Israel Palestine War: ಹಮಾಸ್‌ ಉಗ್ರರನ್ನು ನಿರ್ನಾಮ ಮಾಡದೆ ಬಿಡಲ್ಲ; ಇಸ್ರೇಲ್‌ ಶಪಥ - Vistara News

ಪ್ರಮುಖ ಸುದ್ದಿ

Israel Palestine War: ಹಮಾಸ್‌ ಉಗ್ರರನ್ನು ನಿರ್ನಾಮ ಮಾಡದೆ ಬಿಡಲ್ಲ; ಇಸ್ರೇಲ್‌ ಶಪಥ

Israel Palestine War: ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿರುವ ಕುರಿತು ವಿಶ್ವಸಂಸ್ಥೆಯೇ ಕಳವಳ ವ್ಯಕ್ತಪಡಿಸಿದರೂ, ಹಮಾಸ್‌ ಉಗ್ರರನ್ನು ನಿರ್ನಾಮ ಮಾಡುವುದು ಶತಃಸಿದ್ಧ ಎಂದು ಇಸ್ರೇಲ್‌ ಶಪಥ ಮಾಡಿದೆ.

VISTARANEWS.COM


on

Israel Palestine War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರ (Israel Palestine War) ಮುಂದುವರಿದಿದೆ. ಅದರಲ್ಲೂ, ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ಸೇನೆಯು ಗಾಜಾ ನಗರದ (Gaza City) ಮೇಲೆ ನಡೆಸುತ್ತಿರುವ ಪ್ರತಿದಾಳಿಗೆ ಇಡೀ ನಗರವೇ ಮಸಣದಂತಾಗಿದೆ. ಗಾಜಾ ನಗರದಲ್ಲಿ ನಾಗರಿಕರ ಸಾವು, ಗಾಯಾಳುಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ವಿಶ್ವಸಂಸ್ಥೆಯು ಕಳವಳ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ, “ನಾವು ಹಮಾಸ್‌ ಉಗ್ರರನ್ನು (Hamas Terrorists) ನಿರ್ನಾಮ ಮಾಡದೆ ಬಿಡುವುದಿಲ್ಲ” ಎಂದು ಇಸ್ರೇಲ್‌ ಸೇನೆ ತಿಳಿಸಿದೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಜತೆ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸುವ ವೇಳೆ ಇಸ್ರೇಲ್‌ ರಕ್ಷಣೆ ಪಡೆಗಳ ಮುಖ್ಯಸ್ಥ ಹೆರ್ಜಿ ಹಲೇವಿ ಈ ಹೇಳಿಕೆ ನೀಡಿದ್ದಾರೆ. “ಹಮಾಸ್‌ ಉಗ್ರರನ್ನು ನಾವು ನಿರ್ನಾಮ ಮಾಡುತ್ತೇವೆ. ಹಮಾಸ್‌ ಮಿಲಿಟರಿ ಪಡೆಯ ಎಲ್ಲ ಮುಖಂಡರನ್ನು ಹತ್ಯೆಗೈಯುತ್ತೇವೆ. ಇದೇ ಕಾರಣಕ್ಕಾಗಿ ಹಿರಿಯ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದೇವೆ. ಹಮಾಸ್‌ ಹಿರಿಯ ಉಗ್ರರು, ಹಮಾಸ್‌ ಮೂಲಸೌಕರ್ಯ, ನೆಲೆಗಳು ಹಾಗೂ ಕಟ್ಟಡಗಳನ್ನು ಧ್ವಂಸಗೊಳಿಸುವ ಮೂಲಕ ಅವರನ್ನು ಸಂಪೂರ್ಣವಾಗಿ ಸದೆಬಡಿಯುತ್ತೇವೆ” ಎಂದು ಹೇಳಿದ್ದಾರೆ.

6,400 ದಾಟಿದ ಸಾವಿನ ಸಂಖ್ಯೆ

ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ಹಾಗೂ ಗಾಜಾ ನಗರದ ಮೇಲೆ ಇಸ್ರೇಲ್‌ ಸೇನೆ ಮಾಡುತ್ತಿರುವ ಸತತ ದಾಳಿಯಿಂದಾಗಿ ಇದುವರೆಗೆ 6,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಸ್ರೇಲ್‌ ಮೇಲೆ ಹಮಾಸ್‌ ಮಾಡಿದ ದಾಳಿಯಿಂದ ಇದುವರೆಗೆ 1,400 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಗಾಜಾ ನಗರದಲ್ಲಿ ಇಸ್ರೇಲ್‌ ಸತತ ದಾಳಿಗೆ 5,000ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಜಾ ನಗರದಲ್ಲಂತೂ ಸಾವಿರಾರು ಜನ ಗಾಯಗೊಂಡಿದ್ದು, ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ಗೆ ಹೆದರಿ ಮತ್ತಿಬ್ಬರು ಒತ್ತೆಯಾಳುಗಳನ್ನು ಬಿಟ್ಟ ಹಮಾಸ್!‌

ಗಾಜಾ ಗಡಿಯಲ್ಲಿ ಸಾವಿರಾರು ಸೈನಿಕರು, ನೂರಾರು ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿ ಪೂರ್ಣ ಪ್ರಮಾಣದ ದಾಳಿ ನಡೆಸಲು ಇಸ್ರೇಲ್‌ ಸಜ್ಜಾಗಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಇಸ್ರೇಲ್‌ ಸೈನಿಕರು ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡಬಹುದು. ಇದರ ಭೀತಿಯಿಂದಾಗಿಯೇ ಹಮಾಸ್‌ ಉಗ್ರರು ಇಸ್ರೇಲ್‌ನ ಇಬ್ಬರು ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದಷ್ಟೇ, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹಾಗೂ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದರು. ಇದಾದ ಬಳಿಕ ಇಸ್ರೇಲ್‌ ದಾಳಿ ಮತ್ತಷ್ಟು ತೀವ್ರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

CET Result: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

VISTARANEWS.COM


on

CET result only after II PU 2nd exam Published on May 30 or 31
Koo

ಬೆಂಗಳೂರು: 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಹೀಗಾಗಿ ಮೇ 30 ಇಲ್ಲವೇ ಮೇ 31ಕ್ಕೆ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಮೇ 30ಕ್ಕೆ ಪಿಯು ಪರೀಕ್ಷೆ-2ರ ಫಲಿತಾಂಶ?

ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇತ್ತ ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶವೂ ಇನ್ನಷ್ಟೇ ಹೊರ ಬರಬೇಕಿದೆ. ಇದರ ಫಲಿತಾಂಶ ಮೇ 30ರಂದು ಹೊರಬರುವ ನಿರೀಕ್ಷೆ ಇದೆ.

ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ರಿಸಲ್ಟ್‌ ಚೆಕ್‌ ಮಾಡುವ ವಿಧಾನ

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ.

  • ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈ ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.
  • ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ.
Continue Reading

ಕರ್ನಾಟಕ

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy: ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal should appear before SIT and face probe says Nikhil Kumaraswamy
Koo

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

ದೇವೇಗೌಡ ಆತ್ಮಹತ್ಯೆ ಹೇಳಿಕೆ; ಶಿವರಾಮೇಗೌಡ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡ

ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ರಾಜಕೀಯ

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Prajwal Revanna Case: ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲದ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case Shivarame Gowdas Deve Gowda suicide statement says Nikhil Kumaraswamy
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್. ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಈಗ ಎಲ್ಲಡೆ ವೈರಲ್‌ ಆಗಿದೆ. ಅಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Dewegowda) ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಇದನ್ನು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ನಿನ್ನೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಆಡಿಯೊವನ್ನು ನಾನು ಕೇಳಿದೆ. ದೇವೇಗೌಡರ ಬಗ್ಗೆ ಈ ರೀತಿ ಲಘುವಾಗಿ ಮಾತನಾಡಬಾರದು. ರಾಜಕಾರಣ ಬೇರೆಯೊಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ

ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೊವನ್ನು ಕೇಳಿದ್ದಾರೆ. ದೇಶದ ಮಾಜಿ ಪ್ರಧಾನಿಗಳು, ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಇಂಥ ಹೇಳಿಕೆಯನ್ನು ಕೊಡಬಾರದಿತ್ತು. ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಅ‌ನ್ನೋದನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯವನ್ನು ಮಾಡಿ ಯಾರು ಬೇಡ ಎಂದು ಹೇಳುತ್ತಾರೆ? ಆದರೆ, ಇನ್ನೊಬ್ಬರ ಸಾವಿನ ಹೆಸರಲ್ಲಿ ರಾಜಕೀಯ ಮಾಡೋದು ಸರಿಯಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಹೀಗೆ ಮಾಡಿದ್ದಾರೆ ಎಂದು ಶಿವರಾಮೇಗೌಡ ಅವರು ಹೇಳಿರುವ ಮಾತುಗಳು ಆಡಿಯೊದಲ್ಲಿ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆಗಳಲ್ಲಿ ಅಡ್ಜಸ್ಟ್‌ಮೆಂಟ್‌ ಕೆಲವು ಸಲ ಆಗುತ್ತದೆ. ಅದು ಹೊರಗೂ ಬರುತ್ತದೆ. ಆದರೆ, ನನ್ನ ಬಗ್ಗೆ ನಮ್ಮ ತಂದೆ ಎಂದೂ ಹೀಗೆ ಯೋಚನೆ ಮಾಡಿಲ್ಲ. ನಮ್ಮ ತಂದೆ ರಾಜ್ಯದ, ಜನರ ಬಗ್ಗೆ ಯೋಚನೆ ಮಾಡ್ತಾರೆ. ಬಹಳ ಜನ ಅಡ್ಜೆಸ್ಟ್‌ಮೆಂಟ್‌ ಮಾಡಿಕೊಂಡು ಇವತ್ತು ಬಹಳ ಒಳ್ಳೇ ಸ್ಥಾನದಲ್ಲಿ ಇದ್ದಾರೆ. ಆದರೆ, ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿ ಇಲ್ಲ ಎಂದು ಹೇಳಿದರು.

ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಕೈವಾಡ ಇದೆ ಎಂಬುದು ಗೊತ್ತಾಗುತ್ತದೆ. ಅವರೂ ಕೂಡಾ ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಹೇಳಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಗನ ಭವಿಷ್ಯದ ಚಿಂತೆ ಅಂತಾರೆ. ಎರಡು ಚುನಾವಣೆಯನ್ನು ನಾನು ಎದುರಿಸಿದ್ದೇನೆ. ಕೆಲವೊಮ್ಮೆ ಕೆಲವು ಸಂದರ್ಭದಲ್ಲಿ ಅಡ್ಜೆಸ್ಟ್‌ಮೆಂಟ್‌ ಒಳಗೆ ಹೊರಗೆ ಆಗುತ್ತದೆ. ಆದರೆ, ನಮ್ಮ ವಿಚಾರದಲ್ಲಿ ಹೀಗೆ ಆಗಲಿಲ್ಲ. ನನ್ನ ವಿಷಯದಲ್ಲಿ ದೊಡ್ಡ ಮಟ್ಟದಲ್ಲಿ ಕೂರಿಸಬೇಕು ಅನ್ನೋ ಚಿಂತನೆ ಕುಮಾರಣ್ಣರಿಗೆ ಇಲ್ಲ. ಅವರಿಗೆ ರಾಜ್ಯದ ಜನತೆ ಬಗ್ಗೆ ಇದ್ದ ಕಮಿಟ್ಮೆಂಟ್, ಬದ್ಧತೆ ಹಿನ್ನೆಲೆಯಲ್ಲಿ ಅವರು ಯಾವುದೇ ರೀತಿಯ ಯೋಚನೆಯನ್ನು ಮಾಡಲಿಲ್ಲ. ನಾನು ಸೋತ ಬಳಿಕವೂ ರಾಮನಗರ, ಮಂಡ್ಯದಲ್ಲಿ ಓಡಾಡುತ್ತಿದ್ದೇನೆ. ಅನೇಕ ರಾಜಕಾರಣಿ ಮಕ್ಕಳು ಅಡ್ಜೆಸ್ಟ್‌ಮೆಂಟ್‌ ಮೂಲಕ ಉತ್ತಮ ಸ್ಥಾನಗಳಲ್ಲಿದ್ದಾರೆ. ನನಗೆ ಹಾಗೇ ಆಗಿಲ್ಲ. ನಾನು ಒಬ್ಬನೇ ಓಡಾಡುತ್ತಿದ್ದೇನೆ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು

ಶಿವರಾಮೇಗೌಡ ಒಬ್ಬ ಸರ್ಕಾರದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸುತ್ತಾರೆ. ಹಾಸನದ ಸಂಸದರ ವಿಡಿಯೊ ರಿಲೀಸ್ ಆದ ಬಳಿಕ ಸಂತ್ರಸ್ತೆ ಮುಖವನ್ನು ಬ್ಲರ್ ಮಾಡಲಿಲ್ಲ. ಸಂಸದರ ಮೇಲೆ ಆರೋಪ ಕೇಳಿಬಂದಿದೆ. ಆರೋಪಿ ಅದನ್ನು ಎದುರಿಸಲಿ. ಆದರೆ, ಸಂತ್ರಸ್ತೆಯರ ವಿಡಿಯೊ ಬಿಡುಗಡೆ ಮಾಡಿ ಮಾನ ಹರಾಜು ಮಾಡೋದು ಯಾಕೆ? ವಿಡಿಯೊ ರಿಲೀಸ್ ಮಾಡಿದವರ ಬಗ್ಗೆ ಕ್ರಮ ಯಾಕೆ ಆಗುತ್ತಿಲ್ಲ. ನೂರು ಕೋಟಿ ರೂಪಾಯಿ ಆಫರ್ ವಿಚಾರವೂ ತನಿಖೆ ಆಗಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು.

Continue Reading

ರಾಜಕೀಯ

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

CM Siddaramaiah: ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

One year for the government Cm Siddaramaiah reveals many dreams and media interaction live
Koo

ಬೆಂಗಳೂರು: ಇಂದಿಗೆ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮದ ಸಂವಾದದ ಮೂಲಕ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ್ದು, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಡಿ

ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ. ಅಭಿವೃದ್ಧಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದಾಗಿದೆ. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧ ಪಕ್ಷಗಳು ಜಾತಿ – ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆಯಾಗಿದೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯನ್ನು ನೀಡಿದ್ದಾರೆ.

ಸಿಎಂ ಮಾಧ್ಯಮ ಸಂವಾದ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಸೋಮವಾರ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ನುಡಿದಂತೆ ನಡೆದಿದ್ದೇವೆ, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು. ಅಲ್ಲದೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಎಂಬಿತ್ಯಾದಿ ಯೋಜನೆಗಳ ಬಗ್ಗೆ ಅಂಕಿ-ಅಂಶಗಳ ಸಹಿತ ಮಾಹಿತಿ ನೀಡಿದರು.

Continue Reading
Advertisement
road Accident in Mandya
ಮಂಡ್ಯ6 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ6 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ8 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ20 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ28 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ31 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ42 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Lok Sabha Election 2024
ದೇಶ42 mins ago

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ1 hour ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Prajwal Revanna Case Shivarame Gowdas Deve Gowda suicide statement says Nikhil Kumaraswamy
ರಾಜಕೀಯ1 hour ago

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ31 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌