ಒಬೈದುಲ್ ಹಸನ್‌ ಅವರನ್ನು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಪ್ರತಿಭನಾಕಾರರು ಆಗಸ್ಟ್‌ 10ರ ಮಧ್ಯಾಹ್ನ 1 ಗಂಟೆಯೊಳಗೆ ರಾಜೀನಾಮೆಗೆ ನೀಡದಿದ್ದರೆ ನ್ಯಾಯಾಧೀಶರ ನಿವಾಸಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ.

VISTARANEWS.COM


on

Bangladesh Unrest
Koo

ಢಾಕಾ: ಕಳೆದ ಕೆಲವು ದಿನಗಳಿಂದ ಬಾಂಗ್ಲಾದೇಶದಾದ್ಯಂತ (Bangladesh Unrest) ಗಲಭೆಯುತ್ತಿದ್ದು, ಈ ಮಧ್ಯೆ ಪ್ರತಿಭಟನಾಕಾರರ ಆಗ್ರಹದಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ (Obaidul Hassan) ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತ ಎನಿಸಿಕೊಂಡಿರುವ ಒಬೈದುಲ್ ಹಸನ್‌ ಅವರನ್ನು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಪ್ರತಿಭನಾಕಾರರು ಆಗಸ್ಟ್‌ 10ರ ಮಧ್ಯಾಹ್ನ 1 ಗಂಟೆಯೊಳಗೆ ರಾಜೀನಾಮೆಗೆ ನೀಡದಿದ್ದರೆ ನ್ಯಾಯಾಧೀಶರ ನಿವಾಸಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ.

ಹೊಸದಾಗಿ ರಚನೆಯಾದ ಮಧ್ಯಂತರ ಸರ್ಕಾರವನ್ನು ಸಂಪರ್ಕಿಸದೆ ಒಬೈದುಲ್ ಹಸನ್ ಅವರು ನ್ಯಾಯಾಲಯದ ಸಭೆ ಕರೆಯಲು ಮುಂದಾದ ಹಿನ್ನಲೆಯಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಇಂದು ಬೆಳಿಗ್ಗೆ 10:30ರ ವೇಳೆಗೆ ವಿದ್ಯಾರ್ಥಿಗಳು ಮತ್ತು ವಕೀಲರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ಜಮಾಯಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮಧ್ಯಂತರ ಸರ್ಕಾರದಲ್ಲಿ ಯುವ ಮತ್ತು ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ಮಹಮೂದ್ ಮಾತನಾಡಿ ಮುಖ್ಯ ನ್ಯಾಯಮೂರ್ತಿ ಹಸನ್ ಅವರ ಬೇಷರತ್ತಾದ ರಾಜೀನಾಮೆಗೆ ಆಗ್ರಹಿಸಿದರು ಮತ್ತು ವಿವಾದಾತ್ಮಕ ನ್ಯಾಯಾಲಯದ ಸಭೆಯನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.

ಆಸಿಫ್ ಮಹಮೂದ್ ಹೇಳಿದ್ದೇನು?

“ವಿವಿಧ ದುಷ್ಕೃತ್ಯಗಳಲ್ಲಿ ಭಾಗಿಯಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಸರ್ಕಾರದೊಂದಿಗೆ ಯಾವುದೇ ಚರ್ಚೆ ನಡೆಸದೆ ಪೂರ್ಣ ನ್ಯಾಯಾಲಯದ ಸಭೆಯನ್ನು ಕರೆದಿದ್ದಾರೆ. ವಿದ್ಯಾರ್ಥಿಗಳು ಮತ್ತು ವಕೀಲರು ಈಗಾಗಲೇ ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ” ಎಂದು ಈ ಮೊದಲು ಮಹಮೂದ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ವಿದ್ಯಾರ್ಥಿ ಚಳವಳಿಯ ಸಂಯೋಜಕ ಹಸ್ನತ್ ಅಬ್ದುಲ್ಲಾ ಅವರೂ ಎಚ್ಚರಿಕೆ ನೀಡಿ, ʼʼನಾವು ಈಗಾಗಲೇ ಮುಖ್ಯ ನ್ಯಾಯಮೂರ್ತಿಯ ರಾಜೀನಾಮೆಗೆ ಕರೆ ನೀಡಿದ್ದೆವು. ಅವರು ವಿದ್ಯಾರ್ಥಿಗಳ ವಿರುದ್ಧ ನಿಲುವು ತೆಗೆದುಕೊಂಡು ಅವರನ್ನು ಪ್ರಚೋದಿಸಿದರೆ, ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದರು.

ಹಿಂದೂಗಳ ಮೇಲೆ ದಾಳಿ

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Continue Reading

ವಿದೇಶ

Britain Violence: ಬ್ರಿಟನ್‌ನಲ್ಲಿ ವಲಸಿಗರು, ಮುಸ್ಲಿಮರ ವಿರುದ್ಧ ಪ್ರತಿಕಾರದ ದಾಳಿ ನಡೆಯುತ್ತಿರುವುದೇಕೆ?

Anti-Racist Protests: ಉತ್ತರ ಇಂಗ್ಲೆಂಡ್‌ನ ಸೌತ್‌ಪೋರ್ಟ್‌ನಲ್ಲಿ ನೃತ್ಯ ಕಾರ್ಯಕ್ರಮದ ವೇಳೆ ನಡೆದ ದಾಳಿಯಲ್ಲಿ ಆರರಿಂದ ಒಂಬತ್ತು ವರ್ಷ ವಯಸ್ಸಿನ ಮೂವರು ಬಾಲಕಿಯರು ಕೊಲ್ಲಲ್ಪಟ್ಟರು. ಇತರ ಎಂಟು ಮಕ್ಕಳು ಮತ್ತು ಇಬ್ಬರು ವಯಸ್ಕರು ಗಾಯಗೊಂಡರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ದಾಳಿಕೋರರಲ್ಲಿ ಒಬ್ಬನಾದ 17 ವರ್ಷದ ಆಕ್ಸೆಲ್ ರುಡಕುಬಾನ ಎಂಬಾತನನ್ನು ಬಂಧಿಸಲಾಗಿದೆ. ಈತನ ವಿರುದ್ಧ ಮೂರು ಕೊಲೆ ಪ್ರಕರಣ, 10 ಕೊಲೆ ಯತ್ನದ ಆರೋಪ ಮತ್ತು ಹರಿತವಾದ ಬ್ಲೇಡ್ ಅನ್ನು ಹೊಂದಿರುವ ಆರೋಪ ಹೊರಿಸಲಾಗಿದೆ. ಈ ಘಟನೆ ವಲಸಿಗರು ಮತ್ತು ಮುಸ್ಲಿಮರ ವಿರುದ್ಧ ಸ್ಥಳಿಯ ಜನರು ರೊಚ್ಚಿಗೇಳುವಂತೆ ಮಾಡಿದೆ.

VISTARANEWS.COM


on

By

Anti-Racist Protests
Koo

ಮಕ್ಕಳ ನೃತ್ಯ ಕಾರ್ಯಕ್ರಮವೊಂದರಲ್ಲಿ ನಡೆದ ದಾಳಿಯಿಂದ ಉಂಟಾದ ಗಲಭೆ (Britain Violence) ಈಗ ಯುಕೆಯ (United Kingdom) ವಿವಿಧ ಭಾಗಗಳನ್ನು ಆವರಿಸಿದೆ. ಅಲ್ಲಲ್ಲಿ ಪ್ರತಿಭಟನೆಗಳು (protest) ನಡೆಯುತ್ತಿದ್ದು, ವಲಸಿಗರು, ಮುಸ್ಲಿಮರನ್ನು (muslim community) ಗುರಿಯಾಗಿಸಿಕೊಂಡು ಅಂಗಡಿ ಧ್ವಂಸ, ಪೊಲೀಸರೊಂದಿಗೆ ಘರ್ಷಣೆ ಹೆಚ್ಚಾಗುತ್ತಿದೆ.

ಜುಲೈ 29ರಂದು ಉತ್ತರ ಇಂಗ್ಲೆಂಡ್‌ನ ಸೌತ್‌ಪೋರ್ಟ್‌ನಲ್ಲಿ ಟೇಲರ್ ಸ್ವಿಫ್ಟ್ ನೃತ್ಯ ಕಾರ್ಯಕ್ರಮದ ವೇಳೆ ನಡೆದ ದಾಳಿಯಲ್ಲಿ ಆರರಿಂದ ಒಂಬತ್ತು ವರ್ಷ ವಯಸ್ಸಿನ ಮೂವರು ಬಾಲಕಿಯರು ಕೊಲ್ಲಲ್ಪಟ್ಟರು. ಇತರ ಎಂಟು ಮಕ್ಕಳು ಮತ್ತು ಇಬ್ಬರು ವಯಸ್ಕರು ಗಾಯಗೊಂಡರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ದಾಳಿಕೋರರಲ್ಲಿ ಒಬ್ಬನಾದ 17 ವರ್ಷದ ಆಕ್ಸೆಲ್ ರುಡಕುಬಾನ ಎಂಬಾತನನ್ನು ಬಂಧಿಸಲಾಗಿದೆ. ಈತನ ವಿರುದ್ಧ ಮೂರು ಕೊಲೆ ಪ್ರಕರಣ, 10 ಕೊಲೆ ಯತ್ನದ ಆರೋಪ ಮತ್ತು ಹರಿತವಾದ ಬ್ಲೇಡ್ ಅನ್ನು ಹೊಂದಿರುವ ಆರೋಪ ಹೊರಿಸಲಾಗಿದೆ. ಈ ಘಟನೆ ವಲಸಿಗರು ಮತ್ತು ಮುಸ್ಲಿಮರ ವಿರುದ್ಧ ಸ್ಥಳಿಯ ಜನರು ರೊಚ್ಚಿಗೇಳುವಂತೆ ಮಾಡಿದೆ.

ಘಟನೆಯ ಬಳಿಕ ಆಕ್ಸೆಲ್ ರುಡಾಕುಬಾನಾ ವೇಲ್ಸ್‌ನ ಕಾರ್ಡಿಫ್‌ನಲ್ಲಿ ಹುಟ್ಟಿ ಬೆಳೆದಿದ್ದು, ಈತ ಇಸ್ಲಾಮಿ ವಲಸಿಗ ಎಂಬ ಸುಳ್ಳು ಮಾಹಿತಿ ತ್ವರಿತವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹರಡಿದೆ. ಈ ತಪ್ಪು ಮಾಹಿತಿಯಿಂದ ಸ್ಥಳೀಯ ಮಸೀದಿಯ ಮೇಲೆ ದಾಳಿಯ ಪ್ರಯತ್ನ ಸೇರಿದಂತೆ ಸೌತ್‌ಪೋರ್ಟ್‌ನಲ್ಲಿ ಹಿಂಸಾತ್ಮಕ ಮುಸ್ಲಿಂ ವಿರೋಧಿ ಪ್ರತಿಭಟನೆಗಳು ಆರಂಭವಾಯಿತು.


ತೀವ್ರಗೊಂಡ ಪ್ರತಿಭಟನೆ

ಕೋಪಗೊಂಡ ಪ್ರತಿಭಟನಾಕಾರರ ಗುಂಪು ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರ ಡೌನಿಂಗ್ ಸ್ಟ್ರೀಟ್ ಕಚೇರಿಯ ಮೇಲೆ ದಾಳಿ ನಡೆಸಿ ವಲಸೆಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು ಮತ್ತು ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದರು. “ನಮ್ಮ ಮಕ್ಕಳನ್ನು ಉಳಿಸಿ” ಮತ್ತು “ನಮಗೆ ನಮ್ಮ ದೇಶ ಮರಳಬೇಕು” ಎಂಬ ಗುಂಪಿನ ಘೋಷಣೆಯನ್ನು ಕೂಗಿದ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆಗಳನ್ನು ನಡೆಸಿದರು. ರಾತ್ರಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ಬಳಿಕ ಮೆಟ್ರೋಪಾಲಿಟನ್ ಪೊಲೀಸರು 111 ಮಂದಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಐದು ಮಂದಿ ಅಧಿಕಾರಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸೌತ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ 50 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಪೊಲೀಸ್ ವ್ಯಾನ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು.

ಬಳಿಕ ಬ್ರಿಟನ್‌ನಾದ್ಯಂತ ಸುಂದರ್‌ಲ್ಯಾಂಡ್, ಮ್ಯಾಂಚೆಸ್ಟರ್, ಪ್ಲೈಮೌತ್ ಮತ್ತು ಬೆಲ್‌ಫಾಸ್ಟ್ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಗಲಭೆಗಳು ಹೆಚ್ಚಾಗಿವೆ. ಪ್ರತಿಭಟನಾಕಾರರು ವಲಸಿಗರನ್ನು ಅಥವಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಅಂಗಡಿಗಳನ್ನು ಧ್ವಂಸಗೊಳಿಸುತ್ತಿದ್ದಾರೆ.

ಗಲಭೆ ಹಿಂದೆ ಯಾರಿದ್ದಾರೆ?

ಪ್ರಮುಖ ಮುಸ್ಲಿಂ ವಿರೋಧಿ ಮತ್ತು ವಲಸೆ-ವಿರೋಧಿ ಕಾರ್ಯಕರ್ತ ಎಂದು ಗುರುತಿಸಿಕೊಂಡಿರುವ ಸ್ಟೀಫನ್ ಯಾಕ್ಸ್ ಲೇ ಲೆನ್ನನ್ ಉದ್ವಿಗ್ನತೆಯನ್ನು ಪ್ರಚೋದಿಸಲು ಸುಳ್ಳು ಮಾಹಿತಿಯನ್ನು ಹರಡಿದ್ದಾನೆ ಎಂದು ಆರೋಪಿಸಲಾಗಿದೆ. ಪೋಲೀಸರ ಪ್ರಕಾರ ಘರ್ಷಣೆಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನವರು ಸ್ಥಳೀಯ ಪ್ರದೇಶಗಳ ಹೊರಗಿನ ಬಲಪಂಥೀಯ ಹೋರಾಟಗಾರರು. ಇವರೊಂದಿಗೆ ಸ್ಥಳೀಯ ಸಮಸ್ಯೆ ಹೊಂದಿರುವ ಕೆಲವು ವ್ಯಕ್ತಿಗಳು ಅಥವಾ ಯುವಕರು ಸಹ ಸೇರಿಕೊಂಡಿದ್ದಾರೆ.


ಗಲಭೆಯ ಹಿಂದಿನ ಪ್ರೇರಣೆ

ಗಲಭೆಕೋರರು ತಮ್ಮನ್ನು “ದೇಶಭಕ್ತರು” ಎಂದು ಪ್ರತಿಪಾದಿಸಿದ್ದಾರೆ. ಹೆಚ್ಚುತ್ತಿರುವ ವಲಸೆಯು ಬ್ರಿಟಿಷ್ ಸಮಾಜವನ್ನು ದುರ್ಬಲಗೊಳಿಸುತ್ತಿವೆ ಎಂದು ಪ್ರತಿಪಾದಿಸುತ್ತಿದ್ದಾರೆ. ವಲಸೆಯು ಹಿಂಸಾಚಾರ ಮತ್ತು ಅಪರಾಧವನ್ನು ಉತ್ತೇಜಿಸುತ್ತದೆ ಮತ್ತು ರಾಜಕಾರಣಿಗಳು ವಲಸಿಗರಿಗೆ ಒಲವು ತೋರುತ್ತಾರೆ ಎಂದು ಅವರು ವಾದಿಸಿದ್ದಾರೆ. ಬ್ರಿಟನ್‌ನಲ್ಲಿ ವಲಸಿಗರು ಹೆಚ್ಚುತ್ತಿದ್ದಾರೆ. ಅವರಿಂದ ಸ್ಥಳೀಯ ಬ್ರಿಟಿಷರಿಗೆ ಅಪಾಯ ಎದುರಾಗಿದೆ ಎಂಬ ಆಕ್ರೋಶ ಹೆಚ್ಚುತ್ತಿದೆ.

ಸರ್ಕಾರದ ಪ್ರತಿಕ್ರಿಯೆ ಏನು?

ಗಲಭೆಗಳಿಗೆ ಪ್ರತಿಕ್ರಿಯೆಯಾಗಿ ಸ್ಟಾರ್ಮರ್ ನೇತೃತ್ವದ ಸರ್ಕಾರವು ಕ್ಷಿಪ್ರ ಕ್ರಮ ಕೈಗೊಂಡಿದೆ. ಸುಮಾರು 600 ಹೆಚ್ಚುವರಿ ಜೈಲು ಸ್ಥಳಗಳನ್ನು ಲಭ್ಯವಾಗುವಂತೆ ಮಾಡಿದೆ. ಪರಿಸ್ಥಿತಿಯು ಉಲ್ಬಣಗೊಳ್ಳುವುದನ್ನು ತಡೆಯಲು ವಿಶೇಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಿಂಸಾತ್ಮಕ ಕೃತ್ಯಕ್ಕಾಗಿ 58 ವರ್ಷ ವಯಸ್ಸಿನ ಬ್ರಿಟಿಷ್ ವ್ಯಕ್ತಿಯೊಬ್ಬರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: Bangladesh Unrest: ಭಾರತದ ಗಡಿಯೊಳಗೆ ಪ್ರವೇಶಕ್ಕೆ ಬಾಂಗ್ಲಾದ 600 ಜನ ಯತ್ನ-BSF ಮಾಹಿತಿ

ಫೇಸ್‌ಬುಕ್‌ನಲ್ಲಿ ಜನಾಂಗೀಯ ದ್ವೇಷವನ್ನು ಹುಟ್ಟುಹಾಕಲು ಬೆದರಿಕೆಯ ಭಾಷೆ ಬಳಸಿರುವ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಸಹ ಸರ್ಕಾರ ಗುರಿಯಾಗಿಸಿಕೊಂಡಿದೆ. ಪ್ರಚೋದನೆ ಮತ್ತು ಆನ್‌ಲೈನ್‌ನಲ್ಲಿ ಸುಳ್ಳು ಮಾಹಿತಿ ಹರಡುವುದನ್ನು ತಡೆಯಲು ಸಚಿವ ಪೀಟರ್ ಕೈಲ್ ಪ್ರಮುಖ ಟೆಕ್ ಕಂಪನಿಗಳಾದ ಟಿಕ್‌ಟಾಕ್, ಮೆಟಾ, ಗೂಗಲ್ ಮತ್ತು ಎಕ್ಸ್‌ನ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ.

Continue Reading

ವಾಣಿಜ್ಯ

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Hindenburg: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಮುಂದಾಗಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

VISTARANEWS.COM


on

Hindenburg
Koo

ವಾಷಿಂಗ್ಟನ್‌: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿತ್ತು. ಇದೀಗ ಮತ್ತೊಮ್ಮೆ ಭಾರತ ಕೇಂದ್ರೀತ ವರದಿ ಪ್ರಕಟಿಸುವುದಾಗಿ ಘೋಷಿಸಿದೆ. ಈ ಬಗ್ಗೆ ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೂಚನೆ ನೀಡಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ (Something big soon India) ಎಂದು ಸಂಸ್ಥೆ ಬರೆದುಕೊಂಡಿದೆ. ಅದಾನಿ ಗ್ರೂಪ್ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿ ನಿಯಮ ಉಲ್ಲಂಘನೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಸಜ್ಜಾಗಿದೆ.

2023ರ ಜನವರಿಯಲ್ಲಿ ಅದಾನಿ ಗ್ರೂಪ್ ಕುರಿತ ವರದಿ ಪ್ರಕಟವಾದ ಬಳಿಕ ಅದರ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದ್ದವು. ಆದಾಗ್ಯೂ ಅದಾನಿ ಗ್ರೂಪ್ ಈ ಆರೋಪಗಳನ್ನು ನಿರಾಕರಿಸಿತ್ತು.

ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: Gautam Adani : ಎನ್​ಡಿಟಿವಿ ಆಯ್ತು; ಈಗ ಸುದ್ದಿ ಸಂಸ್ಥೆ ಐಎಎನ್​ಎಸ್​ ಅದಾನಿ ಪಾಲು

ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

Continue Reading
Advertisement
Bangladesh Unrest
ಕರ್ನಾಟಕ4 mins ago

Bangladesh Unrest: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Viral News
Latest6 mins ago

Viral News: ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ ಮೇಲೆ ನಾಗರಹಾವನ್ನು ಎಸೆದ ಮಹಿಳೆ!

Viral News
Latest12 mins ago

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Jagdeep Dhankhar
ರಾಜಕೀಯ20 mins ago

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

Bangladesh Unrest
ವಿದೇಶ38 mins ago

Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್

ed raid
ಬೆಂಗಳೂರು52 mins ago

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

Govt Quota Seats
ಕರ್ನಾಟಕ1 hour ago

Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

Team India
ಕ್ರೀಡೆ1 hour ago

Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

Narendra Modi
ದೇಶ2 hours ago

Narendra Modi: ಭೂಕುಸಿತ ಪೀಡಿತ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

Anti-Racist Protests
ವಿದೇಶ2 hours ago

Britain Violence: ಬ್ರಿಟನ್‌ನಲ್ಲಿ ವಲಸಿಗರು, ಮುಸ್ಲಿಮರ ವಿರುದ್ಧ ಪ್ರತಿಕಾರದ ದಾಳಿ ನಡೆಯುತ್ತಿರುವುದೇಕೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌