Israel Palestine War: ಗಾಜಾ ಪ್ರಜೆಗಳ ರಕ್ಷಣೆ ಹೊಣೆ ನಮ್ಮದಲ್ಲ; ಸುರಂಗಗಳಿರುವುದು ನಮಗಾಗಿ: ಹಮಾಸ್‌ - Vistara News

ವಿದೇಶ

Israel Palestine War: ಗಾಜಾ ಪ್ರಜೆಗಳ ರಕ್ಷಣೆ ಹೊಣೆ ನಮ್ಮದಲ್ಲ; ಸುರಂಗಗಳಿರುವುದು ನಮಗಾಗಿ: ಹಮಾಸ್‌

ಸುರಂಗದಲ್ಲಿದ್ದುಕೊಂಡು ಹೋರಾಡುವುದನ್ನು ಬಿಟ್ಟು ಇಸ್ಲಾಮಿಸ್ಟ್ ಗುಂಪಿಗೆ ಬೇರೆ ದಾರಿಯಿಲ್ಲ. ಇಸ್ರೇಲ್‌ನ ವಿಮಾನ ದಾಳಿಯಿಂದ ರಕ್ಷಿಸಿಕೊಳ್ಳಲು ನಮಗೆ ಅದು ಅಗತ್ಯವಾಗಿದೆ. ಗಾಜಾದ ಜನರ ಹೊಣೆ ನಮ್ಮದಲ್ಲ ಎಂದಿದ್ದಾನೆ ಹಮಾಸ್‌ ಉಗ್ರರ ನಾಯಕ.

VISTARANEWS.COM


on

Israel Palestine War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಲ್‌ ಅವಿವ್‌: ಗಾಜಾದ ನಾಗರಿಕರನ್ನು ರಕ್ಷಿಸುವುದು ವಿಶ್ವಸಂಸ್ಥೆ (UN) ಮತ್ತು ಇಸ್ರೇಲ್‌ನ ಜವಾಬ್ದಾರಿಯಾಗಿದೆ. ಗಾಜಾದಲ್ಲಿನ ಭೂಗತ ಸುರಂಗಗಳು ಪ್ಯಾಲೆಸ್ತೀನ್‌ ಹೋರಾಟಗಾರರನ್ನು (Palestine fighters) ರಕ್ಷಿಸುವ ಉದ್ದೇಶಕ್ಕಾಗಿ ಇವೆ ಎಂದು ಹಮಾಸ್ (Hamas terrorists) ನಾಯಕ ಮೌಸಾ ಅಬು ಮರ್ಜೌಕ್ ರಷ್ಯಾ ಟುಡೇ ಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾನೆ.

ಕೊಲ್ಲಲ್ಪಡದಂತೆ ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಸುರಂಗಗಳನ್ನು ನಿರ್ಮಿಸಿದ್ದೇವೆ. ಸುರಂಗದಲ್ಲಿದ್ದುಕೊಂಡು ಹೋರಾಡುವುದನ್ನು ಬಿಟ್ಟು ಇಸ್ಲಾಮಿಸ್ಟ್ ಗುಂಪಿಗೆ ಬೇರೆ ದಾರಿಯಿಲ್ಲ. ಇಸ್ರೇಲ್‌ನ ವಿಮಾನ ದಾಳಿಯಿಂದ ರಕ್ಷಿಸಿಕೊಳ್ಳಲು ನಮಗೆ ಅದು ಅಗತ್ಯವಾಗಿದೆ. ಗಾಜಾದ ಜನರ ಹೊಣೆ ನಮ್ಮದಲ್ಲ ಎಂದಿದ್ದಾನೆ.

ಏತನ್ಮಧ್ಯೆ, ಇಸ್ರೇಲಿ ಆಡಳಿತವು ʼಎರಡನೇ ಹಂತ’ ಎಂದು ಕರೆದಿರುವ ಯುದ್ಧವು ಉಲ್ಬಣಗೊಂಡಿದೆ. ಗಾಜಾ ಪಟ್ಟಿಯ ಪ್ರಮುಖ ನಗರವಾದ ಗಾಜಾಗೆ ಇಸ್ರೇಲಿ ಪಡೆಗಳು ನುಗ್ಗಿದ್ದು, ಹಮಾಸ್‌ ಉಗ್ರರು ಪ್ರತೀಕಾರದ ದಾಳಿಗಳನ್ನು ನಡೆಸುತ್ತಿದ್ದಾರೆ. ಗಾಜಾ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಯುದ್ಧ ಪ್ರಾರಂಭವಾದಾಗಿನಿಂದ 8,300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 3,457 ಅಪ್ರಾಪ್ತ ವಯಸ್ಕರು.

ಪ್ಯಾಲೇಸ್ತೀನಿಯನ್ ನಿರಾಶ್ರಿತರ ರಕ್ಷಣೆ ಮಾಡಬೇಕು. ತಕ್ಷಣದ ಮಾನವೀಯ ಕದನ ವಿರಾಮವು ಲಕ್ಷಾಂತರ ಜನರ ಜೀವನ ಮತ್ತು ಸಾವಿನ ವಿಷಯವಾಗಿದೆ. ಪ್ಯಾಲೆಸ್ತೀನಿಯನ್ನರು ಮತ್ತು ಇಸ್ರೇಲಿಗಳ ವರ್ತಮಾನ ಮತ್ತು ಭವಿಷ್ಯವು ಅದರ ಮೇಲೆ ಅವಲಂಬಿತವಾಗಿದೆ ಎಂದು ವಿಶ್ವಸಂಸ್ಥೆ ತಾಕೀತು ಮಾಡಿದೆ. ಇಸ್ರೇಲ್‌ನ ಗುಪ್ತಚರ ಸೇವೆ ಮೊಸ್ಸಾದ್‌ನ ಮುಖ್ಯಸ್ಥ ಡೇವಿಡ್ ಬರ್ನಿಯಾ, ಕತಾರ್‌ಗೆ ಭೇಟಿ ನೀಡಿ ಸಂಧಾನಕಾರರನ್ನು ಭೇಟಿಯಾಗಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಪ್ರಯತ್ನಗಳ ಕುರಿತು ಚರ್ಚಿಸಿದ್ದಾರೆ.

ಅಕ್ಟೋಬರ್ 7ರ ಹಮಾಸ್ ದಾಳಿಯ ಬಗ್ಗೆ ಸಾರ್ವಜನಿಕ ಕೋಲಾಹಲದ ನಡುವೆ, ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ರಾಜೀನಾಮೆ ನೀಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. “ನಾನು ರಾಜೀನಾಮೆ ನೀಡಲು ಉದ್ದೇಶಿಸಿರುವ ಏಕೈಕ ವಿಷಯವೆಂದರೆ ಹಮಾಸ್. ನಾವು ಅವರನ್ನು ಇತಿಹಾಸದ ಕಸದ ಬುಟ್ಟಿಗೆ ತಳ್ಳಲಿದ್ದೇವೆ. ಅದು ನನ್ನ ಗುರಿ. ಅದು ನನ್ನ ಜವಾಬ್ದಾರಿ” ಎಂದಿದ್ದಾರೆ.

ಇಸ್ರೇಲ್ ತನ್ನ ಆಕ್ರಮಣವನ್ನು ಹೆಚ್ಚಿಸುತ್ತಿದ್ದಂತೆ ಗಾಜಾಕ್ಕೆ ಸಹಾಯ ಸಾಗಣೆಗಳು ಸ್ವಲ್ಪಮಟ್ಟಿಗೆ ತೆರೆದುಕೊಳ್ಳಲು ಸಿದ್ಧವಾಗಿವೆ ಎಂದು ಇಸ್ರೇಲಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ನಾಳೆ ಅಥವಾ ಬುಧವಾರದಿಂದ ದಿನಕ್ಕೆ 100 ಟ್ರಕ್‌ಗಳ ಸಹಾಯವನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಕಾರ್ಯತಂತ್ರದ ವ್ಯವಹಾರಗಳ ಸಚಿವ ರಾನ್ ಡರ್ಮರ್ ಹೇಳಿದರು.

ರಷ್ಯಾದ ಉತ್ತರ ಕಾಕಸಸ್‌ ಪ್ರದೇಶದಿಂದ ದೂರವಿರುವಂತೆ ಇಸ್ರೇಲ್ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಇಲ್ಲಿ ನಿನ್ನೆ ಇಸ್ರೇಲ್‌ನ ಟೆಲ್ ಅವೀವ್‌ನಿಂದ ಬಂದ ವಿಮಾನದ ಮೇಲೆ ನೂರಾರು ಆಕ್ರೋಶಿತ ಜನರ ದಾಳಿ ನಡೆದಿತ್ತು. ವಿಮಾನದಲ್ಲಿ ಬಂದಿರಬಹುದಾದ ಇಸ್ರೇಲಿ ಪ್ರಯಾಣಿಕರನ್ನು ಹುಡುಕಿಕೊಂಡು ನೂರಾರು ಮಂದಿ ದಾಳಿಯಿಟ್ಟಿದ್ದರು. ಯೆಹೂದಿ ವಿರೋಧಿ ಘೋಷಣೆಗಳನ್ನು ಕೂಗಿ, ಬ್ಯಾನರ್‌ಗಳನ್ನು ಪ್ರದರ್ಶಿಸಿದರು. ಇಲ್ಲಿನ ಮಖಚ್ಕಲಾ ಪ್ರದೇಶ ಮುಸ್ಲಿಂ ಬಾಹುಳ್ಯದ ಪ್ರದೇಶವಾಗಿದೆ.

ಇದನ್ನೂ ಓದಿ: Israel Palestine War: ಹಮಾಸ್‌ ಉಗ್ರರಿಂದ ಬೆತ್ತಲೆ ಮೆರವಣಿಗೆಗೆ ಒಳಗಾದ ಜರ್ಮನ್‌ ಒತ್ತೆಯಾಳು ಯುವತಿ ಶವವಾಗಿ ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ದೇಶ

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Narendra Modi: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Narendra Modi
Koo

ನವದೆಹಲಿ: ರಷ್ಯಾ 2022ರಲ್ಲಿ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ (Russia-Ukraine War) ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ನಲ್ಲಿ ಉಕ್ರೇನ್ ರಾಜಧಾನಿ ಕೀವ್​ಗೆ ಪ್ರಯಾಣಿಸಲಿದ್ದಾರೆ. ಇಟಲಿಯಲ್ಲಿ ಜೂನ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ (Volodymyr Zelensky) ಭೇಟಿಯಾಗಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಈ ನಾಯಕರು ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಮೋದಿ ಅವರು ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೋದಿ ಅವರು ಇತ್ತೀಚೆಗೆ ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತಿಕತೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಉಕ್ರೇನ್‌ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೋದಿ ಮೂರನೇ ಅವಧಿಗೆ ಪ್ರದಾನಿಯಾಗಿ ಆಯ್ಕೆಯಾದ ದಿನದಂದು ಝೆಲೆನ್ಸ್ಕಿ ಕರೆ ಮಾಡಿ ಅಭಿನಂದಿಸಿದ್ದರು ಮತ್ತು ಯುದ್ಧ ಪೀಡಿತ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಮೂಲಕ ಮಾತನಾಡಿದ್ದ ಮೋದಿ ಅವರು ಭಾರತ-ಉಕ್ರೇನ್ ಸಂಬಂಧಬನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದರು. ರಷ್ಯಾ-ಉಕ್ರೇನ್‌ ಸಂಘರ್ಷದ ಪರಿಹಾರಕ್ಕಾಗಿ ಮಾತುಕತೆ ನಡೆಸುವಂತೆ ಕರೆ ನೀಡಿದ್ದರು.

ಎರಡು ಯುದ್ಧ ನಿಲ್ಲಿಸಲು ಭಾರತವು ತನ್ನ ಶಕ್ತಿಮೀರಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ. ಅದಕ್ಕೆ ಪೂರಕವಾಗಿ ಯುದ್ಧ ಪ್ರಾರಂಭವಾದಾಗಿನಿಂದ ಭಾರತವು ಇದನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ತಿಳಿಸಿದೆ.

ರಷ್ಯಾ ಭೇಟಿ

ಈ ತಿಂಗಳ ಆರಂಭದಲ್ಲಿ ರಷ್ಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದರು. ರಷ್ಯಾ ಮತ್ತು ಭಾರತದ ನಡುವಿನ ಸಹಕಾರಕ್ಕಾಗಿ ಸ್ಪಷ್ಟ ಚೌಕಟ್ಟನ್ನು ನಿರ್ಮಿಸುವಲ್ಲಿ ಮೋದಿಯವರ ಕೊಡುಗೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಶ್ಲಾಘಿಸಿದ್ದರು.

ಇದೇ ವೇಳೆ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಈ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ ನೀಡಲಾಯಿತು ಎಂದು ರಷ್ಯಾ ಹೇಳಿತ್ತು.

ಇದನ್ನೂ ಓದಿ: PM Modi Russia Visit : ಭಾರತ-ರಷ್ಯಾ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading
Advertisement
Paris Olympics 2024
ಪ್ರಮುಖ ಸುದ್ದಿ23 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ33 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ44 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ1 hour ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ2 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ2 hours ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ3 hours ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌